ಒಟ್ಟು 61 ಕಡೆಗಳಲ್ಲಿ , 28 ದಾಸರು , 59 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಶ್ರೀ ಸತ್ಯಬೋಧರು ಕುರುಡನಿಗೆ ಕರವಿತ್ತು ಕೈಪಿಡಿದು ಕಾಯೋ ಪ ದೃಢಮತಿಯಿತ್ತು ತವ ಪಾದದಲಿ ಅ.ಪ. ಗರುಡಾರಿ ಭೂಷಣನ ಚರಣದಡಿಯೊಳಗಿದ್ದು ಘನ ತಪವ ಗೈವ ಮಹತ ಪರಿಯೊ 1 ಬೋಧತೀರ್ಥಾರ್ಯರ ಮತಕನುಸರಿಸಿಸದ್ಭಕುತ ಜನಕೆ ಭೇದಗಳ ಬೋಧಿಸುತ ಸತ್ಯಬೋಧಾಖ್ಯಯದೀ ಧರೆಯೊಳಗಮರವೇ 2 ಮ್ಲೇಚಪುರದಲಿ ಕುಳಿತು ಸಂಚಿತಾಗಾಮಿಗಳ ಕೊಂಚಮಾಡುತ ನಿಷ್ಕೆಂಚಿನರ ಪ್ರೀಯಾತಂದೆವರದಗೋಪಾಲವಿಠಲನ ಮಂಚ ಪದನಿಂದ ಪೋಷಿತನಾದ ಪ್ರಭುವೇ 3
--------------
ತಂದೆವರದಗೋಪಾಲವಿಠಲರು
ಶ್ರೀಗುರುವೆ ತಾಯಿ ತಂದೆನಗ ನೀನು ಧ್ರುವ ತಾಯಿ ತಂದೆನಗ ನೀ ಬಾಹ್ಯಾಂತ್ರ ಪರಿಪೂರ್ಣ ಸಾಯೋಜ್ಯ ಸದ್ಗುರುನಾಥ ನೀನೆ ಸಂಜೀವ ಸಾಕ್ಷಾತ ನೀನೆ ಕಾವ ಕರುಣಾಳು ವರದಾತ ನೀನೆ ಇಹಪರದೊಳು ಸಕಳಾರ್ಥ ನೀನೆ 1 ಕರುಣ ಆನಂದದಲಿ ಹೊರೆದು ಸಲಹುವ ಮೂರ್ತಿ ಪರಮ ಜೀವದ ಅತಿ ಮೈತ್ರ ನೀನೆ ಸರ್ವ ಙÁ್ಞನಿಗಳ ಕುಲಗೋತ್ರ ನೀನೆ ದ್ರವ್ಯ ಧನವನು ಸಂಚಿತಾರ್ಥ ನೀನೆ ಪೂರ್ವಪ್ರಾಚೀನ ಪುಣ್ಯಸೂತ್ರ ನೀನೆ 2 ಬಾಲಕನ ಮ್ಯಾಲೆ ದಯಮಾಡಿ ಪಾಲಿಸುತೀಹ್ಯ ಕುಲಕೋಟಿ ಬಂಧುಬಳಗ ನೀನೆ ಮೂಲಪುರಷನ ಋಷಿದೈವ ನೀನೆ ಪರಿ ಬಲವು ಇಳಯೊಳಗೆ ನೀನೆ ಸಲಹುತಿಹ ಮಹಿಪತಿಸ್ವಾಮಿ ನೀನೆ 3
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ಸಚ್ಚಿದಾನಂದಮಯಗೆಚ್ಚರಿಕೆ ಪ ನಿಶ್ಚಯದ ನಿರುಪಮಂಗೆಚ್ಚರಿಕೆ ಅಚ್ಚರಿಯ ಸಚ್ಚಿತ್ರಂಗೆಚ್ಚರಿಕೆ ಅ.ಪ ಕಾಂತೆಯರ ಮನೆಗೆ ಶ್ರೀಕಾಂತ ಪೊರಮಡುತಿಹನು ಕಾಂತೆಯರು ಕಟ್ಟುಮೆಟ್ಟದವೊಲೆಚ್ಚರಿಕೆ 1 ಸಂಚಿತಾಭರಣಗಳ ಮಿಂಚುಗುರುಚರಣಗಳ ಕುಂಚ ಕಾಳಂಜಿಯವರೆಲ್ಲವೆಚ್ಚರಿಕೆ 2 ನೀಡೆಸೆವ ಸೆಳ್ಳುಗುರು ಮೂಡುತಿಹ ಮೊಲೆಹೊಗರು ಆಡಿಸುವ ಹಡಪದವರೀಗ ಎಚ್ಚರಿಕೆ 3 ಬಿಂಬಾಧರಂ ಪೊಳೆಯೆ ಕಂಬುಕಂಠವು ಹೊಳೆಯೆ ಪೊಂಬಾಳ ದೀವಿಗೆಯ ಜನರು ಎಚ್ಚರಿಕೆ 4 ಚೆನ್ನಸಿರಿಯರಮನೆಯ ಚಿನ್ನವಾಗಿಲ ಕೊನೆಯ ರನ್ನದೋರಣ ತಡಿಯವರೆಚ್ಚರಿಕೆ 5 ಇಂದಿರಾದೇವಿಯರ ಮಂದಿರದ ಬೀದಿಯೊಳು ಸಂದಣಿಯಲತಿ ಜತನವಿರಲಿ ಯೆಚ್ಚರಿಕೆ 6 ದೇವಿಯರ ಮನೆಗೆ ವಿವಾಹ ತಾಬೇಡಿ ಬಂದ ದೇವಪುರ ಲಕ್ಷ್ಮೀಶಗೆಚ್ಚರಿಕೆ 7
--------------
ಕವಿ ಲಕ್ಷ್ಮೀಶ
ಸುವ್ವಿ ಸುವ್ವಿ ನಮ್ಮ ಶ್ರೀರಮಣಗೆ ಸುವ್ವಿ ಸುವ್ವಿ ಸುವ್ವಿ ನಮ್ಮ ಶ್ರೀರಮಣನೆನೆಸಿದ ವಿನೋದಿ ಹರಿ ಸರ್ವೋತ್ತಮಗೆ ಸುವ್ವಿಪ. ಹರಿಗೆ ಶರಣೆಂಬೆ ಸಿರಿಗೆ ಶರಣೆಂಬೆ ಪರಮೇಷ್ಠಿ ಗುರುಗಳಿಗೆ ಶರಣೆಂಬೆ ಸುವ್ವಿ ಪರಮೇಷ್ಠಿ ಗುರುಗಳಿಗೆ ಹರಿ ಪರನೆಂದು ಪೇಳ್ವ ಶ್ರೀಮದಾನಂದತೀರ್ಥರಿಗೆ ಸಾಸೀರ ಶರಣೆಂಬೆ 1 ವಾಸುದೇವ ಪರ ಸಂಕರ್ಷಣ ಅತಿಕ್ರೂರಸಂಹಾರಕಾರ ಸುವ್ವಿ ಸಂಕರ್ಷಣ ಅತಿಕ್ರೂರಸಂಹಾರಕಾರ ಪ್ರದ್ಯುಮ್ನ ಬೊಮ್ಮ ಕುಮಾರನಂತೆ ಸುವ್ವಿ 2 ಸೂಕರ ನರಹರಿ ಕಾಯ ವಾಮನ ಭಾರ್ಗವ ರಾಮನೆನಿಪ ಭೂಪ ಕೃಷ್ಣ ಸುವ್ವಿ ವಾಮನ ಭಾರ್ಗವ ರಾಮನೆನಿಪ ಭೂಪ ಕೃಷ್ಣನಾದ ಬೌದ್ಧ ಕಲ್ಕಿ ರೂಪ ಪ್ರಸಿದ್ಧವಂತೆ ಸುವ್ವಿ3 ಮುಖ್ಯಪ್ರಾಣ ಆವಲ್ಲಿ ನಾರಾಯಣ ಇವರಿಬ್ಬರ ಗುಣವನರಿಯದವನೆ ಸುವ್ವಿ ಇವರಿಬ್ಬರ ಗುಣವ ಅರಿಯದವನೆ ಗೌಣನೆಂಬರ್ಥದಲಿ ಬ್ರಹ್ಮಸೂತ್ರ [ದಂಬಂತೆ] ಸುವ್ವಿ4 ಆತ್ಮನು ಅತಂತ್ರ ಪರಮಾತ್ಮನು ಸ್ವತಂತ್ರ ದುಃ- ಖಾತ್ಮನು ಜೀವಾತ್ಮ ಪರಮಾತ್ಮನಲ್ಲ ಸುವ್ವಿ ದುಃ- ಖಾತ್ಮನು ಜೀವಾತ್ಮ ಪರಮಾತ್ಮನಲ್ಲ ವಾದಿ ಜ್ಞಾನಾನಂದಕ ಹರಿಗೆ ಸಮರಿಲ್ಲ ಸುವ್ವಿ 5 ಜಡದಲ್ಲಿ ಜೀವಾತ್ಮ ಜಡ ಜೀವರÀಲಿ ಪರಮಾತ್ಮ ಕ್ರೀಡೆಯಿಂದ ಏಕಾತ್ಮ ಬಿಡದಿಹ ಸುವ್ವಿ ಕ್ರೀಡೆಯಿಂದ ಏಕಾತ್ಮ ಬಿಡದಿಹುದು ವಾದಿ ದ್ವಾಸುಪರ್ಣ ವೆಂಬೋ ಶ್ರುತಿ ಲೇಸು ಲೇಸು ಸುವ್ವಿ 6 ಜಡ ಹರಿಗಳ ಭೇದ ಜೀವ ಜೀವಕೆ ಭೇದ ಜೀವೇಶ್ವರಗೆ ಭೇದ ಶರೀರ ಭೇದ ಸುವ್ವಿ ಜಡ ಜೀವರಿಗೆ ಭೇದ ಶರೀರ ಭೇದ [ವೆನ್ನಿ] ಜಡಜೀವ ಭೇದ ಪಂಚಭೇದಗಳು ಸುವ್ವಿ 7 ಪಂಚಭೇದಗಳೆಂಬ ಪ್ರಪಂಚದಲಿ ಸಕಲ ವೈಕುಂಠದೊಳಗಿನ ವಿವರ ಒಂದುಂಟು ಕೇಳು ಸುವ್ವಿ ವೈಕುಂಠÀದೊಳಗಿನ ವಿವರ ಒಂದುಂಟು ಕೇಳು ವಾದಿ ಸಾಕು ಸಾಕು ನಾಲ್ಕುವಿಧ ಮುಕ್ತಿಯುಂಟಲ್ಲಿ ಸುವ್ವಿ 8 ಶ್ರವಣಕೀರ್ತನ ಹರಿಸ್ಮರಣೆ ಸೇವನ ಪೂಜನ ವಂದನ ಹರಿದಾಸ್ಯ ಸಖ್ಯಮಾತ್ಮನಿವೇದನೆ ಸುವ್ವಿ [ಹರಿದಾಸ್ಯ ಸಖ್ಯಮಾತ್ಮ ನಿವೇದನೆಗಳು ತಮ್ಮ] ಅರ್ಥ ಕೂಡೊಂಬತ್ತುಭಕ್ತಿ ಸತ್ಯ ಉಂಟು ಸುವ್ವಿ 9 ಜೀವೇಶ[ನೊಂದು] ಹರಿನಿರ್ಗುಣನೆಂದು ಅಪೂರ್ಣ ಗುಣನೆಂದು ಬ್ರಹ್ಮಾದಿಗಳೊಂದು ಸುವ್ವಿ ಬ್ರಹ್ಮಾದಿಗಳೊಂದು ಸಮರಧಿಕಾರ ಅವತಾರ ಎಲ್ಲ ಒಂದೆ ಎಂಬುವಗೆ ಸುವ್ವಿ 10 ಅವತಾರವೆಲ್ಲ ಅಂಶವತಾರವೆಂದ ಹರಿಭಕ್ತರಲ್ಲಿ ಕೋಪ ಸುವ್ಯಕ್ತವಾಯಿತು ಸುವ್ವಿ ಕೋಪ ಸುವ್ಯಕ್ತವಾಯಿತು ವಾದಿ ಹರಿಭಕ್ತರೊಡನೆ ಕೋಪಂಗಳು ವ್ಯರ್ಥವಾಯಿತು ಸುವ್ವಿ 11 ಪಂಚಮಹಾಭೂತ ದೇಹ ಸಂಚಯರೆಲ್ಲ ಸಂಚಿತಾದಾ ಕರ್ಮಗಳ ಸಂಚಯರೆಲ್ಲ ಸುವ್ವಿ ಸಂಚಿತಾದಾ ಕರ್ಮಗಳ ಸಂಚಯರೆಲ್ಲ ಮುಕ್ತರ ದೇಹವೆಲ್ಲ ಸುಖದ ಸಂದೋಹವಂತೆ ಸುವ್ವಿ 12 ಶರೀರದಲ್ಲಿ ಎಪ್ಪತ್ತೆರಡು ಸಾವಿರ ನಾಡಿಗಳಲ್ಲಿ ಪಿರಿಯವಾದವು[ನೂರೊಂದು] ಐದು ಸುವ್ವಿ ಪಿರಿಯವಾದವು[ನೂರೊಂದು] ಐದು ಮೂರು ಒಂದು ಈ ಪರಿಯಾಗಿ ಇಪ್ಪುವಂತೆ ಸುವ್ವಿ 13 ಇಳಾನಾಡಿ ಸಾವಿರ ಸೀಳುಮಾಡಿ ಅದರೊಳು ಸೀಳುಮಾಡಿದರೇಳು ವಿರಳನಂತೆ ಸುವ್ವಿ ಸೀಳುಮಾಡಿದರೇಳು ವಿರಳನಂತೆ ನಾಡಿಯಲ್ಲಿ ರಕ್ತವರ್ಣನಾಗಿ ನಾರಾಯಣನಿಹ್ಯ ಸುವ್ವಿ 14 ಒಂದುನಾಡೀ ಪೆಸರು ಸುಷುಮ್ನನಾಡಿಯೆಂಬರು ಅದರಂತರ ಕಡೆಯಲಿ ರಂಧ್ರವಂತೆ ಸುವ್ವಿ ಅದರಂತರ ಕಡೆಯಲಿ ರಂಧ್ರÀ್ರವಂತೆ ನಾಡಿಯಲಿ ಕಮಲ ಮಧ್ಯದಲಿ ತಾ ವಿಮಲನಂತೆ ಸುವ್ವಿ 15 ನಾಡಿ ಮೂಲದೊಳು ನಾಲ್ಕುದಳದ ಕಮಲವುಂಟು [ನೀಲ]ವರ್ಣದಿಂದ ಸಂಪೂರ್ಣನಂತೆ ಸುವ್ವಿ [ನೀಲ]ವರ್ಣದಿಂದ ಸಂಪೂರ್ಣ[ನೀಲವರ್ಣ ಅನಿರುದ್ಧ] ನಲ್ಲಿ ತಾ ವಾಸನಂತೆ ಸುವ್ವಿ 16 ಪೊಕ್ಕುಳಲಿ ಆರುದಳ ಇಕ್ಕ್ಕು ರೀತಿಯಿಂದಲೇಳು [ಬಿಂಕನಾದ] ಸಂಕರ್ಷಣ ಮುಖ್ಯನಂತೆ ಸುವ್ವಿ [ಬಿಂಕನಾದ ಸಂಕರ್ಷಣ] ಮುಖ್ಯನಂತೆ ಜೀವಗೆ ಪಿಂಗಳ ವರ್ಣನಾಗಿ ಹಿಂಗದಿಹ ಸುವ್ವಿ 17 ಇಡಾನಾಡಿ [ಉದೀಚಿ] ಪಿಂಗಳ ದಕ್ಷಿಣದಲಿ ಪ್ರತೀಚಿ [ವಜ್ರಿಕೋ ಪೂರ್ವಾ ಅಂತೆ] ಸುವ್ವಿ ಪ್ರತೀಚಿ ವಜ್ರಿಕೋದೀಚಿ ಬ್ರಹ್ಮನಾಡಿ ಸುತ್ತಾ ಪಂಚನಾಡಿಗಳ ಪಂಚರೂಪಗಳೆ ಸುವ್ವಿ 18 ಎಂಟುದಳ ಕೆಂಪು ಉಂಟು ಹೃದಯ ಕಮಲದಲಿ ವೈಕುಂಠಪತಿ ಚತುರನ ಮಂಟಪವೆ ಸುವ್ವಿ ವೈಕುಂಠಪತಿ ಚತುರನ ಮಂಟಪದ ಮಧ್ಯದಲಿ ವಾಯು ಜೀವರಿಗೆ ಸಹಾಯನಂತೆ ಸುವ್ವಿ 19 ಕೂದಲ ಕೊನೆಯ ಹತ್ತು ಸಾವಿರ ವಿಧವನೆಮಾಡಿ ಜೀವ ಪರಿಮಾಣ ಒಂದೆ ಕಂಡ್ಯ ಸುವ್ವಿ ಜೀವ ಪರಿಮಾಣ ಒಂದೆ ಕಂಡ್ಯ ಚತುರನ ಅಂಗುಷ್ಟದÀಷ್ಟು ಜೀವ [ಅಂಶನಂತೆ] ಸುವ್ವಿ 20 ಸ್ಥೂಲಾಂಗುಷ್ಠ ಪರಿಮಾಣ ಪ್ರಾಜ್ಞನಾದ ನಾರಾಯಣ ಹೃದಯಕಮಲದ ಒಳಗೆ ವಿಮಲನಂತೆ ಸುವ್ವಿ ಹೃದಯಕಮಲದ ಒಳಗೆ ವಿಮಲನಂತೆ [ಜೀವಂಗಾ ರೂಪದಲಿ] ಹರಿ ತಾ ರಕ್ಷಿಪನಂತೆ ಸುವ್ವಿ 21 ಹೃದಯಾಕಾಶದಲಿ ಪ್ರಾದೇಶ ಪರಿಮಾಣ ಆದಿ ಪುರುಷನಿಹ್ಯ ಈ ವಿಧವಾಗಿ ಸುವ್ವಿ ಆದಿ ಪುರುಷನಿಹ್ಯ ಈ ವಿಧವಾಗಿ ಜೀವಗೆ ಗೃಹದೋಪಾದಿಯಲಿ ಹರಿ ರಕ್ಷಕನಂತೆ ಸುವ್ವಿ 22 ಕಂಠದೇಶದಲಿ ಉಂಟು ತೈಜಸಮೂರ್ತಿ ಕರ ಹತ್ತೊಂಬತ್ತು ಶಿರಗಳು ಸುವ್ವಿ ಕರ ಹತ್ತೊಂಬತ್ತು ಶಿರಗಳು ಮಧ್ಯದಲ್ಲಿ ಕರಿಮುಖ ಹಸ್ತಿಯಾಗಿಪ್ಪನಂತೆ ಸುವ್ವಿ 23 ಕಿರುನಾಲಗೆಯಲ್ಲಿ ಎರಡುದಳ ಕಮಲ ಅರವಿಂದ ಪದ್ಮದಲಿ ನಾರಾಯಣನಿಹ್ಯ ಸುವ್ವಿ ಅರವಿಂದ ಪದ್ಮದಲಿ ನಾರಾಯಣನಿಹ್ಯ ಹರಿಯು ರೂಪವೆಲ್ಲವಾಗಿ ಇಪ್ಪನಂತೆ ಸುವ್ವಿ 24 ದÀಕ್ಷಿಣಾಕ್ಷಿಯಲಿ ಲಕ್ಷಣ ವಿಶ್ವಮೂರ್ತಿ ಶಿಕ್ಷಕನಾಗಿ ಜೀವರ ವಂಶರಕ್ಷಕನಂತೆ ಸುವ್ವಿ ಜೀವರ ವಂಶರಕ್ಷಕನನ್ನೆ [ಜಾಗರವ ಕಾಣಿಸೋನಷ್ಟೆ] ವಾಣಿ ನಿಪುಣನಂತೆ ಸುವ್ವಿ 25 ಈ ದೇವರು ಪ್ರಾಜ್ಞನಾದ ಹರಿಯ ಕೂಡಿ ನಿದಾನಿಸಲು ಜೀವಂಗೆ ಸುಖತೇಜಸವು ಸುವ್ವಿ ನಿದಾನಿಸಲು ಜೀವಂಗೆ ಸುಖತೇಜಸವು ಅನೇಕಾಗಿ ತೈಜಸನಲ್ಲಿ ಸ್ವಪ್ನಭಾಗ್ಯ ಸುವ್ವಿ 26 ಹುಬ್ಬುಗಳ ಮಧ್ಯದಲಿ ಶುಭ್ರ ನಾಲ್ಕುದಳ ಕಮಲ ಅನಿರುದ್ಧ ನೀಲಾಭ್ರವರ್ಣ ಸುವ್ವಿ ಅನಿರುದ್ಧ ನೀಲಾಭ್ರವರ್ಣನಾಗಿ ಹರಿ ಅಲ್ಲಿ ಅದೃಶ್ಯವಾಗಿರುವನಂತೆ ಸುವ್ವಿ 27 ಶಿರದಲ್ಲಿ ಶುಭ್ರ ಹನ್ನೆರಡುದಳ ಕಮಲ ಅರುಣವರ್ಣನಾದ ನಾರಾಯಣನಿಹ್ಯ ಸುವ್ವಿ ಅರುಣವರ್ಣನಾದ ನಾರಾಯಣನಿಹ್ಯ ಹರಿಯು ಈ ಪರಿಯಲಿ ತಿಳಿದವರಧಿಕರಂತೆ ಸುವ್ವಿ 28 ಬ್ರಹ್ಮಹತ್ಯ ಶಿರಸ್ಕಂಚ ಸ್ವರ್ಣಸ್ತೇಯ ಭುಜದ್ವಯಂ ಸುರಾಪಾನ ಹೃದಾಯುಕ್ತಂ ಗುರುತಲ್ಪ ಸುವ್ವಿ ಸುರಾಪಾನ ಹೃದಾಯುಕ್ತಂ ಗುರುತಲ್ಪ ಕಟಿದ್ವಯಂ ಪಾದ ಪಾಪರೂಪಗಳೆ ಸುವ್ವಿ29 ಪಾತಕ ಪ್ರತ್ಯಂಗಗಳು ಉಪಪಾತಕ ರೋಮಂಗಳು ಪಾಪಪುರುಷ ರಕ್ತನೇತ್ರ ನೀಲಪುರುಷ ಸುವ್ವಿ ಪಾಪಪುರುಷ ರಕ್ತನೇತ್ರ ನೀಲಪುರುಷನಾಗಿ ವಾಸ ವಾಮಕುಕ್ಷಿಯಲಿ ನ್ಯಾಸವಂತೆ ಸುವ್ವಿ 30 ಪುರುಷ ಷೋಡಶನಾದ ಷಟ್ಕೋಣದಲ್ಲಿ ಪ್ರದ್ಯುಮ್ನನಿಹ್ಯ ತ್ರಿಕೋಣದಲಿ ಧ್ಯಾನ ಸಂಕರ್ಷಣ ಕೊಡುವ ಸುವ್ವಿ ತ್ರಿಕೋಣದಲಿ ಧ್ಯಾನ ಸಂಕರ್ಷಣ ಕೊಡುವ ದೇಹ ಪವಿತ್ರ [ವಾಸುದೇವರಲ್ಲಿ ಸುವ್ವಿ]31 ಹನ್ನೆರಡಂಗುಲಮೇಲೆ ಹನ್ನೆರಡುದಳ ಕಮಲ [ಪ್ರಪÀನ್ನರಿಗೆ] ಮೋಕ್ಷ ಪ್ರಸನ್ನ ಕೊಡುವ ಸುವ್ವಿ [ಪ್ರಪÀನ್ನರಿಗೆ] ಮೋಕ್ಷ ಪ್ರಸನ್ನ ಕೊಡುವ ತುರಿಯ ಸಿತದಳದಲ್ಲಿ ನಿಧಾನಿಸಲು ಸುವ್ವಿ 32 ಮುಖ್ಯಪ್ರಾಣನೆಂಬೊ ಗುರುವು ಹರಿಗೆ ಸಖ್ಯನಾದ ಬಂದ ದುಃಖ ಪರಿಹರಿಸಿ ಸುಖಬಡಿಸುವ ಸುವ್ವಿ ಬಂದ ದುಃಖ ಪರಿಹರಿಸಿ ಸುಖಬಡಿಸುವ ಮಾರುತನು ಹನುಮ ಭೀಮಸೇನ ರೂಪಗಳು ಸುವ್ವಿ 33 ಮೂರನೆ ಅವತಾರ ಆನಂದತೀರ್ಥರು ವೀರವೈಷ್ಣವರಿಗೆ ಆದಿಗುರುಗಳು ಸುವ್ವಿ ಪಾದ ನೆನೆದರೆ ಘೋರ ಸಂಸಾರವನು ನೀಗಿಸುವನು ಸುವ್ವಿ 34 ಘೋರ ಸಂಸಾರವನು ನೀಗಿಸುವ ಹಯವದನ ತನ್ನ ಪಾದದ ಸಮೀಪದಲಿಟ್ಟು ಸಲಹುವ ಸುವ್ವಿ ಪಾದದ ಸಮೀಪದಲಿಟ್ಟು ಸಲಹುವ ಹಯವದನ ಖೇದಗಳ ಬಿಡಿಸಿ ರಕ್ಷಿಸುವ ಸುವ್ವಿ 35
--------------
ವಾದಿರಾಜ
ಸ್ಮರಿಸಿ ತೀರ್ಥಕ್ಷೇತ್ರ ಸಜ್ಜನರು ನಿತ್ಯದಲಿ ಅರಣೋದಯದಲೆದ್ದು ಭಕ್ತಿಪೂರ್ವಕವಾಗಿ ಕಠಿಣಶ್ರಮದಿ ಮಾಳ್ಪ ಪಾಪರಾಶಿಗಳ ಪರಿಹರಿಸುತ್ತ ಸಂತ್ಯೆಸುವಾ ಪ ಭಾಗೀರಥಿ ಸರಸ್ವತಿ ಯಮುನಾ ವಾರಾಣಾ ಶ್ರೀ ಗೋದ ಫಲ್ಗುಣಿ ಶೋಣಭದ್ರಾ ನರ್ಮ ದಾ ಗಂಡಕಿ ಭಿಮರಥಿ ತುಂಗಭದ್ರೆ ಪ್ರಯಾಗ ತ್ರಿವೇಣಿ ಹೇಮಾ ವೇಗವತಿ ಗಾಯತ್ರೀ ಕಾಶಿಮಣಿಕರ್ಣಿ ಕಾ ಗೌತಮಿ ವಿಯದ್ಗಂಗಾ ಕುಮುದ್ವತೀ ಸಿಂಧು ಪಾಪಾಘನಾಶಿನೀ 1 ಸರಯು ಜಯಮಂಗಳ ಜಮದಗ್ನಿ ವರತಾಮ್ರ ಪರಣಿ ಯೋಗಾನಂದ ಕೃತಮಾಲಕುಹು ಮಹೇ ಧುನಾಶಿ ಗರುಡ ಮದಿರಾ ಮರುದ್ವತಿ ಸ್ವರ್ಣಮುಖರಿ ವರ ಝರತಾಪಿನಿ ಕಾಳಿ ಸೌ ಪರಣಿ ದಕ್ಷಿಣೋತ್ತರಪಿನಾಕಿ ಕಪಿಲ ಶೀತಳ ಕಾನಂದ ಕುರಮುಖಿ ಪ್ರಣವಸಿದ್ಧ 2 ಕಾವೇರಿ ಸಿಧು ಮಾಲತಿ ಗಾರ್ಗಿಣಿ ಹರಿ ಕುಂದ ಕುಂದಿನಿ ಶೈವ ದೇವವತಿ ಪಾತಾಳ ಗಂಗಾ ಪುನಹ ನೀರಾ ಕುಮಾರಧಾರಾ ಸಾವಿತ್ರಿ ದಾನ್ಯಮಾಲಾ ಪುಷ್ಪವತಿ ಲೋಕ ಸಿಂಧು ಧರ್ಮಕು ಭವ ನಾಶಿನಿ ವರದಾ ಮಲಾಪಹಾರಿ 3 ಸ್ವಾಮಿ ಪುಷ್ಕರಣಿ ಮಾನಸ ಚಂದ್ರ ಪುಷ್ಕರಣಿ ಭೂಮಂಡಲದೊಳುತ್ತಮೋತ್ತಮ ತ್ರಿಪುಷ್ಕರಣಿ ನಿತ್ಯ ಪದ್ಮಸರ ಚಂದ್ರಭಾಗತೀರ್ಥ ವಾಮನ ಮಯೂರ ಪಂಪಾಸರೋವರ ಪುಣ್ಯ ಧಾಮ ವ್ಯಾಸ ಸಮುದ್ರ ಧವಳಗಂಗಾ ಸುಸಾ ರೋಮಹರ್ಷತೀರ್ಥ 4 ದ್ವಾರಕಾನಗರ ಸಾಲಗ್ರಾಮ ಟರರ ಬದರಿ ಕೇ ದಾರ ನರನಾರಾಯಣ ಶ್ರೀ ಮಜ್ಜಗನ್ನಾಥ ಶ್ರೀ ಮುಷ್ಣ ಮಂದರ ಮೈನಾಕ ಕೈಲಾಸ ಕಂಚಿ ಶ್ರೀರಂಗನಾಥ ನೈಮಿಷ ದ್ವೈತವನ ಚಂಪ ಕಾರುಣ್ಯ ಕಾಶಿ ಪಂಪಾವಂತಿಕಾ ಪುರಿ ಹರಿದ್ವಾರ ಛಾಯಾಪಿಪ್ಪಲ 5 ಕೇದಾರ ಸಾಗರ ಮಂದಾಕಿನಿ ಕುಸುಮವತಿ ಆದಿಸುಬ್ರಹ್ಮಣ್ಯ ಕೋಟೇಶ್ವರ ನಂದಿ ವೇದಪಾದ ಯಯಾತಿ ಗಿರಿ ಕಾಲಹಸ್ತಿ ಕೌ ಮೋದಕೀ ಪಾಡುರಂಗ ಕ್ಷೇತ್ರ ಶ್ರೀ ವಿಷ್ಣು ಪಾಟಲೀ ಮಂತ್ರಾಲಯ6 ಮಂದರ ಮಲಯ ಕೈವಲ್ಯನಾಥ ಕಾಶೀರ ಜಾಂಬವತಿ ವೃಂ ಶ್ರೀ ವಿರೂಪಾಕ್ಷ ಕುಂದರ ನಂದಪುರಿ ಮಾಯಾ ಶ್ರೀವತ್ಸ ಗಂಧಮಾದನ ಚಿತ್ರಕೂಟ ದ್ವಾ ನರಾಚಲಾಸೌಭದ್ರಿ ಆದಿನಾಥ 7 ಈ ಮಹಿಮಂಡಲದೊಳಿಪ್ಪ ತೀರ್ಥಕ್ಷೇತ್ರ ನಾಮಗಳ ಕಾಲತ್ರಯದಲ್ಲಿ ಸರಿಸುತಿಹ ಧೀಮಂತರಿಗೆ ಸಂಚಿತಾಪ ಪರಿಹರದಾನಂತರದಲಿ ಸೋಮಾರ್ಕರುಳನಕ ಸಕಲ ಭೋಗಗಳ ಸು ತ್ರಾಮಲೊಕದ ಲುಣಿಸಿ ಕರುಣಾಳು ಪ್ರಾತ್ಯಕೆ ಸ್ವ ಅಹುದೆಂದು ಸೂತ ಶೌನಕಣೆ ಪೇಳ್ದ8 ಈ ಭರತ ಖಂಡದೊಳಗುಳ್ಳ ತೀರ್ಥಕ್ಷೇತ್ರ ವೈಭವಾಬ್ಜ ಭವಾಂಡ ಪಾರನದೊಳಗೆ ಹರಿ ಪರಮಕಾರುಣ ದಿಂದ ಸ್ತ್ರೀಬಾಲ ಗೋವಿಪ್ರಮಾತ ಪಿತೃಗಳ ಧನ ಲೋಭದಿಂದಲಿಕೊಂದ ಪಾತಕವ ಪರಿಹರಿಸಿ ಬೇಡಿದಿಷ್ಟಾರ್ಥಗಳನು 9
--------------
ಜಗನ್ನಾಥದಾಸರು
ಸ್ಮರಿಸೊ ಹರಿನಾಮ ಏ ಮನುಜಾ ಸ್ಮರಿಸೋ ಹರಿನಾಮ ನಿರವಧಿ ಸುಖಧಾಮ ಪರಮ ಪುರುಷಗಿದು ಪರಿಪೂರ್ಣ ಪ್ರೇಮ ಪ. ತರಳ ಪ್ರಹ್ಲಾದನ ಪೊರದು ಪಾಂಚಾಲಿಗೆ ತ್ವರಿತದೊಳಕ್ಷಯವಿತ್ತು ಸರಸಿಯೊಳಗೆ ಕರಿರಾಜನ ಸಲಹಿದ ನರ ಕಂಠೀರವ ಕರುಣಿಸುವನು ಬೇಗ 1 ಹಲವು ಜನ್ಮಗಳಲ್ಲಿ ಗಳಿಸಿದ ದುಷ್ಕøತ ಗಳನೆಲ್ಲ ನಿರ್ಮೂಲಗೊಳಿಸುವುದು ಜಲಜ ಸಂಭವ ಮಾಳ್ಪ ಕೆಲಸದಿ ಸಿಲುಕದೇ ನೆಲೆಗೊಂಡು ಸೌಖ್ಯವ ಸಲಿಸಬೇಕಾದರೆ 2 ಕಲಿಕೃತ ಕಲ್ಮಷ ಬಲೆಯಿಂದ ಮೋಚನ- ಗೊಳಿಸಲು ಹರಿನಾಮವಲ್ಲದಿನ್ನು ಚಲಿತ ಚಿತ್ತದ ಕರ್ಮಬಲದಿಂದಲಾಹದೆ ನಳಿನನಾಭನೇ ನೀ ಬೆಂಬಲನಾಗು ತನಗೆಂದು 3 ಉದಯಾರಂಭಿಸಿ ಮತ್ತೊಂದು ದಯ ಪರ್ಯಂತ ವಿಧಿವಿಹಿತಗಳೆಲ್ಲ ಸದರವೇನೊ ಪದುಮನಾಭನ ನಾಮ ಒದಗಿದರದು ಪೂರ್ಣ- ವದರಿಂದ ಸರ್ವರ ಹೃದಯ ನೀ ಮರೆಯದೆ 4 ಸಂಚಿತಾಗಾಮಿಗಳಂಚುವಂ ದಿತಿಜರ ಸಂಚಯಕನುದಿನ ಸ್ಮರಿಸುವರ ಕಿಂತಿತಾರಬ್ದ ಪ್ರಪಂಚವ ತ್ವರಿತದಿ ಮಿಂಚಿನಂದದಿ ತೋರಿ ಪರಿಹಾರಗೊಳಿಪರೇ 5 ಕರುಣಾಭಿಮಾನಿಗಳರಿತು ಮಾಡಿಸುತಿಹ ನಿರತ ಕೃತ್ಯಗಳೊಂದು ಮೀರದಲೆ ಹರಿಯಾಜ್ಞೆ ಇದು ಯೆಂದು ಚರಿಸುತಲನುದಿನ ಪರಮೋತ್ತಮ ಕಾರ್ಯಧುರವಿದೆ ತನಗೆಂದು 6 ನಾಗ ಗಿರೀಂದ್ರನ ನೆನೆದರೆ ಇಹಪರ ಭೋಗ ಸಾಮ್ರಾಜ್ಯವು ಸ್ಥಿರವಾಹುದು ವಾಗೀಶನ ಪರಮಾಗಮ ಸಿದ್ಧಾಂತ- ವಾಗಿಹದಿದೆಯೆಂದು ನೀ ಗುರುತವನಿಟ್ಟು 7
--------------
ತುಪಾಕಿ ವೆಂಕಟರಮಣಾಚಾರ್ಯ
