ಒಟ್ಟು 908 ಕಡೆಗಳಲ್ಲಿ , 94 ದಾಸರು , 779 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಸೀತಾಪತಿವಿಠಲ ದಾಸಳ ನಿರ್ಯಾಣ ಪದ ಮಾಧವನಾ ಪುರ ಸೇರಲು ಬೇಗ ಪ. ಪುಟ್ಟಿದಾರಭ್ಯದಿ ನಿಷ್ಟೆನೇಮದೊಳಿದ್ದು ಕಷ್ಟಪರಂಪರೆ ಸಹಿಸುತ ಜಗದಿ ಹರಿಯ ಕರುಣದಿ ಗುರುಕೃಪೆ ಪಡೆದಿ 1 ಹಿರಿಯೂರೆನ್ನುವ ಪುರ ವರ ವೇದಾವತಿ ತೀರ ಪರಮ ಸಾತ್ವಿಕರಲ್ಲಿ ಜನುಮ ತಳೆದಿ ತುಳಸಿಯ ವರದಿ ಮುದ್ದಿನಿಂ ಬೆಳೆದಿ 2 ಶಿಷ್ಟ ಸಂಪ್ರದಾಯ ಕಟ್ಟಿನೊಳಗೆ ನಿನ ಗಷ್ಟಮ ವರುಷದಿ ಮದುವೆಯ ಮಾಡಿ ಹರುಷವಗೂಡಿ ಹರಿಯ ಕೊಂಡಾಡಿ3 ಸತಿ ರುಕ್ಮಿಣೀಬಾಯಿ ಹೆಸರಿನಿಂ ಬಾಳ್ವೆಯ ಬಹು ಅಲ್ಪಕಾಲ ಕೊಟ್ಟನೆ ಸಿರಿಲೋಲ ಮುಸುಕಿತು ಮಾಯಜಾಲ 4 ಸಂಸಾರ ಕೈಕೊಂಡು ವಂಶಕೊಬ್ಬನ ಪಡೆದು ಕಂಸಾರಿ ಕರುಣದಿ ಇರುತಿರೆ ನೀನು ವಿಧಿ ತಂದೊಡ್ಡಿದನು 5 ಎರಡು ವರ್ಷದ ಮಗುವ ಕರದಲ್ಲಿ ಕೈಕೊಂಡು ಪರಿಪರಿ ಕಷ್ಟದಿ ಶಿಶುವ ಬೆಳೆಸಿದೆ ವಿದ್ಯೆ ಕಲಿಸಿದೆ ಪುತ್ರಗ್ಹರಸಿದೆ 6 ಒಬ್ಬ ಆ ಮಗನರ್ಥಿ ಸಂಸಾರವನೆ ಕಂಡು ಉಬ್ಬಿ ಹರುಷಾದಲ್ಲಿ ಇರುತಿರೆ ನೀನು ಮೊಮ್ಮಕ್ಕಳನು ಪಡೆದೆ ನಾಲ್ವರನು 7 ಘಟಿಸುತ ಸ್ವಪ್ನದಿ ಸೇವೆಗೈಯ್ಯೆಂದು ಅಭಯವನಂದು ಕೊಡಲು ದಯಸಿಂಧು 8 ಮರುದಿನ ಮನೆಯಲ್ಲೆ ಭರದಿ ಸೇವೆಯ ಕೊಂಡು ಹರಿವಾಯುಗಳನಿಟ್ಟು ಸುತ್ತುವರಿಯುತ್ತ ಎಡವಿ ಬೀಳುತ್ತ ಪ್ರದಕ್ಷಿಣೆ ಬರುತಾ 9 ಒಲಿದು ಆ ಭಕ್ತಿಗೆ ವರನೇತ್ರವಿತ್ತನು ನಳಿನನಾಭನ ಭಕ್ತ ಘಟಿಕಾಚಲನಿಲಯ ಭಾರತಿಪ್ರೀಯ ದಿವಿಜರ ಒಡೆಯ 10 ಭಕ್ತಿ ವಿರಕ್ತಿ ಜ್ಞಾನವು ಚಿತ್ತದಿ ಮೂಡಿ ಸೋತ್ತಮರಾದ ಶ್ರೀ ವಿಬುಧರ ದಯದಿ ಮೋಕ್ಷಸಾಧನದಿ ದಿನಗಳ ಕಳೆದಿ 11 ಶ್ರವಣ ಕೀರ್ತನ ಸ್ಮರಣೆ ಮನನಾದಿಗಳನೆಲ್ಲ ತವಕದಿ ಕೈಕೊಂಡು ಮೋದದಿ ಮೆರೆದಿ ಕಷ್ಟವ ಮೆರೆದಿ ಹರಿಗುರು ದಯದಿ 12 ಪ್ರಥಮ ಯಾಮದಲೆದ್ದು ಜಿತಮನದಿಂದ ಶ್ರೀ ಪತಿಯ ಸ್ತೋತ್ರಗಳನ್ನು ವದನದಿ ಸತತ ಪರಿಯಂತ 13 ಉಚ್ಛಸ್ವರದಿ ನೀನು ಪಾಡಿದ್ಹಾಡುಗಳಿಂದು ಅಚ್ಚಳಿಯದೆ ನಮ್ಮ ಸ್ಮರಣೆಯೊಳ್ನಿಂತು ಹರುಷವನಾಂತು ಮರೆಯುವುದೆಂತು 14 ವೃದ್ಧಾಪ್ಯ ತಲೆದೋರೆ ಇದ್ದೊಬ್ಬ ಪುತ್ರನು ಪದ್ಮನಾಭನ ಪುರ ಸೇರಿ ನಿನ್ನಗಲಿ ದುಃಖದಿ ಬಳಲಿ ತೊಳಲಿದೆ ಬಳಲಿ 15 ಪೌತ್ರರಿಬ್ಬರು ನಿನ್ನ ಹೆತ್ತಮ್ಮನಂದದಿ ಚಿತ್ತದಿ ತಿಳಿದಿನ್ನು ಸಲಹುತ್ತಿರಲು ಹರಿದಯ ಬರಲು ದುಃಖ ಮರೆಯಲು 16 ಕಲ್ಯಾಣನಗರದಿ ಕಿರಿಯ ಮೊಮ್ಮಗನಿರೆ ಆಹ್ಲಾದದಿಂದ ನೀನವನಲ್ಲಿ ಇರಲು ಸದ್ಗುರು ಬರಲು ಜ್ಞಾನವೆರೆಯಲು 17 ಹರಿದಾಸಕೂಟದ ವರ ಅಂಕಿತವ ಕೊಂಡು ಗುರುಕರುಣವ ಪೊಂದಿ ನೀ ನಮಗೆಲ್ಲ ಸನ್ಮಾರ್ಗಕ್ಕೆಲ್ಲ ಮೊದಲಾದೆಯಲ್ಲ 18 ಶ್ರೀ ತಂದೆ ಮುದ್ದುಮೋಹನದಾಸರ ದಯದಿ ಸೀತಾಪತಿವಿಠ್ಠಲನ್ನ ಒಲಿಸಿದೆ ಧ್ಯಾನದೋಳ್ತಂದೆ ಆನಂದಪಡೆದೆ 19 ಕಂಚಿ ಕಾಳಹಸ್ತಿ ಶ್ರೀ ರಂಗಯಾತ್ರೆಯ ಸಂಚಿಂತನೇಯಿಂದ ಗೈದೆಯೆ ನೀನು ಗಳಿಸಿದೆ ಇನ್ನು ಭಕುತಿಯ ಪೊನ್ನು 20 ಉಡುಪಿ ಮಂತ್ರಾಲಯ ಸೇತು ರಾಮೇಶ್ವರ ಕಡು ಭಕ್ತಿಯಲಿ ತಿರುಪತಿ ಕ್ಷೇತ್ರ ಚರಿಸಿ ಕಷ್ಟವ ಸಹಿಸಿ ಶ್ರೀ ಹರಿಗೆ ಅರ್ಪಿಸಿ 21 ಕಡುಕೃಪೆಯಿಂದಂದು ಕಣ್ಣನ್ನೆ ಕೊಟ್ಟಂತ ಮೃಡಪಿತ ಘಟಿಕಾಚಲೇಶನ್ನ ಕೂಡಿ ಕಣ್ತುಂಬ ನೋಡಿ ತನುವನೀಡಾಡಿ22 ಅಂತರಂಗದ ಬಿಂಬ ಸರ್ವಾಂತರ್ಯಾಮಿ ಎಂ ತೆಂಬಂಥ ಚಿಂತನೆ ಸಂತತಗೈದೆ ಅಭಿಮಾನ ತೊರೆದೆ ದ್ವಂದ್ವ ಸಹಿಸಿದೆ 23 ವ್ರತನೇಮ ಜಪತಪ ಸತತದಿಗೈಯ್ಯುತ್ತ ಕ್ಷಿತಿವಾರ್ತೆಗೆಳಸಾದೆ ಮನವನ್ನೆ ಸೆಳೆದು ಹರಿಪಾದಕ್ಕೆರದು ಹಿತವನ್ನೆ ಮರೆದು 24 ಭಾಗವತಾದಿ ಸಚ್ಛಾಶ್ತ್ರ ಶ್ರವಣಗೈದು ಜಾಗ್ರತಳಾದಿ ಭೂಸುರರ ಸೇವೆಯಲಿ ಸೂಕ್ಷ್ಮಧರ್ಮದಲಿ ಪುಣ್ಯಗಳಿಸುತಲಿ 25 ಸತತಬಿಂಬಕ್ರಿಯ ವ್ರತವಂದೆ ಕೈಕೊಂಡು ಜತನದಿ ಮರೆಯದೆ ಪ್ರತಿಕಾರ್ಯದಲ್ಲಿ ಅರ್ಪಿಸಿ ಹರಿಯಲ್ಲಿ ಇದ್ದೆ ಮೋದದಲಿ 26 ಮುಖ್ಯಪ್ರಾಣನ ದಯ ಮುಖ್ಯಮಾಡುತ ಇನ್ನು ಅಕ್ಕರೆ ಭಕ್ತಿಯ ತೋರಿದೆ ನೀನು ಬೆನ್ನು ಬಿಡದವನು ನಿನ್ನ ಸಲಹಿದನು 27 ಭಾರತಿಪತಿ ಮುಖ್ಯಪ್ರಾಣಾಂತರ್ಗತನೆಂಬ ವಾರುತಿ ಇಲ್ಲದ ವಚನವೆ ಇಲ್ಲಾ ನಿನ್ನ ಈ ಸೊಲ್ಲ ಮರೆಯಲೊಶವಲ್ಲ 28 ಶ್ರೀ ರಾಮಚಂದ್ರನ ಆರಾಧನೆಯಗೈದು ಸಾರತತ್ವವ ತಿಳಿದು ಸಾಧಿಸಿ ಪಥವ ಸಹಸ್ರಾರು ಜಪವ ಗೈದೆ ತಪವ 29 ನೀ ಹಾಡಿದ ಸ್ತೋತ್ರ ನಿನ್ನ ಸನ್ಮಾರ್ಗವ ನನ್ನೆಯಿಂದಲಿ ಎರೆದೆ ಹೆಣ್ಣು ಮಕ್ಕಳಿಗೆ ಸ್ಮರಿಸುವರೀಗೆ ಸತ್ಕೀರ್ತಿಯದಾಗೆ 30 ಹರಿ ಗುರು ವರತತ್ವ ದಿವಿಜರಭಿಮಾನಿಗಳ ನಿರುತದಿ ಚಿಂತಿಸಿ ಸಾಧನಗೈದೆ ಕಾಲವ ಕಳೆದೆ ಹರಿಪಾದಕ್ಕೆರೆದೆÀ 31 ಬಿಂಬಾನು ಸಂಧಾನ ಚತುರಳಾಗಿ ನೀನು ಸಂಭ್ರಮದಿಂದ ಶ್ರೀ ಮಧ್ವಶಾಸ್ತ್ರದಲಿ ಮನಸ ನೀಡುತಲಿ ಸುಖ ಸುರಿಯಲಿ 32 ಒದ್ದು ತಾಪತ್ರಯ ಸದ್ಗುರು ಕೃಪೆ ಪೊಂದಿ ಗೆದ್ದೆ ನೀ ಸುಲಭದಿ ಭವದ ಬಂಧನವ ಪಡೆದೆ ಹರಿ ದಯವ ಕೊಟ್ಟಿತೆ ಮುದವ 33 ಪೇಳಲೋಶವೆ ಹೇ ದಯಾಳು ನಿನ್ನಯ ಗುಣ ಬಾಳಿದೆ ಧರೆಯೊಳು ತೊಂಬತ್ತೈದೊರುಷ ವೃದ್ಧಾಪ್ಯದೋಷ ನಿನಗಿಲ್ಲ ಲೇಶ 34 ಇಂದ್ರಿಯಂಗಳು ಎಲ್ಲ ಒಂದು ಕುಗ್ಗದೆ ಒಬ್ಬ ರಿಂದಲು ಸೇವೆಯ ಕೊಳದೆ ಲವಲವಿಕೆ ಯಿಂದಿರುವ ಬಯಕೆ ಸಲಿಸೀತೆ ಮನಕೆ 35 ಕಿರಿಯ ಮೊಮ್ಮೊಗ ರಮಾಕಾಂತನಲ್ಲಿರುತಿರೆ ಕರೆಹೇಳಿ ಕಳುಹಿದ ಹರಿ ತನ್ನ ಪುರಕೆ ಕ್ಲಿಪ್ತಕಾಲಕ್ಕೆ ಆಗೆ ಮನವರಿಕೆ 36 ತೊರೆದೈದು ದಿನ ಅನ್ನ ಹರಿಧ್ಯಾನಂಗತಳಾಗಿ ವರ ಗಂಗೆ ವದನದಿ ಪ್ರಾಶನಗೈದು ಅಭಿಮಾನ ತೊರೆದು ಭ್ರಾಂತಿಯ ಮೆರೆದು 37 ವರಹಜೆ ತುಂಗ ತೀರದಿ ಪ್ರಾಣನಾಥನ ಚರಣಮೂಲದಿ ಶಿವಮೊಗ್ಗ ಕ್ಷೇತ್ರದಲಿ ಹರಿಸ್ಮರಣೆಯಲಿ ಪ್ರಾಣ ಸಲಿಸುತಲಿ 38 ಸ್ವಭಾನುವತ್ಸರ ಭಾದ್ರಪದ ಬಹುಳ ಇದ್ದ ದಶಮಿ ದಿನ ಗುರುವಾರದಲ್ಲಿ ಮಧ್ಯರಾತ್ರಿಯಲಿ ತನು ತೊರೆದಿಲ್ಲಿ 39 ಕೇಶವದೂತರು ಮೀಸಲಿಂದಲಿ ನಿನ್ನ ಘಾಸಿಗೊಳಿಸದೆ ಕರೆದೊಯ್ದರೇನಮ್ಮ ಪೇಳೆ ಎನ್ನಮ್ಮ ಎಲ್ಲಿ ಪೋದ್ಯಮ್ಮ 40 ಹೆತ್ತಮ್ಮಗಿಂತಲೂ ಹೆಚ್ಚಾಗಿ ನಮ್ಮನ್ನು ಅರ್ಥಿಯಿಂ ಬೆಳೆಸಿದೆ ಅಭಿಮಾನದಿಂದ ಅನುರಾಗದಿಂದ ಬಹುಮಾನದಿಂದ 41 ಮೊಮಕ್ಕಳೆಂದರೆ ಬಹು ಪ್ರೀತಿ ನಿನಗಲ್ಲೆ ಒಮ್ಮೆ ನಾಲ್ವರು ಬಂದು ಇರುವೆವು ನಾವು ಆಲ್ಪರಿಯುವೆವು ಅಗಲಿ ಸೈರಿಸೆವು 42 ಅರ್ಥಿಲಿ ರಮಾಕಾಂತ ವಿಠಲಾಂಕಿತ ಕೃಷ್ಣ ಮೂರ್ತಿಯು ಪುತ್ರಗಿಂತಧಿಕದಿ ನಿನ್ನ ಅಂತ್ಯಕ್ರಿಯವನ್ನ ಮಾಡಿದ ಧನ್ಯ 43 ಶ್ರದ್ಧೆಯಿಂದಗ್ರಜನಿಂದ ಕೂಡುತ ನಿನ್ನ ಶುದ್ಧಭಾವದಿಗೈದ ಅಂತ್ಯಸೇವೆಯನು ಸ್ವೀಕರಿಸಿ ನೀನು ಹರಸಿ ಹಿತವನ್ನು 44 