ಒಟ್ಟು 25998 ಕಡೆಗಳಲ್ಲಿ , 137 ದಾಸರು , 9262 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ವನಜಾತಾಂಬಕತೇನಮೋನಮೋ ಪ ಪುರುಹೂತ ಸಹೋದರ ನಮೋನಮೋ ಅ.ಪ ನಮೋನಮೋ ನಮೋನಮೋ 1 ರಾಮಯ ನಿರ್ಮಲ ನಮೋನಮೋ ಮುಜ್ವಲ ನಮೋನಮೋ 2 ಸುಂದರ ನಮೋನಮೋ ನಮೋ ನಮೋ 3 ನಮೋನಮೋ ನಮೋನಮೋ 4 ನಮೊನಮೋ ನಮೋನಮೋ 5
--------------
ಸರಗೂರು ವೆಂಕಟವರದಾರ್ಯರು
ವನಭೋಜನ ಊರ್ವಶಿ: ಇದೀಗ ಮನವು ಇಂದಿರಾಕ್ಷಿ ಇದೀಗ ಮನವುಪ. ಮಧುಸೂದನ ತನ್ನ ಸದನದಿಂದಲಿ ಒಮ್ಮೆ ಒದಗಿ ಪಯಣಗೈದು ಪದುಳದಿ ಮಂಡಿಪ1 ವಾಸುದೇವ ತಂಪಾಶುಗದಿಂದಾ- ಯಾಸವ ಬಿಡಿಸಿ ಸಂತೋಷಪಡಿಸುವಂತಿದೀಗ2 ಭಾಗವತರು ಅನುರಾಗದಿ ಕೂಡಿ ಸ- ರಾಗದಿ ಯೋಗಾರೋಗಣೆಮಾಡುವದೀಗ3 ಸತ್ಪಾತ್ರ ವಿಯೋಗ ಸು- ಕ್ಷೇತ್ರ ಸುಧಾಮಯ ಕೀರ್ತಿಯೆಂದಿನಿಸುವ 4 ತರುಗುಲ್ಮಾವಳಿ ಸುರಮುನಿಗಳು ಕಾಣೆ ಉರು ಪಾಷಾಣವೆಲ್ಲವು ಸಚ್ಚರಿತವು5 ರಂಭೆ : ಪೋಗಿ ಬರುವ ವನಕ್ಕಾಗಿ ನಾಗವೇಣಿ ಲೇಸಾಗಿ ಬೇಗ ನಾವುಪ. ಭಾಗವತಾದಿ ಸಮಾಗಮವಾದರೆ ಭಾಗ್ಯವಂತೆಯರ್ನಾವಾಗಿ1 ಹರಬ್ರಹ್ಮಾದಿ ನಿರ್ಜರರಿಗಸಾಧ್ಯವು ಹರಿಪ್ರಸಾದವೆಂದು ಸಾಗಿ ಬೇಗ2 ನಾರಿ ನಿನ್ನ ಉಪಕಾರ ಮರೆಯೆ ನಾ ಭೂರಿ ಪುಣ್ಯವಶಳಾಗಿ3 ಕಾಣದಿರಲು ಯೆನ್ನ ಪ್ರಾಣ ನಿಲ್ಲದು ಕಾಣೆ ಶ್ರೀನಿವಾಸನ ಭೇಟಿಗಾಗಿ4 ಊರ್ವಶಿ : ಅಭಿಷೇಕವನು ಗೈದರಾಗ ಮನಸಿಗನುರಾಗ ಪ. ವಿಭುಧೋತ್ತಮರೆಲ್ಲರು ಕೂಡುತ್ತ ಶುಭ ಋಗ್ವೇದೋಕ್ತದಿ ನಲಿಯುತ್ತಅ.ಪ. ಕ್ಷೀರಾರ್ಣವದೊಳಗಾಳಿದವಂಗೆ ಕ್ಷೀರಾಬ್ಧಿಯ ದುಹಿತೆಯ ಗಂಡನಿಗೆ ನೀರಜನಾಭನ ನಿಖಿಲ ಚರಾಚರ ಪೂರಿತ ಕಲ್ಮಷದೊರಗೆ ಕ್ಷೀರದ1 ಚದುರತನದಿ ಗೊಲ್ಲರೊಳಾಡಿದಗೆ ದಧಿಪಾಲ್ ಬೆಣ್ಣೆಯ ಸವಿದುಂಡವಗೆ ಮದನಜನಕ ಮಹಿಮಾಂಬುಧಿ ಕರುಣಾ- ಸ್ಪದ ಸತ್ಯಾತ್ಮ ಸನಾಥಗೆ ದಧಿಯ2 ಶ್ರುತಿಸ್ಮøತಿತತಿನುತ ರತಿಪತಿಪಿತಗೆ ಅತುಲಿತಗುಣ ಸೂನೃತಭಾಷಿತಗೆ ದಿತಿಸುತಹತ ಶೋಭಿತ ಮೂರುತಿ ಶಾ- ಶ್ವತವಾಶ್ರಿತ ವಾಂಛಿತಗೆ ಘೃತವ3 ಮಧುಸೂದನ ಮಂದರಗಿರಿಧರೆಗೆ ಮೃದುವಾಕ್ಯಗೆ ಮಂಗಲಾಂಗನಿಗೆ ಪದಮಳಾಕ್ಷ ಪರಾತ್ಪರವಸ್ತು ನೀ- ರದ ಶ್ಯಾಮಲ ನಿತ್ಯಾತ್ಮಗೆ ಮಧುವಿನ4 ಕರುಣಾಕರ ಕಮಲಜತಾತನಿಗೆ ದುರುಳ ಸುಬಾಹು ತಾಟಕಿ ಮರ್ದನಗೆ ನರಕಾಂತಕ ನಾರಾಯಣ ಸಕಲಾ- ಮರಪೂಜಿತಗೆ ಸರ್ವಾತ್ಮಗೆ ಸಕ್ಕರೆ5 ಎಳೆತುಳಸೀವನಮಾಲಾಧರಗೆ ಫಲದಾಯಕ ಪರಬ್ರಹ್ಮರೂಪನಿಗೆ ಕಲುಷರಹಿತ ನಿರ್ಮಲಚಾರಿತ್ರ್ಯ ನಿ- ಶ್ಚಲಿತಾನಂದ ನಿತ್ಯನಿಗಳ ನೀರಿನ6 ಕನಕಾಂಬರಧರ ಶೋಭತನಿಂಗೆ ಮನಕಾನಂದವ ಪಡಿಸುವನಿಂಗೆ ಚಿನಮಯ ಪರಿಪೂರ್ಣ ವಿಶ್ವಂಭರ ಜನಕಜಾ ವರನಿಗೆ ಕನಕಾನನೀಕದ7 * * * ವೆಂಕಟೇಶ ಕಣ್ಣ ಮುಂದೆ ನಿಂತಿದಂತಿದೆಪ. ಶಿರದೊಳು ರತ್ನಕಿರೀಟದ ಝಳಕ ಮೆರೆವ ಲಲಾಟದಿ ಕಸ್ತೂರಿತಿಲಕ ವರ ಕರ್ಣಕುಂಡಲಗಳ ಮಯಕನಕ ಚೆಲುವ ಚರಾಚರಭರಿತಜ ಜನಕ1 ಕಂಬುಕಂಠದಿ ಕೌಸ್ತುಭವನಮಾಲ ಇಂಬಾಗಿಹ ಭೂಷಣ ಶುಭಲೋಲ ಸಂಭ್ರಮಿಸುವ ಮೋಹನ ಗುಣಶೀಲ ಅಂಬುಜನಾಭಾಶ್ರಿತಜನಪಾಲ2 ಶಂಖಸುದರ್ಶನಗದಾಪದ್ಮ ಧಾರಿ ಕಂಕಣವೇಣುವಡ್ಯಾಣವಿಹಾರಿ ಬಿಂಕದ ಬಿರುದಾಂಕಿತ ಕಂಸಾರಿ ಶಂಕೆಯಿಲ್ಲದ ಭೂಷಣಾಲಂಕಾರಿ3 ಎಡಬಲದಲಿ ಮಡದಿಯರ ವಿಲಾಸ ಕಡುಬೆಡಗಿನ ಪೀತಾಂಬರಭೂಷ ಕಡಗ ಕಾಲಗೆಜ್ಜೆ ಅಂದುಗೆಯಿಟ್ಟು ತೋಷ ಒಡೆಯ ಶ್ರೀನಾರಾಯಣ ಸರ್ವೇಶ4 ಈ ರೀತಿಯಲಿ ಶೃಂಗಾರನಾಗುತ್ತ ಭೂರಿಭಕ್ತರ ಕಣ್ಮನಕೆ ತೋರುತ್ತ ನಾರದಾದಿ ಮುನಿವರ ಗೋಚರದ ಚಾರುಚರಣವನು ತೋರಿಸಿ ಪೊರೆದ5 * * * ಆರೋಗಣೆಯ ಗೈದನು ಶ್ರೀರಂಗ ಸಾರಸವಾದ ಸಮಸ್ತ ವಸ್ತುಗಳ ಪ. ಧೂಪದೀಪನೈವೇದ್ಯವಿಧಾನ ಶ್ರೀಪರಮಾತ್ಮ ಮಂಗಲಗುಣಪೂರ್ಣ1 ಸುರತರುವಿನ ಸೌಭಾಗ್ಯದ ತೆರನ ಮರಕತಮಯ ಹರಿವಾಣದೊಳಿದನ2 ಭಕುತರ ಸೌಖ್ಯವಿನ್ನೇನೆಂಬುವೆನು ಶಕುತ ಶ್ರೀಮಾಧವ ನಿರತ ತೋರುವನು3 * * * ಆರತಿ ಶ್ರೀನಿವಾಸಂ ಶ್ರೀವೆಂಕಟೇಶಂ ಗಾರತಿ ಶ್ರೀನಿವಾಸಂಪ. ಮಂಗಲಾಂಗ ನರಸಿಂಗ ಮನೋಹರ ರಂಗರಾಯ ಶ್ರೀಗಂಗಾಜನಕಗೆ1 ಮಾಧವ ಮಧುಹರ ಮೋದಭರಿತ ಜಗ- ದಾಧಾರ ವೇಣುನಾದವಿನೋದಗೆ2 ನಿತ್ಯನಿರಂಜನ ಸತ್ಯಸ್ವರೂಪಗೆ ಪ್ರತ್ಯಗಾತ್ಮಪರತತ್ತ್ವಸ್ವರೂಪಗೆ3 ಭೋಜನವ ಗೈದರು ಪ. ಮೂಜಗತ್ಪತಿಯ ಪ್ರಸಾದಪ್ರತಾಪದಿ ನೈಜವಾಗಿಹ ಪಾಪ ಮಾಜಿ ಹೋಗಾಡುತ್ತ1 ಜಿಹ್ವೆಗೆ ರುಚಿಕರವಪ್ಪುದ ಮಿಗಿಲಾದ ಶಾಕಪಾಕಗಳನ್ನು ಪಾತ್ರದಿ ತೆಗೆದು ಸಂತೋಷ ಬೆಡಗುಗಳ ತೋರುತ್ತ2 ಹಪ್ಪಳ ಸಂಡಿಗೆಯು ತಪ್ಪು ಒಗರ ಶಾಲ್ಯನ್ನಗಳೆಲ್ಲವ ತಪ್ಪದೆ ಸವಿದು ಬಾಯ್ ಚಪ್ಪರಿಸಿದರಾಗ3 ಹೋಳಿಗೆಯು ಕಾಯದ ಜಡಗಳು ಮಾಯಕವಾದವು ಆಯುರಾರೋಗ್ಯ ಸುಶ್ರೇಯ ಕಾರಣವಾಯ್ತು4 ಸುರರು ಉರಗ ಮಾನವರೆಲ್ಲರೂ ದೊರೆಯ ಪ್ರಸಾದವು ದೊರಕಿತು ಎನುತ ವಿ- ಸ್ತರವಾದ ತೋಷದಿ ಭರದಿಂದೊದಗುತಲಿ5
--------------
ತುಪಾಕಿ ವೆಂಕಟರಮಣಾಚಾರ್ಯ
