ಒಟ್ಟು 817 ಕಡೆಗಳಲ್ಲಿ , 89 ದಾಸರು , 685 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಅನ್ಯರವಗುಣವ ಪೇಳುವನು ಬಲ್ಲವನೊ ಪ ಭಿನ್ನವಿಲ್ಲದ ನರನೇನ ಪೇಳುವನು ಅ.ಪ ಅನ್ಯರಿಂದಲು ಹೀನ ತಾನಾಗದಿಹನೆ 1 ದುರಿತವನು ತಾನೆ ಹೊರುವವನೆಂಥ ಮರುಳ 2 ಧರೆಯೊಳವನಿಂದಧಿಕ ಪಾಪಿ ಯಾರಿಹರು 3 ದೊರಕುವದು ಎಂದರಿತು ನಡೆವನೆ ಪುಣ್ಯಾತ್ಮ4 ಪೊರೆಯುವ ಸದಾನಂದ ಸುಖದಿ ಪರಮಾತ್ಮ 5
--------------
ಸದಾನಂದರು
ಅಭ್ಯಾಸವಮಾಡಿ ಅಭ್ಯಂತ್ರದೊಳಗಿಹುದು ಧ್ರುವ ಕಣ್ಣು ಕಾಣುವದ್ಹಚ್ಚಿ ಚೆನ್ನಾಗಿ ಚಿತ್ಸ ್ವರೂಪವ ಭಿನ್ನವಿಲ್ಲದೆ ಭಾಸುವದು ಪುಣ್ಯಪ್ರಭೆಯು 1 ಕಿವಿಯು ಕೇಳುವದ್ಹಚ್ಚಿ ಸವಿಸವಿ ಸಾರಾಯದ ಶ್ರುತಿ ಆವಾಗ ನಿಮ್ಮೊಳಾಲಿಸಿ ಪವಿತ್ರ ಪ್ರಣವ 2 ಘ್ರಾಣ ಗ್ರಹಿಸುವದ್ಹಚ್ಚಿ ದೇಹದೊಳಾವಾಗ ಪೂರ್ಣ ಸೋಹ್ಯ ಸೂತ್ರವಿದು ಸೋಹ್ಯವೆಂಬುದಾ 3 ಜೀವಕೆ ಜೀವ್ಹಾಳಚ್ಚಿ ಸುವಿದ್ಯಸೇವೆ ಸೂತ್ರದ ಸರ್ವದಾ ಸವಿಸಾರವ ನೋಡಿ ದಿವ್ಯನಾಮದ 4 ಶಿವಸುಖವಿದುರಿಡುವಾಂಗೆ ಜೀವ ಜೀವದಾ 5 ಮನಸಿಗೆ ಮನಹಚ್ಚಿ ಮನೋನ್ಮನಮಾಡಿ ಘನಸುಖದೊಳು ಬೆರೆದಾಡಿ ಅನುಭವಿಸಿ ನೋಡಿ 6 ಗುರುವಿಗೆ ಗುರುವೆಂದರಿದು ನರದೇಹದ ಭಾವನೆಯ ಮರೆದು ಕರಕೊ ಮಹಿಪತಿ ಇರುಳ್ಹಗಲೆ ಸ್ಮರಿಸಿದಾಕ್ಷಣ 7
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ಅವನೆವೆ ಯೋಗ್ಯ ನೋಡಿರೈ ಭಕುತಿಗೆ | ಸಾಯಾಸವಿಲ್ಲದ ಯೈದನವನಿಯೊಳಗ ಮುಕುತಿಗೆ ಪ ನಿತ್ಯ ಶ್ರವಣ ಮಾಡಲೆಂದು ಬ್ಯಾಸರಾ | ಹ್ಯಾವ ಹೆಮ್ಮೆಯಲ್ಲಿ ಕಳಿಯ ವ್ಯರ್ಥವಾಸರಾ | ನೋವ ಮಾಡುತಿರಲು ತಾಪತ್ರಯದ ತೂರಾ | ಬಳಲ ಆವಗಿರುವ ಕೂಡಿಕೊಂಡು ಹರಿಯ ದಾಸರಾ 1 ನ್ಯೂನ ನೋಡದೆ ಪರರ ಸದ್ಗುಣವನೆ ಕೊಂಬನು | ದಂಭ | ಮಾನ ತೊರೆದು ಸ್ತುತಿಯ ನಿಂದ್ಯ ಸರಿಯ ಕಾಂಬನು | ಜ್ಞಾನದಿಂದ ಪಡೆದು ಗುರುಹಿರಿಯರಿಂಬನು | ತ್ವರಿತ | ಸ್ವಾನುಭವದ ಸೌಖ್ಯಸಾರ ಸವಿಯನುಂಬನು 2 ಬಲಿದು ಭಾವನಿಂದ ತಿಳಿದು ಸ್ವಹಿತುಪಾಯನು ದೃಢದಿ | ಹುಲು ಮನಿಜರಿದಿರ ಹೋಗಿ ದೆರಿಯ ಬಾಯನು | ತಳೆದು ವೇಷದಿಂದ ದಣಿಸವಾವ ಕಾಯನು | ಹೃದಯ | ದೊಳನವನ ನಲುವ ಗುರುಮಹಿಪತಿ ಪ್ರೀಯನು 3
