ಒಟ್ಟು 4835 ಕಡೆಗಳಲ್ಲಿ , 124 ದಾಸರು , 3413 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಕರುಣಿಸಯ್ಯಾ ಕಂಜಜನಯ್ಯಾ | ಕರ್ಣರಹಿತ ಶಯ್ಯಾ ಕನಕಾದ್ರಿರಾಯಾ ಪ ಕರಿವರದನೆ ನಿನ್ನ ಚರಣ ನಂಬಿದೆ ಎನ್ನಪರಿಪಾಲಿಸುವದು ಪರಮ ಕೃಪಾಳೊ ಅ.ಪ. ಕೋಟಲೆ ಸಂಸಾರವೆಂಬೊ | ನೀಟು ಶರಧಿಯನ್ನುದಾಟಲಾರೆನೊ ನಾನೂ | ಇದೇನೊ ||ನಾಟಕಾಧಾರ ನಿನ್ನ | ನಂಬಿದಾ ಮೇಲೆ ಎನ್ನಬೂಟಕನೆನಸುವರೇ | ಮುರಾರೇ ||ಹಾಟಕಾಂಬರ ಧರ ಹರಿಯೇ ಕೇಳ್ವುದಿನ್ನು | ಕೋಟಿ ವ್ಯಾಳೆಗೆ ಭಕ್ತ ಕೋಟಿಯೊಳಗಿಟ್ಟು ಎನ್ನ | ನೀಟು ಮಾರ್ಗವ ತೋರಿ ಪಾಟುಪಡಿಪ ಯಮಕಾಟ ಕಳೆದು ದಿವ್ಯ ನೋಟದಿ ನೋಡು 1 ಕಂಸಾರಿ ಮುರಾರಿ2 ಇಂದಿರೆ ಜನನಿ ಗೋ-ವಿಂದ ಇನ್ನೊಬ್ಬರಿಲ್ಲ | ನೀ ಬಲ್ಲೆಲ್ಲಾ ||ಸುಂದರ ವಿಗ್ರಹನೆ | ಸುಗುಣ ಸಾಕಾರ ಶುಭಸಾಂದ್ರಾ ಭಕುತ ವತ್ಸಲ | ಗೋಪಾಲಾ ||ಎಂದೆಂದಿಗೆ ಎನ್ನಿಂದ ಅಗಲದೆ ಮುಕುಂದ ಮುನಿ ವೃಂದವಂದಿತ ಚರಣನೇ | ಸಿಂಧುಶಯನ ಶಿರಿ ಮೋಹನ ವಿಠಲ ಬಾ ಲೇಂದು ವದನ ಸುಗುಣ ಸಾಂದ್ರಾ ಉಪೇಂದ್ರಾ 3
--------------
ಮೋಹನದಾಸರು
ಕರುಣಿಸಲಾರೆಯಾ ಇನ್ನಷ್ಟು ನೀ ಸಿರಿಪತಿಯಾ ಪ ಕರುಣಿಸಲಾರೆಯಾ ಕರುಣಾಕರನೆಂಬೊಬಿರುದನುಳಿಸಿಕೊಳ್ಳಲಾರೆಯಾ ನೀನರಿಯಾ ಅ.ಪ. ಬುವಿಯೊಳು ನಿನ್ನ ದಯವಿರದಿರೆ ಕಣಲವಸಹ ಸರಿಯದಯ್ಯಾಭವದೊಳು ದೇವ ನಿನ್ನ ಕೃಪೆಯಾಗಲುಜವದೊಳೀಗಿನ ಸುಖ ಸ್ರವಿಸಿ ಪೋಗುವದಯ್ಯಾ 1 ಈಗೆಲ್ಲ ನಿನ್ನದಯೆದಿಂದೀ ಬಾಳ್ವೆಸಾಗಿದೆ ಬಲ್ಲೆನಯ್ಯಾಹೋಗಿಸಿ ಸಂಸಾರ ಬೇಗುದಿಯನು ನೀನುಬೇಗ ನಿನ್ನ ಧ್ಯಾನಭೋಗವ ನೀಡಯ್ಯಾ 2 ತುಷ್ಟಿಹೊಂದಲು ನೀ ಜೀಯಾ ಕಷ್ಟದ ಪರಿಯಾನಷ್ಟಮಾಡಲು ಅರಿಯಾಸೃಷ್ಟಿಯ ಜೀವಿಗದೃಷ್ಟ ಎಷ್ಟೆಷ್ಟೆಂಬಸ್ಪಷ್ಟ ಸಂಕಲ್ಪವ ಬದಲಿಸಲರಿಯಾ 3 ಎಲ್ಲವು ನಿನ್ನಧಿವಲ್ಲವೇ ಹರಿಯೇಸಲ್ಲದ ಅನುಮಾನಖುಲ್ಲ ದೈವವ ತಿರುವ ಬಲ್ಲೆಯಲ್ಲವೇ ನೀನುಬಲ್ಲೇಕೆ ಮನವನು ಕಲ್ಲು ಮಾಡಿದೆಯಾ 4 ಶರಣೆಂಬ ಜನ ಕೈಯ್ಯಾ ಎಂದೂ ಬಿಡದೆಪೊರೆಯುವೆ ಎಂಬರಯ್ಯಾಧರೆಯೊಳು ಗದುಗಿನ ವೀರನಾರಾಯಣಮರೆಯದೆ ಸಲಹಯ್ಯಾ ಕೇಳ್ವೆನ್ನ ಮೊರೆಯಾ 5
--------------
ವೀರನಾರಾಯಣ
ಕರುಣಿಸಿಯಭಯವನು ಕೊಟ್ಟು ಕಾಯುವೆನಿರತಂ ಕರಕಮಲವದಯಮಾಡೈ ಅರಿಸಿನ ಹಚ್ಚುವೆನು ಮುದದಿ ಅರಸ ನಿನಗೆ ನಾಂ 1 ಪಂಕಜರಿಪು ನಿಭವಕ್ತ್ರನೆ ಪಂಕಜ ಸೂರ್ಯನೆ ಕುಂಕುಮ ಹಚ್ಚುವೆ ನಿನಗೆ ಕೊಡು ನಡು ಪಣೆಯಂ 2 ಭವ ತ್ಕಂಧರವ ನೀಡು ಪರಿಮಳ ಗಂಧವ ಹಚ್ಚುವೆನು ನಾನು ಕಮಲದಳಾಕ್ಷ 3 ನಿರತವು ಮನ್ಮಾನಸ ಪಂ ಕರುಹದಿ ಸೇವಿಸುವೆ ನಿನ್ನ ಕರುಣಾನಿಧಿಯೆ ಸರವನು ಕಂಧರದಿ ಧರಿಸುವೆ ಜಗನ್ನಾಥಾ 4 ನಾಮಾಡಿದ ತಪ್ಪುಗಳಂ ನೀ ಮನದಲಿ ತರದೆ ಕ್ಷಮಿಸುವದು ಪ್ರಾಣೇಶಾ ಪ್ರೇಮದಿ ವೀಳ್ಯವ ಶ್ರೀಗುರು ರಾಮವಿಠಲ ಕೊಡುವೆ ನಿನಗೆ ರಮ್ಯಚರಿತ್ರ 5
--------------
ಗುರುರಾಮವಿಠಲ
