ಒಟ್ಟು 99 ಕಡೆಗಳಲ್ಲಿ , 37 ದಾಸರು , 89 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಮಂಗಳಂ ಶ್ರೀ ನರಸಿಂಹಗೆ ಜಯಮಂಗಳಂ ಪ್ರಹ್ಲಾದವರನಿಗೆ ಪ. ತರಳನು ಮೊರೆಯಿಡೆ ಭರದಿಕಂಬದಿಂಬಂದು ದುರುಳನ ಸದೆವಡೆದು ಕರುಳನು ಧರಿಸಿ ಸಿರಿಯೊಡಗೂಡಿದ ನರಕೇಸರಿಗೇ 1 ತ್ರಿಜಗತ್ಪಿತ ನಿನ್ನ ನಿಜಪಾದಾಂಬುಜವ ಭಜಿಸುವೆ ನೋಡೆನ್ನ ಗಜರಾಜವರದ ಸುಜನರ ಸಂಗತಿದೊರೆವಂತೆ ಕರುಣಿಸು ಗಜಾರಣ್ಯಕ್ಷೇತ್ರ ವಿರಾಜಿತನೆ 2 ದೋಷ ನಿವಾರಣ ಶೇಷಗಿರಿಯಲ್ಲಿ ಕೇಶವ ಕಮಲಾಕ್ಷ ಶ್ರೀ ಶ್ರೀನಿವಾಸನಿಗೆ 3
--------------
ನಂಜನಗೂಡು ತಿರುಮಲಾಂಬಾ
ಮಾತೆ ದಾತೆ ಹಿತೆ| ಘನ ಸುಚರಿತೆ| ಮಾತೆ ದಾತೆ ಹಿತೆ ಪ ಮಾತೆ ಸದ್ಗುಣ ಭರಿತೆ ಘನ ವಿ| ಖ್ಯಾತೆ ಭುವನ ವಿರಾಜಿತೆ|| ದಾತೆ ದೀನಾನಾಥ ಜನಸಂ|ಪ್ರೀತಿಯುತೆ ಪರಿಪೋಷಿತೆಅ.ಪ ಕರವ ಜೋಡಿಸಿ| ವಿನಯದಿಂದಲಿ ಬೇಡುವ|| ಅಖಿಳ ಸಂಪದವೀಯುತ 1 ಪಾದ ಸೇವೆಯ ಗೈಯುವೆ|| ಆದರಿಸಿ ಪೊರೆಯೆನ್ನ ಸರ್ವಪ| ರಾಧಗಳನು ಕ್ಷಮಿಸುತ 2 ಜನನಿ ನೀನತಿಕರುಣೆಯಿಂದಲಿ| ಸುರರಿಗಭಯವನೀಯುತ|| ದುರುಳ ದೈತ್ಯನ ವಧಿಸಿ ನಂದಿನಿ| ನದಿಯ ಮಧ್ಯದಿ ನೆಲೆಸಿದ3 ಪಂಕಜಾಂಬಕಿ ಪರಮಪಾವನೆ| ಶಂಕರಿ ಸರ್ವೇಶ್ವರಿ|| ವೆಂಕಟಾಚಲನಿಲಯ ಶ್ರೀವರ| ವೆಂಕಟೇಶನ ಸೋದರಿ4
--------------
ವೆಂಕಟ್‍ರಾವ್
ಮಾಧವ ಮುರಾರಿ ವಿದುರವಂದ್ಯ ಸದಾನಂದ ಶ್ರೀಹರಿ ಧ್ರುವ ಗೋಪವೇಷಧರ ಗೋಪ ಕೀಶೋರ ಚಕೋರ 1 ಯದುಕುಲತಿಲಕ ವಿರಾಜಿತ ಪೂರ್ಣ ಸದೋದಿತ ಸುಖಸಾಂದ್ರ ಸದ್ಗುಣ 2 ಭಾಸ್ಕರಕೋಟಿ ತೇಜ ಮಾಮನೋಹರ ದಾಸ ಮಹಿಪತಿ ಸ್ವಾಮಿ ಸಕಲ ಸಹಕಾರ 3
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ಮಾನವ ನೀನುವಾದಿರಾಜರ ಪೂಜಿಸೋ ಪ ಶಾರ್ವರಿ ವತ್ಸರದೀ | ಜನಿಸಿ ಗೌರಿಗರ್ಭ ಸುಧಾಂಬುಧಿಲೀ ||ಪುರಬಾಹ್ಯ ಪುಟ್ಟಿದ | ಕಾರಣದಿಂದಲಿವರಯತಿ ವಾಗೀಶ | ಕರಜನೆನಿಸಿ ಮೆರೆದ 1 ವಿನುತ ಸಿರಿ ಹರಿಯ ಪೂಜಿಸಿದ 2 ವಾಲಿ ಭಂಡಾರವನೂ | ಶೋಧಿಸೆ ಅಲ್ಲಿಶೀಲ ಇನಜಾರ್ಚಿಸಿದ ||ಲೀಲ ವಿಗ್ರಹ ರಾಮ | ವಿಠಲ ಮೂರ್ತಿಗಳನ್ನಕೋಲಾಹಲದಿ ತಂದು | ಭಾಳ ಪೂಜಿಸಿದ 3 ವ್ಯಾಸರಾಜಾರ್ಚಿತನಾ | ದೇವನವೇದವ್ಯಾಸರಿಂದಲಿ ಗಳಿಸಿದಾ |ವ್ಯಾಸಮುಷ್ಠಿಕೆಯ ವಿ | ಶ್ವಾಸದಿಂದಲಿ ಪೊಂದಿಶ್ರೀಶ ಉಡುಪಿನ ಕೃಷ್ಣ | ವಾಸ ಸ್ಥಾನಕೆ ಬಂದ 4 ಕವಿಕುಲ ಸಭೆಯೊಳಗೇ | ಪೂಣೆಯ ಪುರದಿನವರಸಲಂಕಾರದೀ ||ಕವನ ರಚಿಸಿ ರುಕ್ಮಿ | ಣೀಶ ವಿಜಯ ಗ್ರಂಥಕವಿ ಕುಲೋತ್ತಂಸ | ತಾನೆನಿಸುತ್ತ ಮೆರೆದಂಥ 5 ಪಂಢರಿ ಪುರ ಮಾರ್ಗವ | ಸವೆಸುತ ಬರೆಪುಂಡು ಸೈನಿಕರ್ ಬರಲೂ ||ಪುಂಡಲೀಕಗೆ ವರದ | ಪುಂಡರೀಕಾಕ್ಷನಹಿಂಡು ಶ್ವೇತಾಶ್ವಗಳಿಂದ ವಾರಿಸಿದಾ 6 ಹರಿವಾಣ ಪೂರಣವ ||ಹಯವದನನು ಬಂದು | ಜಯ ಘೋಷದಲಿ ಮೆದ್ದುದಯ ದೃಷ್ಟಿ ತೋರಿದ | ಭಾವಿ ಮಾರುತರ 7 ಪಾದ | ಬಿಸಜವ ಕಂಡರ 8 ಬೊಮ್ಮ ರಕ್ಕಸನಾಗೀ 9 ಸಕಲ ಶಿಷ್ಯರವೆರಸಿ | ರಾಜರು ಬರೆರಕ್ಕಸ ಕರೆದ ವಾದಕ್ಕೇ ||`ಆಕಾಮವೈ` ಕೋ ನಸ್ನಾತನೆಂದೆನೆ ಅವಕಾಕು ರಂಡೆಯ ಪುತ್ರ | ತೋಕ ನೀನೆಂದ 10 ಮೇನೆ ಪಾಲಕಿ ಹೊರುವ | ನರೆಯಣ ಭೂತಯಾನ ವಾಹಕನಾದನೂ ||ಆನೆಂತು ಬಣ್ಣಿಪೆ | ಮುನಿಕುಲ ದಿನಮಣಿವೇಣುಗಾನ ಪ್ರಿಯ | ಕೃಷ್ಣ ಸೇವಕರಾ 11 ಆ ಮಹ ನೇತ್ರಾವತಿ | ಸಂಗಮವೆನ್ನಕೌಮಾರ ನದಿ ಸನಿಯದಿ ||ಈ ಮಹಾ ಮಹಿಮರು | ಸಾಸಿರ ಲಿಂಗದನೇಮದ ಪೂಜೆಗೆ | ನಿರ್ಮಿಸಿದರು ತೀರ್ಥ 12 ಪಾದ್ಯ | ಸ್ವರ್ಣ ಗರ್ಭನ ಪಿತಪೂರ್ಣಗೆ ಸುಪ್ರೀಯ | ಗಸದಳವೇನಿದು13 ಗರಳ ಮಿಶ್ರಿತ ನೈವೇದ್ಯ | ಪಾಚಕತೆರೆಹರಿಗೆ ಸಮರ್ಪಿಸಿದಾ ||ಸಿರಿಪತಿ ಕಂಠದೋಳ್ | ಕರಿಯ ವರ್ಣವ ಕಂಡುಅರಿತು ಸೇವಿಸಿದನು | ಹರಿಯ ಪ್ರಸಾದವ 14 ಸಿರಿ ಕೃಷ್ಣ | ನಂಘ್ರಿಗರ್ಪಿಸಿದ 15 ಅರಿಯು ಮುತ್ತಲು ಪುರವ | ಸೋದಾಧಿಪಮೊರೆಯ ಹೊಕ್ಕನು ರಾಜರ ||ಭರದಿ ನಾರಾಯಣ | ವರ ಭೂತನನ ಕಳುಹಿಅರಿಭಯ ವಾರಿಸಿ | ಪೊರೆದ ನಾಯಕನಾ 16 ಸೋದೆಯಲ್ಲೋರ್ವ ಶೈವ | ಬಲುಗರ್ವದಿವಾದ ಮಾಡುತಲವನೂ ||ವೇದ ಮತವ ಬಲು | ವಿಧದಿ ದೂಷಿಸಿ ಕಡುಬಾಧೆ ಪಡಿಸುತಲಿದ್ದ | ಬುಧಜನ ವೃಂದವ 17 ಭೃತ್ಯ ಭಾವದಿ | ವಿಜಯ ಪತ್ರವನಿತ್ತುನಿಜ ಬಿರುದುಗಳವರ | ಪದಕೆ ಅರ್ಪಿಸಿದ 18 ತ್ರಿವಿಕ್ರಮಾಲಯ ಸ್ಥಾಪನೆ | ರಚಿಸಿ ಮೆರೆದ ದಿವ್ಯ ಶಾಲೀವಾಹನ್ನ ||ಸಾವಿರೈನೂರ್ನಾಲ್ಕು | ಚಿತ್ರ ಭಾನುವಿನಲ್ಲಿರವಿಯು ಮೇಷಾರ್ಧದಿ | ಚರಿಸುವ ದಿನದಿ 19 ರಥದಿಮೂರ್ತಿಯ ಸೇರಿಸಿ | ಬದರಿಯಿಂದಭೂತ ನರೆಯಣ ಬರುತಿರೆ ||ಪಥದಿ ರಕ್ಕಸ ಸೆಣೆಸೆ | ಪೃಥುಕು ಆಯುಧ ಬಿಟ್ಟುರಥದ ಗಾಲಿಯಲಿಂದ | ಹತಗೈದನವನ 20 ವೇದಾರ್ಥ ಬೃಂಹಿತದ | ಬಹು ಗ್ರಂಥಗಳ್‍ಪದ ಪದ್ಯ ಸೂಳ್ಹಾದಿಯ ||ಸೋದೆ ಮಠದಿ ನಿಂದು | ವಾದಿರಾಜರು ರಚಿಸಿಬುಧರಿಗಾನಂದವ | ಮುದದಿ ಪಾಲಿಸಿದ 21 ತ್ರಿವಿಕ್ರಮ ರಥೋತ್ಸವದಿ | ಕರೆಯಲು ಬಂದದಿವಿರಾಜ ಜನರು ಕಳುಹಿ ||ಭವ್ಯ ಸು ಪಂಚ ವೃಂದಾವನಗಳ ರಚಿಸಿದಿವಿರಾಜ ಗರುಹಿದರ್ ತಮ್ಮಯ ಬರವನು 22 ಶಾರ್ವರಿ ವತ್ಸರದೀ | ಫಾಲ್ಗುಣ ವದ್ಯಮೂರನೆ ದಿವಸದಲ್ಲೀ ||ವರ ವೃಂದಾವನ ಪೊಕ್ಕು | ಗುರು ಗೋವಿಂದ ವಿಠಲನನಿರುತ ಧ್ಯಾನದೊಳಲ್ಲಿ | ವರವ ಪಾಲಿಸುತಿಹರ 23
