ಒಟ್ಟು 2013 ಕಡೆಗಳಲ್ಲಿ , 111 ದಾಸರು , 1731 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

(ಆ) ಲಕ್ಷ್ಮೀಸ್ತುತಿಗಳು ನಾರಿಮಣಿಯೆ ನಿನ್ನಾಣೆ ನಾಕಾಣೆ ಕರತಂದು ತೊರೆ ಚೆಲ್ವ ರಂಗನಾ ಪ ಕರತಂದು ತೋರೆ ಮಧ್ಯರಂಗನಾ ಅ.ಪ ಪಾರವಾರನೆಂಬ ಧೀರ ಭವದೂರನೊ ಬಾರದ ಮನಸೆನ್ನ ಸೂರೆಗೊಳ್ಳುತಿದೇ 1 ಮೀರಿದ ಹದ್ದಿಗೆ ಹಾರಿಬಂದಾ ಗಿಣಿಯು ದಾರಿಯ ತಪ್ಪಿ ಹಿಂತಿರುಗಿದಂತೆ ಮಾರನಯ್ಯನ ಪಾದತೋರಿ ಪೋಗಿಯು ತಾ ತೇರಮೇಲೇರಿದ ಸಾರುವ ಬಾರೆ 2 ಉರಗೇಂದ್ರಶಯನನೆ ಸರಿಗಾಣೆ ರಮಣಿ ಶ್ರೀ ನರಗೆ ಸಾರಥಿಯಾಗಿ ಮೆರೆವ ಶ್ರೀ ಪರಮಾತ್ಮ ನಿರುತಿಹ ನೀನೋಗಿ ಕರತಾರೆ ಕಾಮಿನೀ3
--------------
ಚನ್ನಪಟ್ಟಣದ ಅಹೋಬಲದಾಸರು
(ಆರೋಹಣ ಕ್ರಮದಲ್ಲಿ ದಾಸ-ಗುರು-ದೇವತಾನಮನ) ಅಕ್ಕ ನೋಡೆ ನಾನಾ ನಿನ್ನ ದಯದಿಂದ ಗುರು ರಂಗವಲಿದದಾಸರ ಕನುಷಿನೊಳಗುಳ್ಳ ರಕ್ಕಸರಿಗೆಲ್ಲ ಕಕ್ಕಸವಾಗುತಿದೆ ದಕ್ಕಲಾರದು ಇನ್ನು ರೊಕ್ಕ ರೊಕ್ಕಕ್ಕೆ ಸಿಕ್ಕಿ ಬಲುಪರಿಯಿಂದ ಸೊಕ್ಕಿ ಧಕ್ಕೆ ತಿನ್ನುತ ಇದ್ದು ಶಕ್ಕುತಿಯಿಲ್ಲದೆ ಯನಗೆ ಪುಕ್ಕಟೆ ಸಿಕ್ಕಿತುಯೆನ್ನ ಕಕ್ಕನು ಇವರಕ್ಕಮುಕ್ಕಿ ಮಹ ಪಕ್ಕಿವಾಹನ ತಂದೆವರದಗೋಪಾಲವಿಠಲನ ತೋರುವಾ 1 ವತ್ಸರ ಇಂದಿರೆ ಕರ್ತು ನಾನಲ್ಲ ಚಂದ್ರ ಪುರಕೆ ಪೋಗು ಭಾಗಣ್ಣನೆಂಬುವನುಂಟು ಶಿರಿ ಅರಸ ವರದಗೋಪಾಲವಿಠಲನ ದಯದಿಂದಾ ಬಂದು ಸೇರಿದರು 2 ಅಪರೋಕ್ಷ ಪಾಲಿಸಿ ಮಂತ್ರಗಳುಪದೇಶಿಸಿ ಚರಣಂಗಳ ಲಯ ಮಾಡಿಸಿ ನಿರುತದಿ ಪಾಲಸಾಗರಶಾಯಿ ತಂದೆವರದಗೋಪಾಲವಿಠಲನ ನಿಲ್ಲಿಸಿ ಕೊಟ್ಟುಬಿಡದೆ3 ವಾಸವ ಮಾಡುತ ದಾಸರ ಪೋಷಿಸಬೇಕೆನುತ ಆಶೆಯುಕ್ತ ದೋಷರಹಿತಭಾವಿ ವಾಯುಪದಸ್ಥ ಸ್ವಾದಿರಾಜರ ಆಜ್ಞಾವ ಧರಿಸಿ ಶೇರಿ ಅರಸನ ಮಹಿಮೆಯ ಶೋಧಿಸಿ ಭಾಗವತಾದಿ ಶಾಸ್ತ್ರ ಅರ್ಥಸಮ್ಮತ ಕವನದಿ ರಚಿಸಿ ಹರಿಕಥಾಮೃತಾಖ್ಯ ಗುಣಸಾಗರ ಸಾರವೆಂದು ನಾಮವೆನಿರ್ಮಿಸಿ ಕುಮತವ ಭೇದಿಸಿ ಹಾನಿ ವೃದ್ಧಿಯ ಭೇದಿಸಿ ನೀತಿ ಹಿತನ ದ್ವಾರ ಜಗನ್ನಾಥವಿಠಲನೆಂಬೊ ಪೆಸರು ಪಡೆದು ತೀರ್ಥಕ್ಷೇತ್ರಾದಿಯಾಟಿಸಿ ಗಾತ್ರವ ಘೋಟಿಸಿಸೂತ್ರವ ಮೀಟುತ ಪಾತ್ರರ ಸಂಗಡ ಚಿತ್ರವೇಷವ ಧರಿಸಿ ವರ್ತನೆಗ್ಯಯ್ಯುತ ಸೂತ್ರನಾಮಕ ಕೃಷ್ಣನಂತರ್ಯಾಮಿ ಸೂತ್ರವಂದಿತ ತಂದೆವರದಗೋಪಾಲವಿಠಲನ ಭಜಿಸಿ ಮಹಪದವೈದ 4 ಆನಂದ ಆನಂದ ಮಹಾಸಾಗರದೊಳಗೆ ಮುಳುಗಿ ಶಿಂಧುಶಯನ ಅರವಿಂದನಯನನ ಪೊಂದಿ ಮಹ ಪೊಂಗೊಳಲನೂದುತ ಜಗಂಗಳ ಪೋಗುತ ಗಂಗಾಜನಕ ಹರಿ ಗೋವಿಂದನಾಶ್ರಯಿಸಿ ದ್ವಂದ್ವಾವ ಭಜಿಸುತ ಮಂಗಳ ಮೂರುತಿ ಸ್ವಪನದಿ ಬಂದು ನಂದಾದಿ ಕವನ ಪೇಳಿ ಪವಿತ್ರನ ಮಾಡಿದಿ ಭಾವಿ ಭಾರತಿ ವರನ ಮಹಿಮೆಗೆಣೆಯುಂಟೆ ಹನುಮ ಭೀಮ ಮಧ್ವಾತ್ಮಕ ರೂಪಧಾರಿಗುರುರಾಜಾಂತರ್ಗತ ತಂದೆವರದಗೋಪಾಲವಿಠಲನು ಬಂದು ವದಗಿದ ವಾಸನಾಮಯದಿ 5 ಜತೆ :ಪಾತಕ ಪೋಯಿತು ಪೂತಾತ್ಮಕನ ಸೇವಿಪ ಜಗನ್ನಾಥರಾಯನ ಕಂಡೇ ಹರಿರೂಪಧಾರಿ ಗುರು ತಂದೆವರದಗೋಪಾಲವಿಠಲನ ದಯದಿಂದಾ 6
--------------
ಗುರುತಂದೆವರದಗೋಪಾಲವಿಠಲರು
