ಒಟ್ಟು 120 ಕಡೆಗಳಲ್ಲಿ , 24 ದಾಸರು , 110 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ತಾನೆ ಬ್ರಹ್ಮಪುಟ್ಟಿರೆ ಮಾನವರೆದೆಂಬರಯ್ಯತಾನೆ ತನ್ನ ತಿಳಿದು ನೋಡೆ ತಾನೆ ಚಿದಾನಂದ ವಸ್ತು ತಾನೆ ಬ್ರಹ್ಮ ಪುಟ್ಟಿರೆ ಪ ತಂದೆ ತಾಯಿಯೆಂಬುವರು ಒಂದನ್ನೂ ಮಾಡಲಿಲ್ಲಇಂದು ಕಿವಿ ಮೂಗು ತಾಳಿ ಬಂದಿದೆ ಸಾಕ್ಷಾತ್ ವಸ್ತುತಾನೆ ಬ್ರಹ್ಮಯಿರುತಲಿದೆ 1 ಭಾವ ಕಲ್ಪಿತವಲ್ಲದ ದೇವನೆ ತಾನಾಗಿರೆದೇವತೆಯೆಂಬುದ ಮರೆತು ಕಲ್ಲದೇವರ ಪೂಜಿಪರಯ್ಯಾತಾನೆ ಬ್ರಹ್ಮ ಇರುತಲಿರೆ 2 ಕಾರಣಪುರುಷನಾಗಿ ದೇಹವನ್ನೇ ಧರಿಸಿರೆಕಾರಣಪುರುಷನ ಬಿಟ್ಟು ಬೇರೆ ಧ್ಯಾನಿಸುವರಯ್ಯಾತಾನೆ ಬ್ರಹ್ಮ ಪುಟ್ಟಿರೆ3 ವೇದಶಾಸ್ತ್ರಪುರಾಣದ ಓದೆಲ್ಲ ತಾನೆ ಇರೆಓದನ್ನು ತಿಳಿಯದ ತಾವು ಓದಿಓದಿ ಸಾವರಯ್ಯೋ ತಾನೇ ಬ್ರಹ್ಮ ಪುಟ್ಟಿರೆ 4 ಇಂದು ಹರವಾಸರೆಂದು ಬಂಧ ಹೆಸರ ಮಾಡುತಬಂಧ ಹರ ಚಿದಾನಂದಗೆ ಒಂದು ಕುತ್ತ ಎಣಿಸರಯ್ಯೋ ತಾನೆ ಬ್ರಹ್ಮ ಪುಟ್ಟಿರೆ 5
--------------
ಚಿದಾನಂದ ಅವಧೂತರು
ತ್ರಾಹಿ ತ್ರಾಹಿ ತ್ರಾಹಿ ತ್ರಾಹಿ ಗುರುನಾಥ ತ್ರಾಹಿ ತಾರಕಬ್ರಹ್ಮ ಸಾಯೋಜ್ಯತ ತ್ರಾಹಿ ಅನಾಥ ಬಂಧು ಸಾಕ್ಷಾತ ತ್ರಾಹಿ ದೀನಾನಾಥ ತ್ರಾಹಿ ತ್ರಾಹಿ 1 ಮಾಡಲರಿಯೆ ನಾನಿಮ್ಮ ನಿಜಸ್ತುತಿ ಹಿಡಿಯಲರಿಯೆ ದೃಢ ಸದ್ಭಕ್ತಿ ಪೊಡವಿಯೊಳು ನಾ ಮೂಢಮಂದಮತಿ ಕೂಡಿಕೊಂಬೊ ದಯಮಾಡೋ ಶ್ರೀಪತಿ 2 ಮೊದಲಿಗಾಡುವ ಬಾಲಕವೃತ್ತಿ ತೊದಲುನುಡಿ ತಾಯಿಗತಿ ಪ್ರೀತಿ ಇದೆ ಪರಿಯಲೊಪ್ಪಿಸಿಕೊಂಬ ಸ್ತುತಿ ಮೇದಿನಿಯೊಳು ನಿಮ್ಮ ಖ್ಯಾತಿ 3 ಆಡಿಸಿದಂತೆ ಆಡುವೆ ನಾ ನುಡಿ ನಡೆಸಿಕೊಂಬುದು ಸನ್ಮತ ಮಾಡಿ ಕೊಡುವಂತೆ ಮಾನ್ಯ ಸಂತರೊಡಗುಡಿ ಮಾಡೊ ದಯ ನಿಮ್ಮಭಯನೀಡಿ 4 ತ್ರಾಹಿ ತ್ರಾಹಿಯೆಂಬೆ ತನು ಮನರ್ಪಿಸಿ ತ್ರಾಹಿಯೆಂಬೆ ಶಿರಸಾಷ್ಟಾಂಗ ನಮಿಸಿ ಕಾಯೊ ಮಹಿಪತಿಯ ಕರುಣಿಸಿ 5
