ಒಟ್ಟು 2981 ಕಡೆಗಳಲ್ಲಿ , 118 ದಾಸರು , 2249 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಜಯ ಜಯ ಶ್ರೀ ಮಹಾಲಿಂಗ ಗೋಪತುರಂಗ ಜಯ ಜಯ ಶ್ರೀ ಮಹಾಲಿಂಗ ಪ. ಜಯರಹಿತಾಚ್ಯುತಪ್ರಿಯ ಬುಧಾರ್ಚಿತ ದಯಾಸಾಗರ ಭಸಿತಾಂಗ ನಯನತ್ರಯ ನಮಿತಾಮರಸಂಘಾ- ಮಯಹರ ಗಂಗೋತ್ತುಮಾಂಗ 1 ಭೂತೇಶ ಭೂರಿಭೂತಹೃದಿಸ್ಥಿತ ಭೂಷಣೀಕೃತಭುಜಂಗ ಪೂತಾತ್ಮ ಪರಮಜ್ಞಾನತರಂಗ ಪಾತಕತಿಮಿರಪತಂಗ2 ಲಂಬೋದರಗುಹಪ್ರಮುಖಪ್ರಮಥನಿಕು- ರುಂಬಾಶ್ರಿತ ಜಿತಸಂಗ ಗಂಭೀರಗುಮಕದಂಬೋತ್ತುಂಗ- ಸಂಭೃತ ಹಸ್ತಕುರಂಗ 3 ಸೋಮಶೇಖರ ಮಹಾಮಹಿಮ ವಿಜಿತ- ಕಾಮ ಕಲಿಕಲುಷಭಂಗ ರಾಮನಾಮ ಸ್ಮರಣಾಂತರಂಗ ವಾಮಾಂಕಾಸ್ಥಿತ ಪಿಂಗ 4 ದೇವ ಲಕ್ಷ್ಮೀನಾರಾಯಣ ಪದರಾ- ಜೀವನಿರತ ವನಭೃಂಗ ಪಾವಂಜಾಖ್ಯ ಗಿರೀಶ ಶುಭಾಂಗ ಕೇವಲ ಸದಯಾಪಾಂಗ5
--------------
ತುಪಾಕಿ ವೆಂಕಟರಮಣಾಚಾರ್ಯ
ಜಯ ಜಯವೆನ್ನಿ ಕೈಯ ಮುಗುಬನ್ನಿ ದಯವುಳ್ಳ ಮಹಿಮಗಾರುತಿ ಮಾಡುವ ಬನ್ನಿ ಧ್ರುವ ಮನವೆ ಬತ್ತಿ ತನುವಾರತಿ ಘನಕೆ ಮಾಡವ ಬನ್ನಿ ನೆನವು ತುಪ್ಪ ಙÁ್ಞನದೀಪವನ್ನು ಬೆಳಗುವ ಬನ್ನಿ 1 ಭಾವಗುಟ್ಟು ಠಾವಿಲಿಟ್ಟು ದೈವ ನೋಡು ಬನ್ನಿ ಮಾವಮಕರಗುಣ ಬಿಟ್ಟು ಸೇವೆಮಾಡು ಬನ್ನಿ 2 ಮಹಿಪತಿಸ್ವಾಮಿಗಿನ್ನು ಜಯಜಯವೆನ್ನಿ ಬಾಹ್ಯಾಂತ್ರ ಬೆಳಗಿ ಪೂರ್ಣ ಧನ್ಯವಾಗು ಬನ್ನಿ 3
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ಜಯ ಜಯಾ ಶ್ರೀ ವೆಂಕಟೇಶ ಜೀಯ ಪ ಜಯ ಶ್ರೀ ವೆಂಕಟೇಶಜೀಯ ನೀನೆ ಭಯಪ್ರದಾಯಕನಯ್ಯ ||ಆಹಾ|| ಭಯಕೃದ್ಭಯನಾಶನ ನೀ ಎನ್ನ ಕೈಬಿಡದೆ ಕಾಯೊ ಎನ್ನೊಡೆಯನೆ ವೇಂಕಟರಾಯ ಅ.ಪ ಮಂಕುಮಾನವನಾದ ಎನ್ನ ಮನದ ಡೊಂಕು ತಿದ್ದಿದಿ ಸ್ವಪನವನ್ನ ನಿನ್ನ ಅಂಕಿತದಂತೆ ನುಡಿಸೆನ್ನ ಇನ್ನು ಮಂಕುಹರಿಸಿದೆ ಪ್ರಸನ್ನ ||ಆಹಾ|| ಬಿಂಕದಿಂದ ಇಹ ಶಂಕೆ ಹರಿಸಿ ನಿನ್ನ ಕಿಂಕರ ಕಿಂಕರ ಕಿಂಕರನೆನಿಸಿದೆ 1 ಹಿಂದನೇಕ ಪರಿಯಿಂದ ಮನ ಬಂದಂತೆ ನುಡಿಸಿದ್ದರಿಂದ ತಂದೆ ಮುದ್ದು ಮೋಹನ ವಿಠ್ಠಲಾನಂದ ಪೊಂದಿ ಸಂದೇಹ ಹರಿಸಿದ ಚಂದ ||ಆಹಾ|| ಇಂದು ಮುಂದು ಎಂದೆಂದಿಗೂ ನೀ ಭವ ಬಂಧ ಹರಿಸಿ ಕಾಯಬೇಕು ಇಂದಿರೆರಮಣ2 ತ್ವರಿತಾದಿ ದಯಮಾಡೋ ಹರಿಯೆ ನೀನೆ ನಿರುತ ಎನ್ನಯ ಕುಲದ ದೊರೆಯೇ ಭಕ್ತ ಪರಿಪಾಲ ಮೋಕ್ಷದ ಹರಿಯೇ ನಿನ್ನ ಹೊರತು ರಕ್ಷಕರ ನಾನರಿಯೆ ||ಆಹಾ|| ಪರಮಕರುಣಿ ಶ್ರೀ ವೇಂಕಟೇಶಾಭಿನ್ನ ಉರಗಾದ್ರಿವಾಸವಿಠಲ ಜಗದೀಶನೆ 3
--------------
ಉರಗಾದ್ರಿವಾಸವಿಠಲದಾಸರು
ಜಯ ಪಾಂಡುರಂಗ ವಿಠಲ | ದಯದಿ ಪೊರೆ ಇವನಾ ಪ ಭಯ ಕೃತೂ ಭಯನಾಶ | ಹಯಮೊಗನೆ ಹರಿಯೇ ಅ.ಪ. ಹಿಂದಿನ ಸುಸಂಸ್ಕಾರ | ಛಂದದಲಿ ಅನುಭವಿಸಿಇಂದು ತವದಾಸ್ಯವನು | ಕಾಂಕ್ಷಿಸುವ ಹರಿಯೇಅಂದ ಪುಣ್ಯದರಾಶಿ | ಬಂದೊದಗಿತೋ ಎನೋಇಂದಿರಾ ನಂದದಾ | ನಂದವನೆ ಈಯೋ 1 ಕರ್ಮಾಕರ್ಮಗಳ | ಮರ್ಮವನೆ ತಿಳಿಸುತ್ತಧರ್ಮನಾಮಕ ನಿನ್ನ | ಪೇರ್ಮೆ ಸನ್ನಾಮಾಒಮ್ಮನದಿ ಸರ್ವದಾ | ಸುಸ್ಮರಣೆ ಈಯುವುದುದುಮ್ಮಾನಗಳ ಕಳೆದು | ಸಲಹಬೇಕಿವನಾ 2 ಪಂಚ ಭೇದ ಜ್ಞಾನ | ಸಂ ಚಿಂತನೆಯ ಕೊಟ್ಟುವಾಂಛಿತಾರ್ಥವನೀಡೋ | ಪಂಚ ಪಂಚಾತ್ಮಾಹೆಂಚು ಹಾಟಕದಿ ಸಮ | ಚಿಂತನೆಯು ಬರುತಿರಲಿಅಂಚೆವಾಹನ ಪಿತನೆ | ಸಂಚಿತಾಗಮ ಕಳೆಯೋ3 ಭೂರಿ ಭಕ್ತಿಗಳಾ 4 ಧೀವರರ ಆಶಿಷವು | ತೀವರಾಗಲಿ ಇವಗೆಮಾವಾರಿ ಪದಚಿಂತೆ | ಯಾವಾಗ್ಯೂ ಇರಲೀಕೇವಲಾನಂದಗಳು | ಭಾವದಲಿ ಮೈದೋರೆದೇವಗುರು ಗೋವಿಂದ | ವಿಠಲ ಪ್ರಾರ್ಥಿಸುವೆ 5
--------------
ಗುರುಗೋವಿಂದವಿಠಲರು
ಜಯ ರಮಾದೇವಿ ಸಾಗರ ಕನ್ನಿಕೆ ಪ ಪದ್ಮ ಪದ್ಮಾಲಯೇ ಪದ್ಮದಳಲೋಚನೆ | ಪದ್ಮಪ್ರಿಯೆ ದಿವ್ಯ ಪದ್ಮವದನೆ | ಪದ್ಮವಕ್ಷೋಜಾತಿ ಪದ್ಮಕಲ ಶೋಭಿತೆ | ಪದ್ಮಾಸನಾದೆನುತ ಪದ್ಮಚರಣೆ 1 ಮಂಗಲಾತ್ಮಕ ನೀಲಭ್ರಂಗ ಕುಂತಲಶಶಿ ಪ- ತಂಗ ಸನ್ನಿಭ ಕೋಮಲಾಂಗಿ ವರದೆ || ಗಾಂಗೆಯ ವಸನ ಸರ್ವಾಂಗ ರತ್ನಾಭರಣೆ | ಅಂಗಜಾಜನನಿ ಶ್ರೀರಂಗಪ್ರಿಯೆ 2 ಸತತ ಜಗದುತ್ಪತೆ ಸ್ಥಿತಿಯಂತೆ ಕಾರಿಣೆ | ನುತಗುಣ ಮಹಿಮಾಯ ಶ್ರುತಿ ಪೂಜಿತೆ || ಪತಿತಪಾವನ ಮಹೀಪತಿನಂದನಿಷ್ಟ | ದೇ ವತಿ ಭಕ್ತ ಜನಸುಖದಿ ಮತಿದಾಯಿತೆ 3
