ಒಟ್ಟು 127 ಕಡೆಗಳಲ್ಲಿ , 37 ದಾಸರು , 113 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ನೀನೆ ದಯಮಾಡಲು ನಾನುದ್ಧಾರಾಗುವೆನು ಏನೇನು ಪರಲೋಕ ನಾನರಿಯೆ ಶ್ರೀಹರಿಯೆ ಪ ಹೀನಸಂಸಾರದೊಳಗೆ ಮುಳುಗಿ ಶ್ವಾನನಂದದಿ ಕರಗಿ ಕೊರಗಿ ಜ್ಞಾನಶೂನ್ಯನಾಗಿ ಬಳಲುವೆ ಜ್ಞಾನಮೂರುತಿ ಅಭಯ ಪಾಲಿಸು ಅ.ಪ ಉದಯದಲ್ಲೇಳುತ ಸದಮಲ ತವಪಾದ ಮುದದಿಂದ ನೆನೆಯದೆ ಅಧಮತನದಿ ವಿಧವಿಧದಿ ಅಧಮಜನರ ಸುದ್ದಿ ವದನದಿಂದಾಡುತ ಮುದಿಕೋಣನಂದದಿ ಮದಮುಚ್ಚಿ ನಡೆದೆ ಎಡಬಿಡದೆ ಕುದಿದೆನನುದಿನ ಪರರ ಮನೆ ಸಂ ಪದವ ನೋಡಿ ಸಹಿಸದವರ ಸದನ ಮುರಿಯುವ ಬುದ್ಧಿ ಹುಡುಕಿದೆ ಪದುಮನಾಭಪರಾಧ ಕ್ಷಮಿಸಿ1 ಒಂದು ನಾನರಿಯದೆ ಮುಂದೆ ಭಲಾಯೆಂದು ಹಿಂದೆ ನಿಂದಿಸಿ ನಕ್ಕೆ ದ್ವಂದ್ವಕರ ಬಡಿದು ಬಲು ಜರಿದು ಹಂದ್ಯಮೇದ್ಯಕಂಡಾನಂದಿಪತೆರದನ್ಯ ಸುಂದರಿಯರ ನಯನದಿಂದ ನೋಡಿದೆ ಎವೆಯಿಕ್ಕದೆ ಇಂದಿರೇಶನೆ ನಿಮ್ಮ ಪಾದವ ಒಂದೆ ಮನದಿಂ ಭಜಿಸದೆ ಭವ ದಂದುಗದಲಿ ಬಿದ್ದು ನೊಂದವ ಕಂದನೊಳು ಕೃಪಾದೃಷ್ಟಿಯಿತ್ತು 2 ದಾಸಜನರ ಆವಾಸ ನಾ ಬಯಸದೆ ಈಷಣ ಪ್ರಪಂಚದ್ವಾಸನದಲ್ಲಿ ಬಹು ತೊಳಲಿ ಆಸೆಯೆಂಬುವ ಮಹಪಾಶದಬಲೆಯೊಳು ಘಾಸಿಯಾಗುವೆ ಸಿಲ್ಕಿ ಸೋಸಿ ನೋಡದಲೆ ಮರೆ ಮೋಸದಲಿ ದಾಸ ಬುದ್ಧಿಯಿಂದ ಮಾಡಿದ ಬಲು ದೋಷರಾಶಿಗಳೆಲ್ಲ ನಾಶಿಸಿ ಶ್ರೀಶ ಶ್ರೀರಾಮ ನಿಮ್ಮ ಪಾದ ದಾಸನಿಗೆ ನಿಜಧ್ಯಾಸ ನಿಲ್ಲಿಸು 3
--------------
ರಾಮದಾಸರು
ನೀನೆ ದಯಾನಿಧಿಯು ಶ್ರೀ ಗುರುರಾಯ ನೀನೆ ದಯಾನಿಧಿಯು ಧ್ರುವ ಕರುಣದಿ ಕುಂತಿಯ ಪುತ್ರರಿಗೆ ಒಲಿದು ಕಾಳ ನಿರ್ಮಿಸಿ ಕೌರವರಳಿದು ಉಳಿಯದೆ ಇಳೆಯೊಳು ವಂಶವ ಸವರಿದ ಶೇಷಶಯನ ಶ್ರೀ ಕೇಶವ ನೀನೆ 1 ನರಗೊಲಿದು ನರಕಾಸುರನ ಮರ್ದಿಸಿ ನಾರಗನೆಂದಜಮಿಳನ ನೀ ತಾರಿಸಿ ನಾರದಗೊಲಿದು ನಾಟ್ಯವನಾಡಿದ ನರಹರಿಯು ನಾರಾಯಣ ನೀನೆ 2 ವೇದವ ಕದ್ದೊಯಿದಸುರನ ಸೀಳಿ ಮಚ್ಛವತಾರದ ರೂಪವ ತಾಳಿ ಮಾವನ ಕೊಂದ ಮಾನ್ಯರ ಮಡುಹಿದ ಮಾಧವ ನೀನೆ 3 ಗೋಕುಲದಲಿ ಪುಟ್ಟಿ ಧರೆಯೊಳು ಬೆರಳಲಿ ಗೋವರ್ಧನ ಗಿರಿಯನೆತ್ತಿ ಗೋಕುಲ ಕಾಯ್ದಿ ಗೋಪಿಯರಿಗೊಲಿದ ಗೋಪಾಲಕೃಷ್ಣ ಗೋವಿಂದನು ನೀನೆ4 ಸೃಷ್ಟಿನೆಲ್ಲ ಬೆನ್ನಿಲಿ ತಾಳಿದ ಶೇಷನ ಸಂ ಕಷ್ಟವ ಪರಿಹರಿಸಿದ ಶಿಷ್ಟ ವಿಭೀಷಣಗೊಲಿದು ಪಟ್ಟವಗಟ್ಟವು ವಿಷ್ಣವು ನೀನೆ 5 ಮದನನೊಲಿದು ಕಾಳಿಂಗನ ತುಳಿದು ಕದನದಲಿ ಬಾಣಾಸುರನಳಿದು ಮೇದಿನಿಯೊಳು ಮರೆ ಇಲ್ಲದೆ ದೈತ್ಯರ ಮರ್ದಿಸಿದ ಮಧುಸೂದನನು ನೀನೆ 6 ತ್ರಿಪುರವನಳಿದು ತ್ರಿಗುಣವ ತಾಳಿದ ತೆತ್ತೀಸ ಕೋಟಿ ದೇವರುಗಳಿಗಾಳಿದ ಅಕ್ರೂರಗೊಲಿದು ಚರಿತ್ರವದೋರಿದ ತ್ರಿಜಗಪತಿ ತ್ರಿವಿಕ್ರಮ ನೀನೆ7 ವಾಲಿಯನಳಿದು ವಾಲ್ಮೀಕಿಗೊಲಿದು ಬಲಿಚಕ್ರನ ಮುನಿಮುಂದಲಿ ಸುಳಿದು ಬ್ರಾಹ್ಮಣನಾಗಿ ದಾನವ ಬೇಡಿದ ಮಾನ್ನವಗೊಲಿದ ಶ್ರೀ ವಾಮನ ನೀನೆ 8 ಸೃಷ್ಟಿನೆಲ್ಲ ನಿರ್ಮಿಸಿ ವಕ್ಷ ಸ್ಥಳದಲಿ ಶ್ರೀ ಮಹಾಲಕ್ಷ್ಮಿಯ ಧರಿಸಿದ ಶ್ರೀನಿಧಿ ಶ್ರೀಪತಿ ಶ್ರೀಗುರುಮೂರುತಿ ಶ್ರೀದೇವಿಗೊಲಿದಿಹ ಶ್ರೀಧರ ನೀನೆ 9 ದಾಸರ ಕ್ಲೇಶಕಿಲ್ಮಿಷಗಳ ತೊಳೆದು ಅಂಬರಿಷ ರುಕ್ಮಾಂಗದಗೊಲಿದು ಶುಕ ಶೌನಕ ಪರಾಶರ ಮುನಿಗಳಿಗೆ ಹರುಷನಿತ್ತ ಹೃಷಿಕೇಶನು ನೀನೆ 10 ಕ್ಷಿತಿಯೊಳು ದೃಢ ಪತಿವ್ರತೆಗೊಲಿದು ಯತಿ ಮುನಿಗಳಿಗಿನ್ನು ಗತಿಗಳನಿತ್ತು ಪತಿತರ ತಾರಿಸಿ ಪಾವನಗೈಸಿದ ಪರಂಜ್ಯೋತಿ ಪದ್ಮನಾಭನು ನೀನೆ 11 ದೇವಕಿಗೊಲಿದು ಸ್ಥಾಪಿಸಿ ಧರೆಯೊಳು ದ್ವಾರಕಿಯಲಿ ನಿಜ ಲೀಲೆಯು ತೋರಿದ ದುರಿತ ವಿಧ್ವಂಸನ ದೇವಕಿ ಪುತ್ರ ದಾಮೋದರ ನೀನೆ 12 ಸಿದ್ದ ಶರಣರಿಗೊಲಿದ ಸದ್ಗತಿ ಸುಖಸಾಧನ ಸಹದೇವಗದೋರಿದ ಸಂಭ್ರಮದಿ ಸುಧಾಮಗ ಒಲಿದು ಸಂತೋಷವನಿತ್ತ ಸಂಕರುಷಣ ನೀನೆ 13 ವಸುಧಿಯೊಳು ಭಸ್ಮಾಸುರನ ಮರ್ದಿಸಿ ಭಾಷೆಯನಿತ್ತು ಭಕ್ತರ ಪಾಲಿಸಿ ಋಷಿ ವೇದವ್ಯಾಸಗೊಲಿದಾತನು ವಸುದೇವಸುತ ವಾಸುದೇವನು ನೀನೆ 14 ವಿದುರುದ್ಧವ ಗರುಡಗೊಲಿದು ಭೃಗುಮುನಿ ಕಪಿಲ ಯೋಗೇಂದ್ರನ ಸಲಹಿದ ಸ್ಥಿರಪದವಿತ್ತರೊಂದು ಮಂದಿಗೆ ಪ್ರಸನ್ನವಾದ ಪ್ರದ್ಯುಮ್ನನು ನೀನೆ 15 ಸೀತಾ ಸುದ್ದಿಯ ತಂದವಗೊಲಿದು ಹತ್ತು ತಲೆಗಳ ಇದ್ದವನಳಿದು ಕದ್ದುಬೆಣ್ಣೆಯ ಮುದ್ದೆಯ ಮೆದ್ದು ಉದ್ದವಗೊಲಿದ ಅನಿರುದ್ಧನು ನೀನೆ 