ಒಟ್ಟು 218 ಕಡೆಗಳಲ್ಲಿ , 64 ದಾಸರು , 209 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಗೋಪಾಲದಾಸರಾಯ ಮಾಂಪಾಲಯ ಪ ಗೋಪಾಲದಾಸರಾಯಾ ಅಪಾರ ಮಹಿಮ ಮ- ತ್ಪಾಪಗಳೋಡಿಸಿ ಕಾಪಾಡೊ ಗುರುರಾಯ ಅ.ಪ ಸುಜನ ವಿಜಯದಾಸರಿಗೆ ನಿಜ ಶಿಷ್ಯರೆನಿಸಿದ 1 ಧನ್ವಂತ್ರಿ ಜಪದಿ ಜಗನ್ನಾಥದಾಸರ ಬನ್ನವ ಬಿಡಿಸಿದ ಘನ್ನ ಮಹಿಮಗುರು 2 ಏನು ಕರುಣವೋ ಶ್ರೀ ಮಾನವಿ ದಾಸರಿಗೆ ಸಾನುರಾಗದಿ ಆಯುರ್ದಾನವ ಮಾಡಿದ 3 ಪದುಮನಾಭನ ಪದಪದುಮ ಮಹಿಮೆಗಳ ವಿಧ ವಿಧ ಪದಸುಳಾದಿಗಳಿಂದ ತುತಿಸಿದ 4 ಶರಣು ಜನಕೆ ಸುರತರುವೆನಿಸಿ ಧರೆಯೊಳು ಮೆರೆವ ' ಕಾರ್ಪರ ನರಹರಿ’ ಯ ನೊಲಿಸಿದಂಥ5
--------------
ಕಾರ್ಪರ ನರಹರಿದಾಸರು
ಗೋಪಿ ಜನಪಾಲ ಪಾವನ ತರಲೀಲ ಲಕ್ಷ್ಮೀಲೋಲ ಕಾಲನಮಿತ ಸುರಜಾಲ ಸೇವಿತ ಶೌರಿ ಪ ವಂದಿತ ಸುರಮುನಿ ವೃಂದ ಭಕುತಜನ ಬಂಧುವಾಗಿರುವ ಗೋವಿಂದ ಗೋಪಾಲದೇವ ಮಂದಹಾಸ ಬಲಿ ಬಂಧನ ಮುರಹರ ಸಿಂಧು ಶಯನ ಗೋಪಿಕಂದ ಮುಕುಂದ 1 ಕಂಸಾರಿ ಕರುಣಾಭ್ದಿ ಶೃಂಗಾರಿ ಸುಜನ ಮನೋರಥ ಸುರತರು ಹಾರ ಹೀರ ಗಂಭೀರ ವೈಯಾರ 2 ಅಂಬುಜ ಭವನುತ ಶಂಬರಾರಿಯಪಿತ ಜಂಭಾರಿ ನಮಿತ ಹೇರಂಬ ಜನಕಪ್ರೀತ ಕಂದರ ಕಮಳಾಂಬಕ ರಮಣ 3 ರಾಗಿ ಜನರ ಭವರೋಗ ಹರಣಹರಿ ನಗಧರ ಸಗರ ವಂಶೋದ್ಧಾರ ಖಗವರ ಗಮನ ಸುಗುಣ ಗಂಭೀರ 4 ದುರಿತ ಸಂಹಾರಿ ಕರದಿ ಚಕ್ರಧಾರಿ ಸುರರ ಸಿರಿ ಧುರ ಧೀರ ಚಿಪ್ಪಳಿವಾಸ ವೇಣುಗೋಪಾಲ 5
--------------
ಕವಿ ಪರಮದೇವದಾಸರು
