ಒಟ್ಟು 3015 ಕಡೆಗಳಲ್ಲಿ , 118 ದಾಸರು , 2173 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ತಾರಕ - ಹರಿ - ಪೊರೆಯೋ | ಹೇ ನರಹರಿತಾರಕ - ಹರಿ - ಪೊರೆಯೋ ||ಅ|| ಸಾರಾಸಾರವ ಕಾಣೆನೊ ನರಸಿಂಗಸಾರಿದೆ ತವ ಪದ ಸರಸಿಜ ರಂಗ ಅ.ಪ. ಭಾರ ಕರ್ತೃವೆ ಹರಿ ಭರಿಸುವೆ ಸಕಲರ | ಭರ್ತೃವೆಂದೆನಿಸೀಹರಣ ಬಾಂಧವರನ | ಪೊರೆವೆನೆಂಬ ಹಮ್ಮತಿಯಹರಿಸಿ ಎನ್ನಯ ದುಷ್ಟ | ಕಾರಕ ಭ್ರಮ ಬಿಡಿಸೊ 1 ಇತ್ತು ಇಂದ್ರಿಯಗಳ | ತತ್ವರ ಜೋಡಿಸಿಹೊತ್ತು ಹೊತ್ತಿಗೆ ತುತ್ತು | ಇತ್ತು ರಕ್ಷಿಸುತಿರೇ |ಮತ್ತೆ ಮದಿಂದ್ರಿಯವೇ | ಕರ್ತೃ ಎಂತೆಂದೊಂಬಮತಿ ಭ್ರಮ ಬಿಡಿಸುತ್ತ | ಹರಿಸೊ ಕ್ರಿಯಾ ಭ್ರಮ 2 ಕಾಯ ಬಂಧುಗಳೆಲ್ಲ | ಪ್ರೀಯರೆನಿಸಿಗೊಂಬದ್ರವ್ಯ ವಿಭ್ರಮ ಬಿಡಿಸೋ | ಕಾಯಜ ಪಿತನೇದಿವ್ಯ ಮೂರುತಿ ಗುರು | ಗೋವಿಂದ ವಿಠಲನೇಭವ್ಯ ರೂಪವ ತೋರಿ | ದರ್ವಿ ಜೀವನ ಕಾಯೊ 3
--------------
ಗುರುಗೋವಿಂದವಿಠಲರು
ತಾರಕವಿದು ಹರಿಕಥಾಮೃತಸಾರ ಜನಕೆ ಪ ಘೋರತರ ಅಸಾರ ಸಂಸಾರವೆಂಬ ವನಧಿಗೆ ನವ ಅ.ಪ. ಶ್ವಾನಸೂಕರಾದಿ ನೀಚಯೋನಿಗಳಲಿ ಬಂದು ನೊಂದು ವೈನತೇಯ ವಾಹನನ ಸನ್ನಿಧಾನ ಬೇಕು ಎಂಬುವರಿಗೆ 1 ಪ್ರಿಯವಸ್ತುಗಳೊಳಗೆ ಪಾಂಡುವೇಯ ಸಖನೆ ಎಮಗೆ ಬ್ರಹ್ಮ ಸುರರು ತಂದೆ ತಾಯಿ ಎಂದರಿತವರಿಗೆ 2 ಜ್ಞೇಯ ಜ್ಞಾನ ಜ್ಞಾತೃ ಬಾದರಾಯಣಾಖ್ಯ ಹರಿಯ ವಚನ ಕರ್ಮ ಶ್ರೀ ಯರಸ ನೀವನರಗೆ 3 ಶ್ರೀ ಮುಕುಂದ ಸರ್ವ ಮಮಸ್ವಾಮಿ ಅಂತರಾತ್ಮ ಪರಂ ಧಾಮ ದೀನಬಂಧು ಪುಣ್ಯ ನಾಮವೆಂದರಿತವರಿಗೆ 4 ಭೂತಭವ್ಯ ಭವತ್ಪ್ರಭು ಅನಾಥಜನರಬಂಧು ಜಗ ನ್ನಾಥ ವಿಠ್ಠಲ ಪಾಹಿಯೆಂದು ಮಾತುಮಾತಿಗೆಂಬುವರಿಗೆ 5
