ಒಟ್ಟು 130 ಕಡೆಗಳಲ್ಲಿ , 28 ದಾಸರು , 119 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ನಂಬಿದವರ ಕಾವ ದೈವ ಅಂಬುಜಾಕ್ಷನೀತನೆಂದು ಧ್ರುವ ನಂಬಿದ ಪ್ರಲ್ಹಾದಗ ತಾಂ ಸ್ತಂಭದೊಳು ಮೂಡಿ ಬಂದು ಹಂಬಲಿಸಿ ದಲ್ಲ್ಯೊದಗಿ ಇಂಬವಾದನೀತನೆಂದು 1 ನಾಮ ನಂಬಬಾರದೆ ನೀ ಕಾಮಧೇನುವೆಂದು ಪೂರ್ಣ ನೇಮದಿಂದ ಸಲಹುತಿಹ್ಯ ಸ್ವಾಮಿ ಸರ್ವೋತ್ತಮನೆಂದು 2 ದೀನ ಮಹಿಪತಿಸ್ವಾಮಿ ಭಾನುಕೋಟಿತೇಜಪೂರ್ಣ ಮನದಪೇಕ್ಷೆ ಪೂರೈಸುವ ಘನಸುಖದಾಯಕನೆಂದು 3
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ನಮೋ ನಮೋ ಗಣೇಶಾ | ನಮೋ ಸಂಕಟನಾಶಾ | ನಮೋ ದುರಿತವಿನಾಶಾ ಪ ಚರ್ಚಿತ ಸಿಂಧುರ ವದನಾ | ಸುಂದರ ಗುಣಸದನಾ ಗಣೇಶಾ 1 ತ್ರೀಶೂಲ ಅಂಕುಶ ಧೃತಕರ ಕರುಣಾ | ಕಿಸಲಯೋಪಮ ಚರಣಾ ಗಣೇಶಾ 2 ಇಹಪರ ಸುಖದಾತಾ ಗಣೇಶಾ | 3
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ನಮೋ ನಮೋ ಸುಶೀಲೇಂದ್ರ | ಗುರುವರಿಯ ವೈಷ್ಣವ ಸುಮತವಾರಿಧಿ ಚಂದ್ರ | ಸಕುವಿ ಸಂಸ್ತುತ | ಅಮಿತ ಸದ್ಗುಣ ಸಾಂದ್ರ || ಸುಮತಾಹಿವೀಂದ್ರ ಪ ನಮಿಪ ಜನರಿಗೆ ಅಮರ ಭೂರುಹ ಸಮಸುಖಪ್ರದ ವಿಮಲ ಚರಿತನೆ ಯಮಿವರ್ಯ ಸುವೃತೀಂದ್ರ ಮಾನಸ ಕಮಲರವಿ ಮಹಿ ಸುಮನಸಾಗ್ರಣಿ ಅ.ಪ ಅಸಮ ಮಹಿಮೋದರ | ತವಸುಪ್ರಭಾವವ ಸುಜನ ವಂದಿತ ಸ್ವಶನ ಸುಮತೋದ್ಧಾರ || ದಯ ಪಾರವಾರ || ವಸುಧೆಯೊಳು ಮೊರೆಹೊಕ್ಕ ಜನರಿಗೆ ಕುಶಲಪ್ರದ ನೀನೆಂದು ಬುಧ ಜನ ಉಸುರುವದು ನಾ ಕೇಳಿ ನಿನ್ನ ಪದ ಬಿಸಜ ನಂಬಿದೆ ಪೋಷಿಸನುದಿನ 1 ದೀನಜನ ಸುಖದಾತ | ಸುಕೃತೀಂದ್ರ ಕೋಮಲ ಬಾಣಲೋಕ ವಿಖ್ಯಾತÀ || ದ್ವಿಜಕುಲಕೆ ನಾಥ || ಕ್ಷೋಣಿಯೊಳು ನೀ ಒಲಿದ ಮಾತ್ರದಿ ಮೌನಿವರ್ಯ ಶ್ರೀ ರಾಘವೇಂದ್ರರು ಸಾನುರಾಗದಿ ಸಲಹುವರು ಪವ ಮಾನ ಶಾಸ್ತ್ರ ಪ್ರವೀಣ ಜಾಣ 2 ಪಿಂಗಲೇಂದ್ರ ಪ್ರಕಾಶ | ಸುಪವಿತ್ರ ವರದತ ರಂಗಿಣಿ ತಟವಾಸ | ಸದ್ಧರ್ಮ ಸ್ಥಾಪಕ ಮಂಗಳಾಂಗ ಯತೀಶ | ಪಾಪೌಘನಾಶ || ತುಂಗವಿಕ್ರಮ ಶಾಮಸುಂದರನಂಘ್ರಿ ಕಮಲಕೆ ಭೃಂಗ ಭವಗಜಸಿಂಗ ಕರುಣಾ ಪಾಂಗದೀಕ್ಷಿಸೆ ಇಂಗಿತಜ್ಞರ ಸಂಗಪಾಲಿಸು 3
--------------
ಶಾಮಸುಂದರ ವಿಠಲ
ನಾರಾಯಣ ರಕ್ಷಿಸೊ ನಮ್ಮನು ಲಕ್ಷ್ಮೀನಾರಾಯಣ ರಕ್ಷಿಸೋ ಪ ಭವ ದೂರ ನಿತ್ಯೋದಾರ ಕರುಣದಿ ಅ.ಪ. ಶ್ರೀಶ ನಿನ್ನರ್ಚಿಸದೆ ಶ್ರೇಯಸ್ಸುಖದಾಶಯನೇ ತೊರೆದೆ ಕಳತ್ರ ನಿವೇಶ ತನುಜ ಮಾಯಾ ನಿಖಿಲಸುರೇಶ ಕಮಲ ಭವ ಭಯ ಪಾಶ ಹರಪರಮೇಶ ವಂದಿತ||ನಾರಾಯಣ|| 1 ದೇಹಾಭಿಮಾನದಲ್ಲಿ ತೀವಿದಭೂತ ದ್ರೊಹವನಾಚರಿಸುತಲಿ ಸಿಲುಕಿ ದಾಸೋಹಮೆನ್ನದೆ ದೈವ ವಿದೇಹ ಜಾವರಿಗೂಹನೋಚಿತದೇಹ ವಿಜಿತವಿದೇಹ ಖಗವರವಾಹ ಶುಭಪರಿವಾಹ ನಿಖಿಲ ನಿರೀಹ ಲೋಕವಿ ಮೋಹನಾಚ್ಯುತ ||ನಾರಾಯಣ|| 2 ಧರ್ಮಾಚರಣೆಯನೆರೆತೊರೆದು ದುರುಳರ ಸಂಗದಿ ಜರಿದು ಸಜ್ಜನರನು ಜರಿದು ದುರ್ಗತಿಗೆ ನಾ ಗುರಿಯಾದೆನು ಹರಿ ಪರಮ ಪುರುಷ ಪರಮ ಪಾವನ ಭವ ಸಂಹರಣ ವಿಶ್ವಂಭರಣ ಪುಲಿಗಿರಿ ವರದ ವಿಠಲ ||ನಾರಾಯಣ|| 3
--------------
ಸರಗೂರು ವೆಂಕಟವರದಾರ್ಯರು
ನಿಗಮ ಗೋಚರಾನಂತ ಮಹಿಮ ಶ್ರೀದೇವ ಸಗುಣ ನಿರ್ಗುಣನಾಗಿ ತೋರುವ ಸುಗಮಲಿಹ್ಯ ಸುಖದಾಯಕ ಧ್ರುವ ಅಗಣಿತ ಗುಣಗಮ್ಯನುಪಮ ಶ್ರೀನಾಥ ನಿಗಮ ತಂದು ನೀ ಪ್ರಕಟದೋರಿದೆ ನಗವು ಬೆನ್ನಿಲಿ ತಾಳಿದೆ ಮಣಿ ಮಾಧವ ಶ್ರೀ ಕಾಂತ ಜಗವನುಳಹಿದೆ ನೆಗಹಿದಾಡಿಲೆ ಭಗತಗೊಲಿದು ನೀ ಕಾಯಿದೆ 1 ಹರಿ ಸರ್ವೋತ್ತಮ ಪರಮಪುರಷ ಶ್ರೀ ವೇಷ ಧರಿ ಮೂರಡಿ ಮಾಡಿದೆ ನೀ ಪರಶುಧರನಾಗ್ಯಾಡಿದೆ ಪರಿಪರ್ಯಾಡುವಾ ನಂದಸ್ವರೂಪ ಶ್ರೀಧರ ಶರಣ ರಕ್ಷಕನಾಗಿ ನೇಮದಿ ತುರುಗಳನ ನೀ ಕಾಯಿದೆ 2 ಸಾಮಜ ಪ್ರಿಯ ಶ್ರೀನಿಧೆ ಹಯವನು ತೋರುವೆ ಸರಸಿಜೋಧ್ಬವನುತ ಸಿರಿಲೋಲ ಎನ್ನಯ ಅನುದಿನ ಸೂರ್ಯಕೋಟಿ ಪ್ರಕಾಶನೆ 3
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ನಿನ್ನ ನಂಬಿದ ನರಗೆ ಅನ್ಯರಾಶ್ರಯವೇಕೋಚನ್ನ ಗುರು ವಿಜಯರಾಯ ||ಬನ್ನ ಬಡುವೆನೊ ಜೀಯ ಘನ್ನ ಭವದೊಳು ಶಿಲ್ಕಿಇನ್ನು ಕಡೆಗ್ಹಾಕೋ ಬ್ಯಾಗ ಈಗ ಪ ಸುರನದಿ ನರನ ಸುತ್ತ ಪರಿಯಲು ನೀರಿಗಾರ್ತನಾಗುವುದುಚಿತವೆ ||ಮತ್ತೆ ಸುರಧೇನುವಿನ ಹತ್ತಿಲಿರುವ ಯಿನ್ನುಹಸ್ತು ಬಳಲುವುದುಚಿತವೆ ||ನಿತ್ಯ ಸುಖದಾರಿ ವಿಚಿತ್ರ ನೀ ತೋರೆ ನಾಹಸ್ತ ನರಗೊಡ್ಡುವುದು ಯತ್ನ ಉಚಿತವೆ ಗುರುವೆ 1 ಕ್ಷೀರವಾರಿಧಿ ಸೇರಿ ನೀರ ಮಜ್ಜಿಗೆಗಾಗಿಚೀರಿ ವರಲುವುದುಚಿತವೆ ||ನೂರಾರು ವಸನದ ಹೇರು ಮನೆಯೊಳಗಿರಲುಕೋರಿ ವುಡುವುದು ವುಚಿತವೆ ||*ವಾರವಾರಕೆ ಹರಿಯ ತೋರುವರನ ಬಿಟ್ಟುಕ್ರೂರ ವನ ಸೇವಿಸುವ ದಾರಿಗುಚಿತವೊ ಗುರುವೆ 2 ಸಾಕಿ ಸಲಹೆಂದು ಅತಿ ವ್ಯಾಕುಲದಿ ಬಂದವನನೂಕಿ ಬಿಡುವುದುಚಿತವೆ ||ಬೇಕಾದ ವರವು ನೀ ಲೋಕರಿಗೆ ಕೊಡುವೆನ್ನಕಾಕುಗೊಳಿಸವುದುಚಿತವೆ ||ಏಕ ಬುದ್ಧಿಯಿನಿತ್ತು ಜೋಕೆ ಮಾಡೆ ಮನ-ನೇಕ ಮಾಡುವದುಚಿತವೆ ||ಶ್ರೀಕಾಂತ ವೇಣುಗೋಪಾಲ ವಿಠಲ ನಿನ್ನವಾಕು ಮನ್ನಿಸಲು ನಾ ಕೆಡುವದುಚಿತವೆ ಗುರುವೆ 3
--------------
ವೇಣುಗೋಪಾಲದಾಸರು
ನೀನೆ ಗತಿ ಶ್ರೀಪತಿ ನೀನೆ ಗತಿ ನಿರಾಕೃತ ದಾನವತತಿ ದೀನಾನುಕಂಪಿತ ಮತಿ ಪ. ಏನೆಂಬೆನು ನಿನ್ನಯ ಕರುಣಾ ಪವಮಾನ ಮತಿಯ ಜನಾದರಣಾ ದೀನಬಂಧು ದುರಿತೌಘ ನಿವಾರಣ ಶುಭ ಸಂಚಯ ಕರಣ 1 ನಿರವಧಿ ಸುಖದಾಯಕ ನಿನಗನ್ಯರು ಸರಿಯಂಬರು ನರಕದಿ ಹೊರಳುವರು ಚರಣಯುಗ್ಮಸರಸಿಜವಿಂತಿರಲು ಬರಿದೆ ಭವದಿ ತಿಳಿಯದೆ ಬಳಲುವರು 2 ಸ್ಮರಣೆ ಮಾತ್ರದಿಂದೊಲಿವ ಮನವರಿತು ಪಾಡಿದರೆ ನಲಿವ ಸಿರಿಸಮೇತ ಮಂದಿರದೊಳಗಿರುವ ಉರಗ ಗಿರೀಂದ್ರನ ಶಿರದಲಿ ನಲಿವ 3
--------------
ತುಪಾಕಿ ವೆಂಕಟರಮಣಾಚಾರ್ಯ
ನೀನೆ ರಕ್ಷಿಸೊ ಎನ್ನ ಪೂರ್ಣ ನೀ ಸ್ವಾನುಭವಸುಖದಾಯಕ ಅನುದಿನಪಾಲಕ ಅನಾಥಜನ ನೀ ರಕ್ಷಕ 1 ನ್ಯೂನಪೂರ್ಣಕಾಗುತಿಹ್ಯ ನಿಜದೀನಬಂಧು ಶಾಶ್ವತ ಘನ ದಯ ಸದೋದಿತ ನೀನೆಮ್ಮ ಸುಸ್ವಹಿತ 2 ತಂದೆತಾಯಿಯು ನೀನೆ ಸದ್ಗುರು ಬಂಧುಬಳಗ ಸನಾತನ ಭೂಷಣ ನೀನೆ ಪಾಲಿಸೊ 3
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ನೋಡಿದೆ ವೆಂಕಟರಮಣನ | ದ್ವಾರ ವಾಡ ಗ್ರಾಮದಿ ನಿಂತ ದೇವನ ಪ ರೂಢಿಪ ದಾಸರಿಗೆ ನೀಡಲು ದರುಶನ ಗೂಢ ಪಾದಾದ್ರಿಯಿಂ ಬಂದ ಮಹಾತ್ಮನ ಅ.ಪ ಈತನೆ ವೈಕುಂಟನಾಥನು ನಿಜ | ಶಾತಕುಂಭೋದÀರ ತಾತನು ಮಾತಂಗ ವರದಾತ ಶ್ವೇತವಾಹನ ಸೂತ ಜಾತರಹಿತ ದನುಜಾತ ಕುಲಾಂತಕ 1 ತೋಡ ಜನಕೆ ಸುಖದಾತನ | ಅಂಡಜಾತ ಪ್ರಕಾಂಡ ವರೂಥ ಬ್ರ ಹ್ಮಾಂಡನಾಯಕನಾದ ಪಾಂಡವಪಾಲನ 2 ಇಂದು ಧರಾಮರ ವಂದ್ಯನ ಶಾಮ ಸುಂದರ ವಿಠಲನ ಮುಕುಂದನ ಸಂದರುಶನ ಮಾತ್ರದಿ ಹಿಂದೆ ಮಾಡಿದ ದೋಷ ಇಂದು ಬೆಂದು ಪೋದವು ಘನ 3
--------------
ಶಾಮಸುಂದರ ವಿಠಲ
ಪದ್ಯ ಅಥಃ ಪ್ರಥÀಮೋಧ್ಯಾಯ ಪಾದ ವಾರಿಜಕೆರಗುತ ನೀರಜ ಮುಖಿ ಸರಸ್ವತಿಯಾ || ಸಾರ ಭಕ್ತಿಲಿ ಸ್ತುತಿಸಿ ಪೇಳುವೆ ಸತ್ಯ ಚಾರು ಕಥೆಯಾ ಪ ಸುರಮುಖಿವಂದಿತ ಸರಸಿಜ ಭವಪಿತ ಶರಧಿ ಕರಿವರದಾ | ಹರುಷದಿಂದಲಿ ನಿನ್ನ ಚರಿತೆ ಕೊಂಡಾಡಲು ವರವ ಪಾಲಿಸು ದಯದಿಂದ 1 ಶರನಿಧಿ ಸಂಭೂತೆ ಸುರಜೇಷ್ಟ ಸ್ಮರಮಾತೆ ಪುರಹರ ವಂದಿತೆ ಖ್ಯಾತೆ || ಸ್ಮರಿಸಿ ಬೇಡುವೆ ನಿನ್ನ ಧೊರಿಯ ವರ್ಣಿಸಲೀಗ ಗರಿಯೆ ವರವ ಸುಖದಾತೆ 2 ಹರಿಕುಲೋತ್ತುಮ ನಿನ್ನ ಸರಸಿಜ ಪದಯುಗ ನೆರೆನಂಬಿದೆನು ಮುದಿಂದ || ಹರಿಸುಚರಿತ್ರವು ಅರುಹಲು ಎನ್ನಗೆ ಸ್ಥಿರ ಬುದ್ಧಿಕೊಡು ವಾಯುಕಂದ 3 ಗಿರಿಜೇಶ ಶಚಿಪತಿ ಸುರತತಿಗೆರಗುವೆ ಪರಮ ಸುಭಕ್ತಿ ಪೂರ್ವಕದಿ || ಹರಿದಾಸ ವರ್ಗಕೆ ಶುಭನೀಡಲೆನಗೆಂದು ಶಿರಬಾಗಿ ಬೇಡುವೆ ಮನದಿ 4 ಘನತರ ನೈಮಿಷವನದೊಳು ವಾಸಿಪ ಮುನಿ ಸೂತನಲ್ಲಿಗೆ ಬಂದು | ವಿನಯದಲಿ ವಿಜ್ಞಾಪನ ಮಾಡಿಕೊಂಡರು ಶೌನಕಾದಿಗಳೆಲ್ಲ ನಿಂದು 5 ಕ್ಷಿತಿಯೊಳು ಮನದಾಸೆ ಹಿತದಿಂದ ನೀಡುವ | ವ್ರತದಾವದ್ಹೇಳಿರೆನುತ || ಅತಿ ಭಕ್ತಿಯಿಂದ ಕೇಳುವ ಮುನಿಗಳ ಕಂಡು ಕಥಿಸಿದನಾಗೆತಿ ಸೂತಾ 6 ಛಂದದಿ ಕೇಳಿರಿ ಒಂದೆ ಮನದಿ ಈಗಾ | ನಂದದಿ ನಾರದ ತಾನೂ || ಹಿಂದಕ್ಕೆ ಈತೆರ ನಂದನ ಗೋ ವಿಂದನ ಪ್ರಶ್ನೆ ಮಾಡಿದನೂ 7 ಕಾರುಣ್ಯದಿಂದಲಿ ಸಾರಸೋದ್ಭವಕು | ಮಾರ ನಾರದ ಮುನಿವರಗೆ || ಶೌರಿ ಪೇಳಿದ ಕಥೆ ಸಾಧುವೆ ಮೋದದಿ ನಿಮಗೆ 8 ವರಸುರ ಲೋಕಾದಿ ಚರಿಸುತ್ತನಾರದ | ಹರುಷದಿ ಭೂಮಿಗೆ ಬರಲು || ನರರತಿ ಕಷ್ಟದಿ ಮರುಗುವದಂ ನೋಡಿ | ಪೊರೆಟರು ಹರಿಗ್ಹೇಳಿ ಕೊಳಲು 9 ಪದುಮಜ ಸುತ ನಾರದ ಮುನಿ ವೇಗದಿ | ವಿದುಧರ ವಂದಿತನಾದ || ಯದುಪನಲ್ಲಿಗೆ ಬಂದು ಮುದಮನದಿಂದಲಿ | ವಿಧ ವಿಧದಲಿ ಸ್ತುತಿಗೈದಾ 10 ಅಗಣಿತ ಮಹಿಮನೆ ತ್ರಿಗೂಣ ವರ್ಜಿತ ತ್ರಿವಿಕ್ರಮನೆ || ಪೊಗಳುವ ತವ ಪದಯುಗಕೆರಗುತ ನಾನು ಜಗದುತ್ವತ್ತಿ ಕಾರಣನೆ 11 ಮಗಳಲ್ಲಿ ಪುಟ್ಟದಿ ಮಗನನ್ನು ಕುಟ್ಟದಿ | ಮಗನ ಮಗಳ ಮದುವ್ಯಾದಿ || ಮಗನ ಮಗನ ವರಪಡೆದಾತನ ಜೈಸಿ ಮಗನ ಮಗನ ನೀನು ತಂದಿ 12 ಸಿಂಧುಜರಿಪ್ರಸಖ ನಂದನ ಕೊಂದನ | ತಂದೆಯ ತಂದೆಯಾ ಸುತೆಯಾ || ನಂದಿನಿಯಳಿಗಾಗಿ ನೊಂದಿದಿ ನೀ ನರ ರಂದದಿ ಕವಿಗಣಗೇಯಾ 13 ಘನ್ನ ಮಹಿಮ ನಿನ್ನ ಅನಂತ ಚರಿಯವ ಬಣ್ಣಿಸ ಬಲ್ಲೆನೆ ದೇವಾ || ಪನ್ನಗರಾಜಗಾಗಣ್ಯವಾಗಿಪ್ಪುದು ಮನ್ನಿಸು ಎನ್ನ ಬಿನ್ನಪವಾ 14 ಬಾ ಮುದ್ದು ನಾರದನೆ ಬಾ ಮುನಿವರ್ಯನೆ ಬಾ ಮೂರು ಭುವನ ಸಂಚಾರಿ ನೇಮದಿಂದಲಿ ನಿನ್ನ ಕಾಮಿತ ಪೇಳೀಗ ಪ್ರೇಂದಿಂದಲಿ ವೀಣಾಧಾರಿ 15 ಮುರಹರ ನಿನ್ನಗೆ ಅರಿಯದ ವಾರ್ತೆಯು | ಧರಣಿ ತ್ರಯದಿ ಉಂಟೇನೋ || ನರರತಿ ಕಷ್ಟದಿ ಮರುಗುತಲಿಪ್ಪರು ಹರಿಪೇಳಿದಕುಪಾಯವನು 16 ಸತ್ಯಲೋಕೇಶನ ಪುತ್ರನೆ ನಿನ್ನಯ | ಉತ್ತಮ ಪ್ರಶ್ನೆಗೆ ನಾನು || ಚಿತ್ತೈಸು ಮುನಿವರ ನೀನು 17 ನಾರದ ಶ್ರೀ ಸತ್ಯನಾರಾಯಣ ವ್ರತ ಧಾರುಣಿಯೊಳಗಿನ ಜನರು ಆರು ತಮ್ಮ ಪರಿವಾರದಿಂದಲಿ ಗೈಯ್ಯೆ ಭೂರಿ ಸೌಖ್ಯದಿ ಮೆರೆವರೋ 18 ದೇವನೆ ಈ ನಿನ್ನ ಸೇವಕನಿಗೆ ಸತ್ಯ || ದೇವನೆ ವ್ರತದ ವಿಧಾನ || ಸಾವಧಾನದಿ ಪೇಳು ಭಾವ ಜಪಿತ ಏಕೋ ಭಾವದಿ ಕೇಳುವೆ ಮುನ್ನ 19 ಬುಧನುತ ನಾರದ ಘೃತಕ್ಷೀರ ಶರ್ಕರ | ಕದಳಿ ಗೋಧೂ ಮಾದಿಗಳನು || ಪದುಳದಿಂದಲಿ ಸುಪಾಕಗೈದು ಮೇಣ್ ವಿಧ ವಿಧ ಪಕ್ವಾದಿಗಳನು 20 ಪರಮ ಭಕ್ತಿಯಲಿಂದ ಪರಿವಾರ ಸಹಿತದಿ ಧರುಣಿಸುರನ ಪರಿಮುಖದಿ ತುರಧೂಳಿಕಾಲದಿ ಪರಿಪರಿ ಪೂಜಿಸಿ ಹರಿಗರ್ಪಿಸಲಿ ಬೇಕು ಮುದದಿ 21 ಈರೀತಿಗೈವರ ಕೋರಿಕೆಯನು ದಯ | ವಾರಿಧಿ ಶಾಮಸುಂದರನೂ || ನಿತ್ಯ ವಾರಿಜಸಹಿತದಿ ಸೇರಿ ತಾ ನಲಿದಾಡುತಿಹನೂ 22 ಇತಿ ಪ್ರಥಮೋಧ್ಯಾಯ ಸಂಪೂರ್ಣಂ ಅಥಃ ದ್ವಿತೀಯೋಧ್ಯಾಯಃ ಅತಿ ಮೋದದಿಂದಲಿ ಮತಿಯುತರೆ ಈಗ ಪೃಥವಿಯೊಳಗೆ | ಪೂರ್ವದಲಿ || ವ್ರತಗೈದ ಸುಗುಣರ ಇತಿಹಾಸ ನಿಮ್ಮಗೆ ಕಥಿಸುವೆ ಹಿತದಿಂದ ಕೇಳಿ 1 ಕಾಶಿಯೊಳಗೆ ಒಬ್ಬ ಭೂಸುರ ಬಡತನ ಕ್ಲೇಶದಿ ವಾಸಿಸುವದನು || ಶ್ರೀಶ ಅವನ ನೋಡಿ ಪೋಷಿಸಲು ವೃದ್ಧ ವೇಷದಿ ಮಾತನಾಡಿಸಿದನು 2 ಭೂತವಕದಿ ವಿಪ್ರನಾಥನೆ ತವ ಮುಖ ಪಾಥೋಜ ಬಾಡಿದ ಬಗೆಯಾ ಈ ತೆರ ದುಃಖದಿ ನೀ ತಿರಗುವಂಥ ಮಾತು ಪ್ರೀತಿಲಿ ಪೇಳಯ್ಯಾ 3 ಕಥಿಸುವೆ ಹೇವಿಪ್ರ ಹಿತದಿಂದ ನೀಯನ್ನ | ಸ್ಥಿತಿಯಾ ಲಾಲಿಸು ಮನದಿಂದಾ || ಗತಿಗೆಟ್ಟು ಚರಿಸುವೆ ಪೃಥಿವಿಯೊಳಗೆ ಈಗ ಅತಿ ಬಡತನ ದೆಶೆಯಿಂದಾ 4 ಶ್ರೇಷ್ಟನೆ ದಾರಿದ್ರ್ಯ ಕಷ್ಟ ತೊಲಗುವಂಥ | ಥಟ್ಟನೆ ನೀ ಪೇಳುಪಾಯಾ || ಘಟ್ಪ್ಯಾಗಿ ನಿನ್ನ ಉತ್ಕøಷ್ಟ ಪಾದಾಂಬುಜ ಮುಟ್ಟಿ ಸೇವಿಪೆ ಮಹರಾಯಾ 5 ಮಿಡುಕುತ್ತ ವಿಪ್ರನು ನುಡಿದ ಮಾತನುಕೇಳಿ | ಕಡಲಜಪತಿ ಕವಿಗೇಯಾ || ಕಡುದಯದಲಿ ಪೇಳ್ದ ಬಡತನ ಕಳೆಯುವ ಪೊಡೆವಿಯೊಳಿದ್ದ ಉಪಾಯಾ 6 ಸಾರುವೆ ಕೇಳಯ್ಯ ಮಾರಜನಕ ನಿಜ | ನಾರಾಯಣನ ಸು ವ್ರತವಾ ಆರು ಜಗದಿ ಭಕ್ತಿ ಪೂರ್ವಕ ಮಾಳ್ವರು ದಾರಿದ್ರ್ಯ ಹರಿ ದೂರಗೈವಾ 7 ಮುದುಕನ ನುಡಿಕೇಳಿ ಮುದಮನದಿಂದಲಿ ಸದನಕ್ಕೆ ದ್ವಿಜ ಬಂದು ತಾನೂ ಸುದತಿ ಸಹಿತನಾಗಿ ಸತ್ಯನಾಥಾನ ಪೂಜೆ ವಿಧ ವಿಧದಲಿ ಮಾಡಿದನೂ 8 ಹರುಷದಿ ಈ ರೀತಿ ಧರಣಿ ದೇವನು ಮಾಡೆ | ಶಿರಿಸತಿ ಸುತರಿಂದ ತಾನೂ || ಧರೆಯೊಳು ಸುಖಬಿಟ್ಟು ಪರಮ ದುರ್ಲಭವಾದ ಪಥ ಹಿಡಿದನೂ 9 ಸೂತರೆ ಅತ್ಯಂತ ಕೌತುಕವಾಗಿಹ ಧಾತ ಪಿತನ ಈ ವ್ರತವು ಭೂತಳದೊಳಗೆಂತು ಖ್ಯಾತಿಯ ಪೊಂದಿತು ಪ್ರೀತಿಲಿ ಪೇಳಿರಿ ನೀವು 10 ಸತಿಸುತ ಪರಿವಾರ ಸಹಿತಾ ಅತಿ ಹಿತದಲಿ ಮನೋರಥ ಪೂರೈಸುವ ಈ ವ್ರತ ಮಾಡುತಿರಲಾಗತ್ವರಿತಾ 11 ಚರಣನೋರ್ವನು ಶಿರದಿ ಕಾಷ್ಟಭಾರವ ಧರಿಸಿ ಮಾರಲು ಬೀದಿಗಳಲಿ ಬರುತಿರೆ ಮಾರ್ಗದಿ ಧರಣಿದೇವನೆ ಮಂ ದಿರ ಕಂಡ ಪರಮ ಮೋದದಲಿ 12 ಶ್ರೀನಿವಾಸನ ಘನಧ್ಯಾನದಿಂರ್ಚಿಪ ಕ್ಷೋಣಿ ಸುರನ ನೋಡಿ ಜವದಿ ಮಾನವ ಕೇಳಿದ ಏನಿದೆಂದೆನು ತಲಾಕ್ಷಣದಿ 13 ಶೂದ್ರನ ನುಡಿ ಕೇಳಿ ಆ ದ್ವಿಜ ಪೇಳ್ದನು ಶುದ್ಧ ಮನದಿ ಚರಣೋಧ್ಭವ ಗೈದನಿ ಶುದ್ಧನ ಪಾದಾರ್ಚನವಾ 14 ಹರುಷದಿಂದಲಿ ಸತ್ಯ ಹರಿ ಪೂಜಿಸಿದ ಶೂದ್ರ ಪರಮ ಸೌಜನ್ಯದಿ ಇದ್ದು ಕೊನೆಗೆ ಪರಿವಾರಯುತನಾಗಿ ತೆರಳಿದ ಸ್ಥಿರ ಉಳ್ಳ ಶಿರಿಶಾಮಸುಂದರನ ಪುರಿಗೆ 15 ಇತಿ ದ್ವಿತೀಯೋಧ್ಯಾಯ ಸಂಪೂರ್ಣಂ ಅಥಾಃತೃತೀಯೋಧ್ಯಾಯ ಋಷಿ ಜನಗಳೆ ಕೇಳಿ ವಸುಧಿ ತ್ರಯದಿ ಘನ ಪೆಸರಾದ ಇನ್ನೊಂದು ಕಥೆಯಾ ಉಸುರುವೆ ಕೇಳ್ವರ ವ್ಯಸನವು ಪರಿಹಾರ ಪುಸಿಯಲ್ಲಿ ಈ ನುಡಿ ಖರಿಯಾ 1 ವರ ಉಲ್ಕಮುಖನೆಂಬ ಧರಣೀಶನೋರ್ವನು ಹರುಚದಿಂದಲಿ ತನ್ನ ಹಿತದಾ ಶರಧಿ ತೀರದಿ ನಿಜ ಹರಿಯನ್ನು ಪೂಜಿಸುತಿರ್ದ 2 ಕ್ಷೋಣಿಪಾಲಕನಿದ್ದ ಆ ನದಿತೀರದಿ | ವಾಣಿಜ್ಯ ಮಧುನಾಯಕನೂ || ಸಾನುರಾಗದಿ ಬಂದು ಶ್ರೀನಿಧಿ ವ್ರತದ ವಿ ಧಾನವೇನೆಂದು ಕೇಳಿದ 3 ಭೂಮಿಪಾಲಕ ಮಧುನಾಮಕ ವೈಶ್ಯನ ಆ ಮೃದು ನುಡಿಕೇಳಿ ಜವದಿ ಕಾಮಿತದ ಸತ್ಯ ಸ್ವಾಮಿಯ ವ್ರತ್ತದಾ ನೇಮವ ಪೇಳ್ವ ಸಮ್ಮುದದಿ 4 ರಕ್ಕಸಾರಿಯ ಕಥಾ ಭಕ್ತಿಲಿ ಕೇಳುತ ಲಕ್ಕುಮಿಯುತ ಮುದದಿಂದ ಮಕ್ಕಳೆನಗಾಗಲು ಚಕ್ರಿಯ ಸುವೃತ ಅಕ್ಕರದಲಿ ಮಾಳ್ಪೆನೆಂದ 5 ಈ ರೀತಿ ಧೃಡ ಬ್ಯಾಪಾರಿಯು ತಾಗೈದು ಶೌರಿ ಪ್ರಸಾದ ಸ್ವೀಕರಿಸಿ || ಸಾರಿ ಪೇಳಿದ ತನ್ನಾಗಾರಕ್ಕೆ ಬಂದು ತಾ ನಾರಿಯ ಮುಂದೆ ವಿಸ್ತರಿಸಿ 6 ಸತಿ ಶಿರೋಮಣಿ ಲೀಲಾ ವತಿಯು ತನ್ನ ಮಂದಿರದಿ || ಪತಿ ಕರುಣದಿ ಗರ್ಭ ವತಿ ತಾನಾದಳಾಕ್ಷಣದಿ 7 ಹತ್ತನೆ ಮಾಸದ ಉತ್ತಮ ಪುತ್ರಿಯ ಪೆತ್ತಳು ಆ ನಾರಿ ತಾನೂ || ಅತ್ಯಂತ ಸನ್ಮುದ ಚಿತ್ತನಾಗಿ ಸಾಧು ಮರ್ತನು ಹರಿವ್ರತವನ್ನು 8 ಸತಿ ಲೀಲಾವತಿ ತನ್ನ ಪತಿಗಭಿವಂದಿಸಿ ನಿಂದು || ಅತಿ ಭಕ್ತಿಯಿಂದಲಿ ಕಥಿಸಿಕೊಂಡಳಲ ಯದು ಪತಿ ವ್ರತ ಮಾಡಬೇಕೆಂದು 9 ಸುದತಿಯ ನುಡಿಕೇಳಿ ಮಧುನಾಮಕ ಸಾಧು ವಿಧಿಸಿದ ಸುತೆ ಕಲಾವತಿಯಾ || ಮದುವೆಯ ಕಾಲದಿ ಉದುಪನರ್ಚಿಪೆನೆಂದು ಮುದದಿಂದ ಪೇಳ್ದನುಪಾಯಾ 10 ಪರಿಪರಿ ಸೌಖ್ಯದಿಂದಿರುತಿರೆ ವೈಶನ ತರುಳೆಗೆ ಪೂರ್ಣಯೌವನವು | ಬರಲು ಮಾಡಿದ ತಕ್ಕವರ ತಂದು ಲಗ್ನವ ಮರೆತು ಬಿಟ್ಟನು ಹರಿವ್ರತವಾ 11 ಶ್ರೀಮಂತವೈಶ್ಯನು ಪ್ರೇಮದಿಂದಲಿ ತನ್ನ ಜಾಮಾತನೊಡನೆ ವ್ಯಾಪಾರಾ ನೇಮದಿ ಗೈಯಲು ಗ್ರಾಮ ತ್ಯಜಿಸಿ ಪೋದಾ ಆ ಮಹಾಪುರ ರತ್ನಸಾರಾ&ಟಿbs
--------------
ಶಾಮಸುಂದರ ವಿಠಲ
ಪರಮ ಪಾವನ ಮೂರುತಿಯೇ | ಶರಣ ರಕ್ಷಕ ಮಹೀಪತಿಯೇ ಪ ಸರ್ವಾಗಮ ಸನ್ಮತಾ ದೋರ್ವದು ನಿನ್ನ ಚರಿತಾ | ಉರ್ವಿಯೊಳಗೆ ಸುಖದಾತಾ | ಮೂರ್ವೀ ಜಗವಂದಿತಾ | ಸರ್ವಗುಣ ನಿಧಿಯೇ ನೀ | ಸರ್ವರೊಳು ವ್ಯಾಪ್ತನಾಗಿ | ಕಾಲ ಕೊಂಬೆ1 ಕಾಮನೆ ಪೂರೈಸುವಾ | ಕಾಮಧೇನುವೆ ಜಗಜೀವಾ | ಸುರತರು ದೇವಾ | ಸ್ವಾಮಿ ನೀ ಗತಿಯೆಂದು | ನಿಮ್ಮೊರೆ ಹೊಕ್ಕರೆ | ಪ್ರೇಮದಿ ಸಲಹುವೆ | ಈ ಮನುಜರನು2 ನಿನ್ನ ಮಹಿಮೆ ತಿಳಿಯಲು | ಎನ್ನಳವೇ ಧರಿಯೊಳು | ಚಿನ್ನ ಕೃಷ್ಣೊಡಿಯಾ ದಯಾಳು | ಉನ್ನತೋನ್ನತ ಕೃಪಾಳು | ಮುನ್ನ ಮಾಡಿದ ಘನ್ನಪರಾಧವ | ಇನ್ನು ಕ್ಷಮಿಸಿ ನೀ | ಚನ್ನಾಗಿ ಕಾಯೋ3