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ದತ್ತವಧೂತ ಶ್ರೀ ಗುರು ಸಾಕ್ಷಾತ ನಿತ್ಯವಾಗಿಹ್ಯ ನಿಜ ನಿರ್ಗುಣನೀತ ಪ ನಿರ್ಗುಣ ನಿಶ್ಚಲ ಗಗನಾಕಾರ ಸುಗುಣದಲಿ ತಾನೆ ಸಹಕಾರ 1 ಸಹಕಾರನಹುದು ಸದ್ಗುರುನಾಥ ಬಾಹ್ಯಾಂತ್ರದಲಿ ತಾನೆ ಪ್ರಖ್ಯಾತ 2 ಪ್ರಖ್ಯಾತನಹುದು ತ್ರಿಗುಣರಹಿತ ಮುಖ್ಯಮುನಿಗಳಿಗೆ ಮೋಕ್ಷ ಸುದಾತ 3 ದಾತನಹುದು ತ್ರೈಲೋಕ್ಯದೊಳೀತ ಈತನೆ ವಿಶ್ವದೊಳಗೆ ದೈವತ 4 ದೈವತನಹುದು ದೇವಾದಿಗಳಾತ್ಮ ಮೂರ್ತಿ ಶ್ರೀಹರಿ ಸರ್ವಾತ್ಮ 5 ಹರಿ ಸರ್ವಾತ್ಮನಾಗಿಹ ನಿಜಪೂರ್ಣ ಪರಿಪರಿ ಆಗುವ ಅಗಣಿತಗುಣ 6 ಅಗಣಿತಗುಣ ಅಗಾಧ ಅಪಾರ ನಿಗಮಗೋಚರ ನಿರುಮಪ ನಿರ್ಧಾರ 7 ನಿರ್ಧಾರನು ನಿಜನಿಷ್ಟರಪ್ರಾಣ ಸಾಧಕರಿಗೆ ಸದ್ಗತಿ ಸಾಧನ 8 ಸಾಧನದೊಡೆಯನಹುದು ಶಾಶ್ವತ ಆದಿದೇವ ಸಕಲಾಗಮ ಪೂಜಿತ 9 ಪೂಜಿತ ಬ್ರಹ್ಮಾದಿಗಳ ಕೈಯ ಮೂಜಗದೊಳು ರಾಜಿಸುತಿಹ 10 ರಾಜಿಸುತಿಹ ತಾ ರಾಜರಾಜೇಂದ್ರ ಸುಜನರ ದೃಷ್ಟಿಯೊಳಿಡದಿಹ ಸಾಂದ್ರ 11 ಸಾಂದ್ರವಾಗಿಹನು ಸಾರ್ವಭೌಮ ಇಂದ್ರಾಧಿಕÀರೊಂದಿತ ಮಹಿಮ 12 ಮಹಿಮನಹುದು ಮುನಿಜನ ಮಂದಾರ ಧ್ಯಾಯಿಸುವರ ನಿಜ ಸಾಕ್ಷಾತಾರ 13 ಸಾಕ್ಷಾತಾರ ಶ್ರೀಗುರು ಜಗದೀಶ ಮೋಕ್ಷಾಧಿಕರಿಗಳಾತ್ಮ ಉಲ್ಹಾಸ 14 ಉಲ್ಹಾಸವೆ ನಿಜ ವಸ್ತುವೆ ತಾನು ಕಲ್ಪದ್ರುಮ ನಿಜ ಕಾಮಧೇನು 15 ಕಾಮಧೇನುವಾಗಿ ರಕ್ಷಿಸುವ ಬ್ರಹ್ಮನಿಷ್ಠರ ಹೃದಯದಲಿ ಭಾಸಿಸುವ 16 ಭಾಸುವ ಭಾಸ್ಕರಕೋಟಿ ಪ್ರಕಾಶ ಋಷಿ ಮುನಿಗಳ ನಿಜಮಾನಸ ಹಂಸ 17 ಹಂಸನಾಗಿ ವಿಶ್ವಂಭರಿತ ಸೂಸುವ ಸರ್ವಾಂತ್ರಲಿ ಅನಂತ 18 ಅನಂತ ಕೋಟಿ ಬ್ರಹ್ಮಾಂಡನಾಯಕ ಅನುಭವಿಗಳಿಗೆ ದೋರುವ ಕೌತುಕ 19 ಕೌತುಕದೋರಿದ ಕರುಣದಲ್ಯನಗೆ ಜೀವಪಾವನಗೈಸಿದ ಜಗದೊಳಗೆ 20 ಜಗದೊಳು ಸ್ತುತಿಸುವೆನು ಅನುದಿನ ಶ್ರೀಗುರು ದತ್ತವಧೂತ ಪೂರ್ಣ 21 ಪೂರ್ಣ ಸ್ಮರಿಸುವೆನು ಮನದೊಳು ನೋಡಿ ಪುಣ್ಯ ಪ್ರಭೆಯ ನಿಜ‌ಘನ ಒಡಗೂಡಿ22 ಒಡಗೂಡಿದ ನಿಜಾನಂದದ ಗತಿಯು ಕ್ಷಿತಿಯೊಳು ಕೊಂಡಾಡಿದ ಮಹಿಪತಿಯು 23
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ದತ್ತಾತ್ರೇಯನ್ನಮೋ ದತ್ತಾತ್ರೇಯಾ ಅತ್ರಿ ವರದಾಯಕನೇ ದತ್ತಾತ್ರೇಯಾ ಪ ಭಕುತಿ ಮಾಡಲು ಮೆಚ್ಚಿ ಅನಸೂಯಾ ಕರದೊಳಗ ಸುಕುಮಾರ ವೇಷದವತಾರ ತಾಳಿ ಪಥ ದೋರಲಿಕೆ ಅಕಳಂಕ ಯೋಗ ರೂಪವ ಭರಿಸಿದೆ 1 ಉದಯದೊಳು ವಾರ್ಣಾಸಿಸುರನದಿಯಲಿ ಸ್ನಾನ ವದಗಿ ಕೊಲ್ಹಾಪುರಕ ಮಧ್ಯಾಹ್ನದೀ ವಿದಿತ ಭಿಕ್ಷವನುಂಡು ಪೋಗಿ ಸಂಜೆಗೆ ಮಾಹು ನಿತ್ಯ ವಿಧಿಯಲಿ ಚರಿಸುವೇ2 ದತ್ತಹರಿ ಸಾಕ್ಷಾತ ಉನ್ಮದೋನಂದದಾಯಕ ದತ್ತವರ ಮುನಿ ದಿಗಂಬರ ಬಾಲಕಾ ನಿತ್ಯ ಪ್ರಕಾಶಮಯ ಜ್ಞಾನಸಾಗರನೆಂಬರ ದುರಿತ ಭಯವಾರಿಸುವೆ3 ಆವನಾಗಲಿ ಮರೆದು ನಿಮ್ಮ ನಾಮವ ನೆನೆವ ಠಾವಿನಲಿಸುಳಿವ ಪ್ರತ್ಯಕ್ಷದಿಂದಾ ಭಾವದಿಂದಲಿ ಸ್ಮರಿಸಿದವಗ ಇಹಪರ ಸುಖವ ನೀವ ಕರುಣಾಳು ದೀನೋದ್ಧಾರಕಾ 4 ಇಪ್ಪತ್ತು ನಾಲ್ಕು ಗುರುಗಳ ಕ್ರಮವ ದೋರಿಭವ ಮುಪ್ಪು ಬಿಡಿಸಿದೆ ಯದುರಾಯಗಂದು ಒಪ್ಪಿನಿಂದಲಿ ಗುರು ಮಹಿಪತಿ ಪ್ರಭುಯನಿಸಿ ತಪ್ಪ ನೋಡದೆ ನಂದ ನುದ್ಧರಿಸಿದೆಲೆ ದೇವಾ5
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ದೇವ ನೀ ದಯಮಾಡಿ ಕರುಣಿಪುದೂ ಪ ಮಮದುರಿತಹರಣ ಜೀಯ ಅ.ಪ ಕಾಲ ಪಾವಕಾಸನನೇ ದೇವ ಪ್ರತ್ಯಂಗನದ್ಯಾರೊ ತೋರೋ ಸಾವಧಾನ ಸರ್ವಾತ್ಮಕ ತ್ರಿಗುಣನೆಬಾರೊ ಬಾವ ಜಾರಿ ಸಖ ಭಜಕ ಜನ ವಿಹತ ಸರ್ವಜನರಿಗಾದರದಿ ಸಂಪದವು ನೀವ ಸುಂದರನೆ ನಿಜಪರ ಬ್ರಹ್ಮನೆ 1 ಪ್ರಣವನಾದ ಪಂಡಿತಜನ ಶಿಖರನೆ ಫಣಿಪಾಸನ ಹರಿಯೆ ಧೊರೆಯೆ ಅಣಿದು ಬರುವ ದುರ್ನಡೆಗಳ ಕಡಿಯದೆ ಯೆಣಿಪುದು ನಿನಗಿದು ಸರಿಯೇ ತ್ರಿಣೆಯೆಸಖನೆ ತ್ರಿಗುಣೇಶನೆ ಕೇಶವ ಅಣಿದು ಬಾರೊ ದಯಕೋರೆಲೊ ಮಹಾ 2 ದ್ವಿಜಗಣ ಮಣಿಯಹುದೋ ಅಜ ಮಹರಾಜನೆ ದು:ಖವ ನೀ ತ್ಯಜಿಸಬೇಕಹುದಹುದೋ ವಿಜಯಸಾರಥಿಯೆ ನಿಜ ಭಗವಂತನೆ ಸುಜನರೊಡನೆ ಸುಖಿಸುವದೆನಗದು ಕೊಡೊ 3 ನಿಗಮವಿನುತ ನಿಖಿಲಾಂಡಕೋಟಿ ಬ್ರಹ್ಮಾಂಡ ಜಗದಾದಿ ನಾಯಕ ಕನ್ಯಾರೊ ಬಾರೊ ಸುಗುಣರೂಪ ಸಾಕ್ಷಾತ್ ಪರಮಪದ ತೋರೋ ಅಗಣ ಸಹಜ ಮತ್ಕುಗುಣ ಕಾಲನೆ ಕಲಿ ನೆಗುರು ಮಂಗಳಪುರಿಧಾಮಾ 4
--------------
ಚನ್ನಪಟ್ಟಣದ ಅಹೋಬಲದಾಸರು
ದೇವಾಧಿದೇವ ನೀನಹುದು ಸಾಕ್ಷಾತ ಭಾವಿಸುವರಾತ್ಮ ಭಜಕರ ಪ್ರಾಣದಾತ ಧ್ರುವ ಸುಜನ ಮನೋಹರ ಮೂಜಗ ಆಧಾರ ಭಜಕ ಭಯಹರ 1 ಕರುಣಸಾಗರ ಪರಮ ಉದಾರ ದುರಿತ ಸಂಹಾರ 2 ಬಾಹ್ಯಂತ್ರಲಿವ್ಹ ಇಹಪರ ಕಾವ ಮಹಿಪತಿಯ ರಕ್ಷಿಸುವ ಶ್ರೀ ದೇವ ದೇವ 3
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ದೇವಾಧಿದೇವನೀತನೆ ಸಾಕ್ಷಾತ ಕಾವ ಕರುಣ ಗುರುನಾಥ ಧ್ರುವ ದಾತ ಸುರಲೋಕನಾಥ ಶ್ರುತಿಸ್ಮøತಿ ಸನ್ಮತ ಯತಿಜನವಂದಿತ ಪತಿತಪಾವನನಹುದೀತ 1 ಆನಂದೊ ಬ್ರಹ್ಮಸ್ವರೂಪ ಅನುದಿನ ಭಯಪಾಲಿಸ 2 ಶ್ರೀನಾಥ ಮಹಾಮಹಿಮರ ಮಹಿಪತಿಗುರು ಪ್ರಾಣನಾಥ 3
