ಒಟ್ಟು 509 ಕಡೆಗಳಲ್ಲಿ , 80 ದಾಸರು , 413 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಎಂತು ಶೋಭಿಪ ನೋಡೀ - ಶ್ರೀವ್ಯಾಸ ವಿಠಲಸಂಪುಟವ ಮನೆ ಮಾಡೀ - ವಿಶ್ವಜ್ಞ ತೀರ್ಥರಶಾಂತ ಸೇವೆಯ ಗೂಡೀ - ಮೆರೆಯುತಿಹ ನೋಡೀ ಪ ಕಂತು ಸಿರಿ | ಕಾಂತ ವಿಠಲ ಶಾಂತಮೂರುತಿಸಂತ ಯತಿವರರಂತರಂಗದಿ | ಚಿಂತಿಸುತಲೇಕಾಂತ ಪೂಜೆಗೆ ಅ.ಪ. ಉತ್ತಮ ಮತಿ ಸುದತೇರು - ಛತ್ರಿ ಚಾಮರಗಳಎತ್ತಿ ಬೀಸುತಲಿಹರೋ ||ದ್ರುತ - ಕೃತಿವಾಸನ ಸಖನ ಪರಮ - ಸು | ಹೃತ್ತಮೋತ್ತಮ ಚಿತ್ಸುಖಪ್ರದಚಿತ್ತವಿಸು ಚಿತ್ತಾಖ್ಯ ಪೀಠಿಕೆ | ಸತ್ಯಕಾಮ ಶರಣ್ಯ ಮೂರುತಿ 1 ಕಾಯ ಭವಪಿತ ತೋಯಜಾಕ್ಷನೆ | ದಾಯ ನಿನ್ನದು ಎನ್ನ ಗತಿಗೇಪ್ರೇರ್ಯ ಪ್ರೇರಕ ಶ್ರೀಗುರು | ಗೋವಿಂದ ವಿಠಲನೆ ಕಾಯೋ ಬೇಗ 2
--------------
ಗುರುಗೋವಿಂದವಿಠಲರು
ಎಂಥ ಸೂಕ್ಷ್ಮವ ನೋಡಿರಿವನ ನಮ್ಮ ಕಾಂತೆ ದ್ರೌಪತಿದೇವಿಗೆ ವರಹೀನ ಪ. ಸಣ್ಣ ಕೂಸಿದ್ದಾಗ ಇವನು ಸೂರ್ಯಗೆ ಹಣ್ಣೆಂದುಹಾರಿದ ಗಗನಕ್ಕೆ ತಾನು ಉಡ್ಡೀನ ಗೈದುನೀರಧಿಯ ದಾಟಿದನುಇವನ ಅಂಗದ ಕೋಮಲ ಬಣ್ಣ ವರ್ಣಿಸಲೇನು 1 ಗಂಧಮಾದನ ಗಿರಿ ತಂದು ನೋಡಿ ಗಿರಿ ನಿಂದಲ್ಲೆ ಹಿಂದಕ್ಕೆ ಒಗೆದ ಈಡ್ಯಾಡಿಒಂದೊಂದು ಬೆಡಗವ ನೋಡಿನಮ್ಮ ಇಂದಿರೇಶನು ನಕ್ಕ ಕೌತುಕ ಮಾಡಿ 2 ಹುಟ್ಟಿದಾಗ ಭೀಮ ಒಂದಿಷ್ಟು ಎತ್ತಿಪಟ್ಟನೆ ಬಿದ್ದು ಕೌತುಕ ಮಾಡಿದನೆಷ್ಟುಬೆಟ್ಟಗಳ ಒಡೆದು ಹಿಟ್ಟೆಟ್ಟುಇವನ ಅಂಗದ ಕೋಮಲ ವರ್ಣಿಸಲೆಷ್ಟು3 ಭಿಕ್ಷೆ ಬೇಡಿದನಂತೆ ಕಂಡು ತಾನರಿಯಳು ಕಾಂತೆ ಇಂಥ ದಿಂಡ ಪುರುಷನ ಬೆರೆದಳು ಕಾಂತೆ4 ಘನ್ನಗರಳ ಕುಡಿದನಂತೆ ಅದು ತನ್ನ ದೇಹವ ತಪಿಸುತಲಿದ್ದವರಂತೆಸನ್ಯಾಸ ಇವಗ್ಯಾಕೆ ಕಾಂತೆನಮ್ಮ ಚೆನ್ನ ರಾಮೇಶ ನೋಡಿನಕ್ಕನಂತೆ 5
--------------
ಗಲಗಲಿಅವ್ವನವರು
ಎಂಥಾ ಮೋಹನನೇ ನೋಡಮ್ಮಯ್ಯಾ| ಸಂತತ ತೃಪ್ತನು ಬಾಲಕನಾದಾ|ಅ- ನಂತ ಚರಿತೆಯಾ ದೋರುವ ಕೃಷ್ಣ ಪ ಮೂಡಣ ದೇಶಕೆ ಪಡರಲು ಗೋಪಿಯು| ತಡೆಯದೆ ದುಮುಧುಮು ಧುಮುಕೆನುತ| ಕಡೆಯಲು ಧುಡು ಧುಡು ಧುಡುನಡೆಯುತ ಬಂದು| ಪಿಡಿದೆನ್ನ ಸೆರಗ ಬೆಣ್ಣೆ ಬೇಡುವಾ ಕೃಷ್ಣ 1 ಸಮಗೆಳೆಯರ ಸಂಗಡ ಧ್ವನಿವೇಣಿಯ| ಉಮಟೆಸುತಲಿ ಧಿಗಿಧಿಗಿಲೆನುತಾ| ಧಿಮಿಕಿಟ ಧಿರಕಿಟ ತಿರುಕಿಟವೆಂಬೋ| ಕ್ರಮದಿ ವಾದ್ಯವ ಬಾರಿಸುವಾ ಕೃಷ್ಣ 2 ಗುರು ಮಹೀಪತಿ ಪ್ರಭುವಿನ ಪದರಜ| ದೊರಕದು ಅಜಭವ ಮುಖ್ಯರಿಗೆ! ಹರುಷದಿ ತೋಳ್‍ದೊಡೆ ಮೇಲೆ ಓಡಾಡುವಾ| ಧರೆಯೊಳು ಯಶೋಧೆ ಸುಕೃತವೆಂತೋ3
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ಎಂದಿಗೆ ದಯಬಾಹುದೋ ರಾಮಾ ಎಂದಿಗೆ ದಯಬಾಹುದೊ ಎನ್ನಯ ಮೇಲೆ ಮಂದರಧರ ಗೋವಿಂದ ಮುಕುಂದ ಪ ಪಾದ ಸ್ಮರಿಸುತಲಿರುವನ ಕಷ್ಟವ ಕಳೆದು ಮನೋಭಿಷ್ಟವ ತೀರಿಸು 1 ಕಂತುಜನಕ ಶ್ರೀಕಾಂತಾ ಭಕ್ತನ ಚಿಂತಿಯ ಬಿಡಿಸಿ ಸಂತತ ಪಾಲಿಸಲು 2 ವರಹೆನ್ನೆಪುರ ನರಹರಿ ನಿನ್ನಯ ಮೊರೆ ಹೊಕ್ಕವನ ಪೊರೆಯಲಿ ಹರುಷದಲಿ 3
--------------
ಹೆನ್ನೆರಂಗದಾಸರು
ಎಂದೆಂದು ಎನಗೆ ನೀನೆ ಅಖಿಳದೊಳು ಎಂದೆಂದು ಎನಗೆ ನೀನೆ ಅಂದಿಗಿಂದಿಗೆ ಎನ್ನ ತಂದೆ ತಾಯಿಯು ನೀನೆ ಬಂಧು ಬಳಗವು ನೀಯೆನಗೆ ಹರಿಯೆ ಧ್ರುವ ಸುಖಸೌಖ್ಯದಲಿ ಸದಾನಂದ ಘನ ಬೀರುತಿಹ್ಯ ಭಗುತ ಜನರಿಗಹುದು ನೀ ಪ್ರೀಯ ಸಕಲದೇವಾದಿಗಳ ಕೈಯಲೊಂದಿಸಿಕೊಂಬ ಮಕುಟ ಮಣಿಯಹುದೊ ನೀ ಎನ್ನಯ್ಯ ಲೋಕಾಧಿಲೋಕಪಾಲನೆಂದು ಶ್ರುತಿಸ್ಮøತಿ ಅಖಿಳ ಭುವನದಲೆನ್ನ ಸಾಕಿ ಸಲಹುವ ಸ್ವಾಮಿ 1 ಏಕೋದೇವನೆ ನೀನದ್ವಿತೀಯ ಶ್ರೇಯಧೇನುವಾಗಿ ಸಾರಸಗರವುತಿಹ್ಯ ಸುಖ ದಾಯಕಹುದಯ್ಯ ನೀ ಸಾಕ್ಷಾತ ದಯಕರುಣದಿಂದಭಯಕರ ನಿತ್ಯಸಂಗಪೂರ್ಣ ತೋಯಜಾಕ್ಷ ನೀ ಪೂರ್ಣಪರಮ ಭಕ್ತರ ಪ್ರಾಣ ನಾಯಕನೆ ನೀನೆ ಪ್ರಖ್ಯಾತ ಕ್ಷಯರಹಿತನೆಂದು ಜಯವೆನಿಸಿಕೊಳುತಿಹ್ಯ ದಯಭರಿತನಹುದುಯ್ಯ ಸದೋದಿತ 2 ನೀನೆ ಗತಿಯೆಂದು ಧರೆಯೊಳು ಕೊಂಡಾಡುವ ನೆನಹುತಿಹ್ಯ ನÀಹುದುಯ್ಯ ಬಾಲಕನು ನಾ ನಿನ್ನ ಫನದೊಲವಿನಿಂದ ಪಾವನಗೈಸುತಲಿಹ್ಯ ದೀನ ದಯಾಳು ನೀನೆ ಎನ್ನ ಅನುದಿನದಲಾಧಾರಿ ಮುನಿಜನರ ಸಹಕಾರಿ ನೀನಹುದಯ್ಯ ಜಗಜ್ಜೀವನ ಮನೋಹರನ ಮಾಡುತಿಹ್ಯ ದಾಸ ಮಹಿಪತಿಸ್ವಾಮಿಭಾನುಕೋಟಿಯು ನೀನು ಪ್ರಸನ್ನ 3
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ಎದ್ದಳೀಗಿದಕೋ ಶ್ರೀರಮಣಿ || ಎದ್ದಳೀಗಿದಕೋ ಪ ಮುದ್ದು ಶ್ರೀ ಹರಿಯಾ ತೋಳ ತೆಕ್ಕೆಯಾನುಸಳಿ ಶುದ್ಧ ರಾತ್ರಿಲಿ ಹರಿ ರತಿಯೊಳು ಮಲಗಿ ಅ.ಪ. ಸರಸಿಜ ಸಖನ ಮುಂಬೆಳಗವ ಹರಿಯಲು | ಭರದಲಿ ಹಕ್ಕಿಯು ಕಲಕಲವೆನಲು 1 ನಾರದ ತುಂಬುರ ಮಾಡುವ ಪ್ರಾತ:| ಸ್ಮರಣೆಯ ಗಾಯನ ಧ್ವನಿಯನು ಕೇಳಿ 2 ಕರತಳದಲಿಯವಿಗಳನು - ವರೆಸುತಲಿ | ತೆರೆವುತ ಮುಚ್ಚುತ ಅರೆಗಣ್ಣ ನೋಟದಿ 3 ಬಾಯೊಳಗಿನ ತಂಬುಲವ ನುಗುಳುತ | ಅಧರ ವಕೆಂಪವ ನಡಗಿಸುತ 4 ಕಿರಿಬೆಮರವ ಕೊನೆ ಯುಗುರದಿ ಹಾರಿಸಿ | ಕುರುಳು ಗೂದಲು ಬೈತಲು ನೀಟಾಮಾಡುವ5 ಸಡಲಿದ ಅಲರ ಮುಡಿಯಾತಿದ್ದಿ ಬಿಗಿವುತಾ | ಒಡನೆ ಕೊರಳಾ ಭರಣವ ತಿರುಹುತಲಿ 6 ಎಡಬಲ ಕೊಲದ ವಡ್ಯಾಣ ಸರಿಸಿ ಉಟ್ಟಾ | ಉಡಿಗಿಯಾ ನಿರಯಾ ಮುಂದಕ sಸಾಂವರಿಸುತ7 ಪ್ರಕಟದಿದೋರ್ವ ಕುಚದ ನಖಕ್ಷತಗಳ | ಯುಕುತಿಲಿ ಅಡಗಿಸಿ ಪುಟವನು ಬಿಗಿವುತ 8 ತನ್ನನಂಬಿದ ಬಾಲರ ಹೊರಿಯಲುದಯ | ಕಮಠ ನ್ಯಾಯದಲಿ9 ಈರೇಳು ಜಗದ ಜೀವನ ಪಡೆದ ಜನನಿ | ಗುರುಮಹಿ ಪತಿಸುತ ಪ್ರಭುವಿನ ಅರಸಿ10
