ಒಟ್ಟು 198 ಕಡೆಗಳಲ್ಲಿ , 46 ದಾಸರು , 157 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ತೀರ್ಥ ಪಿಡಿದವರೆಲ್ಲ ತಿರುನಾಮಧಾರಿಗಳೆ - ಜನ್ಮ ಪ ಸಾರ್ಥಕವಿಲ್ಲದವರೆಲ್ಲ ಭಾಗವತರೆ ಅ ಮೂಗ್ಹಿಡಿದು ನೀರೊಳಗೆ ಮುಳುಗಿ ಜಪತಪ ಮಾಡಿನಿಗಮಾಗಮ ಪುರಾಣಗಳನೋದಿ ತಿಳಿದುಬಾಗಿ ಪರಸ್ತ್ರೀಯರನು ಬಯಸಿ ಕಣ್ಣಿಡುವಂಥಯೋಗ ಭ್ರಷ್ಟರೆಲ್ಲ ದೇವ ಬ್ರಾಹ್ಮಣರೆ ? 1 ಪಟ್ಟೆ ನಾಮವ ಬಳಿದು ಪಾತ್ರೆ ಕೈಯಲಿ ಹಿಡಿದು ಗುಟ್ಟಿನಲಿ ಜಪಿಸುವ ಗುರುತರಿಯದೆಕೆಟ್ಟ ಕೂಗನು ಕೂಗಿ ಹೊಟ್ಟೆಯನು ಹೊರೆವಂಥಪೊಟ್ಟೆಗುಡುಮಗಳೆಲ್ಲ ಪರಮ ವೈಷ್ಣವರೆ ? 2 ಲಿಂಗಾಂಗದೊಳಗಿರುವ ಚಿನ್ಮಯವ ತಿಳಿಯದೆಅಂಗಲಿಂಗದ ನೆಲೆಯ ಗುರುತರಿಯದೆಜಂಗಮ ಸ್ಥಾವರದ ಹೊಲಬನರಿಯದ ಇಂಥಭಂಗಿಮುಕ್ಕಗಳೆಲ್ಲ ನಿಜ ಲಿಂಗವಂತರೆ ? 3 ಅಲ್ಲಾ ಖುದಾ ಎಂಬ ಅರ್ಥವನು ತಿಳಿಯದೆಮುಲ್ಲ ಶಾಸ್ತ್ರದ ನೆಲೆಯ ಮುನ್ನರಿಯದೆಪೊಳ್ಳು ಕೂಗನು ಕೂಗಿ ಬಗುಳಿ ಬಾಯಾರುವಂಥಕಳ್ಳ ಸುಳ್ಳರಿಗೆಲ್ಲ ವೀರ ಸ್ವರ್ಗವುಂಟೆ ?4 ವೇಷ ಭಾಷೆಯ ಕಲಿತು ಗೋಸಾಯಿ ಉಡೆದೊಟ್ಟುಆಸೆಯನು ತೊರೆಯದೆಯೆ ತಪಕೆ ಕುಳಿತುವಾಸನೆಯ ಗುರುತಿನಾ ಹೊಲಬನರಿಯದ ಇಂಥವೇಷಧಾರಿಗಳೆಲ್ಲ ಸಂನ್ಯಾಸಿಗಳೆ ? 5 ಆರು ಚಕ್ರದ ನೆಲೆಯ ಅಷ್ಟಾಂಗ ಯೋಗದಲಿಮೂರು ಮೂರ್ತಿಯ ಮೂರು ಕಡೆಯೊಳಿರಿಸಿಮಾರ ಪಿತನಹ ಕಾಗಿನೆಲೆಯಾದಿ ಕೇಶವನಸಾರಿ ಭಜಿಸಿದವರಿಗೆ ಕೊರೆವ ಕೊರತೆಯುಂಟೆ ? 6
--------------
ಕನಕದಾಸ
ತುರುಕರಿಲ್ಲದ ಮನೆ ದಿರದಿಮ್ಮನೆ ಪ ತುರಕರ ನೋಡದ ಕಣ್ಣು ಶಿಖಿಗರಿಗಣ್ಣು ಕರ್ಣ ತುರಕರುವಿನುಚ್ಛಿಷ್ಟ ಉಣ್ಣ ಬಾಯಿ ವಿಷಗಾಯಿ 1 ಜಿಹ್ವೆ ಅಧಮನ ಗುಂಹೆ ತುರಕರನೊದೆವ ಕಾಲು ಯಮನ ಪಾಲು 2 ತುರಕರ ಪ್ರಸಾದ ಉಣ್ಣದ ಹೊಟ್ಟೆ ಗೂಗಿನ ಮೊಟ್ಟೆ ತುರಕರನ ಚಿಂತಿಸದ ಮನ ಗಾರ್ಧಭ ಗಮನ ತುರಕರ ಕಾಯ್ದ ವಿಜಯವಿಠ್ಠಲರೇಯ ತುರಕರ ಕರುಣ ಪಡೆಯದವನು ಶುದ್ಧ ಶವನು3
--------------
ವಿಜಯದಾಸ
ತ್ರಿಜಗ ಪಾಲಿಸುವನೆ ಎಲ್ಲ ಸುಖವನಿತ್ತು ಉದಧಿ ಆಲಯ ಶರಣ್ಯ ವಿಟ್ಠಲ ಪ ಹೃದಯಕಮಲ ಮಧ್ಯದಲಿ ಮುದದಿ ಖಗವನೇರಿ ಚರಿಪ ಯದುಕುಲಾಬ್ಧಿ ಜಾತ ಚಂದ್ರ ವಿಧಿಶಿವಾದಿ ಉಡುಗಣಾರ್ಚಿತ 1 ದಿಟ್ಟಭಕ್ತ ಕೊಟ್ಟ ಇಟ್ಟಗೀ ಮೆಟ್ಟಿನಿಂತಿ ಸಿಟ್ಟು ಇಲ್ಲದೆ ಹೊಟ್ಟೆ ಮನೆಯ ಮಾಡಿಕೊಟ್ಟಿ ಕೆಟ್ಟಮಾತು ನುಡಿದ ಚೈದ್ಯಗೆ 2 ಕರಗಳನ್ನೆ ಕಟಿಯಲಿಟ್ಟು ಶರಣುಬಂದ ಭಕ್ತಗೆ ಭವ ಪರಿಮಿತಿಯ ತೋರಿ ನಿರುತ ಪೊರೆಯುವಂಥ ಕರುಣನಿಧಿಯೇ 3 ಪುಂಡರೀಕ ವರದನೆಂದು ಹಿಂಡುಭಕ್ತರು ಪೊಗಳುತಿಹರೊ ಪುಂಡರೀಕ ತೋರಿಸಿನ್ನು 4 ಶ್ರೀ ನರಹರಿಯೆ ನಿನ್ನ ಗಾನ ಮಾಡಲೆಷ್ಟು ಸಾಮ ಗಾನಕೆ ನಿಲುಕದ ಮಹಿಮ ಜ್ಞಾನ ಭಕ್ತಿ ಇತ್ತು ಬೇಗ 5
--------------
ಪ್ರದ್ಯುಮ್ನತೀರ್ಥರು
ದಾಸನಾದವನಿಗೆ ಭವಭೀತಿಯುಂಟೆ ಆಸೆಬಿಟ್ಟವನಿಗೆ ಘಾಸಿಯಿನ್ನುಂಟೆ ಪ ವನಿತೆಯರಾಸ್ಯಳಿದವಗೆ ಮನಸಿಜನರ ಭೀತಿಯೆ ಮಣ್ಣಿನಾಸೆ ಪೋದವಗೆ ಅವನಿಪರ ಭಯವೆ ಧನದಾಸೆ ಪೋದವಗೆ ಬಿನುಗುಜನರಂಜಿಕೆಯೆ ತನುಮೋಹ ಬಿಟ್ಟವಗೆ ಮರಣದ ಭಯವೆ 1 ನಿಂದೆಯನು ಬಿಟ್ಟವಗೆ ಬಂಧಸೋಂಕುವ ಭಯವೆ ಸಂದೇಹವಳಿದವಗೆ ಕರ್ಮಗಳ ಭಯವೆ ಮಂದಿಗೋಷ್ಠಿಯಿಲ್ಲದವಗೆ ಅಪವಾದ ಭೀತಿಯೆ ಸಿಂಧುಶಯನನರ್ಚಕಗೆ ಕಾಲನ ಭಯವೆ 2 ಪರಮ ಧಾರ್ಮಿಕನಿಗೆ ಬಡತನದ ಭೀತಿಯೆ ಪರವ ಸಾಧಿಪನಿಗೆ ಕಷ್ಟಗಳ ಭಯವೆ ಅರಿವಿಟ್ಟು ನಡೆವವಗೆ ದುರಿತದ ಭಯವಿಹುದೆ ಶರಣರೊಳಾಡುವಗೆ ನರಕಂದಜಿಕೆಯೆ 3 ತತ್ವದರ್ಥಿಕನಿಗೆ ಮಿಥ್ಯಶಾಸ್ತ್ರದ ಭಯವೆ ನಿತ್ಯನಿರ್ಮಲನಿಗೆ ಮಡಿ ಮುಟ್ಟು ಭಯವೆ ಸತ್ಯಸನ್ಮಾರ್ಗಿಕಗೆ ಮತ್ರ್ಯದವರಂಜಿಕೆಯೆ ಸತ್ಯರೊಳಾಡುವಗೆ ಮೃತ್ಯುವಿನ ಭಯವೆ 4 ಕೊಟ್ಟು ಹುಟ್ಟಿದವಗೆ ಹೊಟ್ಟೆ ಬಟ್ಟೆಯ ಭಯವೆ ಇಟ್ಟು ಹಂಗಿಸದವಗೆ ಹೊಟ್ಟೆ ಬೇನೆ ಭಯವೆ ಸೃಷ್ಟಿಯೊಳಗೆ ನಮ್ಮ ದಿಟ್ಟ ಶ್ರೀರಾಮನಡಿ ಮುಟ್ಟಿ ಭಜಿಪಗೆ ಮತ್ತೆ ಹುಟ್ಟುವ ಭಯವೆ 5
--------------
ರಾಮದಾಸರು
ದುಮು ದುಮು ಬಸವಂತನ ಹಬ್ಬಾ ಪ ರಾಮಕೃಷ್ಣ ಗೋವಿಂದ ಮುರಾರಿ | ಶಾಮ ಸುಂದರ ಸುರಜ ಸಹಕಾರಿ | ಕಾಮಿತ ಫಲಗಳ ನೀವ ಉದಾರಿ | ಶ್ರೀ ಮಾಧವನೇ ಕಾಯೋ ಚರಣವ ದೋರಿ 1 ಬನ್ನ ಬಡುತಲಿ ಬಲು ಭವದಲಿ ಬಂದೆ | ಮುನ್ನಿನ ತಪ್ಪವನೆಣಿಸದೆ ತಂದೆ | ಚೆನ್ನಾಗಿ ರಕ್ಷಿಸು ನಮೋ ನಮೋ ಎಂದೆ 2 ಈ ರೀತಿಯಿಂದಲಿ ಹರಿಯ ಕೊಂಡಾಡಿ | ಆ ರಾಧಿಪ ನವವಿಧದಲ್ಲಿ ಕೂಡಿ | ನಾರಕ ಭಯಗಳುವನು ಮೂಲದೀಡ್ಯಾಡೀ | ಸೂರ್ಯಾಡು ಸ್ವ ಸುಖ ಎಲೊ ಹುಚ್ಚು ಖೋಡಿ 3 ಮುನ್ನಿನ ಪುಣ್ಯದಿ ನರದೇಹ ತಾಳಿ | ಮಾನವನಾಗಿ ಹರಿಕಥೆ ಕೇಳಿ | ಚೆನ್ನಾಗಿ ವಿಷಯದಲನುದಿನ ಬಾಳೀ | ವೈರಿ ನೀನಾದೆ ಗೈಯ್ಯಾಳಿ 4 ಮೃಗಜಲ ಹೋಲುವ ವಿಷಯಾ ನಂದಾ | ಬಗೆದೆಲೋ ಶಾಶ್ವತವೆಂದು ನಿನ್ನಿಂದಾ | ಭಕುತಿಯ ಮಾರ್ಗವ ಬಿಟ್ಟೆಲೋ ಛಂದಾ | ಜಗ ದೊಳಗಾದೆಲೋ ನೀ ಮತಿ ಮಂದಾ 5 ಹೆಂಡರು ಮಕ್ಕಳು ಮಮತೆಯ ಸ್ಥೂಲಾ | ಖಂಡದಿ ಬಿದ್ದಿದೆ ಕಾಲಿಗೆ ಕೋಳಾ | ಅಂಡಲೆವುತ ಹೊಟ್ಟೆಹೊರೆದೆಲೋ ಮೂಳಾ 6 ಸುಖವಿಲ್ಲ ಇದರೊಳಗಿಂದು | ಪಾದ ಹೊಂದು 7 ತ್ವರಿತದಿ ಭಾವಭಕ್ತಿಗೆ ಗಮನವಿಟ್ಟು | ತರಳನಾಗಿ ಹೋಗದಿರೆಲೋ ಕೆಟ್ಟು 8 ಚಿನುಮಯ ಗೆಚ್ಚರಗಳೆದೆಲೋ ಭ್ರಾಂತಾ | ಕುಣಿಸ್ಯಾಡುತಿ ಹನು ಅಚ್ಯುತಾನಂತಾ 9 ಒಬ್ಬರು ಶಾಸ್ತ್ರದ ಮದದಲಿ ಬಿಗಿದು ಉಬ್ಬುಬ್ಬಿ ಕುಣಿದರು ಹೇಳಲೇನಿಂದು 10 ಅಷ್ಟಮದದಿಂದ ಕಣ್ಣು ಮುಚ್ಚಿ | ಕುಟ್ಟುವಾಗ ನೆಲ್ಲಿಕಾಲನು ಘಟ್ಟಿಸಿ 11 ಸಂತರ ಕಥೆ ಕಿವಿಯಲಿ ಕೇಳಲಿಲ್ಲಾ | ಭ್ರಾಂತನೆ ನಾಳೆ ಮುರಿವನು ಹಲ್ಲಾ 12 ನೆರೆದಹಿಸುತ ದುರ್ಮದ ಬೂದಿ ಚೆಲ್ಲಿ | ನರಜನ್ಮ ಸಾರ್ಥಕ ಮಾಡೆಲೊಹುಳ್ಳಿ 13 ಕಂದನು ಸಾರಿದಾ ಹೋಳಿಯಾ ವಂದಾ | ಭವ ಬಂದಾ 14
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ದುಷ್ಟ ರಕ್ಕಸರನು ಜಯಿಸಿದ ಪರಮವಾಯುಸುತಗೆ ಮಂಗಳಂ ಪ್ರಾಣೇಶಗೆ ಮಂಗಳಂ ಪ ಬೆಟ್ಟ ಪುಚ್ಛದಿ ತಂದಿಟ್ಟು ಸಂಜೀವನ ಕೊಟ್ಟ ಶ್ರೀ ರಾಮನ ಭಕ್ತನಿಗೆ ಮಂಗಳಂ 1 ಸಿಟ್ಟಿಲಿ ದುಶ್ಶಾಸನನ ಹೊಟ್ಟೆ ಬಿಗಿದು ಇಷ್ಟ ಪೂರೈಸಿದ ಕೃಷ್ಣನ ದಾಸಗೆ ಮಂಗಳಂ 2 ಹನುಮೇಶ ವಿಠಲನ ಪ್ರೀತಿಪಾತ್ರನೆಂದೆನಿಸಿದ ಮುನಿವರ ಗುರು ಮಧ್ವರಾಯಗೆ ಮಂಗಳಂ 3
--------------
ಹನುಮೇಶವಿಠಲ
ದ್ಯಾವಿ ನಮ್ಮ ದ್ಯಾವರು ಬಂದರು ಬನ್ನೀರೆ, ನೋಡ ಬನ್ನಿರೆ ಪ ಕೆಂಗಣ್ಣ ಮೀನನಾಗಿ ನಮ ರಂಗಗುಂಗಾಡು ಸೋಮನ ಕೊಂದಾನ್ಮ್ಯಾಗುಂಗಾಡು ಸೋಮನ ಕೊಂದು ವೇದವನುಬಂಗಾರದೊಡಲನಿಗಿತ್ತಾನ್ಮ್ಯಾ1 ದೊಡ್ಡ ಮಡುವಿನೊಳಗೆ ನಮ ರಂಗಗುಡ್ಡವ ಹೊತ್ಕೊಂಡು ನಿಂತಾನ್ಮ್ಯಾಗುಡ್ಡವ ಹೊತ್ಕೊಂಡು ನಿಂತು ಸುರರನುದೊಡ್ಡವರನ್ನ ಮಾಡ್ಯಾನ್ಮ್ಯಾ 2 ಚೆನ್ನ ಕಾಡಿನ ಹಂದಿಯಾಗಿ ನಮ ರಂಗಚಿನ್ನದ ಕಣ್ಣನ ಕೊಂದಾನ್ಮ್ಯಾಚಿನ್ನದ ಕಣ್ಣನ ಕೊಂದು ಭೂಮಿಯವನಜಸಂಭವಗಿತ್ತಾನ್ಮ್ಯಾ 3 ಸಿಟ್ಟಿಂದ ಸಿಂಹನಾಗಿ ನಮ ರಂಗಹೊಟ್ಟೆಯ ಕರುಳ ಬಗೆದಾನ್ಮ್ಯಾಹೊಟ್ಟೆಯ ಕರುಳ ಹಾರವ ಮಾಡಿ ಪುಟ್ಟಗೆ ವರವ ಕೊಟ್ಟಾನ್ಮ್ಯಾ4 ಹುಡುಗ ಹಾರುವನಾಗಿ ನಮ ರಂಗಬೆಡಗಲಿ ಮುಗಿಲಿಗೆ ಬೆಳೆದಾನ್ಮ್ಯಾಬೆಡಗಲಿ ಮುಗಿಲಿಗೆ ಬೆಳೆದು ಬಲಿಯನ್ನಅಡಿಯಿಂದ ಪಾತಾಳಕೊತ್ತ್ಯಾನ್ಮ್ಯಾ 5 ತಾಯ ಮಾತನು ಕೇಳಿ ಸಾಸಿರ ತೋಳಿನಆವಿನ ಕಳ್ಳನ ಕೊಂದಾನ್ಮ್ಯಾಆವಿನ ಕಳ್ಳನ ಕೊಂದು ಭೂಮಿಯಅವನಿಸುರರಿಗೆ ಇತ್ತಾನ್ಮ್ಯಾ 6 ಪಿಂಗಳ ಕಣ್ಣಿನ ಕೊಂಗಗಳ ಕೂಡಿಛಂಗನೆ ಲಂಕೆಗೆ ಪೋದಾನ್ಮ್ಯಾಛಂಗನೆ ಲಂಕೆಗೆ ಪೋಗಿ ನಮ ರಂಗಹೆಂಗಸುಗಳ್ಳನ ಕೊಂದಾನ್ಮ್ಯಾ7 ಕರಿಯ ಹೊಳೆಯ ಬಳಿ ತುರುಗಳ ಕಾಯುತಉರಗನ ಮಡುವ ಧುಮುಕ್ಯಾನ್ಮ್ಯಾಉರಗನ ಹೆಡೆ ಮೇಲೆ ಹಾರ್ಹಾರಿ ಕುಣಿವಾಗವರವ ನಾರೇರ್ಗೆ ಕೊಟ್ಟಾನ್ಮ್ಯಾ 8 ಭಂಡನಂದದಿ ಕುಂಡೆಯ ಬಿಟುಗೊಂಡುಕಂಡ ಕಂಡಲ್ಲಿಗೆ ತಿರುಗ್ಯಾನ್ಮ್ಯಾಕಂಡ ಕಂಡಲ್ಲಿಗೆ ತಿರುಗಿ ತ್ರಿಪುರರಹೆಂಡಿರನೆಲ್ಲ ಕೆಡಿಸ್ಯಾನ್ಮ್ಯಾ 9 ಚೆಲುವ ಹೆಂಡತಿಯ ಕುದುರೆಯ ಮಾಡಿಒಳ್ಳೆ ರಾಹುತನಾದಾನ್ಮ್ಯಾಒಳ್ಳೆ ರಾಹುತನಾಗಿ ಮ್ಲೇಚ್ಛರಡೊಳ್ಳು ಹೊಟ್ಟೆಯ ಮ್ಯಾಲೊದ್ದಾನ್ಮ್ಯಾ 10 ಡೊಳ್ಳಿನ ಮ್ಯಾಲ್ ಕೈ ಭರಮಪ್ಪ ಹಾಕ್ಯಾನುತಾಳವ ಶಿವನಪ್ಪ ತಟ್ಟಾನ್ಮ್ಯಾಒಳ್ಳೊಳ್ಳೆ ಪದಗಳ ಹನುಮಪ್ಪ ಹಾಡ್ಯಾನುಚೆಲುವ ಕನಕಪ್ಪ ಕುಣಿದಾನ್ಮ್ಯಾ11
--------------
ಕನಕದಾಸ
ಧನವು ಇದ್ದರೆ ಸಾಕು ಜನರಿಗೆ ಧನವು ಇದ್ದರೆ ಸಾಕು ಪ ಧನದೋರದಾತಗೆ ಗುಣವಿಲ್ಲವನುದಿನ ಧನವಿಲ್ಲದಾತನು ವನದ ಪಾಮರನು ಅ.ಪ ತಂದೆ ತಾಯಿಗಳಿಲ್ಲ ಬಂಧುಬಾಂಧವರಿಲ್ಲ ಹಿಂದುಮುಂದುದಿಸಿದ ತಮ್ಮಂದಿರನೊಲ್ಲ 1 ಒಡವೆಯುಳ್ಳಾತಗೆ ನಡೆಯಬಾರದು ಕಾಲು ನಡೆವಾಗ ಬಡವರ ಎಡವುತ್ತ ಕಾಣನು 2 ಅರ್ಥವ ಪುಂಜಕನರ್ಥ ಯಥಾರ್ಥವು ಧೂರ್ತನಾದರು ತಾನು ಕೀರ್ತಿಸಿಕೊಂಬನು 3 ಸೆಡವೆಂಬ ಪುತ್ರನು ಒಡಲೊಳು ಜನಿಸುವ ಮಡದಿ ಗರ್ವಿತೆಯಾಗಿ ಪಿಡಿದಳು ಕರವನು 4 ಉತ್ತಮೋತ್ತಮನಾಗಿ ಅಧಮನುತ್ತಮನಪ್ಪ ಮೃತ್ಯುಮಾನಿನಿ ವ್ಯರ್ಥ ಮಗನ ಪಡೆಯುವಳು 5 ಉಡಿಗೆ ಆಭರಣಕ್ಕೆ ನುಡಿಯಬಾರದು ಬಾಯಿ ಕಿಡಿಯಿಡೆ ಕಂಗಳು ಜಡದ ಕರ್ಣಗಳು 6 ಕಟ್ಟಲು ಅರ್ಥವ ಹೊಟ್ಟೆಯೊಳು ಹಸುವಿಲ್ಲ ಭ್ರಷ್ಟ ಅನಾಥರ ಶ್ರೇಷ್ಠ ಸೃಷ್ಟಿಯೊಳಾತ 7 ಬಡಮನಸಾಗಿಯೆ ನುಡಿಯ ಬಂದವನೊಳು ಸಡಗರದಿಂದಲೆ ಸೆಡಕ ತೋರುವನು 8 ಅರಸು ಆತನ ಕಂಡು ಕರೆಸಿ ಉಚಿತವಿತ್ತು ಸರಸವನಾಡಿ ವಿಹರಿಸುತ್ತಲಿಹನು 9 ಫಣಿಗಿರಿಯೊಳು ನಿಂತ ವರಾಹತಿಮ್ಮಪ್ಪನು ಹಣವನಿತ್ತವರಿಗೆ ಉಣಿಸುವಭೀಷ್ಟವ 10
--------------
ವರಹತಿಮ್ಮಪ್ಪ
ನಗಬಹುದು ನೀ ಮುಗುಳು ನಗೆಯಾ ಗುರುರಾಯಮಿಗೆ ಕಂಡು ದೇಹಾಭಿಮಾನಿಗಳ ಬಗೆಯಾ ಪತನ್ನ ತಾನರಿಯಲೀಸದ ಮಾಯೆಗೊಳಗಾಗಿಅನ್ಯರೇತೋಜಾತಮಾದ ದೇಹವ ನೋಡಿತನ್ನಿಂದ ತಾ ಕಾಣಪಡುತಿಹುದಿದಲ್ಲವೆಂದೆನ್ನಲಾರದೆ ದೋಷದಿಂದಾಉನ್ನತದ ಮಾಂಸ ರಕ್ತಾಸ್ತಿಮಲ ಮೂತ್ರಂಗಳಿನ್ನೆನೆದುನಾರುವ ನವದ್ವಾರ ಮಾರ್ಗದಿಂತನ್ನ ಮರಸುವದೇಹವೆತನ್ನದೆಂದು ಮರೆದುಣ್ಣುರಿವಾತಗಳ ಕಂಡೂ ಮಾಯೆ ಭಾಪೆನ್ನುತ್ತ ಬೆರಳೊಲದು ಕೊಂಡು ಬಗೆಗಂಡೂ 1ಬಿಟ್ಟ ಮನೆ ಜನ ಧನಂಗಳಲಿ ಮತ್ತೂ ಮನವನಿಟ್ಟು ವಾಂತ್ಯಾಶನವನುಂಬ ನಾಯಂದದಲಿಪಟ್ಟಣಂಗಳಲಿ ತಿರುಗುತ ಪರರ ಬಾಧಿಸುತಕೆಟ್ಟ ಬುದ್ಧಿುಂದ ಧೃತಿಗುಂದಿಕೊಟ್ಟಪುದು ಕರ್ಮವೆಂಬುದ ಮರೆತು ಗೇಣುದ್ದಹೊಟ್ಟೆ ಬಟ್ಟೆಗೆ ದೈನ್ಯ ಬಟ್ಟು ಮೂಢತೆುಂದಕೆಟ್ಟೆನಿನ್ನಾರು ರಕ್ಷಿಪರೆಂದು ಚಿಂತಿಸುವಹೊಟ್ಟೆಹೊರಕರನು ನೋಡುತ್ತಾ ಕಟಕಟಾಕೆಟ್ಟರಿವರೆಂದು ಹಾಸ್ಯವನು ಮಾಡುತ್ತಾ 2ತಾನಾತ್ಮನೆಂಬುದನು ಕೇಳಿದ್ದುದೃಷ್ಟಾನುಮಾನಂಗಳಿಂ ನಂಬಿಗೆಯೆುಲ್ಲದದರಲ್ಲಿಮಾನಾವಮಾನಂಗಳಿಂ ಹರುಷ ಶೋಕಾದಿಹೀನಬುದ್ಧಿಗಳ ಮಾಡುತ್ತಾಜ್ಞಾನಮಾರ್ಗದಲಿ ವಿಶ್ವಾಸವಿಲ್ಲದೆ ತನ್ನ ಕಾಣಲಾರದೆ ಭೇದ ಬುದ್ಧಿುಂ ವ್ರತತೀರ್ಥಸ್ನಾನಾದಿುಂದ ಮುಕುತಿಯ ಪಡೆಯಬೇಕೆಂಬಮಾನವರ ಭ್ರಾಂತಿಯನು ತಿಳಿದೂ ಇವರ್ಗಳಿಗೆಸ್ವಾನುಭವವಿಲ್ಲೆಂದು ಸಮತೆಯಲಿ ನಿಂದೂ 3ರಾಗವನು ಬಿಡಲಾರದಾಶಾಪಿಶಾಚಕೊಳಗಾಗಿ ಸತ್ಸಂಗ ಸತ್ಕಥೆಯ ಕೇಳಿಕೆಗಳನುನೀಗಿ ಧನಿಕರೊಳಿಚ್ಚಿತವನಾಡಿ ಸದ್ಧರ್ಮತ್ಯಾಗಿಯಾಗ್ಯನೃತಕ್ಕೆ ಪೊಕ್ಕೂಹೀಗೆ ತಿರುಗುತ ಪರಾನ್ನಾದಿ ಭೋಗಕ್ಕಾಗಿಕಾಗೆಯಂದದಲಲ್ಲಿಗಲ್ಲಿಗೆ ಸದ್ಗತಿುೀವಯೋಗ ಮಾರ್ಗವ ಬಿಟ್ಟುಭ್ರಾಂತರಾದಿರಿ ಮಹದ್ರೋಗಿಗಳ ಕಂಡು ಬೆಸಗೊಂಡು ಇವರ್ಗೆ ಭವರೋಗ ಬಿಡದೆಂದು ನಿಜಪದದಲ್ಲಿ ನಿಂದೂ 4ಇಂತರಿವ ಜನರಲ್ಲಿ ನಿಂತು ಸನ್ಮತಿುತ್ತುಚಿಂತೆಗಳ ಬಿಡಿಸುತ್ತಲಂತರಾತ್ಮಕನಾಗಿಸಂತಗೋಪಾಲಾರ್ಯ ಗುರುವರ್ಯನಾಗಿ ವೇದಾಂತದರ್ಥವನು ಬೋಧಿಸುತಾಅಂತವಿಲ್ಲದ ನಿಜವ ತೋರಿ ಪಾಲಿಸಿ ಮುದವಂತಾಳ್ದು ಸಕಲ ಸಂಶಯಗಳನು ಪರಿಹರಿಸಿಶಾಂತರಾದಿರಿ ಮೋಹಹೋುತ್ತು ನಿತ್ಯ ಸ್ವಾತಂತ್ರ್ಯವಾುತು ಗೆದ್ದಿರೆನುತಾಸಂತತಾನಂದಕನುಗೈದು ಕೈ ಹೊುದೂ 5
--------------
ಗೋಪಾಲಾರ್ಯರು
ನಮಗೊಬ್ಹಾನೆ ತಾ ಜೀವಜೀವದ ಗೆಳೆಯ ಧ್ರುವ ಸುತ್ತಿ ಸೂಸ್ಯಾಡುತ್ಹಾನೆ ನೆತ್ತಿಯೊಳಗೆ ತುಂಬ್ಯಾನೆ ತುತ್ತುಮಾಡಿ ಉಣಿಸುತ್ಹಾನೆ ಹತ್ತಿಲೆ ತಾ ಹಾನೆ 1 ಹೊಟ್ಟೆಲೆನ್ನ ಹಿಡಿದಾನೆ ಘಟ್ಯಾಗಿ ರಕ್ಷಿಸುತಾನೆ ದೃಷ್ಟಿಸಿ ನೋಡುತ್ಹಾನೆ ಗುಟ್ಟಿನೊಳ್ಹಾನೆ 2 ತಾನೆ ಸೋತು ಬರುತ್ಹಾನೆ ಎನಗುಳ್ಳ ಸದ್ಗುರು ನಾಥ್ಹಾನೆ ಕನಗರಸಿದಾಗೊಮ್ಹಾನೆ ಮನದೊಳು ನಿಂದ್ಹಾನೆ 3 ಮಾಯದ ಸುಖ ಮರಿಸ್ಯಾನೆ ತಾಯಿ ತಂದೆ ತಾನಗ್ಹ್ಯಾನೆ ಸಾಹ್ಯ ಬಲು ಮಾಡುತ್ಹಾನೆ ಭವಭಯ ಬಿಡಿಸ್ಹ್ಯಾನೆ 4 ಮನ್ನಿಸಿ ದಯ ಬೀರುತ್ಹಾನೆ ಧನ್ಯ ಪ್ರಾಣಗೈಸುತ್ಹಾನೆ ಚಿಣ್ಣ ಮಹಿಪತಿಯ ಗುರು ತಾನೆ ಕಣ್ಣಿನೊಳ್ಹಾನೆ 5
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ನರಜನ್ಮ ವ್ಯರ್ಥವಲ್ಲವೇ | ಈ ಮೂಢರ | ನರಜನ್ಮ ವ್ಯರ್ಥವಲ್ಲವೇ ಪ ಗುರುಗಳ ಶರಣ್ಹೊಕ್ಕು ದಯ ಪಡಿಲಿಲ್ಲಾ | ತರಣೋಪಾಯದ ನಿಜ ತಿಳಿದವನಲ್ಲಾ 1 ಘಟ್ಟಿಸಿ ಒಬ್ಬರ ಮನಿಯ ಮುಣಗಿಸಿ | ಹೊಟ್ಟೆಯ ಬಿಟ್ಟನು ಅನ್ಯಾಯ ಘಳಿಸಿ 2 ಉತ್ತಮರಲ್ಲಿ ಅರಕ್ಷಣವಕ್ಕುಳ್ಳಿರನು | ಲೆತ್ತ ಪಗಡಿಯಾಡಿ ಹೊತ್ತು ಗಳೆವನು 3 ವಾಸುದೇವನ ಸೇವೆಗಾಲಸ್ಯ ಹಿಡಿದಾ | ಕಾಸಿನ ಆಶೆಗೆ ಎತ್ತಾಗಿ ದುಡಿವಾ 4 ಮಹಿಪತಿ ನಂದನ ಪ್ರಭುವಿನ ಮರತಾ | ಸ್ವಹಿತದ ಹಾದಿಗೆ ಅವನು ಹೊರತಾ 5
