ಒಟ್ಟು 788 ಕಡೆಗಳಲ್ಲಿ , 86 ದಾಸರು , 703 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಕೃಷ್ಣ ರಕ್ಷಿಸೆನ್ನ ಜಯ ಜಯಪಕ್ಷಿರಾಜಗಮನಾದುಷ್ಟಹನನ ಜಲಜಾಕ್ಷ ಜನಾರ್ದನಶಿಷ್ಟ ಜನರ ಮನದಿಷ್ಟ ಪ್ರದಾಯಕ ಪಗೋಕುಲದೊಳು ನೆಲಸಿ ದೈತ್ಯರ-ನೇಕರನು ಮಥಿಸಿಲೋಕದ ಜನರಿಗೆ ರೀತಿಯ ತೋರುತ-ನೇಕರ ಮನೆ ಮನೆ ಬೆಣ್ಣೆಯ ಭುಜಿಸಿದ 1ದ್ವಾರಕೆಯೊಳು ನಿಂತೆ ಕೌರವವೀರಗಾಯುಧವಿತ್ತೆಸಾರಥಿಯಾಗುತೆ ಧಾರುಣಿ ಗೆಲಿಸಿದೆಧೀರ£Àುನೀ ಗೋವಿಂದನೆ ದಾಸನೆ 2
--------------
ಗೋವಿಂದದಾಸ
ಕೇಳೆಗೋಪಿಗೋಪಾಲ ಮಾಡಿದ ಬಲು |ದಾಳಿಯ ಗೋಕುಲದಿ ಪತಾಳೆಲಾರೆವೆ ತವಕದಲಿ ಕಂದಗೆ ಬುದ್ಧಿ |ಹೇಳೆ ಕೃಷ್ಣವ ಕರೆದು ಅ.ಪಸರಿರಾತ್ರಿಯೊಳು ಸರಸರನೆ ಮನೆಗೆ ಬಂದು |ಸುರಿದು ಪಾಲ್ಪೆಣ್ಣೆಗಳ ||ಉರೋಜಗಳಿಗೆಕರಸರಿಸಿ ಕಣ್ಗಳನು |ತೆರೆದು ನೋಡುವನೆ ನಮ್ಮ 1ಗಂಡನು ಮನೆಯೊಳಗಿರಲು ಬಂದು ಕೃಷ್ಣ |ಭಂಡ ಮಾತುಗಳ ಬಹು ||ತುಂಟತನದಲಾಡಿಉದ್ದಂಡಕಠಿಣಕಾಯ |ದುಂಡುಕುಚವ ಪಿಡಿದ 2_______ವದ ಮೇಲಿರಲು ತಾ |ಸೀರೆಯ ಸೆಳೆವ ನೋಡೆ ||ಆರಿವರೆಂದು ವಿಚಾರಿಸಿ ನೋಡಲು |ಮೋರೆಯ ಬಾಗಿದನೆ 3ಕೇರಿಯೊಳಗೆದಧಿಮಾರುತಿರಲು ಕೃಷ್ಣ |ಸಾರಿ ಬಂದು ಮೊಸರ ||ಸೂರೆಗೊಂಡು ಪರನಾರಿಯರ ನೆರೆದು ತಾ |ಘೋರರೂಪದಿ ಮೆರೆದ 4ಆಡಲೇತಕೆ ನಮ್ಮ ಬಾಗಿಲಂಗಳದೊಳು |ಬೇಡುವ ಜಲ ದೈನ್ಯದಿ ||ನೀಡುವೆ ಜಲ ಜಲಜಾಕ್ಷ ಬಾಬಾ ಎನೆ |ಮಾಡುವರತಿಎಂಬನೆ5ಹುಡುಗನೆಂದು ಕೈಯ ಪಿಡಿಯ ಪೋಗಲು ನಮ್ಮ |ಉಡೆಮುಡಿ ಪಿಡಿದ ನೋಡೆ ||ಪಡೆದವಳಿಗೆ ಪೇಳುವೆ ನಡೆ ಎನೆ ಮಚ್ಚ |ಕೊಡಲಿ ತೋರುವನೆಗೋಪಿ6ಮಡದಿಯರೆಲ್ಲರು ಮಿಯುತಲಿರೆ ಮೈ |ಉಡುಗೆಯ ತೆಗೆದುಕೊಂಡು ||ಸಡಗರದಲಿ ಬೇಡಿಕೊಳ್ಳೆ ವಸ್ತ್ರಗಳನು |ಕೊಡದೆ ಅಡವಿಗೆ ನಡೆದ 7ಬೆಣ್ಣೆಯ ತಿಂದು ತಮ್ಮಣ್ಣಗೆ ತಾ ಕೊಟ್ಟು |ಚಿಣ್ಣರ ಬಡಿವ ನೋಡೆ ||ಬಣ್ಣಿಸಿ ನಮ್ಮ ಬಾಯಿಗೆ ಬೆಣ್ಣೆ ತೊಡೆಯುತ |ಬೆಣ್ಣೆಯ ತಿಂದಿರೆಂಬ 8ಏಣಲೋಚನೆ ಸರ್ಪವೇಣಿ ನಮ್ಮ ಮನೆ |ಓಣಿಯೊಳಗೆ ಪೋಗುತ ||ಕಾಣದಂತೆ ಚಕ್ರಪಾಣಿ ನಮ್ಮೊಳು ತನ್ನ |ತ್ರಾಣವ ತೋರಿದನೆ 9ಪದುಮನಾಭನು ಪುರದ ಚದುರಿಯರಿಗೆ ತಾನು |ಮದನಶಾಸ್ತ್ರವ ಪೇಳುತ ||ಮುದದೊಳಗಿರಲವರೊಡೆಯ ಬರಲು ಕೃಷ್ಣ |ಕುದುರೆಯ ನೇರಿದನೆ 10ಎಷ್ಟುಪದ್ರವ ಕೊಟ್ಟರು ಗೋಕುಲದೊಳು |ಬಿಟ್ಟವನಿರಲಾರೆವೆ ||ಸೃಷ್ಠಿಯೊಳಗೆ ಸರ್ವಾಭಿಷ್ಟದ ಪುರಂದರ-|ವಿಠಲ ಸಲಹುವನೆ 11
--------------
ಪುರಂದರದಾಸರು
ಕೊಡುವಕರ್ತ ಬೇರೆ ಇರುತಿರೆ -<?xmಟ veಡಿsioಟಿ='1.0' eಟಿಛಿoಜiಟಿg='uಣಜಿ-8'?>ಬಿಡುಬಿಡು ಚಿಂತೆಯನು ಪ.ಒಡೆಯನಾಗಿ ಮೂಜಗವನು ಪಾಲಿಪ |ಬಡವರಾಧಾರಿಯು ಭಕ್ತರ ಪ್ರಿಯನು ಅಪಕಲ್ಲಿನೊಳಗೆ ಇರುವ - ಕಪ್ಪೆಗೆ - |ಅಲ್ಲೆ ಉದಕಕೊಡುವ |ಎಲ್ಲ ಕೋಟಿ ಜೀವರಾಶಿಗಳನೆ ಕಾಯ್ವ |ವಲ್ಲಭಶ್ರೀಹರಿ ಎಲ್ಲಿಯು ಇರುತಿರೆ|1||ಆನೆಗೈದುಮಣದಾ - ಆಹಾರವ |ತಾನೆ ತಂದು ಕೊಡುವ |ದೀನರೊಡೆಯ ಶ್ರೀನಿವಾಸ ದಯಾನಿಧಿ |ಮಾನದಿಂದಲಿ ಕಾಯ್ವ ಭಾನುಕೋಟಿತೇಜ2ಸರಸಿಜಾಕ್ಷ ತನ್ನ - ಸೇರಿದ |ನರರನು ಬಿಡನಣ್ಣ |ಪರಮದಯಾನಿಧಿ ಭಕುತರ ಸಲಹುವ |ಪುರಂದರವಿಠಲನು ಪುಷ್ಪಶರನ ಪಿತ 3
--------------
ಪುರಂದರದಾಸರು
ಕೋಲಕೋಲೆಂದು ಕೋಮಲೆಯರೆಲ್ಲರಕಾಲುಗೆಜ್ಜೆಯು ಘಿಲ್ಲು ಘಿಲುಕೆಂದು ಇಲ್ಲೆ ಪ.ಸಿಂಧುಶಯನನ ಚಂದದಲೆ ನೋಡಿಆನಂದ ಭಾಷ್ಪದ ಬಿಂದು ಉದುರುತ ಪಾಡಿಮಂದಹಾಸದಿ ಮನೆಗೆ ಬಾರೆನಲುಕೂಡಿಕೊಂಡು ಕೃಷ್ಣನ ಸಭೆಯ ಪ್ರವೇಶಮಾಡಿ 1ಕರಲಾಘವ ಧರ್ಮ ಕೊಟ್ಟನು ರಾಜ ಶ್ರೇಷ್ಠನು ಮನನರಹರಿಯಲ್ಲಿಟ್ಟಿಹನು ವರಸಿಂಹಾಸನ ಏರಿದಶ್ರೇಷ್ಠ ತೋರಿದ ಬಲುಹರುಷ ಬೀರಿದರಾಜಗೋಪಾಲನ ನೋಡುವ ವರವ ಬೇಡುವ 2ಜಳಕುಜಳಕುರಂಗ ಜಳಜಳಿಸುತ ಬರಲುಬೆಳಕು ತುಂಬಿತು ಬಹಳೆಮಂದಿರದಲಿಥಳಕು ಥಳಕನೆ ಹೊಳೆವ ಸಿಂಹಾಸನದÀಲಿಕುಳಿತ ಕೃಷ್ಣನು ಅಣಕಿಸಿ ಸೂರ್ಯನ 3ಭೇರಿತುತ್ತೂರಿನಾನಾಪರಿವಾದÀ್ಯವಸಾರಿ ಕುಳಿತ ಧೀರ ಮುರಾರಿಚಾರುಮಲ್ಲಿಗೆ ಮಳೆಗರೆದ ಸುಖಸುರಿವರರಾಯರು ಏನು ಧನ್ಯರೆÉ ರಾಜಗೋಪಾಲನ್ನ ನೋಡುವ 4ಹಲವು ರಾಯರು ಹಲವು ಯಾದವರುಬಲುಸೊಗಸಿಲೆ ಬಂದು ಕುಳಿತಾರೆ ಅವರುಹಲಧರನ ಹತ್ತಿರೆ ರಾಮೇಶನವರುಜಲಜಾಕ್ಷನ ನೋಡುತಲೊಪ್ಪುತಿಹರು 5ಕಡು ಚಲ್ವ ರಾಮೇಶನ ಮಡದಿಯರುಉಡುರಾಜಮುಖಿಯರು ನಡೆದು ದ್ರೌಪತಿಸುಭದ್ರೆಯರ ಮಾನÀ ಶುದ್ಧೆಯರಹರಿಯ ಅಡಿಗೆರಗುವ ರಾಜಗೋಪಾಲನ ನೋಡುವ 6
--------------
ಗಲಗಲಿಅವ್ವನವರು
ಕ್ಷಮಾ ಸಮುದ್ರ ನಿನ್ನ ಸಮಾನರಿಲ್ಲರಮಾ ಬ್ರಹ್ಮಾದಿಗಳು ಪೊಗಳೆ ಪಉಮೆಯರಸ ನಿನ್ನ ಚರಣಮಹಿಮೆ ತನ್ನತರುಣಿಯೊಡನೆ ಹಗಲಿರುಳು ಪೇಳುವ ದಿವ್ಯ ಅ.ಪಅರಿಯದೆ ಅಜಮಿಳತರಳನಾರಗನೆಂದುಮರಣ ಕಾಲದಿ ಒದರೆಸರಸೀಜಾಕ್ಷನು ತನ್ನ ಪರಿವಾರದವರೆಂದುಸಿರಿದೇವಿಯೊಳು ಪೇಳಿ ತ್ವರಿತದಿ ರಕ್ಷಿಸಿದ 1ನಕ್ರನ ಬಾಧೆಗೆ ಸಿಕ್ಕಿದ ಗಜರಾಜಚಕ್ರಪಾಣಿಯ ಭಜಿಸೆಆ ಕ್ಷಣದಿ ತನ್ನ ಚಕ್ರಕಾಙÉÕಯ ಮಾಡಿಲಕ್ಷ್ಮೀದೇವಿಗ್ಹೇಳದೆ ಪಕ್ಷಿ ಹೆಗಲೇರಿ ಬಂದ 2ಹಿರಣ್ಯಕಶ್ಯಪು ತನ್ನತರಳಪ್ರಹ್ಲಾದನಿಗೆಪರಿಪರಿ ಬಾಧೆ ಪಡಿಸೆಹರಿಯ ತೋರೆಂದು ಆರ್ಭಟಿಸಿ ನುಡಿಯೆ ದೈತ್ಯನರಮೃಗರೂಪನಾಗಿ ಭರದಿ ಕಂಬದಿ ಬಂದ3ಪತಿಗಳೈವರು ಲಕ್ಷ್ಮೀಪತಿಯ ಧ್ಯಾನದೊಳಿರೆಮತಿಹೀನನೆಳೆತರಲುಗತಿನೀನಲ್ಲದೆ ಮತ್ತೆ ಹಿತರೊಬ್ಬರಿಲ್ಲವೆನೆಅತಿಬೇಗದಿಂದ ಧರ್ಮಸತಿಗೆ ಅಕ್ಷಯವಿತ್ತ 4ಇದರಂತೆ ತರಳಧ್ರÀುವ ಒದಗಿದ ತಾಪದಿಂದಪದುಮನಾಭನÀ ಭಜಿಸೆಮುದದಿಂದಾತಗೆ ಧ್ರುವಪದವಿಯನಿತ್ತು ಕಾಯ್ದೆಪದುಮನಾಭನೆ ನಿನಗೆದುರುಂಟೆ ತ್ರಿಜಗದಿ 5ಘಣಿಶಾಯಿ ನಿನ್ನಗುಣಮಹಿಮೆಯ ಪೊಗಳಲುಅಹಿಭೂಷಣನಿಗಳವೆಕ್ಷಣ ಬಿಡದಲೆ ನಿನ್ನ ಚರಣಸೇವೆಯ ಮಾಳ್ಪಸಿರಿದೇವಿ ಅರಿಯೆನೆಂದೆನಲು ನಿನ್ನಯಗುಣ6ಕರುಣಾಸಾಗರ ದೇವ ವಿಮಲಸ್ವರೂಪನೆ ಕಮಲನಾಭ ವಿಠ್ಠಲಶರಣಜನರ ಬಹುತ್ವರದಿಂದ ಬಂದು ಕಾಯ್ದಪರಮದಯಾಳೊ ನಿನ್ನ ಚರಣಕ್ಕೆ ನಮೋ ಎಂಬೆ7
--------------
ನಿಡಗುರುಕಿ ಜೀವೂಬಾಯಿ
ಗಂಭೀರೆಯರ ನಿಲ್ಲಿಸಿದಿಪೋರಬುದ್ಧಿಯ ಬಾಲೆನೀರೆಮನಕೆ ತಾರೆ ಪ.ನೀರಜಾಕ್ಷೆಯರ ನಿನ್ನದ್ವಾರದಿ ನಿಲ್ಲಿಸಿದಿಪೋರಬುದ್ಧಿಯನೆಲ್ಲತೋರಿಸಿದೆ ಈಗ 1ನೋಡಿ ನಮ್ಮನು ಕರೆಯದೆಓಡಿದೆ ಒಳಗಿನ್ನುಮಾಡಿದ ಕಪಟದ ಸೇಡುತೆಗೆಯುವೆ ನೀಗ 2ಮೂಡಲಗಿರಿವಾಸನೋಡುವಂತೆಮಾರಿಬಾಡಿಸಿ ಕಳಿಸುವೆನೋಡಿಕೊ ರುಕ್ಮಿಣಿ 3ಹೀನಗುಣದ ಬಾಲೆಮಾನವು ನಿನಗಿಲ್ಲಶ್ರೀನಿವಾಸನು ನಿನ್ನಏನೆಂದು ಮದುವೆಯಾದ 4ರಜವೆಂಬೊಗುಣಸೇರಿರಾಜ್ಯ ಭೋಗವಬಟ್ಟೆತ್ರಿಜಗವಂದನ ಕೂಡಭುಜಗಾಲಿಂಗನೆಯಾಕೆ 5ಸತ್ವಗುಣವ ಸೇರಿಅತ್ಯಂತ ಸುಖಿಸಿದಿಚಿತ್ತಜನಯ್ಯಗೆಪತ್ನಿ ತಕ್ಕವಳಲ್ಲ 6ತಮವೆಂಬೊ ಗುಣಗಳಸುಮ್ಮನೆ ಗುತ್ತಿಗೆ ಹೊತ್ತಿರಮಿ ಅರಸನ ಕೂಡರಮಿಸೋದು ತರವಲ್ಲ 7
