ಒಟ್ಟು 130 ಕಡೆಗಳಲ್ಲಿ , 41 ದಾಸರು , 110 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಪರಮಪಾವನ್ನನಾಮ ಭಳಿರೆ ಸಂಗರ ಭೀಮ ಸರಸಗುಣಾಭಿರಾಮ ತರಣಿವಂಶ ಲಲಾಮ ತಾರಾನಂದನ ಪ್ರೇಮ ಪರಿಪೂರ್ಣಧಾಮ ಪಟ್ಟಾಭಿರಾಮ ಪ. ಚಿಕ್ಕಪ್ರಾಯದಲಿ ಬಲುರಕ್ಕಸಿಯನು ಸೀಳಿ ತಾಕಲದೆ ಕಾಲ್ಪೆಣ್ಗೈದು ರಾಜಮೌಳಿಯ ಬಿಲ್ಲ ಗಕ್ಕನೆ ಖಂಡ್ರಿಸಿ ಕೈವಿಡಿದು ಸೊಬಗನುಕ್ಕುವ ಜಾನಕಿಯ ಧಿಕ್ಕರಿಸುತ ಪೋಗಿ ದಿತಿಯ ಕೈಕೆಯ ಮಾತು ದಕ್ಕಲೆನುತ ಪೋಗಿ ದಂಡಕಾರಣ್ಯವ ಭೂರಿ ದಾನವಹಿಂಡ ಚಕ್ಕಂದದಲಿ ಕೊಂದ ಜಾಣ ನೀನಹುದೊ 1 ಭುವನೇಶ ಶಬರಿಯ ಪೂಜೆಯ ಕೈಕೊಂಡು ಪವನಾತ್ಮಜನ ಕಂಡು ಬರಹೇಳಿ ರವಿಯ ಸೂನನ ಕಾಣಿಸಿಕೊಂಡು ತವಕದಿಂ ವಾಲಿಯ ಹವಣರಿಯದಸುವ ಕೊಂದು ಪ್ಲವಗ ಬಲವನು ಕೂಡಿ ಬಲು ಸಮುದ್ರವ ಬಂಧ- ನವ ಮಾಡಿ ಕುಂಭಕರ್ಣ ರಾವಣನ ಸಂಹಾರ ಮಾಡಿ ಲಂಕಾರಾ ಜ್ಯ ವಿಭೀಷಣಗಿತ್ತು ಅವನಿಜೆಸಹ ಪುಷ್ಪಕವನೇರಿ ನಡೆದೆ 2 ಸುರರೆಲ್ಲ ಪೂಮಳೆಗರೆಯೆ ಸುಗ್ರೀವಾದಿ ವರರಾವಣರ ಸೇನೆ ಬೈಲಾಗಿ ನೀ ನಡೆಯೆ ಶೃಂ- ಗಾರವಾದ ಸಾಕೇತಪುರಕೆ ಭರದಿ ಬಂದು ನಿರುತ ಸೌಖ್ಯದಲಿ ನಿಂದು ಸಿರನೆಲೆವಿನಯದಿ ಚಿನ್ಮಯನಾ ಗಿರಿಯ ಶುಭಕರ್ಣವೊ(?) ಸೀತಾಲಕ್ಷ್ಮಣ ಭರತಶತ್ರುಘ್ನಯಿರೆ ಹನುಮನ ಸೇವೆ ದಿವ್ಯಸಿಂಹಾಸನವೇರಿ ಧರೆ ಆಳಿದ ಪರಿಣಾಮದಿ ಹಯವದನ ರಾಮ3
--------------
ವಾದಿರಾಜ
ಪಾರ್ಥಸಾರಥಿ ನಿಮ್ಮ ಸೇವೆಯ ಮಾಡಿ ಸಾರ್ಥಕವಾದೆನು ಪ ವಾರ್ಥಿಪುರುಷನೆ ನಿಮ್ಮ ಕೀರ್ತಿಯ ಕೊಂಡಾಡಲೆನಗೆ ಶಕ್ತಿಯ ವಿಸ್ತರಿಸೆನಗೆ ಯುಕ್ತಿಯ ಅ.ಪ ಆಚಾರ್ಯರಿಗೆ ಅಭಿವಂದನೆ ಮಾಡಿ ಅಜನರಾಣಿಯ ಭಜಿಸುವೆ ಅನಾದಿಕ್ರಮವನು ಪೇಳುವೆ 1 ಕೈರವಿಣಿಯಲ್ಲಿ ಸ್ನಾನವಮಾಡಿ ಕೈಮುಗಿದು ಮಾರುತಿಗೆ ನಾ ಕರುಣಿಆಚಾರ್ಯರಿಗೆ ವಂದಿಸಿ ಕರಿಯಬಳಿಗೆ ನಾ ಬಂದೆನು ನಾ ಕರಿಯ ಬಳಿಗೆ ಬಂದೆನು 2 ದವನೋತ್ಸವದ ಮಂಟಪಂಗಳು ಭಾಗವತರ ಭವನವು ಬಲವಬಳಸಿ ಭಕ್ತವತ್ಸಲನ ಚೆಲುವರಥವನು ನೋಡಿದೆ ನಾ ಶೇಷರಥವನು ಸೇವಿಸಿ 3 ಮೂಡಬೀದಿಯ ಸುತ್ತಿಬಂದು ಮಹದಾಹ್ವಯರನು ಸೇವಿಸಿ ಮಹಾನುಭಾವನ ವಿಮಾನವನು ನೋಡಿ ಮಾನವನ್ನು ಬಿಟ್ಯೆನೊ ದೇಹಾಭಿಮಾನವನ್ನು ಬಿಟ್ಯೆನೊ 4 ಕಾರಿಮಾರಿ ಪುತ್ರರಿಗೆ ಬಾರಿಬಾರಿಗೆ ವಂದಿಸಿ ವಾರಿಜಾಕ್ಷನ ಗೋಪುರವ ನೋಡಿ ಘೋರಪಾಪವ ಕಳೆದೆನೊ ಯನ್ನ ಘೋರಪಾಪವ ಕಳೆದೆನೊ 5 ಗರುಡಕಂಭವ ದೀಪಸ್ತಂಭವು ವಾಹನದ ಮಂಟಪಂಗಳು ವಾರಿಜನಾಭನ ಪಕ್ಷಿವಾಹನನ ನೋಡಿ ವಂದನೆಯ ಮಾಡಿದೆ ಅಭಿವಂದನೆಯ ನಾ ಮಾಡಿದೆ 6 ತೋರಣದ ಬಾಗಿಲನು ದಾಟಿ ವಾರುಣದೆದುರಲಿ ವಂದಿಸಿ ವಾರಿಜಾಕ್ಷಿ ಶ್ರೀವೇದವಲ್ಲಿಯ ಸಾರೂಪ್ಯವನು ನಾ ಬೇಡಿದೆ ಸಾಯುಜ್ಯವನು ನಾ ಬೇಡಿದೆ 7 ಭಕ್ತಿಸಾರರ ಚರಣಕೆರಗಿ ಹಸ್ತಗಿರೀಶನ ವಂದಿಸಿ ಸುತ್ತಿ ಗರುಡಕಂಬವನ್ನು ಮತ್ತೆ ಸಿಂಹನ ಸೇವಿಸಿ ದಿವ್ಯ ನಾರಸಿಂಹನ ಸೇವೆಸಿ 8 ವಿಷ್ಣುಚಿತ್ತರ ಪುತ್ರಿಯನ್ನು ಅರ್ಥಿಯಿಂದಲೆ ಸೇವಿಸಿ ಮುಕ್ತಿದಾಯಕ ರಂಗನ ಪಾದಕೆ ಮುದದಿ ವಂದನೆ ಮಾಡಿದೆ ನಾ ಮುದದಿ ವಂದನೆ ಮಾಡಿದೆ 9 ಯಾಮುನಾಚಾರ್ಯರಿಗೆ ವಂದಿಸಿ ಕಾಂಚೀಪೂರ್ಣರಿಗೆರಗುವೆ ವೇದಾಂತಾಚಾರ್ಯರ ವಂದನೆ ಮಾಡಿ ಅನಾದಿ ಪಾಪವ ಕಳೆದೆನೊ ನಾ ಅನಾದಿ ಪಾಪವ ಕಳೆದೆನೊ 10 ಭಾಷ್ಯಕಾರರ ಚರಣಕೆರಗಿ ವರಯೋಗಿಗಳಿಗೆ ವಂದಿಸಿ ಕುಲೇಶ ದಾಶರಥಿಗೆ ವಂದಿಸಿ ದ್ವಾರಪಾಲಕರ ನೋಡಿದೆ ನಾ ದ್ವಾರಪಾಲಕರ ನೋಡಿದೆ 11 ಗಂಟೆಬಾಗಿಲ ದಾಟಿ ಶ್ರೀವೈಕುಂಠವಾಸನ ಭಕ್ತರು ಹದಿ ನೆಂಟು ಆಳ್ವಾರುಗಳ ಸೇವಿಸಿ ಕಂಟಕಗಳ ಕಳೆದೆನೊ ಭವ ಕಂಟಕಗಳ ಕಳೆದೆನೊ 12 ಮಾಧವ ಅನಂತ ಶ್ರೀಪದ್ಮನಾಭನ ಸೇವಿಸಿ ಶ್ರೀರಾಮ ಲಕ್ಷ್ಮಣ ಭರತ ಶತ್ರುಘ್ನ ಸೀತೆಯನು ನಾ ನೋಡಿದೆ ಲೋಕಮಾತೆಯನು ನಾ ಬೇಡಿದೆ 13 ಆದಿಶೇಷನ ಮೇಲೆ ಮಲಗಿದ ಅನಾದಿರಂಗನ ಸೇವೆಗೆ ಕುಲ ಶೇಖರರ ಸ್ಥಾನದಲಿ ನಿಂದು ಯದುಕುಲೇಶನ ನೋಡಿದೆ ನಾನೆದುಕುಲೇಶನ ನೋಡಿದೆ 14 ಅನಿರುದ್ಧ ಸಹಿತಲೆ ಎಡದಿ ಸಾತ್ಯಕಿ ಪಂಚಮೂರ್ತಿಗಳ ನಡುವೆ ಪಾರ್ಥಸಾರಥಿ ಯೆಡಬಲದಿ ಶ್ರೀದೇವಿ ಭೂದೇವಿ 16 ಆದಿಶೇಷನ ಮೇಲೆ ತನ್ನಯ ಪಾದವನ್ನು ಪ್ರಸÀರಿಸಿ ವಿ ಅಂದುಗೆ ಗೆಜ್ಜೆ ಕುಂದಣದ ಪಾಡಗಗಳು ಆನಂದದ ಪಾಡಗಗಳು 17 ಕನ್ನಡಿಯಂದದಿ ಕಣಕಾಲುಗಳು