ಒಟ್ಟು 1039 ಕಡೆಗಳಲ್ಲಿ , 99 ದಾಸರು , 825 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಶ್ರೀ ಮಧ್ವಾಚಾರ್ಯರು ಸ್ಮರಿಸು ಸಂತತ ಗುರುಗಳಾ ಬಿಡದೆ ಅನುದಿನಾ ಪ ವಾತ ಭೀಮನ ಒಡೆಯ ವೇದವ್ಯಾಸಯುತ ಸಾರಂಗಧರನಆ ಪ್ರೇಮದಿಂದಲಿ ಭಜಿಪೆನಡಿಗಳ ಬಿಡದೆ ಅ.ಪ. ಮಂದ್ರಜಾಸನ ಸುತನ ವಚನ ಕೊಂಡು ಧರೆಯೊಳು ಬಂದು ಭಜಿಸುತ ಪೊಂದಿಪವರ ವೃಂದ ಹರಿಸಿ ಸುಗುಣ ಸುವೃಂದಗಳಿಗೆ ಬಂಧುಪರ ಗೋವಿಂದನೆಂಬುದ ಬೋಧಿಸಿದನ 1 ಮಂಗಳಾಂಗನ ಕೊಂಡು ತುಂಗಕುಲ ತೀರ್ಥರ ಶರದೀ ಬಂದೂ ಭೂಮಿಯೊಳು ಅನಂಗಪಿತನ ಒಲಿಸಿರಂಗರಾಜನ ದೂತನಿಂದಾ ವಿದ್ಯವಾ ಕೊಂಡು ಬಂದು ಪರಮಾದರದಿ ವ್ಯಾಸತ್ರಯಯುತ ಸುಧೆಯನಗರದನಂಘ್ರಿಯಾ 2 ರಘುಕುಲಾ ಜಲಧೀಗೆ ಜಲಜವೈರಿಯಂತೊಪ್ಪುವಾಮಾರನಯ್ಯ ಶಿರಿ ಪರಶು ಪಾಣೀ ಯಾತ ಜಡೆಧಾರ ತುರೀಯನಾಶ್ರಯಿಸೀ ಬಾಣರೂಪವಾ ಬಿಡದೆಬಾಣವಾ ಗುರಿ ಮಾಡಿಬಾಣವರದನ ಸರಿಯೆಂದೆನಿಸಿ ಬಾಣ ಭೇದವನೆ ಬೋಧಿಸಿಬೋಧತೀರ್ಥರ ಮತಾಧಿಪನ ತಂದೆವರದಗೋಪಾಲವಿಠಲನಭಜಕಾ 3
--------------
ತಂದೆವರದಗೋಪಾಲವಿಠಲರು
ಶ್ರೀ ಯುವನಾಮ ಸಂವತ್ಸರ ಸ್ತೋತ್ರ 152 ಉಗ್ರಂ ವೀರಂ ಮಹಾ ವಿಷ್ಣು ಅನುಪಮ ಮಹಾಜಾಜ್ವಲ್ಯ ಸರ್ವತೋಮುಖ ಭೀಷಣ ಭದ್ರ ಮೃತ್ಯು ನರಸಿಂಹ ದೇವ ದೇವ ದೇವೋತ್ತಮನಲಿ ಶರಣಾದೆ ಯುವನಾಮ ಸಂವತ್ಸರ ಅಸಮ ನಿಯಾಮಕನಲ್ಲಿ ಪ. ಬಾಲಿಶತನ ಕಳಿದು ಪ್ರೌಢಿಮೆಯಲಿ ಬರುವ ಯುವಕ ಯುವತಿಯರು ಸಾರ ಅಸಾರ ವಿವೇಕದಿ ಇಹಪರ ಸಾರ್ಥಕ ಆಗುವ ಜೀವನ ಕ್ರಮದಿ ಚರಿಸಲು ಯೋಗ್ಯವಾಗಿರುವದು ಈ ಯುವನಾಮ ವರ್ಷ 1 ಹರಿರೇವ ಪರೋ ಹರಿರೇವ ಗುರುರ್ ಹರಿರೇವ ಜಗತ್ಪಿತೃ ಮಾತೃಗತಿಃಯೆಂಬ ಪರಮೋತ್ತಮ ಬಲು ಆಪ್ತ ವಾಕ್ಯವ ಪ್ರತಿಕ್ಷಣ ಸಂಸ್ಮರಿಸಿದರೆ ಇಷ್ಟ ಸಿದ್ಧಿ ಅನಿಷ್ಟ ನಿವಾರಣ ದಿನ ದಿನ ವಿಹಿತ ಸಾಧು ಕರ್ಮ ಆಚರಿಪರಿಗೆ 2 ವಿಷ್ಣು ಪುರಾಣದಿ ಪರಾಶರ ಮಹರ್ಷಿ ಉಪದೇಶಿಸಿದಂತೆ ಪಾಷಂಡಿಗಳಲ್ಲಿ ಪಾಷಂಡ ಮತ ಪ್ರವರ್ತಕರಲಿ ಮೋಹ ಕೂಡದು ಸಾತ್ವಿಕ ಪುರಾಣಧಿಕ್ಕರಿಸುವ ಸ್ತ್ರೀ ಪುರುಷರ ಕ್ರೌರ್ಯಕ್ಕೆ ಬಾಗಿ ಸ್ನೇಹಿಸುವ ಜನರು ವಿಪತ್ತಿಗೆ ಗುರಿ ಜನ್ಮ ಜನ್ಮಕ್ಕೂ 3 ಯುವ ವರ್ಷ ರಾಜನು ಸಾಧು ಸಜ್ಜನಪ್ರಿಯ ಶನಿಮಹಾರಾಜನು ಹರಿಭಕ್ತರು ಸಜ್ಜನರುಗಳಿಗೆ ಸಹಾಯಕನು ಗೋಚಾರದಿ ಸ್ವಕ್ಷೇತ್ರಿ ಮೂಲ ತ್ರಿಕೋಣದೆ ಚಾರ ಶ್ರೀಹರಿ ನಿಯಮನದಿ ಮಂತ್ರಿ ಶುಕ್ರಚಾರ್ಯರು ಗೋಜನ ಪ್ರಿಯರು ಲೋಕ ಹಿತಕರರು 4 ಶನೈಶ್ಚರ ಕೃತ ಲಕ್ಷ್ಮಿ ಭೋಮ ನರಸಿಂಹ ಸ್ತೋತ್ರ ಅವಶ್ಯಪಠನೀಯ ಧಶರಥ ಕೃತ ಮತ್ತು ಪ್ರಸನ್ನ ಶ್ರೀನಿವಾಸೀಯ ಶನಿ ಸ್ತೋತ್ರ ಈ ನುಡಿಗಳು ಸಂವತ್ಸರ ಸ್ತೋತ್ರ ಯತಿವರ್ಯರು ಪಂಡಿತರು ಮತ್ತೆಲ್ಲರಿಂಪಠನೀಯ ಭಕ್ತಿ ಪೂರ್ವದಿ ಪಠಿಸಿ ಮನನ ಮಾಳ್ಪರಿಗೆ ವನರುಹಾಸನ ಪಿತ ಪ್ರಸನ್ನ ಶ್ರೀನಿವಾಸ ರಕ್ಷಿಸುವ ಪ್ರತಿಕ್ಷಣದಿ 5