ತಿಳಿದು ತಿಳಿಯದೆ ನಾನು ಗೈದಪರಾಧವ ನಲವಿಂದ ಕ್ಷಮಿಸಿ ನಮ್ಮನು ಮನ್ನಿಸಿದೆ ಸಹನವ ತಳದೆ ಬಹು ಪ್ರೀತಿಗೈದೆ 45 ಎಲ್ಲ ಪರಿಯಲಿ ನಮ್ಮ ಕ್ಷಮಿಸಿ ಕಾಪಾಡಮ್ಮ ಬಲ್ಲಿದಳು ನೀನು ಆಶೀರ್ವದಿಸುವುದು ಸುಖವ ತೋರುವುದು ಕೃಪೆಯ ಮಾಡುವುದು 46 ಅಂಜನೆಕಂದ ನಿನ್ನವನೆಂಬ ಅಭಿಮಾನ ರಂಜಿಸೆ ಸಹಜದಿ ನಿನ್ನೊಳು ಮಾತೆ ಜಗದಿ ವಿಖ್ಯಾತೆ ಹರಿಗತಿಪ್ರೀತೆ 47 ಪತಿಗುರು ಪವನ ಹೃದ್ಗತಮೂರ್ತಿ ಚಿಂತನ ರತಳೆ ನಿನ್ನಯ ಚರಿತೆ ಪೇಳ್ದೆ ತಿಳಿದನಿತು ತಪ್ಪನು ಮರೆತು ಲಾಲಿಸು ಮಾತು 48 ಗೋಪಾಲಕೃಷ್ಣವಿಠಲನ ಸದ್ಭಕ್ತಳೆ ಶ್ರೀ ಪಾದಕ್ಕೆರಗಿ ನಾ ಜಯವ ಪಾಡುವೆನು ಧನ್ಯಳೇ ನೀನು ಮಾನ್ಯಳೆ ನೀನು 49
--------------
ಅಂಬಾಬಾಯಿ
ಸೀತೆ ಸದ್ಗುಣ ಗಣಗಳ ವ್ರಾತೇ ಪರಿಪಾಲಿಸು ಮಾತೇ ಪ ವಾತ ಜನನಿ ನಿರ್ಧೂತ ಕಲ್ಮಷೇ ಅ.ಪ. ನೀರೋಳು ಓಲ್ಯಾಡುತ ಹರಿ ಬರಲೂ | ವೇದಾಭಿಧೆ ಇರಲೂವಾರಿಜಾಕ್ಷನು ಭಾರವನ್ಹೊರಲೂ | ವೇದವತಿ ನೀನಿರಲುಭೂರಿ ವರಹ ರೂಪವ ಕೊಳ್ಳಲು | ಧಾತ್ರಿ ರೂಪಿ ಇರಲುಸಾರಸಾಕ್ಷಿ ನೀ ಲಕುಮಿ ರೂಪದಲಿ | ನಾರಸಿಂಹನನ ಆರಾಧಿಸಿದೇ 1 ಬಲಿಯನ್ನು ವಂಚಿಸಿ ಹರಿ ಬಂದೂ | ಸುಖಾಭಿಧೆಯಂದೂತಲೆಯ ಗಡಿಕಾನು ಅವನೆಂದು | ಹರಿಣಿಯಾದೆ ಅಂದೂತಲೆ ಹತ್ತರವನ ಅಳಿಯಲು ಬಂದು | ಜನಕಾತ್ಮಜೆ ಅಂದೂಕಳುವಿನಿಂದಪಾಲ್ ಬೆಣ್ಣೆಯಮೆಲ್ಲುವ |ಗೊಲ್ಲನ ವಲಿಸಿದಿ ಚೆಲ್ವ ರುಕ್ಮಣೀ 2 ತ್ರಿಪುರರ ವ್ರತವನಳಿದವಗೇ | ವಲ್ಲಭೆ ದೇವತಿಯಾಗೇಸುಫಲಾ ರಾವುತನಾದವನಿಗೇ | ರಾಣಿ ಪ್ರಭಾ ಆಗೇವಿಪುಳ ರೂಪಗಳ ತೋರ್ದವಗೇ | ವಿಪುಳ ರೂಪಿಯಾಗೇಚಪಲಾಕ್ಷಿಯೆ ಗುರು ಗೋವಿಂದ ವಿಠಲನ | ಸಫಲಗೈಸು ಮಮ ಹೃತ್ಕಮಲದಲಿ 3
--------------
ಗುರುಗೋವಿಂದವಿಠಲರು
ಸುಖವನು ಸರ್ವದ ಬಯಸಲದೇನೆಂದು ನೀ ತಿಳಿದಿಹೆಯಣ್ಣಾ ಪ ಸುಖ ಬೇಕಾದರದರ ಗೂಢದ ನೆಲೆಯ ನೀ ಕಂಡ್ಹಿಡಿಯಣ್ಣಾ ಅ.ಪ. ಸಕ್ಕರೆ ತುಪ್ಪ ಹಾಲ್ಮೊಸರಿನೂಟವು ಸುಖವಹುದೇನಣ್ಣ ಬೊಕ್ಕಸ ಬರಿದಾಗದಲೆ ಸದಾ ರೊಕ್ಕ ತುಂಬಿಹುದೇನಣ್ಣ ಅಕ್ಕಪಕ್ಕದ ರೂಪವತಿಯರ ಕಣ್ಣೋಟದೊಳೇನಿದೆಯಣ್ಣ ಚಿಕ್ಕತನದ ಚಲ್ಲಾಟಗಳೋ ನಿರತನಾಗಿಹುದೇನಣ್ಣ 1 ಚರ ಸ್ಥಿರ ಸ್ವತ್ತುಗಳ ನೀ ಗಳಿಸಿ ಧನಿಕನೆನಿಸುವುದೇನಣ್ಣ ದೊರೆತನ ಬಯಸಿ ನೀ ದರ್ಪವ ತೋರುತ ಬಾಳುವುದೇನಣ್ಣ ಪರಿಪರಿ ಬಣ್ಣದ ಪಾವುಡ ಧರಿಸಿ ನೀ ಮೆರೆಯುವುದೇನಣ್ಣ ಕರಿ ತುರಗ ರಥ ಪಲ್ಲಕ್ಕಿಯಲಿ ಕುಳಿತು ಚರಿಸುವುದೇನಣ್ಣ 2 ಪರಿ ಸುಖಗಳೆಲ್ಲವು ತಪ್ಪಲು ನೀನಳುವಿಯೇತಕ್ಕಣ್ಣ ತಾಪತ್ರಯಂಗಳಂಕುರಿಸಲಿಕವೆಲ್ಲವು ಬೀಜಗಳೆ ಅಣ್ಣ ಪಾಪ ರಾಸಿ ಬೆಳೆಯಲಿವೆ ಮೂಲ ಕಾರಣವೆಂದರಿಯಣ್ಣ ಆಪತ್ತುಗಳು ಬಿಡದೆ ಬಂದಡರಿ ಬಹುತಾಪಗೊಳಿಪವಣ್ಣ3 ಈ ಸುಖಗಳೆಲ್ಲವು ಬಹುಕಾಲವಿರವು ಶಾಶ್ವತವಲ್ಲಣ್ಣ ಆಸೆಯ ತೋರಿಸಿ ನಿನ್ನನು ಬಹುಮೋಸಗೊಳಿಪವು ಕೇಳಣ್ಣ ಹೇಸಿಕೆಗಿಂತವು ಕಡೆಯಾಗಿಹವೆಂದು ದೃಢದಿ ನಂಬಿರಣ್ಣ ಸಾಸಿರ ನಾಮದ ರಮೇಶನ ಸ್ಮರಿಸಲು ಬೇಸರ ಬೇಡಣ್ಣ 4 ಕಟ್ಟಿಕೊಂಡ್ಹೋದ ಬುತ್ತಿಯು ತಾನೆಷ್ಟು ದಿನವಿದ್ದೀತಣ್ಣ ಎಷ್ಟು ಹೇಳಿದರೇನಿ ಫಲವು ನಿನ್ನಲಿ ನೀನೆ ತಿಳಿಯಣ್ಣ ಗುಟ್ಟಿನಲಿ ಮನಮುಟ್ಟಿ ಯೋಚಿಸಲದುವೆ ಬಯಲಾಗುವುದಣ್ಣ ದಿಟ್ಟ ರಂಗೇಶವಿಠಲನ ನಾಮವೊಂದೇ ನಿಜ ಸುಖವಣ್ಣ 5
