ಒಟ್ಟು 153 ಕಡೆಗಳಲ್ಲಿ , 51 ದಾಸರು , 147 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಜೋ ಸಚ್ಚಿದಾನಂದನೆ ಜೋ ಜೋ ದೇವಕಿಕಂದನೆ ಜೋಜೋ ಬ್ರಹ್ಮಾದಿವಂದ್ಯನೆ ಧ್ರುವ ಹುಟ್ಟಿ ಬಂದು ನಿಜದೋರಿದೆ ಖೂನ ಮುಟ್ಟಿ ಬೀರುವ ಸುಚಿನ್ನಸಾಧನ ಇಟ್ಟ ಕಾವಲಿ ಹಾಕಿದೆ ಮೌನ ಮೆಟ್ಟಿಮರ್ದಿಸಿ ಬಂದೆ ಮಾವನ 1 ಮಾಡಬಂದೆ ನೀ ಧರ್ಮಸ್ಥಾಪನಿಯ ನೋಡಬಂದೆನಿಷ್ಟ ಜನರಾರ್ಚನಿಯ ಆಡಬಂದೆ ನಂದಯಶೋದೆ ಮನಿಯ ನೀಡಬಂದೆ ನಿಜಸುಖಸಾಧನಿಯ 2 ಶಿಷ್ಟಜನರಿಗಾಗಿ ಸಹಾಕಾರಿ ಸೃಷ್ಟಿಯೊಳು ತೋರಬಂದೆ ಶ್ರೀಹರಿ ದುಷ್ಟ ಜನರ ಮರ್ದಿಸುವಾವತಾರಿ ಕಂಸಾರಿ 3 ದೇವಾದಿಗಳ ಮಗುಟಮಣಿಯೆ ಭಾವಿಸಲಳವಲ್ಲ ಸದ್ಗುಣಿಯೆ ಕಾವ ದೈವ ನೀನೆ ಕೃಷ್ಣ ಕರುಣೆಯೆ ದೇವಕಿ ಗರ್ಭನಿಧಾನದ ಖಣಿಯೆ 4 ಬಲವಾಗಿ ಎನಗಬಂದೆ ಸರ್ವೇಶ ಒಲಿದು ಭಾನುಕೋಟಿತೇಜಪ್ರಕಾಶ ಫಲವ ನೀಡಿ ತೋರಬಂದೆ ಸಂತೋಷ ಸಲಹಬಂದೆ ಮಹಿಪತಿ ಪ್ರಾಣೇಶ 5 ಮನೋಹರ ಮಾಡುವ ನೀನೆ ಸಹಕಾರಿ ಅನುದಿನ ಲೆವಕಲ ನೀನೆ ಮುರಾರಿ 6 ಅನೆ ಕಾಯಲಿಪರಿ ನೀನೆ ಉದಾರಿ ಅನಾಥರಿಗೊಲುವ ನೀನೆ ಶ್ರೀಹರಿ 7 ಪತಿತ ಪಾವನ ಪೂರ್ಣ ನೀನೆ ನಿಶ್ಚಯ ಹಿತದಾಯಕ ನೀನಹುದೊ ಮಹಿಪತಿಯ 8
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ಜೋಜೋ ಶ್ರೀ ಗೋಪಾಲಕೃಷ್ಣ ಮೂರುತಿಯೆ ಪತಿ ಲೋಕ ದೊರೆಯೆ ಜೋಜೋ ಈ ಲೋಕದೊಳು ನಿನಗಿನ್ನು ಸರಿಯೆ ಜೋಜೋ ಶ್ರೀ ಗುರುಕರಾರ್ಚಿತದಿ ಬಂದ್ಹರಿಯೆ ಪ. ತಂದೆ ಮುದ್ದುಮೋಹನರು ಕೊಟ್ಟ ಅಂಕಿತದಿ ಪೊಂದಿದ್ದ ರೂಪ ಗ್ರಹದಲ್ಲಿ ಹೊಂದಿ ಮುಂದೆಂಟು ವತ್ಸರಕೆ ಎನ್ನೊಡನೆ ಬಂದಿ ತಂದೆ ಮುದ್ದುಮೋಹನರ ಕರಸ್ಪರ್ಶ ಪೊಂದಿ 1 ನಮ್ಮ ಹಿರಿಯರ ಪೂಜೆ ಒಮ್ಮೊಮ್ಮೆ ಎಂದು ಒಮ್ಮೆ ದುರುಳನು ಮುಟ್ಟೆ ಮಲಿನಾದೆನೆಂದು ನಮ್ಮ ಗುರು ಕರಸ್ಪರ್ಶದಿಂ ಪುನಃ ಬಂದು ಪತಿ ಎನ್ನ ಕರಪೂಜೆ ಬೇಕೆಂದು 2 ಘನ್ನ ಗುಣರು ನಿನ್ನ ಪೂಜಿಸಿ ಪೋಗಲಂದು ಮನೆ ಪೆಟ್ಟಿಗೆಯೊಳ್ ಸುಮ್ಮನಿರಲಾರೆನೆಂದು ಮನಕೆ ಪ್ರೇರಿಸೆ ದುರುಳರಿಗೆ ಕದ್ದು ಒಯ್ದು ಘನ ಮೂರ್ತಿಗಳು ಪೋಗೆ ನೀನೊಬ್ಬ ಬಂದು 3 ಬಹುದಿವಸ ಮಲಿನವಾಗಿರುತಿರಲು ನೀನು ಮಹಮಹಿಮೆ ಅರಿಯಲಿಲ್ಲಾಗ ನಾನಿನ್ನು ಅಹಹ ನಮ್ಮ ಗುರುಗಳೆರೆಯಲು ಜ್ಞಾನವನ್ನು ಮಹಿಯೊಳೆನ್ನ ಪೂಜೆಯನು ಬಯಸಿದೆಯೊ ನೀನು 4 ಮನದಲ್ಲಿ ಪ್ರೇರಿಸಲು ಘನವಲ್ಲವೆಂದು ಕನಸಿನಲಿ ಎನ್ನ ಹಸ್ತದೊಳ್ ಬಂದು ನಿಂದು ಸನುಮತದಿ ಹರುಷದಲಿ ನಿನ್ನ ನಾ ತಂದು ಘನ ಮಹಿಮ ಗುರುಗಳಿಗೆ ಒಪ್ಪಿಸಲು ಅಂದು 5 ಅಂತರಾತ್ಮನ ಗುರುವು ವಿಗ್ರಹದೊಳಿಟ್ಟು ಸಂತೋಷದಿಂದ ಮನಮುಟ್ಟಿ ಕೊಡಲಷ್ಟು ಅಂತಾಯ್ತು ಮಲಿನ ಕುಂದಿತು ತೇಜವೆಷ್ಟು ನಿಂತೆನ್ನ ಕೈಲಿ ಪೂಜೆಯಗೊಂಬ ಗುಟ್ಟು 6 ದಿನದಿನಕೆ ಭಜನೆ ಪೂಜೆಯನೆಗೊಂಬ ಚಂದ ಘನಭಕ್ತರನು ಪೊರೆವ ಬಿರುದು ಆನಂದ ಮುನಿಜನರ ಮೋಹಕನೆ ಸಚ್ಚಿದಾನಂದ ಎನಗೊಲಿದೆ ಗೋಪಾಲಕೃಷ್ಣ ಗೋವಿಂದ 7 ರಮೆ ಬ್ರಹ್ಮ ಸುರರಿಗೆ ಸರಿ ಪೂಜಿಸುವೆನೆ ಕಮಲಾಕ್ಷ ಅಣು ನಾನು ನಿನ್ನ ಒಲಿಸುವೆನೆ ರಮಣೀಯವಾದ ವಸ್ತುಗಳ ನಾ ತಹೆನೆ ಕ್ಷಮಿಸು ನಿನ್ನ ದಾಸಿ ನನ್ನಪರಾಧಗಳನೆ 8 ಅಂತರಂಗದಲಿಪ್ಪ ಬಿಂಬ ಮೂರುತಿಯೆ ನಿಂತು ಈ ವಿಗ್ರಹದಿ ಈ ರೀತಿ ಮೆರೆಯೆ ಸಂತೋಷ ನೋಳ್ಪರಿಗೆ ಕೊಡು ಭಕ್ತಿ ಹರಿಯೆ ಕಂತುಪಿತ ಕಮಲಾಕ್ಷ ಕಾಯೊ ಸಿರಿದೊರೆಯೆ 9 ಪೂಜ್ಯಪೂಜಕನೆಂದು ಪೂಜೆ ಮಾಡುವೆನೊ ಮೂರ್ಜಗತ್ಪತಿ ನಿನ್ನ ಲಾಲಿ ಪಾಡುವೆನೊ ಪೂಜ್ಯ ಶ್ರೀ ಗೋಪಾಲಕೃಷ್ಣವಿಠ್ಠಲ ನೀನು ಗೋಜು ಬೇಡನ್ಯರದು ಪೊರೆಯೊ ದಾಸರನು 10
--------------
ಅಂಬಾಬಾಯಿ
ಜ್ಞಾನಾಮೃತ ಭುಜಿಸು ಜೀವ ಮಾನವಜನುಮದ ಗುರಿಯಿದು ಪ ಶುದ್ಧಮನದ ಪಾತ್ರೆಯಲ್ಲಿ ಸದ್ಗುರುವಿನ ಬೋಧದನ್ನ ಶುದ್ಧ ಚೈತನ್ಯಾತ್ಮ ನೀನೆ ಬದ್ಧಜೀವನಲ್ಲವೆಂಬ 1 ಶಿವರೂಪನು ಸಚ್ಚಿದಾತ್ಮ ಭವಬಂಧನವೆನ್ನೊಳಿಲ್ಲ ಆವಿನಾಶಿಯೆ ನಾನು ಎಂಬ ಸುವಿಚಾರದ ಬಾಯಿಯಿಂದ 2 ಸದ್ ರೂಪದ ಆರೋಗ್ಯ ಚಿದ್ ರೂಪದ ಪರಮ ಭಾಗ್ಯ ಆನಂದದ ನಿಧಿಯಾಗುವಿ ಬೋಧ 3
--------------
ಶಂಕರಭಟ್ಟ ಅಗ್ನಿಹೋತ್ರಿ