--------------
ಪ್ರಸನ್ನ ಶ್ರೀನಿವಾಸದಾಸರು
ಶ್ರೀ ರಾಘವೇಂದ್ರ ಶ್ರೀ ರಾಘವೇಂದ್ರ ಶ್ರೀ ರಾಘವೇಂದ್ರ ಎನ್ನಿರೋ ``ಶ್ರೀ ರಾಘವೇಂದ್ರಾಯನ ನಮಃ'' ಎಂಬ ಪ ನಾಮವ ಸ್ಮರಿಸಿ | ಸುಖಿಯಾಗು ಮನವೇ ಅ.ಪ ಸಂಸಾರ ಸಾಗರದಿ ಬೆಂದು ಬಳಲಿರುವೇನಯ್ಯ ಮುಂದೇನು ಗತಿ ಕಾಣೆ ಗಾಡಾಂಧಕಾರದೊಳು ಮುಳುಗಿ ಬೆಂಡಾದೆನೊ ಕರುಣಿಸೈ ಗುರುರಾಘವೇಂದ್ರಾ1 ತಂದೆ ತಾಯಿಯು ನೀನೆ ಬಂಧು ಬಳಗವು ನೀನೆಂದು ನಂಬಿದೆನೈ ಪ್ರಭವೆ ಸಂದೇಹವೇಕಿನ್ನು ಕಂದನೆನು ತೆಂದು ಕಾಯೋ ಗುರುವೇ ಶ್ರೀ ರಾಘವೇಂದ್ರ ಪ್ರಭುವೆ2 ಅಂಧತ್ವ ಮೂಕತ್ವ, ಬಧಿರತ್ವ ಎಕಲಾಂಗಿಗಳ ಹಿಂದೆ ಪೊರೆದೆ ನೀನೆಂಬ ವಾರ್ತೆಕೇಳಿ ನಿನ್ನ ಘನ್ನಮಹಿಮಾ ಶ್ರೀ ರಾಘವೇಂದ್ರಾ 3 ಭವರೋಗ ಗಳೆಲ್ಲ ಪರಿಹರಿವುದೊ ಸ್ಮರಣೆ ಮಾತ್ರದಿ ಸಕಲ ಪಾಪಗಳನೋಡಿಸಿ ಪುನೀತರನೆ ಮಾಡುವಿಯೊ ಗುರುವೆ 4 ಬಿಡೆನು ಬಿಡೆನು ನಿನ್ನಡಿಗಳಿಗೆ ಸೇವಿಸಲು ದೃಢ ಭಕುತಿಯನೆ ಕೊಡು ಎನಗೆ ಶ್ರೀ ರಾಘವೇಂದ್ರಾ ಅಪಾರ ಮಹಿಮ ಶ್ರೀ ರಾಘವೇಂದ್ರಾ 5
--------------
ರಾಧಾಬಾಯಿ
ಶ್ರೀ ರುಧಿರೋದ್ಗಾರಿ ಸಂವತ್ಸರ ಸ್ವಾಮಿ ಧನ್ವಂತರಿ ಸ್ತೋತ್ರ 155 ಆನಂದ ಚಿನ್ಮಾತ್ರ ವಪುಷ ಸರ್ವಾಧಾರ ಅನಘ ಕೂರ್ಮಹÀಯ ಶೀಷ್ರ್ಯ ಸ್ತ್ರೀರೂಪ ಅಜಿತ ಆನಮೋ ರುಧಿರೋದ್ಗ್ಗ್ಗಾರಿ ಸಂವತ್ಸರ ಸ್ವಾಮಿ ಅನುತ್ತಮ ಸರ್ವೋತ್ತಮ ಧನ್ವಂತರಿ ರಮೇಶ ಪ ರಾಜಗುರು ಮಂತ್ರಿಗುರು ಸÉೀನಾಧಿಪತಿ ಬುಧನು ರಾಜಿಸುವರು ಸೂರ್ಯೇಂದು ಕವಿ ಭೂಮ ರವಿಜ ಪ್ರಜ್ವಲಿಸಿ ನೀ ಇವರೊಳ್ ಕೃತಿಯ ನಡೆಸಿ ಲೋಕ ಪ್ರಜೆಗಳಿಗೆ ಮಳೆ ಬೆಳೆ ಸೌಖ್ಯವಿತ್ತು ಪÉೂೀಷಿಸುವಿ 1 ದೇಶದೇಶ ರಾಜ್ಯಾಧಿಪರ್ಗಳ ಪರಸ್ಪರ ಸಂಶಯ ದುರ್ಮನವ ಆಗಾಗ ಶಾಂತ ಮಾಡುವುದು ಮೋಸಗಾರ ಕುಜನರು ಚೋರ ಕ್ರೂರರು ಮಾಳ್ಪ ಹೊಸ ಹೊಸ ಚಟುವಟಿಕೆ ಪರಿಹರಿಸಿ ಕಾಯೋ ಲೋಕವನು 2 ವೇದವ್ಯಾಸವಿರಚಿತ ಸಾತ್ವಿಕ ಪುರಾಣಗಳ ಯಥಾರ್ಥ ಪೇಳಿದೆ ದುಷ್ಟಾರ್ಥ ಪೇಳಿ ಜನರ ಮೋಹಿಸಿ ಸಾಧು ಸ್ತ್ರೀಪುರುಷರ ಪ್ರೌಢಕನ್ಯೆ ಬಾಲರ ವಂಚಿಪ ಧೂರ್ತರನು ಅಡಗಿಸಿ ಸತ್ಯಧರ್ಮ ಸಂತಾನ ಬೆಳೆಸೋ 3 ರಾಜ ಸಚಿವನು ಬೃಹಸ್ಪತಿಯಂತರ್ಗತನಾದ ರಾಜರಾಜೇಶ್ವರನೆ ನೀ ಅಂದು ಮಾನವಿಗೆ ಮದುವೆ ಉಜ್ವಲ ತಪಸ್ವಿಗೆ ಪುತ್ರರ ಒದಗಿಸಿದಿ ಇಂದು ನಿಜ ಭಕ್ತಸುತ ಕಾಮ ಪರಕಾಮ ಜನರಿಗೆ ಒಲಿಯೋ 4 ಹಿಂದಿನ ಇಂದಿನ ಸ್ವಕರ್ಮ ಪರಕರ್ಮ ಲಬ್ಧ ಮಾಂದ್ಯ ನರತ್ವಕೆ ಚರ್ಮ ಸೂತಕ ಗರ್ಭಿ ವ್ಯಾಧಿಪೀಡಿತ ಸಜ್ಜನರಿಗೆ ಸುಖವೀಯೋ ವೇಧಪ ಪ್ರಸನ್ನ ಶ್ರೀನಿವಾಸ ರುಧಿರೋಧ್ಗಾರಿ ಸ್ವಾಮಿ 5
--------------
ಪ್ರಸನ್ನ ಶ್ರೀನಿವಾಸದಾಸರು
ಶ್ರೀ ಲಲಾಮನೆ ನಿನ್ನ ಚರಣಾಬ್ಜಗಳಿಗೆ ನಮೊ ನೀಲಮೇಘಶ್ಯಾಮ ನಿರುಪಮ ತ್ರಿಧಾಮ ಪ ಮೂಲಕಾರಣ ನಿನ್ನ ಹೊರತಿನ್ನು ಕಾಯುವರು ಮೂರ್ಲೋಕದೊಳಗಿಲ್ಲ ಮುರಹರ ಮುಕುಂದ ಅ.ಪ. ನಿತ್ಯ ಕಲ್ಯಾಣಗುಣ ಪೂರ್ಣ ಜಲಜನಾಭನೆ ದೇವಾ ಜಲಧಿಶಯನ ಜಲಜಜಾಂಡವ ಸೃಷ್ಟಿ ಸ್ಥಿತಿ ಪ್ರಳಯ ಕರ್ತ ನಿನ್ನ ಅಪ್ರಮೇಯ ಸ್ವರೂಪ 1 ಕುಂಭಿಣಿಯ ಪಮಾಣುಗಳನಧಿಕ ಯತ್ನದಲಿ ಅಂಬುಧಿಯ ಕಣಗಳನು ಎಣಿಸಬಹುದು ಅಂಬುಜಾಕ್ಷನೇ ನಿನ್ನ ಆನಂದ ಮೊದಲಾದ ಗಂಭೀರ ಗುಣಗಳನು ಎಣಿಸಲಾರಿಗೆ ಸಾಧ್ಯ2 ಪರಮಾತ್ಮ ಪರಂಜ್ಯೋತಿ ಪರಮ ಪಾವನರೂಪ ಪರಿಪೂರ್ಣ ಆನಂದ ಪುರುಷೋತ್ತಮ ಕರಿರಾಜವರದ ಶ್ರೀ ಕರಿಗಿರೀಶನೆ ನಿನ್ನಚರಣ ಸೇವಕನೆಂದು ಕರಪಿಡಿದು ಕಾಯೊ 3
--------------
ವರಾವಾಣಿರಾಮರಾಯದಾಸರು
ಶ್ರೀ ವಿಷ್ಣು ಮೋಹಿನಿ ರೂಪ ತಾಳಿದನು ಸುಕಲಾಲಾಪ ಪ ದುರುಳ ರಕ್ಕಸರು ಸುಧೆಯನು ಬಯಸೆ ಮಿಂಚಿನ ಥರ ಥರ ರಾಶಿ 1 ನಳಿದೋಳ್ಗಳ ಕಂಕಣ ರವಮಿಳ್ಳೆ ಬಂದಳು ಸುಂದರಿಯು 2 ದೊಳೊಪ್ಪಿದ ಕದಳೀಸಾರ ಸಂಕರ್ಷಣ ಶ್ರೀಹರಿಯ ವಿಲಾಸ 3 ಶಿರದೊಳ್ಮೆರೆಯುವ ರತ್ನಾಭರಣ ವರ ಕಂಧರದೊಳ್ಮುಕ್ತಾಭರಣ ಸುರುಚಿರ ಹಸ್ತದಿ ಕಂಕಣ ಧಾಟಿ4 ಚಾಮರ ಬೆರಳಿನೊಳೊಪ್ಪುತ ಕರೆದಳು ಮನ್ಮಥ ಮೋಹದ ಮಳೆಯಂ 5 ಮೋಹವÀ ಪೊಂದಲು ಬೇಗ ಕಂಗಳ ಢಾಳವು ಪೊಳೆಯೆ 6 ಕುಂದ ಸುಮಾಳಿಯ ಗುಂಪುಗಳೊರೆಯೆ ಓಹೋ ಮೋಹ ವರ್ಷಾದಕಾಲ ಅಹವದೊಳ್ಮಾರನ ಕಡುಬಿಂಕ ನೊಂದರು ಮನದೊಳಗೆ 7 ಭಂಗಿತರಾದರು ನೀಚರು ಭರದಿಂ ಬೆಡಗಿನ ಸೈವರಿಯೆ 8 ನಿರ್ಜರ ಜೀವವನೆಲ್ಲ ರಕ್ಷಿಸು ಎಂದೆನಲು9 ಪತಿ ನೀ ದೇವತೆಗಳಿಗೆ ಮಾನವಗೈದನು ನಿರ್ಜರರ್ಗೆಲ್ಲ 10
--------------
ಬೇಟೆರಾಯ ದೀಕ್ಷಿತರು
ಶ್ರೀ ಸತ್ಯ ವಿಜಯತೀರ್ಥ ಚರಿತ್ರೆ ನಮೋ ಸತ್ಯ ವಿಜಯಾರ್ಯ ತೀರ್ಥರೇ ಸುಮಹ ಕಾರುಣ್ಯದಿಂ ಎನ್ನ ಪಾಪಗಳ ಮನ್ನಿಸಿ ವಿಮಲ ವಾಙ್ಮನೋಕಾಯದಲಿ ಶ್ರೀ ರಾಮ ಯದುಪತಿ ಸ್ಮರಣೆ ಇತ್ತು ಪಾಲಿಪುದು ಪ ಅಶೇಷ ಗುಣಗಣಾಧಾರ ವಿಭು ನಿರ್ದೋಷ ಹಂಸ ಶ್ರೀಪತಿಯಿಂದುದಿತ ಗುರುಪರಂಪರೆಗೆ ಬಿಸಜಭವ ಸನಕಾದಿ ದೂರ್ವಾಸ ಮೊದಲಾದ ವಂಶಜರು ಸರ್ವರಿಗೂ ಶರಣು ಶರಣೆಂಬೆ 1 ಅಚ್ಯುತ ಪ್ರೇಕ್ಷರಿಗೂ ಪರವಾಯು ಅವತಾರಾನಂದ ತೀರ್ಥರಿಗೂ ಉತ್ಕøಷ್ಠ ಗುರುತಮ ಮಧ್ವ ಆನಂದ ಮುನಿಗಳ ಕರಕಂಜಭವ ಸರ್ವ ಯತಿಗಳಿಗು ಶರಣು 2 ಮಾಧವ ಅಕ್ಷೋಭ್ಯ ಅದ್ವಿತೀಯ ಸುಸ್ಪಷ್ಟ ಟೀಕಾಗಳಿತ್ತ ಮೇಧಾಪ್ರವೀಣ ಜಯತೀರ್ಥಾರ್ಯರಿಗೂ ವಿದ್ಯಾಧಿರಾಜರಿಗೂ ನಮೋ ನಮೋ ಶರಣು 3 