ಒಟ್ಟು 5271 ಕಡೆಗಳಲ್ಲಿ , 121 ದಾಸರು , 3265 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಕಾಲ ಕಳೆವರೆ ಮನವೆ ಪ ಖಲಜನಸಂಗದಲಿ ಸದಾ ಕಲ್ಮಶಭಾಜನನಾಗುತ ಹಲಧರಾನುಜನ ಶ್ರೀ ಪದ ಜಲಜಯುಗಳವ ಸುಜ್ಞಾನದಿ ಅ.ಪ ಇಂದ್ರಿಯಗಳ ಬಂಧಿಸಿ ಮನ- ಸೊಂದಾಗಿ ನಿಲಿಸಿ ಒಳಗೆ ಮು- ಮಂದಬುದ್ಧಿಯಾಗಿ ನೀನು 1 ಯಮನವರೋಡಿ ಬರುತ ನಿ- ಸಮಯದಿ ಭ್ರಮೆಯಿಂದಲ್ಲಿ ಕಾಲ್ಗೆರಗಲು ಬಿಡುವರೆ ನಿನ್ನ 2 ತಾಮಸನಾಗುತ ಶ್ರೀಗುರು- ರಾಮವಿಠಲ ಶರಣೆನ್ನದೆ ಕಾಮಿಸುತಲಿ ಸೊಕ್ಕುತ ನೀ 3
--------------
ಗುರುರಾಮವಿಠಲ
ಕಾಲ ತಪ್ಪಿದರು ಸಾವಕಾಲ ತಪ್ಪದೋ ಯಾವ ಜೀವ ಜಂತುಗಳಿಗೂ ಕಾಯವಿಡಿದು ಬಂದ ಬಳಿಕ ಪ ಜನಿಸಿ ತಂದೆತಾಯ ಕರ ದೊಳಿರಲಿ ಸ್ತನವನುಂಡು ಭರದಿನಿದ್ರೆ ಗೈಯುರ್ತಿಲಿ ನೆರೆದಬಾಲರೊಡನೆ ಆಡಿ ಚರಿಸುತಿರಲಿ ಬಾಲಕತ್ವ ತೆರಳಿ ಜವ್ವನವು ಬಂದು ರಮಣಿಯನ್ನೆ ವರಿಸಿ ಇರಲಿ 1 ಕರಿ ಹತ್ತಿ ಮೆರೆಯುತಿರಲಿ ದೊರೆಗಳೊಡನೆ ಚರಿಸುತಿರಲಿ ಮೇರು ಗಿರಿಯ ಶಿರದೊಳಿರಲಿ ಶರಧಿ ಮಧ್ಯ ಪುರದೊಳಂಲರಣ್ಯದೊಳಗೆ ತಿರುಗುತಿರಲಿ ಅತಳ ಸುತಳ ವಿತಳವನ್ನೆ ಪೊಕ್ಕುಇರಲಿ 2 ಕಾಯವಿದುವೆ ತನ್ನ ಪೆತ್ತ ತಾಯಿತಂದೆಗಳಿಗೋ ಜಾಯೆ ಸುತರ ಗೃಧ್ರ ಭಲ್ಲುಕಾದಿಗಳಿಗೋ ಪುಲಿಗೋ ವಾಯಸಾದಿ ಕ್ರಿಮಿಗೋ ಕೀಟಕಾದಿಗಳಿಗೋ ಲಕ್ಷ್ಮೀರಮಣನೊಬ್ಬ ಬಲ್ಲನಿದನು 3
--------------
ಕವಿ ಪರಮದೇವದಾಸರು
ಕಾಲಾಭಿಮಾನಿಯೇ ಕೇಳೆನ್ನ ಬಿನ್ನಪವಾ ಪ ಕೀಲಿಸಿತು ಯೆನ್ನಾಯು | ಕಾಲಾತ್ಮಕನ ತೋರೋ ಅ.ಪ. ಖೇಟಪತಿ ನೀ ನನ್ನ ಪಾ | ಪಾಟವಿಯ ಕುಡಿನೋಟದಿಂದಲೆ ದಹಿಸಿ | ಶ್ರೇಷ್ಠ ನೆನಿಸೋ |ಸಾಟಿಯುಂಟೇ ನಿನಗೆ ಮೂ | ರ್ಕೋಟಿ ರೂಪಧರಖೇಟ ಮುಖ್ಯ ಪ್ರಾಣ | ಪ್ರೇಷ್ಟ ಸುತನೆನಿಸಿ 1 ಬಲಿಯು ವಂಚನೆಯಿಂದ | ಹರಿಯ ಮುಕುಟಾಭರಣಸುಲಭದಲಿ ಕದ್ದು ತಾ | ಕೆಳ ಲೋಕ ಪೊಗಲು |ಬಲದೊಳವನನ ನೂಕಿ | ಕಲಿತನವ ತೋರ್ಯವಗೆಲಲಿತ ವಹ ಶಿರದೊಡವೆ | ಸುಲಭದಲಿ ತಂದೇ 2 ವರ ಕಶ್ಯಪಾತ್ಮಜನೆ | ಹರಿಗೆ ವಾಹನನಾಗಿಚರಿಪೆ ತ್ರೈಜಗವನ್ನು | ಶರಣ ಪರಿಪಾಲಾ |ಗುರು ಗೋವಿಂದ ವಿಠಲನ | ಕರುಣ ನಿನ್ನೊಳಗೆಂತೊಹರಿಯೊಡನೆ ನೀನಾಗಿ | ದರುಶನವನೀಯೊ 3