(ಈ) ಶ್ರೀರಾಮ ಏನು ಕಾರಣ ಮಲಗಿದಿಯೊ ಶ್ರೀನಾಥ ರಘುಕುಲೋದ್ಭವ ದರ್ಭಶಯನಾ ಪ ಸೀತೆ ಪೋದಳು ಎಂದು ಚಿಂತೆಯಲಿ ಮಲಗಿದೆಯೊ ಕೋತಿಗಳ ಕೈಯಲೆ ರಣವಾಗದೆಂದು ಮಲಗಿದೆಯಾ ಪಾತಕ ಹರದೈತ್ಯ ಭಂಜಾ ತಿಳುಪುವದು ಜ್ಯೋತಿರ್ಮಯರೂಪ ದರ್ಭಶಯನಾ1 ವನವಾಸ ತಿರಗಲಾರೆನೆಂದು ಮಲಗಿದೆಯೊ ವನಧೀಶ ಮಾರ್ಗವನು ಕೊಡನೆಂದು ಮಲಗಿದೆಯೊ ದನುಜ ಬಲ್ಲಿದನೆಂಬೊ ವ್ಯಾಕುಲದಿ ಮಲಗಿದೆಯೊ ಜನನ ಮರಣರಹಿತ ರಾಮ ತಿಳುಹುವದು ಪಾದ ಶ್ರೀದರ್ಭಶಯನಾ 2 ಅನಿಲಾರಿ ಅಹರಗೆ ಕರುಣಿಸಿ ಮಲಗಿದೆಯೊ ವನಜ ಸಂಭವಗೆ ನೀ ಒಲಿಯ ಬಂದು ಮಲಗಿದಿಯೊ ಮುನಿಗಳು ಸ್ತೋತ್ರವ ಮಾಡಲು ಹಿಗ್ಗಿ ಮಲಗಿದೆಯೊ ಜನನಾಥ ಜಾನಕಿಕಾಂತ ತಿಳುಪುವದು ಎನಗೊಲಿದ ವಿಜಯವಿಠ್ಠಲ ದರ್ಭಶಯನಾ 3
--------------
ವಿಜಯದಾಸ
(ಊ) ಆತ್ಮನಿವೇದನೆ ಇಟ್ಟಂತೆ ಇರುವೆನೊ ಹರಿಯೇ ನೀನು ಕೊಟ್ಟದ್ದನ್ನುಣ್ಣುವೆ ಮತ್ತೇನು ಧೊರೆಯೇ ಪ ಪಟ್ಟೆಪೀತಾಂಬರ ಕೊಟ್ಟರೆ ಉಡುವೆನುಬಟ್ಟೆಯಿಲ್ಲದಿರೆ ಚಿಂದಿತೊಟ್ಟು ನಾನಿರುವೆನೊಮೃಷ್ಟಾನ್ನ ಭೋಜನವಿತ್ತರೆ ಉಣ್ಣುವೆ ಉ-ಚ್ಛಿಷ್ಟನ್ನವನಿತ್ತನೆ ತುಷ್ಟಿಲೆ ತಿನ್ನುವೆ 1 ಹಾಸಿಗೆ ಕೊಟ್ಟರೆ ನಾ ಮಲಗುವೆಭೂಶಯನವಿತ್ತರೆ ಅಲ್ಲಿಯೆ ಒರಗುವೆಆ ಶಾಲು ಕೊಟ್ಟರೆ ಹೊದೆಯದೆ ಬಿಡದಾಕಾಶವ ಹೊದಿಯೆಂದರೆ ಹೊದೆಯುವೆ ಬರಿಯೆ 2 ನೀಕೊಟ್ಟರುಂಟು ಕೊಡದಿದ್ದರೇನುಂಟುಬೇಕು ಬೇಡಗಳು ನಿನ್ನಿಚ್ಛೆಯಾಧೀನಲೋಕೇಶ ಗದುಗಿನ ವೀರನಾರಾಯಣಸಾಕು ಬಿಡಿಸಯ್ಯ ನರಜನ್ಮದ ಗಂಟು 3
--------------
ವೀರನಾರಾಯಣ
(ಊ) ಕ್ಷೇತ್ರವರ್ಣನೆ ಹುಲಿಗನಮೊರಡಿ ಶೇಷಾದ್ರಿಯನು ನೋಡಿರೋ ಸೇವಕಪರಿ ತೋಷಾದ್ರಿಯನು ಕಾಣಿರೊ ಪ ಶೇಷಾದ್ರಿಯನು ನೋಡಿ ದೋಷಾದ್ರಿ ಹುಡಿಮಾಡಿ ಶೇಷಾದ್ರೀಶನ ಪರಿತೋಷದಿಂ ಪಾಡಿ ಅ.ಪ ಚಿನ್ನದಗಿರಿಯಂದದಿ ರಂಜಿಸುವುದು ಬಣ್ಣದೊಳತಿ ದೂರದಿ ಸಣ್ಣದಾಸರು ಗಿರಿ ರನ್ನಪೋಲು ವರ್ಣಹ ಶಯನನ ಕಣ್ಣಲಿ ಕಾಣಿಪ 1 ಬಗೆ ಬಗೆ ವೃಕ್ಷಗಳು ಬನಂಗಳು ಬಗೆ ಬಗೆ ಪಕ್ಷಿಗಳು ಬಗೆ ಬಗೆ ಮೃಗಗಳು ಸೊಗಸಿನೊಳಿರೆ ಬಹು ಬಗೆ ಬಗೆ ಧಾತುಗಳಿಗೆ ನೆಲೆಯಾಗಿಹ 2 ಯುಗಗಳ ಸಂಖ್ಯೆಯೊಳು ನಾಮಂಗಳು ಯಗಳದ್ವಯ ಮೆನಲು ಯುಗಮೊದಲೊಳಗೆ ಪನ್ನಗಗಿರಿಯನೆ ತ್ತೇತಾ ಯುಗದಲ್ಲಿ ಹೇಮದ ನಗವೆಂಬ ಪೆಸರಿನ 3 ದ್ವಾಪರಯುಗದೊಳಗೆ ವೆಂಕಟನಾಮ ವೀ ಪರ್ವತತಕ್ಕೊದಗೆ ಶ್ರೀಪುಲಗಿರಿಮುಖ ರೂಪನೀಯುಗದೊಳು ಶ್ರೀಪತಿಯುತ್ತ ನಿರೂಪದೊಳೊಪ್ಪುವ 4 ದೂರದಿ ಶೋಭಿಸುವ ದುರ್ಜನರಿಗೆ ದೂರವೆ ಮಂದಿರವು ಚಾರುವಿಮಾನ ಪ್ರಾಕಾರವ ತೋರಿಪ ವಾರಿಜಾಸನ ಪಿತ ವರದ ವಿಠಲನಿಹ 5
--------------
ವೆಂಕಟವರದಾರ್ಯರು
(ಎ) ಮಂಗಳ ಪದಗಳು ಏಳಯ್ಯ ಬೆಳಗಾಯ್ತು ಏಳು ಬೇಗ ಪ ಏಳು ಪನ್ನಗಶಯನ ಏಳು ಗರುಡಗಮನ | ಏಳೈ ಕರುಣಾಕರನೆ ಏಳು ಲಕ್ಷ್ಮೀವರನೆ ಅ.ಪ ಕರವ ಮುಗಿದು ಶಿರವೆರಗಿ ಸಂಸ್ತುತಿಸುವ 1 ವೃಂದದೊಡನೆ ಬಂದು ನಿಂದು ಹಾರೈಸುವ 2 ಪತ್ನಿಯನೊಡಗೊಂಡು ಸ್ತೋತ್ರಮಾಡುವನಯ್ಯ 3 ಕಿನ್ನರ ನೆನೆವರ್ ನಾರದರ್ಗೂಡಿ ಚಿನ್ಮಯಾತ್ಮಕ ರಂಗ 4 ಭವ ಯೋಗಿಗಳ್ ನಿಜಸುಖಸಾಗರರೊಡಗೂಡಿ 5
--------------
ಸದಾನಂದರು
(ಕಾಲಜ್ಞಾನ) ಮೈಯ್ಯವ ಮರಿಯ ಬ್ಯಾಡಿರೋ | ಮತ್ರ್ಯದೊಳಗ ಕಲಿರಾಯ ನರಸುತನ | ಪ್ರಬಲ ವಾಯಿತು ಕೇಳಿರೋ ಪ ಬೀಳು ಬಿದ್ದಾವೋ ಧರ್ಮದಾ ಭೂಮಿಯು | ಅಧರ್ಮವೇ ಹೆಚ್ಚೀತು | ಹೇಳಲಿನ್ನೇನವಗುಣಿಗಳು ಪ್ರಕಟಿಸಿ | ಕೇಡು ತಂದಾರು ಜಗಕೆ | ಖೂಳರ ಹಿರಿತನವು ಒಳ್ಳೆವರಾ |ಮಾನ ಮನ್ನಣೆ ಹೋದಾವು | ಮನೆಯ ಕೊಂಡುಂಬುವರು 1 ಮರ್ಯಾದೆಗಳ ಬಿಟ್ಟಾರೋ | ಕುಲಕ ಮಾತವ ತಾಹರು | ಹಗೆ ಹಾರೋ | ಹುಸಿನುಡಿದು ಮನೆ ದೈವವನೇ ಮಾರಿ | ಹದಗೆಟ್ಟು ಹೋಗುವರೋ 2 ಒಡಲು ಕಾಮಾಟಿಕೆಯಾ ಎರಡರಿಂದ | ಕೋಣ-ನಂದದಿ ಬಗಿದು | ಪಡಿ ಕೊಟ್ಟು ಸಲಹುವ ಒಡಿಯ ನೆಚ್ಚರ ವಿಲ್ಲಾ | ಮರಹು ಕತ್ತಲೆ ಮುಸುಕಿ | ಪೊಡವಿಲಿ ಭಕುತಿ ಮಾರ್ಗ ಮುಗ್ಗಿತು | ಎಲ್ಯಾರಿದ್ದರ ಹೋಲಿಕೆಯು 3 ಕಡಲ ಶಯನನ ದಾಸನೆಂದರೆ ಬಾಗರು | ನೀಚರಿಗೆರಗುವರು ಕನ್ಯರೈದು ವರುಷಕ ಗಂಡನ | ಸಂಗವ ಬಯಸುವರು | ಇನ್ನೇನು ಏಳು ಬರುಷದ ಬಾಲೇರು | ಗರ್ಭವ ಧರಿಸುವರು | ಅಣ್ಣಾ ತಂಗಿಗೆ ಮದುವೆ ಮುಂದಕ | ಆದಾವೋ ಜಗದೊಳಗ | ಜಾತಿ ಸಂಕರ ವಾಹುದು 4 ಯಾತ್ರೆಯು ನಿಲ್ಲುವವು | ನೀರು ತೋರವೆಲ್ಲಿ 5 ಶಾಸ್ತ್ರಗಳು ಮರೆವುದು | ಸಾರಿದಾ ಬೋಧವಿದು6
--------------
ಕಾಖಂಡಕಿ ಶ್ರೀ ಕೃಷ್ಣದಾಸರು
(ಕೇಶವಾಯ ನಮಃ ದಿಂದ ಆರಂಭವಾಗುವ ಆಚಮನ ಸ್ತುತಿ) ಶ್ರೀನಿವಾಸಾಯ ನಮೋ ಪ. ಶ್ರೀನಿವಾಸಾಯ ಶತಭಾನುಪ್ರಕಾಶಾಯ ಶ್ರೀನಿವಾಸಾಯ ನಿಜ ಭಕ್ತಜನಪೋಷಾಯ ಶ್ರೀನಿವಾಸಾಯ ಪರಮಾನಂದಘೋಷಾಯ ಅ.ಪ. ದೋಷಗಂಧವಿದೂರ ಕೇಶಿಮುಖದಾನವ ವಿ- ನಾಶವಿಧಿಭವಸುಖನಿವಾಸ ವಾಸುಕಿಶಯನ ವಾಸವಾದ್ಯಮರಗಣಪೋಷ ಪಾವನವೇಷ ಶ್ರೀಶ ನಿರ್ಗತವಿಶೇಷ ದಾಸಜನಹೃದಯಾಬ್ಧಿಭೇಶ ಕೌಸ್ತುಭಮಣಿವಿ- ಭೂಷ ಭೂತಾತ್ಮ ಭವಪಾಶಹರ ಪರತರ ದ- ಕೇಶವಾಯ ನಮೋನಮಃ 1 ಕ್ಷೀರಸಾಗರವಾಸ ಶ್ರೀರಮಾಪ್ರಾಣೇಶ ಸಾರಭೋಕ್ತøಸ್ವತಂತ್ರ ಚಾರುಷಡ್ಗುಣಭರಿತ ಸನ್ನುತ ಪಾದನೀರರುಹದ್ವಂದ್ವನೆ ಸುರರು ತಿಳಿಯರು ನಿನ್ನ ಭೂರಿಮಹಿಮೆಗಳ ಸಾಕಾರವನು ಬಣ್ಣಿಸುವ ನಾರಾಯಣಾಯ ನಮೋ 2 ವೇದವೇದ್ಯನೆ ದುರಿತಶೋಧನೆ ದೈತ್ಯಗಣ- ಛೇದಕನೆ ಸುರಸುಪ್ರಸಾದಕನೆ ಭಕ್ತಜನ- ಸಮಾನಾಧಿಕ್ಯರಹಿತ ಸತತ ಆದಿತ್ಯ ಶತಕೋಟಿತೇಜೋವಿರಾಜ ಮಹ- ದಾದಿಕಾರಣ ಮಧುವಿರೋಧಿ ಮಂಗಲಸುಖಾಂ- ಮಾಧವಾಯ ನಮೋನಮಃ 3 ಇಂದಿರಾಹೃದಯಾಬ್ಧಿ ಚಂದ್ರ ಚಾರ್ವಂಗ ಮುಚು- ಕುಂದಾಪ್ತ ಸರ್ವಶ್ರುತಿವೃಂದಪ್ರತಿಪಾದ್ಯ ಸಾ- ಸನ್ನುತ ಮಹೇಂದ್ರ ವಂದಾರುಜನತ್ರಿದಶಮಂದಾರ ಕೋಮಲಿತ ವೃಂದಾವನವಿಹಾರ ಕಂದರ್ಪಜನಕ ಬಾ- ತುಭ್ಯಂ ನಮಃ 4 ಜಿಷ್ಣುರಥಸಾರಥಿ ತ್ರಿವಿಷ್ಟಪಸಭಾಧ್ಯಕ್ಷ ಮುಷ್ಟಿಕಾಸುರವೈರಿ ಮುನಿಜನಮನೋಹಾರಿ ಮುಟ್ಟಿ ಭಜಿಪರ ಮನೋಭೀಷ್ಟವ ಸಲ್ಲಿಸುವ ಶ್ರೇಷ್ಠ ಪೂರ್ಣಬ್ರಹ್ಮನೇ ಭ್ರಷ್ಟಸಂಸಾರದೊಳು ನಷ್ಟ ಬುದ್ಧಿಗಳಿಂಗೆ ತುಷ್ಟಿಯನು ನೀನಿತ್ತು ಸಲಹೊ ಸಾಮಜವರದ ತುಭ್ಯಂ ನಮೋ 5 ವಿಧಿಭವಾದಿ ಸಮಸ್ತ ತ್ರಿದಶಜನಸುಖದಾತ ಬುಧಜನಪ್ರಿಯ ಭೂತಭಾವನ ಜಗನ್ನಾಥ ಮದನಕೋಟಿಸ್ವರೂಪ ವಿದುರನಾಲಯದಲ್ಲಿ ಪಾಲುಂಡ ಬ್ರಹ್ಮಾಂಡ- ಕಧಿಪತಿ ಕಲಿಮಲನಾಶ ಕವಿಜನಮನೋಲ್ಲಾಸ ಮಧುಸೂದನಾಯ ನಮೋ 6 ಅಕ್ರೂರವರದ ಸದತಿಕ್ರಮರ ಗೆಲಿದ ಹಯ- ವಕ್ತ್ರ ವೈಕುಂಠಾಖ್ಯ ಪುರವಾಸ ಜಗದೀಶ ಶುಕ್ರ ಶಿಷ್ಯರನೆಲ್ಲ ಪರಿಹರಿಸಿ ಪಾಲಿಸಿದೆ ಶಕ್ರಾದಿಸುರಗಣವನು ಚಕ್ರ ಶಂಖ ಗದಾಬ್ಜಧರ ಚತುರ್ಭುಜ ದೇವ- ಚಕ್ರವರ್ತಿಯನಂತಕೀರ್ತಿ ಪಾವನಮೂರ್ತಿ ತ್ರಿವಿಕ್ರಮಾಯ ನಮೋನಮಃ 7 ರಾಮಣೀಯಕ ವಪು ನಿರಾಮಯ ನಿರಾಶ್ರಯ ಸು- ದಾಮಸಖ ಪರಿಪೂರ್ಣಕಾಮ ಕೈರವದಳ- ಸುಜನಸ್ತೋಮಸುರಕಾಮಧೇನು ಗೋಮಿನೀಪತಿ ಗೋಗಣಾನ್ವಿತನೆ ಗೋಪೀಲ- ಲಾಮ ಗೋವರ್ಧನೋದ್ಧಾರ ಗೋವಿದಾಂಪತಿ ವಿ- ಪ್ರಾಜ್ಞ ವಾಮನಾಯ ನಮೋನಮಃ 8 ಆದಿಮಧ್ಯಾಂತವಿರಹಿತ ನಿಖಿಲಸಾರ್ಚಿತ ವಿ- ರಾಧಭಂಜನ ಭವಾಂಬೋಧಿಕುಂಭಜ ಭಜಕ- ಚತುಷ್ಟಾದ ಪಾವನಚರಿತನೆ ಗಾಧಿಜಾಧ್ವರಪಾಲ ಗರುಡಧ್ವಜ ದಯಾಳು ನಾದಬಿಂದು ಕಲಾತೀತ ರುಕ್ಮಿಣಿನಾಥ ಶ್ರೀಧರಾಯ ನಮೋನಮಃ 9 ಪಾಶಧರನುತ ವೆಂಕಟೇಶ ಸರ್ವೇಂದ್ರಿಯಪ್ರ- ಕಾಶ ಪಾಲಿತನಿಖಿಳಭೂಸುರವ್ರಜ ಮಂದ- ದೂಷಣಾದ್ಯ ಸುರಹರನೆ ಈಶಪತಿಸೇವ್ಯಾಂಬರೀಶನೃಪವರದ ಪರ- ಮೇಶ ಕೋವಳಪೀತವಾಸ ಕರ್ದಮಶುಕಪ- ಹೃಷೀಕೇಶಾಯ ತುಭ್ಯಂ ನಮೋ 10 ಶುದ್ಧ ತ್ರಿಗುಣಾತೀತ ತ್ರಿವ್ರತ ತ್ರಿಜಗತ್ಪಾಲ ಪ್ರದ್ಯುಮ್ನ ಪ್ರಥಮಾಂಗದೊಡೆಯ ಪರಮಾತ್ಮ ಸುರ- ಬುದ್ಧ ಬುಧಜನಸುಲಭ ಮಧ್ವವಲ್ಲಭ ಮಂತ್ರಮೂರ್ತಿ ಕ್ಷೀರಾಬ್ಧಿ ಶ್ವೇ ತದ್ವೀಪವೈಕುಂಠಮಂದಿರತ್ರಯ ಸಾಧು- ಹೃದ್ಯ ಭಕ್ತದ್ವೇಷಭಿದ್ಯ ನಿತ್ಯಾತ್ಮ ಶ್ರೀಪದ್ಮನಾಭಾಯ ನಮಃ11 ಸಾಮಗಾನವಿನೋದ ಸಾಧುಜನಸುಖಬೋಧ ಕಾಮಿತಾರ್ಥಪ್ರದಾತ ಕಪಿಲಋಷಿ ಪ್ರಖ್ಯಾತ ಸಮರಂಗ ಭೀಮ ನಾಮಧಾರಕರ ಪರಿಣಾಮರೂಪಕ ಸುಜನ- ಕ್ಷೇಮಪ್ರಾಪಕ ನೀಲಜೀಮೂತನಿಭವರ್ಣ ದಾಮೋದರಾಯ ನಮೋ 12 ಶಂಕರಾಂತರ್ಯಾಮಿ ಶಾಙ್ರ್ಗಪಾಣಿ ಶರಣ್ಯ ವೆಂಕಟಾಚಲಸದಾಲಂಕಾರ ಶೇಷಪರಿ- ಯಂಕ ಪ್ರವಿತತನಿಷ್ಕಳಂಕಚಾರಿತ್ರ ಸುಸಂಕುಲಾರ್ಚಿತ ಪದಯುಗ ಲಂಕಾಧಿಪತ್ಯವ ವಿಭೀಷಣನಿಗೊಲಿದಿತ್ತ ಓಂಕಾರನಿಧನ ಸಾಮಕಭಕ್ತರಾನೇಕ ಸಂಕಟವ ಪರಿಹರಿಪ ಸತ್ಯ ಸಂಕಲ್ಪ ಶ್ರೀಸಂಕರ್ಷಣಾಯ ನಮೋ 13 ಈ ಸಮಸ್ತ ಜಗತ್ತು ನಿನ್ನುದರದೊಳಗಿಹುದು ಈ ಸಕಲಜೀವರೊಳಗಿಹ ನಿತ್ಯನಿರ್ಮುಖ್ಯ ನೀ ಸಲಹೊ ದೇವದೇವ ಭೂ ಸಲಿಲ ಪಾವಕಾಕಾಶಾದಿ ಭೂತಾಧಿ- ವಾಸ ರಾಕ್ಷಸವನಹುತಾಶ ನಾನಾ ರೂಪ- ವಾಸುದೇವಾಯ ನಮೋ 14 ಅದ್ವಿತೀಯನೆಯಮಿತವಿಕ್ರಮನೆ ಗುಣಕಾಲ ವಿದ್ಯಾಪ್ರವರ್ತಕನೆ ವಿಶ್ವಾದಿ ಸಾಹಸ್ರ ಸಿದ್ಧನಾಮ ನರನಾರಾಯಣಪರಾಯಣನೆ ಬುದ್ಧಿಪ್ರೇರಕಪ್ರೇರ್ಯನ ರುದ್ರರೂಪಪ್ರತಾಪ ಋಗ್ಯಜುಸ್ಸಾಮಶ್ರುತಿ- ವೇದ್ಯ ಬ್ರಹ್ಮಾಂಡಕೋಟಿಗಳ ಸಲೆ- ಪ್ರದ್ಯುಮ್ನಾಯ ತುಭ್ಯಂ ನಮಃ 15 ಉದ್ಧವಾದಿ ಸಮಸ್ತ ಭಾಗವತಜನಕಮಲ- ಮಧ್ಯಚರರಾಜಹಂಸಾಯ ಮಾನಸದ ಶ್ರೀಹರಿಯೆ ವೈದ್ಯನಾಥವಿಧಾತನೆ ಬದ್ಧನಾದೆನು ಕರ್ಮಪಾಶದಿಂದ ದೊರೆ ಸಿಕ್ಕಿ- ಬಿದ್ದೆ ಕೈಪಿಡಿದೆಬ್ಬಿಸೆನ್ನನೆಲೆದೇವ ಮರೆ ಅನಿರುದ್ಧಾಯ ತುಭ್ಯಂ ನಮಃ 16 ಕ್ಷರ ಪುರುಷರೆಲ್ಲ ಬ್ರಹ್ಮಾದಿ ಜೀವರು ರಮಾ ಕ್ಷರಪುರುಷಳೆನಿಸುವಳು ನೀನೆ ಉತ್ತಮ ಪರುಷ ಮಂಗಲರಿತ ಗುರುತಮ ಗುಣಧ್ಯಕ್ಷನೆ ಶರಧಿಸೇತುನಿಬದ್ಧ ಶಬರಿ ಹಣ್ಣನು ಮೆದ್ದ ಶರಭಂಗ ಮುನಿಪಾಲ ಶಮಿತದಾನವಜಾಲ ಪುರುಷೋತ್ತಮಾಯನ್ನಮೋ 17 ಅಕ್ಷಯಾತ್ಮನೆ ವಿಶ್ವರಕ್ಷಕನೆ ವಿಶ್ವಭುಗ್- ವಿಶ್ವತೋಮುಖ ವಿಶ್ವತೋಬಾಹು ಕರುಣಾಕ- ದಯಮಾಡು ಶ್ರೀವಕ್ಷಸ್ಥಲನಿವಾಸನೆ ಲಕ್ಷ್ಮಣಾಗ್ರಜನೆ ಸುವಿಲಕ್ಷಣನೆ ಸುಜ್ಞಾನ- ಮೋಕ್ಷದಾಯಕ ಯಜ್ಞಮೂರ್ತಿ ರೂಪತ್ರಯ ಮ- ಅಧೋಕ್ಷಜಾಯ ನಮೋನಮಃ 18 ಕ್ರೂರಕರ್ಮಿ ಹಿರಣ್ಯಕಶಿಪುವಂ ಕೊಂದ ದು- ರ್ವಾರದುರಿತಾಬ್ಧಿಬಾಡಬ ಭಕ್ತವತ್ಸಲ ಮ- ಶಿರಪ್ರಕರಧೀರ ಪ್ರಹ್ಲಾದಾಭಿವರದ ಭೂರೀಕರರೂಪ ಭೂಮಕೀರ್ತಿಕಲಾಪ ಸಾರವಜ್ರಸ್ತಂಭದಿಂ ಬಂದ ನಂದ ಸುಕು- ನಾರಸಿಂಹಾಯ ನಮೋ 19 ನಿಶ್ಚಲಾತ್ಮ ನಿರೀಹ ನಿರ್ವಿಕಾರಾನಂತ ಪ್ರೋಚ್ಛ ಸರ್ವಗ ಸದಾನಂದ ಪರಿಪೂರ್ಣ ತ- ನಿರ್ಮಿಸುವ ಆಶ್ಚರ್ಯಕೃತ ಸಲೀಲ ಮುಚ್ಚುಮರೆ ಯಾಕಿನ್ನು ಮುಗಿದು ಬೇಡುವೆ ಕೈಯ ಸ್ವಚ್ಛತರ ಭಕ್ತಿಭಾಗ್ಯವನಿತ್ತು ಸಲಹೊ ಮಹ- ಶ್ರೀಮದಚ್ಯುತಾಯ ನಮೋನಮಃ 20 ಚೈದ್ಯಮಥನ ಮನೋಜ್ಞಶುದ್ಧಾತ್ಮ ಸರ್ವಜ್ಞ ಹೊದ್ದಿಸಿದ ಪಾರ್ಥನಿಂಗೆ ಇದ್ದು ನೀ ಹೃದಯದೊಳು ತಿದ್ದೆನ್ನ ಮತಿಯ ಸ್ಮರ- ವಿದ್ದ ಮಾನಸವ ಪಾದದ್ವಯದೊಳಿರಿಸೈ ದ- ಜನಾರ್ದನಾಯ ನಮೋನಮಃ 21 ಮಂದಾಕಿನಿಯ ಪಡೆದ ಮಾತೆಯ ಶಿರವ ಕಡಿದ ನಂದಗೋಪನ ಕಂದನೆನಿಸಿ ಬಾಲಕತನದ ಸುಂದರೀರಮಣ ಜಯತು ತಂದೆತಾಯಿಯು ಸರ್ವ ಜೀವರ್ಗೆ ನೀನೆ ನಿಜ- ವೆಂದು ತಿಳಿಯದೆ ಮಾಯೆಯಿಂದ ಮಮಕರಿಸಿ ಪರ- ಉಪೇಂದ್ರಾಯ ತುಭ್ಯಂ ನಮಃ 22 ಸ್ಥಿರಚರಾತ್ಮಕ ಧೇನುಚರ ದೇವಕೀಜಠರ- ಶರಧಿಗುರುರಾಜ ಭಾಸ್ಕರಮಂಡಲಾಂತಸ್ಥ ದುರಿತದೂರ ಗಭೀರನೆ ನಿರತಿಶಯ ನಿಜನಿರ್ವಿಕಲ್ಪ ಕಲ್ಪಾಂತಸಾ- ಗರದಿ ವಟಪತ್ರಪುಟಶಯನ ಪುಣ್ಯಶ್ರವಣ ಹರಯೇ ನಮೋನಮಸ್ತೇ 23 ವೃಷ್ಟಿಕುಲತಿಲಕ ಸರ್ವೇಷ್ಟದಾಯಕ ನಿಮಿತ- ಶಿಷ್ಟಜನಪರಿಪಾಲ ಶಿವಗೌರೀ ಗಣಪಗುಹ- ಸೃಷ್ಟಿಶಕ್ತಿಯನೀವ ಗೋವರ್ಧನಾಚಲವ ಬೆಟ್ಟಿನಿಂದೆತ್ತಿದ ಮಹಾ ದುಷ್ಟ ನರಕಾದಿದಾನವರ ಮರ್ದಿಸಿದ ಜಗ- ಜಟ್ಟಿ ಜನಿಮೃತಿಭಯವಿದೂರ ವಿಷಮಯಸರ್ಪ- ಹರೇ ಕೃಷ್ಣಾಯ ತುಭ್ಯಂ ನಮಃ 24 ಅಕ್ಷೀಣ ಬಲಶಾಲಿಯಾಂಜನೇಯನಿಗಿತ್ತೆ ಅಕ್ಷಯದ ಬ್ರಹ್ಮಪದವಿಯ ಲೋಕದೊಳಗ್ಯಾವ- ದಕ್ಷಮರ್ದನ ನಿನಗೆ ಸರ್ವತಂತ್ರಸ್ವತಂತ್ರ ಪಕ್ಷೀಂದ್ರಭುಜವಿರಾಜ ಸಾಕ್ಷಿಚೈತನ್ಯರೂಪನೆ ಕಮಲನಾಭನೆ ಮು- ಮುಕ್ಷುಜನಧ್ಯಾನಗಮ್ಯನೆ ಗದಾಧರ ದನುಜ- ಲಕ್ಷ್ಮೀನಾರಾಯಣಾಯ ನಮೋ 25
--------------
ತುಪಾಕಿ ವೆಂಕಟರಮಣಾಚಾರ್ಯ
(ಧರ್ಮಸ್ಥಳ ಮಂಜುನಾಥನನ್ನು ನೆನೆದು) ಯಾಕೆನ್ನ ಮೇಲೆ ನಿರ್ದಯ ಶ್ರೀಮಂಜುನಾಥ ಲೋಕೇಶ ಮಾಡು ನಿರ್ಭಯ ಪ. ಪಾಕಹಪ್ರಮುಖದಿವೌಕಸಮುನಿಜನಾ- ನೀಕವಂದಿತಪದಕೋಕನದ ಕೋವಿದ ಅ.ಪ. ಪಾಪಾತ್ಮಪಾಪಸಂಭವ ನಾನೆಂಬುವದಕಾ- ಕ್ಷೇಪವೇನಿಲ್ಲೋ ಮಾಧವ ಶ್ರೀಪರಮೇಶ್ವರ ಕೋಪಕಲುಷಹರ ತಾಪತ್ರಯಶಮನಾಪದ್ಭಾಂಧವ ಗೋಪತುರಂಗ ಮಹಾಪುರುಷ ಗಿರೀಶ 1 ಸೋಮಸುರ್ಯಾಗ್ನಿಲೋಚನ ಸದ್ಗುಣಪುಣ್ಯ- ನಾಮ ಪಾಪವಿಮೋಚನ ವ್ಯೋಮಕೇಶಾಚ್ಯುತಪ್ರೇಮ ಮಹಾಮಹಿಮ ಕಾಮಾರಿ ನಿನ್ನ ನಾ ಮರೆಹೊಕ್ಕೆನು ಹೇ ವiಹಾದೇವ ಸೋಮಚೂಡಾಮಣಿ 2 ಧರ್ಮಮಾರ್ಗನಿಯಾಮಕ ಸತ್ಯಾತ್ಮ ಪರ- ಬ್ರಹ್ಮ ಸುಜ್ಞಾನದಾಯಕ ನಿತ್ಯ ಸತ್ಕರ್ಮಪ್ರೇರಕ ಗಜ- ಚರ್ಮಾಂಬರಧರ ದುರ್ಮತಿಪ್ರಹರ ಭರ್ಮಗರ್ಭಜ ಭವಾರ್ಣವತಾರಕ 3 ಕಪ್ಪ ಕಾಣಿಕೆಗಳನು ತರಿಸುವರ- ಣ್ಣಪ್ಪದೈವವೆ ದೂತನು ತಪ್ಪದೆ ಚಂದಯ ಹೆಗ್ಗಡೆಯರ ಮನದೊ ಳಿಪ್ಪ ದಧಿಮಥನ ತುಪ್ಪದಂತೆಸೆವ ಕರ್ಪೂರಗೌರ ಸರ್ಪವಿಭೂಷಣ 4 ಪೊಡವಿಗಧಿಕವಾಗಿಹ ಕುಡುಮಪುರ- ಕ್ಕೊಡೆಯ ಭಕ್ತಭಯಾಪಹ ಕಡಲಶಯನ ಲಕ್ಷ್ಮೀನಾರಾಯಣಗತಿ- ಬಿಡೆಯದವನು ನಿನ್ನಡಿಗೆರಗುವೆ ವರ ಮೃಡಶಂಕರ ಕೊಡು ಕೊಡು ಮನದಷ್ಟವ 5
--------------
ತುಪಾಕಿ ವೆಂಕಟರಮಣಾಚಾರ್ಯ
(ಪಡುಬಿದ್ರೆಯ ಗಣೇಶ) ಮಾಡೆನ್ನೊಳು ಕರುಣ ಗಜಾನನ ಪ. ಮೂರ್ಖನೆನ್ನುತಲೆನ್ನ ಧಿಕ್ಕರಿಸದಿರು ಶಕ್ರವಿನುತ ಚರಣ ಗಜಾನನ 1 ಹರಿನಾಭೀ ಕಮಲಾಕಾಶಾತ್ಮನೆ ಗಿರಿಜಾಂಕಾಭರಣ ಗಜಾನನ 2 ಭಾರತಾರ್ಥ ತತ್ವಾರ್ಥ ಪ್ರಬೋಧನೆ ಸೂರಿಜನೋದ್ಧರಣ ಗಜಾನನ 3 ಕಡಲಶಯನ ಲಕ್ಷ್ಮೀನಾರಾಯಣ ಸಖ ಪಡುಬಿದ್ರೆನಿಕೇತನ ಗಜಾನನ 4
