ಒಟ್ಟು 2203 ಕಡೆಗಳಲ್ಲಿ , 110 ದಾಸರು , 1414 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ನಿನ್ನಾಜ್ಞದವನೊ ನಾನೆನ್ನನೊಪ್ಪಿಸದೆಬಿನ್ನಹ ಚಿತ್ತೈಸಿ ಎನ್ನ ಪಾಲಿಸೊ ಕೃಷ್ಣ ಪ ಏಳು ಸುತ್ತಿನಕೋಟೆ ಯಮನಾಳು ಮುತ್ತಿಕೊಂಡುಪಾಳು ಮಾಡೇವೆಂದು ಪೇಳುತಿರಲುಆಳು ಸಾಮಗ್ರಿಯ ಅಪಾರ ಬಲಮಾಡಿಕೋಳುಹೋಗದ ಮುನ್ನ ಕೋಟೆ ರಕ್ಷಿಸಬೇಕು 1 ಆರು ಮೂರರ ಬಾಧೆ ಆರು ಎಂಟರ ಬಾಧೆಕ್ರೂರರೈವರ ಬಾಧೆ ಹೋರುತಲಿದಕೋಆರಿಂದ ನಿರ್ವಾಹವಾಗದು ಇವರನುಮೇರೆಲಿಡುವನೊಬ್ಬ ಧೀರನ್ನ ಬಲಮಾಡೊ2 ಲಕ್ಷ ಎಂಭತ್ತು ನಾಲ್ಕು ಜೀವರಾಶಿಗಳೊಳುಸೂಕ್ಷ್ಮದ ಕೋಟೆಂದುಪೇಕ್ಷಿಸದೆಪಕ್ಷಿವಾಹನ ನೀನು ಪ್ರತ್ಯಕ್ಷ ನಿಂತರೆಅಕ್ಷಯ ಬಲವೆನಗೆ ರಕ್ಷಿಸೊ ಸಿರಿಕೃಷ್ಣ 3
--------------
ವ್ಯಾಸರಾಯರು
ನಿರವದ್ಯ ಪ ಸದ್ಗುಣಪೂರ್ಣ ನೀನೇನೊ ಮೂಢ ಅ.ಪ ಬ್ರಹ್ಮಜಿಜ್ಞಾಸದ ಕ್ರಮವ | ನಿರ- ಸಮ್ಯಕ್ ಶೋಧಿಸದೇ ಅಹಂ ಬ್ರಹ್ಮಾಸ್ಮಿ ಎಂಬುವ ಆಮ್ನಾಯ ವಾಕ್ಯಕೆ ಅರ್ಥವ ತಿಳಿಯದೆ 1 ಕಾಕುಮಾಡುತಲರ್ಥ ಪೇಳ್ವುದಧರ್ಮ ಏಕವಾವುದು ಇನ್ನು ಏಕವಾವುದು ಎಂದು ನೀಕಳವಳಿಸುತ ನಿಜತತ್ವವರಿಯದೆ 2 ಆತ್ಮನಾತ್ಮಗಳೆಂದರೇನೊ | ಪರ- ಮಾತ್ಮ ಜೀವಾತ್ಮರೊ ಜೀವದೇಹಗಳೊ ಸ್ವಾತ್ಮಾನುಸಂಧಾನದಿಂದಲಿ ನೋಡ- ಧ್ಯಾತ್ಮ ವಿದ್ಯಾಭ್ಯಾಸ ಮಾಡದೆ ಬಾಯೊಳು 3 ರವಿ ಗಣಪತಿ ಶಿವ ಶಕ್ತಿ | ಭೈ- ರವ ವಿಷ್ಣು ಎಂಬುವ ಷಣ್ಮತಯುಕ್ತಿ ಎವೆ ಮಾತ್ರ ಸ್ವಾತಂತ್ರ್ಯವಿಲ್ಲ ಕೇಳ್ ಸರ್ವಶ- ಬ್ದವುಯಾವನಲ್ಲಿ ಸಮನ್ವಯವರಿಯದೆ 4 ಜೀವ ಜೀವರಿಗೆಲ್ಲ ಭೇದ | ವಿದುಸ್ವ ಭಾವವಾಗಿರುವುದು ಯಾತಕೀವಾದ ಜೀವರೂಪದಿ ಸರ್ವಜೀವರೊಳಗಿದ್ದು ದೇವಸಕಲ ಕರ್ಮಗಳ ಮಾಡಿಸುವನು 5 ಕರ್ಮವೆಂಬುದು ಅವನಿಗೆ ಲೋಪವಿಲ್ಲ ನಿರ್ಮಲ ಸಚ್ಚಿದಾನಂದ ಬ್ರಹ್ಮ ಎಂದು ನೀನೆ ಪೇಳುವೆಯಲ್ಲ ನಿನಗೆ ನಿಜವಿಲ್ಲ 6 ಸೂರ್ಯ | ಚಂದ್ರ ಕಿನ್ನರ ಸಿದ್ಧ ಸಾಧ್ಯ ನರತಿರ್ಯಕ್ ಪಶುಪಕ್ಷಿ ಕೀಟಾದಿ ನಾಮಗಳು ಪರಮಾತ್ಮನಲಿ ಸಮನ್ವಯವರಿಯದೆ 7 ಮಾಯಾ ಪ್ರಪಂಚವಿದೆನ್ನುತ | ನಿ- ಮಾಯೆಯಧಿಷ್ಠಾನದೊಳನಂತ ಜೀವನಿ- ಕಾಯವು ಗುಣಗಳಿರುವ ಮರ್ಮವರಿಯದೆ 8 ಸಾರ ಭೇದವಬದ್ಧ ಅಭೇದ ನಿಶ್ಚಯವೆಂದು ವಾದಿಸುವುದಕೇನಾಧಾರ ನಿನಗುಂಟೊ 9 ಜೀವಬ್ರಹ್ಮೈಕ್ಯವೆ ಮುಕ್ತಿ | ವೇ- ದಾವಳಿಗಳ ಪರಮಾರ್ಥದ ಉಕ್ತಿ ಜೀವನಿಂದೇನಾಗುವುದೆಂಬುದರಿಯದೆ 10 ದ್ವಾಸುಪರ್ಣವೆಂಬುವುದಕೆ | ವಿಷ- ಯಾಸಕ್ತ ಜೀವ ಆತ್ಮನು ಸಾಕ್ಷಿಯದಕೆ ನೀಸರ್ವೋತ್ತಮನಾದರೆ ಇನ್ನು ಮಹದಾದಿ ಈ ಸೃಷ್ಟಿ ಸ್ಥಿತಿಲಯವೇತಕೆ ತಿಳಿ ಜೋಕೆ 11 ಅಂಧ ಪರಂಪರವಾದ | ಬಿಟ್ಟು ಚಂದಾಗಿ ಪರಿಶೋಧಿಸು ಭÉೀದಾಭÉೀದ ತಂದೆತಾಯಿಗು ಮಗನಿಗೂ ಎಷ್ಟು ಭÉೀದ ಆ- ಪರಿ ತಿಳಿದರೆ ನಿರ್ವಾದ 12 ಪೂರ್ವೋತ್ತರ ವಿರೋಧವಿಲ್ಲ | ದಂತೆ ಸರ್ವಶೃತಿಗಳರ್ಥ ತಿಳಿದು ನುಡಿಸೊಲ್ಲ ಗರ್ವವೇತಕೆ ನಿನಗಿದರೊಳೇನಿಲ್ಲ ನೀ ಸರ್ವಜ್ಞನೊ ಕಿಂಚಜ್ಞನೊ ನೋಡು ದೃಢಮಾಡು 13 ಯೋಗ ಒದಗಿದಾಗ ಒಂದೆ ಎಂಬುವರೆ ಈಗೇನು ಆಗೇನು ಇಲ್ಲೇನು ಉಂಟೆ ನಾ- ವಾಗಲು ಜೀವರಿಗೆ ಹರಿಕರ್ತನಾಗಿರೆ 14 ಕಾಲಕರ್ಮ ಸ್ವಭಾವ ಜೀವ | ಹರಿಯ ಆಲಸ್ಯ ಬಿಟ್ಟು ಅವನಿಗೆ ದಾಸನಾಗದೆ 15 ಆಲೋಚಿಸಿದರರ್ಥ ನಿಜವಾಗಿ ತಿಳಿಯದೆ 16 ಜ್ಞಾನವೆ ನಾನು ಕರ್ಮವೆ ಮಿಥ್ಯವೆಂದು ನೀನಾಡುವುದಕೇನು ನೆಲೆ ಮೂಲ ಯಾವುದು ಸ್ವಾನುಭವವೋ ಶಾಸ್ತ್ರವೊ ಮನಕೆ ತೋರಿದ್ದೊ 17 ಹೋಮ ಜಪವು ಸ್ನಾನ ದಾನ | ನಿತ್ಯ ಭೃತ್ಯ ನ್ಯಾಯವರಿಯದವನು ಶುದ್ಧ ತತ್ವಾರ್ಥಿ ಎನಿಸುವನೆ 18 ಕರ್ತನು ನೀನೆಂದು ಭೃತ್ಯನು ನಾನೆಂದು ತೀರ್ಥಪಾದನ ದಿನದಿನದಿ ಸಂಸ್ತುತಿಸದೆ 19 ಪಾದ ವನಜಕೊಪ್ಪಿಸಿ ಸಂಸಾರದ ಕರಕರೆಯ ಮನದಿ ಲೆಕ್ಕಿಸದೆ ಚಿಂತನಗೈದು ಸರ್ವತ್ರ ಘನಮಹಿಮನ ದಿವ್ಯಗುಣರಾಶಿ ಪೊಗಳದೆ 20 ಹೊರಗಣ್ಣ ಮುಚ್ಚಿ ಮೋದದಲಿ | ಒಳ- ಗಿರುವಾಧಾರಾದಿ ಚಕ್ರಗಳ ಸ್ಥಾನದಲಿ ಸರಸಿಜಭವ ಶಂಕರಾದಿ ಸುರರ ನೋಡಿ ತರತಮವಾಗಿ ಮುಂದಿನ ಪರಿಯ ತಿಳಿಯದೆ 21 ಮಂಗಳ ಮೂರ್ತಿಯ ನೋಡಿ ಕೊಂಡಾಡಿ ಅ- ನಂಗಗೆ ಸಿಲುಕದೆ ಅರ್ಥಿಯ ಪೊಂದದೆ 22 ಎಪ್ಪತ್ತೆರಡು ಸಹಸ್ರನಾಡಿ | ಗಳೊ- ಳೊಪ್ಪುವ ಭಗವದ್ರೂಪಗಳನು ನೋಡಿ ಅಪ್ಪ ನೀನೆಂದು ಭಕ್ತಿಯಲಿ ಕೊಂಡಾಡಿ ಪುನ- ರಾವರ್ತಿರಹಿತ ಶಾಶ್ವತ ಸುಖಿಯಾಗನೆ 23 ವಿಪರೀತ ಮತಿಪುಟ್ಟದಂತೆ | ಧ್ಯಾನ- ಗುಪಿತವಾಗಿರುತ ಜನರಿಗೆ ಹುಚ್ಚನಂತೆ ಅಪವರ್ಗಾಪೇಕ್ಷಯಿಂ ನಿಷ್ಕಾಮಿಯಾಗದೆ24 ಆಪಾದಮಸ್ತಕ ದೇಹ | ದಿಸು ರಾಪದಜನಕ ಶ್ರೀಗುರುರಾಮವಿಠಲ ವ್ಯಾಪಾರವೆಲ್ಲ ಮಾಡಿಸುವನೆಂದರಿತರೆ ಸಾಫಲ್ಯನಾಗಿ ಜೀವನು ಧನ್ಯನಾಗುವ 25
--------------
ಗುರುರಾಮವಿಠಲ
ನಿರುತದಿಂದಿಳೆಯೊಳು ಅರಸಿ ನೋಡಲು ಕಾಣೆ ಗುರು ಸತ್ಯಜ್ಞಾನರಿಗೆ ಪ ಸರಿ ಇಲ್ಲಿವರ ಚರಣಕಮಲವ ನಿತ್ಯ ದುರಿತ ಹರಿಪರ ಅ.