--------------
ಗುರುಗೋವಿಂದವಿಠಲರು
ಕಾಲು ತೊಳೆದವನೊಬ್ಬ ತೊಳೆಸಿಕೊಂಡವನೊಬ್ಬ ಮೌಳಿ ಮೇಲಾಜಲವ ಸತತ ಧರಿಸಿದನೊಬ್ಬ ಪಾಲಿಸುವ ಪ್ರಭುವೊಬ್ಬ ಕೊಲುವ ತಳವಾರನೊಬ್ಬ ಮೂರ್ಲೋಕವರಿಯೆ ಪುಟ್ಟಿಸಿದ ಪಿತನೊಬ್ಬ ಆಲೋಚನೆಯ ಬಲ್ಲವಗೆ ಸಂಶಯ ಸಲ್ಲ ಮಾಲೆಯನು ಮಹಲಕ್ಷುಮಿ ಹಯವದನಗಿತ್ತಳಾಗಿ 1 ರಾವಣನ ಕೊಂದ ಪಾಪವ ಕಳೆಯಬೇಕೆಂದು ದೇವ ರಘುಪತಿ ಸದಾಶಿವನ ಪೂಜಿಸಿದ ಗಡಾ ಆ ವಿಧಿಯ ಒಂದು ತಲೆಯನು ಕಡಿದ ಮಾತ್ರದಿಂದ ಆವಾಗ ಕರದಲ್ಲಿ ಇಹ ಕಪಾಲವ ಕಾಣನೆ ದಾವಘದೊಳು ಪೊರಳುವನ ದಾವಾತ ಭಜಿಸುವನು ಜೀವರಿಗೆ ಉಳ್ಳಷ್ಟು ವಿವೇಕ ಹಯವದನಗಿಲ್ಲವೆ 2 ರಾಮಾಯಣದ ಕತೆಯು ಮಹಾಪುಣ್ಯ ಕಥೆಯು ಗಡಾ ರಾಮ ರಾವಣನ ಕೊಂದದ್ದು ಮಹಾಪಾಪ ಗಡಾ ಆ ಮನುಮುನಿಗಳೆಲ್ಲ ಪಾಪಕಂಗೀಕರಿಸಿದರೆ ಸ್ವಾಮಿಯು ಲಯದಿ ಬೊಮ್ಮನ ಮೊದಲು ಕೊಲಿಸದೆ ಧೀಮಂತ ಹಯವದನ ಕೊಂದ ಹಿರಣ್ಯಕ ಮುಖ್ಯ ತಾಮಸ ದಿತಿಜರು ಕಶ್ಯಪ ಋಷಿ ಸುತರಲ್ಲವೆ3 ಶ್ರುತಿಯಿವ ಕರ್ಮಣಾನೋಕನೀಯ ಎಂದು ತುತಿಸುತಿರೆ ನಿಮ್ಮ ನಿರ್ಗುಣ ಬೊಮ್ಮಗೆ ಕರ್ಮವುಂಟೆ ಕ್ಷಿತಿಯೊಳಗೆ ರಾವಣನ ವಧೆಯ ಮಾಡಿದ ಸೇತುಪತಿಯ ಪಾವನನೆನಲು ಅವನ ಕೊಂದವನ ಪತಿತಪಾವನನೆಂಬುದೆ ಕುಚಿತ್ತಯುಕುತಿಯು ಸತತ ಹಯವದನನೊಬ್ಬನೆ ಶುದ್ಧ ಕಾಣಿರೊ 4 ಒಂದು ಕಡೆಯಲಿ ವಿಭೀಷಣನ ಪ್ರತಿಷ್ಠಿಸಿದನು ಮ- ತ್ತೊಂದು ಕಡೆಯಲಿ ಸದಾಶಿವನ ಪೂಜಿಸಿದ ಇಂ- ತೆಂದು ಪುರಾಣಗಳು ಕೂಗುತಿವೆ ತ್ರಾಸಿನೊಳು ಹೊಂದಿಸಿ ಸಮನೆಂದು ತೂಗಿ ತೋರು ಮದದಲಿ ಸಂದೇಹ ಸಲ್ಲ ಹಯವದನ ರಘುಪತಿಗಿಬ್ಬರು ಸಂದ ಭಕುತರೆಂಬುದು ಸಲೆ ಸುಪ್ರಸಿದ್ಧ 5 ಸೇತುವೆಯ ಕಂಡ ನರರಿಗೆ ಬ್ರಹ್ಮಹತ್ಯಾದಿ ಪಾತಕವು ಬಿಡುವುದೆಂಬ ಶ್ರುತಿಯ ಮನ್ನಿಸಲು ಖ್ಯಾತ ಬೊಮ್ಮನ ತಲೆಯ ಕಡಿಯೆ ಕರದಲಿಕೊಟ್ಟ ತಾ- ಸುಕೃತ ಸೇತುಮುಖದಿಂದ ಸೀತೆಯರಸನು ಶಿವನ ನಿಲ್ಲಿಸಿ ಪ್ರತಿಷ್ಠಾಪಿಸಿದ ಜಗನ್ನಾಥ ಹಯವದನ ಭಕ್ತರಬಂಧು ಕಾಣಿರೊ 6 ರಾಮ ಶ್ರೀರಾಮರಾಮೇತಿ ರಮೆಯೆಂಬ ಆ ಮಹಾದೇವ ಭಗವದ್ಭಕ್ತನಲ್ಲವೆ ಸ್ವಾಮಿ ತನ್ನ ಭಕ್ತರÀನು ಪ್ರತಿಷ್ಠಿಸಿದ ನಿ- ಸ್ಸೀಮ ಕರುಣಾಂಬುಧಿ ಮಹಾಮಹಿಮನೆಂಬರು ಭ್ರಾಮಕದ ನುಡಿಗೆ ಮರುಳಾಗದಿರು ಹಯವದನ ರಾಮಚಂದ್ರನೆ ಕಾಶಿಯ ತಾರಕಬೊಮ್ಮ ಕಾಣಿರೊ 7 ಕಾಶಿಯಲಿ ರಾಮಮಂತ್ರೋಪದೇಶವ ಮಾಳ್ಪ ಈಶ ಜಾಣರ ಮತದಿ ಜಗಕೆ ಗುರುವೆಂತೆಂಬ ಆ ಶಿವನ ಮಂತ್ರದೇವತೆ ತಾರಕಬೊಮ್ಮಯೆನಿಪ ವಾಸುದೇವನೆ ಜಗಕೆ ಪರದೈವ ಕಾಣಿರೊ ಈ ಸುತತ್ವÀವ ಪೇಳ್ವ ಹರಗೆ ನಮ್ಮ ಹಯವದನ ಏಸುಮನ್ನಣೆ ಮಾಡಿದರುಚಿತ ಕಾಣಿರೊ 8 ಕರವ ಶಿರದ ಮೇಲೆ ಇರಿಸಬಂದ ಖಳಗಂಜಿ ಹರ ಸಕಲ ಸುರೇಶ್ವರರ ಅರಮನೆಗಳಿಗೆ ಪೋಗಿ ಪರಿಹರವ ಕಾಣದೆ ನಮ್ಮ ಸಿರಿವರನ ಮರೆಹೊಗಲು ಪÀರಿಣಾಮವನು ಪೊರೆದ ಗಡಾ ಶರಣರಕ್ಷಕನೆಂಬ ಬಿರುದುಳ್ಳ ಹಯವದನ ಹರಿಯಲ್ಲದೆ ಪಿರಿದೊಂದು ಪರದೈವವಿಲ್ಲವಯ್ಯ 9 ರೋಮಕೋಟಿಲಿಂಗನೆನಿಸಿದ ಹನುಮನೊಂದು ರೋಮಕೆ ಕೋಟಿ ಶಿವರ ಮಾಡುವ ಶಕ್ತ ಕಾಣಿರೊ ಆ ಮಹಾತ್ಮನ ತನ್ನ ಆಳುಮಾಡಿ ನಡೆಸಿಕೊಂಡ ರಾಮಚಂದ್ರನೆ ಜಗಕ್ಕೆ ಪರದೈವ ಕಾಣಿರೊ ಸ್ವಾಮಿ ಹಯವದನ ವೇದವ ತಂದು ಕಮಲಜನ ಕಾಮಿತವನಿತ್ತನಾಗಿ ಅವನೆ ಜಗದೊಡೆಯ 10 ನೂರು ರುದ್ರರು ಪೇಳೆ ಕಾರ್ಯವಾದರೇನವರು ಈರೇಳು ಜಗವ ಸಂಹರಿಸಲರಿಯರು ಗಡಾ ಕಾರ್ಯವಿಲ್ಲದ ಶಿವರ ಪೇಳಲದ್ವೈತಮತ ಹಾರಿಹೋಗದೆ ಬರಿದೆ ಹಲವು ಹಂಬಲಿಸದೆ ಶ್ರೀರಮಣ ಹಯವದನನೊಡಂಬಟ್ಟನಿ ಬರನು ದೂರ ಕಳಚಿದನೆಂದು ಪೂರ್ವದವರನೆ ನಂಬು 11 ಯಾತ್ರೆಯ ಮಾಡಿಸಿಕೊಂಡು ಹರ ಹಿರಿಯ ತಾನಾಗಿ ಯುಕ್ತಿ ಬಾಧಕವಾಯಿತ್ತು ಹರಿಹರರೊಳೈಕ್ಯ ಚಿತ್ರ ನಿನ್ನ ಮತಕೆ ನೀನೆ ಶತ್ರುವಾದೆ ಪ್ರತ್ಯುತ್ತರವ ಪೇಳೆ ಪರಾಜಯ ಬಾರದಿಹುದೆ ಮತ್ತೆ ನೆನೆಯೊ ಶ್ರೀಹಯವದನಗಿದು ಲೀಲೆಯಾದರೆ ಸತ್ವ ಹೆಚ್ಚಿತು ಸರ್ವೋತ್ತಮನೆಂಬ ಶ್ರುತಿಗೆ 12 ವಂದ್ಯಮಾನಂ ಪಿತಾನಾಂ ಪ್ರತಿ ಪ್ರಮಾಣಂ ಎಂದು ರುದ್ರನ ಕೂಡೆ ಶ್ರುತಿ ಪೇಳಿತಾಗಿ ತಂದೆ ಮಕ್ಕಳ ಮನೆಗೆ ಪೋದಂತೆ ಪೋಗಿ ಮು- ಕುಂದ ಮೊಮ್ಮಗನಿಗೆ ಹಿರಿತನವ ಕೊಡಲೆಂದು ಮುಂದೆ ಜನಿಸುವ ಕಿರಿಯ ಕುವರರೊಳು ತನ್ನ ಕಂದನ ಸೃಜಿಸಿದ ಹಯವದನ ಚತುರನಲ್ಲವೆ 13 ಸುರರು ದ್ವಾರಕಾಪುರ ಯಾತ್ರೆಯಲಿ ಪಾಲಸಾಗರಯಾತ್ರೆ ಗರ್ಭಯಾತ್ರೆ ಕಳೆಯೆ ಶೂಲಧರ ಖಳಗಂಜಿ ಭುವನವೆಲ್ಲವ ಸುತ್ತಿ ಶ್ರೀ- ಲೋಲನಿಹ ವೈಕುಂಠಯಾತ್ರೆಯಿಂದ ಬದುಕನೆ ಭೂಲೋಕದಲಿ ಪುಟ್ಟಿ ಹಯವದನ ಕೃಷ್ಣ ಮಾಡಿದ ಕೈಲಾಸಯಾತ್ರೆ ಕೈವಲ್ಯಪತಿಗೆ ಲೀಲೆ 14 ಹರನಾರು ಪುರಾಣಗಳು ವಿರಿಂಚನಾರು ಪುರಾಣಗಳು ಹರ ವಿರಿಂಚರವಲ್ಲವೆಂದು ಹಿರಿಯರೆ ಮನ್ನಿಸಲಾಗಿ ಪರಮ ಸಿದ್ಧಾಂತಕೋವಿದರೆನಿಪ ಬುಧರಿಗೆ ಪುರಾಣಗಳ ಮ್ಯಾಲೆ ಮಾಡುವ ಪರಮಾದÀರ ಸಲ್ಲದಯ್ಯ ದುರಾಗ್ರಹವ ಮಾಡಬ್ಯಾಡ ಗುರುಮತವ ಬಿಡಬ್ಯಾಡ ಸಿರಿ ಹಯವದನನಾರುಪುರಾಣಗಳ ನೋಡಿರೊ 15 ಒಂದು ಬೊಮ್ಮಚಿತ್ತು ಒಂದು ಜೀವಚಿತ್ತು ಇಂ- ತೆಂದು ಶ್ರುತಿಸ್ಕಂಧÀ ಚೇತವೆಲ್ಲ ಗ್ರಂಥ[ಆ]ಸ್ಯ ದಿಂದ [ಒರೆಯೆ] ಹರಿಜಡನೋ ಹರಜಡನೋ ಮಂದಹಾಸದಿಂದ ಜಡರು ಮನುಮುನಿಗಳೆಲ್ಲ ಇಂಥ ಶಿವನ ವಹಿಸಿಕೊಂಡು ವಾದಿಸುವರು ಹಿಂದು ಮುಂದರಿಯರೆಂದು ಹಯವದನ ನಗನೆ 16 ಯಂ ಬ್ರಹ್ಮವೇದಾಹಂ ಬ್ರಹ್ಮ ವೇದಶ್ರುತಿಶಬ್ದ ಬ್ರಹ್ಮ- ವೆಂಬ ವೇದ ಬೋಧಿಸಿತಾಗಿ ಇಂಥ ಮನುಜರಿಗೆಲ್ಲ ಭಾವಾಭಾವ ಪೇಳ್ವ ಹೊಂದಿಬದುಕು ಹಯವದನನ ಚರಣವ ಹೊಂದಿಬದುಕೊ ಜೀವ ಹರಿಯೆ ನಾನೆನ್ನಬ್ಯಾಡ 17
--------------
ವಾದಿರಾಜ
ಕಾವಲಿರು ಕಮಲಾಕ್ಷ ಕರುಣಿ ನಿರಪೇಕ್ಷ ದೇವ ದೇವಾಧ್ಯಕ್ಷ ದುರಿತಾಳಿಶೀಕ್ಷ ಪ. ಪಾಂಡುಕುವರರ ಪರಮ ಪ್ರೇಮದಿಂದಲಿ ಕಾಯ್ದೆ ತೋಂಡಮಾನಗೆ ಚಕ್ರ ಶಂಖಗಳನಿತ್ತೆ ಪಂಡಿತಾಗ್ರಣಿ ಬಲಿಯ ಬಾಗಿಲೊಳು ಶಾಙ್ರ್ಞಕೋ- ದಂಡ ಶರಗಳ ಧರಿಸಿಕೊಂಡು ಕಾಪಾಡುವನೆ 1 ವಿತತರೂಪನೆ ನಿನ್ನೊಳಿಟ್ಟಹೆನು ಭರವಸವ ಸತತ ನೀ ಸಲಹುವುದು ಸರ್ವಸ್ವವ ಕ್ಷಿತಿಯನಾಳುವ ಜನರೊಳಂತರಾತ್ಮಕ ನೀನೆ ಗತಿಯೆಂದು ನಂಬಿದೆನು ಗರುಡಾಂಗಗಮನ 2 ಕಂಟಕವ ಪರಿಹರಿಸು ಕಂಠೀರವಾಸ್ಯ ವೈ- ಕುಂಠಗಿರಿಯರಸ ಮೂರೆಂಟು ತತ್ವೇಶ ಸ್ವಿಂಟನಾಭಿದನ ನಿಷ್ಕಂಟತನವನು ಬಿಡಿಸಿ ಬಂಟವಾಗಿಹರ ಮೇಲೆ ತಂಟೆ ಬರದಂದದಲಿ 3
--------------
ತುಪಾಕಿ ವೆಂಕಟರಮಣಾಚಾರ್ಯ
ಕಾವವನೆ ಕರ್ಮಜಯ ಬಳಿಕಂ ಸಾವವನೆ ಉಣ್ಣುವರು ಜನರು ಭಾವವನೆ ಅರಿದಿರಿಸು ಜೀವರ ನಿನ್ನಂಘ್ರಿಯಲಿ ಪ ದಾಸವೃಂದವು ತೋಷದಿಂದಲೆ ಪೂಶರಯ್ಯನ ವಿಡಿದು ಘನ ಸಂ- ಸುಕೃತ ಫಲವಿಹುದೋ ಶ್ರೀಶನಲಿ ನಿಜದಾಸ ಭಕುತಿಯ ಮೀಸಲಿರಿಸೀ ಮನವ ಮೋಹದೆ ಆಶೆ ಗಳಿಸದೆ ಶ್ರೀಹರಿಯ ನಿಜವಾಸ ಕೈಯ್ಯುವರು 1 ಮೃಗಜಲಕೆ ನೀರೆಂದು ಭಾವಿಸಿ ಪೊಗಲೆಳಿಸುವೆರಳೆಗಳ ಪರಿಯಲಿ ಮೃಗನಯನೇರತಿ ಚೆಲ್ವಿಕೆಗೆ ಜಗವೆಳಸಿ ಬಳಲುವದು ಮಿಗಿಲಾಗಿದ ವಿಷಯಲನಲದಿ ಧಗಧಗಿಸಿ ಜನಗಳು ಪೋಪರಲ್ಲದೆ ಖಗಪತೀ ವಾಹನನ ನೆನೆಯರು ಜಗವ ಪಾವನನು 2 ನೀರಜಾಸನ ಪಿತನೆ ಅಕ್ಷಯ ಶ್ರೀ ರಮಾವಲ್ಲಭನೆ ತವ ಪರಿ ವಾರವಲ್ಲದೆ ಸತಿಸುತರು ಮೇಣ್ ದೇಹ ಬಾಂಧವರು ಸಾರಸುಮತಿಯನಿತ್ತೆಮಗೆ ಹರೆ ಸೇರಿಸೆಮ್ಮನು ನಿನ್ನ ಅಡಿಯಲಿ ಧೀರ ಶ್ರೀ ನರಸಿಂಹವಿಠ್ಠಲ ಪಾರಗಾಣಿಪುದು 3
--------------
ನರಸಿಂಹವಿಠಲರು
ಕಾವೇರಿ ಕಲುಪಾಪಹಾರಿ ಪಾವನ ಶರೀರೆ ಶುಭತೋಷಕಾರಿ ಪ ವಾಸುದೇವ ರಂಗೇಶನಾಲಯಕೆ ನೀ ನಾವರಣಳಾಗಿಪ್ಪೆ ವಿರಜೆಯಂತೇ ದೇವ ಋಷಿ ಗಂಧರ್ವ ಪಿತೃಪ ನರವರರಿಂದ ಸೇವನೀಯಳಾಗಿ ಸರ್ವಾರ್ಥ ಪೂರೈಪೆ 1 ಜಲಚರಾನ್ವೇಷಣ ಲುಬ್ಧ ಸಾಲಿಗ್ರಾಮ ತುಲಸಿ ವೃಕ್ಷವನೆ ಕೊಡಿಸಿದ ಮಾತ್ರದೀ ಕಲುಷರಾಶಿಗಳೆಲ್ಲ ಕಳೆದು ಮುಕ್ತಿಯನಿತ್ತೆ ಸಲಿಲಮಂದಿರೆ ನಿನ್ನ ಕರುಣಕೇನೆಂಬೆ 2 ರವಿ ತುಲಾರಾಶಿಗೈದಿದ ಸಮಯದೊಳಗೊಂದು ಮಜ್ಜನ ಗೈವ ಮಾನವರಿಗೆ ಪವನಾಂತರಾತ್ಮಕನ ಪಾದಕಮಲವ ತೋರಿ ಭವಜ ರೋಗವ ಕಳೆದು ಭಾಗ್ಯವಂತರ ಮಾಳ್ಪೆ 3 ಶ್ರೀ ಪವನ ಶಿವರಿಂದ ತಾ ಪೂಜೆಗೊಳುತ ಬಹು ಪರ ಮನು ವ್ಯಾಪಿಸಿಹ ನಿನ್ನೊಳದ್ಯಾಪಿ ಸ್ವರ್ಗಸ್ಥ ಜನ ರೀ ಪೊಡವಿಯೊಳು ತವ ಸಮೀಪದಲಿ ಜನಿಸುವರು 4 ಮೂಢಮತಿ ನಾನು ಕೊಂಡಾಡ ಬಲ್ಲೆನೆ ನಿನ್ನ ಬೇಡಿಕೊಂಡೆನು ಹೃದಯ ನೀಡದೊಳಗೇ ಗೂಡ ಪದ ಶಯನ ಜಗನ್ನಾಥ ವಿಠ್ಠಲನಂಘ್ರಿ ನೋಡುವ ಸೌಭಾಗ್ಯ ದಯ ಮಾಡು ಪ್ರತಿದಿನದಲ್ಲಿ ಬ 5
--------------
ಜಗನ್ನಾಥದಾಸರು
ಕುಂಟೆ ಹೊಡೆಯೊ ಜಾಣ ಅದನೋಡಿ ಕುಂಟೆ ಹರಗೋ ಜಾಣ ಪ ಕುಂಟೆ ಹೊಡ್ಸೋನಾಗಿ ಕಂಟಿಕಡಿದು ನೀ ಎಂಟೆತ್ತುಗಳ ಹೂಡಿ ಮಂಟಪದ್ಹೊಲವನ್ನುಅ.ಪ ಅರಿವೆಮಡಿಕೆಹೊಡೆಯೊ ಮರವ್ಯೆಂಬ ಕರಿಕಿದಡ್ಡನಳಿಯೊ ಶರಣೆಂಬಗುದ್ದಲ್ಹಿಡಿಯೊ ಗರುವೆಂಬ ದುರಿತಕರುಣಗಳಗಿಯೊ ತೆರಪಿಲ್ಲದ್ಹೇಳುತ ಜರಾಮರಣೆಂಬ ಕಸ ಕರುಣೆಂಬ ಮಾಗಿ ಮಡಿ ಮಾಡಿ ಭರದಿ ಹಸನಮಾಡು 1 ಧ್ಯಾನ ದಾಸರಸೇವೆಯೆಂದೆಂಬುವ ಖೂನ ಮಾಡೆಲೊ ಬದುವ ದಾನಧರ್ಮಯೆಂಬುವ ಸತತದಿ ಹನಿಸು