ಒಟ್ಟು 18608 ಕಡೆಗಳಲ್ಲಿ , 136 ದಾಸರು , 8432 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಆರ ನಂಬುಗೆ ಜಗದೆನಗಿಲ್ಲ ಹರಿಯೆ ಕಾರುಣ್ಯನಿಧಿ ನೀನೆ ಗತಿಯೆನಗೆ ಪೊರೆಯೈ ಪ ತಿಂಡಿಗ್ಹಾಕುವತನಕ ಹೆಂಡತಿಯು ನುಡಿಯುವಳು ಗಂಡನೇ ಗತಿಯೆಂದು ಮಂಡೆಯನು ಬಾಗಿ ತಿಂಡಿತಪ್ಪಿದ ಕ್ಷಣದಿ ಕಂಡಕಂಡತೆ ಕೂಗಿ ಬಂಡುಮಾಡುವಳಿಹ್ಯದಿ ಷಂಡನೆಂದಭವ 1 ಬಂಧುಬಾಂಧವರೆಲ್ಲ ಸಂದುಬಿಡಿದಡಿಗಡಿಗೆ ವಂದಿಸಿ ನುಡಿಯುವರು ತಿಂದುಡುವನತಕ ಸಂಧಿಸಲು ಬಡತನವು ವಂದಿಸಿದವರೆ ಮನ ಬಂದಂತೆ ನಿಂದಿಪರು ಕುಂದ್ಹೊರಿಸಿ ದೇವ 2 ಭೂಮಿಯ ಜನರೆಲ್ಲ ಕ್ಷೇಮ ನೀ ಕೊಟ್ಟಿರಲು ತಾಮಸವ ಬಿಟ್ಟು ಬಲು ಪ್ರೇಮ ಬಳಸುವರು ಸ್ವಾಮಿ ಶ್ರೀರಾಮ ನಿಮ್ಮ ಪ್ರೇಮ ತುಸು ತಪ್ಪಿದರೆ ಭೂಮಿಯೊಳಗಿನ ಕೇಡು ನಾ ಸ್ಮರಿಸಲಾರೆ 3
--------------
ರಾಮದಾಸರು
ಆರಗೊಡವೆ ನಮಗಿನ್ಯಾಕೊ ಹರಿ ಅ ಪಾರ ಮಹಿಮನ ದಯವೊಂದೆ ಸಾಕೊ ಪ ಮಾರಿಗೀರಾಗಲಿ ದೂರಿ ಸಕಲರೆನ್ನ ಸಾರಸಾಕ್ಷನ ಬಲವೊಂದೆ ಬೇಕೊ ಅ.ಪ ಜಗಜನ ಕಂಡಂತೆ ಬೊಗಳಲಿ ಬೊಗಳಿ ಬೊಗಳಿ ನಮ್ಮ ಶಪ್ಪರಿಯಲಿ ನಿಗಮಾಗಮನುತ ಜಗಜೀವೇಶನ ಸೊಗಸಿನ ಕೃಪೆಯೊಂದೆ ನಮಗಿರಲಿ 1 ದುರುಳ ಕೃತ್ತಿಮನೆಂದು ಜರಿಯಲಿ ಜರಿಜರಿದು ಮರೆದ್ಹೋಗಲಿ ಚರಣದಂತಿ ಪರಮ ಪಾವನಂಘ್ರಿ ಕರುಣಾಮೃತವೊಂದೆ ನಮಗಿರಲಿ 2 ಕ್ಷೇಮ ತುಸು ಕಾಣದಳಿದ್ಹೋಗಲಿ ಕಾಮಜನಕ ನಮ್ಮ ಸ್ವಾಮಿ ಶ್ರೀರಾಮನ ನಾಮಧ್ಯಾನವೊಂದೇ ನಮಗಿರಲಿ 3
--------------
ರಾಮದಾಸರು
