ಒಟ್ಟು 11458 ಕಡೆಗಳಲ್ಲಿ , 137 ದಾಸರು , 6242 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಸ್ವಾಮಿ ಮುಖ್ಯಪ್ರಾಣ-ನೀ-ಮಲೆವರ ಗಂಟಲಗಾಣ ಪಸಕಲ ವಿದ್ಯಾ ಪ್ರವೀಣ-ನೀ-ಹಿಡಿದೆಯೋ ರಾಮರಚರಣಅ.ಪಏಕಾದಶೀಯ ರುದ್ರ-ನೀ-ಹಿಡಿದೆಯೊ ರಾಮರ ಮುದ್ರಾಸೇತುವೆಗಟ್ಟಿ ಸಮುದ್ರ-ನೀ-ಹಾರಿದೆಯೋ ಬಲಭದ್ರ 1ಸಂಜೀವಿನಿ ಪರ್ವತವನ್ನು-ಅಂಜದೆ ತಂದೆಯೊ ನೀನು |ಅಂಜನೆತನುಸಂಭವನು-ನಿನ್ನ-ಬೇಡಿಕೊಂಬೆನೋ ನಾನು2ವೈಕುಂಠಸ್ಥಳದಿಂದ ಬಂದು-ಪಂಪಾಕ್ಷೇತ್ರದಿನಿಂದು|ಯಂತ್ರೋದ್ಧಾರಕನೆಂದು-ಪುರಂದರ ವಿಠಲನೆ ಸಲಹೆಂದು 3
--------------
ಪುರಂದರದಾಸರು
ಸ್ವಾಮಿ ಶಂಕರನಿರಲಿಕ್ಕೆಕಾಮದಕಳವಳಿಕೇಕೆಪxmಟ veಡಿsioಟಿ='1.0' eಟಿಛಿoಜiಟಿg='%SಔUP-ಇಓಅಔಆIಓಉ%'ಗುರುನಾಮ ನಿಧಾನಿರಲಿಕ್ಕೆ | ಎನಗಿಲ್ಲೆಂಬುವದೇಕೆ ಅ.ಪ.ಅನಾಥ ಬಂಧುಅನುದಿನಎನಗಿರೆ |ಅನುಕೂಲದ ಚಿಂತ್ಯಾಕೆ |ತನುಮನಧನದೊಳು ತಾನೆ ತಾನಿರಲು |ಅನುಮಾನಿಸಲಿನ್ಯಾಕೆ ಸ್ವಾಮಿ1ದಾತನೊಬ್ಬ ಶ್ರೀನಾಥ ಎನಗಿರಲು |ಯಾತಕೆ ಪರರ ದುರಾಶೇ |ಮಾತು ಮಾತಿಗೆ ತೋರುವಸದ್ಗುರು ತೇಜಃ ಪುಂಜಗಳ್ಯಾಕೆ ಸ್ವಾಮಿ2ದೊಡ್ಡದು ಸಣ್ಣದು ಧಡ್ಡನು ಜಾಣನು |ಎಂದೆಣಿಸುವದಿನ್ಯಾಕೆ | ಗುಡ್ಡದ್ಹಾಂಗಶ್ರೀ ಶಂಕರನಿರಲು ದುಡ್ಡಿನ ಹಂಗುಗಳ್ಯಾಕೆ ಸ್ವಾಮಿ3
--------------
ಜಕ್ಕಪ್ಪಯ್ಯನವರು
ಸ್ವಾಮಿಪರಾಕುಮಹಾಸ್ವಾಮಿ ಸಜ್ಜನಪ್ರೇಮಿಪ.