ಒಟ್ಟು 11785 ಕಡೆಗಳಲ್ಲಿ , 132 ದಾಸರು , 6311 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಇನ್ನೇನಿನ್ನೇನು ಎನಗಿನ್ನು ಇನ್ನೇನಿನ್ನೇನು ಧ್ರುವ ಎನ್ನೊಳು ಗುರು ತನ್ನ ಮರ್ಮವು ತೋರಿದ ಇನ್ನೇನಿನ್ನೇನು 1 ಮುನ್ನಿನ ಕರ್ಮವು ನಿರ್ಮೂಲವಾಯಿತು ಇನ್ನೇನಿನ್ನೇನು 2 ಎನ್ನೊಳು ಘನಬ್ರಹ್ಮವಸ್ತು ತಾನಾಯಿತು ಇನ್ನೇನಿನ್ನೇನು 3 ನಾನು ನಾನೆಂಬುದು ನೆಲಿಯು ತಾನಾಯಿತು ಇನ್ನೇನಿನ್ನೇನು 4 ಏನೆಂದು ತಿಳಿಯದ ಅನುಮಾನ ಗಳೆಯಿತು ಇನ್ನೇನಿನ್ನೇನು 5 ಪರಮ ತತ್ವದ ಗತಿ ನೆಲೆ ನಿಭ ತೋರಿತು ಇನ್ನೇನಿನ್ನೇನು 6 ಎನ್ನೊಳಾತ್ಮ ಖೂನ ಕುರುಹವು ತಿಳಿಯಿತು ಇನ್ನೇನಿನ್ನೇನು 7 ಕನಸು ಮನಸು ಎಲ್ಲ ನಿನ್ನ ಸೇವೆ ಆಯಿತು ಇನ್ನೇನಿನ್ನೇನು 8 ಹಗಲಿರುಳೆಂಬುದು ಹಗರಣವಾಯಿತು ಇನ್ನೇನಿನ್ನೇನು 9 ಅರಹು ಮರಹಿನ ಇರುವು ತಿಳಿಯುತು ಇನ್ನೇನಿನ್ನೇನು 10 ಭಾವದ ಬಂiÀiಲಾಟ ನಿಜವಾಗಿ ದೋರಿತು ಇನ್ನೇನಿನ್ನೇನು 11 ಜೀವಶಿವನ ಗತಿ ಸೋಹ್ಯವು ತಿಳಿಯಿತು ಇನ್ನೇನಿನ್ನೇನು 12 ಆಯವು ದಾಯವು ಸಾಹ್ಯವು ದೋರಿತು ಇನ್ನೇನಿನ್ನೇನು 13 ಜೀವನ್ನ ಜಾತಿಯ ಕೀಲವು ತಿಳಿಯಿತು ಇನ್ನೇನಿನ್ನೇನು 14 ಜನ್ಮ ಮರಣದಾ ಜಂತ್ರವು ಮುರಿಯಿತು ಇನ್ನೇನಿನ್ನೇನು 15 ಸಂದೇಹ್ಯ ಸಂಕಲ್ಪ ಸೂಕ್ಷ್ಮವು ಹರಿಯಿತು ಇನ್ನೇನಿನ್ನೇನು 16 ಮರಣದ ಗತಿಗಳ ಮಂತ್ರವು ತಿಳಿಯಿತು ಇನ್ನೇನಿನ್ನೇನು 17 ಸುಷಮ್ನ ನಾಳದ ಸೂಕ್ಷ್ಮವು ದೋರಿತು ಇನ್ನೇನಿನ್ನೇನು 18 ಇಮ್ಮನವಿದ್ದದು ಒಮ್ಮನವಾಯಿತು ಇನ್ನೇನಿನ್ನೇನು 19 ಆಧಾರಚಕ್ರದ ಹಾದಿಯು ತಿಳಿಯಿತು ಇನ್ನೇನಿನ್ನೇನು 20 ಸದ್ಗುರು ಕೃಪೆಯಾದಾ ಸಾಧನವಾಯಿತು ಇನ್ನೇನಿನ್ನೇನು 21 ಇನ್ನೇನಿನ್ನೇನು 22 ಅಂತರಾತ್ಮನ ಸೂತ್ರಾಂತ್ರವು ತಿಳಿಯಿತು ಇನ್ನೇನಿನ್ನೇನು 23 ಇನ್ನೇನಿನ್ನೇನು 24 ಎನ್ನೊಳು ಭಾಸ್ಕರ ಗುರು ತಾನೆಯಾದನು ಇನ್ನೇನಿನ್ನೇನು 25
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ಇನ್ನೇನು ಬಲ್ಲವನು ನಾನಲ್ಲ ಹರಿಯೆ ನಿನ್ನ ಧ್ಯಾನಧಿಕೆಂಬುದೊಂದೆ ನಾ ಬಲ್ಲೆ ಪ ನಿನ್ನ ಧ್ಯಾನವೆ ಮರೆವ ತರಿದ್ಹಾಕುವುದೆಂಬೆ ನಿನ್ನ ಧ್ಯಾನವೆ ಅರಿವ ಸ್ಥಿರ ಮಾಳ್ಪುದೆಂಬೆ ಶರಧಿ ಹೀರುವುದೆಂಬೆ ಸಿರಿ ನೀಡ್ವುದೆಂಬೆ 1 ನಿನ್ನ ಧ್ಯಾನವೆ ದು:ಖದೂರ ಮಾಡುವುದೆಂಬೆ ನಿನ್ನ ಧ್ಯಾನವೆ ಸುಖದ ವಾರಿಧಿಯೆಂಬೆ ನಿನ್ನ ಧ್ಯಾನವೆ ಮುಖ್ಯ ಚಾರುವೇದಗಳೆಂಬೆ ನಿನ್ನ ಧ್ಯಾನವೆ ಜ್ಞಾನಮೂಲಸಾರೆಂಬೆ 2 ನಿನ್ನ ಧ್ಯಾನವೆ ತತ್ವರೂಪವಾಗಿಹ್ಯದೆಂಬೆ ನಿನ್ನ ಧ್ಯಾನವೆ ಮುಕ್ತಿಮೂಲಾಧಾರೆಂಬೆ ನಿನ್ನ ಧ್ಯಾನವೆ ಭಕ್ತ ಜನಪ್ರಾಣಪದಕೆಂಬೆ ಎನ್ನಯ್ಯ ಶ್ರೀರಾಮ ನಿನ್ನಿಂದೆ ನಾನೆಂಬೆ 3
--------------
ರಾಮದಾಸರು
ಇನ್ಯಾಕೆ ಭವಬಾಧೆ ಇವಗೆ ಪನ್ನಂಗಶಯನನಡಿ ಚೆನ್ನಾಗಿ ಭಜಿಪವಗೆ ಪ ದುರಿತ ದುರ್ಗುಣಗಳನು ತರಿದೊಟ್ಟಿ ನ ಶ್ವರದ ಸಿರಿಯನಾಪೇಕ್ಷಿಸಿದೆ ನಿರುತ ಮಾನಸದಿ ಪರಕೆ ಪರತರವೆನಿಪ ಹರಿಯಂಘ್ರಿ ಎಡೆಬಿಡದೆ ಸ್ಮರಿಸುತ ಮನದೊಳಗೆ ಹರುಷಬರುವವಗೆ 1 ಹೀನಸಂಸಾರದ ನಾನಾ ಸಂಪದವೆಲ್ಲ ಶ್ವಾನನ ಕನಸಿನಂತೇನಿಲ್ಲವೆನುತ ಜ್ಞಾನದೊಳಳವಟ್ಟು ಜಾನಕೀಶನ ಧ್ಯಾನ ಮಾನಸದಿ ಒಲಿಸಿಕೊಂಡಾನಂದಿಸುವವಗೆ 2 ಹೇಸಿಯ ಪ್ರಪಂಚದ್ವಾಸನವನಳುಕಿಸಿ ದಾಸಜನ ಸಂಪದವೆ ಶಾಶ್ವತವೆನುತ ಶ್ರೀಶ ಶ್ರೀರಾಮನ ಸಾಸರನಾಮಗಳ ಧ್ಯಾಸದ್ಹೊಗಳುತ ಸಂತೋಷದಿರುವವಗೆ 3
--------------
ರಾಮದಾಸರು
ಇರಬೇಕು ನಿಂದಕರು ಸಜ್ಜನರಿಗೆ ಪ ದುರಿತ ರಾಶಿಗಳ ಪರಿಹರಿಸಲೋಸುಗ ಅ.ಪ. ಕಲುಷ ಕರ್ಮವ ಮಾಡೆ ಕಳೆವರಿನ್ನಾರೆಂದು ಕಮಲಭವನು ತಿಳಿದು ನಿರ್ಮಿಸಿದವನಿಯೊಳಗೆ ನಿಂದಕರ ಕಲುಷರನ ಮಾಡಿ ತನ್ನವರ ಸಲಹುವ 1 ದಿವಿಜರಿಳೆಯೊಳಗೆ ಜನ್ಮಗಳೊಲ್ಲೆವೆಂದಬ್ಜ ಭವಗೆ ಮೊರೆಯಿಡಲು ವರವಿತ್ತನಂದು ಕರ್ಮ ಮಾಡಿದರು ಸರಿಯೆತ ನ್ನವನೆನಿಸದವಗೆ ತಜ್ಜನ್ಯ ಫಲ ಬರಲೆಂದು 2 