ವಿದ್ಯಾಧಿರಾಜರ ಶಿಷ್ಯರು ಈರ್ವರಲಿ ಮೊದಲನೆಯವರು ರಾಜೇಂದ್ರ ತೀರ್ಥರಿಗು ನಂತರ ಕೋವಿದೋತ್ತಮ ಕವೀಂದ್ರರಿಗೂ ತತ್ವಜ್ಞ ಶಿಷ್ಯವಾಗೀಶ ತೀರ್ಥರಿಗು ಶರಣು 4 ವಾಗೀಶ ತೀರ್ಥರು ಕವೀಂದ್ರ ಕರಜರು ವಾಗೀಶ ಕರಜರು ರಾಮಚಂದ್ರಾರಾರ್ಯರು ಈ ಗುರುಗಳಿಗೆ ಈರ್ವರು ಶಿಪ್ಯರು ಇಹರು ಬಾಗಿ ಶರಣಾದೆ ಈ ಈರ್ವರಿಗೂ 5 ಮೊದಲನೆಯವರು ವಿಭುದೇಂದ್ರತೀರ್ಥಾರ್ಯರು ವಿದ್ಯಾನಿಧಿ ತೀರ್ಥಾರ್ಯರ ಅನಂತರವು ವಿದ್ಯಾನಿಧಿ ಸುತರು ರಘುನಾಥತೀರ್ಥರು ವಂದಿಸಿ ಶರಣೆಂಬೆ ಇವರಿಗು ಇವರ ವಂಶಕ್ಕು 6 ರಘುನಾಥ ಕರಕಮಲಜಾತರಘುವರ್ಯರಿಗೆ ರಘೂತ್ತಮ ವೇದವ್ಯಾಸ ವಿದ್ಯಾಧೀಶ ವೇದನಿಧಿ ಸತ್ಯವ್ರತ ಸತ್ಯನಿಧಿ ಸತ್ಯನಾಥ ಸತ್ಯಭಿನವ ಸತ್ಯಪೂರ್ಣರಿಗೆ ನಮಿಪೆ 7 ಸತ್ಯಾಭಿನವತೀರ್ಥರ ಮಹಿಮೆ ಬಹುಬಹುವು ಸುತಪೋನಿಧಿಯು ಶ್ರೀನಿವಾಸನ್ನೊಲಿಸಿಕೊಂಡಿಹರು ಸತ್ಯಪೂರ್ಣರಿಗೆ ಶಿಷ್ಯರು ಈರ್ವರು ಸತ್ಯವರ್ಯರು ಸತ್ಯವಿಜಯರು ಎಂದು 8 ಸತ್ಯ ಪೂರ್ಣಾರ್ಯರು ತಮ್ಮ ಗುರು ಸತ್ಯಾಭಿನವರ ಪದ್ಧತಿ ಅನುಸರಿಸಿ ಶ್ರೀಮಠ ಆಳುತ್ತ ಸತ್ಯವರ್ಯರನ್ನು ಗೋದಾವರಿ ಕ್ಷೇತ್ರ ವಿಜಯ ಮಾಡೆಂದು ಸತ್ಯವಿಜಯರನ್ನ ಕಳುಹಿದರು ಪೂರ್ವದಿಸೆಗೆ 9 ಸತ್ಯವರ್ಯರು ಗೋದಾವರಿ ಪಂಚವಟಿ ನಾಸಿಕ ತ್ರಿಯಂಬಕಾದಿ ಕ್ಷೇತ್ರ ಸಮೀಪ ವಿಜಯಮಾಡೆ ಸತ್ಯವಿಜಯರು ತೋಂಡದೇಶ ಚÉೂೀಳ ಪಾಂಡ್ಯಾದಿ ನಾಡಲ್ಲಿ ವಿಜಯ ಮಾಡಿದರು 10 ಜಯಶೀಲರಾಗಿ ದಿಗ್ವಿಜಯಮಾಡಿ ತೋಯಜಾಕ್ಷನಪಾದಐದಿದರು ನಿಯಮೇನ ಸತ್ಯವಿಜಯರು ಅಲಂಕರಿಸಿದರು ಪೀಠ 11 ಸತ್ಯಾಭಿನವ ಆರ್ಯರ ಸತ್ಯಪೂರ್ಣ ಗುರುಗಳ ಪದ್ಧತಿಯಲಿ ಸತ್ಯವಿಜಯಾರ್ಯರು ವೇದಾಂತವಾಖ್ಯಾರ್ಥ ದುರ್ವಾದ ಖಂಡನ ಅಧಿಕಾರಿಗಳಿಗು ಉಪದೇಶ ಮಾಡಿದರು 12 ಸೇತುಯಾತ್ರೆ ಮಾಡಲು ದಿಗ್ವಿಜಯ ಕ್ರಮದಲಿ ಬಂದರು ಆರಣಿಗೆ ತೋಂಡದೇಶದಲಿ ವಿಪ್ರ ಆರಣಿ ರಾಜನು ಸಂತಾನ ವೃದ್ಧಿಗೆ ಕೊರಗುತ್ತಿದ್ದ 13 ಯುಕ್ತಮರ್ಯಾದೆಗಳ ವೈಭವದಿಂದಲಿ ಸತ್ಯವಿಜಯರಿಗೆ ಮಾಡಿ ದೇವಾರ್ಚನೆ ಭೂದೇವರಿಗೆ ಭೋಜನಮಾಡಿಸಿದ ರಾಜನು ವೇದ್ಯವಾಯಿತು ಗುರುಗಳಿಗೆ ರಾಜನ ಕೊರತೆ 14 ಸತ್ಯವಿಜಯತೀರ್ಥಾರ್ಯರ ಗುರುವರ್ಯರು ಸಪ್ತದಶ ಅಕ್ಷರ ಮಂತ್ರ ಪ್ರತಿಪಾದ್ಯಹರಿದಯೆಯಿಂದ ಒದಗಿಸುವ ವಂಶವೃದ್ಧಿ ಎಂದು ಅನುಗ್ರಹಿಸಿ ಪೋದರು ದಿಗ್ವಿಜಯಕೆ ವರವು ಪೂರ್ಣವಾಯಿತು 15 ಸೇತುಯಾತ್ರೆ ದಿಗ್ವಿಜಯ ಪೂರಯಿಸಿ ಆ ಗುರುಗಳು ಮತ್ತು ಬಂದರು ಆರಣಿ ಕ್ಷೇತ್ರಕ್ಕೆ ಕೃತಜ್ಞ ಆ ರಾಜನು ಎದುರುಗೊಂಡು ಗುರುಗಳ ಪಾದದಲಿ ಶಿರವಿಟ್ಟು ಸ್ವಾಗತವನಿತ್ತ 16 ಸಂಸ್ಥಾನ ಮೂರ್ತಿಸ್ಥ ಹರಿಪೂಜಾ ವೈಭವವು ನಿತ್ಯ ಪ್ರವಚನ ಪಾಠಕೀರ್ತನೆ ಏನೆಂಬೆ ಸತ್ಯವಿಜಯರನ್ನ ರಾಜ ಅಲ್ಲಿಯೇ ಇರಬೇಕು ಎಂದು ಕೋರಿ ಒದಗಿಸಿದ ತಕ್ಕ ಸೌಕರ್ಯ 17 ಸತ್ಯವಿಜಯಾರ್ಯರಿಗೆ ದೇಹ ಅಧಾರೂಢ್ಯ ವೇದ್ಯವಾಯಿತು ಆರಣಿರಾಜನಿಗೆ ಭಕ್ತಿಶ್ರದ್ಧೆಯಿಂದಲಿ ಉಪಚಾರ ಮಾಡಿದನು ಮಾಧವಗೆ ಅರ್ಪಿಸುತಕೊಂಡರು ಗುರುಗಳು 18 ಶ್ರೀ ಸತ್ಯವಿಜಯತೀರ್ಥರ ಮಹಿಮೆ ಬಹು ಉಂಟು ಒಂದು ಮಾತ್ರ ಸ್ಥಾಲಿಪುಲಿಕನ್ಯಾಯದಲಿ ಈ ದಿವ್ಯ ಸಣ್ಣ ನುಡಿಗಳಲಿ ಪೇಳಿಹುದು ಮಾಧ್ವಯತಿ ಹರಿದಾಸ ಮಹಿಮೆಗಳಿಗೆ ಅಳವುಂಟೆ 19 ತಮ್ಮ ತರುವಾಯ ಸಂಸ್ಥಾನ ಆಡಳಿತವ ಶ್ರೀ ಮನೋಹರ ಹರಿ ಪ್ರಿಯರು ಸತ್ಯವರ್ಯ ಸುಮನೋಹರ ಸತ್ಯಪ್ರಿಯ ತೀರ್ಥನಾಮದಲಿ ರಮಾರಮಣಸೇವೆಗೆ ವಹಿಸಬೇಕೆಂದು 20 ಭಕ್ತಿಮಾನ್ ಆರಣಿ ರಾಜನಿಗೆ ಹೇಳಿ ಹಿತದಿ ಅನುಗ್ರಹಿಸಿ ಗುರುವರ್ಯ ಸತ್ಯವಿಜಯರು ಧ್ಯಾನದಿಂ ಐದಿದರು ಹರಿಪುರ ಚೈತ್ರ ಕೃಷ್ಣಪುಣ್ಯದಿನ ಏಕಾದಶಿ ದ್ವಾದಶಿಲಿ 21 ಮತ್ತೊಂದು ಅಂಶದಲಿ ಸತ್ಯವಿಜಯ ನಗರಾಖ್ಯ ಕ್ಷೇತ್ರ ಆರಣಿ ಸಮೀಪ ವೃಂದಾವನದೀ ಇದ್ದು ಸೇವಿಸುವ ಸುಜನರಿಗೆ ವಾಂಛಿತ ಒದಗಿಸುತ ಕುಳಿತಿಹರು ಹರಿಧ್ಯಾನ ಪರರು 22 ಸತ್ಯಲೋಕೇಶಪಿತ ಶ್ರೀಪ್ರಸನ್ನ ಶ್ರೀನಿವಾಸ ಪ್ರಿಯ ಸತ್ಯಾಭಿನವತೀರ್ಥ ಕರಕಂಜ ಜಾತ ಕರ ಕಾಯವಾಙ್ಮನದಿ ನಮೋ ಶರಣು ಮಾಂಪಾಹಿ 23
--------------
ಪ್ರಸನ್ನ ಶ್ರೀನಿವಾಸದಾಸರು
ಶ್ರೀ ಸತ್ಯಧೀರರು ಚಾರು ಚರಣಗಳಿಗೆರಗುವೆನು ಪ ವರಮತಿಗುಣಗನ ಮಣಿಯೆ ಅ.ಪ. ಯತಿ ಆಶ್ರಮದಿ ಸೀತಾ ಪತಿಯ ಪೂಜಿಸುತಿರೆ ಮತಿಹೀನರಪಹಾಸ್ಯ ಮಾಡಿದರೆ ಪರಿಯಂತ ಹರಿಸೇವೆಯಾ ಅತಿ ಭಕುತಿಯಿಂದಲಿ ಮಾಡಿದ್ಯೋ ಜೀಯಾ ಹಿತದಿಂದ ಕೈಗೊಂಡ ದಶರಥನಂದ ರಘುರಾಯ ಯತಿವರನೆ ನಿನ್ನಯ ಕ್ಷಿತಿಯೊಳಗೆ ಹರಿ ಪ್ರತಿ ದಿಗಂತ ಪರಿಹರಿಸಿದ ವರಕೀರ್ತಿ ಆಶ್ರಯದಿಂದ ಬಂದೆ 1 ವರಮಧ್ವಮತಾಭಿಮಾನಿಯೆ ನಿನ್ನಯ ದರುಶನದಿಂದ ಪಾವನನಾದೆನೋ ದೊರಕಾದೊ ಯಂದಿಗೆಲ್ಲರಿಗೆ ಈ ಗುರುಗಳ ವರಸೇವಾ ಸರ್ವಜ್ಞ ಪೀಠಕೆ ಸರಸ ಶೋಭಿಸುವಾ ಹರಿವಾಯುಗಳಲಿ ನಿಶ್ಚಯದ ಭಕುತಿಯನು ಪಾಲಿಸುವಾ ನಿರುತದಲಿ ಕಾವಾ ಪರಮಭಕ್ತರ ಭಾಗ್ಯನಿಧಿಯಂದರಿದು ಹಂಬಲಿಸುತಲಿ ನಿನ್ನಯ ಚರಣಕೆರಗಿದೆ ತ್ವರದಿ ಕರುಣಿಸಿ ಪೊರೆಯೊ ಶರಣರ ಸಂಜೀವಾ 2 ಆನಂದಜ್ಞಾನದಾಯಕನಾಜ್ಞೆಯಿಂ ಸತ್ಯಜ್ಞಾನಾ- ನಂದಗಿತ್ತಿ ಉತ್ತಮಪದವಾ ಗಾನಲೋಲನ ಜಗತ್ಪಾಲನ ಪ್ರಿಯನೇ ತವ ಸೇವಾ ತನುವನೊಪ್ಪಿಸಿ ಇಡುವೆ ನಿನ್ನಡಿಗಳ ಮೇಲೆ ಶಿರವಾ ಸೇವಕನೋ ಅನುಚಿತೋಚಿತಕರ್ಮ ಕೃಷ್ಣಾರ್ಪಣವೆನುವ ಸುಮನವ ಕೊಡು ನೀ 3
--------------
ಹನುಮೇಶವಿಠಲ
ಶ್ರೀಕಾಂತನನ್ನೊಲಿಸುವಾ ಬಗೆಯಾನೊರೆವೆ ಮಾನವ ಪ. ಶ್ರೀಕರಗುಣಯುತ ಪಾಕಶಾಸನವಿನುತ ಲೋಕೈಕ ವೀರನನ್ನೊಲಿಸುವಾ ತೆರನ ಪೇಳ್ವೆನಾಲಿಸು ಅ.ಪ. ಶಕ್ತಿ ಸಾಹಸಗಳಿಗೆ ಸೋಲುವನಲ್ಲ ರಕ್ಕಸಾಂತಕಮಲ್ಲ ಯುಕ್ತಿಮಾರ್ಗಕೆ ಮನವ ಸಿಲುಕಿಪನಲ್ಲ ಭಕ್ತವತ್ಸಲ ಸಿರಿನಲ್ಲ ವಿತ್ತ ಮೂಲಕದಿಂದ ಚಿತ್ತ ಚಲಿಸುವುದಲ್ಲ ಮುಕ್ತಿದಾಯಕನ ಮೆಚ್ಚಿಸಲ್ ವಿರಕ್ತಿಯಿಂ ಫಲವಿಲ್ಲ [ಮತ್ತ] ಖಿಲಾಂಡಕೋಟಿ ಬ್ರಹ್ಮಾಂಡನಾಯಕನ ಮೆಚ್ಚಿಸಲ್ ಭಕ್ತಿಯೊಂದೇ ಉತ್ತಮೋಪಾಯ ಕೇಳೆಲೈ1 ದೃಢದಿ ಶೈಶವದೊಳೇ ಅಡವಿಯನಾರಯ್ಯುತೆ ಪೊಡವೀಶನಡಿಗಿತ್ತ ತೊಡವಾವುದದ ಪೇಳ್ ಕಡು ಭಕ್ತನಾ ವಿದುರ ಪಡೆದನಸುರಾರಿಯಾಲಿಂಗನದ ಸುಖಮಂ ಮಡದಿಮಣಿ ಪಾಂಚಾಲಿ ಪಡೆದಳಕ್ಷಯಪ್ರದಾನಮಂ ತಡೆಯೇನು ಪೇಳಾ ಪರಮಾತ್ಮನೊಲ್ಮೆಗಿನ್ನು ದೃಢಭಕ್ತಿಗಿಂ ಮಿಗಿಲು ತೊಡವಾವುದಿರ್ಪುದೈ 2 ದಾನವವಂಶದಲಿ ಜನಿಸಿದನಾ [ಸು]ಜ್ಞಾನಿ ಪ್ರಹ್ಲಾದನು ಸಾನುರಾಗದಿ ಹರಿಯ ಭಕ್ತಿಯಿಂ ಧ್ಯಾನಿಸೆ ಕಂಬದಿಂ ನುನಿಸಿಯಾಕ್ಷಣದಲ್ಲಿ ಮನುಜಕೇಸರಿಯಾಗಿ ಘನದಾಕೋಪವನು ತಾಳಿ ದನುಜನ ಉರವ ಸೀಳಿ ಮನ್ನಿಸುತೆ ಭಕ್ತನಂ ನನ್ನಿಯಿಂ ಮೈದಡಹಿ ಉನ್ನತೋನ್ನತ ಪದವನಿತ್ತನಾಖಲಕುಠಾರಿಶೌರಿ ಮುನ್ನ ಭಕ್ತಿಯಿದುವೇ ಮುಖ್ಯಸಾಧನ ಕೇಳೈ 3
--------------
ನಂಜನಗೂಡು ತಿರುಮಲಾಂಬಾ
ಶ್ರೀನಿವಾಸ ಮೂರುತಿಗೆ ಜಯತು ಮಂಗಳಂ ಶೇಷಾಚಲವಾಸನೀಗೆ ಶುಭಮಂಗಳಂ ಪ ರಂಗಮಾಣಿಕದ ದಿವ್ಯ ಕುಂದಣದ ಕಿರೀಟಕ್ಕೆ ಸುಗಂಧವಾದ ಕರ್ಪೂರ ಕಸ್ತೂರಿ ತಿಲಕಕೆ ಕಂದರ್ಪನ ಬಿಲ್ಲಪೋಲ್ವ ಚಂದವಾದ ಪುಬ್ಬುಗಳಿಗೆ ಮಂದಹಾಸದಿಂದ ನೋಳ್ಪ ಅರವಿಂದನಯನಗಳಿಗೆ 1 ನಾಸಿಕಕೆ ಕರ್ಣಕುಂಡಲಕೆ ಸುವಾಸನೆವುಳ್ಳ ಅಧರಕ್ಕೆ ಆಸುಂದರವಾದ ಶ್ರೀವತ್ಸ ಕೌಸ್ತುಭಮಣಿಗೆ ಲಾಸವಾಸಿ ಪಿತನ ಪಡೆದ ನಾಭಿಯ ಕಮಲಕೆ 2 ಶಂಖ ಚಕ್ರ ನಾಗ ಬಾಪುರಿ ತೋರ್ಪಹಸ್ತಪಾದಗಳಿಗ ಲಂಕಾರವಾದ ಪೀತಾಂಬರದ ವಡ್ಯಾಣದಂದಕ್ಕೆ ಅಂದುಗೆ ಗೆಜ್ಜೆಗಳಿಟ್ಟ ಅಂದವಾದ ಪಾದಗಳಿಗೆ ನಖ ಅಂಗುಷ್ಟದ ಬೆಳಕಿಗೆ 3
--------------
ಯದುಗಿರಿಯಮ್ಮ
ಶ್ರೀನಿವಾಸ ಸುಜನೋದ್ಧಾರ ಏನು ತಾತ್ಸಾರ ನಾನು ನಿನ್ನ ದಾಸನೆಂದು ಮಾನವರು ನುಡಿದ ಮೇಲೆ ಪ. ಪುಟ್ಟಿದಾಕ್ಷಣಾದಿಯಾಗಿ ದುಷ್ಟಸಂಗಕೊಳಗಾಗಿ ನಷ್ಟಪ್ರಜ್ಞೆಯಿಂದ ಬಹು ಕಷ್ಟಿಯಾದೆನು ಕೃಷ್ಣ ಶಬ್ದ ವಾಚ್ಯಪರಮೇಷ್ಠಿ ಜನಕ ನಿನ್ನ ಮನ ಮುಟ್ಟಿ ಭಜಿಸದೆ ಬಯಲೆಷ್ಟವ ಬಯಸುವೆನಲ್ಲೊ 1 ದಾನಧರ್ಮ ಜಪತಪ ಮೌನ ಮೊದಲಾದ ಸ- ತ್ಸಾಧನ ಹೀನನಾದರು ನಿನ್ನಾನುರಾಗದಿ ಮನಮುಟ್ಟಿ ಕ್ಞಣವಾದರು ಧ್ಯಾನಿಸಲು ಸಕಲವಂದ್ಯ ಮುನಿಗಮ್ಯ ಪದವನೀವಾತನು ನೀನೆಂದೊಂದೆ ತಿಳಿದೆ 2 ಮನವಚನ ಕಾಯಕಾದನುದಿನ ಕೃತವಾದ ಘನ ಪಾಪಂಗಳಿಗೆ ನಾ ಕೊನೆಗಾಣೆನು ದನುಜಾರಿ ರಾಮ ಅನಿಮಿತ್ತಬಂಧು ಎಂಬ ಘನತೆ ತೋರಿಸಿ ನಿನ್ನ ತನಯನೆಂದೆಂನ ಸಲಹೊ 3 ವೀರವೇದೋದ್ಧಾರ ವರಮಂದರಧರ ನರ ಹರಿಕುಬ್ಜಾಕಾರ ಪೃಥ್ವೀಭಾರವಾರಕ ವಾರುಧಿ ಬಂಧಕಯದು ವೀರ ತ್ರಿಪುರ ಸ್ಮರ ಹರನಿಂದ ತರಿಸಿದ ತುರಗವೇರಿದ ಧೀರ 4 ಮಂದಮತಿಯಾದ ಎನ್ನ ಬಂಧುವಾಗಿ ಕೈಯ ಪಿಡಿದು ಮುಂದು ಗಾಣಿಸುವೆನೆಂದು ಹಿಂದೆ ರಕ್ಷಿಸಿ ಇಂದು ಎನ್ನ ಕುಂದನೆಣಿಸಿ ತಂದೆ ನೀನುಪೇಕ್ಷಿಸಲು ಮುಂದೆ ಕಾಯ್ವರಾರೊ ಕರುಣಾಸಿಂಧು ಅನಿಮಿತ್ತ ಬಂಧು 5 ಮಾನಗೇಡಿನಿಂದ ದ್ವೇಷಿ ಮಾನವಾಧಮರ ಮುಂದೆ ಶ್ವಾನಕಿಂತ ಕಡೆಯಾಗಿನ್ನೇನು ಮಾಡಲೊ ನೀನೆ ಗತಿಯೆಂಬ ಮನೋಧ್ಯಾನದಿಂದ ಬಂದೆ ನಿಂದು ಕಾನನದ ಶಿಶುವಿದೆಂದು ಮಾನಿಸಿ ರಕ್ಷಿಸೊ ತಂದೆ 6 ಘಾಸಿಗೊಳಿಸುತೀ ಆಶಾಪಾಶದಿಂದ ಎನ್ನ ಬಿಡಿಸಿ ದಾಸರ ದಾಸ್ಯವನಿತ್ತು ಪೋಷಿಸೆನ್ನುತ ಮೀಸಲಾಗಿಹೆನು ಶ್ರೀನಿವಾಸ ಬೇಗ ಸಲಹೊ ಬಂದು 7
--------------
ತುಪಾಕಿ ವೆಂಕಟರಮಣಾಚಾರ್ಯ
ಶ್ರೀಮದನಂತನೀತಾ ಶ್ರೀಮದನಂತನೀತಾ | ಸೀಮರಹಿತಾ ಮಹಿಮನೀತಾ | ನಾಮ ನೆನೆಯೆ ಒಲಿದು ನಿಷ್ಕಾಮ ಫಲವ ನೀವಾನೀತ ಶ್ರೀಮದಾನಂತನೀತನು ಪ ಆದಿದೈವನೀತಾ ಜೀವಾದಿಗಳಿಗಭಯದಾನೀತಾ | ಶ್ರೀಧರಣಿ ದುರ್ಗಾರಮಣನಾದಾತನೊದಾನೀತಾ | ವೇದಪಾಲಕನೀತಾ ಸನಕಾದಿಗಳಿಗೆ ಪ್ರೀತಾನೀತಾ | ನಿತ್ಯ ಸಾಧುಗಳ ಕಾಯಿದನೀತಾ1 ಗಜವರದನೀತಾ ಗಂಗಜನ ಮನೋಭೀಷ್ಟನೀತಾ | ಗಜ ರಜಕ ಬಿಲ್ಲು ಮಲ್ಲರ ವ್ರಜನನಾಳಿದ ದಿಟ್ಟಿನೀತಾ | ತ್ರಿಜಗ ವಂದಿತಾನೀತಾ ಅಂಗಜನ ಪೆತ್ತ ಪ್ರೇಮನೀತಾ | ಪಂಕಜ ಬಾಂಧವನ ಭಾಸನೀತಾ2 ಕಪಟನಾಟಕನೀತಾ ಕರಡಿ ಕಪಿಗಳನಾಳಿದನೀತಾ | ಕಪಿಲಮುನಿಯಾಗಿ ತಾಯಿಗೆ ಉಪದೇಶವ ಪೇಳಿದನೀತಾ | ದ್ರುಪದಸುತೆಯ ಕಾಯದನೀತಾ ಸ್ವಪ್ನ ಸುಷುಪ್ತಿ ಜಾಗ್ರದಾವಸ್ಥೆಗೆ ಗುಪುತವ್ಯಾಪಕ ಗುಣನೀತಾ3 ಪರಮ ಪುರುಷನೀತಾ ದಶಶಿರನ ಕುಲವನಳಿದನೀತಾ | ಗಿರಿಯಲಿ ಧರಿಸಿ ಲೋಕವ ಪೊರೆವ ವಿಶ್ವಾಧಾರನೀತಾ | ಹರನ ವೈರಿಯ ಕೊಂದನೀತಾ | ನಿರುಪಮ ಮೂರುತಿನೀತಾ | ಸುರರಿಗೆ ಉಣಿಸಿದನೀತಾ | ತರಳ ಲೀಲೆಯ ತೋರಿದನೀತಾ4 ನಿತ್ಯ ಜಪತಪಾದಿಗೆ ನೇಮಪ್ರಕಾರ ಚೇಷ್ಟಕನೀತಾ | ಸಾಮ ಲೋಲ ವಿಜಯವಿಠ್ಠಲ ತಾಮರಸನಾಭನೀತಾ 5
--------------
ವಿಜಯದಾಸ
ಶ್ರೀಮನೋಹರ ನಿನ್ನ ನಾಮವೇ ಯೆನ್ನುಸಿರು ಕ್ಷೇಮ ನಾಡಿಗಳಲ್ಲಿ ತಿರುಗುತಿರಲಿ ಪ ಕಾಮಾದಿ ಷಡ್ವರ್ಗವ್ಯಾಪನೆಯನೋಡಿಸುತ ಪ್ರೇಮದಿಂ ಹೃತ್ಪದ್ಮದಲಿ ತೋರು ಸತತ ಅ.ಪ ಪ್ರಾಪಂಚಿಕರ ಮನವು ವಿಷಯಗಳಿಗೆಳೆವಂತೆ ಪಾಪಹರ ನಿನ್ನೊಳಗೆ ಯನ್ನ ಮನವಿರಲಿ ತಾಪತ್ರಯಂಗಳಿಗೆ ತನಯನನು ಸಿಲುಕಿಸದೆ ಕಾಪಾಡಿಕೋ ಸ್ವಾಮಿ ದಾಸಾನುದಾಸನಂ1 ಕನಸು ಎಚ್ಚರ ನಿದ್ದೆ ಎಂಬವಸ್ಥೆಗಳಲ್ಲಿ ದಿನಕರಪ್ರಭು ಮೂರ್ತಿಯವತಾರ ತೋರಿ ಅನುನಯದಿ ಪದಯುಗವ ಶರಣು ಹೊಂದುವ ಪರಿಯ ಕನಿಕರದಿ ಕರುಣಿಸೈ ಕಮಲನಯನ 2 ಕಫವಾತ ಪಿತ್ಥಗಳ ವಿಕೃತಿಗಳು ಬಾರದೆಲೆ ಅಪರಿಮಿತ ಸುಂದರಾನಂದ ನೀಡಿ ಸಫಲಮಂತ್ರವ ನುಡಿಸಿ ಕೃಪೆಯಿಂದ ಕೈಪಿಡಿದು ಸುಪಥದಿಂ ನದಿದಾಟಿ ಸೇರಿಸಿಕೊ ಅಡಿಗೆ 3 ಹರಿಹರೀ ಹರಿಯೆಂಬೆ ತಾಯಿ ತಂದೆಯೆ ಗುರುವೆ ದೊರೆಯೆನೀ ಸೋದರನು ಸಖನು ಬಂಧೂ ಧರಣೀಧರ ಸರ್ವತ್ರ ಬೆಂಬಿಡದೆ ಸಹಕರಿಸಿ ಪೊರೆವುದೈ ಭವನಾಶ ಹೆಜ್ಜಾಜಿ ಶ್ರೀಶಾ 4
--------------
ಶಾಮಶರ್ಮರು
ಶ್ರೀಮೋದವಿಠಲದಾಸರ ಸ್ತೋತ್ರ ಮೋದವಿಠಲದಾಸರಾಯ ನಿನ್ನ ಪಾದವನಂಬಿದೆ ಪಾಲಿಪುದಯ್ಯ ಪ ಭೇದಮತಾಬ್ಧಿ ಪಾಠಿನ ಆದು - ರ್ವಾದಿಮಾಯಿಗಳಿಗೆ ಗಂಟಲಗಾಣ ಸಾಧುಜನರ ಪಂಚಪ್ರಾಣನೆನಿಪ ಮೇದಿನಿಯೊಳು ಹರಿಭಕ್ತ ಪ್ರವೀಣ 1 ಗುರುಪ್ರಾಣೇಶದಾಸರಲಿ ಜ್ಞಾನ ವರ ಉಪದೇಶವ ಕೊಂಡು ಭಕ್ತಿಯಲಿ ವರದೇಂದ್ರಾರ್ಯರ ಸನ್ನಿಧಿಯಲಿ ಸತತ ಹರಿಭಜನೆಯ ಮಾಳ್ಪ ನಲಿನಲಿಯುತಲಿ 2 ಸ್ನಾನಸಂಧ್ಯಾದ್ಯನುಷ್ಠಾನವನು ಙÁ್ಞನಪೂರ್ವಕದಿ ಚರಿಸುವ ನಿಧಾನ ಹೀನಜನಗಳಲ್ಲಿ ಮೌನ ನಿರುತ ಶ್ರೀನಿವಾಸನ ಮನದಲಿ ಮಾಳ್ಪ ಧ್ಯಾನ 3 ಬಾಲ್ಯತನದಿ ನಿಮ್ಮಾಜ್ಞ್ಞವನು ಮೀರಿ ಕಾಲಕಳೆದೆ ದುರ್ವಿಷಯದಿ ನಾನು ಶ್ರೀಲೋಲನಂಘ್ರಿ ಮರೆದೆನು ಮುಂದೆ ಪಾಲಿಸೆನ್ನಯ ಮೊರೆ ಶರಣು ಬಂದಿಹೆನು 4 ಶ್ರೀ ಮರುನ್ಮತಙÁ್ಞನವನು ನಮ್ಮ ಸ್ವಾಮಿ ವರದÉೀಶವಿಠಲನ ದಾಸ್ಯವನು ಆ ಮುನಿವರನ ಸೇವೆಯನು ಕೊಟ್ಟು ನೀ ಮುದದಲಿ ಕರುಣಿಸು ಸುರಧೇನು5
--------------
ವರದೇಶವಿಠಲ
ಶ್ರೀರಂಗವಿಠಲನ ಶ್ರೀ ಮಕುಟಕೆ ಶರಣು ಪ ಶಿರದಲ್ಲೊಪ್ಪುವ ನೀಲಕುಂತಳಕೆ ಶರಣುಸಿರಿಸಹೋದರನರ್ಧದವಳಿಗೆ ಶರಣು ಅ.ಪ. ಕುಸುಮ ಸಮನಾಸಿಕಕೆ ಶರಣುಗುಂಪುರತ್ನದ ಕರ್ಣಕುಂಡಲಗಳಿಗೆ ಶರಣುಇಂಪುದರ್ಪಣನಿಭ ಕಪೋಲಗಳಿಗೆ ಶರಣು 1 ಕುಂದಕುಟ್ಮಲ ಪೋಲ್ವ ದಂತಪಂಕ್ತಿಗೆ ಶರಣುಅಂದವಾಗಿರುವ ಬಿಂಬೋಷ್ಠಕೆ ಶರಣುಚಂದ್ರಿಕಾನಿಭ ಮುದ್ದುಮಂದಹಾಸಕೆ ಶರಣುನಂದಗೋಪನ ಮುದ್ದು ಕಂದನಿಗೆ ಶರಣು2 ಕಂಬು ಕಂಠಕೆ ಶರಣುಅಬ್ಜಮುಖಿಯಿರುವ ವಕ್ಷಸ್ಥಳಕೆ ಶರಣುಕುಬ್ಜೆಯನು ಡೊಂಕ ತಿದ್ದಿದ ಭುಜಗಳಿಗೆ ಶರಣುಅಬ್ಜಜಾಸನನ ಪೆತ್ತ ನಾಭಿಗೆ ಶರಣು3 ರನ್ನಗಂಟೆಗಳಿರುವ ನಿನ್ನ ಕಟಿಗೆ ಶರಣುಪೊನ್ನ ಕದಳೀಪೋಲ್ವ ತೊಡೆಗಳಿಗೆ ಶರಣುಪುನ್ನಾಗಕರಗೆತ್ತ ದ್ವಯನಿತಂಬಕೆ ಶರಣುಚೆನ್ನಾಗಿ ಕುಣಿವ ಸಮಜಾನುವಿಗೆ ಶರಣು 4 ಮಂಗಳ ವೈಭೋಗಂಗಳ ಅಂಘ್ರಿದ್ವಯಕೆ ಶರಣುತುಂಗ ಕುಚಗಳ ಪಿಡಿದ ಕರಗಳಿಗೆ ಶರಣುಪೊಂಗೊಳಲನೂದುವಾ ಅಂಗುಲಿಗಳಿಗೆ ಶರಣು ರಂಗವಿಠಲನ ಸರ್ವಾಂಗಕೆ ಶರಣು 5
--------------
ಶ್ರೀಪಾದರಾಜರು