ಒಟ್ಟು 1056 ಕಡೆಗಳಲ್ಲಿ , 101 ದಾಸರು , 898 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಶೋಭಾನ | ಶೋಭಾನವೆನ್ನಿರೆ ಸುರರಂಗನಿಯರೆಲ್ಲ ಶೋಭಾನವೆನ್ನಿ ಶುಭವೆನ್ನಿ ಪ ಶೃಂಗಾರದ ಗುಣನಿಧಿಯೆ ಬಾ | ಅಂಗಜಜನಕ ಅರವಿಂದದಾಳಾಕ್ಷನೆ ರಂಗಾ ಬಾ || ಭವಭವ ಭಂಗಾ ಬಾ | ದೇವೋತ್ತುಂಗಾ ಬಾ | ಜಗದಂತರಂಗಾ ಬಾ ಹಸೆಯ ಜಗುಲಿಗೆ1 ಪಂಕಜ ಸಂಭವನಯ್ಯ ಬಾ | ಕುಂಕುಮಾಂಕಿತನೆ ಭಕುತ ಕುಮುದ ಮೃಗಾಂಕ ಬಾ || ನಿಷ್ಕಳಂಕಾ ಬಾ ಶಂಖಚಕ್ರಾಂಕ ಬಾ | ಅಹಿಪರಿಯಂಕÀ ಬಾ ಹಸೆಯ ಜಗುಲಿಗೆ 2 ಸಾಮಜರಾಜಾ ವರದಾ ಬಾ | ಸಾಮವಿಲೋಲನೆ ಸದ್ಗುಣ ಶೀಲನೆ ರಾಮಾ ಬಾ || ರಣರಂಗಭೀಮಾ ಬಾ ಹಸೆಯಾ ಜಗುಲಿಗೆ 3 ಅಚ್ಯುತ ಉನ್ನತ ಮಹಿಮನೆ ಯಾದವ ಬಾ | ಘನ್ನ ಮೂರುತಿಯೆ ಸುಪ್ರಸನ್ನಾ ಬಾ ಸಚ್ಚರಿತಾ ಬಾ | ಭಾಗ್ಯ ಸಂಪನ್ನಾ ಬಾ ಜೀವರ ಭಿನ್ನಾ ಬಾ ಹಸೆಯಾ ಜಗುಲಿಗೆ 4 ನಾರಾಯಣ ದಶರೂಪಾ ಬಾ | ಚಾರುಚರಿತಾ ಪ್ರತಾಪ ಬಾ | ಶೌರಿ ಮುರಾರಿಯೆ ನಿಟಿಲ ಕಸ್ತೂರಿಯ ಲೇಪಾ ಬಾ || ನಿತ್ಯ ಸಲ್ಲಾಪಾ ಬಾ ನಮ್ಮ ಸಮೀಪ ಬಾ ಹಸೆಯಾ ಜಗುಲಿಗೆ 5 ವಾಸುದೇವ ಮುಕುಂದಾ ಬಾ | ಸಾಸಿರನಾಮ ಗೋವಿಂದಾ ಬಾ | ಕೇಶವ ಪುರುಷೋತ್ತಮ ನರಸಿಂಹ ಉಪೇಂದ್ರ ಬಾ || ಗೋಪಿಕಂದಾ ಬಾ | ಬಹುಬಲ ವೃಂದಾ ಬಾ | ಅತಿಜವದಿಂದಾ ಬಾ ಹಸೆಯಾ ಜಗುಲಿಗೆ 6 ಪರತತ್ವದಿ ಅತಿ ಚಿಂತಾ ಬಾ | ಪರಬೊಮ್ಮನೆ ಅತಿ ಶಾಂತಾ ಬಾ | ಪರಮಾತ್ಮನೆ ಪರಿಪೂರ್ಣ ವಿಭೂತಿವಂತಾ ಬಾ || ಅಖಿಳ ವೇದಾಂತಾ ಬಾ | ರುಕ್ಮಿಣಿಕಾಂತಾ ಬಾ | ಸದ್ಗುಣವಂತಾ ಬಾ ಹಸೆಯಾ ಜಗುಲಿಗೆ7 ತ್ರಿದಶಗುಣನುತ ವಿಲಾಸಾ ಬಾ | ಮಾಧವ ಶ್ರೀಧರನೆ ಸುನಾಸಾ ಬಾ || ಸಿರಿಮಂದಹಾಸಾ ಬಾ | ಭಕುತ ಉಲ್ಲಾಸಾ ಬಾ | ಶ್ರೀ ಶ್ರೀನಿವಾಸಾ ಬಾ ಹಸೆಯಾ ಜಗುಲಿಗೆ8 ಕೃಷ್ಣವೇಣಿಯ ಪಡೆದವನೆ ಬಾ | ರಥ ಹೊಡೆದವನೆ ಬಾ | ಕೃಷ್ಣೆಯ ಕಷ್ಟವ ನಷ್ಟ ಮಾಡಿದ ಕೃಷ್ಣಾ ಬಾ || ಯದುಕುಲ ಶ್ರೇಷ್ಠ ಬಾ | ಸತತ ಸಂತುಷ್ಟ ಬಾ | ಉಡುಪಿಯ ಕೃಷ್ಣ ಬಾ ಹಸೆಯಾ ಜಗುಲಿಗೆ 9 ಎಲ್ಲರೊಳಗೆ ವ್ಯಾಪಕನೆ ಬಾ ಬಲ್ಲಿದ ದೊರೆಗಳ ಅರಸನೆ ಬಾ | ನಾ ಎಲ್ಲಿ ನೋಡಲು ಪ್ರತಿಗಾಣೆ ನಿನಗೆ ಸಿರಿನಲ್ಲಾ ಬಾ || ಅಪ್ರತಿಮಲ್ಲ ಬಾ ಭಕ್ತವತ್ಸಲಾ ಬಾ | ವಿಜಯವಿಠ್ಠಲ ಬಾ ಹಸೆಯ ಜಗುಲಿಗೆ10
--------------
ವಿಜಯದಾಸ
ಶೋಭಾನವೆನ್ನಿರೆ ಸ್ವರ್ಗಾರೋಹಿಣಿಗೆ | ಶೋಭಾನವೆನ್ನಿ ಶುಭವೆನ್ನಿ ಪ ಹರಿಪಾದ ನಖದಿಂದ ಬ್ರಹ್ಮಾಂಡವ ಶೀಳಲು | ಭರದಿಂದ ಇಳಿದು ಸತ್ಯಲೋಕ || ಭರದಿಂದ ಇಳಿದು ಸತ್ಯಲೋಕಕೆ ಬಂದ | ವಿರಜೆಗಾರುತಿಯ ಬೆಳಗಿರೇ 1 ಸರಸಿಜಾಸನ ನಮ್ಮ ಹರಿಪಾದ ತೊಳಿಯಲು | ಸರಸ ಸದ್ಗುಣ ಸುರಲೋಕ | ಸರಸ ಸದ್ಗುಣದಿ ಸುರಲೋಕಕೈದಿದಾ | ಸ್ವರ್ಣೆಗಾರುತಿಯ ಬೆಳಗಿರೇ 2 ಇಂದ್ರಲೋಕವ ಸಾರಿ ಧ್ರುವನ ಮಂಡಲಕಿಳಿದು | ಚಂದದಿಂದಲಿ ಮೇರುಗಿರಿಗೆ | ಚಂದದಿಂದಲಿ ಮೇರುಗಿರಿಗೆ ಬಂದಾ | ಸಿಂಧುವಿಗಾರುತಿಯ ಬೆಳಗಿರೇ 3 ಶತಕೋಟಿ ಎಂತೆಂಬ ಅಜನ ಮಂದಿರ ಪೊಕ್ಕು | ಚತುರ್ಭಾಗವಾಗಿ ಕರೆಸಿದ | ಚತುರ್ಭಾಗವಾಗಿ ಕರೆಸಿದ ಶ್ರೀ ಭೋಗ | ವತಿಗಾರುತಿಯ ಬೆಳಗಿರೇ4 ಇಂದ್ರ ದಿಕ್ಕಿಗೆ ಸಿತಾ ಚಕ್ಷು ಪಶ್ಚಿಮ ದಿಕ್ಕು | ಚಂದ್ರ ಯಮ ದಿಕ್ಕಿಗೆ ಭದ್ರದೇವಿ | ಚಂದ್ರ ಯಮ ದಿಕ್ಕಿಗೆ ಭದ್ರದೇವಿ ಅಳಕ | ನಂದಿನಿಗಾರುತಿಯ ಬೆಳಗಿರೇ 5 ಕುಂದ ಮಂದರೆ ಇಳಿದು ಗಂಧ ಮಾದನಗಿರಿಗೆ | ಹಿಂಗದೆ ಪುಟಿದು ವಾರಿನಿಧಿಯ | ಹಿಂಗದೆ ಪುಟಿದು ವಾರಿನಿಧಿಯ ನೆರದ | ಗಂಗೆಗಾರುತಿಯ ಬೆಳಗಿರೇ 6 ಗಿರಿಜೆ ಸೂಪಾರಶ್ವಕೆ ಧುಮುಕಿ ಮಾಲ್ಯವಂತಕೆ ಜಿಗಿದು | ಪರಿದಂಬುಧಿಯ ಕೂಡಿ ಮೆರದು | ಪರಿದಂಬುಧಿಯ ಕೂಡಿ ಮೆರದಾ | ತ್ರಿದಶೇಶ್ವರಿಗಾರುತಿ ಬೆಳಗಿರೇ7 ಕುಮುದಾದ್ರಿಗೆ ಇಳಿದು ನಲಾ ಶತ ಶೃಂಗ | ವನಧಿ | ವನಧಿ ಕೂಡಿದಾ | ಸುಮತಿಗಾರುತಿಯ ಬೆಳಗಿರೇ 8 ಮೇರು ಮಂದರಕಿಳಿದು ನಿಷಿಧ ಕಾಂಚನ ಕೂಟ | ಮೀರಿ ಹಿಮಗಿರಿಗೆ ಹಾರಿ ಬದರಿಗೆ | ಮೀರಿ ಹಿಮಗಿರಿಗೆ ಹಾರಿ ಬದರಿಗೆ ಬಂದಾ | ನಾರಿಗಾರುತಿಯ ಬೆಳಗಿರೇ 9 ಕ್ಷಿತಿಪ ಭಗೀರಥನಂದು ತಪವ ಒಲಿದು| ಅತಿಶಯವಾಗಿ ಧರೆಗಿಳಿದು | ಅತಿಶಯವಾಗಿ ಧರೆಗಳಿದು ಬಂದಾ | ಭಾಗೀರಥಿಗಾರುತಿಯ ಬೆಳಗಿರೇ10 ಮುನಿ ಜನ್ಹು ಮುದದಿಂದ ಆಪೋಶನವ ಮಾಡೆ | ಜನನಿ ಜಾನ್ಹವಿ ಎನಿಸಿದಾ| ಜನನಿ ಜಾನ್ಹವಿ ಎನಿಸಿದಾ ಮೂಜಗದ | ಜನನಿಗಾರುತಿಯ ಬೆಳಗಿರೇ 11 ವಿಷ್ಣು ಪ್ರಜಾಪತಿ ಕ್ಲೇತ್ರದಲ್ಲಿ ನಿಂದು | ಇಷ್ಟಾರ್ಥ ನಮಗೆ ಕೊಡುವಳು ಸತತ | ಇಷ್ಟಾರ್ಥ ನಮಗೆ ಕೊಡುವಳು ಸತತ ಸಂ | ತುಷ್ಟಿಗಾರುತಿಯ ಬೆಳಗಿರೇ 12 ಕ್ರಮದಿಂದ ಬಂದು ನಲಿವುತ ಸರಸ್ವತಿ | ಯಮುನೇರ ನೆರೆದು ತ್ರಿವೇಣಿ | ಯಮುನೇರ ನೆರೆದು ತ್ರಿವೇಣಿ ಎನಿಸಿದಾ | ವಿಮಲೆಗಾರುತಿ ಬೆಳಗಿರೇ13 ತ್ರಿವಿಧ ಜೀವರು ಬರಲು | ಅತ್ಯಂತವಾಗಿ ಅವರವರ | ಅತ್ಯಂತವಾಗಿ ಅವರವರ ಗತಿ ಕೊಡುವ | ಮಿತ್ರೆಗಾರುತಿ ಬೆಳಗಿರೇ 14 ಪತಿಯ ಸಂಗತಿಯಿಂದ ನಡೆತಂದು ಭಕುತಿಲಿ | ಸತಿಯಲ್ಲಿ ವೇಣಿಕೊಡಲಾಗಿ | ಸತಿಯಲ್ಲಿ ವೇಣಿ ಕೊಡಲಾಗಿ ಕಾವ ಮಹಾ | ಪ್ರತಿಗಾರುತಿ ಬೆಳಗಿರೇ 15 ವೇಣಿಯ ಕೊಟ್ಟಂಥ ನಾರಿಯ ಭಾಗ್ಯವು | ಪಡಿಗಾಣೆ | ಪಡಿಗಾಣೆ ಸುಖವೀವ | ಕಲ್ಯಾಣಿಗಾರುತಿಯ ಬೆಳಗಿರೇ 16 ಒಂದು ಜನ್ಮದಲಿ ವೇಣಿಯಿತ್ತವಳಿಗೆ | ಎಂದೆಂದು ಬಿಡದೆ ಐದೆತನವ | ಎಂದೆಂದು ಬಿಡದೆ ಐದೆತನವೀವ ಸುಖ | ಸಾಂದ್ರೆಗಾರುತಿಯ ಬೆಳಗಿರೇ 17 ವಾಚಾಮಗೋಚರೆ ವರುಣನರ್ಧಾಂಗಿನಿ | ಪ್ರಾಚೀನ ಕರ್ಮಾವಳಿ ಹಾರಿ | ಮಕರ | ವಾಚಳಿಗಾರುತಿಯ ಬೆಳಗಿರೇ 18 ಅಂತರ ಬಾಹಿರ ಪಾಪ ಅನೇಕವಾಗಿರೆ | ಸಂತೋಷದಿಂದಲಿ ಭಜಿಸಲು | ಸಂತೋಷದಿಂದಲಿ ಭಜಿಸಲು ಪೊರೆವ ಮಹಾ | ಕಾಂತೆಗಾರುತಿಯ ಬೆಳಗಿರೇ 19 ಗುರುಭಕುತಿ ತಾರತಮ್ಯ ಇಹಪರದಲ್ಲಿ ತಿಳಿದು | ಹರಿ ಪರನೆಂದು ಪೊಗಳುವರ | ಹರಿ ಪರನೆಂದು ಪೊಗಳುವರ ಪೊರೆವ | ಕರುಣಿಗಾರುತಿಯ ಬೆಳಗಿರೇ20 ಜಗದೊಳು ಪ್ರಯಾಗ ಕ್ಷೇತ್ರದಲ್ಲಿ ನಿಂದು | ಬಗೆ ಬಗೆ ಶುಭವ ಕೊಡುವಳು | ಬಗೆ ಬಗೆಯ ಶುಭವ ಕೊಡುವ ವಿಜಯವಿಠ್ಠಲನ | ಮಗಳಿಗಾರುತಿಯ ಬೆಳಗಿರೇ ಶೋಭಾನೆ 21
--------------
ವಿಜಯದಾಸ
ಶೋಭಾನೆ ಶೋಭಾನೆ ಶೋಭಾನೆ ಪ ಶ್ರೀಗಣಾಧಿಪತಿಯ ಸಂಸೇವಿಸಿ ಶಂಕರನ ಭಜಿಸಿ ವಾಗಾಭಿಮಾನಿಯೆನಿಪ ಸರಸ್ವತಿ ದೇವಿಗೆ ವÀಂದಿಸಿ ಸಾಗರಸುತೆಯರಮಣ ನಿಂತು ಪೇಳಿಸಿದ ಪರಿಯೊ ಳೀಗ ಗಂಡುಮಕ್ಕಳಾಶೀರ್ವಾದ ಪದವ ಪೇಳ್ವೆ ಸುಜನರೆಲ್ಲಾಲಿಪುದು ಶೋಭಾನೆ 1 ಬಾಲನಾಗಿ ಪ್ರಹ್ಲಾದನವೋಲ್ ಬಹುಕ್ರೀಡೆಗಳಾಡುತಲಿ ಮೇಲೆ ಪಂಚಾಬ್ದದಿ ಸದ್ ವಿದ್ಯಾಭ್ಯಾಸಗಳನೆ ಮಾಡಿ ಶಾಸ್ತ್ರಾರ್ಥವೇತ್ತನಾಗುತಲಿ ಶೀಲಾದಿ ಸದ್ಗುಣಗಳುಳ್ಳ ಬಾಲೆಯಳ ಮದುವೆಯಾಗಿ ಕಾಲ ಕಾಲದಲ್ಲಿ ದೇವಋಷಿ ಪಿತೃಗಣಗಳ ಪೂಜೆ ಅಗ್ಗಳ ನೀನಾಗು 2 ಕೆರೆಗಳ ಕಟ್ಟಿಸು ಸರೋವರಗಳನ್ನೆ ಮಾಡಿಸು ನಿ- ನಿಖಿಳ ಯಜ್ಞಗಳಾಚರಿಸು ಸತ್ಪಾತ್ರಕ್ಕೆಯಿತ್ತುದಾತನೆಂದೆನಿಸು ನಿರತ ಬಂದವರಿಗನ್ನ ನೀಡುತ್ತ ಪ್ರಸನ್ನ ಮನದಿ ಮರಗಳ ಹಾಕಿಸು ಸಪ್ತಸಂತಾನಗಳನ್ನೆಗಳಿಸು ಮಾನ್ಯರೊಳು ವರ್ತಿಸಿಸುಖಿಸು 3 ಧರ್ಮಯುಕ್ತನಾಗುತ್ತ ಅಧರ್ಮಗಳ ಬಿಡುತ ಸ- ತ್ಕರ್ಮಗಳಾಚರಿಸು ಫಲವ ಕಂಜಾಕ್ಷಗರ್ಪಿತಮಾಡು ನಿತ್ಯ ಸಂತಸದಿ ಮರ್ಮಜ್ಞರೆನಿಪ ಗುರುಹಿರಿಯರ ಸೇವಿಸುತ ಸ ಮಾಡಿ ನಿತ್ಯಸುಖಿಯಾಗು 4 ಧೀರ್ಘಾಯುವಾಗಿರು ಬಂಧು ವರ್ಗವ ಪರಿಪೋಷಿಸು ಭರ್ಗಾದಿ ದೇವತೆಗಳ ಭಕ್ತಿಯಿಂದಾ ಪೂಜಿಸಿತ್ರಿ- ಅರ್ಥಿಯ ಪೊಂದು ಸ್ವರ್ಗಸ್ಥಿತಿ ಲಯಕರ್ತ ಗುರುರಾಮವಿಠಲ ನಘ್ರ್ಯ ಸಂಪದಗಳಿತ್ತು ಆದರಿಸಿ ತನ್ನ ಭಕ್ತಾ ನಿತ್ಯ ಸತ್ಯಾಧನವ ಮಾಡಿಸುವಾ ಶೋಭಾನೆ 5
--------------
ಗುರುರಾಮವಿಠಲ
ಶ್ರೀ ಅಕ್ಷೋಭ್ಯ ತೀರ್ಥರ ಚರಿತ್ರೆ ಅಕ್ಷೋಭ್ಯ ತೀರ್ಥಗುರು ಸಾರ್ವಭೌಮರು ಎಮ್ಮ ರಕ್ಷಿಪ ಕೃಪಾನಿಧಿಗೆ ಶರಣು ಶರಣೆಂಬೆ ಪಕ್ಷೀಶ ವಾಹನ್ನ ಲಕ್ಷ್ಮೀಶ ಕಮಲಾಕ್ಷ ವಿಷ್ಣು ಆತ್ಮಗೆ ಪ್ರಿಯ ಸತ್ತತ್ವವಾದಿ ಪ ಅಖಿಳಗುಣ ಆಧಾರ ನಿರ್ದೋಷ ಶ್ರೀರಮಣ ಜಗದಾದಿ ಮೂಲಗುರು ಅಗುರು ಶ್ರೀ ಹಂಸ ವಾಗೀಶ ಸನಕಾದಿ ದೂರ್ವಾಸಾದಿಗಳ ಪೀಳಿಗೆ ಗುರುಗಳಿಗೆ ಶರಣು ಶರಣೆಂಬೆ 1 ಅಚ್ಯುತ ಪ್ರೇಕ್ಷಾಖ್ಯ ಪುರುಷೋತ್ತಮತೀರ್ಥ ಅಚ್ಯುತ ಪ್ರೇಕ್ಷರ ಶಿಷ್ಯರೆಂದೆನಿಪ ಅಚ್ಯುತನ ಮುಖ್ಯಾಧಿಷ್ಠಾನ ಶ್ರೀಮಧ್ವ ಖಚರೇಂದ್ರ ಫಣಿಪಮೃಡ ಅಮರೇಂದ್ರವಂದ್ಯ 2 ಕರ ಅಬ್ಜಜರು ಪದ್ಮನಾಭನೃಹರಿ ಮಾಧವಾಕ್ಷೋಭ್ಯ ಈ ಮಹಾಗುರುಗಳು ಸರ್ವರಿಗು ಆನಮಿಪೆ ಸುಮನಸ ಶ್ರೇಷ್ಠರು ಮಹಿಯಲಿ ಪುಟ್ಟಿಹರು 3 ಸಾಧು ವೈದಿಕ ವೇದಾಂತ ಸತ್ತತ್ವ ಮತ ಮಧ್ವ ಮತವೇ ಅನ್ಯ ಯಾವುವೂ ಅಲ್ಲ ಎಂದು ನಿಶ್ಚೈಸಿ ಶೋಭನಭಟ್ಟಸ್ವಾಮಿ ಶಾಸ್ತ್ರಿ ಮೊದಲಾದವರು ಮಧ್ವಗೆರಗಿದರು 4 ಸೂರಿವರ ಶೋಭನ ಭಟ್ಟಾದಿಗಳಂತೆ ಸಾರಾಸಾರ ವಿವೇಕಿ ಗೋವಿಂದ ಶಾಸ್ತ್ರಿಯು ಮಹಾ ದೊಡ್ಡ ಪಂಡಿತರು ತಾನೂ ಎರಗಿ ಶರಣಾದರು ಮಧ್ವರಾಯರಲಿ 5 ಇಂಥಾ ಮಹಾತ್ಮರ ಇನ್ನೂ ಬಹು ಸಜ್ಜರನ ಉದ್ಧರಿಸಲಿಕ್ಕೇವೆ ಹರಿ ಅಜ್ಞೆಯಿಂದ ಈ ಧರೆಯಲ್ಲಿ ತೋರಿಹ ಮಧ್ವರಾಯರ ಶಾಸ್ತ್ರಿ ಬೇಡಿದರು ಸಂನ್ಯಾಸ ಕೊಡು ಎಂದು 6 ಸಚ್ಚಾಸ್ತ್ರ ಪ್ರವಚನ ಪಟು ವಿದ್ವನ್ಮಣಿಯು ನಿಶ್ಚಲ ಭಕ್ತಿಮಾನ್ ಸವೈರಾಗ್ಯ ವಿಪ್ರ ಅಚಲ ಸತ್ತತ್ವನಿಶ್ಚಯ ಜ್ಞಾನಿ ಶಾಸ್ತ್ರಿಗೆ ಅಕ್ಷೋಭ್ಯ ನಾಮನ ಇತ್ತರಾಚಾರ್ಯ 7 ಪ್ರಣವ ಮೂಲಾದಿ ಸುಮಂತ್ರ ಉಪದೇಶಿಸಿ ತನ್ನ ಮಠದಲ್ಲಿ ಅಕ್ಷೋಭ್ಯತೀರ್ಥರಿಗೆ ವನರುಹನಾಭರಿಂದ ನಾಲ್ಕನೇ ಸ್ಥಾನವ ಘನದಯದಿ ಇತ್ತರು ಆನಂದಮುನಿಯು 8 ಬದರಿಗೆ ಮೂರನೇ ಬಾರಿ ತೆರಳುವ ಪೂರ್ವ ಮಧ್ವ ಮುನಿ ನೇಮಿಸಿದ ಕ್ರಮದಿಂದಲೇವೆ ಮಾಧವ ತೀರ್ಥರು ವೇದಾಂತ ಪೀಠದಲಿ ಕುಳಿತುಜ್ವಲಿಸಿದರು 9 ಪದ್ಮನಾಭತೀರ್ಥರ ಪಾದಪದ್ಮಗಳಿಗೆ ಸದಾ ನಮೋ ನಮೋ ಎಂಬೆ ಇವರ ಪೀಳಿಗೆಯ ವಿದ್ಯಾಕುಶಲರು ಸೂರಿಗಳ ಚರಣಕ್ಕೆ ಸಂತೈಪರೆಮ್ಮ ಸದಾ ನಮೋ ಸರ್ವದಾ 10 ನರಹರಿತೀರ್ಥರು ಚರಣ ಸರಸೀರುಹದಿ ಶರಣಾದೆ ಕಾಯ್ವರು ಈ ಮಹಾನ್ ಇಹರು ವರಾಹ ತನಯಾ ಸರಿದ್ವರಾಕ್ಷೇತ್ರದಲಿ ಶ್ರೀ ವೃಂದಾವನದೊಳು ಹರಿಯ ಧ್ಯಾನಿಸುತ 11 ಮಾಧವತೀರ್ಥರ ಪಾದಪದ್ಮಗಳಿಗೆ ಸದಾನಮೋ ನಮೋ ಎಂಬೆ ಇವರ ಪೀಳಿಗೆಯ ಯತಿಗಳೂ ಭಕ್ತಿಮಾನ್ ಜ್ಞಾನಿಗಳ ಚರಣಕ್ಕೆ ಆದರದಿ ನಮಿಸುವೆ ಸದಾ ಪೊರೆವರೆಮ್ಮ 12 ಸುಲಭರು ಸುಜನರಿಗೆ ಶರಣರ ಸಲಹುವರು ಮಾಲೋಲನೊಲಿದಿಹ ಅಕ್ಷೋಭ್ಯತೀರ್ಥ ಬಲು ಖಿನ್ನ ಬ್ರಾಹ್ಮಣನು ಬ್ರಹ್ಮ ಹತ್ಯ ಮಾಡಿದವ ಕಾಲಲ್ಲಿ ಬಿದ್ದು ಶರಣಾದ ಗುರುಗಳಲಿ 13 ಗುರು ದಯಾನಿಧಿ ಅಕ್ಷೋಭ್ಯತೀರ್ಥರು ಆಗ ಶರಣಾದ ಪುರುಷನ ಪಶ್ಚಾತ್ತಾಪ ಖರೆಯೇ ಎಂಬುವುದನ್ನು ಜನರಿಗೆ ತಿಳಿಸಲು ಏರಿ ಮರ ನದಿಯಲಿ ಬೀಳೆ ಹೇಳಿದರು 14 ತನ್ನಯ ಮಹಾಪಾಪ ಕಳೆಯುವ ಗುರುಗಳು ಏನು ಹೇಳಿದರೂ ಮಾಡುವೆ ತಾನೆಂದು ಸನ್ನಮಿಸಿ ಗುರುಗಳಿಗೆ ನದಿ ಬದಿ ಮರಹತ್ತೆ ದೀನ ರಕ್ಷಕ ಗುರು ಇಳಿಯೆ ಹೇಳಿದರು 15 ವೃಕ್ಷದಿಂದಿಳಿದ ಆ ವಿಪ್ರಘಾತುಕನ ಮೇಲೆ ಅಕ್ಷೋಭ್ಯತೀರ್ಥರು ಶಂಖತೀರ್ಥವನ್ನ ಪ್ರೋಕ್ಷಿಸಿ ಆತನ ಮಹಾ ಬ್ರಹ್ಮಹತ್ಯಾ ದೋಷ ಕಳೆದರು ಪಂಕ್ತಿಯಲಿ ಸೇರಿಸಿದರು 16 ಶಂಖತೀರ್ಥದ ಮಹಿಮೆ ಅಲ್ಲಿದ್ದ ಜನರಿಗೆ ಶಂಕೆಯಲ್ಲದೆ ತಿಳಿಸಿ ಬಂದು ಬೇಡುವವರ ಡೊಂಕು ಕೊರತೆಗಳೆಲ್ಲ ನೀಗಿಸಿ ಯೋಗ್ಯದಿ ಶ್ರೀಕಾಂತನಲಿ ಭಕ್ತಿ ಪುಟ್ಟಿಸಿಹರು 17 ತಮ್ಮಲ್ಲಿ ಬೇಡುವ ಅಧಿಕಾರಿಯೋಗ್ಯರಿಗೆ ಶ್ರೀಮಧ್ವಶಾಸ್ತ್ರದ ದಾಢ್ರ್ಯ ಜ್ಞಾನ ಶ್ರೀ ಮನೋಹರನನ್ನ ಅಪರೋಕ್ಷಿಕರಿಸುವ ಸುಮಹಾ ಉಪಾಯವ ಅರುಹಿಹರು ದಯದಿ 18 ಮಧ್ವಸಿದ್ಧಾಂತ ಸ್ಥಾಪನ ಮಾತ್ರವಲ್ಲದೇ ವೇದ ವಂಚಕ ದುರ್ಮತಗಳ ಖಂಡನವ ಪೋದಕಡೆ ಮಾಡುತ್ತಾ ದಿಗ್ವಿಜಯ ಜಯಶೀಲ - ರೆಂದು ಮರ್ಯಾದೆಗಳ ಕೊಂಡಿಹರು ಜಗದಿ 19 ಅದ್ವೈತವಾದಿಯು ಶಾಂಕರ ಮಠಾಧೀಶ ವಿದ್ಯಾರಣ್ಯರು ಪ್ರಸಿದ್ಧ ಪಂಡಿತರು ಎದುರು ನಿಂತರು ಅಕ್ಷೋಭ್ಯ ತೀರ್ಥರ ಮುಂದೆ ವಾದಿಸಿದರು ಮುಳುಬಾಗಿಲು ಸಮೀಪ 20 ಶ್ವೇತಕೇತು ಉದ್ದಾಲಕರ ಸಂವಾದ ತತ್ವ ಮಸಿ ವಾಕ್ಯವೇ ವಾದದ ವಿಷಯ ವೇದಾಂತ ದೇಶಿಕರು ರಾಮಾನುಜೀಯತಿಯ ಅಧ್ಯಕ್ಷತೆಯಲ್ಲಿ ಸಭೆಯು ಕೂಡಿತ್ತು 21 ಛಾಂದೋಗ್ಯ ಉಪನಿಷತ್ತಲ್ಲಿರುವ ವಾಕ್ಯವು ಸಆತ್ಮಾ ತತ್ವಮಸಿ ಎಂಬುವಂಥಾದ್ದು ಭೇದ ಬೋಧಕವೋ ಅಭೇದ ಬೋಧಕವೋ ಎಂದು ವಾದವು ಆ ಈರ್ವರಲ್ಲಿ 22 ಆತ್ಮ ಶಬ್ದಿತ ನಿಯಾಮಕಗು ನಿಯಮ್ಯ ಜೀವನಿಗೂ ಭೇದವೇ ಬೋಧಿಸುವುದು ಆ ವಾಕ್ಯವೆಂದು ಸಿದ್ಧಾಂತ ಬಹುರೀತಿ ಸ್ಥಾಪಿಸಿದರು ಅಕ್ಷೋಭ್ಯರು ಸೋತಿತು ವಿದ್ಯಾರಣ್ಯರ ಐಕ್ಯವಾದ 23 ಅಸಿನಾತತ್ವ ಮಸಿನಾ ಪರಜೀವಪ್ರಭೇದಿನಾ ವಿದ್ಯಾರಣ್ಯ ಮಹಾರಣ್ಯಂ ಅಕ್ಷೋಭ್ಯ ಮುನಿರಚ್ಛಿನತ್ ಎಂದು ಬರೆದರು ತಮ್ಮಯ ಗ್ರಂಥದಲ್ಲಿ ಮಧ್ಯಸ್ತ ವೇದಾಂತದೇಶಿಕ ಸ್ವಾಮಿಗಳು 24 ಇಳೆಯ ಸಜ್ಜನರಿಗೆ ಜಯತೀರ್ಥರನಿತ್ತ ಮಾಲೋಲಪ್ರಿಯ ಅಕ್ಷೋಭ್ಯರ ಮಹಿಮೆ ಅಲ್ಪಮತಿ ನಾನರಿಯೆ ಇಲ್ಲಿ ಒಂದೋ ಎರಡೋ ಸ್ಥಾಲಿ ಪುಲೀಕ ನ್ಯಾಯದಲಿ ಪೇಳಿಹುದು 25 ನದಿ ದಡದಿ ಕುಳಿತಿದ್ದ ಅಕ್ಷೋಭ್ಯತೀರ್ಥರು ಎದುರಾಗಿ ನದಿಯಲ್ಲಿ ಆಚೆ ದಡದಿಂದ ಕುದುರೆ ಸವಾರನು ವರ್ಚಸ್ವಿ ಯುವಕನು ಬೆದರದೆ ಪ್ರವಾಹದಲಿ ಬರುವುದು ಕಂಡರು 26 ಕುದುರೆ ಮೇಲ್ ಆಸೀನನಾಗಿದ್ದ ಯುವಕನು ಕ್ಷುತ್‍ತೃಷಿ ಶಮನಕ್ಕೆ ಯತ್ನ ಮಾಡುತ್ತಾ ಉದಕವ ಕೈಯಿಂದ ತುಂಬಿಕೊಳ್ಳದಲೇ ಎತ್ತುಗಳು ಕುಡಿವಂತೆ ಬಾಯಿ ಹಚ್ಚಿದನು 27 ಮಾಧವ ಮಧ್ವರು ಮೊದಲೇ ಸೂಚಿಸಿದಂತೆ ಇಂದು ಆ ಕುರುಹರಿತು ಅಕ್ಷೋಭ್ಯರು ಇದು ಏನು ಪಶುವಂತೆ ಎಂದು ಧ್ವನಿಗೂಡಲು ಹಿಂದಿನ ಜನ್ಮ ಯುವಕಗೆ ನೆನಪು ಬಂತು 28 ಪಶು ಶಬ್ದ ಗುರುಮುಖದಿಂಬಂದಲಾಕ್ಷಣ ಪೂರ್ವ ಸಂಸ್ಕಾರ ಪ್ರತಿಭೆಯು ಉದಯವಾಯ್ತು ದಶಪ್ರಮತಿಗಳ ತಾನು ಎತ್ತಾಗಿ ಸೇವಿಸಿದ್ದು ಹಸನಾಗಿ ಟೀಕೆ ಬರೆಯಲಾಜÉ್ಞ ಕೊಂಡದ್ದು 29 ನಗಾರಿಸಮ ಬಲಿಯುವಕನು ಪ್ರವಾಹದ ವೇಗ ಲೆಕ್ಕಿಸದಲೇ ದಡಕೆ ತಾ ಬಂದು ಮುಗಿದುಕರ ಬಾಗಿಶಿರ ನಮಿಸಿ ಅಕ್ಷೋಭ್ಯರ ಆಗಲೇ ಸಂನ್ಯಾಸ ಕೊಡಲು ಬೇಡಿದನು 30 ಗಾಧಿ ಅರ್ಜುನ ಸಮ ಬಲರೂಪದಲಿ ತೋರ್ಪ ಈತ ರಾಯರ ಸುತನಾದರೂ ವೈರಾಗ್ಯ ಯುತ ಭಕ್ತಿಮಾನ್ ಸುಶುಭಲಕ್ಷಣನು ಎಂದು ಹರಿ ಮಧ್ವನಿಯಮಿತ ಅವಗೆ ಕೊಟ್ಟರು ಸಂನ್ಯಾಸ 31 ಶ್ರೀಯಃಪತಿಗೆ ಪ್ರಿಯತರ ಜಯತೀರ್ಥನಾಮವ ದಯಾಶೀಲ ಹೊಸಯತಿಗೆ ಇತ್ತು ಅಭಿಷೇಕ ಅಕ್ಷೋಭ್ಯ ಗುರುಮಾಡೆ ಗಗನದಿಂ ಪೂವರ್ಷ ಜಯ ಘೊಷ ಹರಡಿತು ಪರಿಮಳ ಸುಗಂಧ 32 ಶ್ರೀಮಧ್ವಾಚಾರ್ಯರು ಬೋಧಿಸಿ ತೋರಿಸಿದ ರಮಾಪತಿ ಪೂಜಾಸತ್ತತ್ವವಾದ ದುರ್ಮತ ಖಂಡನದ ರೀತಿಯ ಜಯಾರ್ಯರಿಗೆ ಸುಮ್ಮುದದಿ ಅರುಹಿದರು ಗುರುಸಾರ್ವಭೌಮ 33 ಶೀಲತಮ ಗುರುವರ್ಯ ಅಕ್ಷೋಭ್ಯತೀರ್ಥರು ಇಳೆಯಲ್ಲಿ ಮಧ್ವಮತ ಹರಿಭಕ್ತಿಯನ್ನ ಬೆಳೆಸಲು ಪ್ರತ್ಯೇಕ ಮಠವ ಸ್ಥಾಪಿಸಿದರು ತ್ರೈಲೋಕ ಭೂಷಣ ತೀರ್ಥರ ಮೊದಲ್ಮಾಡಿ34 ಆದಿ ಮಠ ಹರಿನೈದು ಸಮೀಪ ಪಟ್ಟವ ಆಳಿ ಹನ್ನೊಂದು ನೂರು ಅರವತ್ತೇಳ ಶಕವರುಷ ವದ್ಯ ಪಂಚಮಿ ಮಾರ್ಗಶಿರ ವಿಶ್ವಾವಸುವಲ್ಲಿ ಮಧ್ವ ಹೃದಯಾಬ್ಜಗನ ಪುರವ ಐದಿದರು 35 ಮತ್ತೊಂದು ಅಂಶದಲಿ ಮಳಖೇಡ ಗ್ರಾಮದಲಿ ನದಿ ತೀರದಲಿ ಹರಿಯ ಧ್ಯಾನ ಮಾಡುತ್ತಾ ಬಂದು ಬೇಡುವವರಿಷ್ಟಾರ್ಥ ಪೂರೈಸುತ ವೃಂದಾವನದಲ್ಲಿ ಕುಳಿತಿಹರು ಕರುಣಿ 36 ಶಾಶ್ವತ ಸರ್ವಾಶ್ರಯ ಗುಣಗಣಾರ್ಣವ ಅನಘ ಜೀವ ಜಡ ಭಿನ್ನ ಪರಮಾತ್ಮ ವಿಧಿತಾತ ಮಧ್ವಹೃತ್ಪದ್ಮಗ ಶ್ರೀ ಪ್ರಸನ್ನ ಶ್ರೀನಿವಾಸಗೆ ಸರ್ವದಾಪ್ರಿಯ ಅಕ್ಷೋಭ್ಯ ಗುರೋ ಶರಣು 37 ಪ || ಶ್ರೀ ಅಕ್ಷೋಭ್ಯ ತೀರ್ಥಚರಿತೆ ಸಂಪೂರ್ಣಂ ||
--------------
ಪ್ರಸನ್ನ ಶ್ರೀನಿವಾಸದಾಸರು
ಶ್ರೀ ಇಭರಾಮಪುರ ಕೃಷ್ಣಾಚಾರ್ಯರ ಸ್ತೋತ್ರ (ಅಪ್ಪಾವರು) 140 ಇಭರಾಮಪುರ ಅಪ್ಪ ಸೌಭಾಗ್ಯದಾಯಕರೇ | ಶುಭನಾಮ ಶ್ರೀ ಕೃಷ್ಣಾಚಾರ್ಯರೇ ನಮಸ್ತೇ || ಇಭರಾಜ ವರದನಿಗು ದ್ರುಪದಾತ್ಮಜಾಪತಿಗು | ಶುಭಚರಿತ ರಾಘವೇಂದ್ರಾರ್ಯರಿಗು ಪ್ರಿಯ ಪ ಶ್ರೀರಾಮನರಹರಿ ಶ್ರೀಕರನಾರಾಯಣ | ವರಾಹ ಹಯಶೀರ್ಷ ಶ್ರೀಕೃಷ್ಣನ ಪೂರ್ಣಾ || ನುಗ್ರಹಕೆ ಪೂರ್ಣಪಾತ್ರರೇ ನಿಮ್ಮ ಚರಣ | ಅರವಿಂದದಲಿ ನಾನು ಶರಣು ಶರಣಾದೆ 1 ಪಂಚಮುಖ ಹನುಮಂತ ನರಸಿಂಹ ಗರುಡ ವರಾಹ ಹಯವದನ || ಈ ಅಂಜನಾಸುತನನ್ನು ತತ್ ಅಂತಸ್ಥ | ಪಂಚರೂಪ ಶ್ರೀಶನ್ನ ಪೂಜಿಪಮಹಂತ 2 ಅಪ್ಪಾವರೆಂದು ಪ್ರೇಮದಿ ಕರೆಸಿಕೊಂಡು ಅಪ್ಪಮಕ್ಕಳಂತೆ ಕಾಯ್ದಿರಿ ಜನರ || ಅಪ್ಪಾ ಎಂದೀಗಲೂ ಸ್ಮರಿಸಿದರೂ ನಿಮ್ಮ ಸಹ ಶ್ರೀಪ ತಿಮ್ಮಪ್ಪ ಬಂದೆಮ್ಮನು ಕಾಯ್ವ 3 ಮೇಲಿಂದ ಬಿದ್ದವನ್ನ ದೂರ ಇದ್ದರೂ ಕಾಯ್ದು ತಾಳಿಗೋರೂಪ ಪಾದಜ ಧಾನ್ಯ ಉಂಡು || ಜಲದಿಂದ ವಿಪ್ರತಮ ಭಕ್ತವರನನ್ನ ಕಾಯ್ದು | ಜಲಜನಾಭನ ಗಾಯಕನೆಂದು ಆಶಿಸಿದಿರಿ 4 ಬೊಮ್ಮನ ಪಿತ `ಶ್ರೀ ಪ್ರಸನ್ನ ಶ್ರೀನಿವಾಸನಲಿ' ಪ್ರೇಮ ಅಚ್ಛಿನ್ನ ಭಕ್ತಿ ನಿಮಗೆ ದ್ವಿಜವರರೆ || ನಿಮ್ಮವನು ಭುವಿಯಲ್ಲಿ ತೋರಿಹ ಎನ್ನನ್ನು ಪ್ರೇಮಾನುಗ್ರಹದಯದಿ ಪಾಲಿಪುದು ಶರಣು 5 ಪ || ಸಂಪೂರ್ಣಂ ||
--------------
ಪ್ರಸನ್ನ ಶ್ರೀನಿವಾಸದಾಸರು
ಶ್ರೀ ಚಂದ್ರಿಕಾಚಾರ್ಯ ಗುರುವೇ ಪ ಯಾಚಿಪೆ ನಿನ್ನ ಶ್ರೀ ಚರಣ ಸೇವೆ ಅ.ಪ ಜಲಧಿ ಚಂದ್ರ ಯತೀಂದ್ರ ಭೂಪೂರ್ವ ಪ್ರಹ್ಲಾದ ಸಜ್ಜನಾಹ್ಲಾದ ಗೋಪಾಲಕೃಷ್ಣ ಚರಣಾಂಬುರುಹ ಲೋಲ ಶ್ರೀಪಾದರಾಜಪ್ರಿಯ ಬಾಲಸುಶೀಲ 1 ಸಮೀರನ ರಾಶಿಯನು ರಚಿಸಿ ಸನ್ಮಾನ್ಯರೆನಿಸಿ ದಾಸಕೂಟಕೆ ನೆಲೆಯಿತÀ್ತು ಪುರಂದರ ದಾಸರನು ಕರುಣಿಸಿದೆ ಧೀರ ಉದಾರ 2 ಕುಹುಯೋಗ ಪರಿಹಾರಗೈದ ಮಹಾಯೋಗಿವರ ಕುಹಕ ವರ್ಜಿತ ಚಿತ್ತ ಶೋಭಿತ ಸುಖಾಂತ ಪಾದ ಧ್ಯಾನಿಪರ ಸಹವಾಸವೆನಗಿತ್ತು ಸಲಹುವುದು ಸತತ 3
--------------
ವರಾವಾಣಿರಾಮರಾಯದಾಸರು
ಶ್ರೀ ಜಗನ್ನಾಥದಾಸರ ಸ್ತೋತ್ರ ರಾಯರ ನೋಡಿರೈ ದಾಸರಾಯರ ಪಾಡಿರೈ |ಮಾಯ ರಮಣಪ್ರಿಯಾ |ಇವರ ಮನದೊಳಗೆ ಸುಳಿದಾ | ಶ್ರೀರಂಗವಲಿದ ಪ ಮೋದ |ಕಾಣಿಸುವದು ಜಗದೊಳಗೆ, ಇವರಿಗೆ ಕೀರುತಿಯ |ಪುಣ್ಯ ಮೂರುತಿಯು |ಧೇನಿಸಿ ಎರಡನೆ ಜನ್ಮದಿ, ಈತನೆ ಶಲ್ಯಾ |ತತ್ವವ ಬಲ್ಲಾ 1 ಮೂರನೆ ಜನ್ಮದಿ ಕೊಂಡಪ್ಪ, ರಾಜನದೂತ | ಸುಪ್ರಖ್ಯಾತಾ |ಸಾರ ಜನರ ಪ್ರಿಯ ಶ್ರಿ ಪುರಂದರದಾಸಾರ್ಯ |ಸುತ ಆಶ್ಚರ್ಯ |ತೋರುವ ಐದನೆ ಜನ್ಮದಿ ಶ್ರೀಹರಿದೂತ |ಗುರು, ಜಗನ್ನಾಥ 2 ನರಹರಿಯ ತುತಿಪ ವಂದಂಶದಿ ಸಾಂಶರೆಂದುಖಂಬದಿ ನಿಂದು |ಮೆರೆವರು ಊಧ್ರ್ವಪುಂಢವು ತುಲಸಿಯಮಾಲಾ |ಅಕ್ಷ ಸುಶೀಲಾ |ಪರಿಪರಿ ಸೇವಿಪ ಜನರಿಗಭೀಷ್ಟವ ಗೆರೆವಾ |ದುರಿತವ ತರಿವಾ 3 ದೇಶದೇಶವ ಜನರುಗಳೆಲ್ಲರು ಬಂದು |ನೋಡಲು ನಿಂದು |ಸೋಸಿಲಿ ದರುಶನಕೊಳಲವರಿಗೆ ಆನಂದ |ವಾಹುದು ಛಂದ |ಮೀಸಲಹುದು ಮನ, ಕೈಸೇರುವ ಶ್ರೀಪತಿಯೂ |ಹರ ಅಘತತಿಯು 4 ಎಷ್ಟು ಪೇಳಲಿ ಇವರ ಮಹಿಮೆ ತುತಿಸಲ್ಕೆ |ವಶವಲ್ಲ ಮನಕೆ |ನಿಷ್ಠಿಯಿಂದಿವರನು ತುತಿಸಲು ಶ್ರೀವರತುಷ್ಟಾ |ಪಾಪವು ನಷ್ಟಾ |ಸೃಷ್ಟಿಯೊಳಗೆ ಶ್ರೀಶ ಪ್ರಾಣೇಶವಿಠಲನ ದಾಸ |ದಾಸೋತ್ತಂಸ 5