--------------
ತುಪಾಕಿ ವೆಂಕಟರಮಣಾಚಾರ್ಯ
(ಬಂಟ್ವಾಳದ ವೆಂಕಟೇಶ ದೇವರನ್ನು ನೆನೆದು) ವಂದಿಸುವೆನು ಶ್ರೀನಿವಾಸ ಶ್ರೀ ವೆಂಕಟೇಶ ವಂದಾರುನಿಚಯಮಂದಾರ ಸದಾ- ಪ. ನಂದೈಕನಿಧಿವಿಲಾಸ ಚಂದ್ರಾದಿತ್ಯಸಹಸ್ರಪ್ರಕಾಶ ಹೊಂದಿದೆ ನಿನ್ನ ಪರೇಶ ಶ್ರೀ ವೆಂಕಟೇಶ 1 ಶಾಂತಾತ್ಮನಿಯಮ ಸಂತಾಪಪ್ರಶಮ ಸಂತಜನಮನೋಲ್ಲಾಸ ಭ್ರಾಂತಿಜ್ಞಾನವಿತಾನವಿನಾಶ ಚಿಂತನೀಯ ನಿರ್ವಿಶೇಷ ಶ್ರೀ ವೆಂಕಟೇಶ 2 ಶ್ರೀಧರಾಚ್ಯುತ ಸುಮೇಧನಾಮಕ ಪ- ಯೋಧಿಶಯನ ಪರಮೇಶ ನಿತ್ಯ ನಿರ್ದೋಷ ಸಾಧು ಕೌಸ್ತುಭಮಣಿಭೂಷ ಶ್ರೀ ವೆಂಕಟೇಶ3 ನೀರಜನಾಭ ನೀಲಾಭ್ರದಾಭ ಶ್ರೀರಾಮ ತ್ರಿದಶಗಣಪೋಷ ಪ್ರಾರಬ್ಧಕರ್ಮ ಬೋಧೋದ್ಭಾಸಾ- ಪಾರಮಹಿಮ ಜಗದೀಶ ಶ್ರೀ ವೆಂಕಟೇಶ 4 ನೇತ್ರಾವತಿ ಸುಪವಿತ್ರಚಿತ್ರಸು- ಕ್ಷೇತ್ರ ವಟಪುರನಿವಾಸ ಕರ್ತ ಲಕ್ಷ್ಮೀನಾರಾಯಣನೀತ ಪಾರ್ಥಸಾರಥಿ ಪೃಥಗೀಶ ಶ್ರೀ ವೆಂಕಟೇಶ 5
--------------
ತುಪಾಕಿ ವೆಂಕಟರಮಣಾಚಾರ್ಯ
(ಬ್ರಹ್ಮಾಂಡ ಪುರಾಣದ ಕರುಣಾಕರ ಸ್ತೋತ್ರದ ಅನುವಾದ) ಶ್ರೀ ರಮಣನೆ ನಮೋ ಎಂದು ನುತಿ ಪೇಳ್ವೆನಿಂದು ಪ. ನಿನ್ನನು ದೂಡದಿರನ್ಯರ ಬಳಿಗೆ ಪಾದ ಕಾಪಾಡು ದೇಹವ ದಾಢ್ರ್ಯದೊಳಗೆ 1 ಈಶನು ನೀ ಎನಗೆಂದಿಗು ನಿನ್ನ ದಾಸನಾದುದರಿಂದ ಪೋಷಕರನು ಕೃಪೆಯಿಂದ 2 ಎನ್ನ ಭರಣಕನ್ಯರಸಡ್ಯೆಯೇನು ಕಂಬುರುಹಾಕ್ಷಾಶ್ರಿತ ಕಾಮಧೇನು 3 ಫಣಿರಾಜಶಯನ ಶ್ರೀಕಾಂತ ಎನಗೆ ಸಿದ್ಧಾಂತ 4 ಕಲ್ಕಿರುವ ಸ್ವಾಪಲ್ಕಿವರದ ನಿನ್ನ ಶುಲ್ಕದಾಸಗೆ ಭಯವಿಲ್ಲ ಫಲ್ಕಸ ಪಾವನ ಮನದಿ ನೀಯಿರಲನ್ಯ ಕಲ್ಕಗಳುಂಟೆ ಭೂನಲ್ಲ 5 ಹೆಚ್ಚಾದರ್ಥಗಳುಂಟೆ ಪೇಳು ತಡಮಾಳ್ಪದಾಶ್ಚರ್ಯ ಕೇಳು ದಯಾಳು 6 ತಾಯೆ ತನ್ನಣುಗಗೆ ಗರವನಿಕ್ಕೆ ಬೇರೆ ಕಾಯುವರುಂಟೆ ಬೇಗದಲಿ ಲೋಕದಲಿ 7 ದಾತ ಪರಿತ್ರಾತ ಜ್ಞಾತದಯಾನ್ವಿತನೆಂದು ಪಾಲಿಸು ಗುಣಸಿಂಧು 8 ನೀ ನಿರ್ವಹಿಸುವಿಯೆಂದು ತಿಳಿದೆ ಎನ್ನಯ ವಾರ್ತೆಗೊಳದೆ9 ನೀ ಬಿಡದಿರು ಹರಿಯೆ ಸರ್ವಾರ್ಥದಾಯಕ ಎನ್ನ ದೊರೆಯೆ 10 ಎಂದು ಪೇಳ್ದೆದು ಶ್ರುತಿ ನಿಂದು ಭವ ಬೇಗ ಓಡಿ ಬಂದು 11 ಎನ್ನೊಳ್ಯಾಕೆ ನಿರ್ದಯವು ಬೇಗ ಪರಿಹರಿಸಾಧ್ಯಾತ್ಮಿಕಾರ್ತಿ 12 ಶಕುತಿಯದ್ಭುತವಲ್ಲ ಸ್ವಾಮಿ ಬಹುದು ಸುಪ್ರೇಮಿ 13 ಪಂಡಿತಜನರು ಲೋಕದಲಿ ಪುಂಡರೀಕಾಕ್ಷ ನೀನರಿವಿ 14 ದಯೆದೋರು ಭೃಂಗಾಳಕಾಂತ ದಿನಕಾಂತ ದಯೆದೋರೊ ಬೇಗ ನಿಶ್ಚಿಂತಾ 15 ಕರಗಳ ಮುಗಿದು ಸ್ವೀಕರಿಪುದು ಬುಧುರರಿದು. 16
--------------
ತುಪಾಕಿ ವೆಂಕಟರಮಣಾಚಾರ್ಯ
(ಮದ್ರಾಸಿನ ತಿರ್ವಳಕೇಣಿ ಪಾರ್ಥಸಾರಥಿ) ಏನು ಮಾಡಲಿನ್ನು ನೀನಲ್ಲದೆ ಯಾದಾರ ಬೇಡಲಿನ್ನು ಪ. ಮಾನಿನಿ ದ್ರೌಪದಿ ಮೊರೆಯಿಡುವುದ ಕೇಳಿ ಸಾರಥಿ ದೇವ ಅ.ಪ. ನೀನಿತ್ತ ಸೌಭಾಗ್ಯದ ಗರ್ವದಿ ಎನ್ನ ಧ್ಯಾನಾದಿಗಳ ಮಾಡದೆ ನಾನಾ ವಿಧದ ದುರ್ಮಾನುವಾದುದರಿಂದ ನೀನೆ ಸದ್ಗತಿಯೆಂದು ಧ್ಯಾನಿಸಿಲ್ಲಿಗೆ ಬಂದೆ 1 ಬಡತನದಿಂದಿರಲು ಸಕಲ ಸುರ- ರೊಡೆಯ ನೀ ಕೈ ಪಿಡಿದು ರೂಢಿ ಮದದಿ ನಿನ್ನನು ಬಿಟ್ಟು ಕಡೆಗೆ ನಿನ್ನಯ ಪಾದದೆಡೆಗೆ ಬಂದೆನು ದೇವ 2 ಪಶ್ಚಿಮ ವಾರಿಧಿಯ ತೀರದಲಾದ ದುಶ್ಚರಿತ್ರೆಯ ತಾಳದೆ ಆಶ್ಚರ್ಯತಮವಾದ ಸಚ್ಚರಿತ್ರನೆ ನಿನ್ನ ನೆಚ್ಚಿ ಬಂದಿಹೆನೊ ವಿಪಶ್ಚಿತರೊಡೆಯನೆ 