ಒಟ್ಟು 401 ಕಡೆಗಳಲ್ಲಿ , 66 ದಾಸರು , 311 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಉಪ್ಪವಡಿಸಯ್ಯ ಉಡುಪಿನ ಕೃಷ್ಣ ಚೆಲ್ವಕಂ-ದÀರ್ಪನಪ್ಪನೆ ಕಣ್ದೆರೆ ಪ. ಸರ್ಪನಂಗದಲಿ ರುಕ್ಮಿಣಿ ಸತ್ಯಭಾಮೆಯರಅಪ್ಪಿಕೊಂಡಿಪ್ಪ ಬಲು ಸುಪ್ರಸಿದ್ಧಅಪ್ರತಿಮ ಗುಣಗಣಾಂಬುಧಿ ಕರುಣಾನಿಧಿಯೆಸುಪ್ರೇಮದಿಂದ ನೋಡಾ ದೇವ 1 ದೇಹಿಗಳ ನಿದ್ರೆಯನು ತಿಳುಹಿಸುವರಾರು ನಿ-ರ್ವಾಹಕನು ನೀನು ನಿದ್ರೆಯ ಕೈಕೊಳೆಆಹುತಿಗಳನುವಾದ ಅನಲಮುಖದಲಿ ನಿನಗೆಶ್ರೀಹರಿಯೆ ದುರಿತಾರಿಯೆ ದೇವ 2 ನಿದ್ರೆಯಂ ತೊರೆದು ಸಿದ್ಧಾಸನದಿ ಕುಳ್ಳಿರ್ದುಸಿದ್ಧರೆಲ್ಲರು ತಮ್ಮ ಹೃದಯಕಮಲಸದ್ಮವನು ಬೆಳಗಿ ನಿನ್ನನೆ ಅರಸುತೈದಾರೆಮುದ್ದುಮೊಗವನು ತೋರಿಸಾ ದೇವ 3 ತುಂಬಿ ಕರೆಯಕಳುಹಿದ ನಿನ್ನಮನೆಯ ಬಾಗಿಲೊಳರಸುತ್ತ ದೇವ 4 ಕಮಲಕೊಬ್ಬಿತು ಸೂರ್ಯನತಿ ಪೆರ್ಮೆಯಂ ಪೊತ್ತಕ್ರಮದಿಂದ ನಿನ್ನ ಪೂರ್ವಜಸೋಮನೊಭ್ರಮೆಗೊಂಡವನ ಪರಿವಾರಕಾಯಿತು ಸೋಲುಸುಮುಖಚಂದ್ರನೆ ಬೆಳಗಿಸಾ ದೇವ 5 ಅಮಲಜಲದಲ್ಲಿ ಮಜ್ಜನವ ಮಾಡುವೆನೆಂದುಕ್ರಮದಿಂದ ತೀರ್ಥಗಳು ಕರೆದು ನಿನ್ನ ರಮಣೀಯ ಮೂರುತಿಯ ಮನದಲ್ಲಿ ನಿಲಿಸುವಶ್ರಮವ ಸಾರ್ಥಕ ಮಾಡೊ ದೇವ 6 ಅತಿಶೀತ ಹರುಷದಿಂ ಪುಳಕ ಶೋಭಿತರಾಗಿಪ್ರತಿಕ್ಷಣದಿ ನಿನ್ನನೇ ನೆನೆದು ನೆನೆದುವ್ರತದಿಂದ ಪೇಳುವ ಶ್ರುತಿ ಪುರಾಣದೊಳಿಪ್ಪಸ್ತುತಿಯನಾಲೈಸಿ ಕೇಳಾ ದೇವ 7 ತನುವ ರಂಜಿಸಿ ಶಂಖ ಚಕ್ರೋಧ್ರ್ವಪುಂಡÀ್ರದಿಂಪ್ರಣಮಮಂ ಪೇಳಿ ಮಂತ್ರಿತ ವಾರಿಯಘನ ಮಹಿಮ ನಿನ್ನ ಹಸ್ತದಲಿ ತರ್ಪಣ ಮಾಡಲನುವಾದರಯ್ಯ ಬುಧರು 8 ಎನಲುಪ್ಪವಡಿಸಿ ಶ್ರೀಕೃಷ್ಣ ಹಯವದನ ತಂ-ಪಿನ ನಾಗಭೋಗ ವಿಸ್ತರದಿ ಕುಳಿತುವನಜಸಂಭವಸಹಿತ ವಿಬುಧರೊಡ್ಡೋಲಗದಿಮುನಿಗಳರ್ಚಿಸಿ ಮೆಚ್ಚಿಸೆ ದೇವ9
--------------
ವಾದಿರಾಜ
ಎಂತು ಪೊಗಳಲಳವೇ ದ್ವಾರಾವತಿಯ ದೊರೆಯನ್ನು ಕಂತುಪಿತ ಶ್ರೀಕೃಷ್ಣ ಮೂರುತಿಯಾ ಪ. ಅಂತರಂಗದಲಿ ನಿಂತು ಪೊರೆಯುವ ಏಕಾಂತ ಮೂರುತಿಯ ಕರುಣಾನಿಧಿಯಾ ಅ.ಪ. ಆಲದೆಲೆಯ ಮೇಲೆ ಮಲಗಿದ ಸಿಂಧು ನಲಿಯುತ ಕನಕನ ಕಿಂಡಿಯಲಿ ನಿಂದು ಒಲಿದು ವರಗಳನೀವ ಗುಣಸಿಂಧು 1 ಕಂಠದಲಿ ಮುತ್ತಿನಹಾರ ವಜ್ರದಂಗಿಯ ಅಲಂಕಾರ ಕಂಟೀಪದಕ ವಿಸ್ತಾರ ಕರದಲಿ ವಜ್ರದುಂಗೂರ ಸೊಂಟಪಟ್ಟಿಯ ಕಟ್ಟಿದಾ ಚಂದ ನಾಭೀ ಕಮಲದಾನಂದ 2 ಕಡೆಕಣ್ಣು ಕಂಗಳಾ ನೋಟ ಕಸ್ತೂರಿ ಲಲಾಟ ಕುಡಿಹುಬ್ಬುಗಳ ನೀಟಾ ವಜ್ರಮಾಣಿಕ್ಯದ ಕಿರೀಟ ಪಿಡಿದಿರುವ ಕಡಗೋಲು ಕರದಿ ರುಕ್ಮಿಣೀಶ ವಿಠಲ 3
--------------
ಗುಂಡಮ್ಮ
ಎಂಥ ಕೌತುಕವೆ ನಿಮ್ಮಿಬ್ಬರದೆಂಥ ಕೌತುಕವೆಎಂಥ ಕೌತುಕ ಚಿಂತಾಮಣಿಯ ನೋಡಿಸಂತೋಷ ವಾಗದೆ ಕಾಂತೆಯರುಕಾದುವ ಎಂಥ ಕೌತುಕವೆ ಪ. ನಾರಿಯರಿಬ್ಬರ ಬಿಟ್ಟು ನೀರೊಳಡಗಿದಮಾರಿ ತೋರದಲೆ ನೆಲವನೆ ಮಾರಿ ತೋರದಲೆ ನೆಲವನೆ ಬಗಿದುಅತಿ ಕ್ರೂರನಾದರೂ ಬಿಡರೆಲೆ ಸಖಿಯೆ1 ತಿರಕ ತಾಯಿಯಸುದ್ದಿ ಅರಿತವನಲ್ಲದೆದೊರೆತನ ಬಿಟ್ಟು ದನವನೆ ಕಾಯ್ದುದೊರೆತನ ಬಿಟ್ಟು ದನವ ಕಾಯ್ದರುನಿಮ್ಮ ಕರಕರೆ ಒಂದು ಬಿಡರೆಲೆ ಸಖಿಯೆ2 ಬತ್ತಲಾಗಿ ಎನ್ನ ಹತ್ತಿಲೆ ನಿಲ್ಲೆಂದುಎತ್ತ ಓಡಲೆನುತÀ ಕುದುರೆಯಎತ್ತ ಓಡಲೆನುತ ಕುದುರೆ ಜಳಕಿಸಿಬೆನ್ಹತ್ತಿ ಕೊಂಡವನ ಬಿಡರೆಲೆ ಸಖಿಯೆ3 ಕಾಲ ನಳಿನಾಕ್ಷಿ ಆಗ ನೆರವಾದಿನಳಿನಾಕ್ಷಿ ಆಗ ನೆರವಾದಿ ಉಪಕಾರ ಒಲಿದುಶ್ರೀಕೃಷ್ಣ ಮದುವ್ಯಾದ ಸಖಿಯೆ 4 ಕುಂದುಗುಣಗಳೆಲ್ಲ ಮುಂದಕ್ಕೆ ತಾರದೆ ಹಿಂದಿನ ಉಪಕಾರ ಸ್ಮರಿಸುತ ಹಿಂದಿನ ಉಪಕಾರ ಸ್ಮರಿಸುತ ಅವಳು ಮುಂದೆ ಬೇಕೆಂದು ಮನಸೋತ ಸಖಿಯೆ5 ಭಾವೆ ರುಕ್ಮಿಣಿ ನಿಮ್ಮ ಹೀನಗುಣನೋಡದೆಕಾಮನ ಪಿತನು ಕೈ ಹಿಡಿದ ಕಾಮನ ಪಿತನು ಕೈ ಹಿಡಿದ ಕಾರಣಭೂಮಂಡಲವೆಲ್ಲ ನಮಿಸಿತು ಸಖಿಯೆ 6 ಅಷ್ಟು ಜನರೊಳು ಧಿಟ್ಟತನವ ಮಾಡಿಗಟ್ಯಾಗಿ ನೀನು ರಥವೇರಿಗಟ್ಯಾಗಿ ನೀನು ರಥವೇರಿ ಧೈರ್ಯದಿಕೃಷ್ಣನ ಬೆರೆದು ತೆರಳಿದಿ ಸಖಿಯೆ 7 ಮುದ್ದು ರಾಮೇಶಗೆÀ ಕದ್ದು ಓಲೆಯ ಬರಿಯೆಹದ್ದು ವಾಹನನು ಎರಗಿದಹದ್ದು ವಾಹನನು ಎರಗಿದ ಕಾರಣವಿದ್ವಜ್ಜನರೆಲ್ಲ ನಮಿಸಿತು ಸಖಿಯೆ8
--------------
ಗಲಗಲಿಅವ್ವನವರು