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ಎಲೆ ಸಖಿಯೆ ಪೋಗು ವಿಠಲನ ಬಳಿಗೆಬೇಗವನ ತಾರೆ ಎನ್ನ ಮನೆಗೆಪ. ಚಂದ್ರ ಉದಿಸುತಲಿ ಬಂದ ರಂಜಿಸುತರ-ವಿಂದಬಾಣ ನಡೆತಂದಮಂದಮಾರುತ ಮುಂದೆ ನಿಂದ ಅವ ಕುಸುಮ-ಗಂಧದಿಂದಲೆನ್ನ ಕೊಂದ1 ಕೀರ ನುಡಿಯುತಿದೆ ಧೀರ ಕೋಕಿಲಿಯಸ್ವರ ಕರ್ಣಕಠೋರಮಾರ ಬೇಗ ಹರಿಬಾರದಿರೆ ಕೆಳದಿಕ್ರೂರ ಎನ್ನ ಕೊಲ್ಲದಿರ 2 ಜೀಯ ಸುಜನರ ಸಹಾಯ ನಿಗಮಕುಲಗೇಯ ನಿರ್ಧೂತ ಹೇಯಪ್ರಿಯ ಹಯವದನರಾಯ ಸಖಿ ಎನ್ನಕಾಯಲಿನ್ನೇನು ಉಪಾಯ 3
--------------
ವಾದಿರಾಜ
ಎಷ್ಟು ಭಜಿಸಿದರು ಸಾಕಷ್ಟು ನನಗಾಗದೊ ಪ ಮೂರ್ತಿ ಅಂಗಜಪಿತ ಮೋಹನಾಂಗಚೆಂಗೊಳಲನು ನುಡಿಸುತಲಿರುವಭಂಗಿಯಲಿ ನಿನ್ನ ರೂಪಕಂಗಳಿಂದ ನೋಡಿ ನೋಡುತ 1 ಪೂರ್ಣ ಗುಣ ನಿರ್ದೋಷನೆಸುವರ್ಣಗರ್ಭ ನಿನ್ನ ಲೀಲೆವರ್ಣಿಸುತಿಹ ಕೀರ್ತನೆಯನುಕರ್ಣದಿಂದ ಕೇಳಿ ಕೇಳುತ 2 ನಿತ್ಯ ಮನಕೆ ಮುದವತಪ್ಪ ನಿನ್ನ ನಾಮ ಸುಧೆಯಚಪ್ಪರಿಸುತ ನಾಲಗೆಯಲಿಒಪ್ಪಿ ಸವಿದು ಸವಿಯುತಿರಲು 3 ಅಮಮ ನಿನ್ನ ತನುವಿನಿಂದಘಮಘಮಿಸುತ ಬರುವ ಗಂಧಅಮಿತ ಮುದವ ಮೂಗಿಗಿಡಲುರಮಿಸಿ ಮೂಸಿ ನೋಡುತಿರಲು 4 ಪಾವನತರ ನಿನ್ನಡಿಯಲಿಸೇವೆಗೊಳ್ಳು ನಿರುತದಲಿಕಾವುದಯ್ಯ ಶ್ರೀ ಗದುಗಿನದೇವ ವೀರನಾರಯಣ 5
--------------
ವೀರನಾರಾಯಣ
ಏಕೆ ಮರೆದಿದ್ದೆನಯ್ಯಾ ಎನ್ನೊಳು ನಾ ಗೋಪಾಲಶ್ರೀಕಾಂತ ನಿನ್ನ ಪಾದದ ಚಿಂತೆಯ ಬಿಟ್ಟಜ್ಞನಾಗಿ ಪಕಾಯವೆ ಸತ್ಯವಿದೆಂದು ಕಾಣದೆ ನಾನಿಲ್ಲಿ ಬಂದುಮಾಯೆಗೊಳಗಾಗಿ ನಿಂದು ಮತ್ತರ ಸಂಗದಿನೊಂದುಜಾಯೆ ಸುತರ್ಗತಿಯೆಂದು