ಒಟ್ಟು 54 ಕಡೆಗಳಲ್ಲಿ , 27 ದಾಸರು , 52 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಎನ್ನ ಪಾಲಿಸು ಪರಮಕಾಯ ರಘುರನ್ನ ರಾಮನ ಪ್ರಿಯ ಗುರುಮಧ್ವರಾಯ ಪ.ಅಂಜನಿ ಆತ್ಮದಲಿ ಬಂದು ರಾಮನಪಾದಕಂಜವಿಡಿದೆ ಕಡಲ ಲಂಘಿಸಿದೆ ಗೋಷ್ಪದದಿಪಂಜು ಬೆಳಗಿದೆ ನಿಶಾಚರನ ಪಟ್ಟಣವಳಿದೆಕಂಜಾಕ್ಷಿಯಳ ತುಷ್ಟಿಗೈದೆ ಗಡಾಸಂಜೀವ ತಂದು ಕಪಿಬಲವ ರಕ್ಷಿಸಿದೆ 1ಕುರುಕುಲಾಧಮನು ಬಲುಸೊಕ್ಕಿ ಸಂಗರಭಟರನೆರಹಿ ಪಾರ್ಥರ ಬಲವ ಗೆಲುವೆನೆಂದವನ ಭರಮುರಿದೆ ಮಹರಥಿಕರೆದೆ ಹರಿದೆ ಅಸಹಾಯ ಶೂರಸರಿಯಾರು ನಿನಗಸಮಧೀರ ಭಾಪುಕರುಣಾಸಾಗರ ಉದಾರ ಅಜಪದದಧಿಕಾರ 2ಏಕವಿಂಶತಿಮಾಯಿ ರಚಿತ ಭಾಷ್ಯವ ಜರಿದೆಶ್ರೀಕಾಂತನ ನಾಮಾಮೃತವ ಭಕ್ತರಿಗೆರೆದೆಭೂಕನಕ ವಧು ವಿಷಯಕಾಂಕ್ಷೆಗಳ ಮೇಲೊದೆದೆಲೋಕಕೊಬ್ಬನೆ ಗುರುವೆ ಮೆರೆದೆ ವಿಶ್ವೇಶ ಪ್ರಸನ್ನವೆಂಕಟೇಶನಂಘ್ರಿವಿಡಿದೆ 3
--------------
ಪ್ರಸನ್ನವೆಂಕಟದಾಸರು
ಗೋವಿಂದ ಗೋವಿಂದ ಗೋವಿಂದ ನನ್ನತಾಯಿ ತಂದೆ ಗೋವಿಂದ ಪ.ತಿರುಗಿ ಭವದಲಿ ಗೋವಿಂದ ವೃಥಾಮರುಗಿ ಬಳಲಿದೆನೊ ಗೋವಿಂದಕರಗಿ ತಾಪದಿ ಗೋವಿಂದ ಸಿಡಿಲೆರಗಿಸಿಕೊಂಡೆನೊ ಗೋವಿಂದ 1ಎಚ್ಚರ ಹಾರಿತು ಗೋವಿಂದ ನಾಮೆಚ್ಚಿದೆ ವಿಷಯಕೆ ಗೋವಿಂದಹುಚ್ಚು ಮಾಡಿತು ಮನ ಗೋವಿಂದ ನಿನ್ನುಚ್ಚರಣಡಗಿತು ಗೋವಿಂದ 2ಆಸೆಯ ಬಿಡಿಸೈ ಗೋವಿಂದ ನಿನ್ನದಾಸರೊಳಿರಿಸೈ ಗೋವಿಂದಪ್ರಸನ್ನವೆಂಕಟ ಗೋವಿಂದಭವಘಾಸಿಯ ತಪ್ಪಿಸು ಗೋವಿಂದ 3
--------------
ಪ್ರಸನ್ನವೆಂಕಟದಾಸರು
ನೀ ಕರುಣಿಸೊ ವಿಠಲ ನಮ್ಮಸಾಕೊ ಪಂಡರಿ ವಿಠಲ ಪ.ದೋಷಿಗಳೊಳಗೆ ಹಿರಿಯನು ನಾ ನಿರ್ದೋಷಿಗಳರಸನೆ ವಿಠಲಸಾಸಿವೆಯಷ್ಟು ಭಕುತಿಯನರಿಯೆನುಶೇಷಶಯನ ಶ್ರೀ ವಿಠಲ 1ಭವಸಾಗರದೊಳು ಮುಳುಗುವೆ ಸುಮ್ಮನೆಅವಲೋಕಿಸುವರೆ ವಿಠಲನವ ನವ ವಿಷಯಕೆ ಮುಗ್ಗುತಲಿಹ ಮನದವಸರ ಕಾಯೊ ವಿಠಲ 2ತನುಸಂಬಂಧಿಗಳತಿ ಕಾರ್ಯಾರ್ಥಿಗಳ್ಎನಗಾರಿಲ್ಲೊ ವಿಠಲಾಬಿನಗುಮಾನವರನುಸರಣೆಯಲಿದಣಿಸದಿರಯ್ಯ ವಿಠಲ 3ನಿಶಿದಿನಅಶನವಸನಕೆ ಹೆಣಗುವೆಹುಸಿಸಂಗ್ರಹಿಸಿದೆ ವಿಠಲನಿಶಿದ್ಧಗಳಂಜಿಕೆ ಇಲ್ಲವು ನರಕದಗಸಣೆಗೆ ಅಂಜುವೆ ವಿಠಲ 4ಜಾವಕೆ ಮಾಡುವೆ ಸಾವಿರ ತಪ್ಪನುಕಾವದಯಾಂಬುಧಿ ವಿಠಲನಾ ವಡಲ್ಹೊಕ್ಕೆನೊ ಪ್ರಸನ್ವೆಂಕಟಪತಿಜೀವಕೆ ಹೊಣೆ ನೀ ವಿಠಲ 5
--------------
ಪ್ರಸನ್ನವೆಂಕಟದಾಸರು
ನೀನೆ ಗತಿಯೆಂದು ನಂಬಿದೆ ಕಾಯಯ್ಯ ಶ್ರೀನಿವಾಸ ಎನ್ನಹೀನಗುಣಗಳೆಣಿಸಲಿ ಬ್ಯಾಡ ದಯಮಾಡೊ ಶ್ರೀನಿವಾಸ 1ನಾನಾ ದುಷ್ಕøತಫಲವ ಉಂಡೆ ಇನ್ನಾರೆ ಶ್ರೀನಿವಾಸಎಂದೂ ದುರ್ವಿಷಯಕೆಮನ ಎರಗದಂತೆ ಮಾಡೊ ಶ್ರೀನಿವಾಸ 2ಸತ್ಕಥಾ ಶ್ರವಣ ಭಾಗ್ಯವ ಕೊಡುಅನುದಿನಶ್ರೀನಿವಾಸ ಎನ್ನಹೃತ್ಕಮಲದಿ ವ್ಯಕ್ತನಾಗಯ್ಯ ಶ್ರೀನಿವಾಸ 3ಪುತ್ರಕಳತ್ರಮಿತ್ರರು ನಿನ್ನ ದಾಸರೊ ಶ್ರೀನಿವಾಸ ತ್ವದ್ಭøತ್ಯಭೃತ್ಯರ ಪರಿಚಾರಕ ನಾನು ಶ್ರೀನಿವಾಸ 4ಅನಂತ ಜನ್ಮದ ಸತ್ಕರ್ಮ ನಿನಗೇವೆ ಶ್ರೀನಿವಾಸನಿತ್ಯದೀನೋದ್ಧಾರÀ ಪ್ರಸನ್ನವೆಂಕಟ ಮುಕುಂದ ಶ್ರೀನಿವಾಸ 5
--------------
ಪ್ರಸನ್ನವೆಂಕಟದಾಸರು
ನೋಡೊ ನೋಡೊ ರಂಗ ತನ್ನಖೋಡಿತನ ಬಿಡದೋಡು ಚಿತ್ತವು ಪ.ಎಳೆ ಎಳೆದು ನಾನೆ ಬಳಲಿದೆ ತಾ ತನ್ನತಿಳಿದ ಕಡೆಯಲಿ ಸುಳಿದಾಡಿತುಒಲಿದು ಭಕುತಿಯ ಬಲಿದಿರೆಂದರೆಛಲದಿ ಶುಭಮಾರ್ಗ ಕೊಳದು ದಾತಾರ 1ಕ್ಷಣದೊಳಾರೆ ನಾರಾಯಣ ದಾಮೋದರಮುನಿಧ್ಯೇಯನೆ ನಿನ್ನ ನೆನೆದಾಡದೆಹಣಿದಾಡೆನ್ನೊಳು ಒಣ ಧ್ಯಾನಿಸುತಿದೆಜನದೂಷಣದೊಳು ದಣಿದಾಡುತಿದೆ 2ಇನ್ನಾವಗೆ ಪೇಳಲೆನ್ನ ಒಡಲ ಮಾತಎನ್ನ ಒಡೆಯ ಪಾವನ್ನಕಾಯ ಪ್ರಸನ್ನ ವೆಂಕಟರನ್ನ ಒಲಿಯೊ ನೀಅನ್ಯ ವಿಷಯಕೆ ದೈನ್ಯವಾಗಿದೆ 3
--------------
ಪ್ರಸನ್ನವೆಂಕಟದಾಸರು
ಮುಕ್ಕ ನಿನ್ನ ನಡತೆ ನೋಡೋಮುಕ್ಕ ನಿನ್ನ ನಡತೆ ನೋಡೋತಕ್ಕ ಯಮನ ಶಿಕ್ಷೆಯಿಹುದುಸೊಕ್ಕ ಬೇಡವೋ ಮುಂದೆ ದುಃಖಗಳಿಸಿಹರೊಕ್ಕ ಕಕ್ಕಸಬಡುವೆಯೋ ಕಾಸದು ಹೋದರೆದಕ್ಕಿಸಿಕೊಂಬೆಯಾ ಎಲೆ ಹುಚ್ಚು ಮೂಳಪಗುರುಹಿರಿಯರ ನಿಂದೆ ಮಾಡಿಅವರಚರಣಸ್ಥಳವ ಜರೆದಾಡಿ ದುಷ್ಟದುರುಳರ ಜೋಡುಗೂಡಿ ನೀನುಬರಿದೆ ಆಯುಷ್ಯ ಕಳೆದೆ ಓಡಾಡಿ ಎಲೆಖೋಡಿಭರಭರದಿಂದಿಳಿವರು ಕಾಲನ ದೂತರುಕೊರಳನೆ ಕಡಿವರು ಎಲೆ ಹುಚ್ಚು ಮೂಳ1ನಿನ್ನನು ನೀನೇ ನೋಡಿಕೊಂಬೆ ನಾನುಚೆನ್ನಾಗಿ ಇಹೆನು ಎಂದೆಂಬೆ ಹುಚ್ಚುಕುನ್ನಿಯಂತೆ ಓಡಾಡಿ ಒದರಿಕೊಂಬೆಜಾರಕನ್ನೆಯರ ಜೋಡುಗೊಂಬೆ ನಾಕಾಣೆನೆಂಬೆಇನ್ನೇನು