ಒಟ್ಟು 1764 ಕಡೆಗಳಲ್ಲಿ , 105 ದಾಸರು , 1296 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ನೆಚ್ಚಬ್ಯಾಡ ನೀರುಗುಳ್ಳೆಗೆ ಸರಿಯಾದ ಕುತ್ಸಿತ ದೇಹವೆಂದಿಗು ಸ್ಥಿರವಲ್ಲ ನ- ಮ್ಮಚ್ಚುತನಾನಂತನ ನೆನವುತ ಅನುಗಾಲ ಸ್ವಚ್ಛನಾಗಲು ಹರಿ ಮೆಚ್ಚುವನು ಪ. ಸ್ವಾತಂತ್ರ್ಯ ಲೇಶವಾದರು ನಿನಗಿಲ್ಲದೆ ಪಾತಕ ಫಲಕಿನ್ನು ಗುರಿಯಾದಿಯಲ್ಲದೆ ಯಾತರ ಸುಖವೆಂದೀ ಸಂಸಾರ ಕೂಪದಿ ಪ್ರೀತಿ ಬಡುವಿ ಪಂಚಬಂಧದಲಿ ವಾತ ಪಿತ್ತ ಶ್ಲೇಷ್ಮ ಪೂಯ ಸೃಕ್ಪೂರಿತ ಘಾತವಾಗುವುದೊಂದು ನಿಮಿಷಾರ್ಧದಲಿ ಜಗ- ನ್ನಾಥ ನಂಬಿದರೆಂದಿಗು ಪದಪಂಕ- ಜಾತಪತ್ರದ ನೆರಳಿರಿಸುವನು 1 ದೇಹವೆ ಸ್ಥಿರವಿಲ್ಲವಾದ ಮೇಲಿದರ ಸ- ನ್ನಾಹವಾಗಿರುವದನೇನೆಂದು ಗ್ರಹಿಸುವಿ ಗೇಹಧನಾಪತ್ಯ ಸ್ನೇಹವೆಲ್ಲವು ವ್ಯರ್ಥ ಮೋಹವಲ್ಲದೆ ನಿಶ್ಚಯವಲ್ಲವು ಐಹಿಕಾಮುಷ್ಮಿಕವೆಂಬ ಸಕಲ ಸುಖ ದೋಹನ ಧೇನು ಸರ್ವೇಶ್ವರ ಹರಿಯ ಸ- ಮಾಹಿತ ಮನದಿಂದ ಭಜಿಸೆ ನಿನ್ನನು ಪಕ್ಷಿ ವಾಹ ಕೈ ಬಿಡದೆ ಕಾಪಾಡುವನು 2 ಒಂದು ದಿವಸ ನೀರೊಳದ್ದದಿದ್ದರೆ ದು- ರ್ಗಂಧ ಭೂಯಿಷ್ಠವು ಸಹಿಸಲಸಾಧ್ಯವು ಹಿಂದಿನ ಕರ್ಮಾನುಬಂಧವು ತಿಳಿಯದು ಮುಂದಿನ ಹೊಂದಿಕೆ ಒಂದಾದರು ಇಂದಿರಾವರ ವೆಂಕಟೇಶನ ಪಾದಾರ- ವಿಂದ ಧ್ಯಾನಗಳೆಂಬದೊಂದೆ ಪರಮಸುಖ ವೆಂದು ತಿಳಿದು ಭಕ್ತಿಯಿಂದ ಭಜಿಸು ನಮ್ಮ ತಂದೆ ಬಿಡದೆ ಕಾವನೆಂದೆಂದಿಗು 3
--------------
ತುಪಾಕಿ ವೆಂಕಟರಮಣಾಚಾರ್ಯ
ನೆನೆಯಲಳವಲ್ಲಗಣಿತ ಜನುಮ (ಪ) ಕುಣಿಕೆಯೊಳಗೆ ಪೋಣಿಸಿ ನೋಯಿಸುತ ಕುಣಿಸಿ ಕೊಲ್ಲುದುಚಿತವೇ ಪೊರೆಯೊ ಸತತದಲಿ 1 ಶ್ವಾನ ಸೂಕರ ಕ್ರಿಮಿಯ ಕೀಟಕ ತೊಳಲಿ ಬಳಲುತ ನಾ ಹಾನಿಬಟ್ಟೆನ್ನದೇನು ತಪ್ಪಿರೆ ಜಾನಕೀಶನೆ ನೀನೆ ಕ್ಷಮೆಮಾಡಿ ಪೊರೆಯೊ ಸತತದಲಿ 2 ತುಂಬಿ ಮಾಯೆಯಿಂ ನಂದಿಪೋಗ್ವುದು ನಿನ್ನ ಮಾಯಾಮಹಿಮೆದೆಲ್ಲವು ನಿನ್ನ ಹೊರತಿನ್ನನ್ಯವೊಂದಿಲ್ಲ ಎನ್ನನ್ಯಾತಕೆ ಬನ್ನಬಡಿಸುವಿ ಭಿನ್ನವಿಲ್ಲದೆ ನಿನ್ನ ನಂಬಿದೆ ರಕ್ಷಿಸು ಪಿಡಿದು ಸತತದಲಿ 3
--------------
ರಾಮದಾಸರು
ನೈವೇದ್ಯ ಸಮರ್ಪಣೆ ಸುಳಾದಿ ಸಿರಿ ದಧಿ ವರುಣಧನ್ಯ ಸುಗಂಧಿನೀ ವಾಮನ್ನರೂಪವನ್ನು ಚಿಂತಿಸು ಸೂಪಕೆ ಗರುಡ - ನೀರನ್ನ ತಿಳಿದು ಸುಂದರಿ ಶ್ರೀಧರನೆನ್ನುಪನ್ನಂಗಶಯ್ಯ ಗುರು ಗೋವಿಂದ ವಿಠಲನುಮನ್ನಿಸಿ ಕೈಗೊಂಡು ಉನ್ನತ ಪದ ಕೊಡುವ 1 ಹುಳಿ ತೊವ್ವೆಯಲಿ ಸೌಪರಣಿ ಮತ್ತೆ ಪ್ರತಾಪಓಲೈಸು ಸುಂದರೀ ಶ್ರೀಧರ ದೇವನ್ನತಿಳಿ ಪತ್ರ ಶಾಖಕೆ ಮಿತ್ರನೆಂಬಿನನಗಾಳಿ ದೇವನೆ ಸಾಧು ಅವನೊಳಗೆ ವಿದ್ಯಾಒಲಿಸು ಹೃಷಿಕೇಶ ದೇವನ್ನಫಲಶಾಖಕೆ ಶೇಷ ಶೂರಾಧಭಿನ ಸು-ಶೀಲಾದೇವಿ ಪದ್ಮನಾಭನ್ನ ತಿಳಿದುಹುಳಿ ಸೊಪ್ಪು ಗೊಜ್ಜು ಸಾರು ಇವುಗಳೊಳ್‍ಶೈಲಜೆ ಕಪಿ ಸಲಕ್ಷಣಾ ದಾಮೋದರತಿಳಿ ಅನಾಮ್ಲ ಸಪ್ಪೆ ಭಕ್ಷಗಳಲ್ಲಿ ರುದ್ರ - ಅ-ನಿಲನು ಜಗತ್ಪತಿ ಜಯಲಕ್ಷ್ಮೀ - ಇವಳಲ್ಲಿ ಶ್ರೀ ಜಯಾಪತಿಯ ಚಿಂತಿಸೆವಲಿವ ಗುರುಗೋವಿಂದ ವಿಠಲ ಆನಂದ 2 ಶರ್ಕರ ಗುಡ ಭಕ್ಷ ಇಂದ್ರನು ಮಹಾಬಲಲಕ್ಕೂಮಿಯಾ ರೂಪ ಶ್ರೀ ವಾಸುದೇವನು ಸೋ-ಪಸ್ಕರಕೆ ಗುರು ಆಕಾಶಾಶ್ರಯ ಮನೋಜವರಲೆಕ್ಕಿಸು ಕಮಲೆಯ ಪ್ರದ್ಯುಮ್ನ ದೇವನಮಿಕ್ಕ ಕಟು ದ್ರವ್ಯವು ಖಾರಕೆ ಯಮಧರ್ಮಸತ್ಕರಿಸೆ ಜಿತನ ಪದ್ಮಾನಿರುದ್ದರಸೊಕ್ಕವರರಿ ಗುರು ಗೋವಿಂದ ವಿಠಲಯ್ಯಸಿಕ್ಕಾ ಸುಳಿವ ಮುಂದೆ ಕಕ್ಕುಲಾತಿಯ ಸಲ್ಲ 3 ಅಚ್ಯುತ ದೇವನ್ನ ಚಿಂ-ತಿಸು ಉಪ್ಪು ಉಪ್ಪಿನಕಾಯಿ ನಿರಋತಿ ಚಿರಚೀವಿವಾಸುವು ಧನ್ಯಾದೇವಿ ಜನಾರ್ಧನನು ಫಲರಸವು ಫಲೋದಕ ಶೀಕರಣೀತ್ಯಾದಿರಸದೊಳ ಹಂಪ್ರಾಣ ಣ್ರಾಣನು ಆದ್ವಯರುಭಾಸಿಸುವಳು ವೃದ್ಧೀದೇವಿ ಉಪೇಂದ್ರನುದೋಷದೂರನು ಗುರು ಗೋವಿಂದ ವಿಠಲ ಪ್ರ-ಕಾಶಿಸುವನು ಬಿಡದೆ ಈಪರಿ ಗುಣಪರ್ಗೆ 4 ಸದನ ಯಜ್ಞಾದೇವಿಯರರಂಗನು ಹರಿ ರೂಪದಲ್ಲಿರುವನು ಉತ್-ತುಂಗ ಸ್ವಾದೋದಕದೊಳಗಿರುವನು ಬುಧನುಪಿಂಗ ಕಣ್ಣಿನ ಮತಿಮತನ ಸುಧಾದೇವಿಅಂಗಜನಯ್ಯ ಶ್ರೀಕೃಷ್ಣನ್ನಧೇನಿಸೆಗಂಗಾಜನಕ ಗುರು ಗೋವಿಂದ ವಿಠಲನುಮಂಗಳ ಕೊಡುವನು ಸಂದೇಹವಿಲ್ಲದೆ5 ಭೋಜನ ದ್ರವ್ಯದಿ ಯೋಚಿಸ್ಯಭಿಮಾನಿಗಳಭೋಜ್ಯ ಗುರು ಗೋವಿಂದ ವಿಠಲನೆ ಭೋಜಕ6