3 ನಕ್ಷತ್ರಗಳಂದಿಂದಲು ಯೆನ್ನಪರಾಧ- ವಕ್ಷಯವಾಗಿರಲು ಅಕ್ಷರಿ ವಂದ್ಯ ನೀ ಲಕ್ಷ ಬಿಡುವುದೆ ಕ- ಟಾಕ್ಷದಿಂದಲಿ ನೋಡಿ ರಕ್ಷಿಸು ಕರುಣದಿ 4 ಎಷ್ಟು ಕರ್ಮಿಯಾದರು ನಿನ್ನಲಿ ಮನ- ವಿಟ್ಟು ಬಂದಿರುವೆನಲ್ಲ ದುಷ್ಟಮರ್ದನ ಶಿಷ್ಟರಕ್ಷಣ ಭಾಜಕ ಜ- ನೇಷ್ಟದಾಯಕ ಸೃಷ್ಟ್ಯಾದೃಷ್ಟಕರ್ತ 5 ನಟನ ಮಾಡುವ ಬೊಂಬೆಯ ಪೋಲುವ ಯೆನ್ನ ಹಟದಿಂದ ದಣಿಸುವುದೆ ವಟಪತ್ರ ಶಾಯಿ ಧೂರ್ಜಟಿ ವಂದ್ಯ ಅಂಜಲಿ ಪುಟನಾಗಿ ಬೇಡುವೆ ಘಟಿಸೊಭಿಲಷಿತವ 6 ಎಂದಿಗಾದರು ನಿನ್ನಯ ಪಾದಯುಗಾರ- ವಿಂದ ದರ್ಶನವಾಗಲು ಭವ ಸಿಂಧುವ ದಾಟುವೆ- ನೆಂದು ಬಂದಿರುವೆ ಸನಂದನಾದಿ ವಂದ್ಯ 7 ಕೂರ್ಮ ವರಾಹ ನಾರಸಿಂಹ ವಾಮನ ಶ್ರೀ ಭಾರ್ಗವ ರಾಮಕೃಷ್ಣ ಬೌದ್ಧ ಕಲ್ಕಿಯಂಬ ದಿವ್ಯ ನಾಮಗಳನು ಬಿಟ್ಟು ಕಾಮಲಾಲಸನಾಗಿ 8 ಒಂದು ನಿಮಿಷವಾದರು ತತ್ವಾಧಾರ ವಿಂದ ದರ್ಶನ ಮಾಡಲು ಹೊಂದಿದಘಗಳೆಲ್ಲ ಬೆಂದು ಹೋಗುವುದೆಂದಾ- ನಂದತೀರ್ಥಚಾರ್ಯರೆಂದ ನುಡಿಯ ನಂಬಿ 9 ದ್ವೇಷಿ ಮಾನವರ ಮುಂದೆ ನಾನಾ ವಿಧ ಕ್ಲೇಶವ ತಾಳ್ದೆ ಹಿಂದೆ ಘಾಸಿಯಾಗಿ ನಾನಾ ದೇಶ ದಾಟಿ ಬಂದೆ ಮೀಸಲಾದೆ ನಿನ್ನ ದಾಸ ದಾಸ್ಯನೆಂದೆ 10 ಜನರೊಳು ಪ್ರಮಿತನಾಗಿ ಬಾಳಿದ ಮಾನ- ವನು ಮಾನಹೀನನಾಗಿ ತನುವ ಪೊರೆದನತಿ ಘನಕ್ಲೇಶವೆನುತ ಅ- ರ್ಜುನನಿಗೆ ಉಪದೇಶವನು ಪೇಳಿದವ ನೀನೆ 11 ಯುಕ್ತಿ ಒಂದನು ಕಾಣೆನು ದೇಹದಿ ದೃಢ ಶಕ್ತಿಯಿಲ್ಲದವ ನಾನು ಮುಕ್ತಾಶ್ರಯ ಸರ್ವ ಶಕ್ತಿ ನೀನಿಹ ಪರ- ಭುಕ್ತಿ ಮುಕ್ತಿದನೆಂಬ ವಿರಕ್ತಿಯಿಂದಲಿ ಬಂದೆ 12 ಕಾಸೆಲ್ಲ ವ್ಯಯವಾಯಿತು ಎನಗೆ ಪರದೇಶವಾಸವಾಯಿತು ಆಸೆ ಬಿಡದುದರ ಘೋಷಣೆಗಿನ್ನವ- ಕಾಶವೊಂದನು ಕಾಣೆ ಶ್ರೀಶ ನೀನರಿಯೆಯ 13 ನಿಲ್ಲಲಾಶ್ರಯವನು ಕಾಣೆ ಪೋಗುವೆನೆಂದ- ರೆಲ್ಯು ಮಾರ್ಗವನು ಕಾಣೆ ಬಲ್ಲಿದ ವೈರಿಗಳಲ್ಲಿ ತುಂಬಿಹರರಿ- ದಲ್ಲಣ ನೀ ಎನ್ನ ಸೊಲ್ಲ ಲಾಲಿಸು ಕೃಷ್ಣ 14 ಅಶನವಸನ ಕಾಣದೆ ದೇಶವ ಸುತ್ತಿ ಬಸಿದು ಬೆಂಡಾಗಿಹೆನು ಉಶನಾಂiÀರ್i ಶಿಷ್ಯನ ವಶದಿಂದೆತ್ತಿ ಪೃಥ್ವಿಯ ದಶನಾಯಕರಿಗಿತ್ತ ಅಸಮಸಾಹಸ ದೇವ 15 ಮಾಡಿದಪರಾಧಕೆ ಮಾನಹಾನಿ ಮಾಡಿದುದು ಸಾಲದೆ ಬೇಡುವೆ ದೈನ್ಯದಿ ಪಾಡುವೆ ಮಹಿಮೆಯ ರೂಢಿಯೊಳಗೆ ದಯಮಾಡು ಇನ್ನಾದರು 16 ಇನ್ನಾದರೂ ಮನದಿ ಪಶ್ಚಾತ್ತಾಪ ವನ್ನು ತಾಳೊ ದಯದಿ ಕಣ್ಣ ಕಟ್ಟಿ ಕಾಡಿನೊಳು ಬಿಟ್ಟ ತೆರದೊಳಿಂ- ತೆನ್ನನು ಬಳಲಿಪದನ್ಯಾಯವಲ್ಲವೆ 17 ನಷ್ಟವೇನಹುಣನು ಎನ್ನಲಿ ಕ್ರೋಧ ಬಿಟ್ಟು ಬಾಧಿಸುತ್ತಿರಲು ಕೃಷ್ಣ ನೀ ಕರುಣದಿ ಕಷ್ಟ ಬಿಡಿಸಿ ಕಡೆ ಗಿಷ್ಟು ತಾತ್ಸಾರದಿಂದ ಕಷ್ಟಗೊಳಿಸಿದೆ 18 ಇಂದ್ರಾದಿ ಸುರರುಗಳು ಕೆಲವು ಕಾಲ ನೊಂದು ಭಾಗ್ಯವ ಪಡದು ಇಂದಿರೇಶ ನಿನ್ನ ಬಂಧಕ ಶಕ್ತಿಯಾ ನಂದ ತಿಳಿದಂತೆ ಮಂದನಾನರಿವೆನೆ 19 ಆನೆಯ ಭಾರವನು ಹೊರಲು ಸಣ್ಣ ಶ್ವಾನ ಸಹಿಸಲಾಪದೆ ದೀನ ಮಾನವನೆಂದು ಧ್ಯಾನಿಸಿ ಮನದಲಿ ಘನ್ನ ದುಖ್ಖವ ಕಳೆಯಾನಂಥ ಮೂರುತಿ20 ನೀನಿತ್ತ ಮಾನವನು ನೀ ಕಳದುದ ಕಾನು ಮಾಡುವದೇನಯ್ಯ ದಾನವಾರಿ ಸುರಧೇನು ನಿನ್ಡಿಗಳ ಧ್ಯಾನ ಮಾಡುತಲಿ ಸುಮ್ಮಾನದಿಂದಿರುವೆನು 21 ಸಾಕು ಸಾಕು ಮಾಡಿದೆ ಎನ್ನನು ಬಹು ನೀಕರಿಸುತ ದೂಡಿದೆ ಬೇಕಾದರೆ ಭಕ್ತ ನೀ ಕಪಾಲನ ಪ- ರಾಕೆಂಬ ಬಿರುದಿಂದ ಸಾಕುವದುಚಿತವೆ 22 ಅಂಬರೀಷವರದ ಸ್ವಭಕ್ತ ಕು- ಟುಂಬಿಯಂಬ ಬಿರುದ ನಂಬಿದ ಮೇಲೆನಗಿಂಬುದೋರದೆ ವೃಥಾ ಡಂಬರವ್ಯಾಕಿನ್ನು ಶಂಬರಾರಿಯ ಪಿತ 23 ಹಂಸವಾಹನ ಜನಕ ದಾಸಮದ- ಭ್ರಂಶಕನೆಂದನ- ಕ ಸಂಶಯವಿಲ್ಲದೆ ತಿಳಿದೆನು ಮಾತುಳ ಕಂಸ ಮರ್ದನ ವಿಪಾಂಸ ಶೋಭಿತ ದೇವ 24 ತರಳ ಪ್ರಹ್ಲಾದ ಧ್ರುವಾದಿಗಳನೆಲ್ಲ ಪೊರೆದನೆಂಬ ಕಥೆಯ ಹಿರಿಯರು ಪೇಳ್ವರು ಭರವಸೆ ಎನಗಿಲ್ಲ ಸಿರಿನಲ್ಲ ನೀಯೆನ್ನ ಬರಿದೆ ಬಿಟ್ಟದ ಕಂಡು25 ವಿಜಯಸಾರಥಿ ನಿನ್ನಯ ಮೂರ್ತಿಯ ಕಂಡು ಭಜಿಸಿದ ಮೇಲೆನ್ನನು ವಿಜಯ ಪೊಂದಿಸದಿರೆ ತ್ರಿಜಗವು ನಗದೇನೊ ಭುಜಗ ಭೂಷಣ ವಂದ್ಯ ದ್ವಿಜರಾಜ ಗಮನನೆ 26 ಕುಂದಣ ವರ್ಣವಾದ ಕೇತಕಿಯನು ಗಂಧಕೆ ಮರುಳನಾಗಿ ಬಂದು ಕುಸುಮಧೂಳಿಯಿಂದ ಲಂಡನಾದ ತುಂದಿಲೋದರ ಮಿಳಿಂದನಂದದಿ ಸಿಕ್ಕಿ 27 ಬೇಡುವದೇನೆಂದರೆ ನಿನ್ನನು ಧ್ಯಾನ ಮಾಡಿ ಪಾಡುವ ಭಾಗ್ಯವ ನೀಡು ನೀಚರನೆಂದು ಬೇಡದಂದದಿ ಮಾಡು ರೂಢಿಯೊಳಗೆ ದಯಮಾಡು ನೀ ನಿರುಪದಿ 28 ಇನ್ನು ತಾ ತಾಳಲಾರೆ ಕ್ಷಣೆ ಕ್ಷಣೆ ನಿನ್ನ ಪೊಗಳಲಾರೆ ಪನ್ನಗಾಚಲವಾಸ ಪರಮ ಪುರುಷ ಪ್ರ- ಸನ್ನ ವೆಂಕಟೇಶ ಪಾಲಿಸು ಕೃಪೆಯಿಂದ 29
--------------
ತುಪಾಕಿ ವೆಂಕಟರಮಣಾಚಾರ್ಯ
(ಮೂಲ್ಕಿಯ ನರಸಿಂಹ ದೇವರು) ರಕ್ಷಿಸು ಮನದಾಪೇಕ್ಷೆಯ ಸಲಿಸುತ ಲಕ್ಷ್ಮೀನರಹರಿ ರಾಕ್ಷಸವೈರಿ ಪ. ಅಕ್ಷಮ ದುಶ್ಯೀಲ ದುವ್ರ್ಯಾಪಾರದಿ ಕುಕ್ಷಿಂಭರನೆಂದುಪೇಕ್ಷೆಯ ಮಾಡದೆ ಅ.ಪ. ಉಭಯ ಶುಚಿತ್ವವು ಊರ್ಜಿತವೆನೆ ಜಗ- ದ್ವಿಭು ವಿಶ್ವಂಭರ ವಿಬುಧಾರಾದ್ಯ ಶುಭಮತಿ ಸಂಸ್ಥಿತಿಯಭಯವ ಪಾಲಿಸೊ ತ್ರಿಭುವನಮೋಹನ ಪ್ರಭು ನೀನನುದಿನ1 ಸಿಂಧುಶಯನ ನಿತ್ಯಾನಂದ ಗುಣಾಬ್ಧೇ ಹಿಂದಣ ಪಾಪವು ಮುಂದೆಸಗದ ರೀತಿ ಮಂದರಾದ್ರಿಧರ ಮಾಮವ ದಯಾಕರ 2 ಪಾಪಾತ್ಮರಲಿ ಭೂಪಾಲಕನು ನಾ ಶ್ರೀಪತಿ ಕರುಣದಿ ಕಾಪಾಡುವುದು ಗೋಪೀರಂಜನ ಗೋದ್ವಿಜರಕ್ಷಣ ಕಾಪುರುಷರ ಭಯ ನೀ ಪರಿಹರಿಸಯ್ಯ 3 ಸರ್ವೇಂದ್ರಿಯ ಬಲ ತುಷ್ಟಿ ಪುಷ್ಟಿಯಿತ್ತು ಸರ್ವಾಂತರ್ಯದೊಳಿರುವನೆ ಸಲಹೊ ದುರ್ವಾರಾಮಿತ ದುರ್ವಿಷಯದಿ ಬೇ- ಸರ್ವೇನು ಪನ್ನಗಪರ್ವತವಾಸನೇ 4 ಶರಣಾಗತನಾಗಿ ಸೆರಗೊಡ್ಡಿ ಬೇಡುವೆ ವರ ಮೂಲಿಕಪುರ ದೊರೆಯೇ ಹರಿ ಲಕ್ಷ್ಮೀನಾರಾಯಣ ತ್ರಿಜಗ ದ್ಭರಿತ ಉತ್ಪ್ರೇರಕ ಸ್ಥಿರಭಕ್ತಿಯನಿತ್ತು 5
--------------
ತುಪಾಕಿ ವೆಂಕಟರಮಣಾಚಾರ್ಯ
(ಮೂಲ್ಕಿಯ ನರಸಿಂಹದೇವರು) ನಂಬಿದೆ ನಿನ್ನ ಇಂಬಿದೆಯೆಂದು ಸನ್ನುತ ಪ. ಕಂಬದಿಂದ ಕಾಣಿಸಿದ ಗಂಭೀರಗುಣಾಂಭೋನಿಧಿ ಡಿಂಬೋದ್ಧರ ನರಮೃಗವರ ಅ.ಪ. ಭಾನುಕೋಟಿ ಭಾಸ್ಕರ ಪವ- ಮಾನನಯ್ಯ ಪ್ರಾಣದ ಸುತ್ರಾಣ ಸುಗುಣ ದೀನಜನಸಂತಾನ ಮಾನದ ಆನಂದ ಗುಣಾನಂತ ವಿತಾನಾಬ್ಧಿಶಯ ಹರಿ 1 ಎಷ್ಟೊ ಪಾಪಿ ಕನಿಷ್ಠನೆಂದು ಬಿಟ್ಟರೇನು ಬಿರುದು ಹಿರಿದು ಬರುವುದು ಸೃಷ್ಟಿಕರ್ತರಿಷ್ಟಹರ್ತ ಮುಷ್ಟಿಕಭಿದ ತುಷ್ಟಿಪ್ರದ ವಿಠಲ ಕೈಗೊಟ್ಟುಳುಹು 2 ಚಿತ್ತಸಾಕ್ಷಿ ಚಿನುಮಯಾತ್ಮ ಸತ್ಯರೂಪ ಸದಯೋದಯ ಸದುಪಾಶ್ರಯ ದೈತ್ಯಭಂಜನ ಸತ್ಯರಂಜನ ಕ್ಷೇತ್ರಜ್ಞ ಪವಿತ್ರಕಥಾಸ್ತೋತ್ರಾರ್ಹ ಶ್ರೀವತ್ಸಾಂಕಿತ 3 ಮೂಲಿಕಾಪುರ ಮೌಳಿರುತುನ ನೀಲೇಂದೀವರಶ್ಯಾಮಲ ಕಲಿಮಲಭೀಷಣ ಕಾಲಕಾಲ ವಿಶಾಲ ಭುಜಬಲ ಮೂಲೇಶಮುನೀಂದ್ರಾರ್ಚಿತ ಶ್ರೀಲಕ್ಷುಮಿನಾರಾಯಣ 4
--------------
ತುಪಾಕಿ ವೆಂಕಟರಮಣಾಚಾರ್ಯ