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ದೇಶಿಕರಿಗೆ ದೇವ ನೀನಹುದಯ್ಯ ಲೇಸು ಲೇಸಾಗಿ ಪಾಲಿಸೊ ಎನ್ನಯ್ಯ ಧ್ರುವ ಅನಾಥನಾಥ ನೀನೆ ಸಾನುಕೂಲ ಅನುದಿನ ಮಾಡುವೆ ನೀ ಪ್ರತಿಪಾಲ 1 ಅಣುರೇಣುಕ ಸಾಹ್ಯ ಮಾಡುವ ಸ್ವಾಮಿ ನ್ಯೂನ ನೋಡದೆ ತಪ್ಪು ಮಾಡುವಿ ಕ್ಷಮೆ 2 ನೀನೆ ಸಕಲಕೆಲ್ಲ ಸಲಹುವ ದಾತ ಜನವನದೊಳು ಘನಗುರು ಸಾಕ್ಷಾತ 3 ದೇವಾದೀದೇವ ಶ್ರೀದೇವ ಅವಧೂತ ಭವ ಹರ ಗುರು ನೀನೆ ಸದೋದಿತ 4 ದೀನಮಹಿಪತಿ ಸ್ವಾಮ್ಯಹುದೋ ಕೃಪಾಲ ಭಾನುಕೋಟಿತೇಜ ನೀನೆ ಅಚಲ 5
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ನಡೆಯೇ ತೀರ್ಥವು ನುಡಿ ಪ್ರಸಾದವುಕೊಡುವುದೇ ತಾನೀಗನುಗ್ರಹವುಹಿಡಿವುದೇ ತತ್ವವು ಬಿಡುವುದೇ ವೈರಾಗ್ಯದೃಢದಲಿ ತನ್ನ ತಿಳಿದಾ ಮಹಾತ್ಮನಾ ಪ ಮೆಟ್ಟಿದ್ದೆ ಕಾಶಿಯು ಮಲಗಿದ್ದೆ ಶ್ರೀ ಶೈಲದಿಟ್ಟಾಗಿ ಕುಳಿತುದೇ ಕುರುಕ್ಷೇತ್ರವುಘಟ್ಟಿಯಾಗಿಹುದೇ ಗಯವೀಗ ಗೋಕರ್ಣಮುಟ್ಟಿಯೇ ತನ್ನತಾ ತಿಳಿದ ಮಹಾತ್ಮನಾ 1 ಉಂಡದ್ದೆ ಕೇದಾರ ಉಟ್ಟಿದ್ದೆ ಶ್ರೀ ಬದರಿಕಂಡದ್ದೆ ಕಂಚಿ ಕಾಳಹಸ್ತಿಮಂಡೆಗೆರಕೊಂಡುದೇ ಮೈಲಾರ ಮಧುರೆಯುಖಂಡಿಸಿ ತನ್ನತಾ ತಿಳಿದ ಮಹಾತ್ಮನಾ 2 ಸುಧಾ ಶರಧಿಯು ಆತ ಸಾಕ್ಷಾತ್ತು ದೈವವುವಿಧ ವಿಧದ ಜಗ ತಾನೆಯಾದಾತನುಮದಕಾಮ ಕ್ರೋಧ ಪಾಶ ಶೋಕ ವರ್ಜಿತಚಿದಾನಂದ ಗುರುವೇ ತಾನಾದ ಮಹಾತ್ಮನಾ 3
--------------
ಚಿದಾನಂದ ಅವಧೂತರು
ನನ್ನ ಕರ್ಮವು ಬಂದು ಇನ್ನು ಬಾಧಿಸುತಿರೆ ಅನ್ಯರೇನ ಮಾಡುವರೈ ಪ ಕನ್ನೆ ಶಿರೋಮಣಿ ದ್ರೌಪತಿ ವರದನೆ ಎನ್ನ ಪಾಲಿಸೊವೋ ಪ್ರಸನ್ನ ರಂಗನಾಥ ಅ.ಪ ಭಿಕ್ಷಕ್ಕೆ ಬಂದಾಗ ಲಕ್ಷ್ಯವಿಡದೆ ಹೋಗಿ ಸಾಕ್ಷಿಯ ನಾಕಂಡೆನೈ ಪಕ್ಷಿ ವಾಹನನೆ ನೀರಕ್ಷಿಸಬೇಕಯ್ಯ ಸಾಕ್ಷಾತನೆಂತೆಂಬೊ ಮೋಕ್ಷಾಧಿಕಾರಿಯೆ 1 ದೋಷಕ್ಕೆ ಗುರಿಯಾದೆನೈ ಆಶೆಯ ಬಿಡಿಸಯ್ಯಾ ಶ್ರೀ ವೆಂಕಟರಮಣ ದೋಷರಹಿತ ಗುರುವು ದಾಸ ತುಲಸೀರಾಮ 2
--------------
ಚನ್ನಪಟ್ಟಣದ ಅಹೋಬಲದಾಸರು
ನನ್ನ ಗುರು ಯೆಂತಪ್ಪ ದೊಡ್ಡವನೋ [ಘನ್ನ] ಸೀತಾಮನೋಹರ ಪ ನಿನ್ನೆಯೆನಗೊದಗಿದ ದು:ಖದಿ ಬನ್ನಬಡಿಸುವದಾಗಿ ಅಳುತಿರೆ ಚನ್ನಕೇಶವನಾಗಿ ತಾನೆ ಪ್ರ ಸನ್ನನಾದ ಮಹಾತ್ಮ ಜಯಜಯ1 ಭಗವದಾಜ್ಞೆಯನನುಗೊಳಿಸದಲೆ ಕುಗುಣ ಕುಚಿತದೊಳಿರಲು ಬಂದದ ಸಿಗಿದು ಹೊಡೆದು ಬಿಸಾಡಿದಾ ನಮ್ಮ ಸಗುಣ ಸಾಕ್ಷಾತ್ಕಾರ ನಿರ್ಗುಣ2 ದುರ್ಗುಣವು ದುಸ್ಸಂಗ ದುವ್ರ್ಯಾವಾರದೊಳು ದುರ್ಗತಿಕುಮತಿ ನಾನಧಿಕನಾಗಿರೆ ಸ್ವರ್ಗನಾಯಕ ಬಂದುಮೆನ್ನುಪ ಸರ್ಗಮಳಿದ ಮಹಾನುಭಾವಾ 3 ಅರಿಯದರಿಲಿಕೆ ಅರಿಗಳಾರನೂ ಹರಿಯೆ ತಾನಾಗೈದು ತೋರಿದ ಪರಮಗುರು ಶ್ರೀ ತುಲಸಿರಾಮನ ಚರಣ ಸೇವಕನಾದೆನಹುದೆಲೊ 4
--------------
ಚನ್ನಪಟ್ಟಣದ ಅಹೋಬಲದಾಸರು
ನಮ್ಮ ಕುಲದೈವೀತ ಬೊಮ್ಮನ ಪಡೆದಾತ ಸಾಮಗಾಯನ ಪ್ರೀತ ಸ್ವಾಮಿನೀತ ಧ್ರುವ ವೇದ ಉದ್ಧರನೀತ ಮೇದಿನಿಯ ಪೊತ್ತಾತ ಸಾಧುಜನ ವಂದಿತ ಸದ್ವಸ್ತುನೀತ 1 ಧಾರುಣಿಯ ಗೆದ್ದಾತ ತರಳಗೊಲಿದಹನೀತ ದಾತ ಕರುಣಿ ಈತ 2 ಮೂರು ಪಾದಳಿದಾತ ಪರಶುಧರನಹುದೀತ ಸುರಜನರ ಪೂಜಿತ ಸರ್ವೋತ್ಮನೀತ 3 ಪವನಸುತಗೊಲಿದಾತ ಮಾವನ ಮಡುಹಿದಾತ ಭುವನತ್ರಯಲೀತ ದೇವನೀತ 