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ಜಯಜಯವೆನ್ನಿರಯ್ಯ ಜ್ಯೋತಿರ್ಮಯಗೆ ಜಯಜಯವೆನ್ನಿರೊ ಜಯಜಯವೆನ್ನಿರೊ ಧ್ರುವ ಕಂಗಳದೆರಸಿ ಅಂತರಂಗದೋರಿದವಗೆ ಮುಂಗಡÀಲೆ ಇದ್ದು ಸುಸಂಗದೋರಿದವಗೆ ಹಿಂಗಿಸೆನ್ನ ಭವಭಯ ಭಂಗಮಾಡಿದವಗೆ ಮಂಗಳಾತ್ಮಕನ ಸಂಗಸುಖ ಬೀರಿದವಗೆ 1 ಆರು ಅರಿಯದ ವಸ್ತು ಸಾರಿದೋರಿದವಗೆ ಶಿರದಲಿ ಕರವಿಟ್ಟು ಕರುಣಿಸಿದವಗೆ ಮೂರುಗುಣಕೆ ಮೀರಿದ ತಾರಕ ಗುರುವಿಗೆ ಸಾರವಾಡದಲಿ ನಿಂದು ಪಾರದೋರಿದವಗೆ 2 ಸೋಹ್ಯ ಸೊನ್ನೆಯದೋರಿಸಿನ್ನು ಸಾಹ್ಯ ಮಾಡಿದವಗೆ ಗುಹ್ಯ ಗುರುತ ತೋರಿದ ಗುರುಮೂರ್ತಿಗೆ ಕೈಪಿಡಿದು ಮಹಿಪತಿಗೆ ದಯಮಾಡಿದವಗೆ 3
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ಜಯತು ಸೀತಾರಾಮ ರಾಮ ಚರ- ಣಾರವಿಂದದ ಭಕ್ತಿ ದೃಢವಾಗಿ ಕೊಡು ಜಯ ರಾಮ ರಾಮ ಕ್ರೂರಕಾಮಾದಿಗಳ್ಸೂರೆಗೊಂಬರು ಸೀತಾರಾಮ ರಾಮ ರಾವ- ಣಾರಿ ನೀನಲ್ಲದೆ ಯಾರಿಲ್ಲ ಗತಿ ಜಯ ರಾಮ ರಾಮ 1 ಬುದ್ಧಿ ಜ್ಞಾನ ಶಕ್ತಿ ಸಿದ್ಧಿದಾಯಕ ಸೀತಾರಾಮ ರಾಮ ಗುಣ- ವೃದ್ಧಿಕಾರಣ ಭಕ್ತಿಶ್ರದ್ಧೆಯ ಕೊಡು ಜಯ ರಾಮ ರಾಮ ಬಿದ್ದೆನಜ್ಞಾನಸಮುದ್ರಮಧ್ಯದಿ ಸೀತಾರಾಮ ರಾಮ ಎನ್ನ- ನುದ್ಧರಿಸುವರೆ ಪ್ರಸಿದ್ಧ ನೀನೆ ಜಯ ರಾಮ ರಾಮ 2 ನಿನ್ನ ನಾಮವೆ ಪ್ರಸನ್ನ ಪಾವನ ಸೀತಾರಾಮ ರಾಮ ಸ- ರ್ವೋನ್ನತ ಮಹಿಮವರೇಣ್ಯ ಶಾಶ್ವತ ಜಯ ರಾಮ ರಾಮ ನಿನ್ನಾಧೀನವು ನಿಖಿಲ ಜಗವು ಸೀತಾರಾಮ ರಾಮ ಪರಿ- ಪೂರ್ಣಾತ್ಪೂರ್ಣವರೇಣ್ಯ ಶಾಶ್ವತ ಜಯ ರಾಮ ರಾಮ 3 ಸ್ವಾಂತರಂಗಭಕ್ತಿಚಿಂತಾಮಣಿ ಸೀತಾರಾಮ ರಾಮ ಆತ್ಮ- ತಂತ್ರನಿಯಂತ್ರ ಸರ್ವಾಂತರಾತ್ಮಕ ಜಯ ರಾಮ ರಾಮ ಭ್ರಾಂತಿ ತ್ಯಜಿಸುವುದಕೆಂತುಪಾಯವು ಸೀತಾರಾಮ ರಾಮ ಏ- ಕಾಂತಸ್ಮರಣೆಯ ನಿರಂತರ ಕೊಡು ಜಯ ರಾಮ ರಾಮ 4 ಸೀತಾರಾಮ ರಾಮ ದುಷ್ಟ- ರಕ್ಕಸಾಳಿಯ ಸೊಕ್ಕಡಗಿತು ಜಯ ರಾಮ ರಾಮ ಕರ್ಕಶಕಲಿಕಾಲ ಮಿಕ್ಕಿ ಬಂದುದು ಸೀತಾರಾಮ ರಾಮ ಮನ- ಸೊಕ್ಕಿ ಮೋಹದ ಬಲೆಗೆ ಸಿಕ್ಕಿಬಿದ್ದುದು ಜಯ ರಾಮ ರಾಮ 5 ದಾಸಜನರ ಹೃದಯಸ್ಥಿತ ಸೀತಾರಾಮ ರಾಮ ಶ್ರೀನಿ- ವಾಸ ನಿನ್ನವರಭಿಲಾಷೆಯ ಕೊಡು ಜಯ ರಾಮ ರಾಮ ಸೀತಾರಾಮ ರಾಮ ಸಾಧು- ವಾಸಸಂತೋ ಪ್ರಕಾಶವ ಕೊಡು ಜಯ ರಾಮ ರಾಮ 6 ಜ್ಞಾನವಜ್ಞಾನವು ಭಾನುತಿಮಿರ ಸೀತಾರಾಮ ರಾಮ ಸತ್ಯ- ಜ್ಞಾನ ಭಕ್ತಿಭಾಗ್ಯ ನೀನಿತ್ತು ಪೊರೆ ಜಯ ರಾಮ ರಾಮ ಹೀನರೈವರು ಸ್ವಾಧೀನಗೊಂಬರು ಸೀತಾರಾಮ ರಾಮ ಪವ- ಮಾನವಾಹನ ನಿನ್ನ ಧ್ಯಾನವ ಕೊಡು ಜಯ ರಾಮ ರಾಮ 7 ಚಿತ್ತಕೆ ನಿಲವಿಲ್ಲ ಚಿಂತೆ ಹಲವು ಸೀತಾರಾಮ ರಾಮ ತವ ಭೃತ್ಯನಾಗಿರುವ ಸದ್ಭಕ್ತಿಯ ಕೊಡು ಜಯ ರಾಮ ರಾಮ ಸೀತಾರಾಮ ರಾಮ ಪರ- ವಸ್ತುತ್ವದೇಕಾಸಕ್ತಿಯ ಕೊಡು ಜಯ ರಾಮ ರಾಮ 8 ಆಧಿವ್ಯಾಧಿ ಭವಾಂಬೋಧಿಕುಂಭಜ ಸೀತಾರಾಮ ರಾಮ ತವ ಪಾದಾಂಭೋಜಪ್ರಸಾದಪಾಲಿಸು ಜಯ ರಾಮ ರಾಮ ಸಾಧುಸಂಗಸುಖಬೋಧೆಯ ಕೊಡು ಸೀತಾರಾಮ ರಾಮ ಕಲಿ- ಬಾಧೆ ಪರಿಹರಿಪ ಹಾದಿ ತೋರಿಸು ಜಯ ರಾಮ ರಾಮ 9 ಧ್ಯಾನವಿರಲಿ ಎನ್ನ ಮಾನಸದಲಿ ಸೀತಾರಾಮ ರಾಮ ವಿಷ ಯಾನುಭವದಿ ಬಲು ಹಾನಿಯಾದೆನು ಜಯ ರಾಮ ರಾಮ ದೀನಜನರ ಕಾಮದೇನು ರಘುವರ ಸೀತಾರಾಮ ರಾಮ ಖಲ- ದಾನವಾರಣ್ಯಕೃಶಾನು ಮಾನದ ಜಯ ರಾಮ ರಾಮ 10 ದುಷ್ಟರ ಸಂಗದಿಂದೆಷ್ಟೊ ನೊಂದೆನು ಸೀತಾರಾಮ ರಾಮ ಸುವಿ- ಶಿಷ್ಟರ ಸಂಗವ ಕೊಟ್ಟು ಸಲಹೊ ಜಯ ರಾಮ ರಾಮ ಭ್ರಷ್ಟ ಪ್ರಕೃತಿಯನ್ನು ಕುಟ್ಟಿ ಕಳಚು ಸೀತಾರಾಮ ರಾಮ ಪರ- ಮೇಷ್ಟ್ಯಾದಿ ಸುಮನಸರಿಷ್ಟದಾಯಕ ಜಯ ರಾಮ ರಾಮ 11 ತನ್ನ ಕೇಡು ತಾನರಿಯದಾದೆ ಸೀತಾರಾಮ ರಾಮ ಸುಪ್ರ- ಸನ್ನ ನಿನ್ನ ಸ್ಮರಣೆಯನಿತ್ತು ಪೊರೆ ಜಯ ರಾಮ ರಾಮ ಹಣ್ಣೆಂದು ದೀಪವ ತಿನ್ನ ಪೋದೆನು