ಒಟ್ಟು 1713 ಕಡೆಗಳಲ್ಲಿ , 104 ದಾಸರು , 1194 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಬಂದನಿದಕೋ ರಂಗ ಬಂದನಿದಕೋ ಸುಂದರಾಂಗನು ನಮ್ಮ ಮಂದಿರಕೆ ಈಗಾ ಪ. ಮುಗಳುನಗೆ ಮುಖದಲ್ಲಿ ಮುಂಗುರುಳು ನವಿಲುಗರಿ ಕಂಬು ಕಂಠಾ ಝಗ ಝಗಿಪ ಕುಂಡಲವು ಕಸ್ತೂರಿ ತಿಲಕ ಫಣಿ ನಗಧರನು ನಮ್ಮ ಮನಸೂರೆಗೊಂಬುದಕೇ 1 ಕರದಲಿ ಕಂಕಣವು ಬೆರಳಲ್ಲಿ ಉಂಗುರವು ಕೊರಳಲ್ಲಿ ನವರತÀ್ನ ಮುತ್ತಿನಹಾರಗಳೂ ಕಿರುಗೆಜ್ಜೆ ನಡುವಿನಲಿ ವಲಿವೋ ಪೀತಾಂಬರವು ವರ ವೇಣು ವಯ್ಯಾರದಿಂದ ಊದುತಲೀ 2 ಸುರರ ವಂಚನೆಗೈದು ವರ ಋಷಿಗಳನೆ ಜರಿದು ಸಿರಿಗಗೋಚರನೆನಿಸಿ ಪರಮ ಪುರುಷಾ ವರಧಾಮತ್ರಯಗಳನೂ ಮರದೆಮ್ಮ ಗೋಕುಲದಿ ಚರಿಯ ತೋರೀ 3 ಇಂದಿರೇಶನು ನಮ್ಮ ವೃಂದಾವನದೊಳಿಪ್ಪ ಮಂದಿಗಳ ಮನ ಸೆಳೆದು ಮಾರಜನಕಾ ಒಂದೊಂದು ರೂಪಿನಲಿ ಗೋಪಿಕಾ ಸ್ತ್ರೀಯರೊಳು ಬಂದು ಬೆರೆಯುವ ಮದನಕಲೆ ನಿಪುಣ ಚೆಲುವಾ 4 ಗೋವರ್ಧನೋದ್ಧಾರ ಗೋವಳರ ವಡಗೂಡಿ ಗೋಪಿ ಬಾಲಾ ಗೋವಿಂದ ಗೋಪಾಲಕೃಷ್ಣವಿಠಲ ನಮ್ಮ ಪೂರ್ವ ಪುಣ್ಯದ ಫಲದಿ ಭೂವನಿತೆ ಪಾಲಾ 5
--------------
ಅಂಬಾಬಾಯಿ
ಬಂದಾ ಬಂದಾ ಉಡುಪಿಲಿ ನಿಂದ ನಿಂದಾ ಪ. ಬಂದ ಗೋಪೇರ ವೃಂದಗಳ ತಾ ನಂದು ದಣಿಸುತ ಸುಂದರಾಂಗನು ಮಂದರೋದ್ಧರ ಬೃಂದೆಯಿಂದಲಿ ಅ. ಮುದ್ದುಸುರಿಸುತ ಗೋಕುಲದೊಳಿರೆ ಕದ್ದು ಬೆಣ್ಣೆಯ ತಿಂದನೆನುತಲಿ ಸುದ್ದಿ ತಾಯಿಗೆ ಪೇಳಿ ಸತಿಯರು ಗದ್ದಲದಿ ತನ್ನ ಗಾರು ಮಾಡಲು ಮುದ್ದು ಯತಿಗಳು ಎದ್ದು ಪೂಜಿಸಿ ಮುದ್ದಿ ಬೆಣ್ಣೆ ನೇವೇದ್ಯವಿಡುತಿರೆ ಸದ್ದು ಇಲ್ಲದೆ ತಿಂದು ಸುಖದಲಿ ಇದ್ದೇನೆಂಬುವ ಬುದ್ಧಿಯಿಂದಲಿ 1 ಭಾರವಿಳುಹಲು ಕೋರೆ ಭೂಮಿಯು ನಾರದಾದ್ಯರ ನುತನು ತಾ ಬರೆ ನಾರಿಯರು ಮನ ಬಂದ ತೆರದಲಿ ಜಾರ ಚೋರನೆನುತ್ತ ಬೈಯ್ಯಲು ಧೀರ ಯತಿಗಳು ಸೇರಿ ಪರಬೊಮ್ಮ ಶ್ರೀರಮಣನೆನ್ನುತ ಸ್ತುತಿಸುವೋ ವಾರುತಿಗೆ ಮೈದೋರಿ ಭಕುತರ ಪಾರಿಗಾಣಿಪೆನೆಂಬ ನೆವದಲಿ 2 ಹಸಿದುಗೋಪರÀ ಯಜ್ಞವಾಟಕೆ ಅಶನ ಬೇಡಲು ಕಳುಹೆ ಗೊಲ್ಲರ ಪಸುಳರಿಗೆ ನೈವೇದ್ಯವಿಲ್ಲದೇ ವಶವೆ ಕೊಡಲೆಂದೆನ್ನೆ ಋಷಿಗಳು ವಸುಧಿಪತಿ ಸರ್ವೇಶನೆಂದರಿ ದಸಮಯತಿಗಳು ಕ್ಷಣ ಕ್ಷಣಕ್ಕೆ ಷ ಡ್ರಸದ ಆರೋಗಣೆಯ ಮಾಡಿಸೆ ಕುಶಲದಲಿ ಮೃಷ್ಟಾನ್ನ ಭುಜಿಸಲು 3 ಬಾಲ ಕಂದಗೆ ತೊಡಿಗೆ ತೊಡಿಸಲು ಲೀಲೆಯಿಂದಲಿ ಗೋಪಿದೇವಿಯು ಕಾಳ ಮಡುವಿಲಿ ಧುಮಿಕಿ ಎಲ್ಲವ ಕಳೆದು ಬರೆ ಆಟಗಳ ಪರೆವೆಲಿ ಶೀಲಯತಿಗಳು ವಾರ ವಾರಕೆ ಬಾಲ ತೊಡಿಗೆ ಶೃಂಗಾರಗೈಯ್ಯಲು ಆಲಯವ ಬಿಟ್ಟೆಲ್ಲಿ ಪೋಗದೆ ಓಲಗವ ಕೈಕೊಳ್ವೆನೆನ್ನುತ 4 ಗೋಪಜನ ಗೋವ್ಗಳನೆ ಕಾಯಲು ಗೋಪಿಯರು ತನ್ನ ಗುಲ್ಲು ಮಾಡಲು ಪಾಪಿ ಕಂಸ ಅಟ್ಟುಳಿಯ ಪಡಿಸಲು ಭೂಪತಿಯ ಪದವಿಲ್ಲದಿರಲು ಈ ಪರಿಯ ಬವಣೆಗಳ ತಾಳದೆ ಗೋಪ್ಯದಿಂದಿಲ್ಲಡಗಿ ನಿಂತು ಗೋಪಾಲಕೃಷ್ಣವಿಠಲ ಯತಿಗಳ ಗೌಪ್ಯಪೂಜೆಯಗೊಂಬ ವಿಭವಕೆ 5
--------------
ಅಂಬಾಬಾಯಿ
ಬಂದಿರುವೆನು ಭೂಜಾತೆ | ಶರ- ದಿಂದುವದನೆ ವೋ ಸೀತೆ ಪ ಕೂಗುವುದೇತಕೆ ನಿಮ್ಮಯ ಪೆಸರೇ ನೀಗ ತಿಳಿಸಿರೈ ಸ್ವಾಮಿ | ನುಡಿ ಭಾಗವತ ಜನಪ್ರೇಮಿ ಅ.ಪ ಹೀನತಮವ ಮುರಿದಜಗೆ ಶೃತಿಗಳಿತ್ತ ಮೀನಾವತಾರನೆ ನಾನು | ಬಾ ಜಾನಕಿ ಬೇಗನೆ ನೀನು ಮೀನಾದರೆ ನೀರೊಳಗಿರುವುದು ಸರಿ ಮಾನಿನಿಯಲಿ ಕಾರ್ಯವೇನು | ನಡಿ ದೀನ ಜನರ ಸುರಧೇನು 1 ಕಮಲನಯನೆ ನಾ ಪೂರ್ವದಿ | ಗಜ- ಗಮನೆಯೆ ನೋಡನುರಾಗದಿ ಭ್ರಮೆಯಾತಕೆ ಕೇಳ್ ಕಠಿಣಾಂಗಗೆ ನಾ ಸಮಳೆ ನಿನಗೆ ನೀ ನೋಡು | ಸಂ ಭ್ರಮವಿದ್ದಲಿ ನಲಿದಾಡು 2 ವರಹಾರೂಪನೆ ಕಾಮಿನಿ | ಓ ತರುಣಿಯರೊಳಗೆ ಶಿರೋಮಣಿ ವರಾಹನಾದರೆ ಅಡವಿಯ ತಿರುಗುತ- ಲಿರದೇತಕೆ ಇಲ್ಲಿ ಬಂದೆ | ನಡಿ ಪರಿಪರಿ ಮೃಗಗಳ ಹಿಂದೆ 3 ಕರುಳ ಬಗೆದ ನರಸಿಂಹ | ನಾನು ಪರಮ ಪುರಷ ಪರಬ್ರಹ್ಮ ನರಸಿಂಹನು ನೀನಾದರೆ ನಡಿನಡಿ ಗಿರಿಗುಹೆಯೊಳಗಿರು ಹೋಗೈ | ಬಹು ಪರಿನುಡಿಗಳು ನಿನಗೇಕೈ 4 ಭೂಮಿಯ ದಾನವ ಬೇಡಿ ಬಲಿಯ ಗೆದ್ದ ವಾಮನ ನಾನೆಲೆ ನಾರಿ | ಸು ತ್ರಾಮಾದ್ಯರಿಗುಪಕಾರಿ ಬ್ರಾಹ್ಮಣನಾದರೆ ನಮಿಸುವೆ ಚರಣಕೆ ಹೋಮಧ್ಯಾನ ಜಪಮಾಡೈ | ನಿ ಷ್ಕಾಮ ಜನರ ಪಥನೋಡೈ 5 ದುರುಳನೃಪರ ಸಂಹರಿಸವನಿಯ ಭೂ ಸುರರಿಗೆ ಕೊಟ್ಟೆನೆ ದಾನವು | ಕೇಳ್ ಪರಶುರಾಮಾಭಿದಾನವು ವರಮಾತೆಯ ಶಿರವರಿದವ ನೀನಂತೆ ಸರಸವೇತಕೆನ್ನಲ್ಲಿ | ಮನ ಬರುವಲ್ಲಿಗೆ ತೆರಳಲ್ಲಿ 6 ತಾಯನುಡಿಗೆ ತಮ್ಮಗೆ ರಾಜ್ಯವ ಕೊಟ್ಟು ಪ್ರಿಯದಿ ವನದೊಳಗಿದ್ದೆನೆ | ದೈ ತ್ಯೇಯ ನಿಕರವನು ಗೆದ್ದೆನೆ ಸ್ರೀಯರಲ್ಲಿ ಹಿತವೇನು | ಕಮ ಲಾಯತಾಕ್ಷ ನಡಿ ನೀನು 7 ನಾರಿಯರನು ಕೂಡಿ ರಾಸ ಕ್ರೀಡೆಯೊಳ್ ತೋರಿದೆ ಪರಿಪರಿ ಚಿತ್ರವ | ವಿ- ಜಾರ ಪುರಷನಿಗೆ ಹೋಲುವಳಲ್ಲವು ಸಾರ ಪತಿವ್ರತೆ ನಾನು | ಇ- ನ್ನ್ಯಾರು ತಿಳಿಸು ಮತ್ತೆ ನೀನು 8 ಪತಿವ್ರತೆಯರ ಸದ್‍ವ್ರತವ ಕೆಡಿಸಿದಾ ಪ್ರತಿಮ ಬುದ್ಧನೆ ಲತಾಂಗಿ | ಓ ಮತಿವಂತಳೆ ಮೋಹನಾಂಗಿ ಕೃತಕವಾಡದಿರು ಒಲ್ಲೆ | ಕೇ ಳತಿ ಮೋಹಕ ನೀ ಬಲ್ಲೆ 9 ಹಲವು ನುಡಿಗಳೇನು ಕಲಿಯುಗಾಂತದಲಿ ಮಲೆತ ಮನುಜರನು ಕೊಲ್ವೆನೆ | ಓ ಲಲನೆ ನೋಡು ಬಲು ಚೆಲ್ವನೇ ಕಲಿತನವ ತೋರಿಸದಿರು ಈ ಪರಿ ಹಲವು ವೇಷ ನಿನಗೇಕೆ | ಕೇ ಳೆಲವೊ ಸ್ವಾಮಿ ನುಡಿ ಜೋಕೆ 10 ವೇಷವಲ್ಲ ಸರ್ವೇಶ ನಾನು ಪರಿ- ಪೋಷಿಸುವೆನು ನಿಜಭಕ್ತರ | ಸಂ- ತೋಷಿಸುವೆನು ಧರ್ಮಯುಕ್ತರ ಪೋಷಿಸುವನು ನೀನಾದರೆಲ್ಲಿ ನಿನ್ನ ವಾಸಪೇಳು ನಿಜವೀಗಾ | ಪರಿ ಹಾಸವೇಕೆ ನುಡಿಬೇಗ 11 ಪರಮಾತ್ಮನು ನಾ ಕೇಳೆ | ಎನ್ನ ಮರತೆಯೇನೆ ಎಲೆ ಬಾಲೆ ಅರಿತೆನೀಗ ಬಹು ಸಂತಸವಾಯಿತು ಎರಗುವೆ ಚರಣಕೆ ನಾನು | ನಿನ್ನ ಸರಿಯಾರೈ ದೊರೆ ನೀನು 12 ಧರೆಯೊಳಯೋಧ್ಯಾ ಪುರದರಸನ ಮಗ ಗುರುರಾಮವಿಠಲನೆ ನಾನು | ಓ ತರುಣಿ ನಿನಗೊಲಿದು ಬಂದೆನು ಧರಣಿ ತನಯೆ ನಸುನಾಚಿಕೆಯಿಂದಲಿ ಣಗಳನು ತೊಳೆದಳು ಬೇಗ 13
--------------
ಗುರುರಾಮವಿಠಲ
ಬದುಕಿಸೀ ಪಶುಗಳನೂ ಭಗವಂತ ನೀನು ಪ ಕದಲಿಸೀರೋಗವ-ಕರುಣಿಗಳರಸನೆ ಅ.ಪ. ಗೋವುಗಳೆಲ್ಲಾ ಹೊಟ್ಟೆ-ನೊವಿನಿಂ ಕಂಗೆಟ್ಟು ಮೇವನುಬಿಟ್ಟ ವಿದಾವರೊಗವೋ ಕಾಣೆ 1 ಹೊಟ್ಟೆ ಕಳೆದು ಕಂಗೆಟ್ಟುಧಾತುಗಳೆಲ್ಲಾ ಕೆಟ್ಟು ಜೀವಂಗಳ ಬಿಟ್ಟುಬಿಡದಮುನ್ನ 2 ನಾಲಿಗೆ ನೀಡವು ಕಾಲು ಕೆಟ್ಟವು ಕಂ ಣಾಲಿ ಕೆಂಣಾಲಿ ಕೆಂಪಾದವು ಮೂಲವೆ ತಿಳಿಯದು3 ಗೋವುಗಳಿಗೆ ಭೂದೇವರುಗಳಿಗೆಲ್ಲ ದೇವ ನೀನಲ್ಲವೆ-ದೇವಕೀ ತನಯನೆ 4 ಸತ್ತವರಿಗೆ ಜೀವವಿತ್ತು ಬದುಕಿಸಿದೆ ಮೃತ್ಯುದೇವತೆ ನಿನ್ನ ತೊತ್ತಹಳಲ್ಲವೆ 5 ದಾಸನು ನಾನೆಂಬ ವಾಸಿಯುಳ್ಳರೆ ಬೇಗ ವಾಸಿಯ ಮಾಡಯ್ಯ ನೀ ಮೋಸವ ಮಾಡದೆ 6 ಇಷ್ಟದಿನೆನೆವರ ಕಷ್ಟವ ಕಳೆವ ಪುಲಿ ಬೆಟ್ಟದೊಳಿಹ ವರದ ವಿಠಲ ಕೃಷ್ಣನೀ 7
--------------
ಸರಗೂರು ವೆಂಕಟವರದಾರ್ಯರು
ಬದುಕಿಸೀ ಪಶುಗಳನ್ನು ಭಗವಂತ ನೀನು ಪ ಬದುಕಿಸೀ ಪಶುಗಳ ಭವರೋಗ ವೈದ್ಯನೆ ಕದಲಿಸೀ ರೋಗವ ಕರುಣಿಗಳರಸನೆ ಅ.ಪ ಗೋವುಗಳೆಲ್ಲಾ ಹೊಟ್ಟೆ ನೋವಿಂ ಕಂಗೆಟ್ಟು ಮೇವನು ಬಿಟ್ಟವಿದಾವ ರೋಗವೋ ಕಾಣೆ 1 ಹೊಟ್ಟೆ ಕಳೆದು ಕೆಂಗೆಟ್ಟಧಾತುಗಳೆಲ್ಲಾ ಕೆಟ್ಟು ಜೀವಂಗಳ ಬಿಟ್ಟ ಬಿಡದ ಮುನ್ನ 2 ನಾಲಿಗೆ ನೀಡವು ಕಾಲು ಕೆಟ್ಟವು ಕಂ ಣ್ಣಾಲಿ ಕೆಂಪಾದವು ಮೂಲವೆ ತಿಳಿಯದು 3 ಗೋವುಗಳಿಗೆ ಭೂದೇವರುಗಳಿಗೆಲ್ಲ ದೇವ ನೀನಲ್ಲವೆ ದೇವಕೀ ತನಯನೆ 4 ಸತ್ತವರಿಗೆ ಜೀವವಿತ್ತ ಬದುಕಿಸಿದೆ ಮೃತ್ಯು ದೇವತೆ ನಿನ್ನ ತೊತ್ತಹಳಲ್ಲವೆ 5 ದಾಸನು ನಾನೆಂಬ ವಾಸಿಯುಳ್ಳರೆ ಬೇಗ ವಾಸಿಯ ಮಾಡಯ್ಯ ನೀ ಮೋಸವ ಮಾಡದೆ 6 ಇಷ್ಟದಿ ನೆನೆವರ ಕಷ್ಟವ ಕಳೆವ ಪುಲಿ ಬೆಟ್ಟದೊಳಿಹ ವರದ ವಿಠಲ ಕೃಷ್ಣನೀ 7
--------------
ವೆಂಕಟವರದಾರ್ಯರು
ಬದುಕು ಬದುಕು ನಂಜುಂಡಾ ಮ ಪರಿಯಂತ ಪ ಜನನಿಯ ಮಾತನು ಮೀರದೆ ಪರ ವನಿತೆಯರಿಗೆ ಮನಸೋಲದೆ ಬಿನುಗು ದೈವಂಗಳಿಗೆರಗದೆ ದು ರ್ಜನರ ಸಂಗಗಳ ನೀ ಮಾಡದೆ ನಂಜಾ 1 ತಪ್ಪುದಾರಿಯಲಿ ನೀ ಪೋಗದೆ ಆರು ಒಪ್ಪದ ಕರ್ಮವ ಮಾಡದೇ ತಪ್ಪು ಕಥೆಗಳನು ಕೇಳದೆ ಬಲು ಸಪ್ಪೆ ವಾಕ್ಯಂಗಳನಾಡದೆ ನಂಜಾ 2 ಹರಿಗೆರಗುತ ಹರಿಶರಣರ್ಗೆ ನಮಿಸುತ ಹರಿಯ ಕಥೆಗಳನ್ನು ಕೇಳುತಾ ಹರಿಯೆ ಸರ್ವೋತ್ತಮನೆಂದು ನೀನಿರುಕಂಡ್ಯ ಸಿರಿ ವೈಕುಂಠಕೇಶವ ರಕ್ಷಿಪ ನಂಜಾ 3
--------------
ಬೇಲೂರು ವೈಕುಂಠದಾಸರು
ಬಂದೆನಿಲ್ಲಿಗೆ ಸಂದರುಶನಕ್ಕೆ ಬಂದೆನಿಲ್ಲಿಗೆನ್ನ ಮನದಿ ಬಂದು ನಿಲ್ಲೆಂದು ನಿನ್ನ ವಂದಿಸ್ವರವ ಬೇಡುವೆ ನಾ ನಂದನ ಸುಂದರ ಕೃಷ್ಣ ಬಂದೆನಿಲ್ಲಿಗೆ ಪ ಪಾಲಶರಧಿ ಆಲದೆಲೆಯಲ್ಯೋಗನಿದ್ರೆ ಮಾಡಿ ನಿನ್ನ ನಾಭಿಕಮಲನಾಳದಿಂದ ಆಗ ಅಜನ ಪಡೆದ ಹರಿಯೆ 1 ಸಾಗರವ ಬಿಟ್ಟು ನಾಗಶಯನ ಶೂರಸುತನಲ್ಲುದಿಸಿ ಯೋಗಿಗಳ ಹೃದಯಕಮಲ ಆಲಯವ ಮಾಡಿದ್ದ ದೊರೆಯೆ2 ಕಂದನಾಗಿ ಬಂದು ಕಾಳಿಂದಿ ದಾಟಿ ನಂದಗೋಕುಲ ವೃಂದಾವನದಿ ಗೋವುಕಾಯ್ದ ಇಂದಿರೇಶ ಅಜನಪಿತನೆ 3 ಅಷ್ಟಮಠದ ಯತಿಗಳಿಂದ ಮುಟ್ಟಿಪೂಜೆಗೊಂಬುವಂಥ ಶ್ರೇಷ್ಠರೊಳಗೆ ಶ್ರೇಷ್ಠ ನಿನ್ನುತ್ಕøಷ್ಟಮಹಿಮೆ ನೋಡಲೀಗ4 ಧ್ವಜ ವಜ್ರಾಂಕುಶ ರೇಖವುಳ್ಳ ಪದುಮಪಾದ ನೋಡಲೀಗ5 ದೊಡ್ಡ ಮುತ್ತು