ಒಟ್ಟು 4153 ಕಡೆಗಳಲ್ಲಿ , 125 ದಾಸರು , 2858 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಕಾಯವಿದು ನಿತ್ಯವೆಂದು ನೆಚ್ಚಬೇಡ ಮಾಯಾಕಾರ್ಯನಾಗಿ ಮೆರೆವುದಿದು ತಿಳಿದುನೋಡಾಕಾಯವಳಿವ ಮುನ್ನ ಹರಿಯ ಕೃಪೆಯ ಜೋಡ ತೋಡುನಾಯಬಾಯತುತ್ತ ನಂಬಿ ಬೆರೆಯ ಬೇಡ ಪಮಾತಾಪಿತೃರೇತಸ್ಸಿಂದ ಪತನವಾಗಿ ಪಂಚಭೂತಕಾರ್ಯದಿಂದ ಸ್ಥೂಲಾಕಾರವಾಗಿರೇತಸ್ಸು ರಕ್ತಗಳಾರು ಕೋಶವಾಗಿ ಕರ್ಮಜಾತಕಾಯ ಹೀಗೆ ತೋರುತಿಪ್ಪುದಾಗಿ 1ಹುಟ್ಟಿ ಬೆಳೆದು ನಲಿದು ಮುಪ್ಪಿನಿಂದ ಕ್ಷೈಸಿ ಕಡೆಗೆನಷ್ಡವಾಗಿ ಹೋಗಿ ಮಣ್ಣಿನೊಳಗೆ ಬೆರಸಿಇಷ್ಟೂ ಪರಿಯೊಳಾರು ವಿಕಾರವ ತೋರಿಸಿ ವಂದಿಷ್ಟೂ ಫಲವಿಲ್ಲದಂತೆ ುದಕೆ ಭ್ರಮಿಸಿ 2ಕಾಲಕರ್ಮ ಪಂಚಭೂತ ಮಿಳಿತವಾಗಿ ಇದಕೆಮೂಲವಾದ ಕರ್ಮವೆ ಪ್ರಧಾನವಾಗಿಢಾಳಿಸುವಾತ್ಮನ ತೇಜಾಧಾರವಾಗಿ ಕರ್ಮತೇಲಲಾಗಿ ದೀಪದಂತೆ ಪೋಪುದಾಗಿ 3ಬತ್ತಿಯನ್ನು ಎಣ್ಣೆಮುಗಿವ ಸಮಯಕಾಗಿ ಎಣ್ಣೆಯೂಮತ್ತೆ ತಂದು ತುಂಬೆ ದೀಪ ಪೋಗದಾಗಿಇತ್ತೆರದ ಕರ್ಮದಿಂದ ಚಕ್ರವಾಗಿ ಜನ್ಮಮೃತ್ಯುಗಳೀ ದೇಹಕ್ಕವಧಿುಲ್ಲವಾಗಿ 4ತೈಲಮಿಶ್ರವರ್ತಿಯಗ್ನಿ ಸಮ್ಮೇಳದಿಂದಾ ದೀಪಬಾಳಿಬೆಳಗುವುದು ತೈಲದಾಧಾರದಿಂದಾತೈಲಮುಗಿಯೆ ದೀಪ ಕೆಟ್ಟು ಹೋಹ ಛಂದದಂತೆಕೇಳು ದೇಹವೀಪರಿಯೊಳಿಹುದರಿಂದಾ 5ಹುಟ್ಟಿದಲ್ಲಿ ಸೂತಕವು ಹೊಂದಿದಲ್ಲಿ ಸೂತಕವುಮುಟ್ಟಿವಸ್ತುಗಳುಚ್ಚಿಷ್ಟಂಗಳಹವೂನಟ್ಟನಡುವೆ ಬಂದದೆಂದು ಶಿಷ್ಟರಿದ ಮನ್ನಿಸರುನಷ್ಟವಾಗಿ ಕಡೆಗೆ ತಾನು