ಒಟ್ಟು 3226 ಕಡೆಗಳಲ್ಲಿ , 122 ದಾಸರು , 2221 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಗುಡುಗುಡಿ ಭಾರಿ ಗುಡುಗುಡಿಗುಡುಗುಡಿ ಪಡೆಯಿರಿ ಗುರುಪುತ್ರರಾದವರು ಪ ಕಾಯ ಮಾಡಿಭಾಸುರ ಭಕ್ತಿ ಎಂದೆಂಬ ನೀರನೆ ಹೊಯ್ದುಸುಷುಮ್ನವೆಂಬ ಸೂಲಂಗಿಯನೆ ಹಾಕಿ 1 ತ್ರಿವಿಧ ಮೂಲೆಯ ಚೊಂಗೆಭೂತಲದ ಹಮ್ಮೆಂಬ ತೊಪ್ಪಲುಸಾಕಾರ ಗುರುವೆಂಬ ಬೆಂಕಿಯನೆ ಹಾಕಿಏಕಚಿತ್ತವೆಂಬ ಮುಚ್ಚಳವನೆ ಮುಚ್ಚಿ 2 ಸೋಹಂ ಎಂದೆಂಬ ಕೊಳವೆಯನೆ ಹಚ್ಚಿಬಹ ಪೂರಕ ಸೂರಿಯನೆ ಸೇದುತಆಹ ರೇಚಕವೆಂಬ ಹೊಗೆಯನೆ ಬಿಡುತಮಹಾ ಕುಂಭಕವೆಂಬ ಉಸುರನೆ ಹಿಡಿಯುತ 3 ಘುಡು ಘುಡು ಎಂದೆಂಬ ಮೇಘದ ನಾದವನು ನುಡಿಸೆಸುಡು ಮಾಯೆಯೆಂದು ಥೂ ಎಂದು ಉಗುಳುತಬಿಡಬಾರದು ಇದು ನಿತ್ಯವೆಂದೆನುತಅಡಿಗಡಿಗೆ ಊದುತ್ತ ಉರಿಯ ಎಬ್ಬಿಸುತ 4 ಹಾರಿತು ಬ್ರಹ್ಮಾನಂದವೆಂದೆಂಬ ಹರಳುಏರಿತು ಪೂರ್ಣಾನಂದದ ಲಹರಿಜಾರಿತು ತನುಮನವೆಲ್ಲ ಮರೆತು ಚಿತ್ತಸೇರಿತು ಚಿದಾನಂದನೊಳಗೆ ಲಯಿಸಿ ಕೂಡಿ5
--------------
ಚಿದಾನಂದ ಅವಧೂತರು
ಗುರು ಅಂತರ್ಯಾಮಿ ಶ್ರೀನಿವಾಸ ಸಿರಿರಮಣ ಶ್ರೀ ಕೃಷ್ಣ ಶ್ರೀನಿಧಿಯೆ ಶ್ರೀಶ ಪ. ಸೃಷ್ಟಿಕರ್ತನೆ ನಿನ್ನ ಲಕ್ಷಿದೇವಿಯು ಸತತ ಶ್ರೇಷ್ಠತನದಲ್ಲಿ ಪೂಜೆ ಮಾಡುತಿಹಳೊ ಅಷ್ಟು ದೇವತೆಗಳು ಆಗಮವನನುಸರಿಸಿ ಶಿಷ್ಟೇಷ್ಟನೆಂತೆಂದು ಪೂಜೆ ಮಾಡುವರೋ 1 ಅಣು ನಾನು ನಿನ್ನ ಅರ್ಚಿಸ ಬಲ್ಲೆನೇ ದೇವ ಘನಮಹಿಮ ಸ್ವೀಕರಿಸೊ ಅಲ್ಪ ಸೇವೆ ಮನ ಮಂದಿರದಿ ನಿಂತು ಅನುಗಾಲ ನಿನ್ನ ದಿವ್ಯ ಘನ ಮೂರ್ತಿಯನೆ ತೋರೋ ಪೂಜೆ ಮಾಡುವೆನೊ 2 ಸರಸಿಜಾಕ್ಷನೆ ನಿನಗೆ ಸರಸದಿಂದ ಗುಲಾಬಿ ಸರದ ಪೂಮಾಲೆಯನು ಕೊರಳಿಗ್ಹಾಕುವೆನೊ ಸುರರ ಪಾಲಿಪ ಹರಿಯೆ ಸುರಹೊನ್ನೆ ಹಾರವನು ಕರ ಚಕ್ರಯುತ ನಿನ್ನ ಕಂಧರದಿ ಧರಿಸೋ 3 ಶ್ಯಾಮವರ್ಣನೆ ರತ್ನಹಾರಗಳು ಹೊಳೆಯುತಿರೆ ಶ್ರೀ ಮನೋಹರ ಮುತ್ತಿನ್ಹಾರ ಪದಕಗಳು ಈ ಮಧ್ಯೆ ದಿವ್ಯ ಶ್ಯಾವಂತಿಗೆ ಸುಮನದಿಂ ಕಾಮಜನಕನೆ ಮಾಲೆಕಟ್ಟಿ ಹಾಕುವೆನೊ 4 ಈ ಜಗವ ಉದರದಲಿ ಧರಿಸಿ ಮೆರೆಯುವ ದೇವ ಜಾಜಿ ಪೂಮಾಲೆಯನು ಕಂಧರದಿ ಧರಿಸೊ ಭೋಜಕುಲ ತಿಲಕನೆ ಕೆಂಡ ಸಂಪಿಗೆ ಸರವ ಮಾಜದೇ ಎನ್ನಿಂದ ಸ್ವೀಕರಿಸೊ ದೇವ 5 ಪಾತಕರಹಿತ ಹರಿ ಪಾವನರೂಪನೆ ಪ್ರೀತಿಯಿಂ ಸ್ವೀಕರಿಸೊ ಕೇತಿಕೆಯ ಸರವ ಶ್ರೀತರುಣಿ ಸತ್ಯಭಾಮೆಯರು ಕದನವಗೈದ ಪ್ರೀತಿ ಪಾರಿಜಾತ ಧರಿಸಯ್ಯ 6 ಮರುಗ ದವನಗಳಿಂದ ಸುರಹೊನ್ನೆಯನೆ ಕಟ್ಟಿ ಇರುವಂತಿಗೆಯ ಹಾರ ಹರಿಯೆ ಅರ್ಪಿಸುವೆ ಪರಿಮಳವ ಬೀರುತಿಹ ಪರಿಪರಿಯ ಮಲ್ಲಿಗೆಯ ಸರಗಳನೆ ಧರಿಸಿನ್ನು ಸಾಕಾರರೂಪ 7 ದುಂಡುಮಲ್ಲಿಗೆಯ ಮೊಗ್ಗು ಪಾಂಡವರ ಪಾಲಕಗೆ ದಂಡೆಯನೆ ಕಟ್ಟಿ ನಾ ಕೊರಳಿಗ್ಹಾಕುವೆನೊ ಚಂಡವಿಕ್ರಮ ಶಂಖ ಚಕ್ರಧಾರಿಯೆ ಪಾದ ಮಂಡೆ ಪರಿಯಂತರದಿ ನೊಡಿ ದಣಿಯುವೆನೊ8 ಸತಿ ನಿನಗಾಗಿ ಕಾಷ್ಟದಳ ಮೃತ್ತಿಕೆಯ ಸೇವಿಸುವ ಜನಕೆ ಇಷ್ಟ ಫಲವನೆ ಇತ್ತು ಕೃಷ್ಣನ್ನ ತೋರಿಸುವ ಶ್ರೇಷ್ಠ ತುಳಸಿಮಾಲೆ ಕಟ್ಟಿ ಹಾಕುವೆನೊ 9 ಕಮಲನಾಭನೆ ಕೃಷ್ಣ ಕಮಲಾಪತಿಯೆ ಸ್ವಾಮಿ ಕಮಲಪಾಣಿಯೆ ದೇವ ಕಮಲಾಕ್ಷನೆ ಕಮಲಮುಖ ನಿನ್ನ ಪದಕಮಲದಲಿ ನಲಿವಂತೆ ಕಮಲದ್ಹಾರವ ಕಟ್ಟಿ ಕೊರಳೀಗ್ಹಾಕುವೆನೋ10 ಈ ಪರಿಯ ಮಾಲೆಗಳ ನೀ ಪ್ರೀತಿಯಿಂ ಧರಿಸಿ ಪಾಪಗಳ ತರಿದೆನ್ನ ಪಾವನವಗೈಯ್ಯೊ ಆಪತ್ತು ಕಳೆವ ಶ್ರೀ ಗುರು ಕಟಾಕ್ಷದಿ ನುಡಿದೆ ಗೋಪಾಲಕೃಷ್ಣವಿಠ್ಠಲನೆ ಕೃಪೆಮಾಡೊ 11
--------------
ಅಂಬಾಬಾಯಿ
ಗುರು ಚರಣವನು ಸಂಸ್ಮರಿಸಿರೋ ಪಗುರು ಲಕ್ಷ್ಮಿ ವರಜಾತ | ಗುರು ಲಕ್ಷ್ಮಿಪ್ರಿಯ ತೀರ್ಥ ಚರಣ ಸರಸಿಜ ಭಜಿಸೆ | ಕರಣದಂತರ ಬಾಹ್ಯ ಪರಿಶುದ್ಧಿಯನೆ ಗೈದು | ಜ್ಞಾನ ಭಕ್ತಿಯನಿತ್ತು ಹರಿ ಪೊರೆವ ಸಂತತದಲಿ ಅ.ಪ. ಪೂರ್ವಾಶ್ರಮಾ ನಾಮ | ಭೂವಿಬುಧ ಕೃಷ್ಣಾಖ್ಯ ದೇವರಾಯನ ದುರ್ಗ | ದಾವ ನರಸೀಪುರದಿಆವಾಸಿಸುತ್ತಿರಲು | ಓರ್ವ ಸಖನಿವರ ಜ್ಞಾನಾನುಸಂಧಾನದಾ |ಭಾವ ತಿಳಿಯುತ ಮನದ | ಯಾವ ದೊಂದಭಿಲಾಷೆನೀವು ಸಲಿಸುವುದೆನ್ನೆ | ಆವುದೆನುತಲಿ ಕೇಳೆಯಾವ ಪನಸದ ಫಲವ | ಆಸ್ವಾದು ಮಧು ಒಡನೆಓವಿ ಕರಡಿಯು ಕಲಸಿದ 1 ಅದರ ಪ್ರಾಪುತಿಗಾಗಿ | ಬದಿವನನೊಂದಿನವುಬೆದರದಲೆ ಪೊಗುತಿರಲು | ಎದುರೊಂದು ಶಿಲೆ ಮೇಲೆವದಗಿ ಕಲಸಿದ ಕಂಡು | ಅದರೊಡನೆ ಮರನೇರೆ ಬಂದಿತದು ಮರಿಗಳೊಡನೆ |ಅದಕು ಇವರಿಂಗಾಯ್ತು | ಕದನವೂ ಕೆಲಕಾಲ ಒದಗೆ ಜಯ ವಿಬುಧರಿಗೆ | ಹದುಳದಲಿ ಗೃಹಸೇರಿಮುದದಿಂದ ಶ್ರೀಹರಿಯ | ಪದ ಸ್ಮರಣೆಯಲ್ಲವರು ದಿನಗಳನೆ ಕಳೆಯುತಿಹರು 2 ಯತಿ ಲಕ್ಷ್ಮಿ ವರರಿಂದ | ಯತಿಗಳಾಶ್ರಮ ಪೊಂದಿಹಿತದಿಂದಲಾ ಬೂದಿ | ನೆತ್ಯಾಖ್ಯ ಗ್ರಾಮದಲಿಸ್ಥಿತರಾಗಿ ಶಿಷ್ಯರಿಗೆ | ಹಿತದ ಉಪದೇಶವ ಪ್ರೀತಿಯಲಿ ಮಾಡುತಿರಲು |ಯತಿಗಳಾಶ್ರಮದಲ್ಲಿ | ಮತಿ ವಂತ ವಿಪ್ರೋರ್ವಕ್ಷಿತಿಯೊಳಾ ನಾಕನಿಭ | ಮಂತ್ರ ಮಂದಿರ ಸೇವೆ ಅತಿಹಿತದಲೆಸಗುತಿರೆ | ಯತಿಗಳಾಶೀರ್ವದಿಸೆ ಪಥವಾಯ್ತು ಪ್ರಿಯರಲ್ಲಿಗೇ 3 ಪತಿ ಸೇವೆ | ಯುಕುತನಾಗಿರಲ್ವೊರೆದು ನಾಲ್ವತ್ತು ದಿನ ಮಿತಿಯಲಿ |ಕಕುಲಾತಿ ತೊರೆದು ನಿಜ | ಭಕುತಿಯಿಂ ಗೈವುತಿರೆಲಕುಮಿ ಪ್ರಿಯರಾಚಾರ | ಉಕುತಿಯಲಿ ದುರ್ಭಾವಪ್ರಕಟವಾಗಲು ಮನದಿ | ಬಂಕಪುರ ಮಾರ್ಗವನೆ ತೆರಳಲನುವಾದನೂ 4 ಮತ್ತೆ ನರಹರಿ ತಾನು | ವ್ಯಕ್ತಯಿಂತೈಜಸನುಒತ್ತಿಪೇಳಲು ಬುಧನು | ಮತ್ತೆ ಗುರುಪದಕೆರಗಿಬಿತ್ತರಿಸೆ ತನ್ನಸ್ವಪ್ನ | ವಾರ್ತೆಗಳ ವಿಶ್ವಮಿತ್ರನ ಭಾವವನೆ ತೋರುತ |ಇತ್ತಲಿಂದೆರಡೊರ್ಷ | ಕಿತ್ತಪೆವು ಆಶ್ರಮವಆರ್ಥಿಯಿಂದಿರುತಿರ್ದು | ಹಸ್ತಿವರದನ ಸೇವೆಉತ್ಸಹದಲೆಸಗುವುದೆ | ನುತ್ತಲಾಶೀರ್ವದಿಸಿ ಚಿಂತಿಸುತ್ತಿರೆ ಹರಿಯನು 5 ಗ್ರಾಮದೊಳಗುಳ್ಳ ಖಲ | ಸ್ತೋಮ ಬಂದಡರುತ್ತಭೂಮಿ ಗೋಸುಗ ಕಲಹ | ಸೀಮೆ ಮೀರುತ ಗೈಯ್ಯೆಅ ಮಹಾಯತಿವರ್ಯ | ಭೂಮಿ ಕೃಷ್ಣಾಂಕಿತವುಕಾಮನೆಯ ಬಿಡಿರೆನುತಲಿ | ನೇಮದಲಿ ಘರ್ಜಿಸಲು |ಆ ಮಹಾ ದುಷ್ಟಜನ ಈ ಮರದ ಸಂಪದವ ಕಾಮಿಸುತ ಮನದಲ್ಲಿನೇಮದಿಂ ಪತ್ರೋರ್ವ | ಪಾಮರನ ಒಡನವರು ಯಾಮ ಸಂಜೆಲಿ ಕಳುಹಲು 6 ಪರಿವಾರ ಜನಕೆಲ್ಲ | ಇರುವ ನೆಲೆ ಬಿತ್ತರಿಸಿಸರಿಯುತಲಿ ಸುಕ್ಷೇಮ | ನೆರೆಯ ಸಾರುವುದೆನುತಒರೆಯಲೂ ಕೆಲವರು | ಮರೆಮಾಡಿ ತೃಣ ಬಣವಿ ನೆರೆ ಬಿಡದೆ ಸಾರುತಿರಲು |ವರನಿಶೀ ಸಮಯದಲಿ | ದುರುಳರೆಲ್ಲರು ಮಠಕೆಬರಬರುತ ಕವಣೆಕಲ್ | ನೆರೆಬೀರ್ವ ಜನಗಳೂಉರಿವ ತೃಣ ಬಣವಿಯಂ | ದುರೆ ಜ್ವಾಲೆ ಪರಿಕ್ರಮಣ ಭಯ ಭ್ರಾಂತಿಯಿಂದಿರುತಿರೆ 7 ಸಿರಿ ಹರಿಯ ನಮಿಸುತಿರಲು 8 ಪರಿ | ಚರರಿಘರಸುತ್ತ ಬಲುಪರಿಯ ಹರಿ ಮಹಿಮೆಗಳ | ಒರೆಯುತಾನಂದಾಶ್ರೂ ಸುರಿಸುತವ ಶೇಷನಿಶಿ | ಹರಿಕರುಣ ಸ್ಮರಣೆಯಲಿ ಸರಿಸಿದರು ಶಿಷ್ಯರೊಡನೇ 9 ಗರ ಮಿಶ್ರ | ಯತಿಗೆ ಬಡಿಸೇ ಜೀರ್ಣಿಸುತ ಪಾಪಿ ವಿಪ್ರರ್ಗೆ | ಗತಿಸಿದವು ಅಕ್ಷಿಗಳು ಮೃತ್ಯಂತಲಂದರಾಗಿ 10 ಗರ ಮಿಶ್ರ | ಸತ್ಯವಾದುದ ಕಂಡು ಪ್ರೋಕ್ಷಿಸಲು ಶಂಖದುದಕ |ವ್ಯಕ್ತವಾಯಿತು ಇವರ | ಉತ್ತುಂಗ ಮಹಿಮೆಗಳುಹಸ್ತಿವರದನು ಭೋಜ್ಯ | ವಸ್ತುಗಳ ಸ್ವೀಕರಿಸಿದತ್ತ ಮಾಡಲು ಪುನಃ | ಮತ್ತೆ ಜೀರ್ಣಿಸಿಕೊಂಡು ಹರಿಯನ್ನೆ ಚಿಂತಿಸುತಲಿ 11 ನೆಲೆಸಿರಲ್ಲಬ್ಬುರೊಳು | ಗಳ ಗ್ರಾಹಕರು ಮತ್ತೆಮಿಳಿತರಾಗುತ ರಾತ್ರಿ | ಛಲವ ಸಾಧಿಸೆ ನಿಶಿತಅಲಗು ಕತ್ತಿಯ ಪಿಡಿದು | ನೆಲಕೆ ಯತಿ ಶಿರವನ್ನು ಇಳಹುವ ಮತಿ ಮಾಡಲೂ |ಒಲವಿನಿಂ ಯತಿಯಕುಲ | ತಿಲಕ ವೃಂದಾವನವ ಬಳಸಿ ನಮಿಸಲು ಸಂಜೆ | ಯಲಿ ಪೇಳ್ದ ಬ್ರಹ್ಮಣ್ಯಒಳ ಪೊಗುತಲಾರಾಮ | ನೆಲೆಸೇರಿ ಮಠಸಾರಿ ಎಂದೆನುತ ಎಚ್ಚರಿಸಿದರ್12 ಮತ್ಸರಿಗಳಿನ್ನೊಮ್ಮೆ | ಕುತ್ಸಿತದ ಬುದ್ಧಿ ಮಹಉತ್ಸವದ ಸಮಯದಲಿ | ಹೆಚ್ಚು ಜನ ಸಂಧಿಸಿರೆನೆಚ್ಚಿದ್ದ ಪಾಚಕರು | ಉಚ್ಚಳಿಸಿ ಕೆಲಸಾರೆ ಕೆಚ್ಚಿದೆಯನೇ ತೋರುತ |ಮುಚ್ಚಿಮಠದ್ವಾರಗಳ | ಹೆಚ್ಚುತಲಿ ಪಲ್ಯಗಳ ಮತ್ಸಕೇತನ ಪಿತನು | ಮೆಚ್ಚುವಂದದಿ ಪಾಕಪೆಚ್ಚಿಸುತಲಿ ಹರಿಯ | ಅರ್ಚನೆಯ ಕೈಕೊಂಡು ಮೆಚ್ಚಸಿದರು ಸುಜನರ 13 ಜ್ವರತಾಪದಿಂದೊಮ್ಮೆ | ನೆರೆ ಬಳಲು ವಂತಿರ್ಪಗುರುವರರ ಕಂಡೋರ್ವ | ವರ ಶಿಷ್ಯ ಪ್ರಶ್ನಿಸಲುನೆರೆ ಬದುಕ ಬೇಕೆಂಬ | ಶರಿರವನೆ ತೊರೆವೆ ನೆಂಬೆರಡುಕ್ತಿ ಸಲ್ಲದಿದಕೊ |ನರರಾಡಿ ಕೊಳದಂತೆ | ವರ ಭಿಷಜ ತಾಕೊಟ್ಟವರಗುಳಿಗೆ ನುಂಗುವೆವು | ಹರಿ ಪೂಜೆ ವಿರುದ್ಧಜ್ವರ ಕುಂಟಿ ಧನ್ವಣತ್ರಿ | ವರಮಂತ್ರ ಕೈ ಸೇರಿ ಪರಿಪರಿ ಮೆರೆಯುತಿರಲು 14 ಯತಿವರರ ಮಹಿಮೆಗಳ | ತುತಿಸಲೆನ್ನಳವಲ್ಲಯುಕ್ತಿಯಲಿ ಅಪವಾದ | ಹೊತ್ತು ಕೊಳದಲೆ ಅವರು ಜಿತ ಇಂದ್ರಿಯತ್ವವನು | ಮತಿಮತಾಂ ಸುಜನಕ್ಕೆ ಪ್ರತಿರಹಿತದಿಂ ತೋರುತ |ಹಿತದಿಂದ ಲಾರಾಮ | ಸೇತು ಯಾತ್ರೆಯ ಗೈದುಕ್ಷಿತಿ ಚರಿಸಿ ಬರಬರುತ | ಹಿತಶಿಷ್ಯ ವ್ಯಾಜದಿಂಸತ್ಯ ಧೀರ್ರನು ಚರರ | ಕೃತ ಬಹಿಷ್ಕರ ಗೆಲ್ದು ಶಾಂತತೆಯನೇ ತೋರ್ದರು 15 ವರಲಕ್ಷ್ಮಿ ಪ್ರಿಯ ತೀರ್ಥ | ಕರಗಳಿಂದರ್ಚಿತವುಪರಿಸರಾರ್ಚಿತ ಯೋಗ | ನರಹರಿಯು ವ್ಯಾಸಮುನಿವರದ ಗೋಪತಿ ಕೃಷ್ಣ | ಸಿರಿವ್ಯಾಸಯತಿ ರಚಿತ ಎರಡೇಳು ರಜತ ಪ್ರತಿಮೆ |ಗುರುವರ ಬ್ರಹ್ಮಣ್ಯ | ವರದ ವಿಠ್ಠಲದೇವಸರ್ವಜ್ಞರರ್ಚಿಸಿದ | ವರ ಶರಣ್ಯ ವಿಠಲನುನಿರುತ ಪೂಜಿತವಾಗಿ | ಶರಿರ ಭೌತಿಕ ಬಿಡುವ ವರ ಸಮಯ ತಾನುಸುರಿರೆ16 ಸಂತೈಸಿ ಇತ್ತರಾಶಿಷವ 17 ನೀಲ ಕಾಲ | ವರುಷವನು ಪೈಂಗಳವು | ಎರಡೊಂದನೇ ಮಾಸವರಶುಕ್ಲ ಹರಿದಿನದಿ | ಸರಿತು ವರ ಕಣ್ವತಟಪರಮ ಸುಕ್ಷೇತ್ರದಲಿ | ವರಯೋಗ ಮಾರ್ಗದಲಿ ದೇಹ ಹರಿಗರ್ಪಿಸಿದರು 18 ಜಯ ಜಯತು ಶುಭಕಾಯ | ಜಯಜಯತು ತಪಶೀಲಜಯ ಶಮೋದಮವಂತ | ಜಯ ಶಾಪನುಗ್ರಹನೆಜಯಲಕ್ಷ್ಮಿ ವರಜಾತ ಜಯಲಕ್ಷ್ಮಿ ಪ್ರಿಯ ತೀರ್ಥ ಜಯ ಜಯತು ವಿಶ್ವಮಿತ್ರ |ಪ್ರಿಯ ಗುರುಗಳಾಂತರ್ಯ | ಜಯ ದೇವ ನೋಳ್ಪರಮಪ್ರಿಯನಾದ ತಂದೆ ಮುದ್ದು | ಮೋಹನ್ನ ವಿಠಲಾತ್ಮಜಯ ಗುರೂ ಗೋವಿಂದ | ವಿಠ್ಠಲನ ಭಜಿಸಿದರೆ ನಯಸುವನು ಪರಮಗತಿಗೆ 19
--------------
ಗುರುಗೋವಿಂದವಿಠಲರು
ಗುರು ನಾರಪ್ಪಯ್ಯನ ಚರಣಕಮಲಯುಗ್ಮ ಮಾನವ ಪ ನಿರುತ ಸ್ಮರಿಸುವ ಶರಣು ಜನರಘ- ತರಿದಭೀಷ್ಠೆಯ ಗರಿಯಲೋಸುಗ ಧರಣಿ ವಲಯದಿ ಮೆರೆವ ವೆಂಕಟ ಗಿರಿಯ ರಮಣನ ಕರೆದು ತಂದಿಹ ಅ.ಪ ಧರೆಸುರರೊಳು ಜನಿಸಿರಲು ಭ್ರಾತ್ರರುನಾನಾ ಪರಿಬಾಧಿಸಲು ಸಹಿಸಿ ಚರಣ ಯಾತ್ರೆಯಲಿಂದ ಗಿರಿಯಕಾಣುತ ಮಲಗಿರಲು ಸ್ವಪ್ನದಿಸೂಚಿಸಿ ಧರಣಿ ದೇವನೆ ನಿನಗೆ ದರುಶನ ಕೊಡಲು ನಾ ಬರುವೆನೆಂದಾಜ್ಞಾಪಿಸಿ ಭಕ್ತನನುಸರಿಸಿ ತುರುಸ್ವರೂಪವ ಧರಿಸಿ ಬರುತಿರೆ ಕುರಿಕಿಹಳ್ಳಿಯ ಗ್ರಾಮದಿಂದಲಿ ತರುವರಾಶ್ವತ್ಥದಲಿ ಸಲೆ ಪಾಲ್ಗರಿದ ದೇವನ ಕರೆದು ತಂದಿಹ 1 ನಾರಾಯಣಾರ್ಯರು ಕಾರ್ಪರಾರಣ್ಯದಿ ಆರಾಧಿಸುತಲಿರುತ ಆರಾರು ಭಕುತರು ಗೋಧನ ಧಾನ್ಯದಿ ಸಾರಾವಸ್ತುಗಳೀಯುತ್ತ ಗೋರಕ್ಷಣವ ಮಾಡಿರೆನುತ ತಮ್ಮಯ ಬಂಧು ಬಾಲಕರಿಗೆ ಪೇಳುತ್ತ ಭಯ ಬ್ಯಾಡಿರೆನುತ ಚಾರು ಶಿಲೆಯೊಳಗೊಂದು ದಿನ ಅಂಗಾರದಲಿ ಶ್ರೀ ಭಾರತೀಶನ ಮೂರುತಿಯ ಬರೆದೀತ ಭಯ ಪರಿ- ಹಾರಕನು ನಿಮಗೆಂದು ಪೇಳಿದ 2 ಧರಣಿ ಪಾಲಕನಿಂದ ನಿರ್ಮಿತಮಾದ ಬಂ- ಧುರ ನಿಲಯದಿ ರಾಜಿತ ತರುಮೂಲದೊಳಗವ- ತರಿಸಿ ಷೋಡಶ ಸಂಖ್ಯ ಕರಗಳಿಂದಲಿ ಶೋಭಿತ ವರ ಕೃಷ್ಣಾ ಜಲದೊಳಗಿರುವ ಪ್ರತಿಮೆಯ ತಂದು ತರು ಬಳಿಯಲಿ ಸ್ಥಾಪಿತ ಶ್ರೀಭೂಸಮೇತ ಮೂರ್ತಿ ನಿರುತ ಪೂಜೆಯಕೊಳುತ ಧರೆಯೊಳು ಶರಣು ಜನರನು ಪೊರೆವ ಕಾರ್ಪರ ನಿಲಯ'ಸಿರಿನರ ಹರಿ'ಯನೊಲಿಸಿದ3
--------------
ಕಾರ್ಪರ ನರಹರಿದಾಸರು
ಗುರು ಪಾಂಡುರಂಗ ವಿಠಲ | ಪರಿಪಾಲಿಸಿವನಾ ಪ ಕರಣ ನೀಯಾಮಕನೆ | ಕರುಣವನೆ ತೋರೀ ಅ.ಪ. ಕರ್ಮ ಸ್ವಾಮಿ | ಎತ್ತಿಕರ ಪಿಡಿಯೋ 1 ಕರ್ಮ ನೆರವಾಗಲಿವನೀಗೆಪರಮ ಪಾವನ ಮೂರ್ತೆ ಹರಿ ಪಾಂಡುರಂಗಾ 2 ಭವ ಕಳೆಯೋ 3 ಪದ್ಧತಿಯ ತಪ್ಪದಲೆ | ಮಧ್ವಮತದಂಗವನುಉದ್ಧರಿಸೊ ಇವನಲ್ಲಿ | ಪದ್ಮನಾಭಾಖ್ಯಾಈ ಧರೆಯ ಸಂಸಾರ | ಬದ್ಧ ಲೌಕೀಕಗಳತಿದ್ದಿ ವೈದಿಕವೆನಿಸೋ | ಹದ್ದು ವಾಹನನೇ4 ಕೃದ್ಧಖಳ ಸಂತತಿಯ | ಒದ್ದು ಕಳೆಯುತ ಹರಿಯೆಹೃದ್ಗುಹದಿ ಮೈದೋರೊ | ಶಬ್ಧಗೋಚರನೇಮಧ್ವಾಂತರಾತ್ಮ ಗುರು | ಗೋವಿಂದ ವಿಠ್ಠಲನೆಮದ್ವಚನ ಸಲಿಸೆಂದು | ಪ್ರಾರ್ಥಿಸುವೆ ಹರಿಯೇ 5
--------------
ಗುರುಗೋವಿಂದವಿಠಲರು
ಗುರು ಪ್ರಜ್ಞಾನಿಧಿ ತೀರ್ಥ ಚರಣಾಬ್ಜ ಸೇವೆಯ ನಿರುತ ನೀಡಯ್ಯ ಯತಿವರ್ಯ ಯತಿವರ್ಯ ಪೂರ್ಣಪ್ರಜ್ಞಾರ್ಯರ ತತ್ತ್ವವರುಹಯ್ಯ ಅರುಹಯ್ಯ 1 ಕರುಣಾನಿಧಿಯೆ ನಿನ್ನ ಕಾರುಣ್ಯಕೆಣೆಯೆ ಶ್ರೀ ಕಾರುಣ್ಯ ವಿಠಲನಾ ದಯಾಪಾತ್ರ ದಯಾಪಾತ್ರ ಎನ್ನ ತಾಪತ್ರಯವ ಎನ್ನ ತಾಪತ್ರಯವ ಹರಿಸಿ ಸಲಹಯ್ಯ 2 ಶರಧಿ ದಾಟಿದ ಧೀರಾ ಗುರುತೂರ್ಯ ಶ್ರಮವಹಿಸಿ ಮೆರೆಯುವೆ ಮೆರೆಯುವೆ 3 ಮಾರ್ಗದೊಳು ಬರುತಿಹ ದುರ್ಮಾರ್ಗವನು ಜರಿದು ಸ ಯತಿವರ್ಯ ಎನ್ನ ಭವ ದುರ್ಗವನೆ ಹರಿಸಿ ಸಲಹಯ್ಯ ಸಲಹಯ್ಯ 4 ಗುರುವೆ ನಿನ್ನಯ ಕರುಣ ಕವಚವನೆ ತೊಡಿಸಯ್ಯ ಕಾರುಣ್ಯ ವಿಠಲನ ಅರ್ಚಿಪೆ ಅರ್ಚಿಪಾ ನಿನ್ನೊಳು ಕರುಣಾರಸಕೆ ಕುಂದುಂಟೆ ಕುಂದುಂಟೆ 5 ಹಿಂದಿಲ್ಲ ಮುಂದಿಲ್ಲ ಒಂದು ಬೋಧಿಪೋರಿಲ್ಲ ಮುಂದೆ ಬಾ ಎನ್ನುವರು ಮೊದಲಿಲ್ಲ ಮೊದಲಿಲ್ಲ ಇಂದು ನಾ ಮಂದನಾಗಿಹೆ ಎನ್ನ ಕರುಣಿಸೋ ಕರುಣಿಸೋ 6 ಬಂದುದಾಯಿತು ಜನ್ಮ ಸಂದು ಹೋಯಿತು ಆಯು ಕುಂದಿತೆನ್ನಯ ಕರಣ ಇಂದಿನಾ ಇಂದಿನಾ ಪರಿ ಪಥವೆನಗೆ ತೋರಯ್ಯ ತೋರಯ್ಯ7 ಮಂಕು ಮಾನವನ ಮನ ಡೊಂಕವನೆ ತಿದ್ದಿ ಶ್ರೀ ವೇಂಕಟೇಶನ ಭಕ್ತನೆನಿಸಯ್ಯ ಎನಿಸಯ್ಯ ನಿನ್ನಾ ಕಿಂಕರೊಳಗೆ ಕಿಂಕರನೆನಿಸಯ್ಯ 8 ಕಾರುಣ್ಯವಿಠಲಾಭಿನ್ನ ಶ್ರೀ ಉರಗಾದ್ರಿವಾಸವಿಠಲನ ನಿಜದಾಸ ನಿಜದಾಸ ನೀ ಪರಮೋದಾರ ಗುರುವರ್ಯ ಯತಿವರ್ಯ 9
--------------
ಉರಗಾದ್ರಿವಾಸವಿಠಲದಾಸರು
ಗುರು ಮೋಹನ ವಿಠಲ ಸಲಹಬೇಕಿವನಾಕರುಣಾ ಪಯೋನಿಧಿಯೆ ಮರುತಾಂತರಾತ್ಮ ಪ ನಿಗಮವೇದ್ಯನೆ ಹರಿಯೆ | ರಘುರಾಮ ದಾಸರೊಳುಮಿಗೆ ಸುಪ್ರೇರಕನಾಗಿ | ಮಗನ ಮದುವೆಯಲೀಅಘಹರವು ತವನಾಮ | ಸದ್ಗುರೂ ಕರುಣೆಯಲಿನಗುನಗುತ ಒದಗಿಸಿದೆ | ನಗಧರನೆ ದೇವಾ 1 ಮೋದ ಪಾದ ಕಾ ನಮಿಪೇ 2 ಹರಿಗುರೂ ಸದ್ಭಕ್ತಿ | ತರತಮದ ಸುಜ್ಞಾನಕರುಣಿಸೀ ಪೊರೆ ಇವನ | ಗುರುವಂತರಾತ್ಮ |ಪರಮ ಗುರು ಕಾರುಣ್ಯ | ದರುಶನವ ಪಡೆದಿಹನುಪರಿಪರಿಯ ಸೌಖ್ಯಗಳ | ಕರುಣಿಸೋ ಹರಿಯೇ 3 ಸೊಲ್ಲು ಲಾಲಿಸುತಾ 4 ದಾವಾಗ್ನಿಯನೆ ನುಂಗಿ | ಗೋವಳರ ಪಾಲಿಸಿದೆಪಾವಮಾನಿಯ ಪ್ರೀಯ | ನೀ ವೊಲಿದು ಇವಗೇಭಾವದಲಿ ತವರೂಪ | ತೋರೆಂದು ಭಿನ್ನವಿಸೆದೇವದೇವನೆ ಗುರು ಗೋವಿಂದ ವಿಠಲಾ 5
--------------
ಗುರುಗೋವಿಂದವಿಠಲರು