4 ಬೆತ್ತಲೆಯು ಸುಳಿದಾತ ಉತ್ತಮ ಹಯವನೇರಿದಾತ ಭಕ್ತರಿಗೆ ಹೊರೆವಾತ ಶಕ್ತನೀತ 5 ಅಣುರೇಣುದೊಳೀತ ಅನುಕೂಲವಾದಾತ ಆನಂದೋ ಬ್ರಹ್ಮ ಅನಂತನೀತ 6 ಮಹಾಮಹಿಮನಹುದೀತ ಬಾಹ್ಯಾಂತ್ರಪೂರಿತ ಮಹಿಪತಿಯ ಸಾಕ್ಷಾತ ವಸ್ತುನೀತ 7
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ನಿನ್ನನೆ ನೀ ಕಾಣಣ್ಣನಿನ್ನ ಕಾಣುವುದರಿಯಣ್ಣನಿನ್ನಯ ದೇಹದೊಳಣ್ಣನಿನಗೆ ಹೇಳುವೆನಣ್ಣ ಪ ಕಣ್ಣನೆ ಮುಚ್ಚಣ್ಣ ಕಪ್ಪನು ಲಕ್ಷಿಸೋ ಅಣ್ಣಹೊನ್ನು ಕಳೆಗಳಣ್ಣ ಹುಟ್ಟುವುದು ಮುಂದಣ 1 ಕಪ್ಪದು ಅಡಗಲಿ ಅಣ್ಣ ಕಪ್ಪಿನ ಸ್ಥಳ ಹಿಡಿಯಣ್ಣಕುಪ್ಪಳಿಸುವುದು ಬೆಳಗಣ್ಣ ಕಾಡು ಕಿಚ್ಚಿನಂತಣ್ಣ 2 ದೃಷ್ಟಿಯಲಿ ದ್ರಷ್ಟಿವಣ್ಣ ದೃಷ್ಟಿಯ ನೆಲೆಯಾಗಲಣ್ಣಶಿಷ್ಟ ಚಿದಾನಂದನಣ್ಣ ಸಾಕ್ಷಾತ್ ನೀನಹೆಯಣ್ಣ3
--------------
ಚಿದಾನಂದ ಅವಧೂತರು
ನಿನ್ನಬಿಟ್ಟನ್ಯಬಲ ಮುನ್ನಿಲ್ಲಸ್ವಾಮಿ ಎನ್ನಯ್ಯ ವಿಶ್ವೇಶ ಪನ್ನಂಗಶಾಯಿ ಪ ಇನಚಂದ್ರ ಮಂಗಳಬುಧಗುರು ಭಾರ್ಗವ ಶನಿರಾಹುಕೇತು ನವಮಹರ್ದಶನು ನೀನೆ ಘನನಿಮ್ಮ ಮಹಿಮೆಯಿಂ ವಿಧವಿಧದಿ ಸೃಷ್ಟಿಗೈ ದೊನರುಹ ಭುವನಂಗಳಾಳುವವ ನೀನೆ 1 ನಕ್ಷತ್ರಯೋಗಾದಿಕರಣಂಗಳು ನೀನೆ ಪಕ್ಷಮಾಸ ಸರ್ವಕಾಲ ವಾರ ತಿಥಿ ನೀನೆ ಸುಕ್ಷೇತ್ರಯಾತ್ರ ಮಹಪುಣ್ಯತೀರ್ಥವು ನೀನೆ ಸಾಕ್ಷಾತ ನಿಖಿಲ ಶುಭಮುಹೂರ್ತಗಳು ನೀನೆ 2 ಪರಮವೇದ ಪುಣ್ಯಪುರಾಣಕಥೆ ನೀನೆ ವರ ನಿಖಿಲ ಶಾಸ್ತ್ರರ್ಥ ಮೂಲವಿಧಿ ನೀನೆ ಚರಣದಾಸರ ಪ್ರಾಣಪದಕ ಶ್ರೀರಾಮಯ್ಯ ಸ್ಥಿರಮೋಕ್ಷ ಪಾಲಿಪ ಶ್ರೀಗುರುವು ನೀನೆ 3
--------------
ರಾಮದಾಸರು
