ಒಟ್ಟು 998 ಕಡೆಗಳಲ್ಲಿ , 97 ದಾಸರು , 786 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಶ್ರೀನಿವಾಸವಿಠಲರ ಹಾಡು ಶ್ರೀಶ ಪ್ರಾಣೇಶ ದಾಸರಾಯರ |ಬ್ಯಾಸರದಲೆ ಕೊಂಡಾಡೆಲೋ |ಏಸು ಜನ್ಮದ ದೋಷರಾಶಿಯು |ಲೇಶಿತಿಲ್ಲದೆ ಕಳೆವರು ಪ ಉದಯ ಕಾಲಸ್ತಮಯ ಪರಿಯಲಿ |ಹೃದಯದೊಳು ಹರಿಯ ಮೂರ್ತಿಯಾ |ಮುದದಿ ಸ್ಮರಿಸುತ ಪದುಮನಾಭನ |ಪದಗಳರ್ಚಿಪ ಗುರುಗಳಾ 1 ನಾನು ನನ್ನದು ಎಂಬ ದುರ್ಮತಿ |ಹೀನ ಜನರನು ಸೇರದೆ ||ಜ್ಞಾನಿಗಳವೊಡಗೂಡಿ ಹರಿಕಥೆ |ಸಾನುರಾಗದಿ ಪೇಳುವಾ 2 ಪರ |ಪದ್ಮಾರಾಧಕರಿವರೆಲಾ 3
--------------
ಶ್ರೀಶಪ್ರಾಣೇಶವಿಠಲರು
ಶ್ರೀಪತೀ-ಎನಗೇನು ಗತೀ ನನಗಾಗಲಿ ನಿನ್ನಲಿ ರತೀ ಪ ಚಪಲ ತನದಿ ಬಹು ಕಪಟಭಕುತಿನಟಿಸಿ ಗುಪಿತ ದೋಷಿಯು ಆದೆ ಅ.ಪ. ಬಟ್ಟೆ ನೋಡಲು ಬಹು ಛಂಧ-ಮೇಲೆ ಘಟ್ಟಿ ಬಣ್ಣದ ಕಾವಿ ಶಾಟಿ ಹಾಗೆ ಪಟ್ಟೆಮಡಿಗಳ ಭಾರೀ ಥಳಕೊ-ಬಹಳ ದಟ್ಟ ತುಳಸೀಸರಗಳ ಹೊಳಪೂ ಆಹಾ ಸೃಷ್ಠಿಗೊಡೆಯನೆ ಎನ್ನ ಕೆಟ್ಟ ತನಗಳನ್ನು ಎಷ್ಟೆಂದು ಬಣ್ಣಿಪೆ ನಿಟ್ಟ ನೆನೆಯದೆ ಪರರ ದೃಷ್ಟಿನೋಡುತ ಹಿಗ್ಗಿ ಅಟ್ಟಹಾಸದಿ ಕುಣಿದು ಮಾನವ ನನಗೇ 1 ವೇದ ವಾದಗಳೇನು ಕಾಣೆ-ಶುದ್ಧ ಸಾಧು ಕರ್ಮಗಳೊಂದು ಇಲ್ಲ-ಜನರ ಮೋದಗೋಸುಗವೇನೆ ಎಲ್ಲ_ಕಾಮ ಕ್ರೋಧವ ನಿಬಿಡಿತೇನೇ ಬಿಚ್ಚೆಹೃದಯಾ ಆಹಾ ಮಧ್ವರಾಯರ ಶಾಸ್ತ್ರ ಗ್ರಂಥ ಸಹ ತಿಳಿಯದೆಲೆ ಸಿದ್ಧ ಸಾಧಕನಂತೆ ಸಾಧುಲಿಂಗವ ತೋರಿ ಮುಗ್ಧಗೈಯ್ಯುತ ಮಂದಿ ಮೆದ್ದು ಪಕ್ವಾನ್ನಗಳ ಗೆದ್ದುಕೊಳ್ಳುವೆ ಬಹಳ ದಕ್ಷಿಣೆ ಬಹುಮಾನ 2 ನೇಮನಿಷ್ಠೆಗಳಾಟ ಹೊರಗೆ-ಗೃಹದಿ ಪ್ರೇಮವಿಲಾಸ ಆಟ ಕೂಟಜನ ಸ್ತೋಮರೆಲ್ಲವ ನುಡಿವ ನೀತಿ ಖ್ಯಾತಿ ಕಾಮುಕನಾಗಿ ಚರಿಸಿದೆ ಜಗದೀ ಆಹಾ ಹೇಮದಾಸೆಗೆ ಸೂಳೆ ಪ್ರೇಮವ ತೋರ್ಪಂತೆ ಕಾಮಿತಪ್ರದ ನಿನ್ನ ನಾಮ ಸವಿಯನುಣ್ಣದೆ ತಾಮಸರಿಗೆ ಉಪದೇಶ ನೀಡುತ ಸತ್ಯ- ಭಾಮೆಯರಸ ನಿನಗೆ ದೂರನಾದೆನಲ್ಲಾ 3 ಹಾಡಿಹಾಡುವೆ ಎತ್ತಿ ಸುತ್ತ ಜನರು ನೋಡಿ ಹಿಗ್ಗುತ ಬಾಪು ಬಾಪು ನುಡಿಗೆ ಹಾಡಿನಲ್ಲಿಹ ಸವಿಯುಣ್ಣ ದೇನೆ ಆಡಿ ಆಡಿಪೆ ಶಿರವ ಜ್ಞಾನಿಯಂತೆ ಆಹಾ ಕೇಡು ಚಿಂತಿಸಿ ಪರರ ಸ್ವಾರ್ಥಗೋಸುಗನಿತ್ಯ ಕಾಡಿ ಬೇಡುತ ಜನರ ದೂಡುತಿಹೆ ಸಂಸಾರ ಪ್ರೌಢ ಭಕ್ತರ ಗೋಷ್ಠಿಕೂಡಿ ಭಜಿಸದ ಎನ್ನ ಗಾಢ ಡಂಭಕೆ ಜಗದಿ ಈಡು ಕಾಣಿಸು ಸ್ವಾಮಿ4 ಭಾರಿ ಶಾಲುಗಳನ್ನೆ ಹೊದ್ದು-ನಿತ್ಯ ಕೇರಿಕೇರಿ ಪುರಾಣಗಳನ್ನು ಮೆದ್ದು-ಹಾರಿ ಹಾರುತ ತತ್ವರಾಶಿ ನುಡಿದು-ಊರು ಜ- ನರಮುಂದೆ ಪಾಂಡಿತ್ಯ ತೋರ್ಪೆ ಆಹಾ ತೋರಿ ತೋರುವೆ ಪರಮವೈರಾಗ್ಯ ಭಕ್ತಿಯ ದೂರಿ ದೂಡುವೆ ಪರರ ಹುಳುಕುಗಳನು ಎತ್ತಿ ಪಾರುಗಾಣದ ಕರುಣ ತೋರದಿದ್ದರೆ ಇನ್ನು 5 ಗುಡಿಗೆ ಹೋಗುವೆ ನಾನು-ನಿತ್ಯ ಅಲ್ಲಿ ಬೆಡಗು ಸ್ತ್ರೀಯರ ಹುಡುಕುವುದೇನೆ ಕೃತ್ಯ ದೃಢಭಕುತಿಯನು ಮಾಡಲೊಲ್ಲೆ ಸತ್ಯ-ನ ಮಡದಿ ಮಕ್ಕಳಿಗಿಲ್ಲ ಭೃತ್ಯಾನುಭೃತ್ಯಾ ಆಹಾ ಹುಡುಕೀ ನೋಡಿದಾಗ್ಯೂ ವಿರಕ್ತಿ ಭಕ್ತಿಗಳಿಲ್ಲ ಬಿಡಲು ಪೊರೆಯೆ ಪುರಾಣಶಾಸ್ತ್ರಗಳನ್ನು ನಿತ್ಯ ಎನ್ನ ಅನಾದಿ ನೀ ಕಲಿಸದಿದ್ದರೆ ಈಗ 6 ದೊಡ್ಡ ಪಂಡಿತ ನಾನೆಂಬ ಹೆಮ್ಮೆ-ಶುದ್ಧ ದಡ್ಡನೆಂಬುದ ಬಲ್ಲೆ ಮನದಿ-ಹಾಗೂ ಅಡ್ಡ ಬೀಳೆನು ಭಕ್ತ ಗಣಕೆ ಸುಳ್ಳು ವೊಡ್ಡುತವರನು ಹಳಿದೂ-ಕುದಿದೇ ಮನದೀ ಆಹಾ ದುಡ್ಡುಗೋಸುಗ ಬಹಳ ದೊಡ್ಡ ದಾಸನು ಎನಿಸೀ ಹೆಡ್ಡಮಂದಿಯ ಮುಂದೆ ದೊಡ್ಡ ಭಾಷಣ ಮಾಳ್ವೆ ಗುಡ್ಡದೊಡೆಯನೆ ಭಕ್ತಜಿಡ್ಡುಲೇಶವು ಕಾಣೆ ದೊಡ್ಡ ನಾಮವ ಹಾಕಿ ಸಡ್ಡೆ ಮಾಡದೆ ತಿರಿವ 7 ಕಚ್ಚಿ ಬಿಡದಿಹ ತುಚ್ಛ ಕಲಿಯು-ಬಹಳ ಮೆಚ್ಚಿ ಬಂದಿಹ ನವನು ಬಿಡುವನೇನು ಇಚ್ಛೆ ನನ್ನದು ನಡೆಯದೇ ನೊಂದು ತುಚ್ಛ ವಿಷಯದಿ ಸೆಳೆದು ಸೆಳೆಯುತಿಹನು ಆಹಾ ಇಚ್ಛೆಯಿಂದಲಿ ಜಗವ ಸೃಜಿಸಿ ಪಾಲಿಪಲೀಲೆ ಹಚ್ಚಿಕೊಂಡಿಹ ನಿನಗೆ ನನ್ನ ಪಾಲಿಪುದೇನು ಹೆಚ್ಚು ಕಾರ್ಯವೆ ಜೀಯ ಮುಚ್ಚಿಕೊಂಡಹ ನಿನ್ನ ಸ್ವಚ್ಛ ಬಿಂಬವ ತೊರಿ ಮೆಚ್ಚಿ ಕೊಡದಿರೆ ಜ್ಞಾನ 8 ಶ್ವಾಸಮತದಲಿ ಜನ್ಮ ವಿತ್ತೆ-ವಿಜಯ ದಾಸರ ಪ್ರಿಯ ಮೋಹನ್ನ ಪರಂಪರೆಯ ದಾಸನೆನಿಸಿ ಯೆನ್ನ ಮೆರೆಸಿ ಹೀಗೆ ದೋಷಿಗೈವುದು ಥರವೆ ಶ್ರೀಭಕ್ತಪ್ರಿಯ ಆಹಾ ವಾಸುದೇವನೆ ತುರ್ಯಲೇಸು ದೃಷ್ಟಿಯ ಬೀರೆ ನಾಶವಾಗದೆ ದೋಷ ಭಾಸವಾಗದೆ ಜ್ಞಾನ ಕಾಸುಬೀಡೆನು ಹಿರಿಯ ದಾಸರ ಗುಣ ನೋಡಿ ಲೇಸು ನೀಡೆಂತೆಂಬೆ ಶ್ರೀಕೃಷ್ಣವಿಠಲಾ9
--------------
ಕೃಷ್ಣವಿಠಲದಾಸರು
ಶ್ರೀಪುರುಷೋತ್ತಮತೀರ್ಥರು ಯೋಗಿಗಳರಸ ಟೀಕಾಚಾರ್ಯರೆ ನಿಮ್ಮ ಪಾದಬಾಗಿ ಭಜಿಸುವನರಗೆ ಪಾಪ ನಿರ್ಲೇಪ ಪ ಖಗವರ ವಹನನಕಾಗಿನಿ ತೀರಗ ವರ ಜಯಗುರುವೇ ಅ.ಪ. ಅಕ್ಷಯ ಫಲವೀವಾ |ಲಕ್ಷುಮಿ ನಾರಾಯಣನ | ಕುಕ್ಷಿಯೋಳೀಕ್ಷಿಸುವ |ಧೃತ - ಲಕ್ಷ್ಯವಿಲ್ಲದೆ ಗಿರಿ ಪಕ್ಷ ತರಿವ ಪರಪಕ್ಷಕೆ ಕರ್ಕಶ ಕುಲಿಶಾ 1 ದಶಮತಿ ಗ್ರಂಥಗಳಾ | ವೃಷಭ ಜನ್ಮದಿ ಪೊತ್ತುಅಸುವ ನೀಗುತ ಭೂಸುರ ಕುಲದಿ ಉದ್ಭವಿಸಿವಿಷಯ ಮೋಹವ ತ್ಯಜಿಸೀ | ಅಸಮ ಮಹಿಮ ಹರಿಯಾಒಸೆದು ಸೇವಿಸೆ ತುರಿಯಾ | ಆಶ್ರಮ ವಹಿಸೀ |ಧೃತ - ಬಸುರಲಿ ಬೊಮ್ಮನ ಪ್ರಸವಿಸಿದವನನುಸರ್ವೇಶ ನೆನುತಲಿ ಸಾರಿದ ಮಹಿಮಾ 2 ಜವನನ ಭಯನಾಶಾ | ಭುವನ ಪಾವನ ಸುಧೆಯಾಅವನಿ ಸುರರಿಗುಣಿಸೀ | ಕ್ಲೇಶವ ಹರಿಸೀ |ಅವನಿಜಾವಲ್ಲಭನಾ | ಮಾವನ ಕೊಂದವನಾಶಿವನ ಮೋಹಿಸಿ ಕೆಡಿಸಿ ಉಳಿಸೀದನಾ |ಧೃತ - ಪವನನ ಪ್ರಿಯ ಗುರು ಗೋವಿಂದ ವಿಠಲನನವ ನವ ಗ್ರಂಥದಿ ನುತಿಸಿದ ಮಹಿಮಾ3
--------------
ಗುರುಗೋವಿಂದವಿಠಲರು