ಚರಣವದೋರಿ ಸಲಹೋ ಮುರಾರಿ | ಧರಿಯೊಳು ಸಾರಿದವರ ಸಹಕಾರಿ ಪ ಸುರಧೇನು ನೀನು | ಕರೆದುಂಬೆ ನಾನು | ಸುರತರು ನೀನು | ಆಶ್ರಯಿಸುವೆ ನಾನು 1 ಸುರಮಣಿ ನೀನು | ಅರ್ಥಾರ್ಥಿ ನಾನು | ದೊರೆಯನ್ನ ನೀನು | ಸುಖಿಸುವೆ ನಾನು 2 ಗುರುಮಹಿಪತಿ ಪ್ರಭು | ಪರದೈವ ನೀನು |
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ಚರ್ಯನಾಮುಗಿವೆನು ಕೈಯ್ಯಾ ಪ ಮಂತ್ರಸದನ ಪದ ಚಿಂತಕ ಶ್ರೀ ರಘು ಕಾಂತಕರಜ ರಘು ದಾಂತ ಯತೀಂದ್ರರ ಅ.ಪ ಅಂತರಂಗದಿ ಸಂತತ ಶ್ರೀಹರಿಯ ಚಿಂತಿಸುತಲಿ ಭೂಮಿಯ ಕಾಂತ ದಂಷ್ಟ್ರದಿ ಸಂಜನಿಸಿದ ನದಿಯ ಸಂಗಮ ಶುಭನಿಲಯ ವಿಶ್ರಾಂತ ಸುಮಹಿಮರ 1 ಪತಿ ಲಕ್ಷ್ಮಣರ ಪಾದಾಂಬುಜ ಮಧುಪರ ಮೋದಾಶ್ರು ಸುರಿಸುತ ಪೂಜಿಸಿದವರ ಪುಲಕೀತ ವಿಗ್ರಹರ ವಾದಿವಾರಣ ಮೃಗಾಧಿಪರೆನಿಸುತ ಮೋದತೀರ್ಥ ಸುಮ ತೋದಧಿ ಚಂದಿರ 2 ಇಳಿಯೊಳು ಚರಿಸುತ ಬುಧ ಜನರನ್ನು ಚಲಿಸುತ ಛಾತ್ರರನು ತಿಳಿಸೀ ಸಚ್ಛಾಸ್ತ್ರವ ಮರ್ಮಗಳನ್ನು ಉದ್ಧರಿಸ್ಯವರನ್ನು ಯಳಮೇಲಾರ್ಯರ ಒಲುಮೆ ಪಡೆದು ಭವ ಕಲುಷ ವಿದೂರರ 3 ದಾಸರ ಶುಭಚರಿಯ ಸ್ತುತಿಸಿ ಶೇವಿಸಿ ಪಡೆದರು ಗುರುಕೃಪೆಯ ನೋಳ್ಪರಿಗಾಶ್ಚರ್ಯ ನತ ಜನರಘ ಪರ್ವತ ಪವಿ ಸನ್ನಿಭ ಕ್ಷಿತಿ ಸುರತತಿ ಸೇವಿತ ಪದ ಪದ್ಮರ 4 ಜಾಣ ಮಾನವರನ ಸಾನುರಾಗದಿ ಧ್ಯಾನಿಸಲಿವರನ್ನ ಕಾಮಿತ ಗರಿವರನ ಶ್ರೀನಿಧಿ ಕಾರ್ಪರ ಸ್ಥಾನಗ ನರಪಂಚನನನೊಲಿಸಿದ ಮೌನಿವರೇಣ್ಯರ 5
--------------
ಕಾರ್ಪರ ನರಹರಿದಾಸರು