16 ಸೋಕಿಸಿ ಪೂತಣಿಯ ಕಾಯವು ಹೀರಿದ ಭಕ್ತ ಪುಂಡಲೀಕನ ಸಲಹಿದ ಭಕ್ತಿಗೆ ಒಲಿದು ಮುಕ್ತಿಯನಿತ್ತ ಪರಮ ಪರುಷ ಪುರುಷೋತ್ತಮನು ನೀನೆ 17 ಅಕ್ಷಯವೆಂದು ರಕ್ಷಿಸಿ ಸಭೆಯೊಳು ದ್ರೌಪದಿ ಕರುಣಕಟಾಕ್ಷದಿ ಸಲಹಿದ ಭಕ್ತವತ್ಸಲನಾಗಿ ಗಜೇಂದ್ರಗೆ ಅಧೋಕ್ಷಜ ನೀನೆ 18 ನರನಾರಿಯು ನಾಂಟೀಶರನಾಗಿ ನಖಮುಖದಲಿ ಹಿರಣ್ಯಕನ ಸೀಳಿ ಭಕ್ತಪ್ರಹ್ಲಾದಗ ಒಲಿದು ಸ್ತಂಭದಿ ಪ್ರಕಟಿಸಿದ ನರಸಿಂಹನು ನೀನೆ 19 ಅನಿಳ ಸ್ನೇಹಿತ ಅಜಗ್ನಾನಗ ಒಲಿದು ಅಹಲ್ಯಾ ಶಾಪ ವಿಮೋಚನ ಮಾಡಿದ ನೆಚ್ಚಿದ ಧ್ರುವನ ನಿಜ ಭಕ್ತಿಗೆ ಒಲಿದು ಅಚಲ ಪದವಿತ್ತುಚ್ಯುತ ನೀನೆ 20 ಜಗದೊಳು ಭಕ್ತಜನರಿಗೆ ಒಲಿದು ಜಾಹ್ನವಿ ನಿರ್ಮಿಸಿ ಜನಕನ ಸಲಹಿದ ಸಾಧು ಸಜ್ಜನ ಮುನಿ ಸಂಜೀವನ ಜಾನಕೀಪತಿ ಜನಾರ್ಧನನು ನೀನೆ 21 ಅಂಗದಗೊಲಿದಾನಂದವನಿತ್ತು ಕುಂದದೆ ಕರೆದುಪಮನ್ಯುನ ಸಲಹಿದ ದಿನಕರ ಚಂದ್ರ ಕಳಿಯಗಳಿತ್ತು ಇಂದ್ರಗೆ ಒಲಿದ ಉಪೇಂದ್ರನು ನೀನೆ 22 ಧರೆಯೊಳು ಭಕ್ತನ ಜನ್ಮವು ಹರಿಸಿ ಹರಿಶ್ಚಂದ್ರನ ಕ್ಲೇಶವು ಪರಿಹರಿಸಿದ ಸುರಮುನಿಗೊಲಿದ ಶ್ರೀ ಹರಿಯು ನೀನೆ 23 ಕಾಳಿ ಮಥನವು ಮಾಡಿ ಕರುಣದಿ ಸುರರಿಗೆ ಅಮೃತವನಿತ್ತು ಸಲಹಿದ ಕಲ್ಕ್ಯಾವತಾರದ ಲೀಲೆಯ ತೋರಿದ ಕಪಟ ನಾಟಕ ಶ್ರೀ ಕೃಷ್ಣನು ನೀನೆ 24 ಸಂಧ್ಯಾನದ ಸಾಹಾಯವನಿತ್ತು ಕಾಯದಿ ಸದ್ಗತಿ ಸಾಧನದೋರಿದ ನರಕೀಟಕ ಮಹಿಪತಿ ತಾರಕ ಗುರುಮೂರ್ತಿಯ ಪರಮ ದಯಾನಿಧಿಯು ನೀನೆ 25
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ನೀಲವರ್ಣ ಗೋಪಾಲನು ಎಲ್ಲೆ ಕಾಣಿರೇನೇ ವ್ರಜದ ಒಳಗೆ ಲೀಲಿ(ಲೆ ಇ?) ದೇನೆ ನಮ್ಮ ಸಂಗಡ ಹೇಳೇ ಗೋಪ್ಯಮ್ಮ 1 ಚಿಣ್ಣಿಕೋಲು ಚೆಂಡು ಬುಗುರಿ ವೇಣುಕೊಳಲಧ್ವನಿಯ ಆಲಿಸಿ ಓಣಿ ಓಣಿ ಹುಡುಕಲು ನಂದ- ಸೂನು ಎಲ್ಲಿಹನೆ 2 ಗೋಪಿ ಗೋಪಾಲ ಕೂಡಿ ಧಾಳಿ ಮಾಡ್ವುದು ದಾರಿಗೆ ತರವೆ ಗೂಳಿಮಾಡಿದಿ ಗೋಕುಲದೊಳು ನಿನ- ಗ್ಹೇಳುವುದಿನ್ನೇನೆ 3 ನವನೀತ ದಧಿ ಘೃತ ಸುರಿದೋಡಲು ನೀ ಸುಮ್ಮನೆ ಬಿಟ್ಟು ಯಾತಕೆ ಹಿಡಿತಾರದೆ ದೂರ್ಹೇಳುವಿ ಈ ಮಾತು ನಿರ್ಧಾರವೇನೆ 4 ಹೆತ್ತತಾಯಿ ನೀ ಬಳಲುವಿ ಎಂದು ಸಿಕ್ಕೊರಳಿಗೆ ಕಟ್ಟಿಸಿ ಕೊಂಡೆಳೆದು ಸಿಕ್ಕುವುದುಂಟೇನೆ 5 ವಜ್ರದ್ಹಾರ ಪದಕ ಹÉೂನ್ನರಳೆಲೆ ಗೆಜ್ಜೆ ಕಾಲಂದಿಗೆ ಝಳಿ ಝಳಿಸುತ ಮೂರ್ಜಗದೊಳು ಮುದ್ದಿರಲೀಕೂಸ್ಹೊರ- ಗ್ಹೆಜ್ಜೆನಿಡುವುದೇನೆ 6 ಶಿಶುವೇನೇ ಅಸುವ್ಹೀರಿ ಪೂತನಿ ಕೇಶಿ ಧೇನು ತೃಣಾವರ್ತ ಶಗಟಾಸುರ ಬಕನ ಕೊಂದವಗೆಂತು ನೀ ಅರ್ಭಕ- ನೆಂತಾಡುವಿಯೆ 7 ಹೆಡೆಯ ತುಳಿದ ಕಾಳಿಂಗನ ಮಡುವ ಕಲಕಿದ ಕಡುವಿಷಕಂಜದೆ ಹುಡುಗರ ಕಾರ್ಯವಿದೇನೆ ಬಿಡು ನಿನ್ನ ಬಡಿವಾರವು ಸಾಕೆ 8 ಕಾಡುಕಿಚ್ಚನು ನುಂಗಿದ ನಿನಸುತ ಬೇಡಿಯಜ್ಞದೊಳುಂಡನ್ನವನು ಸಾಲದೆ ಇಂದ್ರನ ಪುರವುಂಡ್ಹೊಟ್ಟೆ ಗಿ- ನ್ನೀಡೆಲ್ಲಿಹುದ್ಹೇಳೆ 9 ಶಕÀ್ರನ ಬಲಿ ಅನ್ನವ ದಕ್ಕಿಸಲವ ಸಿಟ್ಟಲಿ ಸಪ್ತದಿನ ಮಳೆಕರೆಯೆ ಎತ್ತಿ(ದ) ಗೋವರ್ಧನಗಿರಿ ನಮ್ಮದಾರಿ- ಚ್ಚೆಗೆ(?) ಸಲಹುವನೆ 10 ಕಾತ್ಯಾಯಿನಿ ವ್ರತಮಾಡೋ ಸ್ತ್ರೀಯರ ವಸ್ತ್ರಗಳನೆ ಕದ್ದು ಮರನೇರಿದ ಬತ್ತಲೆ ಚಪ್ಪಾಳಿಕ್ಕುತ ತಿರುಗಲಿನ್ನೆ- ಷ್ಟಂತ್ಹೇಳುವೋಣೆ 11 ಚೋರತನವೊಂದಲ್ಲದೆ ಕಲಿತಿಹ ಜಾರತನ ಕೇಳರಿಯೆ ಯಶೋದ ನೀರುತಿದ್ದುವ ಎಲ್ಲರ ಒಗತನಕಿವ ಪಾರುಗಾಂಬುವುದ್ಹ್ಯಾಗೆ 12 ಗಂಡರುಳ್ಳ ಗರತಿಯೇರೆನ್ನದೆ ಪುಂಡೆಬ್ಬಿಸಿ ಬೃಂದಾವನದೊಳಗೆ ಬಂದಮ್ಮನ ಹಿಂದಡಗಲು ನಿನಗೆ ಮುದ್ದಿನ್ಯಾರಿಗೆ ಹೇಳೆ 13 ಮಾಧವ ತಾ ಕೊಳಲೂದು- ತಿರೆ ನಾವು ಮೋಹಿತರಾಗಿ ಹೋದ ಸುದ್ದಿಗಳೊಂದ್ಹೇಳೆ ಲಜ್ಜೆ ಬಾ- ಹೋದೆ ನಮಗಿನ್ನು 14 ಬಳೆ ಬಾಪುರಿ ಕಂಕಣ ಚೂಡ್ಯ ಗಳನು ತೊಡೆಗÉೀರಿಸಿ ಕಾಲಂದಿಗೆ ಕರದಿ ಕಾಲುಂಗುರ ಕಿವಿಗಿಟ್ಟು ಬಾವುಲಿ ಪಾದದಿ ರಚಿಸಿದೆವೆ 15 ಹೊನ್ವಾಲೆ ಹೊಸಕೊಪ್ಪು ಮೂಗುತಿ ಚಿನ್ನದ ಒಡ್ಯಾಣದ ನಡುವಿಟ್ಟು ಕಣ್ಣಿಗೆ ಕಸ್ತೂರಿಬಟ್ಟು ಕುಂಕುಮ ಕಾಡಿಗೆ ನೊಸಲಿಗೆ ರಚಿಸಿ 16 ಬಿಟ್ಟಮಂದೆ ಕಟ್ಟದೆ ಕರುಗಳ ತೊಟ್ಟಿಲೊಳಗಿಟ್ಟು ಶಿಶುವಿಗೆ ಕಣ್ಣ ್ಹ(ಣ್ಣಿ ಹ?)