ಒಟ್ಟು 218 ಕಡೆಗಳಲ್ಲಿ , 61 ದಾಸರು , 213 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಕಮಲ ಭಜಿಸೋ ಮೈಲಾರ ಲಿಂಗನ ಪ ಪುರಹರ ಸ್ವರೂಪನೆ ಎಂದು ಧ್ಯಾನಿಸೋ ಪಾತಕ ತಿಮಿರ ಭಾಸ್ಕರನೆಂದು ನೀ ಸ್ಮರಿಸೋ ಶಿರಬಾಗಿ ನಮಿಸೋ ಅ.ಪ ತುರಗವಾಹನವೇರಿ ಬರುತಿಹನ ಧರೆಯೊಳಗೆ ಮೈಲಾಪುರ ಸುಮಂದಿರನೆಂದು ಕರೆಸುವನಾ ಹೊನಕೆರೆಯ ಜಲದಭಿಷೇಕದಿಂದ ರ್ಚನೆಯ ಕೊಂಬುವನ ಶರಣರನ ಪೊರೆವನ 1 ಕಾಲಕಾಲದಿ ಪಾಲಕಿಯ ಉತ್ಸವದಿ ಮೆರೆಯುವನ ಅನು ಗಾಲಭಕುತರ ಮ್ಯಾಳವನು ಪಾಲಿಸಲು ಬಂದಿಹನ ಕೇಳಿ ದ್ವರಗಳ ಕೊಡುವ ಘನ ತ್ರಿಶೂಲ ಧರಿಸಿಹನ ಮಾಳಸಾಕಾಂತನ 2 ನಿಷ್ಠೆಯಿಂದಲಿ ಭಜಿಪ ಭಕುತರನ ರಕ್ಷಿಸಲು ಕೊಪ್ಪರ ಕಟ್ಟಿಯಲಿ ಸೇವೆಯನ್ನು ಕೊಳುತಿಹನ ಸಿರಿ ವಿಷ್ಣು ಭಕುತರ ಮನೆಗಳಲಿ ಪೂಜೆಯನು ಕೊಂಬುವನ ಇಷ್ಟ ಪ್ರದಾತನ3 ಸಂಚರಿಸುತಲಿ ದಿನಕರನು ಮಕರದಿ ಬರಲು ಸಂಕ್ರಮಣ ಉತ್ಸವದಿ ನೋಡಲು ನೆರೆದ ಬಹು ಜನ ರಿಂದ ಸೇವಿತನ ಗಿರಿಶಿಖರ ಗುಂಡಿನ ಮೇಲೆ ದೀಪೋತ್ಸವದಿ ರಾಜಿತನ ಮಹಿಮಾನ್ವಿತನ 4 ವಿನುತ ಶುಭಚರಣ ಸರೋಜ ಕಾರ್ಪರ ನಾರಸಿಂಹನ ಒಲಿಮೆ ಪಡೆ ದಿಹನಾ ರವಿವಾರ ವಾರದಿ ಮಾರ್ತಾಂಡದೇವನ5
--------------
ಕಾರ್ಪರ ನರಹರಿದಾಸರು
ಕರ್ಮ ದೊಡ್ಡದೊ ಸ್ವಾಮಿ ನಿನ್ನ ಮಹಿಮೆ ದೊಡ್ಡದೊ ಮುನ್ನಿನ ದೃಷ್ಟಾಂತದಿಂದ ನಿರ್ಣಯಿಸುವ ನಿತ್ಯಾನಂದ ಪ. ಅಡವಿಯಲ್ಲಿ ನಿಂತು ಮೃಗವ ಬಡಿದು ತಿಂಬ ಬ್ಯಾಡ ಕಡೆಗೆ ಗಿಡವ ಕೂಡಿಸೆಂದ ನುಡಿಯ ದೃಢಕೆ ಮೆಚ್ಚಿ ಕಡೆಹಾಯಿಸಿದೆ 1 ಉಗ್ರಭಾವದಿಂದ ತಮ್ಮ ಅಗ್ರಜರನ್ನು ಕೊಲಿಸಿದಂಥ ಸುಗ್ರೀವ ವೈಶ್ರವಣರ ಭಕ್ತಾಗ್ರಣ್ಯರೆಂದು ಕಾಯ್ದೆ 2 ಕರ್ಮ ಬಾಧೆ ಕಳದು ಕರುಣದಿಂದ ಮಾಧವ ನೀ ಸಲಹೊ ಶೇಷ ಭೂಧರೇಂದ್ರ ಶಿಖರವಾಸ 3
--------------
ತುಪಾಕಿ ವೆಂಕಟರಮಣಾಚಾರ್ಯ
ಕಾಮಾರಿ ಕಾಮಿಪೆ ಕಾಮನ ಪಿತನಾ | ಕಮನೀಯ ರೂಪನ ಪ ಉಮೆಯರಸನೆ ಮಮ ವಿಷಯ ಸ್ತೋಮವನೀ ಮಾಣಿಪುದಲೊ ಹೇ ಮಹದೇವ ಅ.ಪ. ಗೌರೀ ವರ ತವ ಸುಂದರ ಚರಣಾ | ಸ್ಮರಿಸುವೆ ಪ್ರತಿದಿನಾವೈರಾಗ್ಯ ಹರಿಭಕ್ತಿ ಜ್ಞಾನಾ | ಹರಬೇಡುವೆ ನಿನ್ನಾ |ಮಾರಹರನೆ ಮುರವೈರಿಯ ಪ್ರೀಯನೆಶೌರಿಯ ತೋರಿಸೊ ಹೃದ್ವಾರಿಜದಲಿ 1 ಫಣಿ ಪದ ಯೋಗ್ಯನೆಫಣಿಯ ಶಯ್ಯನ ಕಾಣಿಸೊ ಬೇಗನೆ 2 ತೈಜಸ ಗಜ ಚರ್ಮಾಂಬರನೇ | ಶಿಖಿವಾಹನ ಪಿತನೇ |ಶ್ರೀಕರ ಗುರು ಗೋವಿಂದ ವಿಠಲನಸಖ ಸ್ವೀಕ5ನ್ನನು ಓಕರಿಸದ 3
--------------
ಗುರುಗೋವಿಂದವಿಠಲರು
ಕಾಯಬೇಕೆನ್ನ ಶ್ರೀ ದೇವಾಧಿದೇವಿಣಿ ದಯವುಳ್ಳಸ್ವಾಮಿ ಸಹಕಾರಿ ನಾರಾಯಣಿ ಧ್ರುವ ಕರುಣಾನಂದಗುಣ ಶರಣ ಸಂರಕ್ಷಣಿ ದುರಿತ ವಿಧ್ವಂಸಿನಿ 1 ಘನಸುಖದಾಯಿಣಿ ದೀನ ಉದ್ಧಾರಣಿ ಶಿಖಾಮಣಿ ನೀನೆ ಶ್ರೀ ಲಕ್ಷುಮಿಣಿ 2 ಬಾಹ್ಯಂತ್ರ ವ್ಯಾಪಿಣಿ ಮಹಾಗುರು ಸ್ವರೂಪಿಣಿ ಸಾಹ್ಯದಲಿ ನೀ ಪೂರ್ಣ ಮಹಿಪತಿಯ ಸ್ವಾಮಿಣಿ 3
