ಒಟ್ಟು 5363 ಕಡೆಗಳಲ್ಲಿ , 130 ದಾಸರು , 3529 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಕರದೊಳಿನ ಮಣಿಗೆ ಕನ್ನಡಿಯೇತಕೆ ಪ ಸಿರಿ ರಮಣನಲತಿ ಸಂಶಯವೇತಕೆ ಅ.ಪ ಶರಧಿಯ ಜಲವನ್ನು ಪರಿಪರಿ ದೇಶಕೆ ಬಿರುಗಾಳಿಗಳಿಂದ ದೊರಕಿಸುವನು ಯಾರು ಧರೆಯೊಳು ನವನಾಗರಿಕರೆಂದರಿಯುವ ಪರಿ ತರವೆ ಯೋಚಿಸೆಲೊ 1 ಎಲ್ಲಾ ದೇಶಗಳ ವಿಚಾರ ನೋಟಗಳನ್ನು ಇಲ್ಲೇ ತೋರಿಸುವಂಥ ನಲ್ಲರು ಇರುವರು ಎಲ್ಲಿಂದ ಬಂದೆ ಎಲ್ಲಿಗೆ ಹೋಗುವೆ ಎಂದು ಬಲ್ಲರೇ ಇವರು ತಲ್ಲಣಿಸುತಿಹರು 2 ಘಾಸಿಯ ಮಾಡದೆ ಪೋಷಿಸುವನು ಯಾರು ಈಶನ ಕರುಣವು ಲೇಶ ತಪ್ಪಿದರೆ ಆ ಶಿಶುವಿನ ಜೀವದಾಶೆ ಎಂತಿಹುದೊ 3 ಎಲ್ಲಾ ನಾರಿಯರು ಗರ್ಭ ಧರಿಸುವರೆ ಎಲ್ಲಾ ಬೀಜಗಳಿಂದ ತರುಗಳು ಬರುವುದೆ ಬಲ್ಲವರುಂಟೆ ಇದಕೆ ಕಾರಣ ಲಕ್ಷ್ಮೀ ಪರಿ 4 ಭಿನ್ನದೇಶಗಳಲ್ಲಿ ಭಿನ್ನ ರೂಪಗಳುಳ್ಳ ಭಿನ್ನ ಗುಣಗಳುಳ್ಳ ಭಿನ್ನ ಜಂತುಗಳಿಗೆ ಭಿನ್ನ ಕಾಲಗಳಲ್ಲಿ ಅನ್ನವನೀಯಲು ಅನ್ಯರಿಗಳವೆ ಪ್ರಸನ್ನನಿಗಲ್ಲದೆ 5
--------------
ವಿದ್ಯಾಪ್ರಸನ್ನತೀರ್ಥರು
ಕರಪಿಡಿದು ಕಾಯೊ ಶ್ರೀ ಕರುಣಾಳು ಧನ್ವಂತ್ರಿ ವರ ವೆಂಕಟಾದ್ರಿವಾಸ ಪ. ತರಳೆ ಸೇವೆಯ ಕೊಂಡು ಪರಿಪರಿಯ ಬಗೆಯಿಂದ ವರ ಕೃಪೆಯ ಮಾಡೊ ಸ್ವಾಮಿ ಪ್ರೇಮಿ ಅ.ಪ. ಆವ ಪರಿಯಿಂದ ಜಗದೊಳು ನೋಡೆ ಕಾವರಿ ನ್ನಾವರುಂಟೆಲೊ ದೇವನೆ ಪಾವಮಾನಿಯ ಪ್ರೀಯ ಪರಿಪರಿಯ ಪಾಪ ಫಲ ದೀವಿಧದ ಬವಣೆಯನ್ನೇ ನೀ ವಿಚಾರಿಸಿ ಕಾಯೊ ನಿನ್ನ ಶರಣ್ಹೊಕ್ಕಮೇ- ಲಾವ ಸಂಶಯ ಕಾವನೇ ಪಾವಕನ ತೆರದಿ ಭಸ್ಮವ ಮಾಡಿ ದುಷ್ಕರ್ಮ ಜೀವಕ್ಹಿತ ಕೊಡು ಪ್ರೀತನೇ | ಇನ್ನೇ 1 ಸುರರ ವ್ಯಾಕುಲ ಬಿಡಿಸಿ ಅಮರ ಪಕ್ಷವ ವಹಿಸಿ ವರ ಸುಧೆಯನವರಿಗುಣಿಸೀ ದುರುಳ ಸಂಘವ ಕೊಲಿಸಿ ಸುರ ರಾಜ್ಯಸ್ಥಿರಪಡಿಸಿ ಪರಿಪರಿಯ ಸೌಖ್ಯ ಸುರಿಸೀ ಮೆರೆದೆಯೋ ಗುಣಸಿಂಧು ನಿನ್ನ ಸೇವಕಳೆಂದು ಪರಿಕರಿಸಿ ನೀನೀಕ್ಷಿಸೀ ಪರಿ ಕಾಣೆ ಹರಿಸು ಭಯ ಶ್ರೀ ನರಹರೇ | ಶೌರೇ 2 ಬರಿದು ಮಾಡದೆ ಎನ್ನ ಬಿನ್ನಪವ ಪೊರೆಯ ಬೇ- ಕರವಿಂದ ದಳ ನೇತ್ರನೇ ಗುರು ಹಿರಿಯರುಕ್ತಿಯಲ್ಲದೆ ಎನ್ನದೆಂಬುವೋ ಗರುವ ನುಡಿಯಲ್ಲ ನೀನೇ ಚರಣ ಸೇವಕರ ಪೊರೆವಂಥ ವಿಶ್ವಾತ್ಮಕನೆ ಪರಿಹರಿಸು ಕ್ಲೇಶಗಳನೇ ಕರುಣಿ ಶ್ರೀ ಗೋಪಾಲಕೃಷ್ಣವಿಠ್ಠಲ ಶೇಷ- ಗಿರಿನಿಲಯ ಭಕ್ತ ಪ್ರೀಯಾ | ಜೀಯಾ 3
--------------
ಅಂಬಾಬಾಯಿ
ಕರವ ಮುಗಿದ ಮುಖ್ಯಪ್ರಾಣದುರುಳರ ಸದೆದು ಶರಣರ ಪೊರೆಯೆಂದು ಪ. ಜೀವೇಶರೈಕ್ಯವು ಜಗತು ಮಿಥ್ಯವೆಂದುಈ ವಿಧ ಪೇಳುವ ಮಾಯಿಗಳಳಿಯೆಂದು 1 ಪಂಚಭೇದ ಸತ್ಯವೆಂದುಮಾರುತಮತ ಪೊಂದಿದವರನು ಪೊರೆಯೆಂದು 2 ಇಲ್ಲಿ ಮಾತ್ರವು ಭೇದ ಅಲ್ಲಿ ಒಂದೆ ಎಂಬೊಕ್ಷುಲ್ಲಕರ ಹಿಡಿದ್ಹಲ್ಲು ಮುರಿಯೆಂದು3 ಕರ್ಮ ಶ್ರೀಹರಿಗೆ ಅರ್ಪಿತವೆಂದು 4 ಹರಿ ಮಾಡೊ ವ್ಯಾಪಾರ ಬಲ್ಲಕಾರಣದಿಂದಸಿರಿ ಗೋಪಾಲವಿಠಲಗೆರಗಿ ನಿಂದು 5
--------------
ಗೋಪಾಲದಾಸರು
ಕರವೇ ವಂದಿಸಿ-ನಮಸ್ಕರಿಸಿ ಮಾತನುಸುರುವೆ ಪ ಪರಮಾದರದಲಿ ಕರುಣ ಎನ್ನ ಮೇಲೆ ಹರಹಿ ದುರುಮತಿಯ ಪರಿಹರಿಸುವುದು ಅ.ಪ. ವಾತತನಯ ವಾರಿಜಾತ ಬಾಂಧವ ಸಂ ಭೂತ ಸಹಾಯ ರಘುನಾಥನ್ನ ಪ್ರಿಯದೂತ ಶಾತಕುಂಭ ಮಕುಟ ಶೀತಕರ ಕುಂಡಲ- ತೀತ ಸುಂದರ ಕಾಯ-ಜಾತ ಶರವರ್ಜಿತ ದಾತನಿಂದಲಿ ಬಹಳಾತುರದಲಿ ಗು- ರುತು ಪಡೆದು ನಿರ್ಭೀತನಾಗಿ ಪೋಗಿ ಮಾತೆಗೆರಗಿ ಖಳವ್ರಾತವ ಘಾತಿಸಿ ಪ್ರೀತಿಯಿಂದಲಿ ನಿಜರಾತಿಯ ತಣಿಸಿದ 1 ಉದ್ದಂಡ ವಿಷವನುಂಡು ಕುಂಡಲಿಯಿಂದ ಕೈಗೊಂಡು ಮನ್ನಣೆಯ ಚಂಡಗದೆಯ ದಿಟ್ಟ ಗಂಡುಗಲಿ ಪ್ರಚಂಡ ಹಿಂಡು ಖಳರ ಶಿರ ಚೆಂಡಾಡಿ ಗುರು ಕೋ ದಂಡ ರುದ್ರನ ಮುಂಕೊಂಡು ಭಜಿಸಿ ರಣ ಮಂಡಲದೊಳು ಜಗಭಂಡನ ಕರುಳನು ದಂಡೆಯ ಮುಡಿಸಿದ ಖಂಡ ಪ್ರತಾಪ 2 ದ್ವಿಜನ ಉದರದಲ್ಲಿ ಸೃಜಿಸಿ ಮೆರೆದೆಯೊ ತ್ರಿಜಗದೊಳಗೆ ಶುದ್ಧ ಸುಜನಾಂಬುಧಿಗೆ ಚಂದ್ರ ಕುಜನ ಮತ ಭುಜಂಗ ದ್ವಿಜರಾಜನೆನಿಸಿದೆ ಅಜನ ಪಿತನ ಪಾದಾಂಬುಜವ ಬಿಡದೆ ನಿತ್ಯ- ಭಜಿಸುವೆ ಯತಿ ದಿಗ್ವಿಜಯ ಮೂರುತಿ ಸುರ- ಪಂಕಜ ಭವ ಪದವಿಯ ನಿಜವಾಗಿ ಕೈಗೊಂಡು ಋಜುಗಣದಧಿಪ ತಿವಿಜಯವಿಠ್ಠಲನಂಘ್ರಿರಜವನು ಧರಿಸಿದ 3
--------------
ವಿಜಯದಾಸ
ಕರಿ ಕಮಲೇಶ ಪ ಗರುಡಾರೂಢನು ಗಜವರದ ವೈಕುಂಠ ಕೊಡುವ ಪಾಲಿಸಿ ಪಾಂಡವರ ಮನೆ ಭಂಟ1 ಪಕ್ಷಿವಾಹನ ರಾಕ್ಷಸಾರಿ ರಾವಣನ ಶಿಕ್ಷಿಸಿ ವಿಭೀಷಣನ ರಕ್ಷಿಸಿದ ರಾಮ 2 ವಿನತೆಸುತನ ಏರಿ ಘನತರುತ್ಸವದಿ ಸವರಿದಿ ಸುರವಂದ್ಯ ಸುಜನಕ್ಕಾನಂದ 3 ಹಕ್ಕಿಯ ಪಕ್ಕದಲ್ಲ್ಯರ್ಕಕೋಟಿತೇಜ ಜಾ- ನಕ್ಕಿ ಸಹಿತಯೋಧ್ಯನಾಳುವ ರಾಮ 4 ನಗಧರ ಖಗನ್ಹೆಗಲೇರಿ ಉಲ್ಲಾಸ ನಗುವ ಭೀಮೇಶ ಕೃಷ್ಣÀ ಬರುವ ಜಗದೀಶ5
--------------
ಹರಪನಹಳ್ಳಿಭೀಮವ್ವ
ಕರಿಗಿರಿ ದುರ್ಗ ನಿವಾಸಾ | ದಯಾಪರಿಪೂರ್ಣ ಪೊರೆಯನ್ನ ಅನಿಶ ಪ ಶಿರಿ ಅಜಭವ ವಿಪಗೇಶಾ | ಹೃತ್‍ಸರಸಿಜ ವಾಸ ಲಕ್ಷ್ಮೀಶಾ ಅ.ಪ. ಗಜ ಬಿಸಜ ಕಿಂಜಲ್ಕದ ಯಸಳು ರಜವ ಶಿರಸಿಯೊಳಗೆ ನೀನಿರಿಸೋ 1 ಮೇಶ ಬ್ರಹ್ಮೇಶ ನಾಶವ ಗೈವೆ ಸಶೇಷಶೇಷಶಯ್ಯ ಜೀವಾದ್ಯರ ಪೋಷಾಈ ಸಮಸ್ತ ಜಗ ನಿನ್ನುದರದಿ ವಾಸಾಕೇಶಾಸುರಪಾದೀಶ ಪರೇಶನೆ ವ್ಯಾಸಾಈಶಿತವ್ಯ ತವ ದಾಸರಿಗೆಲ್ಲ ಉಪದೇಶಿಸು ಶಾಸ್ತ್ರ ವಿಶೇಷ ರಹಸ್ಯ ಮಹಿದಾಸ ಕುಶೇಶಯ ವಿಷಯ ವಿಲಾಸದಿಪೋಷಿಸು ಮನ ಮಧ್ವೇಶ ಮಹಾಪ್ರಭೋ 2 ಕರಿವರ ವರ ಶರಣಾಗತ ಪಾಲಾತರಳೆಗಿತ್ತೆ ನವ ನವ ಸೀರೆಯ ಜಾಲಾವರಸ್ತಂಭೋದಿತ ಹರಿಭಕ್ತಿ ಸುಪಾಲಾಗುರು ಗೋವಿಂದ ವಿಠ್ಠಲಾ ಕಾಲಾಸುರಪಾದಿಯ ತನು ವರ ರಥ ರೂಢ ಪು-ರಾರಿ ಭಯಹರ ಮುರಾರಿ ಮಹ ಭವತರಿ ಎನಿಸಿಹ ಸುಖ ತೀರಥ ಸನ್ಮತಧರಿಸಿಹೆ ಕಣ್ಣೆದುರಿಲಿ ನೀ ಕುಣಿಯೋ 3
--------------
ಗುರುಗೋವಿಂದವಿಠಲರು
