ಒಟ್ಟು 758 ಕಡೆಗಳಲ್ಲಿ , 75 ದಾಸರು , 638 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ವಾವಿಯೀ ಪರಮಾತ್ಮಗೊಂದೂ ಇಲ್ಲ |ಶ್ರೀ ವರನೆ ಇದು ಅಲ್ಲವೆಂಬರಿಲ್ಲ ಪಮೊಮ್ಮಕ್ಕಳನ್ನು ವಂಚಿಸಿ ತಾನೆ ಕೊಲ್ಲಿಸಿದ |ಮೊಮ್ಮಗಗೆ ತನ್ನ ತಂಗಿಯನು ಕೊಟ್ಟ ||ಮೊಮ್ಮಗನ ನಾದಿನಿಯರಲ್ಲಿ ಮಕ್ಕಳ ಪಡೆದ |ಮೊಮ್ಮಗನ ವಹಿಸಿ ಪುತ್ರನ್ನ ಅಳಿದ 1ಒಬ್ಬ ಮಾವನ ನೋಡ ನೋಡ ಪ್ರಾಣವಕೊಂಡ|ಒಬ್ಬ ಮಾವನ ಕೂಡ ಕಡಿದಾಡಿದ ||ಒಬ್ಬ ಮಾವನ ಮೇಲೆ ಬಾಣವನ್ನೇರಿಸಿದ |ಒಬ್ಬ ಮಾವನ ಮಗನಮಾನಕಳೆದ2ಒಬ್ಬ ಅತ್ತೆಗೆ ತಾನೆ ತಂದೆಯನ್ನಿಸಿಕೊಂಬ |ಒಬ್ಬ ಅತ್ತೆಗೆ ಗಂಡನಾದನಿವನು |ಒಬ್ಬ ಅತ್ತೆಗೆ ಮಾವನಾದನೀ ಕೇಶವನು |ಒಬ್ಬ ಅತ್ತೆಯ ಬಹಳ ಶ್ರಮ ಬಡಿಸಿದ 3ಒಬ್ಬ ಮಗಳನು ತನ್ನ ಹಿರಿಯ ಮಗನಿಗೆ ಕೊಟ್ಟ |ಒಬ್ಬ ಮಗಳನು ತಾನೇ ಮದುವೆಯಾದ ||ಒಬ್ಬ ಮಗಳಿಗೆ ಒಂದು ರೀತಿಯಲಿ ಮಗನಾದ |ಒಬ್ಬ ಮಗಳನು ಹಲವರಲ್ಲಿರಿಸುವ 4ಇವನ ನಿಜ ಭಕ್ತನೆಂಬವನು ತನ್ನ ಸತಿಯನು |ಸವಿಯಾಗಿ ನಾಲ್ವರಿಗೆಹಂಚಿಕೊಟ್ಟ ||ಭುವನದೊಳಗೆ ಪ್ರಾಣೇಶ ವಿಠಲನ ಮನೆ ನಡತೆಯಿದು |ಕವಿಗಳೆಲ್ಲರು ತಿಳಿದು ಪೂಜಿಸುತಿಹರು ಮುದದೀ 5
--------------
ಪ್ರಾಣೇಶದಾಸರು
ವಿಜಯನ ಸತಿಯಿಂದ ಫಲವಾಯ್ತು-ಅದು |ಗಜೇಂದ್ರನಿಂದ ದೋರೆ ಹಣ್ಣಾಯ್ತು ||ದ್ವಿಜಶುಕಮುನಿಯಿಂದೆ ಫಲ ಪಕ್ವವಾಯಿತು |ಅಜಾಮಿಳ ತಾನುಂಡು ರಸ ಸವಿದ 2ಕಾಮಿತ ಫಲವೀವ ನಾಮವೊಂದಿರಲಾಗಿ |ಹೋಮ ನೇಮ ಜಪತಪವೇಕೆ ||ಸ್ವಾಮಿ ಶ್ರೀ ಪುರಂದರವಿಠಲ ರಾಯನ |ನೇಮದಿಂದಲಿ ನೀ ನೆನೆ ಮನವೆ 3
--------------
ಪುರಂದರದಾಸರು
ವಿದುರನ ಭಾಗ್ಯವಿದು |ಪದುಮಜಾಂಡ ತಲೆದೂಗುತಲಿದೆ ಕೊ ಪಕುರುರಾಯನು ಖಳನನುಜನು ರವಿಜನು |ಗುರುಗಾಂಗೇಯರು ಎದುರಿರಲು ||ಹರಿಸಿ ರಥವ ನಡು ಬೀದಿಯಲ್ಲಿ ಬಹ |ಹರಿಯ ತಾನು ಕಂಡನು ಹರುಷದಲಿ 1ದಾರಿಯಲಿ ಬಹ ಮುರವೈರಿಯ ಕಾಣುತ |ಹಾರುತ ಚೀರುತ ಕುಣಿಯುತಲಿ ||ವಾರಿಧಾರೆಯನು ನೇತ್ರದಿ ಸುರಿಸುತ |ಬಾರಿಬಾರಿಗೆ ಹಿಗ್ಗುವ ಸುಖದಿ 2ಆಟಕೆ ಲೋಕಗಳೆಲ್ಲಾ ಸೃಜಿಸುವ |ನಾಟಕಧರ ತನ್ನ ಲೀಲೆಯಲಿ ||ನೀಟಾದವರ ಮನೆಗಳ ಜರೆದು |ಕುಟೀರದಲಿ ಬಂದುಹರಿ ಕುಳಿತ3ಅಡಿಗಡಿಗೆ ತನ್ನ ತನುಮನ ಹರಹಿ |ಅಡಗೆಡೆಯುತ ಬಲು ಗದ್ಗದದಿ ||ನುಡಿಗಳ ತೊದಲಿಸಿ ರೋಮವ ಪುಳಕಿಸಿ |ದುಡುದುಡು ಓಡುವ ದಶದಿಶೆಗೆ 4ಕಂಗಳುದಕದಿ ಪದಂಗಳ ತೊಳೆದು |ಗಂಧವ ಪೂಸಿದ ತನುಪೂರಸಿ ||ಮಂಗಳ ಮಹಿಮನ ಚರಣಕೆರಗಿ ಪು-ಷ್ಪಂಗಳಿಂದ ಪೂಜೆಯ ಮಾಡಿದನು 5ನೋಡಿದ ಭಕುತನ ಮನದ ಹವಣಿಕೆಯು |ಪಾಡುವ ಪೊಗಳುವ ಹರುಷದಲಿ ||ನೀಡಿದ ಕರದಲಿ ಬಿಗಿದಪ್ಪಿದ ಕೊಂ -ಡಾಡಿದ ಕರುಣದಿ ಜಗದೊಡೆಯ 6ಕ್ಷೀರವಾರಿಧಿ ಶಯನಗೆ ವಿದುರನು |ಕ್ಷೀರವನುಣ ಬಡಿಸಿದ ನೋಡಾ ||ವಾರಿಜನಾಭನು ಕರಸಂಪುಟದಲಿ |ಆರೋಗಣಿಸಿದ ಘನತೆಯನು 7ಒಂದು ಕುಡಿತೆ ಪಾಲುಹರಿ ತಾ ಸವಿದು |ಮುಂದಕೆ ನಡೆಸಿದ ಧರೆಮೇಲೆ ||ಇಂದಿರೆಯರಸನ ಚರಿತೆ ವಿಚಿತ್ರವು |ಚೆಂದದಿ ಹರಿದುದು ಬೀದಿಯಲಿ 8ಕರುಣಾಕರ ಸಿರಿಹರಿ ತನ್ನ ಭಕುತರ |ಪೊರೆವನುಅನುದಿನ ಆಯತದಿ ||ಸಿರಿಯ ಅರಸು ನಮ್ಮಪುರಂದರ ವಿಠಲನ |ಶರಣರು ಧನ್ಯರು ಮೇಲೆ 9
--------------
ಪುರಂದರದಾಸರು
ವೆಂಕಟರಮಣ ವೇದಾಂತಕೋಟಿವಂದ್ಯಶಂಕರಪ್ರಿಯಪತಿಏಳೆನ್ನುತಪ.ಪಂಕಜಮುಖಿಪದ್ಮಾವತಿ ಸರ್ವಾ-ಲಂಕಾರದ ನಿದ್ದೆ ಸಾಕೆನ್ನುತ ಅ.ಪ.ಮಂಗಲಚರಿತ ಭುಜಂಗಶಯನ ನಿ-ನ್ನಂಗದಾಯಾಸವ ಪರಿಹರಿಸಿಪೊಂಗಲಶದಿ ಉಷ್ಣೋದಕ ಗಂಧ ತೈಲಾ-ಭ್ಯಂಗಮಾಡುವರೇಳು ಶೃಂಗಾರದ ಮೂರ್ತಿ 1ದಧಿಯ ಪೃಥುಕದಲಿ ಹದಗೈದು ಮಧುರದಿಮಧುಸೂದನ ನಿನ್ನ ಪದದ ಮುಂದೆಸದ್ ಹೃದಯರು ತಂದಿಹರು ಸಮರ್ಪಿಸೆಮದಜನಕ ನಿನ್ನ ಓಲೈಸುವರಯ್ಯ 2ಸಣ್ಣಕ್ಕಿಯನು ದಿವ್ಯಾನ್ನ ಪಾಕವ ಮಾಡಿಚೆನ್ನಾದ ಗೋಕ್ಷೀರವನ್ನು ತಂದುಉನ್ನತ ಮಹಿಮನೆ ಉಣ್ಣೆಂದು ಲಲಿತ ಸು-ವರ್ಣಪಾತ್ರೆಯೊಳು ತಂದಿಹರು ಶ್ರೀಹರಿಯೇ 3ವಿಧವಿಧ ಷಡುರಸಭರಿತ ಮನೋಹರಸುಧೆಗೆಯಿಮ್ಮಡಿ ಮಧುರತ್ವದಲಿಮೃದುವಾದ ಉದ್ದಿನ ದೋಸೆಯ ಸವಿಯೆಂದುಪದುಮನಾಭನೆ ನಿನ್ನ ಹಾರೈಸುವರಯ್ಯ 4ಸಕ್ಕರೆಕದಳಿಉತ್ತಮ ಫಲಗಳ ತಂದುರಕ್ಕಸವೈರಿಯೆ ನಿನ್ನ ಮುಂದೆಚೊಕ್ಕಟವಾಗಿಡೆ ಲೆಕ್ಕ ಲೇಖನಗಳಒಕ್ಕಣಿಪರುವಾಸುದೇವನೀನೇಳಯ್ಯ5ಸಾರಹೃದಯ ಗೌಡಸಾರಸ್ವತವಿಪ್ರಭೂರಿವೇದಾದಿ ಮಂತ್ರದ ಘೋಷದಿಶ್ರೀರಮಣನೆ ದಯೆದೋರೆಂದು ಕರ್ಪೂರ-ದಾರತಿಯನು ಪಿಡಿದಿಹರು ಶ್ರೀಹರಿಯೇ 6ಭಾಗವತರು ಬಂದು ಬಾಗಿಲೊಳಗೆನಿಂದುಭೋಗಿಶಯನಶರಣಾದೆನೆಂದುಜಾಗರದಲಿ ಮದ್ದಳ ತಾಳರಭಸದಿರೇಗುಪ್ತಿರಾಗ ಸಂಗೀತ ಪಾಡುವರಯ್ಯ 7ಕರುಣಾಸಾಗರ ನಿನ್ನ ಚರಣದ ಸೇವೆಯಕರುಣಿಸೆಂದೆನುತಾಶ್ರಿತ ಜನರುಕರವಮುಗಿದು ಕಮಲಾಕ್ಷ ನಿನ್ನಯ ಪಾದ-ಸ್ಮರಣೆಗೈಯುತ ನೋಳ್ಪಾತುರದಿಂದ ಹರುಷದಿ 8ನಾನಾ ಜನರು ಬಂದುಕಾಣಿಕೆಕಪ್ಪವಶ್ರೀನಿವಾಸನೆ ನಿನ್ನ ಪದಕೆ ಒಪ್ಪಿದಾನವಾಂತಕ ನಿನ್ನ ದಯವೊಂದೆ ಸಾಕೆಂದುಧ್ಯಾನಮಾಳ್ಪರು ದಯಮಾಡೆಂದು ಹರಿಯೇ 9ನೀನೆ ಗತಿಯೆಂದು ನಿನ್ನ ನಂಬಿಹರು ಲ-ಕ್ಷ್ಮೀನಾರಾಯಣ ಪುರುಷೋತ್ತಮನೆಮಾನದಿ ಭಕ್ತರ ಸಲಹಯ್ಯ ಸಂತತಶ್ರೀನಿವಾಸನೆ ಬೇಗ ಏಳು ಶ್ರೀಹರಿಯೆ 10
--------------
ಪಾವಂಜೆ ಲಕ್ಷ್ಮೀನಾರ್ಣಪ್ಪಯ್ಯ
ಶಾಂತ ಶಾಂತವು ಎಂದು ಎಂಬರಿ ನಿಮ್ಮನುಶಾಂತವಿಂತಿರುತಿರೆ ಶಾಂತಶಾಂತವಿಂತಿರೆ ಜೀವ ಮುಕ್ತನುಶಾಂತಿಲಿ ಭ್ರಾಂತಿರೆ ಭಯವುಕೃತಾಂತಪಸತಿಜಾರೆಯಾಗಲು ಗುರುನಾಥಲೀಲೆಯೆಂದುಸತಿಗನುಕೂಲವೇ ಶಾಂತಖತಿಯ ಮಾಡಲು ನಾನಾಜನರು ಚಂಚಲವಾಗದಸ್ಥಿತಿಯೇ ಶಾಂತ ಸತತ ಸಂಸಾರ ಕರಕರೆ ಬಳಲಿಕೆಸಂಗವಿಲ್ಲದಿಹುದೇ ಶಾಂತಅತಿ ಚೋರ ಸುಲಿದೊಯ್ಯೆ ಆನಂದದಲಿನಸುನಗುತಿರುವುದೇ ಶಾಂತ1ವಿಷವನಿಕ್ಕಿದವರನ್ನು ಕಾಣಲು ಅವರೊಳುವಿಶ್ವಾಸವಿಹುದೇ ಶಾಂತದುಶ್ಮನನು ತನ್ನನ್ನು ಕಡಿಯಬರೆ ಇದುಮೋಕ್ಷವೆಂಬುದೆನೆ ಶಾಂತಮುಸುಕಿನ ಮಾತ ಊರ ಮುಂದಿಕ್ಕಲುಮತಿಗೆಡದಿಹುದದು ಶಾಂತಹಸಿದು ಮಕ್ಕಳು ಅಳೆ ಹೆಂಡತಿ ರೋಧಿಸೆಕುಸಿದು ಬೀಳದೊಡದು ಶಾಂತ2ಕೊಟ್ಟಿದ್ದು ಸುಳ್ಳು ಎಂಬುವರೆದುರಿಗೆಕೊಟ್ಟಿಲ್ಲವೆಂಬುದೇ ಶಾಂತಭ್ರಷ್ಟರು ನಾನಾ ನಿಂದೆಯ ಮಾಡಲುಭಯ ಹುಟ್ಟದಿರುವುದೇ ಶಾಂತಬಿಟ್ಟುಹೋಗಲು ತನ್ನಸತಿಸುತರೆಲ್ಲರುಭ್ರಾಂತಿಯ ತೋರುವುದೇ ಶಾಂತದಿಟ್ಟ ಚಿದಾನಂದ ಸದ್ಗುರು ತಾನಾಗಿದೃಢನಾಗಿಹುದದು ಶಾಂತ3
--------------
ಚಿದಾನಂದ ಅವಧೂತರು
ಶೋಭನವೇ ಶೋಭನವೇಶೋಭನ ಚಿದಾನಂದ ಅವಧೂತಗೆಪರೇಚಕ ಪೂರಕ ಕುಂಭಕವರೇಚಿಪ ಪೂರಿಪ ಕ್ರಮದನುವಾಸೂಚನೆಯರಿದಾ ಸುಷುಮ್ನದನುಭವರೋಚಕವಾಗಿಹ ಕಳೆಸವಿವ1ಹೃದಯಾಕಾಶದಿ ಲಕ್ಷ್ಯವಿಟ್ಟುಮುದದಿ ತೋರಲು ಪ್ರಭೆಮಿಂಚಿಟ್ಟುಬುದು ಬುದುಕಳೆ ಪ್ರಕಾಶಗಳೆದುರಿಟ್ಟುಒದವೆ ನಾದಧ್ವನಿ ಇಂಪಿಟ್ಟು2ನಿರುಪಮ ನಿರ್ಗುಣ ನಿರ್ಭೀತನಿರವಯ ನಿಶ್ಚಲ ನಿಜದಾತಾವರಚಿದಾನಂದ ಸದ್ಗುರುಅವಧೂತಶರಣು ಜನಕಾವಪ್ರಖ್ಯಾತ3
--------------
ಚಿದಾನಂದ ಅವಧೂತರು
ಶ್ರೀ ಕಾಶಿವಿಶ್ವನಾಥ ಶಿಷ್ಟ ಜನ ಪ್ರೀತಲೋಕ ರಕ್ಷಕ ವರದಾತ ಪ್ರಖ್ಯಾತಏಕಾನೇಕ ವಿವೇಕಶರಧಿಶರಪಾಕಾರಿ ಪ್ರಿಯ ಪಾಹಿಮಾಂ ಶಂಭೋಪಕರಿಮುಖಪಿತ ಈಶ ಕಲಿವಿನಾಶಕಕರಿಚರ್ಮ ವಸ್ತ್ರಧಾರಿಕದನಕಂಠೀರವಉರಗಭೂಷಣ ದೇವ ಉತ್ತಮಭಾವಕರದಿ ಬ್ರಹ್ಮಕಪಾಲ ಶಿರರುಂಡಮಾಲಧರದುರಿತನಿವಾರ ಗುಣಸಾರ ಗಂಭೀರಸಾರರಹಿತ ಸಂಸಾರ ವಿದೂರಆರಾಧಿತ ಪ್ರಜ್ಞಾಂಬುಜಭವನುತಸಾರಾಸಾರ ವಿಚಾರಪಿನಾಕಿ1ಶಶಿಯ ಶಿರದೊಳಿಟ್ಟ ಸುರಮುನಿ ಶ್ರೇಷ್ಠಅಸಮ ಅಂಧಕಾಸುರ ಸಂಹಾರಭಸಿತ ಮೈಯೊಳು ಪೂಸಿ ಭುಜಗನ ವಿಷತಾಳ್ದವೃಷಭವಾಹನಲೋಲಉರ್ವಿಜನ ಪಾಲಈಶ ಸುರೇಶ ಉಮೇಶಭೂತೇಶಭಾಸುರಕೋಟಿಸವಿತಸಂಕಾಶ ವಿನು-ತಸುರಜನ ಪಾಲಿತ ಶುಭಾಂಗಕಪರ್ದಿ2ಮೆರೆದೆಭುವನಈರೇಳು ಧರಿಸಿ ಕುಕ್ಷಿಯೊಳುನರರ ರಕ್ಷಿಸಿ ಪೊರೆದು ನಾದದೊಳ್ಬೆರೆದುಧರಣಿಯೊಳೆ ಪೆಸರ್ವಡೆದವರಕಾಶಿಪುರದಮೆರವ ವಿಶ್ವೇಶದೇವ ಸುರನಿಕರ ವಂದಿತಹರ ಅಸುರಹರ ಭವದೂರ ವೀರ ಚಿದಾನಂದಅವಧೂತಕಾರಣ ನಿರ್ಮಲ ಚಾರುಪರಾತ್ಮಕಮಾರಭಸ್ಮಾಂಕಿತ ಗೌರಿಯ ರಮಣ3
--------------
ಚಿದಾನಂದ ಅವಧೂತರು
ಶ್ರೀ ಕೇಶವ ತೀರ್ಥ ಸ್ತೋತ್ರ107ಸೂರಿಪ್ರಾಪ್ಯ ಘೃಣಿಶೌರಿಶ್ರೀರಮಾಪತಿ ಪ್ರಿಯರುಸೂರಿವರ ಬ್ರಹ್ಮಣ್ಯ ತೀರ್ಥ ಆರ್ಯರ ಸುಸರೋಜಕರಜಾತ ಜಗತ್ಖ್ಯಾತ ವ್ಯಾಸರಾಜಾರ್ಯರಹಸ್ತಸುವ್ರತ ನಿಜೋತ್ಪನ್ನ ಕೇಶವ ತೀರ್ಥಾರ್ಯರ್ಗೆ ವಂದೇ ಪಮುಖ್ಯಪ್ರಾಣಪವಮಾನ ಸುರಮಾತರೀಶ್ವಗುರುಪ್ರದ್ಯುಮ್ನ ಅನಿರುದ್ಧ ಪುರುಷ ನರಸಿಂಹ ಶ್ರೀಶಪ್ರಜ್ಯೋತಿರ್ಮಯ ಉಗ್ರವೀರ ವಿಶ್ವವ್ಯಾಪಿ ವಿಷ್ಣುವುಮೃತ್ಯು ಮೃತ್ಯು ಸ್ತಂಭದಿಂ ಬಂದು ಪ್ರಹ್ಲಾದನ್ನ ಪೊರೆದ 1ನರಸಿಂಹನಾಜೆÕಯಿಂ ಪ್ರಹ್ಲಾದ ಸಿಂಹಾಸನವೇರೆನೆರೆದಿದ್ದ ಸುಮನಸರು ಹರಿಭಕ್ತ ಜನರುಸೂರಿಗಳುಆ ವೈಭವ ಕಂಡುಕೇಳಿಜಯಪರಾಕ್ಪರಾಕೆಂಬ ದಿವ್ಯಾನುಭವಜ್ಞಾನಿಕೇಶವ ತೀರ್ಥ2ಹಿಂದಿನ ಪ್ರಹ್ಲಾದಇಂದುವ್ಯಾಸಮುನಿರಾಜರಾಗಿದುಸ್ತರ್ಕ ಧ್ವಂಸಕರ ತರ್ಕತಾಂಡವ ಬೋಧಿಸಿಹಿತಕರ ನ್ಯಾಯ ಪೀಯೂಷವ ಉಣಿಸಿ ಆಹ್ಲಾದಚಂದ್ರಿಕಾಸುಖ ನೀಡಿ ಯತ್ಯಾಶ್ರಮ ಇತ್ತರಿವರ್ಗೆ 3ಶ್ರೀವ್ಯಾಸರಾಯರು ಅನುಗ್ರಹಿಸಿ ಕೇಶವ ತೀರ್ಥದಿವ್ಯ ನಾಮಾಂಕಿತವ ಪ್ರಣವಾದಿ ಮಂತ್ರ ಉಪದೇಶನಿವ್ರ್ಯಾಜ ನಿಶ್ಚಲ ಭಕ್ತಿಮಾನ್ ವಿನಯಸಂಪನ್ನ ಈಶಿಷ್ಯನಿಗೆ ಕೊಟ್ಟದ್ದು ಸಜ್ಜನರು ಹೊಗಳಿದರು 4ಶ್ರೀರಂಗದಲಿ ಉತ್ತರಾರಣ್ಯ ಬೀದಿಯಲ್ಲಿಹಶ್ರೀ ಕೃಷ್ಣಮಂದಿರದಿ ಶ್ರೀವ್ಯಾಸರಾಯ ಮಠದಿಚಾರುತರ ಚತುರ್ವಿಂಶತ್ ವಿಷ್ಣು ಮೂರ್ತಿಗಳುಂಟುತತ್ರಗೋಲಕ ಕ್ರಮದಿ ಶ್ರೀಹರಿಯ ಚಿಂತಿಪರು 5ಬ್ರಹ್ಮ ಗಾಯತ್ರಿ ಮನು ಇಪ್ಪತ್ತು ನಾಲ್ಕಕ್ಷರದಲಿತಂ ಆದಿ ಯಾತ್ ಅಂತ ಒಂದೊಂದರಲಿ ಒಂದುಹರಿಯಅಮಲ ಸುಪೂರ್ಣ ಕೇಶವಾದಿ ಕೃಷ್ಣಾಂತರೂಪಆ ಮೊದಲು ತಂ ಅಲ್ಲಿ ತಾರಕೇಶವನು ಧ್ಯಾತವ್ಯ 6ಬಲದಕೆಳಗಿನ ಕರದಿಪದ್ಮ ಮೇಲೆ ಶಂಖಜ್ವಲಿಪ ಚಕ್ರವು ಮೇಲಿನ ಎಡದ ಹಸ್ತದಲ್ಲಿಕೆಳಗಿನ ಎಡಕರದಿ ಗದೆಯ ಹಿಡಿದಿಹಜಲಜಸಂಭವ ಭವಾದ್ಯರ ಸ್ವಾಮಿ ಕೇಶವನು 7ದಶಪ್ರಮತಿ ಸರಸೀರುಹನಾಭ ನರಹರಿಅಸಮಮಾಧವಅಕ್ಷೋಭ್ಯ ಜಯವಿದ್ಯಾಧಿರಾಜಅಸಚ್ಛಾಸ್ತ್ರಗಿರಿಕುಲಿಶ ರಾಜೇಂದ್ರ ಜಯಧ್ವಜಶ್ರೀಶವಶಿ ಪುರುಷೋತ್ತಮ ಬ್ರಹ್ಮಣ್ಯ ವ್ಯಾಸತೀರ್ಥ 8ಹಂಸವಿಧಿ ಸನಕಾದಿಗಳಾರಭ್ಯ ಸನಾತನಸುಶೀಲ ಈಗುರುಪರಂಪರೆಯಲಿ ವ್ಯಾಸಮುನಿಸರೋಜ ಕರಜಾತ ಕೇಶವ ತೀರ್ಥರು ಹೀಗೆಕೇಶವನ್ನ ಧ್ಯಾನಿಸಿ ಒಲಿಸಿ ಕೊಂಡದ್ದು ಸಹಜ 9ಹರಿಪ್ರೀತಿ ಸಮರ್ಪಕ ಯತ್ಯಾಶ್ರಮ ಧರ್ಮಗಳಚರಿಸುತಗುರುಸೇವಾರತರಾಗಿ ಇರುತಿಹಬರುವ ಶಿಷ್ಯರಿಗೆ ಸೌಲಭ್ಯ ವಾತ್ಸಲ್ಯ ನೀಡುತಸೇರಿದರು ಪರಮತಿ ವೇಲೂರೆಂಬ ಕ್ಷೇತ್ರವನ್ನು 10ಶಲ್ಯ ರಾಜನ್ನ ಜ್ಞಾಪಿಸುವ ಶುಕವನ ಕ್ಷೇತ್ರದಿಂಒಳ್ಳೆಯ ರಸ್ತೆ ಹದಿನೈದು ಕ್ರೋಶ ದೂರದಿ ಇಹುದುಪ್ರಹ್ಲಾದ ವರದ ನಾರಸಿಂಹ ನಾಮಗಿರಿ ದೇವಿಬಲಜ್ಞಾನರೂಪ ಮಾರುತಿ ಇರುವ ನಾಮಕಲ್ಲು 11ನಾಮಶೈಲದಿಂದ ರಂಗ ತಾನೇ ತೋರಿದ ವೇಂಕಟರಮಣ ಪಶುಪತಿಕ್ಷೇತ್ರ ಕರೂರಿಗೆ ಹೋಗುವರಮಣೀಯಮಾರ್ಗಮಧ್ಯದಲ್ಲಿಯೇ ಇರುತಿಹವುಪರಮತಿ ವೇಲೂರು ಸುಪುಣ್ಯ ಕಾವೇರಿಯು 12ಸರ್ವಸುಗುಣಾರ್ಣವನುಅನಘಸರ್ವೋತ್ತಮನುಸರ್ವಕರ್ತಾಗಮೋದಿತನು ಜಿಜ್ಞಾಸ ಜನ್ಯ ಜ್ಞಾನಸಂವೃದ್ಧಿ ಸಾಧನಾನುಕೂಲ ಚತುರ್ವೇದಿ ಮಂಗಳದಿವ್ಯ ಪರಮತಿಯು ಅಲ್ಲಿ ಲೌಕೀಕರೇ ತುಂಬ 13ಸಪರಮತಿ ಸಮೀಪದಲ್ಲೆ ಚನ್ನಕೇಶವ ವೇಲಿಪುರವುಂಟು ಅದನ್ನ ವೇಲೂರೆಂದು ಹೇಳುವರುಪರಮತಿ ವೇಲೂರು ಕಾವೇರಿ ಪೋಷಿತವು ತೀರಪರಮಭಾಗವತಋಷಿ ಸಂಚಾರ ವಾಸಸ್ಥಾನ14ರಸಪೂರಿತ ಮಾವು ತೆಂಗು ಕದಲೀಫಲವೃಕ್ಷಬಿಸಜಮಲ್ಲಿಗೆ ಜಾಜಿಕುಸುಮಪರಿಮಳವುಹಂಸ ಪಾರಾವತ ತಿತ್ತರಾಶುಕ ಇಂಥಾ ಸುಪಕ್ಷಿಶ್ರೀಶನಂಘ್ರಿ ಸಂಬಂಧಿ ವರಜಾಯುಕ್ ಕಾವೇರೀ ಸರಿತ 15ಶ್ರೀಮನೋರಮ ಕೇಶವನ್ನ ಆರಾಧಿಸಿ ಧ್ಯಾನಿಸಲುಈ ಮನೋಹರ ಶಾಂತ ಸುಪವಿತ್ರ ಕ್ಷೇತ್ರವೆಂದುತಮ್ಮಯ ಬಾಹ್ಯ ಚಟುವಟಿಕೆಗಳ ನಿರೋಧಿಸಿಸಮೀರಸ್ಥ ಶ್ರೀಹರಿಯ ಧ್ಯಾನಾದಿರತರಾದರು 16ಯುಕ್ತಕಾಲದಿ ಈ ಸಂನ್ಯಾಸರತ್ನ ಕೇಶವಾರ್ಯರುಭಕ್ತಿವೈರಾಗ್ಯ ಯುಕ್ ಜ್ಞಾನ ಸಂಪನ್ನ ಶ್ರೀಹರಿಯಚಿಂತಿಸುತ ತ್ರಿಧಾಮನ ಪುರವನ್ನ ಯೈದಿದರುವೃಂದಾವನದಲ್ಲಿ ಒಂದಂಶದಲಿ ಇರುತಿಹರು 17ಕಾಲಧೀರ್ಘದಲಿ ಗ್ರಾಮಜನ ಬದಲಾವಣೆಯಿಂಎಲ್ಲಿ ವೃಂದಾವನ ಸ್ಥಾನ ಇದೆ ಎಂದು ಸರಿಯಾಗಿಹೇಳುವವರು ಸುಲಭದಿ ದೊರಕುವುದು ಶ್ರಮತಿಳಿದವರ ಸಹಾಯದಿಂ ಗುರುದಯದಿ ಸಾಧ್ಯ 18ಸದಾಪಾಣಿ ಭೀಮಸೇನ ಆರಾಧ್ಯ ಶ್ರೀಕೃಷ್ಣನು ಮತ್ತುಪದ್ಮಾಲಯಾಪತಿ ಪುಂಡರೀಕಾಕ್ಷನ್ನು ಶ್ರೀವಿಶ್ವನ್ನುಮಧ್ವಸ್ಥ ಪರಮಾತ್ಮನ್ನು ಸ್ಮರಿಸಿ ವೃಂದಾವನವಸಂದರ್ಶನ ಮಾಡಿ ಸೇವಾ ಸ್ವಗುರೂಪದೇಶವಿಧಿ19ಸ್ಮರಣ ದರ್ಶನ ಪ್ರದಕ್ಷಿಣ ನಮನ ಕೀರ್ತನಶಾಸ್ತ್ರಾಧ್ಯಯನ ಪ್ರವಚನ ಭಕ್ತಿಯಿಂದಲಿ ಪೂಜಾಪರಿಶುದ್ಧ ನೈವೇದ್ಯ ಎಷ್ಟೆಷ್ಟು ಸಾಧ್ಯವು ಅಷ್ಟುಹರಿಗುರು ಪಾದೋದಕ ಶುಭದ ಸರ್ವಾಭೀಷ್ಟದ 20ಆದರದಿ ಈ ಸ್ತೋತ್ರ ಪಠನ ಶ್ರವಣ ಮಾಳ್ಪರ್ಗೆಭಕ್ತಿಮೇಧಆಯುಷ್ಯ ಆರೋಗ್ಯ ಸೌಭಾಗ್ಯಗಳೀವಪದ್ಮಜನಪಿತನು ಶ್ರೀ ಪ್ರಸ್ನನ ಶ್ರೀನಿವಾಸನುವಂದೇ ವಿಧಿಮಧ್ವ ವ್ಯಾಸಮುನಿ ಕೇಶವಾರ್ಯಾಂತಸ್ಥ 21|| ಶ್ರೀ ಶ್ರೀ ಕೇಶವ ತೀರ್ಥ ಸ್ತೋತ್ರ ಸಂಪೂರ್ಣಂ ||
--------------
ಪ್ರಸನ್ನ ಶ್ರೀನಿವಾಸದಾಸರು
