ಒಟ್ಟು 13912 ಕಡೆಗಳಲ್ಲಿ , 138 ದಾಸರು , 7210 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಏಕೆ ದಯಮಾಡಲೊಲ್ಲೆ - ಎಲೊ ಹರಿಯೆ |ಮೂಕನಾಗುವರೆ ಹೀಗೆ ಪಲೋಕವನು ರಕ್ಷಿಪ ಲಕ್ಷ್ಮೀಕಾಂತನು ನೀನೇ |ವಾಕುಮೊರೆಗಳಕೇಳಿಒಲಿದು ದಯಮಾಡಯ್ಯಅ.ಪಅರ್ಥವಿಲ್ಲದ ಬಾಳ್ವೆಯು - ಇರುವುದಿದು|ವ್ಯರ್ಥವಾಗಿದೆ ಶ್ರೀಪತಿ ||ಕರ್ತುನಿನ್ನೊಳು ನಾನು ಕಾಡಿ ಬೇಡುವನಲ್ಲ|ಸತ್ವರದಿ ದಯಮಾಡೊ ತುಳಸೀದಳಪ್ರಿಯ 1ಮನದೊಳಗಿನ ಬಯಕೆ - ಎಲೈಸ್ವಾಮಿ |ನಿನಗೆ ಪೇಳುವೆನು ನಾನು ||ಬಿನುಗುದೇವತೆಗಳಿಗೆ ಪೇಳಲಾರೆವೊ ಹರಿಯೆ|ತನುಮನ ನಿನ್ನ ಕೂಡ ಇಹವು ದಯಮಾಡೊ 2ಮೂರು ಲೋಕವ ಪಾಲಿಪ - ಎನ್ನಯ ಸ್ವಾಮಿ |ಭಾರವೆ ನಿನಗೆ ನಾನು ||ಕಾರುಣ್ಯನಿಧಿ ನಮ್ಮ ಪುರಂದರವಿಠಲ ಶ್ರೀ - |ದಾರಾಮನೋಹರ ಸಾಕಾರ ದಯವಾಗೊ3
--------------
ಪುರಂದರದಾಸರು
ಏಕೆ ನಿರ್ದಯನಾದೆ ಎಲೋ ದೇವನೇಶ್ರೀಕಾಂತ ಎನ್ನ ಮೇಲೆ ಎಳ್ಳಷ್ಟು ದಯವಿಲ್ಲ ಪಕಂಗೆಟ್ಟು ಕಂಬವನು ಒಡೆದು ಬಯಲಿಗೆ ಬಂದುಹಿಂಗದೆ ಪ್ರಹ್ಲಾದನಪ್ಪಿಕೊಂಡೆ ||ಮಂಗಳ ಪದವಿತ್ತು ಮನ್ನಿಸಿದೆ ಅವ ನಿನಗೆಬಂಗಾರವೆಷ್ಟು ಕೊಟ್ಟನು ಹೇಳೋ ಹರಿಯೇ 1ಸಿರಿಗೆ ಪೇಳದೆ ಮುನ್ನ ಸೆರಗ ಸಂವರಿಸದೆಗರುಡನ ಮೇಲೆ ಗಮನವಾಗದೆ ||ಭರದಿಂದ ನೀ ಬಂದು ಕರಿಯನುದ್ದರಿಸಿದೆಕರಿರಾಜನೇನು ಕೊಟ್ಟನು ಹೇಳು ಹರಿಯೇ 2ಅಜಮಿಳನು ಅಣ್ಣನೆ ವಿಭೀಷಣನು ತಮ್ಮನೆನಿಜದಿ ರುಕ್ಮಾಂಗದ ಮೊಮ್ಮಗನೆ ||ಭಜನೆಗೈವರೆ ಹಿತರೆ ನಾ ನಿನಗನ್ಯನೆತ್ರಿಜಗಪತಿ ಸಲಹೆನ್ನಪುರಂದರವಿಠಲ3
--------------
ಪುರಂದರದಾಸರು