ಕ್ಷೀರಸಾಗರಶಯನ ನಿವಾಸಾಪಾರಗುಣಗಣಾಶ್ರಯಪಾರಮೇಷ್ಠಿ ಪ್ರಮುಖಾಮರಪೂಜಿತಚಾರುಪದಾಬ್ಜದ್ವಯ ದನು-ಜಾರಿ ಧನಂಜಯಪ್ರಿಯ ಮದವಾರಣಕೃತನಿರ್ಭಯ ನಮ್ಮದೂರನುಲಾಲಿಸುಚಿನ್ಮಯ ಜಯ1ದುಷ್ಟ ನಿಶಾಚರರಟ್ಟುಳಿಘನಕಂಗೆಟ್ಟುದು ಸುರಮುನಿಗಣ ಆಭ್ರಷ್ಟರು ಮಾಡುವ ನಿಷ್ಠುರಕೆ ಮೈಗೊಟ್ಟೆವು ಸಂಕರ್ಷಣ ನಾವಿ-ನ್ನೆಷ್ಟೆಂಬುದು ದುರ್ಗುಣವಶ ಬಿಟ್ಟೆವು ಸುರಪಟ್ಟಣ ನಮ್ಮಕಷ್ಟವು ಪದಕರ್ಪಣ ಪರಾಯಣ 2ಅಂತರಂಗ ಬಹಿರಂಗ ಭ್ರಷ್ಟದನುಸಂತತಿ ಸಂತತಿ ಭಾರಿ ಬಲುಭ್ರಾಂತಿವಿಜ್ಞಾನವಿತಾನಧುರೀಣರ್ಸಂತಾಪಿಪರು ಮುರಾರಿ ನಮ್ಮಸಂತೈಸೈ ಗಿರಿಧಾರಿ ಶ್ರೀಕಾಂತ ಕೃಪಾರ್ಣವಶೌರಿಜಗ-ದಂತ ವಿಹಾರಿ ನಿರಂತ ಪರಂತಪ 3ಚೆನ್ನಕೇಶವ ಚರಾಚರಾತ್ಮ ಚೈತನ್ಯರೂಪ ಶ್ರೀರಂಗ ನಮ್ಮಬಿನ್ನಪಲಾಲಿಸುತ್ರಿಭುವನವನ್ನುಸನ್ನುತಶುಭಾಂಗ ಸ-ರ್ವೋನ್ನತ ಮಹಿಮತರಂಗದುರಿತಾನ್ವಯತಿಮಿರಪತಂಗ ಸುಪ್ರಸನ್ನಸದೋದಿತವಿಹಂಗತುರಂಗ4ನೀಲೇಂದೀವರ ಶ್ಯಾಮಲ ಕೋಮಲಕಾಲನಿಯಾಮಕ ಪ್ರಾಣ ನಿನ್ನೋಲಗ ಸೇವಕರಾಳಿಯೂಳಿಗವ ಕೇಳು ತ್ರಿಲೋಕತ್ರಾಣನತಪಾಲ ಪರೇಶ ಪುರಾಣ ಶ್ರೀಲೋಲ ವಿಗತ ಪರಿಮಾಣ ಹೃದ-ಯಾಲಯಮಣಿ ಲಕ್ಷ್ಮೀನಾರಾಯಣ 5
--------------
ಪಾವಂಜೆ ಲಕ್ಷ್ಮೀನಾರ್ಣಪ್ಪಯ್ಯ
ಸ್ವಾಮಿಪುಷ್ಕರ ತೀರನಿಲಯನಮೋಸ್ವಾಮಿವರಾಹ ವೆಂಕಟನಾಯಕಸ್ವಾಮಿಪಾಹಿಪಾಹಿ ಸ್ವಾಮಿತ್ರಾಹಿಸ್ವಾಮಿ ವರಾಹವೆಂಕಟನಾಯಕ ಪ.ಯಜÕಗಾತ್ರ ವಿಧಿನುತ ಪ್ರಭು ಶ್ರೀಯಜÕವರಾಹವೆಂಕಟನಾಯಕಯಜÕ ಭೋಕ್ತø ಹೇಮಾಂಬಕ ಹರಯಜÕವರಾಹವೆಂಕಟನಾಯಕ1ಭೂಭಯದೂರ ಧರಾಮನೋಹರಭೂವರಾಹ ವೆಂಕಟನಾಯಕಶೋಭಿತ ಬಾಲಚಂದ್ರೋಪಮಕ್ರೋಡಭೂವರಾಹ ವೆಂಕಟನಾಯಕ 2ಶ್ವೇತಾದ್ರೀಶಾರ್ಚಿತ ಪಾದಕಮಲಶ್ವೇತವರಾಹ ವೆಂಕಟನಾಯಕಪಾತಕಮೋಚಕಪ್ರಸನ್ವೆಂಕಟಶ್ವೇತವರಾಹ ವೆಂಕಟನಾಯಕ 3
--------------
ಪ್ರಸನ್ನವೆಂಕಟದಾಸರು
ಸ್ವಾಮೀ ರಕ್ಷಿಸು ಸುಬ್ರಹ್ಮಣ್ಯಕಾಮಿತಪ್ರದ ಸುರಸ್ತೋಮಾಗ್ರಗಣ್ಯ ಪ.ಜನ್ಮ ಜನ್ಮಾಂತರದ ಕರ್ಮಾನುಸಾರದಿಂದುರ್ಮತಿಗೆಳಸಿಯಹಮ್ಮಮತೆಯಲಿದುರ್ಮದಾಂಧನಾದೆದುರಿತದೂರವಿರಿಸುನಿರ್ಮಲಜ್ಞಾನೋಪದೇಶವನಿತ್ತೆನ್ನ 1ಪ್ರತ್ಯಗಾತ್ಮನ ನಾಮ ಕೀರ್ತನೆ ಗೈಯುತ್ತಭಕ್ತಿಸೌಭಾಗ್ಯವಿರಕ್ತಿಯ ನೀಡುಭೃತ್ಯವತ್ಸಲ ಭವಭಯಹರ ಗಿರಿಜಾ-ಪುತ್ರನೆ ಪರಮಪವಿತ್ರ ಸುಚರಿತ್ರನೆ 2ಸುರಲೋಕವನುಕಾವಧುರಧೀರ ಪ್ರಭು ನಿನಗೀನರಲೋಕವನು ಕಾವದುರು ಕಷ್ಟವೇನುಪರಿಶುದ್ಧ ಸ್ಥಾನಿಕಧರಣೀಸುರಕುಲ-ಗುರುವೆಂದು ಚರಣಕ್ಕೆ ಶರಣಾಗತನಾದೆ 3ಸಾಕುವಾತನು ನೀನೆ ಸಲಹುವಾತನು ನೀನೆಬೇಕು ಬೇಡೆಂಬುವರ ನಾ ಕಾಣೆ ದೊರೆಯೆಲೋಕೇಶ ಸುಕುಮಾರ ಶೋಕಮೋಹವಿದೂರನೀಕರಿಸದೆಯೆನ್ನ ಸ್ವೀಕಾರ ಮಾಡಯ್ಯ 4ಪೃಥ್ವಿಯೊಳ್ಪಾವಂಜೆ ಕ್ಷೇತ್ರಾಧಿವಾಸನೆಸುತ್ರಾಮಾದಿ ಸುರಮೊತ್ತ ಪೂಜಿತನೆಕರ್ತಲಕ್ಷ್ಮೀನಾರಾಯಣನ ಸಾರೂಪ್ಯನೇದೈತ್ಯದಲ್ಲಣ ವಲ್ಲೀದೇವಿ ಮನೋಹರನೆ 5
--------------
ಪಾವಂಜೆ ಲಕ್ಷ್ಮೀನಾರ್ಣಪ್ಪಯ್ಯ
ಹಕ್ಕಿಯ ಹೆಗಲೇರಿ ಬಂದವಗೆ ನೋಡಕ್ಕ ಮನಸೋತೆ ನಾನವಗೆ ಪ.ಸತ್ರಾಜಿತನ ಮಗಳೆತ್ತಿದ ಉನ್ಮತ್ತ ನರಕನೊಳು ಕಾದಿದಮತ್ತೆ ಕೆಡಹಿದ ಅವನಂಗವಸತಿಗಿತ್ತನು ಆಲಿಂಗನವ 1ಹದಿನಾರು ಸಾವಿರ ನಾರಿಯರ ಸೆರೆಮುದದಿಂದ ಬಿಡಿಸಿಮಾಮನೋಹರಅದಿತಿಯಕುಂಡಲತಳೆದಾ ಹರವಿಧಿಸುರ ನೃಪರನು ಸಲಹಿದ2ಉತ್ತಮ ಪ್ರಾಗ್ಜೋತಿಷ ಪುರವ ಭಗದತ್ತಗೆ ಕೊಟ್ಟ ವರಾಭಯವಕರ್ತಕೃಷ್ಣಯ್ಯನ ನಂಬಿದೆ ಶ್ರೀಮೂರ್ತಿಯ ಪಾದವ ಹೊಂದಿದೆ 3ನರಕ ಚತುರ್ದಶಿ ಪರ್ವವಹರಿಹರುಷದಿ ಪ್ರಕಟಿಸಿದನು ದೇವಶರಣಾಗತಜನ ವತ್ಸಲ ರಂಗಪರಮಭಾಗವತರ ಪ್ರತಿಪಾಲ4ಹೊಗಳಿ ಕೃಷ್ಣಯ್ಯನ ಮಹಿಮೆಯ ಮುಕ್ತಿನಗರದ ಅರಸನ ಕೀರ್ತಿಯಜಗದೀಶ ಪ್ರಸನ್ವೆಂಕಟೇಶನೆ ಭಕ್ತರಘಹಾರಿ ರವಿಕೋಟಿಕಾಶನೆ 5
