ಒಟ್ಟು 36191 ಕಡೆಗಳಲ್ಲಿ , 138 ದಾಸರು , 9678 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಯಾರು ಬಲ್ಲರು ವೆಂಕಟೇಶ ನಿನ್ನೊಳಿಹ ಚಾರು ಗುಣಶೀಲವೆಂಬ ವಾರಿಧಿಯ ಚಿಪ್ಪಿನೊಳು ಮೊಗೆದು ಬತ್ತಿಸುವಂಥ ವೀರನಾವನು ಜಗದೊಳು ಪ ಹದಿನಾಲ್ಕು ಲೋಕವನ್ನು, ನೀ ನಿನ್ನ ಉದರದೊಳಗಿರಿಸಿಕೊಂಡು ಉದಧಿಮಯವಾಗಿರ್ದ ಕಾಲದೊಳು ನಿನಗೊಂದು ಉದುರಿದೆಲೆಯೊಳು ನಿದ್ರೆಯಂತೆ 1 ಮಾಯೆ ಕಮಲಾಕರದೊಳು, ನಿನ್ನುದರ- ದಾಯತದಿ ತೋರಿ ನಿಲಲು ಮೋಹಿಸಲು ಆ ಕ್ಷಣದಿ ಕಾಯವಾಗಲು ಮೇಲೆ ಬಾಯಿ ನಾಲ್ಕಾಯಿತಂತೆ 2 ಅಲ್ಲಿ ತೋರಿದ ಸೊಲ್ಲನು, ಖಳನೋರ್ವ ನೆಲ್ಲವನು ಸೂರೆಗೊಳಲು ಮಲ್ಲನಾಗಿಯೆ ಜಲದಿ ಘಲ್ಲಿಸಿಯೆ ದೈತ್ಯನನು ಚೆಲ್ವಸಾರವ ಸೆಳೆದೆಯಂತೆ 3 ಅದರ ಆಧಾರದಿಂದ, ಸನಕಾದಿ- ಗುದಯವಾದುದುಯೆಲ್ಲವೂ ಮೊದಲ ಕಾಣದೆ ವೃಕ್ಷವದುರಿ ಬಿದ್ದುದ ನೋಡಿ ತುದಿಯೊಳಗೆ ಕದನವಂತೆ 4 ಒಳ ಹೊರಗೆ ನೀನೊಬ್ಬನೆ, ಹೊಳೆ ಹೊಳೆದು ಸುಳಿವ ಪರಿಯನು ಕಾಣದೆ ಮಲತಾಯಿ ಮಗನೊಳಗೆ ಕಲಹವಿಕ್ಕುವ ತೆರದಿ ಹೊಲಬುದಪ್ಪಿಯೆ ನಡೆವರಂತೆ 5 ಒಂದಿದರಿಂದೆರಡಾದುದು, ಮೂರಾಗಿ ಬಂದು ಇದಿರೊಳು ನಿಂದುದು ಒಂದು ಮಾತಿನೊಳೆರಡು ಸಂದೇಹಗಳ ತೋರಿ ಮಂದ ಬುದ್ಧಿಯ ಕೊಡುವೆಯಂತೆ 6 ಜಡವಾದ ಅಡವಿಯನ್ನು ಸಂಚರಿಸಿ ಒಡಲ ಹೊರೆವುದು ಕಡೆಯೊಳು ಎಡೆಯೊಳೊಪ್ಪಿಸಿ ಕೊಡುವಿಯಂತೆ 7 ನಂಬಿ ಬಂದವರ ನೀನು, ಮನದೊಳಗೆ ಹಂಬಲಿಸಿಕೊಂಡಿರುತಲೆ ಇಂಬಾಗಿ ಇಹಪರದಿ ಉಂಬ ಸಂಭ್ರಮವನ್ನು ಸಂಭವಿಸಿ ತೋರ್ಪೆಯಂತೆ 8 ಭೂಮಿಗೆ ವೈಕುಂಠವೆಂದು, ನಿಂತಿರುವ ಸ್ವಾಮಿಯೆನ್ನೆಡೆಗೆ ಬಂದು ಕ್ಷೇಮವನು ವರಾಹತಿಮ್ಮಪ್ಪ ಕರುಣದಿ ಕಾಮಿತಾರ್ಥವನೀಯೊ ಎಮಗೆ 9
