ಒಟ್ಟು 14553 ಕಡೆಗಳಲ್ಲಿ , 132 ದಾಸರು , 6967 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ನೀಲಮೇಘಶ್ಯಾಮರಾಮನಿಖಿಳಲೋಕ ಕ್ಷೇಮಧಾಮ ಪ.ಪಾಲಿಸೊಲಿದು ಹನುಮಪ್ರೇಮಪಾವನಾತ್ಮ ಸೀತಾರಾಮ ಅ.ಪ.ಸತ್ಯಸಂಕಲ್ಪಾನುಸಾರಚಿತ್ತಚಿನ್ಮಯಾತ್ಮ ಶ್ರೀಧರನಿತ್ಯಮುಕ್ತ ಪುಣ್ಯನಾಮಪ್ರತ್ಯಗಾತ್ಮ ಪೂರ್ಣಕಾಮ 1ಕಮಲನಾಭ ರವಿಶತಾಭಸುಮನಸಾರ್ಚಿತಾಂಘ್ರಿಶೋಭಅಮಿತವಿಕ್ರಮ ಸಮರಭೀಮಶಮಲಶಮನ ಸಾರ್ವಭೌಮ 2ಶಾರದೇಂದುಸನ್ನಿಭಾನನಮಾರುತಿಹೃದಯೈಕಸದನಧೀರಲಕ್ಷ್ಮಿನಾರಾಯಣಸೂರಿಜನೋದ್ಧರಣನಿಪುಣ 3
--------------
ಪಾವಂಜೆ ಲಕ್ಷ್ಮೀನಾರ್ಣಪ್ಪಯ್ಯ
ನೆಚ್ಚಬೆÉೀಡ ಭಾಗ್ಯವನು ಹುಟ್ಟುಗೊಂಡ ಮನುಜಾವೆಚ್ಚವಾಗಿ ಹೋಗುವುದು ಏಸೊಂದು ಬಗೆಯಲಿ ಪ.ಮುತ್ತು - ಮಾಣಿಕ - ನವರತ್ನದ ಗದ್ದುಗೆಯುಎತ್ತ ನೋಡಲು ಸಿರಿಕೋ ಎನುತಲಿಸತ್ಯ ಹರಿಶ್ಚಂದ್ರ ಮತ್ತೆ ಸುಡುಗಾಡಿನಲ್ಲಿಎತ್ತುವ ಹಣೆಯಕ್ಕಿ ಹಾಗದ ಕಾಸ 1ದೇವತೆಗಳ ಕೈಯ ಸೇವೆಯ ಕೊಳುತಿರ್ದರಾವಣನ ಬದುಕು ಮತ್ತೇನಾಯಿತು?ಜೀವದ ಪರಿಯರಿತು ನಾವು ದೊರೆಯೆಂಬುವುದೆಸಾವಿನ ಮನೆಹೊಕ್ಕು ಸಾಹಸ ಪಡಲೇಕೆ 2ಹದಿನೆಂಟುಕೋಟಿ ಧನ ಉದಯಕೆ ಬರುತಿರಲುಒದಗಿತೆ ಆ ರಾಶಿ ದಿನ ಕರ್ಣಗೆ ?ತುದಿ ಮಧ್ಯಾಹ್ನಕ್ಕೆ ದರಿದ್ರನೆನಿಸುವಇದರಿಂದ ಕಡೆಗಂಡರಾರು ಜಗದೊಳಗೆ ? 3ಬೆಳ್ಳಿಯ ಗಿಣಿಲು ಬಂಗಾರದಹರಿವಾಣಕುಳಿತಲ್ಲಿ ಕನಕದ ರಾಶಿಗಳುಗಳಿಗೆಗೆ ಈ ಭಾಗ್ಯ ಕಾಳಬೆಳುದಿಂಗಳುಉಳಿದವು ನಾ ಕಾಣೆ ಚಿರಲಕ್ಷ್ಮಿಯೆನಲು 4ಇಂತು ಈ ಪರಿಯಲನಂತರು ಹೋದರುಎಂತು ಪೇಳಲಿಅವರ ಪೆಸರುಗಳ ?ಚಿಂತಾಯತ ಶ್ರೀ ಪುರಂದರವಿಠಲನಸಂತತ ಪಾದಕಮಲವ ಭಜಿಸೊ ಮನುಜಾ 5
--------------
ಪುರಂದರದಾಸರು