ಹೇಳಲಿ ಕಾಲನ ದೂತರುಬೆನ್ನಲಿ ಸುಳಿವರು ಎಲೆ ಹುಚ್ಚು ಮೂಳ2ಹೆಂಡತಿ ನೋಡಿ ಹಲ್ಲು ತೆರೆವೆ ಆಕೆಯಗೊಂಡೆ ಚವುರಿ ನೋಡಿ ಬೆರೆವೆಕಂಡ ಕಂಡ ವಿಷಯಕ್ಕೆ ಮನವೊಲಿದೆ ಅಂಟಿಕೊಂಡಿವೆ ಅಜ್ಞಾನ ಮರೆವೆಚಂಡ ಯಮದೂತರುಚಂಡಿಕೆಹಿಡಿದುಮಂಡೆಗೆ ಒದೆವರು ಎಲೆ ಹುಚ್ಚು ಮೂಳ3ಬಾಲೆಯ ಸುತರ ನಂಬುವೆಯೋ ಕೊಪ್ಪವಾಲೆಗಳ ಮಾಡಿಸಿ ಇಡುವ ಯಮನಾಳುಗಳು ಕೈ ಬಿಡುವರೇನೋ ನಿನ್ನಬಾಳು ವ್ಯರ್ಥವಾಯಿತು ಬಿಡಿಪರಿಲ್ಲವೋಸೀಳುವೆನೆನುತಲಿಕಾಲದೂತರುಕಾಲ್ಹಿಡಿದೆಳೆವರೋ ಎಲೆ ಹುಚ್ಚು ಮೂಳ4ಇನ್ನಾದರೂ ಜ್ಞಾನವ ತಿಳಿಯೋಚೆನ್ನಾಗಿ ಧ್ಯಾನದಿ ಬಲಿಯೋ ಕಂಡುನಿನ್ನೊಳು ಥಳಥಳ ಹೊಳೆಯೋನಿನ್ನ ಜನ್ಮ ಜನ್ಮವೆಲ್ಲ ಕಳೆಯೋಬ್ರಹ್ಮನಾಗಿ ಬೆಳೆಯೋರತ್ನದೊಳಗೆ ರತ್ನ ಬೆಳಗಿದಂತೆಚೆನ್ನ ಚಿದಾನಂದ ನೀ ನಿತ್ಯನಾಗೋ5
--------------
ಚಿದಾನಂದ ಅವಧೂತರು
ಶ್ರೀಆನಂದಮಯಸ್ತೋತ್ರ40ಪೂರ್ಣ ಸುಗುಣಾರ್ಣವನೆಅನಘಪರಮೇಶ್ವರನೆಆ ನಮಿಪೆ ಶ್ರೀರಮಣಆನಂದಮಯವಿಷ್ಣುಪನಿನ್ನಯ ಸುಮಹಿಮೆಗಳ ನಿನ್ನಿಚ್ಛೆಯಿಂದಲೇಚೆನ್ನಾಗಿ ತಿಳಿಸಿ ಅಚ್ಛಿನ್ನ ಭಕ್ತಿಯನೀಯೊ ಅಪಸುಖರೂಪ ಪಾಲನಾಲಯಕರ್ತ ಲಕ್ಷ್ಮೀಶನಿಷ್ಕಳನು ನೀ ಸದಾಕೈವಲ್ಯಸುಖದಆಗಮಸುಶಾಸ್ತ್ರೈಕ ವಿಜÉÕೀಯ ಪರಬ್ರಹ್ಮಅಂಗಾಂಗ್ಯಭಿನ್ನ ಆನಂದ ಸಂಪೂರ್ಣ 1ಬ್ರಹ್ಮಶಬ್ದದಿ ಮುಖ್ಯವಾಚ್ಯ ಬಹು ಆವರ್ತಿಬ್ರಹ್ಮಆನಂದಮಯನೀ ಇತರರಲ್ಲಬ್ರಹ್ಮಪರಿಪೂರ್ಣಹರಿಸರ್ವನಾಮದಿ ನೀನೆಬಹುರೂಪ ಸರ್ವಸ್ಥ ಈಶ್ವರಆನಂದಮಯ2ಚಿತ್ಪ್ರಕೃತಿ ನಾಲ್ಮೊಗನು ಅಷ್ಟಮೂರುತಿ ಎಂಬರುದ್ರನು ದೇವೇಂದ್ರ ಸುರಗುರುವಿಪ್ರಇಂಥ ಯಾರೂ ವಸ್ತು ಯಾವುದೊ ಅಲ್ಲವುಆನಂದಮಯನೀನು ವಿಷ್ಣು ಪರಬ್ರಹ್ಮ3ಪ್ರಕೃತಿ ಪ್ರಜಾಪತಿ ಸದಾನಂದ ದಶಪ್ರಮತಿರುದ್ರಾಷ್ಟಮೂರ್ತ್ಯಾದಿ ಸರ್ವ ಶಬ್ದಂಗಳುಪರನೆ ಬ್ರಹ್ಮನೆ ವಿಷ್ಣು ಮುಖ್ಯ ವಾಚಕ ನಿನಗೆಇರುವ ಈ ಸರ್ವರೊಳು ಸುಖಪೂರ್ಣ ಸ್ವಾಮಿ 4ಅನ್ನಮಯ ಪ್ರಾಣಮಯ ಮನೋಮಯ ವಿಜ್ಞಾನಮಯಆನಂದಮಯಎಂಬ ಐದು ಶಬ್ದಂಗಳು 1ಆನಂದಮಯಶಬ್ದದಿಂದ ಗ್ರಹಿಸಲುಬೇಕುಆನಂದಮಯಬ್ರಹ್ಮ ನೀನೆ ಇತರರು ಅಲ್ಲ5ಶಿರ ಬಾಹುದ್ವಯ ಮಧ್ಯಚರಣಅಂಗಾಂಗಗಳುಪೂರ್ಣಆನಂದಮಯಎಂದೂ ಅಭಿನ್ನಉರು ಸುಗುಣ ಪರಿಪೂರ್ಣ ವಿಷ್ಣು ಆತ್ಮನು ಬ್ರಹ್ಮಶೃತಿಯು ಬಹುಸಾರುತಿದೆ ಸುಖಮಯನು ಎಂದು 6ಅನ್ನಮಯ ಅನಿರುದ್ಧ ಪ್ರಾಣಮಯ ಪ್ರದ್ಯುಮ್ನಮನೋಮಯ ಸಂಕರ್ಷಣನು ವಿಜ್ಞಾನಮಯನುಅನಘಮಾಯಾರಮಣ ಪರವಾಸುದೇವ ನೀಆನಂದಮಯಶ್ರೀಶ ನಾರಾಯಣ ಬ್ರಹ್ಮ7ಪಂಚ ಕೋಶಂಗಳಲಿ ತನ್ನಾಮ ತದ್ಭಿನ್ನಕಿಂಚಿತ್ತು ಲೇಪವಿಲ್ಲದೆ ಇದ್ದು ನಿಯಮಿಸುವೆಪಂಚ ಸುಖರೂಪದಿಂ ಪಂಚವರ್ಣದಿ ಜ್ವಲಿಪೆಸಂಚಿಂತಿಪರ್ಗೆ ಸುಖವೀವೆ ಸುಖಮಯ ಬ್ರಹ್ಮ 8ಅಧಿಕಾರಿ ಆನಂದಪ್ರಚುರಬಹುರೂಪ ನೀಸರ್ವರೂ ನಿನ್ನಿಂದ ಉಪಜೀವ್ಯರೊ ಸ್ವಾಮಿಸರ್ವರಿಗು ಪ್ರೇರಕನು ಸತ್ತಾಪ್ರವೃತ್ತಿದನುಸರ್ವೇಶ ಸುಖಪೂರ್ಣ ಸರ್ವವ್ಯಾಪಿಯೆ ದೇವ 9ಆನಂದಮಯನೀನೆ ಆನಂದೋದ್ರೇಕದಿಂಪ್ರಾಣಿಗಳ ಧರ್ಮಗಳ ಪ್ರವೃತ್ತಿ ಮಾಡುವೆಯೊಆನಂದೋದ್ರೇಕದಿಂ ಸರ್ವತ್ರವ್ಯಾಪ್ತ ನೀಆನಂದಮಯಇತರ ಲೋಕಚೇಷ್ಟಕರಿಲ್ಲ10ಅಂಗಾಂಗಿತ್ವದಿ ಭಗವಂತ ನೀ ಕ್ರೀಡಿಸುವೆರಂಗ ನೀ ಸತ್ಯಂ ಜ್ಞಾನಮನಂತಂ ಬ್ರಹ್ಮನೆಂದುಹೊಗಳುತಿದೆ ಶೃತಿಯು ಸುಖಸಾರಾತ್ಮ ಚಿನ್ಮಾತ್ರಚಾರ್ವಾಂಗ ನಿನ್ನ ತಿಳಿಯದೆ ಬೇರೆ ಗತಿಯಿಲ್ಲ 11ಸತ್ಯ ಸತ್ಸøಷ್ಟಿಕರ್ತ ಜೀವನಪ್ರದನುಸರ್ವ ಪ್ರವರ್ತಕನು ಸಂಹಾರಕರ್ತಅಶೇಷಸಾಮಾನ್ಯ ವಿಶೇಷಜ್ಞಾನವು ಜ್ಞಾನದೇಶಾದಿಪರಿಚ್ಛೇದ ಶೂನ್ಯವು ಆನಂತ 12ಅನ್ನಮಯದಿಂ ಸೃಷ್ಟಿ ಸಂಹಾರಜೀವನವುಪ್ರಾಣಮಯ ಶಬ್ದ ಸಹ ಜೀವನಪ್ರದವುಮನೋಮಯ ಶಬ್ದದಿಂ ಸಾಮಾನ್ಯಜ್ಞಾನವುವಿಜ್ಞಾನಮಯ ಶಬ್ದದಿ ವಿಶೇಷಜ್ಞಾನ 13ಆನಂದಮಯಶಬ್ದದಿಂದಲಿ ಜÉÕೀಯವುಆನಂದಾದ್ಯಖಿಳಗುಣ ಅಪರಿಚ್ಛಿನ್ಮತ್ವಅನ್ನಮಯ ಪ್ರಾಣಮಯ ಸತ್ಯಂ ಬ್ರಹ್ಮಮನೋಮಯ ವಿಜ್ಞಾನಮಯ ಜ್ಞಾನಂ ಬ್ರಹ್ಮ 14ಆನಂದಮಯಆನಂತಂ ಬ್ರಹ್ಮ ಎಂದೀ ರೀತಿಮಂತ್ರವರ್ಣೋಕ್ತ ಶಬ್ದಗಳಿಗೇಕಾರ್ಥಆನಂದಮಯಮೊದಲಾದ ಶಬ್ದಗಳಿಂದಆನಂದಪರಿಪೂರ್ಣ ವಿಷ್ಣು ನೀನೇ ವಾಚ್ಯ 15ಆತ್ಮ ನೀಆನಂದಮಯಇತರರು ಅಲ್ಲಆನಾತ್ಮರು ಸಂಪೂರ್ಣಸ್ವತಂತ್ರರು ಅವರುಚೇತನಾಚೇತನದಸತ್ತಾನಿನ್ನಿಂದಲೇಆನಂತ ನೀ ಸರ್ವಗನು ಆಸಮ ಪ್ರಭು ಐರ 16ಬ್ರಹ್ಮ ವಿದಾಪ್ನೋತಿ ಪರಂ ಎಂದು ಉಪನಿಷದ್ವಾಕ್ಯಬ್ರಹ್ಮಾಪರೋಕ್ಷವೇ ಮೋಕ್ಷಕ್ಕೆ ಕಾರಣಬ್ರಹ್ಮೇತರ ವಿರಿಂಚಾದಿ ಜೀವರ ಜ್ಞಾನಮೋಕ್ಷಕೊಡಲು ಎಂದು ಶೃತಿಯು ಪೇಳುತಿದೆ 17ತಮೇವಂ ವಿದ್ವಾನಮೃತ ಇಹಭವತಿನಾನ್ಯಃ ಪಂಥಾ ಅಯನಾಯ ವಿದ್ಯತಾಎಂಬ ಶೃತ್ಯನುಸಾರ ನಿನ್ನಾಪರೋಕ್ಷ ವಿನಾಮುಕ್ತಿಯು ಲಭಿಸದು ಅನ್ಯಜ್ಞಾನದಿ ಎಂದೂ 18ಆನಂದಪ್ರಚುರ ಪೂರ್ಣಾನಂದಮಯ ನೀನೆಆನಂದ ತರತಮದಿ ಜೀವರಲಿ ಉಂಟುಅತ್ಯಂತ ಭೇದವು ನಿನಗೂ ಜೀವರಿಗೂಅನಂತ ಅಪರಿಮಿತ ಆನಂದಿ ನೀನೆ 19ರುದ್ರನ ಶತಗುಣಿತ ಆನಂದ ನಾಲ್ಮೊಗನಒಂದು ಆನಂದವು ಎಂಬುವುದು ಶೃತಿಯುಆನಂದ ಪರಿಮಿತವು ಜೀವರಿಗೆ ಈ ರೀತಿಆನಂದ ಅಪರಿಮಿತ ನಿನ್ನಯ ಸ್ವರೂಪ 20ಸುಖಮಯ ನಿನ್ನಪರಿಮಿತಾನಂದಾದಿಗಳನುಸಾಕಲ್ಯತಿಳಿದವರು ಇಲ್ಲವೇ ಇಲ್ಲಸಾಕಲ್ಯಶಬ್ದಗಳು ಪೊಗಳಲರಿಯವು ನಿನ್ನಏಕಸುಖಮಯ ನೀನು ಜೀವರಿಗೆ ಭಿನ್ನ 21ತತ್ವಮಸ್ಯ ಹರಿಬ್ರಹ್ಮಾಸ್ಮಿ ಪುರುಷಯೇ ವೇದಂಸರ್ವಂ ಎಂಬಂಥಾ ಇಂಥ ಶೃತಿ ಮಾತುಗಳುಜೀವೇಶ ಐಕ್ಯವನು ಬೋಧಿಸುವವಲ್ಲವುಸರುವಿಚಾರ ನಿರ್ಣಯದಿ ಭೇದಬೋಧಕವೆ 22ಜೀವರಿಗೆ ಜನ್ಮಜೀವನಸತ್ತಾದಾತನುಸರ್ವಾಶ್ರಯ ಸರ್ವನಿಯಾಮಕನು ಆತ್ಮಜೀವರು ಪರಬ್ರಹ್ಮಜ್ಞಾನದಿಂ ಪೊಂದುವಸೋಚಿತಪೂರ್ಣತ್ವ ಕೊಡುವ ನೀ ಬ್ರಹ್ಮ 23ಸರ್ವಕ್ಕೂ ಭಿನ್ನ ನೀ ಸರ್ವತ್ರ ಸರ್ವದಾಸರ್ವದೊಳು ಇರುವಂಥ ಸರ್ವೇಶ್ವರಸರ್ವ ಸತ್ತಾದಿ ಪ್ರದತ್ವ ಸ್ವಾಮಿತ್ವದಿಂಸರ್ವ ನೀನೆಂದೆನಿಸಿಕೊಂಬೆಯೊ ದೇವ 24ಸರ್ವವಂದ್ಯನು ವಿಷ್ಣು ಸರ್ವಾಂತರ್ಯಾಮಿಯುಸ್ವತಂತ್ರ ಈಶನು ಸರ್ವಜೀವರಿಗೆ ಭಿನ್ನಸರ್ವಸ್ವಾಮಿಯು