ವನಭೋಜನ ಊರ್ವಶಿ:ಇದೀಗ ಮನವು ಇಂದಿರಾಕ್ಷಿ ಇದೀಗ ಮನವು ಪ. ಮಧುಸೂದನ ತನ್ನ ಸದನದಿಂದಲಿ ಒಮ್ಮೆ ಒದಗಿ ಪಯಣಗೈದು ಪದುಳದಿ ಮಂಡಿಪ 1 ವಾಸುದೇವ ತಂಪಾಶುಗದಿಂದಾ- ಯಾಸವ ಬಿಡಿಸಿ ಸಂತೋಷಪಡಿಸುವಂತಿದೀಗ 2 ಭಾಗವತರು ಅನುರಾಗದಿ ಕೂಡಿ ಸ- ರಾಗದಿ ಯೋಗಾರೋಗಣೆಮಾಡುವದೀಗ 3 ಸತ್ಪಾತ್ರ ವಿಯೋಗ ಸು- ಕ್ಷೇತ್ರ ಸುಧಾಮಯ ಕೀರ್ತಿಯೆಂದಿನಿಸುವ 4 ತರುಗುಲ್ಮಾವಳಿ ಸುರಮುನಿಗಳು ಕಾಣೆ ಉರು ಪಾಷಾಣವೆಲ್ಲವು ಸಚ್ಚರಿತವು 5 ರಂಭೆ : ಪೋಗಿ ಬರುವ ವನಕ್ಕಾಗಿ ನಾಗವೇಣಿ ಲೇಸಾಗಿ ಬೇಗ ನಾವು ಪ. ಭಾಗವತಾದಿ ಸಮಾಗಮವಾದರೆ ಭಾಗ್ಯವಂತೆಯರ್ನಾವಾಗಿ 1 ಹರಬ್ರಹ್ಮಾದಿ ನಿರ್ಜರರಿಗಸಾಧ್ಯವು ಹರಿಪ್ರಸಾದವೆಂದು ಸಾಗಿ ಬೇಗ 2 ನಾರಿ ನಿನ್ನ ಉಪಕಾರ ಮರೆಯೆ ನಾ ಭೂರಿ ಪುಣ್ಯವಶಳಾಗಿ 3 ಕಾಣದಿರಲು ಯೆನ್ನ ಪ್ರಾಣ ನಿಲ್ಲದು ಕಾಣೆ ಶ್ರೀನಿವಾಸನ ಭೇಟಿಗಾಗಿ 4 ಊರ್ವಶಿ :ಅಭಿಷೇಕವನು ಗೈದರಾಗ ಮನಸಿಗನುರಾಗ ಪ. ವಿಭುಧೋತ್ತಮರೆಲ್ಲರು ಕೂಡುತ್ತ ಶುಭ ಋಗ್ವೇದೋಕ್ತದಿ ನಲಿಯುತ್ತ ಅ.ಪ. ಕ್ಷೀರಾರ್ಣವದೊಳಗಾಳಿದವಂಗೆ ಕ್ಷೀರಾಬ್ಧಿಯ ದುಹಿತೆಯ ಗಂಡನಿಗೆ ನೀರಜನಾಭನ ನಿಖಿಲ ಚರಾಚರ ಪೂರಿತ ಕಲ್ಮಷದೊರಗೆ ಕ್ಷೀರದ1 ಚದುರತನದಿ ಗೊಲ್ಲರೊಳಾಡಿದಗೆ ದಧಿಪಾಲ್ ಬೆಣ್ಣೆಯ ಸವಿದುಂಡವಗೆ ಮದನಜನಕ ಮಹಿಮಾಂಬುಧಿ ಕರುಣಾ- ಸ್ಪದ ಸತ್ಯಾತ್ಮ ಸನಾಥಗೆ ದಧಿಯ 2 ಶ್ರುತಿಸ್ಮøತಿತತಿನುತ ರತಿಪತಿಪಿತಗೆ ಅತುಲಿತಗುಣ ಸೂನೃತಭಾಷಿತಗೆ ದಿತಿಸುತಹತ ಶೋಭಿತ ಮೂರುತಿ ಶಾ- ಶ್ವತವಾಶ್ರಿತ ವಾಂಛಿತಗೆ ಘೃತವ 3 ಮಧುಸೂದನ ಮಂದರಗಿರಿಧರೆಗೆ ಮೃದುವಾಕ್ಯಗೆ ಮಂಗಲಾಂಗನಿಗೆ ಪದಮಳಾಕ್ಷ ಪರಾತ್ಪರವಸ್ತು ನೀ- ರದ ಶ್ಯಾಮಲ ನಿತ್ಯಾತ್ಮಗೆ ಮಧುವಿನ 4 ಕರುಣಾಕರ ಕಮಲಜತಾತನಿಗೆ ದುರುಳ ಸುಬಾಹು ತಾಟಕಿ ಮರ್ದನಗೆ ನರಕಾಂತಕ ನಾರಾಯಣ ಸಕಲಾ- ಮರಪೂಜಿತಗೆ ಸರ್ವಾತ್ಮಗೆ ಸಕ್ಕರೆ 5 ಎಳೆತುಳಸೀವನಮಾಲಾಧರಗೆ ಫಲದಾಯಕ ಪರಬ್ರಹ್ಮರೂಪನಿಗೆ ಕಲುಷರಹಿತ ನಿರ್ಮಲಚಾರಿತ್ರ್ಯ ನಿ- ಶ್ಚಲಿತಾನಂದ ನಿತ್ಯನಿಗಳ ನೀರಿನ 6 ಕನಕಾಂಬರಧರ ಶೋಭತನಿಂಗೆ ಮನಕಾನಂದವ ಪಡಿಸುವನಿಂಗೆ ಚಿನಮಯ ಪರಿಪೂರ್ಣ ವಿಶ್ವಂಭರ ಜನಕಜಾ ವರನಿಗೆ ಕನಕಾನನೀಕದ 7 * * * ವೆಂಕಟೇಶ ಕಣ್ಣ ಮುಂದೆ ನಿಂತಿದಂತಿದೆ ಪ. ಶಿರದೊಳು ರತ್ನಕಿರೀಟದ ಝಳಕ ಮೆರೆವ ಲಲಾಟದಿ ಕಸ್ತೂರಿತಿಲಕ ವರ ಕರ್ಣಕುಂಡಲಗಳ ಮಯಕನಕ ಚೆಲುವ ಚರಾಚರಭರಿತಜ ಜನಕ1 ಕಂಬುಕಂಠದಿ ಕೌಸ್ತುಭವನಮಾಲ ಇಂಬಾಗಿಹ ಭೂಷಣ ಶುಭಲೋಲ ಸಂಭ್ರಮಿಸುವ ಮೋಹನ ಗುಣಶೀಲ ಅಂಬುಜನಾಭಾಶ್ರಿತಜನಪಾಲ 2 ಶಂಖಸುದರ್ಶನಗದಾಪದ್ಮ ಧಾರಿ ಕಂಕಣವೇಣುವಡ್ಯಾಣವಿಹಾರಿ ಬಿಂಕದ ಬಿರುದಾಂಕಿತ ಕಂಸಾರಿ ಶಂಕೆಯಿಲ್ಲದ ಭೂಷಣಾಲಂಕಾರಿ 3 ಎಡಬಲದಲಿ ಮಡದಿಯರ ವಿಲಾಸ ಕಡುಬೆಡಗಿನ ಪೀತಾಂಬರಭೂಷ ಕಡಗ ಕಾಲಗೆಜ್ಜೆ ಅಂದುಗೆಯಿಟ್ಟು ತೋಷ ಒಡೆಯ ಶ್ರೀನಾರಾಯಣ ಸರ್ವೇಶ 4 ಈ ರೀತಿಯಲಿ ಶೃಂಗಾರನಾಗುತ್ತ ಭೂರಿಭಕ್ತರ ಕಣ್ಮನಕೆ ತೋರುತ್ತ ನಾರದಾದಿ ಮುನಿವರ ಗೋಚರದ ಚಾರುಚರಣವನು ತೋರಿಸಿ ಪೊರೆದ 5 * * * ಆರೋಗಣೆಯ ಗೈದನು ಶ್ರೀರಂಗ ಸಾರಸವಾದ ಸಮಸ್ತ ವಸ್ತುಗಳ ಪ. ಧೂಪದೀಪನೈವೇದ್ಯವಿಧಾನ ಶ್ರೀಪರಮಾತ್ಮ ಮಂಗಲಗುಣಪೂರ್ಣ 1 ಸುರತರುವಿನ ಸೌಭಾಗ್ಯದ ತೆರನ ಮರಕತಮಯ ಹರಿವಾಣದೊಳಿದನ 2 ಭಕುತರ ಸೌಖ್ಯವಿನ್ನೇನೆಂಬುವೆನು ಶಕುತ ಶ್ರೀಮಾಧವ ನಿರತ ತೋರುವನು 3 * * * ಆರತಿ ಶ್ರೀನಿವಾಸಂ ಶ್ರೀವೆಂಕಟೇಶಂ ಗಾರತಿ ಶ್ರೀನಿವಾಸಂ ಪ. ಮಂಗಲಾಂಗ ನರಸಿಂಗ ಮನೋಹರ ರಂಗರಾಯ ಶ್ರೀಗಂಗಾಜನಕಗೆ 1 ಮಾಧವ ಮಧುಹರ ಮೋದಭರಿತ ಜಗ- ದಾಧಾರ ವೇಣುನಾದವಿನೋದಗೆ 2 ನಿತ್ಯನಿರಂಜನ ಸತ್ಯಸ್ವರೂಪಗೆ ಪ್ರತ್ಯಗಾತ್ಮಪರತತ್ತ್ವಸ್ವರೂಪಗೆ3 ಭೋಜನವ ಗೈದರು ಪ. ಮೂಜಗತ್ಪತಿಯ ಪ್ರಸಾದಪ್ರತಾಪದಿ ನೈಜವಾಗಿಹ ಪಾಪ ಮಾಜಿ ಹೋಗಾಡುತ್ತ1 ಜಿಹ್ವೆಗೆ ರುಚಿಕರವಪ್ಪುದ ಮಿಗಿಲಾದ ಶಾಕಪಾಕಗಳನ್ನು ಪಾತ್ರದಿ ತೆಗೆದು ಸಂತೋಷ ಬೆಡಗುಗಳ ತೋರುತ್ತ 2 ಹಪ್ಪಳ ಸಂಡಿಗೆಯು ತಪ್ಪು ಒಗರ ಶಾಲ್ಯನ್ನಗಳೆಲ್ಲವ ತಪ್ಪದೆ ಸವಿದು ಬಾಯ್ ಚಪ್ಪರಿಸಿದರಾಗ 3 ಹೋಳಿಗೆಯು ಕಾಯದ ಜಡಗಳು ಮಾಯಕವಾದವು ಆಯುರಾರೋಗ್ಯ ಸುಶ್ರೇಯ ಕಾರಣವಾಯ್ತು 4 ಸುರರು ಉರಗ ಮಾನವರೆಲ್ಲರೂ ದೊರೆಯ ಪ್ರಸಾದವು ದೊರಕಿತು ಎನುತ ವಿ- ಸ್ತರವಾದ ತೋಷದಿ ಭರದಿಂದೊದಗುತಲಿ 5 ಭೋಗವಿನ್ನಂತೆಯಿಲ್ಲಿ ರೋಗ ದುರಿತವೆಲ್ಲ ನೀಗಿತು ಎನುತನು- ರಾಗದಿ ಸವಿದುಂಡು ತೇಗಿದರೆಲ್ಲರು 6 ಪುಣ್ಯ-ಫಲದಿಂದ ದೊರಕಿತಲ್ಲೇ ನಲವಿಂದಾನತರು ಕೈ ತೊಳೆದ ನೀರಿನೊಳಿದ್ದ ಜಲಜಂತು ಸಹವು ನಿರ್ಮಲಿನವಾದವು ಕಾಣೆ 7 ಪಾವನವಾದರು ಹಿಂಡು ಉದ್ದಂಡ ಮೃಗಗಳೆಲ್ಲ &ಟಿb
--------------
ಪಾವಂಜೆ ಲಕ್ಷ್ಮೀನಾರ್ಣಪ್ಪಯ್ಯ
ವನಮಾಲಾಧರ ಕೃಷ್ಣ ವನರುಹಲೋಚನ ತನ್ವನೀತೆ ಶ್ರೀ ತುಳಸಿಯ ಪ. ಅಚ್ಚುತ ಧರಿಸಿಹ ಅಚ್ಚ ಶ್ರೀ ತುಳಸಿಯ ಇಚ್ಛಿಸಿದಾ ಮುನಿ ಇಚ್ಛೆ ಪೂರೈಸಿದ ಸಚ್ಚಿದಾನಂದ ಮೂರುತಿ 1 ದಾನವಾಂತಕನ ದಾನವ ಕೊಡುತಲಾ ಮಾನುನಿ ಚಿಂತಿಸೆ ಕಾಮಿನಿ ರುಕ್ಮಿಣಿ ಶ್ರೀನಿಧಿಗೆ ಸಮವೆಂದಾಮುನಿಗೆ ತೂಗಾ ನಂದದೊಳಗಿತ್ತ ಮಾನುನಿ ತುಳಸಿಯ 2 ಪರಿಪರಿ ಭಾಗ್ಯಕೆ ಸರಿಮಿಗಿಲಾದ ಪರಿಮಳ ತುಳಸಿಯ ಸುರಮುನಿ ಧರಿಸುತ ಸ್ಮರಿಸುತ ಹರಿಯನು ವರದ ಶ್ರೀ ಶ್ರೀನಿವಾಸ ಪೊರೆವನೆಂದ್ವರದಿಹ 3
