ಒಟ್ಟು 4310 ಕಡೆಗಳಲ್ಲಿ , 119 ದಾಸರು , 2738 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಕೃಷ್ಣ ಕೃಷ್ಣ ಕೃಷ್ಣ ಕೃಷ್ಣ ಕೃಷ್ಣ ನಿನ್ನ ನೋಡುವೆ ಪ. ಹಾಡಿ ದಣಿಯುವೆ ಅ.ಪ ಅನುದಿನದಿ ನಿನ್ನ ನಾಮ ನೆನೆಯುವಂತೆ ಜಿಹ್ವೆಯಲ್ಲಿ ನಿತ್ಯ 1 ಹರುಷದಿಂದ ನಿನ್ನ ನಾಮ ಸ್ಮರಿಸುವೆನೋ ದೇವ ದೇವ ಎನ್ನ ಮರಣ ಸಮಯದಲ್ಲಿ ನಿನ್ನ ಸ್ಮರಣೆ ಇತ್ತು ಕಾಯೋ 2 ಮೊದಲಿನಿಂದ ಭಜಿಸಿದೆನಾ ಹೃದಯದಲ್ಲಿ ನೋಯುತಿರುವೆ ಮುದದಿ ಬಂದು ಎನ್ನ ಜಿಹ್ವೆಗೊದಗೊ ಆಗ ಶ್ರೀ ಶ್ರೀನಿವಾಸ 3
--------------
ಸರಸ್ವತಿ ಬಾಯಿ
ಕೃಷ್ಣ ಕೃಷ್ಣ ಕೃಷ್ಣಯೆಂದು ಮೂರುಬಾರಿ ನೆನೆಯಿರೊ ಪ ಭಾರ ಹೊರುವನೋಅ.ಪ ಸಕಲ ವೇದ ಶಾಸ್ತ್ರ ಪಠಿಸಿ ಸಾರವನ್ನು ತಿಳಿದರೇನುಮಕರ ಕುಂಡಲಧರನ ನಾಮಕೆ ಸರಿಯಿಲ್ಲವೊ 1 ಕಮಲನಾಭನ ಚಿನ್ಹೆಯನ್ನು ಧರಿಸಿಕೊಂಡು ಮೆರೆಯಿರೊಯಮನ ಭಟರು ನೋಡಿ ಅಂಜಿ ಅಡವಿ ಹೊಗುವರೋ2 ಜನ್ಮವೆತ್ತಿ ಮಧ್ವಮತವ ಅನುಸರಿಸಿ ನಡೆಯಿರೊಸುಮ್ಮಾನದಿ ಸಿರಿಕೃಷ್ಣ ತನ್ನ ಲೋಕ ಕೊಡುವನೋ3
--------------
ವ್ಯಾಸರಾಯರು
ಕೃಷ್ಣ ದ್ವೈ ಪಾಯನ ಕೃಪಣವತ್ಸಲ ಪರ ಮೇಷ್ಠಿ ಜನಕನ ತೋರೊ ಪ ಅನಿಮಿಷ ಕುಲಗುರು ಆನಂದತೀರ್ಥ ಸ ನ್ಮುನಿಮತ ವಿಮಲಾಂಬುಜಾ ಅ.ಪ. ದಿನಕರ ದಯದಿ ನೋಡೆನ್ನನು ಬಾದರಾ ಯಣ ನಾಮಧೇಯರ ತನಯ ಸಂಯಮಿ ವರ 1 ಭೀಮ ತರಂಗಿಣಿ ಬದಿಗನೆನಿಸಿ ಸೀತಾ ಕರ್ಮ ಗುಣಕೀರ್ತನಗೈವ ನಿರ್ಮಲಾತ್ಮಕನ ಸತ್ಪ್ರೇಮದಿ ಸಲಹುವ ಸುಜನ ಶಿರೋಮಣಿ 2 ವಿಗತದೇಹಾಭಿಮಾನಿಯೆ ನಿಮ್ಮೊಡನೆ ನಿತ್ಯ ಹಗೆಗೊಂಬ ಪಾಪಿಗಳ ವಿಗಡಕರ್ಮಗಳೆಲ್ಲ ಮರೆದು ವಿಶ್ವವ್ಯಾಪಿ ಜಗನ್ನಾಥ ವಿಠಲ ಸ್ವತಂತ್ರ ಕರ್ತಯೆಂಬಾ 3
--------------
ಜಗನ್ನಾಥದಾಸರು
ಕೃಷ್ಣ ಮುರಾರಿ ಕೇಶವ ಮುರಾರಿಅಚ್ಚುತಾನಂತ ಗೋವಿಂದ ಮುರಾರಿಪ. ವೇಷಧಾರಿಯಾಗಿ ಬಂದು ಅಸುರರ ಸಂಹರಿಸಿಭೂಸುರರಿಗ್ವೊರವನಿತ್ತ್ಯೋ ಕೇಶವ ಮುರಾರಿ 1 ನಾ ತಾಳಲಾರೆನೊ ಲೋಕಾಧಿಪತಿಯೆ ಕಾಯೊಅನಾಥರಕ್ಷಕ ನಾರಾಯಣನೆ ಮುರಾರಿ 2 ಮಾಧವ ಮುರಾರಿ3 ಅನೇಕ ಗೋವ್ಗಳ ಕಾಯ್ದ ಗೋಪಾಲಮೂರುತಿಗೋಪಿಯರರಸ ಗೋವಿಂದ ಮುರಾರಿ 4 ಕಟ್ಟಿದ ಕಾಮನೆಯ ಬಿಟ್ಟು ಕಳಚಿ ಮನ-ದಿಷ್ಟಾರ್ಥವನೀವ ವಿಷ್ಣು ಮುರಾರಿ 5 ಮಧುರವಾಕ್ಯಗಳಿಂದ ಮಂದಿರಕಾಗಿ ಬಾರೊಮನಸಿಜನಯ್ಯ ಮಧುಸೂದನ ಮುರಾರಿ 6 ತಿದ್ದಿದ ಕಸ್ತುರಿತಿಲಕ ತಿಗುರಿದ ಪರಿಮಳಗಂಧಮುದ್ದು ನಸುನಗೆಯ ತ್ರಿವಿಕ್ರಮ ಮುರಾರಿ7 ಕಾಮಿನಿ ಅಗಲಿಬಂದು ಸೀಮೆನಾಳುವೆÀನೆಂದುನೇಮವಾಕ್ಯದಿ ನಿಂದ ವಾಮನ ಮುರಾರಿ 8 ಶ್ರೀಯರಸ ಮೇಳದಿ ರಮಿಸಿ ಬಹುಕಾಲದಿಸಿಂಧುಶಯನ ಶ್ರೀಧರನೆ ಮುರಾರಿ 9 ಋಷಿಗಳಿಗ್ವರವಿತ್ತು ಬೃಂದಾವನದಲ್ಲಿ ನಿಂದುಹರುಷವಾರಿಧಿ ಹೃಷಿಕೇಶ ಮುರಾರಿ 10 ಪಾವನ್ನ ಮೂರುತಿ ಪರಮದಯಾಳು ನೀನೆಪಾಲಿಸೊ ಶ್ರೀಪದ್ಮನಾಭ ಮುರಾರಿ11 ದಾನವರ ಮರ್ದಿಸಿ ಸುಮನಸರಿಗೊಲಿದದಾನದತ್ತನೆ ದಾಮೋದರನೆ ಮುರಾರಿ 12 ಶಂಕೆಯಿಲ್ಲದೆ ಗೆಲಿಸು ಶಂಖಚಕ್ರವ ಧÀರಿಸಿ ಅ-ಲಂಕಾರವಾದ ಸಂಕರ್ಷಣನೆ ಮುರಾರಿ 13 ವಾಸುದೇವ ಮುರಾರಿ 14 ಇದ್ದ ಗೋಪೇರಮನೆಯ ಕದ್ದು ಬೆಣ್ಣೆಯ ಮೆದ್ದಪದ್ಮದಳಾಕ್ಷ ಪ್ರದ್ಯುಮ್ನ ಮುರಾರಿ 15 ಅನಿರುದ್ಧ ಮುರಾರಿ16 ಪುನಗು ಕಸ್ತೂರಿಗಂಧ ಪರಿಮಳಪುಷ್ಪದಿಂದ ಪುಣ್ಯಮೂರುತಿ ಪುರುಷೋತ್ತಮನೆ ಮುರಾರಿ 17 ಅವನಿ ಅಧೋಕ್ಷಜ ಮುರಾರಿ 18 ನಾನೇನ ಪೇಳಲಿ ನಗೆನಗೆಯಲ್ಲಿ ಅಕ್ಷಿಕ್ರೂರವಾಯಿತು ನಾರಸಿಂಹ ಮುರಾರಿ 19 ಮೆಚ್ಚಿದೆ ನಾ ನಿನ್ನ ಪಕ್ಷಿವಾಹನ ಸ್ವಾಮಿಮುಚ್ಚುಮರೆಗಳ್ಯಾಕೊ ಅಚ್ಚುತ ಮುರಾರಿ 20 ಜಾಣತನದಿ ಪೋಗಿ ಜಾರಸ್ತ್ರೀಯರನ್ನುಒಡಗೂಡಿ ಆಡಿದ ಜನಾರ್ದನ ಮುರಾರಿ21 ಉಗುರಲ್ಲಿ ಹಿರಣ್ಯಕನ ಸೀಳಿ ಉರದಲ್ಲಿ ಮಾಲೆಯ ಧರಿಸಿಉಬ್ಬಲ್ಲಿ ಮೆರೆದ ಉಪೇಂದ್ರ ಮುರಾರಿ 22 ಹಿರಣ್ಯಾಕ್ಷತನಯನಂದು ಕರೆಯೆ ಕಂಬದಿ ಬಂದಗರುವದಿಂದಲೆ ನರಹರಿಯೆ ಮುರಾರಿ 23 ಅಟ್ಟಡವಿಯ ತಪಸು ಎಷ್ಟುದಿನವೊ ಸ್ವಾಮಿಪಟ್ಟಣಕಾಗಿ ಬಾರೊ ಕೃಷ್ಣಮುರಾರಿ 24 ಎಲ್ಲರ ಸಲಹಿದ ಫುಲ್ಲಲೋಚನ ಸ್ವಾಮಿಪಾಲಿಸೊ ಶ್ರೀಹಯವದನ ಮುರಾರಿ 25
--------------
ವಾದಿರಾಜ
ಕೃಷ್ಣಚಿತ್ತ ಕೃಷ್ಣಚಿತ್ತ ಕೃಷ್ಣಚಿತ್ತ ಎನ್ನಿರೊ ಪ. ಕೃಷ್ಣಧ್ಯಾನದಿಂದ ಪರಮ ತುಷ್ಟರಾಗಿ ಸುಖದುಃಖ ಕಷ್ಟ ಕರ್ಮಂಗಳು ಎಲ್ಲ ಅಷ್ಟು ಹರಿಯಾಧೀನವೆಂದು ಅ.ಪ. ಜನನವಾದ ಕಾಲದಿಂದ ಇನಿತು ಪರ್ಯಂಕಾರದಲ್ಲಿ ಅನುಭವಿಸಿದಂಥ ಕರ್ಮ ಗುಣನಿಧಿಯಾಧೀನವೆಂದು1 ಕಷ್ಟದಲ್ಲಿ ಕಳೆದ ಕಾಲ ಅಷ್ಟರಲ್ಲೆ ಪಟ್ಟ ಸುಖ ಕೊಟ್ಟ ಹರಿಯು ಎನಗೆ ಎನುತ ಕೆಟ್ಟ ವಿಷಯ ಮನಕೆ ತರದೆ 2 ಕಾಮ ಕ್ರೊಧ ಲೋಭ ಮೋಹ ಆ ಮಹಾ ಮದ ಮತ್ಸರಗಳು ಕಾಮಿಸಿ ಮನ ಕೆಡಿಸುತಿರಲು ಶ್ರೀ ಮನೋಹರನಾಟವೆಂದು 3 ಪೊಂದಿದಂಥ ಮನುಜರಿಂದ ಕುಂದು ನಿಂದೆ ಒದಗುತಿರಲು ಇಂದಿರೇಶನ ಕರುಣವೆಂದು ಒಂದು ಮನಕೆ ತಾರದಂತೆ 4 ಮಾನ ಅಪಮಾನಗಳು ದೀನನಾಥನಧೀನವೆಂದು ಜ್ಞಾನಿಗಳ ವಾಕ್ಯ ನೆನೆದು ಮಾನಸದ ದುಃಖ ಕಳೆದು 5 ಹೊಟ್ಟೆ ಬಟ್ಟೆಗೊದಗುವಂಥ ಅಷ್ಟು ಕಷ್ಟ ಸುಖಗಳೆಲ್ಲ ವಿಷ್ಣುಮೂರ್ತಿ ಕೊಟ್ಟನೆಂದು ಮುಟ್ಟಿ ಮನದಿ ಹರಿಯ ಪದವ 6 ಹರಿಯ ಧ್ಯಾನ ಮಾಡುವುದು ಹರಿಯ ಧ್ಯಾನ ಅರಿಯುವುದು ಮೂರ್ತಿ ಕಾಣುವುದು ಹರಿಯಧೀನವೆಂದು ತಿಳಿದು 7 ಗುರುಕೃಪೆಯಿಂ ದತ್ತವಾದ ವರ ಸುಜ್ಞಾನವರೆಯ ತಿಳಿದು ಹರುಷ ಕ್ಲೇಶಾ ಮನಕೆ ತರದೆ ಮೂರ್ತಿ ಮನಕೆ ತಂದು 8 ನಿಷ್ಟೆಯಿಂ ಗೋಪಾಲ ಕೃಷ್ಣವಿಠ್ಠಲಾಧೀನ ಜಗವು ಇಟ್ಟ ಹಾಗೆ ಇರುವೆನೆಂದು ಗಟ್ಟಿಮನದಿ ಹರಿಯ ಪೊಂದಿ 9
--------------
ಅಂಬಾಬಾಯಿ
ಕೃಷ್ಣತಾತ ಮ'ಪತಿರಾಯರ ಭಜಿಸೊಅಭಿಮಾನವ ತ್ಯಜಿಸೊ ಅನುಮಾನವ ತ್ಯಜಿಸೊ ಪರಾಜವೈಭವದ ಭೋಗಗಳನುಭ'ಸಿ ಶ್ರೀ ಹರಿಯ ಸ್ಮರಿಸಿಭೋಗದೊಳಗೆ ತ್ಯಾಗದ ಪಾಠವ ಕಲಿಸಿ ಕೊಡುಗೈದೊರೆಯೆನಿಸಿಯೋಗಬಂದತಕ್ಷಣ ವೈಭವ ತ್ಯಜಿಸಿ ಯೋಗಿಯನಾಶ್ರೈಸಿಯೋಗಾಭ್ಯಾಸದಿ ಬೇಗ ಹರಿಯ ಒಲಿಸಿ ಅವನೊಳು ಮನಬೆರೆಸಿ 1ಹರಿಯಧ್ಯಾನಕನುಕೂಲವಾದ ಮೆಟ್ಟಾ ಹುಡಕುತುತಾಹೊರಟಾವರಕಾಖಂಡಿಕಿ ಕ್ಷೇತ್ರದಿ ಕಾಲಿಟ್ಟಾ 'ಶ್ರಾಂತಿಗೆ ಕುಳಿತಾಅರೆನಿ'ುಷದಿ ಹರಿಧ್ಯಾನದಿ ಮೈಮರೆತಾ ಸಮಾಧಿ ಇಳಿಯುತಾವರೃಮುನಿಗಳು ತಪವಗೈದಮೆಟ್ಟಾ ಎನುತಲಿಯೆ ನಿಂತಾ 2ಹಗಲು ಇರಳು ಹರಿಧ್ಯಾನದಿ ತಾ ಮುಳುಗಿ ಅಲ್ಲಿರುತಿರಲಾಗಿ ನಗೆ ಮುಖದಲಿ ಝಗಝಗ ಕಾಂತಿಯು ಬೆಳಗಿ ಸುತ್ತಲು ಬೆಳಕಾಗಿಜಗದಜನಕೆ ಅದು ಅತಿ ಅಚ್ಚರಿಯಾಗಿ ಯೋಗಿಗೆ ಶಿರಬಾಗಿಬಗೆ ಬಗೆ ಭಕುತರು ಬಂದರು ತಾವಾಗಿ ಮ'ಪತಿಮಹಾಯೋಗಿ 3ಅಷ್ಟಸಿದ್ಧಿಗಳು ನೆಲೆಸಿದವಾಗಲ್ಲಿ ಆಶ್ರಮ ಬಾಗಿಲಲಿಎಷ್ಟು ಭಕುತಿಜನ ಬಂದರು ಸ'ತಲ್ಲಿ ಇಷ್ಟಾರ್ಥ ಕರದಲಿಮೃಷ್ಟಾನ್ನ ಭೋಜನ ಪ್ರತಿದಿನದಲ್ಲಿ ನಡೆುತು ಸಮತೆಯಲಿಇಷ್ಟವಾದ ಆಧ್ಯಾತ್ಮಿಕ ಮಾರ್ಗದಲಿ ಉಪದೇಶ ಪಡೆಯುತಲಿ 4
--------------
ಭೂಪತಿ ವಿಠಲರು
ಕೃಷ್ಣರಾಯನೆ ನಿನ್ನ ಕೃತ್ಯಗಳೆಲ್ಲ ಸೃಷ್ಟಿಯೊಳಗೆ ನಾ ಬೀರಲ್ಯಾ ಪ ಕಷ್ಟ ಬಿಡಿಸದೆ ಸುಮ್ಮನಿದ್ದೆಯಾ ಸ್ವಾಮಿ ಅ.ಪ. ಜನನ ಮರಣ ಶೂನ್ಯನೆನಿಸಿಕೊಂಡು ಗೋಪಿ ತನಯನಗಿದ್ದುದ ಹೇಳಲ್ಯಾ ಸನಕಾದಿಸೇವ್ಯ ಪೂಜ್ಯನೆ ತುರುಗಳ ಹಿಂಡು ವನದಲ್ಲಿ ಕಾಯ್ದದ್ದು ಹೇಳಲ್ಯಾ ನಾನು 1 ದನುಜ ಭಂಜನನಾದ ‌ಘನ ಮಹಿಮನೆ ಮಾಗ ಧನಿಗಂಜಿ ಓಡಿದ್ದು ಹೇಳಲ್ಯಾ ಎಣೆಯಿಲ್ಲದಾ ಶೂರ ರಣದೊಳು ಪಾರ್ಥಗೆ ಅನುಗನಾಗಿದ್ದದ್ದು ಹೇಳಲ್ಯಾ ನಾನು 2 ಸತತ ತೃಪ್ತನಾಗಿ ಕ್ಷಿತಿಯೊಳು ಬೆಣ್ಣೆಯ ಮಿತವಾಗಿ ಕದ್ದದ್ದು ಹೇಳಲ್ಯಾ ಕೃತಿದೇವಿರಮಣನೆ ಅತಿ ಪ್ರೀತಿಯಲಿ ಗೋಪ ಸತಿಯರ ಕೂಡಿದ್ದು ಹೇಳಲ್ಯಾ ನಾನು 3 ಶ್ರುತಿತತಿಗಳಿಗಭೇದ್ಯ ಪ್ರತಿಯಿಲ್ಲದೆ ದೇವ ಸತಿಗೊಶನಾದದ್ದು ಹೇಳಲ್ಯಾ ಶತಕೃತು ವಿಧಿವಂದ್ಯ ಸುತರಾಪೇಕ್ಷಿಸಿ ಭೂತ ಪತಿಯನ್ನು ಬೇಡಿದ್ದು ಹೇಳಲ್ಯಾ ನಾನು 4 ಭೂತಳದೊಳು ದೇವತೆಗಳೊಡÀನೆ ಇಂಥ ರೀತಿಲಿ ಚರಿಸಿದ್ದು ಹೇಳಲ್ಯಾ ಭೀತಿರಹಿತ ಜಗನ್ನಾಥವಿಠ್ಠಲನೆ ಅ ದ್ಭುತ ಮಹಿಮನೆಂದು ಹೇಳಲ್ಯಾ ನಾನು 5
--------------
ಜಗನ್ನಾಥದಾಸರು
ಕೃಷ್ಣಲೀಲೆ ಆನೆ ಬರುತಾದೆ ನೋಡಮ್ಮ ಮದ್ದಾನೆ ಬರುತಾದೆ ಪ ಆನೆ ಬರುತಾದೆ ಎಲ್ಲರು ನೋಡಿರಿ ಒಂ-ದಾನೆಯ ಕೊಂದ ಮದ್ದಾನೆಏನೆಂದು ಪೇಳಲಿ ಎಲ್ಲ ದಿಕ್ಕುಗಳಲಿತಾನೇ ತಾನಾಗಿ ಮದ ಸೊಕ್ಕಿದಾನೆಅ ನೀರ ಮುಳುಗಿ ಖಳನ ಕೊಂದು ವೇದ ತಂದುಬರಮದೇವಗಿತ್ತ ಮದ್ದಾನೆಕ್ರೂರ ಚಿತ್ರಗುಪ್ತನೊಡನೆ ಕಾರುಬಾರಿಗಿಳಿದಜಾರ ಕೃಷ್ಣನೆಂಬ ಸೊಕ್ಕಿದಾನೆ 1 ದಶದಿಕ್ಕಿನೊಳು ಘಂಟೆ ಘಣಿರೆಂದು ಬರುತ್ತಿದೆಕುಸುಮಶರನ ಪೆತ್ತ ಮದ್ದಾನೆದಶಕಂಠನ ಕೊಂದು ಅನುಜಗೆ ಪಟ್ಟಗಟ್ಟಿದದಶರಥಸುತನೆಂಬ ಮದ ಸೊಕ್ಕಿದಾನೆ 2 ಗಂಧ ಕಸ್ತೂರಿ ಬೊಟ್ಟು ಗಮಕದಿಂದಲಿ ಇಟ್ಟುಗೊಂದಲಗಡಿಬಿಡಿ ಸುರಲೋಕ ಅಮ್ಮಮ್ಮಬೆಂಬಿಡದೆ ದೈತ್ಯರನು ಕೊಂದ ಗುಣ ಸಂಪನ್ನಸುಂದರ ಕೃಷ್ಣನೆಂಬ ಮದ ಸೊಕ್ಕಿದಾನೆ 3 ಸಾವಿರ ತೋಳವನ ಸರಸದಿಂದಲಿ ಕಡಿದಭುವನ ರಕ್ಷಕನಾದ ಮದ್ದಾನೆಯೌವನದ ಗೋಪಿಯರ ಕಣ್ಮಣಿ ಎನಿಪ ವಸುದೇವಸುತನೆಂಬ ಮದ ಸೊಕ್ಕಿದಾನೆ 4 ಗರುಡವಾಹನವೇರಿ ಧಿಮಕೆಂದು ಬರುತಾನೆಸರುವ ಲೋಕರಕ್ಷಕನೆಂಬ ಮದ್ದಾನೆಉರೆ ಪೂತನಿಯ ಹೀರಿ ಮಾವ ಕಂಸನ ಕೊಂದಸಿರಿಯಾದಿಕೇಶವನೆಂಬ ಮದ ಸೊಕ್ಕಿದಾನೆ 5
--------------
ಕನಕದಾಸ
ಕೃಷ್ಣವೇಣಿ ಕಲ್ಯಾಣಿ ನಿತ್ಯ ಸಾಗರನ ರಾಣಿ ಪ ಅಜನ ನಿರೂಪದಲಿ ಜಾಬಾಲಿಮುನಿ ಬಂದು ಭಜಿಸಿದನು ನಿನ್ನ ಬಲುದಿವಸಂಗಳು ನಿಜವಾಗಿ ಹರನ ಜಡೆಯಲ್ಲಿ ಉದ್ಭವಿಸಿದೆ ತ್ರಿಜಗದೊಳಗೆ ಮೆರೆದೆ ತ್ರಿದಶಾಮರವಂದಿತೆ 1 ಕನ್ಯಾರಾಶಿಗೆ ಜೀವ ಬಂದು ಪ್ರಾಪುತನಾಗೆ ಹನ್ನೆರಡು ವರುಷಕೆ ಒಮ್ಮೆ ಬಿಡದೇ ಮನ್ನಿಸಿ ಭಕುತಿಯಿಂದ ಒಂದು ಮಜ್ಜನಮಾಡೆ ಧನ್ಯನ ಮಾಳ್ಪೆ ಬಲು ಘನ್ನ ತರಂಗಿಣಿ 2 ಎತ್ತ ನೋಡಿದರತ್ತ ನಾಲ್ಕುವರೆ ಯೋಜನವು ಕ್ಷೇತ್ರ ಪುಣ್ಯದೇವಿಯೆನಿಸಿಕೊಂಬೆ ಸ್ತುತಿಸಲಳವೇ ನಿನ್ನ ಮಹಿಮೆಯ ಅನುಗಾಲ ಮತ್ತಗಜಗಮನೆ ಮಲದೂರೆ ಮುಕ್ತಿಧಾರೆ 3 ಪೋಗದ ಪಾಪಗಳಿರಲು ನಿನ್ನ ದರುಶನವು ಬಾಗಿಲ ಕಾಯ್ವ ಭಾಗ್ಯವ ಕೊಡು ಕರುಣದಲಿ 4 ಕಲಿಯುಗಕೆ ನೀನೇ ವೆಗ್ಗಳವೆಂದು ಬುಧಜನರು ಒಲಿದು ಕೊಂಡಾಡುವರು ಸತತದಲ್ಲಿ ಜಲನಿಧಿಯ ಎರಡು ಮೊಗದಲಿ ಮೆರೆದೆ ಮಹತಟಿನಿನೆಲೆಗೊಳಿಸು ವಿಜಯವಿಠ್ಠಲ ಚರಣದಲ್ಲಿ 5
--------------
ವಿಜಯದಾಸ
ಕೃಷ್ಣಾ ನಿನ್ನ ಕನಿಷ್ಟ ಪೊಳವ ವುಂ ಗುಷ್ಟ ಭಜಿಸುವ ನಿಷ್ಠ ಜನರ ಉಚ್ಚಿಷ್ಟ ಎನಗದು ಮೃಷ್ಠಾನ್ನವಾಗಲಿಷ್ಟೇ ಬೇಡಿದೆನೊ ಪ ನರಲೋಕದ ಸುಖ ಪರಿಪರಿಯಲ್ಲಿ ಅರಿದೆನದರೊಳು ಪರಮ ಸೌಖ್ಯ ಎಳ್ಳರೆ ಅನಿತಿಲ್ಲ ಬರಿದೆ ಜನನ ಮರಣ ಪರಿಯಂತಾ ದುರಿತ ಧರೆಯೊಳಗೆ ನಿಂದಿಸಲಾರೆ ಸಾಕು ಶರಣು ಹೊಕ್ಕೆನು ಕರುಣಪಾಂಗನೆ ಕರವಿಡಿದು ಸಲಹೋ 1 ಆವುದುಂಟದು ದೇವ ಮಾಣಿಸು ಈ ವರವ ಕೊಂಡು ನಾ ಒಂದನು ವಲ್ಲೆ ಭಾವಶುದ್ಧ ವಾಕ್ಯವೆ ನಿಶ್ಚಯವೊ ಮಾನವ ಕಾವ ನೈಯನೆ ಕಾವ ಜೀವ ನಿನ್ನಂಘ್ರಿ ಸೇವೆ ಸಂಪದವೊ ಜಗತ್ರಯವ 2 ಹಡಗದೊಳಗಿಂದ ತಡಿಯದೆ ಬಂದಾ ಕಡಗೋಲ ನೇಣ ಪಿಡಿದ ಪಡುವಲಾ ಗಡಲ ತೀರದ ಉಡುಪಿನಲಿ ನಿಂದ ಅಡಿಗಡಿಗೆ ಪೂಜೆ ಬಿಡದೆ ಯತಿಗಳಿಂ ಉಘಡ ವಿಜಯ ವಿಜಯವಿಠ್ಠ ಲೊಡಿಯ ಭಕ್ತರ ಬಿರುದಿನ ಕಡು ಸಾಹಸಮಲ್ಲ3
--------------
ವಿಜಯದಾಸ
ಕೃಷ್ಣಾರ್ಯರು ಮನವೇ ಲಾಲಿಸಿ ಕೇಳೊ ಬಿನ್ನೈಸುವೆನೊ ನಿನಗೆ ಚೆನ್ನಾಗಿ ವಡೆಯಾನಾ ಪಾದದಲ್ಲಿ ಭಕುತಿಯನ್ನೆ ಮಾಡಿ ಮಮತೆ ವಿಷಯಾದಿ ಅಹಂಕಾರ ಬುದ್ಧಿಯನ್ನೇ ಬೀಸಾಟಿ ದೃಢವಾಗಿ ಧೈರ್ಯದಿಂದ ಇದೇ ಸಾಧನವೆಂದುಗುಪಿತಾದಲ್ಲಿ ಸಂಚರಿಸೆ ಪಾಣಿಯಾ ಪಿಡಿದುತಾ ವಾಣಿ ಅರಸ ನಿರ್ಮಾಣವ ತೋರಿಸುವ ಪ್ರಾಣದೇವರು ಪ್ರಾಣವಪ್ಪಿಸಿ ಸಾಕುವಬಿಡದೆ ಪಂಚಪ್ರಾಣಾತ್ಮಕನಾದ ತಂದೆವರದಗೋಪಾಲವಿಠಲರೇಯಾನ ಭಜಿಸು ಬಿಡದೆ 1 ಇಂದು ಸಾಧನವೆಂದು ತಿಳಿದು ನಿನ್ನಿಂದ ನೀನೇ ಹಿಗ್ಗಿ ಕುಗ್ಗಾದೀರು ಮಗ್ಗುಲೊಳಗಿದ್ದ ಮಧ್ವದ್ವೇಷಿ ಬಂದು ಮದ್ದು ಹಾಕಿ ಮಣಿಸೂವ ಮಧ್ವರಾಯರ ಪಾದಪದ್ಮದಲ್ಲಿ ಬುದ್ಧಿಯನಿಟ್ಟರೆ ಬಾಧೆಯ ತಪ್ಪಿಸಿ ಉದ್ಧರಿಸುವ ಮುದ್ದು ಮುಖದ ತಂದೆವರದಗೋಪಾಲ- ವಿಠಲರೇಯಾನವಲಿಸು ಬಿಡದೆ 