ಒಟ್ಟು 60 ಕಡೆಗಳಲ್ಲಿ , 29 ದಾಸರು , 60 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಮುರಳಿ ವಿನೋದ ವಿಠಲ | ಪೊರೆಯ ಬೇಕಿವನಾ ಪ ದುರಿತ ದುಷ್ಕøತವೆಲ್ಲ | ದೂರ ಸಾಗಿಸುತಾ ಅ.ಪ. ಚಾರು ಯೌವನದಲ್ಲಿ | ಪರಿಪರಿಯ ಲೌಕಿಕದಿಮಾರಮಣ ಸ್ಮøತಿ ರಹಿತ | ಕರ್ಮವೆಸಗೀಜಾರಿ ಪೋಗಲು ಆಯು | ಆರಾಧ್ಯ ದೇವತೆಯಚಾರುತರ ಪೂಜಿಸಲು | ಸಾರಿ ಬಂದಿಹನಾ 1 ಹಿಂದೆ ಮಾಡಿರುವ ಬಹು | ಮಂದಿ ಜನಗಳ ಸೇವೆಇಂದಿರೇಶನೆ ನಿನ್ನ | ಸೇವೆ ಎಂದೆನಿಸೀಇಂದಿರಾರಾಧ್ಯ ಪದ | ಚೆಂದದಿಂ ಪೊರೆ ಇವನಮಂದರೋದ್ಧಾರಿ ಹರಿ | ಕಂದರ್ಪಪಿತನೇ2 ಧ್ಯಾನ ಯೋಗದಿ ಮನವ | ಸಾನುಕೂಲಿಸು ಇವಗೆಮಾನನಿಧಿ ಮಧ್ವಪದ | ರೇಣುನಾಶ್ರಯಿಸೀಗಾನದಲಿ ತವ ಮಹಿಮೆ | ಪೊಗಳಿಕೆಯನೆ ಇತ್ತು ಪ್ರಾಣಾಂತರಾತ್ಮಕನೆ | ಪಾಲಿಸೈ ಹರಿಯೆ 3 ದೇವಧನ್ವಂತರಿಯೆ | ಪಾವನಾತ್ಮಕ ನಿನ್ನಸೇವೆ ಗಯ್ಯುವವಗಿ | ನ್ನಾವ ದುರಿತಗಳೋಭಾವದಲಿ ಮೈದೋರಿ | ನೀವೊಲಿದು ತೋದರಂತೆದೇವ ತವ ದಾಸ್ಯವನು | ಇತ್ತಿಹೆನು ಹರಿಯೇ 4 ನಾರಸಿಂಹಾತ್ಮಕನೆ | ಕಾರುಣ್ಯದಲಿ ಹೃದಯವಾರಿರುಹ ಮಧ್ಯದಲಿ | ತೋರಿ ತವ ರೂಪ |ಪಾರುಗೈ ಭವವ ಗುರು | ಗೋವಿಂದ ವಿಠಲನೆಸಾರಿ ತವ ಪಾದವನು | ಪ್ರಾರ್ಥಿಸುವೆ ಹರಿಯೇ5
--------------
ಗುರುಗೋವಿಂದವಿಠಲರು
ಮುರಳಿಯ ಧ್ವನಿಯು ಕರೆಯುತಲಿರುವುದು ಪೋಗುವ ಬಾರೆ ಸಖಿ ಪ ಪೋಗುವ ಬಾರೆ ಸಖಿ ಬೇಸರ ನೀಗುವ ಬಾರೆ ಸಖಿ ವಿಧ ವಿಧ ಭೋಗವ ಪಡುವ ಸಖೀ ಅ.ಪ ವರವಂಶದಿ ಜನಿಸಿದ ಭಾಗ್ಯವ ಈ ಮುರಳಿಯು ತಂದಿತು ಕೇಳೆ ಸಖಿ ಪರಮ ಪ್ರೇಯಸಿ ಇವಳಂತರಂಗವ ಮರೆ ಮಾಚುವ ರಸಿಕಾಗ್ರಣಿ ಕೃಷ್ಣನ 1 ಕ್ಷೀರಶರಧಿತನಯಳ ವೈಭವ ಈ ನೀರಸಳಿಗೆ ಇದು ಅಚ್ಚರಿಯು ಕೋರಿ ಚುಂಬಿಸುವ ಕೃಷ್ಣನಧರ ಸುಧೆ ಧಾರೆಯೊ ಸೂರೆಯೊ ಶೌರಿಯ 2 ಹುಲ್ಲೆ ಹುಲಿಯ ಭಯ ತೊರೆದು ಕೇಳುತಿದೆ ಕಲ್ಲು ಕರಗಿ ಮೃದುವಾಗಿರುವಂತೆ ನಲ್ಲೆ ಎನ್ನ ಹೃದಯವು ಕರಗಿತು ನಾ ನಿಲ್ಲಿ ಎನ್ನ ಮನವಲ್ಲಿ ಪ್ರಸನ್ನನ 3