ಶ್ರೀರಾಮ ನಿನ್ನ ಪದಕೆರಗಿ ನಮಿಸಿವೆನು ತೋರೆನಗೆ ನಿಜರೂಪ ಪರಿವಾರ ಸಹಿತ ಪ. ಶ್ರೀ ಗುರುಗಳಿಗೆರಗಿ ಅವರ ಕರುಣಾಬಲದಿ ಈಗ ಈ ಜನ್ಮದಲಿ ನಿನ್ನ ಭಜಿಪೆ ನಾಗಶಯನನೆ ನಿನ್ನ ಜನ್ಮಕರ್ಮದ ದಿನದಿ ಬೇಗ ಬಂದೆನ್ನೊಳಗೆ ನೆಲಸಿದೆಯೊ ದೇವ 1 ನಿನ್ನ ದರುಶನಕೆಂದು ಘನ್ನ ಯೋಗಿಗಳು ಬರೆ ಮನ್ನಿಸೆ ಇರುತಿರಲು ದ್ವಾರಪಾಲಕರು ಇನ್ನವರ ಶಾಪದಲಿ ದೈತ್ಯಕುಲದಲಿ ಜನಿಸೆ ಮುನ್ನವರ ಪೊರೆಯಲು ಭೂಮಿಯೊಳು ಬಂದೆ 2 ದಶರಥಗೆ ಸುತನಾಗಿ ತಾಟಕಿಯ ಸಂಹರಿಸಿ ಅನುಜ ಕುಶಲದಿಂದಲಿ ಶಿಲೆಯ ಹೆಣ್ಣುಗೈಯುತ ಬಂದು ಶಶಿಮುಖಿ ಸೀತೆಯನು ಕರಪಿಡಿದ ದೇವ 3 ಧನುವ ಮುರಿದುದ ಕೇಳೀ ಜಮದಗ್ನಿ ಕುವರನು ನಿನ ಸಂಗಡದಲಿ ಕಾಳಗಕೆ ಬರಲು ದನುಜರಿಗೆ ಭ್ರಮೆಗೊಳಿಸಿ ಕನಲುತಿಬ್ಬರು ಕಾದಿ ಘನಬಲ ಗೆಲಿದಂಥ ಅನುಗುಣನೆ ರಾಮ 4 ಅನುಜ ಸೀತೆ ಸಹಿತದಿ ವನಕೆ ಪ್ರೀತಿಯಿಂದಲಿ ಪೋದೆ ನೀತಿಯನು ತಿಳಿದು ಪಾತಕವ ಹರಿಸುವ ಪರಮ ಪಾವನ ಮೂರ್ತಿ ಈ ತೆರದ ಲೀಲೆಯನು ತೋರಿದೆಯೊ ಜಗಕೆ 5 ಕಂಡು ಮಾಯಾಮೃಗವ ಅಂಡಲೆದು ಅದರೊಡನೆ ಭಂಡ ರಾವಣ ಬಂದು ಭಿಕ್ಷುಕನ ತೆರದಿ ಲಂಡನತದಲಿ ಸೀತೆಯನು ಕದ್ದು ಓಡಲು ಕಂಡು ನಿರ್ಜನ ಗೃಹವ ಬೆಂಡಾದ ರಾಮ 6 ಅನುಜನೊಡನೆ ವನವ ಅಲೆದಲೆದು ಕಂಗೆಟ್ಟು ಘನ ಪಕ್ಷಿಯಿಂದಲಿ ವಾರ್ತೆ ತಿಳಿದು ಹನುಮ ಸುಗ್ರೀವರಿಗೆ ಒಲಿದು ವಾಲಿಯ ಕೊಂದು ವನಿತೆ ಸೀತೆಯನರಸೆ ವಾನರರ ಕಳುಹಿದೆ 7 ಹನುಮನಿಂದಲಿ ಸುಟ್ಟು ದನುಜಪುರ ಉಂಗುರವ ವನಿತೆ ಸೀತೆಗೆ ಕೊಟ್ಟು ವಾರ್ತೆ ತರಿಸಿ ವನಧಿಗೆ ಸೇತುವೆಯ ಕಟ್ಟಿ ವಾನರರೊಡನೆ ದನುಜ ರಾವಣ ಸಹಿತ ರಕ್ಕಸರ ಕೊಂದೆ 8 ಅಗ್ನಿಯಿಂ ಸೀತೆಯನು ಶುದ್ಧಳೆನಿಸಿ ಗ್ರಹಿಸಿ ವಿಘ್ನವಿಲ್ಲದ ಪದ ವಿಭೀಷಣಗಿತ್ತು ಮಗ್ನನಾಗಿರೆ ಭರತ ನಿನ್ನ ಪದಧ್ಯಾನದಲಿ ಅಗ್ನಿಸಖಸುತನೊಡನೆ ವಾರ್ತೆ ಕಳುಹಿಸಿದೆ 9 ಬಂದೆದುರುಗೊಳ್ಳೆ ಭರತನು ಸಕಲ ಪರಿವಾರ ಬಂದಯೋಧ್ಯೆಗೆ ಸಕಲ ಸನ್ನಾಹದಿ ಅಂದು ಸಿಂಹಾಸನದಿ ಪಟ್ಟಾಭಿಷೇಕವಗೊಂಡು ಬಂದ ಭಕ್ತರಿಗೆ ಇಷ್ಟ್ಟಾರ್ಥ ಸಲಿಸಿದೆಯೊ 10 ಕೊಟ್ಟು ಕಪಿಗೆ ಬ್ರಹ್ಮಪಟ್ಟದ ಪದವಿಯನು ಶ್ರೇಷ್ಠನೆನಿಸಿದೆಯೊ ಜಗಕೆ ಬೆಟ್ಟದೊಡೆಯ ಇಷ್ಟ ಶ್ರೀ ಗೋಪಾಲಕೃಷ್ಣವಿಠ್ಠಲ ಎನಗೆಕೆಟ್ಟ ಸಂಸೃತಿ ಬಿಡಿಸಿ ಕೊಟ್ಟಭಯ ಸಲಹೊ 11
--------------
ಅಂಬಾಬಾಯಿ
ಶ್ರೀವಾಸ ಶ್ರೀವಾಸ ಭಜಿಸಿದೆ ನಿನ್ನನು ಪ ತ್ಯಜಿಸಿದಿರೆನ್ನನು ಭವತಾಮರತರು ಕುಜನವಿದೂರ ಅ.ಪ ತಂದೆತಾಯಿ ನಿಜ ಬಂಧು ಸಹೋದರ ನಂದನಾಪ್ತ ನೀನೆಂದು ನಂಬಿದೆ 1 ನಿನ್ನ ಮರೆತು ಬಹು ಜನ್ಮ ಜನ್ಮದೊಳು ಖಿನ್ನವಾಗಿ ನಿಜವನ್ನೆ ಕಾಣದೆ 2 ಕರುಣದಿಂದ ನಿಜ ಚರಣ ಸೇವಕರ ಪೊರೆವ ವ್ಯಾಘ್ರಗಿರಿವರದ ವಿಠಲ 3
--------------
ವೆಂಕಟವರದಾರ್ಯರು
ಶ್ರೀಶಪದ ಕಮಲಕ್ಕೆ ಮಧುಪ | ನಿನ್ನದಾಸನೆಂದೆನಿಸುವುದು ಧನಪ | ಸಖ ಮ-ಹೇಶನ ಸುತ ಪೇಳ್ವೆ ಭಿನ್ನಪ | ನೀ ಪ್ರ-ಕಾಶಿಪುದು ಮನವಿ ವಿಘ್ನಪ 1 ಪತಿ ಕರುಣಿ ಶುಭಗಾತ್ರ | ಗ್ರಂಥಲೇಸೆನಿಸಿ ಲಿಖಿಸಿದೆ ಪವಿತ್ರ | ಮೂರ್ತಿಪಾಶಾಂಕುಶ ಪಾಣಿ ಸುಚರಿತ್ರ 2 ಸ್ವಾಂತ | ದಲ್ಲಿಅಭಯ ನೀ ತಿಳಿಸು ನಿಶ್ಚಿಂತ 3 ವಿಘ್ನಪನೆ ದುರ್ವಿಷಯದಲ್ಲಿ | ಬಹಳಮಗ್ನವಿಹ ಮನವ ಹರಿಯಲ್ಲಿ | ನಿರತಲಗ್ನ ಮಾಡಿಸು ತ್ವರ್ಯದಲ್ಲಿ | ಇನ್ನೂ ವಿಘ್ನಗಳಿಗಂಜಿಕೆಯು ಎಲ್ಲಿ ? | 4 ಧನಪ ವಿಶ್ವಕ್ಸೇನ ಯಮಳ | ಆ ಅ-ಶ್ವಿನೀಗಳ್ಗೆ ಸಮ ಕರಿಗೊರಳ | ಪುತ್ರನನುಜನೇ ಶೇಷ ಶತಗರುಗಳ | ರಲ್ಲಿಗುಣೋತ್ತಮನೆ ಕಾಯೊ ನಮ್ಮಗಳ | 5 ಬವರ | ದಲ್ಲಿಗೌರಿಪತಿ ವರದಿ ಉದ್ಧಟರ | ಆದಕ್ರೂರಿ ಜನ ಸಂಹಾರಿ ಶೂರ | 6 ಸೂತ್ರ ಅಪರೂಪ | ಖಳರದರ್ಪ ಭಂಜನನೆ ಶುಭರೂಪ | 7 ಶ್ರೀಶನತಿ ನಿರ್ಮಲವು ಎನಿಪ | ನಾಭಿದೇಶಗತನಾಗಿಹನೆ ಗಣಪ | ರಕ್ತವಾಸೆರಡು ಶೋಭಿತನೆ ಸುರಪ | ಮಿತ್ರಮೂಷಕಾ ವರವಹನ ರೂಪ | 8 ಶಂಕರಾತ್ಮಜ ದೈತ್ಯ ಜನಕೆ | ಅತಿ ಭ-ಯಂಕರ ಗತಿಯ ನೀಡಲ್ಕೇ | ನೀನುಸಂಕಟ ಚತುರ್ಥಿಗ ಎನೆಲ್ಕೆ | ಹಾಗೆಮಂಕು ಜನಾವೃತವು ಮೋಹಕ್ಕೆ 9 ಸಿದ್ಧಿ ವಿಧ್ಯಾಧರರು ಎಂಬ | ಗಣಾರಾಧ್ಯ ಪದಕಮಲ ನಿನದೆಂಬ | ಜನಕೆಸಿದ್ಧಿದಾಯಕ ವೇಗ ಎಂಬ | ಮಹಿಮಬುದ್ಧಿ ವಿದ್ಯೆಗಳ ಕೊಡು ತುಂಬ 10 ಭಕ್ತವರ ಭವ್ಯಾತ್ಮ ಪರಮ | ಶಾಸ್ತ್ರಸಕ್ತವಾಗಲಿ ಮನವು ಅಧಮ | ವಿಷಯಸಕ್ತಿರಹಿತನ ಮಾಡಿ ಪರಮ | ಶುದ್ಧಭಕ್ತನೆಂದೆನಿಸು ನಿಸ್ಸೀಮ | 11 ಶಕ್ರ ಪೂಜಿಸುತ ಗುರು ನಿನ್ನ ವೈರಿಶುಕ್ರ ಶಿಷ್ಯರ ಕೊಂದ ನಿನ್ನ | ಆ ಉ-ರುಕ್ರಮ ರಾಮ ಪೂಜಿಸೆನ್ನ | ತೋರ್ದವಕ್ರ ತುಂಡನೆ ಕರುಣವನ್ನ 12 ಕೌರವನು ಭಜಿಸದಲೆ ನಿನ್ನ | ಆಸಮೀರನ ಗದೆಯಲಿಂದಿನ್ನ | ಹತನುತಾರಕಾಂತಕನನುಜ ಯೆನ್ನೆ | ಧರ್ಮಪ್ರೇರಕನೆ ಸಂತೈಸು ಎನ್ನ 13 ಮೂಕರನ ವಾಗ್ಮಿಗಳ ಗೈವ | ಗುರು ಕೃ-ಪಾಕರನೆ ಕಾಮಗಳ ಕೊಡುವ | ಪರಮಲೇಖಕನೆ ಮನ್ಮನದಲಿರುವ | ಬಹುವ್ಯಾಕುಲವ ಪರಿಹರಿಸು ದೇವ | 14 ಸತ್ತೆ ವೃತ್ತಿಯು ಮತ್ತೆ ಪ್ರಮಿತಿ | ಜಗಕೆಇತ್ತು ತಾ ಸೃಷ್ಟ್ಯಷ್ಟಕತ್ರ್ರೀ | ಎನಿಪಚಿತ್ತಜ ಪಿತನ ದಿವ್ಯ ಸ್ಮøತಿ | ಇತ್ತುನಿತ್ಯ ನೀ ಪಾಲಿಪುದು ಸದ್ಗತಿ 15 ಪಂಚವಕ್ತ್ರನ ತನಯ ಕೇಳೊ | ಎನಗೆಪಂಚಭೇದದ ಜ್ಞಾನ ಪೇಳೊ | ಹರಿಯುವಾಂಛಿತ ಪ್ರದನ ದಿಟ ಆಳೊ | ಭವದಿವಂಚಿಸದೆ ಕಾಯೊ ಕೃಪಾಳೊ | 16 ಏನು ಬೇಡುವುದಿಲ್ಲ ನಿನ್ನ | ದುಷ್ಟಯೋನಿಗಳು ಬರಲಂಜೆ ಘನ್ನ | ಲಕುಮಿಪ್ರಾಣಪತಿ ತತ್ವರಿಂದಿನ್ನ | ಕಾರ್ಯತಾನೆಂಬ ಮತಿಯ ಕೊಡು ಮುನ್ನ 17 ಭಕ್ತ ಜನ ಕಲ್ಪ ತರುವೆನಿಪ | ಉಮೆಯಪುತ್ರ ಮಮ ಮಮತೆಯನು ಹರಿಪ | ದಾಯಹತ್ತಿಹುದು ನಿನ್ನಲ್ಲಿ ಗಣಪ | ಕಳೆಯೊಎತ್ತಿ ಕೈ ಮುಗಿವೆ ಭವರೂಪ 18 ಜಯ ಜಯವು ಎಂಬೆ ವಿಘ್ನೇಶ | ತಾಪತ್ರಯಗಳಿನು ನೀನೇ ವಿನಾಶ | ಗೈದುಭಯ ಶೋಕರಹಿತ ವಿದ್ಯೇಶ | ಜನ್ಮಾಮಯ ಮೃತಿ ಹರಿಸೊ ನಭಕೀಶ | 19 ನಮಿಸುವೆನೊ ಹೇರೊಡಲ ನಿನ್ನ | ಕರುಣಿಕಮಲಾಕ್ಷ ಹರಿನಾಮವನ್ನ | ನಿರುತವಿಮಲ ಮನದಿ ನುಡಿವಂತೆ ಎನ್ನ | ಮಾಡಿಕಮಲೇಶ ಪದ ತೋರೊ ಘನ್ನ20 ಎರಡು ನವ ಮೂರು ಪದಗಳನ್ನ | ಗೌರಿತರಳನಲಿ ಇರುವಂಥ ಪ್ರಾಣ | ಪತಿಯುಗುರು ಗೋವಿಂದ ವಿಠ್ಠಲನಾ | ಪದದಿಇರಿಸುವರ ಹರಿ ಪೊರೆವ ಅವರನ 21
--------------
ಗುರುಗೋವಿಂದವಿಠಲರು
ಶ್ರೀಹರಿ ಕೀರ್ತನೆ ಅಗಲದಿರೋ ಮನ ಮಂದೀರದಿಂದ ಲೆನ್ನ ಎಂದೆಂದಿಗೂ ಕೃಷ್ಣ ಪ ಅಗಲದಿರೋ ಬ್ರಹ್ಮಾದಿ ವಂದಿತ ಪರಿ ಪೂರ್ಣ ಏಕನೆ ವಿಶ್ವ ಸಗುಣ ನಿರ್ಗುಣ ನಿರಜ ನಿಸ್ಸೀಮ ಅ.ಪ. ಕಷ್ಟವಿಲ್ಲದೆ ಸಕಲ- ಚೇಷ್ಟೆಯ ನಡಿಸುವೆ ಕೊಟ್ಟು ದೇಹಾದಿಗಳ- ಬಿಟ್ಟೇ ಜೀವರ ಭವದಿ ಗಿಟ್ಟೀಸೆ ತಮ್ಮ ತಮ್ಮ- ಪಟ್ಟಾ ಮುಕ್ತಿಯ ಬೇಗ ಒಟ್ಟಿನಿಂದಲಿ ಜೀವ ಜಗವಂದಿಷ್ಟು ಚಲಿಸದು ಬಿಟ್ಟು ನಿನ್ನನು ಗುಟ್ಟು ತಿಳಿಯದೆ ಭವದಿ ಕಂ- ಗೆಟ್ಟು ಬಳಲಿದೆ ಭಕ್ತಬಾಂಧವ ನಷ್ಟಕಷ್ಟಗಳಿಲ್ಲದಾ ಸಂತುಷಷ್ಟ ನೀಡುವ ಪ್ರಭುವೆ ಕರುಣಾ- ದೃಷ್ಟಿ ಬೀರುತ ಭಕ್ತಿ ಭಾಗ್ಯವ ಪುಷ್ಟಿಗೈಸುತಲೆನಗೆ ಸಂತತ 1 ಶ್ರೀಶಾನೊಬ್ಬನೆ ಸರ್ವ ತಂತ್ರ ಸ್ವತಂತ್ರನು ನಾಶರಹಿತನಿಗೆಲ್ಲಾ ದಾಸರೆ ಸರಿಸತತಾ ವಾಸುದೇವನು ಜೀವ ಜಗದಿಂ ವಿಲಕ್ಷಣನು ಈಸುಜ್ಞಾನವನೀಯೋ ಜನ್ಮಜನ್ಮಾಂತರಕು ದೋಷದೂರ ವಿಶೇಷ ಮಹಿಮ ಪೂರ್ಣ ವಿಶ್ವಗ ಶಶ್ವದೇಕ ವಿ- ಲಾಸ ಮಿಷಣಾಭರಣ ಭೂಷಿತ ಸಾಮಸರ್ವಾಧಾರ ನಿರುಪಮ ಓಸು ಶಬ್ದಗಳಿಂದ ವಾಚ್ಯನೆ- ನಾಶಗೈಸುತ ಕರ್ಮತ್ರಯಗಳ ಹೃದಯಗುಹೆಯಲಿ 2 ನಿತ್ಯನಿಗಮಾತೀತ-ನೀನೆ ಸತ್ಯರ ಸತ್ಯ ನಿತ್ಯತೃಪ್ತನು ಸ್ವರತ-ಮುಕ್ತೇಶ ಚಿನ್ಮಯನೂ ನಿತ್ಯಜೀವಗೆ ನೀನಿರ್ನಿಮಿತ್ತ ಬಂಧು ಸತತ ನಿತ್ಯಸ್ತೋತ್ರವನು ನುಡಿಸು-ಮೃತ್ಯೋಮೃತ್ಯುವೆ ದೇವಾ ಧಾಮ ವಿಶ್ವೋ ತ್ಪತ್ತಿ ಸ್ಥಿತಿಲಯ ಕರ್ತ ಪರಿಪರಿ ಜೀವ ಸತ್ತಾದಿ ಭಾಸಕ ನಾಥ ಮುಕ್ತಾಮುಕ್ತ ವಂದಿತ - ಭೂತಿ ಭೂರಿದನಾಂತಾತ್ಮ ಖ್ಯಾತ ಸರ್ವೋತ್ತಮ ಪರತ:ಪರಾಕ್ಷರ ವಿಷ್ಣುಸರ್ವಜ್ಞ 3 ಅಂಬುಜಾಕ್ಷನು ನೀನೇ-ಉಂಬುವೆ ಸರ್ವಸಾರ ತುಂಬಿರುವೆ ಒಳಹೊರಗೆ-ಬೆಂಬಲನು ಜಗಕೆಲ್ಲ ಬಿಂಬ ನೀ ಚಲಿಸೆ ಪ್ರತಿ ಬಿಂಬಾ ನಾ ಚಲಿಸುವೆ ನಂಬಿದೆ ಸಲಹಯ್ಯ-ಕಂಬುಚಕ್ರಾಂಕಿತನೆ ಕುಂಭಿಣೀಪತಿ ಕೃಷ್ಣಕೈಬಿಡೆ ಗೊಂಬೆ ಸರಿನಾಲ್ಲವೇನೈ ಡಿಂಬದೊಳಗಿನ ವೈರಿವೃಂದವು ಹಂಬಲಿಸಲೆಡೆಗೊಡವುಭವ ದೊಂಬಿ ಅಡಗಿಸು ದಕ್ಷಣಾಕ್ಷಿಗ-ಸ್ಥಂಭರೂಪಿಯೆ ಶರಣುಶರಣು ಎನಿಸೈ ನೀಡಿ ವಿಜ್ಞಾನ 4 ಮಂದರೋದ್ಧರ ಗೋವಿಂದ ನಿನ್ನಯ ಮಹಿಮೆ ಇಂದಿರೆಗಾಗದು ಸಾಕಲ್ಯ ತಿಳಿಯೆಸಿದ್ಧವಿದೂ ಛಂದಾ ಛ್ಚಾದಿತ ಗಾತ್ರ-ಬಂಧ ಮೋಕ್ಷಪ್ರದನೆ ಎಂದು ಕಾಂಬೆನೋ ನಿನ್ನ-ಮಂದನಾನಿಹೆ ಜಗದೀ ಸದ್ಮ ಪೂರ್ಣಾನಂದ ನಿನ್ನಯ ನಾಮ ವೃಂದದಿ ಬಂಧಿಸಿಹೆ ಜಗವೆಲ್ಲ ವಿಷ್ಣುವೆ-ಛಂದಬೃಹತೀಪತಿಯೆ ನೀನೈ ನಾಡಿ ಮೆರೆಯುವ ಇಂದಿರಾಪತಿ ಕೃಷ್ಣವಿಠಲನೆ-ನಿಂದು ತೋರುತ ನಿನ್ನ ರೂಪವ 5