ಉನ್ನತವಾದ ಪೀತಾಂಬರವು ಪನ್ನಗಶಯನನ ವಡ್ಯಾಣದಲಿ ಪರಮಮೂರ್ತಿಯ ಸರಗÀಳು ಶ್ರೀಮೂರ್ತಿ ಸರವನು ಸಿಕ್ಕಿಸಿ 18 ದುಷ್ಟನಿಗ್ರಹವನ್ನು ಮಾಡಿ ಶ್ರೇಷ್ಠರನ್ನು ಪರಿಪಾಲಿಪ ಶ್ರೀ ಕೃಷ್ಣಮೂರುತಿಯ ಎಡದ ಭಾಗದಿ ಶ್ರೇಷ್ಠವಾದ ಖಡ್ಗವು ಸರ್ವಶ್ರೇಷ್ಠವಾದ ಖಡ್ಗವು 19 ಸಿಂಧುರಾಜನ ಕೊಲ್ಲುವುದಕಾಗಿ ಅಂದು ಚಕ್ರವ ಕಳುಹಿದೆ ಒಂದು ಕೈಯಲಿ ಪಾದವ ತೋರುತ ಮತ್ತೊಂದು ಕೈಯಲಿ ಶಂಖವು ಅನಂದದಿಂದಲೆ ಶಂಖವು 20 ಸೃಷ್ಟಿಯೆಳಗ್ಹದಿನಾಲ್ಕು ಲೋಕವ ಪಕ್ಷಿವಾಹನವಂ ಬಿಟ್ಟು ವಕ್ಷಸ್ಥಳದಲಿ ಲಕ್ಷ್ಮಿದೇವಿಯ ರತ್ನಾದ್ಹಾರದಪದಕವು ನವರತ್ನದ್ಹಾರದ ಪದಕವು 21 ಕಂಠದೊಳಗಿಟ್ಟ ಕೌಸ್ತುಭಮಣಿ ಎಂಟುಪುಷ್ಪದ ಹಾರವು ವೈ ಕುಂಠವಾಸನ ಸೇವಿಸಿದರೆ ಕಂಟಕಂಗಳು ಕಳೆವುದು ಭವಕಂಟಕಗಳು ಕಳೆವುದು 22 ಕುಂದಕುಸುಮದಂತೆ ದಂತವು ಪವಳದಂತೆ ಅಧರಕಾಂತಿಯು [ಚೆಂದದಿ] ಪೊಳೆವ ಕರ್ಣಕುಂಡಲ ಚೆಲುವ ನಾಸಿಕದಂದವು ತಿಲಕುಸುಮನಾಸಿಕದಂದವು 23 ದೀಪದಂದದಿ ಕರುಣನೇತ್ರವು ಚಾಪದಂದದಿ ಪುಬ್ಬುಗಳಲಿ ವಿವೇಕವಾಗಿ ತೋರ್ಪುದು 24 ಪದುಮನಾಭನ ಸೇವಿಸಿದವರಿಗೆ ಒದಗಿ ಬರುವುದು ಮುಕ್ತಿಯು ಎಲ್ಲರಿಗೊದಗಿ ಬರುವುದಿಷ್ಟಾರ್ಥವು 25 ಪಾದದಿ ಕೇಶದ ಸೇವೆಯನು ಮಾಡಿ ಅನಾದಿಪಾಪವ ಕಳೆದೆನೊ ವೇದಮೂರುತಿ ವೆಂಕಟಕೃಷ್ಣನೆ ಪಾದವನ್ನು ತೋರಿಸು ನಿಮ್ಮ ಶ್ರೀ ಪಾದವನ್ನು ತೋರಿಸು 26
--------------
ಯದುಗಿರಿಯಮ್ಮ
ಪಾಲಿಸೋ ಫಂಡರಿಪುರಾಯಾ ಪಾವನ ಕಾಯಾ ಪ ಶ್ಲೋಕÀ : ತರುಣ ತುಲಸಿಮಾಲಾ ತಪ್ತಗಾಂಗೇಯ ಚೇಲಾ ಶರಧಿ ತನಯಲೋಲಾ ಶಕ್ವರೀಕಾರಿ ಫಾಲ ಶಿರಿ ಅಜಭವ ಮೂಲಾ ಶುದ್ಧ ಕಾರುಣ್ಯ ಲೀಲಾ ವೈಜಯಂತಿ ಮಾಲಾ ಕುಂಡಲ ಕೇಯೂರ ಕೌಸ್ತ್ತುಭ ಲೋಕದಿ ವ್ಯಾಪ್ತಾ ದೋಷ ಸಿರ್ಲಿಪ್ತ ದೇವರ ದೇವಾ ಧರುಮಾದ್ಯರ ಭಾವಾ 1 ಅಮಿತ ಸುಗುಣಧಾಮಾ ಆತ್ಮಭೂಪೂರ್ಣ ರಾಮಾ ಅಮರಕುಲಲಲಾಮ ಅಬ್ಜಧಾಮಾಭಿರಾಮಾ ಯಮಿಕುಲೋದಧಿ ಸೋಮ ಯಜ್ಞ ಭೃದ್ಯಜ್ಞ ನಾಮಾ ಕರ್ಮ ಸಂರಕ್ಷಿತ ಸರ್ವ ಲೋಕಾ ವಿತತ ಮಹಿಮ ವಿಶ್ವನಾಟಕ ವತ್ಪ್ರ ಘೋಟಕಾ ಶೋ ನಳಿನ ಜಾಂಡೋದರಾ ಸರ್ವರಾಧಾರಾ ಸಂತತ ನಿರ್ವಿಕಾರಾ ಮತಿ ಮಂದನಾಗಿ ನಿನ್ನನು ಬಿಟ್ಟೆ ಮ ಬಟ್ಟೆ 2 ಶ್ಲೋಕ : ಜನನ ಮರಣ ದೂರ ಜಂಗಮಾಚಾg ವಿಹಾರಾ ದನುಜವನ ಕುಠಾರಾ ದೀನಮಂದಾರ ಧೀರಾ ಪ್ರಣತ ಭಯ ವಿಹಾರಾ ಪ್ರಾಕೃತಾತೀತ ಸಾರಾ ದಿನಪನಿಭ ಶರೀರಾ ದುಃಖವಾರಿಹ ಸಮೀರಾ 3 ವನಧಿ ಜಿತಾಸುರಯೂಥ ನಿರ್ಮಲ ಶ್ರುತಿಗಾಥಾ ಎನ್ನ ಸಂತತ ಸಂಪ್ರಸನ್ನಾ ಜೀಯ ಕರಣಾದಿ ಪಿಡಿಕಯ್ಯಾ ಗೋಪಕುಮಾರಾ 3 ಕಮಠ ಕೋಲಾ ಶತ್ರುಕಾಶ್ಯಪಿಬಾಲಾ ನೃಪಕುಲ ಈರವಾಳಾ ನೀಲಕಂಠಾಸ್ತ್ರಕಾಲಾ ದ್ರುಪದತನಯ ಪಾಲಾ ದುರವರ್ಜಿತದುಕುಲಾ ನಿರ್ಮಲ ಓಂಕಾರಾ ಪರಮ ಪ್ರೀಯ ಜಾಮಿ ಕಳೆದ್ಯೊ ತಾಪವಾ 4 ಶ್ಲೋಕ : ನಗಧರ ನಳಿನಾಕ್ಷ ನಾಕನಾಥಾದ್ಯ ಪಕ್ಷ ನೃಗ ನಗಪತಿ ಶಾಪಾ ನಿರ್ವಹಕಾರ ಶ್ರೀಪಾ ಭೃಗು ಮುನಿಗೇಯಾ ಭೂತನಾಥ ಸಹಾಯ ಅಗಣಿತ ಅಹಿತರನಳುಹಿದಾ ತೋರಿದೆ ಸತ್ಪುತ್ರರಾ ವಒತ್ತಿ ಕುಂತಿನಂದನಾ ಖಂಡ್ರಿಸಿದ್ಯೊ ಕೃಪಾಳು 5 ಶ್ಲೋಕ :ಶುಭತಮ ಸುಖತೀರ್ಥಾರಾಧ್ಯ ಸದ್ದಾನಪಾತ್ರಾ ಇಭವರರಿಪು ಹತಾನ ವಿಶ್ವಜನ್ಮಾವಿಕರ್ತಾ ಯುಗ್ಮ ಪ್ರಸಾದಾ ತರುಜನ್ಮ ವಿದೂರಾ ನಿರ್ಗುಣ ನಿರಂಜನಾ ಗೋಪರೊಡಗೂಡಿ ಮೆದ್ದೆ ತೋರಿದೆ ದಯಸಿಂಧೂ 6 ಶ್ಲೋಕ :ಅತಿವಮಲಸುಗಾತ್ರ ಅಖಿಳಲೋಕೈಕ ಪಾತ್ರಾ ಷತತಿಜದಳನೇತ್ರಾ ವೃತ್ತಹಾದ್ಯ ಮರಮಿತ್ರಾ ಶ್ರುತಿಕಮಂಜ ಸೂತ್ರಾ ಸ್ತುತ್ಯ ಪಾವನ ಪವಿತ್ರಾ ಕಳತ್ರ ನಿನ್ನಯ ದಿವ್ಯ ಖ್ಯಾತಿ ಈ ನಿತ್ಯ ಸುಖಿಸೋರು ಆನಂದಾಬ್ಧಿ ಸದ್ಗತರೋ ಮಾನವ ಜನಕ್ಲೇಶ ಭಂಜನಾ ಭಾಷಾ ಎನ್ನಯ ಅಭಿಲಾಷಾ 7 ಶ್ಲೋಕ :ವನರುಹಭವತಾತಾ ವೀತ ತನ್ಮಾತ್ರಭುತ ದ್ಯುನದಿ ಜಲವಿಧೂತ ದಿವ್ಯ ಪಾದಾಂಬುಜಾತಾ ಅನಿಲತನಯ ಪ್ರೀತಾ ಅತ್ರಿಸದ್ವಂಶಜಾತಾ ಅನಿಮಿಷಜಯಸೂತಾ ಆನತೇಷ್ಟಪ್ರದಾತಾ ಮಂಗಳಶ್ರೇಣಿ ಲೋಕೈಕಸತ್ರಾಣಿ ಶರಣು ಹೊಕ್ಕರ ಕಾಯುವ ಛಲದಂಕಾ ಕಾಳಿಂಗನ ಬಿಂಕಾ ಬಿಡಿಸಿದ್ಯೊ ನಿಷ್ಕಳಂಕಾ ಮುರ ದಂತವಕ್ತ್ರಾದ್ಯರ ಹಿಂಸಾ ಬಿಡಿಸಿದೆಯೋ ಓಜಿಷ್ಠಾ 8 ಶ್ಲೋಕ :ಹನುಮನತ ಪಾದಾಬ್ಜಹಂಸ ಸಂವಕ್ತ್ರುಕುಬ್ಜಾ ತನುವಿಕೃತ ವಿನಾಶಂ ಕಾಳಿ ಜಿಹ್ವಾಶುದೇಶಂ ದನುಜವಿಕರಾಳ ಮತ್ತೆ ಪೌಂಡ್ರೇ ಶೃಗಾಲಂ ಮೋದ ಸುಪದ ಮೂರುತಿಯನ್ನು ತೋರು ಮಾತಾ ಲಾಲಿಸು ಜಗನ್ನಾಥ ನಿನ್ನವರಿಗೀಯೋ ಶ್ರೀಶಾ 9