2 ಅನಾದಿ ಕಾಲದಿಂದ ನಿಜ ಗುರುರಾಯನು ನಿನ್ನೊಳಿದ್ದು ಜನಿಸಿ ಬಂದ ಸಾಧನ ಬಿಟ್ಟು ಸುಖದುಃಖ ಜಲಮಯ ಸಂಸಾರದೊಳಗೆ ಬಿದ್ದು ಬಾಯ್ಬಿಡುವಿ ಕಂಡ್ಯಾ ಆ ಗುರುರಾಯರ ಮೂರುತಿ ನಿನ್ನೊಳು ನೋಡುತ್ತ ಪಾಡುತ್ತ ಸುಖಿಯಾಗಿ ಸಕಲ ಕರ್ಮಗಳಾಚರಿಸಿ ತದ್ವಾರ ನವನಿಧಿ ರಾಜನ ಚರಣಕ್ಕೆ ಆರೋಪಿಸೆ ಕೈಗೊಂಡು ಹೊಸಹೂವ ಸುಂದರ ಮೂರುತಿ ತಂದೆವರದಗೋಪಾಲವಿಠ್ಠಲರೇಯಾನ ನಿಲ್ಲಿಸೊ ಬಿಡದೇ 3 ಅವರ ಬಳಿಯಲ್ಲಿ ಪೋಗಿ ನೀನೂ ನಿನ್ನದು ಎನ್ನದಿರು ಕಂಡ್ಯಾ ಮುನ್ನ ನಿನಗೆ ಘನ್ನವಾದ ವೈರಾಗ್ಯ ಪುಟ್ಟುವಾದೂ ಇನ್ನು ನೀನು ಮನದಾಶೆ ಎಂಬ ಪಿಶಾಚೀಗೆ ಒಳಗಾಗಿ ಏನಾಹೋದೋ ನಿನ್ನ ಘಾಸಿಯನರಿತು ಕ್ಲೇಶಾಪಾಶಾಗಳಿದ್ಯಾಡಿಪಶುಪತಿಪಿತನ ಪಡೆದ ತಂದೆವರದಗೋಪಾಲವಿಠಲರೇಯಾನ ವಲಿಸೋ ಬಿಡದೆ4 ಸದಾಕಾಲದಲ್ಲಿ ಇವರ ಸ್ಮರಣೆ ಮಾಡಿ ಧ್ಯಾನಕೆ ತಂದು ಯೋಗಾದಿ ನೋಡುವಾದೆ ಮಹಾ ನಿಜವಾದ ಭಕುತಿ ಇವರ ಪಾದಸ್ಮರಣೆ ಮಾಡಾದ ಮನುಜರಿಗೆ ಶ್ರೀಪದ್ಮ ರಮಣಾನು ಸೃಷ್ಟಿಸೂವ ಆ ಮನುಜಗೋಸುಗ ನರಕ ನರಕಾದೊಳಗಿಟ್ಟು ಕುಟ್ಟುವ ಕ್ಷಣ ಬಿಡದೆ ಎಷ್ಟು ಮಾಡಿದರೇನು ಉತ್ತುಮೋತ್ತಮರೆಲ್ಲ ಸೋತ್ತುಮರಾಯರ ದ್ರೋಹಮಾಡಿ ತುತ್ತುತುತ್ತೀಗೆ ಹಾಕಿಸಿಕೊಂಡು ಕುತ್ತೀಗೆ ಕಟ್ಟಿ ನಿತ್ಯಾದಲ್ಲಿ ಸ್ಮರಣೆಯ ಮಾಡಿದರೆ ನೃತ್ಯವಾಗೈಸುವ ಭಕ್ತಾವತ್ಸಲ ತಂದೆವರದಗೋಪಾಲವಿಠಲರೇಯಾನ ನಿಲ್ಲಿಸೋ ಬಿಡದೆ 5 ಜತೆ :ನವವಿಧಭಕುತಿಯನ್ನೇ ಅರಿತು ಗುರುಪೂಜೆ ಮಾಡಲು ತದ್ವಾರಾ ವಲಿದಾ ತಂದೆವರದಗೋಪಾಲವಿಠ್ಠಲಾ 6
--------------
ತಂದೆವರದಗೋಪಾಲವಿಠಲರು
ಕೇಶವ ಜಗದೀಶ ಸಾಸಿರಭಾಸುರಕೋಟಿಸಂಕಾಶ ವಾಸವಾದಿಗಳ ವಂದ್ಯ ಸೀತಾಪತೆ 1 ನಾರಾಯಣ ಸಕಲವೇದಪಾರಾಯಣ ಕೃಷ್ಣ ನಾರದಾದಿಗಳ ವಂದ್ಯ ಸೀತಾಪತೆ 2 ಮಾಧವ ಮಂಗಳಗಾತ್ರ ವೇದವನ್ನೆ ಕದ್ದು ಒಯ್ದ ಆ ಖಳನ ಕೊಂದೆ ಸೀತಾಪತೆ 3 ಗೋವಿಂದ ಗೋಕುಲಬಾಲ ಗೋಪಿಯರ ಮನೋಹರ ಆದಿ ಕೂರ್ಮಾವತಾರ ಸೀತಾಪತೆ 4 ವಿಷ್ಣುವೆ ಯತಿಗಳ ವಂದ್ಯ ಅಷ್ಟಲಕ್ಷ್ಮಿಯರ ನಾಥ ದಿಟ್ಟ ವÀರಾಹರೂಪನಾದ ಸೀತಾಪತೆ 5 ವೈರಿ ಯದುಕುಲಕ್ಕೆ ತಿಲಕನಾದ ಚೆಲುವನಾದ ಹರಿ ನೀನೆ ಸೀತಾಪತೆ 6 ತ್ರಿವಿಕ್ರಮರೂಪನಾಗಿ ತ್ರಿಜಗವನ್ನೆ ಪಾಲಿಸಿದ ವಾಮನರೂಪಿ ನೀನೆ ಸೀತಾಪತೆ7 ವಾಮನರೂಪವ ತಾಳಿ ಆ ಮಹಾಬಲಿಯನ್ನೆ ತುಳಿದು ನೇಮದಿ ಕ್ಷತ್ರೇರ ಕೊಂದ ಸೀತಾಪತೆ 8 ಶ್ರೀಧರ ನೀನೆಂದೆನಿಸಿ ಶೋಷಿಸಿ ಖಳg Àನೆಲ್ಲ ಜಾನಕಿಯ ತÀಂದ ರಾಮ ಸೀತಾಪತೆ 9 ಹೃಷೀಕೇಶ ನೀನೆಂದು ಋಷಿಗಳು ಸ್ತುತಿಯ ಮಾಡಿ ವಸುದೇವಸುತ ಕೃಷ್ಣ ಸೀತಾಪತೆ 10 ಬುದ್ಧಾವತಾರ ಕೃಷ್ಣ ಸೀತಾಪತೆ 11 ದಾಮೋದರನೆಂದು ನಿಮ್ಮ ದೇವತೆಗಳೆಲ್ಲ ಕರೆಯೆ ಆ ಮಹಾ ಕಲ್ಕ್ಯ್ಕನಾದ ಸೀತಾಪತೆ 12 ಸಂಕರುಷಣ ದೇವ ನಿಮ್ಮ ಕಿಂಕರರು ನಾವೆಲ್ಲರಯ್ಯ ಪಂಕಜಾಸನವಂದ್ಯ ರಾಮ ಸೀತಾಪತೆ 1 3 ವಾಸುದೇವ ನಿಮ್ಮ ಪಾದಕ್ಕೆ ವಂದನೆಯ ಮಾಡುವೆನಯ್ಯ ದೋಷರಾಶಿ ನಾಶಮಾಡು ಸೀತಾಪತೆ 1 4 ಸುರರು ಎದ್ದು ನಿನ್ನೆ ಪೊಗಳುತ್ತಿರೆ ಉದ್ಧಾರ ಮಾಡಿದ ದೇವ ಸೀತಾಪತೆ 15 ಅನುದಿನ ನಿನ್ನ ಕರೆಯೆ ಅನಿಮಿತ್ತಬಂಧು ಕೃಷ್ಣ ಸೀತಾಪತೆ 16 ಮನೋಹರುಷ ನೀಡಿದ ರಾಮ ಸೀತಾಪತೆ 17 ಅಧೋಕ್ಷಜ ಲೋಕಗಳಿಗೆ ಆಧಾರಭೂತನಾ ಗಿರುವೆ ವೇದವೇದ್ಯರಾಮ ಸೀತಾಪತೆ 18 ಬೋಧನೆಯನ್ನು ಮಾಡಿದ ಸೀತಾಪತೆ 19 ಅಚ್ಯುತ ವಿಶ್ವಾಮಿತ್ರ ಅತಿಶಯ ಯಾಗವ ಕಾಯ್ದ ಭಕ್ತವತ್ಸಲ ರಾಮ ಸೀತಾಪತೆ 20 ಜನಾರ್ದನರೂಪನಾಗಿ ಜಾನಕಿಯ ತಂದ ಜಾಹ್ನವೀಜನಕ ರಾಮ ಸೀತಾಪತೆ 21 ಉಪೇಂದ್ರನೆ ಉದ್ಧÀವಗೆ ಉಪದೇಶವನೆ ಮಾಡಿ ಅಪರಿಮಿತಪದವಿ ಕೊಟ್ಟ ಸೀತಾಪತೆ 22 ಕಾಲ ತಪವ ಮಾಡಿ ಚರಿಸುವರಿಗೆ ಮೋಕ್ಷವಿತ್ತೆ ಸೀತಾಪತೆ 2 3 ರÀಕ್ಷಿಸಯ್ಯ ಕೃಷ್ಣ ರಾಮ ರಕ್ಷಿಸಯ್ಯ ಹಯವದನ ಪಕ್ಷಿವಾಹನ ರಾಮ ಸೀತಾಪತೆ 24
--------------
ವಾದಿರಾಜ
ಕೇಳಿ ನಗಬಹುದು ಮಜಾತ್ಮರು | ಕೇಳಿ ನಗಬಹುದು | ಹೋಲಿಕೀಲ್ಯಾಡುವ ಜನದ ಜ್ಞಾನದ ನುಡಿ ಪ ದಂಭಮಾನದಲಿ | ಮನಸಿನ | ಹಂಬಲ ಘನವಿರಲಿ | ಥಂಬಿಸಿ ಕರ್ಮವ | ಸರ್ವಂ ಬ್ರಹ್ಮಮಯ | ವೆಂಬುದು ತೋರುವರಾ ನುಡಿಗಳಾ 1 ಆಶಾಪಾಶಗಳು | ವಿಷಯದಿ | ಲೇಸಿಗೆ ಬಿಗಿದಿರಲು | ನಾಶಿವ ನಾ ಬ್ರಹ್ಮನೆಂ | ದೊದರುತ ನಾನಾ | ವೇಷವ ಧರಿಸುವರಾ | ನುಡಿಗಳು 2 ಚಿನುಮಯ ನಿಜ ಸುಖವಾ | ಕಂಗಳ ಕೊನಿಯಲಿ ದೋರಿಸುವಾ | ಘನ ಗುರು ಮಹಿಪತಿ ಪ್ರಭು ಕರುಣಾನಂದ | ಅನುಭವಿಸಿದ ಲ್ಯಾಡುವ ನುಡಿಗಳಾ 3