--------------
ಜಗನ್ನಾಥದಾಸರು
ತಾರಕುಪದೇಶವೆಂಬ ಸಾರಣಿಯ ಕೊಟ್ಟು ಪೂರ್ವ ಕರ್ಮಗಳೆಂಬ ಕಿಲ್ಮಿಷಗಳ ತೊಳೆದು ಧ್ರುವ ನಿಜ ಬೋಧವೆಂಬ ಚೂರ್ಣ ಕೊಟ್ಟು ಭವಬೀಜವೆಂಬ ವ್ಯಾದಿಯ ಮೂಲನೆ ಸುಟ್ಟು ಙÁ್ಞನಾಮೃತವೆಂಬ ಕಷಾಯದಲಿ ಉತ್ಪತ್ತಿ ಸ್ಥಿತಿ ಲಯವೆಂಬ ತ್ರಿದೋಷವನು ಪರಿಹರಿಸಿದ ನಮ್ಮ ಗುರು ಭವರೋಗವೈದ್ಯ 1 ಕಾಯವೆ ಕೋವಿಯನೆ ಮಾಡಿ ಭಾವನೆಯ ಮದ್ದನೆ ತುಂಬಿ ಸೋಹ್ಯ ಸೊನ್ನೆಯ ರಂಜನಸಿಕ್ಕಿ ಲಯಲಕ್ಷವೆಂಬ ಗುಂಡಿನಲಿ ಭವಪಾಶವೆಂಬ ಗುರಿಯ ಕೆಡಹಿದ ನಮ್ಮ ಗುರುನಾಥ ಮಹಿಪತಿಯ 2
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ತಾರಿಸೆನ್ನ ನೀ ಭವದಿಂದಲಿ ಪ ನಾನಾ ಯೋನಿಯಲಿ ಬಹು ಹೀನ ಜನುಮವನು | ನೀ ನೆವೆ ಕಳೆಯಲು ಕರ್ತನು | ಏನು ಅರಿಯದ ನಾ ಮೂಢನು 1 ಭಜಕರ ಪ್ರೀಯಾ ಕೃಪಾಬ್ಧಿಯು | ನಿಜವರಿಲಿಲ್ಲಾ ಜ್ಞಾನಿಯು 2 ಮೆರೆಯುತಲಿದೆ ನಿಮ್ಮ ಕೀರ್ತಿ | ಸಾರಥಿ 3
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ತಿರುದುಂಬುವ ನೀನು ತಿರುಮಲೇಶಾ ಮರುಗಲ್ಯಾತಕೆ ಇನ್ನು ಮನಸಿನೊಳಗೆ ಪ್ರತಿದಿನವು ಪ ಬಲಿರಾಯ ಬಲು ದಾನವನು ಮಾಡುತಿರಲಾಗಿ ಇಳಿಯ ಸುರÀವೇಷವನು ಧರಿಸಿ ಪೋಗಿ ಹಲುಬಿ ಬಾಯಿದೆರದು ತ್ರಿಪಾದ ತಿರಕೆ ಕೊಂಡು ನಿಗಮ ಕುಲದಾತಾರಾ 1 ಗೋಪಳ್ಳಿಯಲಿ ಜನಿಸಿ ಗೋವುಗಳ ಕಾವುತ್ತ ಗೋಪಾಲತತಿ ವಡನೆ ವಡನಾಡುತ ತಾಪಸರು ಯಜ್ಞ ಕರ್ಮಾದಿಗಳು ಮಾಡುತಿರೆ ಶ್ರೀಪತಿ ಅನ್ನ ತಿರಿದುಂಡು ಕ್ಷುದಿಯನ್ನ ಕಳೆದೆ 2 ಅಂದು ಈ ಪರಿಯ ಯಾಚಕ ವೃತ್ತಿಯನು ಮಾಡಿ ಇಂದೆನ್ನ ಹೃತ್ಕಮಲದೊಳಗೆ ಬಂದೂ ನಿಂದು ಮನೆಮನೆ ತಿರದುಂಬುವ ನೀನಲ್ಲವೆ ಸಂದೇಹವೇಕೆ ಎನಗೆ ವಿಜಯವಿಠ್ಠಲರೇಯಾ 3
--------------
ವಿಜಯದಾಸ
ತಿರುಪತಿ ವೆಂಕಟರಮಣ ನೀನು ಧರಣಿಯೊಳ್ಸರ್ವರಿಗಧಿಕ ತಿರುಪತಿ ವೇಂಕÀಟರಮಣ ಪ ಸ್ವಾಮಿ ಪುಷ್ಕರಿಣಿಯ ತಟದಿ ವಾಸ ಮಾಡಿಕೊಂಡಿರುವೆಯೊ ನೀನು | ಭೂಮಿಯೊಳಗೆಲ್ಲ ಸಾಧು ಸಜ್ಜನರು ನೇಮದಿಂದಲಿ ನಿನ್ನ ಸೇವಿಪರು 1 ಮಂಜುಗುಣಿಯ ಪುರದೊಳಗೆ ಬಂದು ಕಂಜಾಕ್ಷ ವರ ಚಕ್ರ ಶಂಖ ಮತ್ತೆ ಶರಚಾಪಗಳನ್ನೆತ್ತಿ ಮೆರೆದೀ 2 ಜಗಕೆಲ್ಲ ಶೇಷಾದ್ರಿಯಂಥ ಕ್ಷೇತ್ರವಿಲ್ಲೆಂದು ತೋರಿಸುತಿರುವಿ | ಖಗವರನನ್ನೇರಿ ತಿರುಗಿ ಬಂದು ತಿರುಪತಿ ಕ್ಷೇತ್ರದೊಳಿರುವಿ 3 ಪಾದ ಮುಟ್ಟದೆ ಜಾನುಗಳಿಂದ | ಬಂದು ಸಾಲಿಗ್ರಾಮದ ಮಾಲೆಯನ್ನು ಪಾದಕರ್ಪಿಸಿ ಸ್ತುತಿಸಿದರು ನಿನ್ನ 4 ಬಂದು ರಾಜೇಶ ಹಯಮುಖ ನಿನಗೆ | ಮಾಲೆ ಹಾಕುತ ಮುಂದೆ ನಿಂದಳು ಶಂಕೆಯಿಲ್ಲದೆ ನಮಿಸಿದಳು ಮುದದಿ 5
--------------
ವಿಶ್ವೇಂದ್ರತೀರ್ಥ
ತಿರುಮಲೇಶ ಹರಿ ವಿಠ್ಠಲ | ಪೊರೆಯ ಬೇಕಿವನಾ ಪ ಕರುಣಾಳು ನೀನೆಂದು | ಪ್ರಾರ್ಥಿಸುವೆ ಹರಿಯೇಅ.ಪ. ತರಳನಿವ ಸಾಧನದ | ಸತ್ಪಥವ ಸಾಧಿಸಲುಹರಿದಾಸ ದೀಕ್ಷೆಯನು | ಕಾಂಕ್ಷಿಸುವ ಹರಿಯೇ |ಸರ್ವಬಗೆಯಲಿ ಇದಕೆ | ಪರಿಪರಿಯ ವಿಘ್ನಗಳಪರಿಹರಿಸಿ ಪೊರೆ ಇವನಾ | ಸರ್ವಾಂತರಾತ್ಮಾ 1 ಮರುತಮತ ದೀಕ್ಷೆಯಲಿ | ಇರುವಂತೆ ಕರುಣಿಸುತಪರತತ್ವ ಸಾರವನೆ | ಅರುಹುತಲಿ ಪೊರೆಯೋ |ವರಪಂಚ ಭೇಧಗಳ | ತರತರಾತ್ಮಕದರಿವುನೆರವಾಗಲಿವನೀಗೆ | ಗುರುದಯದಿ ಹರಿಯೇ 2 ಕಾಕುಸಂಗವ ಕೊಡದೆ | ಸತ್ಸಂಗ ಪ್ರಾಪಿಸುತಲೌಕಿಕೋನ್ನತಿ ಕೊಟ್ಟು | ನೀಕಾಯೊ ಹರಿಯೇ |ಪ್ರಾಕ್ಕು ಕರ್ಮವ ಕಳೆದು | ಬೇಕಾದ ವರಗಳನುನೀ ಕೊಟ್ಟು ಕಾಯೊ ಹರಿ | ಸಾಕಾರ ಮೂರ್ತೇ 3 ಗುರು ಹಿರಿಯ ಸೇವೆಯಲಿ | ಪರಮರತಿಯನೆ ಕೊಟ್ಟುಹರಿಗುರು ಚರಿತೆಗಳ | ಬರೆವ ಕೌಶಲವಾ |ಕರುಣಿಸೀ ಸತ್ಪಥದ | ಚರಿಪಂತೆಯ್ಯುಪ್ಪುದುಮರುತಾಂತರಾತ್ಮಕನೆ | ಉರುಗಾದ್ರಿ ನಿಲಯಾ 4 ಸರ್ವೇಶ ಸರ್ವಜ್ಞ | ಸರ್ವವ್ಯಾಪ್ತನೆ ಸ್ವಾಮಿನಿರ್ವಿಕಾರನೆ ದೇವಾ | ಶರ್ವಾದಿ ವಂದ್ಯಾ |ದರ್ವಿಜೀವಿಯ ಪೊರೆಯೆ | ಪ್ರಾರ್ಥಿಸುವೆ ಶ್ರೀಹರಿಯೇಸರ್ವ ಸುಂದರ ಗುರೂ ಗೋವಿಂದ ವಿಠಲಾ 5
--------------
ಗುರುಗೋವಿಂದವಿಠಲರು
ತಿಳಿ ಆದೆ ದೇವನು ಇರುತಿಹೆ ನೀ ಪ ಅದು ಕೊನೆಯಾಚೆಗೆ ಬೇರಿಲ್ಲ ಅದು ಮನಸಿಗೆ ನಿಲುಕುವದಲ್ಲ ಅದನನು ಭವದಲಿ ತಿಳಿಯಲ್ಲ ಬಿಡು ಮನಸಿನ ಗೊಡವೆಯನೆಲ್ಲ ಇದೆ ಜ್ಞಾನಾಗ್ನಿಯು ಸುಡುತಿಹುದೋ ಒದಗಿದ ಕರ್ಮದ ಕಾಷ್ಮಗಳ 1 ಮನವಡಗಿದ ಪದ ಪರಿಚಯವ ತನಿನಿದ್ರೆಯ ಮೀರಿದ ಸ್ಥಿತಿಯ ಅನುಭವದಲಿ ತರುವುದೆ ಯೋಗ ಅದನೇ ಯತ್ನದಿ ಸಾಧಿಸು ತಾ ನನಸಿನಲೇ ಗುರು ಮುಖದಿಂದ ಕೇಳಿ ನಿವೇಕದಿ ತಿಳಿ ಬೇಗಾ 2 ಎಚ್ಚರವಿದು ತಿಳಿ ಕನಸೆಂದು ಅಚ್ಚಳಿಯದ ಸ್ಥಿತಿ ನಾನೆಂದು ನಿಚ್ಚಳದಲಿ ನಿಶ್ಚಯಿಸುವದು ತುಚ್ಛದ ತೋರಿಕೆ ಎಂದು ತಿಳಿ ಸಚ್ಚಿತ್‍ಶಂಕರ ಬೋಧವನಾ 3
--------------
ಶಂಕರಭಟ್ಟ ಅಗ್ನಿಹೋತ್ರಿ