ಗೊಬ್ಬರವ ಜ್ಞಾನಿಸಂಗವೆಂಬ ಜಾಣಬೆದೆಗಾಲದಿ ಜ್ಞಾನಕೂರಿಗೆಯಿಂದ ಧ್ಯಾನಬೀಜವ ಬಿತ್ತು 2 ಮನನೆಂಬಬೆಳೆ ಕಾಯೋ ನಿಜವಾದ ನೆನೆವೆಂಬರ ಕವಣ್ಹಿಡಿಯೊ ಮನಚಂಚಲ್ಹಕ್ಕ್ಹೊಡೆಯೊ ಶಾಂತಿಸದ್ಗುಣವೆಂಬ ಫಲ ಪಡೆಯೊ ಘನತರ ದೃಢವೆಂಬ ಧಾನ್ಯರಾಸಿಮಾಡಿ ವನಜಾಕ್ಷ ಶ್ರೀರಾಮನೊನರುಹಕರ್ಪಿಸು 3
--------------
ರಾಮದಾಸರು
ಕುಂದಣದಾರುತಿ ತಂದು ಬೆಳಗಿರೆ ಪ ಮಂದರ ಧರಗೆ ವಂದಿಸುವರ ಭವಬಂಧ ಬಿಡಿಸುವಗೆ 1 ವಿಜಯಸಾರಥಿಗೆ ದ್ವಿಜವರ ಗಮನಗೆ ಪಂಕಜ ಭವಪಿತಗೆ 2 ಸುರಪರಿ ಪಾಲಗೆ ಶರಧಿಜ ಲೋಲಗೆ ಶರಣರ ಪೊರಿವ “ಕಾರ್ಪರ ನರಸಿಂಹಗೆ” 3
--------------
ಕಾರ್ಪರ ನರಹರಿದಾಸರು
ಕುಮಾರ ಗುಹಗೆ ಎಸಗೀ ಪ ವಾಹನನಿಗೆ ಧೀರಗೆ ಜಯವೆಂದು ಆರತಿ ಅ.ಪ ವೇದೋಕ್ತ ಮಂತ್ರದಿಂದ ಶರ್ಕರ ಮೊದ-ಲಾದ ದ್ರವ್ಯದಿಂದ ಸಾಧು ವಂದಿತನಿಗೆ ಭೂದೇವರಭಿಷೇಕ ಸಾದರದಲಿ ಮಾಡಿ ಮೋದದಿ ಜಯವೆಂದು ||ಆರತಿ|| 1 ಕಲಶೋದಕ ಮಂತ್ರಿಸಿ ಭೂಸುರರೆಲ್ಲ ನಲವಿಂದಲಭಿಷೇಕಿಸಿ ತಲೆಗೆ ಗಂಧಾಕ್ಷತೆ ತುಲಸಿ ಪತ್ರವು ವುಷ್ಪಗಳ ಮಾಲೆ ಇರಿಸುತ್ತ ನಲವಿಂದೆ ಜಯವೆಂದು ||ಆರತಿ|| 2 ಓಗರ ಜಂ- ಬೂಫಲ ಭಕ್ಷ್ಯವ ಶ್ರೀಪತಿ ಸಖಗೆ ಸ-ಮಾರ್ಪಿಸಿ ಜಯವೆಂದು ||ಆರತಿ|| 3 ಮೂರು ಪ್ರದಕ್ಷಿಣೆಯ ಭಕ್ತಿಯೊಳ್ ನಮ-ಸ್ಕಾರವ ಪ್ರಾರ್ಥನೆಯ ಮಾರಾರಿಸುತಗೆ ಅ-ಪಾರ ಮಹಿಮನಿಗೆ ಹಾರುವರೆಸೆಗುತೊ-ಯ್ಯಾರದಿ ಜಯವೆಂದು ||ಆರತಿ|| 4 ಮಂಗಳ ಶರಜನಿಗೇ ಗುಹಗೆ ಜಯ ಮಂಗಲ ಸ್ಕಂಧನಿಗೇ ಮಂಗಲ ಪಾವಂಜೆ ವಾಸ ಷಡ್ಶಿರನಿಗೆ ಮಂಗಲದಾಸರ ಕಾವಗೆ ಜಯವೆಂದು ||ಆರತಿ|| 5
--------------
ಬೆಳ್ಳೆ ದಾಸಪ್ಪಯ್ಯ
ಕುಮಾರನಿಗಾರತಿಯ ಬೆಳಗಿರೇ ||ಶೋಭಾನೇ|| 1 ಶರಜನಿಗೆ ಆರತಿಯ ಬೆಳಗಿರೇ ||ಶೋಭಾವೇ|| 2 ಮಸೆಯುತಲೈತರೆ ಕ್ಷಣದೀಮಸೆದಿಹ ಬಾಣದಿಂದಸುರನ ತನುವನು- ಕುಶಲದಾರತಿಯ ಬೆಳಗೀರೆ ||ಶೋಭಾನೇ|| 3 ಸತಿ ಕಾರ್ತಿಕೇಯನಿಗೆ ಆರತಿ ಬೆಳಗಿರೇ ||ಶೋಭಾನೇ|| 4 ರಮೆಪತಿ ಸಖಗಾರತಿಯ ಬೆಳಗೀರೆ ||ಶೋಭಾನೇ|| 5
--------------
ಬೆಳ್ಳೆ ದಾಸಪ್ಪಯ್ಯ