ಏಕೆ ಮುರ್ಖನಾದೆ - ಮನುಜಾಏಕೆ ಮುರ್ಖನಾದೆ ? ಪ.ಏಕೆ ಮೂರ್ಖನಾದೆ ನೀನುಕಾಕು ಬುದ್ಧಿಗಳನು ಬಿಟ್ಟುಲೋಕನಾಥನ ನೆನೆಯೊ ಮನುಜಾ ಅಪಮಕ್ಕಳು ಹೆಂಡರು ತನ್ನವರೆಂದುರೊಕ್ಕವನು ಗಳಿಸಿಕೊಂಡುಸೊಕ್ಕಿಂದ ತಿರುಗುವರೇನೊ ಹೇ ಮನುಜಾ 1ಕಕ್ಕಸದ ಯಮದೂತರು ಬಂದುಲೆಕ್ಕವಾಯಿತು ನಡೆಯೆಂದರೆಸಿಕ್ಕವರೆಲ್ಲ ಬಿಡಿಸುವರೇನೊ ಹೇ ಮನುಜಾ 2ಅರಿಷಡ್ವರ್ಗದ ಆಟವ ಬಿಟ್ಟುಪುರಂದರವಿಠಲನ ಹೊಂದಲುಬೇಕುಹರಿಯನು ಸೇರುವ ಮಾರ್ಗವ ನೋಡೋ ಹೇ ಮನುಜಾ 3
--------------
ಪುರಂದರದಾಸರು
ಏಕೆ ಮೈ ಮರೆದೆ ನೀನು - ಜೀವನವೇ - |ಏಕೆ ಮೈಮರೆದೆ ನೀನು ಪಏಕೆ ಮೈಮರೆದೆ ನೀ - ಲೋಕಾರಾಧ್ಯನ ಪಾದ|ಬೇಕೆಂದು ಭಜಿಸು ಕಾಣೋ - ಜೀವನವೇ ಅ.ಪ.ಮದ್ದಾನೆಗಳೆಂಟು ಸೊಕ್ಕಿನಿಂ ಬರುವಾಗ |ಎದ್ದು ಕುಳ್ಳಿರಬಾರದೆ - ಜೀವನವೇ ||ಅಧ್ಯಾತ್ಮಕಾ ಹರಿನಾಮವ ಶ್ರುತಿಮಾಡಿ |ಒದ್ದು ಬಿಸಾಡು ಕಣೊ - ಜೀವನವೇ 1ಕಂದರ್ಪನೆಂಬವ ಕಾದುತ ಬರುವಾಗ |ನಿಂದಿಸುತಿರಬಾರದೆ - ಜೀವನವೇ ||ಒಂದೇ ಮನಸು ಎಂಬ ವಜ್ರಾಯುಧವ ಪಿಡಿದು |ಕೊಂದು ಬೀಸಾಡು ಕಾಣೊ - ಜೀವನವೇ 2ವಿಷಯದಿ ಸುಖಕಾಣೆ ಪಶುಜನರೊಳು ದೇಹ |ಹಸನುಗಳೆಯಲು ಬೇಡವೋ - ಜೀವನವೇ||ಬಿಸಜಾಕ್ಷ ಪುರಂದರವಿಠಲನೊಲಿಯೆ ಸುಖ -|ರಸದಿ ಲೋಲಾಡು ಕಾಣೋ - ಜೀವನವೇ 3
--------------
ಪುರಂದರದಾಸರು
ಏಕೆ ವೃಂದಾವನವು ಸಾಕು ಗೋಕುಲವಾಸ |ಏಕೆ ಬಂದೆಯೊ ಉದ್ಧವಾ? ಪಸಾಕು ಸ್ನೇಹದ ಮಾತನೇಕ ಮಹಿಮನು ತಾನು |ಆ ಕುಬುಜೆಯನು ಕೂಡಿದ-ಉದ್ಧವಾ ಅ.