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ಅಹುದಹುದನಾಥ ಬಂಧು ಅಹುದಹುದನಾಥ ಬಂಧು|ಅನುಪಮ್ಯ| ಮಹಿಮೆ ಕಾರುಣ್ಯಸಿಂಧು| ಏನೆಂದು ಪೇಳೆಲೆಮ್ಮಾ|ಈ ದಯಕ| ತಾನು ಪಮೆ ಇಲ್ಲವಮ್ಮಾ| ನ್ಯೂನಾರಿಸದೆ ಬಂದನು,ಕ್ಷಮೆಯಿಂದ| ತಾನಾಗಿ ಸಲಹುತಿಹನು| ಜ್ಞಾನವಿಲ್ಲದೆ ತರಳನೆಂದಪೇಕ್ಷಿಸದೆನ್ನ| ಮನ ನೆನೆವಿನೊಳಗಿಟ್ಟು ತನ್ನ ಅಂಘ್ರಿಯದಾ 1 ಪತಿತರೊಳು ಪತಿತ ಅಧಮಾ|ಅಮೂಲ್ಯ| ಪತಿಹೀನ ಮೂಢ ಪರಮಾ| ಸುತ್ತ-ಭಕುತಿ ಮಾಡಲರಿಯೆ|ಚತೆರ ಸಂ| ಸ್ಕøತ ಮಾತನಾಡಲರಿಯೇ| ಗತಿಗೈದರೊಂದೊಂದು ವೃತದಿ ಮೊದಲಾದವರು| ಕ್ಷಿತಿಯೊಳಗೆ ಎನ್ನಂಥ ಶೂನ್ನರಾರಮ್ಮ 2 ನೆಲಿಗೆ ಮುಯ್ಯಕ ಮುಯ್ಯವು|ಈ ತೆರದಿ| ಸಲೆ ನಡೆತಿ ಉಂಟು ಕೆಲವು| ಕೊಳದೆ ಕೊಡುವವರಿಂದಿಗೆ|ಆರಿಲ್ಲಾ| ನಳಿನಜೇಂದ್ರಾದ್ಯರೊಳಗೇ ಒಲಿದು ಮಹೀಪತಿ ಸುತನ ಕರವಿಡಿದು ತನ್ನ| ದಾಸರ ದಾಸ ದಾಸನೆನಿಸಿದ ಬಿರದಿಗಿಂದು 3
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ಅಹುದಾದರಹುದೆನ್ನಿ ಅಲ್ಲವಾದರಲ್ಲವೆನ್ನಿ ಪ ಬಹುಜನರು ನೆರೆ ತಿಳಿದು ಪೇಳಿ ಮತ್ತಿದನು ಅ ಕುಹಕ ಯುಕುತಿಹೇವವಿಲ್ಲದ ಹೆಣ್ಣು ಗಜುಗ ಬೆಳೆದ ಕಣ್ಣುಸೇವೆಯರಿಯದ ದಣಿಯು ಕಲ್ಲಿನಾ ಕಣಿಯು1 ಧರ್ಮವಿಲ್ಲದ ಅರಸು ಮುರಿದ ಕಾಲಿನ ಹೊರಸುನಿರ್ಮಲಿಲ್ಲದ ಮನಸು ಅದು ಕಜ್ಜಿ ತಿನಿಸುಶರ್ಮವಿಲ್ಲದ ಗಂಡು ಕರಿಯ ಒನಕೆಯ ತುಂಡುಮರ್ಮವಿಲ್ಲದ ಮಾತು ಒಡಕು ಮಡಕೆ ತೂತು 2 ಭೃತ್ಯ ಅವ ಕ್ರೂರ ಕೃತ್ಯ 3 ಬಂಟ ಒಡಕು ಹರವಿಯ ಕಂಠಗಂಡಗಂಜದ ನಾರಿ ಅವಳೆ ಹೆಮ್ಮಾರಿ 4 ದಾತ ಅವ ಹೀನ ಜಾತಸೃಷ್ಟಿಯೊಳು ಕಾಗಿನೆಲೆಯಾದಿಕೇಶವನಂಘ್ರಿಮುಟ್ಟಿ ಭಜಿಸದ ನರನು ಅವನೆ ವಾನರನು 5