ಪ ಸತ್ಯ ಜ್ಞಾನ ಗುರೋ ನೀ ಗತಿ ಎಂದವರ ನಿತ್ಯದಿ ಬಿಡದೆ ಕಾಯ್ವ ಅತ್ಯಾದರದಿ ಮಧ್ವಮತ ಸ್ಥಾಪಕರಾಗಿ ಮಿಥ್ಯಾ ಜ್ಞಾನಗಳಳಿದ | ಮೆರೆದ 1 ಸತ್ಯಧೀರರಿಂದ ಯತ್ಯಾಶ್ರಮ ಪಡೆದು ರತ್ಯಾದಿ ವಿಷಯವ ಬಿಟ್ಟು ಯತ್ಯಾಶ್ರಮೋಕ್ತ ಕೋಪತ್ಯಾಗಾದಿಗಳನು ವ್ಯತ್ಯಾಸಿಲ್ಲದೆ ನಡೆಸಿ | ಶೋಭಿಸಿ2 ಗುರು ಆರಾಧನಿ ದಿನ ತೀರ್ಥವ ಕೊಡುತಿರೆ ವರ ಸುವಾಸಿನಿ ಒಬ್ಬಳೂ ಕರವ ನೀಡಲು ಬಂದು ಅರಿತು ವಿಧವತ್ವ ನೆರಪೇಳ್ದರಪರೋಕ್ಷದಿ | ಭೂತಳದಿ 3 ಭರದಿಂದ ಸುರಿಯುತ್ತಿರೆ ಮೊರೆಯಿಡೆ ಎಡಬಲದವರು ಅದನು ಕೇಳೆ ದೂರಸ್ಥಳಿಹಳೆಂದ್ಹೇಳಿರು | ಪಂಕ್ತಿಯಲಿ 4 ಈ ರೀತಿಯಿಂದಲಿ ತೋರಿಸಿ ಮಹಿಮೆಯ ಇರಿಸೆ ಮಂತ್ರಿಸಿ ಫಲವ ಭರದಿ ಸುರಿವ ಮಳೆ ತ್ವರಿತದಿ ನಿಲ್ಲಲು ಅರಿತು ವಿಚಾರಿಸಲು | ನಿಜವಿರಲು5 ಪತಿ ಪೂಜೆ ಸಾವಧಾನದಿ ಮಾಡಲು ಇವರ ಮನೋಧಾರಡ್ಯ ಜವದಿ ಜಯಾಮುನಿ ಅವನಿಗರುಹಬೇಕೆಂದು | ತಾ ಬಂದು 6 ಬರುತಿರೆ ಉರಗಾಕಾರದಿಂದಲಿ ಬಂದು ಅರಿಯದ ಜನರು ಕೂಗೆ ಮಾರಮಣನ ಧ್ಯಾನ ಜರಿಯದೆ ಅವರಿಗೆ ತೋರಿದರಭಯವನು | ವಿಚಿತ್ರವನು 7 ಭೂವೈಕುಂಠದಿ ವಿಶ್ವರೂಪದರ್ಶನಕ್ಹೋಗೆ ಮಾರ್ಗವ ಕೊಡದಿರಲು ಭಾವದಿ ಧ್ಯಾನಿಸೆ ಶ್ರೀ ವಲ್ಲಭನಾಮ ಧರಿಸದೀರಾಧರಿಸೇ | ಧರಿಸಿ 8 ಈ ವಿಧ ಮಹಿಮೆಯ ತೋರಿಸಿ ಜಗದೊಳು ಗೋದಾತೀರದಿ ಶೋಭಿಪ ಅವನಿಪ ಮಹೇಂದ್ರ ಭುವನ ಶ್ರೀ ನರ ಹರಿ ನಿನ್ನ ಮಾಘಸಿತದಿ | ಸ್ಮರಿಸಿದ9
--------------
ಪ್ರದ್ಯುಮ್ನತೀರ್ಥರು
ನಿಲುನಿಲು ಘನಲೀಲಾ ನಲಿನಲಿ ಗೋಪಾಲ ಪ ಕಿಲಕಿಲನಗು ಬಾಲಾ ಒಲಿಒಲಿ ಶ್ರೀಲೋಲಾ ಅ.ಪ ಅಡಿಯಿಡು ಸಡಗರದಿ ನುಡಿನುಡಿ ಕಡುಮುದದಿ ಪಿಡಿಕೊಳಲನು ಕರದಿ ನುಡಿಸಿ ಮುದ್ದಾಡುವೆ ನಾನು 1 ತೊದಲುನುಡಿಗೆ ನಲಿವೆನು ಬಾ ಬಾ ಚದುರತನವ ನೀ ತೋರುತೆ ಬಾ ಬಾ ಮುದದಿ ಕುಣಿಯುತೆ ಮಣಿಯುತೆ ಬಾ ಬಾ ಇದೆಗೋ ಎತ್ತಿಕೊಂಡೊಯ್ವೆನು 2 ಜೋಗುಳಗಳ ಹಾಡಿ ರಾಗದಿ ಕೊಂಡಾಡಿ ಬಾಗಿ ಬಿಗಿದು ಕುಣಿದಾಡಿ ನಾಗಸಂಪಿಗೆ ಸೂಡಿ3 ಸಂತಸದಿಂದೋಡು ಅಂತರಿಕ್ಷವ ನೋಡು ಕಂತುಕವೆಸೆದಾಡು ಶಾಂತಿಯ ಮನಕೆ ಕೊಡು 4 ಚಂದಿರನಂದದ ಕಂದಾ ನೊಂದಿಹ ಮನಕಾನಂದಾ ಸುಂದರ ಮುಖಾರವಿಂದಾ ಅಂದದ ನಗು ಮಿಗಿಲಾನಂದಾ5 ಗೋಲಿಯನಾಡುವೆ ಬಾ ಗಾಲಿಯನೋಡಿಸು ಬಾ ಬಾಲಭಾಷೆಯ ಪೇಳುವ ಬಾ ಲೀಲೆಯನೀಕ್ಷಿಸಿ ದಣಿವೆ 6 ಕುಣಿ ಕುಣಿ ಅರಗಿಣಿಯೆ | ಅಣಕಿಸು ಮನದಣಿಯೆ ಮಣಿ ಕಣ್ಮಣಿಯೆ | ತಣಿಯುವ ಮನಕೆಣೆಯೆ7 ಬಣ್ಣದ ಹೂಮುಡಿವೆ ಹಣ್ಣನು ಮೆಲಗುಡುವೆ 8 ನೊರೆಹಾಲ್ಕುಡಿ ನೀಲಾಂಗ ಮರೆಹೊಕ್ಕರ ಪೊರೆ ರಂಗಾ ಕರುಣಿಸೊ ಶಿರಬಾಗುವೆನಾಂ ಮಾಂಗಿರಿಯ ರಂಗಾ 9
--------------
ಅಸೂರಿ ರಾಮಸ್ವಾಮಿಅಯ್ಯಂಗಾರ್
