ಒಟ್ಟು 14471 ಕಡೆಗಳಲ್ಲಿ , 133 ದಾಸರು , 7276 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಹರಿಪಾದವ ನಂಬಿರೋ | ಮನುಜರೆಲ್ಲ | ಹರಿಯಲ್ತೆ ಹರಿಗರ್ವ ಹರಿಸಿ ಗೋಕುಲದೀ | ವಿ | ಹರಿಸಿ ಹರಿಜಳಲ್ಲಿ ಹರಿಮೆಟ್ಟಿನಲಿವಂಥ ಪ ಸೋಮಜ ಭವನ ಪದಾ | ಸೇವೆಗೆ ಮೆಚ್ಚಿ | ಸೋಮ ಪುತ್ರಗೆ ನೀಡಿದಾ | ಸೋಮನಾ ಭಂಡಾರಿಯನೆ ಮಾಡಿ ದಯದಿಂದ | ಸೋಮಜಾನನಾ ಪೂರ್ಣ ಸೋಮಚಕೋರವಾ 1 ಕಮಲಾರಿ ಧರ ಸೇವ್ಯನು | ಶಂಖ ಚಕ್ರ | ಕಮಲಾಗದಾಧರನು | ಕಮಲಾಂಘ್ರೀಯನಖ ಕಮಲದಿ ಜನಿಸಿದಾ | ಕಮಲದಿ ಮೂಜಗ ಕಮಲಗತಿಯ ನೀವ 2 ಗೋಪೆಸರನ ಪಿತನ | ಉದ್ಧರಿಸಲು | ಗೋಪಾದ ತ್ರಯ ಕೃತನ | ಗೋಪಾದಿವಿನುತ ಮಹಿಪತಿಸುತ ಪ್ರಭು | ಗೋಪಕೋಟಿ ತೇಜ ಗೋಪಾಲ ನೆನಿಸುವ 3
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ಹರಿಭಜನವೇ ಬಹುಮಿಗಿಲು ನರನಿಗೆ ಧರೆಯಸುಖವೆಲ್ಲ ಸುಳ್ಳೊ ಸುಳ್ಳೋ ಪ ತಂದೆತಾಯಿಗಳು ಮಂದಿ ಮಕ್ಕಳು ಬಂಧುಬಳಗ ಒಂದು ಸಂಬಂಧವಿಲ್ಲ 1 ಕೋಟಿಕೊತ್ತಲ ಕೋಟಿಧನಬಲ ನೀಟಾದ ಮಹಲು ನಿಜವಿಲ್ಲ ಇಲ್ಲ 2 ರಾಜ್ಯಭಂಡಾರ ಪ್ಯಾಟೆ ತೇಜಿ ಆನೆ ಒಂಟಿ ರಾಜಿಪುದೆಲ್ಲ ಸುಳ್ಳ ಮುಷ್ಟಿಮುಷ್ಟಿ 3 ಸಿರಿ ಅಂದಣ ಭಾರಿ ನಂದಿಪೋಗುವುದೆಲ್ಲ ಹಾರಿ ಹಾರಿ 4 ವರದ ಶ್ರೀರಾಮನ ಚರಣಸ್ಮರಣಿಲ್ಲದ ನರರ ಜನುಮವೆಲ್ಲ ಹಾಳು ಹಾಳು 5
--------------
ರಾಮದಾಸರು