--------------
ಕೃಷ್ಣವಿಠಲದಾಸರು
ಶ್ರೀಹರಿದಾಸವೃಂದ ಸ್ತೋತ್ರ ದಾಸವರ್ಯರಿಗೊಂದಿಪೆ ದಾಸವರ್ಯರಿಗೆರಗಿ ಜನ್ಮಾಂತರದ ದೋಷವ ಪರಿಹರಿಸಿಕೊಂಬೆ ಪ ನಾರದ ಮುನಿಹರಿಯಾಜ್ಞ್ಞೆಯಿಂದಲೆ ಪುರಂ - ದರ ದಾಸರಾಗಿಜನಿಸಿದ ದಾ - ನಾರಾಯಣನ ದಿವ್ಯನಾಮದ ಮಹಿಮೆಯ ಮೂರು ಲೋಕಗಳಲ್ಲಿ ಹರಹಿದ 1 ಭಜಿಸುವ ಭಕುತರ ಅಗಣಿತದೋಷವ ನಿಜವಾಗಿ ಪರಿಹರಿಸುವಂಥ ದಾಸ - ಸುಜನ ಪೋಷಕ ದುಷ್ಟಕುಜನ ಕುಠಾರ ಶ್ರಿ ವಿಜಯರಾಯರ ಪಾದಕ್ಕೆರಗುವೆ 2 ಕೋಪರಹಿತಭಕ್ತ ಪಾಪವಿದೂರಕ ಭೃಂಗ ದಾ - ತಾಪ ಸೋತ್ತುಮಭವ ತಾಪನಿವಾರಕ ಗೋಪಾಲದಾಸರಿಗೆರಗುವೆ 3 ಧರಿಯಸುರರ ಉದ್ಧರಿಸಲೋಸುಗ ದಿವ್ಯ ಹರಿಕಥಾಮೃತ ಸಾರಗ್ರಂಥವದಾ - ವಿರಚಿಸುತಙÁ್ಞನಪರಿಹರಿಸಿದಂಥ ಹರಿಭಕ್ತಾಗ್ರಣಿ ಶ್ರೀ ಜಗನ್ನಾಥ 4 ಧರೆಯೊಳು ಹರಿಲೀಲಾಮೃತ ವೃಷ್ಟಿಗರೆಯಲು ಪರಿಪರಿ ಕಥೆಗಳ ರಚಿಸಿದ ದಾ - ವರದೇಂದ್ರ ಮುನಿಗಳ ಪಾದಸಾರಸಭೃಂಗ ಪರನುಸುಚರಿತ ಶ್ರೀ ಪ್ರಾಣೇಶ 5 ಹರಿಭಕ್ತಿ ಮಾರ್ಗವ ಪರಿಪರಿಶಿಷ್ಯರಿ ಗರುಹಿ ಕರುಣದಿಂದುದ್ಧರಿಸಿದ ದಾ - ಪರಮತತಿಮರಕ್ಕೆ ತರಣಿಸ್ವರೂಪ ಶ್ರೀ ಗುರುಪ್ರಾಣೇಶಾರ್ಯರಿಗೆರಗುವೆ6 ಗುರುಪಾದ ಸೇವೆಯ ಪರಿಪರಿಗೈದು ಈ ಧರಿಯೊಳು ಧನ್ಯರೆಂದೆನಿಸಿದ ದಾ - ಹರಿದಾಸ ಕುಲರತ್ನ ಸರುವ ಸದ್ಗುಣ ಪೂರ್ಣ ವರಶ್ರೀಪ್ರಾಣೇಶದಾಸಾರ್ಯ 7 ಗುರುಪ್ರಾಣೇಶರ ಕರಸರಸಿಜ ಸಂಜಾತ ಪರಮಭಾಗವತರೆನಿಸಿದ ದಾ ಮರುತಮತದ ತತ್ವವರಿದಂಥ ಸುಖದ ಸುಂ - ಮೋದ ವಿಠಲರೆಂಬ 8 ಭೂಮಿಯೋಳ್ ವರದೇಶ ವಿಠ್ಠಲನ ನಿಜಭಕ್ತ ಸ್ತೋಮಕ್ಕೆ ಶಿರಬಾಗಿ ನಮಿಸುವೆ ದಾ ಆ ಮಹಾತ್ಮರಪಾದರಜಾದೊಳೆನ್ನನು ದೇವ ನೇಮದಿಂದಲಿ ಹೊರಳಾಡಿಸೊ 9
--------------
ವರದೇಶವಿಠಲ
ಸಂಗಮಾಡೆಲೋ ಶ್ರೀಹರಿ ದಾಸರಾ ಹಿಂಗಿ ಹೋಹುದು ತಾಭವದಾಸರಾ ಮಂಗಳ ಮಂಗಳಾತ್ಮಕ ಕೈಗೂಡಿ ಬಾಹನು ಅಂಗಜ ಜನಕ ಸಚತುರ್ಬಾಹನು 1 ಅವರ ವಾಕ್ಯ ಸುಧಾರಸ ಪಾನವಾ ಶ್ರವಣದಿಂದಲಿ ಮಾಡೆಲೊ ಪಾನವಾ ಭವದ ಜನ್ಮ ಜರಾಲಯ ಜಾರುವೀ ತವಕದಿಂದ ಚಿತ್ಸುಖ ಸೇರುವಿ 2 ಹಲವು ಸಾಧನಭರಿಗೆ ಬೀಳದೇ ಕಲಿತ ವಿದ್ಯತ್ವ ಗರ್ವವ ತಾಳದೇ ಬಲಿದು ಭಕ್ತಿಯ ಹೋಗದೆ ಸಿಂತರಾ ನೆಲಿಯ ಕೇಳೆಲೋಭಾವದಿ ಸಂತರಾ 3 ಮರಹು ಕತ್ತಲಿವೆಂಬುದು ಹಾರಿಸೀ ಅರಿಗಳಾರರೆ ಸಂಕಟ ಹಾರಿಸೀ ಅರಹು ಭಾಸ್ಕರ ತೋರುವ ಬೋಧಿಸಿ ಹೊರವ ಸಜ್ಜನ ಸಂಗವ ಸಾಧಿಸಿ 4 ನೆಲಿಯ ಹೊಂದುವ ಪರಿಯನಿಲ್ಲದೇ ಸುಲಭಸಾಧನ ತೋರಿಪರಲ್ಲದೇ ಬಳಲುವಾಬಾಹಳ ಸಾಪೇಳರು ಬಲಿದು ಪಾಯವ ಸಂತರ ಕೇಳರು 5 ಹರಿಕಥಾ ಮೃತಸಾರಸ ಪೇಳುತಾ ದುರಿತ ದುಷ್ಕøತ ತರುಗಳ ಶೀಳುತಾ ಪರಮ ಭಕ್ತಿಯ ಭಾಗ್ಯವ ಕುಡುವರು ಅರಿತು ಸಂತರ ಸಂಗವ ಬಿಡುವರು 6 ಏಳು ಭೂಮಿಕಿ ಮಾರ್ಗವ ತೋರಿಸಿ ಮಾಲ ಚಿತ್ಸುಖ ಮಂದಿರ ಸೇರಿಸಿ ಕಾಲಕರ್ಮದ ಕೋಟಲೆ ವಾರಿಸೀ ಪಾಲಿಸುವರು ಭವದಿಂತಾರಿಸಿ 7 ಸಂಗದಿಂ ಚಂದನಾಹದು ಪಾಮರಾ ಜಂಗಮೊತ್ತಮನಾಗನೇಪಾಮರಾ ಅಂಗದಿಂಮಾಡು ಸಂತರ ವಂದನಾ ಇಂಗಿಥೇಳಿದ ಮಹಿಪತಿ ನಂದನಾ 8
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ಸಂತರಾ ಪದವಿಡಿಯೋ ಪ ಸಂತರಾ ಪದವಿಡಿಯೋ | ಭ್ರಾಂತಿಗಳೆಲ್ಲಾ ಕಡಿಯೋ | ಅಂತಭಾವನೆಯಿಂದ ತಂತುವಿಡಿದು ನಿಜ | ಶಾಂತಿಸುಖವ ಪಡಿಯೋ ಮನುಜಾ | ಶಾಂ | 1 ಡಾಂಭಿಕಾತನಗಳೆದು | ಬೆಂಬಲಗುಣವಳಿದು | ಹಂಬಲಿಸದೇ ಮನ ಸ್ತಂಭಪರಿಯ ಮಾಡಿ | ನಂಬುಗೆ ದೃಢ ತಳೆದು ಮನುಜಾ | ನಂ | 2 ನಾನಾರೆಂಬುದು ಮರೆದೀ | ಜ್ಞಾನದೆಚ್ಚರ ತೊರೆದೀ | ಕಾನನ ಹೊಕ್ಕಂತೆ ನಾನಾ ಸಾಧನದಿಂದ | ಏನ ಸುಖವ ಪಡೆದೀ ಮನುಜಾ | ಏ | 3 ಸುಲಭವೇ ಮಾನುಷ ಜನ್ಮ | ಮ್ಯಾಲ ಅಗ್ರಜ ಧರ್ಮಾ | ಚಲಿಸಲಿ ಪರಿಮತ್ತೆ ಇಳೆಯೊಳು ದೊರಕುದೇ | ತಿಳಿನಿಜಗತಿ ವರ್ಮಾ ಮನುಜಾ | ತಿ| 4 ಕೋಟಿ ಮಾತಿಗೆ ವಂದೇ | ನೀಟ ಸುಪಥವಿದೇ | ಧಾಟಿಲಿ ಮಹಿಪತಿ ಸುತ ಪ್ರಿಯನೊಲುಮೆಯಿಂದ | ಕೋಟಿಳಗಳಿನಿಳದೇ ಮನುಜಾ | ಕೋ | 5
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ಸತಿ ಸುತರು ನಾವಿವರೊಳೇಕೆ ಮರುಳಾದೆವಿಂತು ಗುರುವೆಪ್ರಾಕು ಜನ್ಮದ ವಾಸನೆಗಳೆಂಬ ಪಗೆಗಳಿಲ್ಯಾಕೆ ನೂಕಿದರೆಮ್ಮನೂ ಸ್ವಾಮಿ 1ಎಂತು ಬಂತೀ ರಕ್ತ ಮಾಂಸಾಸ್ತಿ ಚರ್ಮಗಳಿವೆಂತು ವಿಣ್ಮೂತ್ರಂಗಳೂ ದೇವಾಎಂತು ರಾಗದ್ವೇಷ ಮದಮತ್ಸರಂಗಳಲ್ಲೆಂತು ನರಕ ಸ್ವರ್ಗವೂ ಪರಮಾಎಂತು ಬಂತೀ ಭೋಗ ರೋಗ ವಾಸನೆಗಳಿಲ್ಲೆಂತು ವ್ಯಾಮೋಹಂಗಳು ಗುರುವೆಎಂತು ಚಿಂತೆಗಳಿದರೊಳಭಿಮಾನ ಕಷ್ಟಂಗಳೆಂತೆಂದು ನಾವರಿಯೆವೂ ಸ್ವಾಮಿ 2ಎಂತು ರಾಗ ದ್ವೇಷ ಪೋಗಿ ಸಾಧನೆಗಳೆಮಗೆಂತಹುದು ಚಿತ್ತ ಶುದ್ಧಿ ಪರಮಾಎಂತು ವೇದಾಂತ ತಿಳವದು ಬೊಮ್ಮ ನಿತ್ಯ ತೃಪ್ತೀ ಗುರುವೆಅಂತು ಕರುಣಿಸಿ ಸಕಲಚಿಂತೆಗಳ ಪರಿಹರಿಸನಂತ ಗೋಪಾಲಾರ್ಯನೆ ಸ್ವಾಮಿ3
--------------
ಗೋಪಾಲಾರ್ಯರು
ಸತ್ಸಂಗ ಮಾಡೊ ಮನವೆ ಚಿತ್ಸುಖ ನೋಡಲಿಕೆ ಅತಿಸೂಕ್ಷ್ಮಾನಂದ ಸುಪಥ ಅತಿಶಯಾನಂದ ಸದ್ಗತಿ ಸುಮೋಕ್ಷದಾಯಕ ಹಿತದೋರಿಕೊಡುವ ಸದ್ಗುರುನಾಥ ಧ್ರುವ ತೊಡಕಿ ಮಿಡುಕಬ್ಯಾಡ ಹಡಕಿ ವಿಷಯದೊಳು ಗಡಕವಾಗಿ ಕೆಡುಕ ಬುದ್ಧಿಯಿಂದ ಕೆಡುದೇನ ಬಡದ ಭವಣೆ ಬಟ್ಟು ತಾವು ಕೊಡುವರೇನ ಹಾಕಿ ವೈವಯಮನ ಬ್ಯಾಗೆ ಗುರುದಯಕರುಣ 1 ಸಿಲ್ಕಿಮಾಯ ಮಲ್ಕಿನೊಳು