ಜಯದೇವ ಜಯದೇವ ಜಯರಾಮಲಿಂಗಾ ಜಯಜಯವೆಂದು ಬೆಳಗುವೆ ಆರತಿ ಸುರತುಂಗಾ ಪ ಸ್ವಾನಂದದ ನಿಜಕಾಶೀಪುರದಿಂದ ಅತ್ಯರಳಿ ನಾನಾಸ್ಥಳಗಳ ನೋಡುತ ಬಂದು ನೀತೀರ್ಥದಲಿ ದೀನೋದ್ದಾರ ಕಾಪಾಪನಾಶನಿ ಹರಿಸುತಲಿ ಖೂನವ ತೋರಿದೆ ಓಂಕಾರೇಶ್ವರನೆನಿಸುತಲಿ 1 ಕಾಲ ಕೆರಾಘವಸುಖದರುಕ್ಷಣಲೆಂದು ತಳಿಯೊಳುಖ್ಯಾತಿಗೆ ಬಂದು ರಾಮೇಶ್ವರನೆಂದು ನಲಿದರುಗಿರಿಜಾನಂದಿಸರ್ವದೇವರು ಬಂದು ಸಲುಹುವೆ ಭಕ್ಷರಿಗಿಷ್ಟಾರ್ಥವ ನೀಡುತಲಿಂದು 2 ನಿನ್ನಯ ಮಹಿಮೆಯ ಹೊಗಳಲು ಮನುಜರಿಗಳವಲ್ಲಾ ಮುನ್ನಾಭರಣವ ಆಗಿಹಶಶಿನೇತಾಬಲ್ಲಾ ಎನ್ನೊಳು ಬೀರುತರಕ್ಷಿಸುಘನ ತಾರಕನೊಲ್ಲಾ ಸನ್ನುತ ಮಹಿಪತಿ ನರದನ ಪ್ರಭು ಪಾರ್ವತಿನಲ್ಲಾ 3
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ಜಯರಾಘವ ಜಯರಾಘವ ಜಯರಾಘವ ರಾಮಾ| ಶ್ರಯಕಾರಣಸುಖಪೂರಣ ಭವತಾರಣ ನಾಮಾ ಪ ಜಗಪೋಷಣ ಮೃದುಭಾಷಣ ಸುರತೋಷಣಕಾರಿ| ಅಘಶೋಷಣ ಕುಲಭೂಷಣ ಖರದೂಷಣ ಹಾರಿ 1 ಅತಿಸುಂದರ ಗುಣ ಮಂದಿರ ದಶಕಂದರ ಹರಣಾ| ಧೃತಮಂದಿರ ಗಜೇಂದರ ಪ್ರಯಾ ಸಾಂದರ ಕರುಣಾ 2 ಪತಿ ವಾಣೀಪತಿ ದಿವಸಾಪತಿ ಧೇಯ| ಗುರುಮಹೀಪತಿ ಸುತಸಾರಥಿ ಸೀತಾಪತಿರೇಯಾ 3
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ಜಾಗುರೇ ಯೋಗೀಶೇ ಭಲರೇಜಾಗುರೇ ಯೋಗೀಶೇಜಾಗುರೇ ಯೋಗೀ ಚತುರ್ಗುಣ ಪೋಗಿರಾಗವ ನೀಗಿ ತಾನೆ ತಾನಾಗಿ ಪ ಆಶಾವರ್ಜಿತೇ ಬಹಳಾಯಾಸ ನಿರ್ಜಿತೇವಾಸನನಾದಂ ಮಹಮತ್ತಾದಂಭಾಸುರತಾದಂ ಭವನೀಜಾದಂ 1 ಕರ್ಮ ವಿದಾರಿತೇ ಬಹಳ ವರ್ಮನಿಸ್ಸಾರಿತೇನಿರ್ಮಳಾತ್ಮಂ ನಿಷ್ಕಳಾತ್ಮಂ ಸ್ವಪೂರ್ಣತ್ಮಂಸಮತೇಜಾತ್ಮಂ 2 ವಾದಾ ದೂರಿತೇ ಬಹಳ ವಿವಾದೋತ್ತಾರಿತೇ ಸದಾನಂದಂ ಸಹಜಾನಂದಂಚಿದಾನಂದ ಗುರು ತಾನಾದಂ 3
--------------