ಶ್ರೀ ಗೋಪಾಲ ದಾಸಾರ್ಯವಿಜಯಶ್ರೀ ಲಕ್ಷ್ಮೀ137ಭಾಗಣ್ಣ ಗೋಪಾಲ ದಾಸಾರ್ಯರ್ ಪಾದಕ್ಕೆಬಾಗಿ ಶರಣಾದೆನು ಸತತ ನಿಶ್ಚಯದಿಜಗದಾದಿಕರ್ತಅಜಅಘದೂರ ಸುಗುಣಾಬ್ಧಿತುರಗಾಸ್ಯವಿಜಯಶ್ರೀನಿವಾಸ ಪ್ರಿಯತಮರು || ಭಾಗಣ್ಣಪನಾರಸುಗುಣಾರ್ಣವನು ಶ್ರೀರಮಾಪತಿ ಹಂಸಸರಿಸಿಜಾಸನಸನಕದೂರ್ವಾಸಇಂಥಾಪರಮೋತ್ಕøಷ್ಟಗುರುಪರಂಪರೆಗೆ ಶರಣೆಂಬೆಪುರುಷೋತ್ತಮಾಚ್ಯುತ ಪ್ರೇಕ್ಷರಿಗೆ ಶರಣು 1ಸದಾಗಮಾಮಾಯಗಳು ಬ್ರಹ್ಮ ಧಾಮವೆÉಂದುಉದ್ಘೋಷಿಸುತಿವೆ ಮುಖ್ಯವಾಯುದೇವಮಾತರಿಶ್ವಸೂತ್ರಪವಮಾನಮುಖ್ಯಪ್ರಾಣಪ್ರತಿರಹಿತ ಬಲಜ್ಞಾನರೂಪಹನುಮ ಭೀಮ ಮಧ್ವನ್ನ2ಪ್ರೋಚ್ಚಸುರವರ ವಾಯುವಿನ ತೃತೀಯಾವತಾರ ಮಧ್ವಅಚ್ಯುತಪ್ರೇಕ್ಷರಲಿ ಸಂನ್ಯಾಸಕೊಂಡುಪ್ರಚ್ಛನ್ನ ಬೌದ್ಧಾದಿ ಮತ ಪಂಕದಿ ಬಿದ್ದಿದ್ದಸಜ್ಜನರನ್ನುದ್ಧರಿಸಿ ಸತ್‍ಜ್ಞಾನವಿತ್ತ 3ಶ್ರೀ ಮಧ್ವಗುರು ವಂಶಸ್ಥಪದ್ಮನಾಭನರಹರಿಮಾಧವಾಕ್ಷೋಭ್ಯಜಯ ವಿದ್ಯಾಧಿರಾಜವಿದ್ಯಾಧಿರಾಜರ ಶಿಷ್ಯರು ಈರ್ವರುಸಾಧು ಉತ್ಕøಷ್ಟರೀ ತೀರ್ಥರ್‍ಗಳಿಗೆ ಶರಣು 4ಶ್ರೀ ವಿದ್ಯಾಧಿರಾಜರ ಪ್ರಥಮ ಶಿಷ್ಯ ರಾಜೇಂದ್ರಹಸ್ತಪದ್ಮ ಜಾತರು ಜಯಧ್ವಜಾರ್ಯಮಾಧವನ ಏಕಾಂತ ಭಕ್ತ ಪುರುಷೋತ್ತಮರುತತ್ಸುತ ಬ್ರಹ್ಮಣ್ಯರೀ ಸರ್ವರಿಗೂ ಶರಣು 5ಪದ್ಮನಾಭತೀರ್ಥಜ ಲಕ್ಷ್ಮೀಧರರ ವಂಶಜಾತ ಸುವರ್ಣವರ್ಣ ತೀರ್ಥಾಭಿದರಸುತಲಕ್ಷ್ಮೀ ನಾರಾಯಣ ಯತಿವರ್ಯ ಶ್ರೀಪಾದರಾಜರು ಈ ಸರ್ವರಿಗೂ ಶರಣು 6ಶಿಂಶುಮಾರಪುಚ್ಛಶ್ರಿತರ ಅವತಾರರೇವಸುಮತೀಖ್ಯಾತ ಶ್ರೀಪಾದರಾಜರಲಿಭಾಷ್ಯಾಧಿಗಳ ಕಲಿಯೇ ಬ್ರಹ್ಮಣ್ಯ ತೀರ್ಥರಶಿಷ್ಯವರ್ಯ ವ್ಯಾಸರಾಜರು ಸೇರಿದರು 7ವಾದಿಗಜಕೇಸರಿಮಧ್ವಮತೋದ್ಧಾರರುಮೇದಿನೀ ಪ್ರಖ್ಯಾತ ಮಹಾಭಾಗವತರುಸಾಧುಜನ ಆಹ್ಲಾದ ಶ್ರೀ ವ್ಯಾಸರಾಜರಲಿಸದಾ ಶರಣು ಪಾಲಿಪರುಪ್ರತಿಕ್ಷಣ ದಯದಿ8ಆನಂದ ಮುನಿಕರ ಅರವಿಂದ ಸಂಜಾತವಿಷ್ಣುತೀರ್ಥ ವಂಶಜ ವಾಗೀಶರಹಸ್ತವನರುಹೋತ್ಪನ್ನರು ಸುಮಹಾಮಹಿಮರುಘನದಯಾನಿಧಿ ವಾದಿರಾಜ ಸ್ವಾಮಿಗಳು9ಯುಕ್ತಿಮಲ್ಲಿಕಾ ಮೊದಲಾದ ತತ್ವಬೋಧಕವಾದಗ್ರಂಥ ಪದ್ಯ ಕೀರ್ತನೆಗಳ್ ಸಜ್ಜನರಿಗಿತ್ತುಸೋದೆಯಲ್ಲಿ ತ್ರಿವಿಕ್ರಮಮೂರ್ತಿ ನಿಲ್ಲಿಸಿಹರುಭೂಧರಹಯಾಸ್ಯಪ್ರಿಯತಮ ಶ್ರೀ ವಾದಿರಾಜಾರ್ಯ10ತೀರ್ಥಪಾದ ಶ್ರೀಪತಿಯು ಬ್ರಹ್ಮ ಶಿವಾದ್ಯಮರ ಸಹಸದಾ ಸನ್ನಿಹಿತವಾಗಿರುವ ಮತ್ತುತೀರ್ಥವನ ಕ್ಷೇತ್ರಗಳೊಳುತ್ತಮ ವೃಂದಾವನದಿಅತ್ಯಕ್ತ ದೇಹದಿ ಕುಳಿತಿಹರು ಗುರುರಾಟ್ 11ಬುಧರು ತಿಳಿದಂತೆಯೇ ಬ್ರಹ್ಮಾಂಡ ಪುರಾಣದಲ್ಲಿವಾದಿರಾಜರು ಭಾವೀಕಲ್ಪ ಮುಖ್ಯವಾಯುಎಂದು ಪ್ರಸಿದ್ಧರೀ ಸುದುಪಾಸ್ಯ ಮದ್ಗುರುವರ್ಯರಲ್ಲಿ ಶರಣಾದೆಸದಾನಮೋ ಲಾತವ್ಯಾಚಾರ್ಯ ಕರುಣಾಬ್ಧೆ 12ವಿದ್ಯಾಧಿರಾಜರ ಎರಡನೇ ಶಿಷ್ಯರುಕವೀಂದ್ರ ಪೀಳಿಗೆಯ ಶ್ರೀರಾಮಚಂದ್ರದ್ವಿತೀಯಶಿಷ್ಯ ವಿದ್ಯಾನಿಧಿ ವಂಶಜಾತರುಆದ್ಭುತಮಹಿಮರು ಕರುಣಿ ರಘೋತ್ತಮರು 13ಕಾಮಿತಪ್ರದ ಟೀಕಾಭಾವ ಬೋಧಾರ್ಯರುಎಮ್ಮಪಾಲಿಪ ರಘೋತ್ತಮರಿಗೆ ಶರಣುರಾಮಚಂದ್ರರ ಮೊದಲನೆ ಶಿಷ್ಯ ವಿಬುಧೇಂದ್ರಈ ಮಹಾತ್ಮರ ವಂಶಜರು ಸರ್ವರಿಗೂ ನಮಿಪೆ 14ದುರ್ಜನರ ಕುಮತಗಿರಿವಜ್ರ ವಿಜಯೀಂದ್ರರುಸಜ್ಜನರುದ್ಧಾಕರು ಸುಧೀಂದ್ರಸೂರಿನಿಜವಿರಾಗಿ ಯಾದವೇಂದ್ರ ವಿಜ್ಞಾನಿಯುಭಜಕಜನಸುರಧೇನುರಾಘವೇಂದ್ರಾರ್ಯ15ಯಾರುಹಿಂದೆ ಏಡಮೂಕ ಬ್ರಾಹ್ಮಣನಾಗಿದ್ದಾಗಯಾರದ್ವಾರಾ ಶ್ರೀ ವಾದಿರಾಜರು ಸ್ವಪ್ನದಲ್ಲಿಉತ್ಕøಷ್ಟ ಶುಭತಮ ವೃಂದಾವನಾಖ್ಯಾನ ತಾವೇ ಹೇಳಿದರುಆಸೂರಿ ವಿಶ್ವಪ್ರಿಯಾರ್ಯರಿಗೆ ಶರಣು 16ಸೂರಿಕುಲತಿಲಕರು ವಾದಿಕರಿಹರಿ ಖ್ಯಾತಸಿರಿವ್ಯಾಸರಾಯರಲಿ ಮುದ್ರಿಕೆಯಕೊಂಡನಾರದರ ಅವತಾರರೆಂದು ಪ್ರಸಿದ್ಧರುಪುರಂದರದಾಸಾರ್ಯ ಕರುಣಾಂಬುಧಿಗೆ ಆನಮಿಪೆ17ನಿರ್ಝರ ವೃಂದ ಋಷಿ ಭೃಗುಮುನಿಯೇ ಧರೆಯಲ್ಲಿವಿಜಯದಾಸಾರ್ಯರಾಗಿ ಮೆರೆದವರ್ಗೆ ಶರಣುವಿಜಯವಿಟ್ಠಲನೊಲಿಯೆ ಜ್ಞಾನ ಭಕ್ತಿಸತ್ತತ್ವಸಜ್ಜನರಿಗೆ ಬೋಧಿಸಿದ ನಿವ್ರ್ಯಾಜ ಕರುಣಿ 18ಆಲಸ್ಯದಿನಾ ಮೈಥಿಲೀಪತಿ ಪಲ್ಲಿಯಲ್ಲಿಮಲಗಿರಲು ಶ್ರೀ ಗೋಪಾಲದಾಸಾರ್ಯರುಬಲುಕರುಣದಲ್ಲಿ ಮುಂದೆ ನಿಂತು ಯತಿಕೃತಮಾಲೋಲ ಪೂಜೆನೋಡಿ ಒದಗಿದ ಗುರುವರ್ಯ 19ಉಮಾಸೂನು ವಿಘ್ನಹರ ಕ್ಷಿಪ್ರಪ್ರಸಾದನುಈ ಮಹೀಯಲ್ಲಿ ಗೋಪಾಲದಾಸರಾಗಿರಮಾಪತಿಯ ಸೇವಿಸಿ ಸಜ್ಜರನ್ನುದ್ಧರಿಸಿಹರುನಮಿಸಿ ಶರಣಾದೆ ಈ ಉದಾರ ಕರುಣಿಗೆ 20ಸುಪವಿತ್ರೆ ಸೌಭಾಗ್ಯಪ್ರದ ಮಂತ್ರಗಳನೆಗೆಉಪದೇಶಮಾಡಿದ ಕಪಿಗೋತ್ರದವರುಸುಪುಣ್ಯ ಶೇಶ್ಲೀಕರು ಉದಾರ ಸಾತ್ವಿಕರುಶ್ರೀಪತಿ ಕೃಷ್ಣಪ್ರಿಯ ಶ್ರೀರಾಮಾಚಾರ್ಯರಿಗೆ ಶರಣು 21ತರುಣತನಾರಭ್ಯ ಹರಿದಾಸತ್ವ ಒದಗಿಸಿಪರಿಪರಿ ವಿಧದಲ್ಲಿ ಔದಾರ್ಯದಿಂದಕಾರುಣ್ಯಬೀರಿ ಕಾಪಾಡುತಿರುವಂಥಾ ಈಹರಿಪ್ರತಿಮಾರೂಪ ಗುರುಸರ್ವರಿಗೂತಂದೆ ತಾಯಿಗೂ ಶರಣು 22ದಧಿಶಿಲಾ ಎಂಬುವರು ಆಡಂಬರ ಪ್ರಿಯರುಮಂದಿಗಳು ಮೊಸರು ಕಲ್ಲೆಂದು ಕರೆಯುವರುಸಾಧುವೈಷ್ಣವವಿಪ್ರಮುರಾರಿರಾಯರುಸಾಧ್ವಿ ವೆಂಕಮ್ಮ ದಂಪತಿ ಇದ್ದ ಕ್ಷೇತ್ರ 23ಪುತ್ರ ರತ್ನಗಳು ನಾಲ್ಕು ಈ ದಂಪತಿಗೆಅಗ್ರಜಭಾಗಣ್ಣ, ಸೀನಪ್ಪ, ದಾಸಪ್ಪತರುವಾಯ ರಂಗಪ್ಪ ನಾಲ್ಕನೆಯವನಾಗಿಗೌರವದಿ ಚರಿಸಿತು ಮುರಾರಿರಾಯರ ಕುಟುಂಬ 24ಸಂಸಾರಾವಸ್ಥೆಯಲ್ಲಿ ನಶ್ವರ ಸುಖ ದುಃಖಮಿಶ್ರವಾಗಿಯೆ ಉಂಟು ಆ ನಿಯತಿಯಲ್ಲಿಭೂಸುರವರ್ಯರು ಮುರಾರಿರಾಯರು ಸ್ವರ್ಗತಾ ಸೇರಿದರುಸತಿಸುತರನ್ನು ಬಿಟ್ಟು25ಬಾಲಕರನ್ನು ಪ್ರಿತ್ರವ್ಯರು ಲೆಕ್ಕಿಸದಿರಲುಮಾಲೋಲ ಪಾಲಿಸುವ ಕರ್ತನ್ನೇ ನಂಬಿಶೀಲೆ ವೆಂಕಮ್ಮ ಮಕ್ಕಳನ್ನ ಕರಕೊಂಡುಒಳ್ಳೆಯ ಜನಪದ ಶಂಖಪುರವೈದಿದಳು 26ಶಂಖಪುರ ಹತ್ತಿರವೇ ಹನೂಮಂತನ ಗುಡಿಮಕ್ಕಳ ಸಹ ಅಲ್ಲಿ ವಾಸಮಾಡಿಮುಖ್ಯ ಪ್ರಾಣದೇವರ ಸೇವಿಸಿದ ಫಲವಾಗಿಚಿಕ್ಕ ಜಮೀನು ಕೊಂಡಳು ದಾನವಾಗಿ 27ದಾನ ಕೊಟ್ಟವನಿಗೆ ಬಲು ಪುಣ್ಯ ದೊರೆಯಿತುದಾನಿಗಳುಭಾಗವತಶ್ರೇಷ್ಠರಾದ್ದರಿಂದಹನುಮ ಗೋಪಾಲಾನುಗ್ರಹದಿಂದ ಐವರೂಧಾನ್ಯಸಮೃದ್ದಿ ತೊರೆದರು ಆತಂಕ 28ಕುಲ್ಕರ್ಣಿ ಎಂಬಂಥ ಸರ್ಕಾರ ಅಧಿಕಾರಿವೆಂಕಮ್ಮನಲ್ಲಿ ಮಾತ್ಸರ್ಯ ದ್ವೇಷ ಬೆಳೆಸಿಸರ್ಕಾರ ಕೆರೆ ನೀರು ಕದ್ದು ಹೊಯಿಸಿದಳೆಂದು ಆಚಿಕ್ಕ ಜಮೀನ ಒಡಮೆ ಕಿತ್ತಿಕೊಂಡ 29ಸಾಧ್ವೀ ವೆಂಕಮ್ಮನಿಗೂ ಮಹಾತ್ಮ ತತ್ಪುತ್ರರಿಗೂಅಧಮ ಅಧಿಕಾರಿ ಮಾಡಿದ ದ್ರೋಹದಿಂದಪುತ್ರ ಸಂತಾನ ವಂಶಕ್ಷೀಣವಾಯಿತು ಅವಗೆಅಂದಿನಿಂದ ಕೆರೆ ಅದ್ಯಾಪಿ ನೀರಿಲ್ಲ ಆ ಕೆರೆಯಲ್ಲಿ 30ದೀನರಿಗೂ ಸಾಧು ಮಹಾತ್ಮರಿಗೂ ಮಾಳ್ಪಸಣ್ಣದೋ ದೊಡ್ಡದೋ ದ್ರೋಹಕ್ಕೆ ದಂಡನಾಅನುಭವ ಕ್ಷಿಪ್ರದಲ್ಲೋ ಮೆಲ್ಲಗೋ ಅಪರಾಧಿ ಮೂರ್ಖಗೆದೀನ ರಕ್ಷಕ ಸತ್ಪತಿ ಶ್ರೀಹರಿಈವ31ಭಾಗಣ್ಣ ಸೀನಪ್ಪ ದಾಸಪ್ಪ ರಂಗಪ್ಪಲೌಕಿಕ ವಿದ್ಯಾ ಕಲಿತು ಉಪಾಧ್ಯಾಯರಲ್ಲಿಭಾಗಣ್ಣನಿಗೆ ಶಾನುಭೋಗ ಮುಂಜಿಮಾಡಿಭಗವದ್ವಿಷಯ ಕಲಿತರೂ ಭಾಗಣ್ಣ 32ತತ್ಕಾಲ ಲೌಕಿಕ ಶ್ರೀತನ ಕೊರತೆ ನೋಡಿಬಂಧುಗಳಿವರನ್ನುದಾಸೀನಮಾಡಿದರುಇಂದಿರಾಪತಿವೆಂಕಟಕೃಷ್ಣಗೋಪಾಲಬಂದು ಶ್ರೀ ಒದಗಿಸಿದ ಕ್ಷಿಪ್ರದಲೆ ಇವರ್ಗೆ 