ಒಟ್ಟು 808 ಕಡೆಗಳಲ್ಲಿ , 96 ದಾಸರು , 629 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಮದ್ದು ಮಾಡಬಾರದೇನೇ ಮುದ್ದು ಮಾಯಾದೇವಿ ? ಪ.ಮುದ್ದು ಬಾಲಕೃಷ್ಣನಲ್ಲಿ ಮನಸು ನಿಲ್ಲುವ ಹಾಗೆ ಅಪಕರಗಳಿಂದ ಹರಿಯ ಮಂ ದಿರದ ಕಸವ ತೆಗೆಯಲಿಕ್ಕೆ |ನಿರುತದಲ್ಲೂ ಬೇಸರಿಯದೆ ಹರುಷವು ಪುಟ್ಟವ ಹಾಗೆ 1ಶ್ರುತಿ - ರಾಮಾಯಣ ಶ್ರೀಭಾಗವತ ಪಂಚರಾತ್ರಾಗಮಾದಿಕಥೆಯ ಕೇಳುವುದಕೆ ಬಹಳ ರತಿಯು ಪುಟ್ಟುವ ಹಾಗೆ 2ದೇಹವು ಅನಿತ್ಯವೆಂದು ನೇಹದಿಂದ ಪೋಷಿಸದಲೆ |ಮಾಹೇಂದ್ರಾವರಜನ ಅಹ ರಹರವು ಭಜಿಸುವ ಹಾಗೆ 3ನರರಸ್ತವನ ಹೇಯವೆಂದು ಅರಗಳಿಗೆಯು ಅಗಲದಲೆ |ನರಹರಿಯ ಭಕ್ತರಿಗೆ ಶರಣುಹೋಗುವ ಹಾಗೆ 4ಮನಸು ವಾಕ್ಕಾಯಗಳಿಂದ ಸದ್ ಗುಣದಿ ಪುರಂದರವಿಠಲನಅನುರಾಗದಿಂ ಬಿಡದೆ ಪಾಡಿ ಕುಣಿದು ಕುಣಿದು ದಣಿವ ಹಾಗೆ 5
--------------
ಪುರಂದರದಾಸರು
ಮನವೆನ್ನ ಮಾತ ಕೇಳದು - ಮಂದಜ್ಞಾನದಿ |ತನುವಿನಾಸೆಯ ಬಿಡಲೊಲ್ಲದು ಪವನಜನಾಭನೆ ನಿನ್ನ ನಾಮ ಸಾಸಿರವ |ನೆನೆಯದೆ ಕಂಡಕಡೆಗೆ ಎರಗುತಲಿದೆ ಅ.ಪದೇಹ ಸಂಬಂಧಿಗಳಾದವರೈವರು |ಮೋಹಪಾಶದಿಕಟ್ಟಿಬಿಗಿದಿಹರೈ ||ಕಾಯಅನಿತ್ಯವೆಂಬುದನರಿಯದೆ |ಮಾಯಾಪ್ರಪಂಚದಿಂದಲಿ ಬದ್ಧನಾಗಿಹೆ1ಸಾಧುಸಜ್ಜನರ ಸಂಗವ ಮಾಡಿ ಪರಗತಿ-|ಗಾಧಾರವನು ಮಾಡಲೊಲ್ಲದಯ್ಯ ||ಕ್ರೋಧಕುಹಕದುಷ್ಟರೊಡನಾಡಿ ಕಾಲನ |ಬಾಧೆಗೆ ಒಳಗಾಗುವಂತೆ ಮಾಡುತಲಿದೆ 2ಮದಗಜ ಮೈಯ ಮರೆತು ಮುಂದುಗಾಣದೆ |ಕದುವಿನೊಳಗೆ ಬಿದ್ದಂತಾದೆನಯ್ಯ ||ಹೃದಯ ಕಮಲದಲಿ ನಿಂತ ರಕ್ಷಿಸೋ ಎನ್ನ |ಪದುಮಾಕ್ಷ ವರದ ಶ್ರೀಪುರಂದರವಿಠಲ3
--------------
ಪುರಂದರದಾಸರು
ಮನುಜ ವಿಶ್ವಾಸ ಬೇಡ ವನಿತೇರೊಳ್ಮನುಜ ವಿಶ್ವಾಸ ಬೇಡ ತಿಳಿದು ಪ.ನಗೆಮೊಗದಬಲೇರ ಬೆಗಡು ಸ್ನೇಹದಕಿಂತಹೆಗಲ ಶೂಲವೆ ಸುಖವುಸುಗುಣವಿಲ್ಲದ ನರ್ಕಸೌಖ್ಯ ಬೇಕಾದರೆವಿಗಡೆಯರ್ಸಖ್ಯವೆ ಸಾಕು ತಿಳಿದು 1ಮಹಪ್ರೇಕ್ಷರಾದರ ಅಹಿತಕಾರಿಣಿಮಾಯೆಸಹಜ ತಾಮಸರೂಪಿಯಐಹಿಕಾಮುಷ್ಮಿಕದ ಬಹು ಪುಣ್ಯ ಕೆಡಿಸುವಕುಹಕಕೃತ್ರಿಮಶೀಲೆಯ ತಿಳಿದು2ಗುರುಹಿರಿಯರ ಭಕ್ತ್ಯಾಚರಣೆಗೆ ಪ್ರತಿಕೂಲೆತ್ವರಿತ ಕಾಮುಕಿ ಮೋಹಿಯಧರೆಯೊಳಭಿಜÕರ ಮರುಳು ಮಾಡುವ ಬುದ್ಧಿಭರಿತೆ ನಿಷ್ಠುರೆ ನೀಚೆಯ ತಿಳಿದು 3ಎನಿತಿಲ್ಲ ಪತಿವ್ರತೆ ವನಿತೇರವರೆ ನಾಕಾವನಿಯ ಪಾವನ ಮಾಳ್ಪರುಅನುದಿನವರ ನಾಮ ನೆನವಿಗಿರಲಿ ಮಿಕ್ಕಬಿನುಗುನಾರೇರ ನೆಚ್ಚದೆ ತಿಳಿದು4ಪ್ರಸನ್ವೆಂಕಟೇಶಪಾದಬಿಸಜಾರ್ಚನಾನುಕೂಲೆಯಾದಸಿಯಳೆ ಶುಭಗುಣಳುಹುಸಿಢೌಳಿಕಾರ್ತಿ ದುವ್ರ್ಯಸನಿಯನಾಳ್ವಮಾನಿಸಗೆ ಸುಖವೆ ಸ್ವಪ್ನವು ತಿಳಿದು 5
--------------
ಪ್ರಸನ್ನವೆಂಕಟದಾಸರು