--------------
ರಂಗೇಶವಿಠಲದಾಸರು
ಸುತೀರ್ಥರು ಸಾರಲೆನ್ನಳವಲ್ಲ ಗುಣಶಾಲಿ ಸುರಪ ಸುತೀರ್ಥ ಯತಿವರ ಪ ತವ ಸಂಚಾರ ಚರಣ ಸಮೀರಯುತ ವಿಸ್ತಾರ ಮಹಿಮೆಯ ಅ.ಪ. ಇಂದು ದಾರಿಯಲಿಂದ ಬರುತಿರೆ ಸುಂದರಂದಣವೇರಿ ಯದರಿಗೆ ಬಂದು ಶರಣರ ಸೇವೆಗೊಂಡು ಶೃಂಗಾರ ಕವಚವನಿತ್ತು ನವಸುಖ ಮಾರಮರ್ಮನ ಬಯಸಿ ದ್ಯುತಿವರನಂಘ್ರಿಕಮಲವ 1 ಧನ್ಯನಾದೆನೊ ನಿನ್ನ ನೋಡಿ ಮಾನ್ಯನಾಗುವೆ ಮೌನಿ ಜನರೊಳು ಗಾನ ಮಾಡುವೆ ಜ್ಞಾನಗಯ್ಯನ ಧ್ಯಾನ ಮಾಡಭಿಮಾನ ತೊರೆಯುತ ನಂಬಿ ನಿನ್ನಯ 2 ಸಂಗಮಾಡಿಸು ಡಿಂಗಿಯರ ಕಡೆ ಕಂಗಳಿಂಗದಲಿ ಶೋಭಿಪಡುವ ಸುಶಾಮಗೊರಳನ ಪೊಡದ ತಂದೆವರದಗೋಪಾಲವಿಠಲನ ಪ್ರೇಮಗುರುಮಣ 3
--------------
ತಂದೆವರದಗೋಪಾಲವಿಠಲರು
ಸುಂದರ ಕಾಂಡ ರಾಮಾಯಣ ಸಿರಿ ಸಿರಿ ಹನುಮನಾ ||ಮೆರೆವ ಸಚ್ಚರಿತೆ ಮಮ | ಗುರುವೆ ನುಡಿಸೀದಷ್ಟುಒರೆವೆ ಕೇಳ್ಪುದು ಸಜ್ಜನಾ ಪ ಗೃಹ ಮೇಧಿ ಇರುವ ಬಗೆ | ಬಹು ಪರೀಯಲಿ ತೋರಿಗುಹ ವನಂಗಳನೆ ಚರಿಸೀ |ಗೃಹಿಣಿಯನು ಕಾಣದಲೆ | ಬಹು ನಟಸಿ ನರರಂತೆಮಹ ಮಹಿಮ ರಾಮ ಬರಲೂ 1 ಪತಿ ದಶರಥನ | ಸುತನ ಕಂಡೆರಗಿ ರವಿಸುತಗೆ ರಾಜ್ಯವನೆ ಕೊಡಿಸೀ 2 ರಾಮನಾಣತಿ ಪೊತ್ತು | ಭೂಮಿಜೆಯ ವಾರ್ತೆಯನುನೇಮದಲಿ ತರುವೆ ನೆನುತಾ ||ಆ ಮಹಾ ಶರಧಿಯನು | ಧೀಮಂತ ಲಂಘಿಸುತಭೂಮಿಜೆಯ ಕಂಡು ಎರಗೀ 3 ಪತಿ | ರಾಮನ್ನ ಕಂಡ ಪರಿಆಮೋದದಲ್ಲಿರುತಿರೇ 4 ಶ್ರೀ ಲೋಲ ರಾಮನಿಗೆ | ಆಳಾಗಿ ಇರಲೊಂದುವಾಲುಳ್ಳ ಕಪಿಯು ಬಂದೂ ||ಕೇಳುವರು ಇಲ್ಲದಲೆ | ಪೋಲಾಗಿ ಹೋಯ್ತೆಂಬಕೀಳು ನುಡಿಗವಕಾಶ ಕೊಡದೇ 5 ವಂದೆರಡು ಹಣ್ಣಾನು | ತಿಂದ್ಹೋಗುವೇನೆಂದುಇಂದೀವರಾಕ್ಷಿಯ ಬೇಡುತಾ ||ನಂದೀಸಿ ಅಶೋಕ | ನಂದನ ವನವ ಮದಸಿಂಧೂರ ನಂತೆಸಗಿದೇ 6 ಕೋಟ್ಯಶೀತಿಯು ನಿ | ಶಾಟ ಯೂಥಪ ಸಹಸಾಷ್ಟ ಕಾಯುತ ಮುಖ್ಯರಾ ||ಖೇಟ ರಾವಣ ಸೇನೆ | ಕೂಟ ಮೂರರಲೊಂದುರೋಟಿಸುತ ನೀ ಮೆರೆದೆಯೋ 7 ಅಕ್ಷೋಹ್ಣಿ ಬಲ ಸಹಿತ | ರಾಕ್ಷಸಾಧಿಪ ಸುತನುಅಕ್ಷಯ್ಯ ಕುವರ ಬರಲೂ ||ಪಕ್ಷೀಂದ್ರ ತೆರ ಪಿಡಿದು | ಈ ಕ್ಷಿತಿಗೆ ಅಪ್ಪಳಿಸೆತಕ್ಷಣದಲಸು ನೀಗಿದಾ 8 ಮಂದಜಾಸನ ವರದಿ | ಇಂದ್ರಜಿತು ಮದವೇರಿಬಂದೆಸೆಯೆ ಬ್ರಹ್ಮಾಸ್ತ್ರವಾ ||ಛಂದದಲ್ಯೋಚಿಸುತ | ಬಂಧನಕೆ ನೀನಾಗಿನಂದದ ಲ್ವೊಳಗಾದೆಯೋ 9 ತೆತ್ತೀಸ ಕೋಟಿ ದೇ | ವತ್ತೀಗಳಿಗೆಲ್ಲಾಉತ್ತೂಮನಾದ ನೀನೂ ||ಸುತ್ತೀಸಿ ಬಾಲವನು | ಹತ್ತೂತಲೆಯವನನೆತ್ತೀಯ ಮೇಲ್ ಕುಳಿತೆಯೋ 10 ನಾರೀಯ ಚೋರ ನಿ | ನ್ನಾರೆಂದು ಕೇಳಾಲುಮಾರುತ್ತರವಿತ್ತು ಜರಿದೇ ||ಮಾರೀಚ ಮೊದಲಾದ | ನೂರಾರು ರಕ್ಕಸರದೂರೋಡಿಸೀದವನ ದೂತಾ 11 ಕೋಟಲೆಗಳ ಕೊಟ್ಟ | ತಾಟಕಾದೀ ದೈತ್ಯಕೂಟಗಳ ಸಂಹರಿಸಿದಾ ||ಕೂಟಸ್ಥ ಲೋಕಗಳ | ನೋಟದಲಿ ದಹಿಪ ವೈರಾಟ ಪ್ರಭುವಿನಾಳೂ 12 ಕೇಳೆಲೋ ರಾವಣನೇ ತಿಳಿಯಯಾ ನೀನು ನಿನ್‍ಹುಳುವೆಂದು ನಿಜ ಬಾಲದೀ |ಸಿಲುಕಿಸಿ ಜಲನಿಧಿ | ನಾಲಕ್ಕು ಮುಳುಗಿದವಾಲಿ ಪೆಸರನು ಮರೆತೆಯಾ 13 ತಾಲಮರಗಳ ಶೀಳಿ | ವಾಲೀಯನೆ ಕೊಂದರ್ಕಬಾಲಗೇ ರಾಜ್ಯ ಕೊಡಿಸೀ ||ಕೋಲಿನಿಂ ನಿಮ್ಮೆಲ್ಲ | ಹೂಳುವ ರಾಮನಆಳು ನಾನೆಂದು ತಿಳಿಯೋ 14 ರಕ್ಕಸ ಪತಿಯಾಜ್ಞೆ | ಇಕ್ಕಿ ತಲೆಯಾ ಮೇಲೆರಕ್ಕಸರೆಲ್ಲ ತವ ಪುಚ್ಛ ||ಕಿಕ್ಕಲೂ ಉರಿ ಲಂಕೆ | ಪೊಕ್ಕು ಪುರವನೆ ದಹಿಸಿಅಕ್ಕರದಿ ವನದಿ ಹಾರೀ 15 ಕಾಯ ಸಹಿತರ ನೋಡಿಪ್ರೀಯ ದ್ವಾರ್ತೆಯ ನರುಹಲೂ ||ಗೇಯ ಹನುಮನ ತುತಿಸಿ || ರಾಯಗೆರಗುವ ವನದಿಕಾಯ ಕುಪ್ಪಳಿಸುತಿರಲೂ 16 ಕಾತುರತೆಯ ಕಪಿ | ಜಾತೆಗಳ ಸಂತೈಸಿಪ್ರೀತಿಯಿಂ ಮಧುವನವನಳಿದ ||ಸೀತೆಯನು ಕಂಡಂಥ | ವಾರ್ತೆಯನು ಪೇಳೆ ರಘುಜಾತ ನಿನ್ನನು | ಅಪ್ಪಿದಾ 17 ಎರಡೇಳು ಭುವನದೊಳು | ಇರುವರೇ ನಿನ್ಹೊರತುಹರಿಗೆ ಪ್ರೀತ್ಯಾಸ್ಪದನು ಎನಿಸೀ ||ಮೆರೆವ ಭಕ್ತಾಗ್ರಣಿಯೆ | ಎರಗುವೆನು ತ್ವತ್ವದಕೆಹರಿಭಕ್ತಿ ಕರುಣಿಸಯ್ಯಾ 18 ಉದಯಕಾಲದಲೆದ್ದು | ಮುದದಿಂದಲೀ ಪದವಸದಯ ಹೃದಯರು ಪಠಿಸಲೂ ||ಬದಿಗ ಗುರು ಗೋವಿಂದ | ವಿಠಲನೋಳ್ ಸದ್ಭಕ್ತಿವದಗಿ ಪಾಲಿಪ ಹನುಮನೂ 19
--------------
ಗುರುಗೋವಿಂದವಿಠಲರು
ಸುಬ್ರಹ್ಮಣ್ಯ ಸ್ವಾಮಿ ತೇ ನೌಮಿ ಶರಣಾಗತರ್ಗೆ ನಿರ್ಭಯವ ಪಾಲಿಸು ಪ್ರೇಮಿಪ. ಅಭ್ರವಾಹನಾದಿದೇವ ಸಭ್ಯ ಸಂಭಾವಿತ ಜಗ- ದಭ್ಯುದಯ ತೇಜೋಮಯ ಕರ್ಬುರಾಂತಕ ನಿಶ್ಯೋಕಅ.ಪ. ಭಾವಭಕ್ತಿಭಾಗ್ಯಶೂನ್ಯರು ನಿನ್ನಯ ಪದ ಸೇವೆಗಾಲಸ್ಯವ ಮಾಳ್ಪರು ಕೇವಲ ದುರ್ಜನರು ಬಾರರು ದೇವದೇವ ನಿನ್ನ ಕರು- ಣಾವಲಂಬಿಗಳನೆಲ್ಲ ಕಾವನೆ ಮಹಾನುಭಾವನೆ 1 ಚಂದ್ರಸೂರ್ಯರಿರುವ ತನಕ ಸ್ಥಾನಿಕ ವಿಪ್ರ- ರಿಂದ ಪೂಜೆಗೊಳೈ ಷಣ್ಮುಖ ವಂದನೀಯ ಪಾರ್ವತಿಯ ನಂದನ ನಳಿನಾಯತಾಕ್ಷ ಇಂದುಶೇಖರಕುಮಾರ ಸ್ಕಂದನೆ ನಿತ್ಯಾನಂದನೆ 2 ಪಾವಂಜಾಖ್ಯಸುಕ್ಷೇತ್ರವಾಸ ಪೊರೆಯೊ ಪರಮೇಶ ಕೇವಲ ವಿಜ್ಞಾನಪ್ರಕಾಶ ಭಾವಜೋಪಮ ಲಾವಣ್ಯ ಕೋವಿದಾಗ್ರಗಣ್ಯ ಮಹಾ- ದೇವ ಲಕ್ಷ್ಮೀನಾರಾಯಣನ ಸೇವಕ ಬುದ್ಧಿದಾಯಕ 3
--------------
ತುಪಾಕಿ ವೆಂಕಟರಮಣಾಚಾರ್ಯ
ಸುರಸತಿಯರ ಆರತಿ-ಶೋಭನೆಕಂ|| ಹರೆದುದು ಜನತತಿ ಶ್ರೀಹರಿವರಶಯ್ಯಾಸನದಲಿಪ್ಪ ಸಮಯದಲೆನ್ನಾಪರಿಯನು ಬಿನ್ನವಿಸುವೆ ನಾಂಸಿರಿಚರಣವನೊತ್ತುತೊತ್ತುತೆಮ್ಮರಸನಿಗೇಆದಿತ್ಯವಾರದರ್ಚನೆಯಾದುದು ನಿನ್ನೊಲವಿನಿಂದ ಬಿನ್ನಹವಿದ ನೀನಾದರಿಸಿ ಸಲಹು ತಿರುಪತಿಭೂಧರ ಶುಭದಿವ್ಯಸದನ ವೆಂಕಟರಮಣಾಸಿರಿಧರಣಿಯರೊಡೆವೆರಸಿ ಹರುಷದಿ ವೆಂಕಟಪತಿಯುಇರೆ ಹಂಸತಲ್ಪದೆಡೆಯಲ್ಲಿ ಸುರಸತಿಯರುಕುರುಜಿನಾರತಿಯಾ ಬೆಳಗಿದರು ಶೋಭನವೆ 1ವೇದವನುದ್ಧರಿಸಿದಗೆ ಭೂಧರವನು ತಾಳ್ದವಗೆಮೇದಿನಿಯನೆತ್ತಿ ನಿಲಿಸಿದಗೆ ನಿಲಿಸಿದ ವೆಂಕಟಪತಿಗೆಮೋದದಲಾರತಿಯಾ ಬೆಳಗಿದರು ಶೋಭನವೆ 2ನರಹರಿ ರೂಪಾದವಗೆ ಧರಣಿಯನಳೆದಾ ಹರಿಗೆದುರುಳ ಕ್ಷತ್ರಿಯರಾ ತರಿದವಗೆ ತರಿದಾ ವೆಂಕಟಪತಿಗೆತರುಣಿಯರಾರತಿಯಾ ಬೆಳಗಿದರು ಶೋಭನವೆ 3ಜಾನಕಿಯನು ವರಿಸಿದವಗೆ ಧೇನುಕನನು ಬಡಿದವಗೆಮಾನಿನಿಯರ ವ್ರತವನಳಿದವಗೆ ಅಳಿದಾ ವೆಂಕಟಪತಿಗೆಜಾಣೆಯರಾರತಿಯಾ ಬೆಳಗಿದರು ಶೋಭನವೆ 4ತುರುಗವನೇರಿದ ಹರಿಗೆ ಶರಣಾಗತವತ್ಸಲಗೆತಿರುಪತಿಯ ಕ್ಷೇತ್ರದರಸಗೆ ಅರಸ ವೆಂಕಟಪತಿಗೆಪರಿಪರಿಯಾರತಿಯಾ ಬೆಳಗಿದರು ಶೋಭನವೆ 5ಓಂ ಬರ್ಹಿಬರ್ಹಾವತಂಸಕಾಯ ನಮಃ
--------------
ತಿಮ್ಮಪ್ಪದಾಸರು