ಕರಿಮುಖದ ಗಣಪತಿಯ ಚರಣಕ್ಕೆಯೆರಗಿ ಶಾರದೆಗೆ ಸೆರಗೊಡ್ಡಿ ವರವನು ವರವ ಬೇಡಿಕೊಂಡೆ ಸ್ಥಿರವಾದ ಭಕುತಿ ಕೊಡುಯೆಂದು 1 ವಾಯು ಬ್ರಹ್ಮ ಭಾರತಿಗೆ ಬಾಳ ಬೇಡಿಕೊಂಡ್ವೇ- ದವ್ಯಾಸರಿಗೆ ನಮೋಯೆಂಬೆ ನ- ಮೋಯೆಂದು ನಾರದರ ಪಾದಪದ್ಮಗಳಿಗೆರಗುವೆ 2 ಅತ್ರಿ ಅಂಗೀರಸ ವಸಿಷ್ಠಗೌತಮ ವಿಶ್ವಾ- ಮಿತ್ರ ಮಾರ್ಕಾಂಡೇಯ ಚ್ಯವನರು ಚ್ಯವನ ಭಾರದ್ವಾಜ ಬಕದಾಲ್ಭ್ಯರಿಗೆ ನಮಿಸುವೆ 3 ಪಂಡಿತ್ವಾಲ್ಮೀಕಿ ಕೌಂಡಿಣ್ಯ ಕೌಂಡಿಣ್ಯ ಅಗಸ್ತ್ಯಮುನಿ ಮರೀಚರಿಗೆ ನಾನು ನಮೋಯೆಂಬೆ4 ಶೇಷಗಿರಿವಾಸನ ಆಕಾಶನಳಿಯನೆ ವೆಂಕ- ಟೇಶ ನೀ ನಮ್ಮನೆ ದೈವ ಮನೆದೈ- ವ ಸಲಹೆನ್ನ ಪದ್ಮಾವತೀಶ ಪರಮಾತ್ಮ 5 ಮಂಗಳಾಂಗನೆ ನೀನು ಮಂಗಳಮಹಿಮನೆ ಮಂಗಳದೇವಿ ರಮಣನೆ ನೀನೆಮಗೆ ಜಯ ಮಂಗಳವ ಕೊಟ್ಟು ಸಲಹೆನ್ನ 6 ವಾಸುದೇವನೆ ನೀನು ವಾಸುಕಿಶಯನನೆ ವಾಸವಿಯ ರಥವ ನಡೆಸಿದೆ ನಡೆಸಿದಂಥ ಶ್ರೀನಿ- ವಾಸ ನೀನೆಮಗೆ ದಯಮಾಡು 7 ಎನ್ನಲ್ಲೆ ನೀನಿದ್ದು ನಿನ್ನಗುಣ ಬಹುರೂಪ- ವನ್ನು ತಿಳಿಸದಲೆ ಇರುವೋರೆ ಇರುವೋರೆ ನೀನು ಪ್ರ- ಸನ್ನನಾಗೆನಗೆ ದಯಮಾಡು 8 ಕಾಲ ಕಾಲಕೆ ನಿನ್ನ ನಾಮವನು ನಾಲಿಗೆ ಮ್ಯಾಲಿಟ್ಟು ನಿನ್ನ ನೆನೆವಂತೆ ನೆನೆವಂತೆ ಅನಿರುದ್ಧ 9 ಕಾಮಕ್ರೋಧವು ಮದ ಮಾತ್ಸರ್ಯ ಲೋಭಗಳು ಮೋಹ ಮಡುವಿನಲಿ ಮುಣುಗಿದೆ ಮುಣುಗಿದೆನೊ ಎನ್ನ ಕೈ ನೀನೆ ಪಿಡಿದೆತ್ತಿ ಕರೆದೊಯ್ಯೊ 10 ಐದು ಮಂದ್ಯೆನ್ನಲ್ಲಿ ಐದಾರೆ ಮಾರಾಯ ಬೈದರು ಬಿಡರೋ ಎನ್ನೀಗ ಎನ್ನೀಗ ಕಟ್ಟಿ ಕೊಂಡೊಯ್ದು ಹಾಕುವರೊ ಯಮನಲ್ಲಿ 11 ಆರು ಮಂದ್ಯರಿಗಳು ಕ್ರೂರ ಶತ್ರುಗಳುಂಟು ಘೋರಬಡಿಸುವರೊ ಅನುಗಾಲ ಅನುಗಾಲ ದುರ್ವಿಷಯ ತಾವೆನಗೆ ಕಲಿಸಿ ದಣಿಸೋರು 12 ಹತ್ತು ಮಂದಿ ಯೆನ್ನ ಸುತ್ತ ಮುತ್ತಿರುವರೊ ಕೂಪ ಭವದೊಳು ಭವದೊಳಗೆ ಬಳಲುವೆನು ಚಿತ್ತಕ್ಕೆ ತಂದು ದಯಮಾಡು 13 ಸಂಚಿತಾಗಾಮಿಗಳ ಮುಂಚೆ ದಹಿಸಿ ಈ ಪ್ರ- ಪಂಚವನು ಬಿಡಿಸೊ ಪರಮಾತ್ಮ ಪರಮಾತ್ಮ ನೀಯೆನ್ನ ವಂಚನಿಲ್ಲದಲೆ ಸಲಹೈಯ್ಯ 14 ಜ್ಞಾನ ಭಕ್ತಿ ಗಾನ ವೈರಾಗ್ಯ ಭಾಗ್ಯಗಳು ಜಾನಕಿರಮಣ ಜಗದೀಶ ಜಗದೀಶ ಜನಕನ ಜಾಮಾತ ನೀನೆ ತಿಳಿಸಯ್ಯ 15 ದ್ವಾಸುಪರುಣನಂತೆ ಈ ಶರೀರದೊಳಿದ್ದು ಏಸೇಸು ಜನ್ಮಕ್ಕಗಲದೆ ಅಗಲದಂತಿದ್ದು ಉ- ದಾಸೀನವ ಮಾಡೋದೊಳಿತಲ್ಲ 16 ಇಂದುಕುಲಜಾತ ನಿನ್ನೊ ್ಹಂದಿಕೊಂಡಿದ್ದು ಎಂದೆಂದಿಗು ಬಿಡದೆ ಗೆಳೆತನ ಗೆಳೆತನವಿದ್ದಲ್ಲಿ ಸಂದೇಹವ್ಯಾಕೊ ಸಲಹಲು 17 ಮುಕ್ತಿದಾಯಕ ನಿನ್ನ ಭಕ್ತರೇಸುಮಂದಿ ಹೆತ್ತಾಯಿಸುತರೇನವರೆಲ್ಲ ನಾ ಹುಟ್ಟಿದೆನೆ ಮತ್ತೆ ಮಲತಾಯಿ ಉದರದಿ 18 ಶ್ರೀಶನೆ ಕೇಳ್ ನಿನ್ನ ದಾಸರಂಗಳದಲ್ಲಿ ಬೀಸಿ ಬಿಸಾಕೊ ಎನ್ನನು ಎನ್ನ ಹರಿದಾಸರ ದಾಸತ್ವಯೆನಗೆ ಕೊಡಿಸಯ್ಯ 19 ಅಂಬರೀಷ್ವರದ ನಿನ್ನ ್ಹಂಬಲೆನಗಿರಲಯ್ಯ ಬಿಂಬ ಮೂರುತಿಯೆ ಬಿಡದೆನ್ನ ನಿನ್ನೂರಲ್ಲಿ ಇಂಬುಕೊಟ್ಟೆನ್ನ (ಅ)ಲ್ಲಿರಿಸಯ್ಯ 20 ಕಡಿದು ಹೊಡೆದು ಬಯ್ದು ಬಂದು ಕಾಲಿಂದೊದ್ದ- ರ್ಹಿಡಿಯದೆ ಅವರ ಅಪರಾಧ ಅಪರಾಧವೆಣಿಸದಿರೆ ನಡೆದರೊ ನಿನ್ನ ಪುರಕಾಗ 21 ಪುಟ್ಟ ಪ್ರಹ್ಲಾದ ಧ್ರುವ ಕೊಟ್ಟರೆಷ್ಟು ಭಾಗ್ಯ ಕಷ್ಟಕ್ಕೆ ಬಂದು ಒದಗಿದೆ ಒದಗಿ ಬಂದವರ ಆಪತ್ತು ಬಂಧನ ಬಿಡಿಸಿದೆ 22 ತನ್ನ ಮಗನ ಕರೆಯೆ ಎನ್ನ ಕರೆದನೆಂದು ನಿನ್ನ ದೂತರನು ಕಳಿಸಿದೆ ಕಳಿಸಿದ್ಯಜಮಿಳಗೆ ಮನ್ನಿಸಿ ಕೊಟ್ಟ್ಯೊ ನಿನಲೋಕ 23 ತಿರುಕ ತಂದವಲಕ್ಕಿ ಕರಕÀರನೆ ನೀಮುಕ್ಕಿ ದೊರೆತನವ ಕೊಟ್ಟು ದಾರಿದ್ರ್ಯ ದಾರಿದ್ರ್ಯ ಕಳೆದದ್ದು ಅರಿಕಿಲ್ಲವೇನೊ ಜನಕೆಲ್ಲ 24 ನಿಲ್ಲಬೇಕೆಂದಿಟ್ಟಿಕಲ್ಲು ಕೊಟ್ಟವಗೆ ಕೈ- ವಲ್ಯವನು ಕೊಟ್ಟ್ಯೋ ಕರುಣಾಳು ಕರುಣಾಳು ಬುಕ್ಕಿ ್ಹಟ್ಟು ಮಲ್ಲಿಗೆಯ ಮಾಲೆಗೊಲಿತೀಯೊ 25 ಕರೆದು ಕಂಸಗೆ ಕೊಟ್ಟು ಕೊಲಿಸಬಂದ- ಕ್ರೂರ(ಗೆ) ನದಿಯಲ್ಲೆ ನಿನ್ನ ನಿಜರೂಪ ನಿಜರೂಪ ತೋರಿದ್ದು ಇದುಯೇನು ನಿನ್ನ ಮಹಿಮೆಯು 26 ಗಂಧಕ್ಕೆ ಒಲಿದು ಕುಬ್ಜೆಯ ಡೊಂಕನೆ ತಿದ್ದಿ ಸುಂದರಿಯ ಮಾಡಿ ಸುಗುಣನೆ ಸುಗುಣನೆ ನೀನಾಕೆ- ಯಂಗಸಂಗ್ಯಾಕೆ ಬಯಸಿದಿ 27 ಕಲ್ಲಾದಹಲ್ಯೆಯನು ಕಡು ಚೆಲ್ವೆಯನು ಮಾಡಿ ಎಲ್ಲಿ ಮಲಗಿದ್ದ ಮುಚುಕುಂದ ಮುಚುಕಂದನ ಗುಹೆ- ಕೈವಲ್ಯ ಕೊಡಹೋದ್ಯೊ 28 ಮಗ್ಗವನೆ ಹಾಕಿ ಮಾರುಬಟ್ಟೆ ನೇದಿಲ್ಲ ರೊಕ್ಕವನೆ ಕೊಟ್ಟು ತರಲಿಲ್ಲ ತರಲಿಲ್ಲ ದ್ರೌಪದಿಗೆ
--------------
ಹರಪನಹಳ್ಳಿಭೀಮವ್ವ
ಕರುಣದಿ ಎನ್ನ ಪೊರಿಯೇ ತೊರಮ್ಮ ಶಿರಿಯೇ ಪ ಚರಣಯುಗಕೆ ನಾ ಶರಣು ಮಾಡಿದೆ ದೇವೀ ಅ.ಪ ವಾರಿಜಾಂಬಕೆ ಅಂಭ್ರಣೀ ಶ್ರೀ ಹರಿಯ ರಾಣಿ ಮಾರಾರಿ ಮುಖಸುರ ಸಂತ್ರಾಣಿ ವಾರವಾರಕೆ ನಿನ್ನ ಸಾರಿಭಜಿಪೆ ಎನ್ನ ದೂರ ನೋಡದೆ ಪೊರಿಭಾರ ನಿನ್ನದು ತಾಯಿ 1 ಸೃಷ್ಟಿ ಸ್ಥಿತಿಲಯ ಕಾರಿಣೀ ಸುಗುಣಸನ್ಮಣಿ ಕಷ್ಟ ದಾರಿದ್ರ್ಯ ದುಃಖ ಹಾರಿಣೀ ದುಷ್ಟರ ಸಂಗದಿ ಕೆಟ್ಟಿಹ ಎನ್ನನು ಥಟ್ಟನೆ ಕರುಣಾದೃಷ್ಟಿಲಿ ನೋಡಿ 2 ಜಾತರೂಪಳೆ ಶುಭಗಾತ್ರಿ ತ್ರಿಜಗಕೆ ಧಾತ್ರೀ ಸೀತೆ ಸತ್ರಾಜಿತನ ಪುತ್ರಿ ದಾತ ಗುರುಜಗನ್ನಾಥವಿಠಲನ ನೀತ ಸತಿಯೆ ಎನ್ನಮಾತೆ ವಿಖ್ಯಾತೇ 3
--------------
ಗುರುಜಗನ್ನಾಥದಾಸರು
ಕರುಣದಿ ಕಾಯಬೇಕಿನ್ನು ಪ್ರಾಣೇಶ ಅರಿಯೆನೊ ಅನ್ಯರ ಜಗದ್ವಾಸ ಪ. ಪರಿಪರಿ ಬವಣೆಯ ಪರಿಹಾರಗೈಸುತ ತ್ವರಿತದಿ ಸಲಹೊ ಭಾರತಿಗೀಶ ಅ.ಪ. ಅನ್ನವಸನಗಳಿಗೆ ಅಲ್ಪರ ತೆರದೊಳು ಬನ್ನಬಡುತಲಿರಲು ನಿನ್ನ ಪಾದವ ನಂಬಿ ನೀ ಗತಿ ಎನುತಿರೆ ಮನ್ನಿಸಿದ ಮಹಿಮ ನಿಸ್ಸೀಮ 1 ಮನದಿ ಬಹುನೊಂದು ನಿನ್ನ ಘನತೇನೆಂದು ಅನುದಿನ ಕಾಯೊ ಎಂದು ಎನುತಿರೆ ಸ್ವಪ್ನದಿ ಹನುಮ ನಿನ್ನಭಯ ಹಸ್ತ ವನೆ ಶಿರದಿ ಇಟ್ಟೆ ಶ್ರೇಷ್ಠನೆ 2 ಉಭಯ ಹಸ್ತವು ಎನ್ನ ಶಿರದ ಮ್ಯಾಲಿಡುತಲಿ ಅಭಯ ಕೊಡುತಲಿರಲು ನಿರ್ಭಯದಿಂದ ನಾ ನಿನ್ನ ಭಜಿಪೆನಯ್ಯ ಶುಭಗುಣನಿಲಯ ಜೀಯಾ 3 ಹನುಮ ಭೀಮಾನಂದ ಮುನಿಯಾಗಿ ಜಗದಲಿ ಹನನಗೈಯುತ ದನುಜರ ವನಜಾಕ್ಷ ಹರಿಯನು ಘನವಾಗಿ ಸೇವಿಸಿ ಅನುದಿನದಲಿ ಕಾಯ್ವೆ ಸುಜನರ4 ಶ್ವಾಸಜಪವ ಮಾಡಿ ರಾಶಿ ಜೀವರ ಕಾಯ್ವೆ ಶ್ವಾಸ ನಿಯಾಮಕನೆ ಶ್ರೀಶ ಶ್ರೀ ಗೋಪಾಲಕೃಷ್ಣವಿಠ್ಠಲನಿಗೆ ಕೂಸು ಎಂದೆನಿಸಿರುವೆ ನೀ ಕಾವೆ 5