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ಕೂಗಿದವರ ಬಳಿ ರಾಗವ ಬೀರುವ ನಾಗಶಯನ ನಮ್ಮ ವೇಣುಗೋಪಾಲ ಪ ನಾಗನ ಕೂಗಿಗೆ ಜಗುಡುತೈದಿದ ತ್ಯಾಗಶೀಲನವ ಗೋಪಿಯ ಬಾಲ ಅ.ಪ ಕರದ ಮುರಳಿಯಲ್ಲಿ ಪರಿಪರಿಗಾನವ ಉರುಳಿಸಿ ನಾಟ್ಯಕೆ ಕಿರುನಗೆದೋರಿ ತರುಣ ತರುಣಿಯರ ಬರಸೆಳೆಯುವ ಮಾಂ ಗಿರಿ ಶಿಖರಾಗ್ರದಿ ಮಹಿಮೆಯ ತೋರಿ1
--------------
ಅಸೂರಿ ರಾಮಸ್ವಾಮಿಅಯ್ಯಂಗಾರ್
ಕೃಷ್ಣಾತೀರದಿ ಕುಳಿತಿಷ್ಟವ ಸಲಿಸುವನ್ಯಾರೇ ಪೇಳಮ್ಮಯ್ಯ ಪ ಕಷ್ಟರಹಿತ ಸಂತುಷ್ಟರೆನಿಪ ಸತ್ಯೇಷ್ಟತೀರ್ಥ ಕರಜಪರಾಕ್ರಮರೇ ಅ.ಪ. ಬೋಧ ಮುನಿಯು ಮತ ಶುಭವಾರಿಧಿ ತಾರಕೆ ತಾರೆನೆನಿಪ ಜೀವತಾರ ಶಶಿಕಾಣಮ್ಮ 1 ಶುಭ ತಿಲುಕಾಂಕಿತದಿಂದೊಪ್ಪುವನ್ಯಾರೆ ಪೇಳಮ್ಮಯ್ಯಚಂದ್ರಕಂಠಮಾಲೆ ಕರದಿ ದಂಡವ ಧರಿಸಿಹನ್ಯಾರೆ ಪೇಳಮ್ಮಯ್ಯ ಚಂದ್ರಚರಣ ನಖಶಿಖ ಪರಿಪೂರ್ಣದಿಂದೊಪ್ಪುವ ಗುರುವರ್ಯ ಕಾಣಮ್ಮ 2 ವೃಂದಾವನವರ ಮಂದಿರ ಮಧ್ಯದಿ ರಾಜೀವನ್ಯಾರೇ ಪೇಳಮ್ಮಯ್ಯ ವೃಂದಾರಕ ವರವೃಂದ ವಿನುತನ್ಯಾರೆ ಪೇಳಮ್ಮಯ್ಯ ವೃಂದಾವನ ಸುಂದರ ಗುಣಗಳಿಂಧೊಳೆ ಯುವನ್ಯಾರೆ ಪೇಳಮ್ಮಯ್ಯ ವೃಂದಾವನದೊಳಗಾಶ್ರಿತ ತಂದೆವರದಗೋಪಾಲವಿಠಲನಸೇವಿಪರೇ 3
--------------
ತಂದೆವರದಗೋಪಾಲವಿಠಲರು
ಕೊರವಂಜಿ ಪದ ಬಾರೆ ಸತ್ಯಭಾಮೆ ತೋರೆ ನಿಮ್ಮ ಸುಹಸ್ತದ ಠೇವೆ ಧ್ರುವ ಸರ್ಕನೆ ಬಾರವ್ವಾ ಅರಿಕ್ಯುಳ್ಳ ಗರತಿ ಕರವ ಕೊರವತಿ ತಾರ್ಕಣ್ಯ ಬರುತಾದ ಪರಮ ಸುವಾರ್ತಿ ತರ್ಕರಹಿತ ವಸ್ತು ಕರಕೊ ಸುಮೂರ್ತಿ 1 ಓಯವ್ವ ಅವ್ವ ಬಾರೆ ನಮ್ಮವ್ವ ದೈವುಳ್ಳ ಗರತಿ ನೀನವ್ವ ದೈವ ಬರುದೆ ನಿನ್ನೊಳಗವ್ವ ಕೈದೋರೆ ಕೈದೋರೆ ಕೈದೋರೆ ನಿಮ್ಮ 2 ಕೈದೋರೆ ಕೈದೋರೆ ಕೈದೋರೆ ನಿಮ್ಮ ಕೈಯ ಲಕ್ಷಣ ನೋಡಿ ಹೇಳುವೆನಮ್ಮ ಅಯ್ಯ ಬರುತಾನೆ ಆಶೇಲಿ ನಿಮ್ಮ ಕೈಗೊಟ್ಟು ಕೇಳೆ ನಿಜ ಗುಹ್ಯವರ್ಮ 3 ಸುಳ್ಳು ಮಾತನಾಡಿ ಒಡಲ ಹೊರಳವಲ್ಲ ಬಲ್ಲಷ್ಟು ಬೊಗಳುವೆ ವಿಷಯ ದಾಸ್ಯವಳಲ್ಲ ಉಳ್ಳಷ್ಟು ಹೇಳುವೆ ಕೇಳೆ ಶಿವ ಸೊಲ್ಲ ಹೇಳುವ ಮಾತಿದು ಘನ ಗುರು ತಾ ಬಲ್ಲ 4 ಕೊರವಂಜಿ ಮಾತಿದು ಕಿವಿಗೊಟ್ಟು ಕೇಳಮ್ಮ ಬರುತಾನ ಉದರಲಿ ಹುಟ್ಟಿ ಸಗುಣ ನಿಮ್ಮ ತಾರಿಸುವ ಸ್ವಾಮಿ ಪತಿತ ಪಾವನ ನಿಮ್ಮ ಹರಷದೋರುವ ನಿತ್ಯಾನಂದೋ ಬ್ರಹ್ಮ 5 ಎಂದ ಮಾತನೆ ಕೇಳಿ ಬಂದಳು ಭಾವೆಮ್ಮ ಚೆಂದ ಉಳ್ಳ ಸುರಸ ವಾಕ್ಯ ಕೇಳಿದಳೊಮ್ಮೆ ಬಂದು ಹರುಷದಿ ಪೂರ್ಣ ಸಂದಿಸಿಟ್ಟಳು ಪ್ರೇಮ ಒಂದೆ ನಿಜಸುಮಾತ್ಹೇಳ್ಯೆಂದಳು