ಗುರು ರಾಘವೇಂದ್ರ ವಿಠಲ | ಪೊರೆಯ ಬೇಕಿವಳಾ ಪ ದುರಿತ ದುಷ್ಕøತ ಕಳೆದು | ವೈರಾಗ್ಯ ಕೊಡುತಾಅ.ಪ. ಪ್ರಾಚೀನ ದುಷ್ಕರ್ಮ | ಮೋಚಕೇಚ್ಛೆಯ ಮಾಡಿಕೀಚಕಾರಿಯ ಮತದಿ | ದೀಕ್ಷೆಯನೆ ಕೊಟ್ಟುನೀಚೋಚ್ಛ ತರತಮವೆ | ವಾಚಿಸುತ ಇವಳಲ್ಲಿವಾಚಾಮಗೋಚರನ | ಭಕ್ತಿಯನೆ ಕೊಡುತಾ 1 ಸಾಧುಸಂಗವ ಕೊಟ್ಟು | ಸಾಧನೆಯ ಗೈಸುವುದುಯಾದವೇಶನ ಪ್ರೀತಿ | ಸಾಧನೆಯ ಗುರಿಯಾಮಾಧವನೆ ಪರನೆಂಬೋ ಬೋದ ಸಂತತಕೊಟ್ಟುಕಾದುಕೋ ಶ್ರೀಹರಿಯೆ | ಬಾದರಾಯಣನೆ 2 ಸರುವ ಕರ್ಮಗಳೆಲ್ಲ ಹರಿ ಮಾಡಿ ಮಾಡಿಸುವಬರುವ ತತ್ಸುಖ ದುಃಖ | ಸಮತೆಯಲಿ ಎಂಬಾವರಮತಿಯ ಕರುಣಿಸುತ | ಪರಿಹರಿಸು ಭವಬಂಧಕರುಣಾಳು ಗುರುರೂಪಿ | ಪೊರೆಯ ಬೇಕಿವಳಾ 3 ಮನಸೀನ ಚಾಂಚಲ್ಯ | ವನೆ ನೀನು ಕಳೆಯುತ್ತಕ್ಷಣಕನಂತಪರಾಧ | ಎಣಿಸದಲೆ ಹರಿಯೆದೀನನಾಥನಾದ ಹರಿ | ಜ್ಞಾನ ದಂಕುರವಿತ್ತುಘನ ದಯಾವಾರಿಧೇ | ಪೊರೆಯ ಬೇಕಿವಳಾ 4 ವ್ರಜ ಕುಂದ ವರದ ಹರಿಯೇನೊಂದವಳಿಗಾನಂದ | ಸಂಧಿಸಲು ಪ್ರಾರ್ಥಿಸುವೆಇಂದಿರಾರಾಧ್ಯ ಗುರು | ಗೋವಿಂದ ವಿಠಲಾ 5
--------------
ಗುರುಗೋವಿಂದವಿಠಲರು
ಗುರು ವಾದಿರಾಜ ಯತಿಯಾ ನೆನಸುವದು ನಿರುತ ಕರುಣಿಪ ಮತಿಯಾ ಪ ಆರ್ತನಾ ಸರಿದಾರು ನವನ ವರ್ತಮಾನವನೆ ಕೇಳಿ ಕರ್ತೃತ್ವ ಪರಿಹರಿಸಿ ಸಂಸೃತಿಯ ಗರ್ತದಿಂದೆತ್ತಿ ನೋಳ್ಪ 1 ದುರಿತ ರಾಶಿಗಳ ಶೀಳಿ ಹೊರದೆಗೆದು ಮರುತ ಶಾಸ್ತ್ರವನೆ ಪೇಳಿ ಪರಮಾರ್ಥ ಮಾರ್ಗವಾ ತೋರಿ ಸುಖಬಡಿಸಿ ಧರಿಯೊಳಗೆ ಮೆರೆದೆ ಧೀರ 2 ವಂದಿಸಿ ಸೌಂದರ್ಯಪುರಿಯ ವಾಸ ವರಪ್ರದ ನಂದ ಸತ್ಕೀರ್ತಿ ಭೂಪ ವಂದಿಸಿದವರಿಗೆ ಲೇಸಾಗಿ ಕೊಡುವ ಮು ಕುಂದನಂಘ್ರಿಯ ದಾಸ 3 ತೀರ್ಥಯಾತ್ರೆಯನೆ ಮಾಡಿ ಹರಿ ಭೇದಾರ್ಥದಿಂದಲೆ ಕೊಂಡಾಡಿ ಅರ್ಥಾಸೆಗಳ ಈಡಾಡಿ ಹಯಮೊಗನ ಅರ್ಥಿಯಿಂದಲಿ ಪೂಜಿಪ4 ತ್ರಿಜಗದೊಳಗಿನವರಿಗೆ ಎಣೆಗಾಣೆ ಕುಜನ ಮತ ಸೋಲಿಸುವಲ್ಲಿ ವಿಜಯವಿಠ್ಠಲನೆ ದೈವವೆಂದು ಧ್ವಜವೆತ್ತಿ ತಿರುಗಿದ ಮುನಿಪ 5
--------------
ವಿಜಯದಾಸ
ಗುರು ಸ್ವರೂಪದರಹು ಗುರುತದೋರುವ ಕುರುಹು ಗುರುವ್ಹೆ ಇರುವ್ಹಾಂಗ ದೋರುದೆ ಪರಾತ್ಪರವು ಧ್ರುವ ಅರವಿನಾಗ್ರದಲಿಹ ಕುರುಹುದೋರುವ ಖೂನ ಗುರುತವಾಗುದೆ ಗುರುಕೃಪೆಯ ಜ್ಞಾನ ಮರವಿನ ಮೂಲವನು ಮರೆದು ಬಿಡುವಸ್ಥಾನ ಅರವೆ ಅರವಾಗಿದೋರುವ ನಿಜ ನಿಧಾನ 1 ಅರಹು ಮರವನೆ ದಾಟಿ ಮೀರಿ ದೋರುವ ಕುರುಹು ಅರಿತು ಕೊಂಬುದೆ ತತ್ವದರವ್ಹಿನರಹು ತಿರುಹು ಮುರುವ್ಹಿನ ಅರುಹದೋರಿ ಕೊಡುವುದೇ ಸ್ಥಿರವು ಬೆರೆದು ಕೊಡುವದೆ ಗುರುಙÁ್ಞÀ ನಾನಂದ ಕುರುಹು 2 ಕರೆದು ಕರುಣಿಸಿ ದಯವು ಬೀರಿದನುಭವ ಸುಖವು ಗುರುಭಾನುಕೋಟಿ ಪ್ರಕಾಶ ಎನಗೆ ಅರವೆ ಅರಿವ್ಹಾಗಿ ತೋರಿತು ಮನೋನ್ಮನವಾಗಿ ತರಳ ಮಹಿಪತಿಗೆ ಘನ ಬೆಳಗೆ ಬೆಳಕು 3
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ಗುರುಕೂರ್ಮಚಾರ್ಯರ ಚರಣಕಮಲಯುಗ್ಮ ಮಾನವ ಪ ಧರಣಿಯೊಳಗೆ ಸುಕ್ಷೇತ್ರಗಾಲವ ಪುರದಿ ಶ್ರಿ ನರಶಿಂಹಾ ಚಾರ್ಯರ ತರುಣಿಯಳ ಗರ್ಭಾಬ್ಧಿಯಲಿಹಿಮ ಕರನ ತೆರದಲಿ ಜನಿಸಿಮೆರೆದ ಅ.