ಹೋಹ ದೇಹವೂ 6ತಾನು ಬಂದ ಬಗೆಯು ತನಗೆ ತಿಳಿಯದಿದ್ದರೂ ನಿನ್ನಸೂನು ಬಂದ ಬಗೆಯ ನೋಡಿ ತಿಳಿದುಕೊಂಡಾರುಹೀನನಾದ ಕಾಯವಭಿಮಾನಿಸದಿರು ಮುಂದೆಶ್ರೀನಾಥನ ಪದವ ಭಜಿಸಿ ಸುಖದಿಂದಿರುತಿರು 7ಮನವೆ ಮಿಥ್ಯದೇಹದಭಿಮಾನವೇತಕೆ ಬಹುಜನುಮ ಜನುಮದಲ್ಲಿ ದುಃಖದಗೆ ನೂಕೆಕೊನೆಗೂ ಹೀಗೆ ಬಂಧವನ್ನು ಕೊಡುವದಕ್ಕೆ ಮಚ್ಚಿಜಿನುಗುವಿರಿಕೆಯೇನು ಇನ್ನೂ ಬಿಡದೆ ಬಯಕೆ 8ಘೋರರೂಪಾಪಾರಸಂಸಾರಾಂಬುಧಿಯನ್ನೂಮೀರಲೇರು ವೆಂಕಟೇಶನಾಮನಾವೆಯನ್ನುಧೀರಗುರು ವಾಸುದೇವರಂಘ್ರಿಯನ್ನು ಬೇಗಸಾರುವ ವಿವೇಕತನವಂದು ಚೆನ್ನೂ 9ಕಂ|| ಜೀವನು ವಿರತಿಯ ಸಾಧಿಪಭಾವಧಿ ಮನದೊಡನೆ ಕಾಯವ ನೆಚ್ಚದಿರೆನ್ನುತಕೈವಲ್ಯದ ಪಥವ ಪೇಳಲುಜೀವನೊಳಾಡಿದುದು ಕಾಯವಚ್ಚರಿಯೆನ್ನಲೂ
--------------
ತಿಮ್ಮಪ್ಪದಾಸರು
ಕಾಯೊ ಕರುಣದಿಂದೆನ್ನನು ತೋಯಜಾಕ್ಷನೆ ನೀನು ಪ ಕಾಯೊ ಕರುಣದಿ ತೋಯಜಾಕ್ಷನೆ ನೀನು ಹೇಯ ಜನಮವೆತ್ತಿ ಮಾಯಕೆ ಸಿಲುಕಿದೆ ಅ.ಪ. ಹಿಂದೆ ತಪ್ಪಿದೆನ್ಯಯ್ಯ ಮುಂದೆ ಬುದ್ಧಿಯು ಬಂತು ಸಿಂಧುಶಯನ ನೀನು ಬಂದು ಮೈದೋರಿ 1 ಸತಿಸುತರೆನಗೆ ಅತಿ ಹಿತರೆಂತೆಂದು ಮತಿಭ್ರಾಂತನಾಗಿದ್ದೆ ಪತಿತ ಪಾವನನೆ 2 ಕೊಟ್ಟು ಆದರಿಸಲು ಇಷ್ಟ ಮಿತ್ರರು ಇದ್ದು ಕೆಟ್ಟುಪೋದಮೇಲೆ ಕೈಬಿಟ್ಟರು ನೀ ಬಿಡಬೇಡ 3 ತಂದೆತಾಯಿಯು ನೀನೆ ಬಂಧು ಬಳಗವು ನೀನೆ ಇಂದಿರೆರಮಣನೆ ಬಂಧವ ಬಿಡಿಸೀಗ 4 ಕರುಣಾಸಾಗರ ನಿನ್ನ ಮರೆಹೊಕ್ಕೆ ನಾನೀಗ ಶರಣರ ಪೊರೆಯುವ ರಂಗೇಶವಿಠಲನೆ 5
--------------