ಸುಲಲಿತ ಮಧುಕರ ಕೊಳಲನೂದುವುದನು ಕಲಿಸಿದರಾರೇ ನಳಿನಮುಖೀ ರಾಧೇ ಪ ಬಲಿಸಂಹಾರನು ಲೋಕದ ನಾರಿಯ ರಲಸದೆ ಗಾನವ ಕಲಿಸಿದನೇನೇ ಅ.ಪ ಕರು ತುರುಗಳ ಬಳಿ ಸರಸವನಾಡುತ ಮುರಳಿಯನೂದುವ ಸರಸಿಜನಾಭ ಕರೆಕರೆದು ನಿನ್ನ ಬೆರಳಿಗುಂಗುರವಿಟ್ಟು ಸ್ವರಗಳ ಬೋಧಿಸಿ ನಲಿನಲಿದಿಹನೇನೇ 1 ಬೃಂದಾವನದಲಿ ನಂದಕುಮಾರನ ವಂದಿಸೆ ನಾರದ ಬಂದುಹಾಡಿದನೇ ಅಂದದ ಕಲಿಕೆಯ ತುಂಬುರ ನಿನಗಾ ನಂದದಿ ಗಾನವ ಕಲಿಸಿದನೇನೆ 2 ಅಂಗಜಪಿತನಿಗೆ ಮಂಗಳಗಾನವ ಅಂಗನೆ ಶಾರದೆ ಪಾಡಿದಳೇನೇ ಮಾಂಗಿರಿರಂಗ ಮಾತಂಗವರದನಂತ ರಂಗದರಾಣಿ ನೀ ಕಲಿಯೆಂದನೇನೇ 3
--------------
ಅಸೂರಿ ರಾಮಸ್ವಾಮಿಅಯ್ಯಂಗಾರ್
ಸೋತುಹೋಗಣ್ಣ ಮಾತುಬಂದಲ್ಲಿ ಜಾಣನಾಗಿ ಸೋತುಹೋಗಣ್ಣ ಮಾತುಬಂದಲ್ಲಿ ಪ ಸೋತುಹೋಗದೆ ಮಾತುಮಾತಿಗೆ ವಾದಿಸಲ್ಕೆ ಘಾತಕತನದ್ವಿಧಿಯು ಬಂದು ಆತುಕೊಂಡು ಕೂತುಕೊಳ್ವುದು ಅ.ಪ ಸೋತೆನೆನ್ನಲು ನಾಚಬೇಡಣ್ಣ ದೇವರು ಕೊಟ್ಟಿಹ್ಯ ಖ್ಯಾತಿಯೇನು ಹೋಗೋದಿಲ್ಲಣ್ಣ ಸುಳ್ಳಲ್ಲವಣ್ಣ ಸೋತೆನೆಂಬುದು ಜಯದ ಮಾತಣ್ಣ ಸತ್ಯ ತಿಳಿಯಣ್ಣ ನೀತಿಗಡಕರ ಮಾತಿನ ತಳ್ಳಿಗೋತ ಕುಣಿಯೊಳೆಳೆವ ಬಳ್ಳ್ಯೆಂದು ಮಾತನಾಡದೆ ಸುಮ್ಮನ್ಹೋಗಲು ನೀತಿವಂತರು ಮೆಚ್ಚುತಾರ 1 ದುಡುಕುಮಾತಿಗೆ ಮಿಡುಕಬೇಡಣ್ಣ ಸತ್ಯದ್ಹೇಳುವ ದೃಢತರ್ವಚನದ ಅಡಕು ತಿಳಿಯಣ್ಣ ಪಡಕೊ ಸುಖವಣ್ಣ ನೀ ತೊಡರಿಕೊಂಡರೆ ತಪ್ಪದು ಕಡೆಯತನಕ 2 ಸೋತೆನೆನದ್ಹತ್ತುವದನಂದೇನಾಯ್ತು ಸೋತು ಓಡಿದ ನೀತಿವಂತ ವಿಭೀಷಣಂದೇನಾಯ್ತು ಮತ್ತು ನಳರಾಜ ಸೋತ ರಾಜ್ಯ ಭಂಡಾರೆಲ್ಲ ಮುಳುಗಿತು ತಿಳಿ ನೀತಿ ಅರಿತು ಮಾತುಮಾತಿಗ್ವಾದಿಸಿ ಕುಲಘಾತಕ್ಕಾದನು ಕೌರವೇಂದ್ರನು ಸೋತಜನರಭಿಮಾನಿ ಶ್ರೀರಾಮ 3
--------------
ರಾಮದಾಸರು
ಸ್ಮರಿಸಿ ಸುಖಿಸೊ ನರನೆ - ಗುರುರಾಯರನನುದಿನ ಪ ಶರಣು ಜನರ‌ಘ ತರಿದು ಕರುಣದಿ ಚರಣ ಸರಸಿಜ ಹರುಷದಿಂದಲಿ ಅ.ಪ ನಳಿನ ಬಾಂಧವ ಕುಲದಿ ಅವತಾರ ಮಾಡಿದೆ ಇಳಿಜರಮಣನಾಜ್ಞದಿ ಕಲಿಯುಗದಿ ದ್ವಿಜರನು ಸಲಹಲೋಸುಗ ಜಗದಿ ಜನಿಸಿ ಗುರುಗಳ || ವಲಿಮೆಯನು ತಾಪಡೆದು ಕೊರಳಲಿ ತುಲಸಿ ಮಾಲೆಯ ಧರಿಸಿ ಹರಿಯನು ವಲಿಸಿ ಥಳ ಥಳ ಪೊಳೆವವ ಸ್ತಂಬದಿ ಕುಳಿತ ಶ್ರೀರಂಗವಲಿದ ದಾಸರ 1 ಮಾನಿನಿಯಳ ಮಾನರಕ್ಷಿಸಿದೆ ಶ್ರೀ ಪವ ಮಾನನಯ್ಯನ ಕರುಣವನು ಪಡೆದು ಸ್ತುತಿಸಿದಿ ವನು ಪಾಲಿಸಿ ಗುರು ಭವ ಕಾನನಕೆ ಕೃಶಾನುವೆನಿಸಿದ ಮಾನವಿ ಪುರ ನಿಲಯರನು ಅನುಮಾನವಿಲ್ಲದೆ ಮಾನಸದಿನೀ 2 ಶ್ರೀಮಧ್ವಾಚಾರ್ಯ ಸುಮತ ಶರಧಿಗೆ ಹಿಮ ಧಾಮನೆನಿಸಿ ನಿರುತ ಸೇವಿಪರಿಗೆ ಕಾಮಿತಾರ್ಥಗಳಿಗೆ ತ್ವರಿತ ನೀಡಿ ಶಿರಿವರ ಶಾಮಸುಂದರ ಸ್ವಾಮಿ ಪರನೆಂಬೊ | ಪ್ರೇಮದಿಂದಲಿ ಹರಿಕಥಾಮೃತ ಈ ಮಹಾಸುಗ್ರಂಥ ರಚಿಸಿದ ಹೇಮ ಕಶ್ಯಪ ತನಯರನುಜರ 3
--------------
ಶಾಮಸುಂದರ ವಿಠಲ
ಸ್ಮರಿಸೊ ಹರಿನಾಮ ಏ ಮನುಜಾ ಸ್ಮರಿಸೋ ಹರಿನಾಮ ನಿರವಧಿ ಸುಖಧಾಮ ಪರಮ ಪುರುಷಗಿದು ಪರಿಪೂರ್ಣ ಪ್ರೇಮ ಪ. ತರಳ ಪ್ರಹ್ಲಾದನ ಪೊರದು ಪಾಂಚಾಲಿಗೆ ತ್ವರಿತದೊಳಕ್ಷಯವಿತ್ತು ಸರಸಿಯೊಳಗೆ ಕರಿರಾಜನ ಸಲಹಿದ ನರ ಕಂಠೀರವ ಕರುಣಿಸುವನು ಬೇಗ 1 ಹಲವು ಜನ್ಮಗಳಲ್ಲಿ ಗಳಿಸಿದ ದುಷ್ಕøತ ಗಳನೆಲ್ಲ ನಿರ್ಮೂಲಗೊಳಿಸುವುದು ಜಲಜ ಸಂಭವ ಮಾಳ್ಪ ಕೆಲಸದಿ ಸಿಲುಕದೇ ನೆಲೆಗೊಂಡು ಸೌಖ್ಯವ ಸಲಿಸಬೇಕಾದರೆ 2 ಕಲಿಕೃತ ಕಲ್ಮಷ ಬಲೆಯಿಂದ ಮೋಚನ- ಗೊಳಿಸಲು ಹರಿನಾಮವಲ್ಲದಿನ್ನು ಚಲಿತ ಚಿತ್ತದ ಕರ್ಮಬಲದಿಂದಲಾಹದೆ ನಳಿನನಾಭನೇ ನೀ ಬೆಂಬಲನಾಗು ತನಗೆಂದು 3 ಉದಯಾರಂಭಿಸಿ ಮತ್ತೊಂದು ದಯ ಪರ್ಯಂತ ವಿಧಿವಿಹಿತಗಳೆಲ್ಲ ಸದರವೇನೊ ಪದುಮನಾಭನ ನಾಮ ಒದಗಿದರದು ಪೂರ್ಣ- ವದರಿಂದ ಸರ್ವರ ಹೃದಯ ನೀ ಮರೆಯದೆ 4 ಸಂಚಿತಾಗಾಮಿಗಳಂಚುವಂ ದಿತಿಜರ ಸಂಚಯಕನುದಿನ ಸ್ಮರಿಸುವರ ಕಿಂತಿತಾರಬ್ದ ಪ್ರಪಂಚವ ತ್ವರಿತದಿ ಮಿಂಚಿನಂದದಿ ತೋರಿ ಪರಿಹಾರಗೊಳಿಪರೇ 5 ಕರುಣಾಭಿಮಾನಿಗಳರಿತು ಮಾಡಿಸುತಿಹ ನಿರತ ಕೃತ್ಯಗಳೊಂದು ಮೀರದಲೆ ಹರಿಯಾಜ್ಞೆ ಇದು ಯೆಂದು ಚರಿಸುತಲನುದಿನ ಪರಮೋತ್ತಮ ಕಾರ್ಯಧುರವಿದೆ ತನಗೆಂದು 6 ನಾಗ ಗಿರೀಂದ್ರನ ನೆನೆದರೆ ಇಹಪರ ಭೋಗ ಸಾಮ್ರಾಜ್ಯವು ಸ್ಥಿರವಾಹುದು ವಾಗೀಶನ ಪರಮಾಗಮ ಸಿದ್ಧಾಂತ- ವಾಗಿಹದಿದೆಯೆಂದು ನೀ ಗುರುತವನಿಟ್ಟು 7
--------------
ತುಪಾಕಿ ವೆಂಕಟರಮಣಾಚಾರ್ಯ
ಸ್ವಾ'ುಲಾಲೀ ತುಲಸೀ ರಾಮಲಾಲೀಪ್ರೇಮತುಲಸೀನಳಿನಾಕ್ಷಧಾಮ ಲಾಲೀ ಪಪ್ಲವಂಗಾಷಾಢಬಹುಳದಶಿ'ುಭಾರ್ಗ' ಲಾಲೀಭು'ಯವತಾರ ಸಾಯಂತ್ರಂ ಮೃಗಶಿರಯುತ ಲಾಲೀ 1ವೇಂಕಟಲಕ್ಷಾಂಬೋದರಪಯೋಧಿಸೋಮ ಲಾಲೀಪಂಕಜಲೋಚನ ಪ್ರಥಮಾಶ್ರಮವ್ರತನೇಮ ಲಾಲೀ 2ಸಿದ್ಧವಟಾ'ರ್ಭವ ವೈಷ್ಣವ ದೇವ ಲಾಲೀ ಇದ್ದರತುಲಸೀಕುಲಕೊಂಡಾರ್ಯಪ್ರಿಯಸುತ ಲಾಲೀ 3ಸಕಲಾಗಮ ಶಾಸ್ತ್ರಾರ್ಥಪರಿಶ್ರಮಸೇಯು ಲಾಲೀಶುಕವಾಗಝ ಸಂಶೋಭಿತ ಚರಿತ ಸತ್ಕ' ಲಾಲೀ 4ಶಮದಮಸದ್ಗುಣ ಶಾಂತಪ್ರತಿಭಸೂನೃತ ಲಾಲೀತೆಮಲಕನೆಪ್ಪುಡು ತಾರಕಮಂತ್ರುಪದೇಶಿ ಲಾಲೀ 5ಶ್ರೀಮದಹೋಬಿಲಸ್ವಾ'ುಯತೀಂದ್ರಸೇವಕ ಲಾಲೀಕೋಮಲಭಾತಕ'ಜನವಂದಿತ ಕೌಶಲ ಲಾಲೀ6ರಾಮಕೃಷ್ಣಪರಬ್ರಹ್ಮಮಹೋತ್ಸವರುಚಕೃತ ಲಾಲೀನೇಮರ'ತಮೂರ್ಖಾದಿಪತಿತೋದ್ಧಾರ ಲಾಲೀ 7ತವಗುಣಜಿತಕೇಯೂರಸತ್ವಾಭರಣ ಲಾಲೀಸುವರ್ಣಮಣಿಮಯಭೂಷಣ ಸ್ವಾರ್ಥತ್ಯಾಗ ಲಾಲೀ 8ಪುರಪುರಭಜನಾಗಾರಾ ಗಣಿತಸ್ಥಾಪಿತ ಲಾಲೀಪರಮೋದಾರಪರ ಚಿಂತನ ಕರುಣಾಕರ ಲಾಲೀ 9ಧರಮ'ಸೂರ್ಪುರವರ ಪ್ರಭುಪೂಜಿತ ಸ್ಮರಜಿತಲಾಲೀತಿರುರಾಮೋತ್ಸವ ತುಲಸೀವನಪ್ರತ್ಟಿತ ಲಾಲೀ 10ದುರಿತನಗಾಸಿನಿ ಸುಮತಮುಖ ಧಾರ್ಮಿಕಲಾಲೀಭರತಪುರಿಯರ್ಚಾವತಾರ ಭಾ'ಕ ಲಾಲೀ 11ಆಧಾರಭ್ರೂಮಧ್ಯಾಂತರ್ಬ' ವೇದ್ಯ ಲಾಲೀಖೇದಮೋದರ'ತ ಬ್ರಹ್ಮಾನಂದ ಲಾಲೀ 12ಪುತ್ತಡಿಗುರುಧರಲಕ್ಷ್ಮಿ ಸಂಪದ್ಯುಕ್ತ ಲಾಲೀಚಿತ್ತುಅಚಿತ್ತೀಶ್ವರ ತತ್ವತ್ರಯ ಶೇ ಲಾಲೀ 13ಸಿರಿಮುಳುಬಾಗಲಸನ್ನಿಧಿ ಸ್ಥಾಪನಚೇಯು ಲಾಲೀಧರರಂಗಸ್ವಾ'ುದಾಸ ಜೀವೋದ್ಧಾರಕ ಲಾಲೀ 14
--------------
ಮಳಿಗೆ ರಂಗಸ್ವಾಮಿದಾಸರು
ಸ್ವಾಂತವ ತೊಳೆಯುತಲಿರಬೇಕು ಶಾಂತಿನಿಕೇತನವಾಗುವ ತನಕ ಪ ಶಾಂತ ಮೂರುತಿ ಶ್ರೀಶಾಂತನು ತನ್ನ ಏ ಕಾಂತ ಮಂದಿರವೆಂದೊಪ್ಪುವ ತನಕ ಅ.ಪ ಕಾಮ ಕ್ರೋಧವೆಂಬೊ ಕಸಗಳನು ನೇಮದಿಂದ ಗುಡಿಸುತಲಿರಬೇಕು ಪ್ರೇಮಜಲದ ಸೇಚನೆ ಮಾಡಿ ಹರಿ ನಾಮಸ್ಮರಣೆ ಧೂಪವ ಕೊಡಬೇಕು 1 ಕಲಿಪುರುಷನ ಓಡಿಸಬೇಕು ತಿಳಿಯ ವೈರಾಗ್ಯ ಭಕ್ತಿಗಳೆಂಬ ತಳಿರು ತೋರಣವ ಕಟ್ಟಲಿಬೇಕು ನಳಿನನಾಭನ ಮನ ಸೆಳೆಯುವ ತೆರದಿ 2 ಕಾಣಲು ಪರಮತತ್ವದ ದಿವ್ಯ ಜ್ಞಾನದ ಜ್ಯೋತಿಯ ಮುಡಿಸಲಿ ಬೇಕು ಜ್ಞಾನ ಸುಖಾದಿ ಸದ್ಗುಣ ನಿಧಿಯು ತಾನೆ ಪ್ರಸನ್ನನಾಗುತ ನೆಲೆಸುವ ಪರಿ3
--------------
ವಿದ್ಯಾಪ್ರಸನ್ನತೀರ್ಥರು
ಸ್ವೀಕರಿಸೈ ಕರುಣಾಕರ ಶ್ರೀವರ ಲೋಕವಂದಿತ ಪ್ರಭುವೆ ಪ ಮಾಕಮಲಾಸನ ನಾಕಪಾಲವಂದ್ಯ ಮಾತುಳಾಂತಕ ಮಧುಸೂದನ ಶ್ರೀಹರಿ ಅ.ಪ ಮಾವು ಮಾದಳ ದ್ರಾಕ್ಷ ಬಾಳೆ ಕಿತ್ತಳೆ ಮೊದಲಾದ ಫಲಗಳೆಲ್ಲ ಮಾಧವ ನೀನಿದನಾರೋಗಣೆ ಮಾಡು ಶ್ರೀ ರಮಣಿಯ ಪ್ರಿಯ ಶ್ರೀನಿವಾಸನೆ ಬೇಗ 1 ನಾನಾ ವಿಧದ ಫಲ ಹಾಲು ಸಕ್ಕರೆ ಬೆಣ್ಣೆ ನಾರಾಯಣ ನಿನಗೆ ಬಾಲೆ ಲಕುಮಿ ಪರಮಾದರದಿಂದಲಿ ಸೇವೆಗೆ ಪರಮಾನ್ನವನರ್ಪಿಸುವಳು2 ತನುವೆಂಬೊ ತಟ್ಟೆಯೊಳಿರಿಸಿ ಫಲವ ನಿ- ರ್ಮಲಮನವೆಂಬ ವಸ್ತ್ರವನ್ಹೊದಿಸಿ ಸನ್ಮತವೆಂಬ ಸಾರಣೆಮಾಡಿ ನಮ್ಮ ಗುರುಕರುಣದ ರಂಗವಲಿಯನ್ಹಾಕುವೆ 3 ನವವಿಧ ಭಕುತಿಯ ನಳನಳಿಸುವ ವೀಳ್ಯ ಚಲುವ ಶ್ರೀ ಹರಿ ನಿನಗೆ ಸವಿನಯ ನುಡಿಗಳ ಮಂತ್ರ ಪುಷ್ಪಗಳು ಸನಕಾದಿವಂದ್ಯ ಸರ್ವೇಶ ಶ್ರೀ ಕೃಷ್ಣ 4 ಕ್ಷೀರ ಸಾಗರವಾಸಿ ಶ್ರೀ ಭೂರಮಣನೆ ಮಾರಜನಕ ಹರಿಯೆ ಕಾರುಣ್ಯಸಾಗರ ಕಮಲನಾಭ ವಿಠ್ಠಲ ಪಾರುಗಾಣಿಸೊ ಭವಸಾಗರದಿಂದಲಿ5
--------------
ನಿಡಗುರುಕಿ ಜೀವೂಬಾಯಿ
ಹನುಮಂತ ದೇವರು (ದಂಡಕ) ಅಂಜನಿಯ ಉದರದಿಂ ಪುಟ್ಟುತಾರ್ಭಟಿಸುತಲಿ ಕಂಜಮಿತ್ರಂಗೆ ಹಾರ್ದೆ ಧೀರಾ ವಾಯುಕುಮಾರಾ ರಣರಂಗಧೀರಾ ಕದನಕಂಠೀರಾ ದಿನಮಣಿಯ ಪಿಡಿದು ನುಂಗುವೆನೆಂಬೊ ಸಮಯದೋಳ್ ಬರಲು ದೇವತೆ ನಿಕರಗಳೆಲ್ಲಾ ಬೆದರಿಸಿದಿ ಎಲ್ಲಾ ಭಾಪು ಭಲ ಭಲ್ಲ ಭಾರತಿಯ ನಲ್ಲ ಸೂರ್ಯಸುತನಂ ಕಂಡು ಪಂಪಾಸರೋವರದಿ ಭಾಸ್ಕರಾನ್ವಯಗೆರಗಿ- ದೆಂದು ಜಯ ಜಗದ್ಬಂಧು ಕಾರುಣ್ಯಸಿಂಧು ಸೀತಾಪತಿಯ ಕರುಣದಿಂದ ಗಗನಕ್ಕೆ ಖ್ಯಾತಿಯಿಂದಲಿ ಬ್ಯಾಗ ಬೆಳದಿ ವೃಷಿಗಳನಳದಿ ದೈತ್ಯರ ತುಳದಿ ರಾಮಮುದ್ರಿಯ ಕೊಂಡು ಅಜನಸುತ ಸಹಿತಾಗಿ ನೇಮದಿಂ ಶರಧಿಯಂ ನೋಡಿ ದುರಿತಗಳ ದೂಡಿ ಪಾಡಿ ಕೊಂಡಾಡಿ ಕೋಟಿ ಸಿಡಿಲಬ್ಬರಣೆಯಿಂದ ಜಲಧಿಯ ಜಿಗಿದು ದಾಟಿದಿ ಲಂಕಾಪುರ- ವನ್ನು ಪೇಳಲಿನ್ನೇನು ಭುಜಬಲವನ್ನು ತೃಣಬಿಂದು ಋಷಿಯ ಕಾಣುತಲಲ್ಲಿ ಕುಣಿದಾಡಿ ಪರಿಪರಿಯ ಚೇಷ್ಟೆ- ಗಳಿಂದ ಮಾಡಿದೈ ಛಂದ ಅಂಜನೆಯ ಕಂದ ಪುನಹ ಲಂಕೆಗೆ ಹಾರಿ ಲಂಕಿಣಿಯ ಸಂಹರಿಸಿ ಭೂಜಾತೆಯನು ಅರಸು- ತಲ್ಲಿ ಅತಿರೋಷದಲ್ಲಿ ತಿರುತಿರುಗುತಲ್ಲಿ ರಾಮನಾಮಾಮೃತವ ಜಿಹ್ವಾಗ್ರದೋಳ್ ಸುರಿವ ಭೂವಿಜಯ ಚರಣಮಂ ಕಂಡು.... ಮಾಡಿದೈ ಗಂಡು ರಘುವರನ ಮುದ್ರೆಯನಿತ್ತು ನಿಜಮಾತೆಗೆ ಹರುಷಬಡಿಸಿದಿ ಹನೂ- ಮಂತಾ ಗುರುಮುನಿಯ ಶಾಂತಾ ದಿವಸಾಧಿಪತಿಕೋಟಿತೇಜದಿಂ ಮೆರೆವಂಥಾ ಜಯ ಹನುಮ ಭೀಮ ಬಲವಂತಾ ಬಾಲದಿಂ ಬೆಂಕಿಯಂ ಹಚ್ಚಿ ಲಂಕಾಪುರವ ಲೀಲೆಯಿಂದಲಿ ದಹನಮಾಡಿ ಸುತ್ತ ಓಡ್ಯಾಡಿ ದೈತ್ಯರಂ ಕಾಡಿ ಸುರನಿಕರವಂದು ಆಕಾಶಮಾರ್ಗದಿ ಎಲ್ಲ ದೇವದುಂದುಭಿನಾದ ಗೈದು ..................................ಮಹಿಮೆ ಹೌಧೌದು ತ್ರಿಭುವನದೊಳಗಧಿಕನೈ ಕದರುಂಡಲಗಿರಾಯಾ ಅಭಯಮಂ ಕೊಡು ಎನ್ನ ಧೊರೆಯೆ ನಾ ನಿನ್ನ ಮರೆಯೆ ಅಗಡಿಪುರದಲಿ ನಿನ್ನ ಕೃಪೆಯಿಂದ ಪೇಳ್ದೆನೈ ಸೊಗಸಿನಿಂದ ಇಡು ಮಹಾರಾಯ ಅವನಾಯುಗೇಯಾ ಹನುಮಂತರಾಯಾ ಶ್ರೀಹನುಮಂತಗೌಡರ್À ಬಹಾದ್ದೂರರನ್ನು ಸರ್ಪಸುತಪುರದಲ್ಲಿ ಕಾಯ್ವ ಇಷ್ಟಾರ್ಥವೀವ ಭಕುತ ಸಂಜೀವ ಶ್ರೀ ಹನುಮಂತ ದಂಡಕವ ಕೇಳ್ದರ್ಗೆ ಇಹಪರದಿ ಶ್ರೀಹರಿಯೆ ಬಂದು ಅವರಲ್ಲಿ ನಿಂದು ಕಾರುಣ್ಯಸಿಂಧು ಪರಾಕು ಪರಾಕು
--------------
ಕದರುಂಡಲಗಿ ಹನುಮಯ್ಯ