ಮಾನವಾಧಮ ಜನರು ನೋಡಿ ಸಹಿಸದಲೆ ಹೀನ ಮತಿಯಿಂದ ಮಾತುಗಳಾಡಲು ಭಾನು ಮಂಡಲಕೆ ಮೊಗವೆತ್ತಿ ಉಗುಳಿದರೆ ನ್ನಾನನವೆ ತೊಯ್ವುದಲ್ಲದರ್ಕಗೇನಪಮಾನ 3 ಮಲವ ತೊಳೆವಳು ತಾಯಿ ಕೈಗಳಿಂದಲಿ ನಿತ್ಯ ತೊಳೆವ ನಿಂದಕ ತನ್ನ ನಾಲಗಿಂದ ಬಲು ಮಿತ್ರನಿವನೆಂದು ಕರೆದು ಮನ್ನಿಸಬೇಕು ಹಲವು ಮಹ ಪಾಪಗಳ ಕಳೆದು ಪುಣ್ಯವನೀವ 4 ಅನುಭವಿಪ ದುಷ್ಕರ್ಮಗಳ ಜನ್ಯ ಫಲವು ತ ನ್ನಣುಗರಿಗೆ ಅಪವಾದ ರೂಪದಿಂದ ಉಣಿಸಿ ಮುಕ್ತರ ಮಾಡಿ ಸಂತೈಪ ನರಕ ಯಾ ತನೆಗಳವರಿಗೆ ಇಲ್ಲದುದರಿಂದ ಎಂದೆಂದೂ 5 ಮನುಜಾಧಮರಿಗೆ ಹರಿದಾಸರಲಿ ದ್ವೇಷ ವೆನಿಪ ಸಾಧನವೆ ನಿಸ್ಸಂದೇಹವು ಅನುತಾಪ ಬಿಡದೆ ಹರುಷಿತರಾಗಿ ನಿಷ್ಪ್ರಯೋ ಜನದಿ ಹರಿಪದಾಬ್ಜ ಭಜಿಪ ಭಜಕರಿಗೆ 6 ಲೋಕದೊಳು ನಿರ್ಮಿಸಿದನಿರ್ವರನು ಹರಿ ತಾನು ಭೂ ಕೋವಿದರ ಮಲವು ಪೋಗಲೆಂದು ಶ್ರೀ ಕರಾರ್ಚಿತ ಜಗನ್ನಾಥವಿಠಲ ಗ್ರಾಮ ಸೂಕರರು ನಿಂದಕರು ಕರುಣಾಳು ಇಳೆಯೊಳಗೆ 7
--------------
ಜಗನ್ನಾಥದಾಸರು
ಇಲ್ಲವಾಯಿತು ಸಾಧು ಜನಕೆ ಎಲ್ಲಾ | ಇಲ್ಲವೆಂಬುದವರ ಚಿತ್ತದೊಳಗಿಲ್ಲಾ ಪ ತನುವಿಲ್ಲ ಮನವಿಲ್ಲ, ಮನದೊಳಗೆ ನೆನವಿಲ್ಲ | ಬಿನುಗಿನ ಸುಖವ ಬಯಸಲಿಲ್ಲ |ಅನುಮಾನ ಎಂಬುವದಲ್ಲಿ ಜನಿಸುವದಿಲ್ಲ |ಚಿನುಮಯಾತ್ಮಕರಾಗಿ ಚರಿಸುತಿಹರೆಲ್ಲ 1 ಸತಿ ಸುತರೆಲ್ಲ ಹಿತವರೆಂದೆನಿಸಲಿಲ್ಲ | ಪತಿತಪಾವನ ರಘುನಾಥ ನೀನನ್ನದಲೆ |ಮಿತಿಯ ಆಯುಷ್ಯ ಕಳೆದರಲ್ಲ 2 ಮೂರ್ತಿ ಭವತಾರಕನ | ವ್ಯಾಪ ಕಾಣದೆ ಅನ್ಯ ಕಾಣಲಿಲ್ಲ 3
--------------
ಭಾವತರಕರು
ಇಲ್ಲಿಲ್ಲ ಸ್ವಾಮಿ ಅಲ್ಲಿಲ್ಲ ಎಲ್ಲವೂ ಸುಳ್ಳೆಂಬ ಖುಲ್ಲ ಜನರುಗಳಿಗಿಲ್ಲಿಲ್ಲ ಪ ಸತಿಸುತರುಗಳೆಲ್ಲ ಅತಿಹಿತರೆನ್ನುತ ರತಿಪತಿಪಿತನ ಮರೆತು ಇಪ್ಪ ಜನರಿಗೆ 1 ಮಿಗಿಲಾದ ಮಹಿಮೆಯ ಜಗದೊಳು ತೋರುವ ಅಗಣಿತ ಮಹಿಮಗೆ ಸೊಗಸದ ಜನರಿಗೆ 2 ಶರಧಿಶಯನನಾದ ಶ್ರೀವತ್ಸಾಂಕಿತನನ್ನು ಮರೆತು ಮರಳುಗೊಂಡು ಕರಗಿ ಕುಂದುವ ಜನರಿಗಿಲ್ಲಿಲ್ಲ 3
--------------
ಸಿರಿವತ್ಸಾಂಕಿತರು
ಇಲ್ಲೆಂದೆ ಇಲ್ಲೆಂದೆ ಭಕ್ತಜನಕೆ ಭಯ ಇಲ್ಲೆಂದೆ ಇಲ್ಲೆಂದೆ ಪ ಪಾದ ಎಲ್ಲ ಸಂಪದವೆಂದು ಬಲ್ಲಂಥ ಭಕ್ತರಿಗೆಲ್ಲರೀತಿಲಿ ಭಯಅ.ಪ ವಂದಿಸಿ ನುಡಿದರೆ ಬಂತೇನೆಂದೆ ನಿಂದಿಸಿ ನುಡಿಯಲು ಕುಂದೇನೆಂದೆ ಸಿಂಧುಶಯನನ ತಂದು ಮಾನಸವೆಂಬ ಮಂದಿರದಿಟ್ಟವರಿಗೆಂದೆಂದಿರದು ಭಯ 1 ಬಡತನ ಬಂದರೆ ಮಿಡುಕೇನೆಂದೆ ಕಡುಸಿರಿಯಿರ್ದರೆ ನಿಜವೇನೆಂದೆ ಜಡಭವ ಕನಸೆಂದು ದೃಢವಹಿಸೊಡಲೊಳು ಮೃಡಸಿಧರನೆ ನಿಮ್ಮ ಆಡುವರಿಗೆ ಭಯ 2 ಪೊಡವಿಪ ಮೆಚ್ಚಲು ಕೊಡುವುದೇನೆಂದೆ ಕಡುಕೋಪಗೊಂಡರೆ ಕೆಡುವುದೇನೆಂದೆ ಪೊಡವೀರೇಳನು ಒಡಲೊಳಗಿಟ್ಟವನಡಿ ಬಿಡುದಿರುವರಿಗಿಡಿ ಭುವನದ ಭಯ 3 ಸತಿಸುತರಿದ್ದರೆ ಹಿತವೇನೆಂದೆ ಸತಿಸುತರಿಲ್ಲದಿರೆ ಅಹಿತವೇನೆಂದೆ ರತಿಪತಿಪಿತನಡಿ ಸತತದಿ ಗೂಡಿಟ್ಟು ನುತಿಪ ಭಕ್ತರಿಗೆ ಕ್ಷಿತಿಮೇಲೇತರ ಭಯ 4 ಭೂಷಣ ಮಾಡಲದೊಂದೇ ಅಂದೆ ದೂಷಣ ಮಾಡಲದೊಂದೇ ಅಂದೆ ಶ್ರೀಶ ಶ್ರೀರಾಮನ ಸಾಸಿರ ನಾಮದ ಧ್ಯಾಸದಿಟ್ಟವರಿಗೇಸು ಕಾಲದಿ ಭಯ 5
--------------
ರಾಮದಾಸರು
ಇವ ನೋಡಮ್ಮಾ ಮಾನವನೆ|ಅವತರಸಿಹ ತ ಮಾಧವನೇ ಪ ಹಲವು ನಾರೇರೊಳಗ ಕೂಡಿ|ಹಲವು ರೂಪಾದನು ನೋಡಿ| ಬೋಧ ಸ್ವರದಿ ಪಾಡಿ| ನಲಿದಾಡುವ ಸ್ವಸುಖ ನೀಡಿ 1 ಅವಿದ್ಯ ವಿಷಮಡುವನೆ ಕಲಕಿ|ಬವರದಿ ಹಮ್ಮಿತುರಗ ತುಡಕಿ| ತವೆ ವಾಸನೆ ಹಡೆಗಳ ಕುಸುಕಿ| ಜೀವನಮೃತ ಮಾಡಿದ ಬಳಿಕಿ 2 ಗೋವಳರನು ತೆಗೆದಾ| ಕವಿಗುರು ಮಹಿಪತಿಜನ ಹೊರದಾ| ಭುವನದಿ ಗೋಕುಲದಲಿ ಮೆರೆದಾ 3
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ಇವನ ಕಂಡಿರ್ಯಾ ಕಾವಕರುಣನ ಭಾವ ಭಾವಿಸುವ ಪರಿಯಾಗುವ ದೇವನ ಧ್ರುವ ಸಗುಣಲೀಹ್ಯನಾ ಭಕುತಿಗೊಲಿವನಾ ಸುಗಮದಿಂದ ನಿಗಮನುಳುಹಿ ನಗವ ನೆಗೆದನಾ 1 ಸಿರಿಯ ಲೋಲನಾ ವರಕೃಪಾಲನಾ ಧರಿಯನುಳುಹಿ ತರಳಗೊಲಿದು ಪ್ರಿಯವಾದನಾ2 ವರವ ಬಲಿಗೆ ಇತ್ತು ದೋರಿದ ಭಾರ್ಗವರೂಪನಾ 3 ಪರಮ ಆತ್ಮನಾ ಹರಿಸರ್ವೋತ್ತಮನಾ ಸುರರ ನೆರೆಯ ಬಿಡಿಸಿ ಹೊರಟ ಪಾಂಡವಪ್ರಿಯನಾ 4 ಹೊಳೆವ ತೇಜನಾ ಮೂಲೋಕ ಪಾವನಾ ಹಳಿದು ವ್ರತವ ನೋಡಿ ಹಯವನೇರಿ ಸುಳಿದನಾ 5 ಘನ ಮಹಿಮನಾ ದಯಾ ನಿಸ್ಸೀಮನಾ ದೀನ ಮಹಿಪತಿಸ್ವಾಮಿ ಭಾನುಕೋಟೆ ದೀಪ್ತನಾ 6