--------------
ಸರಸ್ವತಿ ಬಾಯಿ
ವನರುಹ ನಯನಾ | ವನಜೇಕ್ಷಣ ಪ್ರಿಯವನರುಹ ನಯನಾ | ಪ ತನುಮನ ಧನಗಳಾ | ನಿನಗರ್ಪಿಸುವಂಥಜನರ ಮನೋರಥ | ಅನುನಯದಿಂದಲೀವೆ 1 ಮನಸಿಜ ಜನಕನೇ | ಫಣಿಶೈಲ ಸದನನೇಅನಲಾಕ್ಷನ ಪ್ರಿಯ | ಗುಣ ಪರಿಪೂರ್ಣ 2 ಮನೆ ಮಗ ಮಡಧ್ಯಬಿ | ಮಾನವು ಪೋಗಲಿಲ್ಲಘನ ವಿಷಯಕೆ ಮನ | ಅನುಸರಿಸುವುದಯ್ಯ 3 ಕನಸು ಮನಸಿನೊಳು | ನಿನಪದ ಧ್ಯಾನವಅನುನಯದಿಂದಲಿತ್ತು | ಜನುಮ ಸಾರ್ಥಕ ಮಾಡೊ 4 ವ್ರಜ ಕರ ಪಿಡಿದು 5
--------------
ಗುರುಗೋವಿಂದವಿಠಲರು
ವನವ ನೋಡೋಣು ಬಾರೇ ನೀರೆ ಅಲ್ಲಲ್ಲಿಗೆ ಸರೋವರ ವನವ ನೋಡೋಣು ಬಾರೇ ನೀರೆ ಪ. ನೀರ ಮೇಲಾಡುವ ಪಾರಿವಾಳದ ಹಿಂಡುದೂರಾಗಿ ಬೆಳೆದ ಅಡಿಕೆಯದೂರಾಗಿ ಬೆಳೆದ ಅಡಿಕೆ ತೆಂಗಿನಮರ ಶ್ರೀದೇವಿ ಅರಸನ ವನವಿದು 1 ತುಂಬಿ ತುಂಬಿ ಜqತಾ ರಂಗಯ್ಯಓಕುಳಿಯಾಡಿದ ವನವಿದು2 ಮೃಗ ಹಿಂಡು ಕಡೆಯಿಲ್ಲ 3 ತೋಟಪಟ್ಟಿಗಳಲ್ಲಿ ನೀಟಾದ ಹಂಸಗಳು ಆಟವಾಡುತ್ತಿರಲು ಹರುಷದಿಆಟವಾಡುತ್ತಿರಲು ಹರುಷದಿ ಅಲ್ಲಲ್ಲೆ ನೀಟಾಗಿ ನಲಿವ ನವಿಲು ಹಿಂಡು4 ಕಬ್ಬಿನ ತೋಟಕ್ಕೆ ಹಬ್ಬಿದ ಹಂದರ ಅಬ್ಬರದಿ ಬೆಳೆದ ಹಲಸಿನ ಅಬ್ಬರದಿ ಬೆಳೆದ ಹಲಸು ತೆಂಗಿನ ಮರ ರುಕ್ಮಿಣಿ ರಾಮೇಶನ ವನವಿದು5
--------------
ಗಲಗಲಿಅವ್ವನವರು
ವನಿತೆ ನೀನು ಕರೆದು ತಾರೆ ರಾಮೇಶನುಮುನಿಸಿದನೆ ನೀರೆ ಪ ಹಂಬಲಿಸುತಿದೆ ಮನ ಹೇಗೆ ನಾ ತಾಳಲೆರಂಬಿಸಿ ಪೊರೆದವನಕುಂಭ ಕುಚದ ಮೇಲೆ ಕೂರುಗುರಿನ ಬರೆಯಂಬ ಶಶಿಯ ನೇಮಗಾರನ 1 ಎನ್ನ ಮೇಲಿನಿತು ತಪ್ಪನಾದರೆ ತೋರಿಭಿನ್ನವಿಸುವುದು ಆಕನ್ನೆಯೋರ್ವಳ ಕೂಡುತಮುನ್ನಿನ ಲೇಸನು ತೋರದೆ ಎನ್ನ ಮರೆತ2 ಧರೆಯೋಳತ್ಯಧಿಕವೆಂದು ಕೆಳದಿಪುರದರಸುತನದಲೆ ನಿಂದುವರದನದಿಯ ತೀರವಾಸ ಶ್ರೀ ರಾಮೇಶನೆರದುಳುವಿದ ಲೇಸ ನಟನೆಯಿಂದ ಮಹೇಶ 3
--------------
ಕೆಳದಿ ವೆಂಕಣ್ಣ ಕವಿ
ವನಿತೆಯರ ಆರತಿಕಂ||ಸಿರಿಧರಣಿಯರೊಡೆವೆರಸಿಯೆತಿರುಪತಿಯಧಿನಾಥನೊಲಿದು ಶಯ್ಯಾಸನದೊಳ್ುರುತಿರೆ ಸತಿಯರು ಹರುಷದಿಪರಿಪರಿಯಾರತಿಯನೆತ್ತಿ ನಡೆದರು ಮುದದಿಂಆವ ಜನ್ಮದ ಪುಣ್ಯ ಫಲಿಸಿತು ನಮಗೆದೇವಾಧಿದೇವ ಬಂದನು ನಮ್ಮ ಮನೆಗೆ ಪನೆನೆಯಲು ಮನದೊಳು ನೆಲೆಗೊಂಡನಮ್ಮ ಸನಿಯಕೆ ಕರೆದರೆ ುದಿರಾದನಮ್ಮಮನದ ಮಧ್ಯಕೆ ಮತ್ತೆ ಬರುವ ಕಾಣಮ್ಮವನಿತೆಯರಾರತಿಯ ತಂದೆತ್ತಿರಮ್ಮಾ 1 ಪಾದವ ತೊಳೆದು ಪನ್ನೀರಿಂದ ನಾನುಆದರದಿಂ ಹಸ್ತಕಿತ್ತು ಹಸ್ತವನುಪಾದಾವಧಾನವ ಪೇಳಲೈದಿದನುಮೋದದಿಂದಾರತಿಯಾ ತಂದೆತ್ತಿರಮ್ಮಾ 2 ತಿರುಪತಿುಂದ ಭಕ್ತರ ಪಾಲಿಸಲೆಂದುವರದ ವೆಂಕಟರಾಯ ತಾ ಬಂದನಿಂದುಗುರುವಾಸುದೇವಾರ್ಯನಾದನೀ ಬಂಧುತರುಣಿಯರಾರತಿಯ ತಂದೆತ್ತಿರಮ್ಮಾ 3ಓಂ ಯುಧ್ಠಿರಪ್ರತಿಷ್ಠಾತ್ರೇ ನಮಃ
--------------
ತಿಮ್ಮಪ್ಪದಾಸರು
ವರ ಮಂತ್ರಾಲಯದೊಳು ಘನವಾಗಿ ನೆಲಸಿರ್ಪ ಪರಮ ಸದ್ಗುರುವರ್ಯ ಶ್ರೀ ರಾಘವೇಂದ್ರ ಪ ತವಕದಿಂ ದಿನದಿನವು ತೇಜವನು ಬೆಳಗುವೆ 1 ನರನಂತೆ ಮೆರೆಯುವ ಜಯಮುನಿಕೃತಶಾಸ್ತ್ರ ಪರಿಮಳವನು ನೀನು ಪಸರಿಸಿದೆಯಲ್ಲವೆ 2 ಮಧ್ವಮತವೆಂಬ ದುಗ್ಧಸಾಗರದೊಳು | ಉದ್ಭವಿಸಿದ ಪೂರ್ಣ ಹಿಮಕರ ತೇಜ 3 ಅಸುರನಂದನನಾಗಿ ನರಹರಿಯನೆ ಕಂಡ ಸಿರಿ ಗುರುರಾಘವೇಂದ್ರ 4 ರಾಜೇಶ ಹಯಮುಖ ಭಜಕರೊಳಗೆ ನೀನು ರಾಜಿಪ ಸುರತರುವಂತಿರ್ಪೆ ಗುರುವೆ 5
--------------
ವಿಶ್ವೇಂದ್ರತೀರ್ಥ
ವರ ಹಳ್ಳೇರಾಯಾ ಮಾಂಪಾಲಯ ಪ ಕರ ಮುಗಿವೆನು ದುಮ್ಮದ್ರಿನಿಲಯ ಅ.ಪ ತರಣಿ ಕುಲತಿಲಕ ಸಿರಿರಾಮನ ಪದ ಸರಸಿಜ ಮಧುಕರ ಸುರಗಣ ಸೇವ್ಯಾ 1 ಸೋಮ ಕುಲಜ ಬಲರಾಮನನುಜನ ಪ್ರೇಮಪಾತ್ರ ಬಲಭೀಮನೆ ಕೃಪಯಾ2 ಸಿರಿಕೃಷ್ಣನೆ ಪರತರನೆಂದರುಹಲು ವಿರಚಿತ ಶಾಸ್ತ್ರ ಶ್ರೀ ಗುರು ಮಧ್ವಾರ್ಯ 3 ಯವನ ಕುಲದಿ ಭಜಿಸುವರಿಗೊಲಿದೆಯಾ ಅವನಿಸುರಾರ್ಚಿತ ಶ್ರೀ ಪವಮಾನತನಯಾ4 ಶರಣು ಜನಕೆ ಸುರತರುವೆಂದೆನಿಸಿದ ಸಿರಿಕಾರ್ಪರ ನÀರಹರಿಗತಿ ಪ್ರೀಯಾ 5
--------------
ಕಾರ್ಪರ ನರಹರಿದಾಸರು
ವರಕವಿಗಳ ಮುಂದೆ ನರಕವಿಗಳ ವಿದ್ಯೆ ತೋರಬಾರದು - ಈಧರಣಿಯ ಕಲ್ಲಿಗೆ ಶರಣೆಂದು ಪೂಜೆಯ ಮಾಡಬಾರದು ಪ ಪಾಪಿಗಳಿದ್ದಲ್ಲಿ ರೂಪುಳ್ಳ ವಸ್ತುವ ತೋರಬಾರದು - ಬಹುಕೋಪಿಗಳಿದ್ದಲ್ಲಿ ಅನುಭವಗೋಷ್ಠಿಯ ಮಾಡಬಾರದು1 ಅಡಿ ಸತ್ತ ಮಡಕೆಗೆ ಜೋಡಿಸಿ ಒಲೆಗುಂಡು ಹೂಡಬಾರದು - ಬಹುಬಡತನ ಬಂದಾಗ ನೆಂಟರ ಬಾಗಿಲ ಸೇರಬಾರದು2 ಹರಿಯ ನಿಂದಿಸಿ ಹರ ಘನನೆಂದು ನರಕಕ್ಕೆ ಬೀಳಬಾರದು - ತಾಪರರನು ಬೈದು ಪಾತಕಕೆ ಮುನ್ನೊಳಗಾಗಬಾರದು 3 ಮಡದಿ ನುಡಿಯ ಕೇಳಿ ಜಗಳಕೊಬ್ಬರ ಕೂಡೆ ಹೋಗಬಾರದು - ಬಾ-ಯ್ಬಡಿಕರು ಇದ್ದಲ್ಲಿ ವಸ್ತಿ ಬಿಡಾರವ ಮಾಡಬಾರದು 4 ಮುಂದೆ ಭಲಾ ಎಂದು ಹಿಂದೆ ನಿಂದಿಪರನ್ನು ಕೂಡಬಾರದು - ನಮ್ಮತಂದೆ ಬಾಡದಾದಿಕೇಶವನ ಸ್ಮರಣೆಯ ಬಿಡಬಾರದು5