ಪಬಿಲ್ಲು ಬಿಳಿಯಯ್ಯನ ಬೇಟ ನಗೆನುಡಿ ನೋಟ |ಇಲ್ಲದಂತಾಯಿತಲ್ಲ ||ಎಲ್ಲರಿಂದಗಲಿಸಿದ ಕ್ರೂರ ಅಕ್ರೂರನವ |ವಲ್ಲಭನ ಒಯ್ದನಲ್ಲ ||ಮಲ್ಲರನು ಮರ್ದಿಸುತ ಮಾವ ಕಂಸನ ಕೊಂದು |ಘಲ್ಲನಾಭನ ತಂದು ತೋರೈ-ಉದ್ಧವಾ 1ಅನುದಿನೊಳಾದರಿಸಿ ಅಧರಾಮೃತವನಿತ್ತು |ಇನಿದಾದ ಮಾತುಗಳಲಿ ||ಮನದ ಮರ್ಮವ ತಿಳಿದ ಮನಸಿಜಪಿತನ ಸಖವು |ಮನಸಿಜನ ಕೇಳಿಯಲ್ಲಿ ||ಕನಸಿನಲಿ ಕಂಡ ತೆರನಾಯಿತಾತನ ಕಾಂಬು |ವನಕ ಬದುಕುವ ಭರವಸೆ ಹೇಳು-ಉದ್ಧವಾ 2ಕರುಣನಿಧಿಯೆಂಬುವರು ಕಪಟನಾಟಕದರಸು |ಸರಸ ವಿರಸವ ಮಾಡಿದ ||ಸ್ಮರಿಸಿದವರನು ಕಾಯ್ವ ಬಿರುದುಳ್ಳ ಸಿರಿರಮಣ |ಮರೆದು ಮಧುರೆಯ ಸೇರಿದ ||ಪರಮಭಕ್ತರ ಪ್ರಿಯ ಪುರಂದರವಿಠಲನ |ನೆರೆಗೂಡಿಸೈ ಕೋವಿದ-ಉದ್ಧವಾ 3
--------------
ಪುರಂದರದಾಸರು
ಏಕೆಕಕುಲಾತಿಪಡುವೆ - ಎಲೆ ಮನವೆಪಲೋಕವನೆ ಸಲಹುವ ಶ್ರೀನಿವಾಸನು ನಮ್ಮ |ಸಾಕಲಾರದೆ ಬಿಡುವನೇ - ಮನವೆ ಅಪಆನೆಗಳಿಗೆಯ್ದಾರು ಮಣವಿನಾಹಾರವನು ಅಲ್ಲಿ ತಂದಿತ್ತವರದಾರೊ |ಜೇನುನೊಣ ಮೊದಲಾದ ಕ್ರಿಮಿ - ಕೀಟಗಳಿಗೆಲ್ಲ |ತಾನುಣಿಸದಲೆ ಬಿಡುವನೇ - ಮರುಳೆ 1ಕಲ್ಲಿನೊಳಗಿರುವ ಕಪ್ಪೆಗಳಿಗಾಹಾರವನುಅಲ್ಲಿ ತಂದಿತ್ತವರದಾರೊ |ಎಲ್ಲವನು ತೊರೆದು ಅರಣ್ಯ ಸೇರಿದ್ರ್ದವರ |ಅಲ್ಲಿ ನಡಸದೆ ಬಿಡುವನೇ - ಮರುಳೆ 2ಅಡವಿಯೊಳಗೇ ಪುಟ್ಟುವಾ ಮೃಗಕುಲಕ್ಕೆಲ್ಲಒಡೆಯನಾರುಂಟು ಪೇಳೊ |ಗಿಡದಿಂದ ಗಿಡಕೆಹಾರುವ ಪಕ್ಷಿಗಳಿಗಲ್ಲಿ |ಪಡಿಯ ನಡೆಸದೆ ಬಿಡುವನೇ - ಮರುಳೆ 3ಕಂಡಕಂಡವರ ಕಾಲಿಗೆ ಎರಗಿ ಎಲೆ ಮರುಳೆಮಂಡೆ ದಡ್ಡಾಯಿತಲ್ಲ |ಭಂಡ ಮನವೇ ನೀನು ಕಂಡವರಿಗೆರಗದಿರುಕೊಂಡಾಡಿ ಹರಿಯ ಭಜಿಸೋ - ಮರುಳೆ 4ಎಂಬತ್ತುನಾಲ್ಕುಲಕ್ಷ ಜೀವರಾಶಿಗಳನ್ನುಬೆಂಬಿಡದೆ ಸಲುಹುತಿಹನು |ನಂಬು ಶ್ರೀ ಪುರಂದರವಿಠಲನ ಪಾದವನುನಂಬಿದರೆ ಸಲಹದಲೆ ಬಿಡುವನೇ - ಮರುಳೆ 5
--------------
ಪುರಂದರದಾಸರು
ಏನ ಮಾಡಲಿ ಮಗನೆ ಏಕೆ ಬೆಳಗಾಯಿತು |ಮಾನಿನಿಯರು ಬಂದುಮಾನಕಳೆಯುವರುಪಹಾಲು, ಮೊಸರು, ಬೆಣ್ಣೆ, ಕದ್ದನೆಂತೆಂಬುವರು |ಮೇಲಿಟ್ಟ ಕೆನೆಯನು ಮೆದ್ದನೆಂಬುವರು ||ಬಾಲರನೆಲ್ಲರ ಬಡಿದನೆಂಬರು ಎಂಥ |ಕಾಳು ಹೆಂಗಸು ಇವನ ಹಡೆದಳೆಂಬುವರೊ 1ಕಟ್ಟಿದ ಕರುಗಳ ಬಿಟ್ಟನೆಂತೆಂಬರೊ |ಮೆಟ್ಟಿ ಸರ್ಪನ ಮೇಲೆ ತುಳಿದನೆಂಬುವರೊ ||ಪುಟ್ಟ ಬಾಲೆಯರ ಮೋಹಿಸಿದನೆಂಬುವರೊ ಎಂಥ |ಕೆಟ್ಟ ಹೆಂಗಸು ಇವನ ಹಡೆದಳೆಂಬುವರೊ 2ಗಂಗಾಜನಕನಿನ್ನ ಜಾರನೆಂತೆಂಬರೊ |ಶೃಂಗಾರ ಮುಖ ನಿನ್ನ ಬರಿದೆ ದೂರುವರೊ ||ಮಂಗಳಮಹಿಮ ಶ್ರೀ ಪುರಂದರವಿಠಲ |ಹಿಂಗದೆ ಎಮ್ಮನು ಸಲಹೆಂತೆಂಬುವರೊ 3
--------------
ಪುರಂದರದಾಸರು
ಏನನಿತ್ತು ಮೆಚ್ಚಿಸುವೆನು ಏನೋ ವಿಠಲ ಪಮಾನಿನಿಯರಸ ನಿನ್ನನಾಮವೆನ್ನ ನೆನೆವೆನಯ್ಯ ಅ.ಪಓದಿ ನಿನ್ನ ಮೆಚ್ಚಿಸುವೆನೆ ವೇದವನ್ನು ಅಜನಿಗಿತ್ತೆವಾದಿಸಿ ನಿನ್ನ ಮೆಚ್ಚಿಸುವೆನೆ ಆದಿಶೇಷಶಯನನೆ 1ಆಡಿ ನಿನ್ನ ಮೆಚ್ಚಿಸುವೆನೆ ಮೃಡನಯ್ಯನಯ್ಯನೆಪಾಡಿ ನಿನ್ನ ಮೆಚ್ಚಿಸುವೆನೆ ಪವನಜನೊಡೆಯನೆ 2ಚಿನ್ನವಿತ್ತು ಮೆಚ್ಚಿಸುವೆನೆ ಸಿರಿದೇವಿಯ ರಮಣನೆಪೂರ್ಣಾನಂದ ಙ್ಞÕನಿ ನೀನೆಪುರಂದರವಿಠಲಯ್ಯ3
--------------
ಪುರಂದರದಾಸರು
ಏನಾಯಿತೀ ಜನಕೆ ಮೌನವದು ಕವಿದಂತೆ |ಮಾನುಷ್ಯರಾಗಿ ಮರೆತರು ಹರಿಯನು ಪ.ನಾಲಗೆಗೆ ಮುರಿಯಿತೆ ನೆಗ್ಗಿಲ ಕೊನೆಮುಳ್ಳು |ಬಾಲತನದಲಿ ಭೂತ ಹೊಡೆಯಿತೆ - ಕೆಳಗು - |ಮೇಲಿನ ತುಟಿ ಎರಡು ಒಂದಾಯಿತೇ -ಅವರ - |ಕಾಲಮೃತ್ಯು ಬಂದು ಕಂಗೆಡಿಸಿತೆ ? 1ಘಟಸರ್ಪ ಕಚ್ಚಿ ವಿಷ ಘನವಾಗಿ ಏರಿತೆ |ಕಟಗರಿಸಿ ನಾಲಗೆ ಕಡಿದು ಹೋಯಿತೆ ? ||ಹಟ ಹಿಡಿದ ಹೊಲೆಮನಸುಹರಿ ಎನ್ನಲಾರದೆ |ಕುಟಿಲ ಚಂಚಲ ಬುಧ್ಧಿ ಕಂಗೆಡಿಸಿತೆ ? 2ಹರಿಯೆಂದರವರ ಶಿರ ಹರಿದು ಬೀಳುವುದೆ |ಪರಬ್ರಹ್ಮ ಪಣೆಯಲ್ಲಿ ಬರೆದಿಲ್ಲವೆ ||ಸಿರಿದೇವಿಗೊಲಿದ ಶ್ರೀ ಪುರಂದರವಿಠಲನ |ಸ್ಮರಿಸಿದರೆ ಸಿಡಿಲೆರಗಿ ಸುಟ್ಟು ಕೊಲ್ಲುವುದೆ ? 3