ಚ್ಚಿ ನಾವೆಚ್ಚರಿಕಿಲ್ಲದೆ ಪೋದೆವೆ ಅಚ್ಚುತನಿದ್ದೆಡೆಗೆ 17 ಬಂದವರನೆ ಮನ್ನಿಸದೆ ನಿನಸುತ ಅ- ಲ್ಲಿಂದೊಬ್ಬಳ ಹೆಗಲೇರಿಸಿ ಪೋಗೆ ಹಿಂದಾಲ್ಪರಿದ್ವನವನಿತೆಯರ್ಕೂಡಿ ಬಂದೆವ್ಯಮುನೆ ದಡಕೆ18 ಇಬ್ಬರಿಬ್ಬರ ನಡುವೆ ನಿನಸುತ ಒಬ್ಬನಾಗಿ ಜಲದ ಒಳಗೆ ಅಬ್ಬರದಿಂದಾಡಲು ಜಲಕ್ರೀಡೆ ಕ- ಣ್ಗ ್ಹಬ್ಬವಾಗಿರೆ ಜನಕÉ 19 ಗೋಪಿ ಗೀತವಿದೆಂದು ನಿನಸುತ ಖ್ಯಾತಿ ಮಾಡಿದ ಜಗದ ಒಳಗೆ ಯಾತಕೆ ಕೂಸೆಂದಾಡುವೆ ತಿಳಿ ನಿನ್ನ ಪ್ರೀತಿ ಮೋಹಗಳೆಂದು 20 ಅಂಕದಲ್ಯಾರೋಪಿತನಾಗೆ ಶÀಂಕಿಲ್ಲದೆ ಹಾರ ಭಾರವನೆ ತಾಳಿದೆ ಬಿಂಕವ ಬಿಡು ಮಗನೆಂದಾಡುವುದು ಈ ಮಂಕು ಬುದ್ಧಿಗಳಿನ್ನು 21 ಮಗುವೇನೆ ಹೃದಯದೊಳ್ಹದಿನಾಲ್ಕು ಜಗವ ಕಂಡು ನೀ ತೆಗೆಯದೆ ನೇತ್ರ ಜಗಜಗಿಸುವ ಚಂದ್ರಮನಂಗೈಯಲಿ ಈ ಬಗೆ ನಿನಗರಿಕಿಲ್ಲೆ 22 ಗೋಪಾಂಗನೆಯರಾಡುವ ಮಾತು ಕೋಪದಿ ಕೇಳುತಲೆಶೋದೆ ಗೋಪಾಲಕೃಷ್ಣ ನಿನ್ನೆಲ್ಲಿ ಕಳುಹಲೆಂದಳು 23 ದುಷ್ಟ ಕಾಲನೇಮಿ ಕಂಸನು ನಿನ್ನ ಕರೆಯಕಳುಹಲು ಕರಕರೆಯಾಕೋ ನಾರಾಯಣ ನಿನ್ನಟ್ಟುವೆ(ವು) ಮಧುರೆಗೆ ನಾವೆಲ್ಲರು ಕೂಡಿ 24 ದುಷ್ಟತನವ ಬಿಡೋ ಭೀಮೇಶ- <ಈಔಓಖಿ s
--------------
ಹರಪನಹಳ್ಳಿಭೀಮವ್ವ
ನೋಡಿ ನೋಡಿನೊ ರಂಗಾ ನಿನ್ನ ನೋಡಿನೊ ಆಡಲೇನಯ್ಯಾ ಪರಸತಿಯರ ಮೋಹಕ್ಕೆ ಸಿಲುಕಿ ಪ ಹೆಣ್ಣ ನಾ ಕಾಣುತ ಮನಸು ದ್ರವಿಸುವದು ದೃಢವಾಗಿ ಮುನ್ನೆ ದಾರಿದ್ರತನ ಯೆಣಿಸಿಕೊಳದೆ ಕಣ್ಣು ಹೋಗುವ ಸುದ್ದಿ ತಿಳಿಯದಲೆ ನೀಕ್ಷಿಸಿ ನಿತ್ಯ 1 ಜಲ್ಪಸಿಲ್ಪಿಗಳಿಂದ ಮಂತ್ರ ಮಾಡುವೆ ಅವಳಾ ಬಲ್ಪು ವಯ್ಯಾರ ಗುಣಗುಣಿಸಿಕೊಳುತಾ ತಲ್ಪಮಿಕ್ಕಾದ ಭೋಗದ್ರವ್ಯ ಬಯಸಿ ವಿ ಕಲ್ಪ ಸಂಕಲ್ಪದಲ್ಲಿ ಬಳುಲುವೆನುಬ್ಬಸವಳಿದು 2 ವ್ಯಾಖ್ಯಾತ ಪಂಡಿತದ್ವ್ಯಾಪಕ ಪಾಠಕ ಮಹಾ ಪ್ರಖ್ಯಾತ ವೇದವೇದಾಂತ ಪ್ರೌಢ ಸೌಖ್ಯ ಪುಸ್ತಕ ಪಾಣಿ ಜ್ಞಾನಿ ಎನಿಸಲು ಅವಳ ಆಖ್ಯಾನ ಕೇಳುತಲೆ ಕಿವಿಗೊಟ್ಟು ಲಾಲಿಸುವೆ 3 ಬೀದಿಯೊಳು ಪೋಗುವವಾಳೊಂದು ಪ್ರಯೋಜನಕೆ ಹಾದಿಯನು ಹಿಡಿದು ಸಮೀಪ ಬರಲು ಪಾದಕಾದರು ಬಿದ್ದು ಮಾತಾಡುವೆನೆಂಬೊ ಮೋದವನು ತಾಳಿ ಏಕಾಂತ ಹುಡುಕುವೆ 4 ಅಂಧಕ ಮೂಕಿ ಬಧಿರೆ ಹೀನಾಂಗ ಅವರೋತ್ತಮ ಜಾತಿ ವಿಧಿ ನಿಷೇಧವನು ಚಿಂತಿಸದೆ ತೀವರದಿಂದ ಅಧೋಗತಿಗೆ ಇಳುವೆನು ಸತ್ಕರ್ಮವನು ತೊರೆದು 5 ನೀರು ಸೀರೆವೊಗಿವಾಗ ಮೈ ತೊಳೆದು ಉಡುವಾಗ ಉರು ಕುಚ ಕಚ ನೋಳ್ಪ ಆಶೆಯಲ್ಲಿ ಮೂರು ಹತ್ತನೆ ತತ್ವ ನೆನೆನೆನೆದು ಯೋಚಿಸಿ ವಾರಿತಿಯ ಕೇಳಿ ತಲೆದೂಗುವೆನೊ ಲೇಸಾಗಿ 6 ಕಣ್ಣುಯಿದ್ದದಕೆ ಸಾರ್ಥಕವಾಗಲಿಲ್ಲ ಪ್ರ ಸನ್ನ ಮೂರುತಿ ಯೆನ್ನ ಸಾಧನವೇನೊ ಘನ್ನ ಏಲ್ಲೆಲ್ಲಿ ನಾ ನೋಡಿದರೆ ಅಲ್ಲಲ್ಲಿ ನಿನ್ನ ರೂಪವ ತೋರೊ ವಿಜಯವಿಠ್ಠಲ ಒಲಿದು 7
--------------
ವಿಜಯದಾಸ
ಪಟ್ಟಿಯು ಬಂದಿಲ್ಲ ಕೃಷ್ಣ ಪಟ್ಟಿಯು ಬಂದಿಲ್ಲ ಪಟ್ಟಿಯು ಬಾರದೆ ಕಟ್ಟಲು ಸಾಧ್ಯವೆ ಪ ನಿಷ್ಠುರ ಮಾಡದೆ ಇಷ್ಟ ಬಂದುದ ಮಾಡೊ ಅ.ಪ ಬುದ್ಧಿಯು ಸಾಲದೆ ಬಿದ್ದೆನೋ ಸಾಂಕೆ ಬದ್ದನಾಗಿರುವೆನೋ ತೀರಿಸಲು ಇದ್ದು ಇಲ್ಲೆಂಬುವ ಸುದ್ದಿಯ ಪೇಳುವ ಕ್ಷುದ್ರ ನಾನಲ್ಲವೋ ಉದ್ಧರಿಸಯ್ಯ 1 ಕೊಟ್ಟ ಭಾಗ್ಯವನು ದೂಷ್ಯ ರೀತಿಯಲಿ ಕುಟ್ಟಿ ಕೋಲಾಹಲ ಮಾಡಿದೆನೊ ಇಷ್ಟು ದಿನವು ಬಡ್ಡಿ ಕಟ್ಟಲಿಲ್ಲವೆಂದು ಸಿಟ್ಟು ಮಾಡಿದರೆ ಕೆಟ್ಟು ಹೋಗುವೆನೊ 2 ಭೃತ್ಯರ ಸಲಹುವ ಸತ್ಯ ಸಂಕಲ್ಪನೆ ಭೃತ್ಯನಾಗಿ ನಾ ಸೇವೆಯ ಮಾಡುವೆ ಭಕ್ತರು ಈ ಜನ ಭಕ್ತ ಪ್ರಸನ್ನ ನಾ ನಿತ್ತ ಸಾಲಗಳು ಉತ್ತಾರಾಯಿತೆಂಬೊ 3
--------------
ವಿದ್ಯಾಪ್ರಸನ್ನತೀರ್ಥರು
ಪರಮ ಪಾಪಿಷ್ಠ ನಾನು ಪ ನರಹರಿಯೆ ನಿಮ್ಮ ನಾಮ ಸ್ಮರಣ ಮಾಡದಲೆ ನರಕಕ್ಕೆ ಗುರಿಯಾದೆನೋ ಹರಿಯೆ ಅ.ಪ. ಹೊಸಮನೆಯ ಕಂಡು ಬಲು ಹಸಿದು ಭೂಸುರರು ಬರೆ ಕೊಸರಿ ಹಾಕುತ ದಬ್ಬುತ ಶಶಿಮುಖಿಯೆ ಬಾರೆಂದು ಅಸಮಸದಿ ಬಣ್ಣಿಸಿ ವಶವಾಗಿ ಅವಳೊಲಿಸುತ ದಶಮಿ ಏಕಾದಶಿ ದ್ವಾದಶೀ ದಿನತ್ರಯದಿ ಅಶನವೆರಡ್ಹೊತ್ತುಣ್ಣುತ ಘಸಘಸನೆ ತಾಂಬೂಲ ಪಶುವಿನಂದದಿ ಮೆದ್ದು ಕುಸುಮ ಗಂಧಿಯ ರಮಿಸುತ ಸತತ 1 ಕೆರೆ ಭಾವಿ ದೇವಾಲಯವ ಕೆಡಿಸಿ ದಿವ್ಯ ಹಿರಿದಾಗಿ ಮನೆ ಕಟ್ಟದೆ ನೆರೆ ನಡೆವ ಮಾರ್ಗದೊಳು ಅರವಟ್ಟಗೆಗಳನ್ನು ಧರಧರದಿ ಬಿಚ್ಚಿ ತೆಗೆದೆ ಪರಮ ಸಂಭ್ರಮದಿಂದ ಅರಳಿಯಾ ಮರ ಕಡಿಸಿ ಕೊರೆಸಿ ಬಾಗಿಲು ಮಾಡಿದೆ ಏಕ ಮಂದಿರವ ಮುಗಿಸಿ ಹರುಷ ಚಿತ್ರವ ಬರೆಸಿ ಪರಿಪರಿಯ ಸುಖ ಸಾರಿದೇ ಮೆರೆದೆ 2 