--------------
ವಿದ್ಯಾಪ್ರಸನ್ನತೀರ್ಥರು
ರಂಗಧಾಮ ಭುಜಂಗ ಶಯನ ಮಂಗಳಾತ್ಮಕನೆ ಶ್ರೀಶನೆ ಪ ಗಂಗಾಜನಕ ಉತ್ತುಂಗ ಮಹಿಮನೆ ಸಂಗರಹಿತನೆ ಭಂಗಹರಿಪನೆ ಅ.ಪ ಶ್ರೀಶ ನಿನ್ನನು ಪ್ರಾರ್ಥಿಪರಘ ಶೋಧಿಸೆನುತ ಶ್ರೀ ಸಮೇತರಾಗಿ ಭಕ್ತರ ಪೋಷಿಸೆನ್ನುತ ವಾಸುದೇವ ಅನಂತಮಹಿಮ ಶ್ರೀಶನೆನ್ನುತ ದಾಸರೆಲ್ಲರು ಘೋಷಿಸುವರು ಶೇಷಶಯನ ರಕ್ಷಿಸೆನುತ 1 ಸಾಧುಜನ ಹೃದಯವಾಸನೆನ್ನುತ ಪೇಳ್ವರೊ ಸಾಧನ ಜೀವರಿಗೆ ಪರಮಪ್ರಿಯನೆಂಬರೊ ಮೋದತೀರ್ಥ ಸುಧಾರಸ ಸೇವಿಸಿರೆಂಬರೋ ಆದಿ ಪುರುಷ ಅನಾದಿ ಅನಂತ ಮಹಿಮನೆಂಬರೊ2 ಅಕ್ಷಯಗುಣ ಪೂರ್ಣಸರ್ವರ ರಕ್ಷಿಸೆನ್ನುತಲಿ ಲಕ್ಷ್ಮಿಪತಿಯೆ ಪ್ರಾರ್ಥಿಸುವೆನು ಈಕ್ಷಿಸೆನುತಲಿ ಪಕ್ಷಿವಾಹನವೇರಿ ಮೆರೆವ ಅದೋಕ್ಷಜನೆನುತಲಿ ನಿತ್ಯ ನಿತ್ಯದಲಿ 3 ಶೋಭಿಪ ನಿನ್ನ ರೂಪ ಹೃದಯದಲಿ ಕಾಣಲು ಶೋಭಕೃತು ಸಂವತ್ಸರದಲಿ ನಿನ್ನ ಪಾಡಲು ಶೋಭನಂಗಳನ್ನೆ ಕೊಡುವ ಸ್ವಾಮಿ ಎನ್ನಲು 4 ಕಡಲಶಯನ ಮೃಡನ ಸಖನೆ ಬಿಡದೆ ರಕ್ಷಿಸು ತಡೆಯದೆ ನಿನ್ನ ಚರಣ ಸ್ಮರಣೆ ಬಿಡದೆ ಕರುಣಿಸು ಬಿಡದಲೇ ಬಹಮನದ ತಾಪವೆಲ್ಲ ನೀಗಿಸುಕಡಲೊಡೆಯನೆ ಕಮಲನಾಭ ವಿಠ್ಠಲ ಪಾಲಿಸು 5
--------------
ನಿಡಗುರುಕಿ ಜೀವೂಬಾಯಿ
ರಾಮನ ನಾಮವ ಪ್ರೇಮದಿ ಭಜಿಸಲು ರಾಮನು ವಲಿಯುವಾ ಬಿಡದೆ ಪಾಲಿಸುವಾ ಪ ಕಾಮಿತ ವರಗಳ ನೀಯುತ ಭಜಕರ ಸ್ವಾಮಿಯು ವಲಿದೆಮ್ಮ ನಿರುತ ಪಾಲಿಸುವಾ ಅ.ಪ. ತರಳರ ಮಾತಿಗೆ ಸೈಯೆಂದು ನುಡಿಯುತ್ತ ಪರಮ ಸಾಮ್ರಾಜ್ಯದ ಪದವಿಯ ಕೊಡುತ್ತಾ ಸರಳರ ಹೃದಯವ ನೀಕ್ಷಿಸಿ ಜವದೊಳು ಕರೆದು ಸಾಯುಜ್ಯದ ಪದವಿಯ ಕೊಡುವಾ 1 ದುರುಳರ ಸುಖಗಳಿಗಂತಕನಾಗುತ ಶರಣರ ಪಿಡಿದು ಶಿಷ್ಟರನು ಕಾಯುತ್ತ ಭರದಿಂದ ಸುಜನರ ಕಷ್ಟವ ತರಿವಾ 2 ಕೌಸಲೆ ಗರ್ಭದಿ ಬಂದ ಶ್ರೀಹರಿ ತಾನು ವಾಸುಕಿ ಭಾರವ ನಿಳುಹಲಿಕ್ಕೆ ವಾಸ ಮಾಡುವನೀಗ ವರ ದೂರ್ವಾಪುರದಲ್ಲಿ ದಾಸನ ಸಲಹುವ ಕೇಶವನೆಂಬ 3
--------------
ಕರ್ಕಿ ಕೇಶವದಾಸ
ರಾಮಮಂತ್ರದ ನೆನಪು ಮನಕಂಟಬೇಕು ರಾಮನಾಮದಿ ರಸನೆ ನಲಿಯುತಲಿರಬೇಕು ಪ ರಾಮಮೂರ್ತಿಯ ಕಣ್ಣು ಕಾಣುತಲಿರಬೇಕು ರಾಮಕಥೆಯ ಕಿವಿ ಕೇಳುತಲಿರಬೇಕು ಅ.ಪ ರಾಮಪಾದದ ತೀರ್ಥ ಕಂಠಕಿಳಿಯಬೇಕು ರಾಮ ಪ್ರಸಾದವು ತುಳಸಿಯಾಗಿರಬೇಕು ರಾಮನ ನಿಲಯವೇ ಕ್ಷೇತ್ರವೆನಿಸಬೇಕು ರಾಮನ ಭಜನೆಯೆ ದಿನಚರಿಯಾಗಬೇಕು 1 ರಾಮನಯೋಧ್ಯೆಯೆ ಹೃದಯವಾಗಲಿಬೇಕು ರಾಮಮಂತ್ರದ ಜಪ ಚಿತ್ತದಿ ನಿಲಬೇಕು ರಾಮನೇ ಮಾಂಗಿರಿರಂಗನೆನಲಿಬೇಕು ರಾಮಗೆ ಸಕಲವ ಅರ್ಪಿಸಬೇಕು2
--------------
ಅಸೂರಿ ರಾಮಸ್ವಾಮಿಅಯ್ಯಂಗಾರ್
ವಾಸುದೇವ ಎನ್ನ ಘಾಸಿಗೊಳಿಸದೆ ನೀ ಸಲಹಲಿ ಬೇಕೊ ಪ. ಈ ಶರೀರದೊಳು ಮಾಯಾಸಹಿತ- ದಿ ಶ್ವಾಸನಾಡಿಯೊಳು ವಾಸವಾಗಿಹ ಅ.ಪ. ಅನಿರುದ್ಧ ನಾಮದಿ ಅನುದಿನ ಸಲಹುತಲಿ ದನುಜನಾದ ಪಾಪಾತ್ಮನ ನಾಭಿಯೊಳ್ ಅನಿಲನಿಂದಲಿ ಶೋಷಿಸುವೆ ಪ್ರದ್ಯುಮ್ನ 1 ಹೃದಯದಿ ರಕ್ತವರ್ಣದಲಿ ನೀನಿರುತಲಿ ಸಂಕರ್ಷಣನೆನಿಸಿ ಪದೋಪದಿಗೆ ಪಾಪಾತ್ಮಕನನು ಸುಟ್ಟು ಸದಮಲ ಹೃದಯವ ಶುದ್ಧಿಗೈಯ್ಯುವ 2 ಮಧ್ಯದಿ ನಾಡಿಯ ಮಧ್ಯದ ಹೃದಯ ಪದ್ಮ ಮಧ್ಯ ಎಂಟು ದಳದಿ ವಿದ್ಯಮಾನನಾಗಿ ಬಿಂಬನೆನಿಸಿ ನಿನ್ನ ಪೊದ್ದಿಹ ಜೀವರ ಭಾವನೆಯಂತೆ ಕಾಂಬೆ 3 ಕೊಳಲನೂದುವ ನಿನ್ನ ಚಲುವರೂಪದ ಕಾಂತಿ ಪೊಳಲೆಲ್ಲ ತುಂಬುವುದೊ ನಳಿನಾಕ್ಷಿಯರ ಕೂಡಿ ಥಳಥಳಪ ನಿನ್ನ ಬಲು ಸಂಭ್ರಮದೊಳು ಸುರರೆಲ್ಲ ಸ್ತುತಿಪರೊ 4 ಸಿರಿ ಸಹಿತದಿ ಇರುವೆ ವರನಾಡಿ ಮಾರ್ಗದಿ ಅರಿತು ಭಜಿಸೆ ಮುಕ್ತಿ ಪೊರೆಯುವ ಬಿರುದುಳ್ಳ ಗೋಪಾಲಕೃಷ್ಣವಿಠ್ಠಲ5
--------------
ಅಂಬಾಬಾಯಿ
ವೇಣು ಗೋಪಾಲನು ಬರುವನಂತೆ ಪ ಜಾಣೆ ನಮ್ಮನೆಯಲಿ ಇರುವನಂತೆ ಅ.ಪ ಪರಮ ಸುಂದರ ನವತರುಣನಿವ ಸಖಿ ಅರಿತು ಭಜಿಪರಿಗೆ ಕರುಣಿ ಇವ ಸಖಿ ತೊರೆಯಬೇಕಭಿಮಾನ ಕ್ಷಣದಲಿ ಮರೆಯಬೇಕಿಹಲೋಕ ಬಂಧನ1 ಹೃದಯವ ಕದಿಯುವ ಚೋರನಿವ ಸಖಿ ಮದನನ ಜಗಕಿತ್ತ ಜಾರನಿವ ಸಖೀ ಕದನದಲಿ ಕಂಠೀರವನು ಶುಭ ವದನೆಯರ ಶೃಂಗಾರ ಜಲನಿಧಿ 2 ಘನತೆಯು ರುಚಿಸದು ಹುಡುಗನಿವ ಧನವನು ಬಯಸನು ಸಿರಿರಮಣ ತನುಮನಗಳರ್ಪಿಸಲು ಹರುಷದಿ ಕುಣಿಯುವನು ಕುಣಿಸುವ ಪ್ರಸನ್ನನು 3
--------------
ವಿದ್ಯಾಪ್ರಸನ್ನತೀರ್ಥರು
ಹೊನ್ನು ಹೆಣ್ಣು ಮಣ್ಣು ಮಾಯೆಯದು ಮೂರು ರೂಪಗಳ ನಾನು ಪೇಳುವೆನು ಹೊನ್ನು ಹೆಣ್ಣು ಮಣ್ಣು ಎಂಬ ಮೂರವುಗಳ್ ಅವುಗಳನು ಹಂಬಲಿಸಿ ಕೆಡಬೇಡ ಮರುಳೆ ನೀನ್ ಅವುಗಳೇ ಮೃತ್ಯುವಿನ ಕಡೆಗೊಯ್ಯುವವುಗಳ್ 52 ಕಷ್ಟದಿಂ ಸೃಷ್ಟಿಯಲಿ ನಗ್ನತೆಯೆ ಸುಂದರವು ಕಷ್ಟದಿಂ ಮರಣದಲಿ ನಗ್ನತೆಯ ದೇಹ ಕಷ್ಟವಿಕ್ಕ್ಕೆಡೆಗಳಲಿ ನಾಸ್ತಿಸುಖ ಮಧ್ಯದಲಿ ಕನಕ ಕನಕವದೆಂದು ಹೊನ್ನ ಪೇಳುವರು53 ಮೋಹಿನಿಯು ತಾನಾಗಿ ದ್ಯೆತ್ಯರನು ವಂಚಿಸಿದ ಮೋಹಿನಿಯು ತಾನಾಗಿ ರುದ್ರ ವಂಚಿತನು ಮೋಹಿನಿಯು ತಾನಾಗಿ ಸುಂದೋಪಸುಂದ ವಧೆ ಮೋಹಿನಿಯು ಪೆಣ್ಣು ಮೋಸವದಲ್ತೆ ಮನುಜ? 54 ಮಣ್ಣಿನಿಂದಲೆ ಹರಿಯು ದೇಹವನು ಸೃಷ್ಟಿಸುವ ಮಣ್ಣೆ ಅನ್ನವದಾಗೆ ಪಾಲಿಸುವ ನಮ್ಮ ಮರಣಕಾಲದಲದುವೆ ಮಣ್ಣನಪ್ಪುವದು ತಿಳಿ ಮಣ್ಣಿಗಾಗಿಯೇ ನೀನು ಹಂಬಲಿಪೆಯೇಕೆ 55 ಪ್ರಾಣದೇವರೆ ನಿನ್ನ ಉಸಿರಾಟ ಕಾರಣರು ಪ್ರಾಣನುಸಿರಾಟವದು ಯಾರಿಂದಲಹದು? ಅವನೆ ಪರಮಾತ್ಮ ತಿಳಿ ದೇವಾಧಿದೇವನವ ನಿನ್ನ ಬಾಳಿಗೆ ಕಾರಣರು ಇಬ್ಬರಹರು56 ಸೂರ್ಯದೇವನು