ರಂಗೇಶವಿಠಲದಾಸರು
ಕಾಯೊ ಕರುಣಾನಂದ ಶ್ರೀಗುರು ಕೃಪಾನಿಧೆ ಕಾಯೊ ಕರುಣಿಸಿ ಎನ್ನ ಪೂರ್ಣ ನೀ ಕಾಯೊ ಪರಮದಯಾನಿಧೆ ಧ್ರುವ ತೊಡಿಸಿ ಕರುಣಾನಂದ ಕವಚವ ಇಡಿಸೊ ಭಗುತಿ ವೈರಾಗ್ಯವ ದೃಢಗೊಳಿಸುವ ಙÁ್ಞನಪೂರ್ಣ ನೀ ಕಡಿಸೊ ಕಾಮಕ್ರೋಧವ ನಡೆಸಿ ನಿತ್ಯವಿವೇಕ ಪಥದಲಿ ಕೂಡಿಸೊ ನಿಜಸುಬೋಧವ ಬಿಡಿಸೊ ಭವಭವ ಮೂಲದಿಂದಲಿ ಬಡಿಸೊ ಹರುಷಾನಂದವ 1 ಬಟ್ಟೆ ಕೊಟ್ಟು ಕಾಯೊ ಸತ್ಸಂಗವ ಮುಟ್ಟಿಮುದ್ರಿಸೊದೃಷ್ಟಾಂತವ ಸಟೆಯ ಮಾಡೊ ಅವಿದ್ಯವ ನಿಷ್ಠತನ ನೆಲೆಗೊಳಿಸಿ ಕಾಯೊ ನೀ ಇಟ್ಟು ಶಿರದಲಿ ಅಭಯವ 2 ಭಿನ್ನವಿಲ್ಲದೆ ನೋಡಿ ಎನ್ನನು ಧನ್ಯಗೈಸೊ ನೀ ಪ್ರಾಣವ ಕಣ್ದೆರಿಸಿ ಅಣುರೇಣುದಲಿ ಪೂರ್ಣಖೂನದೋರೊ ಸಾಕ್ಷಾತವ ಎನ್ನೊಳಗೆ ನಿಜಾನಂದ ಸುಖದೋರಿ ಪುಣ್ಯಗೈಸೊ ನೀ ಜೀವನ ಚಿಣ್ಣಕಿಂಕರ ದಾಸ ಮಹಿಪತಿ ರಕ್ಷಿಸೊ ಸಂತತವ 3
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ಕಾಯೊ ಕರುಣಾಭಯ ಕೃದ್ಭಯ ನಾಶನ ಧ್ರುವ ಕಂದ ಪ್ರಲ್ಹಾದಗಾಗಿ ಸಂಧಿಸೊದಗಿನಿಂತು ಬಂದು ರಕ್ಷಿಸಿದೆ ಪ್ರಾಣ ಚಂದವಾಗಿ ನೀ 1 ಕರಿಯ ಮೊರೆಯ ಕೇಳಿ ನೆರಯ ಬಿಡಿಸಿದೆ ಎಂದು ಮೊರೆಯ ಹೊಕ್ಕೆನು ನಿಮಗೆ ಹರಿಹರಿಯೆಂದು 2 ದ್ರೌಪದಿಯ ಅಭಿಮಾನ ಕೃಪೆಯಿಂದ ನೀ ಪೂರ್ಣ ಉಪಾಯದಲಿಗಾಯ್ದ ಅಪಾರ ಮಹಿಮ 3 ಸ್ಮರಿಸಿದಾಕ್ಷಣ ಬಂದು ಕರುಣದಿಂದನ್ಯರಿಗೆ ಪರಿಪರಿಯಿಂದ್ಹೊರೆದೆ ವರಮುನಿಗಳ 4 ಶರಣು ಹೊಕ್ಕೇನು ನಿಮ್ಮ ತರಳ ಮಹಿಪತಿ ಪ್ರಾಣ ಹೊರೆದು ರಕ್ಷಿಸು ಎನ್ನ ಪರಮಪಾವನ 5