--------------
ಗುರುಗೋವಿಂದವಿಠಲರು
ಮೂರ್ತಿ ಧೃತ ಹೇಮವರ್ಣ ಸರ್ವಾಂಗ ಶೋಭಿತೆ ಕಾಮಿತಾರ್ಥ ಉದಾರಿಣಿ ಕುಂಡಲ ಪಾಣಿ ಪಾತ್ರ ಸುಧಾರಿಣಿ ಸೂರ್ಯ ಸುರಮುನಿಸ್ತೋಮ ಹೃದಯ ಸಂಚಾರಿಣಿ ಕಾಲ ಕಠಾರಿ ಪರಶಿವೆ 1 ಅಂಬುಜಾನನೆ ಸಕಲ ಕುಟುಂಬ ರಕ್ಷಕ ಮೋಹಿನಿ ಶಂಭುದಾನವ ಶಿಕ್ಷಿತೆ ಶಿವ ಪ್ರತಿಬಿಂಬೆ ಸಿಂಹ ಸುವಾಹಿನಿ ಕಂಬುಕಂಧರ ರತ್ನ ಭೂಷಿತೆ ತುಂಬರ ಪ್ರಿಯಗಾಯಿನಿ ಕುಮುದ ಲೋಚನೆÀ 2 ವರದ ಅಭಯ ಕರಾಂಬುಜೇಷಣೆ ವೀಣಾ ಪುಸ್ತಕ ಶೋಭಿತೇ ಪರಮ ಪಾವನ ಚರಿತೆ ಪರಮೇಶ್ವರಿ ಪ್ರತಾಪ ವಿರಾಜಿತೆ ಭರಿತ ಬಂಧ ಕಟಾದಿವಾಸಿನಿ ಭಕ್ತ ಸಜ್ಜನ ಪೂಜಿತೆ ಗುರು ವಿಮಲಾನಂದ ದೇವಿ ಶ್ರೀ ಮಹಾಲಕ್ಷ್ಮೀ ಸಂತತ 3
--------------
ಭಟಕಳ ಅಪ್ಪಯ್ಯ
ಮೇಲು ಕೋಟೆ ತಿರುನಾರಾಯಣ ಚರಣಂ ಶರಣಂ ಸುರ ಮುನಿ ವಲಯಂ ಯದುಗಿರಿನಿಲಯಂ ಪ ಗುರುರಾಮಾನುಜ ಹೃದಯಭರಣಂ ಸ್ಮರವರ ಸುಂದರಮನಿಶಂ ಸದಯಂ ಅ.ಪ ಯತಿರಾಮಾನುಜ ಶೆಲ್ವಕುಮಾರಂ ಪತಿತಪಾವನ ಮಾಯುತ ಮಣಿಹಾರಂ ಸತತಾನಂದದ ಪುಣ್ಯಶರೀರಂ ಶತಪತ್ರಾಯುತ ನೇತ್ರಮುದಾರಂ 1 ವಿರಾಜಿತ ಮಸ್ತಕಮಮಲಂ ಪರಮ ವೈಭವೋತ್ಸವ ರಾರಾಜಿತ ಪುರುಷೋತ್ತಮ ಕೇಶವ ಮಾಲೋಲಂ 2 ಪರಮ ಪುಣ್ಯತೀರ್ಥಾಕರ ಶೋಭಿತ ನರಹರಿ ಗಿರಿಸಂಭೂಷಿತ ಧಾಮಂ ನಿರುತ ದಯಾಕರ ಮಾಂಗಿರಿಪತಿ ಭೂ ಮಾಧವ ಜಗದಭಿರಾಮಂ 3
--------------
ಅಸೂರಿ ರಾಮಸ್ವಾಮಿಅಯ್ಯಂಗಾರ್
ಯಚ್ಚರಿಕೆ ಯಚ್ಚರಿಕೆ ಶ್ರೀ ಸೋದೆಪುರಯಚ್ಚರಿಕೆ ಯಚ್ಚರಿಕೆ ಶ್ರೀ ಸೋದೆಪುರವಾಸಿ ಗುರುಪಾದ ಯಚ್ಚರಿಕೆ ಯಚ್ಚರಿಕೆ ಪ ಶ್ರೀ ತ್ರಿವಿಕ್ರಮ ಲೋಕನಾಥನ ತಂದೆ ಶ್ರೀಪಾದಯಚ್ಚರಿಕೆ ಯಚ್ಚರಿಕೆ ಅ.ಪ. ಗುರುಹಯವದನ ಮನಮುಟ್ಟಿ ಸ್ಮರಿಸಿ ಪೂಜಿಪಶ್ರೀ ಗುರುಪಾದ ಯಚ್ಚರಿಕೆ ಯಚ್ಚರಿಕೆ 1 ಶತಷಣ್ಣವತಿ ಸಪ್ತ ಬ್ರಹ್ಮ ಕಲ್ಪಗಳಲ್ಲಿ ಶ್ರೀಹರಿಯೆ ಮಹ ಮಾರೆತವ ಚರಿಸಿದ ಶ್ರೀಪಾದ ಯಚ್ಚರಿಕೆ ಯಚ್ಚರಿಕೆ 2 ತಪಚರಿನಿಯರ ಡೃವತ್ತೂ ಷಣ್ಣವತಿ ಲಿಷ್ಟನೇ ಕಲ್ಪದ-ಲಿಲಾತವ್ಯ ವಾಯುಸಾಧನ ಮಾಡುವಾನಂದ ಜ್ಞಾನ ಯೋಗ ಸಿದ್ಧಿಸಿ ಕೊಡುವ ಉದಾರ ಶ್ರೀಪಾದ ಯಚ್ಚರಿಕೆ ಯಚ್ಚರಿಕೆ 3 ಪ್ರಧಾನ ವಾಯು ಪದ ಸ್ವೀಕರಿಪ ಹಂಸವಾಹನ ಶ್ರೀಪಾದ ಯಚ್ಚರಿಕೆ ಯಚ್ಚರಿಕೆ4 ಹಿಂದೆ ವಿರಜಸ್ನಾನದಿ ಅಜ್ಞಾನಾತ್ಮಕ ಲಿಂಗದೋಷನಿಶ್ಶೇಷ ಹೊಂದಿದ ಗುರುವಿರಾಜರ ವಾದದ್ವಯ ಯಚ್ಚರಿಕೆ ಯಚ್ಚರಿಕೆ 5 ನಿರ್ಜೀವ ನಿಷ್ಕ್ರಿಯಾ ದಗ್ಧಪಟದಪ್ಪಂತಿರುವ ದೇಹ ಲಿಂಗವ ನಿಮಿತ್ತ ಮಾತ್ರಕೆ ಹರಿಯಿಭಯಿಂ ಧರಿಸಿರುವ ಲಾತವ್ಯ ಗುರುಪಾದ ಯಚ್ಚರಿಕೆ ಯಚ್ಚರಿಕೆ6 ಮುಕ್ತ ಅಮುಕ್ತಿ ಭೇದ ತೋರ್ಪದಕೆ ಶಿರಿಯಿಂದನದಿ ಶಾಲ್ಮಲ ವಾಸಿಯ ಶ್ರೀಪಾದ ಯಚ್ಚರಿಕೆ ಯಚ್ಚರಿಕೆ 7 ದ್ವಸ್ತ ದುರಾಗಮಿ ಶ್ರೀರಾಜಗುರು ಪಾದಕೆಚ್ಚರಿಕೆ 8 ಅಜ್ಞಾನ ಅಹಂಕಾರ ಭಯ ಮೋಹ ವಿಸ್ಮøತಿ ದುಃಖಾದಿಬಂಧನ ಕಳೆವ ಪ್ರಭುವಾದಕೆಚ್ಚರಿಕೆ 9 ಪತಿ ಶ್ರೀಪಾದ ಯಚ್ಚರಿಕೆ ಯಚ್ಚರಿಕೆ 10 ತ್ರಿವಿಧ ಜೀವರ ಚತುರ್ವಿಧಶರೀರದಿಯಿದ್ದವರ ಸಾಧನವಾ ಮಾಡಿಸಿ ಜೀವರ ಸುಖದುಃಖಗಳಿಂತಾ ಬದ್ಧರಾಗದೆ ಪೂರ್ಣ ನಿರ್ಲಿಪ್ತರಾಗಿರುವಶ್ರೀಪಾದ ಯಚ್ಚರಿಕೆ ಯಚ್ಚರಿಕೆ11 ತ್ರಿವಾರ ವಿರಜ ಸ್ನಾನವ ಮಾಡ್ವ ಸೌಭಾಗ್ಯ ಪ್ರಾರಬ್ಧಪೊಂದಿರುವ ಗುರು ವಾದಿರಾಜರ ಶ್ರೀಪಾದ ಯಚ್ಚರಿಕೆ ಯಚ್ಚರಿಕೆ 12 ಸತ್ವ ಜೀವರ ಮೋಕ್ಷ ಪ್ರಾಪ್ತಿಗೆ ವಿರಜ ನದಿಯಲಿಸ್ನಾನ ಮಾಡಿಸಿ ಜೀವಸತ್ವರ ಮೋಕ್ಷಕ್ಕಿಡುವ ನಿವ್ರ್ಯಾಜ ಶ್ರೀಪಾದ ಯಚ್ಚರಿಕೆ ಯಚ್ಚರಿಕೆ 13 ಸುಜೀವರ ಅನಾದಿ ಲಿಂಗ ಅಜ್ಞಾನ ಸ್ವರೂಪ ದೇಹ-ಭಂಗಿಸುವ ಶ್ರೀರಮಾತ್ಮಕ ವಿರಜ ನದಿಯಲಿ ಸ್ನಾನ-ಮಾಡಿ ಸ್ವಲಿಂಗ ವಿಶಿಷ್ಟವಾದ ಅಜ್ಞಾನದಿಂ-ವಿರಹಿತರಾದವರ ಶ್ರೀಪಾದ ಯಚ್ಚರಿಕೆ ಯಚ್ಚರಿಕೆ 14 ಆನಂದವ ವೃಷಭಾವಿ ಆನಂದ ತೀರ್ಥ ಶ್ರೀಪಾದ ಯಚ್ಚರಿಕೆ ಯಚ್ಚರಿಕೆ 15 ತ್ರಿವಿಧ ಜೀವರಲಿಯಿದ್ದು ತ್ರಿವಿಧಸಾಧನ ಮಾಡಿಸುವ ಭಾವಿ ವಾಯುನಾಮಕ ನತ್ತಾ ಪ್ರದ ಲಾತವ್ಯವಾಯು ವಾದಿರಾಜ ಮಧ್ವ ಮುನಿ ಶ್ರೀಪಾದ ಯಚ್ಚರಿಕೆ ಯಚ್ಚರಿಕೆ 16 ಆಯಾಯರ ಜೀವರ ಚಲನವಲನಾದಿ ವ್ಯಾಪಾರ ಮಾಡಿಸುವ ಭಾವಿ ಪ್ರಾಣನಾಮಕ ಭೀಷ್ಟಾಪ್ರದ ವಾದಿರಾಜಗುರುಪಾದಯಚ್ಚರಿಕೆ ಯಚ್ಚರಿಕೆ 17 ಚತುರ್ವಿದ ಶರೀರಗಳಲಿದ್ದು ಸಂರಕ್ಷಿಸುವ ಭಾವಿ ಧರ್ಮನಾಯಕಧಾರಣಪ್ರದ ಶ್ರೀ ಗುರುರಾಜರಶ್ರೀಪಾದ ಯಚ್ಚರಿಕೆ ಯಚ್ಚರಿಕೆ 18 ಪ್ರಭುತ್ವವಾರ್ತೈಸಿಜೀರರ ಅವರವರ ಸ್ವರೂಪಯೋಗ್ಯಗತಿ ಕೊಡುವ ಭಕ್ತಿ ಮುಕ್ತಿ ಪ್ರದ ಭಾವಿ ಭಾರತೀ ರಮಣ ಶ್ರೀಪಾದ ಯಚ್ಚರಿಕೆ ಯಚ್ಚರಿಕೆ 19 ದೇವೋತ್ತಮ ಲಾತ ವಾಯುಸ್ವನಾಮಕೆ ಭಗವಂತಗೇ ನಿತ್ಯನ್ವ ಭಕ್ತರ ಪಾಪ ಮನ್ನಿಸುವಂತೆ ಪ್ರಾರ್ಥಿಸಿ ತಾವು ಮನ್ನಿಸಿ ಕ್ಷಮಿಸುವಲ್ಲಿ ಕ್ಷಮಾ ಸಮುದ್ರರಾದ ಶ್ರೀಗುರುಪಾದಯಚ್ಚರಿಕೆ ಯಚ್ಚರಿಕೆ 20 ಪುಣ್ಯ ಪ್ರದಾನ ಮಾಡುವಲ್ಲಿ ಜೀವರಿಗೆ ಪರಮ ದಯಾಳು ಆರ್ತರಿಗೆ ದಯತೋರುವ ಕೃಪಾನಿಧಿ ಸಜ್ಜನರ ದೋಷ ವಿಚಾರದಿ ಮಹಾ ಸಹಿಷ್ಣುಗಳಾದವರ ಶ್ರೀಪಾದ ಯಚ್ಚರಿಕೆ ಯಚ್ಚರಿಕೆ 21 ಶಿಖಾಮಣಿ ಸಕಲ ತಾತ್ವಿಕ ದೇವತಾ ರಂಜಕ ಆಹ್ಲಾದಕರ ದಾನವ ಭಂಜಕ ಸಂಹಾರ ಕರ್ತರಾದ ಕಾರಣ ಭಾವಿ ಪ್ರಭಂಜನ ವರವಾಜ್ಯರಾದವರ ಶ್ರೀಪಾದ ಯಚ್ಚರಿಕೆ ಯಚ್ಚರಿಕೆ 22 ಸರ್ವದಾ ಅನ್ಯ ಜೀವರು ಕಾಣದಾ ಅಸಾಧಾರಣ ಗುಣ ಕ್ರಿಯಾ ಸ್ವರೂಪರಾದ ವೇದ ಪ್ರತಿಪಾದ್ಯರಾದುದರಿಂದ ಮಹಂತರೆಂದು ಕರೆಸುವ ಭಾವಿ ವಾಯುವಿನ ಶ್ರೀಪಾದ ಯಚ್ಚರಿಕೆ ಯಚ್ಚರಿಕೆ23 ಅವರವರ ಸಾಧನಗಳ ಪೂರೈಸಿ ಕೊನೆಗವರ ನಿಜಗತಿ ಪ್ರವರಾದ ಸರ್ವ ಜೀವರಂತರ್ಯಾಮಿ ಸಕಲ ಗುಣ ಸದ್ಧಾಮ ಭಾವಿ ಮರುತ ಗುರುವಾದಿರಾಜರ ಶ್ರೀಪಾದ ಯಚ್ಚರಿಕೆ ಯಚ್ಚರಿಕೆ 24 ಬರುವ ಜಗತ್ತಿನ ಸರ್ವ ಜೀವರಿಗೆಲ್ಲ ಜೀವನ ಪ್ರಾಣ- ವಾಗಿರುವ ಜೀವೋತ್ತಮ ಶ್ರೀ ಭಾವಿ ಬ್ರಹ್ಮ ಮರುತ ವಾದಿರಾಜರ ಶ್ರೀಪಾದದ್ವಯ ಯಚ್ಚರಿಕೆ ಯಚ್ಚರಿಕೆ 25 ಸಕಲ ಜೀವರ ಸಂಜೀವರಾದ ಯಲ್ಲ ಜೀವರ ಜೀವ ಯಲ್ಲಪ್ರಾಣಿಗಳ ಪ್ರಾಣರಾಗಿ ಪ್ರಾಣೆಂದು ಕರೆಸುವ ಭಾವಿ ಮುಖ್ಯ ಪ್ರಾಣ ವಾದಿರಾಜರ ಗುರುಪಾದಕೆಚ್ಚರಿಕೆ 26 ಸದಾಸರ್ವತ್ರ ಭಗವದ್ರಷ್ಟøಗಳಾದ ಬ್ರಹ್ಮದೇವರ ಭೃತ್ಯಣ ಜೀವ ಪರ್ಯಂತ ವ್ಯಾಪ್ತರಾದ ಆಯಾ ಸ್ಥಳದಿದ್ದು ಆಯಾ ಜೀವರ ತಕ್ಕ ವ್ಯಾಪಾರ ಮಾಡುವ ಭಾವಿ ಪೂರ್ಣಪ್ರಜ್ಞರೆನಿಸಿರುವ ಶ್ರೀಪಾದ ಯಚ್ಚರಿಕೆ ಯಚ್ಚರಿಕೆ 27 ಸಾಕ್ಷಾತ್ರ್ಪತಿಬಿಂಬರಾದ ಕಾರಣ ಭಾವಿ ಮುಖ್ಯ ಪ್ರತಿಬಿಂಬ-ರೆಂದೆನಿಸಿಕೊಂಡ ಗುರುವಾದಿರಾಜ ವಿಭುಪಾದಕೆಯಚ್ಚರಿಕೆ ಯಚ್ಚರಿಕೆ 28 ನಿತ್ಯ ಸಾಯುಜ್ಯ ಸಹ ಭೋಜನದ ಭೋಗ ಹೊಂದುವ ಭಾವಿ ಮರುತ ಶ್ರೀಲಾತವ್ಯ ವಾಯು ಗುರು ಮಧ್ವ ಮುನಿಯ ಶ್ರೀಪಾದ ಯಚ್ಚರಿಕೆ ಯಚ್ಚರಿಕೆ 29 ಸದನ ಪೂರ್ಣ ಚಂದ್ರವದನರು ಮೋಕ್ಷ ಸಾಮ್ರಾಜ್ಯ ನಿರ್ದುಷ್ಟ ಆನಂದ ಸುಖಸ್ವರೂಪರು ಪರಮ ಪುರುಷಾರ್ಥ ಪಾತ್ರಗಳು ಪುಣ್ಯ ಸ್ವರೂಪ ಪಂಚ ರೂಪಾತ್ಮಕ ಹರಿಯೆ ಪಂಚ ವೃಂದಾವನ ಸ್ವರೂಪದಿಯಿರುವ ರಂಜಪುಣ್ಯ ವೃಂದಾವನದಿ ವಿರಾಜಿಸಿ ಪಂಚ ಪುಣ್ಯ ಧಾರೆಯೆರೆವ ಪಂಚಪ್ರಾಣರಾದ ವಾದಿಗಳ ಪಲ್ಮುರಿವ ವಾದಿರಾಜಮಧ್ವ ಮುನಿಯ ಶ್ರೀ ಭಾವೀ ಭಾರತೀದೇವಿ ತನ್ನ ಮೃದು ಕೋಮಲ ತೊಡೆಯ ಮೇಲೆ ಪತಿಯ ಶ್ರೀಪಾದಪದ್ಮದ್ವಯವಿಟ್ಟು ವತ್ತೂವ ಅಜ್ಞಾನ ತಿಮಿರಕೆ ಮಾರ್ತಾಂಡ ವಾದ ಜ್ಞಾನಾನಂದ ದಾಯಕ ಶ್ರೀಗುರುಪಾದ ಯಚ್ಚರಿಕೆ ಯಚ್ಚರಿಕೆ30 ಜಗಜ್ಜೀವನಗಳಿಗೆ ಮುಖ್ಯ ಕಾರಣ ಪ್ರಾಣ ಆ ಪ್ರಾಣವಿಲ್ಲದಿರೆ ಸ್ವತಃ ಚಲಿಸಲು ಅಸಮರ್ಥ ಸರ್ವ ಜಗತ್ತಿಗೆ ಪ್ರಾಣ ವಿಜ್ಞಾನ ಪ್ರಾಣಾಗ್ನಿ ಶಬ್ದವಾಜ್ಯ ಈ ಭಾವಿಮುಖ್ಯ ಪ್ರಾಣ ಜಗಜ್ಜೀವನಗಳಿಗೆ ತಾನೇ ಮುಖ್ಯ ಪ್ರಾಣರೂಪ ಹೀಗೆಂದು ಬಳಿತ್ಥಾ ಸೂಕ್ತ ಅಗ್ನಿ ಸೂಕ್ತದಲಿ ಉಕ್ತ ಈ ಸೂಕ್ತಿಗಳಿಂದ ಪ್ರತಿಪಾದ್ಯರಾದ ಜಗನ್ನೇತ್ರಜಗಜ್ಜೀವನರಾದ ಪಂಚಪ್ರಾಣ-ರೂಪಾತ್ಮಕ ಶ್ವಾಸನಿಯಾಮಕ ಸೋದೆಪುರವಾಸಿ ಭೂತರಾಜರ ಹೃನ್ಮಂದಿರ ವೇದ್ಯ ವೇದ್ಯನುತ ಅಹಿಪ ಖಗಪ ಉಮೇಶಾದಿ ಸುರರಿಗೆ ಚಿಂತಿಸಲು ಅಳವಲ್ಲದ ಅಗಮ್ಯ ಮಹಿಮ ಶ್ರೀ ಪ್ರಭು-ವಾದಿರಾಜರ ನಿರ್ದೋಷ ಶ್ರೀಪಾದ ಯಚ್ಚರಿಕೆ ಯಚ್ಚರಿಕೆ 31 ಜಿತಣಮ ಸರ್ವಜ್ಞ ಅಶೇಕ್ಷ ಸಂಪದ್ವಿಶಿಷ್ಟ ಸದ್ಗುಣ ಭರಿತ ಪೂರ್ಣ ತೃಪ್ತ ನಿಶ್ಚಲ ಭಕ್ತ ದೃಢವ್ಯೆರಾಗ್ಯಶಾಲಿಚಿರಂಜೀವಿ ಶ್ರೀ ಗುರುವಾದಿರಾಜರ ಶ್ರೀಪಾದ ಪದ್ಮ ನಖರೇಣುಗಳಿಗೆ ಯಚ್ಚರಿಕೆ ಯಚ್ಚರಿಕೆ 32 ಪರಿ ಪರಿ ಕ್ರೀಡೆ-ರಮಿಸಿ ಆ ಆನಂದ ಶ್ರೀ ಹರಿಗೆ ಅರ್ಪಿಪ ಗುರುವಾದಿರಾಜಶ್ರೀಪಾದಂಗಳ ಶ್ರೀಪಾದ ಯಚ್ಚರಿಕೆ ಯಚ್ಚರಿಕೆ 33 ನಿತ್ಯ ನಿತ್ಯ ಶ್ರೀವರ ಮಾಲೇಶೆಗೆ ಅರ್ಪಿಪ ಭಾವಿಲಾಳೂರ ಶ್ರೀ ಗುರುರಾಜರ ಪಾದಕೆ ಯಚ್ಚರಿಕೆ ಯಚ್ಚರಿಕೆ34 ತನ್ನ ಶ್ರೀಪಾದ ರಜ ಧೆಣಿಯಲಿ ಧರಿಸಿ ಜೀವಿವರ ಹಯವದನ ಪಾದಕರ್ಪಿಸುವೆನೆಂದು ಪಣತೊಟ್ಟು ಜೀವನ್ಮುಕ್ತರನು ಮಾಡಿ ಪರಿಪಾಲಿಪೆನೆಂದು ಧೀರ ವೃಂದಾವನದಿ ಮೆರೆವ ಶ್ರೀಗುರು-ವಾದಿರಾಜರ ಶ್ರೀಪಾದಕೆ ಯಚ್ಚರಿಕೆ ಯಚ್ಚರಿಕೆ 35 ಶ್ರೀ ತ್ರಿವಿಕ್ರಮನ ರಥೋತ್ಸವಕೆ ಬಂದವರಲಿ ಒಂದೊಂದಂಶ ಸುರರ ಪ್ರವೇಶಿಸಿ ಅವರಲ್ಲಿ ತನ್ನೊಂದಂಶದಿಂದ ಸುರರ ಸಾಧನ ಮಾಡಿ ಸುರನರರ ಕೃತ ಕೃತ್ಯರೆನಿಸಿ ಶಿರಿ ಹಯ-ವದನನ ಕಾಣ್ವ ಜ್ಞಾನ ಭಕುತಿ ವೈರಾಗ್ಯ ನಿಷ್ಠಿಯನಿತ್ತು ಬ್ರಹ್ಮ ನಿಷ್ಯ್ಠೆ ಕರೆನು ಮಾಳ್ವ ಶ್ರೀ ಗುರು ಶ್ರೀಪಾದಕೆಯಚ್ಚರಿಕೆ ಯಚ್ಚರಿಕೆ 36 ಶ್ರೀ ಧವಳ ಗಂಗೆಯ ಸ್ನಾನ ಮಾಡುವ ಜ್ಞಾನವೀವ ಶ್ರೀ ಗುರು-ಪಾದಕೆ ಯಚ್ಚರಿಕೆ ಯಚ್ಚರಿಕೆ 37 ವಾಸುದೇವ ಪರಿ ಸ್ತೋತ್ರ ಮಾಡಿರೈ ಜ್ಞಾನಿ-ಗಳಾದವರೆಲ್ಲ ಶ್ರೀ ಗುರುಪಾದದೆಚ್ಚರಿಕೆಯಲಿ ತಂದೆವರದಗೋಪಾಲವಿಠಲ 38
--------------
ಗುರುತಂದೆವರದಗೋಪಾಲವಿಠಲರು
ಯಾದವೇಂದ್ರ ಪರಿಮೋದವ ಸೂಸುತ ಹಾದಿಯ ಹಿಡಿದಾನು ತಾಗುಣ ಸಾಂದ್ರ ಯಾದವೇಂದ್ರ ಪ. ಛತ್ರ ಚಾಮರದವರು ಜತ್ತಾಗಿ ನಡೆದರುಚಿತ್ತಜನೈಯನ ಹತ್ತಿರ ಕೆಲರು1 ಆನೆ ಅಂಬಾರಿಯವರು ಶ್ರೀನಿವಾಸನ ಮುಂದೆ ನಾನಾ ಭೂಷಿತರಾಗಿ ಮಾನದಿ ತೆರಳಿ 2 ರಾಜಪುತ್ರರು ದಿವ್ಯ ವಾಜಿಗಳೇರುತ ಬಾಜಾರದೊಳು ವಿರಾಜಿಸಿ ನಡಿಯೆ3 ಮಂದಗಮನೆಯರ ರಥ ಮುಂದಾಗಿ ನಡೆದವುಇಂದಿರೆ ಅರಸನ ಸಂದಣಿ ನೋಡ 4 ಎಲ್ಲೆಲ್ಲಿ ನೋಡಿದರೆ ಪಲ್ಲಕ್ಕಿ ಸಾಲಾಗಿ ಫುಲ್ಲನಾಭನ ಮುಂದೆ ನಿಲ್ಲಿಸಿ ನಡಿಯೆ5 ನೋಡ ಬಂದವರೆಲ್ಲ ಗಾಡಿ ವಯಲುಗಳೇರಿರೂಢಿಗೊಡೆಯನ ಮುಂದೆ ಓಡಿಸಿ ನಡಿಯೆ 6 ತಂದೆ ರಾಮೇಶನು ಬಂದ ಬೀದಿಯ ಸೊಬಗುಇಂದಿರೆವಶವಲ್ಲ ಚಂದಾಗಿ ರಚಿಸೆ 7