ನೇತ್ರತತ್ವಕ್ಕೆ ಒಡೆಯನವ ಸೂರ್ಯನದು ಕಣ್ಣು ಯಾರಿಂದ ತೋರುವುದು? ಅವನೆ ಪುರುಷೋತ್ತಮನು ಪರಮಾತ್ಮ ಹರಿಯವನು ಆ ವಿಶ್ವರೂಪಿಯೇ ವಿಶ್ವಧಾರಕನು57 ವಾಸದಿಂ ಬೆಳಗಿಸುವ ಕಾರಣದಿ ಭಗವಂತ ವಾಸುದೇವಾತ್ಮಕನು ಸೃಷ್ಟಿಮೂಲನವ ವಸುದೇವಪುತ್ರನಾಗವತರಿಸಿ ಸಿರಿವರನು ಉಡುಪಿಯಲಿ ಪೂಜೆಗೊಂಬನು ನಿಜವ ಪೇಳ್ವೆ 58 ಕೃತಯುಗದ ಭಾರ್ಗವನು ತ್ರೇತೆಯಲಿ ದಾಶರಥಿ ದ್ವಾರಪದ ಕೃಷ್ಣ ನೀನೇಯಿರುವೆ ದೇವಾ ಮಧ್ವವರದನು ನೀನು ಭಾರ್ಗವನ ನೋಡಲ್ಕೆ ಉಡುಪಿಗೇ ಬಂದಿರುವೆ ಪರಮಾತ್ಮ ನೀನು 59 ಪರಶುರಾಮ ಕ್ಷೇತ್ರ ಶ್ರೀಕೃಷ್ಣನ ಕ್ಷೇತ್ರ ಪದ್ಮನಾಭಕ್ಷೇತ್ರ ಶಂಕರಕ್ಷೇತ್ರ ಹಲವಾರು ದೇವತೆಗಳಿಲ್ಲಿ ನೆಲೆಗೊಳ್ಳುತ್ತ ಪಾವನವ ಗೈಯುವರು ಭೂಮಿಯನ್ನಿದನು 60 ತುಲೆಯಲ್ಲಿ ತೂಗಿದಾಗುತ್ತಮವದದರಿಂದ ತುಲು ದೇಶವಿದು ಜಗದಿ ವಿಖ್ಯಾತವಹುದು ತುಲು ಲಿಪಿಯೆ ಸರ್ವಮೂಲ ಗ್ರಂಥ ಲೇಖನಕೆ ವೇದಾದ್ರಿಯಾಯಿತಿದು ವೇದಾಂತಭೂಮಿ 61 ಮಧ್ಯಗೇಹದ ಭಟ್ಟರಿಂ ಸೇವೆಯ ಪಡೆದು ವಾಯುದೇವೋತ್ತಮನ ಮಗನಾಗಿ ಕೊಡಿಸಿ ಸಜ್ಜನರ ಹೃದಯದಲಿ ಮುಖ್ಯ ತತ್ವವ ತಿಳಿಸೆ ಸರ್ವಜ್ಞ ಮೂರ್ತಿಯನು ತಂದಿರುವೆ ದೇವಾ62 ಪರಶುರಾಮನ ರೂಪದಿಂ ನೀಂ ತಪಗೈದ ಪಾಜಕ ಕ್ಷೇತ್ರದಲಿ ಭಕುತನವತರಿಸೆ ಜ್ಞಾನರೂಪದ ನೀನು ಅವನ ಹೃದಯವ ಪೊಕ್ಕು ಮಧ್ವಮತವನು ನೀನು ಪಸರಿಸಿದೆ ಹರಿಯೆ 63
--------------
ನಿಡಂಬೂರು ರಾಮದಾಸ
ಒಂದೇ ಕೂಗಳತೆ ಭೂವೈಕುಂಠಸಂದೇಹವಿಲ್ಲವು ಸಾಧು ಸಜ್ಜನರಿಗೆ ಪಅಂಬರೀಷನು ದ್ವಾದಶಿವ್ರತ ಮಾಡಲುಡೊಂಬೆಯ ಮಾಡಿದ ದುರ್ವಾಸನು ||ಕುಂಭಿನೀಪತಿ ಕೃಷ್ಣ ಕಾಯಬೇಕೆನುತಲೆಇಂಬಿಟ್ಟು ಚಕ್ರದಿ ಮುನಿಶಾಪ ಕಳೆದುದು 1ಕರಿರಾಜ ವನದಲಿ ಉಳುಹೆಂದು ಕೂಗಲುತ್ವರಿತದಿಂದಲಿ ಬಂದು ಕಾಯ್ದ ತಾನು ||ಕರುಣ ಸಾಗರ ಕೃಷ್ಣ ಕಾಯಬೇಕೆನುತಲೆತರಳ ಪ್ರಹ್ಲಾದನ ಕಂಬದಿ ಬಂದುದು2ದ್ರುಪದರಾಯನ ಪುತ್ರಿಗಾಪತ್ತು ಬರಲುಕೃಪೆಯಿಂದಲಕ್ಷಯವಿತ್ತನು ||ಕಪಟ ನಾಟಕ ಕೃಷ್ಣಪುರಂದರ ವಿಠಲನಗುಪಿತದಿ ನೆನೆವರ ಹೃದಯವೇ ವೈಕುಂಠ 3