ಕರುಣಿಸು ಕಮಲೇಶ ಸರ್ವೇಶ ಕರುಣಿಸು ಕಮಲೇಶ ಪ. ಶರಣಾಗತ ರಕ್ಷಕ ವೆಂಕಟೇಶ ನಿರುತದಿ ಪ್ರಾರ್ಥಿಪೆ ಲಕ್ಷ್ಮೀಶ ಅ.ಪ. ವೇದ ಶಾಸ್ತ್ರ ಪುರಾಣವನರಿಯೆ ಆದಿ ಮೂರುತಿ ಪ್ರಹ್ಲಾದವರದನೆ ಆದರದಲಿ ನಿನ್ನ ಸ್ತುತಿಸುವೆ ದೇವ ಮೋದದಿಂದಲಿ ಕಾಯೋ ಪಾದಸೇವಕರಾ 1 ಜಪವ ನಾನರಿಯೆ ತಪವ ನಾನರಿಯೆ ಉಪವಾಸ ವ್ರತಮೊದಲರಿಯೆ ದೇವಾ ಅಪರಿಮಿತ ಪಾಪ ಗಳಿಶಿಹೆನೋ ಸುಪವಿತ್ರನನು ಮಾಡೊ ಅಪಾರ ಮಹಿಮಾ 2 ನಿನ್ನ ನಂಬಿಹೆನೊ ಅನ್ಯರನರಿಯೆನೊ ಎನ್ನಪರಾಧವ ಮನ್ನಿಸೊ ದೊರೆಯೆ ಚೆನ್ನಿಗ ಶ್ರೀ ಶ್ರೀನಿವಾಸನ ಸ್ತುತಿಪೆನೊ ಇನ್ನು ಸಂಶಯವ್ಯಾಕೊ ಪನ್ನಗಾದ್ರಿವಾಸ 3
--------------
ಸರಸ್ವತಿ ಬಾಯಿ
ಕರುಣಿಸು ಕರುಣಿಸು ಕರುಣಿ ಶ್ರೀ ರಂಗಯ್ಯಾ ಹರಣ ಪೋದರು ನಿಮ್ಮ ಸ್ಮರಣೆ ಮರೆಯದಂತೆ ಪ ಮರವೆ ಮಾಯದಿ ಸಿಲುಕಿ ಮರುಳ ಮಾನವರಿಗೆ ಶಿರವ ಬಾಗದಂತೆ 1 ಘನದು:ಖಮಯವಾದ ಜನನಮರಣವೆಂಬ ಕುಣಿಯೊಳಗೆ ಸಿಕ್ಕಿ ಜನಿಸಿಬಾರದಂತೆ 2 ದುರಿತ ದಾರಿದ್ರ್ಯದಿಂದ ಪರಿಪಕ್ವನೆನಿಸೆನ್ನ ವರದ ಶ್ರೀರಾಮ ನಿಮ್ಮ ಚರಣ ಸೇವೆಯ ಘನತೆ 3
--------------
ರಾಮದಾಸರು
ಕರುಣಿಸು ಕಾರುಣ್ಯನಿಧಿಯೇ ನಿನ್ನ ಚರಣವ ನಂಬಿದೆ ಶ್ರೀಪತಿಯೇ ಪ. ಕರುಣಿಸು ವರಗುಣಾಭರಣಸೇವಕ ಭಯ ಹರಣನೆ ಸುವಂದ್ಯಚರಣನೆ ರಘುವರ ಅ.ಪ. ಸುರರು ನಿನ್ನ ಚರಣವೇಗತಿಯೆಂದಿಹರು ಸರಸಿಜೊದ್ಬವೆ ನಿನ್ನ ಉರದಲ್ಲಿ ನೆಲೆಸಿರೆ ಪರಮಮಂಗಳಮೂರ್ತಿ ಪೊರೆಯೆನ್ನ ಕೈಪಿಡಿದೆತ್ತಿ 1 ಅಂಗಜಜನಕನೆ ನಿನ್ನ ಪಾದಂಗಳ ನಂಬಿರುವೆನ್ನಾ ಕಂಗಳಿಗಾನಂದ ಪೊಂಗುವಂದದಿ ಶ್ರೀ ರಂಗನೆ ದಯಾಪಾಂಗನೆ ಮೈದೋರು 2 ವರಶೇಷಗಿರಿವಾಸ ನಿನ್ನ ನಿಜ ಶರಣರ ದಾಸ್ಯದೊಳಿರಿಸೆನ್ನ ಕರವೆತ್ತಿ ಮುಗಿವೆನು ಭರಿಸೆನ್ನ ದೊರೆ ನೀನು ದುರಿತ ಕೋಟಿಗಳನ್ನು ಪರಿಹರಿಸೆಂಬೆನು 3