--------------
ಜಗನ್ನಾಥದಾಸರು
ಪುರಂಜನೋಪಾಖ್ಯಾನ ಲಾವಣಿ ಗೆರಗಿ ಮಹೇಶ್ವರನಾ ಶಾರದೆಯ ಸರಸಿಜಸಂಭವನಾ | ಇಂದಿರೆ ಪರಮಭಕ್ತಿಯಲಿ ಪ್ರಾರ್ಥಿಸಿ ಸತ್ಕವಿ ಕರುಣಿಪುದು ಜ್ಞಾನ | ಚರಣಗಳಿಗೆ ಬಿನ್ನೈಸುವೆನಾ 1 ಯತಿಗಣಪ್ರಾಸೊಂದಾದರು ತಿಳಿಯದು ಮತಿಹೀನನು ನಾನು | ನಾನಾಚಮ- ತ್ಕøತಿಗಳರಿಯದವನು | ಆದರೀ ಕೃತಿಯಲಿ ತಪ್ಪೇನು | ಮತಿವಂತರಾಲಿಸುವುದು ನೀವಿದನು 2 ಒಂದರೊಳಗೆ ಎರಡಾಗಿ ಎರಡರೊಳು ಹೊಂದಿ ಮೂರ್ನಾಲ್ಕೈದಾಗಿ ಆರೇಳೆಂಟೊಂಬತ್ತುಗಳಾಗಿ | ಸಕಲದೊಳು ಹೊಂದಿರುವುದುತಾಗಿ ಕುಂದಿಲ್ಲದೆ ಇರುತಿರುವ ಮಹಾತ್ಮನ ರಂದವ ಚನ್ನಾಗಿ | ತಿಳಿದು ಸುಖ ತಂದವನೇಯೋಗಿ 3 ಮೊದಲು ಮಹತ್ ಸೃಷ್ಟಿಯಲಿ ಎಲ್ಲತ- ತ್ವದಲಿ ತೋರುತಿಹುದು ಬೇರೆಬೇರಾಗಿ ಕಾಣಿಸುವುದು ಅದುಭುತವಾಗಿಹ ಅನಾದಿ ಕರ್ಮತ್ರಿ- ವಿಧದಿ ಭಾದಿಸುವುದು | ಅದರೊಳು ಬಿ- ಡದೆ ತಾ ಮುತ್ತುವುದು ಎಂದಿಗು ನಿಜವತಿ ರಹಸ್ಯವಿದು 4 ಮೊಟ್ಟೆವೊಂದು ದಶಸಾವಿರವರುಷಗ ಳಿಟ್ಟು ಜಲದಿತಾನು | ಅದಕೆ ಕೈ- ಗೊಟ್ಟು ಎಬ್ಬಿಸಿದನು | ನಾನಾ ವಿಧ ವೆಷ್ಟಿ ಸಮಷ್ಟಿಗಳೆರಡೆಂದದರೊಳು ಗುಟ್ಟಂಗಡಿಸಿದನು | ಗುರಿಯಮಾ ಡಿಟ್ಟು ಚೇತನಗಳನು | ಅನೇಕವು ಪಟ್ಟಣ ರಚಿಸಿದನು 5 ಈ ಪಟ್ಟಣಕಾರ್ ಮಂದಿ ಇರುವರತಿ ಕಾಪಾಡುವರದರೊಳು ವ್ಯಾಪಾರಗಳನು | ಬಹುವಿಧಮಾಡುವ- ರಾಪುರ ಜನರುಗಳು | ಇವರುನಡೆ ಕೋಪಿಸೆ ಹಗಲಿರುಳು 6 ಎರಡು ಮಾರ್ಗದೊಳಿರುತಿಹರೆಲ್ಲರು ಹುರುಡಿಲ್ಲವುನೋಡೆ | ಗಜಿಬಿಜಿಯು ತರತರದಲಿಮಾಡೆ | ನಮಗಿದೆ ಸ್ಥಿರವೆನ್ನುತ ಕೂಡೆ | ಪರಿಪರಿ ಬಗೆಯಲಿ ಭೇದ ಪುಟ್ಟುವುದು ಕರೆಕರೆಯಂದುಡೆ | ವಳಗೆಕೆಲ ಬರುಹರುಷದಿ ನೋಡೆ | ಯುವಶೃಂ- ಗರುವು ಇದಕೆ ಈಡೆ 7 ಇದೆತನ್ನದೆನುತೋರ್ವಳು ಮಾನಿನಿ ಚದುರತನದಿ ಬಂದು | ಊರ ಮುಂದಿರುವ ವನದಿ ನಿಂದು | ಅವಳಿಗಿರು ವುದು ಜನ ಹನ್ನೊಂದು ಚದುರೆಯೈದುತಲೆ ಸರ್ಪವಾಡಿಸುತ ಜಾಣೆಯಿರುವಳಂದು | ತಾನೊಬ್ಬನ ಇಂದು | ಸುಖದೊಳಾ- ಳ್ಬೇಕುರಾಜ್ಯವೆಂದು 8 ಅರಸನೊಬ್ಬ ವಿಜ್ಞಾತನೆಂಬ ಭೂ- ಸುರನಸಹಿತನಾನಾ | ದೇಶಗಳ ತಿರುಗುತ ಉದ್ಯಾನ | ವನದಿಕಂ- ಡನು ಆತರುಣಿಯನ ಪರಮ ಮಿತ್ರನಹ ಬ್ರಾಹ್ಮಣನ ಮರೆತು ಹರುಷದಿ ಪೊಕ್ಕುವನ | ಸ್ಮರಶರಕೆ ತರಹರಿಸುತಲಿರೆ ಮನ | ಕೇಳಿದನು ನಗುತಲಿ ನಾರಿಯನ 9 ಯಾರೆ ಹುಡುಗಿ ನೀನ್ಯಾರೆ ನಿನ್ನ ಪೆಸ- ರೇನು ಪೇಳೆ ಹೆಣ್ಣೆ | ಮಾತನಾ- ಡೆಲೆ ತಾವರೆಗಣ್ಣೆ | ನಿನ್ನ ಮೈ- ಸುಲಿದ ಬಾಳೆಯ ಹಣ್ಣೆ ಯಾರದು ಈ ಜನ ಉರಗವೇನು ವನ- ವಾರದು ಶಶಿವದನೆ | ಈ ಪುರವ- ನಾಳುವನಾವವನೆ | ಒರ್ವಳಿ- ಲ್ಲಿರುವುದಕೇನ್ಹದನೆ 10 ಎನಲು ನಸುನಗುತವನಿತೆನುಡಿದಳೀ ಜನಗಳು ನನ್ನವರು | ಇಲ್ಲಿಕಾ- ಣುವ ಪುರ ನನ್ನೂರು | ಸರ್ಪನ- ನ್ನದು ಇದಕಿನ್ನಾರು | ಅರಸರಿಲ್ಲ ನಾನೊಬ್ಬಳಿರುವೆನೀ ವನದೊಳು ನೀನ್ಯಾರು | ನಿನ್ನಕಥೆ ವಿವರಿಸೆನಗೆ ತೋರು | ಯನ್ನ ಬಳಿ- ಗಿಷ್ಟವಿರಲುಸಾರು 11 ಎಲ್ಲಿ ನೋಡೆ ಸ್ಥಳವಿಲ್ಲವೆನಗೆ ನಿ- ನೆನ್ನ ಪುಷ್ಪಶರನು | ನೀನುಪೇ- ಪರಿ ವಲ್ಲಭನನು ಮಾಡಿಕೊ ಎನ್ನನು ಬಹು ಬಲ್ಲಿಯಳೆ ನೀನು | ನಿನ್ನಸರಿ ಚಲ್ವೆಯರಾರಿನ್ನು | ಇಬ್ಬ- ರಾಳ್ವೆಯೀವೂರನ್ನು 12 ಎನಲು ಹರುಷಗೊಂಡಾಕೆ ಸಮ್ಮತಿಸಿ ಜನವೆರಗಿತಂದು | ನುಡಿದಳಾಮೊಗದ- ಲಿನಗೆತಂದು | ನಿನ್ನಮೇಲ್ ಮನಸಾಯಿತುಯಿಂದು ನಿನ್ನನು ಮಾನವೇತಕಿಂದು | ಆಳು ಜನಸಹಿತ ಪುರವ ಮುಂದು ನೀನು ನಾನಿರುವೆವಾಗಿವಂದು 13 ಸರ್ವವನ್ನು ಭವದಿ ಆದರಿಸುತತತ್ಪುರ ಮಧ್ಯ | ದೊ ಳುಪ್ಪರಿಗೆಯೇರಿ ತ್ವರದಿ | ಸರ ಸಗಳನಾಡಿ | ಬಹುತರದಿ ಮುಳುಗಿ ಸಂಸಾರವೆಂಬಶರಧಿ 14 ಅನ್ನಪಾನಾಭರಣ ಕುಸುಮ ವಿನ್ನು ಗಂಧಧೂಪ | ತಾಂಬೂಲಗಳ ಮನ್ನಣೆಯಲಿ ಭೂಪ | ಪೊಂದಿದ ಸುಖ ವನು ನಾನಾರೂಪ | ನನ್ನದು ಎನ್ನುತಲಿ ಪ್ರತಾಪ | ಶಾಲಿತಾ- ರಾಜ್ಯವಾಳಿದನಾಗುತಭೂಪ 15 ದ್ವಾರಗಳೊಂಭತ್ತಾಪುರಕಿರುವುದು ಮೂರು ಪೂರ್ವದಲ್ಲಿ | ಮೇ- ಲೆರಡು ಕಿಟಕಿಗಳಿಹವಲ್ಲಿ | ಬಿಗಿಸಿ ಕಟ್ಟಿಹುದು ಕನ್ನಡಿಯಲಿ ತೋರುವುದುತ್ತರದಕ್ಷಿಣದೊಳೆರಡು ದ್ವಾರ ಪಶ್ಚಿಮದಲಿ ಕಾರಣವದರಲ್ಲಿ 16 ಮತ್ತದರೊಳಗಾರ್ಸುತ್ತು ಕೋಟೆ ಒಂ- ಬತ್ತು ಬಾಗಿಲ ಪುರದಿ | ಅನೇಕವು ಗೊತ್ತನಾವವಿಧವಿ | ಉತ್ತಮವಹಪುರದಿ | ಮುಖ್ಯವಾ- ಗಿರುವದೆರಡು ಬೀದಿ | ದೊರೆಯಮನೆ- ಯಿರುವುದು ವಿಸ್ತರದಿ17 ಇಂತರಮನೆಯಲಿ ದೊರೆ ಕಲಿಯಾಗುತ ಕಾಂತೆಯೊಡನೆ ಸೇರಿ | ಸದಾಸು- ಸ್ವಾಂತನಾಗಿಮೀರಿ | ಸೌಖ್ಯಹೊಂ- ದುತಲಾವೈಯ್ಯಾರಿ ನಿಂತರೆ ನಿಲುವನು ಕುಳಿತರೆ ಕೂಡುವ ಮಲಗಿದರೆ ನಾರಿ | ತಾನು ಮಲಗುವಯೇಕದಿ ಸೇರಿ | ಉಂಡ- ರುಣ್ಣುವನು ಅವಳನುಸಾರಿ 18 ಮನದಿಯೋಚಿಸದನೂ | ಈಗಲೆ ಮೃಗಯಾತ್ರೆಗೆತಾನೂ | ಸೊಗಸಿಂದ ಸೈನ್ಯವ ಕೂಡುತ ಪುಂ- ಚಪ್ರಸ್ಥವನವನು | ಪೊಕ್ಕು ಅ- ಲ್ಲಿರುವಮೃಗಗಳನ್ನು | ಹೊಡೆದು ಸಂ- ತೋಷದಿ ಸುಖಿಸುವೆನು 19 ಮೂರೆರಡು ಕುದುರೆಯೈದು ಮೇಲ್ ಮೂರು ಪತಾಕಿಗಳು | ಅ- ಚ್ಚೆರಡು ಎರಡು ಕೂಬರಗಳು | ಚಕ್ರ ವೆರಡುವರೂಥಗಳೇಳು ಆರಥಕೊಪ್ಪುವದೇ- ಕರಶ್ಮಿನಾಲ್ಕೊಂದು ವಿಕ್ರಮಗಳು | ಒಬ್ಬ ಸಾರಥಿ ಎರಡು ಗತಿಗಳು | ಬಿಗಿಸಿಹುದು ಕನಕಭೂಷಣಗಳು 20 ಪುರಂಜನ ಭೂ- ಕಾಂತಕರದಿ ಧನುವ | ಪಿಡಿದುಸು- ಸ್ವಾಮತದಿಂದಲನುವಾ | ಗಿಬಹ ಹನ್ನೊಂ- ದು ತನ್ನ ಜನನ | ಸಂತಸದಲಿ ಕೂ- ಡುತ ಹೊರಡುತ ತಾ ಪೊಕ್ಕನು ಕಾನನವಾ | ಶರಗಳಿಂ- ದ್ಹೊಡದು ಮೃಗನಿವಹವಾ | ಮೇರೆಯಿಲ್ಲ- ದೆ ತಟ್ಟುತ ಭುಜವಾ 21 ಇನಿತು ಬೇಟೆಯಾಡುವ ಕಾಲದಿ ತನ್ನ ಮನದಿ ನೆನೆದು ಸತಿಯಾ | ತಕ್ಷಣವೇ ಬಂದು ಸೇರಿ ಮನೆಯ | ಕಾಣದೆ ಹುಡುಕಿದನು ಯುವತಿಯ ಮಂಚದೊಳಿಹ ಸತಿಯ | ಕಂಡುಲಾ- ಲಿಸುತ ಚಮತ್ಕøತಿಯಾ | ನುಡಿಯಲುಪ- ಚರಿಸಿದನಾಕಾಂತೆಯ 22 ನೂರುವರುಷವೀರೀತಿಯವಳೊಡನೆ ನೂರುಹನ್ನೊಂದು ಮಕ್ಕಳನ್ನು | ಪಡೆದು ಸಂ- ಸಾರದಿ ಕಾಲವನು | ಯಾರೆ- ಮೀರಿ ಹೋದುದಿನ್ನು | ಮೊಮ್ಮಕ್ಕಳ ಪಡೆದನನೇಕರನು ದೇಶತುಂಬಿಸಿದ ತನ್ನ | ವರನು 23 ಉತ್ತರ ದಕ್ಷಿಣ ಪಾಂಚಾಲಗಳಾ ಳುತ್ತಲಿವನು ತನ್ನ | ಸುತರಬೆರೆ- ಯುತ್ತಸದಾ ಚಿನ್ನ | ಬೆಳ್ಳಿ ನವ- ರತ್ನರಾಶಿಗಳನಾ | ಮತ್ತೆ ಮತ್ತೆ ಕೂಡಿ- ಸುತೈಶ್ವರ್ಯದಿ ಮತ್ತನಾ | ಗುತಲನ್ಯಾ ಚಿಂತೆಯಿಲ್ಲದೆ ನಾ | ಬಲು ಪುಣ್ಯವಂತನೆ | ನ್ನುತ್ತತಿಳಿದಿರುವನಾ 24 ಚಂಡವೇಗವೆಂಬುವರಾ ತಮ್ಮತಮ್ಮ ಹೆಂಡಿರುಗಳು ತಾವು | ಸೇರಿಮು- ನ್ನೂರರವತ್ತು ಜನವು | ಗಂಧರ್ವರು ಬಂಡೆಬ್ಬಿಸಿ ಪುರವು | ದಂಡು ಮುಂದಾಗೆ ರಿಪುಬಲವು | ಕ್ಷೀಣಗತಿ ಹೊಂದುತಲಿರೆ ಪುರವು 25 ಸ್ತ್ರೀಜಿತನಾಗಿಹಕಾರಣದಲಿಯಾ ರಾಜಪುರಂಜನಗೆ | ಯತ್ನವಿ- ಲ್ಲದೆ ತನ್ನಯಪುರಿಗೆ | ಕೇಡುಬಂ- ದರು ತೋರದು ಕೊನೆಗೆ | ಶೋಕದಿ ಮನದೊಳಗೆ | ಮಿ ಡುಕುತಲಿರಲಾನೃಪತಿಮೇಗೆ | ಮತ್ತು ಶತ್ರುಗಳುನೆರೆಯೆ ಹೀಗೆ 26 ಯವನೇಶ್ವರನೊಬ್ಬನುಭಯಪ್ರಜ್ವಾ ರಾದಿ ಸೈನಿಕರನು | ಕಾಲಕನ್ಯಾಖ್ಯ ಯುವತಿಯನ್ನು | ಕರೆದುಕೊಂ- ಡೀಪುರವ ಸೇರಿದನು | ಬವರದಿ ಗೆದ್ದನು ಭವಿಸಿದನಾ ಕನ್ಯಾಮಣಿಪಟ್ಣವನು | ಭೋಗಿಸಿದ- ಳಾಪ್ರಜ್ವಾರನನು | ಸುಡಲುಪುರಿ ಕಂಡು ಪುರಂಜನನು 27 ಕಾಲಕನ್ಯೆ ತಾ ಲೀಲೆಯಿಂದಲಿ ನೃ- ಪಾಲನ ಹತ್ತಿಗೆಯಾ | ಪಿಡಿಯೆ ಹಾ- ಹಾಯೆನಲಾರಾಯಾ | ಅಬಲತೋ- ರದು ಮುಂದೆ ಉಪಾಯ | ಬಾಲಕರನು ಪತ್ನಿಯ | ನುಕೂಗಿಬಿಡು-
--------------
ಗುರುರಾಮವಿಠಲ
ಬರಿದೆ ಮೋಹದೊಳು ಬೆರೆದೆ ನಮ್ಮ ಗುರುವಾದಿರಾಜಾರ್ಯ ಚರಣಗಳ ಮರೆದೆ ಪ. ಸರ್ವಜ್ಞಗುರುಮತವ ನಿರ್ವಹಿಸಿ ಮಾಯಿಗಳ ಗಣಪತಿಶಕ್ತಿ ಪೂರ್ವದೇವತೆಗಳನು ಸರ್ವ ಪರರೆಂದೊರೆವ ದುರ್ವಾದಿಗಳ ಭಂಗಿಸಿ ಹಯವದನ- ಪರ ದೈವವೆನಿಸಿ ಮೆರೆವಂಥ ಪಾರ್ವತೀವರವಂದ್ಯಪದ ಪಾತ್ರನೆನಿಸದೆ 1 ಅಂತರ್ಬಹಿಃಶತ್ರು ಸಂತತಿಯ ಗೆಲುವ ತೋರಿಸುವ ಚಂತಿತಾಭೀಷ್ಟಗಳ ಪರಮಾಂತರಂಗದಿ ಕೊಡುವ ಕಂತುಕೃತ ಬಾಧೆಯನ್ನು ನಿಲದಂತೆ ಸಂತೈಸಿಸುವರನ್ನು ಕಾವ ಕ- ಲ್ಪಾಂತದಲಿ ಪವಮಾನನಾಗುವನ ಮರೆದೆ 2 ಮೂರಾರು ಎಂಬತ್ತು ಭಾರಿ ಕಲ್ಪಗಳಲ್ಲಿ ಶ್ರೀ ರಮಾರಮಣಪದ ವಾರಿಜಗಳನು ಭಜಿಸಿ ತೋರಿ ವೈಷ್ಣವ ತತ್ವ ಸಾರವನು ಸಮಧರಿಸಿ ಮಾರುತನ ಮತವೆ ಮಧುವೈರಿಪ್ರಿಯಕರವೆನಿಸಿ ಧೀರ ಕವಿ ಶುಭಕರವಜ್ಞಾನ ಸುಖ ಸಾರ ವೆಂಕಟಪತಿಯ ಮನದಿ ಧರಿಸಿರುವ 3
--------------
ತುಪಾಕಿ ವೆಂಕಟರಮಣಾಚಾರ್ಯ