--------------
ಗಲಗಲಿಅವ್ವನವರು
ರಚಿತವಾದ ಕೀರ್ತನೆಗಳು ಕರುಣದಿ ಪಾಲಿಸೆನ್ನನು | ಶ್ರೀಕಾಂತಾ ಪ ನಂದಸನಕ ಪಾಲಕ | ನೀಲಾಳಕಾ | ನಂದಗೋಪನ ಬಾಲಕಾ | ಸಿಂಧುರ ಮುಖವರ ಸಿಂಧುರ ನತಪದ | ಭವ ಸಿಂಧು ತರಿಸುತಾ 1 ರಾಜಶೇಖರ ಪೂಜಿತಾ | ವಿರಾಜಿತಾ | ರಾಜೀವ ಪದರೀಜಿತಾ | ರಜ ರಾಜ ದ್ವಿಜ ರಾಜಗಮನ ಹರಿ | ರಾಜತಲ್ಪ ಉಡುರಾಜ ಕುಲಮಣಿ 2 ಗಿರಿಧರ ಸುತ ರಕ್ಷಣ | ಕರುಣೀಕ್ಷಣಾ | ಗಿರಿಕರ ಸುವಿ ಚಕ್ಷಣಾ | ಗಿರಿಧರಜಾಪತಿ ಗಿರಿಸಮೃತತುರಗ | ಗಿರಿಮಂದಿರ ಕೃತ ಗಿರಿಪುಜಸಖಾ3
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ರಜತಗಿರೀಶ್ವರ ಮಹಾನುಭಾವ ಗಜಚರ್ಮಾಂಬರ ನಮೋ ನಮೋ ಪ ವಿಜಯರಾಮಾರ್ಚಿತ ಪದಕಮಲ ಅಜಸುತ ಸೇವಿತ ನಮೋ ನಮೋ ಅ.ಪ ವಾರಣಾಸಿ ಸುಕ್ಷೇತ್ರ ನಿವಾಸ ಪರಮೋಲ್ಲಾಸ ನಮೋ ನಮೋ ಭೂರಿ ವೈಭವಾನಂದ ವಿಲಾಸ ರವಿಶತಭಾಸಾ ನಮೋ ನಮೋ 1 ನಾದಾಲಂಕೃತ ವರದಾತಾ ಶ್ರೀ ಗೌರಿಯುತ ನಮೋ ನಮೋ ಭಾಗೀರಥೀಪ್ರಿಯ ಲೋಕನುತ ದೇವೇಂದ್ರಾತ ನಮೋ ನಮೋ2 ಮಂಗಳದಾಯಕ ಶಶಿಶಿಖರ ಸಂಗವಿದೂರಾ ನಮೋ ನಮೋ ಮಾಂಗಿರಿ ಶೃಂಗವಿರಾಜಿತಶಂಕರ ಶರಣಶುಭಂಕರ ನಮೋ ನಮೋ 3
--------------
ಅಸೂರಿ ರಾಮಸ್ವಾಮಿಅಯ್ಯಂಗಾರ್
ವಂದಿಸುವೆ ಸುಂದರಾಂಗ ನಿಜಸೌಂದರ್ಯಜಿತಾನಂಗ ಬೃಂದಾರಕಾದಿ ಮುನಿ ಬೃಂದವಂದಿತ ಮುಕುಂದ ಗೋವಿಂದ ನಂದ ಮೂರುತಿ ಹರೆ ಪ ದೇವಾದಿ ಜೀವ ಸುಪ್ರಭಾವ ಭಾಸಿತ ಮುಖ ದೇವಕೀ ವಸುದೇವ ಭಾವನಾ ಗೋಚರ 1 ಹಾರಕುಂಡಲ ಮನ ಮಾಲಾವಿರಾಜಿತ ಕ್ಷೀರಾಬ್ದಿ ಕನ್ಯಕಾ ಲೋಲಾ ಮುರಾಂತಕ2 ಧೇನುನಗರ ಪರಿಪಾಲಕ ವೇಂಕಟೇಶ ಸಾನುರಾಗದಿ ಪೊರೆ ಗಾನವಿನೋದ ಹರೆ 3
--------------
ಬೇಟೆರಾಯ ದೀಕ್ಷಿತರು
ವಂದೇ ಶ್ರೀ ಗೌರಿನಂದನ ಸುರನರ ವೃಂದವಂದಿತಚರಣ ಗಜಾನನ ಪ. ಶಂಕರೋಲ್ಲಾಸ ಪಾಶಾಂಕುಶಧರ ಕರ ಪಂಕಜ ಸುವಿರಾಜ ರವಿತೇಜ 1 ಜಂಭಾರಿಸಂನುತ ಜಾಹ್ನವೀಧರಸುತ ಲಂಬೋದರ ಸುಂದರ ಕೃಪಾಕರ 2 ಸುಕ್ಷೇಮಧಾಮ ಶ್ರೀ ಲಕ್ಷ್ಮೀನಾರಾಯಣನ ಪಕ್ಷೈಕಪಾವನ ಸುಧೀಷಣ 3
--------------
ತುಪಾಕಿ ವೆಂಕಟರಮಣಾಚಾರ್ಯ