ನೀನು ಎಂದರಿತು ಭಜಿಪರಿಗೆಸರ್ವಶೋಕವ ಬಿಡಿಸಿ ಮೋಕ್ಷಸುಖವೀವೆ 25ಸರ್ವಜಡ ಚೇತನದಿ ಅಂತರ್ನಿಯಾಮಕನುಸರ್ವಜಗದಾಧಾರ ಏಕ ಬಹುರೂಪತ್ವಂ ಅಸೌ ಅಹಮೆಂದು ಸರ್ವನಾಮದಿ ವಾಚ್ಯಸರ್ವಜಡ ಚೇತನಕೆ ವಿಲಕ್ಷಣನು ಸ್ವಾಮಿ 26ಅತೀಂದ್ರಿಯವು ಬ್ರಹ್ಮವಿಷಯಕ ಜ್ಞಾನಶೃತ್ಯನುಸಾರವಿಲ್ಲದ ಅನುಮಾನದುಸ್ತರ್ಕದಿಂದಲಿ ಲಭಿಸದು ಯಾರಿಗೂಮೋದಮಯ ಶ್ರೀ ವಿಷ್ಣು ಜೀವರಿಂ ಭಿನ್ನ 27ಬದ್ಧರೊಳು ಮುಕ್ತರೊಳು ಇದ್ದು ನೀ ನಿಯಮಿಸುವೆಬದ್ಧರಂತೇ ಮುಕ್ತಜೀವರಿಗೂ ಭಿನ್ನಮುಕ್ತರಿಗೆ ಅವರವರ ಆನಂದ ಅನುಭವವುಅಧೀನ ನಿನ್ನಲ್ಲಿಆನಂದಮಯಶ್ರೀಶ28ಸದಮಲ ಬ್ರಹ್ಮ ನಿನ್ನ ಪರೋಕ್ಷಜ್ಞÕನಿಗೆಪದುಮಸಂಭವ ಸಹ ನೀನು ಸಹ ಇದ್ದುಒದಗಿಸುವೆ ಸೋಚಿತ ಮೋಕ್ಷಸುಖ ಅವರಿಗೆಹೇ ದಯಾನಿಧೇ ನಮೋ ಆನಂದಪೂರ್ಣ 29ಅನ್ನ ಪ್ರಾಣ ಮನೋವಿಜ್ಞಾನಆನಂದಮಯಪರಿಣಾಮ ಅಭಿಮಾನರಹಿತ ಅಧಿಕಾರಿಆನಂದ ಪ್ರಚುರನೇ ಲೋಕಚೇಷ್ಟಕ ನೀನೆಮಂತ್ರವರ್ಣೋಕ್ತ ಮಹಾಮಹಿಮ ಸುಖಪೂರ್ಣ 30ವನಜಾಸನಾದಿಗಳು ಆನಂದಮಯರಲ್ಲನಿನ್ನಿಂದ ಉಪಜೀವ್ಯ ಭಿನ್ನರು ಅವರುಆಮ್ನಾಯದಿಂ ವೇದ ದುಸ್ತರ್ಕಕತಿ ದೂರಆನಂದಮಯವಿಷ್ಣು ಮುಕ್ತರಿಗೂ ಆಶ್ರಯನು31ಜ್ಞಾನಸುಖಪೂರ್ಣ ಪ್ರಸನ್ನ ಶ್ರೀನಿವಾಸಪೂರ್ಣಪ್ರಜÕರ ಹೃತ್‍ಸ್ಥ ಜನ್ಮಾದಿಕರ್ತಎನ್ನ ಒಳಹೊರಗಿದ್ದು ನೀನೆ ನುಡಿದೀ ಗ್ರಂಥನಿನಗೆ ಅರ್ಪಣೆ ಸುಹೃದನಿತ್ಯಸಂತೃಪ್ತ32
--------------
ಪ್ರಸನ್ನ ಶ್ರೀನಿವಾಸದಾಸರು