--------------
ಗಲಗಲಿಅವ್ವನವರು
ಗೆದ್ದೆಯೊ ಹನುಮಂತಾ-ಅಸುರರಒದ್ದೆಯೊ ಬಲವಂತಾ ಪಬದ್ಧಾಂಜಲಿಯಿಂದ ರಘುಪತಿ ಪಾದವಹೃದ್ಯದಿ ಭಜನೆ ಮಾಡುವ ಬುದ್ಧಿವಂತ ಅ.ಪಅಂಜನಿಸುತನೀತ-ಲಂಕಾಪುರದಿ-ಅಕ್ಷಯನ ಕೊಂದಾತ ||ಕಂಜಾಕ್ಷಿ ಸೀತೆಯ ಕಂಡು ಮುದ್ರಿಕೆಯಿತ್ತು |ಮಂಜುಳವಾರೆಯ ತಂದ ರಾಮನ ದೂತ 1ಈರೇಳು ಜಗದೊಳಗೆ-ಇನ್ನು ಮತ್ತೆ ಯಾರು ಸರಿಯೊ ನಿನಗೆವೀರ ಮಹಾಬಲ ಶೂರ ಪರಾಕ್ರಮ |ಧೀರಸಮೀರಉದಾರ ಗಂಭೀರ2ವಾಂಛಿತಫಲವೀವ-ನಾದ ಮುಖ್ಯ- ಪ್ರಾಣ ಮಹಾನುಭಾವ ||ಕಿಂಚಿತ್ತು ಕಷ್ಟವ ಪಡಲೀಸ ಭಕ್ತರ್ಗೆ |ಪಾಂಚಜನ್ಯಪುರಂದರವಿಠಲದಾಸ3
--------------
ಪುರಂದರದಾಸರು
ಗೋಕುಲ ಕೃಷ್ಣ ಗೋಪಿಸ್ತ್ರೀಯರ ಕೂಡೆ ||ಲೋಕ ಮೋಹನ ಲೀಲೆ ತೋರಿದನಲ್ಲಿ ||ಆ ಕನ್ಯೆಯರಿಗೆಲ್ಲ ಬೇಕಾದರೂಪ ತೋರಿ ||ಸಾಕಾರಿಯಾಗಿರೆ ಬಳಿಕೊಂದು ದಿವಸ 1ಸೀರೆ ಕುಪ್ಪಸ ತೊಟ್ಟು | ಹಾರ ಕಡಗವಿಟ್ಟು |ನಾರಿಯೊಬ್ಬಳುಕ್ಷೀರಮಾರುತ್ತ ಬರಲೂ ||ಕೇರಿ ಕೇರಿಗಳಲ್ಲಿ ಚರಿಸುತ್ತಲಿರೆ ಕಂಡು |ವಾರಿಜಾಕ್ಷನು ನಡೆತಂದು ತಾ ನಗುತ್ತ 2ನೀಲಕುಂತಳೆ ಗುಣಶೀಲೆ ಚಂದಿರಮುಖಿ |ಹಾಲ ಸುಂಕವ ಕೊಟ್ಟು ಪೋ | ಗವ್ವ ಚದುರೆ ||ಕೇಳಿಮಾನಿನಿಕ್ರೋಧ ತಾಳಿ ಕೃಷ್ಣನ ಕೂಡೆ |ಹಾಲ ಸುಂಕದ ಕಟ್ಟೆ ಯಾವುದಯ್ಯ ನಿನಗೆ 3ಎಂದು ನಿಂದಿಸಿ ಹಿಂದೆ ತಿರುಗಿ ಪೋಗಲು | ಕಂಡು |ನಂದಕಂದನು ತಾ | ಸೆರಗ ಪಿಡಿದು ತಾ ನಿಲಿಸೆ ||ಚಂದಿರಮುಖಿ ತಾನು ಸೆಣಸಿ ಕೃಷ್ಣನೊಳ್ ಸೋತುಕಂದಿ ಕುಂದುತ ಕೈಯ ಮುಗಿದು ಪೇಳಿದಳು 4ತಂದೆ ಸೆರಗ ಬಿಡು ಕಂದ ಸೆರಗ ಬಿಡು |ಇಂದೆನ್ನ ಗುರುವರ್ಯ | ಸೆರಗ ಬಿಡಯ್ಯ ||ತಂದೆಯು ನಾನಲ್ಲ | ಕಂದನಾನಲ್ಲವೊ | ನಿನ್ನ |ತಂದೆಗಳಿಯನೆಂದು ಭಾವಿಸೆ ತರುಣಿ 5ಮಾವ ಸೆರಗ ಬಿಡು |ಭಾವಸೆರಗ ಬಿಡು |ಸೇವಕಿ ನಿನಗೆ ನಾ ಸೆರಗ ಬಿಡಯ್ಯ ||ಮಾವನಲ್ಲವೊ | ಕೇಳೆ ಭಾವನಲ್ಲವೊ | ನಿನ್ನ ||ಮಾವನ ಮಗನು ನಾ ಕಾಣೆಂದ ಕೃಷ್ಣಾ 6ವಿಧ ವಿಧದಲಿ ಮಾತನಾಡುತಾ ಕೃಷ್ಣ |ಮದನತಾಪವ ಹೆಚ್ಚಿಸಿದನು ಮಾನಿನಿಗೆ |ಪದುಮಾಕ್ಷಿ ಭ್ರಮೆಗೊಂಡುಮದನತಾಪದಿ ನೊಂದು |ಮದನತಾತನನಪ್ಪಿ | ಮುದ್ದಿಸೆ ಕಂಡು 7ತಾಳು ತಾಳೆಲೆ ಸಖಿ ತಾಯಿ ತಂಗಿಗೆ ಸಮ |ಕೇಳು ಜಗದಿ ಪರದಾರಾಂಶ ಜನಕೆ ||ಲೋಲಲೋಚನ ಎನ್ನ ಗೋಳು ಗುಡಿಸದೀಗ |ಆಳು ನಿನ್ನಯ ಜನನಿಗೆ ಸೊಸೆ ಎಂದು ದಯದಿ 8ಇಂತೆಂದು ಕೃಷ್ಣನ ಎದೆಗೆ ಕುಚವನಿತ್ತು |ಸಂತೋಷದಿಂದಲಪ್ಪೀ ಸ್ಮರಿಸುತ್ತಲಿರಲುಕಂತುಜನಕೆ ಗೋವಿಂದಗೆ ದಾಸರೋಳೆಂತು |ಕೃಪೆಯೋ | ನಾರಿಗೊಲಿದಿಷ್ಟ ಸಲಿಸೆ ಗೋಕುಲ 9
--------------
ಗೋವಿಂದದಾಸ
ಜಯಪತ್ರವ ತಾರೆ ಜಾಣೆಮುಂದಕೆ ಬಾರೆವೈಭವದಿ ಆಣಿಯಿಟ್ಟುಓಡಿದ್ಯಾತಕೆ ನೀರೆ ಪಬಿಂಕಬಿಡಿಸಿಕೊಂಡೆವೆಂದುದ್ರೌಪತಿ ಶಂಕಿಸಿಕೊಂಡೆ ನೀರೆಪಂಕಜಾಕ್ಷಿ ರುಕ್ಮಿಣಿ ಮುಂದೆಕಿಂಕರಳೆನ್ನು ಬಾರೆ ನೀರೆ 1ಸೋಗೆಗಣ್ಣಿನ ಭದ್ರೆ ನೀನುಆಣಿಇಟ್ಟ ಬಗೆಯೆ ನಮಗೆನಾಗವೇಣಿ ರುಕ್ಮಿಣಿ ಮುಂದೆಮೂಗಿನ ಗೆರೆಯ ತೆಗಿಯೆ 2ಇಟ್ಟ ಆಣೆತಪ್ಪಿಗೆಕೈಯ ಕಟ್ಟಿಕೊಂಡು ಬಾರೆಕೊಟ್ಟು ಬಿರುದು ಸೋತೆವೆಂದುಅಟ್ಟಾಸದಲಿ ಸಾರೆ 3ಪಂಥ ಕಳೆದುಕೊಂಡಿರೆಂದುಎಂಥ ನಗುತಾರಲ್ಲಇಂಥಮಾನಭಂಗವಾಗಿ ನಿಂತಿರ್ಯಾತಕೆ ಇಲ್ಲೆನೀವು ಕುಳಿತಿರ್ಯಾತಕೆ ಇಲ್ಲೆ 4ಸೋತೆವಮ್ಮ ನಿಮಗೆರಮಿನಾಥನರಸಿಗೆ ಎಂದುರುಕ್ಮಿಣಿಗೆ ನೀತಿಲೆಜಯಪತ್ರಕೊಟ್ಟು ದ್ರೌಪತಿ ಎರಗಿದಳು 5
--------------
ಗಲಗಲಿಅವ್ವನವರು
ಜಯಭೋ ಜಯಭೋ ಜಯ ವೆಂಕಟೇಶ ಪ್ರಭೊಜಯಕರ್ತಾ ಭಯಹರ್ತಾಭಯದಾಯಕ ಮೂರ್ತೆ ಪ.ಫಣಿಗಿರಿವರ ಫಣಮಂದಿರ ಪ್ರಣತಮನೋಹರಘನಸದ್ಗುಣಗಣಪೂರ್ಣಘನಶಾಮಲವರ್ಣಮನ್ಮಾನಸ ಮುನಿತಾಪಸ ಮನೋಮಾನಸ ಹಂಸದನುಸುತಹರ ಧನುಸಂಹರ ದಿನಮಣೀಶ ರುಚಿರ 1ವನಜಾಕ್ಷಾವನಿಜಾಂತಕ ವನಜಾಸನ ಜನಕಕನಕಾಕ್ಷಹ ಕನಕಾಲಯ ಕನಕಸ್ತ್ರೀಪ್ರಿಯವನಭ್ರಮಣಾವನಿರಮಣ ವಿನತಾತ್ಮಜಗಮನಅನಿಮಿತ್ತಜ ಅನಸೂಯಜ ಅನಿಮಿಷೇಂದ್ರಾನುಜ 2ಅರಿಧರಧರ ಅರಿಪರಿಹರ ಅರುಣಾಂಬರಧರಚಿರಮಣಿ ರುಚಿರಾಭರಣಾನುಚರಸುರತರುವೀರಸುರಪರಮಾಪ್ತನೆ ಸಾಸಿರ ಕ್ರೀಡಾಶ್ಚರ್ಯಗಾರಕಲಿಕಲುಷಹರ ಕರುಣಾಕರ ಪ್ರಸನ್ವೆಂಕಟೇಶ್ವರ 3
--------------
ಪ್ರಸನ್ನವೆಂಕಟದಾಸರು