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ಕಾಯೊ ಕಾಯೊ ಕಾಯೊ ಕಾಯೊ ಕೃಪಾನಿಧಿ ಕಾಯೊ ಕೃಪಾಳು ಸದ್ಗುರು ದಯ ನೀ ಪಾಲಿಸಿ ಸೋಹ್ಯಸೊನ್ನೆ ಸೂತ್ರಗುಹ್ಯ ಗೂಢದೋರಿ ಸಾಹ್ಯಮಾಡೊ ಸ್ವಾಮಿ ಸಾಕ್ಷಾತ್ಕಾರ ನೀ ದೋರಿಸಿ ನ್ಯಾಯದಲಿ ಮಿಥ್ಯಾಮಾಯ ಮೊನೆಮುರಿಸಿ ತೋಯಜಾಕ್ಷ ನಿಮ್ಮ ಶ್ರಯ ಸುಖ ಬೀರಿ ಭವ ಭಯ ಹರಿಸೊ ಗುರು ಕರುಣಿಸೊ 1 ನಾನಾರು ಎಂದು ಸಾಖೂನ ತಿಳಿಯದೆ ನಾನಾ ಯೋನಿಮುಖ ಜನಿಸಿ ಬಂದೆÀನಯ್ಯ ಜನುಮ ಜ್ಞಾನಗಮ್ಯವಾದ ಸ್ಥಾನದೋರಿ ನಿಜ ಧ್ಯಾನ ಮೌನದನುಭವ ಸುಖ ನೀಡೊ ನಿಮ್ಮ ನ್ಯೂನ ಪೂರ್ಣ ಎನ್ನ ನೀ ನೋಡದೆ ಸ್ವಾಮಿ ಸ್ವಾÀನುಭವದ ಸುಜ್ಞಾನ ದೀಪಲಿಡೊ ನಮ್ಮ ಮನೋನ್ಮನವಾಗಿ ಘನ ಕೈಗೂಡುವಾ ಸನ್ಮತ ನೋಡಿ ಸುವರ್ಮ 2 ನೋಡದೆ ಗುಣದೋಷ ಮಾಡಿ ಉಪದೇಶ ದೃಢಭಾವದ ಸುಪಥ ಒಡನೆ ಗೂಡಿಸೊ ನೋಡಿ ದೃಷ್ಟಿಲೆನ್ನ ಒಡೆಯ ಸದ್ಗುರು ಪೂರ್ಣ ಓಡಿಹೋಗುವಂತೆ ಭಕ್ತಿ ಜ್ಞಾನ ವೈರಾಗ್ಯವಿಡಿಸೊ ನೀಡಿ ಅಭಯಕರುಣಕವಚವ ತೊಡಿಸೊ ಪಿಡಿದು ಎನ್ನ ಕೈಯಾ ಮೂಢ ಮಹಿಪತಿಯ ಬಿಡದೆ ಕಡೆಗಾಣಿಸೊ 3
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ಕಾಯೊ ಕಾಯೋ | ಗುರುವರ್ಯ | ಕಾಯೊ ಕಾಯೋ ಪ ಕಾಯೊ ಕಾಯೊ ಗುರುವರ್ಯ ಪರಮ ಪ್ರಿಯಜೀಯ ನಿನ್ನಯ ಪಾದಕೆರಗುವೆನಯ್ಯಾ ಅ.ಪ. ಒಂದರಿತವನಲ್ಲ | ಕಂದನು ಎಣಿಸದೆಬಂದು ಸಲಹೊ | ತಂದೆ ಮುದ್ದು ಮೋಹನ್ನ 1 ಹಿಂದಿನ ಸುಕೃತದಿ | ಬಂದು ಜನಿಸಿದೆನಂದ ಮುನಿಯ ಮತ | ಸಿಂಧುವಿನಲ್ಲಿ 2 ಇಂದಾದರು ತವ | ದ್ವಂದ್ವಪದವ ಮನಮಂದಿರದಲಿ ತೋರಿ | ದಂದುಗ ಬಿಡಿಸೋ 3 ಎಂದಾಗುದೊ ತಂದೆ | ಇಂದಿರೇಶ ಪದದ್ವಂದ್ವ ಸಂದರ್ಶನ | ಸಂಧಿಸೊ ಬೇಗನೆ 4 ತಂದೆ ನಿನ್ನಲಿ ಗುರುಗೋ | ವಿಂದ ವಿಠಲನಅಂದ ಮೂರುತಿಯನು | ಛಂದದಿ ತೋರೊ5
--------------
ಅಸೂರಿ ರಾಮಸ್ವಾಮಿಅಯ್ಯಂಗಾರ್
ಕಾಯೊ ಬಾರೊ ಹರಿಯೆ ಕರುಣಾ ಪಯೋಂಬುಧಿ ಪ. ಕಾಯೊ ಬಾರೊ ಕರುಣಾಂಬುಧಿ ಕಮಲದ- ಳಾಯತ ನೇತ್ರ ರಸಾಯನ ಸುರಿವುತ ಅ.ಪ. ಸಿಲುಕಿ ಬಾಧೆಗೊಂಡು ಬಹು ಬೆದರುವ ದಾಸನ ಕಾದುಗೊಳ್ಳು ಕಂಬ್ವರಿಗದಾಬ್ಜಧರ ಮಾಧವ ಮಧುಮಥನ ಮನದಿ ವಿನೋದಿಸುವ ಕಥನ ಶ್ರೀ ಪದಾಬ್ಜಾಮೋದಯುಗ ಸಾಸ್ವಾದನಾತ್ಮಕ ವಿನೋದ ನಲಿವುತ 1 ಕತ್ತಲೆ ಮುಸುಕಿರುವ ಸಮಯದಿ ಸುತ್ತ ವ್ಯಾಘ್ರವಿರುವ ವನದಲಿ ಸತ್ವಹೀನವಾದೆತ್ತಿನ ಕೆಡಹುವದುತ್ತಮವೆ ಪುರುಷೋತ್ತಮ ನಿನ್ನಯ ತತ್ವಮಾರ್ಗ ತಿಳಿಸಿ ತ್ರಿಕರಣವೆತ್ತಿ ಬೋಧೆಗೊಳಿಸಿ ಜನೋತ್ತಮನೆನಿಸುತ 2 ಇಂದಿರೇಶ ನಿನ್ನ ಚರಣವನೆಂದಿಗು ನಂಬಿದನ ಬಂಧ ಬಿಡಿಸಿ ಕೃಪೆಯಿಂದ ಪೊರೆವನೆಂಬಂದಕಪಾಯವ ಕರುಣಾಸಿಂಧು ನಿನ್ನ ಕೀರ್ತಿ ಮನೋಗತ ಸಂದಣಗೊಳಿಸುತ 3
--------------
ತುಪಾಕಿ ವೆಂಕಟರಮಣಾಚಾರ್ಯ
ಕಾಯೊ ಸುಖಸಾರ ಮಾಯಾವಿದೂರ ಭಾವಜನಯ್ಯ ಭಕುತರ ಪ್ರಿಯಕರ ಪ ಕಾಯಕಾಂತಾರದೊಳು ನೋಯುತ ವಿಧ ವಿಧ ಬಾಯ ಬಿಡುವೆನಯ್ಯ ತೋಯಜಾಕ್ಷನೆ ನೋಡೊ 1 ಸಂಸಾರತೆರೆಯೊಳು ಹಿಂಸೆ ಪಡುತ ಮತಿ ಕಂಸಾರಿ ಕರುಣಿಸೊ 2 ಜಡಭವತೊಡರನು ಕಡೆಹಾಯ್ಸಿ ಕೊಡುಮುಕ್ತಿ ಕಡುದಯಾನಿಧೆ ಎನ್ನೊಡೆಯ ಶ್ರೀರಾಮನೆ 3