ನೆನೆ ಮನವೆ ದಾನವಾರಿಯಹಿತಕಾರಿಯಾಶ್ರಿತ ದೊರೆಯ ಪ.ಹೀನ ಪಾಪಾಖ್ಯ ವಿಪಿನದಾವಕೃಶಾನುಸನಾತನ ನಾರಾಯಣ ಶ್ರೀನಾಥನ 1ಘೋರನಿರಯವಿದೂರ ಕರುಣಾಪಾರವಾರಿಜಾಸನ ವಂದ್ಯ ಸುರಶ್ರೇಷ್ಠನ 2ತನ್ನವರಿಗೆ ಪ್ರಸನ್ನವೆಂಕಟಕೃಷ್ಣಮನ್ಯ ಸದ್ಭಕ್ತರಪಾವನ್ನನಾಮನ3
--------------
ಪ್ರಸನ್ನವೆಂಕಟದಾಸರು
ನೆನೆಯಿರೊ ಭಕುತ ಜನರು-ಅನುದಿನವೂನೆನೆಯಿರೊ ಭಕುತ ಜನರುಗಳು ಪಘನಮಹಿಮನ ಸೇವೆಯ ಮಾಡಿದರಾಮನದಲಿ ನೆನೆದ ಅಭೀಷ್ಟವೀವ ಹನುಮಂತ ಅ.ಪಒಂದು ಯುಗದಿ ಹನುಮಂತಾವತಾರನಾಗಿಬಂದು ನೆರೆದಯೋಧ್ಯಾಪುರಕಾ ||ಬಂದ ಧೀರನ ನೋಡಿ ಸುಜನರೆಲ್ಲ-ನಂದದಿಂದಲಿ ಪಾಡಿ 1ವಾಯು ಕುಮಾರಕ ದ್ವಾಪರದಲಿ ಭೀಮ-ರಾಯನೆಂದೆನಿಸಿದ ಕೌರವ ಬಲದಿ ||ನಾಯಕನಾಗಿ ಬಂದ ದುಃಶಾಸನ-ಕಾಯವಳಿದು ನಿಂದ 2ಕಾಯಜಪಿತನ ಮುಂದೆ ಕೌರವರ ತಂದು ರಾಜ-ಸೂಯಯಾಗವ ಮಾಡಿದ ಬಲವಂತ ||ರಾಯರಾಯರ ಧೀರ-ಹನುಮಂತ-ಪ್ರಿಯ ಜನ ಮಂದಾರ 3ಗುರುಮಧ್ವಮುನಿಯಾಗಿ ಹರಿಗತಿಪ್ರಿಯನಾಗಿ-ಕರುಣಾಕರನಾಗಿ ಶರಣರ ಪೊರೆವ ||ಮೆರೆವ ಶ್ರೀ ಹನುಮಂತನ-ದೇವನ ಸ್ಮರಿಸಿರೊ ಗುಣವಂತನ 4ಲಂಕಾಪಟ್ಟಣದ ಸಮೀಪ ಸಮುದ್ರ ದಾಟಿಪಂಕಜನಾಭಶ್ರೀ ಪುರಂದರವಿಠಲನಲೆಂಕ ರಾವಣನ ಗೆದ್ದ-ಈ ಹನುಮಂತ-ಪಂಕಜಮುಖಿಯ ಕಂಡ 5
--------------
ಪುರಂದರದಾಸರು
ನೆನೆವೆನುಅನುದಿನನಿಮ್ಮ ಮಹಿಮೆಯನು-ಮಧ್ವರಾಯಾ |ಸನಕಾದಿ ಮುನಿವೃಂದ ಸೇವಿತ ಪಾದಾಬ್ಜ-ಮಧ್ವರಾಯಾ ಪಕಲಿಮಲದಿ ಙ್ಞÕನ ಕಲುಷಿತವಾಗಲು ಮಧ್ವರಾಯಾ |ನಳಿನಾಕ್ಷನಾಜೆÕಯಿಂದಿಳೆಯೊಳಗುದಿಸಿದೆ-ಮಧ್ವರಾಯಾ 1ಗೋವಿತ್ತ ವಿಪ್ರಗೆ ನಿರುತ ಮೋಕ್ಷವನಿತ್ತ-ಮಧ್ವರಾಯಾ |ಜೀವೇಶರೊಂದೆಂಬ ಮತವ ಭೇದಿಸಿದೆ-ಮಧ್ವರಾಯಾ 2ಸೂತ್ರಾರ್ಥಂಗಳನೆಲ್ಲ ವೇತೃಗಳಿಗೆ ತಿಳಿಸಿ-ಮಧ್ವರಾಯಾ |ಶಾಸ್ತ್ರದ ತಾತ್ಪರ್ಯ ಪ್ರಕರಣ ರಚಿಸಿದೆ-ಮಧ್ವರಾಯಾ 3ಸುಜನರ ಹೃದಯದಿ ಸೇರಿದ್ದ ತಮಸಿಗೆ-ಮಧ್ವರಾಯಾ |ನಿಜ ಙ್ಞÕನ ರವಿಯಂತೆ ಕಿರಣವ ಹರಡಿದೆ-ಮಧ್ವರಾಯಾ 4ವ್ಯಾಸದೇವರಿಗಭಿವಂದಿಸಿ ಬದರಿಯಲಿ-ಮಧ್ವರಾಯಾ ||ಶ್ರೀಶಪುರಂದರವಿಠಲ ದಾಸನಾದೆ-ಮಧ್ವರಾಯಾ 5
--------------
ಪುರಂದರದಾಸರು
ನೆಲದಲ್ಲಿ ಪಸರಿಸಿದ ಪಾಲಮೇಲೊರಗಿದ್ದಹಳೆಯ ಹಾವ ಕಂಡೆನದರಲದ್ಭುತವ ಕಂಡೆ ಪ.ನಡುಗಡಿದ ಸಿಂಗಡಿಯ ಬಿಲ್ಲ ಕಂಡೆನದರಮೇ-ಲ್ಗಡೆಯಲಧೋಮುಖದ ತುಂಬಿಗಳ ಹಿಂಡ ಕಂಡೆಮಡುವೆರಡ ಕಡೆಯಲ್ಲಿ ಒಂದೊಂದು ಮಕರಿಯ ಕಂಡೆಕಡೆದ ಶಂಖ ಚತುರ್ವೇದಕೊದಗುವುದ ಕಂಡೆ 1ಪದುಮದೆಸಳ್ಗಳಿಗೆ ಮೂರು ವಿಧದ ಬಣ್ಣವ ಕಂಡೆಮೃದುವಾದ ಕೂರ್ಮಗಳ ಬೆನ್ನಸೊಬಗ ಕಂಡೆಮಧುರ ಪವಳೊಳಗೆ ಪುಟ್ಟ ಕರಡಿಗೆಯ ಕಂಡೆಅಧೋಮುಖದ ಸಂಪಿಗೆಗೆರಡು ವಿವರವ ಕಂಡೆ 2ನೇಲುತಿದ್ದ ಲತೆಗಳ ತುದಿಯ ಜಾಲವ ಕಂಡೆ ವಿ-ಶಾಲವಾದ ನೀಲಮಣಿಯ ಹಲಗೆಯಲಿ ಹೆಣ್ಣ ಕಂಡೆಏಳು ಲೋಕಗಳೊಳಗೆ ಪುಟ್ಟ ಕರಡಿಗೆಯ ಕಂಡೆಈ ಲೋಕವ ಮೋಹಿಸುವ ಮೂರು ಚಿನ್ನದಕೋಲಕಂಡೆ3ಬಾವಿಯೊಳು ಪುಟ್ಟಿಕೊಂಡ ಸ್ಥೂಲ ಪದ್ಮವ ಕಂಡೆಭಾವಿಸೆ ಕರಿಯಿಲ್ಲದ ಕುಂಭಸ್ಥಳವ ಕಂಡೆಆವಾಗಳಿವಿಲ್ಲದಕದಳಿಕಂಬಗಳ ಕೆಳಗೆಈ ವಸುಧೆಯ ಮೋಹಿಸುವೆರಡು ಕನ್ನಡಿಗಳ ಕಂಡೆ 4ಬೆಳೆದೆರಡು ಗಜದಂತಗಳ ಕಂಡೆ ನಳನಳಿಪನಳಿನಯುಗ್ಮವ ಕಂಡೆನದರೆಸಳುಗಳಲ್ಲಿತೊಳೆದ ಹತ್ತು ಮುತ್ತುಗಳ ಕಂಡೆ ಬೇಗದಲಿ ಶ್ರೀ-ಲಲನೆಯಾಳ್ದ ಹಯವದನನಾಳ್ಗಳೆ ಬಲ್ಲರೈಸೆ 5
--------------
ವಾದಿರಾಜ
ನೆಲೆಸೆನ್ನ ಹೃದಯ ಮಂದಿರದಿ - ಶ್ರೀ ಹರಿಯೆ ನೀ |ಸಲಿಸೆಮ್ಮ ಮನದಿಷ್ಟಅನುದಿನ ದಯದಿಪಸಿರಿಮಿಂಚಿ ಮರುತ್ಯುಪರ್ಣ ಪು - |ರಾರಿವಂದಿತಚರಣಸರಸಿಜ ||ಪರಮಭಕ್ತ ಪ್ರಹ್ಲಾದ ನಾರದ |ವರಪರಾಶರ ಮುಖಸುಸನ್ನುತ ಅ.ಪನಾರುವಿ ಭಾರವ ಪೊರುವಿ - ಬಲು - |ಬೇರುಗಳನೆ ಕಿತ್ತು ಮೇಲುವಿ -ಕರಿ - |ವೈರಿ ರೂಪಗೊಂಡ ಗರುವಿ - ಬ್ರಹ್ಮ - |ಚಾರಿ ಖಳರ ಕತ್ತರಿಸುವಿ |ವೀರದಶರಥಸುತ ಸುರಾರ್ಚಿತ |ಜಾರತನದಲಿ ವ್ರತವ ಕೆಡಿಸುತ |ತೋರಿ ಮೆರೆವನೆತರಳ ಬಲು ಗಂ - |ಭೀರ ಕುದುರೆಯನೇರಿ ಮೆರೆವನೆ 1ಅನಿಮಿಷ ಮಂದರೋದ್ಧರಣ - ನೀನಾ - |ವನಗಪಂಚಾನನವದನ - ವಾ - |ಮನ ದಾನವರ ಕೊಯ್ವಕದನ - ಹೀನ - |ದನುಜರಾವಣ ಸಂಹರಣ ||ಧೇನುಕಾಸುರ ಶಕಟಮರ್ದನ |ಜಾÕನದಾನ ವಿಡಂಬನಾನಕ |ಭಾನುಮಸ್ತಕ ನೀಲವರಕರ |ದೀನಜನಸಂತ್ರಾಣ ನಿಪುಣನೆ 2ಮಚ್ಛಕಚ್ಛಪ ಸ್ವಚ್ಛಕಿರನೆ - ಬಲು - |ಅಚ್ಚ ಶಿಶುಮೊರೆ ಕೇಳಿದವನೆ ||ಸ್ವೇಚ್ಛೆಯವಟು ಪರಶುಕರನೆ - ರಾಮ - |ವತ್ಸಾಸುರನ ವಧಿಸಿದವನೆ ||ತುಚ್ಛ ಜನರಿಗೆ ಕಪಟಕಾರಣ |ಹೆಚ್ಚಿನಶ್ವದ ಮೇಲೆ ಹೊಳೆವನೆ |ಮೆಚ್ಚಿಪುರಂದರ ವಿಠಲನಪರ - |ಮಾಚ್ಯುತದ ಪದವೀವ ದೇವನೆ 3
--------------
ಪುರಂದರದಾಸರು
ನೈವೇದ್ಯವ ಕೊಳ್ಳೊ ನಾರಾಯಣಸ್ವಾಮಿದಿವ್ಯ ಷಡುರಸಾನ್ನವನಿಟ್ಟೆನೊ ಪ.ಘಮಘಮಿಸುವ ಶಾಲ್ಯನ್ನ ಪಂಚಭಕ್ಷ್ಯಅಮೃತಕೂಡಿದ ದಿವ್ಯ ಪರಮಾನ್ನವು ||ರಮಾದೇವಿಯು ಸ್ವಹಸ್ತದಿ ಮಾಡಿದ ಪಾಕಭೂಮಿ ಮೊದಲಾದ ದೇವಿಯರ ಸಹಿತ ತಾನು 1ಅರವತ್ತು ಶಾಕ ಲವಣ ಶಾಕ ಮೊದಲಾದಸರಸ ಮೊಸರುಬುತ್ತಿ ಚಿತ್ರಾನ್ನವಪರಮ ಮಂಗಳ ಅಪ್ಪಾಲು ಅತಿರಸಗಳಹರುಷದಿಂದಲಿ ಇಟ್ಟ ಹೊಸ ತುಪ್ಪವ 2ವಡೆಯಂಬೋಡಿಯು ದಧಿವಡೆಯ ತಿಂಢಿಣಿಒಡೆಯಸೆ ಬಡಿಸಿದೆ ಅಧಿಕವಾಗಿ ||ದೃಢವಾದ ಪಡಿಪದಾರ್ಥವನೆಲ್ಲ ಇಡಿಸಿದೆಒಡೆಯ ಶ್ರೀ ಪುರಂದರವಿಠಲ ನೀನುಣ್ಣೊ 3