ನಿಲ್ಲು ನಿಲ್ಲೆಲೋ ನಿನ್ನ ಚಲ್ವಮೋರೆಯ ನೋಡಿ ಕಳ್ಳ ನಿನ್ನಯ ಬಿಡೆನೋ ಶ್ರೀ ಕೃಷ್ಣ ಪ ಬೆಣ್ಣೆ ಪಾತ್ರೆಯೊಳೇಕೆ ನಿನ್ನ ಕರವನಿಟ್ಟೆ ಸಣ್ಣತನವಿದಲ್ಲವೇ ನಂದಕುಮಾರ ಅ.ಪ ಕೋಮಲಾಂಗಿಯೇ ಇಂಥ ಸಾಮಾನ್ಯ ವಿಷಯದ ನೀ ಮರೆತುದು ತರವೇ ಯೋಚಿಸಿ ನೋಡು ಈ ಮೃದುವಸ್ತುವು ಕಲ್ಲು ಎದೆಯ ನಿನ್ನ ಧಾಮದಲ್ಲಿರಬಹುದೇ ಯೋಚಿಸಿ ನೋಡು 1 ನಾ ಕರುಣಾಮಯ ಲೋಕ ಸುಂದರನೆಂದು ಏಕೆ ಹೆಮ್ಮೆಯ ತೋರುವೆ ಗೋಕುಲನಾಥ ಆ ಶಕಟನ ಪುಡಿ ಮಾಡಿ ಪಾದಗಳಿಂದ ನೀ ಕೋಮಲನೆಂಬುದ ನಾ ಕಾಣೆನೇ 2 ಕೇಳಿ ಕೋಪಿಸಬೇಡ ಬಾಲನೆನ್ನನು ಎತ್ತಿ ಲಾಲನೆಯನು ಮಾಡಿದಿ ಪ್ರಸನ್ನಳು ಬಾಲೆ ನಿನ್ನಯ ಇಷ್ಟು ಸ್ಥೂಲ ಕುಚವು ತಗಲಿ ಕಾಲು ಕಠಿಣವಾಯಿತೇ ಪೇಳುವೆ ನಿಜ 3
--------------
ವಿದ್ಯಾಪ್ರಸನ್ನತೀರ್ಥರು
ನೀ ಎನ್ನ ಕಾಯಲಿ ಬೇಕೊ - ಘನ್ನ ಮಹಿಮಾ ಪ ಬನ್ನ ಬಡಿಸುವದು ಅನ್ಯಾಯ ನಿನಗಿದಾಪನ್ನಪಾಲ ಅ.ಪ ಘನ್ನ ಮಹಿಮೆಯತೋರಿ - ಎನ್ನ ಕಾಯಲಿ ಬೇಕು ನಿನ್ಹೊರತು ಗತಿ ಎನಗೆ - ಮುನ್ನಾರು ಗುರುವೆ 1 ಎನ್ನ ಮಾತನು ನೀನು - ಚನ್ನಾಗಿ ಚಿತ್ತೈಸಿ ಅನ್ಯಜನರಾಬಾಧೆ - ಮುನ್ನ ಕಳೆಯ ಬೇಕೊ 2 ಘನ್ನ ಶಿರಿ ಕೃಷ್ಣನು ತನ್ನ ಸಖನಿಗೆ ಮಹಾ ಉನ್ನ ತೈಶ್ವರ್ಯವಿತ್ತವ - ನನ್ನ ಕಾಯ್ದ ತೆರದಿ 3 ಇನ್ನು ಪೇಳುವುದೇನೊ ಗುರು - ರನ್ನ ಭವದಾಶ್ರಮವು ಇನ್ನು ತಿಳಿಯದೆ ನಿನಗೆ -ಘನ್ನ ಸರ್ವಙ್ಞರಾಯಾ 4 ಸನ್ನುತಜನಪ್ರೀಯ - ನಿನಗೆ ಮೊರೆಯಿಡುವೆ ಘನ್ನ ಗುರು ಜಗನ್ನಾಥ ವಿಠಲ ದೂತಾ ದಾತಾ 5
--------------
ಗುರುಜಗನ್ನಾಥದಾಸರು
ನೀ ಪಾಲಿಸದಿರಲು ನಾ ಪೋಗುವುದು ಎತ್ತ ನೀ ಪೇಳೊ ಪರಮ ಪುರುಷಾ ಅಗಣಿತ ನಾಮ ಸುರ ಪ್ರೇಮ ಸ್ವರ್ಣ ಗಿರಿವಾಸ ನರಕೇಶ ಭೂಷಾ ಪ ಉದರ ಚಿಂತಿಯಲಿ ಉದಯದಲಿ ಯೆದ್ದು ಅವರಿವರ ಸದನದಲ್ಲಿಗೆ ಹೋಗದೆ ಮೃದು ವಾಕ್ಯವಾಡದಲೆ ಮದ ಗರ್ವ ಬಲದಿಂದ ಎದುರಾದವರ ಜರಿದೆ ಮನಸಿನ ಕ್ಲೇಶದ ಪರಸುದತಿಯರನೀಕ್ಷಿಸಿ ವಿದಿತ ಕರ್ಮಗಳ ತೊರೆದೆ ಒದಗಿ ಬಂದ ಪುಣ್ಯ ಬರಿಗೈದು ಪಾಪದ ಹುದಲೊಳಗೆ ಬಿದ್ದು ಸಂಪದವಿಗೆ ದೂರದವನಾ1 ಉತ್ತಮರ ನಿಂದಿಸಿದೆ ಉಚಿತಾರ್ಥ ತಿಳಿಯದಲೆ ಹೆತ್ತವರನ್ನ ಜರಿದೆ ಹತ್ತೆಗರೆದು ಪರಿಪಾಲಿಸಿದ ದಾತರನು ಹೊತ್ತಾಕೆ ಪ್ರೀತಿ ಪೇಳುವೆ ಮತ್ತೆ ಧರ್ಮವೆಯಿಲ್ಲಾ ಮಹಾಕೃಪಣನಾಗಿ ಪರ ವಿತ್ತಾಶೆ ಪೋಗಿ ಮುಳವೆ ಚಿತ್ತಪಲ್ಲಟವಾಗಿ ವಿಷವೆಂಬ ಹಾವಿನ ಹುತ್ತಿನೊಳು ಬಿದ್ದು ಪುನಿತನಾಗದವನಾ 2 ಗುರು ನಿಂದಕರ ನೋಡಿ ಸರವಾಗಿ ಪೋಗಳುವೆನೊ ವೇದ ಸಮ್ಮತವೆ ಬಿಟ್ಟು ಮರೆವೆ ನಿನ್ನಯ ಸ್ಮರಣೆ ಗತಿಗೆ ಸಾಧನವೆಂದು ಅರಿದರಿದು ಬುದ್ಧಿಗೆಟ್ಟು