ನೇಮ 6 ಎಲ್ಲಿಂದ ಬಂದೆವ್ವ ಸೊಲ್ಲ ಬೀರುತ ಶಿವ ಬಲ್ಲ ಮಹಿಮಳೆಂದು ನಾನರಿಯೆನವ್ವ ಇಲ್ಲೆವೆ ಕಂಡೆ ನಾ ಸೊಲ್ಲಿನ ಮಹಿಮರು ಎಲ್ಲ ನೆಲೆನಿಭೇಳೌವ್ವ 7 ಸರಿಯ ಬಂದರ ನಿನ್ನ ಮರಿಯೆನವ್ವ ಎಂದು ಖರೆ ಉಳ್ಳ ಮಾತನೆ ಹೇಳೆ ನಿಜ ಒಂದು ಹಿರಿಯರಗೀ ಮಾತು ಸರಿಯ ಬಾವ್ಹಾಂಗಿಂದು ಬೀರವ್ವ ನಿಜಸಾರವಿಂದು 8 ಲಕ್ಷ ಎಂಬತ್ತುನಾಲ್ಕು ಗ್ರಾಮವ ನೋಡಿ ಲಕ್ಷಿಸುತ ಬಂದ ಲಕ್ಷಣ ನಿಜಗೂಡಿ ಲಕ್ಷುಮಿ ಕರದೋರುತದ ನಿಮ್ಮೊಳೊಡಮೂಡಿ ಅಕ್ಷಯಾನಂದ ಬರುತಾನೆ ಇದರಿಡಿ 9 ಕರ ಕೊಟ್ಟಳು ಸುಶೀಲೆ ವರ ಕೃಪೆಯಲಿ ಕೊರವಂಜಿ ಮಾತಲಿ ಅರಿತಳು ತಾ ತನ್ನಲಿ ಪರಮಾನಂದ ಲೀಲೆ ಬೆರದಳು ಕೇಳಿ 10 ನುಡಿಯುವ್ವ ಸಲಲಿತವಾದ ನಿಜವಾಕ್ಯ ಬಡುವಂತೆ ಹರುಷವು ನೋಡಿ ತ್ರಯಲೋಕ್ಯ ಬಡಸವ್ವ ನನಗಿಂದು ಇದೆ ನಿಜ ಮುಖ್ಯ ಕುಡಲಿಕ್ಕೆ ನಿನಗಿದು ಶಕ್ಯ 11 ಮನದಂತೆಯಾದರ ನೆನದೇನವ್ವ ನಿಮ್ಮ ಅನುಕೂಲಾಗುವ ಪುಣ್ಯ ಪೂರ್ವಾರ್ಜಿತ ನಮ್ಮ ಸಾನುಕೂಲಾಗುವಂತೆ ಬೇಡಿಕೊಳ್ಳಮ್ಮ ನೆನಿ ಎಕನಾತಿ ಎಲ್ಲಮ್ಮ 12 ಒಡಮೂಡಿ ಬಂದರ ಉಡಿಯ ತುಂಬೇನವ್ವ ಜಡಿತಾಭರಣದುಡಿಗಟ್ಟೆ ನಿನಗವ್ವ ಹಿಡಿಯದೆ ಅನುಮಾನ ನುಡಿ ನಿಜ ಸಾರವ್ವ ಕುಡಲಿಕ್ಕೆ ನಿಧಾನದವ್ವ 13 ಕೈಯ ಲಕ್ಷಣದಲಿ ಶ್ರೇಯ ತೋರುತಲ್ಯದ ದಯ ಉಳ್ಳ ಮಹಿಮದ ಸೋಹ್ಯ ಬೀರುತಲ್ಯದ ಭಯವಿಲ್ಲದ ಭಾಗ್ಯ ಅಚಲ ತಾನಾಗ್ಯದ ಜಯಜಯಕಾರ ಭಾಸುತದ 14 ಪುಣ್ಯ ಪ್ರಭೆಯ ಚೆನ್ನಾಗಿ ಭಾಸುತಲ್ಯದೆ ಕಣ್ಣಿಗೆ ಸುಚಿನ್ಹ ಹೊಳವುತದೆ ಚಿನ್ನುಮಯದ ಸುಪುತ್ಥಳಿ ಬರುತದೆ ಬಣ್ಣ ಬಣ್ಣದ ಸುಖ ಬೀರುತದೆ 15 ಅಂಗದೊಳಗ ನಿಮ್ಮ ರಂಗ ಬರುತಾನಮ್ಮ ಕಂಗಳಿಗಿದರಿಡುತದೆ ಹರುಷವು ನಿಮ್ಮ ಭವ ಬಂಧದ ದುಷ್ಕರ್ಮ ಮಂಗಳಕರಾನಂದೊ ಬ್ರಹ್ಮ 16 ನಿನ್ನ ಭಾಗ್ಯಕ ಸರಿ ಇಲ್ಲೆ ಸಂಜೀವನಿ ಚೆನ್ನಾಗಿ ಕೇಳೆ ನೀ ಭಾವೆಗುಣಮಣಿ ಧನ್ಯವಾಯಿತು ನಿನ್ನಂದೆವೆ ಯತಿಮುನಿ ನಿನ್ನೊಳಗುಂಟು ದೇವಶಿಖಾಮಣಿ 17 ಭಾವೆ ನಿನ್ನಿಂದ ಪಾವನ್ನವಾಯಿತು ಜಗ ದೇವಾಧಿದೇವ ಮೂಡುವ ನಿನ್ನೊಳಗೀಗ ಕಾವಕರುಣ ಪ್ರತ್ಯಕ್ಷವಾಗುವ ಯೋಗ ಸುವಿದ್ಯ ಭಾಸುವ ದಿವ್ಯಭೋಗ 18 ಉಂಡ ಊಟ ಕಂಡ ಕನಸು ಪಿಂಡಲಕ್ಷಣ್ಹೇಳುವೆ ಮಂಡಲೊಳಗ ಮಂಡಿಸಿಹ್ಯ ಮಹಿಮೆ ನೀನಗ್ಹೇಳುವೆ ಹಿಂಡದೈವದೊಡಿಯ ನಿನ್ನೊಡಲೊಳಗ ತಾಳುವೆ ಪಂಡಿತರಿಗೆ ಪ್ರಿಯವಾದಾಗ್ಯ ಖಂಡನೀನೆ ಬಾಳುವೆ 19 ನೀನೆ ಜಗಕ ತಾರಿಸುವ ದೈವದೋರಿಕುಡುವೆ ನೀನೆ ಭಕ್ತಜನರ ಜನ್ಮಸಾರ್ಥಕವು ಮಾಡುವೆ ಜ್ಞಾನಗಮ್ಯವಾದ ವಸ್ತುಹಿಡದು ನೀನೆ ಕುಡುವೆ ನಿತ್ಯ ಆಡುವೆ 20 ಅಮ್ಮ ನಿಮ್ಮೊಳು ಘಮ್ಮನ್ಹೊಳುವ ತಮ್ಮ ಬರುತಾನ ಸುಮ್ಮಾನಿಹ್ಹಾ ಸಮೀಪಲೆ ಧಿಮ್ಮ ಹಿಡಿದ ಹಮ್ಮಿನೊಳು ಘುಮ್ಮವಾದರು ಬ್ರಹ್ಮಾದಿಗಳೆ ನಮ್ಮ ನಿಮ್ಮದೆಂಬು ಭ್ರಮೆ ಸುಮ್ಮನ್ಯಾಕಿದೊ ಅಮ್ಮಕೇಳೆ 21 ಬಯಕಿ ಲಕ್ಷಣ ನಿನ್ನ ಹೇಳ್ಹೆನವ್ವಾ ತಾಯಿ ಮಾಯಿಕ ಗುಣ ಸುಟ್ಟು ತಿಂದೇನೆಂಬುದು ಬಾಯಿ ಕೈಕಚ್ಚಿಲೆ ಶುದ್ದಿಲ್ಲಾದವರ ತಾಳದು ಸೋವಿ ಐರಾವತ ಬರುತಾನ ನಿನ್ನೊಳು ಪನ್ನಂಗಶಾಯಿ 22 ಬಾಹ್ಯನಿಷ್ಟರ ಕಂಡು ಬದಿಗೆ ಬರಗುಡಿ ನೀನು ಅಹಂಭಾವಕ ಹೇಸಿ ವಾಕರಿಸುವೆ ನೀನು ಗುಹ್ಯ ಹೇಳುವೆ ನಾನು ಸಾಹ್ಯ ಮಾಡುವ ಶ್ರೀಗುರು ತಾನು 23 ಕಾಮಕ್ರೋಧ ಕರದು ತಿಂದೇನೆಂಬುದು ಬಯಕಿ ನೇಮದಿಂದಲಿ ಮದ ಮತ್ಸರನೆ ನೂಕಿ ಪ್ರೇಮವಿಲ್ಲದವರ ಎಂದಿಗಾದರ ಸೋಕಿ ವರ್ಮಿಕರಿಗೆ ನೀ ಕೈಯಗುಡುವಾಕಿ 24 ಆಸಿ ಎಂಬುದು ಅಟ್ಟುಅರದೇನೆಂಬುದು ಬ್ಯಾಗ ಹುಸಿನುಡಿವೆಂಬದು ಹುರವಾದೀಗ ಹಸನಾದ ಬಯಕೀದು ಋಷಿ ಮುನಿಗಳ ಯೋಗ ಲೇಸು ಲೇಸು ನಿನ್ನ ಅಂತರಂಗ 25 ಧನ್ಯವಾದ ರಾಜಯೋಗವ ಬಯಸುದು ಉನ್ಮನವಾಗಿ ಊರ್ಜಿತವಾದೇನೆಂಬುದು ಸ್ವಾನುಭವದ ಸುಖ ಸೂರ್ಯಾಡೇನೆಂಬುದು ಭಿನ್ನ ಭೇದಕ ಕಣ್ಣ ತ್ಯರಿಯದಿದು 26 ವಾಸುದೇವನ ಭಕ್ತಿ ಆಶ್ರೈಸೇನೆಂಬುದು ಶ್ವಾಸೋಚ್ಛ್ವಾಸಕ ಒಮ್ಮೆ ಬಯಸುವುದು ವಿಷಯ ಪ್ರಪಂಚಕ ಹೇಸಿ ತಾ ಜರೆವುದು ಕುಸುಮನಾಭನ ಸೇವೆ ಇಚ್ಛಿಸುವದು 27 ಒಮ್ಮೆ ಸರಸ್ವತಿ ಕೂಡ ಸರಸಾಡೇನೆಂಬುದು ಒಮ್ಮೆ ಲಕ್ಷುಮಿ ಕೂಡ ಲೋಲಾಡೇನೆಂಬುದು ಒಮ್ಮೆ ಪಾರ್ವತಿ ಕೂಡ ಪವಡೀಸೆನೆಂಬುದು ಒಮ್ಮೆ ಏನುನೊಲ್ಲ್ಯೆನೆಂಬುದು 28 ಹೇಳೇನೆಂದರೆ ನಿನ್ನ ಬಯಕಿಯ ಉಲ್ಹಾಸ ತಿಳಿಯದಿನ್ನೊಬ್ಬರಿಗ ಗರ್ಭದ ಸುವಾಸ ಉಲವುತದೆ ನಿನ್ನೊಳು ಸುಪ್ರಕಾಶ ಥಳಥಳಗುಡುತಿಹ್ಯ ಬಾಲವೇಷ 29 ಧನ್ಯ ಧನ್ಯ ನಿನ್ನ ಗರ್ಭಹೊಳುವ ಹೊಂಬಣ್ಣವು ಒಡಲು ನಿನ್ನ ಪುಣ್ಯ ಪಾವನ್ನವು ಧನ್ಯ ಧನ್ಯ ನಿನ್ನ ದರುಷಣದ ಜೀವನವು ಧನ್ಯ ಧನ್ಯ ನಿನ್ನ ಕಂಡ ಜನರ ಜೀವಪ್ರಾಣವು 30 ಭಾವೆ ನಿನ್ನಿಂದ ಖ್ಯಾತಿಪಡೆದ ಪ್ರಹ್ಲಾದನು ದೇವ ದೇವ ಬಂದು ಸ್ತಂಭದೊಳು ಮೂಡಿದನು ಆವಾವ ಠಾವಿನೊಳು ಬಂದು ರಕ್ಷಿಸಿದನು ಜೀವ ಜೀವ ತಾನೆ ಅಗಿ ಪ್ರಾಣನುಳಹಿದನು 31 ನಿನ್ನ ಬಲಗೊಂಡು ದ್ರೌಪದಿಯ ಖ್ಯಾತಿಪಡೆದಳು ಪುಣ್ಯ ಉಳ್ಳ ಮಹಿಮನಂಘ್ರಿ ಕಣ್ಣಾರ ಕಂಡಳು ಚೆನ್ನಾಗಿ ಬಂದು ಸ್ವಾಮಿ ಲಜ್ಜೆಗಾಯ್ದು ಸಭೆಯೊಳು ಬಣ್ಣ ಬಣ್ಣ ವಸ್ತ್ರ ಪೂರಿಸಿದಾನೇಕಗಳು 32 ಸ್ತುತಿಯು ಮಾಡಲು ನಿನ್ನ ಯತಿಮುನಿಗಳವಲ್ಲ ಗತಿಯ ಪಡೆದರು ಸಕಲ ಮುನಿಜನರೆಲ್ಲ ಅತಿ ಹರುಷವು ಕೂಡಿದರು ಜಗದೊಳಗ್ಯಲ್ಲ ಹಿತದೋರುತಿದೆ ವಸ್ತು ಮಯವೆಲ್ಲ 33 ಹೊಳೆವ ಸುಳಿವ ಚೆಲುವ ನಿನ್ನೊಳಗ ನಲುವನೆ ಕಳವಿಲೊಯಿದ ವೇದನುಳುಹಿದವನು ಬೆಳೆವನೆ ಭಾರ ತಾಳಿದವನು ಉಲುವನೆ ನೆಲವ ಗೆದ್ದ ಬಲಿಯು ನಿನ್ನೊಳಗೆ ಒಲುವನೆ 34 ಸೀಳಿ ದೈತ್ಯನ ಕೊಂದ ಶೂರ ಘಮಗುಡತಾನೆ ಅಳದು ಭೂಮಿಯ ಕೊಂಡು ಬೆಳದವ ಬರುತಾನೆ ತಿಳಿದು ಪಿತರ ಸೂಡುಕೊಂಡವ ಬರುತಾನೆ ಬಲುಪರಾಕ್ರಮದವ ತೋಳುತಾನೆ 35 ತಾಂ ಸಂಚರಿಸ್ಹ್ಯಾನ ನಿನ್ನೊಳಗ ಮೂಡಿ ಬರುತಾನೆ ಬ್ಯಾಗೆ ನಗುತ ಬರುತಾನೆ ಈಗ ಕೈಯಗೊಟ್ಟು ಬರುತಾನೆ ನಿನಗೆ 36 ಸಾಧೀಸಿ ಕೇಳೆ ಕಿವಿಗೊಟ್ಟು ಒದುಗುವ ತಾಂ ಇದರಿಟ್ಟು ಉದಿಯವಾಗುವ ದಯವಿಟ್ಟು ಸದ್ಬಕ್ತರಿಗೆ ಕೈಯಗೊಟ್ಟು 37 ಹುಟ್ಟುವ ಶಿಶುವಿನ ಘಟಣಿಯ ಬಹಳ ಗುಟ್ಟೊಡಿಯಲು ತಾಂ ಮುಟ್ಟನು ತಾಳ ಕಟ್ಟುವ ದೈತ್ಯರ ದಿಟ್ಟ ಮಾ ಸಾಳ ದೃಷ್ಟಿಸಿ ನೋಡುವ ನಿಷ್ಠರ ಮೇಳ 38 ಶಿಶುವಿನ ಲಕ್ಷಣ ಬಲು ಅಗಾಧ ಪರಿ ಮಾಟವು ಋಷಿಗಳ ಬೋಧ ಹಸು ನೀರಡಿಸರವುದು ಶ್ರೀಪಾದ ಬಸುರಿನ ಬಯಕಿದು ಬಲುಸುಸ್ವಾದ 39 ಘಮಗುಡುತದೆ ಅನಾಹತದ ಧ್ವನಿಯು ಕ್ರಮ ತಿಳಿವದು ಸುಯೋಗದ ಮನಿಯು ಧಿಮಿಗುಡುತದ ಆನಂದದ ಖಣಿಯು ಭ್ರಮ ಬಿಡಿಸುವ ಘನ ಚಿಂತಾಮಣಿಯು 40 ಹುಟ್ಟಿ ಬರುತಾನಿವ ಶಿಷ್ಟರ ಮನಿಲಿವ ದುಷ್ಟ ಮರ್ದನ ದೇವ ನಿಷ್ಠರಿಗೆ ಕಾವ ಎಷ್ಟೆಂದ್ಹೇಳಲವ್ವ ಸೃಷ್ಟಿಗಧಿಕನಿವ ಮುಟ್ಟಿ ಮುದ್ರಿಸುವ ದಿಟ್ಟೆದೆ ಕೂಸವ್ವ 41 ವರ್ಣಿಸಲಾಗದು ಶಿಶುವಿನ ವಿವರಣ ದಣಿಯಿತು ಕೊಂಡಾಡಿ ವೇದಸುಪುರಾಣ ಖೂನ ತಿಳಿಯದು ತಾನು ಶಾಸ್ತ್ರಕ ಸಂಪೂರ್ಣ ದ್ಯಾನ ಮೋನಕ ದೂರಗಮ್ಯ ಸ್ಥಾನ 42 ಗುಟ್ಟು ತಿಳಿಯದ ವಸ್ತು ಹುಟ್ಟಿಬಾಹುದು ಕೇಳಿ ಉಂಟಾಗುವದು ನಿನ್ನೊಳು ನೆನದಾಗಳೆ ಘಟ್ಯಾಗಿ ಅನುಭವಿಸುತ ನೀನೆ ಬಾಳೆ ದೃಷ್ಟಿಯೊಳೀಗುಟ್ಟು ಆರೀಗ್ಹೇಳೆ 43 ಬಸುರು ಬಯಕೆಂಬುದು ಹೆಸರಿಸಲಳವಲ್ಲ ಹಸನಾಗಿ ಅನುಭವಿಸುವ ಪುರುಷನೆ ಬಲ್ಲ ವಾಸುದೇವನ ಕಾಣದಿಹ್ಯದೆ ಕಣ್ಣಲ್ಲ ಆಸಿ ಅಳಿದವರೆ ತಾಂ ತಿಳಿದರೆಲ್ಲ 44 ಹುಟ್ಟುವ ಲಕ್ಷಣ ಕೇಳೆ ನೀ ಕಿವಿಗೊಟ್ಟು ಮುಟ್ಟಿ ಮುದ್ರಿಸಿಹ್ಯ ಗುರು ಕಟಾಕ್ಷವ ಕೊಟ್ಟು ಇಟ್ಟುಕೊ ಈ ಮಾತು ಆರಿಗ್ಹೇಳೆ ಬಿಟ್ಟು ಗಂಟು ಕಟ್ಟಿದ ಮಾತು ಹೇಳೆಬಿಟ್ಟು 45 ಆಲಕ್ಷವೆಂಬ ಸುನಕ್ಷತ್ರದಲಿ ಪುಟ್ಟಿ ಸುಲಕ್ಷಣದಲಿ ಬರುತಾನೆ ಜಗಜಟ್ಟಿ ನೆಲಯುಗೊಂಡಾಡಿಸಿ ಮನಮುಟ್ಟಿ 46 ಜನ್ಮನಾಮೆಂಬುದು ಕೂಸಿನ ನಿರ್ಗುಣ ಸಮಸ್ತರಿಗೆ ನಡವ ನಾಮವೆ ಸಗುಣ ಬ್ರಹ್ಮಾನಂದದಿ ಲೋಲ್ಯಾಡುವ ಪರಿಪೂರ್ಣ ಕಮಲನಯನ ಸ್ವಾಮಿ ರಮಾರಮಣ 47 ಕೂಸು ಎಂದರ ತಾನು ಕೂಸು ಎನಲಾಗದು ವಾಸವಾಗ್ಯಾಡುದು ವಿಶ್ವಲಿದು ಹೆಸರನೇಕಪರಿಯಲಿ ಕರಿಸಿಕೊಂಡು ಲೇಸು ಲೇಸಾಗಿ ತಾ ಆಡುವುದು 48 ಹಿಂದ ಅಡಿದ ಆಟ ಮಂದದೆ ಆಡುದು ಎಂದಿಗ್ಯದರ ಗುಟ್ಟು ತಿಳಿಯಗುಡುದು ಒಂದಿಸಿದವರ ತನ್ನೊಳು ಕೂಡಿಕೊಂಬುದು ಒಂದೆ ವಸ್ತುವಾಗಿ ತೋರುವುದು 49 ಹೇಳುವೆ ಕೇಳೆ ಶಿಶುವಿನ ಆಟ ತಿಳಿಯಲು ಜಗದೊಳು ಬಲು ಅವ್ಹಾಟ ನೆಲಿ ತಿಳಿದವರಿಗೆ ತೋರುದದು ನೀಟ ನಲಿನಲಿದಾಡುವ ಸಲಲಿತದಾಟ 50 ಒಮ್ಮೆ ನೀರನೆ ಚಲಿಪಿಲಿ ಮಾಡುವ ಒಮ್ಮೆ ಬಾಗಿ ಜಗನೆಗುವ ಒಮ್ಮೆ ಹಲ್ಲಿಲೆ ಬೇರನೆ ಅಗಳುವ ಒಮ್ಮೆ ಬರುತಲಿ ಗುರುಗುಡುವ 51 ಒಮ್ಮೆ ಬಲು ಗಿಡ್ಡಾಗಿ ತೋರುವ ಒಮ್ಮೆ ಪರಾಕ್ರಮ ಹಿಡುವ ಒಮ್ಮೆ ವನದೊಳಗಾಡುತ ಹೋಗುವ ಒಮ್ಮೆ ಕಡವ ಬೆಣ್ಣೆಯ ಮೆಲುವ 52 ಒಮ್ಮೆ ಬತ್ತಲೆ ತ್ರಿಪುರದಲಿ ಸುಳಿವ ಒಮ್ಮೆ ಏರುವ ತಾ ಹಯವ ಒಮ್ಮೊಮ್ಮಾಗುವ ತಾನೆವೆ ಸಗುಣವ ಒಮ್ಮೊಮ್ಮಾಗುವ ನಿರ್ಗುಣವ 53
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ಕ್ಷೇತ್ರ ಮೇಲುಕೋಟೆ ಹರಿಯ ಕಂಡೆನು ಗಿರಿಯದೊರೆಯ ಕಂಡೆನು ಪ. ತರಳನನ್ನು ಪೊರೆಯಲೋಸುಗ ನರಮೃಗಾವತಾರನಾದಅ.ಪ. ತಿರುನಾರಾಯಣಪುರದ ಗಿರಿಯ ಶಿಖರದಿ ಚರಣತಲದಿ ತಿರುಕಲ್ಯಾಣಿ ಮೆರೆಯುತಿರಲು ಹರುಷದಿಂದ ಹರಿಯ 1 ದಾಸರಾದರ ಹೃದಯಾ ವಾಸನೆನಿಸುವ ವಿನುತ ಚರಣ ಭಾಸುರಾಂಗ ದೋಷಹರಣ ಹರಿಯ 2 ನಾಗವೈರಿಯ ರೂಪನಾಗೆ ಮೆರೆಯುವ ಯೋಗಪಟ್ಟಿಯಾಂತು ಪರಮ ಯೋಗನಿಷ್ಟೆಯಲ್ಲಿ ಕುಳಿತ ಹರಿಯ 3 ದುಷ್ಟದೈತ್ಯರಂ ಕುಟ್ಟಿ ಕೆಡಹಿದ ಮುಟ್ಟಿಭಜಿಪ ಭಕ್ತರೆಲ್ಲರ ಕಷ್ಟಕಳೆದು ಇಷ್ಟವೀವ ಹರಿಯ 4 ಶೇಷಗಿರಿಯೊಳು ಮತ್ತಾ ಮೇಲುಕೋಟೆಯೊಳ್ ಶೇಷಭೂತರಾಶೇಷ ಭಕ್ತರ ಪೋಷಿಸುತ್ತಿಹ ಸರ್ವೇಶನೀತನೆ ಹರಿಯ 5
--------------
ನಂಜನಗೂಡು ತಿರುಮಲಾಂಬಾ
ಗಂಡಾಂತರ ಪರಿಹರಿಸು ಗರುಡಾಂಕಗಮನ ಹರಿ ಪುಂಡರೀಕಾಯತಾಕ್ಷ ಮೊಂಡತನ ತಾಳಿರುವ ಲಂಡರಸನಭಿಮತವ ಖಂಡಿಸು ಕೃಪಾಂಬುರಾಶಿ ಗ್ರಹವಾಸಿ ಪ. ನಿನ್ನ ಸೇವೆಯ ಮಾಳ್ಪ ನಿರಪರಾಧಿಯ ಮ್ಯಾಲೆ ಅನ್ಯಾಯ ಕೃತಭಾರವ ತನ್ನಂತೆ ಪೊರಿಸಬೇಕೆಂನುವರ ನೀನೆಂತು ಮನ್ನಿಸುವೆ ಮಾನ ಕಾವ ಭಿನ್ನ ಭಾವನೆ ತಾಳ್ದ ಭೂಪತಿಗೆ ಭಯದೋರಿ ಎನ್ನ ಕಾಪಾಡುವ ದೇವ ಭವನಾವ 1 ಅಡಿಗಡಿಗೆ ನಿನಗಂಜಿ ನಡೆವೆ ನಾನೆಂಬುದನು ಒಡೆಯ ನಿನಗೆಂಬುದೇನು ಕಡು ಮೂರ್ಖ ಜನರೆನ್ನ ಕಷ್ಟಗೊಳಿಪುದ ನೋಡಿ ಬಿಡಲ್ಯಾಕೆ ಭಾಗ್ಯವೇನು ಒಡೆಯ ಕಂಭದಿ ಬಂದು ಪಿಡಿದಾದಿ ದೈತ್ಯೇಯ- ನೊಡಲ ಬಗೆದಂಥ ಧೀರ ಬಲಸಾರ 2 ಪರಿಯಂತ ಪಾಲಿಸದ ಶೇಷಾದ್ರಿ ಶಿಖರವಾಸ ಬ್ಯಾಸತ್ತು ಬಹು ವಿಧದಿ ಬಳಲಿ ಬೆಂಡಾಗಿಹೆನು ದೋಷವೆಣಿಸದಿರು ಲೇಶ ನೀ ಸಲಹು ನಿಗಮಭೂಷ ಹೇ ಶ್ರೀಶ 3
--------------
ತುಪಾಕಿ ವೆಂಕಟರಮಣಾಚಾರ್ಯ