--------------
ಪುರಂದರದಾಸರು
ನೋಡಬಾರದೆ ಕೃಷ್ಣಾ ಕರುಣದಿನೋಡಬಾರದೆ ಕೃಷ್ಣಹಾಡಿ ಹರಸಿ ನಿನ್ನನೆ ಹೊಗಳುವಪರಿಮಾಡಬಾರದೆ ಹರಿಯೆ ಪ.ಹಾನಿ ಹಿತಗಳನರಿಯೆ ಸುಜ್ಞಾನ ಭಕುತಿಗಳರಿಯೆದೀನ ದೇಶಿಗನುದ್ಧರಿಸೆಲೆ ದೇವಸಾನುರಾಗದಿ ದೇವ 1ಏಸುಜನ್ಮದಿ ಬಂದೆ ನಾಘಾಸಿಯಾದೆನೊ ತಂದೆದಾಸರೊಳು ಆವಕಾಲಭಿಲಾಷೆಯುಳ್ಳ ಶ್ರೀಲೋಲ 2ಏನು ಹೇಳಲಿ ಮನವು ನಿನ್ನಧ್ಯಾನಕೊದಗದು ಕ್ಷಣವುತಾನೆ ಹರಿದಡೆ ಕೇಡು ಅದರಿಂದಪ್ರಾಣನಾಥ ಮುಕುಂದ 3ಕುಂಬಳವು ಕೈಗತ್ತಿ ಕರಾಂಬುಜಕೆ ನಿನಗಿತ್ತೆನಂಬಿದವಗಿನ್ನೇನಾರೆ ಮಾಡಯ್ಯಅಂಬುಜಜ ಸ್ಮರರಯ್ಯ 4ಕಿಂಕರೌಘದೊಳಿಡೊ ನಿಶ್ಶಂಕನೆ ದಯಮಾಡೊಪಂಕಜಾಕ್ಷ ಮುರಾರಿ ಪ್ರಸನ್ನವೆಂಕಟಾದ್ರಿಪಾವನ್ನ5
--------------
ಪ್ರಸನ್ನವೆಂಕಟದಾಸರು
ನೋಡಿದೆ ಮನದಣಿಯೆ ಶ್ರೀನಿವಾಸನನೋಡಿದೆ ಮನದಣಿಯೆ ಪ.ನೋಡಿದೆನು ಶೇಷಾದ್ರಿಯಿಂದೊಡ-ಗೂಡಿ ಭಕ್ತರ ಬೀಡಿನೊಳು ನಲಿದಾಡಿ ಮೆರೆವ ಸಗಾಢ ದೈತ್ಯವಿಭಾಡ ಶ್ರೀಹರಿ ರೂಢಿಗೊಡೆಯನ ಅ.ಪ.ಶರಣರಪೇಕ್ಷೆಯನು ಕೊಟ್ಟುಳುಹಲುಕರುಣಾಳು ನಿಜದಿ ತಾನುಸ್ಥಿರತೆಯೊಳು ಸ್ವಪ್ನದಲಿ ತಾ ಗೋಚರಿಸಿ ಭರವಸೆಯಿತ್ತು ವೆಂಕಟಗಿರಿಯವೋಲ್ ಸಾನ್ನಿಧ್ಯ ವದನಾಂ-ಬುರುಹದಲಿ ಮೆರೆದಿಹನ ಚರಣವ 1ಲಲನೆಲಕ್ಷ್ಮಿಯು ಬಲದಿ ಶೋಭಿಪ ವಾಮದೊಳಗೆ ಗಣಪ ಮುದದಿಒಲವಿನಿಂ ಗರುಡಾಂಕ ಮೃದುಪದನಳಿನದಾಶ್ರಯದಿಂದ ವಾಯುಜಬಳಗ ಚಾತುರ್ದೇವತೆಯರಿಂ-ದೊಳಗೆ ಪೂಜೆಯಗೊಂಬ ದೇವನ 2ಕುಂಡಿಲಕೊಳದೊಳಿಹ ಪ್ರಾಣೇಶ ಮುಂ-ಕೊಂಡು ಪಟ್ಟಣಕೆ ಬಹಕೆಂಡದಂದದೊಳುರಿವ ಶತಮಾ-ರ್ತಾಂಡದೀಪ್ತಾ ಮುಖಂಡ ಭೃತ್ಯನಕೊಂಡುಯಿದಿರಲಿ ಮಂಡಿಸಿದನಖಿಳಾಂಡಕೋಟಿ ಬ್ರಹ್ಮಾಂಡನಾಥನ 3ನೀಲಮೇಘಶ್ಯಾಮಲ ಕೌಸ್ತುಭವನಮಾಲಕಂಧರಶೋಭನನೀಲಮಾಣಿಕವಜ್ರಮುತ್ತಿಸಾಲ ಸರ ಪೂಮಾಲೆಗಳ ಸುಖಲೀಲೆಯಿಂದೊಪ್ಪಿರುವ ಭಕ್ತರಕೇಳಿಯಲಿ ನಲಿದಾಡುತಿಹನನು 4ಕಾಣೆನು ಪ್ರತಿನಿಧಿಯ ನಮ್ಮೊಡೆಯ ಲ-ಕ್ಷ್ಮೀನಾರಾಯಣ ಹರಿಯಕಾಣಿಕೆಯ ಕಪ್ಪಗಳ ತರಿಸುತಮಾನಿಸುತ ಭಕ್ತಾಭಿಮತವನುತಾನೆ ಪಾಲಿಸಿ ಮೆರೆವ ಕಾರ್ಕಳಶ್ರೀನಿವಾಸ ಮಹಾನುಭಾವನ 5
--------------
ಪಾವಂಜೆ ಲಕ್ಷ್ಮೀನಾರ್ಣಪ್ಪಯ್ಯ
ನೋಡಿರೆ ಯಶೋದೆಯ ಪುಣ್ಯಪಡೆದಿಹ್ಯಳೆಂಥ ಮಾನ್ಯ ಪಪೊಡವಿ ಈರೇಳನ್ನು ಒಡಲೊಳಿಟ್ಟವನನ್ನುತೊಡೆಮೇಲಾಡಿಸುವಳು ಅ.ಪವಿಲಸಿತಮಹಿಮನ ಕಳೆಯ ತಿಳಿಯಲು ವೇದಬಲುವಿಧ ಪೊಗಳುತ ನೆಲೆಯುಗಾಣದಘನಕಳವಳಗೊಳುತಿಹ್ಯವಭವನ ದೆಸೆಯಿಂಸುಲಭದೆತ್ತಿ ತನ್ನ ಮೊಲೆಯನುಣಿಸುವಳೀಕೆ 1ಭುಜಗಭೂಷನು ತನ್ನ ನಿಜಪದವನುದಿನಭಜಿಸಿ ಬೇಡಲು ಕಾಣರಜಸುರಮುನಿಗಣಸುಜನಗುಣಾಂತರಂಗ ತ್ರಿಜಗವ್ಯಾಪಕನನಿಜವನು ಮನದಣಿ ಕಂಡು ಹಿಗ್ಗಿದಳೀಕೆ 2ಸೀಮರಹಿತಮಹಿಮ ನಾಮರೂಪಿಲ್ಲದ ನಿಸ್ಸೀಮ ಸುಗುಣಸುಖಧಾಮ ಭೂಮಿಜೆಪತಿಸ್ವಾಮಿ ಶ್ರೀರಾಮನ ವಿಮಲದಾಟದಲಿಭೂಮಿಯೊಳ್ಮಿಗಿಲಾದಾನಂದೊಳಿಹÀಳೀಕೆ 3
--------------
ರಾಮದಾಸರು
ನೋಡುವ ಬನ್ನಿರಯ್ಯ ಪಕಾವೇರಿಯ ಭವಹಾರಿಯ |ಮುಕ್ತಿಕಾರಿಯ ನೋಡುವ ಬನ್ನಿರಯ್ಯ ಅ.ಪಮಾತೆಯ ನುತಜನಜಾತೆಯ ಹರಿಮನಃ |ಪ್ರೀತೆಯ ಭುವನವಿಖ್ಯಾತೆಯ ||ನೀತಿಯುನ್ನತಕರದಾತೆಯ ಶಿವನ ಸಂ-|ಭೂತೆಯ ನೋಡುವ ಬನ್ನಿರಯ್ಯ 1ಬಂದು ಸಕಲ ಮುನಿವೃಂದ ನೆರರೆಯೆ ವಿೂಯ-|ಲಂದು ನಾರದಮುನಿ ಪೊಗಳುತಿರೆ ||ಸಂದೇಹವಿಲ್ಲ ನೋಡಿದಡೆ ಮುಕುತಿಯಹು-|ದೆಂದರೆ ಮುಳುಗಲದೇತಕಯ್ಯ? 2ಅರ್ಕಚಂದ್ರವಹ್ನಿಪುಷ್ಕರದೊಳು ಮಿಂದು |ಚಕ್ರತೀರ್ಥದೊಳಗೋಲಾಡಿ ||ಗಕ್ಕನೆ ಸದ್ಗತಿಯಹುದೆಂದು ಮನೆಗಳ |ಕಕ್ಕುಲತೆಯ ಬಿಟ್ಟು ನಡೆಯಿರಯ್ಯ 3ಕಂಡರೆ ಸಕಲಪಾತಕಪರಿಹಾರ, ಪಡೆ-|ದುಂಡರೆ ದುರಿತ-ದುರ್ಜನ ದೂರವು ||ಕೊಂಡಾಡಿದವರಿಗನಂತ ಫಲವು ನೀ-|ರುಂಡರೆ ಭವಬಂಧ ಮೋಕ್ಷವಯ್ಯ 4ಗಂಗೆ-ಯಮುನೆಗೆ ಹೋದಡೆ ಮೂರೈದುದಿ-|ನಂಗಳಿಗಹುದು ಮುಕುತಿಯೆಂದಡೆ ||ಹಿಂಗದೆ ಕಾವೇರಿಯ ನೋಡಿದಾಕ್ಷಣ ಪಾ-|ಪಂಗಳಿರದೋಡಿ ಪೋಪುವಯ್ಯ 5ಯಾಗಾದಿ ಸ್ವರ್ಗಯೋಗದಿ ಪೊಕ್ಕು ಕಾಶಿಯೊಳು |ಆಗಲೆ ತನುವ ಬಿಡಲು ಮುಕುತಿ |ಭೋಗಿಶಯನನ ದಿನದಲಿ ಕಾವೇರಿಗೆ |ಹೋಗಿ ಮಿಂದವರಿಗಿದೇ ಗತಿಯಯ್ಯ 6ಕಾವೇರಿಯ ಗಾಳಿ ಸೋಕಿದ ದೇಶದೊ-ಳಾವಾವ ಮನುಜರು ಸುಕೃತಿಗಳೇ ||ಕಾವೇರಿಯ ತೀರವಾಸಿಗಳಿಗೆ ಮಕ್ತಿಆಹೋದು ಸಂದೇಃವಿಲ್ಲವಯ್ಯ 7ಆವಾವ ಜನ್ಮಕರ್ಮಂಗಳು ಸವೆವರೆಕಾವೇರಿಯ ಕಾಡು ಸುಖಬಾಳಿರೈ ||ಶ್ರೀವರ ಸ್ವಾಮಿ ಶ್ರೀಪುರಂದರವಿಠಲನಸೇವೆಯೊಳನುದಿನವಿಪ್ಪುದಯ್ಯ 8
--------------
ಪುರಂದರದಾಸರು
ನೋಡುವುದೆ ಕಣ್ಣು, ಕೇಳುವುದೆ ಕಿವಿ |ಪಾಡುವುದೇವದನಪಗಾಡಿಕಾರಶ್ರೀ ವೇಣುಗೋಪಾಲನ |ಕೂಡಿಕೊಂಡಾಡುವ ಸುಖದ ಸೊಬಗನು ಅ.ಪಎಳೆದುಳಸಿಯ ವನಮಾಲೆಯಿಂದೊಪ್ಪುವ |ಎಳೆಯ ಗೋವಳರೊಡನಾಡುವ |ತಳಿತ ತರುವಿನ ನೆಳಲಲ್ಲಿ ನಲಿವನ |ನಳಿನನಾಭನ ಮುದ್ದು ನಗೆಯ ಸೊಬಗನು 1ಅರಸಂಚೆಯೋಲು ಕುಣಿವ ನವಿಲಂತೆ ನಲಿಯುವ |ಮರಿಗೋಗಿಲೆಯಂತೆ ಕೂಗುವನ ||ಎರಳೆಯಂತೆ ಜಿಗಿಜಿಗಿದಾಡುವತುಂಬಿ|ಶಿರವ ತಗ್ಗಿಸುವಂತೆ ಝೇಂಕರಿಸುವನ 2ಮೊಲ್ಲೆಮಲ್ಲಿಗೆ ಜಾಜಿ ಪೂಮಾಲೆಗಳ ಧರಿಸಿ |ಚೆಲ್ವೆಯರಿಗೆ ಮುಡಿಸುವನ ||ಜಲಕೇಳಿ ವನಕೇಳಿ ಮೊದಲಾದಾಟಗಳಿಂದ |ಚೆಲ್ಲೆಗಂಗಳ ಮುದ್ದು ಘುಲ್ಲನಯನನ 3ಪೊಂಗೊಳಲೂದುತ ಮೃಗಖಗ ಜಾತಿಯ |ಸಂಗಡಿಸುತಲಿಪ್ಪನ ||ಅಂಗವ ಮರೆತು ನೂರಂಗನೆಯರಲಿ ಬೆಳು-|ದಿಂಗಳೊಳಗೆ ಕುಣಿದಾಡುವ ದೇವನ 4ಮುದುಕಿ ಕುಬ್ಜೆಯ ಡೊಂಕ ತಿದ್ದಿ ರೂಪಿಯ ಮಾಡಿ |ಸೆರಗಪಿಡಿಸಿ ಕೊಂಬನ ||ಕರುಣಾಕರ ಶ್ರೀ ಪುರಂದರವಿಠಲ |ಶರಣಾಗತ ರಕ್ಷಕ ರಮೆಯರಸನ 5
