ಒಟ್ಟು 891 ಕಡೆಗಳಲ್ಲಿ , 95 ದಾಸರು , 752 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಸುಜನ ವಂದ್ಯನ ಪಕಾಮ ತಾಮಸಗಳಲಿ ಬಳಲುತ್ತ ಸೀಮೆ ಸೀಮೆಗಳನುಸುತ್ತುವೀಮನೋರಥಗಳಲೇನು ಗುರುವಿನನೇಮ ಕೀರ್ತನೆಯನಿರಾಮಯಾಮಲಾರ್ಥ ನಿಷ್ಕಾಮ ರಾಮಣೀಯಕವನು ಪ್ರೇಮದಿಂದ ಪೊಗಳುತ 1ಯೋಗ ರಾಗದಿಂದ ಮನವ ನಾಗಲಾಗಲಧಿಕ ಭಕ್ತಿಯೋಗ ವೇಗ ಜನಿತ ಸದನುರಾಗದಿಂದ ನಿಲ್ಲಿಸಿರಾಗ ರೋಗವೆಂಬ ತಮವ ನೀಗಿ ಸದ್ವಿರಾಗದಿಂದ ಆಗಮಾಗಮಾಂತ ವಚನದಾಗು ಪೋಗನರಿತು ನೀ 2ಕಾಲ ಕಾಲದಲ್ಲಿ ಬಾಲಲೀಲೆುಂದ ನಡೆದು ನುಡಿದುಶೀಲ ಲೋಲನಾಗಿ ಲೋಕ ಜಾಲ ಮೂಲವಾಮೇಲೆ ಮೇಲೆ ತಿಳಿದು ಬೆಳೆದು ನಲಿದು ಭಕ್ತಪಾಲ ಗೋಪಾಲಯತಿ ಕೃಪಾಲ ಸದ್ವಿಶಾಲಸುಖವ ತಳೆದು ನೀ 3
--------------
ಗೋಪಾಲಾರ್ಯರು
ಸುನಾಮ ಕೇಶವ ಮಾಧವ ನಾಶನ ಭವನಿಧಿಬಂಧನ ಪ ಬೋಲೋ ರಾಧಾಕೃಷ್ಣ ಸುಲೀಲ ಪಾಲಯ ಕುಲಕೋಟಿ ಪಾವನ ಅ.ಪ ವೃಂದಾವನ ಮಾಲಾನಂದ ಲೀಲಾ ಇಂದಿರೆಪ್ರಿಯ ಮಣಿಮಾಲನ ಸಂದರಮಂದರ ಮಂದಿರ ದೇವಕಿ ಕಂದ ಮುಕ್ಕುಂದ ಗೋಪಾಲನ1 ನೀಲಶ್ಯಾಮ ಭವಮಾಲಹರಣ ದಯ ಆಲಯ ಭಜನಾನಂದನ ಕಾಲ ಕುಜನ ಕುಲಶೀಲ ಶಿಷ್ಟಪ್ರಿಯ ಲೋಲಗಾನ ಹರಿ ಗೋವಿಂದನ 2 ಅಮಿತಮಹಿಮ ಅಸುರಮರ್ದನ ಕಮಲನಾಭ ಕರಿಪಾಲನ ಕಾಮಿತದಾಯಕ ಸುಮಶರಪಿತ ಮಮ ಸ್ವಾಮಿ ಶ್ರೀರಾಮ ಮುಕ್ತಿ ಸೋಮನ 3
--------------
ರಾಮದಾಸರು
ಸುಮ್ಮನೆ ಹರಿದಾಸರೆಂಬಿರೆ ಎಮ್ಮನೆಲ್ಲಾ ಪ ಹಮ್ಮಿನ ಅರಿಷಡ್ವರ್ಗ ಬಿಡದೆ ಅಧರ್ಮರ ಸೇವೆ ಮಾಡಿ ಕಾಲ ಕಳೆವ ಪಾಮರ ಮನುಜನ ಅ.ಪ ಹರಿದಿನದುಪವಾಸ ಮರುದಿನ ಪಾರಣೆ ಸರಿಯಾಗಿ ಮಾಡಿದೆನೆ ಕೊರಳಲ್ಲಿ ತುಳಸೀ ಸರಗಳ ಧರಿಸಿ ಹರಿಗೆ ಮೈಮರೆದಾನೊಂದಿಸಿದೆನೆ 1 ಪಾತ್ರರ ಕೂಡ ಯಾತ್ರೆ ಮಾಡಿ ಪುಣ್ಯ ಕ್ಷೇತ್ರಗಳ ಬಳಸಿ ಪಾದ ನೇತ್ರದಿಂದ ನೋಡಿ ಕೃತಾರ್ಥ ನಾನಾದೆನೆ 2 ವರ ನಾರೇರ ಕಂಡು ನರಕ ಭಯವಿಲ್ಲದೆ ಕರೆದು ಮನ್ನಿಸುವ ವರ ಗಾಯಿತ್ರಿ ಮೊದಲಾದ ಪರಿಪರಿ ಮಂತ್ರಗಳು ನಿರುತ ನಾ ಜಪಿಸುವೆನೆ 3 ಕಾಲಿಗೆ ಗೆಜ್ಜೆಕಟ್ಟಿ ಶಿರಿಲೋಲನ ಮುಂದೆ ಲಲಿತದಿಂ ಕುಣಿಯುವೆನೆ ತಾಳ ಮ್ಯಾಳಾದಿಂದ ನೀಲಮೇಘಶ್ಯಾಮನ ಬಾಲಲೀಲೆ ಪಾಡಿ ಲೋಲನಾಗುವೆನೆ 4 ಕಂದರ್ಪ ಪಿತನಾದ ವಿಜಯ ರಾವi ಚಂದ್ರವಿಠಲನ್ನ ಮಂದಹಾಸ ಮುಖವನ್ನು ಒಂದಿನವಾದರು ನೋಡ್ಯಾನಂದಪಟ್ಟು ಮಂದ ಜ್ಞಾನ ತೊರೆದನೆ 5
--------------
ವಿಜಯ ರಾಮಚಂದ್ರವಿಠಲ
ಸುರೇಶ ಪದವಿಯ ಬೇಡುವನಲ್ಲ ನರೇಶ ಭಾಗ್ಯವ ಕೋರುವನಲ್ಲ ಪ ಗುರೂಪದೇಶವ ಮರೆಯುವನಲ್ಲ ಪರೇಶ ಸ್ಮರಣೆಯ ಬಿಡುವವನಲ್ಲ ಅ.ಪ ಜನನ ಮರಣಕೇ ಹೆದರುವನಲ್ಲ ಜನುಮಗಳು ಬೇಡ ಎನ್ನುವನಲ್ಲ ಮನದಿ ವ್ಯಾಮೋಹವ ಪಡೆಯುವನಲ್ಲ ವನಜನಾಭನ ನಾಮ ಮರೆಯುವನಲ್ಲ1 ನಿನ್ನ ಚರಿತಗಳ ಕೇಳದೆ ಬಿಡೆನು ನಿನ್ನ ಮೂರ್ತಿಯ ನೋಡದೆ ಬಿಡೆನು ನಿನ್ನ ಪಾದಾರ್ಚನೆ ಮಾಡದೆ ಬಿಡೆನು [ನಿನ್ನ ನಾಮಂಗಳ ನುತಿಸದೆ ಬಿಡೆನು] 2 ಮಾಂಗಿರಿಪತಿ ನಿನ್ನ ಒಲಿಸದೆ ಬಿಡೆನು ಕಂಗಳಿಂದಾನಂದ ಪಡೆಯದೆ ಬಿಡೆನು ಅಂಗಾಂಗದ ಸೇವೆ ಮಾಡದೆ ಬಿಡೆನು ರಂಗ ಸಮರ್ಪಣ ಎನ್ನದೆ ಬಿಡೆನು 3
--------------
ಅಸೂರಿ ರಾಮಸ್ವಾಮಿಅಯ್ಯಂಗಾರ್
ಸುಲಿದ ಬಾಳೆ ಹಣ್ಣು ಸುಟ್ಟು ತಿನ್ನಬೇಡಿರೊ ಹಳೆಯ ಜನರ ಅನುಭವಗಳ ಹಳಿಯಬೇಡಿರೊ ಬಿಳಿಯ ವಸ್ತುವೆಲ್ಲ ಕ್ಷೀರವಲ್ಲ ಕಾಣಿರೊ ಥಳಥಳಿಸುವುದೆಲ್ಲ ರಜತವಲ್ಲ ಕಾಣಿರೊ ಸಿರಿಯು ಬಂದ ಕಾಲದಲ್ಲಿ ಮೆರೆಯಬೇಡವೋ ಶಿರವು ಗಟ್ಟಿಯೆಂದು ಕಂಬ ಗುದ್ದಬೇಡವೊ ಮನಕೆ ತುಷ್ಟಿಕೊಡದ ಕಾರ್ಯಗಣನೆ ಬೇಡವೊ ಅನುವಿನಲ್ಲಿ ಪಿಡಿದ ಕಾರ್ಯ ಕೊನೆಯಗಾಣಿಸೊ ಹಾವು ಕೊಂದು ಹದ್ದುಗಳಿಗೆ ಹಾಕಬೇಡವೊ ಗೋವು ಕೊಂದು ಪಾದರಕ್ಷೆ ದಾನಬೇಡವೊ 10 ಅರಿಯದ ಜನರಲ್ಲಿ ಅಂತರಂಗಬೇಡವೊ ಪರರ ಗೋಪ್ಯ ತಿಳಿದರೆ ಬಹಿರಂಗಬೇಡವೊ ಜಂಭ ಕೊಚ್ಚಬೇಡವೊ ರಗಳೆ ರಂಪದಿಂದ ಪರರ ಒಲಿಸಬೇಡವೊ ಗೆದ್ದರಾ ಎತ್ತು ಬಾಲವನ್ನು ಹಿಡಿಯಬೇಡವೊ ಒದ್ದರೆ ಅದು ಹಲ್ಲುಗಳನು ಕಿರಿಯಬೇಡವೊ ಮೂರ್ಖ ಜನಗಳಲ್ಲಿ ವಾದ ಮಾಡಬೇಡವೊ ಮಕ್ಕಳೆದುರಿನಲ್ಲಿ ಗ್ರಾಮ್ಯವಚನ ಬೇಡವೊ ಬಳಿಕ ಮಾತನಾಡುವನು ಗೆಳೆಯನಲ್ಲಯ್ಯ ಕುಳಿತು ತಿನ್ನುವವನು ಸಾಹುಕಾರನಲ್ಲಯ್ಯ 20 ಗಂಟು ಜಗಳ ಕದನಗಳಲಿ ತಂಟೆಬೇಡಯ್ಯ ನಂಟರಿಷ್ಟರಲ್ಲಿ ಭಂಟನಾಗಬೇಡಯ್ಯ ನಾಕು ಜನರ ಮಾತ ಮೀರಿ ನಡೆಯಬೇಡÀಯ್ಯ ಪೋಕರಿ ಜನಗಳಲಿ ಮೂಕ ಬದಿರನಂತಿರೊ ಕಾಲದಲ್ಲಿ ಕೆಲಸಮಾಡಿ ಮುಗಿಸೆಲೊ ನಾಳೆ ನಾಳೆಯೆಂಬ ಕೆಲಸ ಹಾಳು ಕಾಣಿರೊ ಬಿಂಕದಿಂದ ಹರಿಗುರುಗಳ ಮರೆಯಬೇಡಯ್ಯ ಸಂಕಟ ಬಂದಾಗ ವೆಂಕಟೇಶ ಬರುವನೆ ಸಾಲ ಸೋಲ ಮಾಡಿ ದಾನ ಧರ್ಮ ಬೇಡಯ್ಯ ಕೇಳದಿರಲು ನೀತಿ ಹೇಳ ಹೋಗಬೇಡಯ್ಯ 31 ಪರರು ನೋಯುವಂಥ ಮಾತನಾಡಬೇಡಯ್ಯ ಉರಿವ ಒಲೆಗೆ ಉಪ್ಪುಕಾಳನೆರಚಬೇಡಯ್ಯ ನೆರೆಯು ಬಾಳುತಿರಲು ನೋಡಿ ಕರಗಬೇಡಯ್ಯ ಬರಿದೆ ಅಯ್ಯೊ ಪಾಪವೆನಲು ಮರುಕವಲ್ಲವೊ ದುರುಳ ಜನಗಳಲ್ಲಿ ಸರಳನಾಗಬೇಡಯ್ಯ ಹರಿಯ ಭಜನೆಯಲ್ಲಿ ಮನದಿ ನಾಚಬೇಡವೊ ತಿರುಕನಂತೆ ಜ್ಞಾನದ ಭಿಕ್ಷೆಯನು ಬೇಡೆಲೊ ತುರುಕನಂತೆ ಕಾಮದ ತಲೆ ಬಡಿದು ಜೀವಿಸೊ ಸಜ್ಜನಗಳು ಸಮ್ಮತಿಸುವ ಮಾರ್ಗದಲಿ ನಡಿ ದುರ್ಜನಗಳು ಪೇಳಿ ತೋರಿದೆಲ್ಲವನು ಬಿಡಿ40 ಫಲದ ಚಿಂತೆಯಿಲ್ಲದಂತೆ ಧರ್ಮಗಳಿಸಿರೊ ಫಲವು ಹರಿಯಧೀನ ಕೆಲಸ ಮಾತ್ರ ನಿನ್ನದೊ ಧ್ಯಾನ ಮಾಡದಿರಲೊ ಮನದಿ ದುಷ್ಟ ವಿಷಯದ ಧ್ಯಾನದಿಂದ ವಿಷಯದಲ್ಲಿ ಸಂಗ ಬರುವುದೊ ಸಂಗದಿಂದ ದುಷ್ಟಭೋಗ ಕಾಮ ಬರುವುದೊ ಭಂಗವಾದ ಕಾಮದಿಂದ ಕೋಪ ಬರುವುದೊ ಕೋಪದಿಂದ ಮನದಲಿ ವ್ಯಾಮೋಹ ಬರುವುದೊ ಈ ಪರಿಮೋಹದಲಿ ಸ್ಮರಣೆ ನಾಶಪಡುವುದು ಸ್ಮøತಿಯು ತಪ್ಪಿದವನ ಬುದ್ಧಿಮೃತಿಯು ಪೊಂದಲು ಕ್ಷಿತಿಯೊಳವಗೆ ಸರ್ವನಾಶವೆಂದು ನುಡಿಯಿದೆ 50 ಜ್ಞಾನಕೆ ಸಮ ಸಂಪತ್ತಿಲ್ಲ ಜನಕೆ ಲೋಕದಿ ಮೌನಕೆ ಸಮ ಗುಹ್ಯಕೆ ಪಾಲಕರಿಲ್ಲವೊ ಜ್ಞಾನ ಸರ್ವಕರ್ಮಗಳನು ದಹಿಸಿಬಿಡುವುದೊ ಜ್ಞಾನದಿಂದ ಪರಮಶಾಂತಿ ಪಡೆಯುಬಹುದೆಲೊ ಚಿರತನ ವರ್ಣಾಶ್ರಮಗಳ ಧರ್ಮ ಬಿಡದಿರೊ ಮಿತಿಯ ಮೀರಿ ಭೋಜನವನು ಮಾಡಬೇಡವೊ ಕಾಲ ಕಳೆಯಬೇಡವೊ ಲೋಕವ ಭಯಪಡಿಸಬೇಡ ನಡೆನುಡಿಗಳಲಿ ಲೋಕಕೆ ಭಯಪಡಲಿಬೇಡ ಧರ್ಮ ಪಥದಲಿ 60 ಶತುಮಿತ್ರರಲ್ಲಿ ಒಂದೆ ಭಾವ ಪಡೆಯೆಲೊ ಸ್ತೋತ್ರ ನಿಂದೆಗಳಿಗೆ ಹಿಗ್ಗಿ ಕುಂದಬೇಡವೊ ಭಕ್ತಜನರ ನಡೆನುಡಿಗಳ ನಿಂದಿಸದಿರೆಲೊ ಯುಕ್ತರವರು ಹಿರಿಯ ದಯಕೆ ಪಾತ್ರರಿವರೊ ಜಗವು ಸತ್ಯ ಬಗೆ ಬಗೆಯಲಿ ಸೊಗಸ ನೋಡೆಲೊ ಜಗಕೆ ಕರ್ತನೋರ್ವಗೆ ಕೈ ಮುಗಿದು ಬೇಡೆಲೊ ದೇಶಕಾಲ ಪಾತ್ರವರಿತು ದಾನ ಮಾಡೆಲೊ ಆಸೆ ಮೋಸಗಳಿಗೆ ಮನವ ಲೇಸು ಕೊಡದಿರೊ ಪರರ ಮನವು ಕೆದರದಂತೆ ನಿಜಹಿತ ನುಡಿಯು ಗುರುತರ ವಾಚನಿಕ ತಪವ ಮರೆಯಬೇಡವೊ 70 ಸರ್ವಕರ್ಮ ಫಲಗಳನ್ನು ಬಿಡುವನೆ ಯತಿಯು ಗರ್ವಮತ್ಸರಾದಿಗಳನು ಬಿಡುವುದೆ ಮತಿಯು ಶರಣು ಹೊಡೆಯೊ ಕರುಣಮಯನ ಚರಣಯುಗಳದಿ ಕರಗತವಾಗುವುದು ನಿನಗೆ ಇಹಪರ ಸುಖವು ಮಮತೆ ಬಿಟ್ಟು ಜಗದಿ ತಗಲಿ ತಗಲದೆ ಇರೆಲೊ ಕಮಲಪತ್ರಗಳಲಿ ಜಲದ ಕಣಗಳ ತೆರದಿ ಶುದ್ಧ ಧರ್ಮಲೇಶವು ತಲೆ ಕಾಯಬಲ್ಲದೊ ಪದ್ಮನಾಭ ಜನರ ಚಿತ್ತಶುದ್ಧಿ ನೋಡುವ ನಾನೆ ಬ್ರಹ್ಮನೆಂಬ ವಾದ ಬಾಳಬಲ್ಲದೆ ತಾನೆ ಬೀಳಲಿರುವ ಮರಕೆ ಕೊಡಲಿ ಏತಕೆ 80 ಜ್ಞಾನತೀರ್ಥಗಳಲಿ ಮುಳುಗಿ ಸ್ನಾನ ಮಾಡೆಲೊ ಜ್ಞಾನಕೆ ಜ್ಯೋತಿಗಳ ಬೆಳಕು ಕಾಣುತಿರುವುದೊ ದಾರುಣ ಸಂಸಾರ ಜಲದಿ ಪಾರುಗಾಣಲು ಧೀರನಾಗಿ ಈಜುವವಗೆ ತಾರಣ ಸುಲಭ ತಲೆಯ ಮೇಲೆ ಕೈಯನಿಟ್ಟು ಕೂಡ ಬೇಡವೊ ಬೆಳಸಿದಂತೆ ತರುಲತೆಗಳು ಫಲಕೊಡುವುದೊ ಮುಂದೆ ಇಟ್ಟ ಹೆಜ್ಜೆಗಳನು ಹಿಂದೆಗೆಯದಿರೊ ಮಂದಿಗಳಿಗೆ ಫಲದಲಿ ಸಂದೇಹ ಬೇಡವೊ ಹುಳಿಯ ರಕ್ತವಿರುವತನಕ ತಲೆಯು ಬಾಗದು ಕಾಲ ಸಾಲದೊ 90 ಪರರ ನುಡಿಗಳನ್ನು ಕದ್ದು ಕೇಳಬೇಡವೊ ಅರಿತು ನಿನ್ನ ಹರಿಯು ಗುದ್ದಿ ಬುದ್ಧಿ ಕಲಿಸುವ ಚಾಡಿಯಾಡ ಬೇಡ ಚಾಡಿ ಕೇಳಬೇಡವೊ ಸೇಡನು ತೀರಿಸುವ ಹೇಡಿಯಾಗಬೇಡವೊ ನಿನ್ನ ಮಾನದಂತೆ ಪರರ ಮಾನವೆಂದರಿಯೆಲೊ ಅನ್ನ ಹಾಕುವವರ ಹರಿಸಿ ಘನ್ನವೆನಿಸೆಲೊ ಕುಲವ ಶೋಧಿಸುತಲಿ ಕನ್ಯೆದಾನ ಮಾಡೆಲೊ ತಲೆಯ ಕ್ರಾಪು ಯೋಗ್ಯತೆಗೆ ಪ್ರಮಾಣವಲ್ಲವೊ ಕರವ ಪಿಡಿಯೆಲೊ ಥಳಕು ಬೆಳಕು ನೋಡಿ ಬಲೆಗೆ ಬೀಳ ಬೇಡವೊ 100 ಗಾಳಿಯು ಬಂದಾಗ ಬೇಗ ತೂರಿ ಕೊಳ್ಳಲೊ ಕಾಲದ ಸ್ಥಿತಿಯರಿತು ತಗ್ಗಿ ಬಗ್ಗಿ ನಡೆಯೆಲೊ ಮೇಲಿನ ದರ್ಜೆಯಲಿ ನಡೆದು ಕೇಳಬೇಡವೊ ನಾಲಗೆ ಚೆನ್ನಿರುವ ನರಗೆ ಜಗಳವಿಲ್ಲವೊ ಇರುಳು ಕಂಡ ಬಾವಿಗೆ ನೀ ಉರುಳಬೇಡವೊ ಶಕ್ತಿ ಇರುವ ಕಾಲದಲ್ಲಿ ಉತ್ತಮನೆನಿಸೊ ಶಕ್ತಿಯಲ್ಲಿದಾಗ ಇದ್ದು ಸತ್ತ ಪ್ರಾಯವೊ ಸ್ವೊತ್ತಮ ಜನರಲ್ಲಿ ನಿಯತ ಭಕ್ತಿ ಮಾಡೆಲೊ ಭಕ್ತಿಯಿಲ್ಲದವಗೆ ಮುಕ್ತಿಯಿಲ್ಲ ಕಾಣಿರೊ 110 ಪಾಪಿಯಾಗಬೇಡ ಇತರ ಜನರ ವಂಚಿಸಿ ಕೋಪ ಮಾಡಬೇಡ ಕೊಟ್ಟ ಋಣವ ಕೇಳಲು ಕೂಪ ಕೂರ್ಮದಂತೆ ಜಗವ ನೋಡಬೇಡವೊ ರೂಪುರಂಗುಗಳಿಗೆ ಮನವ ಸೋಲಬೇಡವೊ ಹಡೆದ ಮಕ್ಕಳುಗಳ ಕಾಲದಲ್ಲಿ ತಿದ್ದೆಲೊ ಗಿಡದಲಿ ಬಗ್ಗಿಸದ ಮರವು ಬಗ್ಗಲಾರದೊ ಕೊಡಲಿಯನ್ನು ಸೇರಿ ಮರದ ಕಾವಿನಂದದಿ ನಡತೆ ಕಲಿಸದಿದ್ದರವರು ಬುಡಕೆ ತರುವರೊ ಗಳಿಸಿದವನ ಧನವು ಬಳಸಿದವನಿಗೆಂದರಿಯೆಲೊ ಬಳಸಲು ನೀತಿಯಲಿ ಧನವ ಗಳಿಸಿ ಸುಖಿಸೆಲೊ 120 ತಿಳಿದು ಮರ್ಮ ಕಲಿ ಪುರುಷನ ನೆಲಕೆ ತುಳಿಯಿರಿ ಗುಹ್ಯ ತತ್ವ ಪೇಳಬೇಡವೊ ನಾಯಿಗಳಿಗೆ ಹವ್ಯದಾನ ಮಾಡಬೇಡವೊ ಕಾಯುವ ಗುರುಚರಣವೆ ಬಲುಶ್ರೇಯವೆನ್ನದೆ ಕರ್ಮ ಸುಡುವುದೆ ಉಣಲು ಬದುಕಬೇಡ ಜಗದಿ ಬದುಕಲು ಉಣೆಲೊ ಜನನ ಮರಣ ನಿಯತ ಕಾಲಗಳಲಿ ಬರುವವೊ ಕೊನೆ ಮೊದಲುಗಳಿಲ್ಲವು ಈ ಜಗಪ್ರವಾಹಕೆ ತನಗೆ ತಾನೆ ಬೀಳದು ಜಗದಾಖ್ಯ ವೃಕ್ಷವು 130 ತಾಳಿದವನು ಬಾಳುವನೆಂದರಿತು ನಡೆಯೆಲೊ ಗಾಳಿಗುದ್ದಿ ಕರಗಳನ್ನು ನೋಯಿಸದಿರೆಲೊ ಬಾಲನೆಂದು ಅರಿತು ಸತತ ಜ್ಞಾನವ ಗಳಿಸೆಲೊ ನಾಳೆಯ ದಿನ ನಂಬದಂತೆ ಧರ್ಮಗಳಿಸೆಲೊ ಹರಿಯುಕೊಟ್ಟ ಕಾಲದಲ್ಲಿ ಪರರ ರಕ್ಷಿಸೊ ಹರಿಯು ಕೊಡದ ಕಾಲದಲ್ಲಿ ಹರುಷ ಬಿಡದಿರೊ ದೂಷಕರನು ಎಂದಿಗು ನೀ ದ್ವೇಷಿಸದಿರೆಲೊ ಹೇಸಿಗೆಯನು ನಾಲಿಗೆಯಲಿ ತೆಗೆದುಬಿಡುವರೊ ಹಳ್ಳಕೆ ಬಿದ್ದವನಮೇಲೆ ಕಲ್ಲೆಸೆಯದಿರೊ ಟೊಳ್ಳು ಹರಟೆಗಾರನೆದರು ನಿಲ್ಲ ಬೇಡವೊ 140 ಒಳ್ಳೆಯ ಫಲಕೊಡುವ ಕಾರ್ಯಗಳು ಚಿಂತಿಸೊ ಜಳ್ಳು ಹುಲ್ಲಿಗಾಗಿ ಬೆವರು ಸುರಿಸಬೇಡವೊ ಬಿಂದು ಬಿಂದು ಸೇರಿ ಸಿಂಧುವಾಯಿತೊ ಹಿಂದಿನ ಮೊಳೆಯಿಂದ ದೊಡ್ಡ ವೃಕ್ಷವಾಯಿತೊ ಒಂದನು ಇನ್ನೊಂದು ಸೇರಿ ಕೋಟಿಯಾಯಿತೊ ಮಂದಿಗಳಿದನರಿತು ಪುಣ್ಯರಾಶಿ ಗಳಿಸಿರೊ ನೆರಳು ನೀರು ಕೊಟ್ಟ ಜನರ ಮರೆಯ ಬೇಡವೊ ಸರಿಯುತಿರುವ ಮಾರಿ ಮಸಣಿ ಕರೆಯಬೇಡವೊ ಅರಿಯದ ಅಜ್ಞಾನಿಯೊಡನೆ ಸರಸಬೇಡವೊ ತರುಗು ತಿನ್ನುವವನ ಕೇಳಬೇಡ ಹಪ್ಪಳ 150 ದೇಹಿಯೆಂದು ಬಂದವನಿಗೆ ನಾಸ್ತಿಯೆನದಿರೊ ಸಾಹಸವನು ಮಾಡದಿರೊ ಪ್ರಬಲ ಜನರಲಿ ಮೋಹಕೆ ತುತ್ತಾಗದಿರೆಲೊ ಪರಸತಿಯರಲಿ ದೇಹಕೆ ಬಲ ಶುದ್ಧಿ ಕೊಡುವ ನಿಯಮ ಬಿಡದಿರೊ ಭಾಗ್ಯಹೀನ ಬಡವನೆಂದು ಜರಿಯಬೇಡವೊ ಯೋಗ್ಯತೆಯನು ತಿಳಿಯಲು ಬಲು ಸುಲಭವಲ್ಲವೊ ಶ್ಲಾಘ್ಯವಾದ ಮೂಲಿಕೆಗಳನರಿಯೆ ಸುಲಭವೆ ಯೋಗ್ಯತೆಯನುಸರಿಸಿ ಬರುವ ಭಾಗ್ಯ ಬೇರಿದೆ ಖ್ಯಾತಿಗಾಗಿ ಆತ್ಮಸ್ತುತಿಯ ಮಾಡಬೇಡವೊ ಕೋತಿಯಂತೆ ಕುಣಿಯಬೇಡ ಸರಿಸಮರೊಳಗೆ 160 ಮೂತಿ ತಿರುಗಬೇಡ ಪರರ ಹಿತನುಡಿಗಳಿಗೆ ಸೋತ ಹಾಸ್ಯ ಮಾಡಬೇಡ ರಸಿಕ ಜನರಲಿ ಹಿರಿಯರು ಸಂದೇಹಪಡುವ ಮಾರ್ಗ ತ್ಯಜಿಸೆಲೊ ಬರಿಯ ಮಾತನಾಡಿ ಬೆನ್ನು ತಟ್ಟ ಬೇಡವೊ ಪರರ ಹಳ್ಳಕ್ಕಿಳಿಸಿ ಆಳ ನೋಡಬೇಡವೊ ಕರಕೆ ಸಿಕ್ಕಿದಾಗ ಹಲ್ಲು ಕಿರಿಯಬೇಡವೊ ಅರಳು ಹುಡುಕಬೇಡವೊ ಎದೆಯು ಒಡೆಯುವಂತೆ ಸುದ್ದಿ ಪೇಳಬೇಡವೊ ಬೀದಿಯಲಿರುವ ಜನಗಳ ಬೇಸರಿಸಬೇಡವೊ ಬೆದೆಯಲಿರುವ ದುರುಳನನ್ನು ಕೆಣಕಬೇಡವೊ 170 ಊರು ಕುರಿಯ ಕಾದು ಗೌಡನೆನಿಸಬೇಡವೊ ದೂರು ತರುವ ಜನರ ಕ್ಷಣದಿ ನಂಬಬೇಡವೊ ನಾರಿಯ ಸಾಹಸವ ನಂಬಿ ದುಡುಕಬೇಡವೊ ಎರಡು ಕರವು ಸೇರದೆ ಚಪ್ಪಾಳೆಯಾಗದು ಕುರುಡನು ತೋರಿಸುವುದೆಲ್ಲ ಮಾರ್ಗವಾಗದು ಕರಡಿಯು ಮೈಯಪರಚಲದು ಸೌಖ್ಯವಾಗದು ಗುರುಗಳ ಬಿಟ್ಟೋದಲು ಉಪದೇಶವಾಗದು ಹರಿಯಭಕುತಿ ಹರಿಯದಿರಲು ಗಾನವಾಗದು ಬರಿಯ ಸ್ವರಗಳುರುಳಿಸೆ ಕೀರ್ತನೆಯದಾಗದು 180 ಕರದಿ ತಟ್ಟೆ ಹೊಳೆಯುಂತಿರೆ ಪುರಾಣವಾಗದು ಕಿರಿಯ ಜನರ ಗುಣಗಾನವು ಭಜನೆಯಾಗದು ಅಕ್ಕಿಗಾಗಿ ಅಲೆವರೆಲ್ಲ ದಾಸರಾಗರು ಬೆಕ್ಕಿನಂತೆ ಕಣ್ಣು ಮುಚ್ಚಿ ಯತಿಗಳಾಗರು ಚಿಕ್ಕ ಜಿರಳೆ ಮೀಸೆಯಿರಲು ರಾಯರಾಗದು ಚಿಕ್ಕ ಕೊಳೆಯ ಚೌಕ ಧರಿಸೆ ಮಡಿಯದಾಗದು ಕದ್ದು ಅವಿತುಕೊಂಬರೆಲ್ಲ ಗರತಿಯಾಗರು ಮದ್ದು ಮಾಟ ಮಾಡುವವರು ಸುದತಿಯಾಗರು ಶುದ್ಧ ಧೈರ್ಯ ನಡತೆಯಿಂದ ನಿಂದ್ಯರಾಗರು ಬುದ್ಧಿ ಬದುಕು ಹೇಳುವವರು ದ್ವೇಷಿಯಾಗರು 190 ರೀತಿ ನೀತಿಗಳನು ಪರಗೆ ಹೇಳಲು ಸುಲಭ ಮಾತನಾಡಿದಂತೆ ಮಾಡಿ ತೋರುವರಿಹರೇ ತಾತನ ಕಾಲದಲ್ಲಿ ನುಡಿದ ಮಾತಿದಲ್ಲವು ಹೋತನ ಗಳಸ್ತನವಿದಲ್ಲ ಕೂತು ಕೇಳರಿ ಗಾದೆಗಳನು ವೇದವೆಂದು ಪೇಳಲುಚಿತವು ಮಾದರಿ ಅಣುಶಕ್ತಿಯಿಂದೆ ಗಾದೆ ಗಾದೆಗು ಪರಮ ಭಾಗವತರ ಚರಿತೆಯೋದಿ ನೋಡಿರಿ ಅರಿಯಬಹುದು ನುಡಿದ ನೀತಿಸಾರವೆಲ್ಲವ ನಾಡುನುಡಿಗಳೆಂದು ಮರೆಯಬೇಡವೆಂದಿಗು ಪಾಡಿದರೆ ಪ್ರಸನ್ನ ಹರಿಯು ನೀಡುವ ಫಲವ 200
--------------
ವಿದ್ಯಾಪ್ರಸನ್ನತೀರ್ಥರು
ಸುವ್ವಿ ಶ್ರೀ ದೇವಿರಮಣ ಸುವ್ವಿ ಸರ್ಪರಾಜಶಯನ ಹರಣ ಸುವ್ವಿ ನಾರಾಯಣ ಪ ಭವ್ಯಚರಿತ ದುರಿತವಿಪಿನ ಹವ್ಯವಾಹನ ಭವೇಂದ್ರಾದಿ ಸೇವ್ಯಮಾನ ಸುಪ್ರಸಿದ್ಧ ಸುಲಭsÀ ಮೂರುತಿ ಅವ್ಯಯಾಮಿತ ಸುಖಾತ್ಮ ದಿವ್ಯ ಮಹಿಮೆ ತುತಿಪೆ ಸುವಿವೇಕಿಗಳಿಗೆ ಕೊಡುವುದಮಿತ ಮೋದವ 1 ವಾಸವಾದ್ಯಮರ ವಾರಾಶಿ ಶಾರದೇಂದು ಮಧ್ವ ದೇಶಿಕಾರ್ಯ ಚಿತ್ತ ಸಿಂಹಪೀಠಮಧ್ಯಗ ದೇಶಕಾಲ ವ್ಯಾಪ್ತ ಸರ್ವೇಶ ಸಾರ್ವಭೌಮ ಶ್ರೀಮ ಹೀ ಸಮೇತ ಕೃಷ್ಣ ಕೊಡಲಿ ಎಮಗೆ ಮಂಗಳ 2 ಕಮಲ ಸಂಭವನ ವೇದ ತಮನು ಒಯ್ಯತಿರಲು ಲಕ್ಷ್ಮೀ ಶರಧಿ ಮಥನದಿ ಕಮಠ ರೂಪಿನಿಂದ ಸುರರಿಗಮೃತವಿತ್ತು ಕಾಯ್ದ ಅಖಿಳ ಸುಮನಸೇಂದ್ರ ಸ್ವಾಮಿ ಕೊಡಲಿ ಎಮಗೆ ಮಂಗಳ 3 ಕನಕ ಲೋಚನನ ಸದೆದು ಮನುಜಸಿಂಹ ವೇಷನಾದ ದ್ಯುನದಿ ಪಡೆದು ಜನನಿ ಕಡಿದು ವನವ ಚರಿಸಿದ ಜನಪ ಕಂಸನ್ನೊದೆದು ತಿರಿಪುರವನಿತೆಯರ ಸುವ್ರ್ರತ ವಿನುತ ಕಲಿ ದೇವರಾಜ ಎಮ್ಮ ಸಲಹಲಿ 4 ಪಾಹಿ ಪಾವನ ಚರಿತ್ರ ಪಾಹಿ ಪದ್ಮ ಪತ್ರನೇತ್ರ ನಿಗಮ ಗಾತ್ರ ಮಾಂ ಪಾಹಿ ಸಜ್ಜನಸುಮಿತ್ರ ಪಾಹಿ ದೋಷದೂರ ಸುಗುಣ ಪಾಹಿ ಜಗನ್ನಾಥ ವಿಠಲ ಜಯ ತ್ರಿಧಾಮಗ 5
--------------
ಜಗನ್ನಾಥದಾಸರು
ಸುಳಾದಿ ತಾಳ-ಝಂಪೆ ನೋಡುವರೆ ನೀರದಶ್ಯಾಮಸುಂದರ ಮೂರ್ತಿ ಪಾಡುವರ ಪರಮಪಾವನ್ನ ಕೀರ್ತಿ ಕೂಡುವರೆ ಕೇವಲಾನಂದ ಚಿನ್ಮಯಗಾತ್ರ ನೀಡುವರೆ ನಿಖಿಳಲೋಕೈಕಪಾತ್ರ ನೋಡಿ ನಮಿಸುವರುಂಟು ಪಾಡಿಹಿಗ್ಗುವರೂಟ ಕೂಡಿ ಸುಖಿಸುವರುಂಟು ನೀಡಿ ನಲಿವವರುಂಟು ನೋಡಿಸುತ ಪಾಡಿಸುತ ಕೂಡಿಸುತ ಬೇಡಿಸುತ ನಾಡದೈವಂಗಳ ಕೊಂಡಾಡಿಸದಲೆ ಬೇಡಿದಿಷ್ಟವ ಕೊಡುತ ಶ್ರೀದವಿಠಲ ದಯ - ಮಾಡಿ ನಮ್ಮನು ಪೊರೆವ ರೂಢಿಗೊಡೆಯ ನಾಡದೈವಂಗಳ ಕೊಂಡಾಡಿಸದಲೆ 1 ತಾಳ-ಮಟ್ಟ ಸಕಲ ಶ್ರುತಿನಿಕರಸಾರಹೋ ಶುಕಮಹಾಮುನೀಂದ್ರ ಸನ್ನುತ ಪ್ರಕಟ ಮಾಡಲ್ಯಾಕೆ ನಿನ್ನನು ಪರಮಪುರುಷ ಪ್ರಕಟಮಾಡಲ್ಯಾಕೆ ನಿನ್ನನು ಭಕ್ತವತ್ಸಲನೆಂಬೆನಲ್ಲದೆ ಮುಕುತವಂದ್ಯ ಶ್ರೀದವಿಠಲ ಯುಕುತಾಯುಕುತವೊಂದನರಿಯದೆ ಪ್ರಕಟಮಾಡಲ್ಯಾಕೆ ನಿನ್ನನು 2 ತಾಳ-ತ್ರಿವಿಡಿ ಆಯನುಭವ ಭಯ ಲಯವರ್ಜಿತ ನಯನೋತ್ಸಹಕಾರಕ ತಾರಕ ಜಯಮಂಗಳ ಮಂಗಳ ಮಂಗಳ ಮಾಯಾ ಮಾಮರ ದೇವರಾÀಟ ಸಯವೇ ಸೈ ಶ್ರೀದವಿಠಲ ನಿ ನ್ನಯ ಚರಣಕೆ ನಮಿಸುವೆ ನಮಿಸುವೆ ಜಯ ಮಂಗಳ ಮಂಗಳ ಮಂಗಳ ಮಾಯಾ ಮಾಮರ ದೇವರಾಟ 3 ತಾಳ-ಅಟ ಬಾರೋ ಬಾರೋ ಭವದೂರ ದೀನಜನ ಭಾರ ನಿನ್ನದಯ್ಯಾ ಅಯ್ಯಯ್ಯಾ ಸಾರಿದೆನೊ ನಾ ನಿನ್ನ ಸಾರಿದೆನೊ ನಿನ್ನ 4 ತಾಳ-ಆದಿ ಶ್ರೀರಮಣ ಶ್ರೀದವಿಠಲ ಸಂ - ಚಾರು ಚರಣಗಳ ಸಾರಿದೆನೊ ನಿನ್ನ ಶಿರಿಗುರವಿತ್ತೆ ಪರಮನ ಪೆತ್ತೆ ಗಿರಿಜೇಶಗೆ ನಿನ್ನ ಮೈ ಇತ್ತೆ ಶರಣಾಗತವತ್ಸಲ ಕರುಣಾಕರ ಶ್ರೀದವಿಠಲ ಸರಿಬಂದರೆ ಸಾಕುವದೆಮ್ಮನು ಶರಣಾಗತವತ್ಸಲ 5 ಜತೆ ಸೋಲು ಶ್ರೀದವಿಠಲ ಸೋಲು ಗೆಲುವು ನಿನ್ನ
--------------
ಶ್ರೀದವಿಠಲರು
ಸೂತ್ರ ಸುತ ಪ್ರಥಿವ ದೇವ ಪ ಪೃಥುವ್ಯಾಖ್ಯ ಸೌಪರಣಿ ಪ್ರಿಯ ಗರುಡ ದೇವಾ ಅ.ಪ. ಅಮೃತ ಕಲಶವನುಸನುಮತದಿ ನೀ ತೋರಿ | ನಿನ ತಾಯ ಸೆರೆ ಕಳೆದೇ 1 ಗರುಡದೇವನೆ ನೀನು | ಹರಿಗೆ ವಾಹನನಾಗಿಹರಿಯ ಪಾದಗಳ್ ಧರಿ5 ಕ5À5Àಡರಲೀ |ಹರಿಬಿಂಬ ಕಾಣುತ್ತ | ಚರಣ ನಖ ಪಂಕ್ತಿಯಲಿಹರಿಯ ಸ್ತೋತ್ರವ ಮಾಳ್ಪ | ಸುರ ಕುಲಾಗ್ರಣಿಯೆ 2 ಕಾಲ ನೀಗಿದೆ ನಾನುಕಾಲ ನೀಯಾಮಕನ | ಘಳಿಗೆ ಸ್ಮರಿಸದಲೆಕಾಲಾತ್ಮ ಗುರು ಗೋ | ವಿಂದ ವಿಠಲನ ಸಾರ್ವಕಾಲದಲಿ ನೆನೆವಂಥ | ಶೀಲ ಮನವೀಯೋ 3
--------------
ಗುರುಗೋವಿಂದವಿಠಲರು
ಸೂರ್ಯ ಮಂಡಲ ಮಧ್ಯವರ್ತಿ | ಕಾರ್ಯ- ಕಾರಣ ಪ್ರಕೃತಿಗಳಿಗೆ ಚಕ್ರವರ್ತಿ-ವಿಜ್ಞಾನ ಸ್ಫೂರ್ತಿ-ವಿರಾಟಮೂರ್ತಿ ಪ ಪಾದ ತುರ್ಯನಾಮಕ ಲೋಕ- ಮರ್ಯಾದಾ ಸ್ಥಾಪಕ ಮಾದೇವಿರಮಣ-ಶತಕೋಟಿ ಕಿರಣ-ತೋರೋ ತವ ಚರಣ 1 ಅಮಿತ ನಿರಕ್ಷರ ಕುಕ್ಷಿಗಳ್ ನಿತ್ಯ ಮಾಡುವ ತ- ಪ್ಪಕ್ಷಮಿಸಬೇಕಪ್ಪ-ನಾವು ನಿನಗೆ ಕಪ್ಪ 2 ಕಮಲ ಸಂಭವ ಹೃದ್ಯ ನ್ಯಾಯಧರ್ಮಯುಕ್ತ ನಿಗಮಾಂತವೇದ್ಯ ಚೋದ್ಯ 3 ಹಾರ ಕಿರೀಟ ಕೇಯೂರ ಮಕರಕುಂಡಲ ಧಾರಿ ಸ್ವರ್ಣಮಯಾಂಗ ಧೃತ ಶಂಖ ಚಕ್ರ-ಶಿಕ್ಷಿತ ಶುಕ್ರ-ಪರಿಹರಿಸು ವಕ್ರ4 ವೃಷ್ಟಿಯ ಕೊಟ್ಟು ಸಂತುಷ್ಟಿ ಪೊಂದಿಸು ಜಗ ಜಟ್ಟಿ ಶ್ರೀ ಗುರುರಾಮವಿಠ್ಠಲ ಸ್ವಾಮಿ ಶಿಷ್ಟ ಜನಪ್ರೇಮಿ-ಸರ್ವಾಂತರ್ಯಾಮಿ5