ಮಾನವಜನ್ಮ ದೊಡ್ಡದು - ಇದ |ಹಾನಿ ಮಾಡಲು ಬೇಡಿ ಹುಚ್ಚಪ್ಪಗಳಿರಾ ಪ.ಕಣ್ಣು ಕೈಕಾಲ್ಕಿವಿ ನಾಲಗೆ ಇರಲಿಕ್ಕೆ |ಮಣ್ಣುಮುಕ್ಕಿ ಮರುಳಾಗುವರೆ ||ಹೊನ್ನು ಹೆಣ್ಣಿಗಾಗಿ ಹರಿನಾಮಾಮೃತವನು |ಉಣ್ಣದೆ ಉಪವಾಸವಿರುವರೇನೋ 1ಕಾಲನವರು ಬಂದು ಕರಪಿಡಿದೆಳೆವಾಗ |ತಾಳು ತಾಳೆಂದರೆ ಕೇಳುವರೆ ? ||ವೇಳೆ ಹೋಗದ ಮುನ್ನ ಧರ್ಮವ ಗಳಿಸಿರೊ |ಸುಳ್ಳಿನ ಸಂಸಾರ ಸುಳಿಗೆ ಸಿಲುಕಬೇಡಿ 2ಏನು ಕಾರಣ ಯದುಪತಿಯನು ಮರೆತಿರಿ |ಧ್ಯಾನ್ಯ - ಧನ -ಸತಿ - ಸುತರಿವು ನಿತ್ಯವೆ? ||ಇನ್ನಾದರು ಶ್ರೀ ಪುರಂದರವಿಠಲನ |ಚೆನ್ನಾಗಿ ಭಜಿಸಿ ನೀವ್ ಸುಖಿಯಾಗಿರಯ್ಯ 3
--------------
ಪುರಂದರದಾಸರು
ಮುಕ್ಕೋಟ ದ್ವಾದಶಿಯ ದಿವಸ(ಮಾರ್ಗಶಿರ ಶುದ್ಧ ದ್ವಾದಶಿಯ ಉತ್ಸವ)ವ್ರತತಿಯಧಿಪನಂತೆ ನೀರೆ ತೋರ್ಪಅತಿಶಯಾಗಮ ಬಗೆ ಬ್ಯಾರೆ ರತ್ನದ್ಯುತಿಯಾಭರಣವ ಶೃಂಗಾರ ಆಹಾಶ್ರುತಗೊಲಿಸೆನಗೆ ಆಶ್ರಿತ ರಕ್ಷಾರ್ಥಿತನ ಸಂ-ಗತಿಸ್ಮøತಿತತಿಗಳ ಮತಿಗಗೋಚರನಂತೆ1ಲೋಲಲೋಚನನ ನಾಟಕ ಸತ್ಕಥನವಮೇಲಾಗಿ ಜಗದಿ ಶೋಭಿಪ ಶೇಷಾದ್ರಿಯಲಿಬಾಲಾರ್ಕಸದೃಶನೀತನು ಇರ್ಪನಲ್ಲಿನೀಲನಿಭಾಂಗನು ನೆನೆವರ ಪಾಪವಘೋಲುಘಡಿಸಲೆಂದೆನುತಲಿಭಾರ್ಗವಕೋಲಿಂದೆಸಗಿದ ಧರಣಿಗೆ ಬಂದು ಸ-ಲೀಲೆಗಳೆಸಗುವ ಜಾಲವಿದೆಲ್ಲ 2ಸರಸಿಜಗಂಧಿ ಕೇಳ್ ದಿಟದಿ ತನ್ನಅರಮನೆಯಿಂದ ಸದ್ವಿಧದಿ ಈರ್ವ-ರರಸಿಯರ್ ಸಹಿತ ಮಿನಿಯದಿ ಅತಿಭರದಿಂದ ಸೂರ್ಯನುದಯದಿ ಆಹಾಉರುತರ ಹೇಮಪಲ್ಲಂಕಿಯೊಳಡರಿತ್ವರಿತದಿ ಪೋಗುವ ಭರವಿದೆಲ್ಲಿಗೆ ಪೇಳೆ 3ಬದ್ಧನೀ ಪೇಳ್ದ ಮನದ ಶಂಕಾವ್ರಾತತಿದ್ದಿಪೆ ಕೇಳು ಮಾರ್ಗಶಿರ ಮಾಸದೊಳುಶುದ್ಧ ದ್ವಾದಶಿಸೂರ್ಯಉದಯ ಕಾಲದೊಳುಭದ್ರಭವನವನು ಪೊರಟು ವಿನೋದದಿಅದ್ರಿಧರನು ಸಜ್ಜನರೊಡಗೂಡಿ ಉ-ಪದ್ರಿತ ಪಾಪವ ಛಿದ್ರಿಪ ಸ್ನಾನಕೆರೌದ್ರಿತ ರಾಮಸಮುದ್ರದ ಬಳಿಗೆ 4ರಂಭೆ : ಆರರೆ ಆಶ್ಚರ್ಯವಾಯ್ತೆನಗೆ ಅತಿಪರಮಮಹಿಮೆನೆಂದ ಮೇರೆಗೆ ಘನ-ತರ ಸ್ನಾನವೇನಿದು ಕಡೆಗೆ ವೃತದಿರವೋ ಉತ್ಸವವೋ ಪೇಳೆನಗೆ ಆಹಾತರುಣಿ ರನ್ನಳೆ ನಿನ್ನ ಚರಣಕ್ಕೆ ನಮಿಪೆ ಈಪರಿಗಳ ಸಾಂಗದಿಂದರುಹಬೇಕೆನಗಿನ್ನು 5ಸಕಲಾಂತರ್ಯಾತ್ಮನೀತನು ಸತ್ಯಶೀಲೆ-ಪ್ರಕಟ ವ್ರತವಿದಲ್ಲ ಅಂಜನಾದ್ರಿಯಲಿಭಕುತವತ್ಸಲನು ಉತ್ಸವಿಸುವನಲ್ಲಿವಿಕಳಹೃದಯ ನರನಿಕರಕಸಾಧ್ಯವೆಂದ್ಯುಕುತದಿ ಈ ಧರೆಯಲ್ಲಿ ಪ್ರತ್ಯೇಕದಿಅಖಿಳೋತ್ಸವ ಮಸ್ತಕಕಿದುವೆಗ್ಗಳಮುಕುಟೋತ್ಸವವೆಂದೆನುತಲಿ ರಚಿಸುವ 6ರಂಭೆ : ನಳಿನಾಕ್ಷಿ ಲಾಲಿಪುದಿನ್ನು ಸ್ನಾನವೊಲವಿಂದ ಗೈದ ಮೇಲಿವನು ತನ್ನರಮಣಿಯರ್ಸಹಿತಂದಣವನು ಏರಿನಿಲುನಿಲುತ್ಯಾಕೆ ಬರುವನು ಆಹಾಪೊಳಲೊಳಗಿಹ ಜನನಿಳಯದ ದ್ವಾರದಿಕಳಕಳವೇನಿದ ತಿಳುಪೆನಗೀ ಹದ 7ಮಿಂದು ತೋಷದಿ ಅಂದಣವನ್ನೇರಿ ತಾನುಇಂದೀ ಪುರದೊಳಿರ್ಪ ಜನರ ದೋಷಗಳಕುಂದಿಸಲೆಂದವರವರ ದ್ವಾರದೊಳುನಿಂದಿರುತಲ್ಲಿಯದಲ್ಲಿ ಆರತಿಗಳಚಂದದಿ ಕೊಳುತೊಲವಿಂದಕಾಣಿಕೆಜನ-ವೃಂದದಿ ಕೊಡುತಾನಂದ ಸೌಭಾಗ್ಯವಒಂದಕನಂತವ ಹೊಂದಿಸಿ ಕೊಡುವ 8ರಂಭೆ : ಸರಸಿಜಾನನೆ ಮತ್ತೇನಿದನು ತನ್ನಅರಮನೆಯಲ್ಲಿ ಭೂದ್ವಿಜನರನು ಸರ್ವಪುರಜನ ಸಹಿತೊಳಗಿವನು ನಾನಾತರದಿ ಮೆರೆವ ಭೋಜನವನು ಆಹಾ-ಕರಿಸಿ ಆಮೇಲೆ ರಾತ್ರಿಯಲಿ ಸಾಲಿನಲಿ ವಿ-ಸ್ತರದ ಲಾಜದ ರಾಸಿಗಿರದೆ ಪೂಜಿಪುದ್ಯಾಕೆ 9ಗಂಗಾಜನಕತನ್ನ ಗೃಹದಿ ವಿಪ್ರರನುಹಿಂಗದೆ ಕರೆಸಿ ವಿಪ್ರರನೆಲ್ಲ ಬರಿಸಿಸಂಗಾತದಲಿ ಆರೋಗಣೆ ಗೈದು ಮೆರೆಸಿಅಂಗಣದಲಿ ರಾತ್ರೆಯಲಿ ವಿನೋದದಿಕಂಗೊಳಿಸುವ ಉರಿದರಳ ಸಮೂಹಕೆರಂಗಪೂಜೆಯನುತ್ತಂಗವಿಸುವ ನಿಗ-ಮಂಗಳೊಡೆಯನು ವಿಹಂಗಮಾರೂಢ 10ರಂಭೆ : ಅಮಮ ಮತ್ತೇನಿದ ಪೇಳು ಶ್ವೇತ-ಕುಮುದಾಪ್ತ ಠಾವಿನ ವೋಲು ಬಂದುಆದರಿಸಲಿದರ ಮಧ್ಯದೊಳು ತನ್ನರಮಣಿಯರ್ ಸಹಿತ ತೋಷದೊಳು ಆಹಾವಿಮಲವನ್ನೇರಿನ್ನೆಲ್ಲಿಗೈದುವನೆಂಬಾ-ಗಮವ ಪೇಳೆನೆಗೆ ನೀ ನಮಿಪೆ ನಿನ್ನಂಘ್ರಿಯ 11ಶ್ರೀ ರಮಾರಮಣ ಪೂಜೆಯಗೊಂಡಾ ಮೇಲೆಚಾರುಈ ಹೂವಿನ ತೇರನೇರುತಲಿಕೇರಿ ಕೇರಿಯೊಳಾರತಿಗೊಳ್ಳುತಲಿಭೋರಿಡುತಿಹ ವಾದ್ಯಧ್ವನಿ ಘನತರಭೇರಿಮೃದಂಗಾದ್ಯಖಿಳ ವಿನೋದದಿಸ್ವಾರಿಗೆ ತೆರಳುವ ಕ್ರೂರ ನರರ ಆ-ಘೋರಪಾಪ ಜರ್ಝರಿಸಲೆಂದು12ರಂಭೆ : ಅರವಿಂದಾಕ್ಷಿಯೆ ಮತ್ತೇನಿದನು ತನ್ನಅರಮನೆಯಿದಿರು ರಥವನು ತಾನುಭರದೊಳಗಿಳಿದಂದಣವನು ಏರಿಮೆರೆವಾಲಯದ ಸುತ್ತುಗಳನು ಆಹಾತಿರುಗುವನ್ಯಾಕೆ ಭೂದ್ವಿಜರ ಘೋಷದಿ ವಾದ್ಯ-ಭರಿತ ಗಾಯನಭೇರಿಧ್ವನಿಗಳೇನಿದ ಪೇಳೆ13ದುಷ್ಟಮರ್ದನ ರಥವಿಳಿವುತ್ತಲಾಗೇಅಷ್ಟದಿಗ್ಭಾಗದಿ ಗೃಹಸುತ್ತಿನೊಳಗೆಅಷ್ಟಾವಧಾನವ ರಚಿಸುತ್ತ ಕಡೆಗೆಶ್ರೇಷ್ಠನು ರತ್ನಾಸನದಿ ಗ್ರಹದಿಪರಮೇಷ್ಟಜನಕೆ ಸಂತೋಷಾನಂದದಿಸೃಷ್ಟಿಯ ಜನರ ಅನಿಷ್ಟವ ತ್ಯಜಿಸುತಇಷ್ಟವನೀವ ಯಥೇಷ್ಟ ದಯಾಬ್ಧ 14ರಂಭೆ : ಅರಿತೆನಾ ಸ್ವಚ್ಛ ಚಿತ್ತದಲಿ ಇನ್ನುಹರಿಏಕರೂಪನೆನ್ನುತಲಿ ಲಕ್ಷ್ಮೀಕರವೆನಿಸುವ ಕಾರ್ಕಳದಲಿ ಭಾಗ್ಯೋ-ದಯ ದೇವಾಲಯದ ಮಧ್ಯದಲಿ ಆಹಾತ್ವರಿತದಿ ನುತಿಸಿರೊಗುರುನಾರಸಿಂಹ ಶ್ರೀ-ಕರವೆಂಕಟೇಶನ ಚರಣಕಮಲಗಳ15
--------------
ಪಾವಂಜೆ ಲಕ್ಷ್ಮೀನಾರ್ಣಪ್ಪಯ್ಯ
ಮುತ್ತೈದೆಯಾಗಿರಬೇಕು ಮುದದಿಂದಲಿ |ಹತ್ತುನೂರು ನಾಮದೊಡೆಯಹರಿನಮ್ಮ ಪತಿಯೆಂದುಪ.ಗುರುಮಧ್ವಶಾಸ್ತ್ರವನು ಓದುವುದೆ ಮಾಂಗಲ್ಯ |ವರವೈರಾಗ್ಯವೆಂಬ ಒಪ್ಪುವ ಮೂಗುತಿ ||ತಾರತಮ್ಯದರಿಮೆ ತಾಯಿತಿ ಮುತ್ತುಸರ |ಕರುಣರಸಗಳೆಉಳ್ಳಕಟ್ಟಾಣಿಕಟ್ಟಿಕೊಂಡು1ಹರಿಕಥೆಯ ಕೇಳುವುದೆ ಕಿವಿಗೆ ಮುತ್ತಿನ ಓಲೆ |ನಿರುತ ಸತ್ಕರ್ಮವೇ ನಿಜಕಾಂತಿಯು ||ಪರಮ ಭಕ್ತರ ಪಾದರಜ ಹರಳು ಬಂಗಾರ |ಗುರುಭಕುತಿಯೆಂಬಂಥ ಗಂಧ ಕುಂಕುಮ ಧರಿಸಿ 2ಪೊಡವಿಯೊಳು ಪರಹಿತದ ಪಟ್ಟವಾಳಿಯನುಟ್ಟು |ಕೊಡುವ ಧರ್ಮವೆಂಬ ಕುಪ್ಪಸವ ತೊಟ್ಟು ||ಬಿಡದೆ ಎನ್ನೊಡೆಯ ಶ್ರೀ ಪುರಂದರವಿಠಲನ |ಧೃಡ ಭಕ್ತಿಯೆಂಬಂಥ ಕಡಗ - ಬಳೆ ಇಟ್ಟುಕೊಂಡು 3
--------------
ಪುರಂದರದಾಸರು
ಯಾಕೆನ್ನೊಳು ಪಂಥಾ ಶ್ರೀಕಾಂತಾ ಪ.ಯಾಕೆ ಪಂಥ ಲೋಕೈಕನಾಥ ದಿ-ವಾಕರಕೋಟಿಪ್ರಭಾಕರ ತೇಜನೇ ಅ.ಪ.ಪೂರ್ವಾರ್ಜಿತ ಕರ್ಮದಿಂದಲಿಇರ್ವೆನು ನರಜನ್ಮ ಧರಿಸುತಗರ್ವದಿಂದ ಗಜರಾಜನಂತೆ ಮತಿಮರ್ವೆಯಾಯ್ತು ನಿನ್ನೋರ್ವನ ನಂಬದೆಗರ್ವಮದೋನ್ಮತ್ತದಿ ನಡೆದೆನುಉರ್ವಿಯೊಳೀ ತೆರದಿ ಇದ್ದೆನಾದರೂಸರ್ವಥಾ ಈಗ ನಿಗರ್ವಿಯಾದೆಯಹಪರ್ವತವಾಸ ಸುಪರ್ವಾಣ ವಂದಿತ 1ಯಾರಿಗಳವಲ್ಲಮಾಯಾಕಾರ ಮಮತೆ ಸಲ್ಲ ಸಂತತಸಾರಸಾಕ್ಷ ಸಂಸಾರಾರ್ಣವದಿಂದಪಾರಗೈದು ಕರುಣಾರಸ ಸುರಿವುದುಭಾರವಾಯ್ತೆ ನಿನಗೆನತಮಮಕಾರ ಹೋಯ್ತೆ ಕಡೆಗೆ ಏನಿದುಭಾರಿ ಭಾರಿಶ್ರುತಿಸಾರುವುದೈ ದಯವಾರಿಧಿನೀನಿರಲ್ಯಾರಿಗುಸುರುವುದು2ಬಾಲತ್ವದ ಬಲೆಗೆ ದ್ರವ್ಯದಶೀಲವಿತ್ತೆ ಎನಗೆ ಆದರೂಪಾಲಿಸುವರೆ ನಿನಗಾಲಸ್ಯವೆ ಕರು-ಣಾಳು ಶ್ರೀಲಕ್ಷ್ಮೀಲೋಲ ಮಮ ಮನಕೆಸಾಲದೆರಡು ಮೂರು ನಿನ್ನಯಮೂಲ ಸಹಿತ ತೋರು ಮುನಿಕುಲಪಾಲ ಶ್ರೀಲಕ್ಷ್ಮೀನಾರಾಯಣಗುಣಶೀಲ ಕಾರ್ಕಳ ನಗರಾಲಯವಾಸನೇ 3
--------------
ಪಾವಂಜೆ ಲಕ್ಷ್ಮೀನಾರ್ಣಪ್ಪಯ್ಯ
ಯಾವ ಭಯವು ನಮಗೆ |ಶಂಕರ ದೇವನೊಲಿದು ಕಡೆಗೆ ಪಸಾವಧಾನದಿ ಸರ್ವಭಕ್ತ ಜನರಕಾವ|ದೇವ ದೇವೇಶ ಸರ್ವೇಶ ನೀನೊಲಿದರೆ ಅಪದುರಿತದ ಭಯವೇನಲೇ | ಶಂಕರ ನಿನ್ನ |ಸ್ಮರಿಸಲು ದೂರವಲೇ |ಮರಣದ ಭಯವೆನೆ | ಅಂತಕಾಂತಕ ನೀನು ||ಉರಗನ ಭಯವೆನೆ | ಗರಳಕಂಧರನೂ 1ಚೋರರ ಭಯವೇನೂ | ದಧಿಘೃತ |ಚೋರ ನಿನ್ನಯ ಸಖನೂ ||ನಾರೀ ಚೋರನ ದೇವ | ಧೀರಕೈರಾತನೀ |ಘೋರರಕ್ಕಸರೆನೆ | ತ್ರಿಪುರಸಂಹಾರ2ಮೃಗಪಕ್ಷಿ ಭಯವೆನಲೇ |ಸತಿಸುತಸಖ|ಖಗಮೃಗವೇರ್ದರೆಲೇ |ಜಗದೊಡತಿಯು ಲಕ್ಷ್ಮೀ | ಗಗ್ರಜನೆನಿಸಿಹೆ ||ಭಗಪೀಠನು ಧನ | ಮಾನಾಭಿಮಾನಕೇ 3ವಸನಕ್ಕೆ ಚರ್ಮಾಂಬರನೂ |ಸಂಸಾರವೆಂಬ ವ್ಯಸನಕೆ ದಿಗಂಬರನೂ ||ತೃಷೆಗೆ ಗಂಗಾಧರ | ಅಶನಕ್ಕೆ ಬಿಕ್ಷುಕನೀ |ಅಂಗ ಶೃಂಗಾರಕೆ | ಭಸ್ಮಲೇಪನನೂ 4ಪೊಗಳಲಳವೇ ನಿನ್ನಾ | ಮಹೇಶ್ವರ |ಜಗದಿ ಭಕ್ತರ ಸಂಪನ್ನಾ ||ಭೃಗುಲಾಂಛನಧರ ಗೋವಿಂದದಾಸನ |ಹಗಲಿರುಳೆನ್ನದೆಪೊರೆಯೋ ಮಹಾದೇವ 5
--------------
ಗೋವಿಂದದಾಸ
ರಂಗ ಕೊಳಲನೂದುವ ಮಂಗಳಸ್ವರಕೆ ಮೂಜ-ಗಂಗಳೂ ಮೋಹಿಸುತಿಹವಲ್ಲೇ ನೋಡೆ ಏ ಸಖಿ ಪಗೋಕುಲದಂಗನೆಯರು ಮೈಮರೆದು ತಮ್ಮ ಮನೆ ಕದ |ಹಾಕದೇ ಹರಿಯೆಲ್ಲಿಹನೆಂದರಸುತ ಬಂದರು ||ಗೋ ಕರುವೇನೆಂದೊಬ್ಬಳು ಹಾಕುವಳೆತ್ತಿಗೆ ದಾಳಿ |ನೂಕು ನೂಕಾಗುತ್ತ ಹಲವಂಗನೆರೋಡಿದರು 1ಕಣ್ಣಿಗೆ ಕುಂಕುಮ ಫಣಿಯಲ್ಲಿ ಕಾಡಿಗೆ ಕೆಲವರು |ಬಣ್ಣದ ಸೀರೆಯ ಮಂಡೆಗೆ ಸುತ್ತುತ್ತ ಕೆಲವರು ||ಚಿನ್ನಗೆ ಹಾಲೆರೆವೆವೆಂದು ಗಂಡರ ಪಿಡಿದು ಒಲ್ಲೆ- |ನೆನ್ನೆ ಕೇಳದಲೆ ನೆಲಕಿಕ್ಕುವರು ಕೆಲವರು 2ಹರಿಯ ನೋಡುವ ಭರದಿಂದ ಆಕಳಿವೇಯೆಂದು |ಹರದೇರು ಅತ್ತೇರಿಗೆ ಕುಟ್ಟಿ ಕಣ್ಣಿಯಿಕ್ಕೊರು ||ಒರಲಿದರೆ ನಾವಾಕಳಲ್ಲವೆಂದು ಕೇಳದಲೆ |ತ್ವರದಿ ಮಾಧವನ ನೋಡಬೇಕೆಂದೋಡಿದರು 3ಕಾಲಿಕೆಕಟ್ಟಾಣಿಆಣಿಮೆಂಟು ಪಿಲ್ಯಾ ಸರ ಮಾಡಿ |ಮಾಲೆಯೆಂದು ಹಾಕುವರು ಕೊರಳಿಗೆ ಕೆಲವರು ||ಹಾಲಿಗೆ ಮೂಗುತಿ ಕಾನ ಬಾವುಲಿ ಮೂಗಿಗೆ ತಮ್ಮ |ಬಾಲೆರೆಂದಾಕಳ ಕರುವೆತ್ತಿಕೊಂಡೋಡುವರು 4ಹೇಳಿದರೆ ಮಾತುಕೇಳಿಕಳ್ಳ ಕೃಷ್ಣಾ ಸಿಕ್ಕೆಂದು ಮೈ |ಘಾಳಿಗೊಂಡಾಳುವರಾ ಕೈ ಕಂಭಕೆ ಕಟ್ಟುವರು ||ಕೀಲ ಕಂಕಣ ಬಾಗಿಲ ಬೀಗವೆಂಜೋಡಿಸಿ ಲಕ್ಷ್ಮೀ |ಲೋಲನಂಘ್ರಿಯ ಕಾಣಬೇಕೆಂದೆಲ್ಲರು ಓಡಿದರು 5ಎಲೆ ಯಶೋದೆಯಮ್ಮ ನಿನ್ನ ಮಗ ಮೊನ್ನೆ ನಿಶಿಯಲ್ಲಿ |ಮಲಗಂಟು ಬಿಚ್ಚಿ ಒಲ್ಲೆನೆನ್ನೆ ಕೇಳಾ ಥರವೆ ||ಬಲು ಶಬ್ದೆನೆಂದು ಕೇಳಲತ್ತೆಗೊಂದು ಪರಿಯಿಂದ |ತಿಳಿಸಿದೆನೆಂದೊಬ್ಬಳು ಅತ್ತೆಯ ಮುಂದೆ ಹೇಳುವಳು 6ಬೀದಿಯೊಳ್ ಹೇಳಿದಂತೆ ನಮ್ಮನಿಗೆ ಬಾಯೆಂದೊಬ್ಬಳು |ಮಾಧವನಿವನೆಂದು ತನ್ನ ಪುರುಷಘೇಳುವಳು ||ಆ ದಿನ ನಾವೇಕತ್ರದಲ್ಲಿರೆಗಂಡಬರಲು ಸ್ತ್ರೀ |-ಯಾದಿ ಸೈ ಸೈಯೆಂದೊಬ್ಬಳು ಪತಿಗೇ ಪೇಳುವಳು7ಬತ್ತಲೆ ಕೆಲವರು ಸೀರ್ಯುಟ್ಟವರ್ಕೆಲವರು ಉ- |ನ್ಮತ್ತರು ಕೆಲವರು ಪಾಡುತ್ತಲಿ ಕೆಲವರು ||ನೆತ್ತಿಹಿಕ್ಕುವರು ಕೆಲವರು ಹೂಸಿಕೊಂಡವರು |ತುತ್ತು ಬಾಯೊಳಿಟ್ಟವರೂ ತ್ವರದಿ ಓಡಿದರು 8ಒಂದಾಡುತೊಂದಾಡುವರುನಿಂದುನಿಂದಾಲಿಸುವರು |ಮಂದಿಗಂಜದಲೆ ಹರಿದು ಹರಿದು ಹೋಗುವರು ||ಕಂದಗಳೆತ್ತಿದವರು ಕರುಗಳೆತ್ತಿದವರು |ಚಂದಿರ ವದನೆಯರು ತವಕದಿ ಓಡುವರು 9ಹೆಂಣುಗಳಾ ಆವಾವ ಕೆಲಸದೊಳಿದ್ದಿರ್ಯಾ ಹ್ಯಾಂಗೆ |ಬನ್ನಿರೆನ್ನ ಬಳಿಗೆಂಬಂತೆವೇಣುಕೇಳಿಸುವುದು ||ಪನ್ನಗಶಯನನಾಜೆÕಯಂತೆ ಪ್ರವರ್ತಿಸಿದ ಮೇಲೆ |ಅನ್ಯಾಯವೇ ಸತಿಯರದು ಕೇಳಿರಿ ಕವಿಗಳು 10ಕರಿಸಿಂಹಗಳು ಹುಲಿತುರುತುರುಗಮಹಿಷಿ|ಮರೆದು ವೈರತ್ವ ಹರಿಸ್ವರ ಕೇಳುತಿಹವು ||ಕರಗುತಿಹವು ಕಲ್ಲು, ಸುರರಾಕಾಶದಿ ಪುಷ್ಪ |ಸುರಿಸುತಿಹರು, ಗಂಧರ್ವರು ಪಾಡುತಿಹರು11ಅಂಬುಜಾಕ್ಷಗೆ ಕೆಲವಂಗನೆರು ಆಲಿಂಗಿಸುವರು |ಚುಂಬಿಸುವರು ಕೆಲವರುನಿಂದುಪ್ರಾರ್ಥಿಸುವರು ||ಶಂಬುಪಾಣಿ ಕರುಣಿಸಿ ಇಬ್ಬರಿಗೊಬ್ಬೊಬ್ಬನಾಗಿ |ಹಂಬಲ ಪೂರೈಸುವಂತೆ ರಾಸಕ್ರೀಡೆಯಾಡಲು 12ಕಾಮನಾ ಪೂರ್ತಿ ಮಾಡುತಿರೆ ಹೆಂಗಳೆರು ಇಂಥ |ಸ್ವಾಮಿಯಮ್ಮ ಕೈ ಸೇರಿದ ನೋಡಿರೆಂದ್ಯೋಚಿಸಲು ||ಭಾಮಿನಿಯರಹಂಕಾರ ತಿಳಿದಾಕ್ಷಣವೊಬ್ಬಳ |ಪ್ರೇಮದಿ ಕೊಂಡೊಯ್ದು ಎಲ್ಲರಿಗೆ ಮಾಯವಾದನು13ಬಹುರೂಪದೊಳೊಮ್ಮಿಂದ ಒಮ್ಮೆ ಬಂದೂ ರೂಪವಿಲ್ಲ |ಮಹೀಪಾಲನೇನಾದನೋ ಆವಳನ ಕೊಂಡೊಯ್ದನು ||ಅಹಿವೇಣಿಯರೇ ನಿಮ್ಮ ನಿಮ್ಮ ಗುಂಪಿನೊಳಗೆ ಎ- |ಷ್ಟಿಹಿರೊ ನಾರೆರು ಎಣಿಸಿರೆ ಯಂದಾಳೊಬ್ಬಳು 14ಒಂದೆರಡು ನೂರಿನ್ನೂರೈನೂರು ಸಾವಿರೆಂದೆಣಿಸಿ |ಮಂದಗಮನೆಯೊಬ್ಬಳಿಲ್ಲವಮ್ಮ ನಮ್ಮೊಳೆಂದರು ||ಇಂದ್ರಜಾಲದವಳೇ ಆವನು ಅಂಥ ವಂಚಕನೆ |ಸಂಧಿಸಿತಿಬ್ಬರಿಗೆ ಮುಂದೇನುಪಾಯವೆಂದರು 15ಹರಿಹೋದಕಷ್ಟೊಂದು ಅವಳ ನಾ ವೈದ ದುಃಖೊಂದು |ಸ್ಮರಣೆದಪ್ಪಿ ಗಂಡರೊಡನೆ ಆಡಿದ್ದೊಂದು ||ಸ್ಮರನ ಬಾಣ ಬಾಧೆಯೊಂದು ಬೆರದಿತಿನಿತುಕ್ಲೇಶ|ಹರದೆರಚ್ಯುತನರಸುತವನಹೊಕ್ಕರು 16ಹರಿಒಬ್ಬಳ ಒಯ್ದನು ಕಂಡಿರಾ ಯಿದ್ದಿರ್ಯಾ ಎಂದು |ನರರೆಂಬೊ ಭ್ರಾಂತಿಯಿಂದ ಮರನ ಕೇಳುವರು ||ಸ್ಮರಣೆ ಬಂದಾಗ ವಮ್ಮೆ ಗಿಡ ಕೇಳುತಿಹವೆಲ್ಲೆ |ಹರಿಹರಿ! ಜೀವಿಸುವದೆಂತು