ಎನ್ನ ಕಂಗಳಿಗೆ ತೋರೊ ಶ್ರೀಕೃಷ್ಣಪ. ಕರಿಯ ಮೊರೆ ಲಾಲಿಸಿದಿ ಬೇಗನೆನೆರೆದ ಸಭೆಯಲಿ ದ್ರೌಪದಿಗೆ ಅಭಯವನಿತ್ತಿ ಅಡವಿಅರಣ್ಯದಿ ಅಹಲ್ಯೆಯ ಸಲಹಿದಿಮುಚುಕುಂದನ ರಕ್ಷಿಸಿದಿ 1 ಸೂರ್ಯನುದಿಸುತ ಅಂತ್ಯಕಾಲದಿಶರತಲ್ಪದಲಿ ಅವಗೆ ತೋರಿದಿಶರಣು ಕಾಳೀಪಣೆಯ ಮೇಲಿಟ್ಟ ಮುದ್ದುಚರಣವ ತೋರೊ ರಂಗನಾಥ 2 ಪುಟ್ಟ ಪ್ರಹ್ಲಾದನ ಸಲಹಿದಿಪಟ್ಟವನು ವಿಭೀಷಣನಿಗೆ ಸ[ಲಿಸಿ]ದಿನೆಟ್ಟನಡವಿಲಿ ಬಂದ ಧ್ರುವನಆದರಿಸಿ ಕಾಯ್ದಿ ರಂಗನಾಥ 3 ಘನವಾಗಿ ಕ್ಷೀರಾಬ್ಧಿಯಲಿ ನಿಂತಿಉನ್ನಂತವಾಗಿದ್ದ ಸತ್ಯಲೋಕವನಾಳಿದಿ ಪ್ರಸನ್ನನಾಗಿಕ್ಷ್ವಾಕು ಕಾಯಗೆಒಲಿದ ಪಾದವ ತೋರೊ ರಂಗನಾಥ 4 ಎಷ್ಟು ಹೇಳಲಿ ನಿಮ್ಮ ಮಹಿಮೆಯಸೃಷ್ಟಿಸ್ಥಿತಿಲಯವನ್ನು ಅಳೆದೀ ಪುಟ್ಟ ಪಾದವ ಎನ್ನ ಮನದಲಿಇಟ್ಟು ದಯಮಾಡೊ ಶ್ರೀಕೃಷ್ಣ ರಂಗನಾಥ 5 ದÀಕ್ಷಿಣಮುಖವಾಗಿ ಪವಡಿಸಿದಿ ದೇವಶಿಖಾಮಣಿ ಏಳೈ ಬಂದ ಭಕ್ತರಿ-ಗೆಲ್ಲ ಅಭಯ ಹಸ್ತವ ಕೊಡುವಿರಾಜೀವನೇತ್ರ ಹಯವದನ[ರಂಗನಾಥ] 6
--------------
ವಾದಿರಾಜ
ಎಲ್ಲ ಭಯ ಎಲ್ಲ ಭಯ ಕ್ಷುಲ್ಲಕ ಜನಗಳಿಗೆಲ್ಲ ಭಯ ಪ ತಲ್ಲಣಿಸದೆ ಸಿರಿವಲ್ಲಭನಲಿ ಮನ ನಿಲ್ಲಿಸುವರಿಗೆಲ್ಲ ಜಯ ಅ.ಪ ಇರಲು ಭಯ ಧನವಿರಲು ಭಯ ಇಲ್ಲದಿದ್ದರೆ ತಿರಿದುಂಬೊ ಭಯ ನೆರೆ ಹೊರೆ ಜನಗಳ ಸಿರಿಯನು ನೋಡಲು ಉರಿಯುವ ಜನಗಳಿಗೆಲ್ಲಿ ಜಯ 1 ಎಲ್ಲ ಜಯ ಎಲ್ಲ ಜಯ ಬಲ್ಲ ಸುಜನಗಳಿಗೆಲ್ಲ ಜಯ ಪೊಳ್ಳು ಜೀವನದ ಜಳ್ಳು ಸೌಖ್ಯಗಳ ಒಲ್ಲೆನೆಂಬುವರಿಗೆಲ್ಲ ಜಯ 2 ಸರಳ ಜನರ ನೋಡುವುದೆ ಭಯ ದುರುಳ ಜನಕೆ ತಮ್ಮ ನೆರಳನು ಕಂಡರೆ ಅಧಿಕ ಭಯ 3 ಜ್ಞಾನ ಜಯ ದಿವ್ಯ ಜ್ಞಾನ ಜಯ ಜ್ಞಾನದಿಂದ ಹರಿಸ್ಥಾನ ಜಯ ಹಾನಿಯ ನೀಡುವ ನಾನಾ ಭೋಗವ ಮೌನದಿ ತ್ಯಜಿಪರಿಗೇನು ಭಯ 4 ಒಂದು ಜಯ ನೂರು ಭಯ ದ್ವಂದ್ವಗಳನು ಸಹಿಸದ ನರಗೆ ತಂದೆ ಪ್ರಸನ್ನ ಶ್ರೀಕೃಷ್ಣನ ಚರಣ ದ್ವಂದ್ವ ಸೇವಕರಿಗೆಂದೂ ಜಯ 5
--------------
ವಿದ್ಯಾಪ್ರಸನ್ನತೀರ್ಥರು
ಎಲ್ಲಿ ಮಾಯಾವಾದನೆ ರಂಗಯ್ಯನುಎಲ್ಲಿ ಮಾಯಾವಾದನೆಪ ಎಲ್ಲಿ ಮಾಯಾವಾದ ಫುಲ್ಲನಾಭಕೃಷ್ಣಚೆಲ್ಲೆ ಗಂಗಳೆಯರು ಹುಡುಕ ಹೋಗುವ ಬನ್ನಿ ಅ.ಪ. ಮಂದ ಗಮನೆಯರೆಲ್ಲ ಕೃಷ್ಣನ ಕೂಡೆಚೆಂದದಿ ಇದ್ದೆವಲ್ಲಕಂದರ್ಪ ಬಾಧೆಗೆ ಗುರಿಯ ಮಾಡಿದನಲ್ಲಮಂದಮತಿ ನಮಗೆ ಬಂದು ಒದಗಿತಲ್ಲ 1 ಸರಸಿಜಾಕ್ಷಿಯರು ಕೂಡಿ ಕೃಷ್ಣನ ಕೂಡೆಸರಸವಾಡುತಲಿದ್ದೆವೆಕರೆಕರೆಗೊಳಿಸಿ ಮನ್ಮಥ ಬಾಧೆಗೊಪ್ಪಿಸಿಚರಣ ಸೇವಕರಾದ ತರಳೆಯರನು ಬಿಟ್ಟು 2 ಭಕ್ತವತ್ಸಲ ದೇವನು ತನ್ನವರನ್ನುಅಕ್ಕರದಲಿ ಪೊರೆವನುಸಿಕ್ಕದೆ ಹೋಗನು ಹುಡುಕುತ್ತ ಹೋಗುವಅಕ್ಕಯ್ಯ ಬನ್ನಿರೆ ಉಡುಪಿ ಶ್ರೀಕೃಷ್ಣನು 3
