ಒಟ್ಟು 2899 ಕಡೆಗಳಲ್ಲಿ , 126 ದಾಸರು , 2242 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ತಂದು ತೋರೆ ಶ್ರೀ ಮುಕುಂದನ ಗೋವಿಂದನಎಂದೆಂದುಡುಪಿಲಿ ನಿಂದನ ಗೋವಿಂದನ ಪ. ದಂಡಪಾಶಧರನು ಭೂಮಂಡಲದಿ ಮುನಿಗಳಹೆಂಡರಿತ್ತ ಭಿಕ್ಷೆಯುಂಡನ ಚೆಲ್ವಕುಂಡಲ ಮಂಡಿತ ಗಂಡನ ಉ -ದ್ದಂಡ ಕಠೋರ ಪ್ರಚಂಡನ ಗೋವಿಂದನ 1 ಹಾರ ಪದಕ ಕಂಕಣ ಕಿರುಗೆಜ್ಜೆ ಉಡು -ದಾರ ವೀರ ಪೆಂಡ್ಯಗಳಿಟ್ಟನ ತನ್ನಸೇರ್ದರಿಗಿಷ್ಟವ ಕೊಟ್ಟನನೀರಸ ಜನರ ಬಿಟ್ಟನ ಗೋವಿಂದನ2 ಮಂದಹಾಸವೆಂಬ ನವಚಂದ್ರಿಕೆಯಿಂದೆಸೆವ ಮುಖಇಂದುವಿನ ನೀರಜಾಕ್ಷನ ನವಚಂದನ ಕರ್ಚಿತವಕ್ಷನಎಂದೆಂದು ಭಕ್ತರ ಪಕ್ಷನ ಗೋವಿಂದನ 3 ಮಂದಜಜಾಂಡಾದಿಂದ್ರ ಮುಖ್ಯ ವೃಂದಾರಕರೊಡೆಯನಇಂದಿರೆಯಪ್ಪುವ ತೋಳ್ಗಳ ಶುಭಕುಂದ ಕುಟ್ಮಲ ಪಲ್ಗಳಅಂದುಗೆ ಒಪ್ಪುವ ಕಾಲ್ಗಳ ಗೋವಿಂದನ 4 ಇಂದು ಹಯವದನನ್ನ ಸಂದೇಹವ ಕಳೆಯುತ್ತ ಆ-ನಂದದಿಲ್ಲಿಗೆ ಬಂದನಚಂದದಿ ವೇದವ ತಂದನ ಆನಂದನ ರಾಣಿಯ ಕಂದನ ಗೋವಿಂದನ 5
--------------
ವಾದಿರಾಜ
ತಂದೆ ನಿನ್ನ ಕೃಪೆಯು ಎಂದಿಗೊ ಗೋವಿಂದ ಹರೆ ಪ ತಂದೆ ನಿನ್ನ ಕೃಪೆಯು ಎಂದಿಗೆ ------ಸಿಗುವದೆಂದೆ ಮಂದರಾಧರ ಮಾಧವಕೇಶವ ಅ.ಪ ಸಾರೆ ಸಾರೆ ---- ಚ್ಚ ಸಂಸಾರದೊಳು ಮುಳುಗಿ ತೇಲುತಾ ಇರುವುದು ಒಂದೆ ಧೀರ ನಿಮ್ಮಯ ಸ್ಮರಣೆಯ ತೋರದೆ ಕಾಣದಂತೆ ಆಯಿತು 1 ಸಕಲವೇದ ಶಾಸ್ತ್ರ ಪುರಾಣ----ರಿತಾ ಪ್ರಕಟ ಭಕ್ತ ಪಂಡಿತಾರ್ಯರಾ ಭಜಿಸದೆ ಮನದಿ ವಿಕಟನಾಗಿ ನಿಮ್ಮ ಮಹಿಮೆಯನು ಕಾಣದೆ-----ತು ಸಕಲಲೋಕ ಕರ್ತ ದೇವ ಸಾಧು ಜನರ ರಕ್ಷಿಸುವಾ 2 ಬ್ರಹ್ಮೇಂದ್ರ ರುದ್ರಾದಿಗಳಿಗೆ ವಶವು ---- ಮಹಿಮೆಯನು ಹೇಳಾ ನೀ ಅನೇಕ ಚರಿತ ತೋಯಜನಕನಾದ ಪರಬ್ರಹ್ಮ `ಹೆನ್ನವಿಠ್ಠಲಾ ' ಸಂ-----ತೋರದು ನಿಮ್ಮ ಕರುಣ ತೋರಿದರೆ ಸರಿ 3
--------------
ಹೆನ್ನೆರಂಗದಾಸರು
ತಂದೆ ಮುದ್ದು ಮೋಹನಾ | ನಿನ್ | ಅಂದ ಪಾದವ ಭಜಿಸುವೆ ಪ ನಂದ ಕಂದನ ತಂದು ತೋರಿಸಿ | ಬಂಧನವ ಪರಿಹರಿಸು ನೀ ಅ.ಪ. ವತ್ಸರ | ತರಳನಾಗಿರುವಾಗಲೇ 1 ಹರಿಯ ವ್ಯಾಪ್ತಿಯ ಕಂಡು ನೀ | ಗಿರಿ ಗುಹೇಯಲಿ ಚರಿಸುತಾತೊರೆದು ಮಮತೆಯ ಚರಿಸಿದೇ | ಕರೆಕರೆಯ ಸಂಸಾರದೀ 2 ತಪವನಾಚರಿಸುತ್ತಲೀ | ವಿಪಿನವಸಿ ಸಂಚರಿಸುತಾವಿಪವರಸ ಪೆಗಲೇರಿದವನ್ನ | ಅಪರೋಕ್ಷದಿ ಕಾಣುತಾ 3 ನಡುನಡುವೆ ಮನೆಗೈದುತಾ | ಮಡದಿಯನೆ ತಕ್ಕೈಸುತಾ ಎಡ ಬಲದ ಒಡನಾಡಿ ಜನ ಕಡು | ಮೋಹಬಡುವಂತಾಡುತಾ 4 ಇಭಗಿರೀ ರಥೋತ್ಸವಕ್ಕೇ | ಪ್ರಭು ಮುದ್ದು ಮೋಹನ ದಾಸರುವಿಭವದಿಂದಲಿ ಬಂದು ನಿಮಗೆ | ಶುಭದ ಅಂಕಿತವಿತ್ತರು 5 ಶಾಂತ ಚಿತ್ತದಿ ಜಪಿಸುತಾ | ಮಂತ್ರ ಸಿದ್ಧಿಯ ಪಡೆಯುತಾ ಭ್ರಾಂತ ಜನರನು ಭಕ್ತಿ ಪಂಥದಿ | ನಿಂತು ನಲಿವಂತೆ ಮಾಡುತಾ6 ಸಾಹಸ್ರಾರಂಕಿತವನಿತ್ತೂ | ಮಾಹಿತಾಂಘ್ರಿಯ ಭಜಿಸಿದಾ ಸಾಹಸಿಗ ಶೇಷಾಂಶ ಭಕ್ತರ | ಮೋಹ ಕಳೆದುದ್ಧರಿಸಿದಾ 7 ನಕ್ರಹರಗತಿ ಪ್ರೀತನಾ | ವಿಕ್ರಮದಿ ಸಂಸ್ಥಾಪಿಸೀಚಕ್ರಿಪುರಿಗಾ ರಾಮನವಮಿಲಿ | ವಿಕ್ರಮದಿ ನೀ ಹೊರಡುತಾ 8 ಅಹಿ ಭವ ವಂದ್ಯನಾ | ಗುರುಗೋವಿಂದ ವಿಠಲನನಿರುತ ಭಜಿಸುವ ಜ್ಞಾನವಾ | ಕರುಣಿಸೀ ಸಲಹೆನ್ನನು 9
--------------
ಗುರುಗೋವಿಂದವಿಠಲರು
ತಂದೆ ಮುದ್ದುಮೋಹನ ದಾಸರಾಯರ ಪದವ ಪೊಂದಿದವರಿಗೆ ಕಷ್ಟವೆ ಪ. ಬಂಧನವ ಪರಿಹರಿಸಿ ಸಿಂಧುಶಯನನ ಮೂರ್ತಿ ತಂದು ತೋರುವರು ಮನದಿ | ಮುದದಿ ಅ.ಪ. ಅತಿಶಯದ ತಪದಿಂದ ಪತಿತ ಪಾವನನಂಘ್ರಿ ಮತಿವಂತರಾಗಿ ಭಜಿಸಿ ಪೃಥುವಿಯೊಳಗವತರಿಸಿ ಯತನವಿಲ್ಲದೆ ಕರ್ಮ ಪಥವನ್ನೆ ಕೊನೆಗಾಣಿಸಿ ಪತಿತರಿಗೆ ಅಂಕಿತವ ಹಿತದಿಂದ ಬೋಧಿಸಿ ಅತಿ ಅದ್ಭುತವ ತೋರಿಸಿ ಸುತರಂತೆ ಶಿಷ್ಯರನು ಹಿತದಿಂದನುಗ್ರಹಿಸಿ ಗತಿಯ ಮಾರ್ಗವ ತೋರ್ವರು | ಇವರು 1 ದೇವತೆಗಳೊಡೆಯರು ಪಾವಮಾನಿಗೆ ಪ್ರಿಯರು ಭೂವಲಯದೊಳು ಮೆರೆವರು ಆವಕಾಲದಲಿ ಸುಖಾನಂದಭೋಗಿಗಳು ಪಾವನ ಸುಚರಿತ್ರರು ದೇವ ನರಹರಿ ಕರುಣ ಪೂರ್ಣವಾಗಿ ಪಡೆದು ಭಾವಶುದ್ಧಿಯಲಿಪ್ಪರು ಈ ವಿಧದ ಇವರ ಚರ್ಯೆಯನರಿಯುವರನರಿಯೆ ಕಾವ ಭಕ್ತರ ಕರುಣಿಯ | ದೊರೆಯ 2 `ತ' ಎನಲು ತಪಸಿಯಹ `ದೇ' ಎನಲು ದೇಹ ಶುದ್ಧಿ `ಮು' ಎನಲು ಮುಕ್ತನಾಗ್ವ `ದು' ಎನ್ನಲು ದುರ್ಜನರು ದೂರವಾಗಿರುತಿಹರು `ಮೋ' ಎನಲು ಮೋಕ್ಷದಾರಿ `ಹ' ಎನಲು ಹರಿಬಂದು `ನ' ಎನಲು ನರ್ತಿಸುವ `ದಾ' ಎನಲು ದಾರಿದ್ರನಾಶ `ಸ' ಎನಲು ಸತ್ವಗುಣಿ `ರಾಯ' ಎನೆ ಪದವಾಳ್ವ `ರು' ಎನಲು ಋಜುಮಾರ್ಗಿಯು | ಸುಖಿಯು 3 ಈ ರೀತಿಯಿಂ ತಂದೆ ಮುದ್ದುಮೋಹನದಾಸ ರಾ - ಯರೆಂತೆಂದು ಜಪಿಸೆ ಪಾರುಗಾಣಿಸಿ ಭವದ ಬಂಧನವ ಬಿಡಿಸುವರು ದೇವಾಂಶ ಸಂಭೂತರು ಕಾರುಣ್ಯ ನಿಧಿಗಳು ತೋರುವರು ಹರಿಮಾರ್ಗ ಸಾರಿ ಭಜಿಪರಿಗೆ ಸತತ ನಾರಸಿಂಹನ ಚರಣ ಸೇರಿಸಿ ಹೃದಯದಲಿ ಸೂರೆಗೊಂಡಿಹರು ಮುಕ್ತಿ | ಸುಕೀರ್ತಿ 4 ಅಪಾರ ಅದ್ಭುತದ ಕರ್ಮಗಳ ನಡೆಸಿಹರು ಪಾಪಿ ಜನಗಳ ಪೊರೆವರು ರೂಪ ರೂಪಾಂತರದಿ ತೋರ್ಪರು ಸುಜನರಿಗೆ ಶ್ರೀಪತಿಯ ವರ ಭಕ್ತರು ಕೋಪತಾಪಗಳಿಂದ ನಿರ್ಲೇಪರಾಗಿಹರು ತಾಪತ್ರಯಗಳ ಕಡಿವರು ಗೋಪಾಲಕೃಷ್ಣವಿಠ್ಠಲನ ಪದಧ್ಯಾನವನು ಗೋಪ್ಯದಿಂದಲಿ ಇತ್ತರು | ಇವರು5
--------------
ಅಂಬಾಬಾಯಿ
ತನು ನಿನ್ನದು ಜೀವನ ನಿನ್ನದು ರಂಗ ಪ ಅನುದಿನದಲಿ ಬಾಹೊ ಸುಖದುಃಖ ನಿನ್ನದಯ್ಯ ಅ ಸವಿನುಡಿ ವೇದ ಪುರಾಣ ಶಾಸ್ತ್ರಂಗಳಕಿವಿಗೊಟ್ಟು ಕೇಳುವ ಕಥೆ ನಿನ್ನದುನವಮೋಹನಾಂಗಿಯರ ರೂಪವನು ಕಣ್ಣಿಂದಎವೆಯಿಕ್ಕದೆ ನೋಡುವ ನೋಟ ನಿನ್ನದಯ್ಯ 1 ರುಚಿ ನಿನ್ನದಯ್ಯ 2 ಮಾಯಾ ಪಾಶದ ಬಲೆಯೊಳಗೆ ಸಿಲುಕಿರುವಕಾಯ ಪಂಚೇಂದ್ರಿಯಂಗಳು ನಿನ್ನವುಕಾಯಜಪಿತ ಕಾಗಿನೆಲೆಯಾದಿಕೇಶವರಾಯ ನೀನಲ್ಲದೆ ನರರು ಸ್ವತಂತ್ರರೆ 3
--------------
ಕನಕದಾಸ
ತನ್ನ ತಾ ತಿಳಿದು | ಧನ್ಯನಾಗೊ ಬಗೆ ಇದು | ಖಿನ್ನವಳಿದು ಪೂರ್ಣ ಬ್ರಹ್ಮವನ್ನು ಕಾಂಬುದು ಪ ತತ್ತ್ವ ಶಾಸ್ತ್ರವನ್ನು ಓದಿ | ಭಕ್ತಿಯಿಂದ ಮನನ ಮಾಡಿ | ಯುಕ್ತಿ ಭಾವವೆಲ್ಲ ಕಳೆದು ಮುಕ್ತನಾಗುತಾ || ನಿತ್ಯವಾದ ವಸ್ತು ತಾನೆ | ಮತ್ತೆ ಬೇರೆ ಇಲ್ಲವೆಂದು | ಸತ್ಯ ಶರಣರಡಿಯ ಪಿಡಿದು ಚಿತ್ತದಲ್ಲಿ ನಲಿವುದು 1 ಆಶೆ ಮೂರರಲ್ಲಿ ಇನ್ನು | ಬೇಸರಾಗಿ ವಿಷಯದ | ವಾಸನೆಗಳ ಜರಿದು ಪಾಶ ಕ್ಲೇಶವಳಿಯುತ || ನಾಸಿಕಾಗ್ರದಲ್ಲಿ ಮನವ | ಸೂಸದಂತೆ ನಿಲಿಸಿ ಜಗ- | ದೀಶನಾಟವನ್ನು ನೋಡಿ ನಾದ ಘೋಷ ಕೇಳ್ವುದು 2 ಹಿಂದೆ ಒಂದು ನೆನೆಸದಿನ್ನು | ಮುಂದೆ ಉಳಿದ ಕರ್ಮವನ್ನು | ಬಂದುದೆಲ್ಲ ಉಂಡು ಗೆದ್ದು ಹರುಷದಿಂದಲಿ || ತಂದೆ ಭವತಾರಕನ | ಹೊಂದಿ ಸದಾನಂದದಿಂದ | ಮುಂದೆ ಭವಕೆ ಬೀಳದಂತೆ ಛಂದದಿಂದ ನಲಿವುದು 3
--------------
ಭಾವತರಕರು