ಹಯಾಸ್ಯ ವಿಠಲ ಸಲಹೊ |ಶುದ್ಧ ಭಕ್ತನ ಪೊರೆಯೆ ಭಿನ್ನವಿಪೆ ಸತತ ಪ ಮಧ್ವವಿಜಯದಿ ಸದ್ಬುದ್ಧಿ ಪ್ರದನೀನೆನಿಸಿಮಧ್ವಗುರು ಸತ್ಕರುಣ ಕವಚವನೆ ತೊಡಿಸೀ |ಸಿದ್ಧಾಂತ ಜ್ಞಾನದಲಿ ಶುದ್ಧ ಬುದ್ಧಿಯ ನಿತ್ತುಉದ್ಧರಿಸ ಬೇಕಿವನ ಉದ್ಧವನ ಪ್ರಿಯನೇ 1 ಪಾದ ಭವ ಹರಿಸೋ 2 ಗುಣರೂಪ ಕ್ರಿಯ ನಿನ್ನ ಧ್ಯಾನುಪಾಸಾನೆ ಇತ್ತುತನುಸದನ ಹೃದ್ಗಹದಿ ಕಾಣಿಸೀ ಕೊಳುತಾ |ಘನವೆನಿಪ ಸಂಚಿತಾಗಾಮಿಗಳ ಪರಿಹರಿಸಿಅಣುಗನನ ಸಲಹೆಂಬ ಪ್ರಾರ್ಥನೆಯ ಸಲಿಸೋ3 ಕ್ಲೇಶ ನಿಸ್ಸಂಶಯದಿ ಕಳೆಯುತಿಹಕಂಸಾರಿ ತವಪಾದ ಪಾಂಸು ಭಜಿಪನಿಗೇ |ವಂಶ ಉದ್ಧರಿಸಿ ಸಂತೈಸು ಶ್ರೀ ಹರಿಯೆಅಂಶುಮಾಲೀಕುಲಜ ಶ್ರೀರಾಮಚಂದ್ರಾ 4 ದೀಕ್ಷೆದಾಸತ್ವದಲಿ ಕಾಂಕ್ಷಿತಗೆ ತೈಜಸನುಈಕ್ಷಿಸುತ ಕರುಣಾಕಟಾಕ್ಷದಲಿ ಪೇಳೇ |ಸಾಕ್ಷಿ ಮೂರುತಿ ಗುರು | ಗೋವಿಂದ ವಿಠಲ - ಅಪೇಕ್ಷೆ ಪೂರ್ತಿಸಿಹೆ | ಋೂಕ್ಷ ಸನ್ನುತನೇ 5
--------------
ಗುರುಗೋವಿಂದವಿಠಲರು
130-1ದ್ವಿತೀಯ ಕೀರ್ತನೆಶ್ರೀ ಹರಿಪಾದಾಬ್ಜರತ ಶ್ರೀ ವಿಷ್ಣು ತೀರ್ಥವನ-ರುಹಅಂಘ್ರಿಯುಗ್ಮದಲಿ ಶರಣಾದೆ ಸತತಪಮಹಾಕರುಣಿಯು ಪರಮಹಂಸ ಕುಲತಿಲಕರುಅಹರ್ನಿಶಿಒದಗುವರು ಶರಣು ಸುಜನರಿಗೆಅ ಪದ್ವಿತೀಯಾಶ್ರಮವನ್ನು ಯುಕ್ತ ಕಾಲದಿ ಕೊಂಡುಸದ್ಧರ್ಮ ಆಚರಿಸಿ ಗೃಹಕೃತ್ಯದಲ್ಲಿಇದ್ದರು ಜಯತೀರ್ಥ ಆಚಾರ್ಯ ಆದರುಸದಾ ಹರಿಯಲ್ಲೇ ಧಾವಿಸಿತು ಮನಸ್ಸು 1ಕ್ಷೀರಫೇಣವೊಲ್ ತೂಲಿಕ ಹಂಸ ತಲ್ಪವುಶುಭ್ರ ಕನ್ನಡಿ ಚಿತ್ರಾಲಂಕಾರಗಳುಕೊರತೆ ಏನೂ ಇಲ್ಲ ಐಹಿಕ ಸಂಪತ್ತಿಗೆಸ್ಪುರದ್ರೂಪಿಣಿಸತಿಸುಶೀಲೆ ಸುಗುಣೆ2ಪ್ರಾರಬ್ಧ ಕರ್ಮನಿಮಿತ್ತ ಶ್ರೀಹರಿಯೇವೆಪರಿಪರಿಭೋಗಗಳ ಒದಗಿಸಿದ್ದೆಲ್ಲಹರಿಗೆ ಅರ್ಪಿಸುತ ಅನುಭವಿಸುತಿರಲಾಗಹೊರಗಿಂದ ಓರ್ವನು ಹಾಡಿದನು ನುಡಿಯ 3ಮಂಚಬಾರದು ಮಡದಿಬಾರಳು ಕುಂಚುಕನ್ನಡಿ ಬಾರದುಸಂಚಿತಾರ್ಥವು ಮತ್ತೆ ಬಾರದು ಮುಂಚೆ ಮಾಡಿರಿ ಧರ್ಮವಕಂಚಿನ ಗಂಟೆ ಧ್ವನಿ ಅಂದದಿ ಈ ನುಡಿಕೇಳಿಮಂಚದಿಂದಿಳಿದರು ಕುಳಿತರು ಚಿಂತೆಯಲಿ 4ಅಕಳಂಕ ಗುಣನಿಧಿ ನಾರಾಯಣ ಮಾಯೇಶಸಂಕರುಷಣ ಪ್ರದ್ಯುಮ್ನ ಅನಿರುದ್ಧಶ್ರೀಕರಾರ್ಚಿತ ಪಂಚರೂಪನ ಪ್ರೇರಣೆಯೆಂದುಮಾಕಳತ್ರನ ಸ್ಮರಿಸಿ ಹೊರಟರು ಹೊರಗೆ 5ಲೌಕಿಕ ವಿಷಯ ವಿಜೃಂಭಣಾಡಂಬರವಲೆಕ್ಕಿಸದೆ ವೈರಾಗ್ಯ ಮನಪಕ್ವದಿಭಕುತಿ ಉನ್ನಾಹದಿ ಅವಧೂತಚರ್ಯದಿಶ್ರೀಕರ ನಾರಾಯಣನ ಸೇವಿಸಿದರು 6ತೀರ್ಥಕ್ಷೇತ್ರಾಟನ ಮಾಡಲಿಕೆ ಹೊರಟರುಹಾದಿಯಲಿ ಸರ್ಪವು ಅಡ್ಡ ಬರಲುವೇದ್ಯವಾಯಿತು ಜಯತೀರ್ಥ ಮುನಿಗಳು ತಾವೇಬಂದು ತಡೆದರು ಸರ್ಪರೂಪದಲಿಯೆಂದು 7ಈ ಪುಣ್ಯ ಶ್ಲೋಕರು ಜಯತೀರ್ಥವಿಪ್ರಸರ್ಪರೂಪಶೇಷದೇವರ ಜಯಮುನಿಗಳಅಭಿಪ್ರಾಯವನ್ನರಿತು ಶಾಸ್ತ್ರಪ್ರವಚನಶಿಷ್ಯೋಪದೇಶದಿ ಹರಿಯ ಸೇವಿಸಿದರು 8ಮಲಾಪಹಾರಿಣಿ ತೀರಸ್ಥ ಮುನವಳ್ಳಿಶೀಲತಮ ಅಡವಿ ಪ್ರದೇಶ ಗ್ರಾಮದಲಿಕುಳಿತು ಶಿಷ್ಯರಿಗೆ ಸುಧಾದಿಗಳ ಪೇಳಿದರುಪೊಗಳ ಬಲ್ಲೆನೆ ಇವರ ಮಹಿಮೆಸಾಕಲ್ಯ9ಸುಮಧ್ವವಿಜಯ ಪಾರಾಯಣ ಮಾಡುತ್ತಕಲ್ಮಷ ಕಿಲುಬು ಹತ್ತಿದ ಪಾತ್ರೆಯನ್ನಕಲ್ಮಷ ಕಿಲಬನ್ನ ತ್ವರಿತದಿ ನೀಗಿಸಿಹೇಮಮಯ ಮಾಡಿದರು ಜನರು ಕಂಡಿಹರು 10ಹನ್ನೆರಡುಬಾರಿಸುಧಾದಿಗಳ ಪ್ರವಚನ ಮಾಡಿವಿನಯ ಸಂಪನ್ನಶ್ರದ್ಧಾಳು ಶಿಷ್ಯರಿಗೆಹನ್ನೆರಡಾವರ್ತಿ ಸುಧಾ ತತ್ವ ಪ್ರಕಾಶಿಕ ಪೇಳಿಘನಮಹಿಮ ಟಿಪ್ಪಣಿ ಮಾಡಿಹರು ಎರಡಕ್ಕೂ11ಭುಜಗಶಾಯಿ ಕ್ಷೀರಾಬ್ಧಿವಾಸನ ಪ್ರೀತಿಗೂಸುಜನಅಧಿಕಾರಿಗಳ ಉದ್ಧಾರಕ್ಕುರಚಿಸಿ ಗ್ರಂಥಗಳನ್ನ ಕೃತಕೃತ್ಯ ಮನದಲ್ಲಿರಾಜರಾಜೇಶ್ವರಿ ಶ್ರೀ ಹರಿಗರ್ಪಿಸಿದರು 12ಸತ್ಯಸಂಧಾರ್ಯರ ಹಸ್ತಪದ್ಮೋತ್ಪನ್ನಸತ್ಯವರ ತೀರ್ಥರ ಕರಕಂಜದಿಂದಜಯತೀರ್ಥಾಚಾರ್ಯರು ಕೊಂಡರು ತುರ್ಯಾಶ್ರಮತೋಯಜಾಕ್ಷಶ್ರೀ ವಿಷ್ಣುತೀರ್ಥ ನಾಮದಲಿ13ಬೃಹತಿಸಹಸ್ರಪ್ರಿಯ ಮಹಿದಾಸ ಜಗದೀಶಬ್ರಹ್ಮಪಿತ ಭಕ್ತಪಾಲಕ ಪರಮಹಂಸಮಹಿಶಿರಿಕಾಂತ `ಶ್ರೀ ಪ್ರಸನ್ನ ಶ್ರೀನಿವಾಸ'ನಮಹಾಭಕ್ತ ಶ್ರೀ ವಿಷ್ಣು ತೀರ್ಥಾರ್ಯಶರಣು 14 ಪ
--------------
ಪ್ರಸನ್ನ ಶ್ರೀನಿವಾಸದಾಸರು
ಎಂಥ ಬಲವಂತನೊ-ಕುಂತಿಯ ಸಂಜಾತನೋ |ಭಾರತಿಗೆ ಕಾಂತನೊ-ನಿತ್ಯ ಶ್ರೀಮಂತನೋ ಪರಾಮಚಂದ್ರನ ಪ್ರಾಣನೊ-ಅಸುರ ಹೃದಯ ಬಾಣನೊ |ಖಳರ ಗಂಟಲ ಗಾಣನೊ-ಜಗದೊಳಗೆ ಪ್ರವೀಣನೊ 1ಬಂಡಿಯನ್ನವನುಂಡನೊ-ಬಕನ ಪ್ರಾಣವ ಕೊಂಡನೊ |ಭೀಮಪ್ರಚಂಡನೊ-ದ್ರೌಪದಿಗೆ ಗಂಡನೊ 2ಕುಂತಿಯ ಕಂದನೊ ಸೌಗಂಧಿಕವ ತಂದನೋ |ಕುರುಕ್ಷೇತ್ರಕೆ ಬಂದನೊ-ಕೌರವರ ಕೊಂದನೋ 3ವೈಷ್ಣವಾಗ್ರಗಣ್ಯನೋ-ಸಂಚಿತಾಗ್ರಪುಣ್ಯನೋ |ದೇವವರೇಣ್ಯನೊ-ದೇವ ಶರಣ್ಯನೋ 4ಮಧ್ವಶಾಸ್ತ್ರವ ರಚಿಸಿದನೊ-ಸದ್ವೈಷ್ಣವರ ಸಲಹಿದನೊ |ಉಡುಪಿಕೃಷ್ಣನ ನಿಲಿಸಿದನೊ-ಪುರಂದರವಿಠಲನ ಒಲಿಸಿದನೊ 5
--------------
ಪುರಂದರದಾಸರು
ಎಷ್ಟು ಸುಕೃತದಿಂದ ಕಂಡಿಯೆಮನೋಭಿಷ್ಟಗಳನೆ ಪಡೆದುಕೊಂಡಿಯೆ ದೂತೆ ಪ.ಪಾದನೋಡಲು ಅತಿ ಪಾವನಹಾಂಗೆ ಮೋದಭರಿತಳು ನೀ ಆದೆನೆ ದೂತೆಸಾಧು ಜನರು ನಿನ್ನ ಸ್ವಾಧೀನನಮ್ಮಮಾಧವಅನುದಿನಅಧೀನ ದೂತೆ1ಕೆಂಚಿಹಸ್ತವ ನೀನು ಕಂಡಿಯೆ ಹ್ಯಾಂಗೆಸಂಚಿತಾಗಾಮಿ ಕಳಕೊಂಡೆಯೆದೂತೆ ಪಾಂಚಾಲಿದಯವ ಪಡಕೊಂಡಿಯೆನಿನ್ನ ವಾಂಚಿತಾರ್ಥವ ಕೈಕೊಂಡಿಯೆ ದೂತೆ 2ಮುಖವ ನೋಡಲು ನಿಜ ಮುಕ್ತಿಯ ಹಾಗೆಭಕ್ತಿ ಜ್ಞಾನವು ವಿರಕ್ತಿಯೆ ದೂತೆದಿವ್ಯ ಪ್ರಕೃತಿಯ ಗೆಲುವಂಥ ಶಕ್ತಿಯನಮ್ಮ ಲಕುಮಿ ರಾಮೇಶ ಒಲಿಯೆ ಮುಕ್ತಿಯೆ ದೂತೆ 3
--------------
ಗಲಗಲಿಅವ್ವನವರು
ಕೊಂಬು ಕೊಳಲ ತುತ್ತೂರಿ ಊದುತಲಿಕ್ಕುಇಂಬುಕಸ್ತುರಿ ಪರಿಮಳ ಸೂಸುತ ||ಪೊಂಬಟ್ಟೆ ಚೆಲ್ಲಣ ಸೋಸಿದ ಮೊಸರಿನ |ಕುಂಭಒಡೆದು ಕೆಸರಾಗಿದೆಯಮ್ಮ2ಮಿಂಚಿನಂದದಿ ಹೊಳೆಯುತ ಬದಿಯಲಿದ್ದ |ಸಂಚಿತಾರ್ಥಗಳೆಲ್ಲ ಸೂರಾಡಿದ ||ವಂಚನೆಯಿಲ್ಲದೆ ಭಕ್ತರ ಸಲುಹಿದ |ಸಂಚುಕಾರ ಪುರಂದರವಿಠಲನಲ್ಲದೆ 3
--------------
ಪುರಂದರದಾಸರು