ಸೀತಾರಾಮ ರಾಮ ಹೆಣ್ಣು ಹೊನ್ನಿಗಾಗಿ ಪರವನ್ನು ಮರೆತೆ ಜಯ ರಾಮ ರಾಮ 12 ನಿತ್ಯ ನಿನ್ನ ದಾಸ್ಯವಿತ್ತು ರಕ್ಷಿಸು ಸೀತಾರಾಮ ರಾಮ ಯಾವ- ಚ್ಚಿತ್ತ ತವ ಧ್ಯಾನದಿ ತೃಪ್ತಿಯಾಗಲಿ ಜಯ ರಾಮ ರಾಮ ಸತ್ಯಾತ್ಮರ ಸಂಗಸತ್ವ ವರ್ಧಿಸು ಸೀತಾರಾಮ ರಾಮ ಪರ- ಮಾರ್ಥವಿಚಾರ ಸತ್ತತ್ತ್ವವರುಹು ಜಯ ರಾಮ ರಾಮ 13 ಕರ್ತಾಕಾರಯಿತನು ಭರ್ತಾರನು ಸೀತಾರಾಮ ರಾಮ ಪುರು- ಷಾರ್ಥರೂಪ ತವ ಭಕ್ತಿ ಪ್ರಾರ್ಥನೆ ಜಯ ರಾಮ ರಾಮ ಪ್ರತ್ಯಗಾತ್ಮ ಮನೋವೃತ್ತಿಯೊಳಿರು ಸೀತಾರಾಮ ರಾಮ ಸ್ವಾಮಿ- ಭೃತ್ಯನ್ಯಾಯದಿ ನಿಯಮಿಸುತ್ತ ನಡೆಸು ಜಯ ರಾಮ ರಾಮ 14 ಸೀತಾರಾಮ ರಾಮ ವಾಯು- ಸಖಸ್ಪರ್ಧಾತ್ಮಕ ಸಾಧುಪ್ರಕೃತಿಪಾಲಿಸು ಜಯ ರಾಮ ರಾಮ ಸೀತಾರಾಮ ರಾಮ ಬ್ರಹ್ಮಾ- ದ್ಯಖಿಳ ಚೇತನಾತ್ಮಕ ಸರ್ವೋತ್ತಮ ಜಯ ರಾಮ ರಾಮ 15
--------------
ತುಪಾಕಿ ವೆಂಕಟರಮಣಾಚಾರ್ಯ
ಜಯತುಲಸೀರಾಮಾ ಜಗದಭಿರಾಮಾ ಭಯನಗಸುತ್ರಾಮ ಭರತÀಪುರೀಧಾಮ ಪವೆಂಕಟಲಕ್ಷಾಂಬ ಉದರಾಬ್ಧಿ ಸೋಮಕಿಂಕರಾಶ್ರಿತಪ್ರೇಮ ಕ'ಸಾರ್ವಭೌಮ 1ಪತಿತಜನೋದ್ಧರಿತ ಪ್ರಥಮಾಶ್ರಮರತರತಿಪತಿಗುಣಜಿತರಮ್ಯ ಸುಭಾತ 2ವರಸಕಲಾಗಮಶಾಸ್ತ್ರಾರ್ಥ ಪ್ರ'ೀಣನಿರ್ಮಲಧೀಷಣ ನೀರಜಲೋಚನ 3ರಾಮಕೃಷ್ಣೋತ್ಸವ ನೇಮಧುರೀಣಕಾ'ುತಫಲಪ್ರದ ಕರುಣಾಭರಣಾ 4ಅಥಿತಿ ಅಭ್ಯಾಗತ ಆದರಣೇ'ತಬುಧವರಪೂಜಿತ ಭು'ಪ್ರಖ್ಯಾತ 5ನಿರತಾನ್ನದಾನ ನಿಖಿಲಾವಧಾನಪರಮಾರ್ಥಜ್ಞಾನ ಪರಿಬೋಧಮಾನ 6ತಾಮರತುಲಸೀದಾಮ (ಶುಭಾಂಗಾ)ಶ್ರೀರಂಗಸ್ವಾ'ುದಾಸ ಭವತಿ'ುರಪತಂಗಾ 7
--------------
ಮಳಿಗೆ ರಂಗಸ್ವಾಮಿದಾಸರು
ಜಯದೇವ ಜಯದೇವ ಜಯ ವೆಂಕಟೇಶಾ| ಶ್ರಯ ಸುಖದಾಯಕ ಸ್ವಾಮಿ ಉರಗಾಚಲವಾಸಾ ಪ ಕರುಣಾಕರ ರತ್ನಾಕರ ಕನ್ಯಾ ಮನೋಹಾರಿ| ಸುರವರ್ಧನ ಮುರಮರ್ದನ ಗೋವರ್ಧನಧಾರಿ| ವರಮಂದಿರ ಧೃತಕುಂದರ ಸುಂದರ ಸಹಕಾರಿ| ಶೌರಿ 1 ಜಗಕಾರಣ ಪರಿಪೂರಣ ಸುಂದರಸಾಕಾರಾ| ಅಘಹರಣಾ ಮುನಿ ಸ್ಫರಣಾತ್ರಯ ಭುವನಾಧಾರಾ| ನಗಧರಣಾ ತವಶರಣಾಭರಣಾ ಮಯೂರಾ| ಭೃಗುಚರಣಾಂಕಿತ ಚರಣಾಂಬುಜ ಶೋಭಿತ ಧೀರಾ 2 ಸುಖಕರ್ತಾ ದುಃಖಹರ್ತಾ ಸರಸೀರುಹ ನಯನಾ| ಸಕಲಾತ್ಮ ಪರಮಾತ್ಮಾ ಫಣಿಕುಲವರ ಶಯನಾ| ನಿಖಿಲಾಸುರ ತಮಭಾಸುರ ದುರಿತಾವಳಿ ಶಮನಾ| ಮಕರಾಂಕಿತ ಪಿತಮಹೀಪತಿ ನಂದನಪಾಲನಾ 3
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ಜಯದೇವ ಜಯದೇವ ಜಯಗುರು ಮಹೇಶಾ ಭಯವನಿವಾರಿಸಿ ಶ್ರಯಕುಡು ನೋಡದೆ ಗುಣದೋಷಾ ಪ ಶಿವಶಿವಶಿವಶಿವಯೆಂದು ನೆನಿಯಲು ದೃಡವಾಗಿ ಅವನಿಲಿಹಿಂಗುದು ಪೂರ್ವದ ದುಷ್ಕøತಗತವಾಗಿ ಭವಭವ ಭವಭವಯನಲಾಮ್ಯಾಲನಿಶ್ಚಲನಾಗಿ ಜವದಲಿ ಹರಿವುದುದುರ್ಧರ ಭವಭಯಭಯಾಗಿ 1 ಅನನ್ಯ ಭಾವದಿಹೊಕ್ಕು ಶರಣವ ನಿಮ್ಮಡಿಗೆ ತನುಮನಧನವನು ಅರ್ಪಿಸಿ ವಂಚನೆ ನಿಲದ್ಹಾಗೆ ಅನುದಿನ ಮಾಡಿಲು ಧ್ಯಾನಾಸ್ವರೂಪಹೃದಯದೊಳಗೆ ಘನ ತರದಿಹನಿಜಸ್ಥಾನವು ಸುಲಬಾಗುವದೀಗೆ2 ನಿನ್ನಾ ಮಹಿಮೆಯುತಿಳಿಯದು ನಿಗಮಕ ಶ್ರೀಗುರವೇ ಇನ್ನು ಅಂತಿಂತೆಂಬುದು ನರಗುರಿಗಳಿಗಳವೇ ಎನ್ನಾನಯನದಿನೋಡಿ ಸುಮ್ಮನು ಸುರದಿರುವೇ ಭಿನ್ನವಿಲ್ಲದೆ ಸಲಹು ಮಹಿಪತಿ ಸುತಪ್ರಭುವೇ 3
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ಜಯದೇವ ಜಯದೇವ ಜಯಮಹಾಂಗಿರೀಶಾ ಸ್ವಯಂಜ್ಯೋತಿ ಬೆಳಗುವೆ ಸಚ್ಚಿತ್ಸುಖತೋಷಾ ಪ ಸರ್ವರಲಿ ನೋಡಿದರೂ ನೀನಲ್ಲದೆ ಇಲ್ಲಾ ಉರ್ವಿಯಾಕಾಶ ದಶದಿಕ್ಕುಗಳೆಲ್ಲಾ ಸರ್ವೇಶ್ವರವೆಂಬದು ಸರ್ವಾಂಗದೆÉಲ್ಲಾ ಪಾರ್ವತೀಶ್ವರನೆಂಬುದು ಬಲ್ಲವನೆ ಬಲ್ಲಾ ಜಯದೇವ 1 ಸಕಲ ಸುಖದುಃಖವೆಂಬುದು ನಿನ್ನ ಲೀಲೆ ಅಖಿಲ ಅಂಡಗಳೆಂಬ ಭೋಜನಶಾಲೆ ಭಕುತಿ ಭಾಗ್ಯೆಂಬ ಜ್ಞಾನದ ದೀಪಜ್ವಾಲೆ ಪ್ರಕಟಿಸುವಂತೆ ಎತ್ತುವೆ ನಿನ್ನ ಮೇಲೆ ಜಯದೇವ 2 ಪರಿಶುದ್ಧಾತ್ಮಕದೇವಾ ನಿರುತ ನಿರ್ದೋಶಾ ಸಕಲಜನರ ಹೃದಯಕಮಲ ನಿವಾಸಾ ದುರಿತದಾರಿದ್ರ್ಯ ಭವದುಃಖವಿನಾಶಾ ಗುರು ವಿಮಲಾನಂದ ಶ್ರೀ ಮಹಾಂಗಿರೀಶಾ 3