--------------
ವರಹತಿಮ್ಮಪ್ಪ
ಯಾರು ಮೀರಲರಿದು ಬ್ರಹ್ಮ ಬರೆದಲಿಖಿತವ ಪುರಾರಿ ಮಿತ್ರನೊಬ್ಬ ಬಲ್ಲನಿದರ ಕೆಲಸವ ಪ ಎಲ್ಲಿ ದಂಡು ಎಲ್ಲಿ ಗೂಳ್ಯವೆಲ್ಲಿಗಮನವಲ್ಲಿ ವಾಸ ವೆಲ್ಲಿ ಊಟವೆಲ್ಲಿ ಶಯನವು ಎಲ್ಲಿ ನಿದ್ದೆ ಎಲ್ಲಿ ಸುಲಿಗೆ ಎಲ್ಲಿ ಕಡಿತ ವೆಲ್ಲಿ ಮರಣ ವೆಲ್ಲಿ ರುದ್ರಭೂಮಿ ಮೆತ್ತೆಲ್ಲಿ ಜನನವು 1 ಊರದೆಲ್ಲಿ ಮನೆಗಳೆಲ್ಲಿ ನಾರಿ ನೆಂಟರಿಷ್ಟರೆಲ್ಲಿ ಸೇರಿಸಿಟ್ಟ ವಸ್ತು ವಡವೆ ಒಂದು ಕಾಣವು ಭೂರಿ ಪಶುಗಳೆಲ್ಲಿ ಭಯವು ಏರಿ ನೋಳ್ವಗುಡ್ಡ ಸಂ ಚಾರವೆಲ್ಲಿ ಹಸಿವು ತೃಷೆಯು ಹರುಷ ದುಃಖವು 2 ಹಿಂದುಯಿಲ್ಲ ಮುಂದುಯಿಲ್ಲ ಸಿಂಧುತನಕ ತಪರರಿಂದ ಕೆಟ್ಟ ದಿಂದ ಸಲಹುತಿರುವ ಮರುತ ನಂದನ ಕೋಣೆವಾಸ ಲಕ್ಷ್ಮೀರಮಣ ಬಲ್ಲನೋ 3
--------------
ಕವಿ ಪರಮದೇವದಾಸರು
ಯಾರೆಂದು ತಿಳಿದೆಯೋ ಈತನ ನೀನು ಪ ಯಾರೆಂದು ತಿಳಿದಿಹೆ ಯದುಕುಲೋತ್ತಮಮನ ನೀ ಪೋರ ಮಾತುಗಳನು ಸಾಕುಮಾಡೆಲೋ ಮೂಢ ಅ.ಪ. ಪಶುಪಾಲನಿವನೆನುತ ಜರಿದೊಡೇನಾಯ್ತು ಪಶುಪತಿ ವಿನುತನೀತ ಬಿಸಜ ಸಂಭವನಿತ್ತ ವರದ ಬಲುಮೆಯಿಂದ ವಸುಧೆ ಕಂಟಕನಾದ ಅಸುರ ಹಿರಣ್ಯಕನ ಬಸುರ ನಖದಲಿ ಬಗೆದು ಸವರಿದ ಅಸುರರಿಪು ಶ್ರೀಕರಿಗಿರೀಶನ ದಶಶಿರಾಂತಕ ದಶರಥಾತ್ಮಜ ಅಸಮ ಮಹಿಮನ ಅಪ್ರಮೇಯನ 1
--------------
ವರಾವಾಣಿರಾಮರಾಯದಾಸರು
ಯಾರೇನು ಮಾಡುವರೋ ಹರಿಯೇ ಯಾರಿಂದಲೇನಹುದು ಪ ವಾರಿಜಾಂಬಕ ಮಾರಜನಕ ಕೌಸ್ತುಭ ವಕ್ಷ ಶ್ರೀಶಾ ಅ.ಪ. ಅಜ ಈ ಜಗ ಸೃಜಿಸಿದನೆ ಶ್ರೀದೇವಿಯು ನಿಜಗುಣ ನೆಲೆಗಂಡಳೆ ಭುಜಗಭೂಷಣ ಆಯಕರ್ತನಾದರೆ ಭಜಕನಾ ಬಯಕೆ ಬಾಯಬಿಡುವದೆ 1 ಸುರಪ ಸುರರೊಡೆಯನೆ ಧರಣಿ ಈ ಉರಗೇಂದ್ರ ಪೊತ್ತಿದನೆ ದುರುಳನ ಭಯಕೆ ಪುರವ ಬಿಟ್ಟೋಡಿದ ಧರಣಿಯ ದುರುಳನೊಯ್ಯೆ ವರಾಹರೂಪದಿ ತಂದೆ ನೀ ತಂದೆ ಹರಿಯೇ 2 ಶ್ರೀಪತಿ ಸುರತತಿಯ ಸೃಜಿಸಿ ಈಪ್ಸಿತಾರ್ಥಗಳನೆಲ್ಲಾ ಅವರಿಗೆ ಸ್ವಾಪ್ನಜಾಗೃತಿಯಲಿ ಪರಿಪಾಲಿಸೆ ಮಹಾನಿಧಿವಿಠಲ ನೀನಲ್ಲದಿನ್ಯಾರೋ 3
--------------
ಮಹಾನಿಥಿವಿಠಲ
ಯಾರೊಡನುಸುರವೆನೋ ಕಡಲಶಾಯಿ ಬಿಡದೆ ನಿನ್ನನು ಅಡಿಗಡಿಗೆ ಕೊಂಡಾಡುವ ಹುಡಗನ ಮೇಲಿಷ್ಟು ಕರುಣವಿಲ್ಲದರಿಂದ ಪ ಪೊಡವಿಯೊಳಗೆ ಜನಿಸಿರುವರೊಳಗೆ ನಾನೆ ಕಡೆ ಈಗ ಬಸುರಿನೋಳ್ ಪಡೆದ ಮಗನು ತನ್ನ ಮಡದಿ ಮಕ್ಕಳನು ಎನ್ನೊಡನಿತ್ತು ನಾಕಕೆ ನಡೆದನೆನಗೆ ನಡುಮರಣವ ಹೊರಸಿ 1 ಕೆಟ್ಟ ಬದುಕ ಕಾಣಲಾರೆ ಮಾಳ್ಪರೆ ಎನ್ನ ರಟ್ಟೆ ಬಲವು ತಗ್ಗಿ ಹೋಯ್ತು ಮೊಮ್ಮಕ್ಕಳ ಅಟ್ಟುಳಿ ಬರಿಸನ್ನವಸ್ತ್ರಾಭರಣಕೆಂದು ಕುಟ್ಟಿ ಕೊಂಬರು ಎನಗಿದಿರಾಗಿ ಶಿವನೇ 2 ನಾನು ಎಂಬುವರಿಲ್ಲ ಗೃಹಕೃತ್ಯದೊಳಗೆನ್ನ ಮಾನಿನಿಯೊರ್ವಳುಂಟಿದರೊಳು ಸೊಸೆಯಷ್ಟು ಏಕೆಂದ ರೇನು ಸಂಸಾರವಿದನು ಪವಮಾನ ಸುತನ ಕೋಣೆ ಲಕ್ಷ್ಮೀಶ ನಡೆಸು 3
--------------
ಕವಿ ಪರಮದೇವದಾಸರು
ಯಾವ ಪರಿಯಲಿ ಒಲಿಸಿ ಪಡೆವೆ ಹರಿಯೊಲವನು ಭೂವಿವರವನು ಪೊತ್ತ ಮಹಶೇಷಗರಿದು ಪ ಸುರನದಿ ಜಲದೊಳಭಿಷೇಕವ ಮಾಡುವರೆ ಚರಣದಲಿ ಜನಿಸಿಹಳು ದೇವಗಂಗೆ ಮೆರೆವ ದಿವ್ಯಾಸನವನೀಯೆ ವಿಶ್ವಾಧಾರ ಧರಿಸಿ ಕೊಡಲಿಕೆ ವಸ್ತ್ರ ಪೀತಾಂಬರ 1 ಹೇಮರಚಿತಾಭರಣದಿಂದ ಮೆಚ್ಚಿಸಲವಗೆ ಕಾಮಿನಿಯೆ ಶ್ರೀಮಹಾಲಕ್ಷ್ಮಿದೇವಿ ಪ್ರೇಮದಿಂ ಶಾಲ್ಯಾನ್ನದಿಂದ ತೃಪ್ತಿ ನಿತ್ಯ ತೃಪ್ತ 2 ಕ್ಷೀರದಿಂ ಮೆಚ್ಚಿಸಲಿಕವಗೆ ಪಾಲ್ಗಡಲೆಮನೆ ಮಾರುತಾತ್ಮಜ ಕೋಣೆ ಲಕ್ಷ್ಮೀಶ ನಂಘ್ರಿಗೆ ನಮಸ್ಕಾರದಿಂ ಮೆಚ್ಚಿಸಲಿಕವ ಜಗದ್ವಂದ್ಯಾ 3
--------------
ಕವಿ ಪರಮದೇವದಾಸರು
ಯಾವ ಪಾಪಿಯ ದೃಷ್ಟಿ ತಾಕೀತೋ ಗೋಪಾಲಕೃಷ್ಣಗೆ ಪ. ಪಾಲು ಮೊಸರು ವೊಂದನಾದರು ಯಾವ ಕಾರಣದಿ ಕುಡಿಯಲೊಲ್ಲೆ ಪೇಳೋ ಯೆನಗೆ ಬಾಲಾ ಭೂಪಾಲ ಗುಣಶೀಲಾ 1 ದಾವಪುಣ್ಯವತಿಯ ಕಣ್ಣು ಹತ್ತಿತೋ ನೆಲುವಿಗಿಟ್ಟ ಬೆಣ್ಣೆಯ ಮುಟ್ಟುವುದಿಲ್ಲಾ ಬಟ್ಟಲಲ್ಲಿಡುವೆವೋ 2 ಕಪ್ಪವಾದರು ಇಡುವೇನು ಬಾ ಅಪ್ಪ ವೇಣುಗೋಪಾಲಾ ತುಪ್ಪ ಸಕ್ಕರಿ ನೀಡುವೆನು ಚಪ್ಪರಿಸು ನೋಡುವೆನು ಕಾಳಿಮರ್ಧನಕೃಷ್ಣಗೆ 3
--------------
ಕಳಸದ ಸುಂದರಮ್ಮ
ಯಾವ ಲೋಕಕೆ ಎನ್ನ ಎಳತಂದೆ ಹರಿಯೇ ದೇವಕೀ ಕಂದ ಗೋಪಾಲ ನಾನರಿಯೇ ಪ ನಳಧರ್ಮನೃಪ ಹರಿಶ್ಚಂದ್ರಾದಿಗಳು ಜನಿಸಿ ಖಳರನ್ನು ದಂಡಿಸೇ ಶಿಷ್ಟರನು ಹರಿಯೇ ಸಲಹ ಸುಜನರಿಗೆಲ್ಲ ಮಾನವಂ ಕೊಟ್ಟು ತಾ ವಿಳೆಯ ಸತ್ಯದೊಳಾಳಿದಾ ರಾಜ್ಯವಲ್ಲಾ 1 ಹಿಂದೆ ದುರ್ಜನರನ್ನು ತರಿಯಲೋಸುಗ ನೀನು ಅಂದದಿಂದೊಂಬತ್ತು ಅವತಾರವೆತ್ತಿ ಬಂದು ಸುಜನರ ಪೊರೆದು ಧರ್ಮವನು ನೆಲೆಗೊಳಿಸಿ ಚಂದದಿಂ ರಕ್ಷಿಸಿದ ಲೋಕವಿದು ಅಲ್ಲಾ 2 ಮನ್ನಿಸದೆ ಧರ್ಮವನು ನಿತ್ಯಕರ್ಮವ ಬಿಟ್ಟು ಹೀನ ಪಥಗಳ ಪಿಡಿದು ಬಂಜೆಯನು ಆಸೀ ಚನ್ನಕೇಶವ ನಿಮ್ಮ ನಾಮ ಸಂಕೀರ್ತನೆಯ ದೈನ್ಯದಿಂ ಗೈಯದ ರಾಜ್ಯವಿದು ಹರಿಯೇ 3
--------------
ಕರ್ಕಿ ಕೇಶವದಾಸ
ಯಾವ ಸಂಭ್ರಮವಿದೇ ವಾರಿಜ ವದನೆ ಶ್ರೀವೇಣುಗೋಪಾಲ ಮನೆಗೆ ಬಂದಿಹನೇ ಪ ದೇವ ದೇವನು ನಿನ್ನ ಪೂಜೆಗೊಪ್ಪಿದನೇ ಯಾವ ವಾತ್ಸಲ್ಯವ ನಿನಗೆ ತೋರಿದನೇ ಅ.ಪ ಗಾನ ನೃತ್ಯಗಳಿಂದ ಒಲಿಸಿದೆಯೇನೇ ಜೇನು ಸಕ್ಕರೆ ಬೆಣ್ಣೆಗಳನಿತ್ತೆಯೇನೇ ಸಾನುರಾಗದಿ ಪೂಜೆ ಮಾಡಿದೆಯೇನೇ ನಾನೇನಗೈದರೆ ಅವನೊಲಿಯುವನೇ1 ಪರಿಮಳ ಗಂಧಕೆ ಮೈ ತೋರುವನೇ ಕೊರಳಿಗೆ ಹಾರವ ನೀಡಲೊಪ್ಪುವನೇ ಮುರಳಿಯ ಗಾನವನೊಲಿದು ಕೇಳುವನೇ ಪರಮಪುರುಷ ಬಾರೆಂದರೆ ಬಹನೇ 2 ಕರಗಳ ಮುಗಿದರೆ ಕರುಣಿಪನೇನೇ ಚರಣಕೆ ಮಣಿದರೆ ಒಲಿಯುವನೇನೇ ಪರಿಪರಿ ಹೊಗಳಲು ನಲಿಯುವನೇನೇ ವರದ ಮಾಂಗಿರಿರಂಗ ದಯೆ ತೋರನೇನೇ 3
--------------
ಅಸೂರಿ ರಾಮಸ್ವಾಮಿಅಯ್ಯಂಗಾರ್
ಯಾವ ಸುಖ ಇದು ದಾವ ಸುಖ ಮನುಜ ಶರೀರದ್ದು ಪ ನೋಯುತಲಿರುವುದು ಅ.ಪ ಕೊಂಡ ದಾವ ಸುಖ ಇದು ಹೇಯವಾಲದ ಭಾಂಡದ್ದಾವ ಸುಖ ಕಾಯವೆನಿಸಿಕೊಂಡು ಸಾವುಕುಣಿಗೆ ಬಿದ್ದು ಮಾಯವಾಗುತಲಿಹ್ಯದಾವ ಸುಖ 1 ಜಡಮತಿಶರೀರದ್ದು ದಾವ ಸುಖ ಇದು ಕೆಡುವ ತನುವು ನಿಜ ದಾವ ಸುಖ ಬುಡವು ಮೇಲಾಗಾಡಿ ಕಡೆಗೆ ಒಂದುದಿನ ಮಡಿದು ಹೋಗುವುದುದಾವ ಸುಖ 2 ನೇಮವಲ್ಲೊಂದಿನ ದಾವ ಸುಖ ಕಾಮಿತವನು ನೀಗಿ ಸ್ವಾಮಿ ಶ್ರೀರಾಮನ ಪ್ರೇಮ ಸಂಪಾದಿಸಲಾಗ ಸುಖ 3
--------------
ರಾಮದಾಸರು
ಯಾವ ಹೆಸರಿನಿಂದೆ ಕರೆದರೇನುಪಾವನಾತ್ಮನೆ ಬರನೆಸ್ವಾ ಸರ್ವೋತ್ತಮನುಪ ಸಾವಿರ ಹೆಸರುಳ್ಳ ಅವನಿಗೆ ಹೆಸರಿಂದೇನುದೇವನೊಬ್ಬನೆ ಜಗಕೆ ಎಂಬ ನುಡಿ ಸುಳ್ಳೇನುಭಾವಭಕುತಿಗಳಿಂದ ಕರೆದೊಡನೆ ಬರುವನುಠಾವು ಕಾಲಗಳಿಲ್ಲಿ ಆತನಿಗೆ ಬಹಳೇನು 1 ಅಲ್ಲಾ ಎಂದರೆ ಬರುವ ಶಿವನೇ ಎಂದರೂ ಬರುವಾಗೊಲ್ಲ ಕೃಷ್ಣನೆ ಬಾರ ಎಂದರಾತನೆ ಬರುವಅಲ್ಲಿ ಇವ ಇಲ್ಲಿ ಅವ ಎಂದು ಬಡಿದಾಡಿದರೆಖುಲ್ಲರೆಂದರೇನು ಬಲ್ಲವರು ಮರುಳಾ 2 ವಿಧವಿಧ ನುಡಿಗಳಲಿ ಬೇರೆ ಶಬುದಗಳಿರಲುಅದು ಪರಾರ್ಥವೆ ಬೇರೆ ತಾನಾಗುವದೇನುಹದಿನಾರು ಪಥಗಳನೆ ಹಿಡಿದೊಂದು ಹೋದೊಡನೆ ಅದರಿಂದಲಾ ಊರು ಸೇರಿಸುವುದಿಲ್ಲವೇನು 3 ಹೃದಯದಲಿ ನಿಜವಾದ ಭಕುತಿಯನು ಬೇಡುವನುಇದನರಿತು ಪ್ರತಿದಿನದಿ ಭಜಿಸುವರು ಮುನಿಜನರುಗದುಗಿನಲಿ ವಾಸಿಸುವ ಶ್ರೀ ವೀರನಾರಾಯಣನುಮುದದಿಂದ ಸಲಹುವನು ಸಂದೇಹವೇನು 4
--------------
ವೀರನಾರಾಯಣ
ಯಾವದು ಸುಖವೇ ಮತ್ಯಾನಂದವೇ ಪ ಈ ಉಡುಪಿಯ ಯಾತ್ರೆ ಮಾಡಿದ ಮನುಜಗೆ ಅ.ಪ. ಮನದಲಪೇಕ್ಷಿಸೆ ಅವನಿಗೆ ಹದಿನಾಲ್ಕು ಕನಕನ ಚಿತ್ತನಾಗಿ ಗೋಕುಲದಿಂದ ಸ ಜ್ಜನ ಮಾರ್ಗದಲಿ ಗುಣವಂತನೆನಿಸಿಕೊಂಬ 1 ಒಂದು ಹೆಜ್ಜೆಯನಿಟ್ಟು ಸಾಗಿ ಬರುತಲಿರೆ ಅಂದೆ ಸುರರೊಳು ಗಣನೆ ಎನ್ನೆ ಒಂದಕ್ಕೆ ನೂರಾರು ಯಾಗ ಮಾಡಿದ ಫಲ ತಂದು ಕೊಡುವ ಅಜನಾದಿಕಲ್ಪ ಪರಿಯಂತ2 ಅರ್ಧ ಮಾರ್ಗದಿ ಬರಲು ಬಂದು ನಿಲ್ಲಲು ಅವರ ಸಾಗರದಿ ಕೋಟಿ ಸ್ನಾನ ಮಾಡಲು ಊಧ್ವರೇತಸ್ಥನಾಗಿರ್ದ ಫಲವಕ್ಕೆ ಪರಿಯಂತ 3 ಸನ್ನುತ ಸಾಧನವನು ಮಾಡಲು ಸನ್ನುತರ ತೆಗೆದು ಜ್ಞಾನ ಭಕುತಿ ಸಂ ಪನ್ನವಿರಕುತಿಗೆ ಯತಿಗಾದಿ ಮುಖನಾದ4 ಕರವ ಜೋಡಿಸಿ ನಿಂದು ದೃಷ್ಟಿಯಿಂದಲಿ ನೋಡಿದವನೆ ಮುಕ್ತಾ ಮುಟ್ಟಿ ಭಜಿಸುವರ ಸತ್ಪುಣ್ಯ ವಿಜಯವಿಠ್ಠಲನಾತನೆ ಬಲ್ಲ ಅರುಹಲಳವಲ್ಲ 5
--------------
ವಿಜಯದಾಸ
ಯಾವಪರಾಧ ಮಾಡಿದೆನೋ ರಂಗ ಈ ವಸುಧೆಯೊಳಿನ್ನು ಬಳಲುವೆನೋ ರಂಗ ಪ ಯಾವ ಪಕ್ಷಿಗೆ ಬಲೆ ಬೀಸಿದೆನೋ ರಂಗ ಯಾವ ಜೀವಿಗೆ ಗಾಳ ಹಾಕಿದೆನೋ ರಂಗ ಅ.ಪ ಯಾವ ಎಳಗೂಸನು ಬಾವಿಗೆ ತಳ್ಳಿದೆ ಯಾವ ತಪಸಿಗೆ ಭಂಗವಗೈದೆ ಯಾವ ದಂಪತಿಗಳ ಬೇರೆಗೈದೆನೊ ರಂಗ ಜೀವನು ನಾನೇನ ವಂಚನೆಗೈದೆನೊ 1 ಅಪರಾಧಂಗಳು ವಿಪರೀತವಾದರೂ ವಿಪುಲ ಕೃಪಾಕರ ನೀನಹುದಯ್ಯ ಅಪಕೃತಿಗೈದರೂ ಉಪಕೃತಿಗೈವೆ ನೀ ಕುಪಿತನಾಗದೆ ಕಾಯೋ ಮಾಂಗಿರಿರಂಗ 2
--------------
ಅಸೂರಿ ರಾಮಸ್ವಾಮಿಅಯ್ಯಂಗಾರ್
ಯಾವಲ್ಲಿ ಅಡಗಿರುವಿ ಯಾವಲ್ಲಿ ಹುಡುಕಲಿಭಾವದ ಮೂಲೆಯ ರಾವನು ಬಿಟ್ಟು ಅ.ಪ. ಕಣ್ಣುಮುಚ್ಚಾಲೆಯಾಟ ಬೇಡಯ್ಯ ಈಬಣ್ಣದ ನುಡಿಯ ಬೇಟಕಣ್ಣು ಮುಚ್ಚಲು ಕೊಟ್ಟಿ ಟಣ್ಣನೆ ಜಿಗಿದೋಟಅಣ್ಣಾ ಹುಡುಕಿ ಹುಡುಕಿ ಹಣ್ಣಾಗಿ ಹೋದೆನೋ 1 ಎಲ್ಲೆಲ್ಲೂ ತುಂಬಿರುವೆ ಹುಡುಕಲು ನೀನೆಲ್ಲೆಲ್ಲ್ಯೂ ಸಿಗದಿರುವೆಕ್ಷುಲ್ಲಕನೆನ್ನನ್ನು ಚಲ್ಲದೆ ನನ್ನೆದುರುಚೆಲ್ವರೂಪದೆ ಬಂದು ನಿಲ್ವುದನ್ನು ಬಿಟ್ಟು 2 ಕಡುಕಷ್ಟ ಹುಡುಕುವದು ಹಿಡಿದು ಹಿಡಿದು ತಂದುಒಡಲಲ್ಲಿಡಲು ಮತ್ತೇಒಡನೆ ನುಸುಳಿಕೊಂಡುಬಿಡವಲೋಡೋಡಿ 3 ಇದೀಗ ನಡೆದು ತಂದು ನೆನೆಯಲು ನಿನ್ನಸದಾವಕಾಲಕೆಂದು ಹೃದಯದ ಗವಿಯೊಳುಮುದದಿ ಕೂಡಿಸಿ ಮೇಲೆಬದಿಗೆ ಕಾವಲವಿಟ್ಟು ಮನವ ಟೊಣೆದು ನೀ 4 ಬದರಿ ಕಾಶಿ ಕಂಚಿಯೋ ನೀನಿರುವುದುಮಥುರೆ ಪಂಢರಪುರವೊಪದುಮಾವತಿ ಗಿರಿಯೋ ಉಡುಪಿ ದ್ವಾರಕೆಯೊಗದುಗೋ ನೀ ಹೇಳಯ್ಯ ವೀರನಾರಾಯಣ 5
--------------
ವೀರನಾರಾಯಣ
ಯುಕ್ತ ಕರ್ಮಮಾಡುವರಿಗೆ ಮುಕ್ತಿಯೇ ಫಲ ಪ ಶಕ್ತರಾದ ಸಜ್ಜನರಿಗೆ ಶಾಂತಿಯೆ ಬಲ ಅ.ಪ ಪಥ ಪಿಡಿದು ಕಾರ್ಯಕಾರಣವರಿದು ಸೂರ್ಯ ಮಂಡಲದಲಿ ಮೆರೆವ ನಾರಾಯಣನಂ ಭಜಿಸುತ್ತ 1 ವೇದ ಶಾಸ್ತ್ರಗಳ ನೋಡಿ ಮಾಯಾವಾದಗಳೀಡ್ಯಾಡಿ ಖೇದ ಮೋಹ ಸಮವೆಂದರಿತು ಸಾಧನಾನುಷ್ಠಾನದಿಂದ 2 ನಿತ್ಯ ನೇಮದಿ ಮನವಿಟ್ಟು ತಾಮಸ ಗುಣವಿಲ್ಲದ ಗುರುರಾಮವಿಠಲನ ನಂಬಿ 3
--------------
ಗುರುರಾಮವಿಠಲ