--------------
ರಾಮದಾಸರು
ಕಾಯೋ ಕರುಣಿಸಿ ಎನ್ನ ರಂಗಾ | ಬೇಗನೇ ಪಾದವದೋರಿಸಿ | ನಮನಕ ಭವಬಲಿಯನು ಬಿಡಸಿ ರಂಗಾ ಪ ಶರಣೆಂದು ಸಕಲರು ಬಂದು ಪೋಗುವಾ | ನಿನ್ನ ಮಹಾದ್ವಾರದಲಿ | ಇರುತಿಹ ನಿನ್ನಯ ಭಕುತ ಬಲೆಯಲಿ | ಇರಿಸಿ ನೀ ಇಟ್ಟು ಅಚಲದಲಿ ರಂಗಾ | ಸಂಬಳನಿತ್ತಿಹ ಧನವ ನಾನೊಲ್ಲೆ | ಬೇಡುವೆ ಒಂದÀನೋ ರಂಗಾ | ಹಂಬಲ ದಣಿವಂತೆ ನಾಮ ಭಾಂಡಾರವ | ಮಾಡೆನ್ನ ಆಧೀನವ ರಂಗಾ 1 ಕರಿದಲಿಧೃತಿ ಚಿತ್ತವನಿತ್ತು ಅನುದಿನಾ | ಹರಿಪಾದ ಸದ್ಬಕ್ತಿಯಾ ರಂಗಾ | ಮೆರೆವ ಮಂಟಪದೊಳು ನಿಲಿಸೆನ್ನ | ದುರಿತವ ತಟ್ಟದಂದದಿ ಪೊರೆಯೋ ರಂಗಾ2 ಇಹಪರದಲ್ಲಿ ಏಕೋದೇವನೆಂಬ ಮುದ್ರೆಯಾ ಭಾವದ ಬಲದಿಂದಲಿ | ಮಹಿಪತಿ ಸುತ ಪ್ರಭು ಕೊರಳಿಗೆ ಹಾಕಿನ್ನು | ಸಲಹು ನೀ ಕೃಪೆಯಿಂದಾ ರಂಗಾ3
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ಕಾಯೋ ಕಾಯೋ ಪ ಕಾಯೋ ಕಾಯೋ ಕಮಲಯತಾಕ್ಷ ಭವ ತೋಯಧಿಯೊಳು ಬಿದ್ದು ಬಾಯ ಬಿಡುವನ ಅ ಅದ್ವೈತ ತ್ರಯದಧ್ವ ಪ್ರವರ್ತಕ ಸದ್ವೈಷ್ಣವರ ಪದದ್ವಯತೋರಿ 1 ಸಂಜೆಯ ತೋರಿ ಧನಂಜಯನುಳುಹಿದ ನಿರಂಜನ ಮೂರ್ತೆ 2 ಸತ್ಯಕಾಮ ತವ ಭೃತ್ಯೆಗೆ ಬಂದಪ ಮೃತ್ಯು ಕಳೆದು ಸಂಪತ್ತು ಪಾಲಿಸಿದೆ 3 ಕುಕ್ಷಿಯೊಳಂದು ಪರೀಕ್ಷಿದ್ರಾಜನ ರಕ್ಷಿಸಿದಂತೆ ಪ್ರತಿಕ್ಷಣದಲಿ 4 ಎಲ್ಲರೊಳಿಹ ಕೈವಲ್ಯದರಸು ನೀ ಬಲ್ಲಿದನೆಂಬುದ ಬಲ್ಲೆ ಬಹು ಬಗೆ 5 ನೀ ದಯ ಮಾಡದಿರೀ ದಿವಿಜರು ಒಲಿ ದಾದರಿಸುವರೆ ವೃಕೋದರ ವಂದ್ಯ 6 ಅಧಮ ನಾನಹುದುದಧಿ ಮಥನ ಸ ನ್ಮುದ ಮುನಿಮತ ಪೊಂದಿದವರಣುಗನು 7 ಕ್ಷುದ್ರ ಭೂಮಿಪರುಪದ್ರವ ಕಳೆದು ಸು ಭದ್ರವೀಯೋ ಕ್ಷುದ್ರುಮದಂತೆ 8 ವೀತಭಯ ಜಗನ್ನಾಥ ವಿಠಲ ಸುಖೇತರ ಕಳೆದು ಮಹಾತಿಶಯದಲಿ 9
--------------
ಜಗನ್ನಾಥದಾಸರು
ಕಾಯೋ ದಯಾಭರಿತ ಮಾರುತಿ ಪ ಸುರಪಾ ಫಣಿಪಾ ಧ್ವಿಜಪಾ ಸೇವಿತಾ ವಿನುತ ಭರಿತ 1 ಹೇಸಿ ವಿಷಯದಾಸೆಯ ಬಿಡಿಸಿ ದಾಸನೆಂದುದಾಸೀನ ಮಾಡದೆ 2 ಶಾಮಸುಂದರ ಪ್ರೇಮದ ತನಯ ಭೀಮಾನಂದ ಮುನಿಯೆ ಧಣಿಯೇ 3
--------------
ಶಾಮಸುಂದರ ವಿಠಲ
ಕಾಯೌ ಶ್ರೀ ರಮಾದೇವಿಯೆ ಸದಾ ತೋಯಜಾಂಬಕಿಯೇ ಭಯವ ಬಿಡಿಸಿ ಭರದಿಂದ 1 ಕ್ಷೀರಾಂಬೋನಿಧಿ ತನಯೇ ತಾಯೇ ಮಾರನಯ್ಯನರಸಿ ಕರುಣಾವೆರಸಿ ನಲವಿಂದ 2 ಶಿ ್ರೀ ಶೇಷಾದ್ರೀಶ ಮನೋಲ್ಲಸಿತೆ ಕಾಂತೇ ವಾಸವಾದಿ ವಿನುತೇ ಮಹಿತೇ ವರದಾತೇ ತಾಯೆ 3
--------------
ನಂಜನಗೂಡು ತಿರುಮಲಾಂಬಾ
ಕಾರು ಯಾರಮನೆಗುಂಟು ಖೋಡಿ ಚೋರತ್ವದಪಹಾರ ಮಾಡಿ ತಿಂದದ್ದೆಲ್ಲ ಪ ಕಾಯಜನಯ್ಯನ ದಿವ್ಯ ಚರಿತಗಳನ್ನು ಬಾಯಿಂದ ಪೊಗಳುತ ಕೈಯಿಂದ ಬರೆದು ಮಾಯಾಮೋಹವ ಬಿಡದೆ ನ್ಯಾಯಮಾರ್ಗವತಪ್ಪ ನ್ಯಾಯದಿಂ ಪರರೊಡವೆ ಬಾಯ್ಬಡಿದು ತಿಂದದ್ದು 1 ನಳಿನನಾಭನ ವಿಮಲ ಸುಲಲಿತ ಮಹಿಮೆಗಳ ತಿಳಿದು ಆನಂದದಿಂ ನಲಿನಲಿದು ಹಿಗ್ಗದೆ ಇಳೆಯ ವಾಸನೆಯಿಂದ ಅಳಿವ ಸುಖದಾಸೆಗೆ ಇಳೆಜನರ ಗಳಿಕೆಯನು ಕಳವಿನಿಂ ತಿಂದದ್ದು 2 ಭೂಮಿಯೊಳಧಿಕ ಶ್ರೀರಾಮನ ದಾತೃತ್ವ ಹೇ ಮನವೆ ನೀ ತಿಳಿದು ಪಾಮರತ್ವ ಬಿಡದೆ ಕಾಮಿತದೊಳು ಬಿದ್ದು ಭೂಮಿ ಜನರೆದುರಿಗೆ ಸ್ವಾಮಿಭಕ್ತಿಯ ತೋರಿ ಕಾಮಿಸಿ ತಿಂದದ್ದು 3