--------------
ಅಂಬಾಬಾಯಿ
ಕರುಣದಿ ಕಾಯೊ ಕರುಣದಿ ಕಾಯೊ ಕಮಲನಯನ ಎನ್ನ ಪ ಪರಮಪುರುಷ ಹರೆ ಸರಸಿಜನಾಭನೆ ಅ.ಪ ನೀನೆ ತಂದೆಯು ಎಂದು ಜ್ಞಾನದಿಂದಲಿ ಬಂದು ಧ್ಯಾನಿಸುವೆನು ಈಗ 1 ತಾಯಿ ನೀನೇಯೆಂದು ಬಾಯಿಗೆ ಬಂದಂತೆ ಜೀಯ ನಿನ್ನನು ನೆನೆವೆ 2 ಜಗದೊಳಗೆಲ್ಲ ನೀನೆ ಸುಗುಣ ಶೀಲನು ಎಂದು ಮುಗಿಲು ಮುಟ್ಟುತಲಿದೆ3 ಸಂಗತಶ್ರಮವನು ಭಂಗವಗೈದ ಭು- ಜಂಗ ಗಿರಿಯ ವಾಸ 4 ಲೀಲೆಯಿಂದಲಿ ವ್ಯಾಘ್ರಶೈಲದಲಿರುವ ಶ್ರೀ ಲೋಲ ವರದವಿಠಲ 5
--------------
ವೆಂಕಟವರದಾರ್ಯರು
ಕರುಣದಿಂದ ಪೊರೆವುದೆನ್ನಪರಮಪುರುಷ ಸೂರ್ಯದೇವ ಪಗಾಲಿಯೊಂದೆ ಇರುವ ರಥವುಕಾಲುಕುಂಟನಾದ ಸಾರಥಿಏಳುಕುದುರೆ ಇರಲು ನಡೆವಕಾಲಚಕ್ರ ನಿಯಂತಾರ 1ಲೋಕಕೆಲ್ಲ ಕಣ್ಣೆನಿಸುತಭೀಕರಾಂಧಕಾರವನುನೂಕಿ ಜಗಕೆಬೆಳಕನೀವಸಾಕಾರ ಪರಬ್ರಹ್ಮ 2ಸರ್ವಸ್ಟೃಕರ್ತನಾಗಿಸರ್ವಸ್ಥಿತಿಗೆ ಕಾರಣನಾಗಿಉರ್ಪಿಯೊಳಗೆ ಬೆಳಗುತಿರುವಸರ್ವದೇವ ಚಿತ್ಸ್ವರೂಪ 3
--------------
ಹೊಸಕೆರೆ ಚಿದಂಬರಯ್ಯನವರು
ಕರುಣದೊಳೆನ್ನನು ನೀ ಪ ಪಡೆದ|ಜಗದೀಶ್ವರಿಯೆ ಅ ಪ ಧರಣಿಯ ಭಾರವನು|| ಶ್ರೀ| ಸರ್ವೇಶ್ವರಿಯೆ 1 ನಂಬಿಹೆ ಶಂಕರಿಯೆ || ಇಂಬುಗೊಡುತ ನೀ| ಬೆಂಬಿಡದೆನ್ನನು 2 ಪಂಕಜಮುಖಿ ಶ್ರೀ| ಶಂಕರಿ ಶುಭಕರಿ| ಕಿಂಕರಪಾಲಿನಿಯೆ || ಬಿಂಕದ ದಾನವ| ಸಂಕುಲವಳಿಸಿದ| ಶಂಖಚಕ್ರಾಂಕಿತೆ | ಶ್ರೀ ದುರ್ಗಾಂಬಿಕೆ 3
--------------
ವೆಂಕಟ್‍ರಾವ್