ಬಲ್ಲೆ ಬಲ್ಲೆನು ಕೃಷ್ಣ ನಿನ್ನ ಮಹಿಮೇ ಪ ಗುಲ್ಲು ಮಾಡದೆ ಬೇಗ ನಿಲ್ಲೈಯ ಮನದಲಿ ಅ.ಪ ತಿರುಪೆ ಬೇಡಿದೆ ಯಾಕೆ ಪರಮ ಪುರುಷನು ಎನಿಸಿ ತುರುವ ಕಾಯ್ದೇಕೆ ಪರಿವಾರ ಸುರರಿರಲು ಕರಡಿಕಪಿಗಳ ಸೈನ್ಯ ನೆರವು ಯಾತಕೆ ನಿನಗೆ ಚರಿತೆ ಸೋಜಿಗವಯ್ಯಾ 1 ಅಷ್ಟಕರ್ತನಿಗೇಕೆ ಸಂತತವು ಜಪತಪವು ಪಟ್ಟ ಮಹಿಷಿಯರಿರಲು ಕುಬ್ಜೆಕೂಡಿದೆ ಯಾಕೆ ಉಟ್ಟು ಸೀರೆಯ ಖಳರ ವಂಚಿಸಿದ ಬಹು ಶೂರ ನಿಷ್ಟೆಯಿಂದಲಿ ಬಲಿಯ ಬಾಗಿಲನು ಕಾಯುವನೆ 2 ಬೆಣ್ಣೆ ಕಳ್ಳರ ಗುರುವೆ ಹೆಣ್ಣು ಕದ್ದವ ನೀನು ಮಣ್ಣು ಮಾಡಿದೆ ಕುಲವ ಯೆಂಜಲುಂಡವ ದೊರೆಯೆ ಅಣ್ಣ ತಮ್ಮಂದಿರಲಿ ಕಲಹವನು ವÀಡ್ಡುತಲಿ ನುಣ್ಣ ಗೆಲ್ಲರ ಮಾಡಿ ನಿಷ್ಕಪಟಿಯೆನಿಸಿದೆಯೊ 3 ಅನ್ಯರಿಗೆ ಉಪಕಾರಿ ಅನನ್ಯರಾ ಶತ್ರುವು ಭವ ಭ್ರಷ್ಟತ್ವ ನೀಡುವೆಯೊ ನಿನ್ನಾಳ ನಿಖಿಳರಿಗು ತೊರ್ಗೊಡದ ಬಹುಗೂಢ ಕಣ್ಣು ಕೈ ಕಾಲೆಲ್ಲ ಸಮವೇನೆ ನಿನಗಯ್ಯ 4 ದೊಡ್ಡ ದೇವನು ಎನಿಸಿ ಗುಡ್ಡವೇತಕೆ ಹೊಕ್ಕೆ ಗಿಡ್ಡರೂಪವ ತೋರಿ ದೊಡ್ಡದಾಗುತ ಎಂದು ಅಡ್ಡಿಯಿಲ್ಲದೆ ಬಲಿಯ ಹೆಡ್ಡನೆನಿಸಲು ಬಹುದೆ ಗುಡ್ಡೆಯಿಲ್ಲದೆ ಚರಿಪ ವಡಲು ಬಗೆದಾ ಘೋರ 5 ಪೂಡವಿಗೊಡೆಯನು ಎನಿಸಿ ಹಡೆದ ಮಾತೆಯ ಕಡಿದೆ ಅಡವಿ ಬೇರನು ತಿಂದೆ ಕಡಲೊಳಗೆ ಸಂಚರಿಪೆ ಮಡದಿಯನು ಕಳಕೊಂಡು ಹುಡುಕುತಲಿ ತಿರುಗಿದೆಯೋ ಸಡಗರದಿ ಹಯವೇರಿ ಕೆಡುಕು ಕಡಿಯುವೆಯಂತೆ 6 ನಾಮಕುಲಗೋತ್ರಗಳ ನೆಲೆಯಕಂಡವರಿಲ್ಲ ಸಾಮಸರಿ ನಿರ್ಗುಣವು ಪೂರ್ಣಗುಣ ನೀನಂತೆ ವಾಮನೀನಾವರಿಸಿ ವಳ ಹೊರಗೆ ಲೋಕಗಳ ನೇಮದಿಂ ಕಾಯುವನು ಪುಡುಕಿದರು ಸಿಗೆಯೇಕೇ 7 ಮಂಗಳಾಂಗನು ಅಂತೆ ಲಿಂಗವರ್ಜಿತನಂತೆ ಶೃಂಗಾರರಸನಂತೆ ಭಂಗರಹಿತನು ಅಂತೆ ಲಿಂಗವೆರಡೂ ಅಂತೆ ಸಿಸ್ಸಂಗ ನೀನಾಗಿ ಅಂಗದಲಿ ಅಂಗನೆಯ ಧರಿಸಿ ಮೆರೆಯುವೆಯೇಕೆ 8 ವೇದ ಬೋಧೆಯನಿತ್ತಗಾಧ ವರ್ಜಿತ ಮಹಿಮ ಮೋದ ಮಯ ನೀ ನಿನ್ನ ನಾದಿನಿಯ ಬೆರೆದೇಕೆ ಸಾಧುಗುಣಪೂರ್ಣ ಭಾನುವನು ಮರೆ ಮಾಡಿ ಮೈದುನನ ಸಲಹಿದ್ದು ಬಹುನ್ಯಾಯ ವೇನೈಯ್ಯ 9 ಹಾಲು ಕೊಟ್ಟವಳನ್ನು ಲೀಲೆಯಿಂದಲಿ ಕೊಂದೆ ಶೀಲಸತಿಯಳ ಬೆರದು ವ್ರತವಳಿದು ಪರವಿತ್ತೆ ಕಾಲನಾಮಕನಾಗಿ ಜಗವೆಲ್ಲ ನುಂಗುವನೆ ಹೇಳುವರು ಕೇಳುವರು ನಿನಗಿಲ್ಲವೇನೈಯ್ಯಾ 10 ಏನೆಂದು ವರ್ಣಿಸಲಿ ನಿನ್ನಯ ವಗತನವ ಸತಿ ಚಂಚಲೆಯು ಮಗಳ ಮಾರ್ಗವುಡೊಂಕು ಮಾನಾಭಿಮಾನಗಳ ಬಿಟ್ಟವರೆ ಪರಿವಾರ ನೀನಿರದಠಾವಿಲ್ಲ ನಿನಗಿಲ್ಲ ತುದಿಮೊದಲು 11 ಸರ್ವಜ್ಞನಾದವಗೆ ಸಾಂದೀಪ ಗುರುವೇಕೆ ಸರ್ವ ನಾಮವು ಕೂಡೆ ನಾಮಕರಣವು ಏಕೆ ಸರ್ವಸ್ವಾಮಿಯು ಎನಿಸಿ ಸಾರಥಿಯು ಆದೇಕೆ ಸರ್ವ ತೋಮುಖ ನೀನು ಜಗವಿಲಕ್ಷಣ ನೈಯ್ಯಾ12 ಒಬ್ಬರಲಿ ನೀಜನಿಸಿ ಮತ್ತೊಬ್ಬರಲಿ ನೀ ಬೆಳೆದೆ ತಬ್ಬಲಿಯೆ ವಾಸ್ತವದಿ ಉಬ್ಬಿಳಿತವರ್ಜಿತವೆ ಅಬ್ಬಬ್ಬ ಬ್ರಹ್ಮಾಂಡ ಹಬ್ಬಿ ನಡೆಸುವ ಧೀರ ಕೊಬ್ಬಿದಾ ಖಳಗಂಜಿ ಮಧುರೆಯನು ತೊರೆದೇಕೊ 13 ಮೇದಿನಿಗೆ ನೀ ಸ್ವಾಮಿ ಮದುವಾದೆ ಮಗಳನ್ನು ಬೈದವಗೆ ಗತಿಯಿತ್ತೆ ಭಕ್ತರಿಗೆ ಕೂಳಿಲ್ಲ ಮೋದ ಮಯ ನುಂಡುಣಿಸಿ ನಿರ್ಲೇಪನೀ ನಿರ್ಪೆ ವಿದುರ ನೌತಣ ಕೊಂಡೆ ಕನ್ಯೆಯಲಿ ನೀ ಬಂದೆ 14 ಜಯ ಮುನಿ ಹೃದಯದಲಿ ವಾಯುವಿನಂತರ ದಿರ್ಪ ಶ್ರೀಯರಸ ತಾಂಡವ ಕೃಷ್ಣವಿಠಲನೆ ನೀನು ಮಾಯಾವಿ ತೋರಗೊಡೆ ನಿಜಮರ್ಮಖಳಜನಕೆ ಜೀಯನೆ ಮೊರೆಹೊಕ್ಕೆ ನಿನ್ನಿರವ ತೋರೈಯ್ಯಾ 15
--------------
ಕೃಷ್ಣವಿಠಲದಾಸರು
ಬಾಳು ಬಾಳು ಹರಿ ಪೂಜಾಲೋಲುಪÁಳೊ ಬಾಳೊ ಮುನಿವಾದಿರಾಜಬಾಳೆಂದಕ್ಷತಿನಿಟ್ಟು ದೇವಕ್ಕಳೆಲ್ಲಬಲು ಕೃಪೆಯಲಿ ಹರಸಿದರೊಪ. ಮಕ್ಕಳ ಮ್ಯಾಲೆಂದೆಂದು ಬಲುಅಕ್ಕರುಳ್ಳ ತಾಯಿ ಬಳಗಅಕ್ಷತಿನಿಕ್ಕಿ ಹರಸುವಂದದಿ ದೇ-ವಕ್ಕಳೆನ್ನ ಹರಸಿದರೊ 1 ಸಾಲಿಗ್ರಾಮ ತೀರ್ಥವನು ಮ್ಯಾಲೆಫಲವೀವ ಕ್ಷೇತ್ರವನುಕಾಲಕಾಲದಿ ಹರಿಸ್ಮರಣೆಯ ಬಿಡದಿರುಕೀಳು ಭವವೆಂಬ ಶತ್ರುವನು 2 ತುಲಸಿ ಪದ್ಮಾಕ್ಷಿಯ ಸರವ ನಿನ್ನಕೊರಳ ರವದಲ್ಲಿ ಮೆರೆವಅಲಸದೆ ಹರಿವಾಸರವನೆ ಬಿಡದಿರುಸುಲಭದಿ ಹರಿ ನಿನ್ನ ಪೊರೆವ 3 ಭ್ರಾಮಕರೊಡನಾಡದಿರು ಕಂಡಕಾಮಿನಿಯರ ಕೂಡದಿರುನೇಮನಿಷ್ಠೆಗಳನ್ನು ಬಿಡದಿರು ಎಂದೆಂದುತಾಮಸನಾಗಿ ಕೆಡದಿರು 4 ಹಯವದನಗೆ ನಮಿಸುತಿರು ನಿ-ರ್ಣಯದ ಶ್ರುತಿಯಸೇವಿಸುತಿರುಪ್ರಿಯ ಪುರಾಣಗಳ ಕೇಳುತಿರು ನಿ-ರ್ಭಯದಿಂದವನ ಪೊಗಳುತಿರು 5 ಹರಿಭಕುತರೊಳೆಂದೆಂದಾಡಿರೊ ನರ-ಹರಿಯ ನಾಮಗಳನು ಪಾಡಿರೊ ಹರಿ ಅರ್ಚನೆಯನು ಮಾಡಿರೊ ಶ್ರೀಹರಿಯ ಮೂರುತಿಯನು ನೋಡಿರೊ 6 ದೂರಕ್ಕೆ ದೂರನು ದಾವನ ಹ-ತ್ತಿರ ಬಂದ ಭಕುತರ ಕಾವನಆರಾಧಿಸಲು ಫಲವೀವನ ಹ-ತ್ತಿರ ಸೇರುವ ಭಾವ ದಾವನ 7 ಕಾಮದೇವನ ಪೆತ್ತ ಕರುಣಿಯ ಸುತ್ತಸೇವಿಪರಘತಮ ತರಣಿಯ- - - - - - - - - - -- - - - - - - - - - -8 ಜಯಿಸಿ ಕಂಸನೆಂಬ ಮಾವನ ಆಶಯವಿತ್ತು ಭಕುತ ಸಂಜೀವನಹಯವದನನಾಗಿ ಪಾವನ ಶ್ರು-ತಿಯ ತಂದ ದೇವರದೇವನ9