--------------
ಭಟಕಳ ಅಪ್ಪಯ್ಯ
ಜಯಮಂಗಳಂ ಶುಭೋದಯ ಮಂಗಳಂ ಭಯಹರಗೆ ತಿರುಪತಿಯ ವೆಂಕಟೇಶ್ವರಗೆ ಪ ಸುರಲೋಕವನು ಪಡೆದ ಶಿರದಮಕುಟದ ಪ್ರಭೆಗೆ ಸ್ಮರಚಾಪವನು ಪೋಲ್ವ ಪುರ್ಬುಗಳ ಚೆಲುವಿಕೆಗೆ ತುಂಬಿ ತುಳುಕುವ ನಯನಗಳಿಗೆ 1 ಕನಕಕುಂಡಲಗಳಿಗೆ ಘನ ನಾಸಿಕದ ಮಣಿಗೆ ಮಿನುಗುತಿಹ ಮುಗುಳುನಗೆಯೊಗುವ ಮುಖಕೆ ಇನಕೋಟಿಪ್ರಭೆಗೆ ಮಿಗಿಲೆನಿಪ ಕೌಸ್ತುಭಮಣಿಗೆ ವನಮಾಲೆಯನು ಧರಿಸಿ ಶೋಭಿಸುವ ಕಂಠಕೆ 2 ಭುಜವೆರಡರಲಿ ಶಂಖಚಕ್ರಗಳನುರೆ ಧರಿಸಿ ಅಜಸುರಾದ್ಯರು ಬಿಡದೆ ಭಜಿಪ ಪದವ ಭಜಿಪರಿಗೆ ಭವಶರಧಿ ಕಟಿಪ್ರಮಾಣವಿದೆಂದು ಅಜಪಿತನು ತೋರುತಿಹ ಕರಚತುಷ್ಟಯಕೆ 3 ಹದಿನಾಲ್ಕು ಲೋಕಕಾಶ್ರಯವಾಗಿ ತೋರುತಿಹ ಪದುಮಭವನನು ಪಡೆದ ನಾಭಿಸಹಿತ ಉದರಮಂಡಲಕೆ ಮತ್ತದರಡಿಯ ಶೋಭಿಸುವ ಹದಿನಾರು ಬಣ್ಣದಪರಂಜಿ ಕಟಿಸೂತ್ರಕೆ 4 ಕಿರಿಘಂಟೆಸರದೊಡನೆ ಹೊಳೆವ ಪೀತಾಂಬರಕೆ ಗರುಡನಂಸದಿ ಮೆರೆವ ಊರುಗಳಿಗೆ ಸುರನದಿಯ ನೆರೆ ಪಡೆದ ಚರಣದುಂಗುಟಗಳಿಗೆತಿರುಪತಿಯ ವೆಂಕಟನ ದಿವ್ಯ ಮೂರುತಿಗೆ 5
--------------
ತಿಮ್ಮಪ್ಪದಾಸರು
ಜರಿಯಬೇಡ ಹರಿಯ ಮರೆಯಬೇಡೆಂದೆಂದು |ತಿರಿಯಬೇಡ ಖಳರ ಮನೆಗೆ ಪೋಗಿ ||ಪ||ಒರೆಯಬೇಡನ್ಯರಿಗೆ ರಹಸ್ಯ ತತ್ವಗಳನು |ಬೆರೆಯಬೇಡ ಪರರ ಸತಿಯ ಸ್ವಪ್ನದಲೂ ||ಅ|| ||ಪ|| ಮೂಕವಾರ್ತೆಯ ನಿನ್ನ ಕಿವಿಗೆ ಕೇಳಿಸಬೇಡ |ಶ್ರೀಕಾಂತ ಚರಿತೆಯನು ಕೇಳದಿರಬೇಡ |ಪಾಕವನು ಮಾಡಿ ಏಕಾಂಗಿಯಾಗುಣಬೇಡ|ಭೂಕಾಂತರನುಸರಿಸಿ ಬೆಸಗೊಳ್ಳಬೇಡ || ಪಂಡಿತರು ಪಾಮರರು ಆರಿಗಾದರೂ ನಿನ್ನ |ಕಂಡವರಿಗೆಲ್ಲ ಕೌತುಕವು ತೋರಿದರೂ |ಹೆಂಡಿರು ಮಕ್ಕಳು ಅಳಿಯ ಸೋಸೆ ಮೊಮ್ಮಕ್ಕಳು |ಉಂಡುಟ್ಟು, ದ್ವಿಜರು ಸಹ ಗಂಡುಗಲಿಯಾದರೂ|| ಮಂದಮತಿಗಳ ಕೂಡೆ ಮಾತಾಡಲಿ ಬೇಡ |ನಿಂದಕರ ಕಣ್ಣೆತ್ತಿ ನೋಡಬೇಡ |ಇಂದಿರೆಯರಸ ಶ್ರೀ ವಿಜಯ ವಿಠಲರ ಚರಣ|ದ್ವಂದ್ವದಲಿ ಮಸ್ತಕವನಿಡದಿರಬೇಡ ||
--------------