--------------
ನಂಜನಗೂಡು ತಿರುಮಲಾಂಬಾ
ಕರುಣಿಸು ಗುರುವರ ಪರಿಮಳಾರ್ಯ | ಕರುಣಾಬ್ಧಿಯ ಜಿತಕಾಯ ಜಾತ | ವರಶುಭ ಚರಿತನೆ ನೀ | ಕನಕಶಯನ ಜಾತ | ಅನುದಿನ ಪೊರೆವುದು ನೀ 1 ವರಹಸುತೆಯ ತೀರ ನಿಲಯ | ಸುರತರು ನೀ 2 ಮಮತೆಯಲಿ ಗರೆವುದು ನೀ 3
--------------
ಶಾಮಸುಂದರ ವಿಠಲ
ಕರುಣಿಸು ಜಯೇಶವಿಠಲ ವರ ಅಂಕಿತವಿದನು ಇತ್ತೆ ಪ ತರಳ ನಿನ್ನವನೆಂದು ಗುರುವಾತ ಸ್ಥಿತನಾಗಿ ಭರದಿ ಪಾಲಿಸಿದೆ ಇವನ ಹರಿ ನೀನಿದ್ದೆಡೆಗೆ ಕರೆಸಿ ಅ.ಪ ಇರಿಸು ವರ್ಣಾಶ್ರಮ ವರಧರ್ಮ ಕರ್ಮಗಳಲಿ ಮರೆಸಿ ಕಾಮ್ಯಕರ್ಮಗಳೆಲ್ಲವನು ಸ್ಮರಿಸದಂತೆ ಮಾಡು ಪರಸತಿಯರೊಲುಮೆ ಮರೆಯದಂತಿರಲಿ ಪರತತ್ವವನು 1 ಸತಿ ಸುತ ಪರಿವಾರದಿ ಕೃತಕೃತ್ಯನಾಗಿ ಮಾಡಿಸಿ ಪತಿತರ ಸಹವಾಸ ಹಿತವೆಂದರುಪದೆ ಸ- ದ್ಗತಿಯೀವ ಮಾರ್ಗ ತಿಳಿಸಿ 2 ನಿರುತ ತತ್ವ ನಿಶ್ಚಯದಲ್ಲಿ ಜ್ಞಾನ ಗುರುಹಿರಿಯರಲ್ಲಿ ಭಕ್ತಿ ದುರ್ವಿಷಯದಲಿ ವಿರಕ್ತಿನಿತ್ತು ವರ ವಿಜಯ ರಾಮಚಂದ್ರವಿಠಲ ಸುರರೊಡೆಯ ಬರೆದು ನಾಮಾಮೃತವ ನುಡಿಸಿ 3 (ಜಯೇಶವಿಠಲರಿಗೆ ಅಂಕಿತ ನೀಡಿದ ಸಂದರ್ಭ) ದುರಿತ ವಿ ದೂರ ಕರುಣಾಕರ ಸುಂದರ ಗಂಭೀರ 1 ದೀನೋದ್ಧಾರ ವಿರ್ಪಿವಿಹಾರ ದಾನವಹರ ಸುರಕಾವ್ಯ ವಿಚಾರ 2 ಸೀತಾನಾಥ ವಾನರಯೂಥ ವಾರಾತ್ಮಜ ನುತ ಶ್ರೀ ಲಕ್ಷ್ಮೀಕಾಂತ 3
--------------
ವಿಜಯ ರಾಮಚಂದ್ರವಿಠಲ
ಕರುಣಿಸು ದೇವದೇವ ಸೆರಗೊಡ್ಡಿ ಬೇಡುವೆನಭವ ಪರಿಹರಿಸು ಎನ್ನ ಕರುಣಾಳು ಲಕ್ಷ್ಮಿಯ ಜೀವ ಪ ಅಂಬುಧಿಶಾಯಿಯೆ ನಿನ್ನ ಭಜಿಪೆ ಪಾವನ್ನ ಅಂಬುಜಸಂಭವಪಿತನೆ ಕಂಬುಕಂಧರಪ್ರಿಯಸಖನೆ ಅಂಬುಧಿಯಸಂಜಾತೆರಮಣ ಬೆಂಬಲಿಸಿ ಕಾಯೊ ಬಡವನ್ನ 1 ಸುಂದರಕಾಯ ಇಂದಿರೆಯ ಪ್ರಾಣಪ್ರಿಯ ಬಂಧನದ ಬಡತನ ಕಳಿಯೊ ವಂದಿಸಿ ಮರೆಹೊಕ್ಕೆ ಜೀಯ 2 ಈಸೀಸಿ ಸಂಸಾರನಿಧಿಯ ಬೇಸತ್ತು ಬಿಡುವೆನೊ ಬಾಯ ಘಾಸಿ ಮಾಡದೆ ಸಲಹಯ್ಯ 3
--------------
ರಾಮದಾಸರು
ಕರುಣಿಸು ಪ್ರಭುತಂದೆ ತರಳಂಗೆ ದಯವ ಪ ಹರಿ ನೀನೆ ಅವತರಿಸೀಪರಿಭವಶರಧಿಯ ಪರಿಹಾರಗೊಳಿಸುವ ಪರಮಪಾವನರೂಪ 1 ಅರಿವಿಟ್ಟು ಭಜಿಸುವೆ ಮರೆಯದೆ ಮಗನ್ವಚನ ಕರುಣದಿ ಆಲಿಸಿ ವರದಹಸ್ತವ ಶಿರಕೆ 2 ಹಿಂಸೆಬಿಡಿಸು ಮಹ ಸಂಸಾರದುರಿಯನ್ನು ಧ್ವಂಸಗೈಯುವ ಶರಣರಾಂಶದ ಪ್ರಸನ್ನತೆ 3 ದುರಿತ ದೂರೀಕರಿಸಿ ಪರಮಾನಂದದಲಿರುವ ಸಿರಿ 4 ಮರೆಯ ನಿನ್ನಡಿಯಿನ್ನು ಸರುವೇಶ ಮೊರೆಕೇಳಿ ಗುರುವಾಗಿ ಶ್ರೀರಾಮ ಸ್ಥಿರಮೋಕ್ಷ ಸಂಪದವ 5
--------------
ರಾಮದಾಸರು
ಕರುಣಿಸು ರಘುನಂದನ ರಾಮಾ ನಿರುತವು ನಿನ್ನನೆ ಸ್ಮರಿಸುವ ಭಾಗ್ಯವ ಪ ಪರಮಮಂಗಳನಾಮಾ ದುರಿತಭಂಜನ ನಾಮ ಗಿರಿಜೆಪಾಡುವ ನಾಮಾ | ಜಾನಕೀರಾಮ ಅ.ಪ ರಾಮನೆನೆ ಪಾಪವು ಲಯವಹುದಂತೆ ರಾಮಾಯೆನೆ ಭಯಗಳು ಪರಿಹರವಂತೆ 1 ರಾಮನೆನೆ ಮಾಯೆಯು ಹರವಂತೆ ರಾಮನ ನುತಿಸೆ ಮನ ಪರವಶವಂತೆ2 ಜಯರಾಮ ಜಯರಾಮ ಎನುತಿರುವಂತೆ] ದಯಮಾಡೊ ಮಾಂಗಿರಿರಂಗ ನೀನಂತೆ 3