ಆರತಿ ಎತ್ತಿರೆ ವೈಯ್ಯಾರಿಯರರಸಗೆ ಶ್ರೀ ರಮಾಕಾಂತ ಶ್ರೀ ಶ್ರೀನಿವಾಸನಿಗೆ ಪ ಕೇಶವ ನಾರಾಯಣ ಮಾಧವನಿಗೆ ಶ್ರೀಶ ಗೋವಿಂದ ವಿಷ್ಣು ಮಧುಸೂದನಗೆ ಆಸೆಲಿ ತ್ರಿವಿಕ್ರಮ ವಾಮನ ಶ್ರೀಧರಗೆ ಸÉೂೀಸಿಲಿ ಹೃಷಿಕೇಶ ಪದ್ಮನಾಭನಿಗೆ 1 ಧರಣಿಜಪತಿ ದಾಮೋದರ ಸಂಕರ್ಷಣನಿಗೆ ವಾಸುದೇವ ಪ್ರದ್ಯುಮ್ನ ಅನಿರುದ್ಧನಿಗೆ ಅಧೋಕ್ಷಜ ನಾರಸಿಂಹಗೆ ಸರಸಿಜಾಕ್ಷ ಅಚ್ಚುತ ಜನಾರ್ದನಗೆ2 ಮಮತೇಲಿ ಸುಜನರ ಪೊರೆವ ಉಪೇಂದ್ರನಿಗೆ ಶ್ರಮ ಪರಿಹರಿಸುವ ಹರಿ ಶ್ರೀ ಕೃಷ್ಣನಿಗೆ ಕಮಲದಳಾಕ್ಷಗೆ ಕಮನೀಯ ರೂಪಗೆಕಮಲನಾಭವಿಠ್ಠಲಗೆ ತರುಣಿಯರು 3
--------------
ನಿಡಗುರುಕಿ ಜೀವೂಬಾಯಿ
ಆರತಿ ಬೆಳಗುವೆ ಶ್ಯಾಮಸುಂದರ ಶ್ರೀ ಮಾರಜನಕನಿಗೆ ಮುದದಿಂದ ಪ ಮೂರುತಿ ಪರಮನಿಗೆ ಅ.ಪ ಭವ ಶರಣರಿಗೊಲಿಯುವ ಶಾಂತನಿಗೆ ಮೃಗಮದತಿಲಕದ ಮುಖದವಗೇ1 ಒಲೆವ ಮುತ್ತು ರತ್ನದ ಮಾಲೆಗಳ ಒಲಿದುಧರಿಸಿಹ ವೈಜಯಂತಿಯಲಿಲ ನಲಿಯುವ ಪಂಕಜನಾಭನಿಗೆ 2 ಪರತರ ಪದ್ಮವ ಪಿಡಿದಿರುವ ಕಿರು ನಡುಗೊಡ್ಯಾಣವ ನಿಟ್ಟಿಹಗೇ 3 ಶಿರಮಣಿ ಪಚ್ಚೆಯ ಪದಗಳಿಗೆ ಜಾಜೀಶ ಕೇಶವಗೆ4
--------------
ಶಾಮಶರ್ಮರು
ಆರತಿ ಮಾಡಿರೆ ನೀರೆಯರೆಲ್ಲರು ಮಾರಮಣನಾದ ಶ್ರೀರಂಗರಾಜನಿಗೆ ಪ ಭಾರ ಬೆನ್ನಲಿ ಪೊತ್ತು ಕೋರೆಯೆ ತೋರಿದ ನಾರಸಿಂಹನಿಗೆ 1 ಪೋರ ರೂಪನಾದ ಧೀರ ಪರಶುಧರಗೆ ಶ್ರೀ ರಘುರಾಮನೆಂಬ ಚೋರ ಶಿಖಾಮಣಿಗೆ 2 ಚಾರು ಬೌದ್ಧನಿಗೆ ವೀರ ರಾಹುತಗೆ ನೀರಜನಾಭನಾದ ಶ್ರೀ ರಂಗೇಶವಿಠಲಗೆ 3
--------------
ರಂಗೇಶವಿಠಲದಾಸರು
ಆರತಿಯನು ಎತ್ತಿರಮ್ಮ ವರ ಮಹಾಲಕ್ಷುಮಿಗೆ ಚಾರುಮತಿಗೆ ವರವನಿತ್ತಪಾರ ಕರುಣಾಂಬುಧಿಗೆ ಪ ಶ್ರಾವಣ ಶುಕ್ರವಾರದಲಿ ಸಾವಧಾನ ಮನದಿ ನಿತ್ಯ ಸೇವಿಸುವರಿಗೊಲಿದು ಭಾಗ್ಯವೀವ ಮಹಾಲಕ್ಷುಮಿಗೆ 1 ಹೆತ್ತತಾಯಿ ತನ್ನ ಶಿಶುವನರ್ಥಿಯಿಂದ ಸಲಹುವಂತೆ ಭೃತ್ಯವರ್ಗವನ್ನು ಪೊರೆದು ನಿತ್ಯಲೋಕ ಮಾತೆಗೀಗ 2 ಚಿಂತಿತಾರ್ಥನೀವ ಲಕ್ಷ್ಮೀಕಾಂತನುರ ಸ್ಥಳದಿ ನಿಂತು ದಂತಿವರದನನಂತ ಗುಣಗಳನಂತಗಾಣದಿರುವಳಿಗೆ 3