ಹರಿವಾಸರದುಪವಾಸ ಮಾಡುವ ಜನರಿಗೆ ಮುರಳಾಡಿ ಮುಟ್ಟಿಯಲಿಟ್ಟು ಜಾಗರ ತೊರೆದು ಹಿರಿ ಪಾಮರನಾಗಿ ಹರಣ ಸ್ಥಿರವೆಂದು ಮದುಕರಿಯಂತೆ ತಿರುಗುವೆ ನಾ3 ಕಾಸಿಗೆ ಕಾಸು ಘರ್ತಿಸಿ ಗಳಿಸಿ ಬಿಡದೆ ಮೀಸಲಾ ಪದಾರ್ಥವೆಂಬೆ ದೋಷಕ್ಕೆ ಗುರಿಯಾಗಿ ದುರ್ಜನರ ಒಡಗೂಡಿ ರಾಸಿ ದುರನ್ನ ಉಂಬೆ ಆಶೆಯನು ತೊರಿಯದಲೆ ಉಪರಾಗ ಪರ್ವದಲಿ ಕಾಸು ದಾನವನು ಕೊಂಬೆ ಲೇಸಾದರೆ ಹಿಗ್ಗಿ ಹಾರೈಸುವೆನು ಇಷ್ಟು ಕ್ಲೇಶ ಬಂದರೆ ದೈವವೆಂದು ದೂಷಿಸುವೆನಾ4 ಒಂದೇ ಎರಡೇ ಎನ್ನ ಅಪರಾಧ ಪೇಳಿದರೆ ಎಂದೆಗೆಂದಿಗೆ ಸವಿಯದು ನೊಂದು ದುಶ್ಚಿತ್ತದಲಿ ನೀನೆ ಗತಿ ಎಂದು ಬಾಗಿಲ ಕಾಯಿದುದು ಬಂದು ಮಾತುರದಲ್ಲಿ ಬಲು ದಯಾಳು ಎನ್ನ ಸಂದೇಹವನು ತೊಡೆದು ಮುಂದಾದರೂ ಭವದ ಅಂಧ ಕೂಪದೊಳಿಡದೆ ಪೊಂದಿಸುವ ನಿನ್ನವರೊಳಗೆ ವಿಜಯವಿಠ್ಠಲ ಎನಗೆ 5
--------------
ವಿಜಯದಾಸ
ನೀ ಬುದ್ಧಿ ಕೊಡದಿರಲು ಮನುಜ ಪಶುವೊ ಜೀವ ಪಶುವೊ ಪ ಶ್ರೀ ಭೂಮಿ ದುರ್ಗೇಶ ಗೋವಿಂದ ಪರಿಪೂರ್ಣ ಅ.ಪ ಜಡಜನ್ಮದಿಂದಲೆ ದ್ವಿಜ ಜನ್ಮ ಬಂದಿಹುದು ಒಡೆಯಾ ನಮ್ಮೆತ್ನವೇ ಸತ್ಯ ಪೇಳೊ ಕಡುನಿದ್ರೆಯಲಿ ಜೀವ ನಿಶ್ಚೇತನಾಗಿರಲು ಬಿಡದೆ ದಿನದಿನದಲ್ಲಿ ಎಚ್ಚರಿಕೆ ಯಾರಿಂದ 1 ಸೃಷ್ಟಿಗೆ ಬರಲಿನ್ನು ಜೀವ ಯತ್ನವು ಉಂಟೆ ಸೃಷ್ಟಿ ಸ್ಥಿತಿ ಲಯ ಕರ್ತ ನೀನೆ ತಿಳಿಯೊ ಮೊಟ್ಟ ಮೊದಲಿಗೆ ನಿನ್ನ ವಶನಾಗಿ ನಾನಿರಲು ಸೃಷ್ಟಿಯಲಿ ನಮ್ಮೆತ್ನ ಕಲ್ಪಿಸುವುದುಂಟೆ 2 ಇಂತಿರಲು ನಿಜತತ್ವ ಎಂಥ ಶಕ್ತಿಯು ನಮಗೆ ಸ್ವಾಂತ ಮಂಗಳ ಸುಗುಣ ನಿಧಿಯೆ ಪೇಳೊ ಭ್ರಾಂತಿ ಜೀವನ ಬಿಡಿಸಿ ಜಯೇಶವಿಠಲ ಶಾಂತಿ ಪಾಲಿಸು ನಮಗೆ ಅಂತರಾತ್ಮಕ ದೇವ3
--------------
ಜಯೇಶವಿಠಲ
ನೀನಾರು ಪೇಳೆನಗೆ ನಿರುಪಮ ಬಲಪೂರ್ಣ ಮಾನವರೊಳೀ ಪರಿಯ ಶೌರ್ಯವುಂಟೆ ಪ ದಾನವಂತಕನೆಂದು ಮಾನಸಕೆ ತೋರುತಿದೆ ಪ್ರಾಣಿಗಳಿಗೆಲ್ಲಾ ನೀ ತ್ರಾಣದಾಯಕನೆ ಅ.ಪ. ಆಕಾರದಲಿ ನೋಡೆ ನರವೇಷಧಾರಿ ಪ ರಾಕ್ರಮದಿ ಪರಿಕಿಸಲು ಪರಮಪುರುಷ ಶ್ರೀಕಂಠಚಾಪವನು ಖಂಡಿಸಿದ ಕಡುಧೀರ ಕಾಕುತ್ಸ್ಥ ಶ್ರೀರಾಮನೆಂದು ತೋರುವುದೆನಗೆ 1 ಕೋದಂಡಧರ ನಿನ್ನ ಕ್ರೋಧಾಗ್ನಿಗಂಜುತ ಮ ಪಥ ಬಿಡಲು ಲಂಕೆಗೈದಿ ಆ ದಶಾಸ್ಯನ ಕಂಠಪಂಕ್ತಿಯನು ಕಳಚಿಸಿದ ಆ ದಾಶರಥಿಯು ನೀನಲ್ಲದೆ ಬೇರಿಲ್ಲ 2 ಲೋಕಕಾರಣ ನೀನೆ ಲೋಕೇಶ ಲೋಕಧರ ಲೋಕಾಂತರಾತ್ಮಕನು ಲೋಕಜನಕ ಲೋಕರಕ್ಷಕ ಸಕಲ ಲೋಕನಿಯಾಮಕನು ಏಕಮೇವಾದ್ವಿತೀಯನು ಕರಗಿರೀಶನು ನೀನೆ 3
--------------
ವರಾವಾಣಿರಾಮರಾಯದಾಸರು