--------------
ಗುರುರಾಮವಿಠಲ
ಸೂರ್ಯ ಯತಿವರ್ಯ | ಮ ಧ್ವಾರ್ಯರ ಸುಮತ ಸರೋಜಕೆ ಸುಶೀಲೇಂದ್ರ ಪ ಬುಧಜನ ವಂದಿತ ಸುಧಿ ಸುವೃತೀಂದ್ರರ ಸದಮಲ ಘನ ಸದ್ ಹೃದಯಾ ಕಾಶಕೆ 1 ಧರಣಿ ಸುರಾಗ್ರಣಿ ಗುರು ಸುವೃತೀಂದ್ರರ ಸುರಚಿರ ಸರಸಿಜಕರ ಪೂರ್ವಾದ್ರಿಗೆ 2 ಭೂಸುರ ಸೇವಿತ ಪೂಶರ ನಿರ್ಜಿತ ಭಾಸುರ ವರ ಸನ್ಯಾಸ ಸುಚ್ಭಾಯಕೆ 3 ಬಗೆ ಬಗೆಯಿಂದಲಿ ನಿಗವೋಕ್ತಿಯಲಿ ರಘುವರನರ್ಚಿಪ ಸುಗುಣವೆಂಬ್ಹಗಲಿಗೆ 4 ಶಾಮಸುಂದರನ ನಾಮ ಪೊಗಳಿದ ಪಾಮರ ಮತಿ ಜನಸ್ತೊಮ ಯಾಮಿನಿಗೆ 5
--------------
ಶಾಮಸುಂದರ ವಿಠಲ
ಸೇವಕನೆಲೊ ನಾನು ನಿನ್ನಯ ಪಾದಸೇವೆ ನೀಡೆಲೊ ನೀನು ಪ. ಸೇವಕನೆಲೊ ನಾನು ಸೇವೆ ನೀಡೆಲೊ ನೀನುಕಾವದೇನೆಲೊ ಶ್ರೀವಧೂವರ ರಾವಣಾಂತಕ ರಕ್ಷಿಸೆನ್ನನುಗೋವರ್ಧನ ಗಿರಿಧರ ದೇವ ಗೋವುಗಳ ಕಾವಶ್ರೀಮಹಾನುಭಾವ ವರಗಳನೀವ ದೇವಶ್ರೀವಲ್ಲಭ ದಯಮಾಡೆನ್ನನುಈ ವ್ಯಾಳೆಗೆ ಇಂದಿರೆರಮಣ ಅ.ಪ. ರಾಮ ದಶರಥನಂದನ ರಘುಕುಲಾಬ್ಧಿಸೋಮ ಸುಂದರವದನವಾಮನ ಪರಿಪೂರ್ಣಕಾಮ ಕೌಸಲ್ಯರಾಮಸ್ವಾಮಿ ಶ್ರೀರಂಗಧಾಮ ದೈತ್ಯವಿರಾಮಶ್ರೀಮದನಂತ ನಾಮಭೀಮ ಮುನಿಜನಸ್ತೋಮರಮ್ಯಗುಣಧಾಮ ರಣರಂಗಭೀಮಕೋಮಲಶ್ಯಾಮ ಹೇಸಾಮಜವರದ ನೀನನುದಿನಕಾಮಿತಫಲವನು ಕರುಣಿಸಿ ಕಾಯೊ 1 ಶಂಕರ ಸುರಸೇವಿತ ಶೇಷಗರುಡಾ-ಲಂಕಾರ ಮಣಿಶೋಭಿತಪಂಕಜನಯನ ಮೀ-ನಾಂಕ ಜನಕ ಪಾದ-ಪಂಕಜಾಸನವಿನುತ ತಿರುಪತಿವೆಂಕಟ ಬಿರುದಾಂಕ ಜಯ ಜಯಶಂಖಚಕ್ರಗದೆ ಪಂಖ ಪಿಡಿದಕಳಂಕ ಚರಿತ ತಾ-ಟಂಕಗೊಲಿದ ನಿಶ್ಶಂಕಲಂಕಾಧಿಪರಿಪು ರಘುಪತಿಕಿಂಕರರಿಗೆ ಕಿಂಕರ ನಾನೆಲೊ 2 ಮಾಧವ ಮಧುಸೂಧನನಂದಮಂಗಳ ವಿಗ್ರಹಬಿಂದುಮಾಧವ ಶ್ರೀಮುಕುಂದ ಶ್ರೀಮದಾ-ನಂದ ವಂದಿತಾಮರವೃಂದ ಶ್ರುತಿಗಳ ತಂದ ತುರಗವನೇರಿ ಬಂದವೃಂದಾವನದೊಳಗಿಂದ ಯಶೋದೆಯಕಂದ ಹರಿಗೋ-ವಿಂದ ಶೇಷಗಿರಿಯಲಿ ನಿಂದಮಂದಾಕಿನಿ ಪಡೆದೆಲೊ ಧ್ರುವಗೊಲಿ-ದಂದದಿ ಎನಗೊಲಿಯೊ ಹಯವದನ 3
--------------
ವಾದಿರಾಜ
ಸ್ಮರಿಸಿವುದು ರಘುನಂದನನ ಪ ನಿರುತದಿ ಬೆಳಗಿನೊಳೆದ್ದು ಭಕುತಿಯಲಿ ಅ.ಪ. ಜನಪತಿ ದಶರಥನುದರದಿ ಜನಿಸಿದವನಿತೆ ಅಹಲ್ಯೆಯ ತಾನುದ್ಧರಿಸಿದಘನ ಶಂಕರ ಧನುವ ಭಂಗಿಸಿದಜನಕ ಸುತೆಯ ವರಿಸಿದ ಶ್ರೀರಾಮನ 1 ತಾಯಿ ಕೈಕೇಯಿಯ ಮಾತು ನಡೆಸಿದನೋಯದೆ ವನವನು ಸತಿಸಹ ಸೇರಿದಮಾಯಾಮೃಗದಾಶೆಗೆ ಸತಿಯನಗಲಿದರಾಯ ಲಕ್ಷ್ಮಣನಣ್ಣ ಶ್ರೀರಾಮನ 2 ದಂಡಕದೊಳು ಸತಿಯನು ಶೋಧಿಸಿದಚಂಡ ಹನುಮಗೆ ತಾ ದೊರೆಯಾದಪುಂಡ ಜಲಧಿಯ ದಾಟಿಸಿದಹೆಂಡತಿ ಇರವನು ತಿಳಿದ ಶ್ರೀರಾಮನ 3 ಜಲಧಿಗೆ ಸೇತುವೆ ನಿಂತು ಬಿಗಿಸಿದಖಲ ರಾವಣನ ರಣದೊಳು ಕೆಡಹಿದಒಲಿದು ವಿಭೀಷಣನನು ತಾ ಪೊರೆದನೆಲದೊಳು ಸುಖ ಬೀರಿದ ಶ್ರೀರಾಮನ 4 ಧರುಮವ ನೆಲಸಲು ದುಷ್ಟರ ತರಿದಾ ಧರೆಯೊಳು ಶಿಷ್ಟರ ಪೊರೆಯಲು ಬಯಸಿದಸಿರಿಪತಿ ಗದುಗಿನ ವೀರನಾರಾಯಣನರನಾಗವತರಿಸಿದ ಶ್ರೀ ರಾಮ 5