ವಿಜಯದಾಸ
ಜಾಣರಾಯಗೆ ಇಟ್ಟ ಕಾಣಿಕೆಯನು ಕೊಟ್ಟು ಪ ಕಷ್ಟಗಳೆಲ್ಲವು ಬೆನ್ನಟ್ಟಿ ಬರುವಾಗ ಕಟ್ಟಿದ ಹರಕೆಗಳೆಲ್ಲವನು ಸಿಟ್ಟು ಮಾಡುವ ಸ್ವಾಮಿ ಇಟ್ಟುಕೊಂಡರೆ ಇನ್ನು ಮುಟ್ಟಿಸಿಕೊಡಬೇಕಲ್ಲಿ ತಿಮ್ಮಪ್ಪನಲ್ಲಿ 1 ಗಂಡ ಹೆಂಡತಿಯು ಮಕ್ಕಳು ಸಹವಾಗಿ ದಂಡು ಮಾಳ್ಪೆವು ತಾವು ಎನುತಲಿ ಉಂಡೆವು ಸ್ಥಿರವಾರ ಊಟವ ಏಕವ ಕಂಡು ಬಹರೆ ಹೋಗುವ ದಯವಾಗುವ 2 ಕಟ್ಟಿದ ಕಾಣಿಕೆ ಇಟ್ಟು ಚರಣದಲ್ಲಿ ಸಾಷ್ಟಾಂಗವು ಎರಗಿದರೆ ದೃಷ್ಟಿಯಿಂದಲೆ ನೋಡಿ ದಯಮಾಡಿ ಕಳುಹುವ ವರಾಹ ನಮ್ಮಪ್ಪ ತಿಮ್ಮಪ್ಪನು 3
--------------
ವರಹತಿಮ್ಮಪ್ಪ
ಜಾಣೆ ನಂಬಿದೆ ಇಸ್ಟೇಟರಾಣೀ ನೀನೊಲಿದೆನ್ನ ಪಾಣಿಯೊಳಗೆ ಬಂದು ಕಾಣಿಸಮ್ಮ ಪ ವಾಣಿ ಶ್ರೀಲಕುಮಿಶ ರುದ್ರಾಯಣಿಯರಿಗಿಂತ ಕ್ಷೋಣಿಯೊಳಗೆ ಬಹುಮಾನಿತೆ | ನೀನಮ್ಮ ಅ.ಪ ಜನಕನು ಗಳಿಸಿದ ಧನವೆಲ್ಲಾ ಕಳಕೊಂಡೆ ದನಕರ ಹೊಲಮನೆಯನು ಮಾರಿದೆ ಜನರೊಳಗಪಹಾಸ್ಯಗೊಳಗಾದೆ ಕೇಳಮ್ಮ ವನಿತೆ ಮಕ್ಕಳ ಕೈಲಿ ಕೊನೆಗೆ ಪರಟೆ ಕೊಟ್ಟೆ 1 ಉಣಲು ಅನ್ನವು ಕಾಣೆ | ಉಡಲು ವಸ್ತ್ರವು ಕಾಣೆ ಕಡುಕಷ್ಟ ಕಡಲೋಳು ಮುಳುಗಿದೆ ನೋಡಮ್ಮ ಪೊಡವಿಯೋಳ್ ನಿನ್ಹೊರತು ಕಡೆ ಹಾಯಿಸುವಂಥ ಕಾಣಿ ಕೈಪಿಡಿದು ರಕ್ಷಿಸೊ ರಕ್ಷಿಸೋ ನೀನಮ್ಮ 2 ಎಲ್ಲಾ ಹಾಳಾಯಿತು | ಸಾಲ ಬಹಳಾಯಿತು ಜೋಳಿಗೆ ಬಂದಿತು ಕೂಳಿಗೆ ಮನೆ ಮನೆ ಚಾಲುವರಿದೆನಮ್ಮಾ 3 ಹಾರಿ ಹೋಗುವದಮ್ಮಾ ಪಕ್ಕಾರಂಗು ಧಾರುಣೀಶರ ಮಧ್ಯ ತೋರೀದ ಸಮಯದಿ ಆ ರಾಣಿ ವರ್ಗವ ಥರ ಥರ ನಡುಗಿಸುವಿ 4 ಅಕ್ಕರದಲಿ ಎರಡೆಕ್ಕದೊಳು ಬಂದು ಪಕ್ಕನೆ ನೀ ಎನ್ನ ಕೈಯೊಳು ಬಾರೆ ಮುಕ್ಕಣ ಸಖ ತನ್ನ ಬೊಕ್ಕಸದೊಳಗಿನ ರೊಕ್ಕ ಹಾಕಲು ಅವನ ಲೆಕ್ಕಸೆ ನಮ್ಮ 5 ಕಾಮಿತ ದಾಯಿನಿ ಕಾಮಿನಿ ಶಿರೋಮಣಿ ಶಾಮಸುಂದರ ಸಾರ್ವಭೌಮನ ರಾಣಿ ಶ್ರೀಮಂತ ಜೋಕರನ ಪ್ರೇಮದ ಭಗಿನಿಯೆ ನಾ ಮೊರೆ ಹೊಕ್ಕೆನು ನೀ ದಯಮಾಡು ತಾಯೆ 6
--------------
ಶಾಮಸುಂದರ ವಿಠಲ