--------------
ಲಕ್ಷ್ಮೀನಾರಯಣರಾಯರು
ಆರತಿಯನೆತ್ತಿರಿ ಅಚ್ಯುತನಿಗೆ ಅನಂತನಿಗೆ ಗೋವಿಂದನಿಗೆ ಪ ಕಾಲ ನಿಯಾಮಕ ಕಾಲೋತ್ಪಾದಕ ಕಾಲಾತ್ಮನಿಗೆ1 ನೊಂದು ಕೌಂಡಿಣ್ಯನು ಮುಂದೋರದಲಿರೆ ಕರವ ಪಿಡಿದಾನಂದವಿತ್ತಗೆ 2 ಸಂತತ ನಡೆಯುವರಂತರ ಬಿಡಿಸುವ- ನಂತ ಮಹಿಮ ಜಯವಂತ ಶ್ರೀಕಾಂತಗೆ 3
--------------
ಲಕ್ಷ್ಮೀನಾರಯಣರಾಯರು
ಆರತಿಯಾಡುವೆನು ಸದ್ಗುರುವಿಗೆಆರತಿಯಾಡುವೆನು ಪ ಕಾಯವ ಜರೆಯುತ್ತಲಿಕೈಯನೆ ಮುಗಿಯುತಲಿಮಾಯವ ಹರಿಯುತಲಿಬಾಯಿ ಕೊಂಡಾಡುತಲಿ ಸದ್ಗುರುವಿಗೆ 1 ಕುಣಿ ಕುಣಿದಾಡುತಲಿಮನವನೆ ನೀಡುತಲಿಘನಮುಕ್ತಿ ಬೇಡುತಲಿಅನುಮಾನವ ಬಿಡುತಲಿ ಸದ್ಗುರುವಿಗೆ 2 ಅರಿವನೆ ಅರಿತುಗುರಿಯನೆ ಮರೆತುಪೂರವನೆ ಬೆರೆತುಗುರು ಚಿದಾನಂದನರಿತು ಸದ್ಗುರುವಿಗೆ 3
--------------
ಚಿದಾನಂದ ಅವಧೂತರು
ಆರತಿಯೆತ್ತಿದರು ಅಪ್ರಮೇಯಗೆ ಪ ಸಾರಸಮುಖಿಯರು ಸಂತೋಷದಿಂದ ಅ.ಪ ತರಳಗೋಸುಗ ಕಂಬ ಬಿರಿದು ಅವತಾರಗೈದು ದುರುಳನುದುರವ ಸೀಳಿ ಕರುಳ ಧರಿಸಿದವಗೆ 1 ದಾದಿ ಕಾರಣ ಪೂರ್ಣ ಭೋದಾಮೃತಮಯಗೆ 2 ಕಾಮುಕರನು ಕೊಂದು ಭೂಮಿ ಭಾರವನಿಳುಹಿ ಸ್ವಾಮಿಯಾಗಿ ಮೆರೆವ ಶ್ರೀ ಮನೋಹರನಿಗೆ 3 ಸ್ವಸ್ತಿಯಾಗಲಿ ಎಂದು ಹಸ್ತಿನಿಯರು | ಹವಳದ 4 ಕಿಂಕರ ಜನಮನ ಸಂಕಟಹರ ನಿಷ್ಕ ಳಂಕ ನೀನೆನ್ನುತ ಶಂಕಿನಿಯರು | ರತ್ನದ 5 ಭೃತ್ಯವತ್ಸಲನೆಂದು ಚಿತ್ತಿನಿಯರು | ಮುತ್ತಿನ 6 ಕುಂದಣ 7 ಸೌಪರ್ಣಿ ವಾರುಣಿ ರ್ವಾಣಿÉ ಸ್ಮರನ ರಾಣಿ ಯಿಂದ್ರಾಣಿ ಮುಖ್ಯರು | ಹುವ್ವಿನ 8 ಪುರಹರ ವೈರಿ ಮುಖ್ಯ ಸುರವಂದ್ಯ ಶರಣ ಶ್ರೀ ಗುರು ರಾಮವಿಠಲಗೆ 9
--------------
ಗುರುರಾಮವಿಠಲ
ಆರತಿಯೆತ್ತಿದರೆ ಕೇಶವ ನಾರಾಯಣಗೆ ಪ. ಶಾಶ್ವತವೀವ ಮಾಧವ ವಾಸವವಂದ್ಯ ಗೋವಿಂದಗಾರತಿಯನೆತ್ತಿದರೆ ಅ.ಪ. ದ್ವಾಪರ ರಹಿತ ಶ್ರೀವಿಷ್ಣುವಿಗೆ ಅಪಾರ ಮಧುಸೂದನಗೆ ಪಾಪರಹಿತ ತ್ರಿವಿಕ್ರಮಗಾರತಿಯನೆತ್ತಿದರೆ1 ಸಾಧುಸೇವಿತ ವಾಮನಗೆ ಶ್ರೀಧರ ಹೃಷೀಕೇಶನಿಗೆ ಆದಿಮೂರುತಿ ಪದ್ಮನಾಭಗಾರತಿಯನೆತ್ತಿದರೆ 2 ದÁಮೋದರ ವಾಲುಳ್ಳವಗೆ(?) ಪ್ರೇಮದಿ ಸಂಕರ್ಷಣಗೆ ಕಾಮಿತಾರ್ಥವನೀವ ವಾಸುದೇವಗಾರತಿಯನೆತ್ತಿದರೆ 3 ಅನಿರುದ್ಧ ಪುರುಷೋತ್ತಮಗೆ ವಿನಯದಿಂದಲಿ ಅಧೋಕ್ಷಜಗಾರತಿಯನೆತ್ತಿದರೆ 4 ನರಸಿಂಹರೂಪನಾದವಗೆ ವರದ ಮೂರುತಿ ಅಚ್ಯುತಗೆ ಅರಿಭಯಂಕರ ಜನಾರ್ದನಗಾರತಿಯನೆತ್ತಿದರೆ 5 ಉಪೇಂದ್ರನೆಂದೆನಿಸಿಕೊಂಡವಗೆ ಅಪಾರಮಹಿಮ ಶ್ರೀಹರಿಗೆ ಗೋಪಾಲಮೂರುತಿ ಶ್ರೀಕೃಷ್ಣಗಾರತಿಯನೆತ್ತಿದರೆ 6 ಚತುರವಿಂಶತಿಮೂರುತಿಗಳಾ ಅತಿಶಯ ಧವಳವ ಪಾಡೆ ಸಿರಿ ಹಯವದನ 7
--------------
ವಾದಿರಾಜ
ಆರತಿಯೆತ್ತುವೆ ಆತ್ಮೇಶ್ವರಗೆ ಪ ಮಾರ ಕೋಟಿ ಲಾವಣ್ಯ ಮತ್ಪ್ರಿಯ ಸ್ವಾಮಿಗೆ ಅ.ಪ ಮನಕೊಡೆಯನೆನ್ನಿಸಿ ಮಮತೆಯ ವಿಸ್ತರಿಸಿ ಅನುದಿನ ಬೇಡಿದಿಷ್ಟಾರ್ಥವನೀವಗೆ 1 ಶುಭದಾಯಕನಾಗಿ ಶೋಭಿಸುತಿರ್ಪಗೆ2 ಗುರುರಾಮವಿಠ್ಠಲ ಕರುಣಾನಿಧಿಗೇ 3
--------------
ಗುರುರಾಮವಿಠಲ
ಆರತಿಯೇತ್ತುವೆ ನಾಂ ಪ ಸತತ ಮನ್ಮನೋರತದೊಡೆಯಗೆ ಅ.ಪ ಯಾವಾಗಲು ನಾಮಾಡುತಿರುವ ಸಂ ಸೇವೆಯಕೈಕೊಂಬ ಮಹಾತ್ಮಗೆ 1 ಬೇಡಿದಭೀಷ್ಟವ ನೀಡುತ ಎನ್ನಯ ನಾಮವ ಜಪಿಸುತ ನಲಿಯುವ ಪತಿಗೆ 3
--------------
ಗುರುರಾಮವಿಠಲ