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ಕೇಳಿದಾಗಲೇ ಹೇಳಬಹುದೇನೋ ಬ್ರಹ್ಮಾನುಭವಮಿದು ಪ ಹಾಳುವಾದವಲಾ ವಿಚಾರಿಸಲೇಳು ವ್ಯಸನಕೆ ಸಿಲ್ಕಿ ಕುಣಿಯುವ ಅ.ಪ ಖೂಳ ಕಪಟರಿಗೆಂತು ಅನುಭವಶಾಲಿಗಾಗಿಹ ಪರತರಾನ್ವಯ ಸುಳ್ಳಮಳ್ಳರಿಗಾಗದಹುದಣ್ಣ ವೇದಾಂತಸಾರಸ ಮೂಲ ಪ್ರಣವ ವಿಚಾರಕಹುದಣ್ಣ ಯಾರಾದಡಾಗಲೀ ನೀಲಜ್ಯೋತಿಯ ಕಾಣದೆ ಬರಿ ಶೂಲ ಶೀಲಕೆ ಸಿಲ್ಕಿ ಕುಣಿಯುತ ಆಲಿಸೆಂದು ನಮಸ್ಕರಿಸುತಿಹ ಜಾವಿದ್ಯದ ಪೋಲಿ ಜನಗಳು 1 ಪಂಡಿತರಿಗೇನದು ಕಂಡು ತಿಳಿಯಣ್ಣ ದೂರವಿಲ್ಲವು ಅಂಡದೊಳಗಿಹ ಪಿಂಡವೇ ಬ್ರಹ್ಮಾಂಡ ವೇದಾಂತಾರ್ಥ ಸಮ್ಮತಿ ಭಂಡರಿಗೆ ಬಹುಭಾಷೆಗಹುದೇನ ಕುಂಡಲೀಪುರ ತತ್ಪ್ರಯಾಣವು 2 ಓದಿ ವಿಕ್ರಯವನ್ನು ಮಾಡ್ಯಾರು ಓಂಕಾರ ಬೀಜದ ಹಾದಿಯನು ತಾವು ಕಾಣದೋಡ್ಯಾರೊ ರಾ ಜಾಧಿರಾಜರೂ ಕಾವಿ ಜಗಳವ ಕುಂತು ನೋಡ್ಯಾರು ವೇದಾಂತಿಗಳೂ ನಿಜ ಜ್ಞಾನಪುತ್ಥಳಿಯನ್ನು ಕಂಡ್ಯಾರು ಆದಿಮಧ್ಯಾಂತಗಳರಿಯದ ವಾದಿಗಳಿಗೆಂತಕ್ಕು ತತ್ವದ ಬೋಧೆಯೊಳಗಿಹುದು ಆದಿತತ್ವವು 3 ಕವಿಗಳೆಷ್ಟೋ ಕಷ್ಟಪಟ್ಯಾರು ಅವಸಾನಕರಂ ಭವದ ಬಲೆಯೊಳು ಕಟ್ಟಿಕುಟ್ಯಾರು ಆಗಲ್ಲಿ ಸುಜನರು ಜ್ಞಾ ನವೈರಾಗ್ಯವನು ಕೊಟ್ಯಾರು ಶಿವನು ತಾನೆಂತೆಂಬ ಅದ್ವೈತವನು ಆಡಲ್ಕಡಕಲಹುದೇ ಭುವನದೊಳು ಪಂಚಾಕ್ಷರೋ ನಿಜತ್ರಿಣೆಯಸತಿ ಮೋಕ್ಷೆಚ್ಛೆ ಕವಚಂ4 ನಾಗನಗರಿಪುರೀಶ ಕಾಣಣ್ಣ ಆಧ್ಯಾತ್ಮದನುಭವ ಕಾಗಿ ನಿನ್ನೊಳ ಹುಡುಕಬೇಕಣ್ಣ ಹಂಸಾಶ್ರಯದಿ ನಿನ್ನೊ ಳಗಿದೆಲ್ಲವು ಹುಡುಕಿ ನೋಡಣ್ಣ ಭೋಗಿಶಯನ ಶ್ರೀ ತುಲಸೀರಾಮನ ರಾಗವಿರಹಿತನಾಗಿ ಭಜಿಸಿದಡಾಗ ನಿನ್ನೊಳಗಂಕುರಿಪುದ 5
--------------
ಚನ್ನಪಟ್ಟಣದ ಅಹೋಬಲದಾಸರು
ಕೇಳಿರಿ ಕೌತುಕ ಪೇಳುವೆನೀಗ ಶೀಲ ಶ್ರೀ ಗುರುಗಳ ಕರುಣದಲಿ ಪ. ವ್ಯಾಳಶಯನ ರಂಗ ತಾಳಿ ಕರುಣಿಸಿದ ಮೇಲು ಮೇಲು ಭಕ್ತಿಯ ನೀಡುತಲಿ ಅ.ಪ. ಅರಿಯದ ದೇಶದಿ ಅರಿಯದ ಕಾಲದಿ ಅರಿಯದವಸ್ಥೆಯ ಅನುಭವವು ಸಿರಿಯರಸನ ವ್ಯಾಪಾರವಿದಲ್ಲದಡೆ ನರರಿಗೆ ಸಾಧ್ಯವೆ ನಾಡಿನೊಳು 1 ಸಂಭÀ್ರಮದಲಿ ಸಮಾರಂಭವು ಕಲೆತಿರೆ ಬೆಂಬಿಡದಲೆ ರಕ್ಷಿಸುತಿರಲು ಕುಂಭಿಣಿಯೊಳು ಸ್ಥಿರವಾದ ಪದವಿಗೆ ಅಂಬುಜನಾಭನ ಕರುಣವಿದು 2 ಅಗ್ನಿಗಳೆರಡು ಕಲೆತು ಶಾಂತವಾಗಿ ಭಗ್ನವಿಲ್ಲದ ಆನಂದ ತೋರೆ ವಿಘ್ನವಾಗದ ಕಾಲಗಳೊದಗುತ ಮಗ್ನಗೈಸಿತಾನಂದದಲಿ 3 ಚಲಿಸದ ವಸ್ತುಗಳ್ ಚಲಿಸಿತು ಮತ್ತೆ ಚಲನೆಯಿಲ್ಲದೆ ಸುಸ್ಥಿರವಾಯ್ತು ಬಲು ವಿಚಿತ್ರವು ಭೂತಲದೊಳಗಿದು ನಳಿನನಾಭನ ಸಮ್ಮತವು4 ಬಿಂಬನಾಗಿ ಹೃದಂಬರ ಮಧ್ಯದಿ ಸಂಭ್ರಮಗೊಳಿಸೆಲೊ ಶ್ರೀ ವರನೆ ನಿತ್ಯ ಇಂಬುಗೊಟ್ಟು ಕಾಯೊ ಬಿಂಬ ಶ್ರೀ ಗೋಪಾಲಕೃಷ್ಣವಿಠ್ಠಲ 5
--------------
ಅಂಬಾಬಾಯಿ