ತಂಗಿ ಮೊಸರ ಸುತ್ತ ಚೆಲ್ಲಿದ ಮುದ್ದುರಂಗ ಬೆಣ್ಣೆಯ ಮೆದ್ದ ಬಲ್ಲಿದ ಪ. ಪುಟ್ಟ್ಟಿದಾಗಲೆ ಮೂಲರೂಪವ ತೋರಿಅಟ್ಟಿದ ಸುಜನರ ತಾಪವಕೊಟ್ಟ ನಮಗೆ ಜ್ಞಾನದೀಪವ ಕೃಷ್ಣತೊಟ್ಟ ದುರ್ಜನರೊಳು ಕೋಪವ1 ಯಶೋದೆಯ ಮೊಲೆವಾಲನುಂಬಾಗ ನಸುಬಿಸಿನೀರನೆ ಎರೆಸಿಕೊಂಡಾಗಶಿಶುವು ಪೂತಣಿಯ ಕೊಂದಿತೆಂಬಾಗ ರ-ಕ್ಕಸರಿಗೆ ಇವ ಬಲುದಿಮ್ಮಿಗ 2 ಇಂದಿರೆಯನು ಬಿಗಿದಪ್ಪಿದ ಸಖವೃಂದಾರಕರೊಳಗೊಪ್ಪಿದಕಂದರ ಕಲ್ಲಿಂದ ಜಪ್ಪಿದ ತಾಯಿಹಿಂದಟ್ಟಿ ಬರಲೋಡಿ ತಪ್ಪಿದ3 ಪುಟ್ಟ ಕೃಷ್ಣನ ಕಟ್ಟಬೇಕೆಂದು ತಂ-ದೊಟ್ಟಿ ಹಗ್ಗಗಳ ತಂದುಬೆಟ್ಟವಾಗಿರಲು ದುರ್ಜನರ ಕೊಂದು ಈಗಗಟ್ಟಿಮಾಡಿದಳಿವ ಹರಿಯೆಂದು4 ಒರಳನೆಳೆದ ಬಲುಮತ್ತಿಯ ದೊಡ್ಡಮರನ ಕಿತ್ತಿದ ನೋಡಿವನರ್ಥಿಯತರಳಾಕ್ಷಿ ಕೃಷ್ಣನ ನೆತ್ತಿಯ ಬೆಣ್ಣೆಸುರಿಯೆ ಪಾಡಿದಳವನ ಕೀರ್ತಿಯ5 ಗಗನಕೆ ಏರಿ ವಾತನ ಕೊಂದ ನೀರೊ-ಳಗೆ ಪೊಕ್ಕು ತಂದೆಯ ಕರೆತಂದಖಗನಂತೆ ಕಡಹದಮರದಿಂದ ಹಾರಿವಿಗಡ ಸರ್ಪನ ಹೆಡೆಯೇರಿ ನಿಂದ6 ತುಳಿದಹಿತಲೆಯನು ಬಿಚ್ಚಿದನಾಗಲಲನೆಯರುಕ್ತಿಗೆ ಮೆಚ್ಚಿದ ಅಲರು ಮಳೆಯ ಸುರಿಯ ಹಚ್ಚಿದ ಕೃಷ್ಣಖಳರಳಕೆಗಳ ಕೊಚ್ಚಿದ 7 ನಂದನ ರಾಣಿಗೆ ಮೆಚ್ಚಿದ ತಾಯಚಂದದ ಕೈಗಳಿಂದುಚ್ಚಿದಇಂದೆನ್ನ ಮನೆಯೊಳು ಸಚ್ಚಿದಾ-ನಂದ ಹಿಡಿಯೆ ಕೈಯ್ಯ ಕಚ್ಚಿದ 8 ಕಣ್ಣೊಳು ಪಾಲನುಗುಳಿ ಪೋದ ಈಚಿಣ್ಣಗೆ ನೋಡಿದೆ ವಿನೋದಮಣ್ಣಮೆದ್ದಖಿಳವ ತೋರಿದ ಕೃಷ್ಣಸಣ್ಣ ಬಾಯನು ಮುಚ್ಚಿ ಮಗುವಾದ 9 ಕುಸುಮವೆತ್ತ ಖಡುಗ ವೆತ್ತ ಈಹಸುಗೂಸು ಎತ್ತ ಪರ್ವತವೆತ್ತಹಸಿವು ತೃಷೆಯ ಬಿಟ್ಟು ಗಿರಿಯ ಪೊತ್ತ ಈಶಶಿಮುಖಿ ಜನಕಿವನು ಸುಖವಿತ್ತ10 ಮೂರು ಲೋಕವಾಳುವ ಸಖಿಯರ ಗಂಡ ನೀಲ-ವರ್ಣನು ತೊಂಡರತೊಂಡ ಬಾಲಕನೀತಸರ್ವೇಶ ಕಂಡಾ ಇವಕೀಳೆಂದವ ಜಗದಲಿ ಭಂಡ 11 ಅರಳೆಲೆ ಮಾಗಾಯಿ ಮುಂಗೈಯ್ಯಲಿಟ್ಟುಸರಭಂಗಿ ಕೂಡಿ ತ್ರಿಭಂಗಿಯವರವೇಣುವನು ತನ್ನಂಗೈಯಲಿಟ್ಟ-ಧರದಲ್ಲೂದಿದ ನಮ್ಮ ರಂಗಯ್ಯ12 ಪಶುಪಕ್ಷ್ಷಿಗಳು ತರತರದಲ್ಲಿಎಸೆವ ಗೀತವ ಕೇಳಿ ವನದಲ್ಲಿಹಸುಳೆಯ ನೆನೆಯುತ್ತ ಮನದಲ್ಲಿ ಪರ-ವಶವಾದುವು ಆಕ್ಷಣದಲ್ಲಿ13 ಕೊಳಲೂದಿ ಸುರರನ್ನು ಸೋಲಿಸಿದ ರಾಗಕಲೆಗಳಿಂದೆಲ್ಲವ ಒಲಿಸಿದಇಳೆಯೊಳು ಗೀತವ ಕಲಿಸಿದ ಇಂತುಒಲಿದು ವಿಠಲ ನಮ್ಮ ಪಾಲಿಸಿದ14 ತÀರುಲತೆಗಳು ಪುಳಕಿತವಾಗೆ ಈಚರ ಪ್ರಾಣಿಗಳೆಲ್ಲ ಸ್ಥಿರವಾಗೆಹರಿಯ ವೇಣುನಾದ ಹೊಸಬಗೆ ಅತಿಹರುಷವ ನೋಡಲೈದಿದೆವೀಗ 15 ಚೆಲ್ಲಿದ ಕೈಯಿಂದಮಲ ನೀರ ನಮ್ಮೆಲ್ಲರ ನೀರಿಗಂಜನು ಧೀರನಲ್ಲ ನಾವಂದ ಮಾತನು ಮೀರನಿವಸುಲಭನೊಮ್ಮೆ ಮೊಗವ ತೋರ 16 ಪಾಲನೊಲೆಯೊಳಿಟ್ಟು ಪೋದೆವು ಈಕಾಲಭೂಷಣ ಕೈಗಾದವುಬಾಲರ ಕೆಲರು ಮರೆತು ಪೋದೆವು ಗೋ-ಪಾಲ ಸಂಗಕ್ಕೆ ಮರುಳಾದೆವು 17 ಉಂಬುವರಿಗೆ ಬಡಿಸಲಿಲ್ಲ ಪತಿಎಂಬುವನಾಜ್ಞೆಯೊಳಗೆ ನಿಲ್ಲದೆನಂಬಿದೆವು ನಾವು ಹರಿಯಲ್ಲದೆ ಅನ್ಯರೆಂಬುದು ಭಕ್ತ ವರ್ಗಕೆ ಸಲ್ಲದೆ18 ಧೇನು ಮಾತ್ರದಿಂದ ಫಲವೇನು ಕಾಮ-ಧೇನು ಶ್ರೀಕೃಷ್ಣನ್ನ ಕರೆದೆನುಮಾನಿನಿ ಮೊದಲು ಕರೆವಧೇನು ಬಿಟ್ಟುಜಾಣೆ ಸೇರಿದಳು ಕೃಷ್ಣನ ಪದವನು 19 ಶಿಶುವ ಬಿಟ್ಟೊಬ್ಬಳು ನಿಜಕನ್ಯೆತನದೆಸೆಯ ತೋರಿಸಬಂದಳಚ್ಚುತನ್ನಎಸೆವ ಶ್ರೀಪತಿ ತನ್ನ ರಮಣನು ಎಂದುಸುಟಳು ಮೊದಲಾಳ್ದ ಗಂಡನ 20 ಲಲನೆ ಕಣ್ಣಂಜನವಬಿಟ್ಟಳು ಜ್ಞಾನಚೆಲುವನಂಜನಕೊಡಂಬಟ್ಟಳುಒಲೆಯಪಾಲಗ್ನಿಗೆ ಕೊಟ್ಟಳು ಕೃಷ್ಣ-ಗೊಲಿದಧರ ಮನವಿಟ್ಟಳು21 ಇಂತು ತೊರೆದು ವಿಷಯಂಗಳ ಆ ಶ್ರೀ -ಕಾಂತನೆ ಕಾವ ಜಗಂಗಳಚಿಂತೆಯ ತೊರೆದೆವು ಮಂಗಳ ಲಕ್ಷ್ಮೀ -ಕಾಂತನೆ ಕಾಯೊ ಜಗಂಗಳ 22 ಕೇಶಿಯೆಂಬ ದೈತ್ಯನ ಕೊಂದ ಖಳನಾಶದಲಿ ಸದಾ ಮುಕುಂದಆ ಸಮಯದಲಿ ಅಕ್ರೂರ ಬಂದ ಅವಂಗೆಲೇಸÀಪಾಲಿಸಿ ಕೃಷ್ಣ ನಡೆತಂದ 23 ಮಧುರೆಯಲಿ ಮಲ್ಲರ ಸೋಲಿಸಿದ ತನ-ಗಿದಿರಾದ ಕಂಸÀನನೊರೆಸಿದಕದನಕೋಲಾಹನೆನಿಸಿದ ನಮ್ಮಮದನಶರಕೆ ಗುರಿಮಾಡಿದ24 ಎಲ್ಲ ದೇವರನಿವ ಮೀರಿದ ಸಖಿಬಲ್ಲವರಿಷ್ಟವ ಬೀರಿದಕಲ್ಲಕಂಬದಿ ಬಂದು ತೋರಿದ ಖಳರೆÉಲ್ಲಿದ್ದರಲ್ಲಿಗೆ ಹಾರಿದ 25 ದಯದಿಂದ ಸಖನಮಗಾದವ ಚೆಲ್ವಹಯವದನ್ನ ಕೃಪೆಯಾದವನಯದಿ ಜಲವ ಪೊಕ್ಕು ಪೋದವ ವೈ-ರಿಯ ಕೊಂದು ವೇದವ ಕಾಯ್ದವ 26
--------------
ವಾದಿರಾಜ
ತತ್ವೋಪದೇಶತೋರಿಸಬೇಕು ನಿನ್ನ ನಿಜವನು ಕಾರುಣ್ಯನಿಧಿ ಗುರುರಾಯ ನೀನು ಪತೋರುವ ತೋರಿಕೆಯನು 'ುೀರಿ 'ುಕ್ಕಿಹ ಪಾರಮಾರ್ಥಿಕ ಸಚ್ಚಿದಾನಂದ ರೂಪವ ಅ.ಪಕಾಯ ಬಂದಂದವೆನಗೆ ಕಾಣಿಸದು ಮಾಯಾಪಾಶದ ತೊಡರೆನ್ನ ಬಿಡದುಜಾಯಾಸುತಾದ್ಯರ ಬರಿಯ ಮೋಹದಲಾಯು ಬೀಯವಾಗುತಲಿದೆ ಬಿಡಿಸಿದ ಬೇಗದಿ 1ಪ್ರಕೃತಿಯೊಳ್ ಕೂಡಿ ಪ್ರಕೃತಿಧರ್ಮಗಳಾದ ಸುಕೃತ ದುಷ್ಕøತ ಫಲ ರೂಪವಾದ'ಕರಿಪ ಸುಖದುಃಖದನುಭವಕದಕೊಳಗಾಗದಕಳಂಕದಿರ'ದೆಂಬುದು ತೋರದಿದೆ ದೇವ 2ಆಕಾಶದೊಳು ದೀಪಪ್ರಕಾಶವು ಏಕವಾದಂತೆ ಚಿದಚಿತ್‍ಸಂಮೇಳವುಐಕ್ಯವಾಗಿರಲಚಿದ್ಭಾವವಳಿದು ಚಿತ್ತು ಏಕವಾಗಿಹ ನಿತ್ಯನಿರ್ಗುಣ ರೂಪವ 3ಅರಿ'ದ್ದೂ ಮರವೆಯೊಳರಿವರಿಯದೆ ಪಿರಿದಾಗಿ ಹಮ್ಮು 'ಹರಿಸುತಿಹುದುಮರವೆಯಹಂಭಾವ ತೋರದರಿ'ನೊಳು ಬೆರೆದು ಬೆರೆದ ಪರಿ ತೋರದಿರುವ ಹಾಗೆ4ಮೃತ್ತಿನಿಂದಾದ ಘಟಶರಾವಾದಿಗಳು ಮತ್ತೊಂದು ರೂಪವಾದ ತೆರದಲಿಚಿತ್ತೊಂದುಪಾಧಿುಂ ನಾನಾತ್ವವಾಗಿರೆ ಕೃತ್ರಿಮ'ದ ಕಡೆಗೊಳಿಸಿ ನಿಜದೊಳಿರಿಸಿ5ಬೀಜದಿಂದಾದ ತರು ಭಿನ್ನರೂಪಾಗಿ ಬೀಜದಾಕಾರ ಮಾಜಿದಂದದಲಿವ್ಯಾಜರ'ತ 'ಭ್ರಾಜಮಾನ ಬ್ರಹ್ಮಬೀಜದಿಂ ಮೂಜಗವಾದ ಬಗೆಯದೇನು 6ನಂಬಿದೆ ನಿನ್ನ ಚರಣಸರೋಜವ ಅಂಬುಜನಾಭ ಗುರು ವಾಸುದೇವನಂಬುಗೆಯನು ಕೊಟ್ಟು ಕರುಣವೆನ್ನೊಳಗಿಟ್ಟುುಂಬಿಟ್ಟು ಸಲ'ದ ವೆಂಕಟರಮಣ ನೀ7
--------------
ತಿಮ್ಮಪ್ಪದಾಸರು
ತಿಳಿ ಆದೆ ದೇವನು ಇರುತಿಹೆ ನೀ ಪ ಅದು ಕೊನೆಯಾಚೆಗೆ ಬೇರಿಲ್ಲ ಅದು ಮನಸಿಗೆ ನಿಲುಕುವದಲ್ಲ ಅದನನು ಭವದಲಿ ತಿಳಿಯಲ್ಲ ಬಿಡು ಮನಸಿನ ಗೊಡವೆಯನೆಲ್ಲ ಇದೆ ಜ್ಞಾನಾಗ್ನಿಯು ಸುಡುತಿಹುದೋ ಒದಗಿದ ಕರ್ಮದ ಕಾಷ್ಮಗಳ 1 ಮನವಡಗಿದ ಪದ ಪರಿಚಯವ ತನಿನಿದ್ರೆಯ ಮೀರಿದ ಸ್ಥಿತಿಯ ಅನುಭವದಲಿ ತರುವುದೆ ಯೋಗ ಅದನೇ ಯತ್ನದಿ ಸಾಧಿಸು ತಾ ನನಸಿನಲೇ ಗುರು ಮುಖದಿಂದ ಕೇಳಿ ನಿವೇಕದಿ ತಿಳಿ ಬೇಗಾ 2 ಎಚ್ಚರವಿದು ತಿಳಿ ಕನಸೆಂದು ಅಚ್ಚಳಿಯದ ಸ್ಥಿತಿ ನಾನೆಂದು ನಿಚ್ಚಳದಲಿ ನಿಶ್ಚಯಿಸುವದು ತುಚ್ಛದ ತೋರಿಕೆ ಎಂದು ತಿಳಿ ಸಚ್ಚಿತ್‍ಶಂಕರ ಬೋಧವನಾ 3
--------------
ಶಂಕರಭಟ್ಟ ಅಗ್ನಿಹೋತ್ರಿ
ದೀಪವಿದ ಬೆಳಗುವೆನು ದೇವ ನೀ ನೋಡುವ್ಯಾಪಿಸಿದ ತಿಮಿರವನು ಪರಿಹರಿಸಿ ರಂಜಿಸುವ ಪಸಕಲ ದೇವಾತ್ಮಕದ ತಿಲ ತೈಲವಾಗಿರಲುಅಕಲುತ ವರ್ತಿುಂ ಮಿಳಿತವಾಗಿ ಪ್ರಕಟವಾಗಿರುವಗ್ನಿ ಪ್ರಭೆಯೊಡನೆ ಸ್ಫುಟವಾಗಿಮುಖ ಸಮೀಪದಿ ಮೂರು ಲೋಕಗಳ ಬೆಳಗುತಿಹ 1ಜ್ಞಾನವೇ ಗೋಘೃತವು ಮೂರ್ತಿಗಳೆ ವರ್ತಿಗಳುನೀನಿದಕೆ ಮೂಲ ಕಾರಣವಸ್ತುವೂಸಾನುಕೂಲದಿ ಗುಣಗಳೊಂದಾಗಿ ಚಿತ್ತಿನೊಳುಲೀನವಾಗಿರೆ ನಿರ್ಮಲಾಕೃತಿಯ ತಾಳಿರುವ 2ಎನ್ನ ಜೀವವೆ ದೀಪ ನಿನ್ನ ಪಾದವೆ ಬ್ರಹ್ಮಭಿನ್ನ ಭಾವವನುಳಿದು ಪೂರ್ಣರೂಪದಲಿನಿನ್ನೊಳಗೆ ನಿಲಿಸೆನ್ನ ಪುಣ್ಯತಮವೆಂದೆನಿಪಸ್ವರ್ಣಮಯ ತಿರುಪತಿಯ ವಾಸ ವೆಂಕಟರಮಣ 3 ಓಂ ಸಚ್ಚಿದಾನಂದವಿಗ್ರಹಾಯ ನಮಃ
--------------
ತಿಮ್ಮಪ್ಪದಾಸರು
ದೇವ ಬಂದ ಭಕ್ತರ ಕಾವ ಬಂದ ರಂಗ ಬಂದ ಕೋಮಲಾಂಗ ಬಂದ ಪ ದೇವರ ದೇವ ಬಂದ ದೇವಕಿಯ ಕಂದ ಬಂದ ಮದನ ಗೋಪಾಲ ಬಂದ 1 ಅಚ್ಯುತಾನಂತ ಬಂದ ಸಚ್ಚಿದಾನಂದ ಬಂದ ಹೆಚ್ಚಿನ ತಮವಗೆಲಿದು ವೇದತಂದವ ಬಂದ 2 ನಂದನಂದನ ಬಂದ ಸಿಂಧುಶಯನ ಬಂದ ಇಂದ್ರವಂದಿತ ಬಂದ ಇಂದಿರಾ ರಮಣ ಬಂದ 3
--------------
ಕವಿ ಪರಮದೇವದಾಸರು
ಧೇನಿಸೂ ಶ್ರೀಹರಿಯ ಮಹಿಮೆ ನೀ ಧೇನಿಸೊ ಪ ಧೇನಿಸು ಶ್ರೀಹರಿಯ ಲೀಲಾ ಸೃಷ್ಟಿ ಮಾನಸದಲಿ ನೆನೆಯೋ ಪರಿಯಾ ||ಆಹಾ|| ತಾನೆ ತನ್ನಯ ಲೀಲಾಜಾಲತನದಿ ತನ್ನ ಆನಂದದೊಳಿಪ್ಪ ಶ್ರೀ ಮುಕುಂದ ನನ್ನ ಅ.ಪ ಮೂಲ ನಾರಾಯಣ ದೇವ ತಾನು ಆಲದೆಲೆಯೊಳು ಲೀಲಾ ತೋರಿ ಬಾಲತನದಿ ತಾ ನಲಿವಾ ಅನೇಕ ಕಾಲ ಪರ್ಯಂತರದಿ ಸರ್ವ ||ಆಹಾ|| ಎಲ್ಲ ಜಗವ ತನ್ನ ಒಡಲೊಳಡಗಿಸಿ ಲೋಲನಾಗಿ ಬಾಲಕ್ರೀಡೆಯಾಡುವಪರಿಯಾ 1 ಇಂತು ಶಯನಗೈದ ಹರಿಯ ಅ- ನಂತ ವೇದಗಳಿಂದ ತ್ವರಿಯಾ ದುರ್ಗ ಸಂತಸದಿಂದ ಸಂಸ್ತುತಿಯ ಮಾಡೆ ಕಂತುಪಿತÀನು ತಾನೆಚ್ಚರಿಯ ||ಆಹಾ|| ಅಂತೆ ತÉೂೀರ್ದ ವಾಸುದೇವಾದಿ ಚತುರಾ- ಸಿರಿ ರೂಪಗಳ ಸಹಿತ 2 ಸಕಲ ರೂಪಗಳ ತನ್ನೊಳೈಕ್ಯಾ ಮಾಡಿ ಸಕಲ ಲಕುಮಿ ರೂಪಗಳಲಿ ಐಕ್ಯಾ ಇಟ್ಟು ಸಕಲ ಮರುತರ್ಗೆ ತನುಮುಖ್ಯಾ ಇತ್ತು ಸಕಲ ಕ್ರೀಡೆಯೊಳು ಸೌಖ್ಯಾ ||ಆಹಾ|| ಲಕುಮಿಯ ಸ್ತುತಿಗೆ ಒಲಿದು ತಾನೇತ- ನ್ನ ಕಡೆಗಣ್ಣಿಂದ ಪಂಚಜೀವರ ನೋಡಿದಾ 3 ಶುದ್ಧಸೃಷ್ಟಿಯೆಂಬುದೊಂದು ಪರಾ- ಧೀನ ವಿಶೇಷವು ಎಂದು ಮತ್ತೆ ಒಂದು ಮಿಶ್ರ ಸೃಷ್ಟಿಯೆಂದು-ಒಂದು ಕೇವಲ ಸೃಷ್ಟಿಯೆಂದೂ ||ಆಹಾ|| ತಮಾಂಧಕಾರವ ಪ್ರಾಶಿಸಿದ ವಿವರಾ 4 ತನ್ನೊಳೈಕ್ಯವಾಗಿದ್ದ ಮಹ ತಾನೆ ಪ್ರಕಟನಾಗಿ ನಿಂದ ಆಗ ಉನ್ನಂತ ಚತುರ ನಾಮದಿಂದ ||ಆಹಾ|| ಜನುಮ ಸ್ಥಿತಿ ಮೃತಿ ಮೋಕ್ಷದನಾಗಿರ್ಪ ಅನಿರುದ್ಧಾದಿ ಚತುರಮೂರ್ತಿಗಳ ವ್ಯಾಪಾರ5 ಪುರುಷನಾಮಕ ಪರಮಾತ್ಮ ತಾ ತರವರಿತು ಘನಮಾಡ್ದ ಮಹಿಮಾ ಸೃಷ್ಟಿ ತರತರ ಮಾಡ್ದ ಮಾಹಾತ್ಮ ||ಆಹಾ|| ಪ್ರಾಕೃತ ವೈಕೃತ ದೇವತೆ ಸುಮಾನ ಈ ಮೂರುವಿಧ ಸೃಷ್ಟಿಯಾನೆಸಗಿದ ಪರಿಯ ನೀ 6 ಮಹದಹಂಕಾರ ತತ್ವ ಪಂಚ ಮಹಭೂತಗಳು ಮನಸ್ತತ್ವ ಇನ್ನು ಮಹದಶೇಂದ್ರಯಗಳ ತತ್ವ ಮತ್ತೆ ಮಹತಾಮಿಶ್ರಾಂಧ ತಾಮಸ ತತ್ವ ||ಆಹಾ|| ಇಹುದು ಈ ಪರಿಯಲ್ಲಿ ಪ್ರಾಕೃತ ಸೃಷ್ಟಿಯು ಮುಹುರ್ಮುಹು ಇದನೆ ಆಲಿಸಿ ನಿನ್ನೊಳು 7 ವೈಕೃತದೋಳು ಸಕಲ ವೃಕ್ಷಾ ತಿರ್ಯಕ್ ಸಕಲ ಪ್ರಾಣಿಗಳ್ ಮನುಜ ಕಕ್ಷಾ ಎಲ್ಲ ವಿಕೃತ ಸೃಷ್ಟಿಯ ಮಾಡ್ದ ಅಧ್ಯಕ್ಷಾ ಇನ್ನು ಸುರಸಮಾನ ಸೃಷ್ಟಿಯ ಅಪೇಕ್ಷಾ ||ಆಹಾ|| ಸಕಲ ಸುರಾಸುರಪ್ಸರ ಗಂಧರ್ವರು ಪಿತೃಗಳು ಯಕ್ಷರಾಕ್ಷಸರ ಪರಿಯವರಾ 8 ಪುನ್ನಾಮ ವಿರಂಚಿ ಬ್ರಹ್ಮಾನು ಅಂದು ಘನ್ನವಾಸುದೇವ ತಾನು ಸೃಷ್ಟಿ ಯನ್ನ ಪ್ರಕಟಮಾಡಿದನು ಮುಂದೆ ಅನಿಲದೇವನು ಸಂಕರುಷಣನ ||ಆಹಾ|| ಅನಿಲನೆ ಸೂತ್ರನಾಮಕವಾಯುವಾಗಿಹ ಭಾವೀ ಬ್ರಹ್ಮನೀತನೆ ನಿತ್ಯಗುರುವೆಂದು 9 ಪ್ರದ್ಯುಮ್ನನಿಂದ ಸರಸ್ವತಿ ಇನ್ನು ಶ್ರಧ್ದಾನಾಮಕಳು ಭಾರತಿ ಸೃಷ್ಟಿ- ಯಾದ ವಿವರ ತಿಳಿಯೊ ಪೂರ್ತೀ ಇದೇ ಪ್ರದ್ಯುಮ್ನನ ಸೃಷ್ಟಿಯ ಕೀರ್ತಿ ||ಆಹಾ|| ಶ್ರದ್ಧಾದೇವಿಯೊಳು ಸೂತ್ರನ ವೀರ್ಯದಿಂ- ದುದ್ಭವಿಸಿದ ಜೀವ ಕಾಲನಾಮಕನು 10 ಈರ ಬ್ರಹ್ಮರಸೃಷ್ಟಿ ಚರಿತ್ರೆ ಚಿತ್ರ ಗಾತ್ರ ತರವೆಲ್ಲ ವಿಚಿತ್ರ ||ಆಹಾ|| ವಿರಂಚಿ ಬ್ರಹ್ಮ ಸರಸ್ವತಿಯಿಂದ ವೈ- ಕಾರಿಕ ರುದ್ರ ಶೇಷಗರುಡರ ನೀ 11 ಸೂತ್ರ ಶ್ರದ್ಧಾ ದೇವೇರಿಂದ ಪವಿ ತ್ರತೈಜಸ ರುದ್ರ ಬಂದಾ ಪ- ಪುತ್ರರಾಗಿಹರತಿ ಚೆಂದಾ ||ಆಹಾ|| ಪುತ್ರನಾದ ತಾಮಸ ರುದ್ರ ಶೇಷಗೆ12 ಪ್ರದ್ಯುಮ್ನ ಸೂಕ್ಷಶರೀರ ಕೊಟ್ಟು ಉದ್ಧಾರ ಮಾಡಿದ ಜೀವರ ಅನಿ ರುದ್ಧನ ಕೈಲಿ ಕೂಡಲವರಾ ಅನಿ ರುಧ್ದನು ಮಾಡ್ದ ವಿಸ್ತಾರಾ ||ಆಹಾ|| ತದಪೇಕ್ಷ ಮೂಲಪ್ರಕೃತಿಯಿಂದ ಗುಣತ್ರಿ- ವಿಧ ಕೊಂಡು ಮಹತ್ತತ್ವ ನಿರ್ಮಿಸಿದಾ 13 ಮಹತ್ತತ್ವದಿಂದಹಂಕಾರ ತತÀ್ತ ್ವ ಮಹದಹಂಕಾರವು ಮೂರುತರ ಇದ- ರೊಳು ಬ್ರಹ್ಮವೈಕಾರಿಕ ಶರೀರವಾಗಿ ಪರಿ ಈ ರೂಪ ವಿವರಾ ||ಆಹಾ|| ಅಹುದು ತೈಜಸದಿಂದ ಶೇಷನ ದೇಹವು ತಾಮಸದಿಂದಲಿ ರುದ್ರ ತಾನಾದನು 14 ಎರಡನೆಯ ಸಾರಿ ಪ್ರದ್ಯುಮ್ನ ಅರ್ಧ ನಾರೀ ರೂಪನಾಗಿ ಇನ್ನು ಎಡದಿ ಸ್ರೀರೂಪ ಜೀವರುಗಳನ್ನು ಬಲದಿ ಪುರುಷ ಜೀವರೆಲ್ಲರನ್ನು ||ಆಹಾ|| ಧರಿಸಿ ಅವರ ದೇಹಗಳನಿತ್ತು ಅ ನಿರುದ್ಧನ ಕೈಯೊಳಿತ್ತ ಪರಿಯನ್ನು 15 ಅದರಂತೆ ಅನಿರುಧ್ದದೇವ ತಾ ನದಕಿಂತ ಸ್ಥೂಲದೇಹವ ಮೂಲ ಪ್ರಕೃತಿಯಿಂದ ಗುಣವಾ ಕೊಂಡು ಅದುಭುತ ಮಹತ್ತತ್ವತೋರ್ವ ||ಆಹಾ|| ಅದುಭುತ ಮಹತ್ತತ್ವದಿಂದಹಂಕಾರ ಉದಿಸಿದ ಪರಿಯನು ಮುದದಿಂದಲಿ ಅರಿತು 16 ಪರಮ ಕರುಣೆಯಲೀ ರುದ್ರನು ಅರ್ಧ ನಾರೀರೂಪ ತಾಳಿ ಇನ್ನೂ ಎಡದಿ ಸುರರಸ್ತ್ರೀಗಳನ್ನು ಬಲದೀ ಸುರಪುರಷರನ್ನೂ ||ಆಹಾ|| ಭರದಿ ಪುಟ್ಟಿಸಿ ಪ್ರದ್ಯುಮ್ನನ ಕೈಲಿತ್ತ ಪರಿಪರಿ ಸೃಷ್ಟಿಯ ಕ್ರಮವರಿತು ನೀನೀಗ 17 ಅನಿರುಧ್ದ ದೇವನು ಜೀವರ ಸ್ಥೂಲ ತನುವ ಕೊಟ್ಟು ಪಾಲಿಪ ತದಭಿ- ಮಾನಿ ಶ್ರೀ ಭೂ ದುರ್ಗಾ ಮಾಡಿ ತಾನೆಲ್ಲರ ಸತತ ಪೊರೆವಾ ||ಆಹಾ|| ಮಹತ್ತತ್ತಾ ್ವಭಿಮಾನಿಗಳೆನಿಸಿದ ದೇವನ18 ಅಹಂಕಾರ ತತ್ತಾ ್ವಭಿಮಾನಿ ಅದಕೆ ಅಹಿಗರುಡರು ಅಭಿಮಾನಿ ಇನ್ನು ಅನಿರುದ್ಧಾದಿ ರೂಪತ್ರಯವು ಇದಕೆ ಇನ್ನು ನಿಯಾಮಕನು ಎನ್ನು ||ಆಹಾ|| ಮಹತ್ತತ್ವಾ ನಿಯಾಮಕ ವಾಸುದೇವನಿಂದ- ನವರತ ಈ ಸೂಕ್ಷ್ಮಪ್ರಮೇಯ ಗ್ರಹಿಸಿ ನೀನು 19 ಮನಸ್ತತ್ವಾಭಿಮಾನಿ ಸುರರಾ ಸೃಷ್ಟಿ ಯನ್ನೆ ವೈಕಾರಿಕದಿಂದಲವರಾ ಮಾಡಿ ಘನ್ನ ತೈಜಸದಿಂದಲಿಂದ್ರಿಯ ತತ್ಪವೆ- ಲ್ಲನೆಸಗಿದಂಥ ವಿವರಾ ||ಆಹಾ|| ಉನ್ನಂತ ತನ್ಮಾತ್ರ ಭೂತಪಂಚಕಗಳ ತಾಮಸದಿಂದಲಿ ಉದಿಸಿದ ಪರಿಯನು 20 ಯುಕ್ತಸ್ಥಾನಾದಿಗಳನ್ನು ಕೊಡೆ ಉತ್ತಮೋತ್ತಮನನ್ನು ತಾವು ಸುತ್ತಿ ಸ್ತುತಿಸಲು ಇನ್ನೂ ||ಆಹಾ|| ತತ್ವದೇವತೆಗಳ ಭಕ್ತಿಗೆ ಒಲಿದು ತತ್ವರೆಲ್ಲರ ತೋರೆ ರೂಪದಿ ಧರಿಸಿಟ್ಟನು21 ರಜಸುವರ್ಣಾತ್ಮಕವಾದ ಘನ ನಿಜ ಐವತ್ತು ಕೋಟಿ ಗಾವುದ ಉಳ್ಳ ಅಜಾಂಡವನ್ನು ತಾ ತೋರ್ದ ತನ್ನ ನಿಜಪತ್ನಿ ಉದರದಿ ಮಾಡ್ದ ||ಆಹಾ|| ಸೃಜಿಸಿ ಬ್ರಹ್ಮಾಂಡದಿ ತತ್ವಗಳೊಡಗೂಡಿ ನಿಜವಾಗಿ ತಾನೊಳ ಪೊಕ್ಕ ವಿರಾಟನ್ನ 22 ಪಾತಾಳಾದಿ ಸಪ್ತಲೋಕ ಕಡೆ ಪರಿಯಂತ ರೂಪ ತಾ ತಾಳಿದ ಆದ್ಯಂತ ಇಂತು ನಿರತನು ಸಚ್ಚಿದಾನಂದ ||ಆಹಾ|| ಇಂತು ವಿರಾಟ ತನ್ನಂತರದೊಳು ತತ್ವರೆಲ್ಲರ ತತ್‍ಸ್ಥಳದೊಳಿಟ್ಟು ಪೊರೆದನ್ನ23 ಸಕಲ ಉದಕ ಶುಷ್ಕದಿಂದ ಇರಲು ತಕ್ಕ ಮುಕ್ತಾಮುಕ್ತರ ಭೇದದಿಂದ ತಕ್ಕ ಸ್ಥಾನವೆ ಕಲ್ಪಿಸಿದ ಚೆಂದಾ ||ಆಹಾ|| ಅಕಳಂಕ ಪುನ್ನಾಮಕನು ಧಾಮತ್ರಯ ಮೊದಲಾದ ನರಕ ಪಂಚಕಗಳ ಮಾಡಿದ 24 ಉದಕ ಶೋಷಣೆಯನ್ನು ಮಾಡಿ ಇನ್ನುಮ- ಹದಹಂಕಾರವ ಕೂಡಿ ಭೂತ ಪಂಚಕವ ಮಿಳನ ಮಾಡಿ ಆಗ ಹದಿನಾಲ್ಕೂದಳಾತ್ಮಕ ಪದ್ಮತೋರಿ ||ಆಹಾ|| ಅದುಭುತ ಪದುಮದಿ ಉದಿಸಿದ ಬ್ರಹ್ಮನು ಚತುರ ನಾಲ್ಕುದಿಕ್ಕು ಮುದದಿಂದ ನೋಡಿದ 25 ಪದುಮದಲಿ ಚತುರಾಸ್ಯನಾಗಿ ಅದು ಭುತÀ ಮಹಿಮೆ ನೋಡುತ ತಾನೆ ಮುದದಿಂದ ಮೊಗತಿರುಗಿಸುತಾ ಅದ ಅದುಭುತ ಶಬ್ದಕೇಳುತ್ತಾ ||ಆಹಾ|| ತದಪೇಕ್ಷ ತಪವನಾಚರಿಸಿ ನಾಳದಿ ಬಂದು ಪದುಮನಾಭನು ತಾನು ಮುದದಿಂದ ನೋಡಿದ 26 ಪರಮಪುರುಷ ಉಕ್ತಿ ಲಾಲಿಸಿ ಮೆಚ್ಚಿ ವರವ ಕೊಟ್ಟು ಪಾಲಿಸಿ ಸೃಷ್ಟಿ ನಿರುತ ಮಾಡಲು ತಾ ಬೆಸಸೀ ತಾನು ಅವನಂತರದೊಳು ನೆಲೆಸೀ ||ಆಹಾ|| ಹೊರಗೂ ಒಳಗೂ ನಿಂತು ಸೃಷ್ಟಿಲೀಲೆಯ ತೋರ್ವ ಉರಗಾದ್ರಿವಾಸವಿಠಲ ವೇಂಕಟೇಶನ್ನ 27
--------------
ಉರಗಾದ್ರಿವಾಸವಿಠಲದಾಸರು