ಹರಿಭಜನೆ ಮಾಡುವಗೆ ಅನಂತಫಲವೂ ಹರಿ ಭಜನೆ ಇಲ್ಲದವಗೆ ಅತಿಘೋರ ತಮವೂ ಪ ಭವರೋಗ ಸಂಚಿತವು ಪರಿ ಪರಿಯ ನರಕಾದಿ ಬಂಧಕವು ಬಿಡದು 1 ಆ ರಾಮನಂಘ್ರಿಗಳ ಅರ್ತಿಯಲಿ ಅರ್ಚಿಸುವರಿ ಗಾರಾಮವಾದಂಥ ಸುಖಸೌಖ್ಯವು ಹೇರಾಮ ಎನದವಗೆ ಅತಿ ದು:ಖದಾರಿದ್ರ್ಯ ತೋರುವುದು ಅನುಗಾಲ ತಗಲಿ ಬಿಡದವೆಯಿನ್ನು 2 ವಿತರಣಾದಿ ಶ್ರೀ ಹೆನ್ನೆವಿಠ್ಠಲನ ಹೃದಯದಲಿ ಸತತಧ್ಯಾನವು ಮಾಡುವ ಸಾಧು ಜನರಾ ಪತಿತ ಪಾವನನಾದ ಪರಮಾತ್ಮ ಪಾಲಿಸೆ ಗತಿಯು ತೋರುವ ಇನ್ನು ಕರುಣದಲಿ ಹರಿಯು 3
--------------
ಹೆನ್ನೆರಂಗದಾಸರು
ಹರಿಮನದಂಬೇ ಪರಮ ಕದಂಬೇ ಸುರಪನುತೆ ಮಾಂಗಿರೀಶ ಸೌರಭೇ ಪ ಸಿರಿಮಧುರಭಾಷಿಣೆ ಶ್ರೀಮಣಿ ಸರಸಿಜನೇತ್ರರಮಣೀ ಸುವಾಣಿ ವರ ಭೋಗೀಶವೇಣಿ ಸದ್ಗುಣಿ ಸುರುಚಿರ ಸುಮಪಾಣಿ ಭಾಮಿನಿ 1 ವನಜಭವ ಪೂಜಿತೇ ವಂದಿತೇ ಮನಸಿಜಮಾತೆ ಮಹಿತೇ ವಿನೀತೇ ವೈನತೇಯಾದಿ ಸಂತಾನಕೆ ಜನಗಣನುತೆ | ರಂಗ ಮೋಹಿತೇ 2
--------------
ಅಸೂರಿ ರಾಮಸ್ವಾಮಿಅಯ್ಯಂಗಾರ್
ಹರಿಮುಖಿ ಹರಿವಾಣಿ ಹರಿವೇಣಿ ಹರಿಣಾಕ್ಷಿಹರಿಮಧ್ಯೆ ಹರಿಗಮನೆ ಪ ಹರಿಯ ನಂದನ ಸಖನೆನಿಪ ಅಹೋಬಲದಹರಿಯ ನೀ ತಂದು ತೋರೆ ಅ ಎರವಿನ ತಲೆಯವನಣ್ಣನಯ್ಯನಪರಮ ಸಖನ ಸುತನಹಿರಿಯಣ್ಣನಯ್ಯನ ಮೊಮ್ಮನ ಮಾವನತಂದೊಟ್ಟಿದನ ಹಗೆಯಗುರುವಿನ ಮುಂದೆ ಮುಂದಿಹ ಬಾಹನಕಿರಿಯ ಮಗನ ರಾಣಿಯದುರುಳತನದಿ ಸೆಳೆದುಕೊಂಡನ ಕೊಂದನತರಳೆ ನೀ ತಂದು ತೋರೆ 1 ಸೋಮನ ಜನಕನ ಸತಿಯ ಧರಿಸಿದನರೋಮ ಕೋಟಿಯೊಳಿಟ್ಟಹನಕಾಮಿನಿ ಸತಿಯ ಕಂದನ ತಮ್ಮಗೊಲಿದನಭಾಮೆ ನೀ ತಂದು ತೋರೆ 2 ಶ್ರುತಿಯನುದ್ಧರಿಸಿ ಭೂಮಿಯ ಪೊತ್ತು ಅಡವಿಯಪಥದೊಳು ತಿರುಗಿದನ ಅತಿಶಯ ನರಹರಿ ವಾಮನ ರೂಪಿನಪಿತನ ಮೋಹದ ರಾಣಿಯ ಹತ ಮಾಡಿ ಸತ್ಯಕ್ಕೆ ನಿಂತು ನಗವ ಹೊತ್ತುಪತಿವ್ರತೆಯರ ಭಂಗಿಸಿಕ್ಷಿತಿಯೊಳು ರಾಹುತನಾದ ಬಾಡದಾದಿಕೇಶವನ ತಂದು ತೋರೆ3