--------------
ಗುರುಗೋವಿಂದವಿಠಲರು
ನೊಂದೆನಯ್ಯ ಭವದೊಳು ಸಿಂಧುಶಯನ ವೆಂಕಟೇಶ ಪ ಒಂದು ದಿನಸುಖವಿಲ್ಲ ಗೋ- ವಿಂದ ಬಹಳ ಕರುಣದಿಂದ ನಿ- ರ್ಬಂಧವನ್ನು ಕಳೆದು ಎನ್ನ ತಂದೆ ನೀನೇ ರಕ್ಷಿಸಯ್ಯ 1 ಕಪಟ ನಾಟಕ ಸೂತ್ರಧಾರಿ ಅಪರಿಮಿತ ಮಹಿಮ ಎನ್ನ ಅಪರಾಧವನು ಕ್ಷಮಿಸಿ ಮುಂದೆ ಕಪಟವಿಲ್ಲದೆ ರಕ್ಷಿಸಯ್ಯ 2 ಕಂದ ಪ್ರಹ್ಲಾದನಂತೆ ತಂದೆ ಮುನಿದಾಡುವ ತೆರದಿ ಗ- ಜೇಂದ್ರನಂತೆ ದೃಢವಿಲ್ಲ ಮಂದಮತಿಯ ರಕ್ಷಿಸಯ್ಯ 3 ನರ ಜನ್ಮದೊಳಗೆ ಪುಟ್ಟಿ ನರಕ ಭಾಜನ ತಾನಾಗಿ ದುರಿತ ಪಂಜರದೊಳಗೆ ನಾನು ಸೆರೆಯ ಬಿದ್ದೆ ರಕ್ಷಿಸಯ್ಯ 4 ಹಗಲು ದೃಷ್ಟಿ ಕಾಣದವಗೆ ಮೊಗವುಗೊಂಡು ರಾತ್ರಿಯೊಳು ಹಗೆಯ ವನದಿ ಸಿಕ್ಕಿದವನ ಅಗಲಿ ಹೋಗದೆ ರಕ್ಷಿಸಯ್ಯ 5 ಸಾವಿರ ಅಪರಾಧವನು ಜೀವಿತಾತ್ಮನೆ ಕ್ಷಮಿಸಿ ಎನ್ನ ಮೂವಿಧಿಯೊಳು ಸಿಲುಕದಂತೆ ಭಾವಿಸಿಯೆ ರಕ್ಷಿಸಯ್ಯ 6 ವರಾಹತಿಮ್ಮಪ್ಪ ಮನದ ಘೋರ ದುಃಖವನ್ನು ಕಳೆದು ಮೀರಿ ಬಂದಾಪತ್ತಿನೊಳು ಕಾರಣಿಕನೆ ರಕ್ಷಿಸಯ್ಯ 7
--------------
ವರಹತಿಮ್ಮಪ್ಪ
ನೋಡಯ್ಯ ನಿನ್ನ ದಾಸರ ಮೇಲೆ ಕೃಪೆಗಳನುಮಾಡಯ್ಯ ಮನ್ಮನಕೆ ಸಂತಸವನುತೀಡಯ್ಯ ಭವಭಯದ ಪಾತಕಂಗಳ ದಾನವಾಡ ಗುಡ್ಡದ ತಿರುಮಲೇಶ ಸರ್ವೇಶ ಪ ಆದಿಯಲಿ ವೇದಗಳ ಕದ್ದುಕೊಂಡೊಯ್ದವನಸಾಧನಂಗೆಯ್ವೆನೆಂದಾಕ್ಷಣದೊಳುಪೋದನೆಲ್ಲೆನುತ ಶರನಿಧಿಯೊಳಗೆ ಪೊಕ್ಕ ಮ-ತ್ತಾ ದಿತ್ಯನಂ ಕೊಂದು ತಿಕ್ಕಿಮುಕ್ಕೆನೀ ದಯಾ ಪಾತ್ರನೆಂಬುದ ಕೇಳಿ ನಾನರಿತೆಭೂ ಧರೆಯ ಸುರರ ನೀ ಸಲುಹಲಾಗಪೋದ ನಿಗಮಂಗಳನು ತಂದು ಸಲೆ ರಕ್ಷಿಸಿದೆಆದಿ ಮತ್ಸ್ಯವತಾರ ಶರಣೆಂಬೆನು 1 ಮೂರ್ತಿ ನೀನಂದು ಬೇರೆಸುಮತವನು ಬೆನ್ನಲ್ಲಿ ಸಲೆ ಆತು ರಕ್ಷಿಸಿದೆಕಮಠಮೂರುತಿ ನಿನಗೆ ಶರಣೆಂಬೆನು 2 ಚಿನ್ನಗಣ್ಣವನೆಂಬನೊರ್ವ ಖಳ ಭೂದೇವಿಕನ್ನಿಕೆಯನೊಯ್ಯುತಿರೆ ಕನಲಿ ಮನದಿಇನ್ನು ಅವನನು ಸೆಣಸಿ ಜಯಿಸುವವರನು ಕಾಣೆನೆನ್ನುತಲಿ ರೋಮಗಳನುಬ್ಬೆತ್ತುತತನ್ನ ಮುಂಗೋರೆಗಳ ಮಸೆದೊಡನೆ ರಕ್ಕಸನಬೆನ್ನಟ್ಟಿ ಬರಸೆಳೆದು ಸದೆದೊರಗಿಸಿಚೆನ್ನಾಗಿ ಧರಣಿಯನು ತಂದು ಸಲೆ ರಕ್ಷಿಸಿದೆಹನ್ನೆರಡು ಪೆಸರವನೆ ಶರಣೆಂಬೆನು3 ಹೇಮಕಶ್ಯಪನೆಂಬ ನಾಮಜನ ಸುತನೊರ್ವನಾ ಮಹಾಘನವೆಂದು ನೆನೆಯುತಿರಲುತಾಮಸದ ಖಳ ತನ್ನ ತನುಜನನು ಮಥಿಸುತಿರೆರಾಮನನು ತೋರೆಂದು ಬಾಧಿಸುತಿರೆಧೂಮಜ್ವಾಲೆಗಳೊಡನೆ ಭುಗುಭುಗಿಲು ಛಿಟಿಲೆನುತಆ ಮಹಾ ರಕ್ಕಸನ ಪೊಡೆಯ ಸೀಳಿಪ್ರೇಮದಲಿ ಪ್ರಹ್ಲಾದಗೊಲಿದು ಪಟ್ಟವನಿತ್ತೆಸಾಮಜಾರಿಯ ವದನ ಶರಣೆಂಬೆನು 4 ಬಲಿಯಧ್ವರದ ಸಾಲೆಗೊಂದು ವೇಷವನಾಂತುಸಲೆ ಬಂದು ಧರೆಯ ಮೂರಡಿಯ ಬೇಡೆಒಲಿದು ಇತ್ತಪೆನೆನಲು ಧಾರೆಯನೆರೆಯಲಸುರಕುಲಗುರುವು ಜುಳಿಗೆಯೊಳು ತಡೆದು ನಿಲಲುಸಲಿಲ ವರ್ಜಿತ ನಯನನನು ಮಾಡಿ ಆಕಾಶನೆಲವೆರಡು ಪಾದವನ್ನಳೆದ ಬಳಿಕತಲೆ ಮೇಲೆ ಇರಿಸೆನಲು ತಳಕಿಳಿಸಿ ಅವನ ಬಾ-ಗಿಲ ಕಾಯ್ದ ವಾಮನನೆ ಶರಣೆಂಬೆನು 5 ರೇಣುಕೆಯ ಬಸುರಿನಲಿ ಜನಿಸಿ ಪಿತನಾಜ್ಞೆಯನುಮಾಣಬಾರದು ಎಂಬ ಮತವ ಪಿಡಿದುಕ್ಷೂಣವಿಲ್ಲದೆ ತಾಯ ಶಿರವರಿದು ತಂದೆಯನುಪ್ರಾಣಹತ್ಯವ ಮಾಡಿದರ ಕುಲವನುಕ್ಷೋಣಿಗೆರಗಿಸಿ ಕಾರ್ತವೀರ್ಯಾರ್ಜುನನ ಮಡುಹಿಜಾಣತನದಲ್ಲಿ ಭೂದಾನಗಳ ಭೂಸುರರಕಾಣುತಲೆ ಕರೆಕರೆದು ಕೊಟ್ಟೆಯೈ ನೀನು ಪೂಬಾಣಜನಕನೆ ರಾಮ ಶರಣೆಂಬೆನು 6 ಸೀತೆಯನು ಕದ್ದು ಒಯ್ದವನ ಕೊಲ್ಲುವ ಭರದಿಭೂತಳದ ಕಪಿಗಳನು ಕೂಡಿಕೊಂಡುಸೇತುವೆಯ ಕಟ್ಟಿ ಶರನಿಧಿ ದಾಟಿ ಬರಲಾಗಭೂತಗಣ ಸಂತತಿಯು ನಡುನಡುಗುತಿರಲುಚೇತನದ ರಾವಣೇಶ್ವರ ಕುಂಭಕರ್ಣ ಸ-ತ್ತ್ವಾತಿಶಯ ರಕ್ಕಸರ ಇರಿದೊರಗಿಸಿಮಾತು ಲಾಲಿಸಿ ವಿಭೀಷಣಗೆ ಪಟ್ಟವನಿತ್ತದಾತ ರಘುನಾಥನೇ ಶರಣೆಂಬೆನು 7 ಶಕಟ ಕುಕ್ಕುಟ ಧೇನುಕಾಸುರರ ಪೂತನಿಯಬಕ ವತ್ಸಹಕ ವೃಷಾಸುರ ಮುಖ್ಯರಪ್ರಕಟದಿಂದರಿದು ಕರಿಯನು ಸೀಳಿ ತನಗೆ ಸಂ-ಮುಖರಾದ ಮಲ್ಲರನು ಇರಿದೊರಗಿಸಿಮುಕುರ ದಂತ್ಯದ ಹಮ್ರ್ಯದೊಳಗಿಂದ ಕಂಸನಪುಕಪುಕನೆ ತಿವಿದವನನಿರಿದೊರಗಿಸಿಸಕಲವೆಸೆದಿರ್ದ ಮಧುರಾಪುರವ ಉಗ್ರಸೇನಕಗಿತ್ತ ಕೃಷ್ಣನೇ ಶರಣೆಂಬೆನು 8 ಮೂರು ಪುರದಬಲೆಯರ ವ್ರತಗಳನೆ ಕೆಡಿಸಲಿಕೆಬೇರೊಂದು