ಧೇನಿಸೊ ಶ್ರೀಹರಿಯ ಮಹಿಮೆಯ ಪ ಧೇನಿಸು ಲಯದ ವಿಸ್ತಾರ ಚತುರಾ ನಾನಕಲ್ಪದ ವಿವರಾ ||ಆಹಾ|| ಧೇನಿಸು ಶತಾನಂದಗೆ ಶತ- ಮಾನಕಾಲದಲ್ಲಿ ಇದ್ದು ನಡೆಸುವ ಹರಿಕಾರ್ಯ ಅ.ಪ ಮೊದಲರ್ಧ ಶತಮಾನ ಸೂಕ್ಷ್ಮ ಸೃಷ್ಟಿ ಪದುಮನ ತೋರಿದ ಮಹಾಮಹಿಮ ಆಗ ಅದೆ ಪ್ರಥಮ ಪರಾರ್ಧವು ನೇಮ ಮೇಲೆ ದ್ವಿತೀಯ ಭಾಗಕ್ಕೆಲ್ಲ ಬ್ರಹ್ಮ ||ಆಹಾ|| ಅದರೊಳು ತ್ರಿದಶ ಏಳರ್ಧ ವರ್ಷವು ಪದುಮಜನಿಂದ ರಾಜ್ಯವನಾಳಿಸಿದ ಪರಿಯನು 1 ದ್ವಾದಶಾರ್ಧವರುಷ ತಾ ಉಳಿಯೆ ಆಗ ತೋರ್ದ ಅದುಭೂತವಾದ ಮಹಾಪ್ರಳಯ ಸೂಚ- ನಾದಿ ಕಾರ್ಯವು ತಾ ಮೆರೆಯೆ ಶತ ಅಬ್ದ ಅನಾವೃಷ್ಟಿ ತೋರಿರೆ ಆಹಾ|| ಉದಧಿ ಶೋಷಣೆಯಿಂದ ಸರ್ವಸಂಹಾರವು 2 ಮೇರುಪರ್ವತ ಸ್ಥಳದಲ್ಲಿ ಇದ್ದ ವಿ- ಧಿರುದ್ರಾದಿಗಳೆಲ್ಲರಲ್ಲಿ ಮಹ ತೋರುತ್ತ ಕುಣಿದಾಡುತ್ತಲಿ ||ಆಹಾ|| ಸುರರವಯವಗಳ ತಾನಲಂಕರಿಸಿದನ 3 ನರಹರಿ ನರ್ತನ ಮಾಡಿ ತನ್ನ ಕರದಿ ತ್ರಿಶೂಲವನ್ನು ನೀಡಿ ದಿ- ಕ್ಕರಿಗಳ ಪೋಣಿಸಿ ಆಡಿ ಸರ್ವರಉ- ದರದೋಳಿಟ್ಟು ಕೂಡಿ ||ಆಹಾ|| ಗ್ರಾಸ ತ್ವರಿತದಿ ತಾ ಮಾಡಿ ಕ್ರೀಡಿಸುತಿರ್ಪನ್ನ 4 ವಾಯುದೇವರ ಗದಾಪ್ರಹಾರದಿಂದ ಭಯ ಹುಂಕಾರದಿಂದ ಜೀವರ ಲಿಂಗ ಆಯತ ಸ್ಥಳದಲ್ಲಿಟ್ಟವರಾ ||ಆಹಾ|| ಲಯಕಾಲದಿ ಸಂಕರುಷಣ ಮುಖದಿಂದ ಲಯವಾಗಲು ಅಗ್ನಿ ಪೊರಟು ದಹಿಪುದಾ 5 ಕರಿಯ ಸೊಂಡಿಲಿನಂತೆ ಮಳೆಯ ಧಾರೆ ನಿರುತ ಶತವರ್ಷಗರೆಯೆ ನೋಡೆ ಸರ್ವತ್ರ ಜಲಮಯವಾಗೆ ಆಗ ನೀರಜಾಂಡವೆಲ್ಲ ಕರಗೆ ||ಆಹಾ|| ಗರುಡ ಶೇಷ ಮಾರ್ಗವರಿತು ಬರುತಿರ್ಪ ಸರ್ವಜೀವರ ತನ್ನ ಉದರದೊಳಿಟ್ಟನ್ನಾ 6 ಅರಿಯೋ ನೀ ಶೇಷಮಾರ್ಗವನ್ನೂ ಇಲ್ಲಿ ಸುರರು ಕುಬೇರನೊಳಿನ್ನು ಆತ ವರುಣನಲ್ಲಿ ಲಯವನ್ನೂ ಚಂದ್ರ ಹರಿಪಾರ್ಷಧರನಿರುದ್ಧನನ್ನು ಆಹಾ ಅನಿರುದ್ಧ ಸನತ್ಕುಮಾರನ್ನ ತಾವು ಪೊಂದಿ ಮಾರ ವಾರುಣಿಯು ಹರಿಮಡದಿಯರಲ್ಲಿ ಲಯವಾ 7 ಸುರರು ಮೊದಲು ಅಗ್ನಿಯೊಳ್ ಲಯವನ್ನೈದುವರು ಆ ಅಗ್ನಿ ತಾ ಸೂರ್ಯನ್ನ ಸೇರುವನು ಸೂರ್ಯ ತಾ ಗುರುವನ್ನ ಸೇರುವನು ||ಆಹಾ|| ಆಗಲೇ ಸರ್ವಮನುಜರು ಪಿತೃಗಳು ನಿರುಋತಿಯೊಳು ಪೊಕ್ಕು ತಾ ಯಮನಲ್ಲಿ ಸೇರುವಾ 8 ಯಮ ಪ್ರಿಯವ್ರತರಾಯರೆಲ್ಲ ಲಯ ತಮ್ಮ ಸ್ವಾಯಂಭು ಮನುವಿನಲ್ಲಿ ಮತ್ತೆ ಮ- ಹಿಮ ಭೃಗುವು ದಕ್ಷನಲ್ಲಿ ಲಯವು ಆ ಮಹಾದಕ್ಷ ಸ್ವಾಯಂಭು ಇಂದ್ರನಲ್ಲೀ-ಆಹಾ ಅಮರಪತಿಯು ತಾ ಸೌಪರಣಿಯನು ಪೊಂದಿ ಈ ಮಾರ್ಗದಿ ತಾನು ಗರುಡನ್ನ ಸೇರುವುದು 9 ಶೇಷಗರುಡರೊಡಗೂಡಿ ಆಗ ಸರಸ್ವತಿಯನ್ನೆ ಪೊಂದುವರು ಮತ್ತೆ ಆಸುವಿರಂಚಿ ವಾಯುಗಳು ತಾವು ಸರಸ್ವತಿಯನ್ನೆ ಪೊಂದುವರು ಆಹಾ ಈ ಸೂಕ್ಷ್ಮಲಯವನ್ನೆ ಕ್ರಮವರಿತು ನೀನೀಗ 10 ಸೂತ್ರನಾಮಕ ವಾಯುದೇವ ರುದ್ರ ಉಮೆಪ್ರದ್ಯುಮ್ನದ್ವಾರ ತ್ರಾತ ಸಂಕುರುಷಣನಾ ದಯದಿ ಜಗ- ನ್ಮಾತೆ ಲಕ್ಷ್ಮಿಯೊಳು ಸೇರುವರು ||ಆಹಾ|| ಚತುರಾಸ್ಯ ಜೀವರ ತನ್ನುದರದೊಳಿಟ್ಟು ಅತಿಮೋದದಿಂದ ವಿರಾಟನ್ನೈದುವುದು11 ವಿರಾಟ್ ಬ್ರಹ್ಮನು ತಾನೆಲ್ಲಾ ತನ್ನ ಆ ವರಣದಲ್ಲಿ ಇಪ್ಪಂಥ ತನ್ನ ಧರೆಯಲ್ಲಿ ಲೀನವಾಗುವ ಆಗ ಪರಿಪರಿಯಿಂದ ತನ್ಮಾತÀ್ರ ಆಹಾ ಅರಿತು ಶಬ್ದಸ್ಪರ್ಶರೂಪರಸಗಂಧ ಪರಿಪರಿಯಿಂದಲಿ ಲಯವನ್ನೈದುವುದಾ12 ಗಂಧದ್ವಾರ ಲಯತನ್ನ ಬಿಲದಿ ಜಾತ ವೇದದಲ್ಲಿ ರಸ ಲಯವು ರೂಪ ದ್ವಾರ ಲಯ ಆಕಾಶದೊಳು-ಆಹಾ- ಶಬ್ದದ್ವಾರ ಲಯತಮ ಅಹಂಕಾರಾದಿ ತದಾಂತರ್ಗತÀ ಭಗವದ್ರೂಪದಲ್ಲ್ಯೆಕ್ಯವಾ 13 ಅಹಂಕಾರತ್ರಯದಲಿ ಬಂದಾ ತತ್ತ ್ವ ದೇಹಸೂರರೆಲ್ಲರ ಲಯವು ಇಹ ತತ್ವಾಂತರ್ಗತ ಭಗವದ್ರೂಪಕೆ ||ಆಗ|| ಅಲ್ಲಲ್ಲಿ ತನ್ನೊಳೈಕ್ಯವೂ-ಆಹಾ ಅಹಂಕಾರತ್ರಯ ಮಹತ್ತತ್ವದಲ್ಲಿ ಲಯ ಮಹತ್ತತ್ತ ್ವವು ಮೂಲಪ್ರಕೃತಿಯಲ್ಲಿ ಲಯವು 14 ವಾಸುದೇವಾದಿ ಚತುರ ರೂಪ ಮತ್ಸ್ಯ ಶ್ರೀಶನನಂತಾದಿರೂಪ ಮತ್ತು ಶ್ರೀಶನಷ್ಟೋತ್ತರ ರೂಪ ||ಆಹಾ|| ತಾ ಸಕಲರೂಪಗಳು ಮೂಲರೂಪದೊಳೈಕ್ಯ ಶಾಶ್ವತನಾದ ಶ್ರೀ ಸಚ್ಚಿದಾನಂದನ್ನಾ 15 ಗುಣಮಾನಿ ಶ್ರೀ ಭೂ ದುರ್ಗಾ ಅಂ- ಭ್ರಣಿ ರೂಪವನ್ನೆ ತಾ ಧರಿಸೀ ಸಂ- ಪೂರ್ಣನ್ನ ಸಾಮೀಪ್ಯ ಸೇರಿ ಪೂರ್ಣ ಕಾಮನ್ನ ಎಡಬಿಡದೆ ನೋಡೀ ||ಆಹಾ|| ಕ್ಷಣ ಬಿಡದೊಡೆಯನ ಅಗಣಿತಗುಣಗಳ ಕಡೆಗಾಣದೆ ನೋಳ್ಪ ನಿತ್ಯಮುಕ್ತಳ ಸಹಿತಾ16 ಏಕೋ ನಾರಾಯಣ ಆಸೀತ ಅ- ನೇಕ ಜನರ ಸಲಹಲಿನ್ನು ತಾನೆ ಸಾಕಾರದಲಿ ನಿಂದಿಹನು ಇಂತು ವೇಂಕಟಾಚಲದಿ ಇನ್ನು ಮುನ್ನು ||ಆಹಾ|| ಏಕಮನಸಿನಿಂದ ಭಜಿಪ ಭಕ್ತರನ ತಾ ನಿ- ನಿತ್ಯ 17
--------------
ಉರಗಾದ್ರಿವಾಸವಿಠಲದಾಸರು