--------------
ಕನಕದಾಸ
ಆಡಿದ ನಾಟಕವ ಕಿರಾತ ಮದನಗೂಢ ಚಿದಾನಂದನನರಿಯದ ನರ ಮೃಗವ ಪ ಸ್ತ್ರೀಯ ದೇಹವು ಎಂಬ ಅಡವಿಯೊಳಗೆಸ್ತ್ರೀಯ ಹುಬ್ಬೆಂಬ ಸಿಂಗಾಡಿ ತೆಗೆದುಮುಂಗುರುಳುಗಳು ಎಂಬ ಸಿಂಜನಿಯನೆ ಬಿಗಿದುಸ್ತ್ರೀ ದೃಷ್ಟಿಯೆಂದೆಂಬ ಸಿಳೀ ಮುಖವನೆ ಪಿಡಿದು 1 ಸಿರಿತುಳುಕುವ ಅವಯವದ ಸಿಡಿಬಲೆಯನೊಡ್ಡಿಪರಿಯ ತಿಳಿಯದೆ ಬರುವ ಪುರುಷ ಮೃಗವಕರುಣವಿಲ್ಲದೆ ಮಹಾ ಕೋಪದಿಂದಲಿಎರಡು ಗಿರಿಯ ಸಂದಿಯಲಿರಿದು ಇರಿದು ಕೆಡುತಿಹ 2 ಇಂತು ಬೇಟೆಯನಾಡಿ ಎಲ್ಲ ಲೋಕವ ಕೆಡಹಿಚಿಂತೆ ಮಾಡುವ ಚಿದಾನಂದ ಭಕ್ತರ ಮುಂದೆ ಸುಳಿಯಲಿಕಂಜಿಮರೆಯದೆ ಶಿವನ ಗುರುತ ಅಂತಹುದುಇವರನೀಗ ಮುಟ್ಟಬಾರದು ಎಂದು 3
--------------
ಚಿದಾನಂದ ಅವಧೂತರು
ಆಡಿನ ಮರಿಯೆತ್ತಂಬುಧಿಯೊಳಾಡುವ ಕರಿಯೆತ್ತ ಮಾನವ ಮಾಡದಿರಚ್ಚುತ ನಾನೆಂಬ ಮನವಪ. ಯಾಡಮೂಢನೊಬ್ಬ ಎಲ್ಲಾ ಜಗದೊಳು ಗೂಢನಾಗಿ ನೋಡುತಿಹ ಸುಖಿಯೊಬ್ಬ ಗಡ ನಾಡರಿಯೆ ದುಃಖಿಯೊಬ್ಬ ಸುಖದಲ್ಲಿ ಲೋ- ಲಾಡುತಿಹ ನಿರನಿಷ್ಟನೊಬ್ಬ ಗಡ1 ಕಡಲ ಕಡೆದು ಸುಧೆಯ ನೋಡಿ ತ- ನ್ನೊಡಲ ಧಣಿಯಉಂಡವನೊಬ್ಬ ಹೆ- ಣ್ಣುಡಿಗೆಯನ್ನುಟ್ಟು ಅಸುರರ ಬಾಯ ಹೊಡೆದು ಬಡಿಸಿದವನೊಬ್ಬ ಗಡ 2 ಆಡುತಲಬ್ಧಿಯೊಳಡಗಿದದ್ರಿಯ ಕೋಡುಗಲ್ಲನೆತ್ತಿ ಹೂಡಲು ಬಲ್ಲೆಯ ಓಡುತಲೊಬ್ಬನೊರಗಿದ್ದನ ಕಣ್ಣೊಳೊಡದು ಮೂಡಿದÀಗ್ನಿಯಿಂದ ಸುಡುವೆಯ3 ಮಂದ ನೀನೊಬ್ಬನೆ ಮಾಡುವೆಯ ಲೆಕ್ಕವಿಲ್ಲದೆ ಮಕ್ಕಳ ಕೂಡಿದನ ಬಹಳ ಕೋಟಿಧನಂಗಳ ಕೂಡಿರ್ದಗೆ ಕೊಟ್ಟು ನೋಡಿ ಸುಖಿಪೆಯ 4 ದೃಢವಾಗಿ ನಿನ್ನುಂಗುಟ ನಖದಿಂ ದೊಡಲನಾದರು ಒಡೆಯಲಾಪೆಯ ಮೃಡಪ್ರಿಯ ಹಯವದನನಂತೆ ಮೂಢಜಾತಿಯಾಗಿ ವೇದ ಓದುವೆಯ 5
--------------
ವಾದಿರಾಜ
ಆತ್ಮನಿವೇದನೆ ಮನವೇ ನಿನ್ನಯ ನಿಜಮೂಲ ನೀನೋಡು ಸಮರಸವನೆಗೂಡು || ಚಾಲ || ವಿಷಯವಾಸನೆಗಳ ನಿಶಿದು ಹೋಗಲಿ ಕುಳ ಅಸಮ ಸಾಹಸಿಯಾಗಿ ನಿಜಸುಖದೊಳಗೆ ಪ ಹಿಂದೆ ಬಹು ಜನ್ಮದೊಳು ನೀ ತೊಳಲಿ ವಾಸನೆಯೊಳು ಬಳಲಿ ಇಂದೆ ನೀ ಬಂದೆ ನರಜನ್ಮದಲಿ ಎಚ್ಚರು ನಿನಗಿರಲಿ ಮುಂದೆ ಸಿಕ್ಕುವ ನಿಜವಿಲ್ಲದರಲ್ಲಿ ಆ ನಿಮಿತ್ಯದಲೀ ನಿಜದೊಳತಿ ಛಂದದಿ ನಿಲ್ಲೈ 1 ಗುರುಪಾದ ಕಮಲದ ಸೇವೆಯ ಮಾಡಿ ಇಷ್ಟಾರ್ಥವ ಬೇಡಿ ದೃಢದೀ ಅದರಲ್ಲಿ ನಲಿನಲಿಹಾಡಿ ಸತ್ ಶಬ್ದವ ಗೂಡಿ ಮೂಧ್ರ್ನಿಯಲಿ ಲೋಲ್ಯಾಡಿ ದೃಢತರವದಗಿ ನಿರಂತರ 2 ಭಕ್ತಿಭಾವವನೆ ದೃಢಮಾಡು ಸದ್ಧರ್ಮವಗೂಡು ಯುಕ್ತಿಯಿಂದಲೀ ಸಾಧನೆಮಾಡು ಗುರುಪದದೊಳಗಾಡು ವಿ ರಕ್ತಿ ನಿಜವಾಗಿ ಹುರಿಯನೆ ಮಾಡು ಸತ್ಸಂಗದೊಳಾಡು ಅನುರಕ್ತನಾಗಿ ನಿಜ 3 ಕಾಷ್ಠದೊಳಗಿಂದಾ ಅಗ್ನಿಯ ಪುಟ್ಟು ಕಾಷ್ಠವನೆ ಸುಟ್ಟು ಉತ್ಕøಷ್ಟ ಚಿತ್ತವನೆ ಪುಟವಿಟ್ಟು ಜಡಭಾವನೆ ಬಿಟ್ಟು ಥಟ್ಟನೇ ಜ್ಞಾನಾಗ್ನಿ ಪುಟವಿಟ್ಟು ಕ್ಷಡ್ರಿಪುಗಳ ಸುಟ್ಟು ಸದ್ಗುರುವಿನೊಳ್ ಇಟ್ಟ ಶಾಂತಿ ನಿಜ 4
--------------
ಶಾಂತಿಬಾಯಿ
ಆತ್ಮನಿವೇದನೆ ಮತ್ತು ಲೋಕನೀತಿ ಎನಗ್ಯಾಕೆ ಕವಿಯೆಂಬ ಶ್ರೇಷ್ಠನಾಮಾ ಜನರೊಳಗೆ ನಾನೋರ್ವ ಮನಜಾಧಮ ಪ ಸ್ನಾನ ಜಪ ತಪ ಮೌನ ಧ್ಯಾನ ವರಮಂತ್ರಗಳ ಖೂನವಿಲ್ಲದೆ ಜ್ಞಾನ ಹೀನನಾಗಿ ಏನು ಹೇಳಲಿ ದುಷ್ಟ ಮಾನಿನಿಗೆ ಮನಸೋತು ಶ್ವಾನನಂದದಿ ದಿನವ ನಾ ನೂಕಿದವನಯ್ಯ 1 ಹತ್ತೆರಡು ಮತೈದು ಗಾತ್ರದೊಳು ಧರಿಸದಲೆ ಚಿತ್ತ ಚಂಚಲನಾಗಿ ಲೆತ್ತ ಪಗಡಿಗಳಾಡಿ ಕತ್ತೆಯಿಂದದಿ ವ್ಯರ್ಥ ಹೊತ್ತು ಕಳೆದವ ನಾನು 2 ನೇಮಪೂರ್ವಕ ಒಂದು ಯಾಮವಾದರು ಮನದಿ ಶಾಮಸುಂದರ ಧ್ಯಾನ ಮಾಡದೆ ಕಾಮಾರಿ ಷಡ್ವೈರಿ ಸ್ತೋಮಕ್ಕೆ ಭೂಮಿಯೊಳು ಜಡವಾದ ನಾಮದಲಿ ಚರಿಸುವೆನು3
--------------
ಶಾಮಸುಂದರ ವಿಠಲ
ಆದಿಯುಗದಿ ಮಹ ಆದಿದೈತೇಯನೊಬ್ಬ ಮೇದಿನಿಯೊಳ್ ಸ್ವರ್ಣಕಶ್ಯಪು ನಾಮದಿ ಸಾಧಿಸಿ ಬಂದವಗೊಬ್ಬ ಸೋದರ ಸ್ವರ್ಣಾಂಬಕನೆನಿಸಿ ಮೇದಿನಿ ಚೋರನಾಗಿ ಹತನಾದನು ಆದಿಶೇಷನೆ ವಿಷ್ಟಕ್ಸೇನ ತಾ- ನಾದ ಪ್ರಹ್ಲಾದ ಪ್ರಾಣಾವೇಶದಿಂದ ಸೋದರ ಜೀವಾಂಶಾಪಾನಾವಿಷ್ಟ ಸ- ಲ್ಹಾದನಾಮಕ ಮಿತ್ರನಾದ ಕ ಹ್ಲಾದ ವ್ಯಾನಾವೇಶದಿಂದ ಮೋದದಿ ಸೋಮಾಂಶೋದಾನಾಯುತ ನು- ಹ್ಲಾದ ನಾಮಕ ಸಂಭೂತನಾದ ಆದರೈವರಾದೈತ್ಯಗೆ ಪುತ್ರರು ಮೇದಿನಿ ಸುರರುದ್ಧಾರಗೋಸುಗ ಆದಿದೈವ ನಾರೇಯಣ ತಾ ನಾದಿಕಾರಣ ವಿಶ್ವಕರ್ತಾ ಮೋದಾನಂದ ಮೂರುತಿ ಸುಗುಣ ಭೋಧಪೊರ್ಣ ಸರ್ವಜ್ಞ ಸ್ವಾತಂತ್ರ ವೇದಪುರುಷಾದಿ ಜಡಾದಿ ಜಗಕೆ ಆಧಾರ ಹರಿ ಎಂಬ ಜ್ಞಾನವ ಭೋದಿಸಿ ಬೊಮ್ಮಮುಖರು ಹರಿ ಪಾದಸೇವಕರೆನುತ ನಿತ್ಯ ವಾದದಿ ವಾದಿಗಳ ಜಯಸಿದರವರ ಪಾದಸೇವಿಸಿ ಕರುಣಾಪಡೆದು ಆದಿ ಗುರು ಜಗನ್ನಾಥವಿಠಲನ್ನ ಆದರದಲಿ ಭಜಿಪೆ ಪರಮ ಸುಖ ರಾಗ :ಕಲ್ಯಾಣಿ ಅಸುರರ ಜನ್ಮದಿ ಪುಟ್ಟಿದ ಇವರಿಗೆ ಶ್ವಸನನ ಆವೇಶ ಸುರರಾವೇಶ ಬಲದಿ ಅಸಮಙÁ್ಞನ ಭಕುತಿ ವಿರಾಗವು ವಸುಧಿಯ ತಳದಿ ದಿನದಿನದಲ್ಲಿ ಪಸರಿಪ ಸೂರ್ಯನ ಪ್ರಭೆಯಂದದಲಿ ಮಿಸುಪದಕಿದೇ ಕಾರಣ ಉಂಟು ಬಿಸಜಾಂಬಕ ಹರಿಪೇಳಿದ ಇವರಿಗೆ ಅಸುರೇಶ ಹಿರಣ್ಯಕಶಿಪುವಿನಲ್ಲಿ ಶಿಶುಭಾವದಿಂದ ಜನಿಸಲು ಪೋಗಿರಿ ಪುಸಿಯಲ್ಲ ಮಚ್ಛಾಪÀ ಅಸುರಭಾವ ಪ್ರಲ್ಹಾದಾದ್ಯ ರಸಮಮಹಿಮರಾಗೀ ಜನಿಸಿರೆಂದು ಉಸುರಿದ ವಾಕ್ಯವು ಪ್ರಮಾಣ ಸಿದ್ಧವೆನ್ನಿ ವ್ಯಸನzಲೈವರು ಹರಿಯನೆ ಮತ್ತೆ ಬೆಸಗೊಂಡರೀಪರಿ ಪರಿಯಾ ಅಸುರನ ಪತ್ನಿಯ ಬಸಿರೊಳು ಪುಟ್ಟುವುದು ವಶವಲ್ಲವೋ ಸ್ವಾಮಿ ಕುಸುಮನಾಭನೆ ನಿನ್ನ ಅಸಮಲೋಕದ ಸುಖ ವಸುಧಿತಳಾದಲ್ಲಿ ಎಸಗದು ಎಸಗದು ಎಂದಿನಕಾಲಕ್ಕೂ ಮುಸುಕುವದಙÁ್ಞನ ದುಃಖದ ಭವದಲ್ಲಿ ಕಸವಿಸಿಗೊಳುತಾ ಙÁ್ಞನವನೀಗಿ ಬಿಸನಿಲಯನೆ ನಿನ್ನ ದರುಶನವಿಲ್ಲದೆ ಅಸುನಿಲ್ಲುವ ಬಗೆ ಯಾವುದು ಪೇಳೋ ಶಶಿಧರವಂದ್ಯ ಗುರುಜಗನ್ನಾಥ ವಿಠಲ ನಮ್ಮ ವ್ಯಸನವನು ಕಳೆದು ಸುಖವನು ಸಲಿಸೋ ರಾಗ - ಕಾಂಭೋದಿ ತಾಳ - ತ್ರಿವಿಡಿ ಭಕುತವಾಕ್ಯವ ಲಾಲಿಸಿ ತಾನಾಗ ಪರಿ ನುಡಿದನು ವಿಕಳ ಪೊಂದದೆ ನೀವು ತ್ವರಿತಾದಿ ಧರೆಯೊಳು ಸಕಲರು ಜನಿಸಲು ಮುಸಕದಙÁ್ಞನ ಲಕುಮಿ ಭೂಮಿಯ ಸಹಿತ ಇರುವೆನು ನಿಮ್ಮೊಳು ನಿತ್ಯ ಪರಿಪರಿ ಮಹಿಮವ ಪ್ರಕಟಮಾಡುವೆ ಮುಖ್ಯಪ್ರಾಣನಿಪ್ಪನು ಸತತ ಕಕುಲಾತಿ ಯಾಕಿನ್ನು ನಡಿರೆಂದು ಹರಿಯೆಂದ ಉಕುತ ವಾಕ್ಯದಲಿಂದ ದಿತಿಜನಲ್ಲಿ ಸುಕೃತಿಗಳೈವರು ಉದಯವೈದಿದರಾಗ ಮುಕುತಿದಾಯಕ ಗುರುಜಗನ್ನಾಥ ವಿಠಲನೆಂಬ ಭಕುತಿ ಪೂರ್ವಕ ಙÁ್ಞನವೃದ್ಧಿಯೈದಿದರು ರಾಗ - ಆರಭಿ ತಾಳ - ಅಟ್ಟ ಪಿರಿಯ ಪ್ರಲ್ಹಾದನ್ನ - ಕರದು ತೊಡೆಯ ಮೇಲೆ ಇರಿಸಿ ಪ್ರೇಮದಿ ನಿಮ್ಮ - ಗುರುವೇನು ಪೇಳ್ಯಾನೆ ಮರಿಯಾದೆ ಎನಮುಂದೆ - ಅರಹು ಎನಲು ಬಾಲ ಕಿರಿನಗೆ ಮುಖದಿಂದ - ಹರಿಯೆ ಸರ್ವೋತ್ತಮ ಹರಬೊಮ್ಮ ಮುಖರೆಲ್ಲ - ಪರಿವಾರಭೂತರು ಅರಿದಿಪ್ಪೆ ಎನ್ನಯ್ಯ ಸರಸಿಜಜಾಂಡಕ್ಕೆ ಅರಸು ತಾನಾಗಿದ್ದು ಇರುವಾದಿ ಚೇತನ ತರುವಾದಿ ಜಡಮಯ ಸರ್ವಸ್ಥಳದಲ್ಲಿ ನಿರುತದಿ ವ್ಯಾಪಿಸಿ ಇರುತಿಹ ಹರಿ ಎಂದು ಅರಿತ ಮಾನವÀÀನಿಗೆ ದೊರೆವೋನು ನಿಶ್ಚಯ ಅರಿತು ಪೇಳಿದ ತನ್ನ ತರಳಾನ ನುಡಿಕೇಳಿ ಭರದಿಂದ ಕಂಬವ ಕರದಿಂದ ಬಡಿಯಾಲು ನರಮೃಗಾಕಾರದಿ ಹೊರಗೆ ಬಂದಾದೈತ್ಯನು ದರವ ಬಗೆದು ಕರುಳಮಾಲೆಯತಾ ಕೊರಳೊಳು ಧರಿಸಿದ ಚರಜನ ಪರಿಪಾಲ ಬಿರುದು ಬೀರಿದ ನಮ್ಮ ಗುರುಜಗನ್ನಾಥವಿಠಲ ಶರಣರ ಮರೆಯನೋ ಧರಿತಳದೊಳಗೆ ರಾಗ :ಇಚ್ಛಾ :ತಾಳ - ಆದಿ ಈ ತೆರ ಪ್ರಹ್ಹಾದ ಹರಿಪಾದವ ಭಜಿಸಿ ಪ್ರೀತಿಯ ಪಡೆದು ಭೂಸುರಗಣಕೆ ಭೂತಳದೊಳಗೆ ಯತಿಗಳ ಕುಲಕೆ ನಾಥನು ವ್ಯಾಸಮುನಿ ಎನಿಸಿ ಮರಳಿ ಖ್ಯಾತ ಶ್ರೀ ರಾಘವೇಂದ್ರನೆಂದೆನಿಸಿ ಪ್ರೀತಿಯಿಂದಲಿ ಭಕ್ತರ ಪೊರೆಯಲು ನೀತಿ ಭಾವದಲಿ ಯತಿಯಾಶ್ರಮ ಪೊಂದಿ ಸೀತಾಪತಿರಾಮ ಯದುನಾಯಕ ಕೃಷ್ಣ ಭೀತಿಹರ ನರಸಿಂಹ ವ್ಯಾಸರ ಭಜಿಸಿ ದೂತರ ಮನೋರಥ ಪೂರ್ತಿಸಿ ಪೊರೆವನು ದಾತಗುರುಜಗನ್ನಾಥ ವಿಠಲನ್ನ ನೀತ ವಿಭೂತಿಯ ಪಡೆದು ನಿರ್ಭೀತನಾಗಿಹನು ಜತೆ ದೂತಜನರ ಮಹಾಪಾತಕ ಹರನೆನ್ನಿ ಪ್ರೀತಗುರುಜಗನ್ನಾಥವಿಠಲನೊಲಿವ ರಾಗ :ಶಂಕರಾಭರಣ :ತಾಳ :ಏಕ
--------------
ಗುರುಜಗನ್ನಾಥದಾಸರು
ಆರತಿಯನೆತ್ತಿರೆಲ್ಲ ಆನಂದಗೆಆರತಿಯನೆತ್ತಿರೆಲ್ಲ ಸ್ವಾನಂದಗೆ ಪ ಸದನ ಸದನ ಬಿಟ್ಟಿಹಗೆತೋರುತಿಹ ಬ್ರಹ್ಮರಂಧ್ರ ತುರೀಯ ರೂಪಗೆ 1 ಕಣ್ಣಿನೊಳಗೆ ಕಣ್ಣು ತೆರೆದು ನಿರೀಕ್ಷಿಪಗೆಕಣ್ಣ ಬೊಂಬೆಯೊಳಗೆ ಕುಳಿತು ನೋಡುತಿಹಗೆಭಿನ್ನವಿಲ್ಲದ ಆನಂದ ಸುಖದಿ ರಮಿಸುತಿಹನಿಗೆಹೊನ್ನ ತಗಡಿನಂತೆ ಥಳಥಳಿಸುತಿಹಗೆ 2 ಉಕ್ಕುವ ತೇಜಗಳೆಲ್ಲ ತಾವೊಂದಾಗಿ ಕೂಡಿಮಿರು ಹರಿವ ಬೆಳದಿಂಗಳಂತೆಯಿಹಗೆಲೆಕ್ಕವಿಲ್ಲದಲೆಯುತಿಹ ಸುಖದ ರಾಶಿಗೆಮುಕ್ತಿ ಮೂರುತಿ ಶ್ರೀ ಚಿದಾನಂದ ಗುರುವಿಗೆ 3
--------------
ಚಿದಾನಂದ ಅವಧೂತರು
ಆರು ಬಾಳಿದರೇನು ಆರು ಬದುಕಿದರೇನುನಾರಾಯಣನ ಸ್ಮರಣೆ ನಮಗಿಲ್ಲದನಕ ಪ ಉಣ್ಣ ಬರದವರಲ್ಲಿ ಊರೂಟವಾದರೇನುಹಣ್ಣುಬಿಡದ ಮರಗಳು ಹಾಳಾದರೇನುಕಣ್ಣಿಲ್ಲದವಗಿನ್ನು ಕನ್ನಡಿಯಿದ್ದು ಫಲವೇನುಪುಣ್ಯವಿಲ್ಲದವನ ಪ್ರೌಢಿಮೆ ಮೆರೆದರೇನು 1 ಅಕ್ಕರಿಲ್ಲದವಗೆ ಮಕ್ಕಳಿದ್ದು ಫಲವೇನುಹೊಕ್ಕು ನಡೆಯದ ನಂಟತನದೊಳೇನುರೊಕ್ಕವಿಲ್ಲದವಗೆ ಬಂಧುಗಳು ಇದ್ದರೇನುಮರ್ಕಟನ ಕೈಯೊಳಗೆ ಮಾಣಿಕ್ಯವಿದ್ದರೇನು 2 ಅಲ್ಪ ದೊರೆಗಳ ಜೀತ ಎಷ್ಟು ಮಾಡಿದರೇನುಬಲ್ಪಂಥವಿಲ್ಲದವನ ಬಾಳ್ವೆಯೇನುಕಲ್ಪಕಲ್ಪಿತ ಕಾಗಿನೆಲೆಯಾದಿಕೇಶವನಸ್ವಲ್ಪವೂ ನೆನೆಯದ ನರನಿದ್ದರೇನು 3
--------------
ಕನಕದಾಸ
ಆರು ಸಂಗಡ ಬಾಹೊರೆಲೆ ಮನುಜ ನಿನಗೆ ಹಾರೈಸಿ ಬಳಲುವೆ ಬರಿದೆ ಭವದೊಳಗೆ ಪ ಗುರುಹಿರಿಯರಗ್ನಿಯ ಪರಿಮುಖದಿ ನಿನ್ನಯ ಕರಪಿಡಿದು ಮಾಂಗಲ್ಯ ಧರಿಸಿಕೊಂಡರ್ಧ ಶರೀರವೆನಿಸುವ ಸತಿಯು ಮರಣ ಕಾಲದಿ ನಯನ ತಿರುಗುವುದ ಕಂಡಂಜಿ ತಿರಿಗಿನಿಂತಳುತಿಹ್ಯಳು 1 ತನುಜಮನುಜರಿವರೆಲ್ಲ ನಿನಗತಿಹಿತ ಬಂಧು ಮಣಿದು ಸೇವಿಪರು ನಿನ್ನನುದಿನವು ಬಿಡದೆ ತನುಬಿಟ್ಟ ಕ್ಷಣದಿ ನನನಿನಗೆನುತ ಮನೆಕೀಲಿ ಘನ ಜಗಳ ಕಾಣು ಬಿದ್ದ್ಹೆಣದ ಪರಿವಿಲ್ಲದೆ 2 ಕುಲವಿದ್ಯವ್ಯವಹಾರ ಕಳವುಕೊಲೆ ನೃಪಸೇವೆ ತಲೆ ಬಾಗಿ ಜನರಲ್ಲಿ ಬಲುದೈನ್ಯ ಬಟ್ಟು ಗಳಿಸಿ ಹೂಳಿದ ದ್ರವ್ಯ ಎಳೆದೊಯ್ಯಲ್ಯಮ ನಿನ್ನ ತಲೆಯೆತ್ತಿ ನೋಡದಲೆ ನೆಲದಿ ನಿಲ್ಲುವುದು 3 ಭೂಮಿ ನಿನ್ನದು ಎಂದು ನೇಮವನು ಬರಕೊಂಡು ಕೋಮಲ ಮನೆಕಟ್ಟಿ ತಾಮಸದಿ ನಲಿವಿ ಭೂಮಿಯ ರಿಣತೀರಿ ನೀ ಮಡಿದಾಕ್ಷಣ ಬಹಿ ರ್ಭೂಮಿಯೋಳ್ಹುತಿವರೆಲೆ ಪಾಮರ ಮನುಜ 4 ಬಂಧುಬಾಂಧವರೆಲ್ಲ ಹಿಂದೆ ಉಳಿಯುವರು ಮಂದನಾಗದೆ ತಂದೆ ಶ್ರೀರಾಮ ಪಾದಾರವಿಂದಮಂ ನಂಬಿ ಭವಬಂಧವನು ಗೆಲಿಯೊ 5