--------------
ಪುರಂದರದಾಸರು
ಬಾರೋ ದೇವ ದೇವನೇ ಭಾವಜಾರಿಪ್ರಿಯನೆಬಾರೊ ಮನೆಗೆ ಶ್ರೀನಿವಾಸನೆ ಪಬಾರೊ ಭಾಮೆ ರುಕ್ಮಿಣೀಶಬಾರೋಯೋಗಿಹೃದಯವಾಸಬಾರೊ ಭಕ್ತಜನರ ಪೋಷನೇ 1ನಂದ ಗೋಪ ತನಯಗೋಪ-ವೃಂದದೊಳಗೆ ಕುಣಿದು ಮೆರೆದುಮಂದರೋದ್ಧರಮದನಜನಕನೇ2ಅಂದಿಗೆ ಕಾಲ್ಗೆಜ್ಜೆ ನಾದ-ದಿಂದ ಕುಣಿದು ನೆರೆದು ನಲಿದುಸುಂದರಾಂಗ ಶುಭಕರಾಂಗನೇ 3ಸರಿಗೆ ನಾಗಮುರಿಗೆ ಮುತ್ತಿನಸರಗಳ್ಹೊಳಯೆ ಉರದಿ ಲಕ್ಷ್ಮಿಜರಿಪೀತಾಂಬರ ಧಾರಿ ಶೌರಿಯೇ 4ಕೋಟಿ ಸೂರ್ಯಕಾಂತಿ ಮುಖಲ-ಲಾಟ ಕಸ್ತೂರಿ ತಿಲಕ ಶಿರದಿ ಕಿ-ರೀಟ ಧರಿಸಿ ಮೆರೆವ ದೇವನೇ 5ಮುರಳಿ ನುಡಿಸಿ ತರುಣಿಯರನುಮರುಳು ಮಾಡಿ ತುರುಕರುಗಳಪೊರೆದಕಮಲನಾಭವಿಠ್ಠಲನೆ6
--------------
ನಿಡಗುರುಕಿ ಜೀವೂಬಾಯಿ
ಬಾರೋ ನಮ್ಮ ಮನೆಗೆ ಬೇಗನೆ ಗೋಪಾಲಕೃಷ್ಣಬಾರೋ ಶ್ಯಾಮ ಸುಂದರಾಂಗನೆ ಪಬಾರೊ ಭಾಮೆ ರುಕ್ಮಿಣೀಶ ಬಾರೊಯೋಗಿಹೃದಯವಾಸಬಾರೊ ದ್ವಾರಕಾಪುರೀಶ ಬಾರೊ ಭಕ್ತಜನರ ಪೋಷ ಅ.ಪಅಂದಿಗೆ ಕಾಲ್ಗೆಜ್ಜೆ ಸರಪಣಿ ಪಾಡಗರುಳಿಯುಕೆಂದಾವರೆಯು ಪೋಲ್ವಪಾದದಿನಂದಗೋಪತನಯಗೋಪವೃಂದದೊಳಗೆ ಕುಣಿದು ನಲಿದುಇಂದಿರೇಶ ಶ್ರೀಶನೆ ಬಂದೊಂದುಹೆಜ್ಜೆನಿಡುತ ಮುದದಿ 1ಉಟ್ಟದಟ್ಟಿಯು ಪಟ್ಟೆಚಲ್ಲಣ ಹವಳಕಟ್ಟುಗಟ್ಟಿ ಸರಪಣಿ ಕಿರುಗಂಟೆಯುಕಟ್ಟಿದ ಉಡುದಾರಗೆಜ್ಜೆಶ್ರೇಷ್ಠತನದಿ ಮೆರೆಯುತಿರಲುಪುಟ್ಟಬಾಲರೊಡನೆ ಪುಟ್ಟಪುಟ್ಟ ಹೆಜ್ಜೆನಿಡುತ ನಲಿದು 2ದುಂಡು ಕರಕೆ ಗುಂಡು ಬಿಂದಲಿ ಮುಂಗೈಮುರಿಗೆಉಂಗುರಗಳು ಶೋಭಿಸುತಲಿಬಂದಿ ಬಾಪುರಿಗಳು ತೋಳಬಂದಿ ನಾಗಮುರಿಗಿ ಕರದಿಚಂದ್ರನನ್ನು ಪಿಡಿದು ನಲಿದಸುಂದರಾಂಗ ಚೆಲುವ ಕೃಷ್ಣ 3ಪದಕ ಮುತ್ತಿನ ಸರಗಳ್ಹೊಳೆಯುತವೈಜಯಂತಿಮಾಲೆಸರಿಗೆ ಏಕಾವಳಿಗಳೊಲಿಯುತಪದುಮನಾಭ ನಿನಗೆ ದಿವ್ಯಮುದದಿಕೌಸ್ತುಭಮಾಲೆ ಹೊಳೆಯೆಯದುಕುಲೇಶ ಉಡುಪಿವಾಸಉದದಿ ಶ್ರೀಶಉದ್ಧವಸಖನೆ4ಸೋಮಸೂರ್ಯರ ಕಾಂತಿ ಸೋಲಿಪ ಮುಂಗುರುಳು ಮುಖವುಕಾಮಜನಕ ಕಮಲಲೋಚನಹೇಮಮಣಿ ಕಿರೀಟಕುಂಡಲಪ್ರೇಮತೋರ್ವ ಫಣಿಯ ತಿಲಕಶ್ರೀ ಮಹೀಶ ಶ್ರೀಶನೆ ಶ್ರೀ-ಕಮಲನಾಭ ವಿಠ್ಠಲ ಒಲಿವ 5
--------------
ನಿಡಗುರುಕಿ ಜೀವೂಬಾಯಿ
ಭಕ್ತರೆಂದರೆ ನೈಜ ಭಕ್ತರವರು ಪ.ಚಿತ್ತಜನಯ್ಯನ ಚರಿತಾಮೃತಕೆ ಮನವಿಟ್ಟು ಅ.ಪ.ಅಧಿಯಾತ್ಮ ತಾಪಗಳುಅಧಿಭೂತ ಕ್ಲೇಶದನುಭವಅಧಿದೈವದಟ್ಟುಳಿಯನೆಣಿಸರತಿ ಬಲವಂತರ್ಮಧು ಮಥನಗಲ್ಲದರ ಬಗೆಗಂಜರು 1ವೇದತಂತ್ರವಾಕ್ಯದಿಂದುಪದೇಶಮಾಡಿದರೆ ಮೋಹನಕೊಳಗಾಗರುವದಿಸಿ ಬಲವತ್ಸ್ನಾನವ ಮಾಡಿ ಬೆದರಿಸಲುಕದಲದಂತಃಕರಣದ್ಹರಿದಾಸರು 2ಬದಿಗೆ ಬಂದಡಲಾವದುರಿತಕೋಟಿಗಳನ್ನುತುದಿಗಾಲಿಲೊದ್ದು ಸಲೆ ತಲೆವಾಗರುಹುದುಗೊಂಡು ಷಡುವರ್ಗ ರಿಪುಗಳನು ಗೆದ್ದುಹರಿಪದಲಂಪಟ ಜ್ಞಾನಾಂಬುಧಿಗಳು 3ವಿಧಿಭವೇಂದ್ರಾದಿ ಸುರರಾಳ್ದ ಲಕುಮೀಪತಿಯಸುದಯಾರಸನುಂಬುವ ಬೋಧನವರುಸದಮಲ ಗುಣಾನಂತ ಪ್ರಸನ್ವೆಂಕಟಪತಿಯಹೃದಯವಲ್ಲಭರೆನಿಪಅಚಲಮತಿಯವರು4
--------------
ಪ್ರಸನ್ನವೆಂಕಟದಾಸರು
ರಾಮನಾಮ ಪಾಯಸಕ್ಕೆ ಕೃಷ್ಣನಾಮ ಸಕ್ಕರೆ |ನಾಮವಿಠಲ ತುಪ್ಪ ಬೆರೆಸಿ ಬಾಯಿ ಚಪ್ಪರಿಸಿರೊ ಪಒಮ್ಮನ ಗೊದಿಯ ತಂದು | ವೈರಾಗ್ಯ ಕಲ್ಲಲಿ ಬೀಸಿ |ಸುಮ್ಮನ ಸಜ್ಜಿಗೆ ತೆಗೆದು | ಸಣ್ಣ ಸೇವಗೆ ಹೊಸೆದು 1ಹೃದಯವೆಂಬ ಪಾತ್ರೆಯೊಳಗೆ | ಮನವೆಂಬ ಎಸರನಿಟ್ಟು |ಬುದ್ದಿಯಿಂದ ಪಾಕ ಮಾಡಿ |ಹರಿವಾಣತುಂಬಿರೋ 2ಆನಂದ ಆನಂದವೆಂಬ ತೇಗು ಬಂದ ಪರಿಯಲಿ |ಆನಂದ ಮೂರುತಿ ನಮ್ಮ ಪುರಂದರವಿಠಲ 3