--------------
ವೀರನಾರಾಯಣ
ಸ್ಮರಿಸೈ ಸತತವು ಸಂಸ್ಮರಿಸೈ ಸತತವು ಪ ಯತಿಗುಣ ಭೂಷಣ ವ್ಯಾಸ ಯತೀಂದ್ರರ ಅ.ಪ ಗುರುಬ್ರಹ್ಮಣ್ಯರ ಕರಕಮಲದಿ ಪುಟ್ಟಿ ಪರಮ ಕೀರುತಿಯಿಂದ ಮೆರೆದ ಯತೀಂದ್ರರ 1 ಸುಖಬೋಧ ಸದಾಗಮಸಾರವ ನಿಜ ಮುಖದಿಂದ ಭೂಸುರರೊಳಗರುಹಿದವರ 2 ಚಂದ್ರಿಕಾ ನ್ಯಾಯಾಮೃತ ತರ್ಕತಾಂಡವ ಚಂದದಿ ರಚಿಸಿ ಆನಂದಗೊಂಡವರ 3 ವರಕರ್ಣಾಟಕ ಸಿಂಹಾಸನದಲಿ ಮರಕತಮಣಿಯಭೀಷೇಕ ಪಡೆದವರ 4 ಉನ್ನತ ಗುಣ ಸುಖ ಚಿನ್ಮಯ ರೂಪ ಪ್ರ ಸನ್ನ ಶ್ರೀರಾಮನ ಭಕುತವರೇಣ್ಯರ 5
--------------
ವಿದ್ಯಾಪ್ರಸನ್ನತೀರ್ಥರು
ಸ್ವಾತಂತ್ರ್ಯವೆನಗುಂಟೆ ಸರ್ವಾಂತರ್ಯಾಮಿ ಪ ನಿಂತು ನೀ ನಡೆಸುವಿಯೊ ಜೀವಾಂತರ್ಯಾಮಿ ಅ.ಪ ಜೀವ ಸ್ವರೂಪದಲಿ ಜೀವನಾಕಾರದೊಳಿದ್ದು ಅನಾದಿಕರ್ಮ ಜೀವರಿಗೆ ಪ್ರೇರಿಸಿ ಜೀವಕೆ ಚೇತನ ಕೊಟ್ಟು ಜೀವಕ್ರಿಯೆಗಳನ- ಭಿವ್ಯಕ್ತಿ ಮಾಡಿ ಸತತ ಪೊರೆಯುವ ಕರುಣಿ 1 ದತ್ತಸ್ವಾತಂತ್ಯ ತನಗಿತ್ತಿಹನು ದೇವನೆಂದು- ನ್ಮತ್ತತನದಿ ತಾ ಕರ್ತನೆಂದೆನಿಸಿ ಸುತ್ತಲಹ ನಿತ್ಯ ಅವಸ್ಥೆಗಳ ಪರಿಹರಕೆ ಶಕ್ತನಾಗನು ಏಕೆ ಆಪತ್ತುಗಳು ಬರಲು 2 ಪೂರ್ಣವಾಗಿ ತಾ ಜಡನಂತಿಹಾ ಕರಣದಲಿ ಶ್ರೀರಮಣ ಸೇರಿ ಚೇತನ ಕೊಟ್ಟು ಕ್ರೀಡೆಗೋಸುಗ ಬಿಡುವ ಸರ್ವ ಜೀವರನಾ 3 ಅನಾದಿಕರ್ಮ ಎನ್ನದೆಂದಿಗು ಸರಿಯೆ ಮುನ್ನ ಪ್ರಳಯದಿ ನಿನ್ನ ಘನ್ನೊಡಲೊಳಿಂಬಿಟ್ಟೆ ಎನ್ನ ಕರ್ಮಗ್ರಂಥಿ ಎನ್ನಿಂದ ಬಿಡಿಸೊ 4 ಅನಿರುದ್ಧ ಲಿಂಗಾ ಅಂಗೋಪಾಂಗದಲಿ ನೀನ್ಹಾಂಗೇ ಮೆರೆವೆ 5 ಹೃಷೀಕಪನೆ ನಿನಗೆ ಇದು ಸಂತೋಷವೇನೊ ಈಷಣತ್ರಯ ಹರಿಸಿ ಪೋಷಿಸೋ ದೇವಾ 6 ತರಣಿ ತರಣಿಕಿರಣನನುಸರಿಸಿ ವೃತ್ತಿಯಹುದೊ ತ್ವರಿತದಲಿ ಸ್ಥೂಲದಲಿ ಕಾರ್ಯಾಭಿವ್ಯಕ್ತಿಯೊ 7 ನಾನತ್ತು ಫಲವೇನೊ ಸ್ಥಿತಿಕಾಲದಿ ನೀನಿಲ್ಲದಿನ್ನಿಲ್ಲ ಪ್ರತಿಬಿಂಬ ಕಾರ್ಯವಹುದೋ 8 ಹೆಚ್ಚು ಮಾತೇನು ಜೀವನಿಚ್ಛೆಯನನುಸರಿಸಿ ಅಚ್ಯುತ ತಾನೆ ಸ್ವೇಚ್ಛಚರಿಸಿ ಎಚ್ಚರಿಸಿ ಸ್ಥೂಲದಿಂದೆಚ್ಚರದಿ ನಡೆವುದೊ 9 ನಿನ್ನ ಸಂಕಲ್ಪವಲ್ಲದಿನ್ನಿಲ್ಲ ಅನ್ಯಥಾಗುವುದುಂಟೆ ಇನ್ನು ಹರಿಸೋದೇವಾ 10 ಶ್ರೀದನಿಂ ದತ್ತಸ್ವಾತಂತ್ರ್ಯ ಸಮ್ಮತವೇನು ಆದರಿಸಿ ಸಲಹಯ್ಯ ಮೋದತೀರ್ಥಾ- ರಾಧ್ಯ ಶ್ರೀ ವೇಂಕಟೇಶಾ11
--------------
ಉರಗಾದ್ರಿವಾಸವಿಠಲದಾಸರು
ಸ್ವಾಮಿ ಕ್ಷೇಮೇಂದ್ರರ ಪ್ರೇಮ ಭಜಕ ಶ್ಯಾಮಸುಂದರ ಪ ಅಷ್ಟಭೋಗ ಪಟ್ಟಾರೋಹಣ ನಿಷ್ಟಜನರ ಕಷ್ಟಹರಣ ಸೃಷ್ಟಿ ಈರೇಳು ಇಟ್ಟು ಹೃದಯದಿ ಮುಟ್ಟಿರಕ್ಷಿಪ ಅಷ್ಟಮೂರುತಿ 1 ಕಮಲನಾಭ ಕಮಲವದನ ಕಮಲಪಾಣಿ ವಿಮಲಚರಿತ ಕಮಲಪೀಠನಯ್ಯ ಸುದಯ ಕಮಲನೇತ್ರ ಕಮಲಪ್ರಿಯಾ2 ಭಕ್ತಜನರ ಪ್ರಾಣಧವ ನಿತ್ಯ ನಿರ್ಮಲ ಮುಕ್ತಿಪದವ ಭಕ್ತಗಿತ್ತು ನೀಡು ಕ್ಷೇಮ ನಿತ್ಯ ನಿರ್ಮಲಾತ್ಮ ಶ್ರೀರಾಮ 3
--------------
ರಾಮದಾಸರು