ಧ್ಯಾನಿಸಿ ದುಃಖದಿನೊಂದುಬಾಯ ಬಡುಕರೊಳ್ನಿಂದು ಬನ್ನಬಟ್ಟುಳಿಸೆಂದು 1ಆಶೆಗಳಿಗೊಳಗಾಗಿ ಆನಂದಮಾರ್ಗವ ನೀಗಿವಾಸನೆಗಳಿಂದ ಪೋಗಿ ವಾದಿಸುತಲಿ ಚೆನ್ನಾಗಿಮೋಸಹೋಗಿ ಮುಖಬಾಗಿ ಘಾಸಿಯಾಗಿ ಗುಣಪೋಗಿಕಾಸು ವೀಸಾ ಧಾನ್ಯಕಾಗಿ ದಾಸನಾಗಿ ಪರರಿಗೆ 2ಎಲ್ಲರೊಳುವಾದಗಳವಾಡಿ ಬಲ್ಲವನಂದದಿ ಕಾಡಿಖುಲ್ಲರಾ ಮಾರ್ಗವ ಕೂಡಿ ಕೂಳಿಲ್ಲದಿಲ್ಲಿಗೆ ಬಾಡಿತಲ್ಲಣದೊಳಗೋಲಾಡಿ ತಬ್ಬಿಬ್ಬೊ ಕರ್ಮವ ಮಾಡಿಕಲ್ಲೆದೆಯನನೆನ್ನನು ಕಾಯಬೇಕು ಗೋಪಾಲಾರ್ಯ 3
--------------
ಗೋಪಾಲಾರ್ಯರು
ಏನಿದು ಬರಿ ಮಾಯೆ ತೋರ್ಪುದಿದೆಲ್ಲವು ಪುಸಿಮಾಯೆ ಮಾನಿನಿ ಮನೆಮನೆ ವಾರ್ತೆ ಮಕ್ಕಳು ತಾನಿದು ಕನಸಿನ ಬಾಳ್ವೆ ನಿದಾನ ಪ ಕೇರೆಯ ನುಂಗಿ ಓತಿ ಕೊಸರುತಿರಲು ತೆರೆಯಿತೆನಗೆ ಕಣ್ಣು ತೆರೆಯಕ್ಷುಧೆಗೇನು ಕಾಣೆನುಗತಿಯ 1 ಯಾವಾವ ತನು ವಿಡಿದು ಬರುವುದೋ ಆವಾವ ಠಾವಿನಲಿ ಜೀವ ಜೀವವ ತಿಂದು ಜೀವಿಸಿಕೊಂಡು ಸಾಯುತ ಜನಿಸುತಲಿರುವುದು ಪ್ರಾಣಿ 2 ತಿಳಿಯಲೊಂದಕೆ ಒಂದು ತಿನಿಸಿಗೆ ಬೆಲೆ ಮಾಡಿದವ ಬೇರೆ ಬಳಗು ಹೊರಗು ತಾನೆ ಬೆಳಗುತಲಿರುವನು ಚಲನ ಭವನ ಕೋಣೆ ಲಕ್ಷ್ಮೀರಮಣ 3
--------------
ಕವಿ ಪರಮದೇವದಾಸರು
ಏನು ಧನ್ಯರೋ ಜಗದಿ ಎಂಥ ಮಾನ್ಯರೋ | ಮೌನಿ ಶ್ರಿ ರಘುಪ್ರೇಮತೀರ್ಥರು ಪ ಕಲಿಯುಗದಿ ಕÀ್ರತುಗೈದ ಇಳಿಯ ಜನಕ ಸಾಧ್ಯವೆಂದು ಕುಲಿಶಪಾಣಿಯಂತೆ ತೋರ್ಪರು 1 ಧೂರ್ತರಿಂದ ದೂರವಿದ್ದು | ಸ್ವಾರ್ಥರಹಿತರಾಗಿ | ಸಕಲ ತೀರ್ಥಕ್ಷೇತ್ರ ಚರಿಸಿ ಜನ್ಮ ಸಾರ್ಥಕೆನಿಸಿದ ಯತಿಯು 2 ಸದನ ತೃಣಸಮಾನವೆನಿಸಿ ಮುದದಿ | ವಿನಯಶೀಲ ದ್ವಿಜರಿಗಿತ್ತು ಮುನಿಯೆನಿಸಿ ವಿರುಕ್ತರು 3 ಚತುರಾಶ್ರಮ ವ್ರತದಿ ನೇಮ ಸತತಾ ಚರಿಸುತಲಿ | ಶಿಷ್ಯರಾದಿಗೆ ವ್ರತಬೋಧವೃಷ್ಟಿ ಹಿತದಿಗರೆದು ಪೊರೆವ ಯತಿಯು 4 ಶ್ರೀಮಧ್ವಸುಮತವಾರಿಧಿ ಸೋಮನೆಂದೆನಿಸಿ | ಜಿತ ಕಾಮರಾಗಿ ಕಠಿಣ ತಪದಿ | ಶ್ರೀ | ಶಾಮಸುಂದರನ ವಲಿಸಿದವರು 5