ಅಶ್ವತ್ಥ ವೃಕ್ಷವಾಗಿನಾರಿಯರ ವ್ರತಭಂಗಗೆಯ್ಯಲಾ ದೆಸೆಯಿಂದಊರುತ್ರಯವದು ತಿರುಗುವುದು ನಿಲ್ಲಲಾಗನೀರ ಮಸ್ತಕದಲ್ಲಿ ಧರಿಸಿದನ ಕರವಿಲ್ಲನಾರಿಯೊಳು ನಾರಾಯಣಾಸ್ತ್ರವಾಗಿಘೋರತನವೆತ್ತ ತ್ರಿಪುರದ ಕೀಲ ಪರಿದ ಮದನಾರಿ ಸಖ ಬುದ್ಧನೇ ಶರಣೆಂಬೆನು 9 ಮದವೆತ್ತ ರಕ್ಕಸರು ಮಹಿಯೊಳಗೆ ಹೆಚ್ಚಲುತ್ರಿದಶಾಂತ ನಡನಡನೆ ನಡುಗುತಿರಲುಬೆದರಬೇಡೆನುತ ಅಭಯವನಿತ್ತು ಮುದದಿಂದಸುಧೆಯೊಳಗೆ ಬಂದು ಜನಿಸಿಕುದುರೆವಾಹನನಾಗಿ ಕುಂಭಿನಿಯ ಮೇಲೆ ತನಗಿದಿರಾದ ರಾವುತರನಿರಿದೊರಗಿಸಿಮೊದಲ ಭಾಷೆಯನು ದಿವಜರಿಗಿತ್ತೆ ಬೇಗದಲಿಚದುರ ಕಲ್ಕ್ಯವತಾರ ಶರಣೆಂಬೆನು10 ಇಂತು ದಶ ಅವತಾರಗಳನೆತ್ತಿ ರಕ್ಕಸರಸಂತತಿಯನೊರಸಿ ಭೂಭಾರವಿಳುಹಿಕಂತುಪಿತ ತಿರುವೆಂಗಳೇಶ ತಿರುಮಲೆಯೊಳಗೆಚಿಂತಿಸುವ ಭಕ್ತರನು ಪಾಲಿಸುತಲಿದಂತಿರಾಜನ ಪೊರೆದು ದಾನವಾಡಿಗೆ ಬಂದುನಿಂತಾದಿಕೇಶವನೆ ಶರಣೆಂಬೆನು 11
--------------
ಕನಕದಾಸ
ನೋಡಿದೆ ಗುರುಗಳ ನೋಡಿದೆ ಪ ನೋಡಿದೆನು ಗುರುರಾಘವೇಂದ್ರರ ಮಾಡಿದೆನು ಭಕುತಿಯಲಿ ವಂದನೆ ಬೇಡಿದೆನು ಕೊಂಡಾಡಿ ವರಗಳ ಈಡು ಇಲ್ಲದೆ ಕೊಡುವ ಗುರುಗಳಅ.ಪ ಗಾಂಗೇಯ ಶಯ್ಯಜನು ಈ ನದಿಯ ತೀರದಲ್ಲಿ ಯಾಗವ ಮುದದಿ ರಚಿಸಿ ಪೂರೈಸಿ ಪೋಗಿರ ಲದನು ತಮ್ಮೊಳು ತಿಳಿದು ತವಕದಿ ಹೃದಯ ನಿರ್ಮಲರಾಗಿ ರಾಗದಿ ಬುಧಜನರ ಸಮ್ಮೆಳದಲಿ ಸಿರಿ ವದನನಂಘ್ರಿಯ ತಿಳಿದು ನೆನೆವರ ಉದಿತ ಭಾಸ್ಕರನಂತೆ ಪೊಳೆವರ 1 ಆಲವಬೋಧ ಮಿಕ್ಕಾದ ಮಹಮುನಿ ಗಳು ಸಅಂಶರು ಒಂದು ರೂಪದಿ ನೆಲೆಯಾಗಿ ನಿತ್ಯದಲಿ ಇಪ್ಪರು ಒಲಿಸಿಕೊಳುತಲಿ ಹರಿಯ ಗುಣಗಳ ತಿಳಿದು ತಿಳಿಸುತ ತಮ್ಮ ತಮಗಿಂ ರಧಿಕರಿಂದುಪದೇಶ ಮಾರ್ಗದಿ ಕಲಿಯುಗದೊಳು ಕೇವಲ ಕ ತ್ತಲೆಯ ಹರಿಸುವ ಸೊಬಗ ಸಂತತ 2 ರಾಮ ನರಹರಿ ಕೃಷ್ಣ ಕೃಷ್ಣರ ನೇಮದಿಂದೀ ಮೂರ್ತಿಗಳ ಪದ- ತಾಮರಸ ಭಜನೆಯನು ಮಾಳ್ಪರು ಕೋಮಲಾಂಗರು ಕಠಿನಪರವಾದಿ ಸ್ತೋಮಗಳ ಮಹಮಸ್ತಕಾದ್ರಿಗೆ ಭೂಮಿಯೊಳು ಪವಿಯೆನಿಸಿದ ಯತಿ ಯಾಮ ಯಾಮಕೆ ಎಲ್ಲರಿಗೆ ಶುಭ ಕಮಿತಾರ್ಥವ ಕರೆವ ಗುರುಗಳ 3 ನೂರು ಪರ್ವತ ವರುಷ ಬಿಡದಲೆ ಚಾರು ವೃಂದಾವನದಲಿ ವಿ ಸ್ತಾರ ಆರಾಧನೆಯು ತೊಲಗದೆ ವಾರವಾರಕೆ ಆಗುತ್ತಿಪ್ಪುದು ಸಾರೆ ಕಾರುಣ್ಯದಲಿ ಲಕುಮೀ ನಾರಾಯಣ ತಾ ಚಕ್ರರೂಪದಿ ಸಾರಿದವರಘವ ಕಳೆದು ಇವರಿಗೆ ಕೀರುತಿಯ ತಂದಿಪ್ಪುದನುದಿನ4 ಮಿತವು ಎನದಿರಿ ಇಲ್ಲಿ ದಿನ ದಿನ- ಕತಿಶಯದೆ ಆಗುವುದು ಭೂಸುರ ತತಿಗೆ ಭೋಜನ ಕಥಾಶ್ರವಣ ಭಾ- ರತ ಪುರಾಣಗಳಿಂದಲೊಪ್ಪುತ ಕ್ಷಿತಿಯೊಳಗೆ ಮಂಚಾಲೆ ಗ್ರಾಮಕೆ ವ್ರತಿಯ ಇಲ್ಲವೆಂದೆನಿಸಿಕೊಂಬುದು ಪತಿತಪಾವನ ವಿಜಯವಿಠಲನ ತುತಿಸಿಕೊಳ್ಳುತ ಮೆರೆವ ಗುರುಗಳ 5
--------------
ವಿಜಯದಾಸ
ನೋಡಿದೆನು ಉಡುಪೀ ನಿವಾಸನ ನೋಡಿದೆನು ಯಾದವೇಶನ ನೋಡಿದೆನು ಮಾನಿಸ ವೇಷನ ನೋಡಿದೆನೊ ಲಕುಮೇಶನ ಪ ಪರಶುರಾಮನು ಭೂಮಿ ಸುರರಿಗೆ ಸರವು ಧಾರುಣಿ ಧಾರಿಯಾ ಎರದು ಕೇಸರಗಿರಿಯ ಪಡುಮೂಲ ಶರನಿಧಿಯನು ಶರದಲೀ ಭರದಿ ಬಿಡಿಸಿದ ಶೂರ್ಪಕಾರದ ತೆರದಿ ನೆಲ ನೀ ಧರುಣಿಗೆ ಪರಮ ಸಾಹಸ ರಾಮಭೋಜನು ಅರಸನಾದುದು ನೋಡಿದೆ 1 ಯಾಗಗೋಸುಗ ರಾಮ ಭೋಜನು ನೇಗಿಲಿಯ ಕೊನೆಯಿಂದಲಿ ಆಗ ಭೂಮಿಯ ಶೋಧಿಸÀಲು ಬಂದು ನಾಗ ಬಂದಿತು ಮೃತವಾಗಿ ತೂಗಿ ಶಿರವನು ಭೃಗು ಕುಲೇಶಗೆ ಬಾಗಿ ನೆನೆಯಲು ಸಂಕೇತಾ ಸಾಗಿ ಭೂಮಿಪಾಲ ರಿಪು ಚನ್ನಾಗಿ ಒಲಿದದು ನೋಡಿದೆ 2 ತಿಳುಹಿದನು ಪೂರ್ವದಲಿ ಈ ಫಣಿ ಖಳನು ಕಾಣೊ ಇವನಿಂದು ಅಳಿದು ಪೋದದು ಲೇಸು ಭೂಸುರ ಕುಲಕೆ ಸಂತೋಷವಾಯಿತು ಒಲುಮೆಯಲಿ ಸತ್ಕಾರ ವಿಧ ವೆ ಗ್ಗಳವಾಗಿ ಸುಯಾಗವ ಸುಲಭ ಮನದಲಿ ಮಾಡೆನಲು ನಿ ಶ್ಚಲ ಭಕುತಿಲಿ ಸ್ತುತಿಸಲು 3 ಇಂದಿರಾಪತಿ ಕರುಣಿಸೆಂದು ಅಂದಿಗಾ ರಾಮ ಭೋಜನು ಒಂದು ಕ್ರೋಶದ ಅಗಲ ರಜತಾ ಚಂದದಾಸನ ಮಾಡಿಸಿ ತಂದು ದೇವನ ಕುಳ್ಳಿರಿಸಿ ಆ ನಂದದಲಿ ಓಲಾಡುತಾ ಕುಂದದಲೆ ಮೇಧವನು ಮುಗಿಸಿ ಗೋ ವಿಂದನ ಪ್ರೀತಿಪಡಿಸಿದಾ 4 ಭೂತಳದೊಳು ರಜತಪೀಠಾಖ್ಯ ಖ್ಯಾತಿ ಆಯಿತು ಸರ್ವದಾ ಆ ತರುವಾಯದಲ್ಲಿ ಭಾರ್ಗವ ಭೂತನಾಥನ ನಂದದಿ ವಾತ ಭಕ್ಷನ ನಡುವೆ ನಿಂದನು ಮಾತುಯಿದು ಪುಶಿಯಲ್ಲವೊ ಪೂತುರೆ ಮೋಹಕವೆ ತೋರಿದ ಜಾತ ರಹಿತಗೆ ನಮೋ ನಮೋ 5 ಪರಿ ಇರಲು ಗಂಗೆಯ ಕಾಂತ ಮಹಾ ತಪವನೆ ಮಾಡಿ ಸಂತತ ಗೋಪಾಲಕೃಷ್ಣನ ಸಂತೋಷವನು ಬಡಿಸಿದಾ ಚಿಂತೆಯಲಿ ವಿದೂರನಾದನು ಮುಂತೆ ನಡೆದ ಕಥೆ ಕೇಳಿ ಕಂತುಹರನನ ಒಲಿಸಿ ಉಡುಪಾ ಕಾಂತ ವರವನೆ ಐದಿದಾ 6 ಮೂರು ಯುಗದಲಿ ಈ ಪರಿಯಾಗೆ ಮಾರುತ ಮಧ್ಯಗೇಹನ ಚಾರು ಮನೆಯಲಿ ಜನಿಸಿ ವೈಷ್ಣವಾ ಚಾರ್ಯ ಈ ದುಶ್ಯಾಸ್ತ್ರವ ಹಾರಿಸಿದ ಹರುಷದಲಿ ರುಕ್ಮಿಣಿ ದ್ವಾರಕೆಲಿ ಪೂಜೆ ಮಾಡಿದ ಮೂರುತಿಯ ಸ್ಥಾಪಿಸಿದ ಲೀಲೆಯು ಆರು ಬಣ್ಣಿಸಲಾಪರು 7 ಇದೇ ರಜತಪೀಠ ಅಜಕಾನನವಿದೆ ಇದೇ ಉಡುಪಿ ಇದೇ ಶಿವಕುಲ್ಲ್ಯ ಅದರ ಬಳಿಯಲಿಯಿಪ್ಪ ತೀರ್ಥವ ಅದುಭುತವ ವರ್ಣಿಸುವೆನು ಇದೇ ಅನಂತ ಸರೋವರವು ಮ ತ್ತಿದೇ ವಾರುಣ್ಯಚಂದ್ರಮತೀರ್ಥ ಇದಕೆ ಮಧ್ವಸರೋವರ ವೆಂ ಬದು ಕಾಣೊ ಶ್ರುತಿ ಉಕ್ತಿಲಿ 8 ಸಕಲ ದೇಶದ ಜನರು ತ್ರಿವಿಧ ಸುಖವಾರಿಧಿಯೊಳು ಸೂಸುತಾ ಅಖಿಳ ವೈಭವದಿಂದ ಬಪ್ಪ ಅಕಟ ಸಂದಣಿಗೇನೆಂಬೆ ಸೂರ್ಯ ಬಂದ ಕಾ ಲಕೆ ಕೃಷ್ಣನ ನೋಡುವೆನೆಂದು ಚಕ್ಕನೆ ನಿಲ್ಲದೆ ಬಂದು ನೆರದಂದು ಮುಕ್ತಾರ್ಥ ಹರಿಪ್ರೇರಕಾ 9 ಸಜ್ಜನರ ಸಿರಿಚರಣ ರಜದಲಿ ಮಜ್ಜನವ ಗೈವುತ ಹೆಜ್ಜಿಹೆಜ್ಜಿಗೆ ಕೃಷ್ಣ ಕೃಷ್ಣ ಅಬ್ಜನಾಭ ನಾರಾಯಣ ಮೂಜಗತ್ಪತೆ ಎಂದು ಸ್ತೋತ್ರ ನಿ ರ್ಲಜ್ಜನಾಗಿ ಪಠಿಸುತಾ ರಜ್ಜುಪಾಣಿಯ ಬಹಿರದಿಂದ ನಿ ವ್ರ್ಯಾಜ್ಯ ಭಕುತಿಲಿ ನೋಡಿದೆ 10 ಮೊದಲು ನಮಿಸಿದೆ ಚಂದ್ರಶೇಖರ ಪದುಮಗರ್ಭನ ಮಗನೆಂದು ಅದರ ತರುವಾಯದಲ್ಲಿ ಮಾಯಿಯ ಸದಬಡೆದ ಪೂರ್ಣಬೋಧರು ಸದಮಲಾ ಕುಳುತಿಪ್ಪ ಸ್ಥಾನವ ಒದಗಿ ನೋಡಿ ಕೊಂಡಾಡುತಾ ಮದನ ಜನಕಾನಂತ ಸ್ವಾಮಿಯ ಪದಯುಗಳವನು ನೋಡಿದೆ11 ರತುನ ಗರ್ಭದೊಳಧಿಕವಾದ ತೀ ರಥವಿದು ಮಧ್ವಾಖ್ಯದಿ ಸತತ ಬಿಡದಲೆ ಇಲ್ಲಿ ಭಾಗೀ ರಥಿವಾಸ ನದಿಗಳ ಕೂಡಿ ನುತಿಸಿ ಮೆಲ್ಲನೆ ಮುಟ್ಟಿ ಮಿಂದು ಮತ್ತೆ ಕರ್ಮದ ಚರಿಯವ ಹಿತ ಮನಸಿನಲ್ಲಿ ಮಾಡುವಂಥ ಕೃತ ಕಾರ್ಯವನು ನೋಡಿದೆ 12 ಅಲ್ಲಿಂದ ನವರಂಧ್ರಗಳು ಕಂಡು ಪುಲ್ಲಲೋಚನ ಕೃಷ್ಣನ ಸೊಲ್ಲಿನಿಂದಲಿ ಪಾಡಿ ಭಾರತಿ ವಲ್ಲಭನ ಕೊಂಡಾಡುತಾ ಮೆಲ್ಲ ಮೆಲ್ಲನೆ ದ್ವಾರವನೆ ಪೊಕ್ಕು ನಿಲ್ಲದಲೆ ಸಮೀಪಕೆ ಬಲ್ಲವನು ಗುಣಿಸುತ್ತ ಭಕುತ ವ ತ್ಸಲನಂಘ್ರಿ ನೋಡಿದೆ13 ಮೂರು ಬಗೆ ಭೂಷಣವ ಧರಿಸಿದ ಮೂರುತಿ ಇದೇ ಕಾಣಿರೊ ಪಾರುಗಾಣರು ಈತನ ಅವ ತಾರ ಗುಣಕ್ರಿಯೆ ಮಹಿಮೆಯಾ ವಾರಿಜೋದ್ಭವ ಶಿವ ಮುಖಾದ್ಯರು ಸಾರಿ ಹಾಹಾ ಎಂಬರೊ ಧಾರುಣಿಗೆ ಇದೇ ದೈವ ನವನೀತ ಚೋರನ ಕೊಂಡಾಡಿದೆ 14 ತ್ರಾಹಿ ತ್ರಯಾವಸ್ಥೆ ಪ್ರೇರಕ ತ್ರಾಹಿ ತ್ರಯಗುಣ ವಿರಹಿತಾ ತ್ರಾಹಿ ತ್ರಯಧಾಮ ವಾಸ ಸರ್ವೇಶ ತ್ರಾಹಿ ತ್ರಯ ರೂಪಾತ್ಮಕಾ ತ್ರಾಹಿ ತ್ರಯವನು ಗೆದ್ದ ಪ್ರಸಿದ್ಧ ತ್ರಾಹಿ ತ್ರಯವನು ಕೊಡುವನೆ ತ್ರಾಹಿ ತ್ರಯಗಣ್ಣ ವನಪಾಲಕ ತ್ರಾಹಿ ತ್ರಯಲೋಕಾಧಿಪಾ 15 ಪಾಹಿಪರಮಾನಂದ ಗೋವಿಂದ ಪಾಹಿ ಪರತರ ಪರಂಜ್ಯೋತಿ ಪಾಹಿ ಪತಿತ ಪಾವನ್ನ ಮೋಹನ್ನಾ ಪಾಹಿ ಪಾಲಾಂಬುಧಿಶಾಯಿ ಪಾಹಿ ಜಗದತ್ಯಂತ ಭಿನ್ನಾ ಪಾಹಿ ನಿರ್ಭಿನ್ನ ಸ್ವರೂಪ ಪಾಹಿ ನಖಶಿಖ ಜ್ಞಾನ ಪೂರ್ಣನ ಪಾಹಿ ಎನ್ನಯ ಪ್ರೇಮನೆ 16 ನಮೋ ನಮೋ ಚತುರಾತ್ಮ ಗುಣನಿಧಿ ನಮೋ ನಮೋ ಪುನ್ನಾಮಕ ನಮೋ ನಮೋ ವಟಪತ್ರಶಾಯಿ ನಮೋ ನಮೋ ಪುಣ್ಯಶ್ಲೋಕನೆ ನಮೋ ನಮೋ ಸಮಸ್ತ ಸರ್ವಗ ನಮೋ ನಮೋ ಸರ್ವ ಶಬ್ದನೆ ನಮೋ ನಮೋ ಅವ್ಯಕ್ತ ವ್ಯಕ್ತಾ ನಮೋ ನಮೋ ನಾರಾಯಣ 17 ಜಯ ಜಯತು ಕರಿವರದ ವಾಮನ ಜಯತು ನಾರದ ವಂದ್ಯನೆ ಜಯ ಜಯತು ಪ್ರಹ್ಲಾದ ರಕ್ಷಕ ಜಯ ಜಯತು ಪಾರ್ಥನ ಸಾರಥೆ ಜಯ ಜಯತು ಅಂಬರೀಷ ಪರಿಪಾಲಾ ಜಯತು ಪರಾಶರನುತಾ ಜಯ ಜಯತು ಪಾಂಚಾಲಿ ಮಾನ ಕಾಯ್ದನೆ ಜಯ ಜಯತು ಗೋಪಿಕಾ ವಲ್ಲಭಾ18 ಇನಿತು ಬಗೆಯಲಿ ತುತಿಸಿ ದೇವನ ಮನದಣಿಯ ಕೊಂಡಾಡುತಾ ಕ್ಷಣಬಿಡದೆ ತನ್ನ ನೆನೆಸಿದವರಿಗೆ ಹೊಣೆಯಾಗಿ ಪಾಲಿಸುವನು ಜನುಮ ಜನ್ಮದಲಿಂದ ಮಾಡಿದ ಘನದುರಿತ ಪರ್ವತಗಳು ಚಿನಿಗಡೆದು ಸಾಧನವೆಲ್ಲ ವೇಗ ತನಗೆ ತಾ ಮಾಡಿಸುವನು 19 ವ್ಯಾಧ ಭೂಸುರ ವೇಷವು ಭೇದ ಮಾಡಿದ ನಾರಾಯಣಿ ಸುಪ್ರಸಾದ ನಿರ್ಮಲರೂಪವು ಆದಿವಾರವು ವಿಡಿದು ಎರಡು ಐದು ದಿನ ಪರಿಯಂತವು ಶ್ರೀಧರೇಶನು ವೇಷ ಧರಿಸಿದ್ದು ಸಾಧು ಸಂಗಡ ನೋಡಿದೆ20 ಉದಯಕಾಲದ ಪೂಜೆಯಾಗಲು ಮುದ ನಿರ್ಮಾಲ್ಯ ವಿಸರ್ಜನೆ ಇದೆ ಪೂರೈಸಲು ಮತ್ತೆ ಪಂಚ ಸುಧ ಪೂಜೆ ಉದ್ವಾರ್ಥನೆ ಒದಗಿಯಾಗಲು ಮೇಲೆ ಸುಧ ವಿಧುದಂತೆ ಬೆಣ್ಣೆ ಶರ್ಕರ ಇದೆ ಮಹ ಪೂಜೆ ನೋಡಿದೆ 21 ಗಂಧ ಪರಿಮಳ ತುಲಸಿ ಪುಷ್ಪಾ ನಂದ ಭೂಷಣ ಧರಿಸಿಪ್ಪ ಒಂದು ಕೈಯಲಿ ದಾಮ ಕಡಗೋ ಲಂದದಲಿ ತಾಳಿದಾ ಮಂದರಿಗೆ ಇದು ಸಾಧ್ಯವಲ್ಲವು ಮುಂದೆ ಯತಿಗಳು ಮಂತ್ರವ ಮಂದ ನಗಿಯಲಿ ಪೇಳುತಿಪ್ಪ ಚಂದವನು ನಾ ನೋಡಿದೆ 22 ಎತ್ತುವ ಧೂಪಾರತಿಗಳು ಹತ್ತೆಂಟು ಬಗೆ ಮಂಗಳಾ ರುತ್ತಿ ನಾನಾ ನೈವೇದ್ಯ ಷಡುರಸ ಮೊತ್ತಂಗಳು ಪರಿವಿಧಾ ಉತ್ತಮ ಶಾಖಾದಿ ಘೃತದಧಿ ತತ್ತಕ್ರಫಲ ಪಕ್ವವು ಸುತ್ತಲು ತಂದಿಟ್ಟು ಅರ್ಪಿ ಸುತ್ತಲ್ಲಿಪ್ಪುದು ನೋಡಿದೆ 13 ಮಂತ್ರ ಘೋಷಣೆ ಭಾಗವತಜನ ನಿಂತು ಗಾಯನ ಮಾಡಲು ಅಂತವಿಲ್ಲದೆ ವಾದ್ಯಸಂದಣಿ ಚಿಂತಿಸುವ ನಿಜದಾಸರು ವಂತು ವಾಳೆಯಿಲ್ಲದಾ ಜನ ಸಂತೋಷದಲಿ ನಲಿವುತಾ ತಂತ್ರ ಸಾರೋಕ್ತದ ಪೂಜೆ ಅತ್ಯಂತವನು ನಾ ನೋಡಿದೆ 24 ತೀರ್ಥ ಪ್ರಸಾದ ಗಂಧ ಅಕ್ಷತೆ ಅರ್ಥಿಯಲ್ಲಿ ಕೊಡುವರು ವ್ಯರ್ಥವಲ್ಲಿವು ಇಲ್ಲಿ ಒಂದು ಮು ಹೂರ್ತವಾದರು ಎಂದಿಗೂ ಶುಭ ಪ ದಾರ್ಥ ಬಡಿಸಲು ಉಂಡು ಕೃ ತಾರ್ಥನಾದೆನು ಜ್ಞಾನವಧಿಕ ಸಾರ್ಥಕರನ ನೋಡಿದೆ25 ತರಣಿ ಮಕರಕೆ ಬರಲು ಗೋಪಾಲ ಮೆರೆವ ವೈಭವವೆಂಬೆನೇ ಗಜ ತುರಗ ಹರಿ ಗರುಡ ಶ್ರೀ ಹನುಮಂತನಾ ವರ ರೂಢನಾಗಿ ಮೆರೆದು ಆಮೇಲೆ ಮಿರುಗುವ ರಥವನೇ ಏರಿ ಪರಮ ವೇಗದಿ ಚತುರ್ವೀಧಿಯ ತಿರುಗಿ ಬಪ್ಪದು ನೋಡಿದೆ 26 ಓಕಳಿಯ ಸಂಭ್ರಮವೆ ಪೇಳಲು ಗೋಕುಲಕೆ ಸಮನೆನಿಸಿತು ವಾಕು ಕೇಳ್ ಸುರ ಮುನಿಗಳೊಡನೆ ಲೋಕಕ್ಕಾಶ್ಚರ್ಯ ತೋರುತಾ ಸೋಕಿ ಸೋಕದ ಹಾಸೆ ಓಕುಳೀ ಹಾಕಿ ಆಡುವ ಲೀಲೆಯ ಈ ಕಲಿಯುಗದಲ್ಲಿ ಸೋಜಿಗ ಈ ಕಥೆಯಾದುದು ನೋಡಿದೆ 27 ವಾಲಗ ಎಡಬಲದಲಿ ಪಂಜು ಕಟ್ಟಿಕೆಕಾರರು ರಂಜಿಸುವ ಪಲ್ಲಕ್ಕಿ ಸೇವಿಪ ರಂಜಳವಾಗಿ ಒಪ್ಪಲು ಕುಂಜರಾರಿಯ ಪೀಠದಮೇಲೆ ಕಂಜಲೋಚನ ಕುಳ್ಳಿರೆ ನಿ ರಂಜನದಲಿ ಪೂಜಿಸುವ ಮತಿ ಪುಂಜ ಯತಿಗಳ ನೋಡಿದೆ 28 ಶ್ರುತಿ ಪುರಾಣಗಳುಪನಿಕ್ಷತ್ ವೊ ಸತು ಶಾಸ್ತ್ರ ಪ್ರಬಂಧವು ಭಾಗವತ ಸುಸಂ ಗೀತಿಯಲಿ ರಾಗ ಭೇದವು ಶ್ರುತಿ ಕಥಾಭಾಗ ಪದ್ಯ ಅಷ್ಟಕ ಮಿತಿಯಿಲ್ಲದಲಿಪ್ಪ ಪ್ರಸಂಗ ತತುವ ಮಾರ್ಗದಿ ನುಡಿವ ಬಲು ಉ ನ್ನತ ಮಹಿಮರ ನೋಡಿದೆ 29
--------------
ವಿಜಯದಾಸ
ನೋಡಿದೆನು ತಿರುವೆಂಗಳೇಶನಾ ಮಾಡಿದೆನು ಭಕುತಿಯಲಿ ವಂದನೆ ಬೇಡಿದೆನು ಕೊಂಡಾಡಿ ವರಗಳ ನಾಡೊಳಗೆ ಈಡಿಲ್ಲದಪ್ಪನಾ ಪ ಘನಸುಂದರ ಜ್ಞಾನ ತೀರ್ಥ ಆನಂದ ಧನ ವರಹಾ ವೈರಾಗ್ಯನಿಲಿ ರ ತುನ ಚಂದ್ರಮ ವರಧÀರ್ಮ ನಾರಾ ಯಣ ಭಕುತಿ ಶ್ರೀಕಾಂತಿ ಬ್ರಹ್ಮಾ ರುಣ ವೃಷಭ ಶ್ರುತಿ ಗರುಡ ಸರ್ಪ ಜನತ ಪೂಜಿಪ ಸುರ ಸುಧಾನಂತ ಇನಿತು ಪೆಸರುಳ್ಳ ಪುಷ್ಕರಾದ್ರಿಯಾ1 ಖಗನ ಪೆಗಲಲಿ ನಗವ ತಂದ ಜಗದೊಳು ಸುವರ್ಣಮುಖರಿ ನಿ ಮ್ನಗ ತೀರದಲಿ ಸ್ಥಾಪಿಸಿದ ಸುತ್ತಲು ಝಗಝಗಿಸುದೆ ನೋಳ್ಪ ಜನರಿಗೆ ಹಿಮ್ಮೊಗವಾಗಿ ಪೋದವು ಯುಗ ಯುಗ ಕಥಾಭೇದ ಬಗೆಬಗೆ ಪೊಗಳಿದರೆ ನೆಲೆಗಾಣೆ ಅನುದಿನಾ 2 ಸರಸ್ವತಿಗೆ ಮುನಿಯಿಂದ ಶಾಪವು ಬರಲು ಭರದಲಿ ಬಂದು ವಿರಜಾ ಸರತಿಯೊಳು ಬೆರಸಿದಳ್ ತಪದಲಿ ಹರಿಯ ಕರುಣವ ಪಡೆದು ಪ್ರತಿದಿನ ಸ್ಮರಸಿದವರಿಗೆ ಪುಣ್ಯವೀವುತ ಸರುವ ಸರೋವರಧಿಕವೆನಿಪ ಸುಂ ದರ ಸ್ವಾಮಿ ಪುಷ್ಕರಣಿಯನು ತ್ರಿ ಕರಣ ಬಲು ಒಂದಾಗಿಬಿಡದಲೆ 3 ಎರಡೈದು ಪ್ರಾಕಾರ ಗೋಪುರಾ ಎರಡೈದು ದ್ವಾರಗಳು ಕಟ್ಟಿದಾ ಮಕರ ತೋರಣ ಧರೆಗೆ ಮಟ್ಟಿದ ಎಡಬಲದ ಪೂ ಸರಗಳೊಪ್ಪಲು ದ್ವಾರಪಾಲಕರಿ ರುತಿಪ್ಪರಲ್ಲೆಲ್ಲಿ ಕಾವುತಾ ನಿಕರ ತುಂಬಿರೆ ಪರಿಪರಿಯ ಮಂಟಪಗಳಿಂದಾ 4 ಭಂಗರಹಿತ ಬಂಗಾರಮಯವಾದಾ ತುಂಗ ಆನಂದ ನಿಲಯ ವಿಮಾನಾ ಕಂಗಗಳಿಗೆ ಬಲು ತೇಜಿಃಪುಂಜದಿ ಹಿಂಗದಲೆ ಗೋಚರಿಸುತದೆ ನರ ಸಿಂಗ ಮೂತ್ರ್ಯಾದಿಗಳು ಪ್ರಾಣ ಭು ಜಂಗಧರಾದಿ ದಿಕ್ಪಾಲರೆಲ್ಲರು ಸಂಗ ಮತಿಯಲಿ ವಾಸವಾಗಿರೆ ಮಂಗಳಾಂಗ ಪ್ರಿಯಾಂಗ ಪ್ರಿಯನಾ 5 ಮುಕ್ತಿ ಬೀದಿಗಳೆರಡು ವಿ ರಕ್ತಿ ಜ್ಞಾನ ಸತ್ಕರ್ಮ ಬಲು ದೃಢ ಭಕ್ತಿಯೋಗವು ಯಾವ ತ್ಯಾಗ ಸಂ ವ್ಯಕ್ತ ರಾಗವು ಈಪರಿ ಸು ಉಕ್ತಿ ದ್ವಾದಶ ಸಾಲ ಬೀದಿಗ ಳುಕ್ತ ಜನ ಸಂಚರಿಸುತ್ತಿಪ್ಪರು ಶಕ್ತನೊಬ್ಬನೆ ಜಗದೊಳೀತನೆ ವ್ಯಕ್ತ ಅವ್ಯಕ್ತದಲಿ ಚಿತ್ರವಾ 6 ಲೋಕೇಶ ಲೋಕಪಾಲಕರು ಖಗ ಕಾಕೋದರ ಗಂಧರ್ವ ಸನಕಾದಿ ಲೋಕ ಚಕ್ಷು ಸೀತಾಂಶು ಉದಿಸಿದರು ಏಕಾಂತನು ವಾಯುನಂದನ ಪಾಕಶಾಸನ ಸೌಮ್ಯ ಗುರು ಕವಿ ನಾಕಜನ ಮಿಗಿಲಾದ ಭಕ್ತರು ಏಕಗುಣವಾರಂಭಿಸಿ ಅ ನೇಕ ಗುಣದಲಿ ಭಜಿಸುತಿಪ್ಪುದಾ7 ಸಾರಿದರೆ ನೆಲೆದೋರದು ಕಂ ಸಾರಿ ಚಿನ್ಮಯ ಲೀಲೆಗೆ ಮತ್ತಾರಾದರು ಗಣ್ಯಮಾಳ್ಪರೆ ಧಾರುಣಿಲಿ ಮಧ್ಯದಲಿದಕೆ ಎ ದಿರುಗಾಣೆನು ಎಲ್ಲಿ ಚರಿಸಲು ಮಾರುತನು ತಾನೊಬ್ಬ ಬಲ್ಲ ವಿ ಸ್ತಾರವಿದರ ವಿಚಾರ ಮತಿಯಲಿ8 ಧೀರ ಜಗದೋದ್ಧಾರ ರಿಪು ಸಂ ಹಾರ ನಾನಾವತಾರ ನವನೀತ ಜಾರ ಶಿರೋಮಣಿ ಶ್ರೀ ನಾರಿಯರರಸನೆ ತಾ ಭಕ್ತ ಚ ಕೋರ ಚಂದ್ರಮ ಪೂರ್ಣ ಸುಂದರ ಸಾರ ಭವಾರ್ಣವತಾರ ಕಾರಣ ವೀರ ವಿತರಣ ಶೂರನೆನಿಪನ್ನ ದ್ವಾರದಲಿ ಬಂದು ಸ್ತುತಿಸಿದೆನು ನಿಂದೂ 9 ಈ ವೈಲಕ್ಷಣವುಳ್ಳ ದೊರೆತನ ಈ ವೈಭವ ಸರ್ವೋತ್ತಮನೆಂಬದು ಈ ವೈಭೋಗ ಸಾಕಲ್ಯವಾಗಿದೆ ಈ ವೈಯಾರವು ಈತಗಲ್ಲದೆ ಈ ವೈಕುಂಠನ ನೋಡುವುದು ಮಹಾ ಈ ವೈದಿಕದ ಭಾಗ್ಯಕ್ಕೆಣೆಯೆ ಈ ವೈಧಾತ್ರಿಗೆಯಿವನು ಪೇಳಿದ ಈ ವೈಚಿತ್ರವ ಕೇಳಿ ಮನದಲಿ 10 ರನ್ನಮಯ ಕಿರೀಟ ಕುಂಡಲ ಕರ್ಣ ಕಸ್ತೂರಿನಾಮ ಪಣೆಯಲಿ ಕೆನ್ನೆ ಚಂಪಕ ನಾಸದಂತ ಪ್ರ ಸನ್ನ ವದನಾಂಭೋಜಲೋಚನಾ ಚಿನ್ನಸರ ಉಡುದಾರ ಸರಿಗೆ ಮೋ ಹನ್ನ ಪೀತಾಂಬರ ನೂಪುರಗೆಜ್ಜೆ ಸನ್ನಿಧಿಗೆ ನಡೆತಂದು ದೇವವರೇ ಣ್ಯನಂಘ್ರಿಯ ನೆನೆದೆ ಚೆನ್ನಾಗಿ 11 ಮೆರೆವ ಉತ್ಸವ ವಾಹನಂಗಳು ನೆರೆದ ಪ್ರಜೆದಟ್ಟಡಿಯಾಗಿದೆ ನೋಡಿ ಎರಡೊಂದು ವಿಧದವರುಯಿಲ್ಲಿಗೆ ಬರುವರೈ ಅವರವರ ತಕ್ಕದು ಹರಿಯ ಫಲವನು ಕೊಡುವನಿಲ್ಲದೆ ಅರಮರೆ ಇಲ್ಲಿದಕೆ ಎಂದಿಗು ಮೊರೆವ ನಾನಾ ವಾದ್ಯ ರಭಸ ವಿ ಸ್ತರಿಸ ಬಲ್ಲೆನೆ ನೂತನೂತನಾ 12 ರಥದ ಸಂಭ್ರಮವಾರು ಬಲ್ಲರು ಪ್ರತಿಗಾಣೆ ಈ ಪೃಥ್ವಿಯೊಳಗೆ ಅ ಪ್ರತಿ ಸಾಹಸಮಲ್ಲ ತನ್ನಯ ಸತಿಯೊಡನೆ ಪರುಠವಿಸಿ ಪೊಳೆವುತ್ತ ಚತುರ ಬೀದಿಯ ಸುತ್ತಿ ಸುಮನಸ ತತಿಯ ಸಂಗಡ ಬರುವ ಭರ ಉ ನ್ನತವ ಗುಣಿಸುತ್ತ ನಲಿನಲಿದು ಅ ಚ್ಯುತನ ಕ್ರೀಡೆಯ ಸ್ಮರಿಸಿ ನಮೋ ಎಂಬೆ13 ರಾಜರಾಜೇಶ್ವರ ನಿರಂತರ ರಾಜಿಸುತಿಪ್ಪ ಬಗೆಬಗೆ ಸಂಪೂಜೆಯಲಿ ರಾಜೋಪಚಾರದಿ ಮೂಜಗದೊಳು ಈ ನಿಧಿಯಲಿದ್ದ ಸೋಜಿಗವೆ ಮತ್ತೆಲ್ಲಿಯಿಲ್ಲವು ರಾಜಶೇಖರ ಬಲ್ಲವನೊಬ್ಬನೆ ಮಾಜದಲೆ ಸಜ್ಜನರು ಸತ್ಕರ್ಮ ಬೀಜಮಂದಿ ಮಾಡಿಬಿಡಲೆ 14 ದರ ಸುದರಶನ ಪಾಣಿ ತನ್ನ ಸಂ ದರುಶನವೆಮಗಿತ್ತು ಘನ ಆ ದರ ಪಾಲಿಸಿ ಸಂಚಿತಗಾಮಿ ಪಠಿಸಿ ಪ್ರಾರಬ್ಧವೇ ತೀರಿಸಿ ಕರುಣದಿಂದಲಿ ದಿವ್ಯರೂಪದ ಗುರುತು ತೋರುವ ಅಂತರಂಗದಿ ಪರಮಪಾವನ ವಿಜಯವಿಠ್ಠಲ ಪೊರೆವ ಪ್ರೀತಿಲಿ ಬಂದು ಮರಿಯದೆ15
--------------
ವಿಜಯದಾಸ
ನೋಡಿದ್ಯಾ ಗುರುರಾಯರ ನೋಡಿದ್ಯಾ ಪ ನೋಡಿದ್ಯಾ ಮನವೆ ನೀನಿಂದು - ಕೊಂ - ಡಾಡಿದ್ಯ ಪುರದಲ್ಲಿ ನಿಂದು - ಆಹಾ ಮಾಡಿದ್ಯ ವಂದನೆ ಬೇಡಿದ್ಯ ವರಗಳ ಈಡು ಇಲ್ಲದೆ ವರ ನೀಡುವೊ ಗುರುಗಳ ಅ.ಪ ಸುಂದರ ತಮ ವೃಂದಾವನದಿ ತಾನು ನಿಂದು ಪೂಜೆಯ ಕೊಂಬ ಮುದದಿ - ಭಕ್ತನೀ ನಂದ ನೀಡುವೆನೆಂದು ತ್ವರದಿ ಇಲ್ಲಿ ಬಂದು ನಿಂತಿಹನು ಪ್ರಮೋದಿ ಆಹಾ ಹಿಂದಿನ ಮಹಿಮವು ಒಂದೊಂದೆ ತೋರುವಾ ಮಂದಜನರ ಹೃ - ನ್ಮಂದಿರಗತರನ್ನ 1 ದೂರದಿಂದಲಿ ಬಂದ ಜನರ - ಮಹ ಘೋರ ವಿಪತ್ಪರಿಹಾರಾ - ಮಾಡಿ ಸಾರಿದಭಿಷ್ಟವು ಪೂರಾ - ನೀಡಿ ಪಾರುಮಾಡುವ ತನ್ನ ಜನರಾ - ಆಹಾ ಆರಾಧಿಸುವರ ಸಂ -ಸಾರವಾರಿಧಿಯಿಂದ ಸೂರಿ ಕೊಡುವೊರನ್ನ 2 ಪಾದ - ಯುಗ ಸತ್ಯಪೂರ್ವಕದಿ ನಂಬೀದ - ನಿಜ ಭೃತ್ಯನಪೇಕ್ಷಮಾಡೀದ - ಕಾರ್ಯ ಸತ್ಯಮಾಡುವ ಪೂಜ್ಯಪಾದ - ಆಹಾ ಮತ್ರ್ಯಾದಿ ಸುರರೊಳು - ಎತ್ತ ನೋಡಿತಗಿನ್ನು ಉತ್ತುಮರಾರಯ್ಯ - ಭತ್ಯವತ್ಯಲರನ್ನ 3 ಅಂತರದಲಿ ತಾನು ನಿಂತು ಜನ ಸಂತತ ಕಾರ್ಯಗಳಿಂತು - ಮಾಡಿ ಕಂತುಪಿತಗೆ ಅರ್ಪಿಸ್ಯಂತು ತಿಳಿಸ ದಂತೆ ಎಮ್ಮೊಳಗಿರೊವೊ ತಂತು - ಆಹಾ ಸಂತತ ಕರ್ಮಗಳಂತು ಮಾಡುತ ಜೀವ ರಂತೆ ಗತಿಯು ತಾ ಪ್ರಾಂತಕ್ಕೆ - ನೀಡುವರ 4 ಅಗಣಿತ ಮಹಿಮವಗಾಧಾ - ಬಹು ಸುಗುಣನಿಧಿ ಮಹಾ ಭೋಧ - ನಾನು ಪೊಗಳುವದೇನು ಸಮ್ಮೋದ - ತೀರ್ಥ ಮೊದಲಾದ ಸುರರ ಪ್ರಮೋದ - ಆಹಾ ಮೊಗದಿಂದ ಶ್ರೀಗುರು ಜಗನ್ನಾಥ ವಿಠಲ ಸಂ ಮೊಗನಾದ ಕಾರಣ ಜಗದಿ ಮೆರೆವೊರನ್ನ 5