--------------
ವಾದಿರಾಜ
ಬೂದಿ ಮುಚ್ಚಿದ ಕೆಂಡದಂತಿಪ್ಪರು ಪ ಈ ಧರೆಯ ಮೇಲೆ ಶ್ರೀ ಹರಿಭಕ್ತ ಜನರು ಅ.ಪ ಅಂಗ ನೋಡಲು ಅಷ್ಟಾವಕ್ರವಾಗಿಪ್ಪರು ಕಂಗಳಿಂದಲಿ ನೋಡೆ ಘೋರತರರು ಮಂಗಳಾಂಗನ ಅಂತರಂಗದಲಿ ಭಜಿಸುತ್ತ ಹಿಂಗದೆ ಸಂತಜನ ಸಂಗದೊಳಗಿಹರು 1 ನಾಡ ಜನರುಗಳಂತೆ ನಡೆಯರು ನುಡಿಯರು ಕೂಡರು ಕುಟಿಲಜನ ಸಂಘದಲ್ಲಿ ಒಡಲು ತುಂಬಿಸಿಕೊಳರು ರೂಢಿಯೊಳಗೆಂದೆಂದು ಗೂಢವಾಗಿಹರು2 ಡಂಭಕತನದಿಂದ ಗೊಂಬೆನೆರಹಿಕೊಂಡು ಡೊಂಬ ಕುಣಿದಂತೆ ಕುಣಿದಾಡರು ಹಂಬಲಂಗಳ ಬಿಟ್ಟು ಹರುಷವುಳ್ಳವರಾಗಿ ಬಿಂಬ ಮೂರುತಿಯನ್ನು ಕೊಂಡಾಡುತಿಹರು 3 ಶತ್ರು ಮಿತ್ರರುಗಳ ಸಮನಾಗಿ ಎಣಿಸುವರು ಪುತ್ರ ಮಿತ್ರ ಭ್ರಾತೃಗಳ ನೆಚ್ಚರು ಯಾತ್ರೆ ತೀರ್ಥಂಗಳಿಗೆ ಹೋಗುತ್ತ ಶ್ರೀ ಹರಿಯ ಸ್ತೋತ್ರಗಳ ಮಾಡಿ ಸಾಧನೆ ಮಾಡಿಕೊಂಬುವರು 4 ಕಷ್ಟ ಸೌಖ್ಯಂಗಳನು ಕಲಿವರದಗರ್ಪಿಪರು ಇಟ್ಟುಕೊಟ್ಟಿದ್ದನ್ನ ಹರಿಕೊಟ್ಟನೆಂಬುವರು ಸಿರಿ ವಿಜಯವಿಠ್ಠಲನ ಪದಪದ್ಮಾ ಮುಟ್ಟಿ ಭಜಿಸಿ ಮುಕ್ತ ಸಾಮಾಜ್ರ್ಯ ಪಡೆಯುವರು5
--------------
ವಿಜಯದಾಸ
ಬೆಳಗಿ ಆರತಿಯನೀಗ ಭಾಗ್ಯದಂಬಗೆ ಮುಂದೆಸುಳಿದು ಆರತಿಯನೆತ್ತಿ ಶೂರೆ ಅಂಬಗೆ ಪ ಮುತ್ತಿನೋಲೆ ಮೂಗುತಿಯ ಧರಿಸಿದಂಬಗೆಕತ್ತಿಯನ್ನು ಹಿಡಿದಿರುವ ಶೂರೆ ಅಂಬಗೆ 1 ಪದಕ ಕುಂಡಲಧಾರಿ ಪೂರ್ಣೆ ಅಂಬಗೆಬೆದರದಲೆ ಶತ್ರುಗಳನು ಕೊಂದ ಅಂಬಗೆ2 ಶರಣರ ದ್ವಾರ ಕಾಯುತಲಿಹ ವೀರೆ ಅಂಬಗೆಶರಧಿ ಕರುಣಿ ಚಿದಾನಂದ ಬಗಳಾಮುಖಿ ಅಂಬಗೆ 3
--------------
ಚಿದಾನಂದ ಅವಧೂತರು
ಭಕುತರ ಸಂರಕ್ಷಣಾ ನಾರಾಯಣ ಪ ಖಗಪನ ಸ್ಕಂದರೋಹ ಅಘದೂರ ಅಭಯಹಸ್ತ ಸ್ವಗತಭೇದಶೂನ್ಯ ಸರ್ವಾವಸ್ಥೆಯೊಳೆನ್ನ ವಿಗತಕ್ಲೇಶನ ಮಾಡಿ ಸತತಕಾಪಾಡಲಿ ನಿಗಮವಿನುತ ಜಗದಾದಿ ವಂದ್ಯನೆ ದೇವಾ 1 ವರುಣಪಾಶಗಳಿಂ ಜಲಚರಜಂತುಗಳಿಂ ಮತ್ಸ್ಯ ಮೂರುತಿ ತಾ ರಕ್ಷಕನಾಗಿರಲಿ ಧಾರುಣಿ ನೆಲದೊಳು ಶ್ರೀ ವಾಮನ ಕಾಯಲಿ ಸರ್ವಾಕಾಶದೊಳು ತ್ರಿವಿಕ್ರಮ ಕಾಯಲಿ2 ದುರ್ಗರಣಾಗ್ರವನ ಅರಿವರ್ಗಗಳಲಿ ನರಹರಿದೇವ ಸಂರಕ್ಷಕನಾಗಿರಲಿ ಮಾರ್ಗಗಳಲ್ಲಿ ಹಿರಣ್ಯಾಕ್ಷ ವೈರಿಯು ಕಾಯಲಿ ದುರ್ಗಮಶೈಲದೊಳು ಶ್ರೀ ಭಾರ್ಗವ ರಕ್ಷಿಸಲಿ 3 ದಾಶರಥಿ ಪ್ರವಾಸದಲಿ ನಿತ್ಯ ದೇಶಾಂತರಗಳಲ್ಲಿದ್ದರು ಕಾಯಲಿ ಈಶ ಶ್ರೀಮನ್ನಾರಾಯಣ ಎನ್ನ ಕ್ರೂರ ಕರ್ಮಗಳಿಂದ ರಕ್ಷಿಸಲನುದಿನ ನರಾವತಾರ ಎನ್ನ ಗರುವಿನಿಂ ರಕ್ಷಿಸಲಿ 4 ವಿರೋಧಿವರ್ಗದಿ ದತ್ತಾತ್ರೇಯ ಕಾಯಲಿ ಸರ್ವಕರ್ಮಬಂಧಜ್ಞಾನದಿಂದ ಕಪಿಲಾ ಮೂರುತಿ ರಕ್ಷಿಸಲಿ ಅನುದಿನದಲಿ ಎನ್ನ ಸನತ್ಕೂ- ಮಾರನು ಎನ್ನ ಕಾಯಲಿ ಕಾಮದಲ್ಲಿ 5 ದಾನವ ಮಧುಕೈಟಭ ಹರೆ ಹಯವದನ ಘನ್ನಪರಾಧದಿ ರಕ್ಷಕನಾಗಿರಲಿ ಮನ್ನಿಸಿ ದೇವತೆಗಳು ಸಾಧನವೀಯಲಿ ಸನ್ನುತಾಂಗ ಧನ್ವಂತ್ರಿಮೂರುತಿ ಹರಿ ಎನ್ನ ರಕ್ಷಕನಾಗಿರಲಿ ರುಜೆಯೊಳು6 ಜ್ಞಾನರೂಪಿ ವೃಷಭ ಸೀತಾತಪದಿಂದ ಎ- ನ್ನನುದಿನ ಈ ದ್ವಂದ್ವÀದಿ ಕಾಯಲಿ ಯಜ್ಞಮೂರುತಿ ಲೋಕಾಪವಾದದಿ ಕಾಯಲಿ ಸುಜ್ಞಬಲರಾಮನು ದುರ್ಜನರ ಭಯದಿಂ ಅನುದಿನ ರಕ್ಷಿಸಲಿ 7 ಘನ್ನಮಹಿಮ ಶೇಷ ಸರ್ಪಬಾಧೆಗಳಿಂದ ಜ್ಞಾನದಾತೃ ಹರಿಸೇವೆಗೆ ಬರುತಿಹ ನಾನಾ ವಿಘ್ನಗಳಿಂದ ರಕ್ಷಿಸುತಿರಲಿ ಘನ್ನ ಮ- ಹಾ ನರಕ ಬಾಧೆಯಿಂ ತಪ್ಪಿಸಲಿ ಕೂರ್ಮಮೂರುತಿ ಕಾಪಾಡಲಿ ನಿತ್ಯದಿ 8 ವೇದವ್ಯಾಸನು ಶುಧ್ಧಜ್ಞಾನವನೀಯಲಿ ಬುದ್ಧಿಮೋಹದಿಂದ ಬುದ್ಧನುದ್ಧÀ್ದರಿಸಲಿ ಹೃದಯದ ಕಲಿಭಾಧೆ ಕಲ್ಕಿ ತಾ ಹರಿಸಲಿ 9 ಉದಯಕಾಲದಿ ಶ್ರೀ ಕೇಶವ ರಕ್ಷಿಸಲಿ ವೇಣು ಹಸ್ತ ಗೋವಿಂದ ಸಂಗಮದಲ್ಲಿ ಪೂರ್ಣಕರುಣೆ ಯಿಂದ ಎನ್ನ ಕಾಪಾಡಲಿ ಪೂರ್ವಾಹ್ನದಲಿ ನಾರಾಯಣ ರಕ್ಷಿಸಲಿ10 ಮಾಧವ ಅಪ ರಾಹ್ನದಲೆನ್ನ ರಕ್ಷಿಸಲಿ ಬಾಧೆಯಿಂ ಸಾಯಂಕಾಲದಿ ರಕ್ಷಿಸಲಿ 11 ಪ್ರದೋಷದಲಿ ಹೃಷೀಕೇಶ ರಕ್ಷಿಸಲೆನ್ನ ಪದುಮನಾಭ ಅರ್ಧರಾತ್ರಿಯಲಿ ಸಲಹಲಿ ಶ್ರೀಧರನೆನ್ನಪರಾತ್ರಿಯಲಿ ಸಲಹಲಿ12 ಜನಾದರ್Àನನು ಎನ್ನನು ಉಷಃಕಾಲದಲಿ ಸಂಧ್ಯಾಕಾಲದಿ ದಾಮೋದರ ರಕ್ಷಿಸಲಿ ಕಾಲನಾಮಕ ಬೆಳಗಿನಝಾವದಿ ಕಾಯಲಿ 13 ನಕ್ರನ ಹರಿಸಿದ ಚಕ್ರಾಯುಧವು ಎನ್ನ ಶತ್ರುಬಾಧೆಗಳಿಂದ ರಕ್ಷಿಸುತಿರಲಿ ವಿಕ್ರಮಗದೆಯು ಆಶ್ರಿತರುಪದ್ರದು- ಅನುದಿನ 14 ಪ್ರಮಥ ಭೂತ ಪಿಶಾಚ ಪ್ರೇತ ಭಯದಿ ಪಾಂಚಜನ್ಯ ಶಂಖರಾಜ ರಕ್ಷಿಸಲಿ ದುಮ್ಮನ ಶತ್ರು ಬಾಧೆಗಳಿಂದ ಖಡ್ಗವು ಖೇಟವು ಸರ್ವ ಅನಿಷ್ಟದಿಂ ರಕ್ಷಿಸಲಿ 15 ಅವನ ನಾಮರೂಪ ದಿವ್ಯಾಯುಧದ ಸ್ಮರಣೆ ಸರ್ವ ಬಂಧಗಳೆಲ್ಲ ತಕ್ಷಣದಲ್ಲಿ ನಿವಾರಣೆಯಾಗಿ ನಿವೃತ್ತಿಮಾರ್ಗಕ್ಕೆ ಶುಧ್ಧಭಾವ ಭಕುತಿಗೆ ಕಾರಣವು ಸತ್ಯ ಗರುಡ ವಿಷ್ಟಕ್ಸೇನ ಕಷ್ಟದಿಂದ ರಕ್ಷಿಸಲಿ 16 ಹರಿಯ ವಾಹನಾದಿಗಳು ವಿಪತ್ತುಗಳ ಹರಿಸಲಿ ಸರ್ವರಂತರ್ಯಾಮಿ ನಿನ್ನ ನಂಬಿರಲು ಸರ್ವಭಾಧೆಗಳಲ್ಲ ಪರಿಹಾರವಾಗಲಿ 17 ಕಾಲ ಸರ್ವಾವಸ್ಥೆಯೊಳೆನ್ನ ಸರ್ವೋತ್ತಮ ದೇವ ಸರ್ವದಾ ರಕ್ಷಿಸಲಿ ಸರ್ವರೊಡೆಯ ಶ್ರೀಮನ್ನಾರಾಯಣ ನಿನ್ನ ಕರುಣ ಕವಚವು ಎನಗಿರಲನುದಿನ 18 ಬಹಿರಾಂತರದಿ ಮೇಲ್ ಕೆಳಗು ಮಧ್ಯದಲ್ಲಿ ದಿಕ್ಕುವಿದಿಕ್ಕಿನೊಳು ಉರಗಾದ್ರಿವಾಸವಿಠಲ ಸ್ವಾಮಿ 19
--------------
ಉರಗಾದ್ರಿವಾಸವಿಠಲದಾಸರು
ಭಾರತೀಶನ ಸೇರಿರೋ ಭವವಾರಿಧಿ ದಾಟುವರೆ ಸಾರ ತೋರುವ ಪ. ತುಂಗ ವಿಷಯಾಂಗಜನಿತೋತ್ತುಂಗ ತರಂಗದೊಳು ಅಂಗಜಾತ ತಿಮಿಂಗಿಲನು ತಾನುಂಗುವ ನಿಮಿಷದೊಳು ಮಂಗಳಾತ್ಮಕ ಮಾರುತನ ಸದಪಾಂಗಲೇಶವನೈದೆ ಸುಲಭದಿ ರಂಗನಿರವನು ತೋರಿ ಸಲಹುವ 1 ತ್ರೇತೆಯೊಳಗಿನ ಜಾತನಿಗೆ ರಘುನಾಥನ ತೋರಿಸಿದ ಕಾತುರದ ಪುರಹೂತನನು ಯದುನಾಥನಿಗೊಪ್ಪಿಸಿದಾ ಭೂತನಾಥನ ವಾಕ್ಯಬಲದಿಂದಾತ್ಮ ಜೀರಿಗೈಕ್ಯಪೇಳುವ ಪಾತಕಿಗಳನು ಗೆದ್ದು ತ್ರಿಜಗನ್ನಾಥ ಮುತ್ತಿದನೆಂದು ಮೆರಸಿದಿ 2 ಸೂತ್ರನಾಮಕ ಪ್ರಣವನಾಯಕ ಕ್ಷತ್ರಪುರದೊಳಿರುವಾ ಶತ್ರುತಾಪನ ಶೇಷಗಿರಿ ಪತಿಪುತ್ರನೆನಿಸಿ ಮೆರೆವಾ ಚಿತ್ರಕರ್ಮ ಚಿರಂತನಾಣುಗ ಪುತ್ರಮಿತ್ರಕಳತ್ರ ಭಾಗ್ಯದ ನೇತ್ರ ವಿಷಯ ಪರತ್ರ ರಕ್ಷಕ ಧಾತ್ರಪದಸತ್ಪಾತ್ರನೆನಿಸುವ 3
--------------
ತುಪಾಕಿ ವೆಂಕಟರಮಣಾಚಾರ್ಯ
ಭಿಕ್ಷಾಂ ದೇಹಿಮೇ ಸ್ವಾಮಿನ್ ಕುಕ್ಷಿಯು ತುಂಬುವ ತೆರದಲಿ ಭಕ್ತಿಯ ಪ ಭಿಕ್ಷೆಯ ಬೇಡಲು ಶಿಕ್ಷಿತನಲ್ಲವೊ ಕುಕ್ಷಿಯು ಬರಿದಾಗಿಹುದು ಭಕ್ತಿಯ ಅ.ಪ ಆರುಮಂದಿ ಶತ್ರುಗಳಿರುವರು ಬಲು ಕ್ರೂರರಿವರು ಎನ್ನನು ಬಿಡರೊ ದೂರ ಕಳುಹಲಾಹಾರವು ಸಾಲದು ಶಮ ದಮ 1 ನಮ್ಮವರಿರುವರು ಹತ್ತುಮಂದಿಗಳು ಸುಮ್ಮನಿರರು ಒಂದರಘಳಿಗೆ ಸಮ್ಮತಿಗೊಡದಿರೆ ಬಳಲಿಸುವರು ಇವ ರ್ಹಮ್ಮನು ಮುರಿಯುವೆ ವಿಷಯ ವಿರಕ್ತಿಯ 2 ಕತ್ತಲೆಯಲಿ ಬಂದಿರುವೆನು ಹೊಟ್ಟೆಯು ಹತ್ತಿ ಹೋಯಿತೊ ಹಸಿವಿನಲಿ ಎತ್ತ ಸುತ್ತಿದರೂ ತುತ್ತನು ಕಾಣೆನೊ ಭಕ್ತ ಪ್ರಸನ್ನ ದಯಾಜಲನಿಧೇ ಜ್ಞಾನ 3
--------------
ವಿದ್ಯಾಪ್ರಸನ್ನತೀರ್ಥರು
ಮಂಗಳಂ ಶ್ರೀರಾಮಚಂದ್ರಗೆ ಜಯ ಮಂಗಳಂ ಸೀತಾಸಮೇತನಿಗೆ ಪ. ಮಚ್ಛಾವತಾರಗೆ ವೇದವ ತಂದಗೆ ಕೂರ್ಮರೂಪದಿ ಜಲದೊಳು ಪೊಕ್ಕವಗೆ ಹಿರಣ್ಯಾಕ್ಷಸುರನ ಗೆಲಿಯೆ ಬಂದು ಮೆಚ್ಚೆ ವರಹರೂಪ ತೋರಿದಗೆ 1 ಛತ್ರಿಯ ಪಿಡಿದು ಭರತ ನಿಂದಿರಲಾಗ ಶತ್ರುಘ್ನ ಚಾಮರವನು ಬೀಸಲು ಮತ್ತೆ ಲಕ್ಷ್ಮಣ ಮಡುದೆಲೆ ಕೊಡುತಿರಲಾಗಿ ವಿಸ್ತಾರ ವೈಭೋಗ ರಘುರಾಮಗೆ 2 ತಮ್ಮ ಲಕ್ಷ್ಮಣ ಸಹ ಒಲ್ಮೆಯಿಂದಲಿ ಬಂದ ನಮ್ಮ ಶ್ರೀರಘುರಾಮಚಂದ್ರನಿಗೆ ಸನ್ಮಾನದಲಿ ರಾಮ ಸಾಗರಶಯನಾಗೆ ಚೆನ್ನ ಚುಂಚನಕಟ್ಟೆಸ್ಥಿರವಾಸಿಗೆ 3 ಎಡದ ಕರದಿ ಬಿಲ್ಲು ಬಲದ ಕರದಿ ಬಾಣ ಕರದ ಕಮಲದೊಳಗಿಪ್ಪವನಿಗೆ ಸಿರಿ ಸೀತೆಯ ಧರಿಸಿದ ಚದುರ ಶ್ರೀ ಕಲ್ಯಾಣ ಚಂದ್ರನಿಗೆ 4 ಹರುಷದಿ ದೇವತೆಗಳಿಗೊರವಿತ್ತಗೆ ದುರುಳ ರಕ್ಕಸರ ಸಂಹರಿಸಿದಗೆ ಪರಮ ಭಕ್ತನಿಗೆ ಸ್ಥಿರರಾಜ್ಯವನೆ ಕೊಟ್ಟ ಹಯವದನಮೂರ್ತಿ ಎಂದೆನಿಸಿದಗೆ 5
--------------
ವಾದಿರಾಜ
ಮರಳುತನವು ಬಂದು ಎನ್ನ ಕೊರಳ ಕೊಯ್ವುದು ದುರುಳನಾಗಿ ಇರುಳು ಹಗಲು ಒರಲುತಿಪ್ಪುದು ಪ ಮಾರಿಯನ್ನು ಮನೆಗೆ ತಂದು ತೋರಿಯಿಡುವುದು ಚೋರರನ್ನು ತಂದು ತನಗೆ ಸೇರಿ ಕೊಡುವುದು ದೂರುಬಪ್ಪ ದಾರಿಯನ್ನು ಸೇರಿ ನಡೆವುದು ಸಾರಿ ಪರನಾರಿಯನ್ನು ಸೂರೆಗೊಂಬುದು 1 ಹೆಂಡತಿಯ ಸುಲಿದು ತನ್ನ ಮಿಂಡಿಗಿಡುವುದು ಕಂಡು ಕಂಡು ಹರುಷ ತಾಳಿ ಕೊಂಡುಯಿರುವುದು ಭಂಡತನದಿ ಕೊಂದು ದೂರ ಕೊಂಡು ಪೋಪುದು ಉಂಡು ಉಡುವ ಹರುಷ ಸರಿಯ ಮಿಂಡಿಗಪ್ಪುದು 2 ಸೂಳೆಯನ್ನು ಕಂಡು ಹರುಷ ತಾಳಿಯಿರುವುದು ವೇಳೆಗವಳು ಬಾರದಿರಲು ಚೀ[ರಿ]1ಯಳುವುದು ಹಾಳು ಬದುಕಿನೊಳಗೆ ಬಹಳ ಚಾಳು ತೋರ್ಪುದು ಖೂಳರನ್ನು ಕರೆದು ಅನ್ನ ಪಾಲನೆರೆವುದು 3 ಇಲಿಯು ಹೆಚ್ಚಿತೆಂದು ಮನೆಗೆ ಉರಿಯನಿಡುವುದು ಚಳಿಯು ಹೋಯಿತೆಂದು ಮನದಿ ನಲಿವುತಿರುವುದು ಬಿಳಿದು ಬೂದಿಯನ್ನು ಕೊಂಡು ಹೊಳೆಗೆ ಬಿಡುವುದು ಸ್ಥಳವ ಕೆಡಿಸಿ ಕುಲವನೆಲ್ಲ ಬಳಕೆ ತೀರ್ಪುದು 4 ಹೆತ್ತ ಮಗನ ತೊರೆದು ತಾನು ದತ್ತ ತಪ್ಪುದು ಸತ್ತ ಎಮ್ಮೆ ಹಾಲು ಹತ್ತು ಸೇರಿಗಳವುದು ಕತ್ತಿಯನ್ನು ಬಿಸುಟು ಒರೆಯ ಹತ್ತಿರಿಡುವುದು ಶತ್ರುವಾಗ ಬಂದ ತನ್ನ ಒತ್ತಿ ನಿಲುವುದು 5 ಗಾಳವಿಲ್ಲದೆ ಮೀನುಗಳ ಮೇಲೆ ತೆಗೆವುದು ಕೋಲುಯಿಲ್ಲದ ಕೊಲೆಗಳೆನ್ನ ಮೇಲೆ ಬೀಳ್ವುದು ಸಾಲವನ್ನು ಕೊಟ್ಟವರು ಸಾಯಲೆಂಬುದು ಕಾಲನೊಳು ಕೈಯ ಕಟ್ಟಿ ಶೂಲೆ ತಪ್ಪುದು 6 ಸರ್ವತಂತ್ರವೆಲ್ಲ ಹರಿಯ ಹತ್ತಿರಿಡುವುದು ಗರ್ವವನ್ನು ತೋರಲವನ ಸುತ್ತಿ ಬರುವುದು ಇರುವೆಯಂತೆ ಮೈಯನೆಲ್ಲ ಕುತ್ತಿ ತರಿವುದು ತೋರ ವರಾಹತಿಮ್ಮಪ್ಪನ ಎತ್ತಿ ನೆನೆವುದು 7
--------------
ವರಹತಿಮ್ಮಪ್ಪ
ಮುಕ್ತನಲ್ಲವೇ ಭವದಿ ಮುಕ್ತನಲ್ಲವೇ ಪ ಶಕ್ತನಾದ ಹರಿಯ ಪರಮ ಭಕ್ತಿಯಿಂದ ಭಜಿಪ ನರನು ಅ.ಪ. ಮಧುವಿರೋಧಿಯಮಲ ಗುಣವ ನಲಿದು ಪಾಡುವವನು 1 ಕೇಶವಗೆ ರಮಾಬ್ಜಭವ ಸದಾಶಿವ ಶಕ್ರಾದಿ ಸುರರು ದಾಸರು ಎವೆ ಇಡುವ ಶಕ್ತಿ ಲೇಶವಿಲ್ಲವೆಂಬ ನರನು 2 ಒಂದಧಿಕ ದಶೇಂದ್ರಿಯಗಳಿಗಿಂದಿರೇಶ ವಿಷಯವ ಸಮ ಬಂಧಗೈಸಿ ವೈಷಯಿಕ ಸುಖ ತಂದು ಕೊಡುವನೆಂಬ ನರನು 3 ಈ ಪರಿಯಲಿ ತಿಳಿದು ಪುಣ್ಯ ಪಾಪಕರ್ಮ ದುಃಖಸುಖ ಜ ಯಾಪಜಯ ಮಾನಾಪಮಾನ ಶ್ರೀಪ ಕೊಡುವನೆಂಬ ನರನು 4 ವೇದ ಶಾಸ್ತ್ರಗಳಲಿ ಇಹ ವಿರೋಧವಾಕ್ಯಗಳನು ಶ್ರೀ ಪ್ರ ಮೋದ ತೀರ್ಥರುಕ್ತಿಯಿಂದ ಶೋಧಿಸುತಲಿ ಸುಖಿಪ ನರನು 5 ಕರ್ಮ ವಿಹಿತ ಅಸಜ್ಜನರು ಮಾಳ್ಪ ವಿಹಿತವಾದ ಕಾಲಕದು ಅವಿಹಿತವೆಂದು ತಿಳಿಯುವವನು6 ಸ್ವರ್ಗ ಭೂಮಿ ಕರ್ಮ ಹರಿಸುವ ಹರಿಯೆಂಬ ನರನು7 ಪರಮ ಪುರುಷಗರ್ಪಿಸುತಲಿ ಹರುಷ ಬಡುತಲಿಪ್ಪ ನರನು 8 ಈ ಶರೀರದರಸು ಶ್ರೀನಿವಾಸಾ ಮಾತೆ ಪ್ರಾಣ ಪಾರ್ವ ತೀಶರಿಹರು ಎಂದೀ ದೇಹ ಪೋಷಿಸುತಲಿ ತೋಷಿಸುವನು 9 ಪ್ರಿಯ ವಸ್ತುಗಳೊಳಗೆ ಅನ್ನಮಯನೆ ಪ್ರೀಯನೆಂದು ಅನ್ಯ ಬಯಕೆಗಳನು ಜರಿದು ಹರಿಯ ದಯವ ಬಯಸುತಿಪ್ಪ ನರನ 10 ಶತ್ರುತಾಪಕನುಳಿದು ಅನ್ಯ ಮಿತ್ರರಿಲ್ಲವೆಂದು ಅಹೋ ರಾತ್ರಿಯಲ್ಲಿ ಬಿಡದೆ ಜಗದ್ಧಾತ್ರನ ಗುಣ ತುತಿಪ ನರನು11 ಬಿಂಬನೆನಿಸಿ ಸರ್ವರ ಹೃದಯಾಂಬರದೊಳಗಿದ್ದು ಜನವಿ ಡಂಬನಾರ್ಥ ಕರ್ಮಗಳ ಆರಂಭ ಮಾಳ್ಪೆನೆಂಬ ನರನು 12 ಅಕ್ಷರೇಢ್ಯ ಬ್ರಹ್ಮ ವಾಯು ತ್ರ್ಯಕ್ಷಸುರಪ ಸುರರೊಳಗ ಧ್ಯಕ್ಷ ಸರ್ವ ಕರ್ಮಗಳಿಗೆ ಸಾಕ್ಷಿಯೆಂದು ಸ್ಮರಿಸುವವನು 13 ಅಂಬುಜ ಭವಾಂಡದೊಳು ಮಹಾಂಬರವಿಪ್ಪಂತೆ ಶ್ರೀ ನಿ ತಂಬಿನಿ ಸಹ ಸರ್ವರೊಳಗೆ ತುಂಬಿಹನೆಂದರಿತ ನರನು 14 ಅದ್ವಿತೀಯನಪೇಕ್ಷ ಭಕ್ತ ಹೃದ್ವನಜ ನಿವಾಸಿಯೆನಿಸಿ ಕದ್ದೊಯ್ದವರಘವನುಣಿಪನದ್ವಯತನೆಂಬ ನರನು 15 ಜಾಂಬವತೀರಮಣ ವಿಷಯ ಹಂಬಲವನು ಬಿಡಿಸಿ ತನ್ನ ಕಾಂಬ ಸುಖವನಿತ್ತು ನಿಜ ಕುಟುಂಬದಿಡುವನೆಂಬ ನರನು 16 ಅಣು ಮಹತ್ಪದಾರ್ಥ ವಿಲಕ್ಷಣ ವಿಶೋಕ ಜೀವರೊಡನೆ ಜನಿಸಿ ಪುಣ್ಯ ಪಾಪ ಫಲಗುಳುಣದೆ ಉಣಿಪನೆಂಬ ನರನು 17 ಕರ್ಮ ಸುದತಿಯರೊಡಗೂಡಿ ಸಮಾ ಶೂನ್ಯ ಮಾಳ್ಪನೆಂದು ಪದೇ ಪದೆಗೆ ಸ್ಮರಿಸುವವನು18 ಸ್ವಾತಿವರುಷ ವಾರಿಕಣವ ಚಾತಕ ಹಾರೈಸುವಂತೆ ಶ್ವೇತವಾಹನ ಸಖನ ಕಥೆಯ ಪ್ರೀತಿಯಿಂದ ಕೇಳ್ಪ ನರನು 19 ಲೋಕಬಂಧು ಲೋಕನಾಥ ಲೋಕಮಿತ್ರ ಲೋಕರೂಪ ಲೋಕರಂತೆ ಲೋಕದೊಳು ವಿಶೋಕ ಮಾಳ್ಪನೆಂಬ ನರನು20 ಶಾತಕುಂಭವರ್ಣ ಜಗನ್ನಾಥ ವಿಠಲನೆಂಬ ಮಹ ದ್ಭೂತ ಬಡಕರಾವು ಇವನ ಭೀತಿ ಬಿಡದು ಎಂಬನರನು 21
--------------
ಜಗನ್ನಾಥದಾಸರು