--------------
ಶಾಮಸುಂದರ ವಿಠಲ
ಏನು ಭಾಗ್ಯವೋ ತಾಯೆ ಲಕುಮಿ ನಿನ್ನದೂ ಸಾನು ರಾಗದಿ ಹರಿಯ ಸೇವಿಸುತಲಿರುವಿ ಪ. ಕಂಕಣವು ನೀನಾಗಿ ಹರಿಗೆ ಭುಜಕೀರ್ತಿ ನೀನಾಗಿ ಶಂಕುಚಕ್ರ ಗದಾ ಪದ್ಮ ನೀನಾಗಿ ಶಂಕೆ ಇಲ್ಲದೆ ಕಿಂಕರಳು ನೀನಾಗಿ ಹರಿಸೇವೆಗೆ ಪಂಕಜಾನಾಭನ್ನ ಸೇವಿಸುತಲಿರುವಿ 1 ಅಕ್ಷರಳು ನೀನಾಗಿ ಹರಿಯ ವಕ್ಷಸ್ಥಳವನೇ ಸೇರಿ ಈ ಜುತ ಹರಿಯ ಪರಮ ಸಂತೋಷದಿಂದ ಲಕ್ಷ ಕೋಟಿ ಕೋಟಿ ಬ್ರಹ್ಮಾಂಡರೂಪದಲ್ಲಿರುವ ಪಕ್ಷಿವಾಹನನ ನೋಡಿ ವೆರಗಾಗುತಲಿರುವಿ 2 ರಾಮನಾ ಸತಿಯಾಗಿ ಪ್ರೇಮದಿಂದಲಿ ಈಗ ಕಾಮನಯ್ಯನ ಕಾರುಣ್ಯದಿಂದ ರಮಾವಲ್ಲಭವಿಠಲನ ತೊಡೆಯ ಮೇಲೆ ಕುಳಿತು ಸ್ವಾಮಿಗೆ ಸತಿಯಾಗಿ ಸೇವಿಸುತಲಿರುವಿ 3
--------------
ಸರಸಾಬಾಯಿ
ಏನೇನಿಲ್ಲದ ಧನಹೀನನಿಗೆ ಹರಿ ನಾಮವೆ ಭಾಗ್ಯಕರ ಸಾಧಿಸು ಮುಕ್ತೀಕರ ಪ ನೊಂದನು ಮಾಡದಿರೆ ಇಂದಿನ ಜನ್ಮದೊಳಗೆ ದಾರಿದ್ರ್ಯವು ಬಂದು ಪೀಡಿಸುತಲಿದೆ ಮುಂದೆ ಸಾಧಿಸಿ ಕೊಂಬೆನೆಂದರೆ ಕೈಯೊಳೊಂದರೆ ಕಾಸಿಲ್ಲವು ಪಾಲಿಸೋ ಹರಿಯೇ 1 ಕುಟ್ಟಿ ಕೊಂದರೆ ಪಣೆಯ ನಿನ್ನಿಷ್ಟವಮನ ದಣಿಯ ಪಡೆದಷ್ಟು ಉಣ್ಣಬೇಕಲ್ಲದೆ ಪೂಜಿಸೋ ಹರಿಯೆ 2 ಮಾತ್ರವು ಸುಖವಿಲ್ಲ ಜಗದೇಕ ವಂದ್ಯನ ನೆನೆಸು ಶ್ರೀ ಲಕ್ಷ್ಮೀಶನ ಭಜಿಸಿದರೆ ಬೇಕಾದನಿತುವನಿತ್ತು ಕಡೆಗೆ ತನ್ನ ಲೋಕವ ಪಾಲಿಪನು 3
--------------
ಕವಿ ಪರಮದೇವದಾಸರು
ಏಸುಬಾರಿ ಬೇಡಿದರೆ ಹೇಗಾಯಿತು ಹರೇ ವಾಸುದೇವನೆ ನಿನ್ನ ಧ್ಯಾನಕೆ ಸರಿಬಾರದಿರೆ ಪ ಪರಿ ಘಾಸಿಗೊಳಗಾಗಿ ಬಹು ಕ್ಲೇಶದಿಂದಲಿ ನಿನ್ನ ಆಶಿಸಿದವನಾ ಭೂಸುರ ಧೊರಿಯೆ ಶ್ರೀನಿವಾಸ ವೇಣುಗೋಪಾಲ ಕೂಸಿನಂದದಿ ಎತ್ತಿ ಪೋಷಿಸುವುದು ನಿನಗೆ ಹುಟ್ಟದೊ 1 ಸಂಸಾರ ವೆಂಬಂಥ ಶರಧಿಯೊಳು ಮುಳುಗಿ ಬಹು ಹಿಂಸೆ ಬಡುತಲಿ ಬಹಳ ಹೀನನಾಗಿ ಕಂಸಮರ್ದನನಾದ ಘನಮಹಿಮಗೋವಿಂದ ಸಂಶಯವಿಲ್ಲದೆ ನಿಮ್ಮ ಸ್ಮರಿಸುತಲಿ ಅನುದಿನವೂ 2 ಅಘಹರನೆ ನಗಧರನೆ ಆದಿ ಪರಾಕ್ರಮನೆ ನಿಗಮಗೋಚರನಾದ ಘನ 'ಹೊನ್ನ ವಿಠ್ಠಲ 'ನೆ ಜಗತ್ಕರ್ತನೆ ನಿನ್ನ ಚಿಂತನೆಯೆ ಅನುದಿನವೂ ಕರುಣಹುಟ್ಟದೇನು 3
--------------
ಹೆನ್ನೆರಂಗದಾಸರು
ಏಳಯ್ಯ ಶ್ರೀ ಲಕ್ಷ್ಮೀರಮಣ ಸುರನÀುತ ಚರಣ ಏಳು ಶ್ರೀ ನೀಲಕಂಠನ ಮಿತ್ರ ಸುಚರಿತ್ರ ಏಳು ಶ್ರೀ ಭಾಗೀರಥೀ ಪಿತನೆ ಮತಿಯುತನೆ ಏಳು ಶ್ರೀ ಕೃಷ್ಣರಾಯ ಸ್ವಾಮಿ ಏಳಯ್ಯ ಬೆಳಗಾಯಿತು ಪ ನಸುಗೆಂಪಾಗಿ ತಾರಕಿಗಳಡುಗುತಿದೆ ಬೊಂಪು ಹರಿದೋಡುತಿದೆಕೋ ಸೊಂಪಡಗುತಿದೆ ಕುಮುದ ಕಮಲವರಳುತಿದೆ ನಾಗ ಸಂಪಿಗೆಯ ಬನದಿ ಸ್ವರ ಗೈಯುತಿದೆ ಮರಿದುಂಬಿ ಸಂಪತ್ತು ಬಡವಗೆ ಬರುವಂತೆ ರವಿ ಬಿಂಬ ಸೊಂಪಿ ನಿಂದೆಸೆಯುತಿದೆಕೋ ||ಸ್ವಾಮಿ|| 1 ಹಲವುಮೃಗ ಜಾತಿಗಳು ಹಳುವನಡ ಹಾಯುತಿವೆ ಫಲ ಪುಷ್ಪಚಯವು ಪಲ್ಲವಿಸಿ ಪಸರಿಸುತಲಿವೆ ಗಿಳಿ ವಿಂಡು ನಲಿಯುತಿದೆ ನವಿಲು ಜೇಂಕರಿಸುತಿವೆ ಹೊಲ ಮನೆಗಳೆಲ್ಲ ಹಸನಾಗಿ ಕಾಣಿಸುತಲಿವೆ ಸುಳಿಗಾಳಿ ಸುಳಿಯುತಿದೆ ಜಲಜಾಕ್ಷನುಪ್ಪವಡಿಸಾ ||ಸ್ವಾಮಿ|| 2 ಹಕ್ಕಿಗಳು ಹಾರುತಿದೆ ಕುಕ್ಕುಟವು ಕೂಗುತಿದೆ ನಕ್ಷತ್ರ ಪತಿಯ ಪ್ರಭೆ ಮಾಸುತಿದೆ ಸುರಭಿ ಬಲು ರಕ್ಕಸಾಂತರನೆವಳು ಮನೆಮನೆ ಬಿಡದೆ ಅಮ್ಮಿಯನು ಹುಡುಕುತಿವೆ ಚೊಕ್ಕ ಬೆಳಗಾಯಿತಿದೆ ಕೋ ||ಕೃಷ್ಣ || 3 ಪತಿವ್ರತೆಯರೆದ್ದು ಪುರುಷನ ಚರಣಕ್ಕೆರಗಿ ಚಮ ತ್ಕøತಿಯಿಂದ ಮುಖ ಮಜ್ಜನವಮಾಡಿ ಪಣೆಗಿಟ್ಟು ದಧಿ ಮಥಕನುವಾಗಿ ಕುಳಿತು ಅತಿಶಯ ದೊಳಗೆಲ್ಲ ಮನೆವಾರ್ತೆಯನು ಮುಗಿಸಿ ನಿಜ ಮತ ವಿಡದು ಭಕ್ತಿಯಲಿ ಗಿಂಡಿಲುದಕವ ತುಂಬಿ ನೀನು ಉಪ್ಪವಡಿಸ 4 ಮದ್ದು ಮಂತ್ರವು ಸಿದ್ದಿಸುವ ಕಳವಿನೊಳಗಿರ್ದ ಚೋರರಿ ಗೆದೆಯ ಧೈರ್ಯಗುಂದುವ ಸಮಯ ಉದ್ಯೋಗವಂತರಿಗೆ ಎಚ್ಚರಿಕೆ ಸಮಯ ದರಿದ್ರರಿಗೆ ನಿದ್ದೆ ಸಮಯ ಬುದ್ದಿಯುತರಾದ ಬುಧಬಾಲರಿಗರ್ಥಗ್ರಂಥ ದ್ಯಾನ ಶಾಸ್ತ್ರ ಪುರಾಣಗಳ ಬಹುವಿದ್ಯೆ ಪಠಿಸುವ ಮುದ್ದು ಗೋಪಾಲಕೃಷ್ಣ 5 ವ್ಯಾಸ ವಾಲ್ಮೀಕಿ ಶುಕನಾರದನು ಶೌನಕ ಪರಾಶರ ವಶಿಷ್ಟ ವೈಶಂಪಾಯ ಕಣ್ವ ವಿಶ್ವಾಮಿತ್ರ ಗೌತಮ ಭರದ್ವಾಜ ಸನಕ ದೂರ್ವಾಸ ಕೌಶಿಕ ಕಪಿಲರು ಕೌಶ್ಯಪ ದಧೀಚಿ ಭಾರ್ಗವರಗಸ್ತ್ಯ ಋಷಿ ಈ ಸಮಸ್ತಾದಿ ಹರಿಯೇ || ಸ್ವಾಮಿ || 6 ಜಾಂಬವ ವಿಭೀಷಣಾಶ್ವತ್ಥಾಮ ಹನುಮಂತ ಜಂಭಾರಿಸುತ ಧನಂಜಯ ಬಲಿಷ್ಠಹಲಾದರೆಂಬಸದ್ಭಕ್ತರುಗಳು ಅಂಬುಜೋದ್ಭವ ಮುಖ್ಯರಮರ ಗಂಧರ್ವಾದಿ ತುಂಬುರ ಭುಜಂಗ ಭೂಸುರರೆಲ್ಲರೊಂದಾಗಿ ಬಿಡದ ಹಂಬಲಿಸುತೈದಾರೆ ಹರಿಯೆ || ಸ್ವಾಮಿ || 7 ಗಂಗೆ ಗೋದಾವರಿಯ ಭೀಮರತಿವರದೆ ವರ ತುಂಗ ಭದ್ರೆಯು ಯಮುನೆ ಕಾವೇರಿ ಸಿಂಧು ಅಂಗನೆಯರೆಲ್ಲರೂ ಕೂಡಿ ರಂಗು ಮಾಣಿಕದ ಆಭರಣಗಳಲಂಕರಿಸಿ ಹಿಂಗದೆಲ್ಲರು ನೆರೆದು ಹರಿ ನಿಮ್ಮ ಬಾಗಿಲೋಳು ಮಂಗಳಭಿಷೇಕಕೆಂದು ಸ್ವಾಮಿ 8 ಕರುಗಳನು ಕಾಯ್ದ ಕಾರುಣ್ಯ ಮೂರುತಿ ಏಳು ವರ ಪಾಂಡುರಂಗ ವಿಠಲ ಹರಿಸುತನ ಹಯವರೂಥವ ಹರಿಸಿದವನೆ ಏಳು ಹರಿಸುತನ ಸುತನ ಸುತನ ಕಾಯ್ದವನೆ ಏಳು ಹರಿಸುತನ ಕೋಣೆ ಲಕ್ಷ್ಮೀರಮಣನೆ ಏಳು ಶ್ರೀ ಹರಿಯೆ ನೀನು ಉಪ್ಪವಡಿಸಾ ||ಕೃಷ್ಣ || 9
--------------
ಕವಿ ಪರಮದೇವದಾಸರು