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ನರಸಿಂಹಾ ಲಕ್ಷ್ಮೀನರಸಿಂಹ ಪ ನಮಿಸುವೆ ಲಕ್ಷ್ಮೀನರಸಿಂಹ ಅಹಾ ಕನಕಕಶ್ಯಪನಳಿದು ಜನಕೆ ಸುಖವನಿತ್ತು ಘನಪುರುಷನೆ ಕ್ಷಣ ಕ್ಷಣ ನಮಿಸುವೆ ಅ.ಪ ಅಟ್ಟಹಾಸದಿ ಕಂಭಸಿಡಿದೂ | ಬಲು ಕಟ್ಟುಗ್ರತನದ ಕೆಟ್ಟ ಹಿರಣ್ಯನ ಹೊಟ್ಟೆಯ ಬಗೆದಂಥ ಶ್ರೇಷ್ಠಮಹಿಮನೆ 1 ತೊಡೆಯ ಮೇಲಿಟ್ಟಿ ಬಹು ಕಂಡೆ ಈ ದಿನ 2 ಸೂರಿಗಳರಸ ಒಡೆಯಾ | ಮೋಲೆ ಸುರಸೋದರರೊಳುಮೆರೆಯ | ಆಹಾ ಕ್ರೂರ ದೈತ್ಯನ ಕೊರಳಹರಿದ ಅ- ಪಾರ ಮಹಿಮಸಿರಿವರ ಸಿಂಹವಿಠಲ 3
--------------
ಓರಬಾಯಿ ಲಕ್ಷ್ಮೀದೇವಮ್ಮ
ನಾಟಕ ರಂಗದಲಿ ನಟಶಿರೋಮಣಿಯೊಬ್ಬ ಪಟುತನದಿ ವಿಧವಿಧನ ನಟನೆಗಳ ತೋರುವನು ಪ ಅಘಟನಾಘಟನ ಶಕ್ತನ ಕಪಟನಾಟಕವು ಘಟಕರಲ್ಲದ ಜನಕೆ ಎಟುಕದಾನೋಟ ಅ.ಪ ಮುಖ್ಯಪಾತ್ರವು ನಮ್ಮ ರುಕ್ಮಿಣಿ ರಮಣನದು ಮುಖ್ಯತಾರೆಯು ಲೋಕ ಜನನಿ ಲಕುಮಿ ಇಕ್ಕಿದನು ಗೋರೂಪ ಚತುರಾನನನು ಮುದದಿ ಮುಖ್ಯಪ್ರಾಣನೆ ತುರಗ ಮುಕ್ಕಣ್ಣ ಕರುವಾದ 1 ಸುಖಸಾರನನು ಪಡೆದು ಧನ್ಯಳಾದ ಯಶೋದೆ ಬಕುಳೆಯೆ ತಾನಾದಳೀ ನಾಟಕದಲಿ ಅಕಳಂಕ ಮಹಿಮನನು ಅಗಲದಿದ್ದ ಸತಿಯು ಮುಖನೋಡಿ ಕೋಪದಲಿ ಕಲ್ಲುಗಳನೆಸೆದಳು 2 ಸರ್ವತ್ರ ವ್ಯಾಪ್ತನಿಗೆ ಇರಲು ಜಗವು ಸಿಗದೆ ಕಿರಿದ ತಾ ಹಲ್ಲುಗಳ ವರಹನಲ್ಲಿ ಹರನ ತಾತನು ತಾನು ಸ್ಮರನ ಬಾಣದಿ ನೊಂದ ಸುರಮೋಹಿನಿಯು ಇಂಥ ಕೊರವಂಜಿಯಾದಳು3 ಹುಟ್ಟಿಸುವ ಬೊಮ್ಮನನು ಪುಟ್ಟಶಿಶುವನೆ ಮಾಡಿ ಹೊಟ್ಟೆಗಿಲ್ಲದೆ ಬಹಳ ಬಾಡಿ ಇರಲು ಮೃಷ್ಟಾನ್ನವನು ಚಿನ್ನ ತಟ್ಟೆಯಲಿ ತಂದಿಡಲು ಶ್ರೇಷ್ಠವಿದು ಜನನಿಗೆನ್ನುತ ತಿಂದು ತೇಗಿದಳು 4 ಬಡುಕನೆದೆಗೊದೆಯಲವನಡಿಗಳಿಗೆ ಶರಣೆಂದ ಕಡು ಕೋಪಿ ಗೋವಳನ ಕೊಡಲಿಗೊಡ್ಡಿದ ಶಿರವ ಹಿಡಿ ಮಣ್ಣು ಪಿಂಡಗಳನಿತ್ತ ಚಂಡಾಲನಿಗೆ ಸಡಗರದಿ ಲಕುಮಿಯನೇ ಕರದಲಿತ್ತ ಪ್ರಸನ್ನ 5
--------------
ವಿದ್ಯಾಪ್ರಸನ್ನತೀರ್ಥರು