33ಬ್ರಹ್ಮಚಾರಿ ಭಾಗಣ್ಣ ಗಾಯತ್ರೀ ಮಂತ್ರವಅಹರಹ ಸೂಕ್ಷ್ಮಾರ್ಥಅನುಸಂಧಾನವಿಹಿತ ಶ್ರದ್ಧಾ ಉದ್ಭಕ್ತಿಪೂರ್ವಕ ಜಪಿಸೆಶ್ರೀ ಹಯಾಸ್ಸ ನಾರಾಯಣನು ಒಲಿದ ಕ್ಷಿಪ್ರದಲೆ 34ವೇದೋಚ್ಚಾರಣವೇ ಗಾನವು ಜಗದ್ರಕ್ಷಣೆಯೇ ತ್ರಾಣವುಮಾಧವನೇ ಗಾಯತ್ರಿನಾಮ ಹಯಗ್ರೀವಭೂತಪೂರ್ಣವಾಗ್ವಶ್ರೀ ಪೃಥ್ವೀ ಆಶ್ರಯ ಶರೀರವ್ಯಾಪ್ತನುಹೃದಯ ಪ್ರಾಣಾಧಾರದಿವ ಪರಸ್ವರೂಪಪಾದತ್ರಯವು ಜಗತ್ಪಾದಸದೃಶ35ಜ್ಞಾನಸುಖ ಬಲಪೂರ್ಣ ಸರ್ವ ಜಗದಾದಿಕರ್ತದಿನಪತೇಜ ಸ್ಫೂರ್ತಿದ ಚೇಷ್ಟಕಾಧಾರಶ್ರೀ ನಾರಾಯಣದೇವ ನಿನ್ನ ಚಿಂತಿಪೆ ಭಜಿಪೆಅನುಪಮ ಸರ್ವೋತ್ತಮ ನಮೋ ಕೇಶವಾದಿ ನಾಮ 36ಲೌಕಿಕ ವಿಷಯಗಳೊಳ್ ಮನವಾಕ್ಕು ಚಲಿಸದೆಏಕಚಿತ್ತದಿ ಗಾಯತ್ರೀ ಪ್ರತಿಪಾದÀ್ಯಶ್ರೀ ಗಾಯತ್ರೀನಾಮ ನಾರಾಯಣನನ್ನಭಾಗಣ್ಣ ಜಪಿಸಿದರು ಕಂಡರು ಶ್ರೀಕರನ್ನ 37ಏಕಾಂತದಲ್ಲಿ ವೃಕ್ಷಮೂಲದಲ್ಲಿ ಕುಳಿತಿದ್ದಭಾಗಣ್ಣನ ಜಪಕೆಡಿಸಿ ಓರ್ವ ದುಷ್ಟಹಾಕಿದನು ಕುದಿನೀರು ಬೊಬ್ಬೆಗಳ್ ಅವನ ಮೇಲೆದ್ದವುಚಿಕಿತರಾಗಿ ಜನರು ಹೊಗಳಿದರು ಭಾಗಣ್ಣನ 38ಮತ್ತೊಂದುದಿನ ಇದಕೆÀ ಮುಂದೆಯೋ ಹಿಂದೆಯೋಸುತ್ತಿ ಭಾಗಣ್ಣ ವೃಕ್ಷಮೂಲದಲಿ ಸರ್ಪಹಿತದಿ ಆಶೀರ್ವದಿಸಿ ಪೋದಂತೆ ಪೋಯಿತುಇದು ನೋಡಿ ಜನರು ಕೊಂಡರು ಭೀತಿ, ಆಶ್ಚರ್ಯ ಮರ್ಯಾದೆ 39ಅಂದು ಮೃತಸರ್ಪ ಅರಿಯರಿಯರು ಶಮೀಕರು ಸಮಾಧಿಯಲಿಇಂದುತನ್ನ ಸರ್ಪ ಸುತ್ತಿರುವುದು ಭಾಗಣ್ಣ ಅರಿಯರುಇಂದಿರೇಶ ಒಲಿದವನಿವನೆಂದು ಶೇಷನೇ ಆಲಿಂಗಿಸಿದನೋಸ್ಕಂಧ ತನ್ನಯ ಸಹೋದರನೆಂದಪ್ಪಿ ಕೋಂಡನೋ 40ತತ್ವಮಾತೃಕಾನ್ಯಾಸಗಳ ಚರಿಸಿಮಂತ್ರ ಮೂಲಪ್ರಣವಅಷ್ಟಾಕ್ಷರೀ ಗಾಯತ್ರೀಭಕ್ತಿ ಪೂರ್ವಕ ಜಪಿಸಿ ಹೊರ ಒಳಗೆ ಶ್ರೀಹರಿಯವ್ಯಾಪ್ತಿವಿಜ್ಞಾನಪುಟ್ಟಿತು ಈ ಚೌತಾಪರೋಕ್ಷಿಗೆ41ವ್ಯಾಪ್ತಿ ದರ್ಶಿಯು ಇವರು ಶ್ರೀ ವಿಷ್ಣು ಅನುಗ್ರಹದಿಇಂದಿನ ಹಿಂದಿನ ಮುಂದಿನ ವಿಷಯ ಜ್ಞಾನವೇದ್ಯವಾಯಿತು ಹರಿಸ್ಮರಣಾ ಪೂರ್ವ ಆಲೋಚನದಿಬಂದು ಕೇಳುವವರಿಗೆ ಯೋಗ ಪೇಳಿದರು 42ಯೋಗಕ್ಷೇಮ ಸರ್ವಕೂ ನಿಯಾಮಕನು ಹರಿಯೇವೆಭಾಗಣ್ಣ ಈತತ್ವಜ್ಞಾನ ಪೂರ್ವಕದಿಲೌಕಿಕ ಧನ ಅಪೇಕ್ಷಿಸದಿದ್ದರೂ ಜನರುಬಾಗಿ ದ್ರವ್ಯಗಳಿತ್ತು ಬೇಡಿದರು ಸ್ವೀಕರಿಸೆ 43ಭವಿಷ್ಯ ಪೇಳುವುದರಲ್ಲಿ ಖ್ಯಾತಿ ಹರಡಿದ್ದಲ್ಲದೆಸರ್ವೇಶನ ಸ್ತೋತ್ರಕವನ ಪಟು ಎಂದುಸರ್ವರೂ ಕೊಂಡಾಡಿ ಆ ಊರಿಗೆ ಬಂದ ಪ್ರಖ್ಯಾತಕವಿಯನ್ನ ನಿಗ್ರಹಸಿ ಓಡಿಸಿದರು ಧೀರ 44ದಿಗ್ವಜಯ ಜಯಶೀಲನೆಂದು ಖ್ಯಾತ ಆಕವಿಭಾಗಣ್ಣ ಸೋಲಿಸಿ ಓಡಿಸಿದ್ದುಭಾಗಣ್ಣನ ಪ್ರಭಾವವ ಹರಡಿಸಿತು ನಾಡಲ್ಲಿಭಾಗಣ್ಣಗೆ ಸನ್ಮಾನ ಮಾಡಿದರು 45ಗದ್ವಾಲರಾಜನು ಇನ್ನೂ ಬಹು ಪ್ರಮುಖರುಬಂದು ನೇರವಾಗಿ ಭಾಗಣ್ಣನಲ್ಲಿವಂದಿಸಿ ಸನ್ಮಾನ ಪ್ರಶಸ್ತಿಗಳ ಅರ್ಪಿಸಿಪೋದರು ಶ್ಲಾಫಿಸುತ ತಮ್ಮ ತಮ್ಮ ಸ್ಥಳಕೆ 46ಹಿಂದೆ ದ್ರವ್ಯ ಹೀನನಾಗಿದ್ದ ಭಾಗಣ್ಣನಿಗೆಇಂದುಶ್ರೀಕೃಷ್ಣನ ಒಲುಮೆಯಿಂದಬಂದು ಸೌಭಾಗ್ಯ ಶ್ರೀ ದ್ರವ್ಯಗಳುಔದಾರ್ಯದಿ ದಾನಾದಿಗಳ್ ಮಾಡಿದರು 47ಇಷ್ಟರಲ್ಲೇ ಸೀನಪ್ಪ ದಾಸಪ್ಪ ರಂಗಪ್ಪಪ್ರೌಢವಯಸ್‍ಐದಿ ಗದ್ವಾಲು ಹೋಗೆ ಅಲ್ಲಿಮೌಢ್ಯ ಮಾತ್ಸರ್ಯದಿ ರಾಜ್ಯಾಧಿಕಾರಿಗಳುಕಡು ನಿರೋಧ ಮಾಡಿದರು ಮೂವರನ್ನು 48ವೆಂಕಟೇಶನ ಇಚ್ಛಾ ಈಮೂವರು ಅಣ್ಣಭಾಗಣ್ಣ ನಾಶ್ರಯದಲ್ಲೇವೆ ಇದ್ದುಅಗಲದೆ ಶ್ರೀಹರಿಗುಣಾನುವರ್ಣನಾಗಳಸುಗಾನ ಮಾಡುತ್ತಾ ಇರಬೇಕು ಎಂದು 49ಭಾಗಣ್ಣ ಅರ್ಯರು ಗದ್ವಾಲಿಗೆ ಪೋಗಿಸುಗುಣವಂತ ತಮ್ಮಂದಿರನ್ನ ಕರೆತಂದುಅಗಣಿತಗುಣಾರ್ಣವ ಶ್ರೀಯಃ ಪತಿಯ ಸೇವೆಗೆಯೋಗ್ಯೋಪದೇಶ ಪೂರ್ವಕ ತಯಾರು ಮಾಡಿದರು 50ದಾಸಪ್ಪ ಸೀನಪ್ಪ ರಂಗಪ್ಪ ತಮ್ಮ ಜ್ಞಾನಭಕ್ತಿಕಾಶಿಸಿ ವರ್ಧಿಪುದು ದಿನೇ ದಿನೇ ಹೆಚ್ಚಿಶ್ರೀ ಶ್ರೀನಿವಾಸನ ಪ್ರೀತಿಗೆ ಭಾಗಣ್ಣಚರಿಸುವ ಅನ್ನದಾನಾದಿಗಳಲ್ಲಿ ಸೇವಿಸಿದರು 51ದ್ರವ್ಯ ಧಾನ್ಯರಾಶಿಗಳು ತುಂಬಿದ್ದು ಕಂಡುದೇವ ಬ್ರಾಹ್ಮಣ ಸೇವೆಗೆ ಅಕ್ಕಿ ಹೆಚ್ಚು ಬೇಡೆಂದುಯಾವರೂ ಕಾಣದೆ ವೆಂಕಮ್ಮ ಮುಚ್ಚಿಡಲುಯಾವತ್ತೂ ಅಕ್ಕಿಯು ಹುಳುವಾಯ್ತು ಮರುದಿನ 52ಹರಿಬಲುಮೆಯಿಂದ ಭಾಗಣ್ಣ ಈ ರೀತಿ ತೋರಿಸಲುಹರಿಭಕ್ತಿ ವೈರಾಗ್ಯ ಹೆಚ್ಚಿತು ಮಾತೆಗೆಭಾರಿತರ ಕೀರ್ತನಾ ಸೇವೆ ಅತಿಶಯ ಚರ್ಯಅರಿತು ನಾಡೆಲ್ಲವೊ ಕೊಂಡಾಡಿತು ಭಾಗಣ್ಣನ 53ಉತ್ತನೂರು ಸಮೀಪವು ಐಜೀ ಎಂಬುವ ಗ್ರಾಮಉತ್ತಮ ಬ್ರಾಹ್ಮಣ ವೇಂಕಟನರಸಿಂಹಾಚಾರ್ಯದಂಪತಿಗೆ ಪುತ್ರರತ್ನ ವೇಂಕಟರಾಮಾಚಾರ್ಯಮಂದತನ ತೋರಿಸಿದ ಪುಸ್ತಕ ವಿದ್ಯೆಯಲ್ಲಿ 54ಭಾಗಣ್ಣ ಆರ್ಯರ ಪ್ರಭಾವದಲಿ ಆದರವೇಂಕಟನೃಸಿಂಹಾರ್ಯರ ಭಾರ್ಯೆಗೆ ಉಂಟುಭಾಗಣ್ಣನಲಿ ಪೋಗಿ ಮಗನ ತಿದ್ದುವ ಬಗೆಹೇಗೆಂದು ಅರಿಯಿರಿ ಎಂದಳು ಸಾಧ್ವೀ 55ಸಾಧ್ವೀ ಆಸ್ತ್ರೀರತ್ನಳಿಗೆ ಭಾಗಣ್ಣನುಔದಾರ್ಯದಿ ಒದಗುವ ಜ್ಞಾನಿವರ್ಯನೆಂದುಸುದೃಢದಿ ನಂಬಿದರೂ ಆಚಾರ್ಯ ಅರ್ಧಮನಸಿಂಪೋದರು ಕಂಡರು ಭಾಗಣ್ಣನ ಗುಡಿಯಲ್ಲಿ 56ವೇಂಕಟನೃಸಿಂಹಾರ್ಯ ತನ್ನ ಪಾಂಡಿತ್ಯ ಗುರುತನ ನೆನದುಆಕಸ್ಮಿಕ ಬೇಟಿಯಂತೆ ತೋರ್ಪಡಿಸಿವೇಂಕಟೇಶ ತುಳಸೀ ಸನ್ನಿಧಾನದಿ ಸಂಭಾಷಿಸಲುಶೀಘ್ರ ಕಂಡರು ಭಾಗಣ್ಣನ ಜ್ಞಾನಪ್ರಭಾವ 57ಭಾಗಣ್ಣ ಅಭಯವನಿತ್ತು ಆಚಾರ್ಯರನ್ನಹೋಗಿ ಬನ್ನಿ ಆತಂಕಬೇಡ ಮಹಾತ್ಮಮಗ ಸೂರಿಕುಲ ರತ್ನನು ವೇಂಕಟರಾಮಪ್ರಕಾಶಿಪುದು ಆತನ ಜ್ಞಾನಕ್ಷಿಪ್ರದಲೇ ಎಂದರು 58ಭಾಗಣ್ಣ ಆರ್ಯರು ಹೇಳಿದ ರೀತಿಯಲ್ಲೇವೇಂಕಟರಾಮಾರ್ಯ ಏಕವಾರ ಶ್ರವಣದಲ್ಲೇವೇಂಕಟನರಸಿಂಹಾಚಾರ್ಯ ಚಕಿತರಾಗುವಂತೆಅಕಳಂಕ ಪಾಂಡಿತ್ಯಪ್ರೌಢಿಮೆ ತೋರಿಸಿದ 59ಪ್ರತಿದಿನ ಐಜಿಯವರು ಭಾಗಣ್ಣ ದಾಸರೂ ಈರ್ವರುತತ್ವ ವಿಚಾರ ಹರಿಭಜನೆ ಮಾಡಿಒಂದು ದಿನ ಬ್ರಹ್ಮ ಜಿಜ್ಞಾಸ ಸ್ವಾರಸ್ಯದಲಿ ಸಾಯಂಸುಧ್ಯಾಕಾಲ ಅತಿಕ್ರಮವು ಆಯಿತು 60ಸೂರ್ಯಾಸ್ತ ಮನಃಪೂರ್ವಕರ್ತವ್ಯಕರ್ಮಬಿಟ್ಟದೋಷಪ್ರಾಯಶ್ಚಿತ್ತಾಘ್ರ್ಯ ಕೊಡಲಿಕ್ಕೆ ಇರಲುಭಯಬೇಡ ದೋಷವಿಲ್ಲ ಎಂದು ಭಾಗಣ್ಣಾರ್ಯಸೂರ್ಯನ್ನ ತಾನು ನೋಡಿ ತೋರಿಸಿದರು ಐಜೀಗೆ 61ಇಂದ್ರಜಾಲವಲ್ಲವು ಕ್ಷುದ್ರೋಪಾಸನಾದಿಗಳಿಂದಲ್ಲಅರ್ಧರಾತ್ರಿಯಲಿ ಸೂರ್ಯನ್ನ ನೋಡಿ ನೋಡಿಸಿದ್ದುಮಾಧವಶ್ರೀ ಮುಖ್ಯ ವಾಯುದೇವರು ರುದ್ರಸದಾ ಒಲಿದಿರುವ ಭಾಗಣ್ಣಗೆ ಇದು ಆಶ್ಚರ್ಯವಲ್ಲ 62ತೇಜೋಜಲ ಪೃಥ್ವೀಮುನಿಗಳು ಶ್ರೀ ಪ್ರಾಣರುದ್ರರುವಜ್ರ, ಅಗ್ನಿ, ವರುಣ ಪೃಥಿವ್ಯಾದಿ ಸರ್ವರೊಳಗೊರಾಜನೆ ನಿಯಮಿಸುವ ಅನಿರುದ್ಧ ಜಗದೀಶಜಗಜ್ಜನ್ಮಾದಿಕರ್ತ ಗಾಯತ್ರೀ ಭರ್ಗಸರ್ವಗನು 63ತೀರ್ಥಯಾತ್ರೆಯ ತೀರ್ಥರೂಪ ಭಾಗಣ್ಣ ತನ್ನಭ್ರಾತರೊಡಗೂಡಿ ಹೊರಟಿಹರುಮಂತ್ರಾಲಯ ವೇಂಕಟಗಿರಿ ಘಟಿಕಾದ್ರಿಹಸ್ತಿವರದಕಂಚಿ ಮೊದಲಾದ ಕ್ಷೇತ್ರ64ವೇಂಕಟ ಕೃಷ್ಣನ ಮುದ್ರೆಯಿಂ ಕವನಗಳಉತ್ಕøಷ್ಟ ರೀತಿಯಲ್ಲಿ ರಚಿಸಿ ಭಜಿಸುತ್ತಾಭಾಗಣ್ಣ ಆದವಾನೀಯಲ್ಲಿ ತಿಮ್ಮಣ್ಣಾರ್ಯರಲ್ಲಿಮುಕ್ಕಾಮು ಹಾಕಿದರು ಸ್ವಲ್ಪಕಾಲ 65ದಿವಾನು ತಿಮ್ಮಣ್ಣ ರಾಯರ ಉಪಚಾರಸರ್ವ ಅನುಕೂಲ ಆತಿಥ್ಯಕೊಳ್ಳುತ್ತಾದಿವ್ಯಮಾರುತೀ ಗುಡಿಗೆ ಪ್ರತಿದಿನ ಪೋಗಿಸೇವೆಸಲ್ಲಿಸಿದರು ಭಾಗಣ್ಣ ಶ್ರೀಹನುಮನಿಗೆ 66ಶ್ರೀ ವಿಜಯದಾಸಾರ್ಯರು ಶ್ರೀ ವ್ಯಾಸದೇವರ ಕಂಡುಶ್ರೀವರ ಒಲಿದು ಪುರಂದರಾರ್ಯರ ಕೈಯಿಂದದಿವ್ಯನಾಮಾಂಕಿತ ಬೀಜಾಕ್ಷರಗಳ ಹೊಂದಿಭುವಿಯಲಿ ಪ್ರಖ್ಯಾತರಾಗಿ ಬಂದಿದ್ದರಾಗ 67ವಿಜಯವಿಟ್ಠಲದಾಸರಾಯರು ತಮ್ಮನಿಜ ಶಿಷ್ಯವೃಂದದಲಿ ವ್ಯಾಸವಿಜಯಸಾರಥಿಗೋಪಾಲಹಯವದನಭಜನೀಯ ಈ ಮೂರು ಅಂಕಿತಕೊಡಬೇಕಾಗಿತ್ತು 68ಗೋಪಾಲವಿಠ್ಠಲಸುನಾಮಭಾಗಣ್ಣಗೆಸುಪ್ರಿಯ ಮನದಿಂದ ಇತ್ತು ಹಯವದನಸುಪವಿತ್ರ ಅಂಕಿತ ಚೀಕಲಪರವಿ ಆನಂದನಿಗೆಕೃಪಾಂಬುಧಿ ವಿಜಯದಾಸಾರ್ಯ ಇತ್ತರು 69ಶ್ರೀಪುರಂದರದಾಸಾರ್ಯರನುಗ್ರಹದಲಿಸುಪುಣ್ಯವಂತನು ಸಹನ ಶಾಲಿಯಾದಶ್ರೀಪಪ್ರಿಯ ತಿಮ್ಮಣ್ಣ ವೇಣುಗೋಪಾಲನಾಮತಾಪೊಂದಿದ ವಿಜಯದಾಸರು ಕೃಪದಿ ಕೊಡಲು 70ಶೋಭನ ಜ್ಞಾನಪ್ರದ ವ್ಯಾಸ ನಾಮಾಂಕಿತವಸುಬ್ಬಣ್ಣ ಕಲ್ಲೂರು ಪಂಡಿತೋತ್ತಮಗೆಲಭಿಸುವಂತೆ ವಿಜಯದಾಸ ಮಹಂತರುಕೃಪೆಯಿಂದ ಒದಗಿಸಿದರು ಔದಾರ್ಯನಿಧಿಯು 71ಗೋಪಾಲ ವಿಟ್ಠಲಾಂಕಿತದಲಿ ಭಾಗಣ್ಣಶ್ರೀಪಪ್ರಿಯತಮ ಪದ್ಯ ಸುಳಾದಿಗಳ ರಚಿಸಿಸುಪುಣ್ಯವಂತ ಸೀನಪ್ಪ ದಾಸಪ್ಪ ಈರ್ವರಿಗೂಉಪದೇಶ ಮಾಡಿದರು ಮಂತ್ರೋಪೇತ ನಾಮಾಂಕಿತಗಳನ್ನು 72ಕರಿರಾಜವರದನು ಗರುಡವಾಹನಸಿರಿವರವಾಸು ದೇವನೇ ವರದರಾಜನೆಂದೂಧರೆಯಲುತ್ತಮ ಕಂಚೀಪುರದಿ ಇರುವವನು ನಾಮವರದಗೋಪಾಲ ವಿಟ್ಠಲನಾಮ ಶ್ರೀನಿವಾಸನಿಗೆ 73ಇತರಾದೇವಿಯ ಸುತನೆನಿಸಿ ಮಹಿದಾಸನಾಮದಲಿಪ್ರಾದುರ್ಭವಿಸಿದ ಶ್ರೀಯಃಪತಿಗೆ ಪ್ರಿಯತಮವುಬೃಹತೀ ಸಹಸ್ರದಲಿ ವಿಷ್ಣು ನಾಮ ವಿಶ್ವಶಬ್ದಕ್ಕೆವಾಯುದೇವಾಂತರ್ಗತನು ಎಂದು ಜೆÕೀಯ 74ಮಧ್ವಾ ್ಯಖ್ಯ ವಾಯುದೇವರಗುರುಮಹಿದಾಸವೇದವ್ಯಾಸ ಹಂಸಾಖ್ಯ ಕಪಿಲ ಶ್ರೀಪತಿಯಉತ್ತಮನಾಮ ಗುರುಗೋಪಾಲ ವಿಟ್ಠಲನಾಮಅಕಳಂಕ ಯದುಪತಿಯ ನಾಮವ ಕೊಟ್ಟರು 75ಭಂಗಾರದಂಥ ವೈಷ್ಣವ ಸಂತತಿಯ ಪಡೆದುರಂಗನಾಥನನುಗ್ರಹದಿ ಪಾಲಿಸುವಂಥಾರಂಗಪ್ಪರಾಯರಿಗೆ ತಂದೆ ಗೋಪಾಲವಿಟ್ಠಲನಾಮಅಕಳಂಕ ಯದುಪತಿಯ ನಾಮವ ಕೊಟ್ಟರು 76ವಿಜಯರಾಯರ ಪರಮಭಕ್ತಾನುಗ್ರಹಿವಿಜಯಸಾರಥಿಪ್ರಿಯ ಗೋಪಾಲರಾಯರುವಿಜಯಾರ್ಯರ ಸುಪ್ರಸಾದದ ಬಲದಿಂದಅನುಜರಿಗೆ ಒದಗಿಸಿದರುಅಪರೋಕ್ಷ77ಗೋಪಾಲ ವರದಗುರು ಗೋಪಾಲದಾಸರ್ಗಳಅಪರೋಕ್ಷಮಹಿಮೆಗಳ ಸಾಧು ಸಜ್ಜನಗಳತೋರ್ಪಡಿಸಿ ಬೇರೆ ಬೇರೆಯಾಗಿಟ್ಟು ಮೂವರನ್ನುಶ್ರೀಪಪ್ರಿಯ ಕವನವ ರಚಿಸಿಗುರುಹೇಳಿದರು78ಗುರುಅಂತರ್ಗತನಾದ ಗೋಪಾಲನೃಹರಿಯಸ್ಮರಿಸಿ ಮೂವರೂ ಗುರುನಾಮವೂ ತದಂತಸ್ಥಹರಿಗೆ ಸುಪ್ರೀತಿಕರಯೆಂದು ರಚಿಸಿದರುಗುರುಸತ್ಯಬೋಧರ ಪ್ರಭಾವತೋರ್ಪಡಿಸಿ79ಸೂರಿಗಳುಗೋಪಾಲದಾಸಾದಿ ಮೂವರೂಬರೆದ ಕೀರ್ತನೆಯಲ್ಲಿ ಸತ್ಯಬೋಧಾರ್ಯರಸ್ವರೂಪವ ಸೂಕ್ಷ್ಮದಲಿ ಸೂಚಿಸಿಹರು ಎಂದುಅರಿವರು ಜ್ಞಾನಿಗಳು ಬಲ್ಲೇನೇ ನಾನು? 80ನೆರೆÀದಿದ್ದ ಜನರೆಲ್ಲ ಆಶ್ಚರ್ಯ ಚಕಿತರುಪರಿಪರಿ ವಿಧದಲ್ಲಿ ಮೂವರನ್ನು ಕೊಂಡಾಡೆಗುರುಸತ್ಯಬೋಧರು ಯುಕ್ತ ರೀತಿಯಲ್ಲಿಭಾರಿತರ ಭೂಷಣಾನುಗ್ರಹ ಮಾಡಿದರು 81ತಂದೆ ಗೋಪಾಲದಾಸಾರ್ಯರು ಮನೆಯಲ್ಲೇನಿಂದುಸತಿಸುತರಿಗೆ ಹರಿಸೇವೆಯನ್ನಒದಗಿಸುತ ಮಾತ್ರಂತರ್ಯಾಮಿ ಹರಿಯನ್ನ ತಾನುಭಕ್ತಿಪೂರ್ವಕ ಮಾಡುತ್ತಿದ್ದರು ಸೇವಾ ಸುಧ್ಯಾನ ಪರರು 82ಹರಿಕ್ಷೇತ್ರ ಹರಿತೀರ್ಥಯಾತ್ರೆಯಗೈಯ್ಯಲುಸಿರಿವಿಜಯರಾಯರ ಅನುಗ್ರಹ ಕೊಂಡುಹೊರಟರು ಗೋಪಾಲದಾಸಾರ್ಯರುವರದಗುರುಗೋಪಾಲದಾಸರ ಸಮೇತ83ಉಡುಪಿಕ್ಷೇತ್ರಸ್ಥ ಹರಿಮೂರ್ತಿಸ್ಥ ತೀರ್ಥಸ್ಥಕಡಲಶಯನನ್ನ ನೋಡಿ ಸೇವಿಸಲಿಕ್ಕೆಒಡಹುಟ್ಟಿದವರ ಸಹ ನಡೆಯುತ್ತಿರುವಾಗಅಡ್ಡಗಟ್ಟಿದ ಕ್ರೂರನು ಭೀಮಾಭಿದನು 84ಶ್ರೀ ವಿಜಯದಾಸರಿಂ ಮೊದಲೇ ಅನುಗ್ರಹೀತಭಾವುಕಾಗ್ರಣೀ ಗೋಪಾಲಾರ್ಯರು ಹರಿಗುರುಗಳಿತ್ತದಿವ್ಯ ಸಾಮಥ್ರ್ಯದಿಂ ಸಸೈನ್ಯ ಭೀಮನ್ನತೀವ್ರ ನಿಶ್ಚೇಷ್ಟಗೈಸಿ ಶರಣರ ಮಾಡಿದರು 85ಉಡುಪಿಸುಕ್ಷೇತ್ರದಲ್ಲಿ ಗೋಪಾಲಾರ್ಯರುಮಾಡಿದ್ದು ವರ್ಣಿಸಲು ಬಲ್ಲೆನೇ ನಾನು ?ಆಟದಲಿ ಜಗಪಡೆವ ಕೃಷ್ಣ ತಾಸುತನಂತೆಆಟವಾಡಿದ ಬಾಲರೂಪದಿ ಕೃಪಾಳು 86ಪೂರ್ವ ದಕ್ಷಿಣ ವರುಣ ದಿಶೆಯಾತ್ರೆಮಾಡಿಶ್ರೀ ವೇಣೀಸೋಮಪುರಕೆ ಮರಳಿ ಬಂದುಕೋವಿದಕುಲರತ್ನ ವಾಸುದೇವವಿಟ್ಠಲ ರಾಮಶ್ರೀವೇಂಕಟರಾಮಾರ್ಯರನ್ನು ಕಂಡರು 87ಉತ್ತನೂರು ಪೋಗಿ ವೇಂಕಟಕೃಷ್ಣನ್ನವಂದಿಸಿ ಬಂಧುಗಳ ಕೂಡ ತಾ ಇದ್ದುಒಂದುದಿನ ನಿಶ್ಚೈಸಿದರು ಪಂಡರೀಪುರಕ್ಕೆ ಪೋಗಿಇಂದಿರಾಪತಿಯನ್ನ ನೋಡಿ ಸೇವಿಸಲು 88ಪತ್ರಪೂ ಪಲ್ಲವ ಫಲವೃಕ್ಷ ದೇಶವುಸುಪವಿತ್ರ ಶ್ರೀ ತುಳಸೀ ಉತ್ಕøಷ್ಟವನದಿಸುಪುಣ್ಯ ಶ್ಲೋಕ ಶ್ರೀದಾಸಾರ್ಯರನ್ನ ಸುತ್ತಿ ಅಟ್ಟಿಶ್ರೀಪತಿ ಕೇಳ್ದ ಅಲೇನಾಹಿ ಎಂದು 89ಶ್ರೀಹರಿ ಸ್ವೇಚ್ಛೆಯಿಂ ಪ್ರಕೃತಿ ಕ್ಷೋಭಿಸಿ ತ್ರಿಗುಣ ಬೆರೆಸಿಮಹದಹಂಕಾರಾದಿ ತತ್ವ ಸೃಷ್ಟಿಗೈದುಬ್ರಹ್ಮಾಂಡ ನಿರ್ಮಿಸಿ ತದಾಶ್ರಯನಾಗಿ ಇಪ್ಪವನು ತಾನೇಮಹಾದ್ಭುತ ಕುದುರೆ ಸವಾರನಾಗಿ ತೋರಿ ಮರೆಯಾದ 90ಆಲೋಚಿಸಿ ತಿಳಿದು ವಿಟ್ಠಲನೇ ಬಂದವನೆಂದುನೀಲಕುದುರೆ ಎಂಬ ಸ್ತೋತ್ರ ಮಾಡಿದರುಪೇಳ್ವರು ವ್ಯಾಪ್ತೋಪಾಸಕ ಜ್ಞಾನಿಗಳು ಇದರ ರ್ಥಮೊದಲನೇ ನುಡಿಯು ಮೇಲೆ ಹೇಳಿದಹರಿಮಹಿಮೆಯೆಂದು ಬಲ್ಲೆನೇ ನಾನು 91ಭೀಮರಥಿ ಸ್ನಾನವು ಪುರಂದರಾರ್ಯರ ನಮಿಸಿಭೂಯಾದಿ ಗುಣಗಣಾರ್ಣವ ವಿಟ್ಠಲನ್ನಪ್ರೇಮೋತ್ಸಾಹದಲಿ ಸನ್ನಮಿಸಿಸ್ತುತಿಸಿರಮ ರುಕ್ಮಿಣಿಯ ನಮಿಸಿದರು ದಾಸಾರ್ಯ 92ಕೋಲ್ಹಾಪುರ ಪೋಗಿ ಮಹಾಲಕ್ಷ್ಮಿ ಮಂದಿರದಿಶೀಲ ಪರಮಾದರದಿ ಲಕ್ಷ್ಮೀನಾರಾಯಣರನ್ನಕೀಲಾಲಜಾದಿ ಪುಷ್ಪಾರ್ಚನೆಗೈದು ಕಾಪಾಡೆಂದು ಕೀರ್ತನೆಗಳಿಂದ ಸ್ತುತಿಸಿದರು 93ಇನ್ನು ಬಹು ಬಹು ಕ್ಷೇತ್ರಯಾತ್ರೆ ಸೋದರರ ಕೂಡಿಅನವರತಸುವ್ರತ ಧ್ಯಾನಪರರಾಗಿಘನಮಹಿಮ ಗೋಪಾಲ ವಿಟ್ಠಲನ ಸ್ತುತಿಸುತ್ತವೇಣೀ ಸೋಮಪುರಕ್ಕೆ ಬಂದರು ತಿರುಗಿ 94ಗುರುಗಳು ವಿಜಯದಾಸಾರ್ಯರ ದ್ವಾರಾಯಾತ್ರಫಲ ಕೃಷ್ಣನಿಗೆ ಸಮರ್ಪಿಸಿಉದ್ದಾಮಪಂಡಿತವೇಂಕಟರಾಮಾರ್ಯರಲಿಇದ್ದು ಪೋದರು ಉತ್ತನೂರ ಸ್ವಕ್ಷೇತ್ರ 95ಉತ್ತನೂರು ವೇಂಕಟಕೃಷ್ಣನಾಲಯ ಮುಂದೆನಿಂತು ತುಳಸೀ ವನದಿಂದ ಸುಳ್ಳಿ ತೆಗೆವಾಗಬಂದರು ಭ್ಯಾಗವಟ್ಟಿ ಶ್ರೀನಿವಾಸಾಚಾರ್ಯವಂದಿಸಿ ನಿಂತರು ಕೈಮುಗಿದು ವಿನಯದಿ 96ಜ್ಞಾನದಲಿ ಋಜುಮಾರ್ಗ ಗರ್ವದಲ್ಲಿನಿತ್ಯಸಂಸಾರಿಮಾರ್ಗಜ್ಞಾನ ಬೋಧಿಸುವುದರಲ್ಲಿ ಪಂಡಿತರಮಾರ್ಗಮಾನುಷಾನ್ನವನುಂಡು ಮಂದಧೀಯಲ್ಲಿ ಗುರುನಿಂದಾಈ ಶ್ರೀನಿವಾಸಾಭಿದನು ಮಾಡಿ ನರಳುತಿದ್ದ 97ಭಾಗಣ್ಣ ಆರ್ಯರು ಶ್ರೀನಿವಾಸಾಚಾರ್ಯಗೆಅಘನಾಶವಿಜ್ಞಾನಲಭಿಸುವ ಸಾಧನವುನಿಗಮಾರ್ಥ ಬೋಧಕ ಉಪದೇಶ ಮಾಡಿ ಪಂಡರಿಪುರ ಪೋಗಿರಿಜಗನ್ನಾಥ ವಿಟ್ಠಲ ಒಲಿದು ಕಾಂಬ ಎಂದರು 98ಶ್ರೀನಿವಾಸಾಚಾರ್ಯರು ದಾಸಾರ್ಯಾರ್ ಹೇಳಿದಂತೆಸುನಿರ್ಮಲ ಭೀಮ ರಥಿಯಲ್ಲಿ ಸ್ನಾನಗೈದುಇನನಲಿ ಅನಿಲಾಂತರ್ಗತ ನಾರಾಯಣನ್ನಧ್ಯಾನಿಸಿ ಭಕ್ತಿಜ್ಞಾನದಿಂದ ಕೊಟ್ಟರು ಅಘ್ರ್ಯ 99ಐದೆರಡು ಸಾಧು ಭಕ್ತಿ ಪ್ರತಿಪಾದ್ಯ ಶ್ರೀ ನಾರಾಯಣನುವಾಗ್ದೇವಿವರವಾಯುಗಳಿಂದ ಋಕ್‍ಸಾಮದಿಂಸ್ತುತಇಪತ್ತೆರಡಕ್ಷರದಲ್ಲಿ ಎರಡನೇ ಮೂರಕ್ಷರ ಬೋಧಿತಆದಿತ್ಯಸ್ಥ ವಾಯುಸ್ಥನ್ನ ಸ್ಮರಿಸಿಕೊಟ್ಟರು ಅಘ್ರ್ಯ 100ಜಗನ್ನಾಥದಾಸರ್ಗೆ ಗೋಪಾಲದಾಸಾರ್ಯಗುರುಜಗತ್ತಲ್ಲಿ ಕಂಡಿಲ್ಲದ ಉದಾರದಲಿತೆಗೆದು ತನ್ನಾಯುಷ್ಯದಿಂ ಚತ್ವಾರಿವರ್ಷಕೊಟ್ಟರುಗುರುಗ ಶ್ರೀವಿಜಯಗೋಪಾಲ ಶ್ರೀನಿವಾಸನ ಪ್ರೀತಿಗೆ101ಭಕ್ತಿಯಲ್ಲಿ ಭಾಗಣ್ಣನೆಂದು ಸುಪ್ರಖ್ಯಾತಭಕ್ತ ಶಿರೋಮಣಿಯು ಗೋಪಾಲ ದಾಸಾರ್ಯಬೀದಿಯಲಿ ಜರುಗದ ರಥಕೂಢನ್ನ ಬಾರೈಯ್ಯಎಂದು ಸ್ತುತಿಸೆ ರಥ ಓಡೋಡಿ ಬಂತು 102ತಿರುಪತಿ ಶ್ರೀ ಶ್ರೀನಿವಾಸನ ರಥವುಸರಸರ ಬಂದದ್ದು ಜನರು ನೋಡಿಹರಿಭಕ್ತಾಗ್ರೇಸ ಗೋಪಾಲ ದಾಸರನ್ನಪರಿಪರಿ ವಿಧದಿ ಕೊಂಡಾಡಿದರು ಮುದದಿ 103ಕಂಚೀ ವರದರಾಜನ ದೇವಾಲಯದಲ್ಲಿಕಿಚ್ಚು ಸೋಕಿ ಚೀಲ ಉರಿಯಲು ಅದನ್ನದಾಸವರ್ಯ ದೂರದೇಶದಲಿದ್ದರೂ | ತನ್ನ ಚೀಲ |ಕಸಕಿ ಶಾಂತ ಮಾಡಿದರು ಕಂಚಿಯ ಉರಿಯ 104ದಾರಿದ್ರ್ಯ ಋಣರೋಗ ಅಪಮೃತ್ಯು ಅಪಿಚಾರಪರಿಪರಿ ಕಷ್ಟೋಪಟಳ ವಿಘ್ನಗಳಗುರುವಿಜಯರಾಯಾಂತರ್ಗತ ಗೋಪಾಲನ ಒಲುಮೆಯಿಂದಎರಗುವರ್ಗೆ ಕಳೆದಿಹರು ಅದ್ಯಾಪಿ ಒದಗುತಿಹರು 105ಗೋಪಾಲದಾಸರಿಗೆವಿಜಯದಾಸರಲ್ಲಿಇಪ್ಪ ಭಕ್ತಿಯ ವರ್ಣಿಸಲಶಕ್ಯಗೋಪಾಲ ದಾಸರನ್ನು ನಂಬಿದವರನ್ನ ವಿಜಯಾರ್ಯ ಕೈ ಬಿಡರುಗೋಪಾಲವಿಜಯವಿಟ್ಠಲ ಬಂದು ತಾನೇ ಒಲಿವ106ಗೋಪಾಲ ದಾಸಾರ್ಯರೇ ನೀವು ವಿಜಯಾರ್ಯರಲ್ಲಿತಪ್ಪದೇ ಮಾಡಿದ ಭಕ್ತಿಯಿಂದದಿ ಎನಗೆಸ್ವಲ್ಪವಾದರೂ ನಿಮ್ಮಲ್ಲಿ ಪುಟ್ಟುವಂತೆ ಮಾಡಿರಿಗೋಪಾಲ ಪ್ರಿಯತಮರೇ ಪಾಹಿಮಾಂ ಶರಣು 107ಹೆಳವನಕಟ್ಟೆ ಗಿರಿಯಮ್ಮ ಮೊದಲಾದಶೀಲ ಶಿಷ್ಯರು ಬಹುಮಂದಿಗಳುಬಲು ಭಕ್ತಿಶ್ರದ್ಧೆಯಿಂ ಉಪದೇಶಗೊಂಡುಜಲಜನಾಭನ ಒಲುಮೆ ಪಾತ್ರರಾಗಿಹರು 108ಜ್ಞಾನ ಭಕ್ತಿ ವೈರಾಗ್ಯವಂತಳು ಗಿರಿಯಮ್ಮಕ, ೃಷ್ಣ ಮಂತ್ರ ಉಪದೇಶ ದಾಸಾರ್ಯರಿಂದಕೊಂಡು ಶ್ರೀ ರಂಗವಿಟ್ಠಲ ಕೃಷ್ಣನ್ನ ಪ್ರತ್ಯಕ್ಷಕಾಣುವಂಥ ಸೌಭಾಗ್ಯ ಶಾಲಿಯಾಗಿಹಳು 109ಅದ್ವಿಜನು ಶೈವನು ಪತ್ನಿ ಸಹಸೇವಿಸಿಮಂತ್ರಾಲಯ ಗುರುಗಳಿಂ ಅನುಕೂಲ ಹೊಂದಿಕೃತಜÕಭಾವದಿ ಲಕ್ಷ ಬ್ರಾಹ್ಮಣ ಭೋಜನ ಮಾಡಿಸುವೆನುಎಂದು ಹರಕೆ ಮಾಡಿಸಲಿಕ್ಕಾಗಲಿಲ್ಲ 110ಸ್ವಪ್ನದಲಿ ಹೇಳಿದರು ಕರುಣಿ ಶ್ರೀ ರಾಘವೇಂದ್ರಗುರುತಪ್ಪದೇ ಹರಕೆ ಸಲ್ಲುವುದು ಮೂವರು ಬ್ರಾಹ್ಮಣರುಸುಪುಣ್ಯವಂತರು ಮಹಾತ್ಮರು ಮರುದಿನ ಬೆಳಿಗ್ಗೆಈ ಪಥದಿ ಬರುವರ್ಗೆ ಭೋಜನ ಮಾಡಿಸೆಂದು 111ವರದಗುರುಗೋಪಾಲದಾಸರು ದಾಸಾರ್ಯರುಅರಿತುಅಪರೋಕ್ಷಸಾಮಥ್ರ್ಯದಿ ಈ ಸ್ವಪ್ನನೇರಾಗಿ ಬರಲಾಗ ಆಶೈವಗುರುಭಕ್ತನುನಾರೀ ಸಹನಮಸ್ಕರಿಸಿ ಸ್ವಾಗತವನಿತ್ತ 112ಮೂವರಿಗೂ ಅಧಿಕವಾದ ಪದಾರ್ಥಗಳನರ್ಪಿಸಿದೇವರ ನೈವೇದ್ಯ ಮೂವರಿಗೂ ಭೋಜನದೇವಗುರುಬ್ರಾಹ್ಮಣ ಪ್ರೀತಿಯಾಗಲಿ ಎಂದು ನಮಿಸಿದರುಶೈವ ಕುಲೀನ ದಂಪತಿ ಭಕ್ತಿ ಪೂರ್ವಕದಿ 113ಅಂದು ರಾತ್ರಿ ಆ ಭಕ್ತ ದಂಪತಿಗೆ ಸ್ವಪ್ನದಲಿಪ್ರೀತಿ ಆಯಿತು ಕೃಷ್ಣನಿಗೆ ಹರಕೆ ಪೂರ್ಣ ಆಯ್ತುಎಂದು ರಾಘವೇಂದ್ರ ತೀರ್ಥ ಸ್ವಾಮಿಗಳು ಹೇಳಿಮುದದಿ ದಂಪತಿಯ ಕೃತ ಕೃತ್ಯ ಮಾಡಿದರು 114ಮೊದಲು ಆದರ ರಹಿತ ವೆಂಕಟನೃಸಿಂಹಾರ್ಯನಿಂದುಗೋಪಾಲ ದಾಸಾರ್ಯರಹರಿಪೂಜಾಪದ್ಧತಿಯ ನೋಡುತಿರೆ ಹನುಮಂತ ದೇವರುಮೂರ್ತಿಮತ್ ಕುಳಿತಿದ್ದುದು ಕಂಡರು 115ಬಂದು ವೆಂಕಟ ನೃಸಿಂಹಾಚಾರ್ಯರು ಮತ್ತುನಿಂದಿಸಿದ ವೈದಿಕರು ತತ್ವ ಕೀರ್ತನೆಗಳಅದ್ಭುತ ಸುಳಾದಿಕೇಳಿನಿರ್ಮತ್ಸರರಾಗಿಬಂದು ಶಿಷ್ಯತ್ವ ಬೇಡಿದರು ಆರ್ಯರಲಿ 116ವೈರಾಗ್ಯನಿಧಿ ಗಂಗಾಧರನ ಅನುಗ್ರಹದಿವೈರಾಗ್ಯ ಯುಕ್‍ಜ್ಞಾನಹರಿಭಕ್ತಿ ಲಭಿಸಿದ್ದಸೂರಿವರ ಗೋಪಾಲ ದಾಸಾರ್ಯ ಜರಿಗೆ ಶಾಲು ರೇಷ್ಮೆಭಾರಿ ಪಲ್ಲಕ್ಕಿ ವೈಭವದಿ ಮೆರೆದರುಹರಿಪ್ರೀತಿಗಾಗಿ117ಪನ್ನಗಾಚಲಶ್ರೀ ಶ್ರೀನಿವಾಸನ ಭಕ್ತಅನಿಮಿಷಾಂಶರು ಗೋಪಾಲ ದಾಸಾರ್ಯಶ್ರೀನಿವಾಸನಪ್ಪಣೆಕೊಂಡು ಊರಿಗೆ ಬಂದುಅವನೀಸುರರಿಗೆ ಔತಣವಿತ್ತು ಧ್ಯಾನದಿ ಕುಳಿತರು 118ಮುಖ್ಯಕಾರಣ ವಿಷ್ಣು ಸ್ವತಂತ್ರ ಎಂದುತಾ ಭಜಿಸಿಶಿಷ್ಯರಿಗೆ ಬೋಧಿಸಿ ಸಜ್ಜನರ ಪೊರೆದುಪುಷ್ಯ ಬಹುಲಾಷ್ಟಮೀಯಲ್ಲಿ ಪೂಷಯದುಪತಿಧಾಮಕೃಷ್ಣ ಭಕ್ತಿರಿಗೌತಣವಿತ್ತು ಐದಿದರು 119ಗದ್ವಾಲ ರಾಜ ಮೊದಲಾದ ರಾಜ ಪ್ರಮುಖರಿಂದಮೇದಿನೀ ಪ್ರಖ್ಯಾತ ಯತಿಗಳು ಪಂಡಿತರಿಂಎದುರಿಲ್ಲದಸೂರಿಐಜೀಯವರಿಂದಲುಸದಾ ಮರ್ಯಾದೆ ಕೊಂಡವರು ದಾಸಾರ್ಯ 120ವಿಜಯದಾಸಾರ್ಯ ಪೂಜಿಸಿದಹರಿಮೂರ್ತಿವಿಜಯವಿಟ್ಠಲ ಪ್ರತಿಮೆ ಅಂತರ್ಗತನ್ನವಿಜಯಸಾರಥಿಪ್ರಿಯ ಗೋಪಾಲ ದಾಸರು ಪೂಜಿಸಿರಾಜಿಸುತಿಹ ಮೂರ್ತಿಇಹುದುಅವರಮನೆಯಲ್ಲಿ121ಜ್ಞಾನ ಸುಖ ಬಲ ಪೂರ್ಣ ಜನ್ಮಾದಿಕರ್ತಅಜವನರುಹಜ ಪಿತ ಶ್ರೀಶಪ್ರಸನ್ನ ಶ್ರೀನಿವಾಸಅನಘಹಯಮುಖವಿಜಯಗೋಪಾಲ ಸರ್ವಗಗೆಘನ್ನ ಪ್ರಿಯ ಗೋಪಾಲ ದಾಸಾರ್ಯ ಶರಣು 122|| ಸಂಪೂರ್ಣಂ||
--------------
ಪ್ರಸನ್ನ ಶ್ರೀನಿವಾಸದಾಸರು
ಶ್ರೀ ವಿಷ್ಣುಮಹಿಮೆ ಸಂಕೀರ್ತನೆ ಸರ್ವದಾ ವಿಸ್ಮøತಿಯನೀಗಿಮಾಡಿ ವೈಷ್ಣವರುಪ.ಪುಣ್ಯಮಾರ್ಗವನರಿಯದ ಮೂಢರಿಗೆಉನ್ನತಕುಟಿಲಪಾಮರಮನುಜರಿಗೆಘನ್ನ ಸಾಧನವಿದೆ ಮತ್ತೊಂದು ಕಾಣೆಪುಣ್ಯಶ್ಲೋಕನ ವಾರ್ತೆ ಕೀರ್ತನೆಯ ಪಠನೆ 1ಜನ್ಮ ಮರಣವಿಲ್ಲ ಅವ ಜೀವನ್ಮುಕ್ತಧನ್ಯ ವಿಶುದ್ಧಾತ್ಮ ನಿಜ ಹರಿಭಕ್ತಚಿನ್ಮಯಾಚ್ಯುತನ ಚಾರಿತ್ರ್ಯವಿಸ್ತರವವರ್ಣವರ್ಣಂಗಳಿಂದೆ ಪಾಡಿ ನಲಿಯುತ 2ಧರ್ಮ ಸುಮಾರ್ಗವರ್ಜಿತ ಕಲಿಯುಗದಿನಿರ್ಮಲಮನ ಹೊಂದಲೀಸದ ಭವದಿಧರ್ಮಪ್ರಭು ಶ್ರೀ ಹರಿಗುಣಕೀರ್ತನೆಉಮ್ಮಯದಲಿ ಮಾಡುವುದು ಹರಿಪ್ರಾರ್ಥನೆ 3ನಿರುತ ವಿಶುದ್ಧಾಂತರಾತ್ಮ ಶ್ರೀಹರಿಗೆಗುರುಸುಖತೀರ್ಥರ ತೀರ್ಥಜೀವರಿಗೆಹರಿಹರಿಹರಿಎಂದು ಕೂಗಿ ಬಾಳ್ವರಿಗೆ4ಅಘೋರ ಯಮಮಾರ್ಗ ನರಕ ಶ್ರೀಮದ್ಗರುಡಧ್ವಜ ನಾರಾಯಣಾಪವರ್ಗರಾಮ ರಾಮ ರಾಮ ರಾಮ ರಾಮನೆಂಬನಾಮಪಾಠಕರಿಗೆ ಸ್ವಪ್ನದಿ ವಜ್ರ್ಯ 5ಹೃದಯದಿ ಹರಿರೂಪ ಮುಖದಿ ಸದ್ಗಾನಉದರದಿ ನೈವೇದ್ಯ ಶಿರದಿ ನಿರ್ಮಾಲ್ಯಸುದರ್ಶನಶಂಖಾಂಕಿತ ಭುಜದವರಿಗೆಪದ್ಮನಾಭನ ನಾಮಕೀರ್ತನೆಕೈವಲ್ಯ6ಶತಕೋಟಿ ರಾಮಾಯಣ ಕೀರ್ತನೆ ಹನುಮಂತಯತಿ ಶುಕಾಚಾರ್ಯ ಭಾಗವತಶಾಸ್ತ್ರಸತತ ನಾರದದೇವ ಮುನಿತತಿ ನೃಪರೆಲ್ಲರತಿಪತಿಪಿತನ ಪೊಗಳಿ ಮುಕ್ತಾಗಿಹರು 7ಕಲಿಕಾಲದಲಿ ಕೇಶವಗೆ ಪ್ರಿಯ ಕೀರ್ತನೆಲಲಿತಸಾಧನವೆನಿಪುದೀ ಕೀರ್ತನೆಬಲುಶ್ರುತಿಮಥಿತಾರ್ಥಸಾರವೆ ಕೀರ್ತನೆಹುಲುಮಾನವರಿಗೆ ದೂರವು ಹರಿಕೀರ್ತನೆ 8ಭವರೋಗಭೇಷಜಹರಿನಾಮಕೀರ್ತನೆಭವವಾರ್ಧಿಪೋತ ಭವಾಟವಾಗ್ನಿಭವವಿಧಿಕೀರ್ತಿತಪದ ಪ್ರಸನ್ವೆಂಕಟಭವನದಾಸರು ಸವಿದುಂಬಾಮೃತವು 9