ನವವಿಧ ಭಕುತಿ ಶ್ರವಣದಿಂದಲಿ ಪಾಪಹರಣವಾಗುವುದೆಂದು ಕವಿಗಳೆಲ್ಲರು ಕೂಗಿ ಒದರುತಿಹರು ಕಿವಿಗಳಿಗಾನಂದದಾಭರಣದಂತಿಹುದು ಶ್ರೀ- ಹರಿಯ ದಿವ್ಯನಾಮಾಮೃತದರಸವು ಮಾಧವನ ಮೂರ್ತಿಯನು ನೋಡದಿಹ ಕಂಗಳು ನವಿಲು ಕಣ್ಣುಗಳೆಂದು ಪೇಳುತಿಹರು ಕಮಲನಾಭ ವಿಠ್ಠಲನ ಮಹಿಮೆ ಪೊಗಳೆ ಫಣಿರಾಜನಿಗೆ ವಶವಲ್ಲ ದೇವಾ 1 ಕೀರ್ತನವು ಮಾಡಲು ಪಾತಕವು ಪರಿಹರವು ಮಾತುಳಾಂತಕನ ಮಹಿಮೆ ಘನವು ಶ್ರೀಶನನು ಮನದಣಿಯ ಸ್ತೋತ್ರವನು ಮಾಡಲು ನಾಶಗೈವನು ದುರಿತರಾಶಿಗಳನು ಮಾಡಿದಪರಾಧಗಳ ಮಾಧವನು ಮನ್ನಿಸುವ ಶ್ರೀಧರನ ಸ್ತುತಿಸಿ ಕೊಂಡಾಡುತಿಹರ ಕರುಣಾಕರ ಕಮಲನಾಭವಿಠ್ಠಲ ದುರಿತದೂರನು ಕಾಯ್ವ ಶರಣಜನರ 2 ಸ್ಮರಣೆಯನು ಮಾಡುತಿಹ ಮನುಜರಿಗೆ ಇಹಪರದಿ ಪರಮ ಮಂಗಳನೀವ ಪರಮಾತ್ಮನು ದುರಿತ ದೂರನ ಪಾದಸ್ಮರಣೆ ಮಾಡುವರಿಗೆ ಪರಿಪರಿಯ ಸೌಖ್ಯಗಳ ಕೊಡುವ ದೇವ ಮಧುವೈರಿಯನು ಸ್ಮರಿಸೆ ಮುದದಿ ಸಂಪದವೀವ ಮೂರ್ತಿ ಶ್ರೀಮಾಧವ ಕನಕಗರ್ಭನ ಪಿತನು ಕರುಣಾನಿಧಿಯು ಕಮಲನಾಭ ವಿಠ್ಠಲ ಕಾಯ್ವ ಸುಜನರ3 ಶಿಲೆಯಾದ ಅಹಲ್ಯೆಯ ಪರಿಪಾಲಿಸಿದ ಪಾದ ಧರಣಿ ಈರಡಿಗೈದ ದಿವ್ಯಪಾದ ಫಣಿ ಹೆಡೆಯ ತುಳಿದ ಪಾದ ವರ ಋಷಿಗಳೆಲ್ಲ ವಂದಿಸುವ ಪಾದ ಇಂದಿರಾದೇವಿ ಬಹುಚಂದದಿಂದೊತ್ತುತ ಕಂದರ್ಪನಯ್ಯನಿಗೆ ಪಾದಸೇವ ಚಂದದಿಂದಲಿ ಮಾಡಿ ಮಾಧವನಿಗೆ ನಂದಗೋಪಿಯ ಕಂದ ಸಲಹುಎನಲು ಸುಂದರ ಶ್ರೀ ಕಮಲನಾಭ ವಿಠ್ಠಲನು ಒಲಿವ 4 ಅರ್ಚಿಸುತ ಮೆಚ್ಚಿಸುತ ಸಚ್ಚಿದಾನಂದನನು ಸ್ವಚ್ಛ ಭಕುತಿಲಿ ಸ್ತೋತ್ರ ಮಾಡುತಿಹರ ಅಷ್ಟ ಐಶ್ವರ್ಯಪ್ರದನು ನಿತ್ಯಮುಕ್ತಳ ಕೂಡಿ ಭಕ್ತರ ಹೃದಯದಲಿ ಪೊಳೆವ ದೇವ ಸತ್ಯ ಸಂಕಲ್ಪನಿಗೆ ಕಸ್ತೂರಿ ತಿಲಕವು ಮತ್ತೆ ಪಾವಡಿ ಥಳಥಳನೆ ಹೊಳೆಯೆ ಸುತ್ತ ಬ್ರಹ್ಮಾದಿಗಳ ಸ್ತುತಿಗೆ ದೇವ ಚಿತ್ತವಿಟ್ಟು ಕೇಳ್ವ ಮಾಧವನು ಮುದದಿ ಕರ್ತೃ ಕಮಲನಾಭ ವಿಠ್ಠಲನು ಕಾಯ್ವ 5 ವಂದನೆಯನು ಮಾಡೆ ಮುಕುಂದನು ಒಲಿವನು ಮುದದಿ ಕಂದರ್ಪನಯ್ಯ ಕಮಲಾಕ್ಷ ಹರಿಯೂ ಸುಂದರಾಂಗ ಶ್ರೀಹರಿಗೆ ಗಂಧ ಪೂಸಿದಳಾಗ ಇಂದೀವರಾಕ್ಷಿ ನಸುನಗುತ ಬೇಗ ಇಂದ್ರಾದಿ ಸುರರೆಲ್ಲ ಕೊಂಡಾಡೆ ಮಾಧವನ ವಂದಿಸುತ ಸಿರಬಾಗಿ ಚಂದದಿಂದ ಮಂದಾರ ಪಾರಿಜಾತಗಳ ತಂದು ತಂದೆ ಕಮಲನಾಭ ವಿಠ್ಠಲನ ಮುಡಿಗೆ ಸಂಭ್ರಮದಿ ಮಳೆಗರೆಯೆ ಚಂದದಿಂದ 6 ದಾಸ್ಯವನು ಕೈಕೊಂಬ ದಾಸ್ಯಜನರನು ಪೊರೆವ ಮೀಸಲಾಗಿಹನು ಹರಿದಾಸ ಜನಕೆ ಪೋಷಿಸೆಂದೆನುವವರ ದೋಷಗಳನೀಡಾಡಿ ದೋಷರಹಿತನು ಪೊರೆವ ಸರ್ವಜನರ ಪೂಸಿ ಪರಿಮಳ ದ್ರವ್ಯ ಶ್ರೀಸಹಿತ ಮೆರೆವ ವಾಸುಕೀಶಯನ ಸಜ್ಜನರ ಪೊರೆವ ಮುರಳೀಧರ ಮಾಧವನು ಕರುಣದಿಂದ ಶರಣ ಜನರನು ಪೊರೆವ ಮರೆಯದೀಗ ಕಮಲನಾಭವಿಠ್ಠಲನು ಕಾಯ್ವದೇವ 7 ಸಖ್ಯ ಸ್ನೇಹಗಳಿಂದ ಮುತ್ತಿನ್ಹಾರಗಳನು ಕೃಷ್ಣನ ಕೊರಳಿಗ್ಹಾಕುತಲಿಬೇಗ ಅರ್ಥಿಯಿಂದಲಿ ರತ್ನ ಮುತ್ತಿನ ಚಂಡುಗಳ ವಿಚಿತ್ರದಿಂದಾಡುತಿರೆ ನೋಡಿ ಸುರರು ಮುತ್ತಿನಕ್ಷತೆಗಳನು ಮಾಧವನ ಸಿರಿಮುಡಿಗೆ ಅರ್ಥಿಯಿಂದ ಸುರಿಸುತಿರೆ ಹರುಷದಿಂದ ಅಪ್ರಮೇಯನು ಶ್ರೀಶ ಶ್ರೀನಿವಾಸ ಸರ್ಪಶಯನನು ಕಮಲನಾಭ ವಿಠ್ಠಲ ನಿತ್ಯ ತೃಪ್ತನು ಪೊಳೆವ ಭಕ್ತರ ಹೃದಯದಲಿ 8 ನಿತ್ಯ ತೃಪ್ತಗೆ ಮಾಡಿ ಅರ್ಥಿಯಲಿ ಅಪ್ರಮೇಯನನು ಸ್ತುತಿಸಿ ಮುತ್ತು ಮಾಣಿಕ್ಯ ಬಿಗಿದ ತಟ್ಟೆಯಲಿ ತಾಂಬೂಲ ಅಚ್ಚುತಾನಂತನಿಗೆ ಅರ್ಪಿಸುತಲಿ ಭಕ್ತಿಯಲಿ ವಂದನೆಯ ಭಕ್ತವತ್ಸಲನಿಗೆ ನಿತ್ಯ ಮುಕ್ತಳು ಮಾಡಿ ಹರುಷದಿಂದ ಸತ್ಯ ಸಂಕಲ್ಪ ಶ್ರೀ ಮಾಧವನಿಗೆ ಮುತ್ತಿನಾರತಿ ಬೆಳಗಿ ಅರ್ಥಿಯಿಂದ ಕರ್ತೃ ಶ್ರೀ ಕಮಲನಾಭ ವಿಠ್ಠಲನ ಕೊಂಡಾಡಿ9
--------------
ನಿಡಗುರುಕಿ ಜೀವೂಬಾಯಿ
ನವವಿಧ ಭಕ್ತಿ ಶ್ರವಣ ಪಾವನವಾದ ಹರಿಕಥೆ ಪುರಾಣ ಮೊದ ಲಾದುದನು ಕೇಳುತ್ತಿ ಪರಮಾತ್ಮನನ್ನು ಹೃದಯ ಪೀಠದಲಿರಿಸಿ ಪೂಜಿಸುವ ಭಕ್ತನೇ ಶ್ರವಣ ಫಲ ಹೊಂದಿದವ ಶ್ರವಣಭಕ್ತಿಯಿದು 64 ದಾಸಕೂಟದ ಭಕ್ತರಿಂ ರಚಿತವಾದ ಸು ಶ್ರಾವ್ಯ ಹಾಡುಗಳನ್ನು ಪಾಡಿ ಕುಣಿಯುತ್ತ ದೇವರನು ನೆನೆನೆನೆದು ಧ್ಯಾನಿಸುವ ಭಕ್ತರೇ ಕೀರ್ತನದ ಭಕ್ತರೆಂದರಿ ಮನುಜ ನೀನು 65 ವ್ಯಾಸ ದಾಸರ ಕೂಟದಿಂದರಿತ ದೇವರನು ಮಾನಸದ ಮಂಟಪದಲ್ಲಿರಿಸಿ ಪೂಜಿಸುತ ಅದನೆ ಪೌನಃಪುನ್ಯದಿಂದ ಮೆಲುಕಾಡುವದು ಸ್ಮರಣಭಕ್ತಿಯಿದೆಂದು ತಿಳಿ ಮನುಜ ನೀನು 66 ಅವತಾರ ರೂಪಗಳ ಮೂರ್ತಿಗಳ ರಚಿಸುತಲಿ ನಿನ್ನ ಚಿತ್ತದ ದೇವರನ್ನಲ್ಲಿಯಿರಿಸಿ ಅವನ ಗುಣಗಳ ನೆನೆದು ಪಾದಸೇವೆಯ ಮಾಡೆ ಪಾದಸೇವನಭಕ್ತಿಯೆಂದು ತಿಳಿ ಮನುಜ 67 ಹೂ ತುಳಸಿ ಮೊದಲಾದ ವಸ್ತುಗಳ ಶೇಖರಿಸಿ ದೇವ ಮೂರ್ತಿಗಳನ್ನು ಇದಿರಲ್ಲಿಯಿರಿಸಿ ಷೋಡಶದ ಉಪಚಾರ ಪೂಜೆಗಳ ನಿತ್ಯದಲಿ ಮಾಡುವುದೆ ಅರ್ಚನದ ಭಕ್ತಿಯಿದು ತಿಳಿಯೈ 68 ಎದೆ ಶಿರಸು ಕಣ್ಣು ಮನ ಕೈಕಾಲು ಮೊಣಕಾಲು ವಾಗೆಂಬುದೆಂಟಂಗಗಳನು ಪಾದದೆಡೆಯೀಡಾಡಿ ನಮಿಸುವುದೇ ವಂದನವು ಸಾಷ್ಟಾಂಗನಮನವಿದು ತಿಳಿಯೈ 69 ದಾಸೋಹವೆಂಬುದನು ತಿಳಿದು ನೀನನವರತ ಫಲದ ಬಯಕೆಯ ತೊರೆದು ಸೇವೆಯನು ಮಾಡೆ ಸೇವಕನ ನಿನ್ನನ್ನು ತನ್ನ ಬಳಿಗೊಯ್ಯುವನು ಭವಬಂಧ ತೊರೆಯಿಸುತ ಪಾಲಿಸುವನವನು 70 ಸಚ್ಚಿದಾನಂದ ಸ್ವರೂಪದವ ಪರಮಾತ್ಮ ತನ್ನ ಗುಣಗಳನ್ನೆಲ್ಲ ಭಕ್ತರಿಗೆ ಕೊಡುವ ನೀರು ಹಾಲನು ನಂಬಿದಂತೆ ನಂಬುವನನ್ನು ಭಕ್ತರಕ್ಷಕನವನು ಮುಕ್ತಿದಾಯಕನು 71 ಕೃಷ್ಣನು ಪರಬ್ರಹ್ಮ ಕೃಷ್ಣನನು ವಂದಿಸುವೆ ಕೃಷ್ಣನಿಂದಲೆ ಸಕಲ ವಿಶ್ವಗಳ ಸೃಷ್ಟಿ ಸುಕೃತ ದುಷ್ಕøತವೆಲ್ಲ ಕೃಷ್ಣನಡಿಯಲಿ ಮುಡಿಯು ಕೃಷ್ಣನಲಿ ಮನವು 72 ಕಾಮಹತಕನು ರುದ್ರದೇವನಿಲ್ಲಿಯೆ ಇದ್ದು ಅಷ್ಟಯತಿಗಳ ಶುದ್ಧಮಾನಸರ ಮಾಡಿ ಬಾಲಯತಿಗಳ ಮೂಲಕವೆ ಪೂಜೆಯನು ಪಡೆದು ರಾರಾಜಿಸುವೆ ದೇವ ಕೃಷ್ಣರೂಪದಲಿ 73 ಭಾರ್ಗವೀಪತಿಯಾದ ಸಿರಿವರನು ಮಾಧವನು ಭಾರ್ಗವೀರೂಪವನು ಶುಕ್ರವಾರದಲಿ ತಾಳ್ದು ಭಕುತರ ಹೃದಯವನ್ನರಳಿಸುವೆ ನೀನು ಮೋಹಿನೀರೂಪವದು ಮೋಹಕವದಲ್ತೆ 74 ಬಲ್ಲಾಳ ವಂಶಜರು ಉಡುಪ ಕುಲದವರೆಂದು ಭಕುತ ಗುರುವಾದಿರಾಜರ ಹಸ್ತದಿಂದ ಮೂರು ಅವತಾರ ಚಿಹ್ನೆಯ ತಾಳ್ದ ಮಾರುತಿಯ ಆರಾಧ್ಯ ಭೂವರಾಹರ ಕೊಡಿಸಿ ಪೊರೆದೆ 75 ದುಷ್ಟ ಜನಮರ್ದನ ಜನಾರ್ದನನು ನೀನಿರುವೆ ನಿನ್ನ ರೂಪವೆ ಪಕ್ಷನಾಥ ಸೇವಿತವು ಚಕ್ರ ಶಂಖಾಸಿ ಪಾನದ ಪಾತ್ರೆಗಳ ಧರಿಸಿ ದುಷ್ಟ ಶಿಕ್ಷಣಕಾಗಿ ಕಾಳಿ ಸೇವಿಪಳು 76 ಜಮದಗ್ನಿಪುತ್ರನಾಗವತರಿಸಿ ನೀನೊಮ್ಮೆ ಕೊಡಲಿಯಿಂ ಕಡಿಕಡಿದು ದುಷ್ಟರಾಜರನು ನಕ್ಷತ್ರ ಮಂಡಲವ ಭೂ ಮಂಡಲವ ಮಾಡಿ ಪರಶುರಾಮನು ಎಂಬ ಪೆಸರನ್ನು ಪಡೆದೆ 77 ಪರಶುರಾಮನು ರಾಮ ಪರಶುರಾಮನು ಕೃಷ್ಣ ಒಬ್ಬನೇ ಹಲವಾರು ರೂಪಗಳ ತಾಳಿ ಸಾಸಿರದ ನಾಮದಿಂ ಸ್ತುತಿಸಿಕೊಳ್ಳುವೆ ಹರಿಯೆ ನಿನ್ನ ಮಾಯಾರೂಪ ತಿಳಿದವರು ಯಾರು? 78 ಮೇಘದೆಡೆಯಿರುವ ಮಿಂಚಿನ ಹಾಗೆ ನೀನೆಂದು ತಿಳಿಸಲ್ಕೆ ನೀನು ಮೇಘದ ವರ್ಣದವನು ನೀಲತೋಯದ ಮಧ್ಯದಲ್ಲಿರುವ ವಿದ್ಯುತ್ತಿನಂತಿರುವಿ ಯೆಂದು ಶ್ರುತಿ ಹೇಳುವುದು ತಿಳಿಯೈ79 ಪುರುಷೋತ್ತಮನೆ ನಿನ್ನ ಪುರವೆಯೆನ್ನಯ ದೇಹ ಉತ್ತಮನು ನೀನಿರುವೆ ಅಧಮ ನಾನಿರುವೆ ಅಜ್ಞಾನದಾಚ್ಛಾದಿಕೆಯನೆನಗೆ ಹಾಕುತಲಿ ಬಿಂಬರೂಪದಲಿದ್ದು ಬೆಳಗಿಸುವೆ ನನ್ನ 80 ಶ್ರವಣಮನನಾದಿ ಸಾಧನದ ಬಲದಿಂದ ನಾ ನನ್ನ ಮುಸುಕನು ತೆಗೆದರೂ ನೀನು ಎನ್ನ ಬಳಿಯಲ್ಲಿದ್ದು ಕಾಣದಿಹೆ ಪರಮಾತ್ಮ ನಿನ್ನ ಪರಮಾಚ್ಛಾದಿಕೆಯ ತೆಗೆದು ತೋರು 81 ಗೋವರ್ಧನೋದ್ಧಾರಿ ಸಿರಿವರನೆ ನೀನೊಮ್ಮೆ ನಾಭಿರಾಜನ ಪುತ್ರನಾಗಿಯವತರಿಸಿ ಅಜನಾಭವೆಂಬ ಮೋಡವನು ಸೃಷ್ಟಿಸಿ ನೀನು ಲೋಕದ ಕ್ಷಾಮವನು ಹೋಗಲಾಡಿಸಿದೆ 82 ನೀನೊಮ್ಮೆ ದಕ್ಷಿಣದ ಕರ್ಣಾಟಕಕೆ ಬಂದು ಅಜಗರದ ವೃತ್ತಿಯಲಿ ದೇಹವನು ತೊರೆದು ನಿರ್ವಾಣ ಬೌದ್ಧಮತ ಜೈನಾದಿ ಮತಗಳಿಗೆ ಮೂಲಪುರುಷನದಾಗಿ ಮೆರೆದೆ ಪರಮಾತ್ಮ 83 ಸತ್ವ ರಜ ತಮವೆಂಬ ಮೂರು ಗುಣ ಪ್ರಕೃತಿಯದು ಪ್ರಾಕೃತದ ದೇಹವನು ಹೊಂದಿದಾ ಜನರು ಹುಟ್ಟುಗುಣ ಮೂರರಿಂ ಕರ್ಮವನು ಮಾಡುತ್ತ ಸುಖ ದುಃಖವನು ಹೊಂದಿ ಜೀವಿಸುವರವರು 84 ಸತ್ಯಾತ್ಮಕನು ನೀನು ಚ್ಯುತಿಯಿಲ್ಲ ಸತ್ಯಕ್ಕೆ ಅಚ್ಯುತನ ನಾಮದಿಂ ಪಾಪ ಪರಿಹರಿಪೆ ಅಂತವಿಲ್ಲದುದಾತ್ಮ ಆತ್ಮರಕ್ಷಕನಾಗಿ ನಾಮದಲನಂತನೆನಿಸಿರುವೆ ಶ್ರೀಹರಿಯೇ 85 ವೇದರಕ್ಷಕನಾಗಿ ಗೋವುಗಳ ರಕ್ಷಿಸುತ ಗೋವಿಂದನಾಮವನು ಧರಿಸುತಲಿ ನೀನು ನಾಮತ್ರಯಗಳಿವನು ಕರ್ಮಾಂತದಲಿ ಪಠಿಸೆ ಕರ್ಮದೋಷದ ಪಾಪ ಪರಿಹಾರವಹುದು 86 ಸಚ್ಚಿದಾನಂದಸ್ವರೂಪ ಹರಿ ನೀನಿರುವೆ ನಿನ್ನ ರೂಪಗಳೆಲ್ಲ ಪೂರ್ಣವಾಗಿಹವು ಜ್ಞಾನವಾನೆಂದವನು ಹೆರವರ್ಗೆ ತಿಳಿಸುತಿರೆ ನಮ್ಮಲ್ಲಿ ಹೆಚ್ಚುವವು ಅದರಿಂದ ಪೂರ್ಣ 87 ಹರದಾರಿ ಸಾವಿರಾರಿದ್ದರೂ ನಾದವನು ಚಣದೊಳಗೆಯಾಕಾಶವಾಣಿ ಕೇಳಿಸುವದು ಕಾಣದಿಹ ವಿದ್ಯುತ್ತುರೂಪವನು ತಾಳಿದವ ದೇವನಲ್ಲದೆ ಬೇರೆ ಯಾರ ಮಾಯೆಯಿದು 88
--------------
ನಿಡಂಬೂರು ರಾಮದಾಸ
ನಾ ಪೊಗಳೆಲು ನಿನ್ನಾಗಾನಾ ಪರಿಪೂರ್ಣಾ ಸತ್ಯಜ್ಞಾನಾ ಗುರುಮೂರ್ತಿ ಎನಗೆ ದಾನಾ ನೀಡಿದೆ ನೀ ದಿವ್ಯಜ್ಞಾನಾ ಅವಿಚಾರದಿಂದ ತೊಳಲಿ ಭವಭಾಧೆಯಿಂದ ಬಳಲಿ ಕಿವಿಗೊಡದೆ ನಿನ್ನನುಡಿಗೆ ಭುವನದಲಿ ದುಃಖಿಯಾದೆ ಶಿವ ನೀನೆ ಎಂದು ಪೇಳಿ ಸವನಿಸಿದೆ ಮೋಕ್ಷಪದವಾ ಏನೆಂದು ಪಾಡಲಯ್ಯಾ ನಾನೆಂಬ ಭಾವವಡÀಗಿ ನೀ ನಾನೆ ಎಂಬ ತಿಳಿವು ಘನವಾಗಿನೆಲಿಸಿತೀಗ ಏನೊಂದು ತೋರದಯ್ಯಾ ನಾನಾತ್ವವೆಂಬ ಭಾವ ಈ ಸೋಹವೆಂಬ ಪದವ ಲೇಸಾಗಿ ಬೋಧಿಸಿದ ನೀ ಆಶಾನಿವಾಸೆ ನೀಗಿ ನಾ ಶಾಂತನಾದೆ ಮನದಿ ನೀ ಸಚ್ಚಿದಾತ್ಮಗುರುವೇ ಶಂಕರನೆ ಕಲ್ಪತರುವೆ
--------------
ಶಂಕರಭಟ್ಟ ಅಗ್ನಿಹೋತ್ರಿ