ಗಣಪಾ ನೀ ಪಾಲಿಸೊ ಗಜಮುಖನೆ ವೋ ಪ ತ್ರಿಣಿಯಸತಿ ಗಿರಿಜಾಸುತನೆ ಕೇಳ್ ಮನುಮುನಿ ಸನಕಾದಿ ವಂದಿತ ಅಣಿದು ನೀ ರಕ್ಷಿಸಲು ನಿನಗಿ ನ್ನೆಣೆಯುಗಾಣೆನು ಸರ್ವಸಿದ್ಧಿ ವೋ 1 ವೇದಶಾಸ್ತ್ರ ಪುರಾಣ ವಿದ್ವ ಕ್ಕಾದಿ ರೂಪನೆ ದಿವ್ಯಪ್ರಣನಾ ನಾದರೂಪನೆ ಸರ್ವಮಂಗಳ ಸಾಧು ಶಿಖರನೆ ಸರ್ವಸಿದ್ಧಿ ವೋ 2 ಏಕದಂತನೆ ಷಣ್ಮುಖಾಗ್ರಜ ವಾಕ್ಕು ಶುದ್ಧಿಯೊಳಾಡಿಸೆನ್ನನೂ ಬೇಕು ನಿನ್ನಯ ಕರುಣಯಿತರವು 3 ವಾಸವಾರ್ಚಿತ ಶ್ರೀಗುರು ಹಿರಿ ದಾಸ ತುಲಸೀರಾಮ ನಿನ್ನಯ ದೋಷ ಅಂತಕನಾಮ ಯತಿಗಣ ಪ್ರಾಸು ಹೊಂದಿಸೊ ಯೀಶಪುತ್ರನೇ 4
--------------
ಚನ್ನಪಟ್ಟಣದ ಅಹೋಬಲದಾಸರು
ಗೋದೆ ಸಮಸ್ತಫಲದೆ ಸ್ನಾನ ಒದಗಿಮಾ-ದರೊಮ್ಮೆ ವೈಕುಂಠಪದವೀವೆ ಪ. ಬ್ರಹ್ಮಾದಿ ಶಿಖರದಿಂ ಪುಟ್ಟಿ ನೀನು ಬಲುಬ್ರಹ್ಮ ಋಷಿಯಾದ ಗೌತಮ ಮುನಿಯಬ್ರಾಹ್ಮರಿಂದಲಿ ಬಂದ ಗೋಹತ್ಯ ಪರಿಹರಿಸಿಅಮ್ಮಮ್ಮ ಸಪ್ತಮುಖದಿಂದ ಸಾಗರವ ಬೆರೆದೆ 1 ಆದಿಯಲಿ ತ್ರಿಯಂಬಕನ ಜ[ಡೆ]ಯಲುದಿಸಿದೆ ನೀನುಮುದದಿಂದ ಪಶ್ಚಿಮಕಾಗಿ ನಡೆಯೆ ಕಂಡುಒದಗಿ ಗೌತಮನು ಕುಶದಿಂದ ತಿರುಗಿಸÀಲು ನೀಸದಮಲ ಕುಶಾವರ್ತಳೆಂದೆನಿಸಿಕೊಂಡೆ 2 ಔದುಂಬರ ವೃಕ್ಷಮೂಲದಿಂದುದ್ಭವಿಸಿಉದಧಿಯನು ಕೂಡಬೇಕೆಂದು ಬೇಗಮೇದಿನಿಯಿಳಿದು ತಿರುಗುತಲಿ ನೀ ಮುದದಿಂದಆದರದಿ ಪೂರ್ವಾಬ್ಧಿಯನು ಕೂಡಿದೆ 3 ಸಿಂಹರಾಸಿಯಲಿ ಸುರಗುರು ಬಂದುದು ಕೇಳಿಅಂವ್ಹ ರಾಸಿಗಳು ಸಂಹಾರಕಾಗಿಬಂಹ್ವಾಯಾಸದಿ ಬಂದು ನಿಮ್ಮನು ಕಂಡೆಅಂವ್ಹಂಗಳು ಪರಿಹರಿಸಿ ಮುಕುತಿಯ[ಕೊಡು]ದೇವಿ 4 ವಿನಯದಲಿ ಸ್ನಾನಪಾನವನು ಮಾಡುವರಿಗೆವನಜಾಕ್ಷ ಹಯವದನ ಹರಿಯವನಜನಾಭನ ಲೋಕಸಾಧನವಾದಘನ ಭಕುತಿಯನಿತ್ತು ರಕ್ಷಿಸುದೇವಿ 5
--------------
ವಾದಿರಾಜ
ಚಾರು ಹಸ್ತಾಯ 1ಹೃದಯಶೋಭಿತ ಮಹಾ ಕೌಸ್ತುಭಾಭರಣಾಯವಿಧಿಜನಕ ನಾಭಿಪಂಕಜ ಭಾಸುರಾಯಸದಮಲಾಯತ ಕಾಂಚಿದಾಮಯುತ ವಸನಾಯಬುಧಜನಮನೋವೇದ್ಯ ಪಾದಪದ್ಮಾಯ 2ಲಕ್ಷ್ಮೀಕಳತ್ರಾಯ ಸೂಕ್ಷ್ಮಸ್ವರೂಪಾಯಕುಕ್ಷಿಗತಭುವನ ಪರಿಪಾಲಕಾಯಪಕ್ಷೀಂದ್ರಕಂಧರಾರೂಢಾಯ ದುಷ್ಟಜನಶಿಕ್ಷಾಸಮರ್ಥಾಯ ಸಾಕ್ಷಿ ಚೈತನ್ಯಾಯ 3ವಿಶ್ವಸ್ವರೂಪಾಯ ವಿಶ್ವತರು ಮೂಲಾಯವಿಶ್ವಗುಣ ಸಂಹಾರಕಾರಣಾಯವಿಶ್ವನಾಟಕಸೂತ್ರಧಾರಾಯ ನಿತ್ಯಾಯವಿಶ್ವಕೃತ ಸುಕೃತದುಷ್ಕøತ ಲೇಪರಹಿತಾಯ 4ಧರಣಿಕಮಲಾಲಯಾಶ್ರಿತ ದಿವ್ಯ ಪಾಶ್ರ್ವಾಯಸುರಮುನಿ ಸ್ತುತಿ ಘೋಷಪೂರಿತಾಯಪರಮಪಾವನಪುಣ್ಯ ಶೇಷಾದ್ರಿನಿಲಯಾಯಸ್ಮರಜನಕ ಸುರಶಿಖಾಮಣಿ ವೆಂಕಟೇಶಾಯ 5ಓಂ ಅನಘಾಯ ನಮಃಕಂ||ಗಣಪತಿ ನಿನ್ನಾಗ್ನೇಯದಲಿನ ತಾ ನೈರುತ್ಯದೆಶೆಯೊಳಂಬಿಕೆಮರುತನೊಳನುಪಮ ಶಂಕರನೀಶಾನ್ಯನೋಳರ್ಚಿತರಾರೈಯ್ಯ ತಿರುಪತಿಯೊಡೆಯಾನೀನೇ ಗಣಪತಿ ಸೂರ್ಯನುನೀನೇ ಶಿವ ನಿನ್ನ ಶಕ್ತಿ ದೇವಿಯು ನಾನೂನೀನಾಗಿ ನಿನ್ನ ಭಜಿಸಿದೆನೀ ನಿರ್ಣಯ ನಿನ್ನ ವಚನ ವೆಂಕಟರಮಣಾ
--------------
ತಿಮ್ಮಪ್ಪದಾಸರು