--------------
ಪುರಂದರದಾಸರು
ಏನಾಯಿತು ರಂಗನೆ ನೋಡಿರಮ್ಮ-ನಿ-|ಧಾನಿಸಿ ಎನಗೊಂದು ಪೇಳಿರಮ್ಮ ಪಪುಟ್ಟಿದಾರಭ್ಯ ಕಣ್ಣ ಮುಚ್ಚನಮ್ಮ-ತಾನು |ಎಷ್ಟಾದರೂ ಮೊಲೆಯುಣ್ಣನಮ್ಮ ||ಸೊಟ್ಟಾದ ಮುಖ ಮೇಲಕ್ಕೆತ್ತನಮ್ಮ-ಹೀಗೆ |ಎಷ್ಟು ಹೇಳಲಿ ಬಾಯ ಮುಚ್ಚನಮ್ಮ 1ಕಾಯಇದ್ದಂತಿದ್ದು ಹೆಚ್ಚಿತಮ್ಮ-ಹೆತ್ತ |ತಾಯಿಯ ಬಲವಿಲ್ಲದಾಯಿತಮ್ಮ ||ನೋಯೆ ನೋಟಕೆಅಬ್ಧಿಬತ್ತಿತಮ್ಮ-ಅವನ |ಬಾಯಿಯೊಳಗೆವಿಶ್ವತೋರಿತಮ್ಮ2ಅತ್ಯಂತ ಮಾತುಗಳನಾಡಿದನಮ್ಮ-ಮುಂದೆ |ಸತ್ಯವು ಕುದುರೆಯನೇರುವನಮ್ಮ ||ನಿತ್ಯನಿರ್ದೋಷಪುರಂದರವಿಠಲ ತನ್ನ-|ಭಕ್ತರ ಸಲಹುವದೇವನಮ್ಮ 3
--------------
ಪುರಂದರದಾಸರು
ಏನು ಇರದ ಎರಡು ದಿನದ ಸಂಸಾರಜ್ಞಾನದಲಿ ದಾನಧರ್ಮವ ಮಾಡಿರಯ್ಯ ಪ.ಹಸಿದು ಬಂದವರಿಗೆ ಅಶನವೀಯಲು ಬೇಕುಶಿಶುವಿಗೆ ಪಾಲ್ಬೆಣ್ಣೆಯುಣಿಸಬೇಕುಹಸನಾದ ಭೂಮಿಯನು ಧಾರೆಯರೆಯಲು ಬೇಕುಪುಸಿಯಾಡದಲೆ ಭಾಷೆ ನಡೆಸಲೇಬೇಕು 1ಕಳ್ಳತನಗಳ ಮಾಡಿ ಒಡಲ ಹೊರೆಯಲು ಬೇಡಕುಳ್ಳಿರ್ದ ಸಭೆಯೊಳಗೆ ಕುಟಿಲ ನಡಿಸಲು ಬೇಡಒಳ್ಳೆಯವ ನಾನೆಂದು ಬಲು ಹೆಮ್ಮಲಿರಬೇಡಬಾಳ್ವೆ ಸ್ಥಿರವೆಂದು ನೀನಂಬಿ ಕೆಡಬೇಡ 2ದೊರೆ ತನವು ಬಂದಾಗ ಕೆಟ್ಟ ನುಡಿಯಲು ಬೇಡಸಿರಿ ಬಂದ ಕಾಲಕ್ಕೆ ಮರೆಯಬೇಡಸಿರಿವಂತನಾದರೆ ಪುರಂದರವಿಠಲನಚರಣ ಕಮಲವ ಸೇರಿ ಸುಖಿಯಾಗು ಮನುಜ 3
--------------
ಪುರಂದರದಾಸರು
ಏನು ಕೌತಕ ಕೃಷ್ಣ ತಾನೆ ಕನಸಿನೊಳು |ಮಾನವರ ತೆರನಂತೆ ಮುರುಳಾಡಿಸಿದನೆನ್ನ ಪಹಿಂದೆ ಮಾಡಿದ ಪದವ ಒಂದು ಹೇಳೆಂದೆನುತ |ಮುಂದೆ ಅದರಂದವನು ಎಲ್ಲ ತಾಪೇಳ್ದ ||ಒಂದು ದೋಸೆಯ ತನಗೆ ತಂದುಕೊಡು ಎಂದೆನಲು |ತಿಂದ ಮೀಸಲಕೊಡೆನು ಎಂದು ಹೇಳಿದೆನು 1ಮೋಸಹೋದೆನು ನಾನು ದೋಸೆಯನು ಹರಿಗೆ-ಆ-ಪೋಶನವನಿಕ್ಕದೇ ಪೋಷಿಸಿದೆನು ||ಮಿಸಲಾದರು ಅಹುದು ದೋಷವಿಲ್ಲೆಂದೆನುತ |ಆಸುರದ ಮಾತುಗಳ ವಾಸಿತೋರಿಸಿದನು 2ಎಳೆಯ ಪ್ರಾಯದೊಳಿರುವ ಚೆಲುವೆಯೊರ್ವಳು ಬಂದು |ಹೊಳೆಯೊಳಗೆ ಈಸಾಡಿ ನಲಿವುದನು ನೋಡಿ ||ನಳಿನಮುಖಿಯನು ಮೇಲೆ ಕರೆಸಲಾ ಮೈಲಿಗೆಯ |ತೊಳಕೊಂಡು ಒಳಯಿಂಕೆ ಬಂದುದನು ಕಂಡೆ 3ಈ ರೀತಿ ಸಿರಿಸಹಿತ ವಾರಿಜಾಕ್ಷನು ಕೃಷ್ಣ |ತೋರಿದನು ಸ್ವಪ್ನ ಕಣ್ಣಾರೆ ನೋಡಿದೆನು ||ಹಾರಿಹೋಯಿತು ಕಷ್ಟ ಸೂರೆಗೊಂಡೆನು ಸಿರಿಯ |ಏರಿ ಬಂದುದು ಶುಭದ ವಾರಿಧಿಯು ಮುಂದೆ.................... 4ಈ ಮಹಾಮೂರ್ತಿಯನು ಜಾವಪರ್ಯಂತರದಿ |ಕಾಮಿಸಿಯೆ ನೋಡಿದೆನು ಸೌಮ್ಯನಸ್ಯದಲಿ ||ಆ ಮಹಾ ಹರಿಯು ಪರಧಾಮವನು ಕೈಕೊಂಡು |ಭೂಮಿಪತಿಯಾಗಿರ್ದ ಪುರಂದರವಿಠಲ........................... 5
--------------
ಪುರಂದರದಾಸರು
ಏನು ಗತಿಯೊ ಮುಂದೆನಗೆ ಗೋವಿಂದಶ್ರೀನಿವಾಸ ರಕ್ಷಿಸದಿರೆ ದಯದಿಂದ ಪ.ನಿಶಿದಿನ ಹಸಿವುತೃಷೆಸುಡುವ ಕುಮರಿಯುಮಸಿವರ್ಣ ಮಾಡಿ ಕೇರಿಡಿವ ಮೂರುರಿಯು 1ನಾಚಿಕಿಲ್ಲದ ವಿಷಯಾಸೆಯಸಹ್ಯನೀಚ ದುರುಕ್ತಿಯಸ್ತ್ತ್ರದ ಘನಗಾಯ 2ಮಾಯದ ಕಡಲೊಳು ಕಟ್ಟಿಹ ಕೊರಳುಆಯಾಸ ಬಡುತ ಬಡುತ ಬಿದ್ದಿತುರುಳು 3ಎಳ್ಳನಿತು ಜ್ಞಾನ ಅಹಂಕಾರ ಬಹಳಘಲ್ಲನೆ ತಗಲುವ ಜ್ಞಾನದಶೂಲ4ಮರಹುಮದಗಳೆಂಬ ಮುಸುಕಿದ ಮೆಳೆಯುಪರದಾರ ಪರನಿಂದೆಯಗ್ನಿಯ ಮಳೆಯು 5ಬೇಡಿದ ಬಯಕೆ ಸಾಧ್ಯಾಗದ ನೋವುಮೂಢತನದಿ ದಿನ ನೂಕುವ ಸಾವು 6ಇನ್ನಾರೆ ಸಜ್ಜನ ಸಂಗಕೌಷಧಮುನ್ನ ಕೊಡಿಸೊ ಪ್ರಸನ್ವೆಂಕಟ ಮುಕುಂದ 7