ಗೋವಿಂದ ನಮೋ ಗೋವಿಂದ ನಮೋ ಗೋವಿಂದ - ನಾರಾಯಣ |ಗೋವರ್ಧನ ಗಿರಿಯೆತ್ತಿದ ಗೋವಿಂದ - ನಮ್ಮ ರಕ್ಷಿಸೊ ಪ.ಅರ್ಥವಾರಿಗೆ ಪುತ್ರರಾರಿಗೆ ಮಿತ್ರಬಾಂಧವರಾರಿಗೆ |ಕರ್ತು ಯಮನವರೆಳೆದು ಒಯ್ಯಲು ಅರ್ಥ- ಪುತ್ರರು ಕಾಯ್ವರೆ 1ಮಂಚ ಬಾರದು ಮಡದಿ ಬಾರಳು ಕಂಚುಗನ್ನಡಿ ಬಾರದು |ಸಂಚಿತಾರ್ಥವ ದ್ರವ್ಯಬಾರದು ಮುಂಚೆ ಮಾಡಿರಿ ಧರ್ಮವ 2ಒಡವೆಯಾಸೆಗೆ ಒಡಲ ಕಿಚ್ಚಿಗೆ ಮಡದಿ ಬೆನ್ನಲ್ಲಿ ಬಾಹಳು |ಬಿಡದೆ ಯಮನವರೆಳದು ಒಯ್ಯಲು ಎಡವಿಬಿದ್ದಿತು ನಾಲಗೆ 3ಪ್ರಾಣವಲ್ಲಭೆ ತನ್ನ ಪುರುಷನ ಕಾಣದೆಯೆ ನಿಲಲಾರಳು |ಪ್ರಾಣ ಹೋಗಲು ಮುಟ್ಟಲಂಜುವಳುಜಾಣೆ ಕರೆದರೆ ಬಾರಳು 4ತಂದು ಬಂದರೆ ತನ್ನ ಪುರುಷಗೆ ಬನ್ನಿ ಬಳಲಿದಿರೆಂಬಳು |ಒಂದು ದಿನದಲಿ ತಾರದಿದ್ದರೆ ಹಂದಿನಾಯಂತೆ ಕೆಲೆವಳು 5ಉಂಟುಕಾಲಕೆ ನಂಟರಿಷ್ಟರು ಬಂಟರಾಗಿಯೆ ಕಾಯ್ವರು |ಕಂಟಕರು ಯಮನವರು ಎಳೆವಾಗ ನಂಟರಿಷ್ಟರು ಬಾರರು 6ದಿಟ್ಟತನದಲಿ ಪಟ್ಟವಾಳಿದ ಮೆಟ್ಟಿ ದಿತಿಜರಸೀಳಿದ |ಮುಟ್ಟಿ ಭಜಿಸಿರೊ ಶ್ರೀ ಪುರಂದರವಿಠಲೇಶನ ಚರಣವ 7
--------------
ಪುರಂದರದಾಸರು
ಮುಂಚೆ ಕೈವಿಡಿದಂತೆ ಮಿಂಚೆನ್ನ ಎದೆಗುಡಿಲಿಪಂಚಬಾಣನ ಜನಕನೆ ಪ.ಸಂಚಿತಾರಬ್ಧಾಗಾಮಿ ಸಂಚಂಚಲಿಪ ಮನದ ಪ್ರಪಂಚವನು ಬಿಡಿಸು ತಂದೆ ನೊಂದೆ ಅ.ಪ.ಭವಬವಣೆಗಳನು ಅನುಭವಿಸಿದನ ಸತ್ಕುಲೋದ್ಭವನ ಮಾಡಿದ ಕೃಪೆಗೆ ನವಭಕುತಿ ಕಲಿಸು ಎನ್ನವಗುಣವ ಬಿಡಿಸು ದಾನವವೈರಿನರಮುರಾರಿಶೌರಿ1ಲೇಸು ಹೊಲ್ಲೆಯನರಿಯೆ ಲೇಶ ನಿಷ್ಠೆಯನರಿಯೆ ನಾಲೇಶದೊಳು ನಿನ್ನ ಮರೆದೆ ದಾಸಾಭಿಮಾನಿಯೆ ಸದಾ ಸರ್ವಕಾಲದಿ ಉದಾಸೀನವ ಮಾಡಬೇಡೈ ನೋಡೈ 2ಸ್ಮøತಿಯೊಳಗೆ ಕೂಡಿ ವಿಸ್ಮøತಿಯ ಕೂಡೋಡಾಡಿಸ್ಮøತಿದಾರಿ ಕೊಳದು ಮನವು ಸ್ಮøತಿವಂದ್ಯ ಪ್ರಸನ್ವೆಂಕಟಸ್ಮಿತವದನದಾತಅಸ್ಮತ್ ಪಾಪ ಪಂಕಶೋಷ ನಿರ್ದೋಷ3
--------------
ಪ್ರಸನ್ನವೆಂಕಟದಾಸರು
ರಂಗ ನೀ ಎನ್ನೊಡೆಯನಾಗಿ ಅಮಂಗಳಾತ್ಮರ ಮನೆಗೆ ಹೋಗ್ಯೆನ್ನಿಂಗಿತವನುಸುರಿದರೆ ಕುಂದಿನ್ನಾರಿಗೆಲೆ ತಂದೆ ಪ.ಹಂಚಿನೆದುರಲಿ ಹಲ್ಲು ತೆರೆದರೆಮಿಂಚುಕನ್ನಡಿಯಾಗಬಲ್ಲದೆವಂಚಕರ ಅನುಸರಿಸಿ ಒಡಲಾಸೆಯಲಿ ಬಳಲಿದರೆಕಿಂಚಿದಭಿಮಾನಿಲ್ಲೆ ನಿನಗೆ ಪ್ರಪಂಚ ಸೂತ್ರಿ ಮುರಾರಿ ಎನ್ನಯಸಂಚಿತಾರಬ್ಧಾಗಮವ ನೂಕುವರು ದಾರುಂಟೈ 1ಅರಸು ಮುಟ್ಟಿದ ನಾರಿ ಮಾನ್ಯಳುಪರಸುಹೊಂದಿದ ಲೋಹ ಪ್ರಿಯಪರಮಪುರುಷ ನಿನ್ನವನೆನಿಸಿ ಕ್ಷುದ್ರರ ವಶವ ಮಾಡುವರೆಅರಿದುದಾವುದಘಟಿತಘಟಕನೆಶಿರಿವಿರಿಂಚಿ ಶಿವೇಂದ್ರರೊಡೆಯನೆಪರಮಪಾತಕಿಯಾದರೇನ್ಮ್ಮುದ್ರಾಂಕಿತನು ಕಾಣೈ ರಂಗ2ಮಧ್ವರಗಣನೆ ನಿನ್ನ ಶರಣರುಒದ್ದು ಭವಸಾಗರವ ದಾಟಿದರುದ್ಧಟರು ನಾಕೇಳಿಕಕುಲತೆಯಿಂದ ಮೊರೆ ಹೋಗುವೆಅದ್ದು ವಿಷದೊಳಗೆ ಸುಧೆಯೊಳುಅದ್ದು ನಿನ್ನ ನಂಬಿದವನು ನಾಶುದ್ಧ ಭಟಜನಪಾಲ ಪ್ರಸನ್ವೆಂಕಟಾದ್ರೀಶ 3
--------------
ಪ್ರಸನ್ನವೆಂಕಟದಾಸರು