--------------
ಕನಕದಾಸ
ಹರಿಯ ನೆನಸಿದ ದಿವಸ ಶುಭಮಂಗಳಾ ಪ ಹರಿಯ ನೆನಸಿದ ದಿವಸ ಅವಮಂಗಳಾ ಅ.ಪ ಹರಿಯ ನೆನಸಿದ ನಿಮಿಷ ಆವಾಗಲೂ ಹರುಷ | ಹರಿಯ ನೆನಸದ ದಿವಸ ದುರ್ಮಾಸನಾ || ಹರಿಯ ನೆನಸಿದ ಘಳಿಗೆ ಮುಕ್ತಿಗೆ ಬೆಳವಣಿಗೆ | ಹರಿಯ ನೆನಸದ ಘಳಿಗೆ ಯಮನ ಬಳಿಗೆ 1 ಹರಿಯ ನೆನಸಿದ ಪ್ರಹರ ಕುಲಕೋಟಿ ಉದ್ಧಾರ | ಹರಿಯ ನೆನಸದ ಪ್ರಹರ ಹೀನಾಚಾರ || ಹರಿಯ ನೆನಸಿದ ಹಗಲು ಮುಕ್ತಿಗೆ ಬಲು ಮಿಗಿಲು | ಹರಿಯ ನೆನಸದ ಹಗಲು ನರಕಕ್ಕೆ ತಗಲು 2 ಹರಿಯ ನೆನಸಿದ ಮಧ್ಯಾಹ್ನ ಸುಧಾಪಾನ | ಕಾನನ || ಹರಿಯ ನೆನಸಿದ ಸಾಯಂಕಾಲವೇ ಸುಕಾಲ | ಹರಿಯ ನೆನಸದ ಸಾಯಂಕಾಲವೇ ದುಷ್ಕಾಲ3 ಹರಿಯ ನೆನಸಿದ ದಿನವು ನರನಿಗೆ ಸಮ್ಮತವು | ಹರಿಯ ನೆನಸದ ದಿನವು ದುರ್ದಿನವು || ಹರಿಯ ನೆನಸಿದ ನರÀನು ಅವನೇ ಕೃತಕೃತ್ಯ | ಹರಿಯ ನೆನಸದ ನರಜನ್ಮ ವ್ಯರ್ಥಾ 4 ಹರಿಯ ನೆನಸಿದ ರಾತ್ರಿ ತೀರ್ಥಕ್ಷೇತ್ರದ ಯಾತ್ರೆ | ಹರಿಯ ನೆನಸದ ರಾತ್ರಿ ಪಂಚಪಾತ್ರಿ || ಸಿರಿ ವಿಜಯವಿಠ್ಠಲನಂಘ್ರಿ | ಮುರಿಯದೇ ಸದಾ ನೆನೆವವನೆ ಮುಕ್ತ 5
--------------
ವಿಜಯದಾಸ
ಹರಿಯ ಪಟ್ಟದರಾಣಿ ನಿಮ್ಮ ಸಿರಿಚರಣಕ್ಕೆ ನಾ ಶರಣೆಂಬೆಧರಣಿ ಒರೆಸಮ್ಮ ದುರಿತಘಮ್ಮ ಹರಿಸುದಮ್ಮ ಪ. ಧನಧಾನ್ಯವಿತ್ತು ಮತ್ರ್ಯರ ಪೊರೆವೆ ಎಂದೆಂದುಮನೆಗಿಂಬುಕೊಟ್ಟು ರಕ್ಷಿಸಿದೆದಿನದಿನದಿ ಚರಣವಿಟ್ಟರೆ ನೊಂದುಕೊಳೆ ನಿನ್ನಗುಣಕೆ ಭೂದೇವಿ ಸರಿಗಾಣೆ ಸಕಲಮುನಿ-ಜನರ ಪೊರೆವುದು ನಿಮ್ಮಾಣೆ ನಾರಾಯಣ ಬಂದುನಿನ್ನ ಸಲಹುವ ಪ್ರವೀಣೆ1 ನಿತ್ಯ ಸಮಸ್ತಪರ್ವತಭಾರವ ನೀ ತಾಳ್ವೆಉತ್ತಮ ತ್ರಿವಿಕ್ರಮನ ರಥೋತ್ಸವವೆ ಮೊದಲಾದಪವಿತ್ರಾಂಕುರಾರ್ಪಣಕೆ ನೀ ಬಂದು ವರಿಯಸುತ್ತಿನ ಪವಳಿಯೊಳಗೆ ನಿಂದು ನಮಗೆಮುಕ್ತಿ ಪದವೀವುದಕೆ ಬಾ ಕೃಪಾಸಿಂಧು 2 ಕೊಂಡ ಸಿರಿ ಹಯವದನಹರಿಯಕರ ಕರಿಭೇರುಂಡ ಸಿರಿಗೆ ಸರಿಯೆನಿಸಿನಿನ್ನನ್ನು ಪೊರೆಯುತಲಿಹನು ಕಂಡಾ3
--------------
ವಾದಿರಾಜ
ಹರಿಯ ಭಜನೆ ಮಾಡೋ ನಿರಂತರ ಪ. ಪರಗತಿಗಿದು ನಿರ್ಧಾರ ಅ.ಪ. ಮೊದಲೆ ತೋರುತದೆ ಮಧುರ ವಿಷಯಸುಖ ಕಡೆಯಲಿ ದುಃಖ ಅನೇಕ 1 ವೇದಶಾಸ್ತ್ರಗಳನೋದಿದರೇನು ಸಾಧನಕಿದು ನಿರ್ಧಾರ 2 ಸಾರವೊ ಬಹುಸಂಸಾರ ವಿಮೋಚಕ ಸೇರೊ ಶ್ರೀಹಯವದನನ್ನ 3 ತತ್ವವಿವೇಚನೆ
--------------
ವಾದಿರಾಜ
ಹರಿಯ ಮರೆದುದಕಿಂತ ಪಾಪವಿಲ್ಲಾ | ಹರಿ ಸ್ಮರಣೆಯಿಂದಧಿಕ ಪುಣ್ಯ ಮತ್ತೊಂದಿಲ್ಲಾ ಪ ಗೋಹತ್ಯ ಸುರಾಪಾನ ಕನಕತಸ್ಕರ ಸುಜನ- | ಕಪಟ ವ್ಯಸನ || ಬಾಹಿರವಾಗ್ ದ್ವೇಷ ಪರದಾರಗಮನ ವಿ- | ವಾಹಗಳ ಮಾಣಿಸುವ ಪಾಪಕಿಂತಲಿ ಮೇಲು 1 ಗಂಗಾನದಿಯಲ್ಲಿ ಸ್ನಾನ ಪ್ರಣವ ಆಚಮನ | ಹಿಂಗದಲೆ ಗಾಯತ್ರಿ ಮಂತ್ರ ಮೌನ || ಕರುಂಗ ದಾನ-ಧರ್ಮ ವೃತ್ತಿ ಕ್ಷೇತ್ರ ರತುನ | ಬಂಗಾರಯಿತ್ತಧಿಕ ಬಹಳ ಪುಣ್ಯ ಮೇಲು 2 ಹಾಸ್ಯ ವಿರೋಧ ಮದ ಮತ್ಸರ ಪರಕಾರ್ಯ | ದಾಸ್ಯದಲಿ ಕೆಡಿಸುವ ಶಠನ ಲೋಭಿ || ವೈಶ್ವ ದೇವಾಹಿತ ಅತಿಥಿಗಳ ನಿಂದ್ಯರ- | ಹಸ್ಯ ದೂರುವ ಬಲು ಪಾಪಕಿಂತಲು ಮೇಲು 3 ಭಾಗವತ ಪುರಾಣ | ಸಾರ್ಥತ್ಯವಾದ ಪ್ರವಚನ ಶಾಸ್ತ್ರ || ಸಾರ ಪ್ರಬಂಧ | ಅರ್ಥ ಪೇಳುವ ಬಲು ಪುಣ್ಯಕಿಂತಲಿ ಮೇಲು4 