--------------
ಶ್ರೀಶಪ್ರಾಣೇಶವಿಠಲರು
ಶ್ರೀ ಜಂಬುಖಂಡಿ ವಾದಿರಾಜಾಚಾರ್ಯರ ಸ್ತೋತ್ರ ಕಂಡು ಬಹಳ ಧನ್ಯನಾದೆನೋ |ಸಿರಿಮಂಗಳಾತ್ಮರ ಪ ಪಾದ ||ಪುಂಡರೀಕ ವೀಕ್ಷಣ ಮಾತ್ರ ಘ |ತುಂಡುಗೈಸಿ ಪೊರೆವರನ್ನ ಅ.ಪ. ಸುಕೃತ ಜಂಬುಖಂಡಿ ಶ್ರೀನಿ |ವಾಸಾರ್ಯಾಬ್ಧಿ ಸಂಭವ ||ಕೋವಿದಾಗ್ರಣಿಯ ಆದ |ಶ್ರೀ ವಾದಿರಾಜಾಚಾರ್ಯರನ್ನ 1 ಭೂತದಯಾ ಶೀಲ ದಮನಮೋ |ಪೇತರಾಗಿ ಪೃಥ್ವಿಯೊಳು ಶ್ರೀ |ನಾಥನೊಲುಮೆಯನ್ನು ಪಡೆದು |ಖ್ಯಾತ ಭುವನ ಪಾವನ ಮಾಳ್ಪರಾ 2 ಶ್ರೀಶ ಪ್ರಾಣೇಶ ವಿಠಲ ಹೃದಯಾ |ಕಾಶದಲ್ಲಿ ಸಿರಿಯು ಸಹಿತ ||ವಾಸವಾಗಿ ತೋರಿ ಪೊಳೆವ |ಭಾಸುರ ಕೀರ್ತಿಲಿ ಮೆರೆವರನ್ನೆ 3
--------------
ಶ್ರೀಶಪ್ರಾಣೇಶವಿಠಲರು
ಶ್ರೀ ಧನ್ವಂತ್ರಿ ಸ್ತೋತ್ರ(ನಾರಾಯಣಾಚ್ಯುತ ವಿಠಲ ದಾಸಿಗಾಗಿ) ಕಾರುಣ್ಯ ನಿಧಿ ತವಾ | ಪಾರ ಮಹಿಮೆಯ ಕೇಳಿಸಾರಿದೆನೊ ಪಾದಾಬ್ಜ ಶರಣೆಂದು | ಶರಣೆಂದೆಶ್ರುನಾಥಪಾರು ಮಾಡಾಕೆಯ ವೃಜಿನವ 1 ಆಂತ್ರಕೆಟ್ಟಿಹುದೆಂದು | ತಾಂತ್ರಿಕರು ಪೇಳುವರುಆಂತ್ರ ಸರಿಮಾಡುವ ಕಾರ್ಯವ | ಕಾರ್ಯನಿರ್ವಹಿಸಿ ಸ್ವಾ-ತಂತ್ರ ಪುರುಷಾ ದಯತೋರೋ 2 ಪಾದ ಭಜಿಸೂವ | ಭಜಿಸೂವ ದಾಸಿಗೆಈ ರೀತಿ ಭವಣ್ಯಾಕೊ ಧನ್ವಂತ್ರಿ 3 ಆರೋಗ್ಯ ಆಯುಷ್ಯ | ಆರಾಧಕರ್ಗೀವೆಈರನುತ ಧನ್ವಂತ್ರಿ ಕರುಣಾಳು | ಕರುಣಾಳು ಸರ್ವಜ್ಞಆರೋಗ್ಯ ದಾಸಿಗೆ ಕೊಡು ಎಂಬೆ4 ಧಂ ಎಂದು ಉಚ್ಛರಿಸೆ | ಧ್ವಂಸ ಮಾಡುವೆ ರೋಗಧನಂತ್ರಿಯೆನ್ನೆ ಭವರೋಗ | ಭವರೋಗ ವಾರಿಸುವಧನ್ವಂತ್ರಿ ರೂಪಿ ನಮೊ ಎಂಬೆ 5 ಕರದಲ್ಲಿ ಸುಧೆ ಕಲಶ | ಧರಿಸಿರುವ ಬಗೆಯೇನೊಶರಣರ್ಗೆ ಸುಧೆಯಾನುಣಿಸುತ್ತ | ಉಣಿಸುತ್ತಲಮರತ್ವಕರುಣಿಸುವಿ ಎಂದೂ ಶ್ರುತಿ ಸಿದ್ಧ 6 ಇಂತಿರಲು ದಾಸಿಸ | ತ್ಪಂಥಗಳನ್ನುದ್ದರಿಸೊಅಂತು ತವ ಚರಣಾಬ್ಜ ಬೇಡುವೆ | ಬೇಡುವೆನೋಪಾದಾಕ್ರಾಂತಳಿಗೆ ಸುಧೆಯಾ ನೂಣೀಸೊ7 ಚಂದ್ರ ನಿವಹದ ಕಾಂತಿ | ಯಿಂದಮೃತ ಕಿರಣದಿಂಹೊಂದ್ಯಮಿತ ಸುಖರೂಪಿ ಉಲ್ಲಾಸವೀವುತ್ತಚಂದುಳ್ಳ ಸುಧೆ ಕಲಶ ಪಿಡಿಯುತ್ತ 8 ಆತು ಜ್ಞಾನಾಂಕವನು | ಆತ್ಮಸ್ಥಶೀತಾಂಶುಧೌತ ಮಂಡಲಗ ಲಕ್ಷ್ಮೀಶ | ಲಕ್ಷ್ಮೀಶ ಹರಿಯನ್ನುಮಾತು ಮಾತಿಗೆ ನಾನು ಸ್ಮರಿಸೂವೆ 9 ಉತ್ತಮಾಂಗದಲಿರುವ | ಹತ್ತೆರಡು ದಳ ಕಮಲಪ್ರಸ್ಥಿತನು ಧನ್ವಂತ್ರಿ ಮಕರಂದ | ಮಕರಂದ ಸ್ರವಿಸುವನಭಕ್ತಿಯಲಿ ಸ್ಮರಿಸೋದು ರೋಗಾರ್ತೆ 10 ಕಮಲ ಹೃದಯಸ್ಥ 11 ಸದನ ಷಟ್ದಳ ಕಮಲಗುದವು ಮೂಲಾಧಾರಾನಾಲ್ದಳವುನಾಲ್ದಳ ಕಮಲಸ್ಥಬದಿಗನು ಧನ್ವಂತ್ರಿ ರೂಪೀಯು 12 ರೂಪೀ ಈ ದೇಹವನು | ವ್ಯಾಪಿಸುತ ತಾನಿದ್ದುಕಾಪಾಡಲೋಸುಕದಿ ಮಕರಂದ | ಮಕರಂದ ಸುರಿಸುವವ್ಯಾಪಾರದಿಂ ಜೀವರುದ್ಧಾರ 13 ಹತ್ತಿರುವ ಅಜ್ಞಾನ | ವತ್ತಿಬಹ ಭಯದುಃಖಮತ್ತೆ ಮಹವಿಷವು ಇದರಿಂದ | ಇದರಿಂದ ಪರಿಹಾರ ಭಕ್ತಿಯಿಂ ಭಜಿಸೇ - ಸುಖ ಸೌಖ್ಯ 14 ಶರಣರ್ಗೆ ತಪ್ಪದೆಲೆ | ಗೆರೆವೆ ಸೌಖ್ಯಂಗಳನುಗುರು ಗೋವಿಂದ ವಿಠಲಾ | ವಿಠ್ಠಲ ಧನ್ವಂತ್ರಿಮರುತಾಂತರಾತ್ಮಾ ಸಲಹಯ್ಯ15
--------------
ಗುರುಗೋವಿಂದವಿಠಲರು
ಶ್ರೀ ನೀಲಕಂಠ ಮಹಾದೇವ ಶ್ರೀನೀಲಕಂಠ ಪ ಶ್ರೀ ನೀಲಕಂಠ ಪಾವನಶೀಲ ಪರಮೇಶ ಫಾಲಾಕ್ಷ ಫಣಿಭೂಷ ಪರಮ ಮಂಗಳಮೂರ್ತೆ ಅ.ಪ ಸರ್ವಜ್ಞ ಸರ್ಬೇಶ ಶರ್ವ ಸದಾನಂದ ಸರ್ವವಂದಿತಪಾದ ಸದಸತ್ಪರಾಧಾರ 1 ವಾಹನ ವಿಷಮ ವರ್ಜಿತ ದೇವ ಝಷಕೇತನಾರ್ದನ ಜಯ ಭಕ್ತವತ್ಸಲ 2 ವಿಶ್ವೇಶ ವಿಶ್ವಾಧಾರಕ ವಿಶ್ವಕಾರಣ ವಿಶ್ವ ವಿಶ್ವಾತ್ಮಕ ವಿಜಿತಪುರತ್ರಯ 3 ವರದೇಶ ವರದವರೇಣ್ಯ ಉಮಾಧವ ಶರಣಾಗತಜನಭರಣ ಸುರದ್ರುಮ 4 ಭವ ತಿರುಪತಿ ಕ್ಷೇತ್ರ ಸ್ಥಿತ ಶ್ರೀ ವೆಂಕಟಮಿತ್ರಾಭವ ಕಕುದ್ಗಿರಿವಾಸ ಶಿವ ಗಂಗಾಧರ ಲಿಂಗ 5
--------------
ತಿಮ್ಮಪ್ಪದಾಸರು
ಶ್ರೀ ಪಾಂಡುರಂಗ ಪ್ರಾರ್ಥನೆ ಪಾದ ಅಮಿತ ನೀಲಮೇಘಶ್ಯಾಮ ವಿಠಲನ್ನ 1 ಶಿಲೆಯನುದ್ಧರಿಸಿರ್ಪ ಪಾದಕೆ ಬಲಿಯ ಮೆಚ್ಚಿದ ಪಾದಕಮಲಕೆ ನಲಿವಿನಿಂದಲಿ ನಮಿಸಿ ಪೊಗಳುವೆಕಲಿಮಲಂಗಳನೆಲ್ಲ ತರಿಯುತತಲೆಯೊಳಾಶೀರ್ವಾದವೀಯಲು ಬಿದ್ದು ಬೇಡುವೆನು 2 ಕ್ರೂರ ರಕ್ಕಸರುಪಟಳಂಗಳ ವೀರತನದಿಂ ಚಕ್ರದಡಗಿಸಿ ಮಾರಪಿತ ಭವದೂರ ಕಂಸರಲಿ ದಣಿಯುತಲಿ ಯಾರ ಗೊಡವೆ ನಮಗೇನು ಎನ್ನುತ ಶ್ರೀ ರಮಾವರ ದೇವಿ ಸಹಿತೀ ದಾರಿಯೋಳ್ಮಿಜ ಭಕ್ತಗಾಶ್ರಯನಾಗಿ ನಿಂತಿಹನೆ 3 ಕಾಯ ಧರಿಸಿದ ಭಕ್ತವರ್ಯನ ಮಾಯೆಯಿಂದಲಿ ನೋಡಿ ನಲಿಯಲು ಬಂದ ವಿಠ್ಠಲನೆತೋಯಜಾಕ್ಷಿಯಳಾದ ಲಕುಮಿಯರಾಯ ಶ್ರೀಹರಿ ನಿನಗೆ ಇಟ್ಟಿಗೆ ಯಾಯಿತೇ ಬಲು ಸಂಖ್ಯದಂಸನ ನಿಂತುಕೊಳ್ಳಿಲ್ಕೆ 4 ತಾತನಂಘ್ರಿಯ ಸೇವೆಗೆಯ್ದಿರು-ವಾತ ಬರ¯ಂದನಿಮಿಷಾಗ್ರಣಿ ತಾತ ನಿಂತೆಯ ಸೊಂಟದ ಮೇಲೆ ಕೈಯಿಟ್ಟುಮಾತೆಯಾದವರು ಹಾಗೆ ಸಂಗಡ ಪ್ರೀತಿಯಿಂದಲೆ ನಿಂತುಕೊಂಡಳು ಖ್ಯಾತಿಯಾಯಿತು ಪಾಂಡುರಂಗನ ಲೀಲೆ ಭಕ್ತರಲಿ 5 ಸತ್ತು ಹುಟ್ಟುವ ಬಾಧೆಯಿಲ್ಲದಸತ್ಯವಂತನೆ ಕೊಟ್ಟ ಇಟ್ಟಿಗೆ ಮೆತ್ತಗಿಹುದೆÉೀನಷ್ಟು ದಿವಸವು ನಿಂತುಕೊಂಡಿರುವೆಮತ್ತೆ ಪೇಳುವುದೇನು ದೇವನೆ ಸುತ್ತು ಮುತ್ತಿನ ಜಗಕೆ ಆಸರವಿತ್ತೆ ನಿನಗಾಸರವು ಯಾವುದು ಭಕ್ತವತ್ಸಲನೆ 6 ಹೇ ದಯಾನಿಧೆ ಯಾದವಾಗ್ರಣಿ ಮಂದವಾಖ್ಯನೆ ಭೀಮತಡೆಯೊಳು ಆದರಮ್ಮಿಗೆ ತೋರಿ ಕರೆದನೆ ನಿಮ್ಮನೀರ್ವರನು ಬಾಧೆಬಡುತೀ ನಿಂತ ಕಾಲಿಗೆಹಾದಿನೋಡುವವೆಷ್ಟೊ ಬೆಳೆಯುಚೋದ್ಯವಲ್ಲವೆ ನಿನ್ನ ಲೀಲೆಯು ದಿವ್ಯವಿಗ್ರಹನೇ 7 ಆದಿಮೂರುತಿ ನಿನ್ನ ಹುಡುಕಲುವೇದ ಶಾಸ್ತ್ರ ಪುರಾಣವೆಂಬವು ಹಾದಿ ಕಾಣದೆ ನಿಂತವಲ್ಲೈ ನೀನೆ ಬಂದೀಗಮೇದಿನೀ ತಳದಲ್ಲಿ ಭಕ್ತರಹಾದಿ ನೋಡುತ ನಿಂತುಕೊಂಡಿರೆಹೋದವೆಷ್ಟೋ ದಿವಸ ಶ್ರೀಹರಿ ನಿನ್ನ ಲೀಲೆಯಲಿ 8 ನೀಲಮೇಘ ಶ್ಯಾಮ ಕೀರ್ತಿಯ ಜಾಲವನ್ನುರೆ ಭಜನೆ ಮಾಡುತತಾಳಹಾಕುತ ಸಂತಮಂಡಳಿ ಕುಣಿದು ಬರುತಿರಲುಧೂಳವೇಳುವದನ್ನು ಕಣ್ಣಲಿವೇಳೆಗಳೆಯದೆ ನೋಡಿ ನಲಿವುದುಲೀಲೆಯಲ್ಲವೆ ಪಾಂಡುರಂಗನೆ ವಿಶ್ವಚಾಲಕನೆ9 ಸರಸಿಜಾಕ್ಷನೆ ಕರಗಳೆರಡನುಇರಿಸಿ ಟೊಂಕದೊಳೇನು ನೋಡುವಿಪರಮ ಭಕುತನ ತಂದೆ ತಾಯ್ಗಳ ಸೇವೆ ಮಾಡುವುದುದೊರೆಯಲಾರದೆ ಕಲಿಯ ಕಾಲದೆ ದುರಿತ ನೀಗಿಸಿಕೊಂಡನಲ್ಲವೆ ಆರುಗಿಯಾದರು ನೋಡಲೊಲ್ಲನು ಭಕ್ತಿಬಲದಿಂದ 10 ಚಿನ್ನದರಸನೆÉ ನಿನ್ನ ಕೈಯನುಘನ್ನ ಟೊಂಕದ ಮೇಲೆ ಇರಿಸುತನನ್ನಿಯಿಂ ಭರವಸೆಯ ಕೊಡುವಿಯೊ ಭವದ ಸಾಗರವುತನ್ನ ನಂಬುತ ದಾಟಿ ಹೋಗುವಸನ್ನುತಾತ್ಮರಿಗಿಷ್ಟಯೆಂಬುದ ಚೆನ್ನವಾಗಿಯೆ ತಿಳಿಸಲೋಸುಗ ಹೀಗೆ ನಿಂತಿಹೆಯಾ 11 ನಾನು ನಿನ್ನನು ಕರೆಯದಿದ್ದರು ನೀನೆ ಬಂದಿಲ್ಲೇಕೆ ನಿಂತೆಯೊ ದೀನಪಾಲಕನೆಂಬ ಬಿರುದನೆ ಕಾಯಲೋಸುಗವೇಶಾನೆ ಸಂಪದವಿದ್ದ ದ್ವಾರಕೆ ಯಾನೆ ಕುದುರೆಗಳಿಂದ ಶೋಭಿಪ ದಾನವಾಂತಕ ಕೃಷ್ಣರಾಯನೆ ಈಗ ಪಂಡರದೀ 12 ಕರ್ಮ ಮುಗಿದಿಹುದೇಮಿಕ್ಕಿದವರೇನನ್ಯಯ ಪುತ್ರರೆ ತಕ್ಕ ಯೋಚನೆಗೆಯ್ದು ನಂತರತೆಕ್ಕೆಯೋಳ್ಸಲಹುವದು ಲೇಸೈ ಭಕ್ತವತ್ಸಲನೆ 13 ಹಾಲು ಮೊಸರಾ ಬೆಣ್ಣೆಯುಂಡೆಯ |ಲೀಲೆಯಿಂದಲೆ ಕದ್ದ ಕಳ್ಳನೆಚ್ಯಾಳಿಬಲಿತಾ ಬಳಿಕ ಬಿಡುವೆಯಾ ಭಕ್ತರಂತಹರಗಾಳಿ ಸೋಂಕಿದ ನೆವ ಮಾತ್ರಕೆಜಾಲಬೀಸುತ ಕದ್ದು ಕೊಳ್ಳುವಿಹೇಳಲೇನೈ ಹಿಂದಿನೆಷ್ಟೊ ಜನ್ಮದಘನಿದನಾ 14 ನಿನ್ನನೇ ನೆರೆ ನಂಬಿ ಭಜಿಸುವಪುಣ್ಯವಂತರ ಹೃದಯಮಂದಿರ-ವನ್ನೆಮಾಡಿದ ಪಾಂಡುರಂಗನೆ ನೀನು ಜಗದೊಳಗೆಘನ್ನ ಪಾಪದಿ ಬಳಲುತಿರುವವ-ರನ್ನುಸಲುಹಲು ಬಂದೆಯೇನೈಸನ್ನುತಾಂಗನೆ ಭಜನಿಗೊಲೆಯುವ ದಿವ್ಯ ವಿಠ್ಠಲನೆ 15 ವೇದಗಳ್ಳನ ಸದೆದು ಬ್ರಹ್ಮಗೆ ಮೋದದಿಂದಲಿ ಕೊಟ್ಟ ಮತ್ಸ್ಯನೆಆದಿಕೂರ್ಮನೆಯಾಗಿ ಮಂದರನೆಗಹಿ ನಿಂದವನೇಬಾಧೆÉ ಬಿಡಿಸುವ ಕ್ರೂರ ರಕ್ಕಸಭೇದಿಯಾಗುತ ಧರಣಿ ಮಂಡಲಸೇದಿ ತಂದನ ನೀನೆಯಲ್ಲದೆ ದಿವ್ಯ ವಿಠ್ಠಲನೆ 16 ಒಂದೆ ಮನದೊಳು ನೆನೆದ ಕುವರಗೆಬಂದೆ ಕಂಬದೆ ನಾರಸಿಂಹನೆನಿಂದ ಮಾತ್ರಕೆ ಮೂರು ಪಾದದ ಭೂಮಿದಾನದಲೀತಂದು ಪಾತಾಳದಲಿ ಬಲಿಯನುಚಂದದಿಂದಲಿ ಇಟ್ಟ ವಾಮನತಂದೆಯಾಡಿದ ನುಡಿಯ ನಡಿಸಿದ ಭಾರ್ಗವತ್ತೀ 17 ಸೀತೆಗೋಸುಗ ರಾಮನಾಗುತಖ್ಯಾತಿಗೋಸುಗ ಕೃಷ್ಣನಾದೆಯಲೇಪ್ರೀತಿಗೋಸುಗ ಬಾಧ್ಯನಾಗುತ ಜಗವ ಪಾಲಿಸಿದ್ಯಾಜಾತಿಯಶ್ವವನೇರಿ ರಿಪುಗಳÁತ ಮಾಡಿದ ಕಲ್ಕ್ಯರೂಪನೇಯಾತಕೀಪರಿ ಚಂದ್ರಭಾಗದಿ ನಿಂತೆ ಬೆರಗಾಗಿ 18 ನಿನ್ನ ನಾಮಗಳಮಿತವಿದ್ದರುನನ್ನ ನಾಲಿಗೆಗಷ್ಟು ಬರುವವೆ ?ಸನ್ನುತಾಂಗನೆ ಪಾಂಡುರಂಗನೆ ದಿವ್ಯ ವಿಠ್ಠಲನೆನ್ನುತಿಷ್ಟೇ ನಾಮಗರೆವೆನುಚಿನ್ನದರಸನೆ ಭಕ್ತಸಂಘದೊಳೆನ್ನ ಕೂಡಿಸಿ ಕಾಯಬೇಕೈ ಪರಮ ಭಗವಂತಾ 19 ಕಾಲಕಾಲಕೆ ನೇಮನಿತ್ಯಗ-ಳಾಲಯಂಗಳ ಮಧ್ಯದೆಸಗದೆಜಾಲಿಯಂತೇಗೆಲ್ಲ ಜನರಿಗೆ ಬೆಳೆದೆ ಬಾಧಿಸುತಬಾಲ ಯೌವನ ವಾರ್ಧಿಕತ್ವದೆಕಾಲಪೋಯಿತು ನಿನ್ನ ನೆನೆಯದೇ ಹೇಳಲೇನೈ ಕಾಲನೆಳೆಯುವನು 20 ಕಂತು ಜನಕನೆ ನಿನ್ನ ನಾಮದಮಂತ್ರವೆನಗಿನ್ನೆಲ್ಲಿ ಬರುವುದು ಶುದ್ಧ ಪಶುವಾದೇಅಂತರಾತ್ಮನೆ ನೀನು ಈ ತೆರನಿಂತುಕೊಂಡರೆ ನನ್ನ ಗತಿಯೇ-ನೆಂತ ಹೇಳಲಿ ಸಂತೆ ತೀರಿತು ಸಲಹೊ ವಿಠ್ಠಲನೇ 21 ಕಾಲ ಬಂದಿದೆಸದ್ಯಕಾರೂ ಕಾವರಿಲ್ಲವುದ್ಧಪಾಶದಿ ಬಿಡಿಸಬಾರೈ ದೀನ ಬಾಂಧವನೇ 22 ಕಾಯಕಿರುವದ ಬಂಧು ಬಳಗವು ಹೇಯ ದುಡ್ಡನೆ ಶಳಯಲೋಸುಗಜೀಯ ನಿನ್ನಂತಾರು ಇಲ್ಲವು ಜೀವಕನು ಸರಿಸೀತಾಯ ತಂದೆಯ ಜಗಕೆ ಲಕ್ಷ್ಮೀರಾಯ ನೀನೇ ಅಲ್ಲವೇನೈ ಬಾಯ ಬಿಡುವೆ ಅಜ್ಞಬಾಲರ ಕಾಯೊ ವಿಠ್ಠಲನೇ 23 ಅಣ್ಣನಾಗುತ ದ್ರುಪದ ಸುತೆಗಾಬಣ್ಣದಂಚಿನ ಸೀರೆ ಉಡಿಸಿದೆನಿನ್ನ ಬಾಲ್ಯದ ಸುಖ ಸುಧಾಮಗೆ ಕೊಟ್ಟಿಯ್ಯೆಸಿರಿಯಹಣ್ಣಿನಾಶೆಗೆ ಶಬರಿ....ಗೊಲಿದೈಬೆಣ್ಣೆಯಾಶೆಗೆ ಗೋಪಿಗೊಲಿದೈಮಣ್ಣಿನಾಶೆಗೆ ಬಲಿಯ ಬಾಗಿಲ ಕಾಯ್ದ ವಿಠ್ಠಲನೇ 24 ನಿನ್ನ ನೆಂದು ಕಾಣದಿದ್ದವಕುನ್ನಿ ಪಾಮರನಣ್ಣನೆಂಬೆನೆಹಣ್ಣು ಹಂಪಲವೆನಗೆ ಸಾಲವು ನಿನಗೆ ಕೊಡಬಹುದೇನನ್ನ ತೆರದಾಚಾರ ಹೀನರೆಇನ್ನು ಗೆಳೆಯರು ನನಗೆ ಆದರುಮುನ್ನ ಮಾಡಿದ ಪಾಪ ಬಹಳಿದೆ ಕೊಳ್ಳೊ ನೀನದನೂ 25 ಹಿರಿಯರೆಸಗಿದ ಪುಣ್ಯದಿಂದಲೆದೊರಕಿತಲ್ಲವೆ ನಿನ್ನ ನೆನೆವುದುಪರಮ ಸುಂದರ ಪಾಂಡುರಂಗನೆ ಬಾರೊ ಮಾನಸದೀತರಳರಾಟದಿ ತನ್ನ ತಾಯಿಯಮರೆತ ತೆರದಿಂ ಬಿಟ್ಟು ಕೆಟ್ಟೆನುಕರಗದೇನೈ ನನ್ನ ಮನವದು ನಿನ್ನ ದೆಶೆಯಿಂದ 26 ಕೂಸು ಆಟದೊಳಿದ್ದರೇನೈಹೇಸಿ ಕೆಲಸಹೊಳಿದ್ದರೇನೈದೋಷಗಳೆಯುತ ಪೊರೆವಳಲ್ಲಿದೆ ಪಡೆದ ತಾಯವ್ವಶ್ರೀಶ ವಿಠ್ಠಲ ಪಾಂಡುರಂಗನೆಘಾಸಿಗೊಳಿಸುವ ಮುನ್ನಯವನರುಪಾಶ ಬಿಡಿಸೈ ಭಕ್ತವತ್ಸಲ ದಿವ್ಯ ವಿಠ್ಠಲನೇ 27 ಕಾಮನಯ್ಯ ಸುಧಾಮ ಸಖ ಶ್ರೀರಾಮ ವಿಠ್ಠಲ ದಿವ್ಯ ರೂಪನೆಪ್ರೇಮವೆನ್ನಲ್ಲಿಟ್ಟು ಸಲಹೊ ಪುಣ್ಯವರ್ಜಿತನೆತಾಮಸತ್ವದ ಕೆಲಸವೆಲ್ಲವನೇಮದಿಂದಲೆ ಮಾಡಿ ನಾ ನಿ-ಸ್ಸೀಮನಾಗಿಹೆ ಕಾಯೆಯೊ ವಿಶ್ವವ್ಯಾಪಿ ವಿಠ್ಠಲನೇ 28 ನಾನು ಹೇಳುವುದೇನು ದೇವನೆನೀನೆ ತಿಳಕೊಂಡಿರ್ಪೆ ಎನ್ನಯಮಾನಕುಚಿತಪ್ಪಂತೆ ಸತ್ಫಲ ಕೊಡು ದಯಾಂಬುಧಿಯೇನೀನು ನಿಂvಡೆÉಗೆನ್ನ ಜಗ್ಗುತಸಾನುರಾಗದೆ ಪೊರೆಯೊ ವಿಠ್ಠಲನೀನೆಯಾದರು ಬಾರೊ ಭಕ್ತರ ಹೃದಯ ಮಂದಿರಕೆ 29 ಮಂಗಳಂ ಮಧುಕೈಟಭಾರಿಗೆಮಂಗಳಂ ಶ್ರೀವತ್ಸಧಾರಿಗೆಮಂಗಳಂ ಬ್ರಹ್ಮಾಂಡ ಪಾಲಕ ಪಾಂಡುರಂಗನಿಗೆಮಂಗಳಂ ಶ್ರೀ ಲಕುಮಿದೇವಿಗೆಮಂಗಳಂ ಭೀಮಾತಟಾಕಿಗೆಮಂಗಳಂ ಸದ್ಭಕ್ತ ಮಂಡಳಿಗೆಗಳ ಭೂತಳಕೆ 30
--------------
ಪಾಂಡುರಂಗ
ಶ್ರೀ ಪುರುಷೋತ್ತಮವಿಲಾಸ 62-2 ಆನಂದ ಜ್ಞಾನಮಯ ಅಖಿಲ ಗುಣ ಪರಿಪೂರ್ಣ || ಅನಘ ಲಕ್ಷ್ಮೀರಮಣ ಶರಣು ಜಗದೀಶ ಪ ವನಜಾಸನಾದಿ ಸುರರಿಂದ ಆರಾಧಿತನೇ | ವನಜಜಾಂಡದಿ ಜಗಜ್ಜನ್ಮಾದಿಪತೇ ಅಪ ಅಮಿತ ಅನಂತ ಗುಣಕ್ರಿಯಾರೂಪ ಅನಂತ ಶೀರ್ಷಾನಂತ ಉರುಸುಗುಣಪೂರ್ಣ|| ಅನಂತಾಕ್ಷ ಸರ್ವಜ್ಞ ಸಾಕ್ಷಿ ಸರ್ವಾಧ್ಯಕ್ಷ || ಅನಂತಪಾದನು ಅನಂತರೂಪಸರ್ವಸ್ಥ 1 ಸಹಸ್ರಪಾತ್ ಸತ್ಯಂ ಸತ್‍ಸೃಷ್ಟಿ ಜೀವನದ ಸಹಸ್ರಾಕ್ಷಜ್ಞಾನಂ ಎರಡು ವಿಧಜ್ಞಾನ || ಸಹಸ್ರಶೀರ್ಷಾನಂತಂ ಆನಂದ ಆನಂದ ಮಹಾಮಹಿಮ ಪೂರ್ಣಗುಣ ಪುರುಷನೀಬ್ರಹ್ಮ 2 ನಾಕಭೂಪಾತಾಳ ಜಗದಂತರ್ಬಹಿವ್ರ್ಯಾಪ್ತ || ಭಕುತರ ಸಮೀಪಸ್ಥ ಇತರರಿಗೆ ದೂರ || ಏಕಾತ್ಮ ಪರಮಾತ್ಮ ಪರಮ ಪುರುಷವಿಷ್ಣೋ ನೀಕಾಲಗುಣ ದೇಶಾಪರಿಶ್ಚಿನ್ನ ಭೂಮನ್ 3 ಪ್ರಕೃತಿಶಚವ್ಯಕ್ತ - ಮಹದಾದಿ ತತ್ವಂಗಳಿಗೇ | ಆಕಾಶ ಮೊದಲಾದ ಭೂತ ಪಂಚಕಕ್ಕೆ || ಸುಖಮಯನೇ ನೀಸರ್ವೆ ಚೇತನಾ ಚೇತನಕೆ | ಏಕ ಆಶ್ರಯ ಅನಂತ ಶೀರ್ಷಾಕ್ಷಪಾದ 4 ಪರಮೇಶ ಅವಿಕಾರ ಸಮರ್ಥ ಉರು ತೈಜಸಚ್ಛಕ್ತಿ ರೂಪವಷಟ್ಕಾರ ಪ್ರಕ್ರತಿ ಸರ್ವದಿ ನೀನು ಸ್ವೇಚ್ಛೆಯಿಂ ತುಂಬಿರುವಿ | ಪ್ರಕೃತಿ ಸರ್ವವು ನಿನ್ನಧೀನವೋ ಸ್ವಾಮಿ 5 ದ್ಯುಭ್ವಾದಿ ಜಗತ್ತಿಗೆ ಆಧಾರಾಧಿಷ್ಠಿತನು ದುಭ್ವಾದಿಗಳವ್ಯಾಪ್ಯ ವ್ಯಾಪಕನು ನೀನು ಸರ್ವಸ್ಥನಾಗಿ ನೀ ಸರ್ವವಶಿಯಾದುದರಿಂ ಸರ್ವನೀನೇಂದೆನಿಸಿಕೊಂಬಿಯೋ ಸ್ವಾಮಿ 6 ಆಧಾರ ಆಧೇಯೆ ಅನಂತಾಲ್ಪಶಕ್ತಿಯು ಅಧಿಷ್ಠಾನಾಷ್ಟಿತ ವ್ಯಾಪ್ಯ ವ್ಯಾಪಕವು ಭೇದ ಈರೀತಿಯಲಿ ಸುಸ್ಪಷ್ಟವಾಗಿದೆಯು ಇದಂಸರ್ವಂ ಉಕ್ತಿ ನಿನ್ ಸ್ವಾಮಿತ್ವ ಬೋಧಕವು 7 ಅಧೀನ ನಿನ್ನಲ್ಲಿ ಸ್ವಾಮಿ ಸರ್ವವಶಿಸರ್ವ | ಓದುನವು ಕರ್ಮಫಲಭುಂಜಿಪ ಸಂಸಾರಿಗಳು ಅದರಂತೆ ಮುಕ್ತರಸ್ವಾಮಿ ಆಶ್ರಯನು 8 ಇವು ಮಾತ್ರವೇ ನಿನ್ನ ಮಹಿಮೆಗಳು ಪರಮಾತ್ಮ || ಸರ್ವ ಈ ಚೇತನಾಚೇತನ ಪ್ರಪಂಚವು ಸರ್ವೇಶ ನಿನ್ನಂಶ ಸಹೃದಯ ಕಿಂಚಿತ್ತು 9 ಒಡೆಯನಿನ್ನಮಿತ ಶಕ್ತಿಯೊದಂಶದಲೆ ಜಡಜಗತ್ ಇರುವಿಕೆ ವಿಕಾರವುಸರ್ವ || ಜಡ ಭಿನ್ನರಲಿ ನಿನ್ನ ಸಾದೃಶ್ಯ ಅತಿ ಸ್ವಲ್ಪ ಪಾದ ವೊಂದಂ ಶೃತ ಸುಪಾದನು 10 ಅಧೀನತ್ವದಿಂಜಗತ್ ಇದಂಸರ್ವಂ ಎಂದಂತೆ - ಪಾದೋಸ್ಯ ವಿಶ್ವದಲಿ ಭಿನ್ನಾಂಶಜೇಯ || ಭಿನ್ನಜೀವರು ನಿನ್ನ ಪಾದರಾಗಿತಿಹರೋ ಚಿತ್ಚೇತ್ಯಯಂತ 11 ಪೂರ್ಣಗುಣನಿಧಿ ಅನಘ ಜನ್ಮಾದಿಕರ್ತಅಜ ಆವಣ್ನಯೋನಿತ ಪ್ರಾಪ್ಯ ಮಧ್ವಸ್ಥ ಶರಣು || ವನಜಭವಪಿತ ಶ್ರೀಶ ಪ್ರಸನ್ನ ಶ್ರೀನಿವಾಸ ನಮೋ ಪರಮ ಪುರಷ 12
--------------
ಪ್ರಸನ್ನ ಶ್ರೀನಿವಾಸದಾಸರು