ಕರುಣವ ಮಾಡೊ ಶರಣರ ಪ್ರೇಮಿಕರುಣವ ಮಾಡೊ ಅರುಣನಿಭನೆ ಗುರು | ಕರುಣವ ಮಾಡೊ ಪ ಸುರ ತರುವಿನ ಅನುಸರಿಸಿದ ಮನುಜಗೆ ಮೃಷ್ಟಾನ್ನದ ಬರವೆಸುರನದಿ ಅನುಸರಿಸಿದ ಮನುಜಗೆ ಘನ ತೃಷಿಯ ಬಾಧೆ 1 ಕಾಮಧೇನು ತನ್ನ ಧಾಮದೊಳಗೆಯಿರೆ ಸೀಮೆ ಆಳುವರಾಸೆರಾಮನ ಪದಯುಗ ತಾಮರಸವನಂಬೆ ಪಾಮರರಂಜಿಕೆಯೆ 2 ವ್ರಜತಾಧಿಪ ವೇಣುಗೋಪಾಲ ವಿಠಲನ್ನ ನಿಜವಾಗಿ ಸ್ಮರಿಸುವರಕುಜನ ದಲ್ಲಣ ಗುರು ವಿಜಯದಾಸರೆ ಸ್ಮರಿಸುವರೆಯಿವರ3
--------------
ವೇಣುಗೋಪಾಲದಾಸರು
ಕರುಣಾ ತೋರದದೇನೊ ನರಹರಿಯೆ ನಿನ್ನ ಕರುಣೆ ತೋರದೆ ಇರುವ ಪರಿಯೆನ್ಹರಿಯೇ ನಿನ್ನಯ ಕಮಲ ಸ್ಮರಣೆಯ ಇಹಪರಕೆ ಗತಿಯಂ ದಿರುವ ಮನಜರಿಗ್ಹರುಷದಿಂದಲಿ ಪ ಸುಸಾಮಗಾನಪ್ರಿಯ ನರಸಿಂಗ ದೈತ್ಯಾರಿ ಭಕ್ತಾಧೀನ ಗರುಡತುಂಗ ಕರುಣಾಂತರಂಗ ಶೌರಿ ಪುರಾಣಪುರುಷ ದಾನವಾಂತಕ ಶ್ರೀನಿವಾಸನೆ ಶರಪಾಣೆ ವಿಷ್ಟಕ್ಸೇನವರ ಗೀರ್ವಾಣವಂದಿತ ಜಾನಕೀಧರ ನೀನೇ ಸಲಹೆನೇ 1 ಸಂಯಮಿ ವೃಂದನುತ ಮುಚ- ಪಾಲನ ಕೃಪಾಸಿಂಧು ಶ್ರೀ ಗೋವಿಂದ ಇಂದಿರಾನಂದ ನಂದ ಗೋಪಿಯಾನಂದ ನಾಚ್ಯುತ ಮಂದರಧರ ಮಾಪತೆ ಕಂಬುಕಂಧರ ಇಂದು ಮುಖ ಶ್ರೀ ಸುಂದರಾಂಗನೆ ರೂಪದಿ ಬಂದು ಸ್ತಂಭದಿ ರಕ್ಷಿಸೆಂದೆನಲು ಹರಿ 2 ತ್ರಿಜಗದ್ಭರಿತ ಕೌಸ್ತುಭಹಾರ ನರಮೃಗಾಕಾರ ಮಂಗಳಕರ ಮಹಿಮಾ ಶರಣು ಭಾಸುರ ಕಿರೀಟನೆ ನಿರತದಲಿ `ಹೆನ್ನೆಪುರ ನಿಲಯ' ಸಿರಿಯರಸ ನಿನ್ನಯ ಮೊರೆಯ ಹೊಕ್ಕರೆ ತ್ವರದಲಿ ನೀ 3
--------------
ಹೆನ್ನೆರಂಗದಾಸರು
ಕರುಣಾಕರ ಪರಮೇಶ್ವರ ಗುರುತಮ ಕಲ್ಯಾಣಧಾಮ ಪ. ಸುರುಚಿರ ಪೀತಾಂಬರಧರ ನರಕೇಸರಿ ಕರಿವರವರದ ನಮೋ ನಮಃ ಅ.ಪ. ಮಂದರಧರ ಮಧುಸೂದನ ವೃಂದಾವನಸಂಚರಣ ಚಂದ್ರಕೋಟಿಸದೃಶಾನನ ವಂದನೀಯ ನಂದಕುಮಾರವ್ರಜೇಶ್ವರ 1 ಭುಜಗಶಯನ ಭೂತಭಾವನ ಭಜಕಜನೋದ್ಧರಣನಿಪುಣ ಕುಜನಜನಾರಣ್ಯದಹನ ವಾಹನ ಮೋಹನ2 ಮಾತರಿಶ್ವಸಖ ಲೋಕೈಕ ನಾಥ ಲಕ್ಷ್ಮೀನಾರಾಯಣ ವೀತಭಯ ವಿಧಾತ ರುಕ್ಮಿಣೀ- ಪ್ರೀತ ತ್ರಿಗುಣಾತೀತನೆ ಫಲ್ಗುಣಸೂತನೆ 3
--------------
ಪಾವಂಜೆ ಲಕ್ಷ್ಮೀನಾರ್ಣಪ್ಪಯ್ಯ