ಹೇಳಿರೆಂಬೊರು 17ಅತ್ತ ಎಲ್ಲರ ವಂಚಿಸಿ ಯನ್ನ ರೂಪಾಧಿಕ ನೋಡಿ |ಎತ್ತಿಕೊಂಡು ಬಂದ ರಂಗನೆಂಬೊಳಾಕಿ ಮುದದಿ ||ಸತ್ಯ ಸಂಕಲ್ಪವಳ ಮನತಿಳಿದು ತಿಳಿಯದಂತೆ |ತೊತ್ತಿಗ ನಂದದಿ ಹೆಗಲೊಳಗಿಟ್ಟು ಪೋಗಲು 18ದಣಿದೆ ಹಸಿದೆ ನೀರಡಸಿದೆನೆಂದರವಳ |ಅಣುಗನಂದದಿಂದಿಳಿಸೇರಿಸಿ ಕೊಂಬುವನು ||ಗೊನೆ ಹಣ್ಣು ನಿಲಕದೆಂದರೆ ನೀಡಿ ಕೊಡುತಲಿ |ಘನಸುಖ ಬಡಿಸುತ ದಕ್ಕಿದಂತಿರುವನು 19ಸಾವಿರ ಪ್ರಕಾರಾ ಘೋರಿಸಿದರೂ ನಗುತಲೆ ಇಹ |ಕೇವಲ ದಕ್ಕಿದನೆಂದು ನಿಶ್ಚಯ ತಿಳಿದಳು ||ಮಾವಿರಿಂಚೇಶ ಜಂಭಾರಿಗಳನು ವಂಚಿಸುವಂಥ |ದೇವನು ಈ ನಾರಿ ಅಹಂಕಾರವ ತಾಳುವನೆ20ಸೊಕ್ಕು ಬಂತಿವಳಿಗಿನ್ನು ಶೀಘ್ರ ತಗ್ಗಿಸಬೇಕೆಂದು |ಚೊಕ್ಕ ಮಾವು ಪಿಡಿಸಿ ಅಪ್ರತ್ಯಕ್ಷವಾಗಲಿತ್ತಲು ||ತುಕ್ಕಿ ತುಕ್ಕ್ಯಾರಂಣ್ಯಾ ಹೆಜ್ಜೆ ಪಿಡಿದಿಲ್ಲಿಹ ಅಲ್ಲಿಹ |ರಕ್ಕಸಾರೆನುತ ಬಂದೆಲ್ಲರವಳನು ಕಂಡರು 21ಜಾರೆ ಚೋರೆ ಕುಲ್ಲೆ ಖೂಳೆ ಕುಲಕಂಟಿಕೆನವನೀತ|ಚೋರನೆಲ್ಲಡಗಿಸಿದ್ದೆ ತೋರೆಲೆ ತೋರೆಂದರು ||ಘೋರಪಾತಕಿಯ ಕುಟ್ಟಿರೆಂದು ಕೆನ್ನಿ ಕುಟ್ಟುವರು |ಗಾರುಮಾಡಿದರೆ ಬಟ್ಟಬವಣೆಹೇಳಿದಳು22ಸಮದುಃಖಿಗಳಾಗಿಹರಿಹರಿಯೆಂದೊದರಲು ಈ |ಶ್ರಮ ನೋಡಿ ಪ್ರಾಣೇಶ ವಿಠಲ ಬಂದಾಲಿಂಗಿಸಿ ||ಸುಮನಗಂಧಿಯರೆ ನಿಮ್ಮಹಂಕಾರ ಬಿಡಿರೆಂದು |ಅಮರೇಶಮುಂಚಿನಂತೆಲ್ಲರೊಳಾಡಿದನು 23
--------------
ಪ್ರಾಣೇಶದಾಸರು
ರಾಮ ರಾಮಾಯೆಂದು ಮಾರುತಿಯು ನಡೆದು |ಸೋಮವದನೆ ಜಾನಕಿಯನು ಹುಡುಕಾ ಪಹರಿಯಿಂದ ಗುರುತು ಪಡೆದು ತನ್ನ ಶಿಖದಲಿ |ಧರಿಸಿಕೊಂಡತಿಶಯ ಭಕುತಿಯಲಿ ||ತೆರಳಿ ಮುಂದು ಮುಂದಕೆ ಕಡಲ ಸಮೀಪದಿ ವಾ- |ನರಾಧೀಶ ಮಾಡಿದ ವಾಸವನೂ1ರವಿಜನ ಭಯದಿಂದ ಕಪಿಗಳೆ- |ಲ್ಲವು ಎದೆಯನೊಡೆದು ನಗದೊಳು ಕುಳಿತಿರಲು ||ಪವನಜನು ಬಂದು ವಿಚಾರವ ಮಾಡಲು ಸಾಗ- |ರವ ದಾಟಲೊಬ್ಬಗೊಶವಲ್ಲವೆಂದರೆಲ್ಲರಲ್ಲಿ 2ನಮ್ಮನು ರಕ್ಷಿಸೋ ಕುಲಮಣಿಯೆ ವಾಸುದೇವನ |ಮೊಮ್ಮಗನೆ ಎಂದು ಕಪಿಗಳು ಯಾಚಿಸೆ ||ಗಮ್ಮನೆ ಹಾರಿ ರಕ್ಕಸಿ ಹೊಟ್ಟೆಯ ಹೊಕ್ಕು ದಾಟಿ ಮತ್ತೇ |ಒಮ್ಮೆ ಒಬ್ಬಳನ್ನು ಸೀಳಿ ಪುರಪ್ರವೇಶ ಮಾಡಿದ3ಗಿಡಗಿಡ ಚರಿಸುತ ಸ್ಥಳ ಸ್ಥಳದಲಿ ಬಲು |ಹುಡುಕುತ ಮೂಜಗ ಪೂಜಿತನ ||ಮಡದಿಯಾಕೃತಿಯನು ಕಾಣಲಾಕ್ಷಣದೊಳು |ತಡೆದನಲ್ಲಿಯೇ ಪದಗಳ ಮುಂದಕ್ಕಿಡದಲೇ4ಋಷಿಗಳಂದದಿ ಪ್ರಾಣೇಶ ವಿಠಲನೆನುತಿರೆ |ಶಶಿಮುಖಿಯಳು ಆಂಜನೇಯ ಪದ |ಬಿಸಜಾಂಘ್ರಿಗಳಿಗೆರಗಿ ಜಯ ಜಯವೆಂದು |ಉಸಿರಿದ ರಘುಪತಿಯ ಸುದ್ದಿ ವಿಸ್ತರದಲಿ 5
--------------
ಪ್ರಾಣೇಶದಾಸರು
ರಾಮನಾಮ ಪಾಯಸಕ್ಕೆ ಕೃಷ್ಣನಾಮ ಸಕ್ಕರೆ |ನಾಮವಿಠಲ ತುಪ್ಪ ಬೆರೆಸಿ ಬಾಯಿ ಚಪ್ಪರಿಸಿರೊ ಪಒಮ್ಮನ ಗೊದಿಯ ತಂದು | ವೈರಾಗ್ಯ ಕಲ್ಲಲಿ ಬೀಸಿ |ಸುಮ್ಮನ ಸಜ್ಜಿಗೆ ತೆಗೆದು | ಸಣ್ಣ ಸೇವಗೆ ಹೊಸೆದು 1ಹೃದಯವೆಂಬ ಪಾತ್ರೆಯೊಳಗೆ | ಮನವೆಂಬ ಎಸರನಿಟ್ಟು |ಬುದ್ದಿಯಿಂದ ಪಾಕ ಮಾಡಿ |ಹರಿವಾಣತುಂಬಿರೋ 2ಆನಂದ ಆನಂದವೆಂಬ ತೇಗು ಬಂದ ಪರಿಯಲಿ |ಆನಂದ ಮೂರುತಿ ನಮ್ಮ ಪುರಂದರವಿಠಲ 3