ಸಾಕಲ್ಯದಿಂದ ಸಾಲಿಗ್ರಾಮದ ಅಭಿಷೇಕ ಆಕಳ ಹಾಲಲಿ ಮಾಡದೆ ನಾಕೆಂಟು ನಾಯಿಗಳ ಸಾಕಿ ಮನೆಯೊಳು ಬದುಕ ಬೇಕೆಂದು ಹಾಲು ಹೊಯ್ದೆ ಕಾಕು ಬುದ್ಧಿಗಳಿಂದ ಗುಡಿ ಗುಡಿ ನಸಿ ಪುಡಿ ಹಾಕಿ ಭಂಗಿಯಾ ಸೇದಿದೆ ಲೋಕ ನಿಂದಕ ನಾಗಿ ಪಾಪಕ್ಕೆ ಕೈ ಹಚ್ಚಿ ಅ ನೇಕ ಜೂಜುಗಳಾಡಿದೇ ಬಿಡದೆ 3 ಸ್ನಾನ ಸಂಧ್ಯಾನ ಅತಿಮೌನ ಗಾಯಿತ್ರಿ ಜಪ ಭಾನುಗಘ್ರ್ಯವನು ಕೊಡದೆ ಹೀನತ್ವ ವಹಿಸಿ ದಾನ ಧರ್ಮವ ಮಾಡದೆ ಶ್ವಾನನಂದದಿ ಚರಿಸಿದೇ ಶ್ರೀನಿವಾಸನೆ ನಿನ್ನ ಅನುಪೂರ್ವಕ ಪೂಜೆ ನಾನೊಂದು ಕ್ಷಣಮಾಡದೇ ಬೇನೆ ಬಂದಂತಾಗೆ ಹೀನ ಸಕೇಶಿಯ ಕೈಲೆ ನಾನ ವಿಧಾನ್ನ ತಿಂದೇ ನೊಂದೇ 4 ಭಾಗವತ ಕೇಳಲಿಕೆ ಆದರವೆ ಪುಟ್ಟಲಿಲ್ಲಾ ವಾದಿಗಳ ಮತವಳಿದ ಮಧ್ವ ಸಿದ್ಧಾಂತದ ಹಾದಿಗೆ ಹೋಗಲಿಲ್ಲ ಶೋಧಿಸಿದ ಚಿನ್ನಕೆ ಸಮರಾದ ವೈಷ್ಣವರ ಪಾದಕ್ಕೆ ಬೀಳಲಿಲ್ಲ ವೇದ ಬಾಹಿರನಾಗಿ ಅಪಸವ್ಯ ಮನನಾಗಿ ಓದಿಕೊಂಡೆನೋ ಇದೆಲ್ಲ ಸುಳ್ಳ 5 ಉತ್ತಮ ಬ್ರಾಹ್ಮಣರ ವೃತ್ತಿಗಳನೆ ತೆಗಸಿ ಬ್ರ ಹ್ಮಹತ್ಯಗಾರನು ಎನಿಸಿದೆ ಮತ್ತೆ ಮದುವೆ ಮುಂಜಿ ಸಮಯಕ್ಕೆ ನಾ ಪೋಗಿ ಸತ್ತ ಸುದ್ದಿಯ ಪೇಳಿದೆ ವಿತ್ತವಿದ್ದವರ ಬೆನ್ಹತ್ತಿ ದೂತರ ಕಳುಹಿ ಕುತ್ತಿಗೆಯ ನಾ ಕೊಯ್ಸಿದೆ ನಿತ್ಯ ಕಲ್ಲೊಡೆಯುತಿರೆ ಮೃತ್ಯು ದೇವತೆಯೆನಿಸಿದೆ ಬಿಡದೇ 6 ಕ್ಷಿತಿಯೊಳಗೆ ಇನ್ನಾರು ಹಿತವ ಬಯಸುವವರೆನಗೆ ಗತಿಯೇನು ಪೇಳೊ ಕೊನೆಗೆ ಸತತ ತವ ಧ್ಯಾನದಲಿ ರತನಾಗಿ ಇರುವ ಸ ನ್ಮತಿಯ ಪಾಲಿಸಯ್ಯ ಎನಗೆ ಪತಿತಪಾವನನೆಂಬ ಬಿರಿದು ಅವನಿಯ ಮೇಲೆ ಶ್ರುತಿ ಸಾರುತಿದೆಯೋ ಹೀಗೆ ಶಿತಕಂಠನುತ ಜಗನ್ನಾಥವಿಠ್ಠಲ ನಿನಗೆ ನುತಿಸದೆ ಬೆಂಡಾದೆ ಕಾಯೋ ಹರಿಯೆ 7
--------------
ಜಗನ್ನಾಥದಾಸರು
ಪಾಪೇಂದ್ರಿಯಗಳಿಗೆರಗಿ ಪರಹಿತಾರ್ಥವ ಮರೆದು ವ್ಯಾಪಾರ ವಿಷಯಂಗಳಲ್ಲಿರೆ ಯಮನೊಯ್ದು ಕೋಪಾಟೋಪದಲಿಂದ ದಂಡಿಸಿ ತಮಸಿನ ಕೂಪದಲ್ಲಿ ಹಾಕದಲೆ ಬಿಡುವನೆ ಮರುಳೆ ಪ ಉಡಿಗೆ ತೊಡಿಗೆ ಇಡಲು ಮಡದಿಯಳ ಮುಖ ನೋಡಿ ಕಡು ಹಿಗ್ಗಿ ಹುಗ್ಗಿ ಪಡಗದಂತೆ ಹಿರ್ರನೆ ಪಿಡಿದು ಗಲ್ಲವ ಮುಟ್ಟಿ ಮುಡಿಗೆ ಮುಡಿವಾಳವನು ತಡಿಯದಲೆ ಮುಡಿಸುತ್ತಲಿ ಕಕ್ಕಸ ಕುಚ ವಡನೊಡನೆ ನೋಡಿ ಸುಖಬಡುತಾ ಬಿಡದೆ ಕಾಳ್ಯಾಡುವುದು ಸುಡುಸುಡು ಮಾಡಿದರಿನ್ನಾವ ಗತಿ ಮರುಳೇ 1 ನೆಂಟರು ಮನೆಗೆ ಬರಲು ವಂಟಿಯಂತೆ ಮೊಗವ ಸೊಂಟ ಮಾಡಿಕೊಂಡು ಕಂಠವನು ತರ್ಕೈಸಿ ಕುಂಟವಾರ್ತೆಯ ಕೇಳಿ ಬಂಟನು ನಾನೆಂದು ತೊಂಟತನ ಬಗೆ ತೋರುತಾ ಉಂಟಾದ ಗೋಧಿಯ ಸೊಂಟೆ ಬೆಲ್ಲನು ತಂದು ಹೆಂಟಿಯಂತೆ ಹದಿನೆಂಟು ಕಡುಬನೆ ಕೊರಿಸಿ ವಂಟಿಲಿ ಕುಳಿತು ಸುಂಡಿಗೆಯನ್ನು ಚಾಚುತ್ತಾ ಎಂಟು ಮಡಿಸದೆ ವಾರ್ತಿ ಪೇಳುತಲಿ ಮರುಳೇ 2 ಇಂದು ನಮ್ಮನೆ ಪ್ರಸ್ತÀವೆಂದು ಆರಾದರೂ ಬಂದು ಪೇಳಲು ಊರ ಹಂದಿಯಂತೆ ಕಾಯಿದು ಒಂದು ಕಾಳು ತಿನದೆ ಸಂದಿಗೊಂದಿ ಸುತ್ತಿ ಸಂಧ್ಯಾಕಾಲ ವಾನರಾಗುತ್ತ ಚಂದದಿಂದ್ಯುಕ್ತಿಯೊಳು ದ್ವಂದ್ವದಲಿ ಕುಳಿತಿವರು ತಂದೆ ತಾಯಿ ಕಡೆ ಬಂಧುಬಳಗವೆಂದೂ ಒಂದಿಷ್ಟು ಕಡಿಮೆ ತಿನ್ನದೆ ಪರರ ಒಡವೆಯನು ತಿಂದು ಡರ್ರನೆ ತೇಗಿ ನಸುವ ನಗುವ ಮರುಳೇ3 ನಾಡಾಡಿ ಚಾಡಿ ಮಾತಾಡಬೇಕಾದರೆ ಖೋಡಿ ನಾಲಿಗೆ ದೊಡತಾಗಿ ಬಾಹಿನೀ ನಿಡಿ ಲಟಲಟವೆನುತಾ ಕೋಡಗದಂತೆ ಕುಳಿತು ಹೇಡಿ ಪರನಿಂದೆಗಳಿಗೆ ಬಾಡದಲೆ ಬತ್ತದಲೆ ಮಾಡಿದ ಮಹಾಪುಣ್ಯ ಕಾಡಿಗೊಪ್ಪಿಸಿ ಕೊಟ್ಟ ಮೂಢ ಗಾರ್ಧಬನಂತೆ ಓಡಾಡಿ ಬಳಲಿ ನಾಡಾಡಿ ಸುದ್ದಿಗಳಿಗೆ ಬಿಡಿ ಬಿಡಿಂದಾ ತಿರುಗುವಾ ಹೀನ ಮರುಳೇ 4 ಸಂಸಾರವೆಂಬಾ ಸಾರಾ ಸಾಗರ ಮಧ್ಯ ಹಿಂಸನಾಗದೆ ಬಿಟ್ಟು ಇದರಂತೆ ಭಕುತಿ ಮರು ದಂಶ ಗುರು ಮಧ್ವಮುನಿರನ್ನನಾ ಶ್ರೀ ಚರಣ ಸಂಶಯವಿಲ್ಲದಲೆ ನಂಬಿ ಸಂಸಾರ ಉತ್ತರಿಸು ಸಂದೇಹ ಇದಕಿಲ್ಲ ಕಂಸಾಸುರನ ಪ್ರಾಣಹರ ಎನ್ನ ಮನಸ್ಸಾ ಹಂಸ ಶ್ರೀ ವಿಜಯವಿಠ್ಠಲನ್ನ ಪಾದದಾ ಪಾಂಶವೊ ಮಾಡಿ ಗತಿಯಲಿ ಬಾಳು ಮರುಳೇ5
--------------
ವಿಜಯದಾಸ
ಪಾರಿಜಾತ ಶ್ಲೋಕ : ದ್ವಾರಾವತಿಯಲಿ ದÀನುಜದಲ್ಲಣ ಮುಕುಂದ ಸಾರೆ ರುಕ್ಮಿಣಿಸಹಿತ ಆನಂದದಿಂದ ವಾರಿಜಾಂಬಕ ವಾಲಗದೊಳು ಚಂದ ನಾರಂದಮುನಿ ತಾ ಪಾರಿಜಾತವ ತಂದ 1 ಪದ : ಬಲ್ಲಿದ ಮುನಿಯ ಕುಳ್ಳಿರಿಸಿದ ಸತ್ಕರಿಸಿದ ಪುಷ್ಪಯಾರಿಗೆ ಎಂದ ವಲ್ಲಭೆರುಕ್ಮಿಣಿಗಲ್ಲದೆ ಬ್ಯಾರೆ ಸಲ್ಲದು ಎಲ್ಲ ನೀನು ಬಲ್ಲದೆ ಇಂತೆಂದ ಈ ಸುದ್ದಿ ಸತ್ಯಭಾಮೆಗೆ ತಂದು ಹೇಳಿದರಂದು ಕೇಳಿದಳಾಕೆ ನಿಂದು ಮನದಲ್ಲಿ ಅತಿನೊಂದು 1 ಶ್ಲೋಕ : ಇಂದ್ರಲೋಕದ ಚಂದದ ಕುಸುಮವನ್ನು ಮಂದಗಮನೆಯ ಮುಡಿಗೆ ತಾ ಮುಡಿಸಿದನು ಎರವು ಇಲ್ಲವು ಕಾಣಿ ಇಂದು ಮಾಡಿದ ಕುಹಕವ ಕೃಷ್ಣ ತಾನು 2 ಇನ್ನಾರಿಗೆ ಪೇಳುವೆನು ರುಕ್ಮಿಣಿ ತನ್ನ ಜೀವ ಬಹುಪ್ರೀತಿ ಬಡಿಸಿದ ಠಕ್ಕುಠವಳಿಗಳಿಲ್ಲಿ 2 ಶ್ಲೋಕ : ಮೆಚ್ಚಿ ಬಂದೆನೆ ಮೋಹಕ್ಕೆ ಮರುಳಾದೆನೆ ಹಚ್ಚಿರೆ ಮಾತ ಹರಿಯು ತಾ ಕೇಳಿದನೆ ನೆಚ್ಚಿ ಇದ್ದೆನೆ ಎನ್ನೊಳು ವಂಚಿಸಿದನೆ ರಚ್ಚಿಗಿಕ್ಕಿದ ರಂಪು ಮಾಡಿದ ಕಾಣೆ 3 ಪದ : ಮಾರನಟ್ಟುಳಿ ತಾಳಲಾರೆನೆ ಮುಖದೋರನೆ ಇನ್ನೇನು ತೆರನೆ ಕಂತು ಕಮಲಜನಯ್ಯ ಏನೆಂದು ತಿಳಿಯದು ಬಹು ಪ್ರೀತಿ ಇದ್ದವ[ಳ] 3 ಶ್ಲೋಕ : ಮಳೆ ಇಲ್ಲದ ಮೇಘವಿದ್ಯಾತಕ್ಮಮ್ಮ ಬೆಳೆ ಇಲ್ಲದ ಭೂಮಿ ಮತ್ಯಾತಕಮ್ಮ ಗಿಳಿಇಲ್ಲದ ಗೂಡು ತಾನ್ಯಾತಕಮ್ಮ ತಾಳಲಾರೆನೊ ಶ್ರೀ ಕೃಷ್ಣನಿಲ್ಲದೆ ಎಮ್ಮ 4 ಮಾತೆನ್ನ್ಯಾಕ ಪಡೆದಳೊ ಕುಹಕ ಮೂರುಲೋಕ ಪ್ರಸಿದ್ಧ ಓಡಿ ತನಗ್ಯಾಕಿದು ಬ್ಯಾಡಿ 4 ಶ್ಲೋಕ : ಬಿಸಜಾಕ್ಷನ ಬಹಳ ನಂಬಿದ್ದೆ ನಾನು ವಶವಾದನೆ ಒಲಿದು ರುಕ್ಮಿಣಿಗೆ ತಾನು ಅಟ್ಟುಳಿ ಇದೇನು ಆಸೆಬಟ್ಟೆನೆ ಬಹಳ ವಸುದೇವ ಸುತಗೆ 5 ಎಲ್ಲರೊಡನೆ ಕೋಪಿಸುತ ಮನದೊಳು ಮರುಗುತ ಸುರಪಾರಿಜಾತವೆ 5 ಶ್ಲೋಕ :ದೇವಲೋಕದ ಹೂವ ತನಗಿಲ್ಲವಲ್ಲ ಭಾವೆ ಎನ್ನೊಳು ಮುನಿಯದೆ ಬಿಡುವಳಲ್ಲ ಆವ ಪರಿಯಲಿ ತಿಳಿದು ಹೇಳುವೆನು ಸೊಲ್ಲ ಜೀವದೊಲ್ಲಭೆಯೊಡನೆ ಪಂಥವು ಸಲ್ಲ 6 ಎನ್ನೊಡನೆ ನುಡಿಯಳೊ ಇಂದು ಅಪ್ರಬುದ್ಧನಾದರೆ ಕೋಪವನು ತಾಳುವಳೊ ಇಂ ಬಾಗಿಲೊಳು ನಿಂದನು 6 ಶ್ಲೋಕ :ಚಿತ್ತದೊಲ್ಲಭೆ ಚದÀುರೆ ಮೋಹನಾಕಾರೆ ಮುತ್ತುರತ್ನವ ಮನೆಯೊಳಗೆಲ್ಲ ಬೀರಿ ಎತ್ತ ಹೋದಳೊ ಎನ್ನ ಪ್ರಾಣದ ನಾರಿ ಸತ್ಯಭಾಮೆಯ ಸುಳುಹು ಕಾಣೆನು ತೋರಿ 7 ಕೋಕಿಲವಾಣಿಯ ಇನ್ನೆಲ್ಲಿ ಹೋದಳು ತೋರಿಸೆ ಹತ್ರ ಸೇರಿಸೆ ಬಂದೆನು ಹಾರೈಸಿ ನಿಂತವರು ಕಣ್ಣು ಮಾ[ತಾ]ಡಿ 7 ಶ್ಲೋಕ :ಹಾಸಿ ಮಲಗಿದ್ದ ಸತಿಯ ಕಂಡು ಬೀಸಣಿಕೆಯಲಿ ಬೀಸಿದ ಕೃಷ್ಣ ತಾನು ಸೂಸು ಪರಿಮಳ[ದ] ಪಾರಿಜಾತದ ಹೂವ ಹಾ- ರÉೈಸಿ ಕಂಗಳು ತೀರ[ವು] ನೋಡಿದಳು ಕಾಂತೆ 8 ಫಲ್ಗುಣನ ಸಾರಥಿಯ ಇದು ಏನು ಸೋಗೆಂದು ಹಿಂಡು ಸ್ತ್ರೀಯರ ಶಿರೋರನ್ನಳೆ ಮೋಹನ್ನಳೆ ಮುನಿಸ್ಯಾತಕೆನ್ನೊಡನೆ ಅಪರಾಧವ ಕ್ಷಮಿಸೆ 8 ಶ್ಲೋಕ :ಅಕ್ಕರಿಂದಲೆ ರುಕ್ಮಿಣಿಗೆ ಇತ್ತ ಹೂವ ಮಿಕ್ಕ ಸತಿಯರಿಗ್ಯಾತಕೆಂಬ ಭಾವ ಕಕ್ಕುಲಾತಿಯ ಕಂಡೆ ನಿನ್ನಲ್ಲಿ ಜೀವ ಸೊಕ್ಕಬ್ಯಾಡವೊ ಸಾಕು ಹೋಗೆಲೊ ಗೋವ 9 ಮನ್ನಿಸೆ ಕೃಪಾಸಿಂಧು ಕೋಕಿಲಸ್ವರಗಾನೆ ಕುಳ್ಳಿರಿಸಿದ ಹೆಳವನಕಟ್ಟೆಯ ರಂಗನು ಕೃಪಾಂಗನು ದೇವೋತ್ತುಂಗ ವಿಕ್ರಮನು 9
--------------
ಹೆಳವನಕಟ್ಟೆ ಗಿರಿಯಮ್ಮ
ಪುರಂದರ ದಾಸರಾಯರ ಪೋಷಿಸುವ ಸಂತೋಷದಿಂದಲಿ ಪ ಪುರಂದರಗಡಾದ ಒಳಗೆ ಹಿರಿಯ ಸಾವುಕಾರನೆನಸಿ ಪರಿಪರಿಯ ಸೌಖ್ಯಗಳ ಸುರಿಸುತ್ತ ಇರುತಿರಲು ನರಹರಿ ತ್ವರಿತದಿಂ ಬ್ರಾಹ್ಮಣನಾಗುತ್ತ ಪೋಗುತ್ತ ಯಜಮಾನ ಕಂಡು ಜರಿದು ಬ್ರಾಹ್ಮಣನ್ಹೊರಗೆ ಹಾಕಲು ಮರುದಿವಸ ಮತ್ಹೋಗಿ ನಿಂತ 1 ಭಾರಿಭಾರಿಗೆ ಸಾವುಕಾರನ ಮೋರೆಗ್ಹೊತ್ತಿ ಮೇರೆಯಿಲ್ಲದೆ ಆರು ತಿಂಗಳು ಬೆನ್ನು ಬೀಳುತ್ತ ನಾಯಕರು ಈತನ ಆರು ಅಟ್ಯಾರೆಂದು ಬೈಯುತ್ತ ಬೇಸತ್ತು ಎರಡು ಹೇರು ರೊಕ್ಕಾ ಮುಂದೆ ಸುರಿಯುತ್ತ ಅದರೊಳಗೊಂದು ಡ್ಡಾರಿಸಿಕೋ ಎಂದು ಹೇಳಲು ನಾರಾಯಣ ಬಿಟ್ಹೋದ ನಗುತ2 ಹಿತ್ತಲಾ ಬಾಗಿಲಿಗೆ ಹೋಗಿ ಮತ್ತೆ ಆತನ ಮಡದಿಗಾಗಿ ವಿತ್ತ ತಾ ಯೆನುತ ತನ ಮಗನ ಮುಂಜ್ಯೆಂ ದೆತ್ತಿ ಕರದಿಂ ಬಾಯಿ ತೆರೆಯುತ್ತ ಆ ಪ್ರಾಣಿ ನುಡಿದಳು ಎತ್ತಣ ದ್ರವ್ಯವು ತನಗೆನುತ ನಿನ್ನ ಮೂಗಿನ ಮುತ್ತಿನ ಮೂಗುತಿಯ ಕೊಡು ಎನೆ ಉತ್ತುಮಳು ತೆಗೆದಿತ್ತಳಾಕ್ಷಣ 3 ಆಕಿ ಗಂಡನ ಕಣ್ಣೆದುರಿಗೆ ಹಾಕಿದನು ತಾ ಪಾಕಿ ಕೊಡೆಯೆನುತ ಅದು ಕಂಡು ಇದು ನ ಮ್ಮಾಕಿದೆಂದು ಈತ ನುಡಿಯುತ್ತ ಅನ್ಯರದು ಯಿಂಥಾ ದ್ಯಾಕೆ ಯಿರಬಾರದೆನ್ನುತ್ತಾ ಬೆಲೆ ಹೇಳು ಎನಲು ಎಂದಾಕೆ ಹೋದನು ತಿರೂಗಿ ಬಾರದೆ 4 ತಿರುಗಿ ಬ್ರಾಹ್ಮಣ ಬಾರದಿರಲು ಕರೆದು ತನ್ನ ಹೆಂಡತಿಯ ಬರಿಯ ನಾಶಿಕವನ್ನೆ ಕಂಡುನು ಮೂಗುತಿಯ ಎಲ್ಲೆನೆ ಮುರಿದಿಹುದು ಯೆಂದಾಕೆ ಹೇಳಲು ಒಳಗ್ಹೋಗಿ ನೀ ತಾರದಿರೆ ಅರೆವೆ ನಿನ್ನಯ ಜೀವವೆಂದನು ವಿಷಕೊಂಬೆನೆಂದು ಕರದಿ ಬಟ್ಟಲು ಧರಿಸಲಾಕ್ಷಣ ತ್ವರಿತದಲಿ ಹರಿ ಅದರೊಳಾಕಿದ 5 ಪುರುಷನಾ ಕೈಕೊಳಗೆಯಿಡಲು ತರಿಸಿ ತನ್ನಲ್ಲಿದ್ದ ಪೆಟ್ಟಿಗೆಯಾ ಅದು ಕಾಣದಿರಲು ಬೆರಗಾಗಿ ನೋಡಿದನು ಮಡದಿಯ ನಿಜ ಪೇಳುಯೆನಲು ಅರಸಿ ಪೇಳ್ದಳು ಕೊಟ್ಟ ಸುದ್ದಿಯಾ ಅಭಿಮಾನಕಂಜಿ ಅರದು ವಿಷವನು ಕುಡಿವೆನಲು ಸಿರಿರಮಣಾ ಕೊಟ್ಟ ಖರಿಯಾ 6 ಬಂದಿದ್ದ ಪರಿಪಕ್ವವೆನಗೆ ನ್ನಾವ ಕಾಲಕೆ ಆಗಬೇಕೆಂದ ವೈರಾಗ್ಯಭಾವದಿ ಜೀವಿಸಿಕೊಂಡಿರುವುದೇ ಛಂದ ಹೀಗೆನುತ ಮನೆ ಧನ ಕೋವಿದರ ಕರೆದಿತ್ತ ಹರುಷದಿ ಕಾವನಯ್ಯನ ದಾಸನಾದ 7 ಲಕ್ಷ್ಮಿಪತಿಯ ಪಾದದಲ್ಲಿ ಲಕ್ಷ್ಯವಿಟ್ಟು ವ್ಯಾಸರಾಯರ ಶಿಕ್ಷೆಯಿಂದಲಿ ಅಂಕಿತವ ಕೊಳುತ ತಿರಿಪಾದ ಐದು ಲಕ್ಷಪದ ಸುಳಾದಿ ಪೇಳುತ್ತ ಪ್ರತಿದಿವಸದಲ್ಲು ಅಪರೋಕ್ಷ ಪುಟ್ಟಲು ಮೋಕ್ಷಸ್ಥಾನಕ್ಕೆ ಕರೆದೊಯ್ದು ಅ ಧೋಕ್ಷಜನು ಸಂರಕ್ಷಿಸಿದ 8 ಘೊರ ನರಕದೊಳಗೆ ಬಿದ್ದಾ ಪಾರ ಜನರು ಚೀರುತಿರಲು ದ್ಧಾರ ಮಾಡಿದ ನಾರದಾರಿವರು ಅವ ತಾರ ಮಾಡಿ ಧಾರುಣಿಯಲಿ ಮತ್ತೆ ಬಂದರು ಸರುವೋತ್ತಮ ಹರಿ ನಾರಾಯಣನೆ ಎಂದು ಸಾರಿದರು ಹೀಗೆಂದು ತಿಳಿಯಲು ಮಾರ ಜನಕ ವಿಜಯವಿಠ್ಠಲ ಆರಿಗಾದರು ಒಲಿವ ಕಾಣಿರೊ 9
--------------
ವಿಜಯದಾಸ
ಪೇಳಿದರೆ ತಿಳಿಯುವುದೆ ಮಾಯಮೋಹಿಗಳಿಗೆ ನೀಲಶ್ಯಾಮನ ದಿವ್ಯಗೂಢದಿಹಮಹಿಮೆ ಪ ಬಂಜೆಗ್ಹೊಳೆವುದೆ ಪ್ರಸೂತಿವೇದನೆ ಸುದ್ದಿ ಸಂಜೀವನ ಮಹಿಮೆ ತಿಪ್ಪೆ ತೃಣಕೆ ತಿಳಿಯುವುದೆ ಅಂಜುಬುರುಕಗ್ವೀರತ್ವ ಸಾರಸವಿದೋರುವುದೆ ವಂಜಗೊಳುಪಾಗುವುದೆ ಹರಿಭಕ್ತಿಸಾರ 1 ನಾಗನ್ಹೆಡೆಯೆತ್ತಾಡಲಮೇಧ್ಯಜಂತರಿಯುವುದೆ ಕೋಗಿಲೆಯು ಕೂಗಲು ಕಾಗೆ ತಿಳಿಯುವುದೆ ಗೂಗೆಗ್ಹೇಳಲು ಅರುಣಪ್ರಭೆ ನೋಡಬಲ್ಲುದೆ ಭಾಗವತರ ನಡೆ ಭವರೋಗಿಗ್ಹೊಳಪಹ್ಯದೆ 2 ರಾಜ್ಯದಾಡಳಿತವನು ಚಾಂಡಾಳ ತಿಳಿಯುವನೆ ತೇಜಿಯ ಮಹಯೋಗ ಪಾಜಿಗ್ಹುಟ್ವುದೆ ಭೋಜನದ ಸವಿಸಾರ ರೋಗಿಗ್ಹೇಳಲು ಫಲವೆ ರಾಜಿಪ ಪರಲೋಕ ಕುಜನರರಿಯುವರೆ 3 ಹೀನನಿಗತಿ ತಿಳಿಯುವುದೆ ಜ್ಞಾನಬೋಧಾಮೃತ ಶ್ವಾನನಿಗೆ ಸೇರುವುದೆ ರಾಗ ಸುಖಸ್ವಾದ ಕೋಣಗ್ಹೊಳೆವುದೆ ವೇಣು ಮೃದಂಗ ಸುಖವಾದ್ಯ ಧ್ಯಾನಮಹಿಮೆಯ ಫಲವು ಭವಿಗೆ ತಿಳಿಬಲ್ಲುದೆ 4 ನೇಮದೊರುಷವು ಸುರಿಯೆ ಕಲ್ಲು ನೀರು ಕುಡಿಯುವುದೆ ಕಾಮಿಗಳಗನುಭವದ ಹಾದಿ ತಿಳಿ ಬಲ್ಲುದೆ ಪಾಮರಧಮರಿಗಿಲ್ಲ ದೀನಜನನಾಥ ಶ್ರೀ ರಾಮನಡಿ ನಿಜಭಕ್ತಿ ಸಾಧ್ಯವಾಗುವುದೆ 5
--------------
ರಾಮದಾಸರು
ಪೋಗದಿರೊ ಗೋಪಿಯರ ಮನೆಗೆ ಬಾ ಬೇಗ ಶ್ರೀ ಕೃಷ್ಣನೆ ನಮ್ಮ ಮನೆಗೆ ಪ. ಜಾಗು ಮಾಡದೆ ಹಿಡಿವರೊ ಕೇಳ್ ಮುನ್ನ ಭೋಗಿಸಿ ನಿನ್ನ ಸೆಳೆವರೊ ಮುನ್ನ 1 ಜಾರ ಚೋರನೆಂದು ಬಹುವಿಧದಿಂದ ನಾರಿಯರೆಲ್ಲ ದೂರುತಲಿಹರು ಮುನ್ನ ಸಾರಸಾಕ್ಷ ಕೃಷ್ಣ ಬಾರೆಲೊ ಮುನ್ನ ಸಾರಿ ಪೋಗಬೇಡವೊ ಏ ಚಿನ್ನ 2 ಹದ್ದಿಲ್ಲದ ಗೋಪೇರ ಗೊಡವ್ಯಾಕೊ ಸುದ್ದಿಯ ತರುವರೊ ನಿನ ಮೇಲೀಗದೂರಿ ಸದ್ದು ಮಾಡದೆ ಬಾ ಮುದ್ದು ಶ್ರೀ ಶ್ರೀನಿವಾಸ 3
--------------
ಸರಸ್ವತಿ ಬಾಯಿ
ಪೌರಾಣಿಕ ಕಥನ ಸೃಷ್ಟಿಯಲಿ ಕಡು ದುಷ್ಟ ರಾವಣ ಕಟ್ಟಳೆಯ ಕಂಗೆಡಿಸಲು ಅಷ್ಟರೊಳು ಭಯಪಟ್ಟು ದಿವಿಜರು ಒಟ್ಟುಗೂಡುತ ಸ್ತುತಿಸಲು ಥಟ್ಟನೆ ದಯವಿಟ್ಟು ದಶರಥಪಟ್ಟಮಹಿಷಿಯೊಳುದಿಸಲು ದಿಟ್ಟ ಕೌಶಿಕನಿಷ್ಟಿಯನು ಕೈಗೊಟ್ಟು ಸಲಹಿದ ಶ್ರೇಷ್ಠಧನುಜಘರಟ್ಟಗಾರತಿಯ ಬೆಳಗಿದರು1 ಪಾದರಜದಿಂ ಪೊರೆಯುತ ಸಾಧಿಸಿದ ಧನು ಭೇದಿಸುತ ಹಿತಳಾದ ಸೀತೆಯ ಒಲಿಸುತ ಕ್ರೋಧದಿಂದೆದುರಾದ ಪರಶುವನಾ ದಯಾನಿಧಿ ಗೆಲ್ಲುತ ಸಾಧುಮಾರ್ಗವಿನೋದ ಸೀತಾಹ್ಲಾದ ಪಾಪವಿರೋಧ ದಾನವಸೂದನಗಾರತಿಯ ಬೆಳಗಿದರು 2 ಚಿಕ್ಕ ತಾಯಿಯ ಸೊಕ್ಕುನುಡಿಗತಿಸೌಖ್ಯವನು ಹೋಗಾಡುತ ಘಕ್ಕನನುಜನ ನಿಜಸತಿಯತಾ ಸೌಖ್ಯದಿಂದೊಡಗೂಡುತ ವನಕ್ಕೆ ತಾ ಸಂಚರಿಸುತ ಮಿಕ್ಕಿ ಬಂದಾ ರಕ್ಕಸಿಯ ಕುಚದಿಕ್ಕೆಲವ ಖಂಡಿಸಿದ ಪ್ರಭುಗೆ ಮಾಣಿಕ್ಯದಾರತಿಯ ಬೆಳಗಿದರು 3 ಧೂರ್ತ ಖರತ್ರಿಶಿರಾದಿ ದಾನವ ಮೊತ್ತವನು ಸಂಹರಿಸುತ ದೈತ್ಯಮಾಯಾವೃತ್ತಿಮೃಗವನು ಮತ್ತಕಾಶಿನಿ ಬೇಡುತ ಸತ್ತ್ವನಿಧಿ ಬೆನ್ನಟ್ಟಿ ಸೀತೆಯ ದೈತ್ಯಪತಿ ಕೊಂಡೋಡುತ ಮತ್ತೆ ಕಾಣದೆ ಕೋಪದಿಂದರಸುತ್ತ ಬಂದ ಮಹಾತ್ಮ ರಾಮಗೆ ಮುತ್ತಿನಾರತಿಯ ಬೆಳಗಿದರು 4 ತೋಯಜಾಕ್ಷಿಯ ಸುದ್ದಿ ಪೇಳ್ದ ಜಟಾಯುವಿಗೆ ಗತಿ ತೋರುತ ವಾಯುತನುಜಸಹಾಯದಿಂ ಕಪಿರಾಯ ಸಖ್ಯವ ಮಾಡುತ ನ್ಯಾಯಗರ್ಭಿತ ಸಾಯಕದಿ ಮಹಕಾಯ ವಾಲಿಯ ಕೊಲ್ಲುತ ಪ್ರಾಯಶದಿ ಗಿರಿಯೊಡ್ಡಿ ಶರಧಿಗುಪಾಯದಿಂ ಬಂಧಿಸಿದ ಜಾನಕೀಪ್ರಿಯಗಾರತಿಯ ಬೆಳಗಿದರು 5 ಮನವಿವೇಕವ ನೆನೆದು ಬಂದಾ ಧನುಜಪತಿ ಸೋದರನಿಗೆ ಇನಶಶಿಗಳುಳ್ಳನಕ ಲಂಕಾವನಿಯ ಪಾಲಿಸುತ ಮಿಗೆ ರಣದಿ ರಾವಣಕುಂಭಕರ್ಣರ ಹನನಗೈಯುತ ಲೋಕಕೆ ಸೀತೆಯ ವಿನಯ ಗೈದಗೆ ಮೇರುಗಿರಿನಿಭ ಇಂದ್ರಪುಷ್ಪಕಾವೇರಿ ತಾ ಸಾಕೇತಕೆ ಸೇರಿ ಸಾನುಜರಿಂದ ಧರ್ಮದ ಮೇರೆದಪ್ಪದೆ ಸುಜನಕೆ ಸಾರಸಂಪದವಿತ್ತು ಲೋಕೋದ್ಧಾರನಾಗುತ್ತಖಿಳಕೆ ನೀರಜೇಕ್ಷಣ ಕರುಣಪಾರಾವಾರ ಶರಧೀಗಂಭೀರ ಲಕ್ಷುಮೀ ನಾರಾಯಣ ರೂಪ ಜಯ ಜಯ 7
--------------
ತುಪಾಕಿ ವೆಂಕಟರಮಣಾಚಾರ್ಯ
ಪ್ರಸನ್ನ ಶ್ರೀನಿವಾಸ ಕಲ್ಯಾಣ ಜಯ ಜಯ ಜಯ ಶ್ರೀನಿವಾಸ ಕೃತಿ ಮಾಯಾ ಶ್ರೀಶ ಭಯಬಂಧಮೋಚಕ ಜೀಯ ಆಹ ಸುಂದರ ಚಿನ್ಮಯಾನಂದ ಜ್ಞಾನಾತ್ಮನೆ ಮಂದಜಭವ ಸುರವೃಂದ ಸಂಸೇವ್ಯ ಜಯ ಪ ಸುರಸರಿತ ತೀರದಿಂದ ಸುರಮುನಿ ಭೃಗು ಬಂದು ನಿನ್ನ ಪರಸಮರಹಿತನೆಂದರಿತ ಆಹ ಸಿರಿಯು ನಿನ ಭಾವವನುಸರಿಸಿ ಬೇಗ ಕರವೀರ ಪುರ ಪೋಗೆ ಗಿರಿಪುತ್ತ ಪೊಕ್ಕೆಯೊ 1 ಮೇರುಸುತನೆ ಹಾಟಕಾದ್ರಿ ವೀರ ಭಕುತ ವೃಷಭಾದ್ರಿ ಸರೀಸೃಪಾವರಿಸಿದ ಸೌರಭ್ಯಗಿರಿಯಿದು ಪರವೇಂಕಟಾದ್ರಿಯು ಹರಿತು ವಿಪ್ರನ ಪಾಪ 2 ನೀನಿದ್ದ ಸ್ಥಳವೇ ವೈಕುಂಠ ನಿನಗಾರು ಸಮರುಂಟೆ ಶ್ರೀಶ ದೀನ ಸುಜನರಿಗೆ ನಂಟ ಆಹ ಧೇನು ಪಾಲ್ಗರೆಯಲು ಪಾಲಕ ಹೊಡೆಯಲು ದೀನರಕ್ಷಕ ನೀನು ಶಿರಸಿತ್ತು ಪೊರೆದೆಯೊ 3 ಏಳು 2ತಾಳದ ಉದ್ದ ರಕ್ತ ತಾಳಲಾರದೆ ಬಿದ್ದ ಗೋಪ ಚೋಳರಾಯಗೆ ಕೊಟ್ಟೆ ಶಾಪ ಆಹ ಪೇಳಬಲ್ಲೆನೆ ನಿನ್ನ ಅತಿಶಯ ಲೀಲೆಯ ಶೀಲ ಸುರರ ಗುರು ಚಿಕಿತ್ಸೆಯನೈದಿದೆ 4 ಸ್ವಗತ ಭೇದವಿಲ್ಲದಂಥ ಸ್ವಚ್ಛ ಚಿತ್ಸುಖಮಯನಂತ ಸ್ವಾನಿರ್ವಾಹಕ ವಿಶೇಷ ಆಹ ಶ್ವೇತವರಾಹನ ಸಂವಾದದಿಂದಲಿ ಸ್ವೀಕರಿಸಿದೀ ಸ್ಥಳ ಮೊದಲು ಪೂಜೆಯ ಕೊಟ್ಟು 5 ಸರಸ್ವತೀ ಸ್ವಾಮಿ ಪುಷ್ಕರಣಿ ಸುರಮುನಿನರರಿಗೆ ಸ್ನಾನ ಪರಸುಖಮಾರ್ಗ ಸೋಪಾನ ಆಹ ಸುರತಟಿನ್ಯಾದಿ ಸುತೀರ್ಥಗಳೆಲ್ಲವು ಸರಿತವಾಗಿರುತವೆ ಈ ಸ್ವಾಮಿ ತೀರ್ಥದಿ 6 ಆದಿಕಾರಣ ನಿನ್ನ 3ಲೀಲಾ ಮೋದಸಂಭ್ರಮವನ್ನು ನೋಡೆ ಕಾದುಕೊಂಡಿಹರು ಕೋವಿದರು ಆಹ ಸಾಧು ಸಂಭಾವಿತ ಬಕುಳಾದೇವಿಯುಗೈದ ನಿತ್ಯ ಸಂತೃಪ್ತ 7 ಮಂಗಳ ಚಿನ್ಮಯ ರಂಗಾ - ನಂಗನಯ್ಯನೆ ಮೋಹನಾಂಗ ತುಂಗ ಮಹಿಮನೆ ಶುಭಾಂಗ ಆಹ ಬಂಗಾರ ಕುದುರೆ ಮೇಲಂಗನೇರಲಿ 4ಬಂದ ಶೃಂಗಾರವೇನೆಂಬೆ ಎಂದಿಗೂ ಸ್ವರಮಣ8 ತೋಂಡಮಾನ ರಾಯನಣ್ಣ ಚಂಡಭೂಪನು ಆಕಾಶ ಕಂಡನು ಕಮಲದೊಳ್ ಶಿಶುವ ಆಹ ಅಖಿಳ ಕೋಟಿ ಅಸಮ ಈ ಶಿಶುವನ್ನು ಹೆಂಡತಿ ಧರಣಿಯು ಕೊಂಡಳು ಮಗಳಾಗಿ 9 ಮೂಲೇಶ ನಿನ್ನಯ ರಾಣಿ ಮೂಲಪ್ರಕೃತಿ ಗುಣಮಾನಿ ಭವ ತಾಯಿ ಆಹ ಶೀಲ ಭೂಪಾಲನ ಸುತೆ ಪದ್ಮಾವತಿಯೆಂದು 5 ಬಾಲೇರ ಸಹ ಪುಷ್ಪವನಕೆ ಬಂದಿಹಳೊ 10 ಮಹಿದೇವಿ ಕಮಲವಾಸಿನಿಯು ಬಹಿನೋಟಕ್ಕೆ ರಾಜಸುತೆಯು ಬಹು ಚಿತ್ರ ಪುಷ್ಪವ ಕೊಯ್ಯೆ ಆಹ ಮಹತಿಪಾಣಿಯು ಬಹು ವಯೋರೂಪದಲಿ ಬಂದು ಅಹಿತಲ್ಪ ಶ್ರೀಶನೆ ಪತಿಯೆಂದು ನುಡಿದ 11 ಹಾಟಕಗಿರಿಯಿಂದ ನೀನು ಬೇಟೆಯಾಡುವ ರೂಪ ತಾಳಿ ಘೋಟಕವೇರಿ ಸಂಭ್ರಮದಿ ಆಹ ಆಟವಾಡುವ ಬಾಲೆ ಬಳಿಯಲ್ಲಿ ಬಂದು ನೀ ನಾಟಕವಾಡಿದ್ದು ಪಾಡಲರಿಯೆನೊ 12 ನಿತ್ಯನಿರ್ಮಲ ಅವಿಕಾರ ಮತ್ರ್ಯರವೋಲು ನೀ 1ನಟಿಸೋ ಕೃತ್ಯಗಳರಿವರು ಯಾರೋ ಆಹ ಭೃತ್ಯವತ್ಸಲ ನೀನು ಬಕುಳೆಯ ಬಳಿ ಪೇಳಿ ಸಂತ್ಯಸಂಕಲ್ಪ ನಿನ ಸಂದೇಶ ಕಳುಹಿದೆ 13 ಪೊಂದಿದೆ ಫುಲ್ಕಸೀ ರೂಪ ಮಂಧಜಭವ ಶಿಶುವಾಗೆ ನಂದಿನಿಧರ ಯಷ್ಟಿಯಾದ ಆಹ ಮಂದಜಭವಾಂಡ ಗುಣಗುಲ್ಮ ಮಾಡಿ ನೀ ಕಂಧರದಲಿ ಗುಂಜ ಕಂಬುಸರವ ತೊಟ್ಟೆ 14 ನಾರಾಯಣಪುರಿಯಲ್ಲಿ ಮಾರನಯ್ಯನೆ ನಿನ್ನ ಸುಗುಣ ವಾರಿಧಿ ಪೊಕ್ಕಳು ಪದುಮೆ ಆಹ ಪುರಿಪ ಧರಣೀದೇವೀ ಪುತ್ರಿಗೆ ಜ್ವರವೆಂದು ಪರಿಪರಿ ಪರಿಹಾರ ಪರದು ನೋಡಿದರಾಗ 15 ಶುದ್ಧ ಸುಂದರ ಸುಖಕಾಯ ವೃದ್ಧ ಫುಲ್ಕಸೀ ವೇಷಧಾರಿ ಬದ್ಧ ಶೋಕರ ಬಳಿ ಪೋದೆ ಆಹ ಇದ್ದ ಸುದ್ದಿಯ ಅಬದ್ಧವಿಲ್ಲದೆ ಪೇಳಿ ಮುದ್ದು ಪದ್ಮೆಗೆ ಅನಿರುದ್ಧನೆ ಪತಿಯೆಂದೆ 16 ವಹಿಸಿ ನಿನ ಶಾಸನ ಬಕುಳ ಮಹದೇವನಾಲಯದಿಂದ ಮಹಿಳೆಯರ ಸಹ ಕೂಡಿ ಆಹ ಮಹಿದೇವಿಯಲಿ ಪೋಗಿ ವಿಹಿತ ಮಾತುಗಳಾಡಿ ಬಹು ಶುಭವಾರ್ತೆಯ ತಂದು ಪೇಳಿದಳೊ 17 ಶುಕಮುನಿ ಕರಪ್ರದವಾದ ಆಕಾಶ ನೃಪ ಲಗ್ನಪತ್ರ ಸ್ವೀಕರಿಸಿದೆ ಬಹು ಹಿತದಿ ಆಹ ವಾಗೀಶ ಶಶಿಧರ ನಾಗೇಶ ಸೌಪರ್ಣ ನಾಕೀಶ ಮೊದಲಾದ ಸುರರನು ಕರೆದೆ 18 ಶಿಷ್ಟ ಸನ್ಮುನಿಜನ ಕೂಟ ತುಷ್ಟ ಸುಮನಸ ಸಮೂಹ ಶ್ರೇಷ್ಠಸುಗಂಧಿ ಆಗಮನ ಆಹ ಸೃಷ್ಟ್ಯಾದಿಕರ್ತೆ ನಿನ ಸುಮಹೋತ್ಸವ ನೋಡಿ ಇಷ್ಟಾರ್ಥ ಪಡೆವರು ಎಷ್ಟೆಂಬೆ ವಿಭುವೆ 19 ಮಾಯ ಜಯೇಶ ಶ್ರೀವತ್ಸ ಛಾಯೇಶಗುಪಾಯ ಪೇಳಿ ತೋಯಜೆಯನು ಕರೆತಂದೆ ಆಹ ಸಿರಿ ಕೃತಿ ಕಾಂತಿ ನಿನ್ನಿಂದ ವಿಯೋಗರಹಿತರು ಎಂದೂ ಎಲ್ಲೆಲ್ಲೂ 20 ಬೃಹದಣುವಿಗೆ ಸತ್ತಾಪ್ರದನೆ ಸುಹೃದ ಸಂತೃಪ್ತ ಮುಖಾಬ್ಧೇ ದೃಢವ್ರತ ಶುಕಮುನಿಗೊಲಿದೆ ಆಹ ಬೃಹತೀ ಫಲಾನ್ನವನುಂಡು ಫೂತ್ಕಾರದಿ ಗೃಹ ಬಹಿರದಿ ಇದ್ದ ಜನರ ತೃಪ್ತಿಸಿದೆ 21 ಸುಜನರಿಗಾನಂದ ದಾತ ದ್ವಿಜರೂಢ ಜಗದೀಶ ನೀನು ಅಜಸುರರೊಡಗೂಡಿ ಬರೆ ಆಹ ಅಜಿತ ಚಿನ್ಮಯ ನಿನ್ನ ಆಕಾರ ನೃಪ ನೋಡಿ ನಿಜವಾಗಿ ಕೃತಕೃತ್ಯ ಧನ್ಯ ತಾನೆಂದ 22 ಅಜರ ಮಂದಿರ ಪೋಲ್ವ ಮನೆಯು ಪ್ರಜುವಲಿಸುವ ದಿವ್ಯ ಸಭೆಯು ನಿಜಭಕ್ತ ಪುರುಜನ ಗುಂಪು ಆಹ ದ್ವಿಜರ ವೇದಗಾನ ವಾದ್ಯ ಘೋಷಿಸಲಾಗ ನಿಜಸತಿ ಪದ್ಮೆಗೆ ಮಾಂಗಲ್ಯ ಧರಿಸಿದೆ 23 ಸುರಮುನಿಜನ ಮೂರು ವಿಧಕೆ ತರತಮ ಯೋಗ್ಯತೆ ಆರಿತು ಪರಿಪರಿ ಸಾಧನವಿತ್ತೆ ಆಹ ನೀರರುಹಜಾಂಡವು ನಿನ್ನಾಧೀನವು ಸಿರಿಭೂದೊರೆಯೇ ಶ್ರೀನಿವಾಸ ದಯಾನಿಧೆ 24 ನೀ ನಿಂತು ನುಡಿಸಿದೀ ನುಡಿಯು ನಿನ್ನಡಿಗಳಿಗೆ ಅರ್ಪಣೆಯು ಚನ್ನಮಾರುತ ಮನೋಗತನೆ ಆಹ ವನರುಜಹಾಸನ ತಾತ ಪ್ರಸನ್ನ ಶ್ರೀನಿವಾಸ ನಿನಗೆ ಪ್ರೀತಿಯಾಗಲೊ ಸುಹೃದ ಸಂತೃಪ್ತ 25
--------------
ಪ್ರಸನ್ನ ಶ್ರೀನಿವಾಸದಾಸರು
ಪ್ರಾಣೇಶನೆನ್ನೊಳಗೆ ಕೇಣವಾಂತಿಹನೇಕೆ ಗೋಣಬಿಗಿವಂತಾಗೆ ನಾಣದೇಕೆ ಇಲ್ಲದುದನಿವನೊಳಾಂ ಸೊಲ್ಲಿಸಿದೆನೇನಮ್ಮ ಕಲ್ಲೆದೆಯಿದೇವೆಳ್ವೆ ನಲ್ಲನಿವಗೆ ಕಂಡಸುದ್ದಿಯ ಪೇಳೆ ಕೆಂಡದಂತಾಗುವರೆ ಕಂಡುದಿಲ್ಲಕ್ಕಟೀ ಭಂಡತನವ ನ್ಯಾಯವನು ಸೂಚಿಸಲು ನೋಯುವಂತಾಡುವರೆ ಜಾಯೆಯೊಳಗೀತೆರದನ್ಯಾಯಮರರೆ ಕಪಟನಾಟಕ ಸೂತ್ರಧಾರನಿವನೆ ಸುಪವಿತ್ರ ಕೇಳೆನ್ನ ಪ್ರಾಣಸಖನೆ ತಪನವಂಶಾಬ್ಧಿ ರಾಕೇಂದುವಿವನೆ ವಿಪುಲ ಶೇಷಾದ್ರೀಶನೆನಿಪ ವರನೆ
--------------
ನಂಜನಗೂಡು ತಿರುಮಲಾಂಬಾ
ಬಂದಾ ಬಂದಾ ಉಡುಪಿಲಿ ನಿಂದ ನಿಂದಾ ಪ. ಬಂದ ಗೋಪೇರ ವೃಂದಗಳ ತಾ ನಂದು ದಣಿಸುತ ಸುಂದರಾಂಗನು ಮಂದರೋದ್ಧರ ಬೃಂದೆಯಿಂದಲಿ ಅ. ಮುದ್ದುಸುರಿಸುತ ಗೋಕುಲದೊಳಿರೆ ಕದ್ದು ಬೆಣ್ಣೆಯ ತಿಂದನೆನುತಲಿ ಸುದ್ದಿ ತಾಯಿಗೆ ಪೇಳಿ ಸತಿಯರು ಗದ್ದಲದಿ ತನ್ನ ಗಾರು ಮಾಡಲು ಮುದ್ದು ಯತಿಗಳು ಎದ್ದು ಪೂಜಿಸಿ ಮುದ್ದಿ ಬೆಣ್ಣೆ ನೇವೇದ್ಯವಿಡುತಿರೆ ಸದ್ದು ಇಲ್ಲದೆ ತಿಂದು ಸುಖದಲಿ ಇದ್ದೇನೆಂಬುವ ಬುದ್ಧಿಯಿಂದಲಿ 1 ಭಾರವಿಳುಹಲು ಕೋರೆ ಭೂಮಿಯು ನಾರದಾದ್ಯರ ನುತನು ತಾ ಬರೆ ನಾರಿಯರು ಮನ ಬಂದ ತೆರದಲಿ ಜಾರ ಚೋರನೆನುತ್ತ ಬೈಯ್ಯಲು ಧೀರ ಯತಿಗಳು ಸೇರಿ ಪರಬೊಮ್ಮ ಶ್ರೀರಮಣನೆನ್ನುತ ಸ್ತುತಿಸುವೋ ವಾರುತಿಗೆ ಮೈದೋರಿ ಭಕುತರ ಪಾರಿಗಾಣಿಪೆನೆಂಬ ನೆವದಲಿ 2 ಹಸಿದುಗೋಪರÀ ಯಜ್ಞವಾಟಕೆ ಅಶನ ಬೇಡಲು ಕಳುಹೆ ಗೊಲ್ಲರ ಪಸುಳರಿಗೆ ನೈವೇದ್ಯವಿಲ್ಲದೇ ವಶವೆ ಕೊಡಲೆಂದೆನ್ನೆ ಋಷಿಗಳು ವಸುಧಿಪತಿ ಸರ್ವೇಶನೆಂದರಿ ದಸಮಯತಿಗಳು ಕ್ಷಣ ಕ್ಷಣಕ್ಕೆ ಷ ಡ್ರಸದ ಆರೋಗಣೆಯ ಮಾಡಿಸೆ ಕುಶಲದಲಿ ಮೃಷ್ಟಾನ್ನ ಭುಜಿಸಲು 3 ಬಾಲ ಕಂದಗೆ ತೊಡಿಗೆ ತೊಡಿಸಲು ಲೀಲೆಯಿಂದಲಿ ಗೋಪಿದೇವಿಯು ಕಾಳ ಮಡುವಿಲಿ ಧುಮಿಕಿ ಎಲ್ಲವ ಕಳೆದು ಬರೆ ಆಟಗಳ ಪರೆವೆಲಿ ಶೀಲಯತಿಗಳು ವಾರ ವಾರಕೆ ಬಾಲ ತೊಡಿಗೆ ಶೃಂಗಾರಗೈಯ್ಯಲು ಆಲಯವ ಬಿಟ್ಟೆಲ್ಲಿ ಪೋಗದೆ ಓಲಗವ ಕೈಕೊಳ್ವೆನೆನ್ನುತ 4 ಗೋಪಜನ ಗೋವ್ಗಳನೆ ಕಾಯಲು ಗೋಪಿಯರು ತನ್ನ ಗುಲ್ಲು ಮಾಡಲು ಪಾಪಿ ಕಂಸ ಅಟ್ಟುಳಿಯ ಪಡಿಸಲು ಭೂಪತಿಯ ಪದವಿಲ್ಲದಿರಲು ಈ ಪರಿಯ ಬವಣೆಗಳ ತಾಳದೆ ಗೋಪ್ಯದಿಂದಿಲ್ಲಡಗಿ ನಿಂತು ಗೋಪಾಲಕೃಷ್ಣವಿಠಲ ಯತಿಗಳ ಗೌಪ್ಯಪೂಜೆಯಗೊಂಬ ವಿಭವಕೆ 5
--------------
ಅಂಬಾಬಾಯಿ