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ಇವನಾ ನೆಲೆಗಾಣೆ ನಮ್ಮಯ್ಯಾ ಸಣ್ಣವನೇ ಪ ಒರಳವನೆಳೆದೊಯ್ದು ಮರಗಳ ಕೆಡೆಹಿಡಿದ| ಭರದಿ ಪೂತನಿಯಸುವ ಹೀರಿದಾ ನಮ್ಮಯ್ಯಾ 1 ಬೇರಳಲಿ ಗಿರಿಯೆತ್ತಿ ತುರುಗಳ ಕಾಯ್ದಾ| ತೆರೆದು ಬಾಯೊಳು ಜಗವ ತೋರಿದ ನಮ್ಮಾಯ್ಯಾ 2 ವೇಣುನಾದ ಮಾಡಿ ತೃಣಪಶು ಮೊದಲಾದ| ಏಣಾಕ್ಷಿಯರ ಮನವಾ ಭ್ರಮಿಸಿದಾ ನಮ್ಮಯ್ಯಾ 3 ಕಾಳಿ ಮಡುವ ಹೊಕ್ಕು ಕಾಳಿಂಗನೆಳೆತಂದಾ| ಲೀಲೆ ತೋರಲು ಹರಿ ಉದಿಸಿದ ನಮ್ಮಯ್ಯಾ 4 ಗುರುಮಹಿಪತಿ ಸ್ವಾಮಿ ಸುರುತರು ಎನಗಾದಾ| ನರನೆಂಬವರ ಬಾಮಾ ಬಿಗಿಸಿದ ನಮ್ಮಯ್ಯಾ 5
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ಇವನೆ ಪ್ರಹ್ಲಾದನಿಂದಲಿ ಉಪಾಸ್ಯ ಪವಮಾನ ಪಿತ ಭಕ್ತವರದ ಲಕ್ಷ್ಮೀಶ ಪ. ವಲಯಕಾರದಿ ಶೇಷ ಛತ್ತರಿಯಾಗಿ ಹಲ ಮುಸಲ ಧರಿಸಿ ಎಡದಲಿ ವಾರುಣೀ ಬಲದಲ್ಲಿ ಶಂಬುಕ ವರ್ಣನೆಂಬ ಪುತ್ರನ ಸಹಿತ ನಲಿದು ಸೇರಿಸೆ ಇಂಥ ಆಸನದಿ ಕುಳಿತಾ 1 ಯೋಗಾಸನವನ್ಹಾಕಿ ಎಡತೊಡೆಯ ಮೇಲ್ ಸಿರಿಯು ಆಗಮನುತ ಬಲದ ತೊಡೆಯಲ್ಲಿ ವಾಯು ಭೋಗ ರೂಪನು ಸರ್ವ ಆಭರಣ ಶೃಂಗಾರ ಸಾಗರಾತ್ಮಜೆ ಪತಿಯು ಧರಿಸಿ ಮೆರೆವಂಥಾ2 ಶಿರದಿ ನವರತ್ನ ಮಕುಟವು ಫಣೆಯು ತಿಲಕವೂ ಕರ್ಣ ಕುಂಡಲವೂ ನಾಸಿಕ ಗಲ್ಲ ತೆರದ ಬಾಯ್‍ದಾಡೆಗಳು ದುರುಳರಿಗೆ ಘೋರ ವರಭಕ್ತರಿಗೆ ಅಭಯ 3 ಕಂಠ ಕೌಸ್ತುಭಮಣಿಯು ಶ್ರೀವತ್ಸ ತುಳಸಿ ಸರ ವೈಜಯಂತಿ ಹಾರಾ ಕರ ಶಂಖ ಚಕ್ರವು ಪದ್ಮ ಗದೆ ಅಭಯ ವಂಟಿ ಕರಶಿರಿ ಭುಜದಿ ದ್ವಯ ಯೋಗ ಚಿಹ್ನೆ 4 ಉರ ಉದರ ಶೃಂಗಾರ ಅರವಿಂದ ಪೊಕ್ಕಳಲಿ ಬ್ರಹ್ಮ ಮೆರೆಯೇ ಮಿರುಗುವೋ ಮಕುಟ ಉಟ್ಟಿರುವ ನಡು ಕಿರುಗೆಜ್ಜೆ ಕರಿಸೊಂಡಲಿನ ತೊಡೆಯು ಸುರವರದ ಚರಣಾ5 ಚರಣದಾಭರಣ ಸಾಲ್ಯೆರಳನಖ ಕಾಂತಿಗಳು ಪಾದ ಪದುಮಾ ಮೃಗ ಮುಖವು ನರಮೃಗಾಕೃತಿರೂಪ ತರಳ ಪ್ರಹ್ಲಾದನಲಿ ಕರುಣಾರ್ದ ದೃಷ್ಟಿ 6 ಎಡತೊಡೆಯಲಿ ಸಿರಿಯು ಬಲಕರದಿ ಪದುಮವ ಪಿಡಿದು ಎಡತೊಡೆಯ ಮೇಲೆ ಮದನನ ಕುಳ್ಳಿರಿಸುತಾ ಮದನ ಇರಿಸಿ ಹೂ ಬಾಣವನು ಪಿಡಿದು ರತಿ ಪದುಮ ಕರದಿಂದ ಶೋಭಿಸಲೂ 7 ಹರಿಗೆ ಬಲತೊಡೆಯಲಿದ್ದಂಥ ವಾಯುವು ತನ್ನ ಅರಸಿ ಭಾರತಿಯ ಎಡತೊಡೆಯಲಿಟ್ಟೂ ತರಳ ವಿಷ್ವಕ್ಸೇನನನು ಬಲದ ತೊಡೆಯಲ್ಲಿ ಇರಿಸಿಕೊಂಡತುಲ ಸಂತಸದಿಂದ ಮೆರೆಯೇ 8 ಚತುರ ಹಸ್ತನು ವಾಯು ಎಡಗೈಲಿ ಪಿಡಿದು ಗದೆ ಹಿತದಿ ಬಲಗೈಯ್ಯ ಭಕ್ತರಿಗಭಯ ತೋರ್ವ ಅತಿಭಕ್ತಿಯಿಂದುಭಯಕರ ಅಂಜಲಿಯ ಮಾಡಿ ಪತಿ ಭಿಕ್ಷೆ ಬೇಡುವಾ9 ನಾಭಿಯಲಿ ಬ್ರಹ್ಮ ಉದ್ಭವಿಸಿ ಹಸ್ತದಿ ವೇದ ಶೋಭಿಸಲು ಎಡತೊಡೆಯ ಮೇಲೆ ವಾಣೀ ಆಭರಣ ಶೃಂಗರದಿ ವೀಣೆ ಪುಸ್ತಕ ಧರಿಸಿ ವೈಭವದಿ ದೇವ ಮುನಿ ಎಡೆ ತೊಡೆಯೊಳಿರಲೂ10 ಬ್ರಹ್ಮ ಬಲತೊಡೆಯಲ್ಲಿ ಪಂಚಮುಖ ರುದ್ರನ್ನ ಸುಮ್ಮಾನದಿಂದ ಕುಳ್ಳಿರಿಸಿಕೊಂಡಿರಲೂ ಬ್ರಹ್ಮಸುತ ಕರದಿ ಆಯುಧ ಗೌರಿ ಎಡದಲ್ಲಿ ಷಣ್ಮುಖನ ಬಲ ತೊಡೆಯಲ್ಲಿಟ್ಟು ಮೆರೆಯೇ 11 ಗೌರಿಗಣಪನ ತನ್ನ ತೊಡೆಯೊಳಿಟ್ಟಿರಲು ಈ ರೀತಿಯಿಂದ ಪರಿವಾರ ಸಹಿತಾ ಶೌರಿ ಮೆರೆಯುವ ದಿವ್ಯ ಅದ್ಭುತಾಕೃತಿ ನೃಹರಿ ಪತಿ ಮನದಿ ತೊರೆ ಭಕ್ತರಿಗೆ 12 ಕಾಲನಾಮಕ ಗರುಡ ಬಾಲೆ ಸೌಪರ್ಣಿ ಲೀಲೆಯಿಂದಲಿ ಕೂಡಿ ಸಮ್ಮುಖದಿ ನಿಂದೂ ಓಲಗವ ಕೊಡುತ ಹರಿಗನುಕೂಲನಾಗಿರುವ ಲೀಲ ಮಾನುಷ ಇಂಥ ವೈಭವದಿ ಮೆರೆವಾ13 ಇಂತೆಸೆವ ಹರಿ ಎದುರು ನಿಂತು ಪ್ರಹ್ಲಾದ ಗುಣ ವಂತೆ ಸಾಧ್ವೀ ಸಾಧುಮತಿ ಸತಿಯ ಸಹಿತಾ ಅಂತರಂಗದಿ ಚಿಂತಿಸುತ ಅಂಜಲಿಯ ಕರದಿ ಶಾಂತಮನದಲಿ ಸುಖಿಸಿ ಆನಂದಿಸುವನೂ14 ವರಭಕ್ತ ಪ್ರಹ್ಲಾದ ವರದನ್ನ ಈ ರೂಪ ನರರು ಚಿಂತಿಸಲಳವೆ ಚರಿಪ ಭಕ್ತಿಯಲೀ ಪರಮ ಉತ್ಸಾರಕರನೊಂದೊಂದು ಅಂಶದಲಿ ವರ ಭಕ್ತರಲಿ ನೆಲಸೆ ಚಿಂತನೆಗೆ ನಿಲುವಾ 15 ಪರಿವಾರ ಆಭರಣ ಆಯುಧಗಳಿಂ ಮೆರೆವ ನರಹರಿಯ ಈ ರೂಪ ನಿರುತ ಸ್ಮರಿಸೇ ಗುರುವರದ ಕರಿಗಿರೀ ಯೋಗ ಭೋಗಾ ನೃಹರಿ ಕರುಣಿಸುವ ಮುಕ್ತಿ ಗೋಪಾಲಕೃಷ್ಣವಿಠಲಾ16