ನಿರ್ಮಲ ಹೃದಯ ಮಂಟಪದೊಳಗೆ ನಿಶ್ಚಲ ಮಣಿಯಿಟ್ಟುಧರ್ಮ ಪಟ್ಟಾವಳಿಯ ಹಸೆ ಹಾಸಿಧರ್ಮ ಪಟ್ಟಾವಳಿಯ ಹಸೆ ಹಾಸಿ ಮುಕ್ತಿಯನುಕರ್ಮ ಹರೆಯರು ಕರೆದರು 1 ಪರಮ ಪುರುಷ ಬಂದು ಪರಿಣಾಮದಿ ಕುಳಿತು ಇಹನುಪರಮ ಪಾವನೆ ಹಸೆಗೇಳುಪರಮ ಪಾವನೆ ಹಸೆಗೆ ಏಳೆಂದು ಮುಕ್ತಿಯನುಪರಮ ಶಾಂತಿಯರು ಕರೆದರು 2 ನಿತ್ಯತೃಪ್ತನು ಬಂದು ನಿಜದಲ್ಲಿ ಕುಳಿತಿಹನುನಿತ್ಯ ಆನಂದೆ ಹಸೆಗೆ ಏಳುನಿತ್ಯ ಆನಂದೆ ಹಸೆಗೆ ಏಳೆಂದು ಮುಕ್ತಿಯನುನಿತ್ಯ ಸತ್ಯೆಯರು ಕರೆದರು 3 ಮಂಗಳ ಮೂರುತಿ ಬಂದು ಮಂಗಳವಾಗಿ ಕುಳಿತಿಹನುಮಂಗಳ ಮುಖಿಯೇ ಹಸೆಗೇಳುಮಂಗಳ ಮುಖಿಯೇ ಹಸೆಗೇಳು ಎಂದು ಮುಕ್ತಿಯನುಮಂಗಳ ಮುಖಿಯರು ಕರೆದರು 4 ರೂಪ ರಹಿತನು ಬಂದು ರೂಪವಾಗಿ ಕುಳಿತಹನುರೂಪ ಮಹಾ ರೂಪೇ ಹಸೆಗೇಳುರೂಪ ಮಹಾ ರೂಪೇ ಹಸೆಗೇಳು ಎಂದು ಮುಕ್ತಿಯನುರೂಪವತಿಯರು ಕರೆದರು 5 ಅಚ್ಯುತನೆ ತಾ ಬಂದು ಅಚ್ಚಾರಿಯಲಿ ಕುಳಿತಿಹನುಅಚ್ಯುತ ರೂಪಳೆ ಹಸೆಗೇಳುಅಚ್ಯುತ ರೂಪಳೆ ಹಸೆಗೇಳೆಂದು ಮುಕ್ತಿಯನುನಿಶ್ಚಿತ ಮತಿಯರು ಕರೆದರು 6 ಸಾಕ್ಷಿರೂಪನೆ ಬಂದು ಸಾಕ್ಷಾತ್ತು ಕುಳಿತಿಹನುಸಾಕ್ಷಿಭೂತಳೆ ನೀನು ಹಸೆಗೇಳು ಸಾಕ್ಷಿಭೂತಳೆ ನೀನು ಹಸೆಗೇಳೆಂದು ಮುಕ್ತಿಯನುಸೂಕ್ಷ್ಮಮತಿಯರು ಕರೆದರು7 ವೇದಾತೀತನೆ ವೇದ್ಯವಾಗಿ ಕುಳಿತಿಹನುವೇದಮಾತೆಯೆ ನೀನು ಹಸೆಗೇಳುವೇದಮಾತೆಯೆ ನೀನು ಹಸೆಗೆ ಏಳೆಂದು ಮುಕ್ತಿಯನುವೇದಸ್ಮøತಿಯರು ಕರೆದರು8 ಜ್ಯೋತಿ ಚಿದಾನಂದನೆ ಬಂದು ಜೋಕೆಯಲಿ ಕುಳಿತಿಹನುಜ್ಯೋತಿ ಪ್ರದೀಪೆಯೇ ಹಸೆಗೇಳುಜ್ಯೋತಿ ಪ್ರದೀಪೆಯೇ ಹಸೆಗೇಳು ಏಳೆಂದು ಮುಕ್ತಿಯನುಜ್ಯೋತಿರ್ಮತಿಯರು ಕರೆದರು 9
--------------
ಚಿದಾನಂದ ಅವಧೂತರು