ಚಿದಾನಂದ ಅವಧೂತರು
ತನುವೆನ್ನದು ಚೇತನವೆನ್ನದು ಎಂದು ಅನುದಿನ ಪೋಷಣೆಯನು ಮಾಡಿದೆ ಹರಿ ಪ ಚಿನುಮಯ ನಿನ್ನನು ನೆನೆವೆನೆಂದರೆ ಮನ ತನುಮಧ್ಯೆಯರ ತನುವಿನೊಳಿರುತಿಹುದು ಅನಘ ನಿನ್ನನು ನೋಡುವೆ ನಾನೆನ್ನಲು ದೃಷ್ಟಿ ಕನಕಾಂಗಿಯರ ಕುಂಭಸ್ತನದ ಮೇಲಿಹುದಯ್ಯ1 ಚರಣದ ಪೂಜೆಯೊಳಿರುವೆನೆಂದರೆ ಕರವರೆಡು ಕೋಮಲೆಯರನರಸುವುವು ಹರಿಕಥಾಶ್ರವಣದೊಳಿರೆ ಈ ಕಿವಿಗಳು ಹರಿಣಾಕ್ಷಿಯರ ಕಂಠಸ್ವರಕೆ ಮೋಹಿಪವಯ್ಯ 2 ದುರಿತದೂರನ ನಾಮ ಸ್ಮರಿಸದು ನಾಲಿಗೆ ಸರಸಿಜಾಕ್ಷಿಯರೊಳು ಸರಸೋಕ್ತಿ ಪಡೆದು ಚರಣಶ್ರೀತುಳಸಿಯನರಿಯದೆ ನಾಸಿಕ ತರುಣಿಯ ಮೈಗಂಪನರಸಿ ಹಿಗ್ಗುವದಯ್ಯ 3 ನಿನ್ನಂಘ್ರಿಗೆರಗದೆ ಕುನ್ನಿಶರೀರವಿ ದುನ್ನುತಸ್ತನವುಳ್ಳ ಕನ್ನೆಯರೊಳ್ ತನ್ನ ಸುರತಸುಖವನೆ ಚಿಂತಿಸುವದು ಎನ್ನಾಧೀನದೊಳಿಲ್ಲ ನೀನೆ ಬಲ್ಲೆ 4 ಎರವಿನ ಸಿರಿಯಂತೆ ಕರಣಕಳೇವರ ಬರಿದೆ ನನ್ನದು ಎಂದು ಮೆರೆದೆ ನಾನು ಹರಿ ನಿನ್ನದೇ ಸರಿ ದುರಿತಸುಕೃತಕೆನ್ನ ಗುರಿಮಾಡದೆ ಕಾಯೋ ವರದವಿಠಲ ಕೃಷ್ಣ 5
--------------
ವೆಂಕಟವರದಾರ್ಯರು
ತನುವೆನ್ನದು ಚೇತನವೆನ್ನದು ಎಂದು ಅನುದಿನ ಪೋಷಣೆಯನು ಮಾಡಿದೆ ಹರಿ ಪ ಚಿನುಮಯ ನಿನ್ನನು ನೆನೆವೆಂನೆಂzರÀಮನ ತನುಮಧ್ಯೆಯರತನು ವಿನೊಳಿರುತಿಹುದು ಅನಘ ನಿನ್ನನು ನೋಡುವೆ ನಾನೆನ್ನಲು ದೃಷ್ಟಿ ಕನಕಾಂಗಿಯರ ಕುಂಭಸ್ತನದ ಮೇಲಿಹುದಯ್ಯ 1 ಚರಣದ ಪೂಜೆಯೊಳಿರುವೆನೆಂದರೆ ಕರವೆರಡು ಕೋಮಲೆಯರ ನರಸುವುವು ಹರಿಕಥಾಶ್ರವನದೊಳಿರದೆ ಈ ಕಿವಿಗಳು ಹರಿಣಾಕ್ಷಿಯರ ಕಂಠ ಸ್ವರಕೆಮೋಹಿಪವಯ್ಯ 2 ದುರಿತದೂರನ ನಾಮಸ್ಮರಿಸದು ನಾಲಿಗೆ ಸರಸಿಜಾಕ್ಷಿಯರೊಳು ಸರಸ್ತೋಕ್ತಿಪಡೆದು ಚರಣ ಶ್ರೀ ತುಳಸಿಯ ನರಿಯದೆ ನಾಸಿಕ ತರುಣಿಯ ಮೈಗಂಪನರಸಿ ಹಿಗ್ಗುವದಯ್ಯ 3 ನಿನ್ನಂಘ್ರಿಗೆರಗದೆ ಕುನ್ನಶರೀರ ವಿದುನ್ನತಸ್ತನವುಳ್ಳ ಕನ್ನೆಯರೋಳ್ ತನ್ನ ಸುರತಸುಖವನ್ನ ಚಿಂತಿಸುವದು ಯನ್ನಾಧೀನದೊಳಿಲ್ಲ ನೀನೇ ಬಲ್ಲಿ 4 ಎರವಿನ ಸಿರಿಯಂತೆ ಕರಣಕಳೇವರ ಬರಿದೆ ನನ್ನದು ಎಂದು ಮೆರೆದೆ ನಾನು ದುರಿತ ಕೃತಕೆನ್ನ ಗುರಿಮಾಡದೆ ಕಾಯೋ ವರದ ವಿಠಲ ಕೃಷ್ಣ 5
--------------
ಸರಗೂರು ವೆಂಕಟವರದಾರ್ಯರು
ತೋರಮ್ಮಯ್ಯ ಯತಿಕುಲ ಸರ್ವಭೌಮನ್ನ ಪಮೂರವತಾರದ ಪುಣ್ಯರಾಶಿಯನು ತೂರಿಸುಜನರ ಪೊರೆವ ಉದಾರನ ಅ.ಪಅಸುರ ಬಾಲನಂತೆ ಹರಿಯಲಿ ಅಸಮ ಭಕ್ತಿಯಂತೆಅಸುರಾರಿಯ ನರಸಿಂಹರೂಪವನು ಅಸುರತಾತನಿಗೆ ತೋರ್ದನಂತೆ 1ಪರಮಹಂಸನಂತೆ ಪುರಂದರದಾಸರ ಗುರು ಅಂತೆಅರಸನ ರಕ್ಷಿಸಿ ಅರಸನಾಗಿ ಕ್ಷಣ ಉದ್ಗ್ರಂಥಗಳನು ರಚಿಸಿದನಂತೆ 2ಕಡುಬಡತನವಂತೆ ಸುದಾಮನ ಮರಸಿ ಬಿಟ್ಟಿತಂತೆಸಡಗರದಿಂದ ಸನ್ಯಾಸಿಯಾಗಿ ದರ್ಮಸಾಮ್ರಾಜ್ಯವನಾಳಿದನಂತೆ3ಕಾಮಧೇನುವಂತೆ ಕಲಿಯುಗ ಕಲ್ಪವೃಕ್ಷವಂತೆನೇಮದಿಂದ ಸೇವೆಯನು ಮಾಡಿದರೆ ಕಾ'ುತಾರ್ಥಗಳನೀಯ್ವನಂತೆ 4ಸಾಲವಪುರದಂತೆ ಭಕ್ತರಿಗೊಲಿದು ಬಂದನಂತೆಮೂಲಸ್ಥಾನ ಮಂತ್ರಾಲಯವಂತೆ ಭೂಪತಿ'ಠಲನ ತೋರುವನಂತೆ 5
--------------
ಭೂಪತಿ ವಿಠಲರು