ಮಿತ್ರಘ್ನ್ಯಗರಳ ಪ್ರಯೋಗ ಗರ್ಭಿಣಿವಧ | ಗೋತ್ರಸಂಸರ್ಗ ಬಲು ಪ್ರಾಣಹಿಂಸಾ || ಕ್ಷೇತ್ರ ಅಪಹಾರ ಕ್ಷುದ್ರವಾಣಿ ನಿಜಕ- | ಳತ್ರದಿ ದ್ರೋಹ ಬಲು ಪಾಪಕಿಂತಲಿ ಮೇಲು 5 ಕರ್ಮ ಸರ್ವದಲ್ಲಿ ಗಯಾ ಶ್ರಾದ್ಧ | ಭೂಧರ ಸಮಾಗಮ ಸತ್ ಶ್ರªಣಾ || ಆದಿತ್ಯ ಚಂದ್ರ ಉಪರಾಗ ಪರ್ವಣಿ ನಾನಾ | ರಾಧನೆಯರೆ ಬಲು ಪುಣ್ಯಕಿಂತಲು ಮೇಲು 6 ಆವಾವ ಪಾಪ-ಪುಣ್ಯಗಳದವರ ಕಿಂಕರವು | ದೇವನ ನೆನಸಿದಂಥ ನೆನೆಯದಂಥ || ಜೀವರೊಳಗೊಬ್ಬ ಮುಕ್ತನು ಒಬ್ಬ ತಮಯೋಗ್ಯ | ಕೈವಲ್ಯಪತಿ ನಮ್ಮ ವಿಜಯವಿಠ್ಠಲ ಪ್ರೇರಕ7
--------------
ವಿಜಯದಾಸ
ಹರಿಯಂದು ಸ್ಮರಿಸುವರ ದುರಿತಪರಿಹಾರವೆಂದು ನೆರೆಪೇಳ್ವ ಶೃತಿ ತಿಳಿದು ಮನವೆ ಕರುಣಾಸಾಗರನಾದ ಕಮಲಾದ್ರಿವಾಸ ನರಹರಿಯಪಾದ ಭಜಿಸುವ ಮನವೆ ಪ ಸುತನ ನಿಂದಗನೆಂದು ಹಿತದಂತ್ಯಕಾಲ ಸಂಘಾತನೆ ಹಿತ ವೇಳ್ವೆ ಕರಿಯಲು ಮನವೆ ಚತುರಾಸ್ಯ ಜನಕ ಮನ್ಮಥಕೋಟಿರೂಪ ಸದ್ಗತಿ ತೋರಿಸಲಹುದೇನು ಮನವೆ 1 ಆ ಮರರೀಮರ ಎಂಬ ಪಾಮರಗೆ ಪಟ್ಟಾಭಿರಾಮ ಭಕ್ತರ ಪ್ರೇಮ ಮನವೆ ಕಾಮಿತಾರ್ಥವನಿತ್ತ ಕಂಜಾಕ್ಷದಯದಿ ಸೀತಾಮನೋಹರ ರಾಮ ಮನವೆ 2 ಕರಿಯು ಮಕರಿಗೆ ಶಿಲ್ಕಿ ನೆರಳುತಲಿ ಪರಮಾತ್ಮ ಪರಬ್ರಹ್ಮನೆಂದು ಸ್ತುತಿಸಿ ಮನವೆ ಗರುಡವಾಹನ ಹೆನ್ನೆಪುರನಿಲಯ ಮರಿಯದಲೆ ಪರಿಪಾಲಿಸಿ ಪೊರೆವ ಮನವೆ 3
--------------
ಹೆನ್ನೆರಂಗದಾಸರು
ಹರಿಯಂದೆನ್ನಿ ಪ ಕಪಿಲಾ ಗೋ ಸಹಸ್ರವನು ಸಾಲಂಕಾರದಿ ಸಕಲ | ನಿಪುಣಗ ನೀಡಿದ ಫಲಾ 1 ರಾಜಸೂಯಾಶ್ವಮೇಧ ಮೊದಲಾದ ಯಜ್ಞಗಳು | ತ್ಯಾಜ್ಯದಿ ಮಾಡಿದ ಫಲಾ 2 ಕಾಶಿ ರಾಮೇಶ್ವರದಿ ತೀರ್ಥಂಗಳಾ | ವಾಸದಿ ಮಿಂದ ಫಲಾ 3 ಪರಿ ಪರಿ ಪರಿ ತಪಗಳಾ | ಚರಿಸಿ ತಿರುಗಿದ ಫಲಾ 4 ತಂದೆ ಮಹಿಪತಿ ಪ್ರಭು ಯಚ್ಚರಿಸಿದ ಸ್ವಕೀಲಾ | ಬಂದ ಜನುಮಕ ಸಫಲಾ 5