--------------
ಪುರಂದರದಾಸರು
ನ್ಯಾಯದ ನುಡಿ ನರಲೀಲೆಗಿದು ಬಲ್ಲವರಲಿ ಸಲ್ಲದುನ್ಯಾಯದ ನುಡಿ ನರಲೀಲೆಗಿದು ಪ.ಮಾಯಾತೀತ ಮನೋಭವತಾತ ಪರಾಯಣ ತವಗುಣನಾನೆಂತರಿವೆನುಅ.ಪ.ಬಲಿಯನು ಮೆಟ್ಟಿದಬಾಂಬೊಳೆಪುಟ್ಟಿದಪಾದಶ್ರೀದಚೆಲುವೆ ರಮಾಕರನಳಿನಾಶ್ರಯಕರಮಾದಜಲಜಭವಾದಿ ಸುರಾಳಿಗಳರ್ಚಿಪಸುಲಲಿತ ತವ ಪದದೊಲವೆಂತರಿವೆನು 1ಶರಣಾಗತಜನ ದುರಿತನಿವಾರಣ ನೀನು ಇನ್ನೇನುತರುಣೀಮಣಿಯಳ ಸೆರೆಯನು ಬಿಡಿಸುವದಿನ್ನುಕರುಣಾಕರ ನಿನ್ನ ಸ್ಮರಿಸುವಳನುದಿನಸ್ಥಿರಚರಜೀವಾಂತರ ಪರಿಪೂರ್ಣನೆ2ಆಕ್ಷೇಪಿಸದಿರು ರಕ್ಷಿಸು ರಘುಕುಲಚಂದ್ರ ರಾಜೇಂದ್ರಲಕ್ಷ್ಮೀನಾರಾಯಣ ಸದ್ಗುಣ ಗಣಸಾಂದ್ರಈಕ್ಷಿಸು ಕರುಣಾಕಟಾಕ್ಷದಿ ಪೂರ್ವದಲಕ್ಷಣ ಹೊಂದಲಿ ಲಕ್ಷ್ಮಣಾಗ್ರಜನೆ 3
--------------
ಪಾವಂಜೆ ಲಕ್ಷ್ಮೀನಾರ್ಣಪ್ಪಯ್ಯ
ಪಂಕಜ ಮುಖಿಯರೆಲ್ಲರು ಬಂದು ಲಕ್ಷ್ಮೀ<?xmಟ veಡಿsioಟಿ='1.0' eಟಿಛಿoಜiಟಿg='uಣಜಿ-8'?>ವೆಂಕಟರಮಣಗಾರತಿಯತ್ತಿರೆ ಪ.ಮತ್ಸ್ಯಾವತಾರಗೆ ಮಂದರೋದ್ಧಾರಗೆಉತ್ಸಾಹದಿ ಭೂಮಿ ತಂದವಗೆ ||ವತ್ಸಗಾಗಿ ಕಂಬದಿಂದಲಿ ಬಂದಉತ್ಸವ ನರಸಿಂಹಗಾರತಿಯೆತ್ತಿರೆ 1ವಾಮನ ರೂಪದಿ ದಾನ ಬೇಡಿದವಗೆನೇಮದಿ ಕೊಡಲಿಯ ಪಿಡಿದವಗೆ ||ರಾಮನಾಗಿ ದಶಶಿರನನು ಕೊಂದಸ್ವಾಮಿ ಶ್ರೀ ಕೃಷ್ಣಗಾರತಿಯೆತ್ತಿರೆ 2ಬತ್ತಲೆ ನಿಂತಗೆ ಬೌದ್ಧಾವತಾರಗೆಉತ್ತಮ ಅಶ್ವವನೇರಿದಗೆ ||ಭಕ್ತರ ಸಲಹುವ ಪುರಂದರವಿಠಲಗೆಮುತ್ತೈದೆಯರಾರತಿಯೆತ್ತಿರೆ 3
--------------
ಪುರಂದರದಾಸರು