--------------
ಅಸೂರಿ ರಾಮಸ್ವಾಮಿಅಯ್ಯಂಗಾರ್
ಕರುಣಿಸು ವರಗೌರಿ ಭರದಿಂದ ವರವನ್ನೂ ಶರಣಾಪ್ತ ಬೇಡುವೆ ನಿನ್ನಾ ಪ. ಪಾರ್ವತೀ ತಾಯೇ ಪಾಮರರಿಗೆ ಪರಮಪಾವನ್ನೆ ಪರಿಪಾಲಿಸುತ್ತ ವರವಿತ್ತು ನೀ ಕಾಪಾಡೆ 1 ಪತಿಪಾದ ಸೇವಾ ಸತತದೊಳಿತ್ತು ಸತಿಗೆ ಮಾಗಲ್ಯ ನಿರತವೀಯೆ ತಾಯೆ ಸಕಲಕೆ ಶ್ರೀ ಗೌರಿ2 ಪಾದ ಸೋಸಿಲಿ ಭಜಿಪೆ ವರವೀಯೆ ತಾಯೆ ಶಂಕರಿ ಕಾಯೆ ದೇಹಿಮೆ 3
--------------
ಸರಸ್ವತಿ ಬಾಯಿ
ಕರುಣಿಸುವುದು ಎನ್ನಾ ಕರಿವರದ ಕೇಶವ ಕರಪಿಡಿದು ಸುಖಪೂರ್ಣಾ ನಿನ್ನಡಿಗಳಂಬುಜ ಸ್ಮರಿಪರಲ್ಲಿಡ ಮುನ್ನಾ ಪರಿಹರಿಸು ಬನ್ನಾ ಪ ಸರಸಿಜಾಪತಿ ಸರಸಿಜೋದ್ಭವ ಹರಸುರಾಧಿಪ ವಂದ್ಯ ನಿನ್ನಯ ಎರವು ಮಾಡದೆ ತ್ವರ್ಯ ಸೌಖ್ಯವುಗರದು ಕರುಣದಿ ಅ.ಪ. ಜನನಿ ಜಠರದಿಂದ ನಿನ್ನಾಜ್ಞದಲಿ ನಾ ಜನಸಿದೆನೊ ಗೋವಿಂದಾ ಬಾಲತ್ವ ಕೆಲದಿನ ಕಳೆದೆನೊ ಮುಕುಂದಾ ಯೌವ್ವನವು ಬರುತಲೆ ವನಿತೆ ಮುಖ ಅರವಿಂದಾ ನೋಡುತಲೆ ಬಲು ಛಂದಾ ಮನವು ನಿಲ್ಲದು ಮಮತೆ ವಿಷಯದಿ ಮುನಿದು ಸಜ್ಜನರ ಸೇವಿಸಿ ಕೊನೆಯಗಾಣದೆ ಮಣಿವೆ ಅಂಘ್ರಿಗೆ ವನದಿಗಳ ವಮ್ಮನೆ (?) ನಡಿಸು ವೆಂಕಟಾ ಘನತೆ ನಿನಗಿದು ತಿಳಿದು ವೇಗದಿ ಅನುದಿನದಲಿ ಸಲಹುತಿಪ್ಪನೆ ಅನಿಮಿಷರ ಆಧಾರ ಮೂರುತಿ 1 ಮೊರೆಯ ಲಾಲಿಸು ಜೀಯಾ ಅರೆ- ಮೊರೆಯ ಮಾಡಲು ಪೊರೆವರ್ಯಾರೆಲೊ ಕಾಯಾ ಅ- ನ್ಯರನು ಕಾಣದೆಯರಗಿದೆನು ಸುರ ಸಹಾಯ ಸುರಧೇನು ಮನೆಯೊಳಗಿರಲು ವಿಠ್ಠಲರೇಯಾ ಮಾಯಾ ಬಲ ತಡದು