--------------
ಪುರಂದರದಾಸರು
ರೂಹ ಹೇಳುವೆ ಕೃಷ್ಣನ ಕೃಪೆಯಲ್ಲಿನವೀನ ಜನನ ಮೃತ್ಯು ಭಯವೆಲ್ಲಿ ಪ.ಕುಶತಲ್ಪ ತಂತ್ರಸಾರಾರ್ಚನೆಯೆತ್ತಖಳಪ್ರಸರದ ಗೊಂದಣದಾರಿಯೆತ್ತಹೊಸಮಲ್ಲಿಗೆಯ ಹಾರ ಸುರಭ್ಯೆತ್ತ ಮಲಕಶ್ಮಲರತ ಗ್ರಾಮಸೂಕರೆತ್ತ 1ಚಕ್ರಪಾಣಿ ಒಲುಮೆ ವಿರತರಿಗುಂಟುಕರ್ತವಿಕ್ರಮವಾದಶೀಲಗೆ ಮತ್ತ್ಯೆಲ್ಲುಂಟುತಕ್ರಭಿನ್ನ್ವಾದರೆ ಹಾಲ ಹೋಲಲಿಲ್ಲ ಭಕ್ತಿವಕ್ರನೆಂದೆಂದಿಗೆ ಭಾಗವತನಲ್ಲ 2ಡಂಬರ ಶ್ರದ್ಧೆಗೆಹರಿಮೆಚ್ಚಲಿಲ್ಲ ಸಲೆಡೊಂಬ ರಾಷ್ಟ್ರ ತಿರುಗೆ ಭೂ ಪ್ರದಕ್ಷಿಣೆಯಲ್ಲಅಂಬುಜಾಕ್ಷನನ್ನು ನಂಬದವ ಕ್ಷುಲ್ಲ ಗತಅಂಬಕನ ನೋಟ ಬದಿಯ ಧನದಲಿಲ್ಲ 3ಇಂದಿರೇಶಮಹಿಮೆ ಮತಿಮಂದಗೇನು ದೀಪಹೊಂದಟ್ಟೆ ಭೋಜನಸುಖ ಶ್ವಾನಗೇನುಎಂದೂ ಸಾಧುಸಂಗಸೌಖ್ಯ ಕುಹಕಗಿಲ್ಲ ಕೆಚ್ಚಲೊಂದಿದ ಉಣ್ಣೆಗೆ ಕ್ಷೀರಸ್ವಾದವಿಲ್ಲ 4ಪೂರ್ವಕೃತಪುಣ್ಯ ಒದಗದೆಂದಿಗಿಲ್ಲ ಯತಿಸರ್ವಜÕರಾಯನ ಮತ ಸುಲಭವಲ್ಲಉರ್ವಿಯೊಳು ಸಮೀರಮತಸ್ಥರಕಾವತಂದೆಸರ್ವೇಶ ಪ್ರಸನ್ನವೆಂಕಟಾಧಿದೇವ 5
--------------
ಪ್ರಸನ್ನವೆಂಕಟದಾಸರು
ವಾರಿಜನಾಭನ ಕರುಣವೆ ಸ್ಥಿರ ಸಂಸಾರ್ಯೆರವು ಕೇಳಾತ್ಮಜಾರುತದಾಯು ದೂರದ ಮುಕುತಿಯದಾರಿಯ ಪಾಥೇಯ್ಯೆಲ್ಲಾತ್ಮ ಪ.ಧರ್ಮದ ಸರಕಿಲ್ಲದವನೆಂದು ಬೇಗ್ಯಮಧರ್ಮ ಭಟರು ಬಂದರಲ್ಲೊಚರ್ಮದ ಮನೆ ಬಿಡಿಸಿದರು ಮುಟ್ಟಲು ನೋವಕರ್ಮಯಾತನೆ ಕೊಟ್ಟರಲ್ಲೊಹಮ್ರ್ಯನಿಕೇತನ ವೃತ್ತಿಕ್ಷೇತ್ರವನು ಅಧರ್ಮಿಗಳಗಲಿಪರಲ್ಲೊಮರ್ಮವರಿತು ತ್ರಾಟಿಸುವಾಗ ಶ್ರೀವಿಶ್ವಕರ್ಮನ ಪೂಜೆ ಹೋಯಿತೆಲ್ಲೊ 1ಹೆಡಗೈಯಕಟ್ಟಿಪರಿಘದೊಳು ಬಡಿವಾಗಮಡದಿ ಮಕ್ಕಳ ಸಹಾಯವೆಲ್ಲೊಒಡೆಯ ದಮ್ಮಯ್ಯ ನಮ್ಮಯ್ಯನೆಂದರೆಕಾಲಹಿಡಿದರೆ ಕೊಡಹಿದರಲ್ಲೊಸುಡುವ ಮಳಲು ಹುಡಿ ಕಲ್ಮುಳ್ಳೊಳೆಳೆವಾಗಹಿಡದೇಜಿ ಕೊಂಬುಕಾಳೆಲ್ಲೊಪೊಡವಿಲಿ ಬಂದಾಗ ಹರಿಸೇವೆ ಮಾಡದೆಕಡುಹುಂಟಾದರೆ ತೋರದೆಲ್ಲೊ 2ಕೀವು ರುಧಿರವಿಟ್ಟ ಕುಂಡದಿ ಮುಣುಗುವಾಗ್ಹ್ಯಾವಿನ ಮಾತೇನಾಯಿತಣ್ಣಸಾವುತೀನವ್ವಪ್ಪಾ ಮೊರೆಯ ಕೇಳೆಂದರೆಆವಾಗಬಾಧೆ ಕಾಣಣ್ಣಆವೈವಸ್ವತದಂಡ ಕೊಟ್ಟು ಬೊಗಳೆಂಬಾಗಚಾರ್ವಾಕತನವೆಲ್ಲಣ್ಣಆ ವಾಸುದೇವನ ಭಟಸಂಗ ನಿನಗೀಗ ವೈರ ಆಗೆಲ್ಲಿದಣ್ಣ 3ನಾಲಿಗೊಣಗಿ ನೀರು ಕೂಳೆಂದು ಅಳುವಾಗಹಾಲ ಶಾಲ್ಯೋದನವೆಲ್ಲೊಮ್ಯಾಲೆ ಮ್ಯಾಲ್ವೈತರಣಿ ಸ್ನಾನವ ಮಾಡುವಕಾಲಕೆ ಅಭ್ಯಂಗನವೆಲ್ಲೊಕಾಲನ ದೂತರ್ಗೆ ಕೊಟ್ಟುಳಿವೆನೆಂದರೆಹೂಳಿದ ಧನ ದೂರಾಯಿತಲ್ಲೊಕಾಲಕಾಲಕೆ ದ್ವಿಜಪಂಕ್ತಿಭೋಜನಸುಖವ್ಯಾಳೆ ತಪ್ಪಿತನ್ನವೆಲ್ಲೊ 4ಕಷ್ಟಿಸಿ ಬಳಲುವೆ ಹಾಹಾಯೆಂದಳಲುವೆಇಷ್ಟನೆಂಟರು ಹೋದರೆತ್ತಮುಷ್ಟಿಕುಠಾರಪ್ರಹಾರನೋಡುನಿನ್ನವರಿಷ್ಟತನವು ನಿಂತಿತೆತ್ತಶಿಷ್ಟರ ನೋಡದೆ ಸತ್ಕಾರ ಮಾಡದೆನಿಷ್ಠುರ ನುಡಿದೆ ಪ್ರಮತ್ತಕೃಷ್ಣ ನಮೊ ಎಂದು ಕಡೆಗಾಣಲರಿಯೆ ಎಳ್ಳಷ್ಟು ಪುಣ್ಯವ ಕಾಣೆನೆತ್ತ 5ಕಂಗೆಟ್ಟು ತಕ್ರನ್ನೆ ಕಾಸಿ ಸೀಸ್ಯೆರೆವಾಗಅಂಗಣದ ಪಶು ಬಹುದೂರಕೆಂಗೆಂಡಗಂಭವಪ್ಪಿಸುವರು ನಿನ್ನ ಪರಾಂಗನೆಭೋಗಿಚದುರಅಂಗ ಶೃಂಗಾರದ ಕೊನಬುಗಾರ ನಿನಗ್ಹಿಂಗುವದೆ ಯಮದ್ವಾರಮಂಗಳ ಮಹಿಮ ಮುಕುಂದ ಮುರಾರಿ ಶ್ರೀರಂಗನ ಭಕುತಿವಿದೂರ 6ಸುಟ್ಟರೆ ಹಿಡಿಬೂದಿ ಕೆಟ್ಟರೆ ಕ್ರಿಮಿಕಾಯಇಟ್ಟರಿರದು ವಾಯುವಿರದೆಹುಟ್ಟಿ ಸುಜನ್ಮದಿ ಜಾಣರಾಗದೆಬುಧರಟ್ಟುವರೆ ದಿವಸ ಬರಿದೆಇಟ್ಟಣಿಸಿದ ಭವಗತ ಸುಖದು:ಖವುಂಡುಟ್ಟು ರಾಮನ ಮನವಿರದೆಕಟ್ಟಕಡೆಲಿ ನರಕವನುಂಬೋದುಚಿತಲ್ಲದಿಟ್ಟನಾಗು ಮಾಯೆಯಜರಿದು7ನಿತ್ಯನೈಮಿತ್ಯಕಾಮ್ಯಾದಿ ಸತ್ಕರ್ಮವಮತ್ತೆ ತಿಳಿದು ನಡೆ ಆತ್ಮಹತ್ಯವಸತ್ಯ ಅನ್ಯವಧೂಜನಸಖ್ಯಪರವಿತ್ತದಂಜಿಕೆ ಇರಲ್ಯಾತ್ಮಕರ್ತಮೂರವತಾರಿ ಪೂರ್ಣ ಬೋಧಾಚಾರ್ಯರಭೃತ್ಯನಾಗಿ ಬಾಳೊ ಆತ್ಮಎತ್ತೆತ್ತ ನೋಡಲು ಬೆನ್ನಬಿಡದೆಕಾವಪ್ರತ್ಯಕ್ಷನಾಗಿ ಪರಮಾತ್ಮ 8ಮಂಗಳಾತ್ಮರಿಗೆಅಹರ್ನಿಶಿಶ್ರೀವರಅಂಗಜಜನಕನೆಚ್ಚರಿಕೆಸಂಗಡಿಸಿದ ವಿಷಯಂಗಳಿದ್ದರೇನುತಂಗಳ ಅನ್ನದೋಕರಿಕೆಹಿಂಗದೆ ವರಸಂಗ ಮಾಡಿದರೊಯಿವರುಮಂಗಳಾತ್ಮಕನಿದ್ದ ಪುರಕೆಬಂಗಾರ ಮನೆಯ ಪ್ರಸನ್ವೆಂಕಟೇಶನಡಿಂಗರರಿಗೆ ನರ್ಕಸರ್ಕೆ 9
--------------
ಪ್ರಸನ್ನವೆಂಕಟದಾಸರು
ವಿವೇಕವ ಪಡೆಯಿರೋ ವಿಭುಗಳ ಕೃಪೆಯಿಂದವಿವೇಕವ ಪಡೆದರೆ ಈಶ್ವರಗಿಂ ಮಿಗಿಲಯ್ಯಪಮನವು ನಿಲ್ಲದು ಎಂದು ಮರುಗುವಿರೇಕಯ್ಯಮನವು ನಿಲ್ಲಲಿಕೆ ನಿಮ್ಮಧೀನವೆಮನವು ಆದಾತನಾನೇ ಮಹತ್ತು ಆದಾತನಾನೇಮನಕೆ ವಿರಹಿತುಮಾಪತಿಯು ತಾನೆಂದು1ಪಾಪವ ಮಾಡಿದೆನೆಂದು ಹಿರಿದು ಮರುಗಲದೇಕೆಪಾಪ ಪುಣ್ಯವು ಪ್ರಕೃತಿಯಲಾದವುಪಾಪವೆಲ್ಲಿಹವೆಲೆ ಪುಣ್ಯವೆಲ್ಲಿಹವೆಂದುಪರಪುರುಷ ತಾನಾಗದೆಂದೂ2ಆತ್ಮನರಿಪೆನೆಂದು ಅತಿ ಕಷ್ಟಬಡಲೇಕೆಆತ್ಮನ ವಿವರಿಸೆ ಅವನಲ್ಲವೆಆತ್ಮನೇ ತಾಕಂಡ್ಯಾಅಗಣಿತಮಹಿಮನುಆತ್ಮ ಅನಂತನಾಮನೆ ತಾನೆಂದು3ಅರಿವುಮರೆವೆ ಎಂಬ ಅಜ್ಞಾನವೇತಕೆಅರಿವುಮರೆವುಅಂಗದಧರ್ಮವುಅರಿವುಮರೆವೆಯುಂಟೆ ಆತ್ಮತಾನಾದವನಿಗೆಅರಿವುಮರೆವುಅಂಬುಧಿತೆರೆಯುಂಟು4ಇಂತು ವಿವೇಕವನ್ನು ವಿಭುಗಳಿಂದಲರಿದುಚಿಂತೆ ಹರಿದು ಚಿದಾನಂದ ಗುರುವಾಮುಂತೆ ದೃಷ್ಟಿಸಿಕೊಂಡು ಮರೆತು ತನುವನು ನಿ-ಶ್ಚಿಂತ ರಾಗಿಯೆ ನಿಜವಿದೆಯಂತೆಂದು5
--------------
ಚಿದಾನಂದ ಅವಧೂತರು
ವೀಣಾಸ್ವರವನು ಕೇಳುತಲಿರುವನ ವಿಶ್ವಾತ್ಮಕನೆಂದೆಂಬೆವೀಣಾಸ್ವರ ಕೇಳಲು ದುರ್ಗುಣವುಡಗಿ ಪೋಗುವುವು ಎಂದೆಂಬೆಪನಾದಬ್ರಹ್ಮವನಾಲಿಸುತಿಹನನು ನರನಲ್ಲವು ನಾನೆಂಬೆನಾದಬ್ರಹ್ಮವನಾಲಿಸುತಿರಲಿಕೆ ನಾನಾಗುಣವು ಲಯವೆಂಬೆ1ಘಂಟಾ ಸ್ವರವನು ಕೇಳುತ ಸುಖವನು ಅನುಭವಿಸುವನ ಗುರುವೆಂಬೆಘಂಟಾಘೋಷದಿಜನನ ಮರಣವು ಮುಳುಗಿಹವು ಎಂದೆಂಬೆ2ಭೇರಿನಾದವ ಕೇಳುತಲಿರುವನ ಭಾಗ್ಯವಂತನು ಎಂಬೆಧೀರ ಚಿದಾನಂದ ಸದ್ಗುರುನಾದದಿ ಲಯವಿಹನು ಎಂದೆಂಬೆ3
--------------
ಚಿದಾನಂದ ಅವಧೂತರು