ದಯದಿ ಪಾಲಿಸೋ ವಾದಿರಾಜ ಗುರುವೇ | ನತಜನ ಸುರತರುವೇ ಪ ಹಯಮುಖ ಪದ ಸದ್ವನಜ ಸುಭೃಂಗಾ | ಪಾಲಿಸು ದಯಾಪಾಂಗಾ ಅ.ಪ. ರಜತ ಪೀಠದೊಳು ಕೃಷ್ಣ ಪೂಜೆಗಳನ್ನು | ಪರಿಪರಿ ರಚಿಸಿನ್ನೂ |ಕುಜನರ ಭೇದಿಪ ಭಜನೆ ಪದಗಳನ್ನೂ | ಸುಜನಕಿತ್ತೆ ನೀನೂ ||ಭಜಿಸೆ ಬಂದವರಿಗನ್ನೋದಕಗಳನೂ | ಏರ್ಪಡಿಸಿನ್ನೂ |ನಿಜ ಜನರ ಪೊರೆವ ಸುವ್ಯವಸ್ಥೆಗಳನ್ನೂ | ರಚಿಸಿ ಮೆರೆದೆ ನೀನೂ 1 ಅಂತರಂಗದಿ ಪೂಜಿಪೆ ಹಯವದನನ್ನ | ಭಾವಿ ಮರುತ ಎನ್ನ|ಅಂತರಂಗದೊಳು ನೆಲಿಸುತ ನೀಯೆನ್ನ | ಸಂಚಿತಾದಿಯನ್ನ ||ಅಂತಗಾಣಿಪ ಶ್ರೀ ಅಂತರಾತ್ಮನನ್ನ | ಚಿಂತೆ ಪಾಲಿಸು ಮುನ್ನ |ಯೆಂತು ವರ್ಣಿಸಲಿ ತವ ಮಹಿಮೆಗಳನ್ನ | ನಿಂತು ನಲಿ ವದನದೊಳೆನ್ನ 2| ಭರತ ಖಂಡದಿ ತೀರ್ಥ ಕ್ಷೇತ್ರ ಚರಿಸೀ | ತತ್ಪ್ರಂಬಂಧ ರಚಿಸೀ |ವಿರಚಿಸಿದೆಯೋ ರುಕ್ಮಿಣೀಶ ಕಾವ್ಯಾ | ಯುಕ್ತಿಮಲ್ಲಿಕೇಯಾ ||ಸುರಸ ಪದಗಳಲಿ ತತ್ವ ಪುಂಜವನ್ನ | ರಚಿಸಿ ಮೆರೆದೆರನ್ನ |ನಿರಣಯಾದಿಗಳ ಭಾವಗಳನ್ನ | ಕನ್ನಡದಿ ರಚಿಸದೆ ಘನ್ನ 3 ಸ್ವಾದಿ ಪುರದಿ ಬಲು ಮುದದಲಿ ಮೆರೆದಾ | ಬಿರಿದು ಪೊತ್ತ ಶೈವಾವಾದಿಸೆ ನಿನ್ನೊಳು ಸೋತು ನಿಂತನವ | ಪಾದದಿ ಬಿದ್ದು ಅವ || ಮೇದಿನಿಯೊಳ್ ನಿಮಗೆ ಸಮರು ಆವ | ಎಂದೊಪ್ಪಿಸಿದನು ಅವ |ಮೋದದಿಂದಲಿ ಬಸವ ಚಿನ್ಹಿತನಾದ | ತವ ಚರಿತೆ ಆಗಾಧಾ 4 ಪಂಚ ಸುವೃಂದಾವನಗಳ ರಚಿಸುತ್ತಾ | ತಾವ್ನಡುವಿರ ಬೇಕೆನುತಾ |ಅಂಚೆಗಮನ ಪ್ರಾಣ ಗಂಗಾಧರನಾ | ಗುರು ಗೋವಿಂದ ವಿಠಲನಾ ||ಸಂಚಿಂತಿಸಿ ನಿಲಿಸುತ ನಾಲ್ಕರಲ್ಲೀ | ಚತುರ ದಿಕ್ಕಿನಲ್ಲೀ |ಪಂಚರೂಪಿ ನಿಷ್ಕಿಂಚಿನ ಪ್ರಿಯ ಹರಿಯಾ | ಪುರವ ಸೇರಿದಯ್ಯಾ 5
--------------
ಗುರುಗೋವಿಂದವಿಠಲರು