ತಪ್ಪಲರಿಯದು ಬರೆದ ಬ್ರಹ್ಮನಿರ್ಮತವು ಒಪ್ಪುವದು ಯತಿ ಮುನಿ ಋಷಿಯ ಸಂತತಿಯು ಧ್ರುವ ಆನಿ ಮೊದಲಿರುವೆ ಕಡೆ ಅಣುಮಾತ್ರಾಕಾರವನು ಮುನ್ನ ಬರೆದಂತೆ ತಾನಡೆಯುತಿಹಂದು ಇನ್ನು ಮುತ್ತನ್ಯ ದೈವಕ ಬಯಸಿ ಬೇಡಿದರೆ ಮುನ್ನಿಗೆ ಕೊಡಬಲ್ಲವೆ ಬಿನಗುದೈವವು 1 ಭಿನ್ನವಿಲ್ಲದೆ ತನುವಿನೊಳು ಆನಂದ ಘನ ಉನ್ನತ ಮಹಿಮ ಪರಿಪೂರ್ಣವಿರಲು ಮೂರ್ತಿ ಶ್ರೀಪಾದವನು ಅನುದಿನ ಭಜಿಸಿ ಘನ ಸುಖವ ಪಡಿಯೊ ಮನವೆ 2 ಕಕ್ಕುಲಾತಿಯ ಬಟ್ಟು ಕಂಡವರ ಕಾಲ್ಗೆರಗಿ ಫಕ್ಕಸಾರಿಯ ಧರ್ಮ ಜರಿಯ ಬ್ಯಾಡ ಸಕಲ ಸಹಕಾರ ಮಹಿಪತಿಸ್ವಾಮಿ ನಿನಗಿರಲು ಭಕುತಿ ಮುಕುತಿಯ ಉಂಟು ಮೂಢ ಜನವೆ 3
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ತಪ್ಪುಗಳೆಣಿಸಾದೆನ್ನಪ್ಪ ಕಾಯಲಿಬೇಕು |ಸರ್ಪಶಯನನ ದೂತಾ ||ಇಪ್ಪತು ಒಂದು ಕುಭಾಷ್ಯ ಮುರಿದ | ರಾ ಮ |ತ ಪ್ರವರ್ತಕ ರಾಘವೇಂದ್ರ ಮುನಿಪ ಮಹಾ ಪ ಪ್ರತಿ ವರುಷಕೆ ಬಂದು ಸನುತಿಸಿ ಪೋಗು ಎಂದು |ನತ ಸ್ವಪ್ನದಲಿ ನೀ ಬಂದೂ ||ಹಿತದಿಂದ ಪೇಳಲು ರತನಾಗಿ ಧನದಿ ಮ |ರತು ಬಿಟ್ಟೆ ನಿಮ್ಮನು ಯತಿಕುಲೋತ್ತಮ ಇಂಥಾ 1 ಸ್ನಾನ ಸಂಧ್ಯಾನ ಸುಜಪತಪ ವ್ರತಹೋಮ |ಮೌನ ಮಾರ್ಗಗಳರಿಯೆ ||ಜ್ಞಾನಿಗಳಾನು ಸಂಧಾನ ಪೂರ್ವಕ ಪೂಜೆ |ಯಾನು ಮಾಡದೆ ದುಷ್ಟ ಮಾನವರೊಳಗಿದ್ದೆ 2 ಏಸು ಜನ್ಮದಿ ಬಂದಾ ದೋಷವ ಕಳದು ವಿ |ಶೇಷ ಸುಖವ ಕೊಡುವಾ ||ಈ ಸುವಾರ್ತಿಯ ಕೇಳಿ ಮೊರೆಹೊಕ್ಕೆ ಗುರು ಪ್ರಾ ||ಣೇಶ ವಿಠಲನ ದೂತಾ ಮತಪ್ರೀತಾ 3
--------------
ಗುರುಪ್ರಾಣೇಶವಿಠಲರು
ತಮ್ಮಾ ನೀ ನೋಡಿದ್ಯಾ | ಒಮ್ಮನದಿಂದಬೊಮ್ಮ ಮೂರುತಿ ಶ್ರೀ | ವಲ್ಲಭ ರಂಗನಾ ಪ ಹಿಂಡು ದೈವರ ಗಂಡ | ಚಂಡ ವಿಕ್ರಮ ನಮ್ಮಕೊಂಡಜ್ಜಿ ಬಳಿಲಿರುವ | ಪುಂಡರೀಕಾಕ್ಷನ 1 ನೂಪುರ ಗೆಜ್ಜೆಪೆಂಡ್ಯ | ಆಪಾದ ಸೊಬಗಿಂದಶ್ರೀಪತಿ ಮೆರೆಯುವ | ಭೂಪತಿ ವರದನ 2 ಅಕ್ಷಯ ಫಲದವನವಕ್ಷದೋಳ್ ಧರಿಸೀಹ | ಲಕ್ಷ್ಮೀ ಉಳ್ಳವನ 3 ಕೌಸ್ತುಭ | ಕರ್ಣದಿ ಕುಂಡಲಶಿರದಲ್ಲಿ ಕಿರೀಟ | ಧರಿಸಿ ಮೆರೆವವನ4 ಪವನಾಂತರಂಗನ | ಪಾವನ ಚರಿತನಭುವನ ಮೋಹನ ಗುರು | ಗೋವಿಂದ ವಿಠಲನ 5
--------------
ಗುರುಗೋವಿಂದವಿಠಲರು
ತರಣಿ ಪಾವಕ ಶಶಿ ನೇತ್ರಗಳುಪರಶುಮೃಗಂಗಳ ಧರಿಸಿರೆ ಕರಗಳು ವರದಾಭಯಗಳಲೊಪ್ಪಿರಲು 1ವಾಮವ ಗೌರಿಗೆ ಕೊಟ್ಟಿರಲು ಸಾಮಜಕೃತ್ತಿಯ ಹೊದ್ದಿರಲುಭೀಮನು ಮೂರ್ತಿಯ ಬೇಡಲು ಕೊಡಲು ಕಾಮನ ನೋಟದಿ ಕೆಡಹಿರಲು 2ಧರೆಯೊಳು ದಕ್ಷಿಣ ಕಾಶಿಯಲಿ ುರೆ ಗಂಗಾಧರ ರೂಪಿನಲಿತಿರುಪತಿ ವೆಂಕಟ ವರ ನಾಮದಲಿ ಮೆರೆವೆ ಮಹೇಶ್ವರ ಮಹಿಮೆಯಲಿ 3ಓಂ ಕೋಟಿಸೂರ್ಯಸಮಪ್ರಭಾಯ ನಮಃ
--------------
ತಿಮ್ಮಪ್ಪದಾಸರು
ತರತಮದಿ ಶರಣು ಮಾಡುವೆ ನಿಮಗೆ ಕರಣಶುದ್ಧಿಯಲ್ಲಿ ಕರುಣ ಮಾಡಿ ಎನ್ನ ಪರಿಪಾಲಿಸಬೇಕು ನಿರುತ ಬಿಡದೆ ಮನ ಸಿರಿಹರಿ ಚರಣಕ್ಕೆ ಎರಗುವಂತೆ ವರಭಕುತಿಯಲ್ಲಿ ಪ ಪರಮೇಷ್ಠಿ ವಾಯು ಸರಸ್ವತಿ ಭಾರತೀ ಉರಗ ಈಶ ಹರಿ ಸತಿಯರು ಮೂ ರೆರಡು ಜನರು ಆ ತರುವಾಯ ಸೌಪರ್ಣಿ ಸಿರಿ ಗುರು ದಕ್ಷನೆ ಶಚಿ ಮರುತ ಪ್ರವಾಹ ಮೂ ವರು ಸನಕಾದ್ಯರು ದುರಿತಶಾಸನ ಶಶಿ ತರಣಿ ಶತರೂಪ ವರುಣ ನಾರದರ 1 ಮುನಿಗಳ ಶ್ರೇಷ್ಠ ಭೃಗು ಅನಲ ಪ್ರಸೂತಗಾಧಿ ತನುಜ ವಾರಿಜಾಜನ್ನತನಯರು ವೈವಸ್ವತ ಸೂರ್ಯ ದನು ಪ್ರವಾಹವೆಂಬ ಅನಿಲನ್ನ ತಳೋದರಿ ಅನಿಲದೇವಜ ಅಶ್ವಿನಿ ದೇವತೆಗಳು ಅನಳಾಕ್ಷಸುತ ಧನಪತಿ ಪ್ರಹ್ಲಾದ ಗುಣಿಸುವೆ ವಸು ಏ ಳನು ದಶರುದ್ರರು ಇನಿತರೊಳಗೆ ಒಬ್ಬನ ಬಿಟ್ಟನು ದಿನ 2 ದಶ ವಿಶ್ವದೇವತರು ಸ್ವಶನರೊಳಗೆಗೀರ್ವರ ರಸದ್ಯುನವಕೋಟಿ ತ್ರಿದಶರೂಪ ಪಿತ್ರರೂ ಎಸವ ಸೋಮ ಪುನರ್ವಾಪಸರಿಪಶತಸ್ಥರು ನಸುನಗೆ ಕರ್ಮಜ ಋಷಿ ಈರ್ವರು ಮನು ಕುಶಲ ಸಪ್ತ್ತರಿಗೆ ತುತಿಸೆ ಕಾಲಕಾಲದಿ 3 ಮಾಂಧಾತ ಬಲಿ ಶಶಿಬಿಂದುವೆ ಪ್ರಿಯವ್ರತ ಪರೀಕ್ಷಿತ ನಂದ ಕಕುಸ್ಥ ಗಯ ಕುಂದದೆ ಯದುಕುಲದಿಂದ ಬಂದ ಹೈಹಯನು ಚಂದ್ರನ ಮಡದಿ ಏಳೊಂದನೆ ಸೂರ್ಯನು ಮಂದಹಾಸಾಂಬುಜ ಬಾಂಧವನಸತಿ ಕಲದರ್ಪನಸೂಸೆ ವೃಂದಾರಕರಿಗೆ 4 ಸದಮಲ ಸ್ವಾಹಾದೇವಿ ಬುಧಾ ಉಷಾದೇವಿ ಶನಿ ಮುದದಿಂದ ಪುಷ್ಕರ ಸಹೃದಯ ತುಂಬರರಿಂದ ಮೊದಲಾಗಿ ನೂರುಮಂದಿ ತ್ರಿದಶ ಗಂಧರ್ವರು ಚದುರೆ ಊರ್ವಸಿ ರಂಭೆ ಅದಿತಿ ಕಶ್ಯಪದಿತಿ ಹದಿನಾರು ಸಾವಿರ ಬುಧನ ಮಕ್ಕಳು ತಪೋನಿಧಿಗಳು ಎಂಭತ್ತು ತದುಪರಿ ಅಜಾನಜ ತ್ರಿದಶರು ಓಜಸ್ತರೆದರಾಗಿ ನಾನಿಂದು 5 ಹರಿಭಕ್ತರಾದ ಅಪ್ಸರ ಸ್ತ್ರೀಯರು ಕೆಲಕೆಲವು ಮರಳೆ ಚಿರಾಖ್ಯನಾಮದಿರುತಿಪ್ಪ ಪಿತೃಗಳು ಪರಿಪರಿ ನೂರುಕೋಟಿ ಪರಮಋಷಿಗಳಿಗೆ ಸುರ ಗಂಧರ್ವರ ವಿಸ್ತರ ಮನುಜ ಗಂಧರ್ವ ಧರಿಣಿಜಾಕವಿ ಮೇಲರಿದು ಜಯಂತಗೆ ಕರ ಮುಗಿವೆ ಕ್ಷಿತಿಪರನು ಕೊಂಡಾಡುತ ಇರುಳು ಹಗಲು ಉತ್ತಮರ ಮನುಜರ ಪಾಡಿ ನಿರುತ ಜಂಗಮ ಸ್ಥಾವರಗಳ ನೋಡುತ 6 ಭುಜಗಶಯನನಿಂದ ಸೃಜಿಸಿದ್ದ ಸರ್ವರಿಗೆ ನಿಜವಾಗಿ ಶಿರವಾಗಿ ಭಜಿಸುವೆ ಚನ್ನಾಗಿ ತ್ರಿಜಗದೊಳಗೆ ಎನ್ನ ರಜ ತಾಮಸ ಗುಣದ ವೃಜವೆ ಓಡಿಸಿ ನಿತ್ಯಸುಜನ ಮಾರ್ಗವ ತೋರಿ ರಜನಿ ಚರಾಂತಕ ವಿಜಯವಿಠ್ಠಲನ್ನ ಭಜಿಪೆನದಕೆ ನಿಮ್ಮ ನಿಜವ್ಯಾಪಾರದಿ ಸೃಜಿಸಿ ಕೊಡುತ ಧರ್ಮ ವೃಜಗಳೊದಗಿಸುತ್ತ ಕುಜನ ಮತದ ಮೇಲೆ ಧ್ವಜವೆತ್ತಿಸುವುದು 7
--------------
ವಿಜಯದಾಸ
ತವರು ಮನೆಯು ನನ್ನ ಸುವಿದ್ಯಪುರಲ್ಯದೆ ಸಾವಿರಕೊಬ್ಬಗೆ ದೋರುತದೆ ಧ್ರುವ ಸಾವಿರಕೊಬ್ಬನೆ ತಾ ಸುದೇವನೆ ಬಲ್ಲ ಭಾವಿಸದಲ್ಲದೆ ತಿಳಿಯುವದಲ್ಲ ಅವಿದ್ಯಪುರ ದಾಟ, ಮಂದಾಕ್ಕಾಗಲು ಎಲ್ಲ ಆವಾಗ ತಿಳಿವುದು ಹೇಳಿದ ಸೊಲ್ಲ 1 ಸಾವಿರ ತೆನೆಯಲೊಪ್ಪುತದೆ ಒಳಕೋಟ ಠವಿಠವಿಸುತದೆ ನೋಡಿ ಮನಮುಟ್ಟಿ ಅವ್ವ ಅಪ್ಪನೇ ನಮ್ಮ ಇಹಸ್ಥಾನವು ಘಟ್ಟಿ ದೇವಾಧಿ ದೇವನೊಬ್ಬನೆ ಜಗಜಟ್ಟಿ 2 ಬಲು ಅಭೇದ್ಯಸ್ಥಳ ತಿಳಿಯದಿನ್ನೊಬ್ಬರಿಗೆ ನೆಲೆವಂತರಿಗೆ ತಾನು ತಿಳಿವದು ಬ್ಯಾಗೆ ತುಂಬಿ ಥಳಗುಟ್ಟಿ ಹೊಳವ್ಹಾಂಗೆ ಬಲಗೊಂಡು ಕೇಳಿ ಶ್ರೀಸದ್ಗುರುವಿಗೆ 3 ಅಣ್ಣನೆಂಬಾತ್ಹಾನೆ ಅನಂದದಲ್ಹಾನೆ ನೆನೆಪಿಗೊಮ್ಮೆ ಬಂದು ಸುಳವುತ್ಹಾನೆ ಕಣ್ಣೆಲಿ ಕಟ್ಯಾನೆ ತಮ್ಮನೆಂಬತ್ಹಾನೆ ಕ್ಷಣಕೊಮ್ಮೆ ಹೊಳೆವುವಾನೆ4 ಅಕ್ಕನೆಂಬಾಕಿ ತಾ ಸಖರಿ ಅಗ್ಹಾಳೆ ಅಖರದಲೆವ್ವ ಈ ಮಾತು ಕೇಳೆ ಪ್ರಖ್ಯಾತದಲಿ ಪ್ರೀತಿಮಾಡುವ ತಂಗ್ಹ್ಯಾಳೆ ಸುಖ ಸುರುತ್ಹಾಳೆ ಇರುಳು ಹಗಲು 5 ಅತ್ತಿಗೆ ನಾದುನಿ ಭಾವ ಮೈದುನರೆಲ್ಲ ಅಂತ್ಯಕವಾಗ್ಹ್ಯಾರೆ ಮನಿಯೊಳಗೆಲ್ಲ ಸುತ್ತೇಳುವ ಬಳಗ ಉತ್ತುಮರೆನಗೆಲ್ಲ ಹಿತದೋರುತಾರವ್ವ ಸರ್ವಾಪ್ತರೆಲ್ಲ 6 ಸರ್ವಾಪ್ತವೆಂಬುದು ಸರ್ವೇಶನೆ ತಾನು ಸರ್ವದಾ ಎನ್ನೊಳು ತಾ ಕಾಮಧೇನು ಪರ್ವಕಾಲದ ಬಹಳ ಏನೆಂದ್ದೇಳಲಿ ನಾನು ಸರ್ವಾರ್ಥ ಕೊಡುತ್ಹಾನೆ ಸರ್ವಾತ್ಮ ತಾನು 7 ಅವ್ವ ನಮ್ಮಪ್ಪಗೆ ಸರಿ ಇಲ್ಲ ಜಗದೊಳು ಆವ ಕಾಲಕೆ ತಾ ಇವರ ಮೇಲು ಇವರೆಂಬುದು ಒಂದೆ ಮಾತಿನ ಸ್ವಕೀಲು ಸವಿಸುಖಬಲ್ಲರು ಅನುಭವಿಗಳು 8 ತೌರಮನೆಂಬುದು ಪ್ರತ್ಯೇಕಾ ತಾನಿಲ್ಲ ಭಾವಾರ್ಥದ ಮಾತು ಕೇಳಿರೆಲ್ಲ ಅವಗುಣನೆ ಬಿಟ್ಟು ಕೇಳಿ ಸವಿಯ ಸೊಲ್ಲ ಪೂರ್ವಿಕರಿಗಿದೆ ಸಾರವೆಲ್ಲ 9 ಸುದ್ದಿ ಹೇಳಿ ಕಳುಹುಲಿಕ್ಕೆ ಈ ಸಾಧನ ಇದುವೆ ಅಯಿತು ತವರ ಮನಿ ಬುದ್ಧಿವಂತನೆಬಲ್ಲ ಲಕ್ಷಕೊಬ್ಬ ಜ್ಞಾನಿ ಸಿದ್ಧಿದರಿಡುವದು ಸದ್ಗುರು ಪ್ರಾರ್ಥನಿ 10 ಬಳಗದೊಳು ಕೂಡಿ ಒಳಿಥಾಗ್ಯಾಯಿತು ಎನಗೆ ಒಳ ಹೊರಗೆ ಸುಖ ಎದುರಿಟ್ಟತೀಗ ಕುಲಕೋಟಿ ಬಳಗ ಸದ್ಗುರು ಪಾದವ್ಯನಗೆ ಸಲಹುತಾನೆ ಸ್ವಾಮಿ ಮಹಿಪತಿಗೆ 11
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ತಾ ಕಾಯುತಿದ್ದ ಕೃಷ್ಣನು ಗೋಪಾಲರನೂಗೋಕುಲದಲ್ಲಿ ಗೂಢನೂ ಪುೀಕುಂಭಿನಿಯೊಳಗಿರುತಿಹ ದುಷ್ಟರನೂಕುವ ಬಿಲದಲಿ ಅನುಪಮ ಧೀರಾ ಅ.ಪಅಸಿತ ಪಕ್ಷವು ಬಂದುದೂ ಮಾಸಗಳೊಳುಎಸೆವೇಕಾದಶಿಯೆಂಬುದು ಬರಲು ಅಂದುಬಸವಾಸುರಾನಾ ಬಡಿದು ತಾನಂದು ವ್ರಜದಿ ವಸುಧೇಶ ನಿದ್ದನೊಲಿದು ಅಸುರನು ಅಳಿಯಲು ಆ ವ್ರಜವುಳಿಯಲು ಹಸುಗಳು ಹೆಚ್ಚಲು ಹರಿ ತಾನಲಿಯಲು ವಸಗೆವ್ರಜದೊಳಗೆ ಬಹುಮಸಗೆ ಹೆಸರಾಗೆ 1ದ್ವಾದಶೀ ದಿವಸಾದಲ್ಲಿ ಉದಯಕಾಲವಾದುದು ''ತದಲ್ಲಿ ಶ್ರೀಕೃಷ್ಣನಿಗೆಬೋಧವಾಗಲು ಬೇಗದಲಿ ಬಾಲರು ಸಹಾ ಮಾಧವಾ ಮುದದಿಂದಲಿಕಾದಿರೆ ಗೋವ್ಗಳ ಕಾನನಮಧ್ಯದಿಕಾದಲು ಬಂದಾ ಕೇಶಿಯನುದಯದಿಕಾದಿ ಅಸುವಸಿಗಿದಿ ವೊದ'ದೀ ಈ 'ಧದಿ 2ವೃಂದಾಖ್ಯವಾದವನಾದಿ ಗೋಪಾಲಕರಾ ವೃಂದದಾ ವರಸ್ತೋಮವಾಮದಿ ನಿಂದಿದ್ದನಾಗಾಕಂದರ್ಪಕೋಟಿತೇಜದಿ ಕುಂಭಿನಿಯನ್ನು ಹೊಂದಿಸಿದನು ಹರುಷದಿ ಮಂದರಧಾರನು ಮಂಜುಳ ಮ'ಮನು ನಿಂದಿಹ ನೀರನು ನಿಜಗುಣಧಾಮನು ಅಂದು ಅಜಬಂಧು ತಾನೆಂದೂ ಅಲ್ಲಿನಿಂದು3ಘನ ನೀಲಾಳಕದ ವೃಂದ 'ುಶ್ರಿತವಾದಾಮಣಿಮಯ ಮಕುಟದಿಂದಾ ಮೂಡುವ ಕಾಂತಿಪಣೆಯಲ್ಲಿ ಮೊಳೆಯುವಂದಾ ಕಸ್ತುರಿತಿಲಕ ಗಣನೆಗೆ ಬರುವ ಛಂದಾ ಗುಣಿಸುವರಾರಿದ ಗುಣನಿಧಿಯೊಪ್ಪಿದ ಪ್ರಣತಪ್ರೇಮದ ಪದ ಮುಖ ಪದ್ಮದಗುಣನೂ ಗುರುತರನೂ 'ನಯವನೂ 'ವರಿಪನೂ 4ಸಿಂಗಾರಿಯ ಸೋಲಿಸುವಾ ಸುಭ್ರುವದಿಂದಾಮಂಗಳವಾದ ಮುಖದ ಮನ್ನಿಸುತಿಹಕಂಗಳ ಕೋಡಿವರಿವಾ ಕಟಾಕ್ಷವನ್ನೂ ಸಂಗಿಸಿದ ಸುಸ್ಮಿತವಾ ತೊಂಗುತ ತೋರಲು ತನ್ನಾಸಿಕವೂರಂಗಿಸಿ ರಾಜಿಸೆ ರದನಚ್ಛದವೂಹೊಂಗೆ ುೀರಂಗೆ ನೋಳ್ಪಂಗೆ ಭವ'ಂಗೆ 5ಕುಂಡಲಗಳ ಕಾಂತಿಯೂ ಕರ್ನಾಗಳಲ್ಲಿಮಂಡಿತವಾಗಿ ಮತ್ತೆಯೂ ಮುಕುರದಂಥಾಗಂಡ ಸ್ಥಳಗಳಲ್ಲಿಯೂ ಗೋಚರಿಸುತ ದಿಂಡಾಗಿ ತೋರೆ ದೀಪ್ತಿಯೂ ಪುಂಡರೀಕಾಕ್ಷನು ಪೊಳೆಯುತಲಿದ್ದನು'ಂಡುತ ಖಳರನು ಹೆದರುವ ಜನರನುಕಂಡೂ ಕರಕೊಂಡೂ ಕೈಕೊಂಡೂ ಹುರಿಗೊಂಡೂ6ವೇಣುವ 'ವರಿಸಲು 'ೀರನಾ ಮುದ್ದೂತಾನೊಂದು ತೇಜ ತೋರಾಲು ಅಂಗುಲೀಗಳುಅನುಕೂಲಗಳಾಗಾಲು ಉಂಗುರಗಳೊಳು ಮಾಣಿಕ್ಯಗಳು ಮೂಡಲುಭಾನುವ 'ುೀರಲು ಬಾಹುಗಳೊಪ್ಪಲುಗಾನಗಳಾಗಲು ಗೋವ್ಗಳು ಕೇಳಲುತಾನು ತೋರಿದನು ಜಾಣುವನು ಜಗಧರನೂ 7ಭೋಗಿಯ ಭೋಗದ ಹಾಗೆ ಬಾಹುಗಳಿರೆತೂಗಿ ಜಾನುಗಳ ತಾಗೆ ಕೇಯೂರಗಳರಾಗ ರಂಜಿತಗಳಾಗೆ ಕಂಕಣವಲಯ ಯೋಗದಿಂದಿರೆ 'ೀಗೆಆಗಿನ ಕಾಲದಲಮರಿದ ಶೃಂಗದುೀಗುರು ಕೃಷ್ಣನ ಇಷ್ಟ ಕೊಳಲಿನಯೋಗೀ ಇಹಭಾಗೀ ಗತರಾಗೀ ಗುರಿಯಾಗೀ8ಕಂಬುಕಂಧರದಿಂದಲೂ ಅಲ್ಲಿರುತಿಹತೊಂಬೆ ತಾರಹಾರಗಳು ಲಕ್ಷ್ಮಿಯು ತಾನುಇಂಬೀನುರದಲಿರಲು ಕೌಸ್ತುಭಕಾಂತಿ ತುಂಬಿ ನಾಭಿಯ ತಾಕಲುಅಂಬುಜ ಸಂಭವನಾಲಯ'ರಲುಜೃಂಭಿಸಿ ಮಾಲೆಯು ಜೋಲಿಡುತಿರಲೂನಂಬೀ ಬಹುತುಂಬೀ ುಹವೆಂಬೀ ಜಗದಿಂಬೀ 9ಕಟಿತಟದತಿಶಯವು ಕಾಂಚಿಯಧಾಮಾಸ್ಪುಟವಾಗಿ ಸ್ವರ್ಣವಸ್ತ್ರವು ಊರುಗಳಲ್ಲಿಗೆಘಟಿಸಿರೆ ಗೂಢವಾದವೂ ಜಾನುಗಳಿಂದ ಪಟು ಜಂಘೆ ಪುದುಗಿಹವೂಕಟಕಗಳಿಂದಲು ಕಡುಚೆಲುವೆನ್ನಲುಅಟಸುತಲಡಿಗಳು ಅತಿಮೃದುವೆನ್ನಲುದಿಟನೂ ನರನಟನೂ ಭವತಟನೂ ಪಟುತರನೂ 10ಕಮಲ ಸೋಕಲು ಕಂದುವ ಲಕ್ಷ್ಮೀಯಕರಕಮಲಕೆ ಕಾಂತಿಯನೀವ ಯೋಗಿಯ ಹೃದಯಕಮಲದಿ ಕುಳಿತಿರುವ ುೀ ದಿವ್ಯಪಾದ ಕಮಲವಕಾಣಿಸುವಾಕಮಲೆಯ ಕಾಂತನ ಕಮಲಜ ಜನಕನ ಕಮಲವ ಕಾವನ ಕಾಂತಿಯ 'ುೀರ್ವನಕ್ರಮವೂ ಕಾಮದವೂ ಶ್ರಮ ಶಮವೂ ಶೋಭನವೂ 11ಬಲಿಯ ಬಳಿಗೆ ಬಂಜವು ಭಾಗ್ಯವನಿತ್ತುಸಲ'ದ ಸೌಮ್ಯಗಳಿವು ಬ್ರಹ್ಮನು ಬಂದುತೊಳೆಯಲು ಬಂದು ತೋರುತಿದ್ದವು ಆ ಪಾದಗಳೆ ಇಳೆಯೊಳಗಿರುತಿಹವೂಕಲಿಮಲಹರಗಳು ಕಲಿಗಳ ಕಾವವುತಾಳಿದವು ನಾಗನ ತದ್ವಶವಾಗಲುಸಿಲುಕೀ ಸಿರಿತುಳುಕೀ ಅಘಕಲಕೀ ಅವು ನಿಲುಕೀ 12ಅಂಕುಶವರ'ಂದವು ಧ್ವಜವಜ್ರವಂಕೀತವಾಗಿಯಾಢ್ಯಾವು ಲಕ್ಷ್ಮಿಯ ಕುಚಕುಂಕುಮವನ್ನು ಕದ್ದವು ಭೂ'ುಗೆ ಪಾದ ಪಂಕಜಗಳು ಬಂದಾವುಕಿಂಕರರಭಿಮತ ಕಂಕೆಯನಟ್ಟುತಮಂಕುಗಳೆನಿಸುತ ಮಲೆವರ ಮುರಿಯುತಶಂಕೆ ಸಲೆ ಕೊಂಕೆ ಹೊರೆುಂಕೆ ಸಿರಿಸೋಂಕೆ13ಈ ರೀತಿಯಲಿ ಈಶನು ಇರುತಲಿರೆನಾರದ ಬಂದು ನಿಂದನು ಕಾಣುತ ಕೃಷ್ಣಕಾರುಣ್ಯ ನಿಧಿ ಕೇಳ್ದನು ಕ್ಷೇಮಗಳನು ತೋರುತ ರೂಪವ ತಾನುವಾರಿಜನೇತ್ರನು ವರದವರೇಣ್ಯನು'ುೀರದೆ ಮುನಿಯನು ಮಾತನು ನುಡಿದನುಸಿರೀ ಅನುಸಾರೀ ಬಗೆದೋರೀ ಮುರವೈರೀ 14ಅರಿತನು ಆತನನುವ ಆ ಕಂಸಗಾಗಅರು' ತೋರಿಸಿದರ್ಥವ ಅದು ತನ್ನ ಕಾರ್ಯನೆರವೇರುವತಿಶಯವ ತಾನಾಗಿ ಮುನ್ನ ಪಿರಿದಾಗಿ ಪ್ರೇರಿಸಿರುವಕರುಣಾವನಧಿಯು ಕಾರ್ಯವ ತೋರಿಯುಮುರಹರಮೂರ್ತಿಯು ಮುಂದಿರುವಲ್ಲಿಯುಅರಿತೂ ಅಲ್ಲಿಕುಳಿತೂ ಬರೆಹೊತ್ತೂ ುದಿರಿತ್ತು 15ಕಾಣುತ ಮುನಿಕೃಷ್ಣನ ಮಾನಸದಲ್ಲಿಧ್ಯಾನಿಸಿದನು ದೇವನ ತಾ ಬಂದುದನ್ನುತಾನು ತೋರಿಸಲು ತತ್ತ್ರಾಣ ಬಂದಾಗ ನ'ುಸಿ ಪ್ರಾಣೇಶಗತಿಪ್ರ'ೀಣಾಕೃಷ್ಣಾ ಕಂಸಗೆ ಹೊದ್ದುವ ರೀತಿಗೆಶ್ರೀನಿಧಿಯಾದಗೆ ಸೂಚಿಸಿ ಸ್ವಾ'ುಗೆತಾನು ಅಜಸೂನು ಅರು'ದನು ಅರಿತದನೂ 16ಮಾನುಷಮೂರ್ತಿಯಾಗಿಯೆ ಭೂ'ುಗೆ ಬಂದುಆನತರನು ಆಳಿಯೆ ಅರ್ಥವ ಸಲಿಸಿಧೇನುವಾಗಿಹೆ ಧೊರೆಯೆ ಯೆನ್ನುತ 'ೀಗೆ ಆನತನಾಗುತಲಿಯೆಮಾನಸಪುತ್ರನು ಮಾತನು ನುಡಿದನುಶ್ರೀನಿಧಿ ತಿರುಪತಿ ವೆಂಕಟರಮಣನುತಾನೂ ತಾಳಿದನೂ ಮಾನಸನೂ ಮಾಡ್ದುದನೂ 17
--------------
ತಿಮ್ಮಪ್ಪದಾಸರು
ತಾತ್ವಿಕ ಹಿನ್ನೆಲೆಯ ಹಾಡುಗಳು (ಸರ್ವೋತ್ತಮತ್ವ ವರ್ಣನೆ) ಸಕಲವು ತ್ವದಧೀನವು ಶ್ರೀಶನೀ ಕೇಳು ಪ. ಸಕಲವು ತ್ವದಧೀನ ಸಾಕಯ್ಯ ಸತ್ಯಮಾನ ವಿಖನ ಸಗಣಧಾಮ ವಿಶ್ವಗುಣಾಭಿರಾಮ ಅ.ಪ. ಕಮಲ ಸಂಭವ ಮುಖರು ಶ್ರೀಶ ತ್ವತ್ಪಾದ ವಿಮಲ ಪದ್ಮ ಸೇವಕರು ಅಮಿತ ಗುಣಾಂಬುಧಿ ಆಡುವಿ ನಿರುತದಿ ದುರಿತ ಬೀಜ ಶ್ಯಾಮ ಸುಂದರ ರಾಜ 1 ದೇಹ ಗೇಹಾದಿಗಳೆಲ್ಲ ಸುವರ್ಣ ಪಕ್ಷಿ ವಾಹ ನಿನ್ನೊಶ ಭೂನಲ್ಲ ಮೋಹದಿ ತನ್ನದೆಂದು ಜೋಹಗೊಂಡ ಪರಿಗೆ ಬಾಹದಿರದು ಕೇಡು ಬಿಡದೆಂದು ನಗೆಗೇಡು 2 ಪರಮ ಕೃಪಾಳು ನಿನ್ನ ಪಾದವ ನಂಬಿ ಮರೆದೆ ದುರ್ಮಾನವನ್ನ ಉರಗ ಗಿರೀಂದ್ರನೋಳ್ಮೆರೆವ ಮಹಾತ್ಮನೆ ಶರಣ ಜನ ಮಂದಾರ ಸೇರಿಸು ಕೃಪಾಧಾರ3
--------------
ತುಪಾಕಿ ವೆಂಕಟರಮಣಾಚಾರ್ಯ
ತಾತ್ವಿಕವಿವೇಚನೆ ಏರಿಸಿ ಏರಿಸಿ ಮಾರುತ ಮ್ವತಧ್ವಜ ಸಾರ ಸುಖಂಗಳ ನಿತ್ಯದಲುಂಬುವ ಯೋಗ್ಯತೆ ಯುಳ್ಳವರೂ ಪ ಈರನ ಮತವೇ ಸಾರವು ಶ್ರುತಿಗಳ ಶೌರಿಯ ಮತವೇ ಈರನ ಮತ ಖರೆ ದೂಡಿರಿ ಸಂದೇಹ ಅ.