--------------
ಗುರುಜಗನ್ನಾಥದಾಸರು
ನೋಡು ಎನ್ನೊಳು ಮಾಡು ದಯವನು ಬೇಡಿಕೊಂಬುವೆ ಮುರಹರ ಪ ರೂಢಿಯೊಳು ಎನ್ನ ಖೋಡಿಮಾಡದೆ ಕಾ ಪಾಡು ಬೇಗ ಭಕ್ತಹಿತಕರ ಅ.ಪ ಪಂಕಜಾಕ್ಷನೆ ಕಿಂಕರನ ಈ ಮಂಕುಗುಣಗಳ ಬಿಡಿಸಯ್ಯ ಶಂಖಸುರಹರ ಶಂಕೆಯಾತಕೆ ಕಿಂಕರನು ನಾಂ ಪಿಡಿ ಕೈಯ 1 ಹಿಂದು ಇಲ್ಲೆನ್ನ ಮುಂದು ಇಲ್ಲಯ್ಯ ತಂದೆ ನಿನ್ಹೊರತ್ಯಾರ್ಯಾರು ಮಂದಮತಿಯನು ಛಿಂದಿಸಿ ಬೇಗ ಕಂದನನು ಪೊರೆ ದಯಾಕರ 2 ತಂದೆ ನೀನೆ ತಾಯಿ ನೀನೆ ಬಂಧು ನೀನೆ ಶ್ರೀಕರ ಬಂದ ದುರಿತದಿಂದ ಕಾಯೊ ಸಿಂಧು ನೀನೆ ದೇವರೊ 3 ಉರಗನ ಬಾಯಲಿರುವ ಮಂಡೂಕ ಸ್ಮರಿಸಿ ನೋಣಕ್ಹವಣಿಸುವ ತೆರದಿ ಶರಧಿಸಂಸಾರ ಸ್ಥಿರವೆಂದರಿಯದೆ ಮರವಿನಿಂ ಬಿದ್ದೆ ದುರಿತದಿ 4 ಕಾಯಜೆಂಬುವ ಮಾಯಕೋರನು ಪಾಯಕೆ ಒಳಪಟ್ಟೆನು ತೋಯಜಾಕ್ಷೇರ ಮಾಯಮೋಹದಿ ಕಾಯದಂದಿಸಿ ಕೆಟ್ಟೆನು 5 ಕುಂಭಿನಿಯೊಳೆನಗಿಂಬುಗೊಟ್ಟು ಬಲು ನಂಬಿದವರಾಸ್ತ್ಯಳಿದೆನೊ ಜಂಬಬಡಿಯುತ ಶುಂಭಗುಣಗಳಿ ಗಿಂಬುಗೊಟ್ಟು ದಿನಗಳೆದೆನೊ 6 ಪ್ರಾಣತಗ್ಗಿಸಿ ದೀನತನದಲಿ ದೈನ್ಯಬಡುವರಿಗ್ಹಾನಿಮಾಡಿದೆ ದಾನಕೊಡುವರ ದಾನಕಡ್ಡಾಗಿ ನಾನಾ ದುರ್ಬೋಧವುಸುರಿದೆ 7 ಜಾನಕೀಶನ ಧ್ಯಾನಯುತರಿಗೆ ಹೀನ ಹಾಸ್ಯವ ಗೈದೆನೊ ಏನು ತಿಳಿಯದೆ ಗಾಣಕೆ ಬಿದ್ದ ಮೀನಿನಂತೆ ನಾನಾದೆನೊ 8 ಶ್ವಾನನಂದದಿ ಖೂನವಿಲ್ಲದೆ ನಾನಾಪಾಪವ ಗೈದೆನೊ ಮಾನವಜನುಮೇನು ಶ್ರೇಷ್ಠಿದ ಜ್ಞಾನದೋಳ್ಹೊತ್ತುಗಳೆದೆನೊ9 ಮಂಗನಂದದಿ ಹಂಗದೊರೆದು ಅಂಗಲಾಚಿ ಪರರನ್ನು ಬೇಡಿದೆ ಅಂಗಜಪಿತ ಮಂಗಳಾಂಗ ಶ್ರೀ ರಂಗ ನಿಮ್ಮ ಮಹಿಮ್ಯರಿಯದೆ 10 ದಾಸ ಮಾಡಿದ ದೋಷ ಮನ್ನಿಸಿ ಪೋಷಿಸು ಶ್ರೀರಾಮನೆ ಶ್ರೀಶ ಶ್ರೀನಿವಾಸ ಎನ್ನಂತ ರಾಸೆ ಪೂರೈಸು ಬೇಗನೆ 11
--------------
ರಾಮದಾಸರು
ನೋಡು ನೋಡು ಬ್ರಹ್ಮವ ಮುಕ್ತನೆನೋಡು ನೋಡು ಬ್ರಹ್ಮವನೋಡು ನೋಡು ಬ್ರಹ್ಮವನ್ನುಗೂಢವಲ್ಲ ಎದುರಿಲ್ಲದೆಆಡಲಿಕ್ಕೆ ನಾಲಗಿಲ್ಲ ಸರ್ವರೂಪದಲ್ಲಿದೆ ಪ ಸ್ತ್ರೀಯ ರೂಪಾಗಿದೆ ಪುರುಷ ರೂಪಾಗಿ ಇದೆಸ್ತ್ರೀಯು ಅಲ್ಲ ಪುರುಷನಲ್ಲ ಅಹುದು ಅಹುದು ಅಹುದು ಅಲ್ಲ 1 ಸತಿಯು ಪತಿಯು ಆಗಿ ಇದೆಸುತರು ಸೊಸೆಯು ಆಗಿ ಇದೆಅತಿ ಬಳಗವಾಗಿ ಇದೆ ಎಲ್ಲ ವೇಷ ಹಾಕಿ ಇದೆ2 ಎಲ್ಲವಾಗಿ ಆಡುತಿದೆಎಲ್ಲವಾಗಿ ಪಾಡುತಿದೆಎಲ್ಲವಾಗಿ ಚಿದಾನಂದ ಬ್ರಹ್ಮವೀ ಪರಿಯಲಿದೆ 3
--------------
ಚಿದಾನಂದ ಅವಧೂತರು
ನ್ಯಾಯತಂದಿಹೆನೊ ಹರಿ ನಿನ್ನ ಸಭೆಗೆ ತೀರ್ಪುಮಾಡಿದನು ನ್ಯಾಯತಂದಿಹೆ ಪ ನ್ಯಾಯ ತಂದಿಹೆ ನೋಯದೆ ಉ ಪಾಯದಿಂದ ತೀರ್ಪುಮಾಡುವ ನ್ಯಾಯಾಧೀಶ ದಯಾಳು ಎನ್ನ ನ್ಯಾಯ ತೀರಿಸಿ ಕಾಯ್ವನೆಂದು ಅ.ಪ ಕೊಟ್ಟ ಒಡೆಯರೋ ಬೆನ್ನಟ್ಟಿ ಎನ್ನನು ಕಟ್ಟಿ ಕಾದ್ವರು ಭ್ರಷ್ಟನೆ ಮುಂದಕೆ ಕೊಟ್ಟ್ಹ್ಹೋಗೆನ್ವರು ನಿಷ್ಠುರಾಡ್ವರು ಕೊಟ್ಟು ಮುಕ್ತನಾಗ್ವೆನೆನ್ನಲು ಖೊಟ್ಟಿಕಾಸು ಕೈಯೊಳಿಲ್ಲವು ಭವ ಬೆನ್ನಟ್ಟಿ ಬಿಡದ ಕ ನಿಷ್ಟರಿಣಸೂತಕವ ಕಡಿಯೆಂದು 1 ಅನ್ನ ಕೊಟ್ಟವಗೆ ಅನ್ಯಾಯ ಯೋಚಿಸಿ ಬನ್ನ ಬಡಿಸಿದೆನೊ ಇನ್ನುಳಿಯದೆನೆಂದು ನಿನ್ನ ಸೇರಿದೆನೊ ಪನ್ನಂಗಶಯನ ಮುನ್ನ ಮಾಡಿದ ಎನ್ನ ಅವಗುಣ ಭಿನ್ನವಿಲ್ಲದೆ ನಿನ್ನೊಳ್ಪೇಳುವೆ ಸನ್ನುತಾಂಗನೆ ಮನ್ನಿಸಿ ಇದ ನಿನ್ನು ಎನ್ನಯ ಬನ್ನಬಿಡಿಸಿದೆಂದು 2 ಆಸೆಗೊಳಿಸಿದೆನೋ ಪುಸಿಯನ್ಹೇಳಿನಿ ರಾಸೆಮಾಡಿದೆನೋ ಶಾಶ್ವತದಿ ಕೊಟ್ಟ ಭಾಷೆ ತಪ್ಪಿದೆನೋ ವಸುಧೆಯೊಳು ನಾನು ಈಸುದಿನದಿಂ ಮೋಸಕೃತ್ಯದಿ ಘಾಸಿಯಾದೆನು ಧ್ಯಾಸಮರದು ಶ್ರೀಶ ಶ್ರೀನಿವಾಸ ಶ್ರೀರಾಮ ಪೋಷಿಸೆನ್ನ ಸುಶೀಲ ಗುಣವಿತ್ತು 3
--------------
ರಾಮದಾಸರು
ಪಕ್ಷಿವಾಹನ ಸತ್ಯಭಾಮೆ ಸದನದ್ವಾರದಿ ನಿಂತು ಸದನದ್ವಾರದಿ ಮಿತ್ರೆ ಎನಗೆ ಕದವ ತೆಗೆಯೆ ಬರುವೆ ತೀವ್ರದಿ 1 ಸಾಕೊ ಸಾಕೊ ನಿನ್ನ ಸಂಗ ಯಾಕೊ ಕೃಷ್ಣನೆ ನಮಗಿನ್ಯಾಕೊ ಕೃಷ್ಣನೆ ಅ- ನೇಕ ಸ್ತ್ರೀಯರಿಂದ ರಮಿಸ್ಹೋಗಾದಿ ಪುರುಷನೆ 2 ವಾಕು ವಾಕು ತಿಳಿಯದೊ ವಿ- ವೇಕದಿಂದ ನಿಂತು ಪೇಳೆ ಮಾತುಯೆನ್ನೊಳು 3 ಎನ್ನ ಬಿಟ್ಟು ಅನ್ಯಸ್ತ್ರೀಯರ ಮನೆಗೆ ಪೋಗುವಿ ಸ್ತ್ರೀಯರ ಮನೆಗೆ ಪೋಗುವಿ ಘನ್ನ ಘಾತಕತನದಿಂದಿಲ್ಲಿಗಿನ್ನು ಬರುವರೆ 4 ನಿನ್ನ ಸರಿಯಸವತೇರೆನಗೆ ಸತಿಯರಲ್ಲವೆ 5 ಅತ್ತಸಾಗೊ ರುಕ್ಮಿಣಿ ಒಲವು ಚಿತ್ತವ್ಹಿಡಿಯದೆ ಆಕೆ ಚಿತ್ತವ್ಹಿಡಿಯದೆ ಲೆತ್ತಪಗಡೆನಾಡದ್ಹೀಗೆ ಇತ್ತ ಬರುವರೆ6 ಕಾಳಕತ್ತಲು ಪ್ರಳಯಜಲದಿ ಕಾದುಕೊಂಡೆನ್ನ ಇರುವೋಳು ಕಾದುಕೊಂಡೆನ್ನ ಆದಿಲಕ್ಷ್ಮಿ ಮುನಿದರೆನಗಿನ್ನಾ ್ಹ್ಯಗೆ ಭಾಮಿನಿ 7 ಜಾಂಬುವಂತೇರ್ಹಂಬಲಬಿಟ್ಟು ಬಂದ ಕಾರಣ ನೀನು ಬಂದ ಕಾರಣ ಆ- ನಂದ ಬಡಿಸುತವರ ಗೃಹದಲ್ ಹೊಂದಿಕೊಂಡಿರು 8 ಜಾಂಬುವಂತೇರಿಂದ ಬಂದ ನಿಂದ್ಯ ಕಳೆದನೆ ನಾ ಅಪನಿಂದ್ಯ ಕಳೆದೆನೆ ತಂದು ರತ್ನತೋರಿ ನಿನ್ನ ತಂದೆ ಭಾಮಿನಿ 9 ಕಮಲನಾಭ ಕಾಳಿಂದಿ ಕಳವಳಿಸುವಳೊ ಕಾಣದೆ ಕಳವಳಿಸುವಳೊ ಕಾಣದೆ ಕಾಲಕಳೆಯೊದ್ಯಾ ್ಹಗಿನ್ನಾಕೆ ಆಲಯಕೆ ಪೋಗೊ 10 ಭಾಳ ತಪಸಿಲ್ವಲಿಸಿ ಭಾರ್ಯಳಾದ ಬಗೆ ನೀ ಅರಿಯದೆ 11 ನೀಲವರ್ಣ ನೀಲಾದೇವಿ ನಿನ್ನ ಕಾಣದೆ ಇರುವಳು ನಿನ್ನ ಕಾಣದೆ ಗಮನ ನಿಲ್ಲದೆ ನೀ ಪೋಗೊ 12 ಸಪ್ತಗೂಳಿ ಕಟ್ಟಿ ನಾ ಸಮರ್ಥನೆನಿಸಿದೆ ಬಲು ಸಮರ್ಥನೆನಿಸಿದೆ ನೀಲ ನನಗೆ ಶ್ರೇಷ್ಠಳಲ್ಲವೆ 13 ಎದ್ದು ಪೋಗಾಕಿದ್ದಸ್ಥಳಕಿಲ್ಲಿರಲು ಸಲ್ಲವೊ 14 ಅರಸರಾಕೆ ಅಗ್ರಜರೈವರು ಕರೆಸಿ ಕೇಳೋರೆ ಎನ್ನ ಕರೆಸಿ ಕೇಳೋರೆ ಹೋಗಿ ಹರುಷ ಬಡಿಸದಿರಲು ಆಕೆನ್ನರಸಿ ಅಲ್ಲವೆ 15 ಆಕೆ ಸಿಟ್ಟಿಲಿಂದ ದೃಷ್ಟಿತೆಗೆದು ಎನ್ನ ನೋಡಳೆ 16 ನಿನಗೆ ಇಷ್ಟು ಕ್ರೋಧ ನಿಷ್ಠೂರ್ವಚನ ಬ್ಯಾಡೆ ಭಾಮಿನಿ 17 ಲಕ್ಷಣ ದೇವೇರಲ್ಲಿ ಭಾಳಾಪೇಕ್ಷವಲ್ಲವೆ18 ನಾನು ಲಕ್ಷಣೆಯನೆ ತಂದೆ ಕೇಳೆ ಸತ್ಯಭಾಮೆ ನೀ 19 ಹತ್ತು ಆರು ಸಾವಿರ-ಶತ ಪತ್ನೇರಿಲ್ಲವೆ ನಿನಗೆ ಪತ್ನೇರಿಲ್ಲವೆ ತಿರುಗಿ ಸುತ್ತಿ ಸುತ್ತಿ ಹಾದಿ ಹೀಗೆ ತಪ್ಪಿಬರುವರೆ 20 ದಾರಮನೆಗೆ ಹೋಗಲೆನ್ನ ದೂರು ಮಾಡೋರೇ ಹೀಗೆ ದೂರು ಮಾಡೋರೇ ಸ್ವಾಮಿ ಪಾರಿಜಾತಕೊಟ್ಟ ಸತಿಯಲ್ಲೊ ್ಹೀಗಿರೆಂಬರೆ 21 ಸರಸವಾಡದಿರೊ ಶ್ರೀರಮಣ ಅರಸೇರ್ಯಾತಕೊ ನಿನಗೆ ಅರಸೇರ್ಯಾತಕೊ ಹರುಷದಿಂದ ಎರಗದೆನ್ನ ಶಿರಸಿದ್ಯಾತಕೊ 22 ಶ್ರೀಶ ಎನ್ನ ಮನದಲಿರೊ ಭೀಮೇಶಕೃಷ್ಣನೆ ಇರೊ ಭೀಮೇಶಕೃಷ್ಣನೆ ನಿನ್ನ ವಿಲಾಸ ಬಯಸದಿರುವರ್ಯಾರೊ ಇಂದಿರೇಶನೆ 23
--------------
ಹರಪನಹಳ್ಳಿಭೀಮವ್ವ
ಪಡೆದಲ್ಲದೆ ಮಿಗಿಲು ಬರಲರಿಯದು ಎಡೆ ಬಿಡದೆ ಎಲೆ ಮನವೇ ಏಕೆ ಬಳಲುವಿ ವೃಥಾ ಪ ವನನಿಧಿಯೊಳು ಪೊಕ್ಕು ಸಲಿರೆಡಿ ನೋಡಿದರೂ ಭರದಿ ಬಲುಭಾರವನು ಹೊರಲಿ ಬೆನ್ನಿಲಿ ಧರಗೆ ತಲೆಯನ್ನು ಬಾಗಿ ತಾನು ಯೋಚನೆ ಮಾಡಿ ಪರಿ ಪರಿಯಲಿ ಭಯಂಕರ 1 ಬಡವನೆಂದ್ಹೇಳ ಭರಬಾಗಿಲಲಿ ನಿಂದಿರಲು ದೃಢದಿ ವೈರಿಗಳ ಖಂಡಿಸಲು ಮುದದಿ ಅಡವಿ ಸಂಚರಿಸುತಲಿ ಹಾರೈಸಿ ಹುಡುಕಿದರು ಕಡು ಕಳ್ಳತನ ಕಲೆತು ಕಂಡಕಡೆ ತಿರುಗಿದರು 2 ಬರಿಯ ಬತ್ತಲು ನಿಂತು ನರರಿಗ್ಹೊಂನವ ತೋರಲು ತುರಗವನ್ನೇರಿ ಧರಣಿಯನು ಪಾಲಿಸಲಿ 'ವರ ಹೆನ್ನೆಪುರನಿಲಯ ನರಹರಿಯು ಮಾಡಿದ್ದ ಬರಿದೆ ಚಿಂತಿಸಿ ನೀನು ಭಾಗ್ಯವದರಿಂದೇನು 3
--------------
ಹೆನ್ನೆರಂಗದಾಸರು
ಪತಿ ವಿಠಲ | ರಕ್ಷಿಸೊ ಇವಳಾ ಪ ಪಕ್ಷೀಂದ್ರ ವಹ ಹರಿಯೆ | ಅಕ್ಷಯ್ಯ ಫಲದಾ ಅ.ಪ. ಮೋದ ತೀರ್ಥರ ಪ್ರೀಯಬೋಧಿಸೀ ತತ್ವ ಸಂ | ಧಾನವನೆ ಈಯೋ 1 ಫಣಿ ಶಾಯಿ | ಪ್ರಹ್ಲಾದ ವರದಾ 2 ಭವ ಭಂಗ ಕಳೆಯಲು ಸುಜನಸಂಗವನೆ ಕೊಟ್ಟು ಹರಿ | ಕಾಪಾಡ ಬೇಕೋಸಂಗರದಿ ಮೈದುನನ | ಭಂಗವಿಲ್ಲದೆ ಕಾಯ್ದೆಸಂಗೀತ ಲೋಲ ಸುಖ | ಶೃಂಗಾರ ಮೂರ್ತೇ 3 ಜ್ಞಾನಾನು ಸಂಧಾನ | ಸಾನು ಕೂಲಿಸಿ ಇವಳಪ್ರಾಣ ಪ್ರಾಣನು ನಿನ್ನ | ಧ್ಯಾನ ಮಾಳ್ಪಂತೇಮಾನಸಾದಲಿ ನಿಂತು | ಚೊದನೆಯ ಗೈಯ್ಯುತ್ತಗಾನ ಮಾಡಿಸೊ ದೇವ | ನಿನ್ನ ಮಹಿಮೆಗಳು4 ಪಾವನಾತ್ಮಕ ದೇವ | ಪಾವನ್ನ ತವ ಮಹಿಮೆಆವಾಗಲೂ ತುತಿಪ | ಭಾವವನೆ ಇತ್ತೂ |ಶ್ರೀವರ ಶ್ರೀ ಗುರೂ | ಗೋವಿಂದ ವಿಠ್ಠಲನೆಕಾವುದಿವಳನು ಎಂದು | ಪ್ರಾರ್ಥಿಸುವೆ ನಿನ್ನಾ 5
--------------
ಗುರುಗೋವಿಂದವಿಠಲರು