ಆರಯ್ಯಾ ಕಣ್ಣ ಮುಂದೆ ಬಂದು ನಿಂತಿಯೋ | ಸಾರು ನೀನು ಎನಗೆ ಸುಮ್ಮನ್ಯಾತÀಕೆ ಯಿದ್ದೀ ಪ ನೀರೊಳು ಮುಣಗೆ ವೇದವ ತಂದಾತನೊ | ಭಾರವನು ಪೊತ್ತು ಸುರರ ಕಾಯಿದಾತನೊ | ಧಾರುಣಿ ನೆಗಹಿ ಉದ್ಧಾರ ಮಾಡಿದಾತನೊ | ಕೂರ್ರ ದೈತ್ಯನ ಕೊಂದ ಕುಜನ ಗಿರಿಗೆ ವಜ್ರನೊ1 ಗಗನಕೆ ಬೆಳದು ಸುರ ನದಿಯ ಪಡೆದಾತನೊ | ಹಗೆಗಳ ಕೊಂದು ಹರುಷಿತನಾದನೊ | ಜಗವರಿಯೆ ಶಿಲಿಯ ನಾರಿಯ ಮಾಡಿದಾತನೊ | ಮಗನಮಗನ ತಂದ ಮಹಿಮನೊ 2 ಹರಗೆ ಸಾಯಕವಾಗಿ ಪುರ ಉರಹಿದಾತನೊ | ದುರುಳರನ ಕೊಂದ ದುರ್ಲಭದೇವನೊ | ಕರಿರಾಜ ವರದ ಶ್ರೀ ವಿಜಯವಿಠ್ಠಲರೇಯ - ಶರಣರಿಗೊಲಿದು ಬಂದ ಸರ್ವೋತ್ತಮನೊ 3
--------------
ವಿಜಯದಾಸ
ಆರಾಧನೆ ಪರಮಾನಂದ ಪ ತಾರಾನಾಥ ಕುಲೋದ್ಭವ ಕೃಷ್ಣನ ಅ.ಪ ಘೋರವು ಈ ಸಂಸಾರವೆನ್ನುವುದು ದೂರಿನ ನುಡಿಯಿದು ಬಾಳುವಗೆ ನೂರು ವರುಷಗಳ ಮೀರಿ ಜೀವಿಸಲು ಕೋರಿಕೆ ಬರುವುದು ಧೀರ ಜನರಿಗೆ 1 ನಿರ್ಮಲ ದೇಹವು ನಿರ್ಮಲ ಹೃದಯವು ನಿರ್ಮಲ ನಡೆನುಡಿ ಕರ್ಮಗಳು ಮರ್ಮಜ್ಞರ ಮಾರ್ಗಗಳಲಿ ಸ್ವೋಚಿತ ಧರ್ಮಗಳಲಿ ವಿಶ್ವಾಸವಿರುವವರಿಗೆ 2 ಅನ್ನವಿರುವವರಿಗೆ ತಿನ್ನಲಾಗದು ತಿನ್ನಬಲ್ಲವರಿಗೆ ಅನ್ನವು ಸಿಗದು ಘನ್ನ ಮಹಿಮನ ಪ್ರಸನ್ನತೆಯಿಂದಲಿ ಅನ್ನ ಪಡೆದು ತಿನ್ನಲು ಬಲ್ಲವರಿಗೆ 3
--------------
ವಿದ್ಯಾಪ್ರಸನ್ನತೀರ್ಥರು
ಆರಿಗಳವಲ್ಲಾತ್ಮ ಯೋಗ ಸಿದ್ಧಿಸೇರಿ ಸುಜ್ಞಾನದಲಿ ಸವಿದುಂಬಗಲ್ಲದೆ ಪ ರಜಸು - ತಾಮಸವೆಂಬ ರಯವನೆಲ್ಲವ ಕಳೆದುಗಜ ಬಜಿಸುವ ಪಂಚಭೂತಗಳರಜನಿಗೆ ಸಿಲ್ಕದೆ ಪರಬ್ರಹ್ಮನ ಬಲುನಿಜವ ತಿಳಿಯಬಲ್ಲ ನಿರ್ವಾಣಗಲ್ಲದೆ 1 ಭಿನ್ನ ಭೇದಗಳೆಂಬ ಬಲು ಸಂಶಯ ಕಳೆದುತನ್ನೊಳಗೆ ತಾ ತಿಳಿದು ತಾರಕಬ್ರಹ್ಮವಚೆನ್ನಾಗಿ ನೀ ನೋಡು ಚೆಲುವ ಕಂಗಳಿಂದತನ್ನಗ್ನಿಯೊಳಗಿರುವ ಪ್ರೌಢರಿಗಲ್ಲದೆ 2 ಅಕಾರ ಉಕಾರ ಮಕಾರ ಎಂತೆಂಬಓಂಕಾರಕೆ ಕೂಡಿ ಎರಡಿಲ್ಲದಸಾಕಾರ ಕಾಗಿನೆಲೆಯಾದಿಕೇಶವನಆಕಾರದೊಡನಾಡುವರಿಗಲ್ಲದೆ 3
--------------
ಕನಕದಾಸ