ಜನನ ಮರಣ ಎರಡು ಇಲ್ಲವೊ ತಾ ತಿಳಿದ ಮೇಲೆ ಪ ಮನದೊಳಿರುವ ಮಮತೆ ಅಳಿದು ಘನವಿವೇಕವಾಗಿ ಕಾಣುವ ಇನಕುಲೇಶನನ್ನು ಬಿಡದೆಅನುರಾಗದೊಳು ಭಜಿಸಿದವಗೆ ಅ.ಪ ಆರುಮೂರು ಮೀರಿ ನೋಡೆಲೈ ಅಲ್ಲಿರುವ ತಾರಕದಾರಿ ಪ್ರಣವ ಸಾರುತಿದೆ ನೋಡೈ ಘೋರ ಕತ್ತಲೆಯನರಿದು ಮಾರಜನಕನನ್ನು ನೆನೆದು ಏರಿ ಶಿಖರದೊಳಗೆಯಿರುವ ತೇರು ಕಂಡುಬಂದಬಳಿಕ 1 ದಾನವಾರಿಯನ್ನು ಕಾಣೆಲೊ ಶ್ರೀಪರಮ ಚರಿತ ಗಾನಲೋಲನನ್ನು ಕಾಣೆಲೈ ಭಾನುಕೋಟಿರೂಪನಹುದು ಗುರುವು ತುಲಸಿರಾಮದಾಸ ದೀನರಕ್ಷಕನೆಂದು ಭಜನೆ ಮಾಡಿಕೊಂಡು ಬಂದಬಳಿಕ 2
--------------
ಚನ್ನಪಟ್ಟಣದ ಅಹೋಬಲದಾಸರು
ಜಯ ಜಯ ಜಯ ಜಯ ಜಯ ವಿಷ್ಣುಪಾದ ಜಯ ಶೇಷಗಿರಿಯಲ್ಲಿ ಮೆರೆವಂಥಾ ಪಾದ ಜಯ ಭಕ್ತಕೋಟಿ ಜೀವರ ಸಲಹುವ ಪಾದ ಸಿರಿ ಪಾದ 1 ಧ್ವಜ ವಜ್ರಾಂಕುಶ ಪದ್ಮ ಪಾದ ನಿಜದಿ ಸಲಹುವ ಗಂಗಾಜನಕನ ಪಾದ ಮದಗಜಗಮನನ ಪಾದ ಪಾದ 2 ಪೀತಾಂಬರಧರನ ಪಾದ ಪಾದ ಸೀತಾಪÀತೆ ದಿವ್ಯಹನುಮಾನುತ ಪಾದ ಪಾದ 3 ಹಾರ ಪದಕವಿಟ್ಟ ಪಾದ ತನ್ನ ನಾರಿ ಲಕುಮಿ ಸಹ ಮೆರೆವಂಥ ಪಾದ ಪಾರುಗಾಣಿಪ ದಿವ್ಯ ನೋಟದ ಪಾದ ಪಾದ ಭವವಾರುಧಿ ದಾಟಿಸುವ ದಿವ್ಯಪಾದ 4 ಮಕರ ಕುಂಡಲಧರನ ಪಾದ ತನ್ನ ಸಖ ಪಾಂಡವರಿಗೆ ಒಲಿದಂಥ ಪಾದ ಶಿಖೆಯೊಳು ಮಾಣಿಕ್ಯ ಕಿರೀಟನ ಪಾದ ಪಾದ 5 ಪಾದ ಪಾದ ಅಮೃತ ತಂದ ಪಾದ ಅಚ್ಚ ಭೂಮಿಯ ತಂದ ಪಾದ ಪಾದ 6 ಭೂಮಿಯನಳೆದಂಥ ಪಾದ ಭೂವ್ಯೋಮ ತ್ರಿವಿಕ್ರಮ ವಾಮನ ಪಾದ ಸ್ವಾಮಿ ಪರಶುಧರನ ಪಾದ ಪಾದ 7 ಗೋಕುಲನಂದನ ಪಾದ ಶ್ರೀಪತಿ ಬೌದ್ಧನ ಪಾದ ಪರಿ ನೆನಯಲಿ ಶ್ರೀಪ ಕಲ್ಕಿ ಪಾದ ಪಾದ 8 ಹತ್ತಾವತಾರ ಎತ್ತಿದ ಪಾದ ಭಕ್ತರನೆಲ್ಲಾ ಸಲಹುವ ಪಾದ ಮುಕ್ತಿದಾಯಕ ಕೃಷ್ಣನ ಪಾದ ಪಾದ 9 ಮೂರು ಹೆಜ್ಜೆ ಭೂಮಿ ಬೇಡಿದ ಪಾದ ತನ್ನ ಹಾರೈಸಿದ ಭಕ್ತರಿಗೋಸುಗ ಊರಿ ವೆಂಕಟಗಿರಿಯೊಳ್ ಮೆರೆವಂಥಾ ಭಕ್ತ ಪಾದ 10 ಪಾದ ಮಸ್ತಕದಿ ರಾರಾಜಿಸುವ ಕಿರೀಟನ ಪಾದ ಕಸ್ತೂರಿ ರಂಗನ ಪಾದ ಪಾದ 11
--------------
ಸರಸ್ವತಿ ಬಾಯಿ
ಜಯ ಜಯ ರಮಾಕಾಂತ - ಜಯತು ದೈತ್ಯ ಕೃತಾಂತ ಜಯ ಸರ್ವ ವೇದಾಂತ - ಜಯತು ನಿಶ್ಚಿಂತ ಪ ಬೇಡ ವೇಷವ ತಾಳಿ- ಓಡಿಸುತೆ ತುರಗವನು ಪ್ರೌಢೆ ಪದ್ಮಾವತಿಯ - ನೋಡಿ ನಸುನಗುತ ಜೋಡಾಗು ತನಗೆಂದು - ಗಾಡಿಕಾರರ ಮಾತ ನಾಡಿ ಕ್ರೋಢಾಲಯಕೆ - ಓಡಿಬಂದವನೆ 1 ತಾಯೆ ಬಕುಳೆಯ ಕಳುಹಿ ಮಾಯಕದ ಕೊರವಂಜಿ ಕಾಯದಿಂದಾಕಾಶರಾಯನರಮನೆಗೆ ಜೋಯೆಂದು ಪೋಗಿ - ಸದುಪಾಯಗಳ ನಡೆಸಿ ತ ನ್ನಾಯ ಕೈತಂದ ಕಮನೀಯ ಮೂರುತಿಯೆ 2 ಶುಕಮುನಿಯ ಮುಖದಿಂದ ಸುಖವಾರ್ತೆಯನು ಕೇಳಿ ಸಕಲ ದೇವೋತ್ತಮರ - ನಿಕರವನು ನೆರಹಿ ಅಕಳಂಕ ಲಗ್ನದಲಿ ಸುಕಪೋಲೆಗೊಲಿದುರಗ ಶಿಖರಿಯಲಿ ನೆಲೆಯಾದ ಲಕುಮಿವಲ್ಲಭನೆ 3
--------------
ಲಕ್ಷ್ಮೀನಾರಯಣರಾಯರು