ಪ ವರಕೊಲ್ಹಾಪುರದಿ ಪೋಗಿರಲು ಸುಂದರವಾದ ಸಿರಿಯರೂಪವ ಕಾಣುತ್ತ ಅರಿತು ಪ್ರಾರ್ಥಿಸಲು ಶ್ರೀ ನರಶಿಂಹಾರ್ಯರಿಗೊಲಿದು ಕರುಣದಿಂದಲಿ ಕೊಟ್ಟಂಥ ಚರಣಕವಚ ಸ್ವರಣ ಸಂಪುಟದಲ್ಲಿ ನಿರುತ ಪೂಜೆಯ ಮಾಡುತ್ತ ಪ್ರವಚನಾಸಕ್ತ ಧರೆಯೊಳಗೆ ಬಹು ಶರಣು ಜನ ರಘ ತರಿದು ಸೌಖ್ಯವ ಗರಿವುದಕೆ ಸಂ ಚರಿಸುತಲಿ ಸಚ್ಛಾಸ್ತ್ರ ಮರ್ಮವ ನರುಹಿಜನರನುದ್ಧರಿಸಿದಂಥ 1 ಪೊಳೆವ ಫಾಲದಿ ಪುಂಡ್ರ ತಿಲಕ ಮುದ್ರಾಕ್ಷತಿ ವಿಲಸಿತ ಶುಭಗಾತ್ರದಿ ಅಲವ ಬೋಧರ ಮತದೊಳು ತತ್ವಬೋಧಕ ಸುಲಲಿತೋಪನ್ಯಾಸದಿ ಬಲು ವಿಧಾರ್ಥವ ಪೇಳಿಕುಳಿತಪಂಡಿತರನ್ನು ಒಲಿಸುತಿರೆ ಪೂರ್ವದಿ ಪಂಢರಪುರದಿ ಭವ ಮುದ್ಗಲಾಚಾರ್ಯರಿ ಗೊಲಿದು ಬಂದಿಹ ಚಲುವ ವಿಠ್ಠಲ ಮೂರುತಿಯ ಪದ ಜಲಜ ಮಧುಕರರೆನಿಸಿದಂಥ 2 ಜಡಜಾಪ್ತನುದಯದಿ ನಡೆದು ದ್ವಿಜಗೃಹದೇವ ರಡಿ ಗೊಂದನೆಯ ಮಾಡುತ್ತ ಎಡೆಬಿಡದಲೆ ತಮ್ಮ ಅಡಿಗೊಂದಿಸುವ ಭಕ್ತ ಗಡಣವ ಮನ್ನಿಸುತ ಬಿಡದೆ ಶತತ್ರಯ ಕೊಡ ಜಲದಲಿ ಸ್ನಾನ ದೃಢಮನದಲಿ ಮಾಡುತ್ತ ತಂತ್ರ ಸಾರೋಕ್ತ ಎಡಬಲದಿ ಶೇವೆಯನು ಮಾಡುವ ಪೊಡವಿಸುರಕೃತ ವೇದ ಘೋಷದಿ ಜಡಜನಾಭನ ಪೂಜಿಸುವ ಬಹು ಸಡಗರವ ನಾನೆಂತು ಬಣ್ಣಿಪೆ 3 ಭೂತಲದಲಿ ಶ್ರೇಷ್ಠವಾತ ಮಾತಾಂಬುಧಿ ಶೀತ ಕಿರಣನೆನಿಸಿ ಪ್ರಾತರಾರಭ್ಯ ಶ್ರೀನಾಥನೆ ಪರನೆಂಬೊ ಶಾಸ್ತ್ರದಿ ಮನವಿರಿಸಿ ಖ್ಯಾತ ಸತ್ಯಧ್ಯಾನ ತೀರ್ಥರೆಂಬುವ ಗುರು ಪ್ರೀತಿಯ ಸಂಪಾದಿಸಿ ಪುತ್ರರಿಗೆ ಬೋಧಿಸಿ ಪ್ರೀತಿಯಲಿ ಶಿಷ್ಯರಿಗೆ ಭಗವ ದ್ಗೀತೆಯನು ಪ್ರತಿದಿನದಿ ಪೇಳುತ ಪಾತಕವ ಪರಿಹರಿಸಿ ಪರಮ ಪು- ನೀತ ಗಾತ್ರರ ಮಾಡಿ ಸಲಹಿದ 4 ಧರೆಯೊಳಧಿಕಮಾದ ಗಿರಿ ವೇಂಕಟೇಶನ ದರುಶನವನೆ ಕೊಳ್ಳುತ ಗುರುವಾಜ್ಞೆಯಲಿ ಬಂದು ವರ ಸಭೆಯೊಳು ತಮ್ಮ ಪರಿವಾರದಿಂದಿರುತ ವರಷ ಶಾರ್ವರಿಯೊಳು ವರ ಮಾಘ ಪ್ರತಿಪದ ಬರಲು ಧ್ಯಾನವ ಮಾಡುವ ಹರಿಪದಾಸಕ್ತ ಪರಮ ಭಕುತಿಯಲಿಂದ ಶೇವಿಪ ಶರಣು ಜನ ಮಂದಾರ ನೆನಿಸುತ ಮೆರೆವ ಕಾರ್ಪರ ನಿಲಯ ಶಿರಿನರ ಹರಿಯ ಪುರವನು ತ್ವರದಿ ಶೇರಿದ 5
--------------
ಕಾರ್ಪರ ನರಹರಿದಾಸರು
ಗುರುಚರಣ ಪೂಜೆಯನು 'ರಚಿಸುವೆನೀಗಪರಮಾತ್ಮನೆಂದೆಂಬ ಸ್ಥಿರಮನದಿ ಬೇಗ ಪವರಮಂತ್ರರೂಪದಲಿ ಗುರು ತಾನು ದಯದಿಂದಭರದಿಂದ ಹೃದಯಮಂದಿರಕೆ ಬರಲಾಗಿಗುರುತರದಹಂಕಾರಶಯನದಿಂ ಮುರಿದೆದ್ದುಬರುವೆನಿದಿರಾಗಿ ಕರೆತರುವೆನೊಡಗೂಡಿ 1ಬ್ರಹ್ಮಕಮಲದಲೊಡೆದು ಜ್ಞಾನನಾಳದಿ ಕೂಡಿರಮ್ಯದಳವೆಂಟುಳ್ಳ ಕಮಲ ಮಧ್ಯದಲಿನಮ್ಮ ಗುರುಮೂರ್ತಿಯನು ಸಂಭ್ರಮದಿ ಕುಳ್ಳಿರಿಸಿವೊಮ್ಮನದಲಘ್ರ್ಯಾದಿಗಳನು ಭಕುತಿಯಲಿತ್ತು 2ಕರಗಳೆರಡುಳ್ಳ ಹರಿ ನಯನವೆರಡರ ಹರನುವರಮುಖ'ದೊಂದರಲಿ ವಾಗೀಶನೆನಿಸಿಪರಿಹರಿಸಿ ಗುಣಗಳನು ಪರಬ್ರಹ್ಮವಾಗಿರುವಗುರುವರನ ಮೂರ್ತಿಯನು ನೆರೆ ನೋಡಿ ಮನದೊಳಗೆ 3ಅ'ವೇಕವಂ ಪರಿದ ಗುರುಪದಕೆ ಪಾದ್ಯವನುಸು'ವೇಕವೆಂಬಘ್ರ್ಯವನು ಸ'ತ ಕೊಟ್ಟುಅ'ವೇಕದಿಂ ಬಂದ ಜೀವಭಾವವ ಬಿಡಿಸಿಕ'ವರನು ನೀನೆಂಬ ಶುದ್ಧಾಚಮನದಿಂದ 4ಪರಮಪಾವನರೂಪ ಸ್ನಾನದುಪಚಾರದಲಿಎರಡಿಲ್ಲವೆಂದೆಂಬ ಶುಭ್ರ ವಸ್ತ್ರದಲಿಬರೆದು ತಾ ಜೀವರೊಳು ಸೂತ್ರಾತ್ಮನಾದಡೆಯು ಬೆರೆಯದಿಹನೆಂತೆಂಬ ಸೂತ್ರೋಪಚಾರದಲಿ 5ಶರಣಾಗತರ ಕಾಯ್ವ ಗುಣಗಣಗಳಾಭರಣಪರಿಪರಿಯ ಕಾಮಗಳ ಹೊದ್ದದನುಲೇಪನೆರೆ ನಿವಾರಿತವಾದ ವಾಸನಾಕ್ಷಯ ಪುಷ್ಪಸರಗಳೀ ಪರಿಭಾವನೆಗಳೆಂಬ ಭಕ್ತಿಯಲಿ 6ಜಡ ದುಃಖ ಪುಸಿಗಳಿಗೆ ಬೇರೆಂಬ ಧೂಪದಲಿಎಡೆಬಿಡದ ಜ್ಯೋತಿಃಸ್ವರೂಪ ದೀಪದಲಿಬಿಡದ ಸುಖದನುಭವದ ದಿವ್ಯ ನೈವೇದ್ಯದಲಿಜಡಕೆ ಮಂಗಳ'ತ್ತ ಬಗೆಯ ತಾಂಬೂಲದಲಿ 7ನಿತ್ಯ ಪ್ರಕಾಶದಲಿ ಪೊಳೆವ ಮಂಗಳ ದೀಪಸತ್ಯದಾಧಾರದಲಿ ಸುಳಿವ ಕರಣಗಳಮತ್ತೆ ಸತ್ಯದೊಳಿರಿಸುತಿಹ ಮಂತ್ರಪುಷ್ಪದಲಿಸುತ್ತುವರಿದಿಹ ವಸ್ತುವೆಂದು ಬಲವಂದು 8ಘನ ಮ'ಮನಂಘ್ರಿಯಲಿ ತನು ಮನಾದಿಗಳನ್ನುನಿನಗೆ ಸಂದುದೆನುತ್ತಲಿತ್ತು ನ'ುಸುತ್ತಾಕನಕಮಯವಾದ ಶ್ರೀ ತಿರುಪತಿಯ ವೆಂಕಟನತನುರೂಪ ನೀಲಕಂಠಾರ್ಯರನು ಬಿಡದೆ 9ಓಂ ಸನಾತನಾಯ ನಮಃ
--------------
ತಿಮ್ಮಪ್ಪದಾಸರು
ಗುರುಪಾದಕೆ ಮನಮಗ್ನವಾಗುವದೆ ಖೂನ ಧ್ರುವ ಗುರು ತನ್ನೊಳಗದೆ ಗುರ್ತು ನರದೇಹ್ಯದ ಭಾವನೆತಾಮರ್ತು ಅರಿಯಲಿಕ್ಕೆ ಘನ ಬೆರ್ತು ಧರೆಯೊಳು ನಿಜನಿರ್ತ 1 ಗುರುಶಿಷ್ಯತ್ವದ ನಿಜಖೂನ ಮರಜನಗಳಿದು ಬಲ್ಲವೇ£ À ವಿರಳಾಗತ ವಿಹ್ಯದೀ ಙÁ್ಞನ ಸುರಜನ ಪಾವನ 2 ಭಾವದೊಳ ನಿಜಗುರು ಸಧ್ಬಕ್ತಿ ಠಾವಿಲಿರಬೇಕಿದು ಸಂಗತಿ ನಿಚ್ಚ ಮಹಿಪತಿ ಭವಹರ ಗುರುಮೂರ್ತಿ 3
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ಗುರುಬೋಧ ಪರಮಸುಖಕಾರಿ ಬಾರಿ ಬಾರಿಗೂ ಕೇಳೈ ಭವರೋಗೀ ಪ ಬಿಡು ಬಾಳಿನ ಭ್ರಮೆಯ ಸಂಸಾರಿ ದುಃಖದ ಬಾಳಿದು ವಿನಾಶಕಾರಿ ಇದರೊಳು ಸಿಗುತಿಹ ಸುಖವು ವಿಕಾರಿ ತಿಳಿಯೈ ಮುಕ್ತನಾಗಲಿದು ದಾರಿ 1 ಆರಿ ನಿನ್ನಯ ನಿಜವಾ ಸುವಿಚಾರಿ ಅರಿವೇ ನಿನ್ನಯ ಈ ಭವತಾರಿ ಬೇರಾವುದು ನಿನಗಾಗದು ದಾರಿ ಈ ನುಡಿ ಪೇಳುತಿಹುದು ಶೃತಿಸಾರಿ 2 ಜಾಗರಾ ಕನಸು ನಿದ್ರೆಯ ಮೀರಿ ಅಮರವಾಗಿರುವ ಪದವನೆ ತೋರಿ ಅದೆ ನೀನೆನ್ನುತ ಪರಿಪರಿ ಸಾರಿ ಶಂಕರಭೋಧವಿದುವೆ ಭವಹಾರಿ3
--------------
ಶಂಕರಭಟ್ಟ ಅಗ್ನಿಹೋತ್ರಿ
ಗುರುರಾಜ ನಿನ್ನ ಹೊರತು ಪೊರೆವ ಧೊರೆಗಳ ಕಾಣೆ | ಶರಣಜನರಿಷ್ಟವನೆ ಸುರತರುವಿನಂತೀವೆ ಪ ತರಳಪ್ರಹ್ಲಾದನಾಗಿರಲು ವರಭಕುತಿಯಿಂ | ನರಹರಿಯ ಮೆಚ್ಚಿಸಿದೆ ಪರಮಕರುಣಾಸಿಂಧೊ 1 ವ್ಯಾಸಮುನಿಯು ನೀನೆ ವಾಸುದೇವನ ಭಜಿಸಿ | ಲೇಸಾದ ಚಂದ್ರಿಕೆಯ ಭೂಸುರರಿಗರುಹಿದೆ 2 ಶ್ರೀರಾಮಚಂದ್ರಪದಸರಸೀರುಹಾಭೃಂಗ | ಶ್ರೀ ರಾಘವೇಂದ್ರಯತಿ ಸುರುಚಿರಕೃಪಾಪಾಂಗ 3 ನರಹರಿ ಸಿರಿರಾಮ ಮುರವೈರಿ ಮುನಿವ್ಯಾಸ | ಇರುತಿಹರು ನಿನ್ನೊಳು ಧರೆಯ ಪಾಲಿಸೆ ಮುದದಿ 4 ಕರೆದಲ್ಲಿ ಬರುವೆನೆಂದೊರೆದ ವಚನವ ಸಲಿಸೆ | ಭರದಿ ನಾರಾಯಣಪುರಕೈದಿದಿಯೊ ಮುದದಿ 5 ಭೀಮಸೇತ್ವ್ಯಾಖ್ಯ ಮಠ ಸೋಮರಘುತಿಲಕರಿಂ | ದೇ ಮಹಾಸೇವೆಯ ಕೈಗೊಂಡೆಯೋ ಮುದದಿ 6 ದೋಷದೂರನೆ ಪ್ರಭುವೆ ಆಶೆಯಿಂ ಸೇವಿಪರ | ಕ್ಲೇಶವೆಲ್ಲವನಳಿದು ಶ್ರೀಶಕೇಶವನೊಲಿಸೊ 7
--------------
ಶ್ರೀಶ ಕೇಶವದಾಸರು