ವಜ್ರದ್ಹರಳಿನಡ್ಡಿಕೆ ಉಡಿದಾರ ಹೊಳೆಯೆ ಒಡ್ಯಾಣವನೆಯಿಟ್ಟ ಜಂಘÉ ಜಾನುದ್ವಯವ ನೋಡಲೀಗ6 ಉದರದಲ್ಲೀರೇಳುಲೋಕ ಅಡಗಿಸಿದನಂತಶಯನ ಪದುಮ ಪೊಕ್ಕಳಿಂದ ಬ್ರಹ್ಮನ ಪಡೆದ ಪರಮಾತ್ಮನ್ನ ನೋಡ7 ವಂಕಿ ಬಾಹುಪುರಿಗಳಿಂದ ಕಂಕಣ ಭೂಷಣಗಳೊಪ್ಪೆ ಕರವ ನೋಡ8 ನೀಲವರಣ ನಿನ್ನ ಬೆರಳು ಸಾಲು ಮಾಣಿಕ್ಯ ಮುದ್ರಿಕಿಂದ್ಹೊಳೆಯೆ ಲೀಲೆಯಿಂದ ಗಿರಿಯೆತ್ತಿದ ಗೋಪಾಲಕೃಷ್ಣ ನಿನ್ನ ನೋಡ 9 ವೈಜಯಂತಿ ತೋರ ಮುತ್ತಿನೆಳೆÀಗಳ್ಹೊಳೆವೋ ಶ್ರೀದೇವೇರಿಗಾಶ್ರಯವಾಗಿದ್ದಿ ್ವಶಾಲ ವಕ್ಷಸ್ಥಳವ ನೋಡ10 ಪಚ್ಚೆಪದಕ ಪಾರಿಜಾತ ಅಚ್ಚ ಮಲ್ಲಿಗೆ ತುಳಸಿಮಾಲೆ ಶ್ರೀ- ಕೌಸ್ತುಭ ಶೃಂಗಾರ ಕೊರಳ ಸಿರಿಯರಸು ನಿನ್ನ ನೋಡ11 ಮಧ್ವರಾಯರು ಕೈಯ ಬೀಸೆ ಎದ್ದು ಬಂದು ಹಡಗದಿಂದಿ ಲ್ಲಿದ್ದಾನುಡುಪಿಕ್ಷೇತ್ರದಿಯೆಂದು ಮುದ್ದುಕೃಷ್ಣನ ಮುಖವ ನೋಡ12 ಕ್ರೂರಕಂಸನ(ಅ)ಪ್ಪಳಿಸಿ ದ್ವಾರಾವತಿಯಲ್ಲಿದ್ದ ಅಷ್ಟಭಾರ್ಯೇರಿಂದ್ವಿ- ಹಾರ ಮಾಡಿದ್ವಾರಿಜಾಕ್ಷನ್ವದನ ನೋಡ 13 ಚಂದ್ರನಂತೆ ಹೊಳೆವೊ ಮುಖದಿ ದುಂಡು ಮುತ್ತಿನ ಮೂಗುತಿನಿಟ್ಟು ಕುಂದಣದ್ವಜ್ರ ಬಿಗಿದ ಕರ್ಣಕುಂಡಲವನ್ನು ನೋಡಲೀಗ14 ಕೇಸರಿ ಗಂಧ ಕಸ್ತೂರಿಯ ನಾಮ ತಿಲಕ ಒಪ್ಪೋವಜ್ರದರಳೆಲೆ ದೇವಕೀಸುತನ (ನೋಡ) 15 ಬಾಲಭಾಸ್ಕರ ಕೋಟಿಲಾವಣ್ಯರೂಪಗೆಲುವ ಕಾಂತಿ ಸಾಲುದೀವಿಗೆ ಸೊಬಗು ಕಮಲದಳಾಯತಾಕ್ಷ ಹರಿಯ ನೋಡ16 ಕೆಂಪುಹರಳು ಝಗ ಝಗಿಸುವೊ ಪಂಚರತ್ನದ ಕಿರೀಟ ಚಂಚಲಾಕ್ಷ ಹರಿಯ ಶಿರದಿ ಮುಂಚೆ ನೋಡಿ ಮುಗಿವೆ ಕೈಯ17 ಅಸುರರ್ವಂಚಿಸಮೃತ ಬೀರಿ ಪಶುವಾಹನಗೆ ಮೋಹ ತೋರಿ ಮೋಸದಿಂದ ಭಸ್ಮಾಸುರನ ನಾಶಮಾಡಿದ ನಾರಿ ನೋಡ18 ಲವಣಶರಧಿತೀರ ಮಧ್ವ ಸರೋವರದಲಿ ಶುದ್ಧಸ್ನಾನ ಪರಮ ಮಂತ್ರ ಜಪಿಸೋ ನಿನ್ನ ಶರಣು ಸುಜನಜನರ ನೋಡ19 ಉತ್ತಮ ವೈಕುಂಠ ಬಿಟ್ಟೀ ಉಡುಪಿಯಲ್ಲಿ ವಾಸವಾಗಿ ಭಕ್ತಜನರಭೀಷ್ಟಕೊಡುವೋ ನಿತ್ಯಮುಕ್ತ ನಿನ್ನ ನೋಡ20 ಶ್ರೀಶನೊಲಿಸಿದ್ಹನುಮ ಭಾರತೀಶನಾದ ಮಧ್ವರಾಯರ ದಾಸರ ದಾಸತ್ವಕೊಡು ಭೀಮೇಶಕೃಷ್ಣಂದಯದಿ ನೋಡ 21
--------------
ಹರಪನಹಳ್ಳಿಭೀಮವ್ವ
ಬರಬಾರದಾಗಿತ್ತು ಬಂದೆನಯ್ಯಾ ಪ ಕರೆತರಲು ಬಂದುದಕೆ ಫಲವೇನೊ ದೇವಾಅ.ಪ ತರಳತನದಲ್ಲಿ ಎನ್ನ ಕರಣಗಳು ಮಾಡಿದ ಪರಿಪರಿಯ ಕ್ರೀಡೆಗಳ ಫಲವೇನೊ ಎನಗೆ ದುರುಳ ಸಂಗದೊಳಿದ್ದು ಹರುಷದಿಂದಲಿ ಎನ್ನ ಆಯುವನು ಕಳೆದೆ1 ಸತಿಸುತರು ಹಿತರಿವರು ಎನಗೆಂದು ಉಬ್ಬುಬ್ಬಿ ಮಿತಿ ಇಲ್ಲದಾ ಕಾರ್ಯಗಳನೆ ಮಾಡೀ ಗತಿಯೇನು ಮುಂದು ಹಿತವು ಯಾವುದು ಎಂದು ಮತಿಗೆಟ್ಟಮೇಲೆನಗೆ ಗೊತ್ತಾಗುವುದೆಂತೋ 2 ಶ್ವಾನ ಸೂಕರಗಳು ಸ್ವೇಚ್ಛೆಯಿಂದಲಿ ಚರಿಸಿ ತನ್ನ ಪರಿವಾರವನೆ ತಾ ಪೊರೆಯುತಿಹವೋ ಎನ್ನ ಸತಿಸುತರುಗಳ ಉದರಪೋಷಣೆಗಾಗಿ ಹೀನಸೇವೆಯಿಂದ ಉಪಜೀವಿಸಲು ಬಹುದೆ 3 ತನುಬಲವು ಇದ್ದಾಗ ಕೋಣನಂದದಿ ತಿರುಗಿ ಜ್ಞಾನ ಕರ್ಮಗಳನ್ನು ಆಚರಿಸದೇವೆ ಧನ ವನಿತೆ ಮೋಹಕೆ ಕೊನೆಮೊದಲು ಇಲ್ಲದೆ ಮನವೆಲ್ಲವನು ನಾನು ಹೊಲೆಗೆಡಿಸಿದಮೇಲೆ4 ವಿಕಳಮತಿಯನು ಹರಿಪ ಅಕಳಂಕ ಹರಿಭಕ್ತ- ರಕುಟಿಲಾಂತಃತರಣ ದೊರೆತು ಎನ್ನ ಸಕಲಾಪರಾಧಗಳ ಕ್ಷಮಿಸುವರ ಸಂಗ ನೀ ಕರುಣಿಸದಿದ್ದ ಮೇಲೆ ಶ್ರೀ ವೇಂಕಟೇಶಾ 5
--------------
ಉರಗಾದ್ರಿವಾಸವಿಠಲದಾಸರು
ಬರಿದೆ ಚಿಂತಿಸಿ ನೀನು ಬಳಲುವದೇಕೆ ಮನವೆ ಹರಿನಾಮ ಸ್ಮರಣೆಯು ಹರುಷದಲಿ ಸ್ಮರಿಸಿ ಧರ್ಮಾರ್ಥ ಕಾಮ ವರಮೋಕ್ಷ ಫಲಗಳು ಕರುಣಾ ಕಟಾಕ್ಷದಿಂದ ಶ್ರೀಧರ ನಿರುತ ಕೊಡುವ ಪ ಅರಿಷಡ್ವರ್ಗಕೆ ಸಿಲ್ಕಿ ಅರಿಯದೆ ಭವಸಾಗರದೊಳು ಮುಣುಗಿ ಮೈಮರೆದು ಶ್ರೀನರಹರಿ ಶರಣರ ಪೊರೆವ ಬಿರುದುಳ್ಳಂಥ ಗರುಡವಾಹನ ಸಿರಿಯರಸ ಪರಮಾತ್ಮನ ಕಮಲ ಅನುದಿನ 1 ನೆಚ್ಚಿ ನೀ ಮಂದಾಂಧನಾಗಿ ಅಂದು ಪ್ರಹ್ಲಾದ ಪರಮಾನಂದದಿ ಕರೆಯಲು ದ್ವಂದ್ವರೂಪತಾಳಿ ಬಂದು ಕಾಯಿದಾ ವೃಂದಾರ ಕೇಂದ್ರನುತ ಮಂದರಧರ ಮುಚುಕುಂದ ವರದನ್ನ ಸಲಹೆಂದು ಮೊರೆಯ ಹೋಗದೆ 2 ನರಜನ್ಮ ತಾಳಿ ಸುಖಸ್ಥಿರ ಮಾರ್ಗ ಕಾಣದೆ ಸತ್ಪುರುಷರ ಜರಿದು ಗರ್ವ ಭರಿತನಾಗಿ ಮುರನರಕಾಂತಕ ಮುಕ್ತಿದಾಯಕ ಶುಭಕರ ಸ್ಮರಜನಕ ಶ್ರೀಧರ ಮಾಧವ ತ್ವರದಿ ರಕ್ಷಿಸೋಯನ್ನ ಹರಿಸರ್ವೋತ್ತಮ ನೆನದೆ 3
--------------
ಹೆನ್ನೆರಂಗದಾಸರು
ಬರುವ ಸಂಭ್ರಮವನ್ನು ನೋಡಿ ಪರಮ ಕರುಣಾಕರೆಯ ಪಾಡಿ ಪ. ಹೆದ್ದಾರಿ ಮಧ್ಯದಿ ಸ್ವಾರಿ ಬರುತಾ ದಾರಿದ್ರ್ಯ ದೈನ್ಯವೋಡಿಸುತಾ ಸ್ವರ್ಣಧಾರೆಯನು ಸರ್ವತ್ರ ತರುತಾ ಸಾರಿಸಾರಿಗೆ ವರವ ಕೊಡುತ 1 ಶುಕ್ಲನಭಮಾಸಭೃಗುವಾಸರದಲಿ ಶುಭಲಗ್ನಸಂಜೆ ವೇಳ್ಯದಲಿ ವಿಭವದಲಿಪೂಜಿಸುವುದೆಂದು ವಲ್ಲಭೆಗೆಂದ ವಚನ ತಿಳಿದಿಂದು 2 ಲಕ್ಷ್ಮೀದೇವಿಯನು ತನ್ನ ದಾಸರನು ಮೀಸಲಳಿಯದ ಸೌಖ್ಯಗಳನು ಮೆರೆವುದನು 3