--------------
ಪ್ರಸನ್ನವೆಂಕಟದಾಸರು
ಹಂಚಿನ ಇದಿರಲಿ ಹಲ್ಲನು ತೆಗೆಯಲುಮಿಂಚುವ ಕನ್ನಡಿಯಾದೀತೆ ? ಪ.ಮಿಂಚಿನ ಬೆಳಕಲಿ ದಾರಿಯ ನಡೆದರೆಮುಂಚುವ ಊರಿಗೆ ಮುಟ್ಟೀತೆ ? ಅಪಬಾಲರ ಭಾಷೆಯ ನಂಬಿ ನಡೆದರೆಶೀಲದ ಕೆಲಸಗಳಾದೀತೆ ?ಜೋಲುವ ಹೋತಿನ ಮೊಲೆಗಳ ಹಿಂಡಲುಹಾಲಿನ ಹನಿಯದು ಹೊರಟೀತೆ ?ಕಾಲುವೆ ಬಚ್ಚಲಕುಣಿ ನೀರಿಗೆ -ಘನಬಾಳೆಯ ತೋಟವು ಆದೀತೆ ?ಮೇಲುಬಣ್ಣಾದಾ ಆಲದ ಹಣ್ಣುನಾಲಿಗೆಸವಿಯನು ಕೊಟ್ಟೀತೆ ? 1ಭಾಷೆಯ ನುಡಿಗಳಿಗಾಸೆ ಮಾಡೆ ಮನದಾಸೆಯ ಕಾರ್ಯಗಳಾದೀತೆ ?ದೋಸೆಯ ಛಿದ್ರದಿ ಆರಿಸೆ ಕಾಳಿನರಾಶಿಯು ಹಸನವು ಆದೀತೆ ?ಕಾಸಿ ಕಬ್ಬಿಣವ ಗಟ್ಟಿ ಕೂಡಿಟ್ಟರೆಮಾಸದ ಮನೆ ಬದುಕಾದೀತೆ ?ಕಾಸಾರದೆದುರಿಗೆ ಹರಿಕಥೆ ಹೇಳ್ದರೆಸೋಸಿ ಕೇಳ್ದು ತಲೆದೂಗೀತೆ ? 2ಮಿಥ್ಯಾವಚನಿಯ ಮಾತನು ನಂಬಲುಹೊತ್ತಿಗೆ ಅದು ಬಂದೊದಗೀತೆ ?ಸತ್ತವನೆದುರಿಗೆ ಸುತ್ತಲು ಕುಳಿತುಅತ್ತರೆ ಆ ಹೆಣ ಕೇಳೀತೆ ?ನಿತ್ಯನಪುಂಸಕನೈದಲು ತರುಣಿಗೆಚಿತ್ತ ಸುಖವು ಸೂರಾದೀತೆ ?ಕುತ್ತಿಗೆಗೊಯ್ಕನ ಕಾಲು ಹಿಡಿದರೆಹತ್ಯದೊಳ್ಹೇಸಿಕೆಹುಟ್ಟೀತೆ ?3ಬೋರಗಲ್ಲಿನ ಮುಂದೆ ಬಡತನ ಹೇಳಲುಸಾರಸುಖಕ್ಕನುವಾದೀತೆ ?ಚೋರನು ಚಂದ್ರಗೆ ಕೈಮರೆ ಮಾಡಲುಚೌರ್ಯಕೆ ಕತ್ತಲು ಒದಗೀತೆ ?ನೀರಿಲ್ಲದ ಕೆರೆಯೊಳಗೆ ಮತ್ಸ್ಯದಾಹಾರಿಗೆ ಮೀನವು ದೊರಕೀತೆಕಾರಣವಿಲ್ಲದ ಲೌಕಿಕ ಕಥೆಯಿಂಘೋರನರಕ ಭಯ ತಪ್ಪೀತೆ ?4ಬೆಟ್ಟಕೆ ಕಲ್ಲನು ಹೊತ್ತೊಯ್ದೊಗೆಯಲುಹೊಟ್ಟೆಗೆಓದನ ಸಿಕ್ಕಿತೆ ?ಹುಟ್ಟು ಬಂಜೆಗೆ ಹಡೆಯುವ ವ್ಯಥೆ ಹೇಳಲುಹೊಟ್ಟೆಯಲಿ ಕಳವಳ ಹುಟ್ಟೀತೆ ?ಕೆಟ್ಟ ಬಯಸುವರಿಗೆ ಮೃಷ್ಟಾನ್ನವುಣಿಸಲುಕೆಟ್ಟ ಮಾತು ಅದು ಬಿಟ್ಟೀತೆ?ದಿಟ್ಟ ಪುರಂದರವಿಠಲರಾಯನಬಿಟ್ಟರೆ ಸದ್ಗತಿಯಾದೀತೆ? 5
--------------
ಪುರಂದರದಾಸರು
ಹಂಚು ಬಲ್ಲುದೆ ಹಲ್ಲ ತೆಗೆದರಪಕಾರವನುಮಿಂಚುಳ್ಳ ಕಂಚು - ಕನ್ನಡಿಯಲ್ಲದೆ ಪ.ಕಳ್ಳ ಬಲ್ಲನೆ ತನ್ನ ಕರುಣದುಪಕಾರವನು ?ಕೊಳ್ಳಿ ಬಲ್ಲುದೆ ತನ್ನ ಮನೆಯೆಂಬುದ ?ಸುಳ್ಳಿ ಬಲ್ಲನೆ ಗ್ರಾಮದೊಳಗಣಾ ಸುದ್ದಿಯನು ?ಬಳ್ಳಿಬಲೆ ಬಲ್ಲುದೇ ತನ್ನ ವನವೆಂಬುದನು ? 1ಬಾಳಬಲ್ಲುದೆ ತಾನು ಮೇಲೊಗೆವ ಫಲಗಳನು ?ಸೂಳೆ ಬಲ್ಲುಳೆ ಮನೆಯ ಬಡತನಗಳ ?ಖೂಳ ಬಲ್ಲನೆ ಜಾಣರೊಳಗೊಂದು ಸವಿನುಡಿಯ ?ಕೇಳಬಲ್ಲನೆ ಕಿವುಡ ಏಕಾಂತವ ? 2ಯೋಗಿ ಬಲ್ಲನೆ ಭೋಗದೊಳಗಣಾ ಸುದ್ದಿಯನು ?ಭೋಗಿ ಬಲ್ಲನೆ ಕೆಲಸ - ಉದ್ಯೋಗವ ?ಕಾಗೆಬಲ್ಲುದೆ ಕೋಗಿಲಂತೆ ಸ್ವರಗೈವುದನು ?ಗೂಗೆ ಬಲ್ಲುದೆ ಹಗಲ ಹರಿದಾಟವ ? 3ಕೋಣ ಬಲ್ಲುದೆ ಕುದುರೆಯಂತೆ ವೈಹಾಳಿಯನು ?ಕಾಣಬಲ್ಲನೆ ಕುರುಡ ಕನ್ನಡಿಯನು ?ದೀನವತ್ಸಲ ನಮ್ಮ ಪುರಂದರವಿಠಲನನುಕಾಣಬಲ್ಲನೆ ಜಾÕನವಿಲ್ಲದವನು ? 4
--------------
ಪುರಂದರದಾಸರು
ಹಣ್ಣು ತಾ ಬೆಣ್ಣೆ ತಾರೆ - ಗೋಪಮ್ಮ-|ಹಣ್ಣು ತಾ ಬೆಣ್ಣೆ ತಾರೆ ಪಅಡವಿಯೊಳಗೆ ಅಸುರನ ಕೊಂದ ಕೈಗೆ |ಮಡುವಿನೊಳಗೆ ಮಕರನ ಸೀಳ್ದ ಕೈಗೆ ||ಪೊಡಿವಿಯೊಳಗೆ ಚೆಂಡನಾಡಿದ ಕೈಗೆ |ಸಡಗರದಲಿ ಭೂಮಿ ಬೇಡಿದ ಕೈಗೆ 1ಶಂಖ ಚಕ್ರಗಳ ಪಿಡಿದಂಥ ಕೈಗೆ |ಶಂಕೆಯಿಲ್ಲದೆ ಮಾವನ ಕೊಂದ ಕೈಗೆ ||ಬಿಂಕದಿಂದಲಿ ಕೊಳಲೂದುವ ಕೈಗೆ |ಪಂಕಜಮುಖಿಯರ ಕುಣಿಸುವ ಕೈಗೆ 2ದಿಟ್ಟತನದಲಿಬೆಟ್ಟವೆತ್ತಿದ ಕೈಗೆ|ಸೃಷ್ಟಿಯ ದಾನವ ಬೇಡಿದ ಕೈಗೆ ||ದುಷ್ಟಭೂಪರನೆಲ್ಲ ಮಡುಹಿದ ಕೈಗೆ |ಕೆಟ್ಟ ದಾನವರನು ಸದೆಬಡಿದ ಕೈಗೆ 