ಪ ಇಲ್ಲವು ಜಗವಿದು ಭ್ರಾಂತಿಯ ಕಲ್ಪನೆ ಸುಳ್ಳೇ ಎಲ್ಲವು ಬ್ರಹ್ಮನ ಬಿಟ್ಟರೆ ಬ್ರಹ್ಮನೆ ಸತ್ಯವೆನೆ ಅಲ್ಲವು ನುಡಿಯಿದು ಬ್ರಹ್ಮನು ಕಾರಣ ಸುಳ್ಳಾಯಿತು ನುಡಿ ಅಲ್ಲವೆ ಯೋಚಿಸಿ ಕೊಡದು ಈ ಮನವು 1 ಉಂಬುದು ಉಡುವುದು ಕಾಂತೆಯ ಸಂಗವು ನಂಬಲು ಬೇಡಿರಿ ಸುಳ್ಳೇಯೆಂತೆಂನೆ ಸಾಕ್ಷಿಯು ಒಪ್ಪುವುದೇ ನಂಬಲನರ್ಹವೆ ಕಾರ್ಯಸುಕಾರಿಯ ಖರೆ 2 ಒಂದೇ ತೆರವಿಹ ವಸ್ತು ದ್ವಯವಿರೆ ಒಂದನು ಮತ್ತೊಂದೆಂಬುವ ಭ್ರಾಂತಿಯು ಕೊಡುವದೂ ಪೊಂದಿಹ ಹೇಗೆನೆ ಉತ್ತರ ಸಿಕ್ಕದು ಯೋಚಿಸಿ ಕೋವಿದರೆ 3 ಭ್ರಾಂತಿಯ ಪೆಣ್ಣನು ಕೊಡುತ ತಾಸ್ವಾ ತಂತ್ರ ವಿಹೀನನು ಆಗುತ ಮಿಡುಕುವ ದೇವನು ಎನಿಸುವನೆ ಮಂತ್ರಿಸೆ ಬ್ರಹ್ಮನ ನಾನಿಹೆ ನೆಂಬುದ ಭ್ರಾಂತಿಯ ತೊಲಗುತ ಬ್ರಹ್ಮನು ಆಹನೆ ಮನವ ವಿಚಾರಿಸಿರಿ4 ನಾನೇ ಬ್ರಹ್ಮನು ಎಂಬೀ ಜ್ಞಾನವು ತಾನೇ ಬಾರದು ಸಹಜ ವಿದಲವು ಅನುಭವ ವಿರುದ್ಧಾ ತಾನೇ ಬ್ರಹ್ಮನು ಆಗಿರೆ ಭವದೊಳು ನಾನಾ ದುಃಖವ ನುಣ್ಣಲು ಬಂದರೆ ಹುಚ್ಚನೆ ಅವಸರಿಯು5 ಬ್ರಹ್ಮ ದ್ವಯವಿದೆ ಸತ್ಯ ದ್ವಯವಿದೆ ಬ್ರಹ್ಮನು ಆಹುದು ಕೊನೆ ಮಾತೆಂದರೆ ಬ್ರಹ್ಮನು ಶೂನ್ಯನಿಹ ಬ್ರಹ್ಮನು ನಿರ್ಗುಣ ನಂದವಿಹೀನನು ಬ್ರಹ್ಮನ ಗತಿಯೆನೆ ಸರ್ವವಿನಾಶವೆ ಯಾರಿದ ಬಯಸುವರೂ6 ವ್ಯಕ್ತಿತ್ವವು ತಾನಾಶವು ಆಹುದೆ ಮುಕ್ತಿಯು ಯೆಂತೆನೆ ಸರ್ವವಿನಾಶಕೆ ಸಾಧನೆಯೇ ಬತವು ಮುಕ್ತಿಯು ದುಃಖವಿವರ್ಜಿತ ಬರಿಸುಖ ರಿಕ್ತವು ಬರಿಯೆನೆ ಭವವಿದು ವರವೈ ಬೇಡವು ಆ ಮುಕ್ತಿ7 ಸತ್ಯವ ನುಡಿವುದು ವೇದವು ಒಂದೆಡೆ ಮಿಥ್ಯವ ನುಡಿವುದು ಮತ್ತೊಂದೆಡೆಯೆನೆ ಯಾವುದು ಸಿದ್ಧಾಂತ ಮೊತ್ತವ ನೂಕುತ ಕಿಚ್ಚಡಿ ವೇದಕೆ ಮೊತ್ತವ ಕೊಳ್ಳುತ ಒಂದೇ ಅರ್ಥವ ಜೋಡಿಸಿ ಇದು ನೀತಿ8 ಬೌದ್ಧರು ಒಪ್ಪನು ಶ್ರುತಿಗಳ ದೇವನ ವೇದವ ಒಪ್ಪುವ ಮಾಯಾವಾದಿಯ ಬ್ರಹ್ಮನು ಸೊನ್ನೆಯಿಹ ವೈದಿಕ ವೇಷದ ಬೌದ್ಧನ ವಾದವೆ ಶೋಧಿಸಿ ನೋಡಲು ಮತ್ತೇನಿಲ್ಲವು ಚಿಂತಿಸೆ ಸರಿಯಿಷ್ಠೆ9 ತರತಮ ಬಹುವಿಧ ಭೋಗವ ಮುಕ್ತಿಲಿ ಇರುವುದು ಸಿದ್ಧವು ಶೃತಿಗಳ ನಂಬಲು ಜೀವರ ಭಿನ್ನತೆಯು ಸ್ಥಿರವೇ ಆಯಿತು ಇದರಿಂ ಮುಕ್ತಲಿ ಪರಿ ಬಗೆತಾ ವಿದಿತವೆ ಜಗದಲಿ ಭೇದವೆ ಸರ್ವತ್ರ10 ನಾಸ್ತಿಕ ವಾದವ ತಳ್ಳಿರಿ ಆಚೆಗೆ ನಾಸ್ತಿಕ ಬಂದನೆ ತಂದೆಯು ಇಲ್ಲದೆ ಕಾರ್ಯವು ಜಗವಿರಲು ಆತನು ನೊಡಿಹ ಜ್ಞಾನಿಗಳಿಲ್ಲವೆ ಪೊಗಳವೆ ಗೋತತಿಯು11 ಪ್ರಕೃತಿ ವಿಕಾರದ ಜಗವಿದು ವಿದಿತವೆ ವಿಕಲ ವಿಶೇಷದ ಜೀವನು ಹಾಗೆಯೆ ಉಭಯರ ಆಳುವನು ವಿಕಲ ವಿವರ್ಜಿತ ಸಕಲ ಗುಣಾರ್ಣವ ಸಕಲ ನಿಯಾಮಕ ಸರ್ವ ಸಮರ್ಥನು ಇರಲೇ ಬೇಕಷ್ಟೆ12 ನಿತ್ಯವು ಈತ್ರಯ ಸಿದ್ಧವು ಆದರೆ ನಿತ್ಯ ಪರಸ್ಪರ ಸಂಬಂಧ ತ್ರಯ ಜ್ಞಾನವೆ ಪುರುಷಾರ್ಥ ಉತ್ತಮ ನೊಬ್ಬನು ಅಧಮರು ಇಬ್ಬರು ಮತ್ತಿವರಲಿ ಹಾಗಧಮನು ಜೀವನು ಚೇತನ ಪ್ರಕೃತಿ ವರ13 ಸರ್ವ ಸ್ವತಂತನು ಒಬ್ಬನೆ ಇರದಿರೆ ಸರ್ವಾ ಭಾಸವೆ ಜಗವಿದು ಆಹುದು ಪ್ರಭು ದ್ವಯ ಕೂಡುವುದೆ ಸರ್ವಗ ಶಾಶ್ವತ ಪೂರ್ಣಾ ನಂದನು ಸರ್ವ ವಿಚಿತ್ರನು ಮುಕ್ತಿದನಿರದಿರೆ ಪ್ರಭು ಅವನೆಂತಾಹ14 ಶುರುಕೊನೆ ಮಧ್ಯವು ಇದ್ದ ದೇವಗೆ ಬರುವನೆ ಹೊಸ ಹೊಸ ದೇವನು ಪ್ರತಿಪ್ರತಿ ಕಲ್ಪದಿ ಯೋಚಿಸಿರಿ ಇರದಿರೆ ಸಕಲೈಶ್ವರ್ಯವು ಆತಗೆ ತರುವನು ನಂದದ ಸೃಷ್ಠಿಯ ಹೇಗವ ವರಸಮರಿಲ್ಲವಗೆ15 ಸುಳ್ಳಿರೆ ಜಗವಿದು ಪಾಲಿಪ ದೊರೆಯದ ಕಳ್ಳನೆ ಅಲ್ಲವೆ ಅಷ್ಠಕರ್ತುತ್ವವು ಕೂಡುವ ದ್ಹೇಗಿನ್ನು ಎಲ್ಲಾ ಜಗವಿದು ನಿತ್ಯಾ ನಿತ್ಯವು ಎಲ್ಲಾ ಸತ್ಯವೆ ಶ್ರುತಿಗಳ ನುಡಿಗಳು ಭೃತ್ಯರು ಜೀವಗಣ16 ನಿತ್ಯವು ಪ್ರಕೃತಿಯು ಜೀವರು ಈಶನು ಸತ್ಯವು ಇದುಯೆನೆ ಪಂಚಸುಭೇದವು ನಿತ್ಯವೆ ಎಲ್ಲೆಲ್ಲು ನಿತ್ಯ ಸುಖಂಗಳ ಬಯಸುವ ನಮಗವು ಹತ್ತವು ಕಾರಣ ಸರ್ವಸ್ವತಂತ್ರನು ದೇವನೆ ಸತ್ಯವಿದು17 ಚೇತನ ಪ್ರಕೃತಿಯೆ ಲಕ್ಷ್ಮಿಯು ತಿಳಿವುದು