--------------
ಅಂಬಾಬಾಯಿ
ಇವರೆವೆ ಧನ್ಯರಲ್ಲವೆ ಈ ಶರಣರು | ಈ ಶರಣರು | ಇವರೆವೆ ಧನ್ಯರಲ್ಲವೆ ಅವನಿಲಿ ಶರಣರು ಪ ಕರುಣಾನಂದವ ಪಡೆದು | ತರಣೋಪಾಯವನರಿದು | ಜರಿವನ್ಯ ಹಂಬಲವ ಬೆರೆದು | ಭಕ್ತಿರಸದೊಳು | ನಿರಪೇಕ್ಷ ವೃತ್ತಿಯಿಂದಾ | ಚರರಿಸುತಿಹ ಶರಣರು 1 ಭವ ಕಾನನವನೆ ತೊರೆವಾ | ನಿತ್ಯ ತಾನಾರೆಂಬುದು ನರಿವಾ | ಸ್ವಾನಂದಬೋಧವನು ಮಾನ | ನೀಗಿ ಶ್ರವಣದಿ | ಸಾನುರಾಗದಲಿಂದ ತಾನುಂಬ ಶರಣರು 2 ಹರಿಯಲ್ಲರೊಳಗರಿದು | ಶರೀರ ಭಾವನೆ ಮರೆದು | ಹರುಷದ ಗುಡಿಗಟ್ಟಿಬರುವ | ನಯನೋದಕದಿ | ಗುರುಮಹಿಪತಿಸ್ವಾಮಿ ಚರಣದ ಶರಣರು 3
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ಇವುಗಳ ಹಾವಳಿಗಂಜುವಳಲ್ಲ ಅ ಲ್ಲವುಗಳ ಸ್ಮøತಿಗೆ ನಾನಂಜುವೆನೆ ಪ ಚಂದ್ರ ಚಂದ್ರಿಕೆಯು ಉದಯಿಸಲ್ಯಾತಕೆ ನಿಂದ್ರಿಸುವೆನೆ ನಾನದರನ್ನು ಇಂದ್ರನನುಜನಾ ಶ್ರುತಿಗೆ ಸ್ಮøತಿಗೆ ಬರಲು ನಿಂದ್ರಿಸಲಾರೆನೆ ನಿಮಿಷ ಮನ 1 ಪಲ್ಲವಿಸವ್ಯಾತಕೆ ಚೂತ ತರುಗಳಿಗಿನ್ನು ನಿಲ್ಲಿಸುವೆನೆ ಅದರುಲ್ಬಣವ ಪಲ್ಲವ ಪಾದವ ಮನಸಿಗೆ ಬಂದರೆ ತಲ್ಲಣಿಸುವೆನೆ ತಾವರೆ ನಯನೆ 2 ಅಂಬುದಗಳೆಲ್ಲ ಅಂಬರವೇರಲಾ ಇಂಬು ಕೊಡೆ ಅಂಬುದ ಶ್ಯಾಮನು ಮನದಲಿ ನಿಲಲು ಕಂಬು ಕಂಠಿ 3 ಕುಂದ ಕುಸುಮಗಳು ವಿಕಸಿತವಾದರು ಅಂದಗೆಡುವುದಿಲ್ಲ ಮನಸಿನಲಿ ಕುಂದರದನ ಎನ್ನ ಮನಸಿಗೆ ತೋರಲು ಕಂದಿ ಕುಂದುವೆ ಮನ ಮಂದಿರದಿ 4 ಏವಮಾದಿಗಳೆಲ್ಲ ಏನು ಮಾಡವೋ ವಾಸು- ದೇವವಿಟ್ಠಲ ಸ್ಮøತಿ ಬಾರದಿರೆ ಶ್ರೀವರ ಚಿತ್ತಕ್ಕೆ ಬಂದರೆ ನಿಂದರೆ ತಾವರೆನಯನೆ ನೀ ತಂದು ತೋರೆ 5
--------------
ವ್ಯಾಸತತ್ವಜ್ಞದಾಸರು