--------------
ಪ್ರಸನ್ನವೆಂಕಟದಾಸರು
ಶ್ರೀ ವೆಂಕಟೇಶ ಸಲಹು ವೆಂಕಟೇಶಭಾವಿಕ ಸೇವಕ ಭವಭಯನಾಶ ಪ.ಸುರಾರಿ ಗಜಗಳೆಂಬ ಗಣಕೆಕಂಠೀರವಕರಿರಾಜ ಸಂಕಟ ಛಿತ್ತ ದೇವಪರಮಭಾಗವತರ ಸಮೂಹ ಸಂಜೀವನಪುರಹರವರಮತ್ತವೃಕ( ಷ?)ಮಥನ 1ವನಜಭವ ಸವಿೂರರೊಡೆಯ ಶ್ರೀರಮಣಮುನಿ ಹೃದಯಾಲಯ ಪರಿಪೂರ್ಣಫಣಿವರಶಾಯಿಪರಾತ್ಪರಅಗಣಿತಗುಣಗಂಭೀರ ಜಗದದಾತ2ಶುಕಶೌನಕ ಸನಕಾದಿ ದೇವಋಷಿಸಕಳ ಸುರಭೂಸುರ ರಾಜಾಧೀಶಭಕುತವತ್ಸಲಬಾದರಾಯಣಹರಿಹಯಮುಖ ಪ್ರಸನ್ವೆಂಕಟ ಗಿರಿನಿಲಯ 3
--------------
ಪ್ರಸನ್ನವೆಂಕಟದಾಸರು
ಶ್ರೀ ಸೌಭಾಗ್ಯ ಸಪ್ತತ್ರಿಂಶತಿ71ಶರಣುವಿಧಿವಾಣೀಶ ಶರಣು ಧೃತಿ ಶ್ರಧ್ದೇಶ |ಶರಣು ಋಜುವರ್ಯರಲಿ ಶರಣು ಶರಣಾದೆ ಪಮೀನಕೂರ್ಮಕ್ರೋಡನರಸಿಂಹ ವಟುರೂಪರೇಣುಕಾತ್ಮಜ ರಾಮ ಶ್ರೀ ಕೃಷ್ಣ ಜಿನಜ ||ವಿಷ್ಣು ಯಶಸ್ಸುತ ಅಜಿತ ಶ್ರೀಶನಿಗೆ ಪ್ರಿಯತಮ |ಅನುಪಮ ಜೀವೋತ್ತಮರ ಚರಣಕಾನಮಿಪೇ 1ಪುರುಷವಿಧಿ ಕಾಲವಿಧಿ ವಾಸುದೇವೋತ್ಪನ್ನ |ವಿರಿಂಚ ಮಹತ್ತತ್ವತನು ಅನಿರುದ್ಧ ಜಾತ ||ನಾರಾಯಣ ನಾಭಿ ಕಮಲಜ ಚತುರ್ಮುಖನು |ಸರಸ್ವತೀಪತಿ ರುದ್ರ ತಾತನಿಗೆ ನಮಿಪೆ 2ಈ ನಾಲ್ಕು ಬ್ರಹ್ಮನ ಅವತಾರದಲಿ ಶುಕ್ಲ |ಶೋಣಿತಸಂಬಂಧ ಇಲ್ಲವೇ ಇಲ್ಲ ||ಜ್ಞಾನಾದಿ ಐಶ್ವರ್ಯದಲಿ ಯಾರು ನಾಲ್ಮುಗಗೆ |ಎಣೆ ಇಲ್ಲ ಹದಿನಾಲ್ಕು ಲೋಕದಲಿ ಎಲ್ಲೂ 3ಭಯವು ಅಜ್ಞಾನವು ಸಂಶಯವು ಇವಗಿಲ್ಲಸತ್ಯ ಲೋಕಾಧಿಪನ ಸುರರ ಅಧ್ಯಕ್ಷ ||ಹಯಮುಖ ತ್ರಿವೃತ್ತುರೀಯ ಹಂಸ ಇತರಾಸೂನು |ತೋಯಜಾಕ್ಷಕೇಶವನ ಪ್ರಥಮ ಪ್ರತಿಬಿಂಬ4ಜಗಜ್ಜನ್ಮಾದ್ಯಷ್ಟಕ ಕರ್ತನ ನಿಯಮನದಿ |ಜಗವ ಪಡೆದಿಹ ಬ್ರಹ್ಮಸತ್ವವಿಗ್ರಹನು ||ಖಗಪ ಭುಜಗಪ ಶಿವಾದ್ಯನಂತ ಜೀವೋತ್ತಮನು |ಅಘರಹಿತತಾರಕಗುರುಶತಾನಂದ5ಅವನಿಯಲಿ ಅವತಾರ ಬ್ರಹ್ಮದೇವನಿಗಿಲ್ಲ |ಭಾವಿ ಬ್ರಹ್ಮನು ಮುಖ್ಯವಾಯುದೇವ ||ದೇವೀಜಯಾ ಸಂಕರುಷಣಾತ್ಮಜನು ಈ |ಭುವಿಯಲ್ಲಿ ತೋರಿಹನು ಹರಿಯಪ್ರಥಮಾಂಗ6ಧೃತಿಪ್ರಭಂಜನವಾಯುಸ್ಮರಭರತ ಗುರುವರನು |ಮಾತರಿಶ್ವನುಸೂತ್ರಪವಮಾನ ಪ್ರಾಣ ||ಎದುರು ಸಮರಿಲ್ಲ ಈ ಬ್ರಹ್ಮ ಧಾಮನಿಗೆಲ್ಲೂ |ಸದಾ ನಮೋ ಭಾರತೀರಮಣ ಮಾಂಪಾಹಿ 7ರಥನಾಭಿಯಲಿ ಅರವೋಲ್ ಪ್ರಾಣನಲಿ ಸರ್ವವೂ |ಪ್ರತಿಷ್ಠಿತವೂ ಜೀವರ ದೇಹಕಾಧಾರ ||ತ್ರಾತಪೋಷಕ ಸರ್ವವಶಿ ಪ್ರಜ್ಞಾಶ್ರೀದನು |ತತ್ವಾದಿ ದೇವ ವರಿಷ್ಠ ಚೇಷ್ಟಕನು 8ಶ್ರೀಶ ಹಂಸಗೆ ಪ್ರಿಯಶ್ವಾಸಜಪ ಪ್ರವೃತ್ತಿಸುವ |ಬಿಸಜಜಾಂಡವ ಹೊತ್ತು ಕೊಂಡು ಇರುತಿಹನು ||ಅಸಮ ಸಾಮಥ್ರ್ಯದಿ ಸರ್ವ ಕ್ರಿಯೆ ಮಾಡಿಸುವ |ಶಾಸ್ತನಾಗಿಹ ಪಂಚಅವರಪ್ರಾಣರಿಗೆ9ಬಲ ಜ್ಞಾನಾದಿಗಳಲ್ಲಿ ಹ್ರಾಸವಿಲ್ಲವು ಇವಗೆ |ಎಲ್ಲ ಅವತಾರಗಳು ಸಮವು ಅನ್ಯೂನ ||ಶುಕ್ಲಶೋಣಿತಸಂಬಂಧ ಇಲ್ಲವೇ ಇಲ್ಲ |ಇಳೆಯಲಿ ಜನಿಸಿಹ ಹನುಮ ಭೀಮ ಮಧ್ವ 10ವಾಯುದೇವನ ಒಲಿಸಿಕೊಳ್ಳದ ಜನರಿಗೆ |ಭಯ ಬಂಧ ನಿವೃತ್ತಿಯು ಸದ್ಗತಿಯು ಇಲ್ಲ ||ಮಾಯಾಜಯೇಶನಪರಮಪ್ರಸಾದವು |ವಾಯು ಒಲಿದರೆ ಉಂಟು ಅನ್ಯಥಾ ಇಲ್ಲ 11ಶ್ರೀರಾಮಚಂದ್ರನು ಒಲಿದ ಸುಗ್ರೀವಗೆ |ಮಾರುತಿಯ ಒಲಿಸಿಕೊಂಡವನವನೆಂದು ||ಮಾರುತಿಯ ಒಲಿಸಿಕೊಳ್ಳದ ವಾಲಿ ಬಿದ್ದನು |ಕರ್ಣನೂ ಹಾಗೇವೇ ಅರ್ಜುನನು ಗೆದ್ದ 12ರಾಮನಿಗೆ ಸನ್ನಮಿಸಿ ವನದಿ ದಾಟುತ ಹನುಮ |ಶ್ರಮರಹಿತನು ಸುರಸೆಯನು ಜಯಿಸೆಸುರರು||ಪೂಮಳೆ ಕರೆಯಲು ಸಿಂಹಿಕೆಯನು ಸೀಳಿ |ಧುಮುಕಿದ ಲಂಕೆಯಲಿ ಲಂಕಿಣಿಯ ಬಡಿದ 13ರಾಮ ಪ್ರಿಯೆಗುಂಗುರವ ಕೊಟ್ಟು ಚೂಡಾರತ್ನ |ರಾಮಗೋಸ್ಕರ ಕೊಂಡು ವನವ ಕೆಡಹಿ ||ಶ್ರಮ ಇಲ್ಲದೆ ಅಕ್ಷಯಾದಿ ಅಧಮರ ಕೊಂದು |ರಾಮ ದೂತನು ಹನುಮ ಲಂಕೆಯ ಸುಟ್ಟ 14ಶ್ರೀರಾಮನಲಿ ಬಂದು ನಮಿಸಿ ಚೂಡಾಮಣಿಯ |ಚರಣದಿ ಇಡೆ ರಾಮ ಹನುಮನ ಕೊಂಡಾಡಿ ||ಸರಿಯಾದ ಬಹುಮಾನ ಯಾವುದು ಇಲ್ಲೆಂದು |ಶ್ರೀರಾಮ ತನ್ನನ್ನೇ ಇತ್ತಾಲಿಂಗನದಿ 15ಮೂಲ ರೂಪವನೆನೆದ ಲಕ್ಷ್ಮಣನ ಎತ್ತಲು |ಕೈಲಾಗದೆ ರಾವಣನು ಸೆಳೆಯೆ ಆಗ ||ಲೀಲೆಯಿಂದಲಿ ಎತ್ತಿ ರಾಮನಲಿ ತಂದನು |ಬಲವಂತ ಹನುಮ ಶೇಷಗುತ್ತಮತಮನು 16ಮೃತ ಸಂಜೀವಿನಿಯಾದಿ ಔಷಧಿ ಶೈಲವನು |ತಂದು ಸೌಮಿತ್ರಿ ಕಪಿಗಳಿಗೆಅಸುಇತ್ತ ||ಮುಂದಾಗಿ ಪೋಗಿ ಶ್ರೀರಾಮ ಬರುವುದು ಪೇಳಿ |ಕಾಯ್ದ ರಾಮಾನುಜನ ಅಗ್ನಿ ಮುಖದಿಂದ 17ಇತರರು ಮಾಡಲು ಅಶಕ್ಯ ಸೇವೆ ಹನುಮ |ಗೈದಿ ಮೋಕ್ಷವು ಸಾಲ್ದು ಏನು ಕೊಡಲೆನ್ನೆ ||ಸದಾ ಸರ್ವ ಜೀವರಿಂದಧಿಕ ಭಕ್ತಿ ಒಂದೇ |ಕೇಳ್ದ ಶ್ರೀರಾಮನ್ನ ವೈರಾಗ್ಯ ನಿಧಿಯು 18ಗಂಡು ಶಿಶು ಬೀಳಲು ಗುಂಡು ಪರ್ವತ ಒಡೆದು |ತುಂಡು ನೂರಾಯಿತು ಕಂಡಿಹರು ಅಂದು ಬೋ - ||ಮ್ಮಾಂಡದಲಿ ಪ್ರಚಂಡ ಭೀಮಗೆ ಸಮ |ಕಂಡಿಲ್ಲ ಕೇಳಿಲ್ಲ ನೋಡಿ ಭಾರತವ 19ಉಂಡು ತೇಗಿದಗರಳತಿಂಡಿಯ ಭೀಮನು |ಉಂಡು ಹಾಲಾಹಲವ ಹಿಂದೆ ಈ ವಾಯು ||ಹಿಂಡಿ ಸ್ವಲ್ಪವ ಮುಕ್ಕಣ್ಣಗೆ ಕೊಟ್ಟನು |ಬಂಡುಮಾತಲ್ಲವಿದುಕೇಳಿವೇದವನು20ಅರಗು ಮನೆಯಿಂದ್ಹೊರಟು ಸೇರಿ ವನವನು ಅಲ್ಲಿ |ಕ್ರೂರ ಹಿಡಿಂಬನ ಕೊಂದವನ ಸೋದರಿ ||ಭಾರತೀ ಯಕ್ಸ ್ವರ್ಗ ಶಿಕಿಯು ಹಿಡಿಂಬಿಯಕರಪಿಡಿದ ಭೀಮನು ಅನುಪಮ ಬಲಾಢ್ಯ 21ಬಕ ಕೀಚಕ ಜರಾಸಂಧಾದಿ ಅಸುರರು |ಲೋಕ ಕಂಟಕರನ್ನ ಕೊಂದು ಬಿಸುಟು ||ಲೋಕಕ್ಕೆ ಕ್ಷೇಮವ ಒದಗಿಸಿದ ಈ ಅಮಿತ |ವಿಕ್ರಮಭೀಮನಿಗೆ ಸಮರಾರು ಇಲ್ಲ22ಕಲಿಕಲಿಪರಿವಾರ ದುರ್ಯೋಧನಾದಿಗಳ |ಬಲವಂತ ಭೀಮನು ಬಡಿದು ಸಂಹರಿಸಿದ ||ಕಲಿಹರ ಸುಜನಪಾಲ ಭೀಮ ಸಮ್ರಾಟನ |ಕಾಲಿಗೆ ಎರಗುವೆ ದ್ರೌಪದೀ ಪತಿಗೆ 23ಮಾಲೋಲ ಕೃಷ್ಣನ ಸುಪ್ರೀತಿಗಾಗಿಯೇ |ಬಲ ಕಾರ್ಯಗಳ ಮಾಡಿ ಅರ್ಪಿಸಿದ ಭೀಮ ||ಕಲಿಯುಗದಿ ಈ ಭೀಮ ಅವತಾರ ಮಾಡಿಹನು |ಕಲಿಮಲಾಪಹ ಜಗದ್ಗುರು ಮಧ್ವನಾಗಿ 24ಹನುಮಂತನ ಮುಷ್ಠಿ ಭೀಮಸೇನನ ಗದೆ |ದಾನವಾರಾಣ್ಯವ ಕೆಡಹಿದ ತೆರದಿ ||ಆಮ್ನಾ ಯಸ್ಮøತಿ ಯುಕ್ತಿಯುತ ಮಧ್ವ ಶಾಸ್ತ್ರವು |ವೇನಾದಿಗಳ ಕುಮತ ತರಿದು ಸುಜನರ ಕಾಯ್ತು 25ಇಳೆಯ ಸುಜನರ ಭಾಗ್ಯಶ್ರುತಿಪುರಾಣಂಗಳು |ಪೇಳಿದಂತೆಕೊಂಡಯತಿರೂಪ ವಾಯು ||ಮೇಲಾಗಿ ಇದ್ದ ನಮ್ಮ ಅಜ್ಞಾನ ಕತ್ತಲೆಯ |ತೊಲಗಿಸಿದನು ಈ ಮಧ್ವಾಖ್ಯಸೂರ್ಯ26ದುರ್ವಾದ ಕುಮತಗಳು ಸಜ್ಜನರ ಮನ ಕೆಡಿಸೆ |ತತ್ವವಾದವ ಅರುಪಿ ಸಜ್ಜನರ ಪೊರೆದ ||ಮೂವತ್ತು ಮೇಲೇಳು ಗ್ರಂಥ ಚಿಂತಾಮಣಿ |ಸುವರ್ಣಕುಂದಣಪದಕ ಯೋಗ್ಯರಿಗೆ ಇತ್ತ27ದುಸ್ತರ್ಕ ದುರ್ಮತ ಬಿಸಿಲಿಲ್ಲಿ ಬಾಡುವ |ಸಸಿಗಳು ಸಾತ್ವಿಕ ಅಧಿಕಾರಿಗಳಿಗೆ ||ಹಸಿ ನೀರು ನೆರಳು ಈ ಮಾಧ್ವ ಮೂವತ್ತೇಳು |ಸಚ್ಛಾಸ್ತ್ರಪೀಯೂಷಗೋಕಲ್ಪ ತರುವು28ಮೂಢ ಅಧಮರ ದುಷ್ಟ ಮತಗಳ ಸಂಪರ್ಕದಿ |ಈಡಿಲ್ಲದ ಮೋದಪ್ರದ ಜ್ಞಾನ ಕಳಕೊಂಡು ||ಬಡತನದಿ ನರಳುವ ಸಜ್ಜನರ ಪೋಷಿಪುದು |ನೋಡಿ ಈಸುರಧೇನುಮಾಧ್ವ ಮೂವತ್ತೇಳ29ಬಿಲ್ವಪ್ರಿಯ ಶಿವ ಈಡ್ಯ ಸಾರಾತ್ಮ ಕೃಷ್ಣನ |ಚೆಲ್ವಉಡುಪಿಕ್ಷೇತ್ರದಲಿ ನಿಲ್ಲಿರಿಸಿ ||ಎಲ್ಲ ಭಕ್ತರಕಾವಸುಖಮಯ ಜಗತ್ಕರ್ತ |ಮೂಲ ರಾಮನ ಸಾಧು ಜನರಿಗೆ ಕಾಣಿಸಿದ 30ಮಹಿದಾಸ ಬೋಧಿಸಿದ ತತ್ವವನು ವಿವರಿಸುತ |ಮಹಂತಪೂರ್ಣಪ್ರಜÕಬದರೀಗೆ ತೆರಳಿ ||ಮಹಿಶಿರಿಕಾಂತ ಶ್ರೀ ವ್ಯಾಸನ ಬಳಿ ಇಹನು |ಅಹರಹ ಪ್ರೇಮದಿಂಸಂಸ್ಮರಿಸೆತೋರ್ವ 31ರಾಮ ಕೃಷ್ಣವ್ಯಾಸ ಜಾನಕೀಸತ್ಯಾ |ರುಕ್ಮಿಣೀಅಂಭ್ರಣಿಪ್ರಿಯತಮ ಹನುಮ ||ಭೀಮ ಮಹಾ ಪುರುಷೋತ್ತಮ ದಾಸರಿಗೆ |ನಮಿಪೆ ವಿಪಶೇಷ ಶಿವಾದ್ಯಮರ ಸನ್ನತರ್ಗೆ 32ಚತುರ್ಮುಖ ವರವಾಯು ಸರಸ್ವತಿ ಭಾರತಿಗೆ |ಸದಾ ಶ್ರೀಹರಿಯಲ್ಲಿ ಭಕ್ತಿ ಅಚ್ಛಿನ್ನ ||ಅತಿರೋಹಿತ ಜ್ಞಾನ ಪ್ರಾಚುರ್ಯರಾಗಿಹರು |ಸಾಧಾರಣವಲ್ಲ ಋಜುಗಳ ಮಹಿಮೆ 33ಋಜುಗಳರಾಜೀವಚರಣಗಳಿಗಾ ನಮಿಪೆ |ಭುಜಗಶಯ್ಯನಲಿ ಭಕ್ತಿ ಸಹಜ ಇವರಲ್ಲಿ ||ಭುಜಗಭೂಷಣಾದಿಗಳಿಗಧಿಕತಮ ಬಲಜ್ಞಾನ |ತ್ರಿಜಗಮಾನ್ಯರು ತ್ರಿಗುಣ ತಾಪವರ್ಜಿತರು 34ಅಪರೋಕ್ಷಋಜುಗಣಕೆ ಅನಾದಿಯಾಗಿಯೇ ಉಂಟು |ತಪ್ಪದೇ ಶತಕಲ್ಪ ಸಾಧನವ ಗೈದು ||ಶ್ರೀಪನಅಪರೋಕ್ಷಇನ್ನೂ ವಿಶೇಷದಿ |ಲಭಿಸಿ ಕಲ್ಕ್ಯಾದಿಸುನಾಮಧರಿಸುವರು35ಕಲ್ಕ್ಯಾದಿ ಪೆಸರಲ್ಲಿಪ್ರತಿಒಂದು ಕಲ್ಪದಲು |ಅಕಳಂಕ ಇವರು ಬಹು ಸುವಿಶೇಷ ಸಾಧನದಿ ||ಭಕ್ತ್ಯಾದಿ ಗುಣಕ್ರಮದಿ ಅಧಿಕ ಅಭಿವ್ಯಕ್ತಿಯಿಂ |ಮುಖ್ಯ ವಾಯು ಬ್ರಹ್ಮಪದವ ಪೊಂದುವರು 36ಈ ಬ್ರಹ್ಮಾದಿಗಳೊಳು ಇದ್ದು ಕೃತಿಮಾಡಿಸುವ |ಶಿರಿಸಹ ತ್ರಿವೃನ್ನಾಮ ಪ್ರಸನ್ನ ಶ್ರೀನಿವಾಸ ||ಸುಹೃದ ಸೌಭಾಗ್ಯದಗೆ ಜಯ ಜಯತು ಅರ್ಪಿತವು |ಹರಿವಾಯು ನುಡಿಸಿದಿದು ಜಯತು ಹರಿವಾಯ 37
--------------
ಪ್ರಸನ್ನ ಶ್ರೀನಿವಾಸದಾಸರು
ಶ್ರೀಧರಾ ಸುಶೀಲ |ಸುಜನಪಾಲಪಾಹಿಮಾಂ | ನಮೋ ನಮಃ |ಶ್ರೀಧರಾ ಸುಶೀಲಸುಜನಪಾಲ ಪಾಹಿಮಾಂಪಮಾಧವಮಹಿಮ ಸಾಧು ಸಜ್ಜನ ಪ್ರೇಮ |ಮೋದವಿನೋದಾ ಸುಪಾದಕೆ ನಮೋ ನಮಃ1ನಾಶನಕರ್ತವಿನಾಶನ ಚರಿತ | ದಾಸವಿಶೇಷ |ಸರ್ವೇಶನೇ ನಮೋ ನಮಃ2xmಟ veಡಿsioಟಿ='1.0' eಟಿಛಿoಜiಟಿg='%SಔUP-ಇಓಅಔಆIಓಉ%'ಶಂಕರ ಸಖನೆ ಶ್ರೀ ವೆಂಕಟರಮಣ |ಶಂಖ ಚಕ್ರಾಂಕ ಸರ್ವಾಂಕಿತ ನಮೋ ನಮಃ3ಚಂದ್ರ ಸಮಾನ್ವಿತ ನಂದಗೋಪಿಯಸುತ |ನಂದ ಮುಕುಂದ ಗೊೀವಿಂದನೇ ನಮೋ ನಮಃ4
--------------
ಗೋವಿಂದದಾಸ
ಶ್ರೀಶ ಶ್ರೀಹಯವದನ ಮೂರ್ತಿಗೊಂದಿಸುವೆಸಾಸಿರ ನಾಮದ ಒಡೆಯನೀನೆಂದು ಪನಿನ್ನ ನೋಡುವ ಇಚ್ಛೆಯಿಂದ ನಿನ್ನದಾಸರುಇನ್ನು ಗಾವುದ ದೂರದಿಂದ ಬರುತಿಹರುನಿನ್ನ ಭಕ್ತರ ಕೂಡಿ ನಿನ್ನ ಸೇವೆಯ ಮಾಡಿನಿನ್ನ ದರುಶನದಿಂದ ಧನ್ಯರಾಗುವರು 1ಹರಿದಾಸರೆಲ್ಲರೂ ಪರಮಸಂಭ್ರಮದಿಂದಹರಿದಿನದಜಾಗರಹರಿಸ್ಮರಣೆಯಿಂದಪರಮವೈಭವದಿ ತನ್ನ ಸ್ಮರಿಸುತಿಹ ಸುಜನರನುಕರುಣದಿಂದಲಿಕಾವಸಿರಿರಮಣನೆಂತೆಂದು2ಆಪತ್ತು ತಾಪತ್ರಯಂಗಳೆಲ್ಲವುನೀಗಿಶ್ರೀಪತಿಯೆ ರಕ್ಷಿಸು ರಕ್ಷಿಸೆಂದೆನುತಗೋಪತೀ ಕೃಷ್ಣನ್ನಪಾಡಿ ಪೊಗಳುವರನ್ನುಕಾಪಾಡುವನು ಸಕಲಪಾಪಗಳ ಹರಿಸಿ 3ಸೋದೆಯಲಿ ನೆಲೆಸಿರುವ ವಾದಿರಾಜರಿಗೊಲಿದುಆದರದಿ ಅವರಿತ್ತ ಸೇವೆ ಕೈಗೊಂಡುಶೋಭ ಕೃತುನಾಮ ಸಂವತ್ಸರದಿ ಸುಜನರಿಗೆಶೋಭನಂಗಳನಿತ್ತು ನೀದಯದಿ ಪೊರೆವೆ 4ಕಡು ಹರುಷದಿಂದಿತ್ತ ಕಡಲೆ ಹೂರಣ ಸವಿದುದೃಢ ಭಕ್ತರನು ಪೊರೆದೆ ಕಡುಹರುಷದಿಮೃಡನಸಖನಿನ್ನಂಘ್ರಿ ಬಿಡದೆ ಧ್ಯಾನಿಪ ಭಾಗ್ಯತಡೆಯದಲೆ ಪಾಲಿಸೈ ಕಮಲನಾಭ ವಿಠ್ಠಲ 5
--------------
ನಿಡಗುರುಕಿ ಜೀವೂಬಾಯಿ
ಷಡ್ವರ್ಗ ಸುಳಾದಿಝಂಪೆತಾಳಧನಧಾನ್ಯ ಗೃಹಕ್ಷೇತ್ರ ವನಿತೆ ಪುತ್ರಾದಿತರನೆನವಿನಲಿ ಜನುಮಗಳ ತಂದೀವ ಕಾಮಕನಕಗಿರಿ ಕೈಸಾರ್ದಡಂಪರಸುದೊರೆದಡಂಇನಿತು ತೃಪುತಿಯೈದದೆನ್ನ ಮನೋಕಾಮಜನಪರ ಸಿರಿಬಯಕೆ ಜಾಣೆಯರ ಸಂಗತಿಯಕನಸಿನೊಳಗಾದಡಂ ಬಿಡದಿಹುದು ಕಾಮತನಗಲ್ಲದ್ಹವಣದಿಹ ಕಾಮಕಾಮಿನಿಭೂತಕೆನಿತಶನ ಸಾಲದಾಯಿತೈ ಪೂರ್ಣಕಾಮಮುನಿನಾರಿಯಳ ಕಲ್ಲಮೈಯನೆತ್ತಿದಪಾದವನು ಎನ್ನ ದುರ್ವಿಷಯ ಕಾಮದಲ್ಲಿಟ್ಟು ನಿನ್ನಜ್ಞಾನ ಭಕುತಿ ವೈರಾಗ್ಯ ಕಾಮವನೀಯೊದಿನಕರಕುಲೋದ್ದಾಮ ಪ್ರಸನ್ವೆಂಕಟ ರಾಮ1ಮಠ್ಯತಾಳಗುರುಹಿರಿಯರಿಗಂಜದೆ ನಿಕ್ಕರ ನುಡಿಸುವ ಕ್ರೋಧಬರಿಯಹಂಕಾರದಿ ಬೆರತಘರಾಶಿಯನೆರಹಿಸಿ ನಿರಯವನುಣಿಸುವ ಕ್ರೋಧಮರುಳನ ದುರುಳನ ಮಾಡುವ ಕ್ರೋಧಗುರುಹಿರಿಯರಿಗಂಜದೆ ಉರುಕೋಪದಲೆದ್ದ ಕಾಳುರಗನ ಪೆಡೆದುಳಿದಾ ಸಿರಿಚರಣವ ಕ್ರೋಧಾಹಿಶಿರದ ಮ್ಯಾಲಿಡು ಗಡ ಗರುಡಾದಿ ಪ್ರಸನ್ವೆಂಕಟ ತಾಂಡವ ಕೃಷ್ಣ 2ರೂಪಕತಾಳಹೀನ ಧರ್ಮನ ಮಾಡಿಸುರಋಷಿಪಿತೃ ಋಣವೇನು ಕಳಿಯಲಿಲ್ಲವೆನ್ನ ಲೋಭಜೇನನೊಣನ ವೋಲು ತಾನುಣ್ಣನೊದಗಿಸಿನಾನಾಲಾಭದಲಿ ತುಂಬದು ಲೋಭಭಾಂಡದಾನವ ಬೇಡಿಳೆಯಾಜಾಂಡವನೊಡೆದಶ್ರೀನುತಾಂಘ್ರಿಯಲೊದ್ದು ಲೋಭದ ಕೋಶವನುನೀನೆ ಸೂರೆಯ ಮಾಡೊ ಪ್ರಸನ್ವೆಂಕಟ ವಾಮನ್ನ ಉದಾರಿಶಿಖಾಮಣಿಭಾಗ್ರ್ವಾ3ಪಂಚಘಾತ ಮಠ್ಯಅನ್ನಕೆ ಉಬ್ಬಿ ಯೌವನ ರೂಪಕೆ ಕೊಬ್ಬಿಧÀನ್ನಕೆ ಮೊಬ್ಬೇರಿಸಿತೆನ್ನ ಮದವುಎನ್ನ ಸವಿಸುವ ಪರಿವಾರ ಭುಜಬಲೆಂಬುನ್ನತಿಯಿಂದುನ್ಮತ್ತನ ಮಾಳ್ಪ ಮದವುದಾನವೇಂದ್ರನ ಮೌಳಿಯನ್ನು ತುಳಿದ ಪದದಿಎನ್ನ ಮದರಾಜನ ಮೆಟ್ಟಿಯಾಳೆಲೆ ದೇವನಿನ್ನ ಧ್ಯಾನವಿರತಿ ಮದದಿಂದ ಕೊಬ್ಬಿಸು ಪ್ರಸನ್ವೆಂಕಟ ಉರುಕ್ರಮ ಧನ್ಯರೊಡೆಯ 4ತ್ರಿವಿಡಿತಾಳಉತ್ತಮರ ಅವಗುಣವೆಣಿಸುತಹೊತ್ತು ಯಮಪುರಕೊಯ್ವ ಮತ್ಸರಮತ್ತೆ ಪರಸೌಖ್ಯಕ್ಕೆ ಕುದಿಕುದಿಸಿತು ಮತ್ಸರವುಚಿತ್ತಜನ ಶರ ಮತ್ಸರಿಸುತಿರೆಮೊತ್ತ ಗೋಪೇರ ಕುಚದ ಪೀಠದಿಒತ್ತಿ ಸುಖವಿತ್ತ ಪದವೆನ್ನೆದೆಲಿಡು ಪ್ರಸನ್ವೆಂಕಟ ಕೃಷ್ಣ 5ಅಟ್ಟತಾಳಇಂದುಮುಖಿಯರ ಕಂಡಂದಗೆಡಿಪ ಮೋಹಕಂದಗಳಾಡಿಸಿ ಕರುಣ ಉಕ್ಕಿಪ ಮೋಹತಂದೆ ತಾಯಿ ಬಂಧುವರ್ಗದ ಮೋಹಮುಂದಣಗತಿಗೆ ಮೂರ್ಛೆಯನಿತ್ತ ಮೋಹಕಂದರ್ಪನ ಗೆದ್ದಯೋಗಿಜನರ ಹೃದಯಾಂಧಕಾರವ ಗೆದ್ದು ತವಪಾದನಖಪೂರ್ಣಚಂದ್ರ ಚಂದ್ರಿಕೆದೋರಿ ಅಭಿಜÕನ ಮಾಡೆನ್ನ ದಯಾಸಿಂಧುಪ್ರಸನ್ನವೆಂಕಟ ಮುನಿಜನವಂದ್ಯ6ಏಕತಾಳಎನ್ನ ಕಾಮವೆಂಬ ಗಿರಿಗ್ವಜ್ರಾಂಕಿತ ಪದಎನ್ನ ಕ್ರೋಧವೆಂಬಾಹಿಗೆ ಧ್ವಜದಂಡಾನ್ವಿತ ಪದಎನ್ನ ಮದವೆಂಬ ಗಜಕಂಕುಶಾಂಕಿತ ಪದಎನ್ನ ಮತ್ಸರಾನ್ವಯಕೆ ಗಂಗಾನ್ವಿತ ಪದಎನ್ನ ಲೋಭ ಗೆದ್ದ ಮನೋಳಿಗೆ ಅಬ್ಜಯುತ ಪದಎನ್ನ ಮೋಹಧ್ವಾಂತ ಪೂರ್ಣೇಂದು ನಖದ ಪದಎನ್ನ ಮನೋರಥ ಸಿದ್ಧಿಯನು ಕರೆದೀವ ಪ್ರಸನ್ನವೆಂಕಟನ ದಿವ್ಯಪಾದಪಾಂಕಿತ ಪದಜತೆಇಂತು ಬಾಧಿಪ ಷಡ್ವರ್ಗದಂಬನೆ ಕಿತ್ತು ಸಂತತ ಶ್ರೀಚರಣ ಸ್ಮರಣೆಮುಂತಾದೌಷಧವನಿತ್ತೆನ್ನ ರಕ್ಷಿಸು ಧನ್ವಂತರಿ ಪ್ರಸನ್ನವೆಂಕಟ ನರಹರಿಯೆ
--------------
ಪ್ರಸನ್ನವೆಂಕಟದಾಸರು