ನಾರಾಯಣಾ ಹರಿನಾರಾಯಣಾ ಕೃಷ್ಣಾ ನಾರಾಯಣಾ ಸ್ವಾಮಿ ನಾರಾಯಣಾ 1 ಅಚ್ಯುತಾನಂತ ಗೋವಿಂದ ಪರಬ್ರಹ್ಮ ಸಚ್ಚಿದಾನಂದ ಶ್ರೀ ನಾರಾಯಣಾ 2 ಭಕ್ತವತ್ಸಲ ದೇವಾ ಪಂಡವಾಪಕ್ಷಕಾ ಮುಕ್ತಿ ದಾಯಕ ಶ್ರೀ ನಾರಾಯಣಾ 3 ನಂದನಂದನ ಆನಂದ ಶಂಕರ ಪ್ರೀಯಾ ವಂದಿತಾ ಮುನಿಜನರ ನಾರಾಯಣ 4 ಇಂದಿರಾರಮಣ ಮುಕುಂದ ಮುರಹರಿ ಮಂದರಧರ ಹರಿನಾರಾಯಣ 5 ದ್ರೌಪದಿ ರಕ್ಷಕಾ ದಾನವಾ ಶಿಕ್ಷಕಾ ಕವಿಜನ ಪೋಷಕ ನಾರಾಯಣಾ 6 ರಾವಣ ಮರ್ದನಾ ಆಜೀವಲೋಚನಾ ಯದುಕುಲಾಬ್ದಿ ಚಂದ್ರ ನಾರಾಯಣಾ 7 ಅಕ್ರೂರವರದಾ ನಿಜಾನಂದ ಮೂರುತಿ ಚಕ್ರಧರ ಹರಿ ನಾರಾಯಣಾ 8 ಭವ ನಾಯಕ ವಿಷ್ಣು ನಾರಾಯಣಾ 9 ಗಂಗಜನಕ ದೇವೋತ್ತುಂಗ ಮಹಾನುಭಾವ ಶೃಂಗಾರ ಮೂರುತಿ ನಾರಾಯಣಾ 10 ಅಂಬುಜಾದಳ ನೇತ್ರಾ ಅಜಮಿಳಾರಕ್ಷಕ ಪತಿ ನಾರಾಯಣ 11 ಪಕ್ಷಿವಾಹನ ಜಗದೃಕ್ಷಾ ಸುಲಕ್ಷಣಾ ಲಕ್ಷ್ಮೀರಮಣ ಶ್ರೀ ನಾರಾಯಣಾ 12 ಕಮಲಸಂಭವಪಿತಾ ಕರುಣಪಯೋನಿಧಿ ಅಮಿತ ಪರಾಕ್ರಮ ನಾರಾಯಣಾ 13 ಮೂರ್ತಿ ಪೂಜಿತ ಸರ್ವತ್ರಾ ಪೂತನ ಸಂಹಾರ ನಾರಾಯಣಾ 14 ದಿನಕರಾ ಕುಲದೀಪಾ ದೀನ ದಯಾಪರ ಅನಿಮಿತ್ತ ಬಂಧು ದೇವಾ ನಾರಾಯಣಾ 15 ಕಾಲಿಯಾ ಮರ್ದನಾ ಗಂಗಾಧರಾರ್ಚಿತ ಕಲ್ಮಷರಹಿತ ಶ್ರೀನಾರಾಯಣಾ 16 ಪಾಲಿತಾ ಸುರಮುನಿ ಪಾಪವಿನಾಶನಾ ವಾಲಿ ಸಂಹಾರಕಾ ನಾರಾಯಣ 17 ದಶರಥನಂದನ ಧರಣಿರಕ್ಷಕಾ ಲವ ಕುಶಪಿತಾ ಶ್ರೀಹರಿನಾರಾಯಣಾ 18 ವೇದಗೋಚರ ನಿಗಮಾಗಮ ವೇದ್ಯ ಸು- ನಾದ ವಿನೋದ ಶ್ರೀನಾರಾಯಣ 19 ಕೋಟಿದರ್ಪಕ ರೂಪಲಾವಣ್ಯ ಭಕ್ತ ಸಂಕಟ ಪರಿಹಾರ ನಾರಾಯಣಾ 20 ವಾರಿಧಿ ಬಂಧನಾ ವನಚರ ಪಾಲನಾ ವೈಕುಂಠ ಶ್ರೀನಾರಾಯಣಾ 21 ಗಜರಾಜ ವರದಾ ಕಾಮಿತಫಲದಾಯಕಾ ಅಜಭವ ಪೂಜಿತಾ ನಾರಾಯಣಾ 22 ಸಾಧುಜನ ಪ್ರಿಯಾ ಸಾಮಗಾನವೇಣು ನಾದ ಲೋಲ ಕೃಷ್ಣ ನಾರಾಯಣಾ 23 ಯಾದವ ಕುಲದೀಪಾ ಯಶೋದಾನಂದನಾ ಯಜ್ಞರಕ್ಷಕಾ ಹರಿನಾರಾಯಣಾ 24 ಕೇಶವಾ ಮಾಧವಾ ಕೃಷ್ಣ ದಾಮೋದರಾ ವಾಸುದೇವ ಹರಿನಾರಾಯಣ 25 ಸುಂದರ ವಿಗ್ರಹಾಸುಗುಣ ವಿಲಾಸ ಆನಂದ ನಿಲಯಾ ಹರಿನಾರಾಯಣಾ 26 ವ್ಯಾಸಾಂಬರೀಷ ವಾಲ್ಮೀಕ ನಾರದಾ ಪಾರಾಶರ ವಂದಿತ ನಾರಾಯಣ 27 ದೋಷದೂರಾ ನಿರ್ದೋಷಾ ಪರಮಪುರಷ ಪೋಷಿತ ಜಗತ್ರಯ ನಾರಾಯಣಾ 28 ಮಕರಕುಂಡಲಧರಾ ಮಹಿಮಾ ಚರಾಚರಾ ಸಕಲಂತರ್ಯಾಮಿ ನಾರಾಯಣ 29 ಲೋಕನಾಯಕಾ ವಿಲಾಸ ಮೂರುತಿ ತ್ರೀಲೋಕ ವಂದ್ಯ ಹರಿನಾರಾಯಣಾ 30 ವಿಶ್ವವ್ಯಾಪಕಾ ಘನ ವಿಶ್ವರೂಪಾ ಮಹಾ ವಿಶ್ವೇಶ್ವರಾ ಹರಿನಾರಾಯಣಾ 31 ಅಖಿಲಾಂಡ ಕೋಟಿ ಬ್ರಹ್ಮಾಂಡ ನಾಯಕ ದೇವ ಸಕಲ ಕರ್ತ ನೀನೆ ನಾರಾಯಣಾ 32 ಆಪನ್ನ `ಹೆನ್ನೆ ವಿಠ್ಠಲ ' ನಾರಾಯಣಾ 33
--------------
ಹೆನ್ನೆರಂಗದಾಸರು
ನಿಜ ಭಕ್ತಿ ತೋರಿದನು ಜಗಕೆ ಕೃಷ್ಣ್ಣಾ ವಿಜಯನಾ ಸತಿಯರಿಬ್ಬರ ನೆವದಿ ಮುದದೀ ಪ. ಹಸ್ತಿವರದನು ತಂಗಿಯರ ನೋಡಬೇಕೆಂದು ಹಸ್ತಿನಾಪುರಕೆ ಬಂದ್ಹರುಷದಿಂದ ಚಿತ್ತ ನಿರ್ಮಲದಿ ಪಾಂಡವರು ಪೂಜೆಸೆ ನಲಿದು ಭಕ್ತಿ ಭಾವಕೆ ಮೆಚ್ಚಿ ದ್ರೌಪತಿಗೆ ವಲಿದೂ 1 ಅಣ್ಣನೆಂಬುವ ಭಾವದಲಿ ಸುಭದ್ರೆಯು ಇರಲು ಘನ್ನ ಮಹಿಮನು ಎಂದು ದ್ರೌಪತಿಯು ತಿಳಿದೂ ಸ್ವರ್ಣಗರ್ಭನ ಪಿತನು ಈರೇಳು ಜಗದೊಡೆಯ ಎನ್ನ ಭಾಗದ ದೈವ ಸಲಹೆಂದು ನುತಿಸೇ 2 ಅಂತರಂಗದ ಭಕ್ತಿ ಆನಂದಮಯ ತಿಳಿದು ಕಂತುಪಿತ ಕರಗಿದಾ ಮಮತೆ ಪ್ರೇಮದಲಿ ಶಾಂತಚಿತ್ತಳೆ ತಂಗಿ ದ್ರೌಪತಿಯೆ ಬಾರೆನುತ ಇಂತು ನುಡಿನುಡಿಗೆ ಆಡಲು ಕರುಣೆಯಿಂದ 3 ಕೇಳಿ ಇದನು ಸುಭದ್ರೆ ತಾಳಲಾರದೆ ಅಜ್ಞ ಬಾಲೆ ನಿಜ ತಂಗಿ ನಾನಿರಲು ಐವರಿಗೆ ಲೋಲೆಯಾದವಳೆ ಬಲು ಮೇಲಾದವಳೆ ಎಂದು ಬಾಲಚಂದ್ರನ ಪೋಲ್ವ ಮುಖ ಬಾಡಿಸಿರಿಲೂ 4 ಕಂಡು ಕಮಲಾಕಾಂತ ವಡಹುಟ್ಟಿದಳ ಬೆಂಡಾದ ತೆರವ ಪೇಳೆನಲು ಖತಿಯಿಂದಾ ಪುಂಡರೀಕಾಕ್ಷ ಎನ್ನುಳಿದು ನಿಜ ಭಾವದಲಿ ಕಂಡವರ ಸುತೆ ನಿನಗೆ ಮಿಗಿಲಾದಳೆನಲೂ 5 ಸಚ್ಚಿದಾನಂದ ವಿಗ್ರಹ ನಗುತ ನೆನೆದನೊಂ ದಚ್ಚರಿಯ ಕೌತುಕವ ತೋರ್ವೆನೆಂದೂ ಅಚ್ಛಿದ್ರ ಅಕ್ಲೇಶ ಆನಂದಮಯ ತಾನು ಕ್ಲೇಶ ಪಡುತ ವರಲಿದನೂ 6 ಬಾರಮ್ಮಾ ತಂಗಿ ಸುಭದ್ರೆ ಬೆರಳಲಿ ರಕ್ತ ಸೋರುತಿದೆ ಬೇಗೊಂದು ಚಿಂದಿ ತಾರೆ ತಾರೆನಲು ಗಡಬಡಿಸಿ ಮನೆಯಲ್ಲ ಹುಡುಕತಲಿ ಬಟ್ಟೆ ಕಂಗೆಡುತಾ 7 ಎತ್ತ ನೋಡಿದರತ್ತ ಪಟ್ಟೆ ಪೀತಾಂಬರವು ಕಂಚುಕ ಮಕುಟ ಮೆರೆಯೇ ಚಿತ್ರದಾ ವಸನ ಅರಮನೆಯಲ್ಲಿ ತುಂಬಿರಲು ಮತ್ತದರ ಮಮತೆ ಅಣ್ಣನಿಗೆ ಅಧಿಕವಾಗೆ 8 ಬರಲಿಲ್ಲ ಸುಭದ್ರೆ ಬಾರಮ್ಮ ದೌಪದಿಯೆ ವರ ತಂಗಿ ಬೇಗ ಕೊಡೆ ಹರಕು ಬಟ್ಟೆ ಸುರಿಯುತಿದೆ ರಕ್ತ ಬೆರಳಿಂದ ನೋಡೆಂದನಲು ಕಿರುನಗೆಯ ನಗುತ ಶರಗ್ಹರಿದು ಕಟ್ಟಿದಳೂ 9 ಬಂದಳಾ ವೇಳೆಯಲಿ ಸುಂದರಾಂಗಿ ಸುಭದ್ರೆ ನಿಂದು ನೋಡಿದಳೂ ದ್ರೌಪತಿಯ ಕೃತಿಯಾ ಮಂದಗಮನೆಯು ನಾಚಿ ಮೊಗವ ತಗ್ಗಿಸಿ ನಿಲಲು ಇಂದಿರೇಶನು ಇದರ ವಿವರ ತೋರಿದನು 10 ಬೆರಗಾದ ಪರಿತೋರಿ ಸಿರಿಕೃಷ್ಣ ಕೇಳಿದನು ಜರತಾರಿ ಸೆರಗ್ಹರಿದು ಕಿರುನಗೆಯ ನಕ್ಕಾ ಪರಿ ಏನೆ ಎಲೆ ತಂಗಿ ನರಳುವೋ ಎನ ನೋಡಿ ಪರಿಹಾಸ್ಯವಾಯಿತೆ ನಿನಗೆ ಎಂತೆಂದಾ 11 ಅಣ್ಣಯ್ಯ ನಿನಗೆ ಮಿಗಿಲಾಯಿತೇ ಈ ಶೆರಗು ಎನ್ನ ಅಭಿಮಾನ ಕಾಯುವ ದೈವ ನೀನೂ ಘನ್ನ ಮಹಿಮಾಂಗ ನಿನಗಿನ್ನು ಕ್ಲೇಶಗಳುಂಟೆ ನಿನ್ನ ಲೀಲೆಗೆ ಹರುಷ ಉಕ್ಕಿತೆಂದನಲೂ 12 ಹೇ ನಾರಿ ನಾನನಾಥರಿಗೆ ನಾಥನು ಮುಂದೆ ನೀನಿತ್ತ ವಸನ ಅಕ್ಷಯವಾಗಲೆಂದು ಶ್ರೀನಾಥ ದ್ರೌಪದಿ ಸುಭದ್ರೆಯ ಮನ್ನಿಸಿ ಮೆರೆದಜ್ಞಾನಿ ಜನಪ್ರಿಯನು ಗೋಪಾಲಕೃಷ್ಣವಿಠಲಾ13
--------------
ಅಂಬಾಬಾಯಿ