--------------
ತುಪಾಕಿ ವೆಂಕಟರಮಣಾಚಾರ್ಯ
ಬರುವುದು ನೋಡೆ ಶ್ರೀಹರಿ ರಥವೇರಿ ಪ ಎಡಬಲದಲಿ ಹರಿ ಉಡುರಾಜ ಮುಖಿಯರ ಶೌರಿ 1 ಗುಣಮಣಿ ಶ್ರೀನಿವಾಸ ಮಣಿಯುವೋ ಭಕ್ತರ ದಣಿವು ಆರಿಪುದಕೆ ವಿನಯ ಪೂರ್ವಕವಾಗಿ2 ಬಗೆ ಬಗೆಯಲಿ ತನ್ನ ಭಜಿಸುವೊ ಭಕ್ತರ ಸುಗುಣ ಶ್ರೀ ಪ್ರಾಣನಾಥ ವಿಠಲ ರಾಯನು ನಗುತ 3
--------------
ಬಾಗೇಪಲ್ಲಿ ಶೇಷದಾಸರು
ಬಲು ಬಲು ಬೆರಗಾದ ಬಲರಾಮನು ನೋಡಿ ಹಲವು ಚಿತ್ರದ ದ್ವಾರ ವೀರ ಪ. ಕುಂದ ಮಂದಾರವು ಸುಂದರ ಉದ್ಯಾನ ಅಂದವಾಗಿ ಬೆಳೆದ ತುಳಸಿಯ ಅಂದವಾಗಿ ಬೆಳೆದ ವೃಂದಾವನ ಚಂದ ತೋರುವುದೊ ಜನಕೆಲ್ಲ1 ಕಾರಂಜಿ ಜ¯ ಹಾರಿವೆ ಗಗನಕ್ಕೆ ನೀರೆ ವರ್ಣಿಸಲು ವಶವಲ್ಲನೀರೆ ವರ್ಣಿಸಲು ವಶವಲ್ಲ ಕಲ್ಪತರು ವೀರ ಪಾಂಡವರ ವನವಿದು2 ಹಸಿರು ಪಚ್ಚದ ಕಲ್ಲು ಕುಸುರಾದ ಗಿಳಿಬೋದ ಎಸೆವೊ ಮಾಣಿಕದ ಚೌಕಟ್ಟುಎಸೆವೊ ಮಾಣಿಕದ ಕಳಸಗಳು ದೆಸೆಗೆಲ್ಲ ಬೆಳಕು ಎಸೆವೋದು 3 ಮೇಲಾದ ದ್ವಾರಕ್ಕೆ ಮ್ಯಾಲೆ ಕನ್ನಡಿಗಳು ಸಾಲು ಕಿಡಕಿಗಳು ಧ್ವಜಗಳುಸಾಲು ಕಿಡಕಿಗಳು ಒಳಗಿದ್ದಬಾಲೆರಿನೆÀ್ನಂಥ ಚಲುವರು 4 ಮುತ್ತು ಮಾಣಿಕ್ಯ ರತ್ನತೆತ್ತಿಸಿದ ಅರಮನೆಗಳುಜತ್ತು ತೋರುವ ಜನಕೆಲ್ಲಜತ್ತು ತೋರುವ ಜನಕೆಲ್ಲ ಒಳಗಿದ್ದಮಿತ್ರೇರಿನ್ನೆಂಥ ಚಲುವರು 5 ಬರಿಯ ಮಾಣಿಕದ ಗೋಡೆ ಸರಿಯಾದ ಕನ್ನಡಿಪರಿಪರಿ ರತ್ನ ಹೊಳವೋವೆಪರಿಪರಿ ರತ್ನ ಹೊಳೆವವು ಒಳಗಿದ್ದದೊರೆಗಳಿನ್ನೆಂಥ ಚಲುವರು6 ವೀರರ ಮನೆ ಮುಂದೆ ಧೀರ ರಾಮೇಶ ಇಳಿದ ನಾರಿಯರ ಸಹಿತ ಹರುಷದಿ ನಾರಿಯರ ಸಹಿತ ಹರುಷದಿ ಹೇಳಲುತೀವ್ರ ಒಬ್ಬಳನ ಕಳಿಸೆಂದ7
--------------
ಗಲಗಲಿಅವ್ವನವರು
ಬಲ್ಲನೆಂಬೊ ಮಮಕಾರ ಬಿಡು ಎಲ್ಲೆಲ್ಲಿ ಇರುವ ಶ್ರೀಹರಿಯ ನೋಡು ಒಲಿಸಿ ಒಲಿಸಲು ನಿಲುವುದು ಜಿತವಾಗಿ ಹಾಡು ಪ ನೋಡಿದ್ದನ್ನೆ ನೀ ನೋಡು | ನಿನ್ನೆ ನೋಡಿದೆನೆಂಬೊ ಖೋಡ್ಯಾಲಸ್ಯ ಬಿಡು ಹುಡುಕಿ ತತ್ವಂಗಳ ಸಮನಾಗಿ ಜೋಡು ನಡುವೆ ತತ್ಪತಿಯ ಒಡೆಯನ ಇಡು 1 ಕೇಳಿದ್ದನ್ನೇ ನೀ ಕೇಳು | ನಿನ್ನ ಆಳುವರ ಪಾದಕೆ ಬೀಳು