ಕುಲಕೆ ತಕ್ಕ ಸ್ವರೂಪ ಚಲುವಿಗೊಪ್ಪುವ ವಿದ್ಯೆ ಕಲೆಗೆ ಸಲ್ಲುವ ಸುಗುಣ ಭಳಿರೆ ನಿಪುಣ ಕಿರುಕುಳದೆ ಕೈ ನೀಡಿ ಕರೆಕರೆಯ ತಂದೊಡ್ಡಿ ಹರಿಸವಾನುವಮೋಡಿ ವರನಗಾಡಿ ಜೂಜುಗಾರರಿಗೆರೆಯ ಮೋಜಿನೋಳ್ ಸಮನರಿಯ ಸೋಜಿಗಂ ಮಿಗೆತೋರ್ಕುಮಿನಿತುಸೊರ್ಕು ನಿಶಿಚರಾಂತಕನೆನುವ ಪೆಸರಾಂತುಮೀತೆರದ ವಿಷಮವರ್ತನದಿ ಸಂತಸವ ಪಡುವ ಪರಿಯಿದಚ್ಚರಿಯಾಗಿ ತೋರ್ಕುಮೆನಗೆ ಪರಿಪರಿಯ ಚಿಂತೆಗಾಕರಮಿದಾಗೆ ಉರಿಯುತಿಹುದೀಬಗೆಯೊಡಲ ಬೇಗೆ ವರ ಶೇಷಗಿರೀಶನೆ ಶರಣನೆನಗೆ
--------------
ನಂಜನಗೂಡು ತಿರುಮಲಾಂಬಾ
ಕುಲವ್ಯಾವುದಯ್ಯ ಕಪಿಕುಲನೆ ನಿನಗೆ ಒಲಿದಿಹನು ಹರಿ ನಿನಗೆ ಎಂದು ಜನ ನುತಿಸುವರು ಪ. ಮರ ಹಾರುವಂಥ ಮರ್ಕಟಕುಲದಲವತರಿಸಿ ಶರಧಿ ಲಂಘಿಸುತ ದ್ವೀಪಾಂತರವಾಸಿ ದುರುಳರನು ಸಂಹರಿಸಿ ದೊರೆ ಸುತರ ಸೇವಿಸಿ ಕರದಿ ಎಂಜಲು ಕೊಂಡು ಮರವನೇರಿದನೆ 1 ಪ್ರಥಮ ಕುಲವನೆ ಬಿಟ್ಟು ದ್ವಿತೀಯ ಕುಲದೊಳಗುದಿಸಿ ಹಿತವೆ ರಕ್ಕಸಿ ಸಂಗ ಪಥದಿ ನಿನಗೆ ದಿತಿಜನಾಹುತಿ ಅನ್ನ ಗತಿಯಿಲ್ಲದಲೆ ತಿಂದು ಚತುರ ಕುಲಜನ ನೀ ನುತಿಸಿ ಹಿಗ್ಗಿದನೆ 2 ತುಳುವಂಶಜನೆ ನೀ ಲಲನೆ ಸಂಗವ ತೊರೆದು ಅಲೆದೆ ಯತಿಯಾಗಿ ಈ ಇಳೆ ಎಲ್ಲವ ಕುಲನ್ಯೂನ ಗೋಪಾಲಕೃಷ್ಣವಿಠ್ಠಲನ ಪದವ ಒಲಿಸಲೋಡಿದೆ ಆರು ಬರದಂಥ ಗಿರಿಗೆ 3
--------------
ಅಂಬಾಬಾಯಿ
ಕುಶಲವರೆ ಲಾಲಿಸಿರಿ ಕಥೆಯನೆಲ್ಲವ ಪೇಳ್ವೆ ಕುಶಲಮತಿಗಳೇ ನಿಮ್ಮ ಕೌತುಕವು ಸಹಜವಲೆ 1 ಬಿಸರುಹಾಕ್ಷನ ಚರಿತೆ ಚಿತ್ರತರಮಹುದಲ್ತೆ ಉಸುರುವೆನು ಪೂರ್ವ ವೃತ್ತಾಂತವನು ನಾ ಮೊದಲೆ 2 ಅಸುರರುಪಟಳದಿಂದ ವಸುಧೆ ಭಾರವು ಹೆಚ್ಚೆ ಬಿಸಜಭವಮುಖ ಸುರರ ಮೊರೆ ಕೇಳಿ ಮನ ಮೆಚ್ಚೆ 3 ಬಿಸಜನೇತ್ರನು ತಾನು ದಶರಥನ ಸುತನೆನಿಸಿ ವಸುಮತಿಯಲುದಿಸಿ ಸಜ್ಜನರ ಸಂತಸಗೊಳಿಸಿ 4 ಹಸುಳೆತನದಲಿ ಅಸುರೆ ತಾಟಕಿಯ ಸಂಹರಿಸಿ ಕುಶಿಕಸುತನಧ್ವರವ ಕಡು ರಕ್ಷಣೆಯ ಮಾಡಿ 5 ಅಶಮವಾಗಿದ್ದಹಲ್ಯೆಯ ತಾನುದ್ಧರಿಸಿ ಅಸಮಾಕ್ಷಚಾಪವನು ಲೀಲೆಯಲಿ ತುಂಡರಿಸಿ 6 ಕರ ಪದ್ಮವನು ಗ್ರಹಿಸಿ ಎಸೆವೆರಡು ರೂಪದಲಿ ಘನಲೀಲೆ ಪ್ರಕಟಿಸಿ 7 ಕುಶಲದಿಂ ಯುವರಾಜ ಪಟ್ಟಕ್ಕೆ ಸನ್ನಾಹ ವೆಸೆದಿರಲು ವಿಧಿಲೀಲೆಯೇನೆಂಬನಾಹ 8 ದಶರಥನ ಕಿರುಮಡದಿ ಪಡೆದ ವರಕನುವಾಗಿ ಸತಿ ಅನುಜ ಸಹಿತನಾಗಿ 9 ವಸುಮತಿಯೊಳವತರಿಸಿ ಬಂದ ಕಾರ್ಯವ ನೆನೆದು ಅಸಮ ನಾಟಕ ಸೂತ್ರಧಾರಿ ಅಡವಿಗೆ ನಡೆದು 10 ಎಸೆವ ಗಂಗೆಯ ದಾಟಿ ಗುಹನನ ಧನ್ಯನಗೈದು ಋಷಿ ಭರದ್ವಾಜರಿಂ ಸತ್ಕಾರವನು ಪಡೆದು 11 ವಸುಮತೀಧರ ಚಿತ್ರಕೂಟದಲಿ ನಿಂತಿರಲು ಅಸಮ ಭಕ್ತವರೇಣ್ಯ ಭರತ ತಾನೈತರಲು 12 ಬಿಸಜಾಂಘ್ರಿ ಸಂಪೂತ ವರ ಪಾದುಕೆಗಳನಿತ್ತು ಕುಶಲಮತಿ ತಾನವನ ಕಳುಹಿ ಯೋಚಿಸಿ ಮತ್ತು 13 ಪೆಸರಾಂತ ದಂಡಕಾ ವನ ಪ್ರವೇಶವ ಮಾಡಿ ಅಸುರರನೇಕರು ಅಂತಕನ ಬಳಿದೂಡಿ14 ಋಷಿವರ್ಯ ಶರಭಂಗಗೀಕ್ಷಣದಿ ಸುಗತಿಯನು ಹಸನಾಗಿ ಕರುಣಿಸಿದ ಬಳಿಕ ಕುಂಭೋದ್ಭವನು 15 ಒಸಗೆಯಿಂದಿತ್ತ ದಿವ್ಯಾಸ್ತ್ರಂಗಳ ಸಂಗ್ರಹಿಸಿ ಪಸರಿಸಿಹ ವಿಲಸಿತದ ಪಂಚವಟಿಯಲಿ ನೆಲಸಿ 16 ಒಸಗೆಯಿಂದಿರೆ ಬಂದ ಶೂರ್ಪನಖಿಗತಿಭಂಗ ವೆಸಗಿ ಸೋದರನಿಂದ ಶೋಭಿಸೆ ಶುಭಾಂಗ 17 ಮಾಯಾ ಮೃಗಾಕಾರ ದಸುರ ಮಾರೀಚನಂ ಸಂಹರಿಸಿ ರಘುವೀರ 18 ಅಸಮ ಸೋದರ ಸಹಿತ ಆಶ್ರಮಕ್ಕೈತಂದು ದೆಸೆದೆಸೆಯೊಳರಸೆ ತನ್ನರಸಿ ಕಾಣದಿರಲು 19 ಹುಸಿವೇಷದಿಂ ಬಂದ ಖಳ ಕುಲಾಗ್ರಣಿಯಿಂದ ಶಶಿಮುಖಿಯು ಹಗರಣವಾಗಿರಲು ನಿತ್ಯಾನಂದ 20 ದೆಸೆಗೆಟ್ಟವನ ಪರಿಯಲತಿಶಯದಿ ಶೋಕಿಸುತ ದೆಸೆದೆಸೆಯೊಳರಸುತ್ತಾ ಬಸವಳಿದು ತಾ ಬರುತ 21 ಎಸೆವವರ ಋಷ್ಯಮೂಕಮತಂಗಾಶ್ರಮದಿ ಬಿಸಜಾಪ್ತಸುತನ ಕಂಡವನೊಡನೆ ತಾ ಮುದದಿ 22 ಉಸುರಿ ವಾಲಿಯ ವಧೆಗೈವೆನೆಂದಭಯವನು ಎಸೆವ ವಿಲಸಿತ ಮಹಿಮ ಕರಿಗಿರೀಶನು ತಾನು 23
--------------
ವರಾವಾಣಿರಾಮರಾಯದಾಸರು
ಕೂಗಿದರು ಧ್ವನಿ ಕೇಳದೆ ಶಿರ | ಬಾಗಿದರು ದಯ ಬಾರದೆ ಪ ಭೋಗಿಶಯನ ಭುವನಾಧಿಪತೇ ನಿನ್ನ | ಆಗಮನವೆಂದಿಗೆ ಆಗುವುದು ಪ್ರಭೊಅ.ಪ ಖರೆ ಎ| ನ್ನತ್ತ ನೋಡುವುದು ದೊರೆ || ಪರಾಕು ಮಹಾಪ್ರಭು | ಎತ್ತಣ ರಥವನು ಎತ್ತಿ ಬಾ ನೀಡು ದೊರೆ1 ಸಿರಿ | ಮಂದಿರ ಭಕ್ತ ಕುಟುಂಬಧರ || ಸುಂದರ ಮೂರುತಿ ಒಂದಿನ ಸ್ವಪ್ನದಿ | ಬಂದು ಪದದ್ವಯ ಚಂದದಿ ತೋರಿಸೊ2 ಕರುಣಾ ಶರಧಿಯು ನೀನಲ್ಲವೇ ಕೃಷ್ಣ | ಶರಣಾಗತರಿಗೆ ದೊರೆಯಲ್ಲವೆ || ಮೊರೆಹೊಕ್ಕವರಿಗೆ ಮರೆಯಾಗುವರೆ | ಸರಿಯೆ ಜಗದೊಳು ವಿಜಯವಿಠ್ಠಲರೇಯಾ 3
--------------
ವಿಜಯದಾಸ