ನೀನೆ ನಾನೆಂಬುವ ಮಾನವಾಧಮನನ್ನು ಏನು ಮಾಡಲು ಬೇಕು ನಾನರಿಯೆನೊ ರಂಗ ಪ ದಾನವಾರಿಯೆ ಎನ್ನನೇನೆಂದರೂ ಅನಲಿ ನಾ ನಿನ್ನ ನಿಂದಿಸುವರಾನನವ ನೋಡೆನೋಅ.ಪ. ಆನೆಕಾಲಿಗೆ ಕಟ್ಟಿ ಬೀದಿಯೊಳೆಳೆಸಲೆ ಕಾನನಕೆ ಕೊಂಡೊಯ್ದು ಕೈಕಾಲು ಕಡಿಸಲೆ ಮೀನು ಮೊಸಳೆಗಳಿರುವ ಮಡುವೀಲಿ ನೂಕಿಸಲೆ ನೇಣುಗಳಿಂದಲಿ ಬಿಗಿದು ಶೂಲಕೇರಿಸಲೆ 1 ಜೀವದೊರಸೆ ಅವನ ಹೂಳಿಸಿರೆಂದ್ಹೇಳಲೆ ಹಾವುಗಳ ಹಿಂಡಿನೊಳು ನೂಕಿರೆಂದ್ಹೇಳಲೆ ನೋವು ಬಹಳಾಗಲು ಸೂಜಿಗಳಿಂದಿರಿಸಲೆ ಪಾವಕನೊಳು ಕಾಲ್ಕಟ್ಟಿ ಎತ್ತಿ ಹಾಕಿಸಲೇ 2 ಗಿರಿಯ ತುದಿಯಲಿ ನಿಲಿಸಿ ಜರಿಯೊಳಗೆ ನೂಕಿಸಲೆ ಭರದಿ ಕಣ್ಕಟ್ಟಿ ಕಾದತೈಲದೊಳಿಡಿಸಲೆ ಸಿರಿಹರಿಯೆ ಪೇಳೆಂದು ರಂಗೇಶವಿಠಲನೊಳು ತರಣಿನಂದನ ತಾನು ಬಿನ್ನೈಸಿದನಂದು 3
--------------
ರಂಗೇಶವಿಠಲದಾಸರು
ನೀನೆ ಮಾಡಿದ ಲೀಲೆ ಬಲು ಸುಖವೊ | ಆನೇನು ದು:ಖವನು ಬಡುವುದಿಲ್ಲವೋ ಜೀಯ |ಪ ತೋಟವನು ಮಾಡಿಸಿ ಅದರೊಳಗೆ ಒಂದು ಫಲ | ನಾಟಿಸಲು ಬೆಳೆದ ಫಲ ಪಕ್ವವಾಗೆ | ನೀಟಾದ ಫಲವೆಂದು ಅರಸು ಕೊಯ್ ತರಿಸಲು ತೋಟಿಗಾಗೇನು ದು:ಖ ಅರಸಿನಿಂಗೇನೈಯ1 ನಿನ್ನ ಸಂಕಲ್ಪನೆ ಸ್ಥಿರವಾಗಿ ಇದೆ ಇದೆ ಅನಂತ ವೇದಗಳು ಪೊಗಳೂತಿವಕೊ ಪನ್ನಗಶಯನನೆ ನೀನು ಮಾಡಿದ ಕ್ಲುಪ್ತ ಅನ್ಯಥಾವಾಗುವದೆ ಅನುಭವಾದಿಗಳಿಗೆ 2 ಸುಖ ದು:ಖವೆ ಎರಡು ನಿನ್ನ ವಶವಾಗಿದೆ ಸಖನಾಗಿ ಸುಖ ಉಣಿಸಲು ಹಿಗ್ಗುವೆ ದು:ಖ ತಂದಿತ್ತರೆ ಅಳಲಿ ಬಳಲುವದ್ಯಾಕೆ ಅಖಿಳ ನೀನಾವದಿತ್ತದೇ ಬಲು ಲೇಸು 3 ನೀನೆ ಕಲ್ಪಿಸಿದರೆ ಸೈರಿಸಲಾರದೆ ವೇಗ | ನಾನು ವ್ಯಧಿಕರಣ ಪೇಳಿದರಾಯಿತೆ | ಆನಂದಕೆ ಹ್ರಾಸ ಬರುವುದೆ ಶಾಶ್ವತ | ಏನಾದರೇನು ನೀನಾಡಿದಾಟವೆ ಸಮ್ಮತ | 4 ಸತ್ಪಾತ್ರರಾ ನೋಡಿ ದಾನವಿತ್ತರೆ ಅವಗೆ | ಉತ್ತಮಾ ಪದ ಉಂಟು ಪುಶಿಯಲ್ಲವೋ | ಸತ್ಪಾತ್ರ ನೀನೆಂದು ಪುತ್ರಾಖ್ಯ ಧನವಿತ್ತೆ | ಉತ್ತುಮಾ ಗತಿ ನೀಯೋ ವಿಜಯವಿಠ್ಠಲ ಕರುಣಿ 5
--------------
ವಿಜಯದಾಸ
ನೀನೆನಗೆರವೆ ನಾನಿನ್ನೆಂತಗಲುವೆಬಾ ನನ್ನ ತನುವೆ ಸದ್ಗುರುವಿಗೊಂದಿಸುವರೆ ಪಮೊದಲಿಗಮಿತ ದುಷ್ಟತನುಗಳ ಸಂಗದಿಕುದಿದು ಸಂಸಾರಾಗ್ನಿಯೊಳು ಬಳಲಿದೆನುಅದರಿಂದ ನಿನ್ನ ನಿಗ್ರಹಿಸಿದೆನಲ್ಲದೆಪದರದಿರೆನ್ನೊಳು ಪಡೆಯೆ ನಿನ್ನೊಂದನೂ 1ಗುರುಸೇವೆಗಲಸದೆ ಛಳಿಮಳೆಯೆನ್ನದೆಬರಿಯ ಬಯಲ ಸಂಸಾರ ಭೋಗದಲಿಎರಗದಿರೆನ್ನ ದಾರಿಗೆ ಬಾ ನಿನ್ನಾರೈಕೆುರಲೆನ್ನೊಳಿನ್ನು ತಪಿಸಿ ಕಂಗೆಡಿಪುದಿಲ್ಲ 2ಶ್ರವಣ ಸುಖದಿ ನನ್ನ ಬೆರೆದು ಬೇರಾಗದೆಭವಶರಧಿಯ ದಾಂಟುನಂತೆ ನೀ ಮಾಡುವಿವರಿಸಿ ಹರಿಗುಣ ಕಥೆಗಳನೆಮ್ಮೊಳುಕವಿದಿಪ್ಪ ತಮವ ತೊಲಗಿಸಿಕೊಂಬ ನಾವಿನ್ನು 3ನಿನ್ನಿಂದ ಸಂಸಾರ ವಿಷಯ ಸುಖದ ಲಾಭನಿನ್ನಿಂದ ಕೃಛ್ರಾದಿ ತಪಸಿನ ಲಾಭನಿನ್ನಿಂದ ಸತ್ಕರ್ಮತೀರ್ಥಯಾತ್ರೆಯ ಲಾಭನಿನ್ನಿಂದ ವೈರಾಗ್ಯ ಭಾಗ್ಯದ ಲಾಭ 4ನಿನ್ನೊಳಗಿರುವಿಂದ್ರಿಯಂಗಳಿಂದ್ರಿಯಗಳೊಳುಣ್ಣುವ ಮನ ಮನದೊಳು ಕೂಡ್ವ ಜೀವಎನ್ನುವರೆನ್ನನೆನ್ನಿರವನರಿಯೆನಿದನಿನ್ನಿಂದ ಗುರುಕೃಪೆವಡೆದು ತಿಳಿಯಬೇಕೂ 5ನೆವವಿಲ್ಲದುಪಕಾರಗೈವೆ ನೀನೆನಗಾಗಿವಿವಿಧ ಭೋಗದ ಸುಖವೆನಗೆ ನಿನ್ನಿಂದವಿವರಿಸೆ ನಿನಗೆ ಉಂಟು ಲಾಭವು ಮತ್ತೆನವೆವೆಯಲ್ಲದೆ ವೃದ್ಧಿಯಾಗುವೆಯಾ ಪೇಳು 6ನಿನ್ನಿಂದ ಸುಖಬಟ್ಟು ನಿನ್ನ ಬಾಳಿಸಲಾರದೆನ್ನನುಳುಹುವದೆಂತನ್ಯಾಯ ಸುಖವುಉಣ್ಣುವರಾರಿದನುಂಡು ಬದುಕಿರುವಅಣ್ಣನ ತಿಳಿಯಲು ಗುರುವೆ ಗತಿ ಕಂಡ್ಯಾ 7ವಂದಿಸಿಯೂಳಿಗಗೈವಲ್ಲಿಯಲಸದೆದಂದುಗ ಸುಖಕಾಗಿ ದಾರಿದೆಗೆಯದೆಒಂದಾಗಿ ಯೆನ್ನೊಳಿದ್ದರೆ ನನ್ನ ಸುಖವ ನಾಹೊಂದಲು ನಿನಗಾನಂದವಪ್ಪುದೆ ಕೇಳು 8ಮರುಗಿ ಮನದಿ ನಮ್ಮ ಮರವೆಯಾಟವ ಕಂಡುತಿರುಪತಿ ವೆಂಕಟರಮಣನು ತಾನೆಗುರುವಾಸುದೇವಾರ್ಯನಾಗಿಹನಾತನಚರಣವ ಮರೆಯೊಕ್ಕು ಬದುಕುವ ನಡೆಬೇಗ 9ಕಂ||ಜೀವನ ನುಡಿಯನು ಲಾಲಿಸಿಭಾವದಿ ಸರಿಬಂದ ಬಗೆಯ ಕಾಣದೆ ಗರ್ವದಿತಾವೊಲಿವರೆ ಮನಬಾರದುನೀವೊಬ್ಬನೆ ಸಾಧಿಸೆನೆ ಮನ ಕೆರಳಿ ನುಡಿದುದೂ
--------------
ತಿಮ್ಮಪ್ಪದಾಸರು
ನೀನೇ ಕಾಪಾಡಬೇಕು ನಿರುತವು ಬಿಡದೆಯ- ಜ್ಞಾನಾಬ್ಧಿಯ ದಾಟಿಸು ಸೀ- ಕಮಲ ಭೃಂಗ ಶುಭಾಂಗ 1 ಸುಗ್ರೀವನ ಮಂತ್ರಿವರ ದ- ಶಗ್ರೀವನ ಗುದ್ದಿದವನೆ ಶತ್ರುನಿಕರವಂ ಶೀಘ್ರದಿ ಗೆಲುವಂದದಲಿಯ- ನುಗ್ರಹವ ಮಾಡುತಲೆಮ್ಮ ಕೈಪಿಡಿ ಹನುಮ 2 ತ್ವರಿತವತಿ ನಿಧಾನವಲಸಿಕೆಗಳನು ಬಿಡಿಸಿ ಪಿರಿಯರು ಪೇಳಿದ ಪರಿಯಲಿ ನೆರೆನಡೆವಂದದಲಿ ಸುಮತಿಯನು ಕೊಡು ಹನುಮ3 ಹೊರಗಿನ ಶತ್ರುಗಳಂ ವಾ- ಕ್ಪೌರುಷದಿ ವೋಡಿಸಲುಬಹುದು ಒಳಗಿನ ಕಾಮ್ಯಾ ದ್ಯರ ಗೆಲುವುದಕೆ ಶಾಂತಿಯೆ ಕ್ಷುರವಹುದು ದಯಮಾಡಿ ನೀನೆ ಕರುಣಿಸು ಹನುಮ4 ಕತ್ತಿಯಲಿ ಕಡಿದೆರೆರಡಾ- ಗುತ್ತಿರುವುದು ಜಡವು ವಾಕ್‍ಕತ್ತಿಯ ದೆಸೆಯಲಿ ನೆತ್ತಿಮೊದಲು ಪಾದವರಿಗು ಕತ್ತರಿಸಿದರೀತಿಯಹುದು ಕಾಯೈ ಹನುಮ 5 ಪರಧನ ಪರಾಕಾಮಿನಿಯರಿ ಕೊರಳೊಳರಿವೆಂಬ ರಜ್ಜುವಿಂದಲಿ ವಿರಾಗ ದೊಣ್ಣೆಯನು ಕಟ್ಟಿ ಕೈಪಿಡಿ ಹನುಮ 6 ಸಂಗವು ನಿತ್ಯಾಹ್ನೀಕಕೆ ಭಂಗವು ಬರುತಿಹುದು ಸದ್ವಿಷಯವಾದರದೆ ಬಂಗಾರವು ರತ್ನವು ತಾ ಹಿಂಗದೆ ಸೇರಿಸಿದ ರೀತಿ ಹಿತವೈ ಹನುಮ 7 ನವವಿಧ ಭಕ್ತಿಯ ಕೊಡು ರಾ- ಘವನಂಘ್ರಿಪರಾಗದಲಿ ಕಡು ವಿರತಿಯನು ನೀಂ ತವಕದಲಿ ಪಾಲಿಸುತಲಿ ನಿ- ನ್ನವರಂ ಕೈಪಿಡಿವುದೆಂದಿಗೂ ಬಿಡದೆ ಹನುಮ 8 ತಾನನುದಿನದಿ ಬರುವ ಕಷ್ಟಗಳನು ಪರಿಹರಿಸುತ್ತ ಹಿಂದೆ ತಿರುಗುತಲಿರುವಂ9