--------------
ಕನಕದಾಸ
ವರಗಡದಿನ್ನೀಶೇಷ ವಿಠಲ ಪೊರೆ ಇವನ ಪ ನಿರುತ ತವ ಚರಿತೆಗಳ | ಸ್ಮರಿಸುತ್ತ ಭಕ್ತಿಯಲಿಮರುತಾಂತರಾತ್ಮ ತವ | ಚರಣಕರ್ಪಿಪನ ಅ.ಪ. ಭವ | ಬಂಧದೊಳು ಸಿಲ್ಕಿ ಬಹುನೊಂದವಗೆ ಕರುಣದಲಿ | ಕುಂದನೆಣೆಸದಲೇಮಂದ ಹಾಸವ ಬೀರಿ | ಸಂಧಿಸೋ ಸಂತೋಷಇಂದಿರಾರಾಧ್ಯ ಪದ | ಮಂದರೋದ್ಧಾರೀ 1 ಉತ್ತಮ ಸುಸಂಸ್ಕøತಿಯ | ಪೊತ್ತು ಜನಿಸಿಹನಿವನುಮತ್ತೆ ದಾಸರ ಕರುಣ | ಪಾತ್ರನಿರುವಾಅರ್ಥಿಯಲಿ ದಾಸತ್ವ | ಪ್ರಾರ್ಥಿಸುತ್ತಿಹಗೆ ನಾ-ನಿತ್ತಿಹೆನೊ ಅಂಕಿತವ | ಸುಪ್ತೀಶನಾಜ್ಞಾ2 ಮೋದ ತೀರ್ಥರ ತತ್ವ | ವಾದಾನುವರ್ತಿ ಇವಭೋಧಿಸೀ ಪರತಮವ | ಭೇದ ಪಂಚಕನಆದರದಿ ಕೈ ಪಿಡಿದು | ಉದ್ಧರಿಸ ಬೇಕೆಂದುವೇದ ವೇದ್ಯನೆ ನಿನ್ನ | ಪ್ರಾರ್ಥಿಸುವೆ ಹರಿಯೇ 3 ಶ್ರವಣ ಮನಕಾನಂದ | ಭುವನ ಪಾವನವೆನಿಪತವಮಹಿಮೆ ಪೊಗಳಲ್ಕೆ | ಕವನ ಶಕ್ತಿಯನೂನೀವೊಲಿದು ಅಭಿವೃದ್ಧಿ | ಗೈವುದಿವನಲಿಯೆಂದುಪವನಾಂತರಾತ್ಮ ಬಿ | ನ್ನವಿಪೆನೋ ದೇವಾ4 ಭಾವಕ್ರಿಯೆ ದ್ರವ್ಯದೊಳು | ಅದ್ವಿತಿಯ ನೀನೆಂಬಭಾವದನುಭವವಿತ್ತು | ನೀ ವೊಲಿಯೊ ಇವಗೇಕಾವರನ್ಯರ ಕಾಣೆ | ಗೋವರ್ಧನೋದ್ಧರನೆಕೋವಿದರ ಒಡೆಯ ಗುರು | ಗೋವಿಂದ ವಿಠಲಾ 5
--------------
ಗುರುಗೋವಿಂದವಿಠಲರು
ವರಗಿರಿವಾಸನ ಅರಮನೆ ಸೊಬಗನೆ ದೊರೆಗಳು ನೋಡಿ ಶಿರಗಳ ತೂಗುತ ಬೆರಗಾಗಿಪ. ಛÀತ್ರ ಚಾಮರ ರಾಜ ಪುತ್ರರು ಚಂದಾಗಿಅಚ್ಚಮುತ್ತುಗಳ ಅಲವುತಅಚ್ಚಮುತ್ತುಗಳ ಅಲವುತಬ್ಯಾಗ ಹೊಕ್ಕರು ಚಿತ್ತಜನೈಯ್ಯನÀ ಅರಮನೆಯೊಳಗೆ 1 ತಾರಾಪತಿಗಳಂತೆ ತೋರುತಲೈವರುಥೋರ ಮುತ್ತುಗಳ ಅಲವೂತಥೋರ ಮುತ್ತುಗಳ ಅಲವೂತ ಹೊಕ್ಕರುವೀರಕೃಷ್ಣಯ್ಯನ ಅರಮನೆ ಬ್ಯಾಗ2 ಪಚ್ಚದ ಪಾವಟಿಗೆ ರತ್ನ ಹಚ್ಚಿದ ಚೌಕಟ್ಟುಅಚ್ಚಮುತ್ತುಗಳ ಅಲವುತಅಚ್ಚಮುತ್ತುಗಳ ಅಲವುತ ಹೊಕ್ಕರುಚಿತ್ತಜನಯ್ಯನ ಅರಮನೆ ಬ್ಯಾಗ 3 ಪಕ್ಷಿ ವಾಹನನರಮನೆ ದಕ್ಷಿಣ ದ್ವಾರದಿಲಕ್ಷಣವುಳ್ಳ ವನಿತೆಯರುಲಕ್ಷಣವುಳ್ಳ ವನಿತೆಯರು ತೆರೆದ ಬಾಗಿಲೊಳು ನಕ್ಷತ್ರದಂತೆ ಹೊಳೆಯುತ4 ಎಡಬಲ ಶ್ರೀತುಳಸಿಗಿಡಗಳು ಅಲವುತ ಕಡಲಶಯನನ ಅರಮನೆ ಒಳಹೊಂದಿಕಡಲಶಯನನ ಅರಮನೆ ಒಳಗಿನ್ನುನಾರಿಯರು ನೆರೆದರು 5 ಗಂಧದ ಥಳಿ ಕೊಟ್ಟು ಚಂದುಳ್ಳ ಅಂಗಳಕಹಂದರಗಳ್ಹಾಕಿದ ಇಂದಿರೇಶನರಮನೆಇಂದಿರೇಶನ ಅರಮನೆಯೊಳಗೆಬಂದುನಾರಿಯರು ನೆರೆದರು 6 ಚಂದ್ರನಂತೊಪ್ಪುತ ಚಂದಾಗಿನಿಂತತಂದೆ ರಾಮೇಶನ ಅರಮನೆ ತಂದೆ ರಾಮೇಶನ ಅರಮನೆ ವೃಂದಾವನಕೆಹೊಂದಿ ನಾರಿಯರುನೆರೆದರು ಬೆರಗಾಗಿ 7