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ಹರಿಯನರಿಯದ ಜನುಮ ಧೆರೆಯೊಳಗಧಮಾಧಮ ಹರಿಯ ನೆನೆಯದ ನರನು ಪಾಮರನು ಧ್ರುವ ಹರಿಗೆ ನಮಿಸದ ಸಿರವು ತೋರುವ ಬೆಚ್ಚಿನ ತೆರವು ಹರಿಗೆ ವಂದಿಸದ್ಹಣಿಯು ಹುಳಕ ಮಣಿಯು ಹರಿಗೆ ಮುಗಿಯದ ಕೈಯು ಮುರುಕ ಕೀಲಿಯ ಕೈಯು ಹರಿ(ಯ) ಕೊಂಡಾಡುವ ನಾಲಿಗೆ ಒಡಕ ಸೊಲಿಗೆಯ 1 ಹರಿಯ ಸ್ತುತಿಸದ ಮುಖ ಚೀರುವ ಚಿಮ್ಮಡಿಯ ಮುಖವು ಹರಿಕಥೆ ಕೇಳದ ಕಿವಿಯು ಹಾಳುಗವಿಯು ಹರಿಯ ನೋಡದ ಕಣ್ಣು ತೋರುವ ನವಲ್ಗರಿಗಣ್ಣು ಹರಿಯ ಆರಾಧಿಸದ ಮನವು ಹೀನತನವು 2 ಹರಿಯ ಸೇವೆಗೊದಗದ ಕಾಲು ಮುರುಕ ಹೊರಸಿನ ಕಾಲು ಹರಿಗೆ ಮಾಡದ ಭಕ್ತಿ ಮೂಢ ಯುಕ್ತಿ ಹರಿಯೆ ಶ್ರೀಗುರುವೆಂದು ಗುರುವೆ ಪರದೈವವೆಂದು ಸಲೆಮೊರೆಹೊಕ್ಕಿಹ ಮೂಢ ಮಹಿಪತಿಯ 3
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ಹರಿಯನರಿಯದಿಹ್ಯ ನರಜನ್ಮಾವ್ಯಾಕೆ ಪರಬ್ರಹ್ಮವರಿಯದ ಬರೆ ಬ್ರಾಹ್ಮಣವ್ಯಾಕೆ ಧ್ರುವ ಹರಿಃ ಓಂ ತತ್ಸದಿತಿಯೆಂಬ ಶ್ರೀ ಹರಿ ವಾಕ್ಯವರಿಯದೆ ಬರುದೆ ಶ್ರೀ ಹರಿ ಶ್ರೀ ಹರಿಯಂದೊದರುವದ್ಯಾಕೆ 1 ಏಕಾಂಶೇನ ಸ್ಥಿತೋ ಜಗತ ಎಂಬ ವಾಕ್ಯವರಿಯದೆ ನಾಲ್ಕಾರು ವೇದಶಾಸ್ತ್ರವೋದಿ ಕೇಳುವದ್ಯಾಕೆ 2 ಎಂಬ ವಾಕ್ಯವರಿಯದೆ ಹದಿನೆಂಟು ಪುರಾಣ ಕೇಳಿ ಹೇಳುವದ್ಯಾಕೆ 3 ಮಮೈವಾಂಶೋ ಜೀವಲೋಕೇ ಜೀವಭೂತ:ಸನಾತನ ಎಂಬ ವಾಕ್ಯವರಿಯದೆ ನಾನಾವ್ರತಾಚಾರ ಸಂನ್ಯಾಸ ಕೈಕೊಂಬುದ್ಯಾಕೆ 4 ಸುದರ್ಶನ ಮಹಾಜ್ವಾಲಾ ಕೋಟಿಸೂರ್ಯ ಸಮಪ್ರಭ ಎಂಬ ವಾಕ್ಯವರಿಯದೆ ಸೀಳಿ ಸುದರ್ಶನಗಳ ಪೂಜಿ ಮಾಡುವದ್ಯಾಕೆ 5 ಮಂತ್ರ ಪ್ರಣಮ್ಯವರಿಯದೆ ತಂತ್ರ ಮಂತ್ರಸರವ್ಯಾಕೆ ಅಂತರಾತ್ಮವರಿಯದೆ ತರ್ಕಭೇದಗಳ್ಯಾಕೆ 6 ವಿಶ್ವವ್ಯಾಪಕ ಗುರು ಭಾಸ್ಕರಮೂರ್ತಿ ಶ್ರೀಪಾದ ವಿಡದಿಹ ಮಹಿಪತಿಗೆ ಭವಪಾಶದಂಜಿಕಿನ್ಯಾಕೆ 7
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ಹರಿಯಲರಿಯದು ಜನ್ಮ ಗುರುಪಾದವರಿಯದೆ ಧ್ರುವ ಬಯಲು ಭಾವಿಸಿ ನಿರ್ಬೈಲ ನೆಲೆಗೊಳ್ಳದೆ ಭಾವಭಕ್ತಿಯ ಕೀಲು ಹೊಯಿಲು ತಿಳಿಯದೆ 1 ರವಿ ಶಶಿಯನೊಡಗೊಡಿ ಶಿವಸುಖವ ತಿಳಿಯದೆ ಸೂತ್ರ ಸೋಹ್ಯ ಹೊಳಿಯದೆ 2 ಆಧಾರವಂ ಬಲಿದು ಆರೇರಿ ಬೇರಿಯದೆ ಮಹಿಪತಿ ನಿನ್ನೊಳು ಗುರುಗತಿ ಅರಿಯದೆ 3
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ಹರಿಯಾ ಪೂಜೆಯಾ ಮಾಡಿ ಗತಿಗಳ ಬೇಡಿ ಹರುಷದಿ ಕೂಡಿ ನಲಿ ನಲಿದಾಡಿ ಪ ಎಲ್ಲರೊಳು ಬಾಗಿ ನಡಿಬೇಕು ಸಾಗಿ ಖುಳ್ಳತನ ಹೋಗಿ ಏಕೋ ನಿಷ್ಟಾಗಿ ನಿಲ್ಲದೇ ವದಗಿ ಸಮದೃಷ್ಟಿ ತೂಗಿ 1 ನಿತ್ಯ ತಿಳಿದು ವಿಚಾರ ಬಲಿದು ಕುತ್ತಾಪಗಳದು ಸತ್ಯಗದಲ್ಲಿದ್ದು ಸತ್ಯಜ್ಞಾನ ಪಡೆದು ಸದ್ಬಾವ ಜಡಿದು ಚಿತ್ತ ಚಂದಲ ಜರಿದು ಮದ ಮತ್ಸರ ಜರೆದು 2 ತನ್ನದಿದಲ್ಲಾ ಸಿರಸೌಖ್ಯವೆಲ್ಲಾ ಇನ್ನು ತಿಳಿಲಿಲ್ಲಾ ಈ ಮರಹು ಸಲ್ಲಾ ಸನ್ನು ತನೆಬಲ್ಲಾ ಈ ಸಾಕಾಯ ವೆಲ್ಲಾ ಮನ್ನಿಸಿ ನೀವೆಲ್ಲಾ ಮಹಿಪತಿ ಜನಸೊಲ್ಲಾ 3
--------------
ಕಾಖಂಡಕಿ ಶ್ರೀ ಕೃಷ್ಣದಾಸರು