ಹಳೆವ ವಾರ್ತಿಗೆ ಅಳುಕುವ ಮನ ಸೀಳು ಬಲು ಪರಿಯಲಿ ಕಾಮ ಕ್ರೋಧಂಗಳ ಹೂಳು 2 ಅಭಿವೃದ್ಧೀಗೆ ಬರುವುದು ಲೋಭ ನಿಭಾಯಿಸಲು ಅದು ಹೊರುವುದು ಲಾಭ ಸಭೆಯೊಳು ಪೇಳಬ್ಯಾಡ ಸ್ವಭಾವ ಇಭವರದನಾಗುವ ಅಭಾವ 3 ನರ ಜನ್ಮವೇ ಬರುವೊದು ಕಷ್ಟ ಹರಿ ಸರ್ವೋತ್ತಮೆಂಬೋದೆ ಇಷ್ಟ ಸ್ಥಿರವಲ್ಲ ತ್ವರಿತ ಮಾಡೆಲೊ ಭ್ರಷ್ಟ ಅರಿತವರ ಕೂಡೆ ನಿರತಾಡು ಶ್ರೇಷ್ಠ 4 ಅಂಕುರಾವು ಪುಟ್ಟಿಹದೀಗ ಬಿಂಕದಿಂ ಪರಿಪಾಲಿಸೊ ಬೇಗ ಶಂಕರನುತ ವಿಜಯ ರಾಮಚಂದ್ರವಿಠಲನ ಪದ- ಪಂಕಜಕೆ ಅಳಿಯಂತೆ ಸಾಗು 5
--------------
ವಿಜಯ ರಾಮಚಂದ್ರವಿಠಲ
ಬಲ್ಲವರೆ ಬಲ್ಲರು ಎಲ್ಲವರು ಅರಿಯರುಪುಲ್ಲಲೋಚನ ಪರಬ್ರಹ್ಮನೆಂಬುದನು ಪ ಅಜಜ್ಞಾನಾಧಿಕ ಬಲ್ಲ ಅನ್ನಲಸ್ನೇಹಿತ ಬಲ್ಲಗಜ ಚರ್ಮಾಂಬರ ಬಲ್ಲ ಗರುಡ ಬಲ್ಲಭುಜಗೇಶ್ವರ ಬಲ್ಲ ಭೂರಿಲೋಚನ ಬಲ್ಲತ್ರಿಜಗದಧಿಪತಿ ತ್ರಿವಿಕ್ರಮನೆಂಬುದನು1 ಶುಕಯೋಗೀಶ್ವರ ಬಲ್ಲ ಸುಗುಣ ನಾರದ ಬಲ್ಲಭಕುತ ಪ್ರಹ್ಲಾದ ಬಲ್ಲ ಬಲಿಯು ಬಲ್ಲರುಕುಮಾಂಗದ ಬಲ್ಲ ಋಷಿ ಪರಾಶರ ಬಲ್ಲಮಕರಕುಂಡಲಧರ ಪರಾತ್ಪರನೆಂಬುದನು 2 ಚಕ್ರಧರ ಕರ್ಮಹರನೆಂಬುದನು 3 ವಿದೇಹ ಬಲ್ಲಶಶಿಮಿತ್ರನೇತ್ರ ಸರ್ವೋತ್ತಮನೆಂಬುದನು 4 ವಾಗಿನಿಂದಕ್ರೂರ ಬಲ್ಲ ವಚನಿ ಶೌನಕ ಬಲ್ಲಯೋಗಿ ಕಪಿಲ ಬಲ್ಲ ಭೃಗು ಬಲ್ಲನುತ್ಯಾಗಿ ಧರ್ಮಜ ಬಲ್ಲ ರಣದೊಳರ್ಜುನ ಬಲ್ಲಕಾಗಿನೆಲೆಯಾದಿಕೇಶವ ಕೈವಲ್ಯನೆಂಬುದನು 5
--------------
ಕನಕದಾಸ
ಬಲ್ಲವಾಗಿಲ್ಲೆ ಪರಮಾತ್ಮಾ ಎಲ್ಲೆಲ್ಲಿ ನೋಡಿದರು ಅಲ್ಲಲ್ಲಿ ಇರುತಿಪ್ಪ ಪ ನೋಡಿದವೆಲ್ಲ ಶ್ರೀಹರಿಯ ಪ್ರತಿಮೆಗಳೆಂದು ಆಡಿÀದವೆಲ್ಲ ಹರಿಯ ರೂಪವೆಂದು ಮಾಡಿದದ್ದೆಲ್ಲ ಶ್ರೀಹರಿಯ ಸೇವೆ ಎಂದು ಕೂಡಿದದ್ದೆಲ್ಲ ಹರಿ ಭಕ್ತರೆಂದು 1 ತಾಪತ್ರಯಗಳೆಲ್ಲ ಮಹಾ ತಪಸು ಎಂದು ರೂಪಗಳೆÀಲ್ಲ ಹರಿಕಾಂತಿ ಎಂದು ವ್ಯಾಪಾರ ಹರಿ ಅಧೀನವೆಂದು 2 ತಾರತಮ್ಯಕಿದು ಪರಲೋಕದಿ ಸರಿಯಿಲ್ಲ ಸಿರಿ ಹರಿಯದೊರೆ ತನಗೆ ಎಂದೆನುತಾ ನಿತ್ಯ ಕಾಲಕಾಲಕೆ ಹರಿಯ ವ್ಯಾಪಾರ ಸ್ಮರಿಸುತ್ತ ಓಡ್ಯಾಡುತ 3 ಒಲಿಸಿ ಒಲಿಸಿ ಒಲಿದು ಒಲಿದು ಖಳರೊಳಗಾಡದಲೆ ವಿಜಯವಿಠ್ಠಲ ವೆಂಕಟ ಶೈಲ ನಿವಾಸಾ ಸರ್ವೋತ್ತಮನೆ ಗತಿ ಎಂದು 5
--------------
ವಿಜಯದಾಸ