ತಿಳಿ ಸತ್ಯರೂಪವÀ ಪರಮಾನುಭವವ ಸುವಿಚಾರದಿಂದ ಯೋಚಿಸು ಜೀವಾ ಪ ನಾ ನೀನು ಎನುವಾ ಇದು ಅದು ಎನುವ ನಾನಾತ್ಮಭಾವಾ ಪುಸಿಯಿದು ಜೀವಾ ಏನೊಂದು ಮಿಲ್ಲದೆ ತಾನುಳಿದಿರುವ ಸ್ವಾನುಭವಾತ್ಮಾ ಸತ್ಯನಾಗಿರುವ 1 ಕರ್ತೃವೆನಿಸದ ಭೋಕ್ತøವೆನಿಸದ ಅನಿಸಿಕೆಯಳಿದಾ ನಿತ್ಯನಿರಂಜನ ಮಾಯಾವಿಲಾಸದಿ ತೋರುವನೀಪರಿ ಕನಸಿನೊಲಿದುವೇ ಪುಸಿ ಈ ಜಗವು 2 ಅವಿಚಾರಗಳಿಗೆ ಬೇರಾಗಿ ತೋರೇ ಸುವಿಚಾರದಿಂ ನೋಡೇ ತಿಳಿವುದು ಇದುವೇ ಅದೇ ಪರಮಾತ್ಮನೇ ನೀನಿರುವಿಯಿದೋ ಗುರು ಶಂಕರರಾರ್ಯನ ವರಬೋಧವಿದೋ 3
--------------
ಶಂಕರಭಟ್ಟ ಅಗ್ನಿಹೋತ್ರಿ
ತಿಳಿಯದಾಯಿತು ವಯಸು ಕಳೆದು ಹೋಯಿತು ಪ ಕಳವಳಿಸುತ ಕಡೆಗಾಣದೆ ಬಳಲಿ ತೊಳಲಿ ಪಾಪ ಹೆಚ್ಚಿ ಅ.ಪ ಸತಿಸುತರೆಂಬ ಬಲೆಗೆ ಸಿಲುಕಿ ಅತಿಶಯ ಮೋಹದಲಿ ಮುಳುಗಿ ಪಥಿಕರಾಡುವಂತೆ ನಡೆದು ಪತಿತನಾಗಿ ನಿಜದ ಮರ್ಮಾ 1 ಕೆಲದಿನ ಆಟದಿ ಲಲನೆಯರ ಕೂಟದಿ ಹಲವು ವಿದ್ಯೆಯ ಕಲಿತು ಪರರ ಒಲಿಸಿ ಸ್ತ್ರೋತ್ರಮಾಡಿ ಬೇಡಿ ಫಲವ ಕಾಣಲಿಲ್ಲ ಕೊನೆಗೆ ಹಲುಬಿ ಹಲುಬಿ ಬಾಯಿನೊಂದು 2 ನೀತಿ ಹೇಳುತಾ ಪರರ ನಿಂದೆಗೆಯ್ಯುತಾ ಗುರುಮುಖದಲಿ ಪರಮತತ್ವ 3 ಮತ್ತನಾಗುತ ದುರಾಸಕ್ತನೆನಿಸುತ ನಿತ್ಯಕರ್ಮವನ್ನು ತೊರೆದು ಸತ್ಯಶಮದಮಗಳ ಮರೆದು ಚಿತ್ತದಲಿ ನಿರ್ಮಲನಾಗದೆ ಚಿಂತಿಸುತಲಿ ನಿಜದ ನೆಲೆಯ 4 ಗುರುರಾಮವಿಠಲನ ಶ್ರೀಚರಣಕಮಲ ಸ್ಮರಣೆಗೈದು ಹೊರಗು ಒಳಗು ಒಂದೆ ವಿಧದಿ ಚರಿಸಿ ಸೌಖ್ಯಪಡೆವ ಬಗೆಯ 5
--------------
ಗುರುರಾಮವಿಠಲ
ತಿಳಿಯದು ಆರಿಗೆ ನಳಿನಾಕ್ಷನ ಘನ ವಿಲಸಿತಮಹಿಮೆ ಸುಲಭವಲ್ಲಮಮ ಪ ಒಳಗು ತಾನೆ ಹೊರಗು ತಾನೆ ಒಳಗ್ಹೊರಗೊಂದಾಗಿ ಬೆಳಗುವ ತಾನೆ ಬಳಗ ತಾನೆ ಬಂಧು ತಾನೆ ಹಲವು ಜೀವರ ಸಲೆರೂಪನು ತಾನೆ 1 ಹಸಿವು ತಾನೆ ತೃಷೆಯು ತಾನೆ ಹಸಿತೃಷೆ ತೀರಿಪ ಸೂತ್ರನು ತಾನೆ ಎಸೆವ ತತ್ವಮಸಿ ಮಹವಾಕ್ಯವ ಕುಶಲದಿ ನುಡಿಸುವ ಈಶನು ತಾನೆ 2 ರಕ್ಷಕ ತಾನೆ ಶಿಕ್ಷಕ ತಾನೆ ಸಾಕ್ಷಿಯಾಗಿ ನ್ಯಾಯ ವೀಕ್ಷಿಪ ತಾನೆ ಸೂಕ್ಷ್ಮಜ್ಞಾನವಿತ್ತಕ್ಷಯದ್ಹೊರೆಯುವ ಮೋಕ್ಷಕರ್ತ ಶ್ರೀರಾಮ ತಾನೆ 3
--------------
ರಾಮದಾಸರು
ತಿಳಿಯದೆ ಬೊಗಳುವದೆಲ್ಲಲ್ಲಲ್ಲ ನಿಜ ತಿಳಿದರೆ ವಲಿತಾ ಬ್ಯಾರಿಲ್ಲ ಪ ಮುಲ್ಲ ಶಾಸ್ತ್ರದ ಮೂಲವ ತಿಳಿಯದೆ ಜೊಳ್ಳುಕೂಗಿಗೆ ಮುಕ್ತಿಲ್ಲಿಲ್ಲ ಅ.ಪ ಭ್ರಷ್ಟತ್ವವಳಿಯುದೆ ಅಲ್ಲಲ್ಲ ಮುಂದೆ ನಿಷ್ಠನಾಗಲು ಕಷ್ಟ ಇಲ್ಲಲ್ಲ ದುಷ್ಟತನಳಿದುಳಿ ಬಿಸ್ಮಿಲ್ಲ ಸತ್ಯ ಶಿಷ್ಟರೊಳಾಡ್ವುದೆ ಸೊಲ್ಲಲ್ಲ 1 ಕಾಲನ ಗೆಲುವದೆ ನಿಜಮೌಲ ವನ ಮಾಲನ ಭಜನದೆ ತಿಳಿ ಲಾಯಿಲಾ ನೀಲಶಾಮನ ಮಹದಾಲಯದಿಟ್ಟು ಸು ಶೀಲನಾದವನೆ ಮಹದ್ದೌಲ 2 ಮಹಮ್ಮದನಾಗ್ವದೆ ಸೊಲ್ಲಲ್ಲ ತನ್ನ ಅಹಮ್ಮದನಾಗ್ವದೇಕರ್ಬಲ ಅಹಂ ವಹಂ ನೀಗಿ ರಾಮರಹೀಂ ನೆಲೆ ತಿಳಿ ಭವಜನುಮ ಮುಂದಿಲ್ಲಲ್ಲ 3
--------------
ರಾಮದಾಸರು
ತಿಳಿಯದೈ ಶ್ರೀ ಹರಿಯೆ ನಿನ್ನ ಮಹಿಮೆ ನಳಿನ ಸಂಭವ ಮುಖ್ಯನಿಗಮನಾಗ ಮಂಗಳಿಗೆ ಪ ಒಂದು ಯಜ್ಞಕೆ ಪೋಗಿ ಇರುಳ್ಹಗಲು ಕಾಯ್ದಿ ಮ ತ್ತೊಂದು ಯಜ್ಞಕೆ ಕರ್ತನಾಗಿ ಮಾಡಿ ಒಂದು ಯಜ್ಞಕೇ ಪೋಗಿ ವಿಧ್ವಂಸ ಮಾಡಿ ಮ ತ್ತೊಂದು ಯಜ್ಞವ ಕೆಡಸಿದನ ಮಿತ್ರನಾದೇ1 ಒಬ್ಬರಸನನ ಕುಲವ ಪರಿಪರಿ ಸಂಹರಿಸಿ ಒಬ್ಬರಸನನ ನೆಲಿಗೆ ನಿಲಿಸಿದೈಯ್ಯಾ ಒಬ್ಬರಸನನ ಕರಗಸದಿ ಕೊಯಿದು ಪರೀಕ್ಷಿಸಿದೆ ಒಬ್ಬರಸನನ ಸಭೆಯೊಳಗೆ ಶಿರವ ತರಿದೇ 2 ಒಂದಾನೆ ಏರಿದನು ಪಾಯದಲ್ಲಿ ಮರ್ದಿಸಿದೆ ಒಂದಾನೆ ಏರುವನ ಮಗನ ಕಾಯಿದೇ ಒಂದಾನೆಯನುಕೊಂದು ರಜಕನಸುವನು ತೆಗೆದೆ ಒಂದಾನೆಗೊಲಿದೆ ಮಹಿಪತಿನಂದ ನೋಡಿಯಾ 3
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ತಿಳಿಯೊ ಮನವೆ ನಿಜವಸ್ತು ಖೂನ ಅಳಿಯೊ ದೇಹ ನಾನೆಂಬುವಭಿಮಾನ ಹೊಳಿಯೊ ಸದ್ಗುರು ಪಾದದಲಿ ನೀ ಪೂರ್ಣ 1 ಹುಟ್ಟಿ ಬಂದೇನು ಪುಣ್ಯ ಪುರುಷಾರ್ಥ ಘಟ್ಟಿಗೊಳ್ಳದೆ ನಿಜ ಸುಹಿತಾರ್ಥ ನಿಷ್ಠೆ ಹಿಡಿಯದನ ಜನ್ಮ ವ್ಯರ್ಥ ಮುಟ್ಟಿ ತೋರುವ ಶ್ರೀ ಗುರು ಪರಮಾರ್ಥ 2 ಗುರ್ತು ತಿಳಿಯೊ ಜನುಮಕೆ ಬಂದ ಮ್ಯಾಲೆ ಮರೆತು ಮೈಮರೆವದೇನು ತಾ ಮೇಲೆ ಅರ್ತು ನಡೆವದು ನಿನಗೇನು ಸೋಲು ಕರ್ತು ಸದ್ಗುರು ಸ್ಮರಿಸೋ ಆವಾಗಲೂ 3 ಎಲ್ಲಾರಂಥ ತಾನಲ್ಲೊ ಗುರುನಾಥ ಸುಲ್ಲಭದಿಂದ ದೋರುವ ಸುಪಥ ಅಲ್ಲೆ ದೋರ್ವದು ಸಕಲ ಹಿತಾರ್ಥ ಬಲ್ಲ ಮಹಿಮರೆ ತಿಳಿವರೀ ಮಾತ 4 ಭಾಸುತದೆ ಭಾಸ್ಕರ ಕೋಟಿ ಕಿರಣ ಲೇಸಾಗಿ ಹೋಗೊ ಗುರುವಿಗೆ ಶರಣ ದಾಸಮಹಿಪತಿ ಸ್ವಾಮಿ ದೀನೋದ್ಧಾರಣ ಭಾಸಿ ಪಾಲಿಸುವ ತಾ ಸುಕರಣ 5
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ತಿಳಿವರು ಮನುಜರು ತಿಳಿದೊಮ್ಮೆ ತಿಳಿಯರು ನಳಿನಾಕ್ಷ ನಾಶರಹಿತನಲ್ಲದಿಲ್ಲವೆಂದು ಪ ಅರ್ಕಜಂಬುಜ ಬಲ್ಲ .................. ಮಾರ್ಕಂಡೆಯ ಮುನಿ ಬಲ್ಲ ಮಹಿ ಬಲ್ಲಳು ಅರ್ಕ ತನುಜ ಬಲ್ಲ ಅಂಬರೀಷ ಬಲ್ಲ ದೇ ವರ್ಕಳವೊಡಿಯ ಮಾಧವನಲ್ಲದಿಲ್ಲವೆಂದು 1 ವಾಯುನಂದನ ಬಲ್ಲವಾ............. ಯತಿ ಬಲ್ಲ ಕರಿ ಬಲ್ಲನೊ ರಾಯ ಧರ್ಮಜ ಬಲ್ಲ ರಾಜ ರಾಜನು ಬಲ್ಲ ಮಾಯಾರೂಪತಾಳಿ ಹರಿಯಲ್ಲದಿಲ್ಲವೆಂದು2 ಗರುಡದೇವನು ಬಲ್ಲ ಗಂಗಾತನಯ ಬಲ್ಲ ಉರಗಾಧಿಪತಿ ಬಲ್ಲ ಉಮೆ ಬಲ್ಲಳು ................ಶರಣರಣ್ಣಪ್ಪ ಪರಮಾತ್ಮ -ಇಂ ದಿರಾಪತಿಯಲ್ಲದಿಲ್ಲವೆಂದು3 ಪಾರಾಶರನು ಬಲ್ಲ ಪ್ರಹ್ಲಾದ ಭಕ್ತ ಬಲ್ಲ ನಾರದಮುನಿ ಬಲ್ಲ ನರಬಲ್ಲನು ವಾರಿಜಸಖ ಬಲ್ಲ ವಶಿಷ್ಠ ತಪಸಿ ಬಲ್ಲ ಧಾರುಣಿಕರ್ತೃ ಶ್ರೀಧರನಲ್ಲದಿಲ್ಲವೆಂದು 4 ಬಲಿಚಕ್ರವರ್ತಿ ಬಲ್ಲ ಭೃಗುಋಷೇಶ್ವರ ಬಲ್ಲ ಕಳಸಸಂಭವ ಬಲ್ಲ.................. ಬಲ್ಲನು ಗಿಳಿಮುಖದವ ಬಲ್ಲ ಗೌತಮ ಮುನಿ ಬಲ್ಲ ಇಳಿಗೆ ಆಧಾರ ಶ್ರೀಕೃಷ್ಣನಲ್ಲದಿಲ್ಲರೆಂದು 5 ಉದಧಿರಾಯನು ಬಲ್ಲ ಉಧ್ಧವ ಯದು ಬಲ್ಲ ವಿಧುಶೇಖರ ಬಲ್ಲ ವಿದುರ ಬಲ್ಲ ಪದುಮನಾಭನೆ ಪರಗತಿಯಲ್ಲದಿಲ್ಲವೆಂದು 6 ಜನಕರಾಜನು ಬಲ್ಲ ಜಾಹ್ನವಿನದಿ ಬಲ್ಲಳು ದನುಜೋತ್ತಮ ಬಲ್ಲ ವಾಲ್ಖ್ಯ ಬಲ್ಲ ಅನುಸಾಲ್ವಪತಿ ಬಲ್ಲ ಅಜಮಿಳನು ಬಲ್ಲ ಜನಸ್ಥಿತಿಲಯ ಜನಾದರ್Àನ ಅಲ್ಲದಿಲ್ಲವೆಂದು7 ಜಮದಗ್ನಿ ಬಲ್ಲ ಜಾತವೇದಸ ಬಲ್ಲ ಸಾಮಾವರ್ತಿ ಬಲ್ಲ ಶಶಿ ಬಲ್ಲನು ಆ ಮಹಾಕಪಿ ಬಲ್ಲ ಅಕ್ರೂರನು ಬಲ್ಲ ರೋಮ ರೋಮ ಬ್ರಹ್ಮಾಂಡ ರಾಮನಲ್ಲದಿಲ್ಲವೆಂದು 8 ಪುಂಡರೀಕ ಬಲ್ಲ ದಾ................... ವಂದಾರವ ಬಲ್ಲ ಸಿರಿ ಬಲ್ಲಳು .............. ಆಶಾ ಶ್ರೀಶ ವಿಜಯವಿಠ್ಠಲೇಶನಲ್ಲದಿಲ್ಲವೆಂದು
--------------
ವಿಜಯದಾಸ