ನಿಕ್ರವ ತರಲು ಜನರೊಳು (?) ಯರಗಿರಲು ನಿನಗೆಂದಿಗಾದರು ಅರಿದು ಅಗ್ಗಕೆ ಪೊರೆದು ಮಾನವ ಕರಿಯು ಕರೆಯಲು ಬರುವುದುಂಟೇ ಕರುಣಾಸಾಗರನೆಂಬೊ ನಿನ್ನಯ ಬಿರುದು ಉಳ್ಳದಕೊಂಡು ಸಾಧನೆ ಧರೆಯ ದುಷ್ಟರ ಬಾಧೆ ತಪ್ಪಿಸಿ ಹರುಷವನು ಅತಿಗರೆದು ನಿರುತದಿ 2 ಬಿಡೆನೊ ಕಡಲೊಡಗಾಡಿ ಬಿಂಕದಲಿ ಅದ್ರಿಯ ನಿಡಲಿ ಬೆನ್ನಲಿ ನÉೂೀಡಿ ಪಾದಗಳ ಎಳೆಯುತ ನಡೆದು ಕೋಪವ ಮಾಡಿಬಿಡು ದೈನ್ಯದಲಿ ಪೊಡವಿ ದಾನವ ಬೇಡಿ ಬಿಡೆ ನೋಡಡವಿಯೊಳ್ ಕಾಡಿನ ಮಡುವಿನೊಳು ಗಿಡವೇರಿ ಧುಮುಕಲು ಅಂಬರ ಬಿಟ್ಟು ಖಡ್ಗವ ಪಿಡಿದು ವಾಜಿಯನೇರಿದನು ಜರ ಕಡಿಯಪೋಗಲು ಕಂಡು ನಿನ್ನನು ಬಿಡೆನೊ ನಿನಗೆಂದಿಗಾದರು ಪೊಡವಿಪತಿ ಶ್ರೀದವಿಠ್ಠಲ ವಡಿಯ ನೀನೆಂತೆಂದು ನಂಬಿದೆ 3 (ಈ ನುಡಿಯ ಅರ್ಥ ಸ್ಪಷ್ಟವಾಗುತ್ತಿಲ್ಲ-ಅಶುದ್ಧ ಪ್ರತಿಯ ಕಾರಣದಿಂದ.)
--------------
ಶ್ರೀದವಿಠಲರು
ಕರುಣಿಸೆ ಕೋಮಲ ಗಾತ್ರೆ ಕಂಜಜಮಾತೆ ಪ ಸುರರು ನಲಿಯುತ ಶಿರವ ಬಾಗಿ ಕರವ ಮುಗಿಯಲು ಪರಮ ಹರುಷದಿ ವರವ ಕೊಡುತಿಹ ಹರಿಯ ಮಡದಿಯೆ ಅ.ಪ. ಕ್ಷೀರವಾರಿಧಿ ತನಯೆ ನಿನ್ನಯ ದೇಹ ಬೀರುತಿದೆ ವಿದ್ಯುಛ್ಛವಿಯೆ ಶ್ರೀ ಹರಿಜಾಯೆ ವರ ಸುದರ್ಶನ ಶಂಖಹಸ್ತದಿ ಮೆರೆಯುತಿರೆ ಭಕುತರನು ಸಲಹಲು ಕರವೀರಪುರ ನಿಲಯದಿ ನೆಲಸಿ ವರದಭಯ ಹಸ್ತವ ತೋರುತಿರ್ಪೆ 1 ಮನಸಿಜಕೋಟಿ ಸುರೂಪಿಣಿ ಮೃದುಮಧುರ ವಾಣಿ ಧನಕನಕಾದಿಗಳಭಿಮಾನಿ ಕೈವಲ್ಯದಾಯಿನಿ ವನಜಸಂಭವೆ ನಿನ್ನ ಒಂದರೆ- ಕ್ಷಣವು ಬಿಡದಲೆ ತನ್ನ ಉರದೊಳು