--------------
ರಾಮದಾಸರು
ಕಾಲ ಕಳೆವರೆ ಮನವೆ ಪ ಖಲಜನಸಂಗದಲಿ ಸದಾ ಕಲ್ಮಶಭಾಜನನಾಗುತ ಹಲಧರಾನುಜನ ಶ್ರೀ ಪದ ಜಲಜಯುಗಳವ ಸುಜ್ಞಾನದಿ ಅ.ಪ ಇಂದ್ರಿಯಗಳ ಬಂಧಿಸಿ ಮನ- ಸೊಂದಾಗಿ ನಿಲಿಸಿ ಒಳಗೆ ಮು- ಮಂದಬುದ್ಧಿಯಾಗಿ ನೀನು 1 ಯಮನವರೋಡಿ ಬರುತ ನಿ- ಸಮಯದಿ ಭ್ರಮೆಯಿಂದಲ್ಲಿ ಕಾಲ್ಗೆರಗಲು ಬಿಡುವರೆ ನಿನ್ನ 2 ತಾಮಸನಾಗುತ ಶ್ರೀಗುರು- ರಾಮವಿಠಲ ಶರಣೆನ್ನದೆ ಕಾಮಿಸುತಲಿ ಸೊಕ್ಕುತ ನೀ 3
--------------
ಗುರುರಾಮವಿಠಲ
ಕಾಲ ಮೃತ್ಯು ಗೆಲಿಯಲಿಲ್ಲ ಕಾಲ ಪ ಪೃಥ್ವಿಯಮೇಲೆ ಕೃತಕೃತ್ಯನಾಗಲು ಬಂದ ವೃತ್ತಾಂತ ತಿಳಿಯಲಿಲ್ಲಅ.ಪ ನಂಬಿಕೊಂಡೆಯಲ್ಲ ಈ ಜಗ ಬೆಂಬಲ ಬರೋದಲ್ಲ ಜಂಬಬಡುವಿ ಸುಳ್ಳೆ ಮನದ ಡಂಬವ ಬಿಡಲಿಲ್ಲ ಕುಂಭಿನಿಸುಖದ ಹಂಬಲದಲಿ ದಿನ ಶುಂಭತನದಿಗಳೆದಿಂಬಿಲ್ಲದ್ಹೋಗುವಿ 1 ಕುಮತಿಯ ಬಿಡಲಿಲ್ಲ ಮಾಯಮಮತ ಕಡಿಯಲಿಲ್ಲ ನಮಿಸಿ ಬಿಡದೆ ಸದಾ ಸುಮನಸರೊಳಗಾಡಿ ಭ್ರಮೆಯನಳಯವಿಲ್ಲ ಬಂದ ಸಮಯ ತಿಳಿಯಲಿಲ್ಲ ವಿಮಲಸುಖದನಿಜ ಕ್ರಮವ ತಿಳಿಯಲಿಲ್ಲ 2 ಆಸೆ ನೀಗಲಿಲ್ಲ ವಿಷಯದ್ವಾಸನ್ಹಿಂಗಲಿಲ್ಲ ಕ್ಲೇಶ ತೊಡೆಯಲಿಲ್ಲ ಲಂಪಟ ಮೋಸದಿಂದುಳಿಲಿಲ್ಲ ಶೇಷಶಯನ ಮಮ ಶ್ರೀಶ ಶ್ರೀರಾಮನ ದಾಸನಾಗಿ ಭವಪಾಶ ಗೆಲಿಯಲಿಲ್ಲ 3
--------------
ರಾಮದಾಸರು