--------------
ರಾಮದಾಸರು
ಆವ ಬಲವಿದ್ದರೇನು - ವಾಸುದೇವನಾ ಬಲವು ನಿಜವಾಗಿ ಇರದನಕ ಪ ನೊಸಲಗಣ್ಣನ ಬಲ ನಾಲ್ಕು ತೆರದ ಬಲತ್ರಿಶುಲ ಡಮರು ಅಗ್ನಿ ಫಣಿಯ ಬಲವುಪಶುಪತಿಯ ರೂಪಿನ ಬಲದ ಶಿಶುಪಾಲನಅಸುರಮರ್ದನ ಕೃಷ್ಣ ಶಿರವ ಛೇದಿಸುವಾಗ 1 ಹರನ ಕರುಣದ ಬಲವು ಸುರರ ಗೆಲಿದಾ ಬಲವುಪರಮ ಶಕ್ತಿಯು ತನ್ನ ಭುಜದ ಬಲವುಧರೆಯನೆತ್ತಿದ ಬಲವುಳ್ಳ ಹಿರಣ್ಯಾಕ್ಷನಶಿರವ ಹರಿ ವರಾಹನಾಗಿ ತರಿವಾಗ2 ಮುನ್ನ ಗೆಲಿದ ಬಲ ಮುಕ್ಕಣ್ಣ ಹರನ ಬಲಘನ್ನ ಲಂಕಿಣಿಯ ಕಾವಲಿನ ಬಲವುತನ್ನ ವಂಶದ ಬಲವುಳ್ಳ ರಾವಣನ ಶಿರವಸನ್ನುತ ರಾಘವ ಪಟ್ಟನೆ ಪಾರಿಸುವಾಗ 3 ಲಿಂಗಪೂಜೆಯ ಬಲ ನಿಶ್ಚಿಂತನಾಗಿಹ ಬಲಹಿಂಗದೆ ಹರನು ಬಾಗಿಲ ಕಾಯ್ದ ಬಲವುಮುಂಗೈಯ ಶಕ್ತಿ ಸಾವಿರ ತೋಳ ಬಾಣನತುಂಗ ವಿಕ್ರಮ ಕೃಷ್ಣ ತೋಳ ಖಂಡಿಸುವಾಗ 4 ಈಸು ದೇವರ ಬಲಗಳಿದ್ದರೆ ಫಲವೇನುವಾಸುದೇವನ ಬಲವಿಲ್ಲದವಗೆದೇಶಕಧಿಕ ಕಾಗಿನೆಲೆಯಾದಿಕೇಶವನಲೇಸಾದ ಚರಣ ಕಮಲದ ಬಲವಿರದನಕ 5
--------------
ಕನಕದಾಸ
ಆವಭೇಧವಿಲ್ಲದವನೆ ನಿಜಜ್ಞಾನಿಯು ತನು ಭಾವವರಿತು ನಡೆಯುವನೆ ನಿಜ ಭಾಗವತನು ಪ ಮಾನ ಅಪಮಾನ ಸಮಕಾಣುವನೆ ಸಜ್ಜನನು ತಾನು ತನ್ನದೆಂಬ ಮಾಯವಳಿದವನೆ ಸಾಧು ಏನು ಕೊಟ್ಟರು ಒಲ್ಲೆನೆಂಬುವನೆ ಸನ್ಯಾಸಿ ದೀನರನು ಕಂಡು ಮನಮರುಗುವನೆ ಭಕ್ತ 1 ನಿಜಧರ್ಮವರಿಯದ ಪಾಮರನೆ ಶೂದ್ರನು ನಿಜವಾಕ್ಯಗಳ ಕೇಳಿ ಅಳಿವವನೆ ಭವಿಯು ಸುಜನರಿಗೆ ತಲೆಬಾಗಿ ನಡೆವವನೆ ಸಿದ್ಧಾಂತಿ ಕುಜನರ ಮಾತಿಗೊಳಪಡುವವನೆ ನರಕಿ 2 ಪಿಡಿದ ವ್ರತನೇಮಗಳ ಬಿಡದವನೆ ಕಡುಗಲಿ ಜಡದೇಹ್ಯಮೋಹವನು ತೊಡೆದವನೆ ಸತ್ಯ ಬಂಟ ಜಗದೊಳಗೆ ಒಡೆಯ ಶ್ರೀರಾಮನಡಿ ದೃಢಯುತನೆ ಮುಕ್ತ 3
--------------
ರಾಮದಾಸರು