ಆತನ ರಾಣಿಯು ನಿತ್ಯಸುಮುಕ್ತಳು ನಿತ್ಯಾವಿಯೋಗಿನಿಯು ಚೇತನ ನಿಚಯದ ಚೇತನ ಹರಿ ಇಹ ಆತನೆ ದೊರೆ ಜಗ ಜಂಗಮ ಸ್ಥಾವರ ಸತ್ತಾದಾಯಕನು 18 ದೋಷ ವಿದೂರ ಅಶೇಷ ಗುಣಾರ್ಣವ ದಾಸ ಪೋಷನಿಜ ಮುಕ್ತಿದ ನಿರದಿರೆ ಭಜಿಸುವದೇಕವನ ಶ್ರೀಶನು ಬಿಡೆ ಜಡ ಚೇತನ ಚೇಷ್ಠೆಯು ನಿಹ ಉಲ್ಲಾಸದಿ ಭಜಿಸುವುದು 19 ಪರಿಮಿತ ಶಕ್ತನು ದೇವನು ಇದ್ದರೆ ಪರಿಮಿತ ಜೀವರ ತೆರವೇ ಆಹನು ಕಾರಣ ನಿಸ್ಸೀಮ ಹರಿಗುಣವಗಣಿತ ಸಿಗ ಸಾಕಲ್ಯದಿ ನಿರುಪಮ ಸುಖಜ್ಞಾನಾತ್ಮಕ ವಿಭುವರ ಅನಾದಿ ಸಿದ್ಧವಿದು 20 ಪ್ರಾಕೃತ ಗುಣಗಣ ವರ್ಜಿತ ದೇವನ ಜ್ಞಾನ ಸುದೃಷ್ಠಿಗೆ ಗೋಚರನು ಸ್ವೀಕೃತ ನಾದರೆ ಜೀವನು ಹರಿಯಿಂ ತಾಕಿಸಿ ದೃಷ್ಠಿಗೆ ತನ್ನನೆ ತೋರುವ ಭಕ್ತರ ಬಾಂಧವನು 21 ತರತಮ ಜ್ಞಾನದಿ ಗುಣ ಉತ್ಕರ್ಷವು ಬರುವುದು ಕಾರಣ ತಿಳಿಯುತ ಹರಿಪರ ಮೋಚ್ಛನು ಹೌದೆನ್ನಿ ಅರಿವುದು ಅತಿಪರಿ ಪಕ್ವದ ಭಕ್ತಿಯ ಮಾಧವ ಮೆಚ್ಚುವನು22 ವೇದಗಳಿಂದಲೆ ದೇವನು ವ್ಯಕ್ತನು ವೇದಗಳಿಂದಲೆ ಧರ್ಮಾಧರ್ಮವಿ ವೇಕವು ಸರಿಯಷÉ್ಠ ವೇದ ನಿಜಾರ್ಥವೆ ಸಚ್ಛಾಸ್ತ್ರಂಗಳು ಮೋದವೆ ದೊರಕದು ಬಿಟ್ಟರೆ ಇವುಗಳ ಸಾದರ ಭಜಿಸುವುದು23 ಬಿಂಬನು ಹರಿ ಪ್ರತಿ ಬಿಂಬನು ಜೀವನು ಬಿಂಬಾಧೀನವು ಪ್ರತಿ ಬಿಂಬನ ಚೇಷ್ಠೆಗಳೆಂತರಿತು ಉಂಬುತ ಮುದದಿಂ ಸುಖದುಃಖಂಗಳ ಬಿಂಬಕ್ರಿಯೆಯೆನುಸಂಧಾನವ ಗುರುವಿಂದರಿತು ಸಮರ್ಪಿಸಿ24 ಮೆಚ್ಚುಲು ಮಾಧವದಾವುದಸಾಧ್ಯವು ಅಚ್ಚುತನೊಲಿಮೆಗೆ ಹೆಚ್ಚಿದುದೇನಿದೆ ಕೊಚ್ಚುತಕಲಿ ಸೊಂಕು ತಚ್ಛಭಿಮಾನ ಫಲೇಚ್ಛೆಯ ತ್ಯಜಿಸುತ ಕಚ್ಛಪ ನೊಲಿಮೆಗೆ ವಿಧಿಯ ನಿಷೇಧವ ಮರೆಯದೆ ಗೈಯುತಲಿ25 ಪರ ಮೋಚ್ಚನು ವರಸಮರಿಲ್ಲವು ಸಿರಿ ವರ ವಿಧಿಪಿತ ಸೃಷ್ಠ್ಯಾದ್ಯಷ್ಠಸು ಕರ್ತನು ವಿಭುವೆಂದು ನಿರುಪಮ ನಿಖಿಳಾಗಮ ಪ್ರತಿ ಪಾದ್ಯನು ಸ್ವರತ ಸ್ವತಂತ್ರನು ಪೂರ್ಣಾನಂದನು ಎನ್ನುತ ಸಾರುತಲಿ26 ಸಾಮನು ಸರ್ವರ ಬಿಂಬನು ಸರ್ವಸು ನಾಮನು ಸರ್ವಾಧಾರನು ಜಡಜಂಗಮ ವಿಲಕ್ಷಣನು ಭೂಮನು ಭಕ್ತ ಪ್ರೇಮಿಯು ಸದ್ಗುಣ ಧಾಮನು ಪೂರ್ಣನು ನಿಜ ಸುಖ ಮುಕ್ತಿದನೆನ್ನುತ ಸಾರುತಲಿ27 ವಿಧಿ ಪರಿಸರ ವಿಪಶಿವ ಪ್ರಮುಖರು ಪರಿವಾರವು ನಿರವದ್ಯನು ಮುಕ್ತಾ ಮುಕ್ತರ ನಾಯಕನು ಉರುಗಾಯನ ಜಗದೊಳ ಹೊರವ್ಯಾಪ್ತನು ಪರಿಮರ ಸ್ವಗತ ಭೇದ ವಿವರ್ಜಿತನೆಂಬುದ ಸಾರುತಲಿ28 ತರತಮ ಪಂಚಸುಭೇದವು ನಿತ್ಯವು ನಿರುತದಲುಂಬುವ ಸಾರವೆ ದುಃಖ ನಿರ್ಲೇಪನು ಅದ್ಭುತನು ಅರಿಯರು ಯಾರೂ ಇವನೇ ವಲಿಯದೆ ಪುರುಷೋತ್ತುಮ ಸಾಕಲ್ಯದವಾಚ್ಯನು ಎಂದು ಡಂಗುರ ಹೊಡೆಯುತ 29 ಗುರುವಿನ ದ್ವಾರವೆ ಹರಿತಾ ವಲಿಯುವ ಗುರುವೆನೆ ಮುಖ್ಯದಿ ಮುಖ್ಯ ಪ್ರಾಣನೆ ಸರಿಸಿರಿ ಯೆಂತೆಂದು ಗುರುಗಳು ಹಿರಿಯರು ಎಲ್ಲಾ ಕ್ರಮದಲಿ ಮಧ್ವರಿಗೊಂದಿಸಿ ಮುದದಿ 30 ಅನುಭವವಿಲ್ಲದ ಜ್ಞಾನವು ವಣವಣ ಸಾಧನೆ ಇದು ಖರೆಯ ಚಿನುಮಯ ನೊಲಿಸಲ್ ಮನೆಧನ ಬೇಡವು ತನುಮನೆ ವಿಷಯಗಳಿಂದಲೆ ಪೂಜಿಪ ಕ್ರಮದಿಂಯಜಿಸುತ 31 ಕಲಿಯುಗವಿದು ವರ ಸುಲಭದಿ ಸಾಧನೆ ವಲಿಯುವ ಬೇಗನೆ ನಾಮ ಸ್ಮರಣೆಗೆ ಭಜಿಸಿರಿ ಹರಿನಾಮ ವಳದಾರಿಯು ಸರಿ ಕ್ರಮದಿಂ ಪಾಡಲು ಮುಳುಗುತ ಭಕ್ತಿಯ ಕಡಲೊಳ್ ನಿಜಹರಿ ದಾಸರು ದೀಕ್ಷೆಯಲಿ32 ಕವಿಗುರು ರಾಜರ ಚರಣದಿ ಬಾಗುತ ಪವನ ಮತಾಂಬುಧಿ ಸೋಮನು ಜಯಮುನಿ ಹೃದಯಗ ವಾಯುವಲಿ ಅವಿರತ ನಲಿಯುವ ಶ್ರೀ ಕೃಷ್ಣವಿಠಲನು ತವಕದಿ ವಲಿಯುವ ಗ್ರಹಿಸಲ್ ಈ ಪದ ಜಯ ಜಯವೆನ್ನುತ33
--------------
ಕೃಷ್ಣವಿಠಲದಾಸರು