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ಪಾರ್ವತಿ ಭದ್ರಾಣಿ ದೇಹಿ ಮೇ ಗೌರಿ ಪ. ಭದ್ರಾಣಿ ದೇಹಿಮೇ ಗೌರಿ ರುದ್ರಾಣಿ ಭೂರ್ಯಾ (ರಿ?) ಭರಣಿ ಅ.ಪ. ಗರ್ವಾದಿ ನಿರ್ಮಿತಾನಿ ದುರ್ವಾಸ ಸುಖದಾನಿ(?)ಸರ್ವಾಣಿ ಪಾತ ಕಾನಿ ಸರ್ವಾಣಿ ಭಿಂತಾನಿ(?) 1 ಅಂಬೋಜನಾಭ ಸುಹಿತೇ ರಂಬೋರು ಶಂಭೋದಯಿತೇಗಾಂಭೀರ್ಯ ಸುಗುಣಸಹಿತೇ ಕುಂಭೋದ್ಭವಾದಿ ವಿನುತೇ 2 ಇಂದೀವರಾಭ ನಯನೇ ನಂದಿತ ಹಯವದನೇಕುಂದಕುಟ್ಮಲರದನೆ ಚಂದ್ರಸಹಸ್ರ ವದನೆ 3
--------------
ವಾದಿರಾಜ
ಪಾಲಿಸಯ್ಯ ಪೂರ್ಣ ಲೋಲ ಲಕ್ಷುಮಿರಮಣ ಧ್ರುವ ಮುನಿವರ ಪಾಲಕ ಘನ ಸುಖದಾಯಕ ಕನಕಾಂಬರಧರ ಕಸ್ತೂರಿ ತಿಲಕ ಅನಾಥ ಬಂಧು ಅರ್ತ ರಕ್ಷಕ 1 ಸಮಸ್ತಕೆ ನೀ ದಾತ ವಿಮಳ ವಿರಾಜಿತ ಕಮಲ ಸಂಭವಸುತ ಸೋಮಜು ವರಪ್ರಿಯ ಕಾಮಪೂರಿತ 2 ಅನಂಗಜನಕ ಅಣುರೇಣುವ್ಯಾಪಕ ದೀನ ಮಹಿಪತಿಗೆ ನೀ ಬೀರೊ ಸ್ವಾನಂದಸುಖ ಅನಂತಕೋಟಿ ಬ್ರಹ್ಮಾಂಡನಾಯಕ 3
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ಪಾವನಿ ನಿರಂಜನಿ ಪಾವನಿ ಧ್ರುವ ಆದಿನಾರಾಯಣಿ ಸಾಧುಜನವಂದಿನಿ ಸದಾನಂದರೂಪಿಣಿ ಸದ್ಗತಿ ಸುಖದಾಯಿಣಿ 1 ಲಕ್ಷುಮಿ ರೂಪಿಣಿ ಸಾಕ್ಷಾತ್ಕಾರಿಣಿ ರಕ್ಷರಕ್ಷಾತ್ಮಿಣಿ ಅಕ್ಷಯಪದದಾಯಿಣಿ 2 ಅನಾಥರಕ್ಷಿಣಿ ದೀನೋದ್ದಾರಿನೀ ಅನಂತಾನಂತಗುಣಿ ಮುನಿಜನ ಭೂಷಣಿ 3 ದಾರಿದ್ರ್ಯಭಂಜನಿ ದುರಿತವಿಧ್ವಂಸಿನಿ ಪರಮಸಂಜೀವಿನಿ ಸುರಮುನಿರಂಜನಿ 4 ಸ್ವಾಮಿ ಶ್ರೀ ಗುರುವಿಣೆ ಬ್ರಹ್ಮಾನಂದ ರೂಪಿಣಿ ಮಹಿಪತಿಕುಲಸ್ವಾಮಿಣಿ ನೀನೆ ಪರಮಪಾವನಿ 5
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ಪ್ರಸನ್ನ ಶ್ರೀ ಬುದ್ಧ ಜ್ಞಾನಸುಖ ಬಲಪೂರ್ಣ ಅನಘ ಲಕ್ಷ್ಮೀರಮಣ ಅನುಪಮಾದ್ಭುತ ಶಿಶುರೂಪ ನಿರವಧಿಕ ಅಮಿತ ಕಲ್ಯಾಣಗುಣಧಾಮ ಬುದ್ಧ ಶರಣು ಮಾಂಪಾಹಿ ಪ ಮಾಧವ ಗೋವಿಂದ ಶ್ರೀಶ ವಿಷ್ಣೋ ಮಧುಸೂಧನ ತ್ರಿವಿಕ್ರಮ ಈಶ ವಾಮನ ಶ್ರೀಧರ ಹೃಷಿಕೇಶ ಪದ್ಮನಾಭ ದಾಮೋದರ1 ವಾಸುದೇವ ಪ್ರದ್ಯುಮ್ನ ನಮೋ ಅನಿರುದ್ಧ ಪುರುಷೋತ್ತಮ ಅಧೋಕ್ಷಜ ನರಸಿಂಹ ಅಚ್ಯುತ ಶ್ರೀಕರ ಜನಾರ್ಧನ ಉಪೇಂದ್ರ ಹರಿ ಕೃಷ್ಣ 2 ಈಜಿ ನಿಂತು ಪೊತ್ತು ಮಣ್ಣೆತ್ತಿ ಎಲ್ಲರನು ಅಂಜಿಸಿ ಬೇಡಿ ಸುತ್ತಾಡಿ ಕಡಲ್‍ದಾಟಿ ರಂಜಿಸಿ ಮೋಹಿಸಿ ಬೋಧಿಸಿದ ವಿಪ್ರಸುತ ತ್ರಿಜಗದೀಶನೇ ಶ್ರೀಶ ಶರಣು ಮಾಂಪಾಹಿ 3 ವಿಶ್ವ ವಿಷ್ಣು ವಷಟ್ಕಾರ ಈಶಾವಾಸ್ಯವು ಸರ್ವ ಈ ಹದಿನಾಲ್ಕು ಭುವನಂಗಳು ಶ್ರೀವರನೇ ನೀ ಪರಮ ಮುಖ್ಯ ನಿಯಾಮಕನು ಸರ್ವದಾ ಅಚಿತ್ ವಸ್ತುಗಳಿಗೆ 4 ಜೀವರುಗಳ ಸತ್ತಾ ಪ್ರವೃತ್ತಿ ಪ್ರತೀತಿಗಳು ಸರ್ವೇಶ್ವರ ನಿನ್ನ ಅಧೀನವು ಸ್ವಾಮಿ ಸರ್ವಪಾಲಕತ್ವ ಗುಣ ನಿನ್ನದೇ ಆದುದರಿಂದ ಸರ್ವಜೀವರುಗಳ ಸ್ವರೂಪ ರಕ್ಷಿಸುತಿ 5 ಜೀವನ ಸ್ವರೂಪಾನುಸಾರದಿ ಮೂರು ವಿಧವು ಸರ್ವ ಹರಿಭಕ್ತರು ಮುಕ್ತಿಸುಖ ಯೋಗ್ಯರು ಸರ್ವ ಹರಿದ್ವೇಷಿಗಳು ತಮೋ ದುಃಖ ಯೋಗ್ಯರು ಸರ್ವದಾ ಸುಖದುಃಖ ಮಿಶ್ರ ಸಂಸಾರಿಗಳು 6 ಬೇವಿನ ಬೀಜಕ್ಕೆ ಸಕ್ಕರೆ ಲೇಪಿಸಲು ಬೇವು ದ್ರಾಕ್ಷಿಗೆ ಸಮ ಆಗುವುದು ಇಲ್ಲ ಬೇವು ಬೀಜವ ಸಕ್ಕರೆ ಪಾತ್ರೆಯಲಿ ಕಂಡ ಯಾವನೂ ಸ್ವೀಕರಿಸ ಎತ್ತಿ ಎಸೆವ 7 ತ್ರಯೀಪುರ ಬೇವುಗಳು ಸತ್ಯಧರ್ಮ ಸಕ್ಕರೆ - ಯೋಳೂ ಪೊಕ್ಕು ದ್ರಾಕ್ಷಿಯಾ ಪೋಲು ಇರೆ ಕಂಡು ಶ್ರೀಪ ನಿನ್ನ ಪಾಲಸಾಗರತಟ ಬಂದು ಶಂಭು ಶಿವ ಶಕ್ರಾದಿಗಳು ಪ್ರಾರ್ಥಿಸಿದರು 8 ಅದ್ರಿ ಚಾಪವನಿತ್ತಿ ತ್ರಿಪುರವ ಸುಟ್ಟ ಸನ್ನುತ ಇವಗೆ ನೀ ಪ್ರಭಂಜನ ಸಹ ಸಹಾಯ ಮಾಡಿದಿಯೋ 9 ಅಂದು ಭಸ್ಮವು ಆದ ತ್ರಿಪುರ ದೈತ್ಯರುಗಳು ಬಂದು ಪುನರ್‍ಜನಿಸಿ ವೈದಿಕ ಸದ್ಧರ್ಮದಲ್ಲಿ ಮುಕ್ತಿ ಯೋಗ್ಯರು ತಿಳಿವ ಬ್ರಹ್ಮ ವಿದ್ಯೆಯ ಕಲಿಯೆ ಸುರರು ನಿನ್ನಲ್ಲಿ ಪೇಳಿದರು 10 ಕಲಿಯುಗದಿ ಈ ತಮೋಯೋಗ್ಯ ದೈತ್ಯರಿಗೆ ಬೆಳೆಯುವುದು ಮೋಹವು ದ್ವೇಷ ಪರಿಪಾಕ ಮಿಳಿತವಾಗಲಿ ಕೂಡದು ಮುಕ್ತಿ ಯೋಗ್ಯರ ಸಹ ಒಳ್ಳೇ ಮುತ್ತಿನ ಸರದೋಳ್ ಮುಳ್ಳ ಬೀಜಗಳೇ ? 11 ಆ ತ್ರಿಪುರ ದೈತ್ಯರ ಪ್ರಮುಖನೂ ತಮೋಯೋಗ್ಯ ಧಾತ್ರಿಯಲಿ ಸೌದ್ಧೋದನ ಜಿನನೆಂದು ಪರಿವಾರ ಸಹ ಜನಿಸಿ ಮುಕ್ತಿಯೋಗ್ಯರ ತೆರದಿ ಚರಿಸಿದರು ಸ್ವಸ್ವ ಯೋಗ್ಯತೆ ಅತಿಕ್ರಮಿಸಿ 12 ದೇವವೃಂದದ ಪ್ರಾರ್ಥನೆ ಅರಿಕೆಯನು ಕೇಳಿ ದೇವವರೇಣ್ಯ ನೀ ಅಭಯವನಿತ್ತಿ ದಿವ್ಯ ಶಿಶುರೂಪವ ಪ್ರಕಟಿಸಿ ಆಗಲೇ ತ್ವರಿತ ಪೋದೆಯೋ ಆ ಜಿನನ ಮಂದಿರಕೆ 13 ಆಗಲೇ ಜಿನನಿಗೆ ಮಗು ಒಂದು ಹುಟ್ಟಿತ್ತು ಪೋಗಿ ನೀ ಆ ಮಗುವ ಮರೆಯಾಗಿಸಲು ಬೇಗನೆ ತೊಟ್ಟಿಲಲಿ ಮಲಗಿದಿಯೋ ವಿಭುವೇ ಜಗನ್ಮೋಹನ ಶಿಶುರೂಪ ಚಿನ್ಮಾತ್ರ 14 ಇದನ್ನರಿಯದೇ ಜಿನಾದಿಗಳು ನಿನ್ನನ್ನೇ ಜಾತವಾದ ತಮ್ಮ ಮಗುವೆಂದು ನೆನೆದು ಬಂಧು ಮಿತ್ರರ ಗುಂಪು ಸ್ತ್ರೀಯರೂ ಪುರುಷರೂ ಮುದದಿ ಕೊಂಡಾಡಿದರು ಪುತ್ರೋತ್ಸವವ 15 ಕದಳೀ ತೆಂಗು ಪೂಗಿ ಮಾವು ತೋರಣವು ವಾದ್ಯಂಗಳ ಅರ್ಭಟ ವೇದ ಘೋಷಗಳು ದೈತ್ಯ ವಿದ್ವಾಂಸರ ವಾದ ಮೀಮಾಂಸವು ಸುಧ್ವನಿಯಲಿ ಪಕಪಕಾ ಎಂದು ನಕ್ಕಿ ನೀನು 16 ಆಶ್ಚರ್ಯ ಏನಿದು ಹಸಿಮಗು ನಗುತಿದೆ ಹೇ ಚಿನ್ನ ನೀನ್ಯಾಕೆ ನಗುತಿ ಎಂದು ಕೇಳೆ ಬುದ್ಧ ನಿನ್ನ ಹೆಸರೆಂದು ಮೆಚ್ಚಲಾರೆನು ವೈದಿಕಕರ್ಮ ಎಂದಿ 17 ವೇದ ಅಪ್ರಾಮಣ್ಯ ಬೋಧಕವೆಂದು ತೋರುವ ಬೌದ್ಧಮತ ಪೇಳಿದಿ ದೈತ್ಯರ ಮೋಹಿಸಲು ಬೋಧಿಸಿದ ಮೋಹಕ ಮಾತು ಜಿನಾದಿಗಳು ಅದರಿಸದಿರೆ ಹರೇ ನೀ ಸುರರನ್ನ ಕರೆದಿ 18 ಪ್ರತ್ಯಗಾತ್ಮನೇ ಈಶ ಸರ್ವಪ್ರೇರಕ ನೀನು ವೇದೋಕ್ತ ಸುರರನ್ನ ಸ್ಮರಿಸಿದಾಕ್ಷಣವೇ ಬಂದರು ಆ ಜಿನಾದಿಗಳಿಗೆ ಕಾಣಿಸುತ ಯುದ್ದಕ್ಕೆ ನಿಂತರು ನೀನು ಪ್ರೇರಿಸಲು 19 ವೇದ ವಿರುದ್ಧ ಮಾತುಗಳಾಡುತ ನೀನು ವೇದ ಅಪ್ರಾಮಣ್ಯ ವಾದಿಸುತ್ತಿ ಸದೆದು ಹಾಕುವೆವು ಎಂದು ಕೂಗುತ್ತ ಆಯುಧಗಳ ಪ್ರಯೋಗಿಸಿದರು ವಿಡಂಬನದಿ 20 ಮೋದಮಯ ಶಿಶುರೂಪ ಅಚ್ಯುತನೇ ನೀನು ಆ ದೇವತೆಗಳು ಪ್ರಯೋಗಿಸಿದ ಆಯುಧ ಒಂದನ್ನೂ ಬಿಡದೇ ನುಂಗಿ ನಗುತ ಎಲ್ಲಿ ಮಧುಸೂಧನ ವಿಷ್ಣು ಬರಲೀ ಅವ ಎಂದಿ 21 ಲೀಲಾ ವಿನೋದದಿ ಮತ್ತೊಂದು ರೂಪದಿ ನೀ ಪೊಳೆವ ಚಕ್ರವ ಪಿಡಿದು ಬಂದು ನಿಲ್ಲೆ ಸೊಲ್ಲು ಹೆಚ್ಚಾಡದೆ ಚಕ್ರವ ಕಿತ್ತುಗೊಂಡು ಒಳ್ಳೆ ಆಸನವೆಂದು ಅದರಮೇಲ್ ಕುಳಿತಿ22 ಸ್ವತಂತ್ರ ಪರಮಾತ್ಮ ನೀ ಸ್ವಸ್ವಯೋಗ್ಯ ಸಾಧನ ಪ್ರವರ್ತಕ ದೈತ್ಯರ ಮೋಹಕ್ಕೆ ಈ ಲೀಲೆ ಸಾಧು ನೀ ಪೇಳಿದ ಶಾಸ್ತ್ರ ಎನ್ನುತ ನಮಿಸಿ ಸುರರು ತಮ್ಮ ತಮ್ಮ ಸ್ಥಳಕೆ 23 ಎಲ್ಲೂ ಕಂಡಿಲ್ಲವು ಇಂಥಾ ಮಹಾತ್ಮನ ಎಲ್ಲ ದೇವತೆಗಳು ಸೋತು ಓಡಿ ಹೋದರು ಬಲಿಷ್ಟ ತತ್ವವು ಶಿಶುರೂಪ ಬುದ್ಧನದೇ ಎಲ್ಲ ದೈತ್ಯರು ಹೀಗೆ ನಿಶ್ಚೈಯಿಸಿಕೊಂಡರು 24 ಅಭಾವ ಕ್ಷಣಿಕ ಶೂನ್ಯವಾದ ಮೋಹಿತರಾಗಿ ಸ್ವಭಾವ ಯೋಗ್ಯತೆಯಂತೆ ವೈದಿಕವ ತೊರೆದು ಬುದ್ಧ ಆ ಜಿನಾದಿ ದೈತ್ಯರ ಸಮೂಹವು ತಬ್ಬಿಕೊಂಡರು ತಮಸ್ ಸಾಧನ ಮತಿಯ 25 ಜಿನಾದಿ ದೈತ್ಯರು ಮೇಲ್ವಾರಿ ಅರ್ಥವ ಮನದಲ್ಲಿ ನಿಶ್ಚಯಿಸಿ ಮೋಹ ವಶರಾಗೇ ನಿನ್ನಲ್ಲಿ ಸ್ವರೂಪತಹ ಭಕ್ತಿಯುತ ಸುರರು ಧನ್ಯರಾದರು ಕೇಳಿ ಯಥಾರ್ಥ ತಿಳಕೊಂಡು 26 ಏನೆಂದು ವರ್ಣಿಪೆ ಪ್ರಶಾಂತ ವಿದ್ಯೆಯ ಸೊಬಗು ಆನಂದ ಸೌಭಾಗ್ಯ ಸಮೃದ್ಧಿ ಸಿದ್ಧಿಪುದು ಮನ ಪುಳಕವಾಗುತ್ತೆ ಜ್ಞಾನ ತೇಜಃಪುಂಜ ನಿನ್ನ ದಯದಿಂದ ಸುಖ ಅನುಭವಕೆ ಸುಲಭ 27 ಅದೋಷನು ನೀನು ದೋಷ ಅಭಾವವಾನ್ ಸದಾ ನೀನು ಭಿನ್ನನು ಜಡ ಜೀವರಿಂದ ಮೋದಮಯ ಅನಂತಕಲ್ಯಾಣಗುಣಪೂರ್ಣ ನೀ ಆದುದರಿಂ ಅ ಎಂದು ನೀನೇವೇ ಜÉ್ಞೀಯ 28 ಭವ್ಯವಾಗಿರುವುದು 'ಅ' ಯಿಂದ ಜಗತ್ತು ಭವ್ಯ ಎಂದರೆ ಉತ್ಪಾದ್ಯ ಎಂಬುವುದು ಅ ಎಂಬ ನಿನ್ನಿಂದ ಉತ್ಪಾದ್ಯ ಜಗತ್ತನ್ನ ಅಭಾವವೆಂದಿ ವಿಭುವೇ ಸತ್ಯಜ್ಞಾನ 29 ಕಾಲ ಅವಯವ ಕ್ಷಣಕ್ಕೆ ಕ್ಷೋಣಿಯು ಸ್ಥಿರವಾಗಿ ಇರುತಿದೆ ಅದರೂ ಕ್ಷಣ ಸ್ಥಾಯಿಯಾಗಿರುವ ಕ್ಷಣದ ಸಂ¨ಂಧದಿ ಜಗತ್ ಕ್ಷಣಿಕವು ಎಂದು ನೀ ಪೇಳಿದಿಯೋ ಧೀರ 30 ಶಂ ಎಂದರೆ ಸುಖವು ಉ ಉತ್ತಮತ್ವವು ಶಂ ಸಹ ಉ ಸೇರಿ ಶೂ ಆಯಿತು ಶೂ ಎಂಬ ಸುಖರೂಪ ಅನುತ್ತಮೋತ್ತಮ ನೀನೇ ಶೂ ವಾಚ್ಯ ನೀನೇವೇ ಅನ್ಯರು ಅಲ್ಲ 31 ಶೂನ್ಯ ಎಂಬುವರು ಜ್ಞಾನವಂತರು ಹೀಗೆ ವಿಗ್ರಹ ಮಾಡುವರು ಆನಂದಮಯನಾದ ಅನುತ್ತಮೋತ್ತಮ ನಿನ್ನ ಅನುಗ್ರಹದಿಂದ ಜಗತ್ ರಕ್ಷಣೆ ನಿಯಮನವು 32 ಜ್ಞಾನಪೂರಿತ ಅರ್ಥ ಪೇಳಿದ ನಿನಗೆ ನಮೋ ಅನ್ಯ ವಸ್ತುಗಳಿಗಿಂತ ಅತ್ಯಂತ ಪ್ರಿಯತಮನೇ ಜನ್ಮಾದಿಕರ್ತನೇ ಪೂಷ ಪೋಷಕನೇ ನಮಸ್ತೇ 33 ದೇವವೃಂದಕ್ಕೆ ನೀ ಪ್ರಶಾಂತವಿದ್ಯೆಯ ಪೇಳಿ ಅವರುಗಳ ಸಹ ನಿಂತು ಮತ್ತೊಂದು ರೂಪದಿಂದ ದಿವಪರ ಸ್ವಸ್ಥಾನ ಸೇರಿದಿಯೋ ಸುಖಮಯನೇ ಭಾವಕರು ಸ್ಮರಿಸೆ ಸರ್ವವಿಧದಲಿ ಒಲಿವಿ 34 ಬುದ್ಧಾವತಾರ ಪರಮಾತ್ಮ ಚಿದಾನಂದಮಯ ಶ್ರೀಶ ದೇವತಾ ವೃಂದಕ್ಕೆ ಸುಬೋಧ ಮಾಡಿದ್ದು ಸಾಕಲ್ಯ ತಿಳಿಯಲಸಖ್ಯ ಶ್ರೀವೇದವ್ಯಾಸ ಶ್ರೀಶ ಶ್ರೀಮಧ್ವ ಆನಂದತೀರ್ಥರ ಅನುಗ್ರಹದಿಂದಲೇ ಯಥಾಯೋಗ್ಯ ತಿಳುವಳಿಕೆ ಉಂಟಾಗುವುದು 35 ವೇದಾರ್ಥ ನಿರ್ಣಾಯಕ ಸೂತ್ರಗಳ ಮಾಡಿ ಇತಿಹಾಸ ಪುರಾಣಾದಿಗಳ ನಮಗಿತ್ತ ವೇದವ್ಯಾಸ ಸುಹೃತ್ ಬುದ್ಧನು ನೀನೇವೇ ಸತ್ಯಧರ್ಮರಿಗೆ ಸೌಭಾಗ್ಯ ಸುಖದಾತ 36 ಜ್ಞಾನಭಕ್ತ ಆಯುರಾರೋಗ್ಯ ಐಶ್ವರ್ಯ ಶ್ರೀಮಧ್ವ ಹನುಮಸ್ಥ ವನಜಭವ ಪಿತ ಶ್ರೀ ಪ್ರಸನ್ನ ಶ್ರೀನಿವಾಸ ನಮೋ ಅನಿಮಿತ್ತ ಬಂಧು ಹರೇ ಕೃಷ್ಣ ರಾಮ ವೇದವ್ಯಾಸ ಬುದ್ಧಾವತಾರ ಮೋದಮಯ ಕರುಣಾಳು 37 -ಇತಿ ಶ್ರೀ ಬುಧ್ಧ ಪ್ರಾದುರ್ಭಾವ ಸಂಪೂರ್ಣಂ -
--------------
ಪ್ರಸನ್ನ ಶ್ರೀನಿವಾಸದಾಸರು