ಇಷ್ಟಾದರು ದಯಮಾಡು ಪಂಡರಿನಾಥ ಪಾದ ಮುಟ್ಟಿ ಪ್ರಾರ್ಥಿಪೆನು ಪ ದಾನಧರ್ಮವು ಮಾಡಬೇಕೆಂದು ಮನವಿರೆ ದಾನವಾಂತಕ ಕೃಷ್ಣ ಧನವಿಲ್ಲವಯ್ಯ ಗಾನಲೋಲನೆ ಭಕ್ತಪಾಲ ನಿನ್ನಯ ಪಾದ ಧ್ಯಾನವ ಮಾಳ್ಪರ ಪಾದಧ್ಯಾನ ಕೊಡಿಸುದೇವ 1 ತೀರ್ಥಯಾತ್ರೆಗಳಿಂದ ಪಾರ್ಥಸಾರಥಿ ಕೃಷ್ಣ- ಮೂರ್ತಿ ಸೇವಿಸಲಸಮರ್ಥನಾಗಿರುವೆ ಮಾತು ಮಾತಿಗೆ ಕೃಷ್ಣಗೋವಿಂದ ಮಾಧವ ಶ್ರೀಪತಿ ಶ್ರೀಧರ ಸಲಹೆಂಬ ಸ್ಮರಣೆ 2 ಜ್ಞಾನಿಗಳೊಡನಾಡಿ ಶ್ರೀನಿವಾಸನೆ ನಿನ್ನ ನಾನಾಲೀಲೆಗಳ ಧ್ಯಾನಿಸಲಿಲ್ಲ ಹರಿಯೆ ಜ್ಞಾನಿಗಳರಸ ಭಕ್ತರ ಸುರಧೇನು ಅಜ್ಞಾನಿಗಳಳಿದು ಸುಜ್ಞಾನಜನರ ಸಂಘ 3 ಅಗಣಿತ ಮಹಿಮನೆ ನಿಗಮಗೋಚರ ಕೃಷ್ಣ ಖಗವಾಹನ ಕಂಸಾರಿಯೆ ದೇವ ಹಗಲು ಇರುಳು ನಿನ್ನ ಬಗೆಬಗೆ ಸ್ತುತಿಪರ ಪಾದಗಳು ಸೇವಿಪ ಪರಮಲಾಭವನು 4 ಕರೆ ಕರೆಗೊಳಿಸದೆ ಕಡಲಶಯನನೆ ಎನ್ನ ತೊಡರುಗಳನೆ ಬಿಡಿಸೆಂದು ಮೊರೆ ಇಡುವೆ ಮಡುವಿನೊಳ್ ಗಜವನುದ್ಧರಿಸಿ ರಕ್ಷಿಸಿದಂಥ ಕಮಲನಾಭ ವಿಠ್ಠಲನೆ ನಿನ್ನ ಸ್ಮರಣೆ 5
--------------
ನಿಡಗುರುಕಿ ಜೀವೂಬಾಯಿ
ಇಷ್ಟು ದಯವುಳ್ಳವನ ಯಾಕೆ ಬರಬೇಡೆಂದಿಇಷ್ಟು ನಿರ್ದಯಳೆ ನೀನು ಪ. ಇನ್ನೆಲ್ಲಿ ಪೋಗಲೆ ರತಿಯಿಲ್ಲದಿದ್ದರೆ ನಿನಗೆ ಪೂಮಾಲೆ ತಾ ಎನೆಸಣ್ಣ ಕಮಲದೆಲೆಯ ಬಣ್ಣದ ಗಿಣಿ ಬರೆದುವ ಸಣ್ಣ ಸೀರೆಯ ಕೊಡುವೆನೆಕಣ್ಣಿಗೆ ಪ್ರಿಯವಾದ ಕಮಲಮಯ ಕುಪ್ಪಸವ ಕರೆದು ಕೈಯಲಿ ಕೊಡುವೆÀನೆಬಿನ್ನಣದಿಂದಲಿ ಬಗೆಬಗೆಯಲಿ ನಿನಗೆ ಬಾಯಮುದ್ದನುವ ಕೊಡುವೆನೆ ಸಖಿಯೆ1 ತಳಿರು ಸುಳಿಗರೆವÀ ರುಮಾಲೆತÀಲೆಯಲ್ಲಿ ಸುತ್ತಿ ಬಾಹನ ಥಳಥಳಿಪ ನ-ವಿಲುಗರಿ ಮುತ್ತಿನ ತುರಾಯವ ಸಿಕ್ಕಿ ತರುಣಿ ನಿಲ್ಲಲಿ ಬಾಹೆನೆ ಸಖಿಯೆ 2 ಉರುಟಾಣೆ ಮುತ್ತುಗಳುಚಿತವಾಗಿವೆ ನಿನ್ನ ಉರುಟು ಕುಚಗಳ ಪಿಡಿವೆನೆಮುದದಿಂದ ನಿನ್ನ ಮುಖ ಕಿರುಬೆವರನೆಒರೆÀಸಿ ಕಸ್ತೂರಿತಿಲಕವನಿಡುವೆನೆಸಿರಿಯರಸ ಹಯವದನ ರಂಗನ ಚರಣವನು ನೆರೆನಂಬಿ ಭಜಿಸು ಸಖಿಯೆ ಸಖಿಯೆ3
--------------
ವಾದಿರಾಜ