--------------
ವ್ಯಾಸರಾಯರು
ಎಷ್ಟು ಸುಸ್ವರ ಊದುತಿಹನಮ್ಮ ಶ್ರೀಕೃಷ್ಣ ಕೊಳಲನ ಪ ಎಷ್ಟು ಸುಸ್ವರ ಊದುತಿಹನೋ ಗೋಷ್ಠಿಯೊಳು ಗೋವುಗಳಕಿವಿಗಳು ನೆಟ್ಟನಿಲ್ಲಿಗೆ ಕೇಳಿ ಮೋದದಿ ಕಟ್ಟಿದೆಲೆ ಕಣ್ಣಿಗಳಹರಿವವೊಅ.ಪ ತರಣಿ ತನುಜನ ತೀರದಲ್ಲಿಹನೆ ಕೊರಳೊಳಗೆ ಕೌಸ್ತುಭಹರಳಿನಿಂದ ಜಗವ ಬೆಳಗುವನೆ ಕುರುಳು ಕುಣಿಸುತಬಾಲಬಿಂಬದಿಕರ್ಣಕುಂಡಲ ಗಂಡ ಸುಪ್ರಭ ಮರುಳು ಮಾಡುತಮೂರು ಲೋಕವಸಿರಿಯ ಮೋಹಿಪ ಪರಮ ಪುರುಷನು1 ನಗ ಮುರಿಗೆ ತೋಡೆ ಸುಹಾರಭೂಷಿತಉರದಿ ಕುಳಿತಿಹ ಸಿರಿಯ ಮೋಹಿಪ 2 ಅರಗೀಮನೆ ಬಾಂಧವರು ಬೇಕೆ ನಿಜ ಪತಿಗಳೆಮ್ಮನುಮೀರಿ ಪೋದರು ಅಂದರೆನಲೇಕೆ ಮಾರನಯ್ಯನ ಮುರಲಿಸುಸ್ವರಸಾರಿ ಮನಸಪಹಾರ ಮಾಡಿತು ನಾರಿ ಮಣಿಯರೆ ಕ್ಷಣವುತಡೆಯದೆವಾರಿಜಾಸನ ವನಕೆ ತೆರಳಿರೆ 3 ಎಷ್ಟು ಜನ್ಮದ ಪುಣ್ಯವಿರುತಿಹದೆ ಈ ಮುರಲಿ ಬಾಲನಪುಟ್ಟತುಟಿಯಲಿ ಸುಧೆಯ ಸುರಿಸುವದೇಸೃಷ್ಟಿರವ ಬಳ್ಳಿಮನದಲಿ ವೃಷ್ಟಿಹಿಡಿಸದೆ ಕುಸುಮಫಲಗಳುವೃಷ್ಟಿಯಿಂದಲೆ ಹೊರಗೆ ಚೆಲ್ಲುತ ಅಭೀಷ್ಠೆ ಸುರಿಸುತಪೇಳುತಿಹವೊ 4 ಅರುಣನಂದಧಿ ಅದರ ಸೌಭಗವೊ ವನ ನಿಲಯ ಮೃಗಗಳುತೊರೆದು ವೈರವ ಸುತ್ತು ನಿಂತಿಹವೋ ಹರುಷದಲೆ ಮನತೊರೆದು ನಿಲ್ಲಲು ಇಂದಿರೇಶನ ತರುಣಿಯರು ಪೋಗೋಣ ನಡೆಯಿರಿ 5
--------------
ಇಂದಿರೇಶರು
ಏ ರಂಗಧಾಮ ರಂಗ ಏ ರಂಗಧಾಮ ಪ. ನಾರುವ ಮೈಯವನತ್ತ ಸಾರು ಮುಟ್ಟದಿರೊ ಎನ್ನ ದೂರನಿಲ್ಲು ತರವಲ್ಲ ಏ ರಂಗಧಾಮ ಧೀರ ಮತ್ಸ್ಯರೂಪಕಾಣೆ ಎಲೆ ಸತ್ಯಭಾಮೆ 1 ಚೆಂದವಂತನೆಂದು ನಾ ಬಂದೆ ತರ್ಕಿಸಿ ನಿನ್ನ ಬೆನ್ನು ಡÉೂಂಕಿದೇನೋ ಪೇಳೋ ಏ ರಂಗಧಾಮ ಮಂದರ ಮುಳುಗೆ ಕೂರ್ಮ ಎಲೆ ಸತ್ಯಭಾಮೆ 2 ನೋಡಿದರೆ ಮೈಯೊಳಗೆ ಮೂಡಿರುವ ರೋಮಗಳು ಗಾಡಿಕಾರ ನೀನಾರಯ್ಯ ಏ ರಂಗಧಾಮ ಕ್ರೋಡರೂಪದಿಂದಿಳೆಯ ದಾಡೆಯ ಮೇಲಿಟ್ಟು ತಂದ ಕಾಡವರಾಹನು ಕಾಣೆ ಎಲೆ ಸತ್ಯಭಾಮೆ 3 ಮನುಷ್ಯಾಗಿದ್ದಮೇಲಣಕಾನನದ ಮೃಗರಾಜ ಆನನವಿದೇನೊ ಪೇಳೊ ಏ ರಂಗಧಾಮ ಮಾನಿನಿ ಕೇಳೆ ಪ್ರಹ್ಲಾದನ್ನ ಮಾನಭಂಗಕ್ಕೊದಗಿದ ಶ್ರೀ ನರಸಿಂಹ ಕಾಣೆ ಎಲೆ ಸತ್ಯಭಾಮೆ 4 ದೊರೆತನವುಳ್ಳವನೆಂದು ಮರುಳುಗೊಂಡೆ ನಾ ನಿನಗೆ ತಿರುಕನೆಂಬೋದರಿಯದಾದೆನೊ ಏ ರಂಗಧಾಮ ತರಳೆ ಸುರರಿಗಾಗಿ ಬಲಿಯ ತುಳಿದು ಪಾತಾಳಕೊತ್ತಿದ ಗರುವ ವಾಮನ ಕಾಣೆ ಎಲೆ ಸತ್ಯಭಾಮೆ 5 ಅಡವಿಯೊಳು ಕಟ್ಟಿಗೆಯ ಕಡಿವವನಂತೆ ಕೊಡಲಿಯ ಪಿಡಿವುದೇನೊ ಪುಣ್ಯವಾಸ ಏ ರಂಗಧಾಮ ಮಡುಹಿ ಕ್ಷತ್ರೇರನೆಲ್ಲ [ಮುದದಿ] ಸೇರ್ದ ಮಾತೆಗಾಗಿ ಒಡೆಯನಾದ ಪರಶುರಾಮ ಎಲೆ ಸತ್ಯಭಾಮೆ 6 ಊರಬಿಟ್ಟರಣ್ಯವನು ಸೇರಿ ಮುನಿಗಳಂತಿಪ್ಪ [ಕಾರಣ]ವಿದೇನೊ ಪೇಳೊ ಏ ರಂಗಧಾಮ ಕ್ರೂರರಾವಣನ ಗೆಲಿದು ನಾರಿಸೀತೆಯನು ತÀಂದ ಧೀರರಾಘವನು ಕಾಣೆ ಎಲೆ ಸತ್ಯಭಾಮೆ 7 ವಲ್ಲಭೆಜನರಿಗೆಲ್ಲ ನೀ ವಲ್ಲಭನಾಗಿ ಗೊಲ್ಲನಂತೆ ಗೋವ ಕಾಯುವ ಕಾರಣವೇನೊ ಏ ರಂಗಧಾಮ ಬಿಲ್ಲಹಬ್ಬಕ್ಕೆ ಹೋಗಿ[ಮಲ್ಲ] ಕಂಸನ ಕೊಂದ ಬಲ್ಲಿದ ಶ್ರೀಕೃಷ್ಣ ಕಾಣೆ ಎಲೆ ಸತ್ಯಭಾಮೆ 8 ನಗೆಗೀಡು ಮಾಡಿಕೊಂಡು ದಿಗ್ವಸನನಾಗಿ ನಿಂತ ಹಗರಣವಿದೇನೊ ಪೇಳೊ ಏ ರಂಗಧಾಮ ಮಿಗೆ ಮೂರುಪುರದ ಸತಿಯರ ವ್ರತವ ಕೆಡಿಸಿ ಜಗವ ಮೋಹಿಸುವ ಬೌದ್ಧ ಎಲೆ ಸತ್ಯಭಾಮೆ 9 ಕರದಿ ಖಡ್ಗವನೆ ಪಿಡಿದು ತರಳ ಅಶ್ವವನೇರಿ ತಿರುಗುವುದಿದೇನು ಪೇಳೊ ಏ ರಂಗಧಾಮ ವರ ಹಯವದನ ಹರುಷದಿಂದಲಾಡಿ ಪಾಡಿ ಕಲ್ಕಿಯಾದೆ ಹರಿಲೋಚನೆ ಎಲೆ ಸತ್ಯಭಾಮೆ 10
--------------
ವಾದಿರಾಜ
ಏಕಿಷ್ಟು ಕರುಣವೊ ಶ್ರೀಕೃಷ್ಣದೇವ ಪ ನಾಲ್ಕ್ಹತ್ತು ಲೋಕದಲಿ ಸುಖ ಸೂರೆ ಮಾಳ್ಪೊ ಹರಿ ಅ.ಪ ಮುಕ್ತಗಣ ನೋಡಯ್ಯ ನಿತ್ಯಮುಕ್ತಳ ನೋಡು ಶಕ್ತವಿಧಿ ವಾಣೀಶ ಭಕ್ತಿ ದೇವ ಫಣಿ ರುದ್ರ ಇವರ ಸತಿಯರ ನೋಡು ಉತ್ತಮೋತ್ತಮ ಸುಖವ ಸೂರೆಗೊಂಬರೊ ಹರಿಯೆ 1 ನಿನ್ನಾರು ಮಹಿಷಿಯರ ಸುರಪ ಸುರಗಣ ನೋಡು ಪುಣ್ಯತಮ ಸುರಮನಿಯ ಭೃಗುವ ನೋಡು ಚಿಣ್ಣ ಪ್ರಹ್ಲಾದನನ್ನ ಬಲಿ ಧ್ರುವ ಭೀಷ್ಮನ್ನ ಇನ್ನು ದ್ರೌಪದಿ ಶುಕನ ಆನಂದ ನೋಡಂiÀi್ಯ 2 ಅಂಬರೀಷನ ನೋಡು ರಾವಣಾನುಜ ಜನಕ ಪರೀಕ್ಷಿತ ವೃತ್ತ ಶಬರಿ ತುಂಬಿದ ಸದ್ಭಕ್ತ ಋಷಿಪತ್ನಿಯರ ನೋಡು ಕಂಬನಿಯ ಸುರಿಸುವೆನೊ ಕರುಣಿಸೊ ಹೃದ್ಗøಹದಿ 3 ನೀಯೆನ್ನ ಸತ್ವ ನೀಯೆನ್ನ ಜ್ಞಾನ ನೀಯೆನ್ನ ಮನ ಬುದ್ಧಿ ಕರುಣ ನಿಧಿಯೆ ನೀಯೆನ್ನ ಪ್ರಾಣರತಿ ನೀಯೆನ್ನ ಸತ್ಕರಣ ನೀಯೆನ್ನ ಧೃತಿ ಶಾಂತಿ ನೀಯೆನ್ನ ಸರ್ವನಿಧಿ 4 ನೀ ಮಾಡೆ ನಾ ಮಾಳ್ಪೆ ನೀನಾಡಿಸಿದರಾಡ್ವೆ ಕಾಮದನೆ ಕಾಮಪಿತ ಜಯೇಶವಿಠಲ ಶ್ರೀ ರಮಣ ಸರ್ವೇಶ ಈ ಮನಸು ನಿನ್ನಲ್ಲಿ ಪ್ರೇಮದಿ ನೆಲಸಿ ಇರುವಂತೆ ಕೃಪೆಮಾಡು 5
--------------
ಜಯೇಶವಿಠಲ
ಏನ ಬೇಡಲೊ ನಿನ್ನ ದೇವಾಧಿ ದೇವ ಪ ಏನಹುದೊ ನಿನ್ನೊಳಗೆ ಮಹಾನುಭಾವ ಅ.ಪ ವನಧಿ ಹಾಸಿಗೆಯು ವಟಪತ್ರವನಿತೆಯರ ಬೇಡಲೆ ಬ್ರಹ್ಮಚಾರಿಘನ ಸಖ್ಯವನು ಬಯಸೆ ನೆನೆಯುವರ ಮನದಲಿಹೆತಿನುವುದಕೆ ಕೇಳುವೆನೆ ನವನೀತಚೋರ 1 ಒಡವೆಗಳ ಬಯಸೆ ಶಿಖಿಪಿಂಛ ತುಳಸಿ ಪತ್ರಕಡು ಸೈನ್ಯವನೆ ಬಯಸೆ ಗೋಪಾಲನುಬಿಡದೆ ರೂಪವÀ ಬಯಸೆ ನೀಲಮೇಘಶ್ಯಾಮಉಡುವುದಕೆ ಕೇಳುವೆನೆ ಸ್ತ್ರೀವಸನ ಚೋರ 2 ಶಕ್ತಿಯನು ಗೋಪಿಕಾ ಸ್ತ್ರೀಯರಲಿ ವ್ರಯಗೈದೆಭಕ್ತಿಯನು ಸತ್ಯವಂತರಿಗಿತ್ತಿಹೆಭಕ್ತರನು ವಂಚಿಸುತ ನೀನು ಬಚ್ಚಿಟ್ಟಿರುವಮುಕ್ತಿ ಕಾಂತೆಯ ಕೊಡು ಸುಖಿಪೆನೊ ಶ್ರೀಕೃಷ್ಣ3
--------------
ವ್ಯಾಸರಾಯರು
ಕಂಗಳಿಗೆ ಹಬ್ಬವಾಯಿತಯ್ಯಮಂಗಳಾತ್ಮಕ ಪುರಂದರದಾಸರನು ಕಂಡು ಪ ಸಕಲ ತೀರ್ಥಕ್ಷೇತ್ರ ಯಾತ್ರೆ ಮಾಡಿದ ಫಲವುಸಕಲ ಸತ್ಕರ್ಮ ಸಾಧಿಸಿದ ಫಲವುಭಕುತಿಯಿಂ ಭಾಗೀರಥೀ ಮಜ್ಜನದ ಫಲವುರುಕುಮಿಣಿ ಪತಿಯ ಪದ ಭಕುತರನು ಕಂಡು 1 ಇವರ ನರರೆಂದವರು ನರಕದಲಿ ಬೀಳುವರುಕವಿಜನರು ಒಪ್ಪಿ ಕೈಹೊಡೆದು ಹೇಳಿರಲುಅವನಿಯೊಳಗತಿ ದುರ್ಲಭವು ನಂದಗೋಪನ್ನಕುವರನಿದ್ದೆಡೆಯ ವೈಕುಂಠವೆಂಬುವರ ಕಂಡು 2 ಧನ್ಯನಾದೆನು ನಾನು ಮನುಜನ್ಮದಿ ಪುಟ್ಟಿಮಾನ್ಯನಾದೆನು ಇನ್ನು ಈ ಜಗದೊಳಗೆಪನ್ನಂಗಶಯನ ಶ್ರೀಕೃಷ್ಣನ ದಾಸರನುಚೆನ್ನಾಗಿ ಸ್ಮರಿಸಿ ಪಾವನ್ನನಾದೆನಿಂದು 3
--------------
ವ್ಯಾಸರಾಯರು
ಕಂಜಾಕ್ಷ ಹರಿಯ ಕಂಡಲ್ಲದೆ ಈಪಂಜರದಿ ಈ ಗಿಣಿ ನಿಲ್ಲದೆ ಪ. ಬಾಲತÀನದಲ್ಲಿ ಮನೆಮನೆಯ ಪೊಕ್ಕುಪಾಲಕುಡಿದನು ಮನದಣಿಯಲಾಲಿಸಿದವನು ಇನ್ನು ಮುನಿಯಲೋಲಾಕ್ಷಿ ಬಿಡನ್ಯಾಕೀ ಗÀಸಣೆಯ 1 ಏಳುವರುಷದ ಶಿಶು ಪೋಗಿಆಲಸ್ಯ ಹಸುತೃಷೆÉಯ ನೀಗಿಶೈಲವಾಗಿ ನಿಂತಿದ್ದ ನಮಗಾಗಿಕಾಲಮ್ಯಾಲೆ ಬಿದ್ದನಿಂದ್ರ ಬಾಗಿ 2 ಕಾಳಿಂದಿಯ ಮಡುವಿನೊಳಾಡಿಕಾಳಿಯಾ ನಾಗಗೆÉ ಮದ ಹುಡಿಮೇಲೆ ಅವರೊಳು ಕೃಪೆಮಾಡಿಪಾಲಿಸಿದ ಕರುಣದಿ ನೋಡಿ3 ಪಾರಿಜಾತದ ಪೂಗಳ ತಂದುನಾರದ ಮುನೇಂದ್ರ ತಾನೆ ಬಂದುಸಾರಿದನಲ್ಲೆ ಗತಿ ನೀನೆಂದುನರ ಸುರರುಗಳಿಗೆ ಬಂಧು 4 ವೃಂದಾವನದೊಳಿವನ ಲೀಲೆ ಆ-ನಂದವನುಣಿಸಿತೆಲೆ ಬಾಲೆಎಂದವನ ಕತೆ ಕರ್ಣದೋಲೆ ಹಾ-ಗೆಂದು ಭಾವಿಸೆ ಪುಣ್ಯಶೀಲೆ 5 ಸಕಲ ಸುರರ ಶಿರೋರನ್ನಮುಕುತಿದಾಯಕ ಸುಪ್ರಸನ್ನಶ್ರೀಕೃಷ್ಣ ಅಟ್ಟಿದ ಉದ್ಧÀ್ದವನ್ನ ಬಂದುವಾಕು ಕೇಳಿ ಮನ್ನಿಸಿಯವನ6 ಚೆಲ್ವ ಹಯವದನನ್ನ ನೀರೆ ನಮ್ಮನಲ್ಲನವನಿಲ್ಲಿ ಬಾರದಿರೆಸುಲಭನ್ನ ಬೇಗ ಕರೆತಾರೆ ನಾ-ವೆಲ್ಲರವನಲ್ಲಿ ಹೋಹ ಬಾರೆ 7
--------------
ವಾದಿರಾಜ
ಕಂಡೆ ಕಂಗಳಲೆನ್ನ ಮಂಗಳಾತ್ಮನ ಕಂಡೆ ಕಂಡೆ ಮಂಗಳಾಂಗ ಶ್ರೀ ಗುರುರಂಗನ ಕಂಡೆ ಧ್ರುವ ಬಾಲ ಲೀಲೆ ತೋರಿದ ನೀಲವರ್ಣನ ಕಂಡೆ ಪಾಲಗಡಲಲಿಹ್ಯ ಗೋಪಾಲನ ಕಂಡೆ ಮೂಲರೂಪದಲಿ ಫಲ್ಗುಣಗೊಲಿದನ ಕಂಡೆ ಕುಲಕೋಟಿ ಬಂಧುವಾದ ಬಳಗನ ಕಂಡೆ 1 ಮೂರ್ತಿ ನಳಿನನಾಭವ ಕಂಡೆ ಪಾದ ಹೊಳೆವನ ಕಂಡೆ ಕಳ್ಳ ಮೊಸರ ಬೆಣ್ಣೆ ಮೆಲುವ ಚೆಲುವನ ಕಂಡೆ ಇಳೆಯೊಳು ಗೋಕುಲದಿ ಸುಳಿದನ ಕಂಡೆ 2 ಕಿರೀಟ ಕುಂಡಲಕರ್ಣ ಕೌಸ್ತುಭಧರನ ಕಂಡೆ ಪರಿಪರಿ ಭೂಷಣ ಸರ್ವಾಂಗನ ಕಂಡೆ ವಾಹನ ಸ್ವಾಮಿ ಉರಗಶಯನ ಕಂಡೆ ಸಿರಿಯ ಲೋಲಲಿಹ ಸರ್ವೋತ್ತಮನ ಕಂಡೆ 3 ಮದನ ಮೋಹನನ ಕಂಡೆ ಆದಿ ಅವಿನಾಶ ಶ್ರೀಧರನ ಕಂಡೆ ಯದುಕುಲೋತ್ತಮ ಮಧುಸೂದನನ ಕಂಡೆ ಸಾಧು ಹೃದಯ ಪ್ರಾಣ ಶ್ರೀಮಾಧವನ ಕಂಡೆ 4 ತುರುಗಳ ಕಾಯ್ದ ಶ್ರೀಹರಿ ಗಿರಿಧರನ ಕಂಡೆ ಮುರಹರನೆನಿಸಿದ ಸುರಾಧೀಶನ ಕಂಡೆ ಕರಿಯ ವರದಾಯಕ ಹರಿ ದಯಾಳುನ ಕಂಡೆ ನರಹರಿ ಶ್ರೀನಾರಾಯಣನ ಕಂಡೆ 5 ದುಷ್ಟಮರ್ದನ ದೂರ ವಿಷ್ಣುದೇವನ ಕಂಡೆ ಶಿಷ್ಟ ಜನ ಪಾಲಕ ಸೃಷ್ಟೀಶನ ಕಂಡೆ ದೃಷ್ಟಿಯೊಳು ಸುಳಿದು ದೃಷ್ಟಾಂತಾದವನ ಕಂಡೆ ಕಷ್ಟ ಪರಿಹರಿವ ಶ್ರೀಕೃಷ್ಣನ ಕಂಡೆ 6 ಗುರು ಶಿರೋಮಣಿ ತ್ರೈಲೋಕ್ಯನಾಥನ ಕಂಡೆ ಪರಮಭಕ್ತರ ಸಂಜೀವನ ಕಂಡೆ ಶರಣ ರಕ್ಷಕ ನಮ್ಮ ಕರುಣ ಸಿಂಧುನ ಕಂಡೆ ತರಳ ಮಹಿಪತಿ ಪ್ರಾಣಹೊರೆವ ಕಂಡೆ 7
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ಕಂಡೆ ಕಂಡೆನು ಸ್ವಾಮಿಯ ಸುಪ್ರೇಮಿಯಾ ಪ ಕಂಡೆ ಕಂಡೆನು ಕೃಷ್ಣರಾಯನ ಪುಂಡರೀಕ ದಳಾಯತಾಕ್ಷನ ಪಾಂಡವಪ್ರಿಯ ಪಾರ್ಥಸಖನ ಉ ದ್ದಂಡ ಮಹಿಮ ಸುರೇಂದ್ರವಂದ್ಯನ ಅ.ಪ. ಕನಕ ನವಮಣಿ ಖಚಿತ | ವಾಗಿಹ ಸಿಂಹಾ ಸನದೊಳು ಸಲೆ ಶೋಭಿತ | ಸುರುಚಿರ ದಿವ್ಯ ಘನನೀಲನಿಭರಂಜಿತ | ನಿರ್ಮಲಗಾತ್ರ ಕುಂಡಲ ಮಣಿ ಗಣದ ಹಾರಾದಿ ಬಹು ಭೂ ಷಣಗಳನುಪಮ ಕಾಂತಿಯಿಂದಲಿ ಮಿನುಗುವತಿ ಲಾವಣ್ಯ ಮೂರ್ತಿಯ 1 ಕೋಟಿ ಮನ್ಮಥರೂಪನ | ಶ್ರೀಕೃಷ್ಣನ ಹಾಟಕಾಂಬರಧಾರನ | ಕರುಣಾಮಯ ಕಂಬು ಕಂಠನ ಆಟಮಾತ್ರದಿ ಪ್ರಬಲ ದೈತ್ಯ ಮ ಹಾಟವಿಯ ನಿರ್ಧೂಮಗೈದನ ಖೇಟವಾಹನನೆನಿಪ ತ್ರಿಜಗದಿ ಸಾಟಿಯಿಲ್ಲದ ದೇವದೇವನ 2 ಮೆರೆವ ದ್ವಾರಕಾಧೀಶನ | ದ್ರೌಪದಿದೇವಿ ಮೊರೆ ಕೇಳಿ ಸಲಹಿದನ | ಭಜಿಪರ ಅವ ಸರಕೊದಗುವ ದೇವನ | ಶ್ರೀ ಕೃಷ್ಣನ ತರಳತನದಲಿ ಗೋಕುಲದಿ ತಾ ಪರಿಪರಿಯ ಲೀಲೆಗಳ ತೋರಿದ ಪರಮ ಪುರುಷನ ಕರಿಗಿರೀಶನ ಸರಿಯಧಕರಿಲ್ಲದ ಸುರೇಶನ 3
--------------
ವರಾವಾಣಿರಾಮರಾಯದಾಸರು
ಕಡೆಯಿಲ್ಲದೀ ಭವಾಂಬುಧಿಯ ದಾಂಟುವೊಡೆ ಜಗ ದೊಡೆಯ ಶ್ರೀಕೃಷ್ಣನೊಬ್ಬನ ನಂಬು ಮರುಳೆ ಪ ನೆಲೆಯಾದುದಿಲ್ಲ ತಾಯುದರ ಬಾಲತ್ವವಿದು ನೆಲೆಯಾದುದಿಲ್ಲ ಜವ್ವನವೆಂಬುದೂ ನೆಲೆಯಾದುದಿಲ್ಲ ಜರೆಯು ಚಕ್ಷುರಾಜಿಗಳು ಒಡಲು ನಿನಗೆ ಮರುಳೆ 1 ಹುಟ್ಟಿದನಳಿದನೇಕೆ ಜೀವ ನಿಜ ಜನನಿಯಲಿ ಹೊಟ್ಟೆಯಲಿ ಹೊತ್ತು ಹೆತ್ತುದಕೈಸಲೆ ಕೊಟ್ಟುಕೊಂಡುದಕೆ ಪಡೆದಿತ್ತು ಸುತರೆಂದೆನಿಸಿ ನೆಟ್ಟನೈದುವರು ನಿನಗೇನಹರು ಮರುಳೆ 2 ನೀನಳಿದ ಬಳಿದ ಸತಿಸುತರಿಗೇನ್ಹೇಳುವೆ ಏನಹರು ನಿನಗವರು ಮೃತವಾದ ಬಳಿಕಾ ದೀನನಹೆ ಬಯಲಮಮತೆಗಳೆಂದು ತಿಳಿದುಕೊ ನೀನೆತ್ತಲವರೆತ್ತಲಿಹರವರು ಮರುಳೆ 3 ಮಗನಾವ ತಂದೆಯಾವನು ಜೀವ ಜೀವರಿಗೆ ಮಗನು ತಂದೆಯು ಕರ್ಮವಾಸನೆಗಳಾ ಬಗೆಯಿಂದಲೀಶ್ವರನು ಜೀವಕೋಟಿಗಳ ಸೃಜಿಸೆ ಜಗದೊಳಾಡುವರು ನಿನಗೇನಹರು ಮರುಳೆ 4 ಅತಿಭಕ್ತನೆಂದು ವೈಕುಂಠ ವೇಲಾಪುರದ ಪತಿ ಅರ್ಜುನಗೆ ನಿರೂಪಿಸಿದರ್ಥವ ಮತಿಗೆಟ್ಟು ಬಿಟ್ಟು ನಾನಾ ದೈವದಡಿಗಳಿಗಾ ನತನಾಗಿ ಸಂಸಾರಿಯ[ಹೆ] ಇದೇಕೆ ಮರುಳೆ 5
--------------
ಬೇಲೂರು ವೈಕುಂಠದಾಸರು