--------------
ಪ್ರಸನ್ನವೆಂಕಟದಾಸರು
ಏನು ಫಲ ಇದು ಏನು ಫಲಏನು ಫಲ ಇನ್ನೇನು ಫಲಪಬೇವಿನ ಮೂಲಿಕೆ ಬೆಲ್ಲವ ಸುರಿದರೆಹಾವಿಗೆ ಹಾಲೆರೆದಷ್ಟೆ ಫಲಮಾವಿನ ಮರದಡಿ ಗಾಯನ ಹಾಡಲುಸಾವಿನ ಮನೆಯೊಳಗತ್ತ ಫಲ1ಕೋಣನ ಮುಂದೆ ವೀಣೆಯ ನುಡಿಸಲುಮಾಣಿಕ್ಯ ಮರ್ಕಟಗಿತ್ತ ಫಲಶ್ವಾನನ ಬಾಲವ ನಳಿಗೆಯೊಳಿಟ್ಟರೆಹೀನ ಕುಲಜ ಮಡಿಯುಟ್ಟ ಫಲ2ಮೂರ್ಖಗೆ ಬುದ್ಧಿಯ ಮಾತನು ಪೇಳಲುಗೋರ್ಕಲ್ಲ ಮೇಲೆ ಮಳೆ ಹೊಯ್ದ ಫಲಊರ್ಕತಿ ಕಂಟಕನಾಗಿಹ ಮನುಜನುನೂರ್ಕಾಲ ಬದುಕಿದರೇನು ಫಲ3ಸೂಳೆಯ ಬಳಿಯಲಿ ಅಂತರ್ಯ ನುಡಿದರೆಗಾಳಿಗೆ ಕಸ್ತೂರಿ ಇಟ್ಟ ಫಲಕೋಳಿಯ ಕಾಲಿಗೆ ಗೆಜ್ಜೆಯ ಕಟ್ಟಲುನೀಲಿಯ ನೀರೊಳು ತೊಳೆದ ಫಲ4ಹಂದಿಯ ಕೊರಳಿಗೆ ಹಾರವ ಹಾಕಲುಅಂಧಗೆ ಕನ್ನಡಿ ಕೊಟ್ಟ ಫಲಮಂಧರಧರ ಗೋವಿಂದನೋಳ್ವೈರದಿಇಂzÀ್ರನು ಮಳೆ ಸುರಿದ ಫಲ5<?xmಟ veಡಿsioಟಿ='1.0' eಟಿಛಿoಜiಟಿg='uಣಜಿ-8'?>
--------------
ಗೋವಿಂದದಾಸ
ಏನು ಬೇಡಲಿ ನಿನ್ನ ಹರಿಯೆ ಪಏನ ಬೇಡಲಿ ನಿನ್ನ ಚಂಚಲ ಕಠಿಣನ |ಮಾನದಿಂದ ಮೋರೆ ಓರೆಮಾಡುವನ ಅ.ಪಕರುಳಹರಕನ - ಏನ ಬೇಡಲಿ |ತಿರಿದು ತಿಂಬುವನ ||ಕೊರಳಗೊಯ್ಕ ಅರಣ್ಯ ತಿರುಗವನ ಮೊ - |ಸರು ಬೆಣ್ಣೆ ಕದ್ದು ತಿಂಬವನ 1ವಾಸಶೂನ್ಯನ - ಬೇಡಲೇನು ಕತ್ತಿ - |ಬೀಸಿ ಸವರುವನ ||ಕಾಸುವೀಸವನೆಲ್ಲ ಮೀಸಲು ಮಾಡಿಟ್ಟು |ಕೇಸಕ್ಕಿ ಉಂಡುಂಡು ವಾಸಿಸುವನ2ಬೇಡಿದರೆ ಕೊಡನ - ಮೋರೆನೋಡಿ |ಭಿಡೆಯ ಹಿಡಿಯದವನ |ಬಡವರ ಕರೆತಂದು ಅಡಿಗೆ ಸೇರಿಸಿಕೊಂಡ |ಒಡೆಯ ಪುರಂದರವಿಠಲದೊರೆಯ 3
--------------
ಪುರಂದರದಾಸರು