ದನುಜಮರ್ಧನ ಧರಿಸಿಕೊಂಡು ತನುವು ಮನವನು ನಿನಗೆ ತೆತ್ತಿಹ 2 ರಂಗೇಶವಿಠಲನ ರಾಣಿ ಪಂಕಜಪಾಣಿ ಡಿಂಗರೀಕರ ಪೊರೆವ ಕರುಣಿ ಕಾಳಾಹಿವೇಣಿ ಮಂಗಳಾಂಗಿಯೆ ಖೂಳ ಕುಜನರ ಸಂಗಬಿಡಿಸುತ ತವ ಪದ ಸರೋ ಜಂಗಳಲಿ ನಾ ನಲಿದು ವಿಹರಿಪಭೃಂಗನಾಗುವ ಪರಿಯ ತೋರೆ 3
--------------
ರಂಗೇಶವಿಠಲದಾಸರು
ಕರುಣಿಸೆನಗಿನಿತು ಕರುಣಾರ್ಣವನೆ ನಿನ್ನ ಚರಣಾಬ್ಜದಲಿ ಭಕುತಿ ವಿಷಯದಿ ವಿರಕುತಿ ಪ ಬಿಂಬನೇ ಸರ್ವ ಪ್ರಯೋಜನವ ಮಾಡಿ ಪ್ರತಿ ಬಿಂಬರಿಗೆ ತತ್ಫಲಗಳೀವ ಕಾವ ಬಿಂಬನೆ ಸ್ವತಂತ್ರ ಪ್ರತಿಬಿಂಬಾ ಸ್ವತಂತ್ರತಮ ನೆಂಬ ಸುಜ್ಞಾನ ಪೂರ್ವಕ ನಿನ್ನ ಭಜಿಪ ಸುಖ 1 ಕಾರ್ಯ ಕಾರಣ ಅಂಶಿ ಅಂಶಾವತಾರ ಅಂ ತರ್ಯಾಮಿ ವ್ಯಾಪ್ಯ ವ್ಯಾಪಕ ಪ್ರೇರಕ ಪ್ರೇರ್ಯ ಬಾಧಕ ಬಾಧ್ಯ ಪೋಷ್ಯ ಪೋಷಕ ರೂಪ ಆರ್ಯರಿಂದರಿತು ಅನುದಿನದಿ ಸುಖಿಸುವ ಭಾಗ್ಯ 2 ತಾರತಮ್ಯದ ಜ್ಞಾನ ದುರ್ವಿಷಯಗಳಲಿ ಸ ದ್ವೈರಾಗ್ಯ ಹರಿದ್ವೇಷಿಗಳಲಿ ದ್ವೇಷಾ ಸೂರಿಗಳ ಸಂಗ ಗುಣರೂಪಕ್ರಿಯೆಗಳನು ಸುವಿ ನಿತ್ಯ ಅನುಮೋದ ಬಡುವಂತೆ 3 ಮಿಂದೋದಕಗಳೆಲ್ಲ ಮಜ್ಜನವು ದೇಹಾನು ಬಂಧಿ ಜನರೆಲ್ಲ ನಿನ್ನ ಪರಿವಾರವು ನಿಂದ್ಯ ಕರ್ಮಗಳೆಲ್ಲ ಪಾದುಕಗಳೆಂಬ ಅನು ಸಂಧಾನ ಮನಕೆ ನಿತ್ಯದಲಿ ಬರುವಂತೆ4 ಚೇತನಾಚೇತನಗಳೆರಡು ಪ್ರತಿಮೆಗಳು ಸಂ ಪ್ರೀತಿಯಲಿ ಸುರಕ್ಷಿಸುವುದು ಪೂಜೆ ಈ ತನುವೆ ಸದನವೆಂದರಿತು ನಿತ್ಯದಿ ಜಗ ನ್ನಾಥ ವಿಠ್ಠಲನೆಂಬ ವಿಷಯವೇ ಮುಖವೆಂದು 5
--------------
ಜಗನ್ನಾಥದಾಸರು