ವಿಘ್ನೇಶ ಪಾಹಿಮಾಂ ವಿಘ್ನ ನಿವಾರಕ ನಿರ್ವಿಘ್ನದಾಯಕ ಪ ಭಗ್ನದಂತಾಕಾಶಾಭಿಮಾನಿ ಮಗ್ನಂ ಕೃತ್ವಾವೋ ಮನ ಅಗ್ನಿ ನೇತ್ರಸುತ ತವ ಪದದೆ ಅ.ಪ ಕುಕ್ಷಿ ಮಹಾಲಂಬೋದರ ಇಕ್ಷುಚಾಪಹರ ಅಕ್ಷತ ಶೋಭಿತ ಗಜಪಾಲ ರಾಕ್ಷಸ ಮದಹರ ಅಂಕುಶಪಾಶ ಕಿನ್ನರ ವಂದಿತ ಚರಣ 1 ಗಜಾನನ ಮನೋಹರ ಗಾತ್ರ ಅಜಿನ ಬದ್ಧ ಪ್ರಲಂಬ ಪವಿತ್ರ ಭಜಕೇಷ್ಟದ ಪರಮ ಸೂತ್ರ ಸುಜನ ಪಾಪ ಪರ್ವತ ವೀತಿ ಹೋತ್ರ 2 ಮೂಷಕ ಗಮನ ವಾಯಭುಗ್ ಭೂಷ ಆದಿಪೂಜ್ಯ ವಿತತ ಮಹಿಮ ಏಕದಂತ ಗಂಧಲೇಪಿತ ವಕ್ಷ ಪತಿತ ಪಾವನ ವಿಶ್ವೋಪಾಸ್ಯ 3 ವ್ಯಾಸೋಕ್ತ ಪುರಾಣ ಲಿಖಿತನೆ ಶೂರ ವಿಂಶತ್ಸೇಕ ಮೋದಕ ಭಕ್ಷ ಕಟಿ ವಿರಾಜಿತ ಕ್ಲೇಶನಾಶನ ಸುಂದರ ಆಶಾಪಾಶ ರಹಿತ ಭೂತ ಗಣೇಶ 4 ಹಾಟಕ ಮಣಿಮಯ ಮಕುಟ ತಟಿತ್ತೇಜ ನಿತ್ಯವಹಿರೂಪ ಪಟಪಟ ಶಬ್ದಘಟಿತ ಗಜಕರ್ಣ ನಿಟಿಲಾಕ್ಷ್ಯವಂದ್ಯ ವಿಜಯರಾಮಚಂದ್ರ ವಿಠಲ ಪೂಜಕ ಶತಸ್ಥ 5
--------------
ವಿಜಯ ರಾಮಚಂದ್ರವಿಠಲ
ವಿನಾಯಕಾನತ ರಾಮಾ ಪ ಸುಶೀಲ ನಿರುಪಮ ಗುಣಾಭಿರಾಮಾ ಅ.ಪ [ಸಶೇಷ] ಮನೋಜ ನಿರುಪಮ ವದನ ನಿಶಾಕರಾರ್ಭಕ ದಶಾಸ್ಯಹನನ ವಿಶಾಲ ಲೋಚನ ಕೃಪಾವಲಂಬನ ದಶರಥ ನಂದನ ಸದಾ ನಿರಂಜನ1 ಸೀತಾವಿರಾಜಿತ ವಾತಾತ್ಮಜಾನತ ಪೀತಾಂಬರಾಚ್ಯುತ ರಮಾನತ ಭ್ರಾತಾಭಿವಂದಿತ ವಿಭೀಷಣಾನತ ಧಾತಾನಂದಿತ ಶ್ರೀಮಾಂಗಿರಿನಾಥ2
--------------
ಅಸೂರಿ ರಾಮಸ್ವಾಮಿಅಯ್ಯಂಗಾರ್
ವಿಶ್ವ 50 ವಿಶ್ವ ರಮೇಶ | ಪಾಲಿಸೆನ್ನನು ದಕ್ಷಿಣಾಕ್ಷಿನಿವಾಸ | ರೂಪಾಂತರದಿ ನೀ | ವಾಮನಯನದಿ ಕಾಶ | ಶರಣು ಶರಣು | ಸರ್ವೇಶ | ಜಾಗೃತ ಕಾಲದಿ ಸರ್ವ ವ್ಯಾಪಾರಗಳ ಮಾಡಿಸುವಂಥ ಸೌಭಾಗ್ಯ ದಾತನೇ ಪ ಯಾಜ್ಯ ಸ್ವರೂಪದಿಂದ ನೀ ಯರ್ಜು ನಾಮ | ಉತ್ಥಾಪಕೊತ್ತ ನಾಮ ಸರ್ವಪಾಪೋಜ್ಜಿತ ಉನ್ನಾಮನೇ ದೀಪ್ತ ಇಂಧನ ವಾಮ ಮಂಗಳ | ಸರ್ವ ವೇದಗಳಿಂದ ಸರ್ವದಾ ವಾಣಿ ಪ್ರಾಣ ಸಂಸ್ತುತ್ಯ ಶ್ರೀಶನೇ ದಿವ್ಯದೃಷ್ಟಿ ಗೋಚರ ವಿರಾಜನೇ ಶ್ರೀ ರಮಾ ಸಮೇತನಾಗಿಹ ಅಮೃತ ಜಯ ಜಯ 1 ಭಯ ವಿವರ್ಜಿತ ಅಭಯ | ಗುಣಪೂರ್ಣ ಬ್ರಹ್ಮ ಪುರುಷ ಸರ್ವ ಉದಕಾದ್ಯ ಅಖಿಳವಸ್ತು ಅಸಂಗವಾಗಿವೆ ಎನ್ನ ಕಂಣ್ಗಳು | ಸರ್ವದಾ ಸೌಂದರ್ಯ ರೂಪ ಶ್ರೀವಾಮನನೆ ಎನ್ನ ಎಡದ ಕಣ್ಣಲಿ ಸರ್ವ ನಿಜ ಸದ್ಭÀ್ಭಕ್ತಭಾಮನ ದಕ್ಷಿಣಾಕ್ಷಿಗತ ನಿಯಾಮಕ | 2 ವಿಶ್ವ ಶರಣು ಶುಭಾಂಗ | ಎರಡು ಪಾದವು ನಾಲ್ಕು ಹಸ್ತವು ಏಕ | ಕುಂಡಾದಂಡ ಹೀಗೆ ಜ್ಞಾನ ಸುಖ ಸಪ್ತಾಂಗ ಪಾಹಿಮಾಂ ಮಂಗಳಾಂಗ ಹತ್ತು ಮೇಲೊಂಬತ್ತು ಮುಖಗಳು ಮಧ್ಯ ಗಜಮುಖ ಮಂಗಳಪ್ರದ | ಮೋದಮಯ ನರಮುಖ ಒಂಬತ್ತು ಬಲದ ಪಾಶ್ರ್ವದಿ ಹಾಗೂ ಎಡದಿ | ವಿಶ್ವ ಚಕ್ಷುಸ | ಪದ್ಮಜನ ಪಿತ ಶ್ರೀ ಪ್ರಸನ್ನ ಶ್ರೀನಿವಾಸ ವಿಶ್ವನೇ ಶರಣು ಸಂತತ | 3
--------------
ಪ್ರಸನ್ನ ಶ್ರೀನಿವಾಸದಾಸರು