ತಪ್ಪುಗಳೆಲ್ಲ ಪರಿಹರಿಸುವ ನಮ್ಮಪ್ಪನಲ್ಲವೆ ನೀನುಒಪ್ಪಿದ ಬಳಿಕವಗುಣ ನೋಡದ ತಿಮ್ಮಪ್ಪನಲ್ಲವೆ ನೀನು ಪ.ಬೆಳಗಿನ ಜಾವದಿಹರಿನಿನ್ನ ಸ್ಮರಣೆಗೆಹಳವಿಗೆಗೊಳ್ಳದ ತಪ್ಪುಮಲಮೂತ್ರವಿಸರ್ಜನೆಯ ಮೃತ್ತಿಕೆಯಲಿಮಲಿನವ ತೊಳೆಯದ ತಪ್ಪುತುಲಸಿ ವೃಂದಾವನ ಗೋಸೇವೆಗೆಅಲಸಿಕೆ ಮಾಡುವ ತಪ್ಪುನಳಿನಸಖೋದಯಕಘ್ರ್ಯವ ನೀಡದಕಲಿವ್ಯಾಸಂಗದ ತಪ್ಪು 1ದಿನದಿನ ಉದಯದಿ ಸ್ನಾನವ ಮಾಡದತನುವಂಚನೆಯ ತಪ್ಪುಕ್ಷಣ ಶ್ರೀ ಹರಿಗುಣ ಜಿಜ್ಞಾಸಿಲ್ಲದಮನವಂಚನೆಯ ತಪ್ಪುಮುನಿಸುರ ಭೂಸುರರಾರಾಧಿಸದಧನ ವಂಚನೆಯ ತಪ್ಪುವನಜಾಕ್ಷನೆ ನಿನ್ನಪಾದವಿಮುಖ ದುರ್ಜನ ಸಂಸರ್ಗದ ತಪ್ಪು 2ಕಣ್ಣಲಿ ಕೃಷ್ಣಾಕೃತಿ ನೋಡದೆಪರಹೆಣ್ಣಿನ ನೋಟದ ತಪ್ಪುನಿನ್ನ ಕಥಾಮೃತ ಒಲ್ಲದೆ ಹರಟೆಯಮನ್ನಿಸುವ ಕಿವಿ ತಪ್ಪುಅನ್ನವ ನಿನಗರ್ಪಿಸದಲೆ ಹರುಷದಿಉಣ್ಣುವ ನಾಲಿಗೆ ತಪ್ಪುಚಿನ್ಮಯ ಚರಣಕ್ಕೆರಗದೆಉನ್ಮತ್ತರ ನಮಿಸುವ ತಲೆ ತಪ್ಪು 3ಶ್ರೀ ನಿರ್ಮಾಲ್ಯದ ವಿರಹಿತ ಸುರಭಿಯಘ್ರಾಣಿಪನಾಸಿಕತಪ್ಪುಆನಂದದಿ ಸಂಕೀರ್ತನೆ ಮಾಡದಹೀನವಿವಾದದ ಬಾಯ ತಪ್ಪುಶ್ರೀನಾಥಾರ್ಚನೆ ಇಲ್ಲದೂಳಿಗಮಾಣದಿರುವ ಕೈ ತಪ್ಪುಶ್ರೀನಾರಾಯಣ ವೇಶ್ಮನಿಗೈದದನಾನಾಟನಪಾದತಪ್ಪು4ಯಜ್ಞಾತ್ಮಗೆ ಯಜ್ಞಾರ್ಪಿಸದೆ ಸುಖಮಗ್ನಾದ ಮೇಢ್ರದ ತಪ್ಪುಅಗ್ರದ ಕರ್ಮವ ಶೌಚವ ಜರಿದ ಸಮಗ್ರ ಗುಹ್ಯಕೃತ ತಪ್ಪುಅಜ್ಞಾನ ಜ್ಞಾನದಿ ಕ್ಷಣಲವಶತವೆಗ್ಗಳಘ ಗಳಿಸುವ ತಪ್ಪುಯಜೆÕೀಶ ಪ್ರಸನ್ವೆಂಕಟ ಕೃಷ್ಣ ನಾಮಾಗ್ನಿಗೆ ತೃಣವೀ ತಪ್ಪು 5
--------------
ಪ್ರಸನ್ನವೆಂಕಟದಾಸರು
ತಾತ್ತ್ವಿಕತೆ245ಆರಿಗಾದರು ಪೂರ್ವಕರ್ಮ ಬಿಡದುವಾರಿಜೋದ್ಭವಅಜಭವಾದಿಗಳ ಕಾಡುತಿಹುದುಪxmಟ veಡಿsioಟಿ='1.0' eಟಿಛಿoಜiಟಿg='%SಔUP-ಇಓಅಔಆIಓಉ%'ವೀರಭೈರವನಂತೆ ತಾನು ಬತ್ತಲೆಯಂತೆಮಾರಿಮಸಣಿಗಳಂತೆ ತಿರಿದು ತಿಂಬರಂತೆಸೂರ್ಯ ಚಂದ್ರಮರಂತೆ ರಾಹುವಟ್ಟುಳಿಯಂತೆಮೂರೆರಡು ತಲೆ ಹರಗೆ ಕೈಲಿ ಕಪ್ಪರವಂತೆ1ಶಿಷ್ಟ ಹರಿಶ್ಚಂದ್ರನಿಗೆ ಮಸಣದಡಿಗೆಯಂತೆಸೃಷ್ಟಿಸುವ ಬೊಮ್ಮನಿಗೆ ಶಿರ ಹೋಯಿತಂತೆಅಷ್ಟದಿಕಾಲ್ಪಕರು ಸೆರೆಯಾಗಿರುವರಂತೆಕಟ್ಟುಗ್ರದಿಂದ್ರನಿಗೆ ಮೈಯೆಲ್ಲ ಕಣ್ಣಂತೆ2ಹನ್ನೊಂದಕ್ಷೋಹಿಣಿ ಬಲವುಳ್ಳ ಕೌರವನುರಣದೊಳಗೆ ತೊಡೆಮುರಿದು ಬಿದ್ದನಂತೆವನಜಾಕ್ಷ ಸಿರಿಯರಸ ಬಲಿಯ ಬೇಡಿದನಂತೆವನಿತೆ ಧರ್ಮಜನ ತಾಯ್ತಿರಿದುಂಡಳಂತೆ3ಧರೆಗೆ ಧರ್ಮಜನಂತೆ ಕಂಕಭಟ್ಟನಂತೆಶೂರ ಭೀಮನು ಬಾಣಸಿಗನಾದನಂತೆವೀರ ಫಲುಗುಣನಂತೆ ಕೈಯೊಳಗೆ ಬಳೆಯಂತೆಕಿರಿಯ ನಕುಲ ಸಹದೇವರು ತುರುಗಾಯ್ದರಂತೆ4ಹರನ ವಾಹನವಂತೆ ಹುಲ್ಲು ತಿಂಬುವುದಂತೆವಿರಿಂಚಿವಾಹನವಂತೆಕಮಲಭಕ್ಷಿಪನಂತೆಹರಿಯ ಹೊತ್ತಿಹನಂತೆ ಹಾವು ಭಕ್ಷಿಪನಂತೆಸಿರಿಯಾದಿಕೇಶವನು ತಾ ಬೆಣ್ಣೆಗಳ್ಳನಂತೆ5
--------------
ಕನಕದಾಸ
ತೊಲ ತೊಲಗೆಲೊ ಕಲಿಯೆ ನಿಲ್ಲದಿಲ್ಲಿ ಪ.ತೊಲ ತೊಲಗೆಲೊ ಕಲಿಯೆ ಸಲೆಸಲುಗೆಯ ಬಿಡು ಸಲಿಲಜಾಕ್ಷನ ದಾಸರ ಅ.ಪ.ರಮೆರಮಣನ ಸಿರಿರಮಣೀಯ ನಾಮವಿರೆಯಮಗಿಮನಂಜಿಕೆ ಎಮಗುಂಟೆತಮ ತಮ ಮಹೋತ್ತಮ ಕುಲಗಳು ಮಹೋತ್ತ್ತಮತಮರೊಲುಮೆ ಮತ್ತವನ ಆಶ್ರಯವುಂಟು 1ಮನ ಮನೋಸಂಭವನ ಮನೆ ಹೊಕ್ಕರೆ ಸೈರಿಸಘನಜ್ಞಾನಿ ಪೂರ್ಣಗುರು ಜ್ಞಾನಿರಾಯತನು ತನಯಾಂಗನೇರು ತನ್ನವಸರಕಾರಿಲ್ಲಈ ನಯನ ಹರಿನಾರಾಯಣನಲ್ಲಿ ತೊಡಗಿರೆ 2ಬಿಡಬಿಡ ಭಟನೆಂದು ಬೇಡಿದಂತಾಭಯವೀವಪಡಿಪೊಡವಿಲಿ ಕೊಟ್ಟು ಪಿಡಿದ ಎನ್ನಒಡಒಡನೆ ರಕ್ಷಿಪ ಒಡೆಯ ಪ್ರಸನ್ವೆಂಕಟೇಶಅಡಿಯೆಡೆ ಸೇರಿದೆ ಬಾರೊ ಅಡಗಡಗೆಲೆಲೊ 3
--------------
ಪ್ರಸನ್ನವೆಂಕಟದಾಸರು
ತ್ರಿಜಗದ್ವಾ ್ಯಪಕಹರಿಎನುವರು ಸುಜನರುನಿಜದಲಿ ಪೇಳಿವದಾರಕ್ಕಾಅಜಭವಾದಿಗಳಿಗರಸನಾದಹದಿನಾಲ್ಕು ಲೋಕಕೆ ದೊರೆ ತಂಗಿ 1ನೀರೊಳು ಮುಳುಗುತ ಮೀನರೂಪದಿಸಾರುವ ಮಯ್ಯವದಾರಕ್ಕನೀರೊಳು ಮುಳುಗಿ ವೇದವ ತಂದು ಸುತಗಿತ್ತಧೀರ ಮತ್ಸ್ಯಮೂರುತಿ ತಂಗಿ 2ಭಾರಬೆನ್ನಿಲಿ ಪೊತ್ತು ಮೋರೆ ಕೆಳಗೆ ಮಾಡಿನೀರೊಳು ವಾಸಿಪದಾರಕ್ಕವಾರಿಧಿಮಥಿಸಿದಮೃತ ಸುರರಿಗೆ ಇತ್ತಧೀರಕೂರ್ಮಮೂರುತಿ ತಂಗಿ3ಕೋರೆದಾಡಿಯಲಿ ಧಾರುಣಿ ನೆಗಹಿದಫೋರನೆನುವರಿವದಾರಕ್ಕಕ್ರೂರ ಹಿರಣ್ಯಾಕ್ಷನ ಕೊಂದು ಭೂಮಿಯ ತಂದಶೂರ ವರಹ ಮೂರುತಿ ತಂಗಿ 4ಕ್ರೂರರೂಪತಾಳುತ ಕರುಳ್ವನಮಾಲೆ ಹಾಕಿದವದಾರಕ್ಕಪೋರನ ಸಲಹಲು ಕಂಬದಿಂದುಸಿದನಾರಸಿಂಹ ಮೂರುತಿ ತಂಗಿ 5ಮೂರಡಿ ಭೂಮಿಯ ದಾನವ ಬೇಡಿದಹಾರ್ವನೆನುವನಿವದಾರಕ್ಕಧೀರ ಬಲಿಯ ಭಕ್ತಿಗೆ ಮೆಚ್ಚಿ ಬಾಗಿಲು ಕಾಯ್ದವಾಮನ ಮೂರುತಿ ಇವ ತಂಗಿ 6ಮೂರು ಏಳುಬಾರಿಧಾರುಣಿ ಚರಿಸಿದಶೂರನೆನುವರಿವದಾರಕ್ಕವೀರ ಕ್ಷತ್ರಿಯರ ಮದವನಡಗಿಸಿದ ಪರಶು-ರಾಮ ಮೂರುತಿ ತಂಗಿ 7ಕೋತಿಗಳೊಡನಾಡಿ ಸೇತುವೆ ಕಟ್ಟಿದ ಪ್ರ-ಖ್ಯಾತನೆನುವರಿವದಾರಕ್ಕಮಾತರಿಶ್ವನಿಗೆ ಒಲಿದಂಥ ದಶರಥರಾಮ ಚಂದ್ರ ಮೂರುತಿ ತಂಗಿ 8ಗೋಕುಲದೊಳು ಪಾಲ್ಬೆಣ್ಣೆ ಮೊಸರುನವನೀತಚೋರನಿವದಾರಕ್ಕಲೋಕಗಳೆಲ್ಲಾ ತಾಯಿಗೆ ಬಾಯೊಳುತೋರ್ದಗೋಪಾಲಕೃಷ್ಣ ಮೂರುತಿ ತಂಗಿ 9ತ್ರಿಪುರರ ಸತಿಯರ ವ್ರತಗಳನಳಿದನುಗುಪಿತನೆನುವರಿವದಾರಕ್ಕಕಪಟನಾಟಕ ಸೂತ್ರಧಾರಿ ಶ್ರೀ-ಹರಿಬೌದ್ಧ ಮೂರುತಿ ತಂಗಿ10ಅಶ್ವುವನೇರುತ ಹಸ್ತದಿ ಖಡ್ಗ ಪುರು-ಷೋತ್ತಮನೆನುವರಿವದಾರಕ್ಕಸ್ವಸ್ತದಿ ಕಲಿಯೊಳು ಸುಜನರ ಪಾಲಿಪಕರ್ತೃ ಕಲ್ಕಿ ಮೂರುತಿ ತಂಗಿ 11ಶಂಖು ಚಕ್ರ ಗದೆ ಪದುಮವು ಸಿರದಿ ಕಿ-ರೀಟಧಾರಿ ಇವದಾರಕ್ಕಪಂಕಜಾಕ್ಷಿ ಪದ್ಮಾವತಿಪತಿಶ್ರೀ-ವೆಂಕಟೇಶ ಮೂರುತಿ ತಂಗಿ 12ಮಮತೆಲಿ ಸುಜನರ ಶ್ರಮ ಪರಿಹರಿಸುವಕಮಲಾಪತಿ ಇವದಾರಕ್ಕಕಮಲಪತ್ರಾಕ್ಷ ಶ್ರೀ ಕಮಲನಾಭ ವಿ-ಠ್ಠಲ ಮೂರುತಿ ಕೇಳಿವ ತಂಗಿ 13
--------------
ನಿಡಗುರುಕಿ ಜೀವೂಬಾಯಿ
ದಾರುದಾರಿಲ್ಲೆಲೆ ರಂಗದಾರುದಾರಿಲ್ಲ ಸಂಗನೀರಜಾಕ್ಷನೀನೆ ಭವಸಾಗರತಾರಿಸಿ ಕೀರ್ತಿ ಪಡೆಯೊ ದಾತಾರ ಪ.ಮೀನವಾಮಿಷವುಂಡಂತೆ ಸುಖಮಾನಿನಿಯರ ತಡಿಯುಧೇನುಜರಿಯಾದಂತೆ ಏಳಿಲುಸೂನುಗಳ ಬಿರುನುಡಿಯುಏನು ಬಳಗಾಮೃಗ ದಗ್ಧ ವಿಪಿನದ ಸ್ನೇಹದೆ ಕಡಿಯುಪ್ರಾಣ ಪಯಣಕೆ ಬುತ್ತಿಲ್ಲಭವಸಂಧಾನ ಹರಿದರೆ ಆರಿಲ್ಲ ಒಡೆಯಾ 1ಏಸೋ ದಿನ ನೆಚ್ಚಿದಕಾಯಹೇಸಿಕೆಘನವಾಯಿತುಆಸೆಬಟ್ಟಾರ್ಥ ವೃಥಾವ್ರಯಕಾಸು ನಾಶಾಯಿತುಲೇಶ ಮಾತ್ರವು ಹಿತ ಹೊಂದದೆ ಮನದ್ವೇಷಿ ತಾನಾಯಿತು ಆಯುಷ್ಯ ಸೂತ್ರವು ಹರಿದರೆ ಭವರೋಗಭೇಷಜರಿಲ್ಲದಂತಾಯಿತು 2ಕುನ್ನಿ ಸಂತೆಗೆ ಹೋದಂತೆ ಬಹುಜನ್ಮ ನೋವಾದವುಮಣ್ಣಿನೊಳು ಹಾಲ ಕೊಡ ಒಡೆದಂತೆನನ್ನ ಧರ್ಮಕರ್ಮವುನನ್ನೆಚ್ಚರ ನನಗಿಲ್ಲವುನಿನ್ನೆಚ್ಚರವೆಲ್ಲಿಯದು ಪ್ರಸನ್ನವೆಂಕಟ ನಿನ್ನ ಯಾತ್ರೆಗೆ ನೀನೆಬೆನ್ನಾದರೆನಗೆಲ್ಲ ಗೆಲುವು 3
--------------
ಪ್ರಸನ್ನವೆಂಕಟದಾಸರು