3ಕಾಳಿಯ ಮಡುವನು ಕಲಕಿದ ಕೈಗೆ |ಸೋಳಸಾಸಿರ ಗೋಪಿಯರಾಳಿದ ಕೈಗೆ ||ಮೇಳದ ಭಕ್ತರುದ್ಧರಿಸುವ ಕೈಗೆ |ಏಳು ಗೂಳಿಯ ಗೆದ್ದ ಯದುಪನ ಕೈಗೆ 4ಬಿಲ್ಲು - ಬಾಣಗಳನು ಪಿಡಿದಂಥ ಕೈಗೆ |ಮಲ್ಲಸಾಧನೆಯನು ಮಾಡಿದ ಕೈಗೆ ||ಎಲ್ಲ ದೇವರದೇವ ರಂಗನ ಕೈಗೆ |ಬಲ್ಲಿದಪುರಂದರವಿಠಲನ ಕೈಗೆ5
--------------
ಪುರಂದರದಾಸರು
ಹನುಮ - ಭೀಮ - ಮಧ್ವ ಮುನಿಯನೆನೆದು ಬದುಕಿರೊಅನುಮಾನಂಗಳಿಲ್ಲದಲೆ ಮನದಭೀಷ್ಟಂಗಳನೀವ ಪಪ್ರಾಣಿಗಳ ಪ್ರಾಣೋದ್ದಾರ ಪ್ರಾಣರಲ್ಲುತ್ತಮ ಮತ್ತೆಪ್ರಾಣಾಪಾನ ವ್ಯಾನೋದಾನ ಸಮಾನರೊಳುತ್ಕøಷ್ಟ ||ಕಾಣಿರೇನೋ ಕಾಯಕರ್ಮ ಚಕ್ಷುರಿಂದ್ರಿಯಗಳಿಗೆತ್ರಾಣಕೊಟ್ಟು ಸಲಹುವ ಜಾಣಗುರುಮುಖ್ಯಪ್ರಾಣ1ಕಾಮಧೇನು ಚಿಂತಾಮಣಿ ಕಲ್ಪವೃಕ್ಷನಾದ ಸ್ವಾಮಿಪ್ರೇಮದಿಂದ ನೆನಯುವವರ ಭಾಗ್ಯಕ್ಕೆಣೆಯುಂಟೇ ? ||ಸಾಮಾನ್ಯವಲ್ಲವೊ ಈಗ ಮೋಕ್ಷಾದಿ ಸಂಪದದಾತಆ ಮಹಾ ಪರೋಕ್ಷಜ್ಞಾನ ದಾಢ್ರ್ಯ ಭಕುತಿ ಕೊಡುವ 2ಅವತಾರ ತ್ರಯಗಳಿಂದ ಶ್ರೀಹರಿಯ ಸೇವಿಸುವತವಕದಿ ಪೂಜಿಪ ಮಹಾಮಹಿಮೆಯುಳ್ಳವನು ||ಕವಿತೆವಾಕ್ಯವಲ್ಲವಿದು ಅವಿವೇಕವೆಂದೆಣಿಸಬೇಡಿಭವಬಂಧನ ಕಳೆದುಕಾವಪುರಂದರವಿಠಲನ ದಾಸ3
--------------
ಪುರಂದರದಾಸರು
ಹನುಮ ನಮ್ಮ ಕಾಮಧೇನು ಭೀಮ ನಮ್ಮ ಕಲ್ಪವೃಕ್ಷಆನಂದತೀರ್ಥಗುರು ಚಿಂತಾಮಣಿ ಪ.ಸೂತ್ರರಾಮಾಯಣ ಮಹಾವ್ಯಾಕರ್ಣ ಪಂಚರಾತ್ರ ಭಾರತಪುರಾಣ ಶ್ರುತ್ಯರ್ಥ ಸುಧಾರಸವಾವೇತ್ತøಜನಕಾ ಸಂತತಕಿಂಪುರುಷವರುಷದಿ ಉಣಲಿತ್ತನಾ ಸುಸ್ವರದಿ ಶ್ರೀರಾಮಪ್ರಿಯನು 1ರಾಜಸೂಯ ಮೂಲದಿಂದ ಶಾಖೋಪಶಾಖ ಸಧರ್ಮಸೋಜಿಗದ ಕರ್ಮಕುಸುಮ ಬ್ರಹ್ಮತ್ವಛಲದಿರಾಜಿಸುತ್ತ ಸಹಸ್ರಾಕ್ಷ ಸಖಮುಖ್ಯದ್ವಿಜರ್ಗೆ ಸುಖಬೀಜ ನಿಂತು ಹೊರೆದನು ಶ್ರೀಕೃಷ್ಣ ಪ್ರಿಯನು 2ಹಂತ ಭಾಷ್ಯಧ್ವಾಂತದಿ ವೇದಾಂತವಡಗೆಪೋಕಮಣಿಮಂತನ ಮುರಿದನು ಮೂವತ್ತೆರಡು ಲಕ್ಷಣದಿಕಾಂತಿಯಿಂದ ಪ್ರಸನ್ನವೆಂಕಟ ಕಾಂತನ್ನ ಪ್ರಕಾಶಿಸಿದಚಿಂತಿತಾರ್ಥ ನಮಗೀವ ಶ್ರೀವ್ಯಾಸಪ್ರಿಯನು ವೇದವ್ಯಾಸಪ್ರಿಯನು 3
--------------
ಪ್ರಸನ್ನವೆಂಕಟದಾಸರು
ಹನುಮ ನಮ್ಮ ತಾಯಿತಂದೆ-ಭೀಮನಮ್ಮ ಬಂಧು ಬಳಗ |ಆನಂದ ತೀರ್ಥರೆಮಗೆ ಗತಿಗೋತ್ರವಯ್ಯ ಪತಾಯಿ ತಂದೆ ಹಸುಳೆಗಾಗಿ ಸಾಯ ಮಾಡಿ ಸಾಕುವಂತೆಆಯಾಸವಿಲ್ಲದೆ ಸಂಜೀವನ ತಂದೆ ||ಗಾಯಗೊಂಡ ಕಪಿಗಳನ್ನು ಸಾಯದಂತೆ ಪೊರೆದೆ ರಘುರಾಯನಂಘ್ರಿಗಳೆ ಸಾಕ್ಷಿ ತ್ರೇತಾಯುಗದಲ್ಲಿ 1ಬಂಧು ಬಳಗದಂತೆ ಆಪ್ಪದ್ಬಂಧುವಾಗಿ ಪಾರ್ಥನಿಗೆಬಂದ ದುರಿತಂಗಳ ಪರಿಹರಿಸಿ ||ಅಂಧಕಜಾತಕ ಕೊಂದು ನಂದನಂದನಿಗರ್ಪಿಸಿದ ಗೋ-ವಿಂದನಂಘ್ರಗಳೆ ಸಾಕ್ಷಿ ದ್ವಾಪರಯುಗದೆ 2ಗತಿಗೋತ್ರರಂತೆ ಸಾಧುಮತಿಗಳಿಂಗೆ ಗತಿಯನಿತ್ತುಮತಿಗೆಟ್ಟ ಇಪ್ಪತ್ತೊಂದು ಮತವ ಖಂಡಿಸಿ |ಮತಗೆಟ್ಟ ವೈಷ್ಣವರಿಗೆ ಗತಿಯ ತೋರಿದೆ ಪರಮಾತ್ಮಗತಿಪುರಂದರವಿಠಲ ಸಾಕ್ಷಿ ಕಲಿಯುಗದಲ್ಲಿ3
--------------
ಪುರಂದರದಾಸರು
ಹನುಮಂತ ದೇವ ನಮೋ ಪವನಧಿಯನು ದಾಟಿ ರಾವಣನ ದಂಡಿಸಿದೆ ಅ.ಪಅಂಜನೆಯ ಆತ್ಮದಿಂದುದಿಸಿ ನೀ ಮೆರೆದೆಯೋಕಂಜಸಖಮಂಡಲಕೆ ಕೈ ದುಡುಕಿದೆ ||ಭುಂಜಿಸೀರೇಳು ಜಗಂಗಳನು ಉಳುಹಿದೆ ಪ್ರ-ಭಂಜನಾತ್ಮಜ ಗುರುವೆ ಸರಿಗಾಣೆ ನಿನಗೆ 1ಹೇಮಕುಂಡಲಹೇಮಯಜೊÕೀಪವೀತಖಿಳಹೇಮಕಟಿಸೂತ್ರಕೌಪೀನಧಾರೀ ||ರೋಮ ಕೋಟಿ ಲಿಂಗ ಸರ್ವಶ್ಯಾಮಲ ವರ್ಣರಾಮಭೃತ್ಯನೆ ನಿನಗೆ ಸರಿಗಾಣೆ ಗುರುವೆ 2ರಾಮ-ಲಕ್ಷನರ ಕಂಡಾಳಾಗಿ ನೀ ಮೆರೆದೆ |ಭೂಮಿಜೆಗೆ ಮುದ್ರೆಯುಂಗುರವನಿತ್ತೆ ||ಆ ಮಹಾ ಲಂಕಾ ನಗರವೆಲ್ಲವನು ಸುಟ್ಟುಧೂಮ ಧಾಮವ ಮಾಡಿ ಆಳಿದೆಯೊ ಮಹಾತ್ಮ 3ಆಕ್ಷಯ ಕುಮಾರಕನ ನಿಟ್ಟೊರಸಿ ಬಿಸುಟು ನೀರಾಕ್ಷಸಾಧಿಪ ರಾವಣನು ರಣದಲಿ ||ವಕ್ಷಸ್ಥಳದಲ್ಲಿ ಶಿಕ್ಷಿಸಲು ಮೂರ್ಛೆಯ ಬಗೆಯರಕ್ಷಿಸಿದೆ, ರಕ್ಷಿಸಿದೆ ರಾಯ ಬಲವಂತ 4ಶ್ರೀಮದಾಚಾರ್ಯ ಕುಲದವನೆಂದೆನಿಸಿದೆಯೈಶ್ರೀ ಮಹಾಲಕುಮಿ ನಾರಾಯಣಾಖ್ಯ ||ಶ್ರೀ ಮನೋಹರಪುರಂದರವಿಠಲ ರಾಯನಸೌಮ್ಯಮನದಾಳು ಹನುಮಂತ ಬಲವಂತ 5
--------------
ಪುರಂದರದಾಸರು
ಹನುಮಂತ ನೀ ಬಲು ಜಯವಂತನಯ್ಯ |ಅನುಮಾನವಿಲ್ಲ ಆನಂದತೀರ್ಥರಾಯ ಪರಾಮಸೇವಕನಾಗಿ ರಾವಣನ ಪುರವ ನಿರ್ಧೂಮವ ಮಾಡಿದೆ ನಿಮಿಷದೊಳಗೆ ||ಭೂಮಿಯ ಪುತ್ರಿಗೆ ಮುದ್ರೆಯುಂಗುರವಿತ್ತು |ಕ್ಷೇಮ ಕುಶಲವ ಶ್ರೀರಾಮ ಪಾದಕರ್ಪಿಸಿದೆ 1ಕೃಷ್ಣಾವತಾರದಿ ಭೀಮನಾಗಿ ಬಂದುದುಷ್ಟ ದೈತ್ಯರನೆಲ್ಲ ಸಂಹರಿಸಿದೆ |ದೃಷ್ಟಿಹೀನ ಧೃತರಾಷ್ಟ್ರನ ವಂಶವನುಕಷ್ಟವಿಲ್ಲದೆ ಕೊಂದು ಶ್ರೀಕೃಷ್ಣಪಾದಕರ್ಪಿಸಿದೆ 2ಪತಿತ ಸಂಕರ ಹುಟ್ಟಿ ಮತವೆಲ್ಲ ಕೆಡಿಸಲುಮತಿ ಹೀನರಾದ ಸಜ್ಜನರಿಗೆಲ್ಲ ||ಅತಿ ಬೇಗದಲಿ ಮಧ್ವಯತಿರೂಪಧರಿಸಿ ಸದ್ಗತಿಪಾಲಿಸಿದೆಪುರಂದರವಿಠಲನ ದಾಸ3
--------------
ಪುರಂದರದಾಸರು
ಹನುಮನ ಮತವೆ ಹರಿಯ ಮತವು |ಹರಿಯ ಮತವೇ ಹನುಮನ ಮತವು ಪಹನುಮನು ಒಲಿದರೆಹರಿತಾನೊಲಿವನು |ಹನುಮನು ಮುನಿದರೆ ಹರಿಮುನಿವ ಅ.ಪಹನುಮನ ನಂಬಿದ ಸುಗ್ರೀವ ಗೆದ್ದ |ಹನುಮನ ನಂಬದ ವಾಲಿಯು ಬಿದ್ದ 1ಹನುಮನು ಒಲಿದ ವಿಭೀಷಣ ಗೆದ್ದಹನುಮನು ಮುನಿಯಲು ರಾವಣ ಬಿದ್ದ 2ಹನುಮನುಪುರಂದರವಿಠಲನ ದಾಸ|ಹನುಮನೊಳ್ಪುರಂದರವಿಠಲನಾವಾಸ3
--------------
ಪುರಂದರದಾಸರು