ದಯಾನಿಧೆ ಶ್ರೀ ರಾಘವೇಂದ್ರ ಗುರುವೆ ಕಾಮಿತ ಸುರತರುವೆ ಪ ಧರಾತಳದಿ ಸುರತರೂವರೋಪಮ ತ್ವರಾದಿ ಎನ್ನನು ಪೊರೇಯೊ ಗುರುವರ 1 ಗಡಾನೆ ತವ ಪದ ಜಡಾಜ ಯುಗಲದಿ ಧಢಾ ಮನವ ಕೊಡೊ ಒಡೇಯ ಗುರುವರ 2 ಎಷ್ಟೊ ಪೇಳಲೆನ್ನ ಕಷ್ಟಾ ರಾಸಿಗಳನ್ನು ಸುಟ್ಟುಬಿಡೊ ಸರ್ವೋತ್ಕøಷ್ಟಾ - ಮಹಿಮ ಗುರು 3 ಮೋಕ್ಷಾದಾಯಕ ಎನ್ನ ವೀಕ್ಷೀಸಿ ಮನೋಗತಾ - ಪೇಕ್ಷಾವ ಪೂರೈಸೆÀೂ ತ್ರ್ಯಕ್ಷಾದಿಸುರ ಪ್ರೀತ 4 ದಾತಾನೆ ನೀ ಎನ್ನ ಮಾತೂ ಲಾಲಿಸೊ ನಿತ್ಯ ನೀತಾ - ಗುರು ಜಗನ್ನಾಥ ವಿಠಲ ಪ್ರಿಯ 5
--------------
ಗುರುಜಗನ್ನಾಥದಾಸರು
ದಯಾನಿಧೇ ಶ್ರೀ ರಾಘವೇಂದ್ರ ಗುರುವೇ ಕಾಮಿತ ಸುರತರುವೇ ಪ ಭವ - ಭಯಾ ಹರಿಸಿ ತವ ಪಾದ - ಪಯೋಜ ಯುಗ ತೋರೋ ಅ.ಪ ಧರಾತಳದಿ ಸುರ - ತರೂ ಸುರಭಿವರ ತೆರಾದಿ ಕಾಮಿತ - ಕರಾದು ಮೆರೆಯೋ 1 ಗಡಾನೆ ತವ ಪದ - ಜಡಾಜ ಭಜಿಸುವ ಧೃಡಾವೆ ಕೊಡೊ ಎ - ನ್ನೊಡೇಯ ನೀನೇ 2 ಎಷ್ಟೂ ಪೇಳಲಿ ಎನ್ನ - ಕಷ್ಟರಾಶಿಗಳ್ಯತಿ - ಶ್ರೇಷ್ಠಾನೆ ಕಳಿಯೊ ಉ - ತ್ಕ್ರಷ್ಠಾ ಮಹಿಮ ಗುರೋ 3 ಮೋಕ್ಷಾದ ಎನ್ನನು - ವೀಕ್ಷಿಸಿ ಈಗಲೆ ಸುಕ್ಷೇಮ ನೀಡುತ್ತಾ - ಪೇಕ್ಷಾಪೂರ್ತಿಸೊ ಗುರೋ 4 ದಾತಾನೆ ಎನ್ನಯ - ಮಾತಾನು ಲಾಲಿಸೊ ನೀತಾ ಗುರು ಜಗ -ನ್ನಾಥಾ ವಿಠಲ ಪ್ರಿಯ 5
--------------
ಗುರುಜಗನ್ನಾಥದಾಸರು
ದಾಸವೃಂದ ಪೋಷಿಸೆನ್ನ ಜೀಯ ಶ್ರೀ ಪ್ರಾಣೇಶದಾಸರಾಯ ಪ ಭೂಸುರ ಸೇವಿತ | ಭಾಸುರ ಮಹಿಮ ಉ ದಾಶೀನ ಮಾಡದೆ | ದೋಷಗಳೆಣಿಸದೆ ಅ.