ಶ್ರೀ ಬ್ರಹ್ಮಣ್ಯ ತೀರ್ಥರು ಪಾಲಿಸೊ ಗುರುವೆ ಬ್ರಹ್ಮಣ್ಯ | ತೀರ್ಥಕೇಳುವೆ ವರ ಸುರ ಮಾನ್ಯ ಪ ಕಾಳೀಯ ರಮಣನ | ಲೀಲ ವಿನೋದವಕಾಲ ಕಾಲಕೆ ಸ್ಮರಿಪ | ಶೀಲಸನ್ಮನವ ಅ.ಪ. ಜ್ಞಾನ ದಾಯಕನಾಗಿ ಮೆರೆವಾ | ಸ್ಥಾನಜ್ಞಾನ ಮಂಟಪದೊಳು ಇರುವಾ |ಮೌನಿ ವರೇಣ್ಯರೆ ಆನತ ಸುರತರುದಾನವಾರಣ್ಯ ಕೃ | ಶಾನುವೆ ಪಾಲಿಸೊ 1 ಇಷ್ಟ ಜನರ ಪರಿಪಾಲಾ | ದಯದೃಷ್ಟಿಲಿ ಜನರಘ ಜಾಲಾ |ಸುಟ್ಟು ಭಸ್ಮೀ ಭೂತ | ಅಷ್ಟ ಸೌಭಾಗ್ಯದವಿಠ್ಠಲ ಚರಣೇಷ್ಟ | ಹೃಷ್ಟನ್ನ ಮಾಡೆನ್ನ 2 ರವ್ಯಂಶ ಸಂಭೂತ ನೆನಿಸೀ | ಸರಿತ್ಕಣ್ವ ತಟದಿ ನೀನು ನೆಲೆಸೀ |ಪವನಾಂತಸ್ಥ ಗುರು | ಗೋವಿಂದ ವಿಠಲನಸ್ತವನ ಮಾಳ್ಪರ ಕಾವ | ಭುವನ ಪಾವನ ದೇವ 3
--------------
ಗುರುಗೋವಿಂದವಿಠಲರು
ಶ್ರೀ ಮದ್ಭಾಗವತ ಚಿಂತಯಾಮಿ | ಶಿರಿಕೃಷ್ಣ | ಸತತ ಸುಗುಣೋ | ಪೇತಂ ಪ ಸಂತತ ಭಕುತರ ಕೃಪಾ | ಪಾಂಗ ವೀಕ್ಷಾ ಹಸಿತಂಅ.ಪ. ಚಿಟ್ಟೆಸ್ವರ - ಸರಿ ಗಸರೀ | ಮಪ ದಪ ಧಾ | ರಿಸ ನಿಧ ನಿಧ | ಪಮ ಗರಿ ಸಧ |ದ್ರುತ :- ಸರಿಮಾ ಗರಿ | ಮಪ ದಾಸಮ || ಪದ ಸಾ ನಿಧ | ನಿಧ ಪಮಪಧ |ಗರಿ ಸಧ | ರಿಸ ಧಾ ಸ | ಧಾ ಗರಿ ನಿಧಮ ಗರಿಸಧ || ದುರುಳ ಬಂಧಂ | ವಸುಮತಿಯೆಂ, ಗಗನಖಾರಿ, ಕಂಸಗರ್ವಹರ, ದುರ್ಗಾಂಬಂ 1 ವಿಗತಾ ಅಸು, ಪಾಲುಣಿಸಿದ, ರಕ್ಕಸಿ, ಪೂಥಣಿಯುಮಿಗೆ ಊರ್ವಶಿ ಸುರೆ ಶಾಪಹರಂ | ಶಕಟಾಖ್ಯಾಸುರವಿಗಡ ಪ್ರಾಣಹರ | ಶೀಲಂ ತೃಣ ವತ್ಸಾಹರ | ಬಕ ಧುನಿ ಚಮುಮಿಗಿಲಾದವರ ಅಸುಹರಣಂ | ಮಣಿಗೊರಳರ ಶಾಪಹರಂ |ಮದ ವಿಭಂಜನ ಕಾಳೀಯನ | ವನ್ಹಿಯ ಪಾನಂ ಚರಿತಂ 2 ಚಿಟ್ಟೆಸ್ವರ - ನಿಸ ಗಾ ಮಪ | ಗಮ ಪಾ ನಿಸ | ರಿ ಸ ರಿ ನಿ ಸಸ | ಧಪ ಗಾರಿಸ |ನೀ ಸಗ ಮಪ ಗಾ ಮಪನಿಸ | ಪಾನಿಸ ಗರಿಸನಿ ಧ ಪನಿಸ |ಗರಿಸಧ, ಆರಿಸ ಧಾ, ಸ || ಧಾ, ಗರಿ ನಿಧಮ ಗರಿಸಧ || ರಾಗ ಮೋಹನ : ಹನನ ಅಸುರ | ವಿಷತರು ರೂಪಿ | ಘನ ಧೇನುಕ ಭಂಜನಹನನ ಪ್ರಲಂಬನು ಬಲ ನಿಂ | ಪುನರಪಿ ವನ್ಹಿಯ ಪಾನಂಮುನಿ ಪತ್ನ್ಯಾನೀತಾನ್ನ | ಸುಭೋಜನ ಶೀಲಂ |ತೃಣಸಮ ಗಿರಿಧರ ಶಂಖನ | ಮಣಿಹರ ಅರಿಷ್ಠಾ ಅಸುರ ಹರ 3 ಗಾ ಅಪ ಗರಿ, ಗರಿ ಸಧ ಸರಿ | ಗಾಪ ಧಸ, ಧಪ ಗರಿ ಸರಿ |ಗಪ ಗಗ ರಿಸ, ರಿಗ ರಿರಿಸ ಧ | ಸರಿಗರಿ ಗಪಗಪ ಧಪ ಧಸ |ಗರಿಸಧ, ಆರಿಸ, ಧಾ ಸ || ಧಾ, ಗರಿ ನಿಧಮ ಗರಿಸಧ || ಕೇಶಿ ಅಸುರನ ಅಂತೆ ವ್ಯೋಮಾಸುರ ಹನನದಕ್ಲೇಶ ವಾರ್ತೆಯ ಕೇಳಿ ಕಂಸನು ದಾನಪತಿಯನುಯಶೋದೆ ಕಂದನ ಕರೆಯೆ ಅಜ್ಞಾಪಿಸಿದ ಬಿಲ್ಲು ಹಬ್ಬಕೆಲೇಸೆನುತ ಬರವಾಯ್ತು ಸಖ ಅಕ್ರೂರ ಗೋಕುಲಕೆ 4 ಚಿಟ್ಟೆಸ್ವರ - ಅರಿ ಗಮ | ಪಾಧಪಸ | ನಿಧಪಮಗರಿಗಮಪ ಮಾಪ, ಗಾಮರೀಗ, ಸಾರಿಗಾ ಮ, ಪದ ಪ, ಸಾನಿ ||ಗರಿ ಸಧಾ, ರಿ ಸಧಾ ಸದಾ ಗರಿ ನಿಧಮ, ಗರಿ ಸಧ || ಪತಿ | ಸ್ನಾನದಲಿ ಹರಿ ವೀಕ್ಷಣಂಮನ ಕಲಕಿ ಹರಿ ಮಹಿಮೆ ಆಶ್ಚರ್ಯದಿ ಮಧುರೆ ಸೇರಿವನದಿ ಪರಿವಾರ ನಿಲೆ ಬಲ ಸಹಿತ ಪುರಖೊರಟ 5 ಪಾ ಮಗರಿ | ಸಾ ನಿಧ ಸರಿ | ಮಾ ಗರಿಸ | ರಿಮ ಪಮನಿಧ |ಸಾ ಸನಿ ಧಪ ಪಾ ಮಗರಿಸ | ನಿಧ ಸರಿ ಮಪನಿಧ ಮಪಧಸ |ಗರಿ ಸಧ ಆರಿ ಸ ಧಾ ಸ || ಧಾ ಗರಿ ನಿಧಮ, ಗರಿಸಧ || ಭಾರ ಕಳೆದ ಗುರು ಗೋವಿಂದ ವಿಠಲ 6 ಚಿಟ್ಟೆಸ್ವರ ರೀ, ಮರಿ ಮಪ | ನೀ ಪಮ ಪನಿ | ಸಾರಿಸನಿ | ಪಪ ಮಮ ರಿಸ |ರೀ ಪಮ ರಿಸ ನಿಸ ರಿಮಪಾ || ರಾಗ :ಪೂರ್ವಿಕಲ್ಯಾಣಿ :ಧಪಸಾ ನಿಧಪಮ | ಪಮಗರಿ ರಾಗ :ಮೋಹನ :ಸರಿಮಾ ಗರಿ ಸರಿಗಾ | ದಪಗರಿ ಸರಿ ಗಪದಸರಾಗ :ಮುಖಾರಿ :ರೀ ಸದಾ ಪ ದಪ ಗಾರಿಸ | ರಾಗ :ನಾಟಿ ಕುರಂಜಿ :ನಿಸ ಮಗ ಮನಿ ಧನಿ ಪದನಿಸ | ರಾಗ :ಸಾವೇರಿ :ಗರಿ ಸಧಾ ರಿಸ ಧಾ ಸ || ಧಾ ಗರಿ ನಿದಮ ಗರಿ ಸಧ
--------------
ಗುರುಗೋವಿಂದವಿಠಲರು
ಶ್ರೀ ರಘೂತ್ತಮತೀರ್ಥರು ನೋಡಿದೆ ಗುರುಗಳ ನೋಡಿದೆ ಪ ನೋಡಿದೆನು ಗುರುಗಳ ಪಾದಾಬ್ಜವ ಪಾಡಿದೆನು ಸನ್ಮಹಿಮೆಗಳ ನಾ ಬೇಡಿದೆನು ಮನದಣಿಯೆ ವರಗಳ ಈಡು ಇಲ್ಲದೆ ಕೊಡುವ ಪ್ರಭುಗಳ ಅ.ಪ. ಪಂಚಕೃಷ್ಣಾರಣ್ಯಕ್ಷೇತ್ರ ಪಿನಾಕಿಯ ತೀರದಲ್ಲಿ ನಿಂತು ಮಿಂಚುತಿಹ ಕಾಷಾಯದಂಡ ಕಮಂಡಲವ ಧರಿಸುತ್ತ ಧರೆಯೊಳು ಪಂಚಬಾಣದ ಪಿತನ ಗುಣಗಳ ಅಂಚೆಯದಿ ಪೊಗಳುತ್ತ ಹರುಷದಿ ಸಂಚಿತಾಗಾಮಿಗಳ ಕಳೆದು ಪ್ರಪಂಚದಲಿ ಮೆರೆವಂಥ ಗುರುಗಳ 1 ಅಲವಬೋಧರ ಭಾಷ್ಯಟೀಕಾ ಭಾವವನು ಸುಜನರಿಗೆ ಬೋಧಿಸಿ ಕಲುಷಮತಗಿರಿ ಸಮುದ(ದಾ)ಯಂಗಳ ಕುಲಿಶದಂದಲಿ ಖಂಡಿಸುತಲಿ ಮೂಲರಾಮ ದಿಗ್ವಿಜಯರಾಮರ ಪಾದಕಮಲಕೆ ಭೃಂಗನೆನಿಸುತ ಶೀಲಭಕ್ತಿ ವಿರಕ್ತಿಮತಿಗಳ ಪಾಲಿಸುತ ಯತಿಮೌಳಿ ರತುನರ 2 ಕಾಮಧೇನು ಸುಕಲ್ಪತರು ಚಿಂತಾಮಣಿಯವೋಲ್ ಕಾಮಿತಾರ್ಥವ ಪ್ರೇಮದಲಿ ಬೀರುತ್ತ ಅಧ್ಯಾತ್ಮದಿ ತಾಪತ್ರಯ ಕಳೆಯುವ ಸ್ವಾಮಿ ಶ್ರೀಹರಿ ಶ್ರೀದವಿಠಲನ ದಾಸಾಗ್ರಣಿಯೆನಿಸಿ ಮರೆವರ ನೇಮದಿಂದಲಿ ಶ್ರೀ ರಘೂತ್ತಮ ಮೌನಿವರ್ಯರ ಕರುಣ ಬಯಸುತ 3
--------------
ಶ್ರೀದವಿಠಲರು