--------------
ಪುರಂದರದಾಸರು
ಸಾರಿಗೆಯ ಮಾಡೋಣ ಸಜ್ಜನರು ಬನ್ನಿರೋನಾರಾಯಣನ ದಿವ್ಯನಾಮ ಭಾರಿ ಕೊಂಬ ಬನ್ನಿರೋ ಪ.ಹೃದಯವೆಂಬ ಚೀಲದೊಳಗೆ ಹರಿಯ ನಾಮ ಹೊನ್ನಹಾಕಿತುದಿ ನಾಲಿಗೆಯಿಂದ ತೆಗದು ವೆಚ್ಚವನ್ನು ಮಾಡಿರೊ 1ಙ್ಞÕನವೆಂಬ ಎತ್ತಿನಲ್ಲಿ ಕರುಣವೆಂಬ ಗೋಣಿಹಾಕಿದಾನ - ಧರ್ಮವೆಂಬ ದವಸ ಸರಕುಗಳ ತುಂಬಿರೊ 2ನೇಮ - ನಿತ್ಯವೆಂಬ ಗಟ್ಟಿ ನಡುವಿನಲ್ಲಿ ಬಿಗಿದು ಸುತ್ತಿಪ್ರೇಮವೆಂಬ ಚೊಕ್ಕ ಬುತ್ತಿ ಸೆರಗಿನಲ್ಲಿ ಕಟ್ಟಿರೋ 3ಕಾವಲಿಗರೈವರನ್ನು ಕಾಣದಂತೆ ಟಕ್ಕುದೋರಿಭಾವವೆಂಬ ಮಾರ್ಗದಲ್ಲಿ ಬೇಗ ಬೇಗ ಬನ್ನಿರೊ 4
--------------
ಪುರಂದರದಾಸರು
ಹರಿಯ ಚರಣವೆಂಬ ಸುರಧೇನವನುಗುರುಬೋಧೆಯೆಂಬ ಕಣ್ಣಿಯಲಿ ಕಟ್ಟಿರಯ್ಯಪ.ಭಕುತಿಯೆಂಬ ಕರುವನೆ ಬಿಟ್ಟು ನಿರುತ ವಿರಕುತಿಯೆಂಬ ಚೆನ್ನದಳಿಯ ಹಾಕಿ ||ಯುಕುತವಾದ ನಿತ್ಯಕಾಯ ಚರಿಗೆಯೊಳುಮುಕುತಿನಾಮಾಮೃತ ಕರೆದುಕೊಳ್ಳಿರಯ್ಯ 1ಕಾಮ ಕ್ರೋಧ ಲೋಭ, ಮೋಹ ಮದ ಮತ್ಸರಗಳೆಂಬಹಮ್ಮೆಂಬ ಕುರುಳನೆ ತಾಳಿ ಹಾಕಿ ||ತಾಮಸ ಜ್ಞಾನಾಗ್ನಿ ಪುಟಗೈದು ಇಂದ್ರಿಯನೇಮದ ನೀರ ಬೆರಸಿ ಕಾಯಲಿಡರೊ 2ಶಾಂತಗುಣವೆಂಬ ಹದನರಿತು ಆರಿಸಿ ಮತ್ತೆಭ್ರಾಂತಮನ ಮಜ್ಜಿಗೆಯ ಹೆಪ್ಪನಿಕ್ಕಿ ||ಕಾಂತವಿಷ್ಣು ಮಾಯಾಮಂಥದಿ ಶೋಧಿಸಿ ಸಿ -ದ್ಧಾಂತವೆಂಬ ಕಡೆಗೋಲ ನೇಣನೆ ಪಿಡಿದು 3ಪರಬೊಮ್ಮನೆನಿಪ ಬೆಣ್ಣೆಯ ಮುದ್ದಿಯನೆ ತೆಗೆದುಶರಣಮಣಿಯೆಂಬ ತುಪ್ಪವನೆ ಕಾಯಿಸಿ ||ಮರಣವೆಂಬ ನೊರೆ ತೆಗೆದೊಗೆದು ಅಮೃತವನಿರುತ ಹೃದಯವೆಂಬ ಕೊಡವನೆ ತುಂಬಿರೊ 4ಅನವರತ ಹರಿಸ್ಮರಣೆಯೆಂಬ ಬೀಸೂರಿಗೆಅನುವಾಗಿ ಕುಳಿತುಂಡು ಸುಖದಿ ತೇಗಿ ||ಚಿನುಮಯ ಚಿದಾನಂದ ಪುರಂದರವಿಠಲನಅನುದಿನ ನೆನೆ ನೆನೆದು ಸುಖಿಯಾಗಿರಯ್ಯ 5
--------------
ಪುರಂದರದಾಸರು