--------------
ಗಲಗಲಿಅವ್ವನವರು
ವರದ ಗುರು ಗೋವಿಂದ ವಿಠಲ ಪೊರೆ ಇವನಾ ಪ ತರಳನನು ಒಪ್ಪಿಸಿಹೆ | ಕರಪಿಡಿಯೊ ಹರಿಯೆ ಅ.ಪ. ಮರುತ ಮತದಲಿ ಭಾವಿ | ಮರುತರೆಂದೆನಿಸುತಿಹಗುರುರಾಜ ಸಚ್ಚರಣ | ಕರುಣ ಪಾತ್ರಾಇರುವ ಈ ಶಿಶುವ ತವ | ಚರಣ ಕಮಲಂಗಳಿಗೆಅರ್ಪಿಸುತ ಭಿನ್ನವಿಪೆ | ನಿರುತ ಪೊರೆಯೆಂದು 1 ಗುರು ಹಿರಿಯರ ಸೇವೆ | ನಿರುತ ಗೈಯ್ಯುವ ಮನವಕರುಣಿಸುತ ಧರೆಯೊಳಗೆ | ಮೆರೆಸೊ ಕೀರ್ತಿಯಲೀಬರ ಬರುತ ವೈರಾಗ್ಯ | ಹರಿ ಗುರೂ ಸದ್ಭಕ್ತಿಉರುತರದ ಸುಜ್ಞಾನ | ಪರಿಪಾಲಿಸಿವಗೇ 2 ಭೃತ್ಯ ವತ್ಸಲನೇ 3 ಸರ್ವಗುಣ ಸಂಪೂರ್ಣ | ಸರ್ವವ್ಯಾಪ್ತ ಸ್ವಾಮಿನಿರ್ವಿಕಾರನೆ ದೇವ | ಶರ್ವ ವಂದ್ಯಾಸರ್ವದಾ ಸರ್ವತ್ರ | ದುರ್ವಿಭಾವ್ಯನೆ ಹರಿಯೆಪ್ರವರ ತವ ಸಂಸ್ಮರಣೆ | ಸರ್ವದಾ ಈಯೋ 4 ಜೀವ ಪರತಂತ್ರತೆಯ | ಭಾವುಕಗೆ ಅರಿವಿತ್ತುಭಾವದೊಳು ಮೈದೋರೊ | ದೇವದೇವೇಶಾಈ ವಿಧದ ಭಿನ್ನಪವ | ನೀ ವೊಲಿದು ಸಲಿಸುವುದುಮಾವಿನೋದಿಯೆ ಗುರು | ಗೋವಿಂದ ವಿಠಲಾ 5
--------------
ಗುರುಗೋವಿಂದವಿಠಲರು
ವರದ ನರಹರಿ ವಿಠಲ | ಪೊರೆಯ ಬೇಕಿವಳ ಪ ಕರಿವರದ ಶ್ರೀ ಹರಿಯೆ | ಕರುಣಿ ನೀನೆಂದರಿತುಮೊರೆಯಿಡುವೆ ನಿನ್ನಡಿಗೆ | ಮರುತಾಂತರಾತ್ಮಾ ಅ.ಪ. ದಾಸದೀಕ್ಷೆಯಲಿ ಮಹ | ದಾಶೆಯನು ಉಳ್ಳವಳಲೇಸಾಗಿ ಕೈಪಿಡಿದು | ನೀ ಸಲಹ ಬೇಕೋವಾಸವಾನುಜ ದಾಸ | ವೇಷದಿಂ ಸ್ವಪ್ನದಲಿಸೂಸಿ ಸೂಚಿಸಿದ ಉಪ | ದೇಶವಿತ್ತಿಹೆನೋ 1 ಮಧ್ವಮತ ಪದ್ಧತಿಗ | ಳುದ್ಧರಿಸಿ ಇವಳಲ್ಲಿಶ್ರದ್ಧೆಯಿಂ ತವಪಾದ | ಪದ್ಮಗಳ ಭಜಿಸೇಶುದ್ಧ ತತ್ವ ಜ್ಞಾನ | ಸದ್ಭಕ್ತಿ ವೈರಾಗ್ಯಮಧ್ವಾಂತರಾತ್ಮ ಅನಿ | ರುದ್ಧ ಪಾಲಿಪುದೋ 2 ಪತಿಯ ಕೈಂಕರ್ಯವನು | ಹಿತದಿಂದ ಮಾಳ್ಪಂಥಮತಿಯ ನೀ ಕರುಣಿಸುತ | ಕೃತ ಕೃತ್ಯಳೆನಿಸೋಕ್ಷೀತಿಭಾರಹರಣ ಶ್ರೀ | ಪತಿಯೆ ನೀ ಒಲಿದಿವಳಅತುಳ ವಿಭವದಿ ಮೆರೆಸಿ | ಗತಿಪ್ರದನು ಆಗೋ 3 ಸಂತತದಿ ತವನಾಮ | ಚಿಂತಿಸುವ ಸೌಭಾಗ್ಯವಂತೆಯೆಂದೆನಿಸಿವಳ | ಕಾಂತೆಯ ಸಖನೇಅಂತರಾತ್ಮಕ ನೀನೆ | ಅಂತರಂಗದಿ ತೋರಿಸಂತಸವ ನೀಡಯ್ಯ | ಪಂಥಭಿಧ ಹರಿಯೇ 4 ಸರ್ವಜ್ಞ ಸರ್ವೇಶ | ಸರ್ವವ್ಯಾಪಕ ದೇವನಿರ್ವಿಕಾರನೆ ಹರಿಯೆ | ದುರ್ವಿ ಭಾವ್ಯಾಸರ್ವವಿಧ ಪರತಂತ್ರ | ದರ್ವಿ ಜೀವಿಯ ಕಾಯೋಸರ್ವಸುಂದರ ಗುರೂ ಗೋವಿಂದ ವಿಠಲಾ 5
--------------
ಗುರುಗೋವಿಂದವಿಠಲರು