ನಾವು ಕುರುಬರು, ನಮ್ಮ ದೇವರು ಬೀರಯ್ಯಕಾವ ನಮ್ಮಜ್ಜ ನರಕುರಿಯ ಹಿಂಡುಗಳ ಪ ಅಷ್ಟಮದ ಮತ್ಸರಗಳೆಂತೆಂಬ ಟಗರುಗಳುದೃಷ್ಟಿ ಜೀವಾತ್ಮನೆಂತೆಂಬ ಆಡುಸೃಷ್ಟಿ ಸಿದ್ಧ ಪ್ರಸಿದ್ಧವೆಂತೆಂಬ ಹೋತಗಳುಕಟ್ಟಿ ಕೋಲಿನಲಿ ಇರಿಯುತಿಹ ನಮ್ಮಜ್ಜ 1 ವೇದಶಾಸ್ತ್ರ ಪುರಾಣವೆಂತೆಂಬ ಶ್ವಾನಗಳುಕಾದಿದ್ದು ನಮ್ಮಜ್ಜನ ಹಿಂಡೊಳಗೆಹಾದಿಗಾಣದೆ ಕೂಗಿ ಬಾಯಾರಿ ಕಾಲ್ಗೆಡಲುಆದರಿಸಿ ಅಂಬಲಿಯನೆರೆವ ನಮ್ಮಜ್ಜ 2 ಅರಿವೆಂಬ ಮರಿಗಳು ಹಿಂಡಿನೊಳಗಡೆ ಬರಲುಮರೆವೆಂಬ ವ್ಯಾಘ್ರ ಕಿರುಬ ತೋಳಗಳು ಹೊಕ್ಕುತರುಬಿ ಹಿಂಜಾವದಲಿ ಕುರಿಯ ಮುರಿವುದ ಕಂಡು ಅರಿತು ಅರಿಯದ ಹಾಗೆ ಇರುವ ನಮ್ಮಜ್ಜ 3 ಹುಟ್ಟುದಕೆ ಮೊದಲಿಲ್ಲ ಸಾವುದಕೆ ಕೊನೆಯಿಲ್ಲಹುಟ್ಟು ಸಾವಿನ ಹೊಲಬ ಬಲ್ಲ ನಮ್ಮಜ್ಜಅಷ್ಟು ಪ್ರಾಣಿಗಳಿಗೆ ಇಷ್ಟು ಅಂಬಲಿ ಮಾಡಿಹೊಟ್ಟೆ ತುಂಬುವ ಹಾಗೆ ಎರೆವ ನಮ್ಮಜ್ಜ 4 ಕಲಿಯುಗಕೆ ಗೌಡನಿವ ಸಂಗಾತಿ ಮಂತ್ರಿಸುತಕಲಿಯುಗಂಗಳನೆಲ್ಲ ಪೊರೆವಾತನೀತಜಲಜಾಕ್ಷ ಕಾಗಿನೆಲೆಯಾದಿಕೇಶವನ ಮನವೊಲಿಸಿ ಭಜಿಸದ ಮನುಜ ಹುಚ್ಚು ಕುರುಬ 5
--------------
ಕನಕದಾಸ
ನಿಖಿಳ ಜನರು ಬಂದು ಮನ್ನಿಸುವರೊ ಮಹರಾಯ ಪ ಎನ್ನ ಪುಣ್ಯಗಳಿಂದ ಈ ಪರಿಯುಂಟೇನೊ ನಿನ್ನದೆ ಸಕಲ ಸಂಪತ್ತು ಅ.ಪ ಒಬ್ಬ ಹೆಂಗಸಿನ ಹೊಟ್ಟೆಗೆ ಹಾಕುವುದಕಿನ್ನು ತಬ್ಬಿಬ್ಬುಗೊಂಡನೊ ಹಿಂದೆ ನಿಬ್ಬರದಿಂದಲಿ ಸರ್ವರ ಕೂಡುಂಬೊ ಹಬ್ಬವನುಣಿಸುವಿ ಹರಿಯೆ 1 ಸಂಜೆತನಕವಿದ್ದು ಸಣ್ಣ ಸೌಟಿನ ತುಂಬ ಗಂಜಿ ಕಾಣದೆ ಬಳಲಿದೆನೋ ವ್ಯಂಜನ ಮೊದಲಾದ ನಾನಾ ರಸಂಗಳು ಭುಂಜಿಸುವುದು ಮತ್ತೇನೊ2 ಜೀರ್ಣ ಮಲಿನ ವಸ್ತ್ರ ಕಾಣದ ನರನಿಗೆ ಊರ್ಣ ವಿಚಿತ್ರ ಸುವಸನ ವರ್ಣವರ್ಣದಿಂದ ಬಾಹೋದದೇನೊ ಸಂ ಪೂರ್ಣಗುಣಾರ್ಣವ ದೇವ 3 ನೀಚೋಚ್ಚ ತಿಳಿಯದೆ ಸರ್ವರ ಚರಣಕ್ಕೆ ಚಾಚಿದೆ ನೊಸಲ ಹಸ್ತಗಳ ಯೋಚಿಸಿ ನೋಡಲು ಸೋಜಿಗವಾಗಿದೆ ವಾಚಕ್ಕೆ ನಿಲುಕದು ಹರಿಯೆ 4 ಮಧ್ಯಾಹ್ನ ಕಾಲಕ್ಕೆ ಅತಿಥಿಗಳಿಗೆ ಅನ್ನ ಮೆದ್ದೆನೆಂದರೆ ಈಯಗಾಣೆ ಸತ್ಪಾತ್ರ ಕೂಡುಂಬೊ ಪದ್ಧತಿ ನೋಡೊ ಪುಣ್ಯಾತ್ಮ 5 ಮನೆ ಮನೆ ತಿರಿದರು ಕಾಸು ಪುಟ್ಟದೆ ಸು ಮ್ಮನೆ ಚಾಲ್ವರಿದು ಬಳಲಿದೆನೊ ಹಣ ಹೊನ್ನು ದ್ರವ್ಯಂಗಳಿದ್ದಲ್ಲಿಗೆ ತನಗೆ ತಾನೆ ಪ್ರಾಪ್ತಿ ನೋಡೊ ಜೀಯಾ 6 ವೈದಿಕ ಪದವಿಯನೀವಗೆ ಲೌಕಿಕ ಐದಿಸುವುದು ಬಹು ಖ್ಯಾತೆ ಮೈದುನಗೊಲಿದ ಶ್ರೀ ವಿಜಯವಿಠ್ಠಲನ ನಿನ್ನ ಪಾದಸಾಕ್ಷಿಯನುಭವವೊ 7
--------------
ವಿಜಯದಾಸ