ಅಳ್ಕಿ ಆಲಪರಿಯಬ್ಯಾಡ ಬಲ್ಕಿ ಮಾಡಿಕೊಳ್ಳಿ ನೀ ಸುಜ್ಞಾನ ಕ್ಷುಲ್ಲಕ ಬುದ್ಧಿಗಾಗಿ ನಿನ್ನ ತನುವಿನೊಳಗೆ ಖೂನ ನುಲ್ಕಿ ಸುಟ್ಟ ಮಲ್ಕಿನಂತೆ ಜನಕಾಲಂಬ ತೋರಿ ನೀನು ಜಲಕಮಲದಂತಿರನುದಿನ ನಿಲ್ಕಿ ನೆಲೆಗೊಂಬುದಿದು ತಳಕು ತನ್ನೊಳಗದೆಯೆಂದು ನಾಲ್ಕುವೇದ ಸಾರುತಿದೆ ಪೂರ್ಣ2 ಮಾನವ ಜನ್ಮ ನಿರ್ತದಿಂದ ಅರ್ತು ಕೂಡಿ ಕರ್ತು ನಿಜಾನಂದ ಗುರುಬೋಧ ಥರಥರದಿ ತೋರಿ ಪೂರ್ಣ ಸಾರ್ಥಕ ಮಾಡುವದಿದು ತೀರ್ಥಪುಣ್ಯ ಸರ್ವಕ್ಷೇತ್ರವಾದ ಅರ್ಥಿಯಿಂದವಿಡಿದು ಗುರು ಪಡಿಯೊ ನಿನ್ನ ಸ್ವಹಿತದ 3
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ಸದ್ಗುರು ದಯಾ ಸಾಧ್ಯವಾಗದೇ ಜ್ಞಾನವಿಲ್ಲಾ | ಸದ್ಗತಿ ಕೀಲರಿತವನೇ ಬಲ್ಲಾ ಪ ಖಟಪಟ ವೃತದೊಳಿಲ್ಲಾ | ಘಟಮಟ ಶಬ್ದದೊಳಿಲ್ಲಾ | ಥಟ್ಟನೆ ಸಂಸಾರ ತೊರೆದರಿಲ್ಲಾ 1 ಬಹೂನಾಂ ಜನ್ಮನಾ ಜಾಯಂತೆ | ಜ್ಞಾನವಾನ್ ಮಾಂ ಪ್ರಪದ್ಯತೆ | ಶ್ರೀ ಹರಿ ಹೇಳಿದ ಗಾದಿಮಾತೆ 2 ವಸುಧಿಯೊಳೆಲ್ಲಾ ಜನಕೆ | ಹಿಂಗಾದರ ಸಾಧನ ಬೇಕು | ಋಷಿಮುನಿಗಳು ಸಾಹಸಬಡುವರ್ಯಾಕ 3 ಮನುಷ್ಯಣಾಂ ಸಹಸ್ರೇಷು | ವೆಂಬಾ ಗೀತೆಯ ನುಡಿಲೇಸು | ಜನದಲಿ ಗರ್ವಾಭಿಮಾನಿಗೆ ಬಿರುಸು 4 ಅಂಬು ತಾನು | ಎರಗುದೇ ಗುರಿಯಾ ಸ್ಥಳವನು | ಗುರುಮಹಿಪತಿ ನಂದನು ಸಾರಿದ ನಿಜನು 5
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ಸಪ್ತಾನ್ನ ತಿಳಿವುದು ಸಾಧನವಯ್ಯ ಪ ಆಪ್ತ ಹರಿಯು ಕೊಟ್ಟ ಬುದ್ಧಿಯಿಂದಲಿ ಜನರು ಅ.ಪ ಮಕ್ಕಳು ಮೊದಲಾದವರ ಪೋಷಣೆ ಒಂದು ಪಕ್ಕಿಗೆ ಮೇವನ್ನು ಕೊಡುವುದೊಂದು ಅಕ್ಕರದಲಿ ಗೋಗೆ ತೃಣವ ನೀಡುವುದೊಂದು ಲೆಕ್ಕವಿಲ್ಲದ ಫಲವು ಅತಿಥಿ ಪೂಜೆ 1 ತಾತ ಮೊದಲಾದ ಹಿರಿಯರಪೂಜೆ ಆರು ತಾತಿಳಿದು ಉಂಬೋದು ಏಳನೆಯ ಅನ್ನವು ಶ್ರೀತರುಣೀವರನ ಸೇವಕರೆ ಕೇಳಿ 2 ಭೂಸುರ ಜನ್ಮವು ಸಾರ್ಥಕವು ಶ್ರೀಸತಿಯರಸ ಶ್ರೀ ಗುರುರಾಮ ವಿಠಲ ದಾಸತ್ವವಿತ್ತು ಎಂದೆಂದಿಗೂ ಪೊರೆವ 3
--------------
ಗುರುರಾಮವಿಠಲ
ಸಮಜೊ ಭಾಯಿ ಸಕುನಾ ಚಾರೊ ಖುದಾಕಾ ತೆಲಗು ಕನ್ನಡ ತುರಕಾರೆ ವಂದೇ ಸುಖ ಧ್ರುವ ನಜರೋಮೆ ನಜರೋಮೆ ತನ್ನೊಳಗದೆ ಅತಿಸೂಕ್ಷ್ಮವಾಗಿ ತಿಳಕೋಮೆ ತಿಳಕೋಮೆ ಸದ್ಗುರು ವಚನ ಶೋಧುನಿ ಪಾಹಾ ಸಪ್ರೇಮ ಸಪ್ರೇಮ ಚುಡುವಯ್ಯ ಉನ್ನದಿ ಪೂರ್ಣ ಘನ ಮಹಿಮೆ 1 ಫ್ಯಾರೆ ವಳಖೂನಿ ಸಾರಾಸಾರಾ ನಿವಡೂನಿ ನಿವಡೂನಿ ನಜರ ಹುಜರ ದೇಖೋ ಯಾರಾ ಹೈಗನೀ ಹೈಗನಿ ಜನ್ಮಕ ಬಂದು ಮಾಡುವದೆ ಸಾಧನೀ ಸಾಧನೀ ಮಂಚಿ ಉನ್ನದಿ ನಕಳೆ ಸದ್ಗುರು ಪಾವುನಿ 2 ಚೆಪ್ಪೆವೈಯ್ಯ ಎಂದರ ಹೇಳುವ ಗುರು ನೀಠಾ ಗುರುನೀಠಾ ಆನಂದ ಆಹೆ ತುಜ ಮಹಿಪತಿ ಸುಖ ಮೋಠಾ 3
--------------
ಕಾಖಂಡಕಿ ಶ್ರೀ ಮಹಿಪತಿರಾಯರು