--------------
ಗುರುರಾಮವಿಠಲ
ನೀನೇ ದಯಾಸಂಪನ್ನ ಭಕ್ತ ಪ್ರಸನ್ನಾ ಪ ಕಂದನಿನ್ನಯ ದಿವ್ಯಾನಂದ ಮೂರುತಿಯ ನಾ ಕುಂದದೇ ಭಜಿಸಲು ಮರುಗಿ ಬೇಗಾ ಇಂದಿರೇ ಅಜಭವರೆಂದೂ ಕಾಣದ ನಿಜ ವೆಂದೆಂಬೋ ರಾಜ್ಯದೊಳಿದ್ದ ಕಾರಣದಿಂದ 1 ಹರಿಸರ್ವೋತ್ತಮನೆಂದು ಪಿತನಾಜ್ಞೆಯ ಮೀರಲು ಹರಿರೂಪತಾಳ್ದು ದೈತ್ಯನ ಶಿರವಾ ಹರಿದು ಬಾಲನನೆತ್ತಿ ಸಲಹಿದ ಬಗೆಯಿಂದ ಕರುಣಾಕರನೆಂದು ಶ್ರುತಿಯು ಪೇಳುತ್ತಿರಲೂ 2 ಪಾತಕದಿಂದ ಗೌತಮಸತಿ ಶಿಲೆಯಾಗೆ ಭೂತಳದೊಳು ಪರಬೊಮ್ಮನೆಂಬೋ ಸೀತಾರಾಮಾವತಾರರಿಂದ ಸೌಂದರ್ಯ ನೂತನಪದ ಸೋಕಲು ನಿಜಸತಿಯಾದಳೋ 3 ಗುರುತನೂಜನ ಮಂತ್ರಶಕ್ತಿ ವೇದನೆ ತಡೆದೆ ಹರಿಯೆಂದು ಕರೆದ ಉತ್ತರೆಗೆ ಬೇಗಾ ವರಚಕ್ರವನು ಮರೆಮಾಡಿ ಪರೀಕ್ಷಿತನ ಪೊರೆಯೆ ತ್ರಿಜಗದೊಳು ಕೀರ್ತಿಯಾಹುದರಿಂದ 4 ಹರನಿಂದ ಉರಿಯ ಹಸ್ತವ ಪಡೆದು ಭಸ್ಮಾ ಸುರನು ಫಾಲಕ್ಷನ ಖತಿಗೊಳಿಸೆ ಸಿರಿವೇಲಾಪುರ ಚನ್ನಕೇಶವನಾವೇಶದಿಂ ಪರಿದಸುರನ ಕೊಂದು ಸ್ಥಿರವಾದಕಾರಣ 5
--------------
ಬೇಲೂರು ವೈಕುಂಠದಾಸರು
ನೀನೇ ಶ್ರಾದ್ಧದನ್ನವನುಂಡವಾ ನಾನರಿಯದಂತೆ ಯೆನ್ನ ಗೃಹದೊಳು ಶ್ರೀವೈಷ್ಣವನಾಗಿ ಪ ಬಾಣಸಿಗಾದವರು ನೀನೋ ನಾರಾಯಣಿಯೋ ಕ್ಷೋಣಿಯೊ ರವಿಯೋ ಜಾಹ್ನವಿಯೊ ರತಿಯೋ ವಾಣಿಯೋ ಸುರಧೇನುವೋ ಬಂದಾತಧನಂಜಯನೂ ತಾನೆ ಎನ್ನ ಆದ್ದಾಗಾಯ ತೆಲೆದೇವಾ1 ತಿಳಿದೆ ನಾನೀಗ ನಿನ್ನನು ಕೂಡೆ ಬಂದಿದ್ರ್ದ ಬಿಳಿಯ ಚುಟ್ಟಿನ ಯೆಣ್ಣೆಗೆಂಪಿನವನೂ ಕುಳಿತವನು ಕೈಯಪುಸ್ತುಕದವನು ಕಂಕುಳೊಳ ಗಿಳಿದ ಮಡಿಗಡೆಯವರಾರು ಪೇಳೆಲೆ ದೇವಾ 2 ಆವಾವ ಸ್ಥಾನಕಾರಾರ ನೇಮಿಸಿದೆ ನೀ ದೇವಾ ಉಪಾಧ್ಯರಾರಭಿಶ್ರವಣವನು ಪೇಳ್ದ ಕೋವಿದರಾರು ಶ್ರೀವೈಷ್ಣವರಾರೆಲೆದೇವ 3 ಜನನ ಸ್ಥಿತಿಲಯಕೆ ಕಾರಣಭೂತನೋರ್ವ ನೀ ನೆನುತ ವೇದಾಂತಗಳು ಪೊಗಳುತಿರಲೂ ಇನಿತಕ್ಕೆ ಯೆಂದನ್ನದಗಳು ಕುಡಿತೇಪಾಲ್ಗೇ ಮನವ ಸೋತುದ ಬಿಡುವೆಯಾ ನಿತ್ಯತೃಪ್ತಾ 4 ಗುರುಗಳಂದದಲಿ ಶ್ರೀವೈಷ್ಣವ ನೀನಾಗಿ ಶರಣನಾ ಪಿತೃಗಳಿಗೇ ಶ್ರಾಧ್ಧವನುಂಡುದದೂ ಪಿರಿಯದಾಯ್ತು ಎನ್ನ ನೂರೂಂದು ಕುಲಕೆಲ್ಲಾ ಪರಮಪದವಾಯ್ತು ವೈಕುಂಠಚೆನ್ನಿಗರಾಯಾ 5
--------------
ಬೇಲೂರು ವೈಕುಂಠದಾಸರು