ಪ ಪದುಮಸಂಭವ ಕುಲದಿ ಜನಿಸುತ ವಿದುರಾಗ್ರಜ ಜಗದಿ | ಯದುಪತಿ ಸುಕಥೆಯ ವಿಧ ವಿಧದಿ ಬೋಧಿಸಿ ಮದಡರುದ್ಧರಿಸಿದ | ಸದಮಲ ಹೃದಯ 1 ನತಜನ ಸುರತರುವೆನಿನ್ನನು ತುತಿಸಿಲೆನಗೊಶವೆ | ಸತತದಿ ಸೇವಿಸಿ | ಯತಿ ವರದೇಂದ್ರರ ಹಿತದಲಿ ಪಡೆದ ಪ್ರತಿ ಪ್ರಭಾಕರ 2 ತರತಮ ಭೇದವನು | ಶ್ರೀವರ ಹರಿದಿನ ಮಹಿಮೆಯನು ಸರಳಕನ್ನಡದಿ ವಿರಚಿಸಿ ಕವನವ ನೊರೆದು ಸಜ್ಜನರ ಪೊರೆವ ಮಹಾತ್ಮಾ 3 ವಾತಜಾತ ಸುಮತ ಸಾಗರ ಪೋತನೊಳೀತರ | ಯಾತಕೆ ನಿರ್ದಯ ನೀತವಕದಿ ಸಂಪ್ರೀತಿಯಿಂದೊಲಿದು 4 ಧಾಮರ ಸುವಿಧೇನು ಶಾಮಸುಂದರೆನ | ನಾಮನೆನೆವ ಸುಖ ಯಾಮ ಯಾಮಕೀಪಾಮರಗೀಯುತ 5
--------------
ಶಾಮಸುಂದರ ವಿಠಲ
ದುರಿತ ನಿವಾರಣಗೆ ಪಮಾಯಾರಹಿತನಿಗೆ ಮನಕಗೋಚರನಿಗೆಕಾಯ ಕರಣ ಕೃತ್ಯ ದೂರನಿಗೆಹೇಯಾದಿ ಭೇದ ರಹಿತನಿಗೆ ನಿಜ ಭಕ್ತಿದಾಯಕನಾದ ಶ್ರೀ ಗುರುವರ್ಯಗೆ 1ಜ್ಞಾನಸ್ವರೂಪಗೆ ಜ್ಞಾನದಾಯಕನಿಗೆಜ್ಞಾನಶಕ್ತಿಯೊಳೊಡಬೆರದಿಹಗೆಜಾನಿಸುತಿಪ್ಪರಜ್ಞಾನವಿರೋಧಿಗೆತಾನೆ ತಾನಾಗಿ ನಲಿವ ಮೂರ್ತಿಗೆ 2ಸ್ವಾನುಭವಾನಂದ ಪರಿಶುದ್ಧನಾದಗೆದೀನಜನರ ಪರಿಪಾಲಿಪಗೆಮಾನರಹಿತನಿಗೆ ಮಾನ್ಯ ಸನ್ನುತನಿಗೆಭಾನುವಿನಂದದಿ ಹೊಳೆವನಿಗೆ 3ಪುಣ್ಯ ಪಾಪಗಳೆಂಬ ಕಣ್ಣಿಯ ಕಟ್ಟನುಚೆನ್ನಾಗಿ ಕಳಚಿದ ಚಿನ್ಮಯಗೆತನ್ನವರನ್ಯರೆಂತೆಂಬ ಭೇದವ ಬಿಟ್ಟುತನ್ನಂತೆ ತನ್ನವರನು ಮಾಳ್ಪಗೆ 4ಸುರತರು ರೂಪಗೆ ಸುರಭಿಯಂತಿರುವಗೆಪುರುಷಾರ್ಥ ದಾನಿಗೆ ಪುಣ್ಯಾತ್ಮಗೆತಿರುಪತಿ ನಿಲಯ ಶ್ರೀ ವೆಂಕಟರಮಣಗೆಗುರು ವಾಸುದೇವ ರೂಪಿನ ದೇವಗೆ 5ಕಂ||ಇಂತೀ ಪೂಜಾ ಸ್ತುತಿಗಳಸಂತಸದಿಂ ಪಾಡಿ ಪೊಗಳಿ ಕೇಳುವ ಜನರಿಗೆಸಂತತ ಕಾಮಿತ ವರಗಳಸಂತೋಷದಿ ಕೊಡುವ ನೊಲಿದು ವೆಂಕಟರಮಣಂಓಂ ಪರಾತ್ಪರಾಯ ನಮಃ
--------------
ತಿಮ್ಮಪ್ಪದಾಸರು