ಒಟ್ಟು 2228 ಕಡೆಗಳಲ್ಲಿ , 112 ದಾಸರು , 1537 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ನೆನಿಯಬಾರದೆ ಮನವೆ ಹರಿಯ ನಾಮವ ನೆನವು ಸೆಲೆಗೊಳ್ಳಲಿಕ್ಕೆ ಘನಪದವನೀವ ಸ್ವಾಮಿ ಧ್ರುವ ಅಂತು ಇಂತು ಎಂತು ಎನದೆ ತಂತು ಪಿಡಿದು ತನುವಿನೊಳು ಪಾದ 1 ಶ್ರವಣ ಕೀರ್ತನೆ ಮೊದಲಾದ ನವವಿಧ ಭಕುತಿಯಿಂದ ಸವಿದು ಸವಿದು ಸವಿದುಂಬ ಸಾರವಾದ ದಿವ್ಯನಾಮ 2 ಧನ್ಯ ಧನ್ಯನಾಗೊ ಮನವೆ ನೆನೆದು ಪತಿತಪಾವನನಾಮ ಧನ್ಯಗುರುವಿನ ದಿವ್ಯನಾಮ 3
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ನೆನೆದು ನಿಷ್ಕಳಂಕರಾಗಿರೋ ಪಂಕಜಾಕ್ಷನ ಕೂಡ ದ್ವೇಷ ಬಳಿಸುವ ಮಾಯಿ ಪ ಮಲವಿಸರ್ಜನೆಯಾಗುವಾಗ ಮೂತ್ರವನು ಬಿಡುವಾಗ ಹೊಲಗೇರಿಯೊಳಗೆ ಸುಳಿದಾಡುವಾಗ ಹೊಲಿಯಾದವನು ತನ್ನ ಎದುರಿಗೆ ಬರುವಾಗ ಕಲಿಶಿಷ್ಯನಾದ ಮಣಿವಂತನ ನೆನೆಸಿರೊ1 ಶ್ರದ್ಧವನು ಬಿಡುವಾಗ ಸ್ವಪ್ನದೊಳಗೆ ಇಂದ್ರಿಯ ಬಿದ್ದು ಹೋಗುವಾಗ ಉಗುಳುವಾಗ ಗುಹ್ಯ ತೊಳೆಯುವಾಗ ಅಪ್ರ ಬದ್ಧನಾದ ಏಕಲವ್ಯನ ನೆನೆಯಿರೋ 2 ಶುದ್ಧ ಅಶುದ್ಧವನು ತುಳಿದು ನೆಲಕ್ಕೆ ವರಸುವಾಗ ವಮನವಾಗುವಾಗ ಮರಿಯದಲೆ ಅಮಲ ಸುಖ ಮುನಿ ಗುರು ವಿಜಯವಿಠ್ಠಲ ವೈದು ತಮಕೆ ಹಾಕುವ ಶುದ್ಧ ಕುಮತಿಯನು ನೆನೆಯಿರೋ 3
--------------
ವಿಜಯದಾಸ
ನೆನೆಯ ಬಾರದೆ ಮನವೆ ಪರಮಪಾವನನ ಪ ಸಾಕಾರದಿಂದ ಸರ್ವವನು ರಕ್ಷಿಪನಜೋಕೆಯಲಿ ತನ್ನ ನೆನೆವವರ ಪಾಲಿಪನ - ಅ-ನೇಕ ಮೂರುತಿ ಸೂರ್ಯನಾರಾಯಣನ 1 ಬ್ರಹ್ಮಾಂಡ ಕೋಟಿ ತಿಮಿರವ ಗೆಲುವವನಒಮ್ಮೆ ನೆನೆಯಲು ಪ್ರಸನ್ನನಾದವನಧರ್ಮಕ್ಕೆ ಸಾಕ್ಷಾತ್ ರೂಪಾಗಿ ತೋರುವನನಿರ್ಮಲಾತ್ಮಕವಾಗಿ ಥಳಥಳಿಸುವವನ 2 ಹರಗೆ ನಯನವಾಗಿ ಮಕುಟವ ಬೆಳಗುವನತರುಣಿಯೈವರ ಲಜ್ಜೆ ಕಾಯ್ದವನದುರಿತಕೋಟಿಗಳನುದ್ಧರಿಸುವವನಪರಬ್ರಹ್ಮ ಕಾಗಿನೆಲೆಯಾದಿಕೇಶವನಮರೆಯದೆ ಭಜಿಪರ ಕಾಯುವವನ 3
--------------
ಕನಕದಾಸ
ನೆನೆಸು ಮನವೆ ನಲಿವಿನಿಂದಲಿ ನೆನೆಸು ಮನವೆ ನಲಿವಿನಿಂದಲಿ ಮನಸಿಜನ್ನ ಪೆತ್ತ ಹರಿಯ ವನಜ ಚರಣವನ್ನು ಹೃ ದ್ವನಜದೊಳಗೆ ನಿಲಿಸಿ ನಗುತ ಪ ಪ್ರಳಯದಲ್ಲಿ ವರ ರಮಾ ಕ ಳವ ತಾಳಿ ಲೀಲೆಯಲ್ಲಿ ಪೊಳವ ಕಂಗಳಿಂದ ಕಿಡಿ ಗಳನು ತೋರಿ ಕುಣಿವುತ ಜಲಜ ಪೀಠ ಸುರಪ ಪುಲಿದೊ ಗಲ ವಸನ ಉಳಿದ ಸುರರ ಅಳಿದು ಏಕಮೇವನಾಗಿ ನಲಿವ ನಾರಸಿಂಹನೆಂದು 1 ಜರಾಮರಣರಹಿತ ಸುಜ ನರನ ಕಾಯ್ದು ಕರುಣದಲ್ಲಿ ಜರಿದು ಅದ್ರಿಯಲ್ಲಿ ದನುಜರನ್ನು ಶೀಳಿ ವೇಗ ನಿ ಪರಮನೆಂದೆನಿಸಿ ಚರಿಸುತಿಪ್ಪ ಅರುಣಪ್ರಭೆಗೆ ಕೋಟಿ ಮಿಗಿಲು ಪರಮಪುರುಷ ಸಿರಿಧರನ್ನ 2 ಕೆಡದೆ ಪರಮ ಭಕುತಿ ಮಾರ್ಗ ವಿಡಿದು ಗರ್ವವೆಂಬ ಕವಚ ದುರುಳ ಚೇತನಕ್ಕೆ ಕೊಡದೆ ಮನಸು ವಿನಯದಿಂದ ಕಡಲಶಯನನಾದ ಒಡಿಯ ವಿಜಯವಿಠ್ಠಲನ್ನ ಬಿಡದೆ ನುಡಿಯೆ ಬಂದ ಅವ ಘಡವ ದಾಟಿಸು ವೊಲಿದು ಕಾಯುವಾ3
--------------
ವಿಜಯದಾಸ
ನೆರೆದು ಗೋಪಿಯರೆಲ್ಲರು - ಕೃಷ್ಣಯ್ಯನಕರವ ಪಿಡಿದುಕೊಂಡುಭರದಿಂದ ಬಂದು ಯಶೋದೆಗೆ ಚಾಡಿಯಅರುಹಿದರತಿ ವೇಗದಿ ಪ ಬಲು ಕಳ್ಳ ನಿನ್ನ ಮಗ - ಯಶೋದೆ ಕೇಳೆಹಾಲು ಕರೆಯುತಿರಲುತೊಲೆಗೆ ನಿಚ್ಚಣಿಕೆಯನೆ ಹಾಕದೆ ಸುರಿದನುನೆಲುವಿನ ಪಾಲ್ಮೊಸರ 1 ಅಮ್ಮಯ್ಯ ಇಲ್ಲ ಕಾಣೆ - ಇವಳು ಎನ್ನಸುಮ್ಮನೆ ದೂರುವಳೆಹಮ್ಮಿಂದ ನಾನವಳ ಅಟ್ಟಕ್ಕೆ ನೆಗೆಯಲುಬೊಮ್ಮ ಜಟ್ಟಿಗನೇನಮ್ಮ2 ಮತ್ತೆ ಮುತ್ತಿನಂಥ - ನಿನ್ನೀ ಮಗಹತ್ತಿ ಗವಾಕ್ಷದಿಂದಎತ್ತಿಟ್ಟ ಬೆಣ್ಣೆಯನೆಲ್ಲದ ಮೆದ್ದನುಹೆತ್ತ ಮಕ್ಕಳಿಗಿಲ್ಲದಂತೆ 3 ಗಡಿಗೆ ಬೆಣ್ಣೆ ಮೆಲ್ಲಲು - ಎನ್ನ ಹೊಟ್ಟೆಮಡುವು ಭಾವಿಯೇನೆಹುಡುಗರಿಗರಿಯದೆ ಎತ್ತಿಟ್ಟ ಬೆಣ್ಣೆಯಹೊಡೆದರವರ ಮಕ್ಕಳು 4 ಮರೆತು ಮಂಚದ ಮೇಲೆ - ನಾ ಮಲಗಿರಲುಹರಿವ ಹಾವನೆ ತಂದುಅರಿಯದಂತೆ ಬಂದು ಮುಸುಕಿನೊಳಗಿಟ್ಟುಸರಸರ ಪೋದನಮ್ಮ 5 ಹರಿದಾಡುವ ಹಾವನು - ನಾ ಹಿಡಿಯಲುತರಳ ನಾ ತಡೆಗಾರನೆಹರಕೆಯ ಹೊತ್ತುದನೊಪ್ಪಿಸದಿರಲುಗುರುತು ತೋರಲು ಬಂತೇನೊ6 ಕಕ್ಕಸ ಕುಚಗಳಮುಸುಕಿನೊಳಗೆ ಹಿಡಿದ 7 ಕೇಳು ಕೇಳೆಲೆ ಅವ್ವ - ಇವಳು ಬೇ-ತಾಳನಂತಿರುವಳುಬಾಲಕ ನಾನವಳುದ್ದಕೆ ನೆಗೆವೆನೆಜೋಲುವ ತೊಗಲಿಗಾಗಿ 8 ಮಕ್ಕಳು ಪಡೆದವರು - ಇಲ್ಲದ ಕಳವಿಕ್ಕಬಹುದೆ ಕೃಷ್ಣಗೆಸಿಕ್ಕ ತಪ್ಪು ಸಮೇತ ಎಳೆತಂದರೆತಕ್ಕ ಬುದ್ಧಿಯ ಹೇಳುವೆ 9 ಅಣುಘನರೂಪ ಕಾಣೆ - ನಿನ್ನೀ ಮಗಚಿನುಮಯ ರೂಪ ಕಾಣೆಘನ ಮಹಿಮನು - ಇಂಗಳಗೊಂದಿಯಚೆನ್ನಕೇಶವರಾಯ ಕಾಣೆ 10
--------------
ಕನಕದಾಸ
ನೆರೆನಂಬಿದವನೆ ಧನ್ಯಾ ಈ ಗುರುಪದ ಪ ನೆರೆನಂಬಿದವ ರಘತರಿವ ವೇದವ್ಯಾಸ ಕರ ಪಾದ ಅ.ಪ ವರಮಣಿಯೊಳು ಶಿರಿತನದಿಂದಲ್ಲಿ ಮೆರೆವ ನಾಯ ಕರ ಮಂದಿರದಿ ಜಾತರಾಗಿ ಪರಮ ಮಹಿಮರಾದ ಗುರು ರಘೋತ್ತಮರಿಂದ ಪರವಿದ್ಯೆಯನು ಪೊಂದಿ ಚರಿಸಿ ದಿಗಂತದಿ ವರವೇದ ವ್ಯಾಸರಿಂದ ತುರಿಯಾಶ್ರಮ ಪಡೆದು ಸಚ್ಚಿಷ್ಯರಿಂದÀ ಸಂತತ ಪ್ರವಚನ ಮಾಡುತಲಿ ಆನಂದ ತೀರ್ಥರ ಮತ ಶರಧಿಗೆ ಪೂರ್ಣ ಚಂದಿರನೆನಿ ಪರ ಪದ 1 ಯಾದವಾರ್ಯರಿಗೆ ಅಗಾಧ ಮಹಿಮರು ಈ ಪೂರ್ಣಬೋಧ ಗ್ರಂಥಾರ್ಥ ಗ್ರಂಥಗಳನ್ನು ಟೀಕಾ ಕೃ ಕೌವÀುುದಿಗಳನು ರಚಿಸಿದಂಥಾ ವಾದಿ ಮಾತಂಗ ಮೃಗಾಧಿಪರನ್ನು 2 ಕರೆದು ಶಿಷ್ಯರಿಗೆ ಹರಿ ಪಾದಂಗುಟದಿಂದ ಸುರನದಿಯನು ಸಾಕ್ಷಾ- ತ್ಕರಿಸಿ ತೋರಿಸಿದಂಥ ಗುರು ಕೃಷ್ಣದ್ವೈಪಾಯನ ತೀರ್ಥರಿಗೆ ಘನವಾದ ಮಹಿಮೆಯನಾ ಸುರತರು ಸಮ ಚರಣ 3 ವೃಂದಾವನದೆಡೆ ಒಂದು ಪ್ರದಕ್ಷಿಣಿ ವಂದನೆ ಮಾಡಲು ಮಂದನಾದರು ಪ್ರಾಜ್ಞನೆಂದು ಕರೆಸುವನು ವಂಧ್ಯೆಯಾದರು ಬಹುಕಂದರ ಪಡೆವಳುಸಂದೇಹವ್ಯಾಕಿಲ್ಲಿ ದೂರಮಾಡುತಲಿ ಆ ನಂದವ ಗರಿಯುವರ ಭಕ್ತರ ದುರಿತಾಂಧಕಾರಕ್ಕೆ ರವಿ ಯಂದದಲಿಪ್ಪರ 4 ವರಭೀಮಾತೀರದಿ ಪರಿಶೋಭಿಸುವ ಮಣಿ ಪುರದಿ ಪಂಡಿತ ಭೂಮಿ ಚರಣಾರಾಧಕರನು ಸುಮಂದಿರದಿ ಕುಳಿತು ನಿತ್ಯ ಮೂಲದಲಿ ಮೆರೆವ ಧೇನಿಸುತಿಪ್ಪ ಗುರುವೇದೇಶರ ಶುಭ ಚರಣ ಯುಗಲವ 5
--------------
ಕಾರ್ಪರ ನರಹರಿದಾಸರು
ನೆಲೆಯಾಗಿ ನಿಲಿಸೆನ್ನ ನಿಲಯದಿ ಶ್ರೀಕಾಂತ ಸಿರಿ ಲಲನೆಯರೊಡಗೂಡಿ ಪ. ಸೂಕ್ತ ಪುರಾಣ ಭಾರತಗಳು ಪೊಗಳುವ ಭಕ್ತ ವತ್ಸಲತೆಯ ಬಹುಮತಿಯ ನಿತ್ಯ ಕೊಂಡಾಡುವ ಭೃತ್ಯಜನರ ಬೇಗ ಹೆತ್ತ ತಾಯಿವೊಲೆತ್ತಿ ಪಾಲಿಪ ಹರಿ 1 ವಿಧಿ ವಿಹಿತಗಳಾದ ಸದಮಲ ಕೃತಗಳ ಮುದದಿ ಮಾಡುವ ಸರ್ವ ಬುಧ ಜನರ ಸದನಕ್ಕೆ ಕರತಂದು ವಿಧವಿಧ ಪೂಜೆಯ ಒದಗಿ ಮಾಡುವ ಪೂರ್ಣ ನಿಧಿಮತಿಗಳನಿತ್ತು 2 ಬಂದ ಅತಿಥಿಗಳ ನಿಂದಿಸದಲೆ ಅಭಿ ವಂದಿಸಿ ಸತ್ಕರಿಸುತ ಫಲವ ಕುಂದಿಲ್ಲದಾನಂದ ಸಂದೋಹದಾಯಿ ಮುಕುಂದಗರ್ಪಿಸಿ ಸುಖದಿಂದ ಚರಿಸುವಂತೆ 3 ಅಹಿತಲ್ಪ ಶಯನನೀ ವಹಿಸಿದ ದಾಸರ ಸುರರು ಸಂಗ್ರಹಿಸುವರು ಕುಹಕ ವೈರಿಗಳನ್ನು ಬಹು ದೂರೋಡಿಸಿ ಮಹಾಮಹಿಮ ನೀ ಕರುಣದಿ 4 ಚತುರ ಹಸ್ತಗಳಿಂದ ಚತುರ್ವಿಧ ಫಲರಸ ಸ್ತುತಿಸುವ ದಾಸರೀ ಗತಿ ಬೇಗದಿ ಸತತ ಸುರಿವ ನಾಗಪತಿ ಗಿರಿನಿಲಯ ಶ್ರೀ ಪತಿ ನೀನೆ ಎನಗೆ ಸದ್ಗತಿಯಾಗಿ ಪೊಳವುತ್ತ 5
--------------
ತುಪಾಕಿ ವೆಂಕಟರಮಣಾಚಾರ್ಯ
ನೊಂದು ಬಂದೆನೊ ಕಾಂತೇಶ | ಕೈಯನೆ ಪಿಡಿಯೊ ಮಂದಭಾಗ್ಯಳ ಜೀವೇಶ ಪ. ಅಂದು ಶ್ರೀ ರಾಮರ ಸಂದೇಶವನ್ನೆ ಭೂ- ನಿಂದನೆಗೆ ಅರುಹುತಲಿ ಬಹು ಆನಂದಪಡಿಸಿದ ವಾನರೇಶ ಅ.ಪ. ಶೌರಿ | ಭಕ್ತರ ಕಾಯ್ವ ದುರಿತದೂರನೆ ಉದಾರಿ ಚರಣಕ್ಕೆ ನಮಿಸುವೆ ಹರಿಗೆ ಪರಮಾಪ್ತನೆ ದುರಿತ ತರಿಯುತ ಪೊರೆಯೊ ಗುರುವರ ರಾಮಕಿಂಕರ 1 ಗುರುಕರುಣದ ಬಲದಿ | ಅರಿತೆನೊ ನಿನ್ನ ಚರಣ ನಂಬಿದೆ ಮನದಿ ಪರಿ ಭವಕ್ಲೇಶ ಪರಿಯ ಬಣ್ಣಿಸಲಾರೆ ಹರಿವರನೆ ದಯಮಾಡು ಶ್ರೀ ಹರಿ ದರುಶನವನನವರವಿತ್ತು 2 ಕಾಂತನ ಅಗಲಿರಲು | ಚಿಂತೆಯಲಿ ಭೂ ಕಾಂತೆ ವನದೊಳಗಿರಲು ಸಂತೋಷದಿಂ ರಾಮನಂತರಂಗವನರುಹಿ ಸಂತಸವಪಡಿಸುತಲವನಿಸುತೆಯ ನಿಂತೆ ರಾಮರಿಗ್ಹರುಷ ತೋರಿ 3 ದ್ರುಪದ ಸುತೆಯಳ ಕೀಚಕ | ದುರ್ಮನದಲಿ ಅಪಮಾನಪಡಿಸೆ ದುಃಖ ತಪಿಸಿ ನಿನ್ನನು ಬೇಡೆ ಆ ಪತಿವ್ರತೆ ಸತಿ ಕುಪಿತದಿಂದಲಿ ಖಳನ ಕೊಂದೆ ಅಪರಿಮಿತ ಬಲಭೀಮ ಪ್ರೇಮ 4 ಮಿಥ್ಯಾವಾದದ ಭಾಷ್ಯಕೆ | ಸುಜ್ಞಾನಿಗಳ್ ಅತ್ಯಂತ ತಪಿಸುತಿರೆ ವಾತಜನಕನಾಜ್ಞೆ ಪ್ರೀತಿಯಿಂದಲಿ ತಾಳಿ ಘಾತುಕರ ಮತ ಮುರಿದ ಮಧ್ವನೆ ಖ್ಯಾತಿ ಪಡೆದೆÀ ಸಿದ್ಧಾಂತ ಸ್ಥಾಪಿಸಿ 5 ಪ್ರಾಣಪಾನವ್ಯಾನ | ಉದಾನ ಸ ಮಾನ ಭಾರತಿ ಕಾಂತನೆ ಜ್ಞಾನಿಗಳಿಗೆ ಪ್ರೀತ ಜ್ಞಾನ ಭಕ್ತಿಪ್ರದಾತ ದೀನಜನ ಮಂದಾರ ಕಾಯೊ ದೀನಳಾಗಿಹೆ ಕೈಯ ಮುಗಿವೆ 6 ನೋಯಲಾರೆನೊ ಭವದಿ | ಬೇಗನೆ ತೋರೊ ಧ್ಯೇಯ ವಸ್ತುವ ದಯದಿ ವಾಯುನಂದನ ನಿನ್ನ ಪ್ರಿಯದಿಂ ನಂಬಿದೆ ಕಮಲ ದ- ಳಾಯತಾಕ್ಷನ ಮನದಿ ತೋರಿ7 ಹರಣ ನಿನಗೊಪ್ಪಿಸಿದೆ | ಸುರವಂದಿತ ಕರೆದು ಮನ್ನಿಸಿ ಕಾಪಾಡೊ ಸಿರಿವರನನು ಹೃತ್ಸರಸಿಜದಲಿ ತೋರೊ ಧರೆಯ ವಸ್ತುಗಳ್ ಮಮತೆ ತೊರೆಸು ಹರಿಯ ನಾಮಾಮೃತವನುಣಿಸು 8 ಈ ಪರಿಬಂದೆ ಅನಿಲ | ನಿನ್ನೊಳು ವಾಸ ಗೋಪಾಲಕೃಷ್ಣವಿಠ್ಠಲ ಶ್ರೀಪತಿ ಕೃಪೆಯಿಂದ ನೀ ಪ್ರೀತನಾಗುತ ಕೈಪಿಡಿದು ಸಂತೈಸು ಕರುಣದಿ ಭಾಪುರೇ ಕದರುಂಡಲೀಶ 9
--------------
ಅಂಬಾಬಾಯಿ
ನೊಂದು ಸಂಸಾರದೊಳಗೊಂದಿಸುವೆನೋ ಇಂದು ಮಾಧವ ಯಾದವ ಪ ಕರುಣಬಾರದೆ ನಿನಗೆ ಅಕಟಕಟ ಅಕಟಕಟ ಶರಣ ನಾ ನಿನಗಲ್ಲವೇ ಸ್ವಾಮಿ ನಿನ್ನ ಮೊರೆಹೊಕ್ಕೆ ಸರ್ವಾಂತರ್ಯಾಮಿ-ಎನ್ನ ಎರವು ಮಾಡುವರೇನೋ ಪ್ರೇಮಿ-ಇನ್ನು ಪರಿಹರಿಸು ಸಂಚಿತಾಗಾಮಿ-ಇದೇ ಸರಿಯೇನೊ ಜಗದೊಳಗೆ ಭಕುತವತ್ಸಲನೆಂಬ ಬಿರುದು ಪೊಳ್ಳಾಗದೇನೊ ನಿರುತ ಖ್ಯಾತ1 ಸತತ ಸುಖವುಳ್ಳರೆ ಬಾಯ್ದೆರೆದು ಪಲ್ಗಿರಿದು ನುತಿಸಿ ಬೇಡಿಕೊಂಬೆನೇ ನಿನ್ನ- ಮುಂದೆ ಗತಿಯ ಕಾಣದಲೆ ಚಾಲ್ವರಿದೆ ಭೇದ- ಮತಿ ಕೊಡದೆ ನೋಡುವುದು ಬರಿದೆ-ಸರ್ವ ಕ್ಷಿತಿಯೊಳಗೆ ನೀನೆಂದು ಅರಿದೆ-ವರ- ತತುವ ನಿಯ್ಯಾಮಕರ ಬಳಿ ಪಿಡಿದು ನಿನ್ನಂಘ್ರಿ ಶತಪತ್ರ ತೋರಿಸೈಯ್ಯಾ ಜೀಯಾ 2 ಶೃತಿಶಾಸ್ತ್ರ ಪೌರಾಣ ಭಾರತ ರಾಮಾಯಣ ಇತಿಹಾಸ ಪಾಂಚರಾತ್ರ ನಿಗಮ-ನಿನ್ನ ತುತಿಪ ಭಕುತರಿಗೆ ತಲೆಬಾಗಿ-ಕೊಂಡು ಪ್ರತಿದಿವಸದಲಿ ಚೆನ್ನಾಗಿ-ವಲಿದು ಅತಿಶಯವ ಕೊಡುತ ಲೇಸಾಗಿ-ವಿಘ್ನ ತತಿಕಳೆದು ನೀ ಬಂದು ಸಾರೆ ಬೆರಗಾಗುತಿದೆ ಪತಿತಿ ಪಾವನ ಮೋಹನ-ಚೆನ್ನ3 ತಡವ್ಯಾಕೆ ಗುಣಕಾಲ ಕರ್ಮದೇಶಗಳೆಲ್ಲ ವಡೆಯ ಎನ್ನಾಧೀನವೇ ಪೇಳೊ-ದು:ಖ ಬಿಡಿಸುವುದು ನಿನಗುಚಿತವಲ್ಲ-ಪಾಟು ಸಿರಿ ಲಕುಮಿನಲ್ಲ-ಒಂದು ನುಡಿವೆ ನಾನಾಂತರ್ಯ ಸೊಲ್ಲ-ಇಂತು ಕಡೆಮಾಡಿ ನೋಡದಿರು ದಿವಸ ಹಿಂದಾಗುತಿದೆ ಬಡವರಾಧಾರಿ ಕರುಣೀ-ದಾನಿ4 ಧ್ರುವನು ನಭದೊಳು ಇಲ್ಲಿ ರಾವಣಾನುಜ ಅಧೋ ಭುವನದಲಿ ಬಲಿರಾಯನ ನೋಡಿ, ನಾನು ತವಪಾದ ಗತಿಯೆಂದು ಬಂದೆ-ಮಹಾ ಭವಣೆ ಬಟ್ಟೆನೊ ಕೇಳು ಹಿಂದೆ-ಜಗದಿ ತ್ರಿವಿಧ ತಾಪಗಳಿಂದ ನೊಂದೆ-ಈ ಅವಸರಕೆ ಬಂದೊದಗಿ ನಿನ್ನ ನಾಮಾಮೃತದ ಸವಿದೋರೊ ದ್ವಾರಾವತಿಯ-ಜೀಯ 5 ಅಂಧಕೂಪದಲಿ ಬಿದ್ದವನ ನೋಡಿ ನಿನಗೆ ಚ ಕ್ಕಂದವಾಗಿದೆಯೊ ಕಾಣೆ-ನಾನು ಸಂದೇಹ ದ್ವೇಷದವನಲ್ಲ-ಇದು ಎಂದೆಂದಿಗೂ ಪುಸಿಯು ಅಲ್ಲ-ಹೃದಯ- ಮಂದಿರದೊಳು ಬಲ್ಲೆಯೆಲ್ಲ-ಸ್ವಾಮಿ ನೊಂದು ಕೂಗಿದರೆ ಎಳೆಗಂದಿಯೆಂಬಾ ಮಾತು ಇಂದು ಎತ್ತಲಿ ಪೋಯಿತೋ ತಾತ-ನೀತ 6 ಗುಣವಂತ ಬಲವಂತ ಜಯವಂತ ಸಿರಿವಂತ ಘನವಂತ ಧೈರ್ಯವಂತ ಶ್ರೀಕಾಂತ-ಎನ್ನ ಮನದ ದುಮ್ಮಾನವನೆ ಬಿಡಿಸೊ-ನಿನ್ನ ಅನವರತ ನಾಮವನು ನುಡಿಸೊ-ಮಧ್ವ ಮುನಿ ಕರುಣ ಕವಚವನು ತೊಡಿಸೊ-ಇದೇ ಜನುಮ ಜನುಮಕೆ ಬೇಡಿಕೊಂಬೆ-ಶರಣೆಂಬೆ ಪ್ರಣತ ಹೃದಯಾಬ್ಜ ತುಂಬೆ-ಕಾಂಬೆ 7 ಮಾನಸ್ನಾನವನುಂಡು ಮತಿಗೆಟ್ಟ ಪೂರ್ಣ ವಿ ಜ್ಞಾನಮಯನೆ ನಿನ್ನ ಮರೆದೆ-ಕರ್ಮ ಪ್ರಾಣೇಂದ್ರಿಯಂಗಳು ನಿನ್ನ ವಶವೊ-ಇಂಥ ಜಾಣತನ ಬಹಳ ಸಂತಸವೊ-ಹೀಗೆ ಮಾಣದಲೆ ಇಪ್ಪ ಸಾಹಸವೋ ಚನ್ನ ಜ್ಞಾನ ಭಕುತಿ ವಿರಕುತಿ ಕೊಟ್ಟು ನಿನ್ನವರೊಳಾನಂದದಲಿ ನಿಲ್ಲಿಸೈಯ್ಯ ಜೀಯ 8 ಶಂಖ ಚಕ್ರ ವರಾಭಯ ಹಸ್ತದಲಿ ನಿಂದ ವೆಂಕಟಾಚಲ ನಿವಾಸ ಶ್ರೀಶ-ನಿನ್ನ ಕಿಂಕರನ ಕಿಂಕರನೊ ನಾನು-ಅಕ- ಳಂಕ ಮನುಜನ ಮಾಡೊ ನೀನು-ಭವ ಸಂಕಟವ ಕಳೆಯಾ ಸುರಧೇನು-ಬೊಮ್ಮ ವಿನುತ ವಿಜಯವಿಠ್ಠಲ ಹರಿ- ಣಾಂಕ ಸೌವರ್ಣ ಪೂರ್ಣ ಸಂಪೂರ್ಣ 9
--------------
ವಿಜಯದಾಸ
ನೋಡಯ್ಯ ನಿನ್ನ ದಾಸರ ಮೇಲೆ ಕೃಪೆಗಳನುಮಾಡಯ್ಯ ಮನ್ಮನಕೆ ಸಂತಸವನುತೀಡಯ್ಯ ಭವಭಯದ ಪಾತಕಂಗಳ ದಾನವಾಡ ಗುಡ್ಡದ ತಿರುಮಲೇಶ ಸರ್ವೇಶ ಪ ಆದಿಯಲಿ ವೇದಗಳ ಕದ್ದುಕೊಂಡೊಯ್ದವನಸಾಧನಂಗೆಯ್ವೆನೆಂದಾಕ್ಷಣದೊಳುಪೋದನೆಲ್ಲೆನುತ ಶರನಿಧಿಯೊಳಗೆ ಪೊಕ್ಕ ಮ-ತ್ತಾ ದಿತ್ಯನಂ ಕೊಂದು ತಿಕ್ಕಿಮುಕ್ಕೆನೀ ದಯಾ ಪಾತ್ರನೆಂಬುದ ಕೇಳಿ ನಾನರಿತೆಭೂ ಧರೆಯ ಸುರರ ನೀ ಸಲುಹಲಾಗಪೋದ ನಿಗಮಂಗಳನು ತಂದು ಸಲೆ ರಕ್ಷಿಸಿದೆಆದಿ ಮತ್ಸ್ಯವತಾರ ಶರಣೆಂಬೆನು 1 ಮೂರ್ತಿ ನೀನಂದು ಬೇರೆಸುಮತವನು ಬೆನ್ನಲ್ಲಿ ಸಲೆ ಆತು ರಕ್ಷಿಸಿದೆಕಮಠಮೂರುತಿ ನಿನಗೆ ಶರಣೆಂಬೆನು 2 ಚಿನ್ನಗಣ್ಣವನೆಂಬನೊರ್ವ ಖಳ ಭೂದೇವಿಕನ್ನಿಕೆಯನೊಯ್ಯುತಿರೆ ಕನಲಿ ಮನದಿಇನ್ನು ಅವನನು ಸೆಣಸಿ ಜಯಿಸುವವರನು ಕಾಣೆನೆನ್ನುತಲಿ ರೋಮಗಳನುಬ್ಬೆತ್ತುತತನ್ನ ಮುಂಗೋರೆಗಳ ಮಸೆದೊಡನೆ ರಕ್ಕಸನಬೆನ್ನಟ್ಟಿ ಬರಸೆಳೆದು ಸದೆದೊರಗಿಸಿಚೆನ್ನಾಗಿ ಧರಣಿಯನು ತಂದು ಸಲೆ ರಕ್ಷಿಸಿದೆಹನ್ನೆರಡು ಪೆಸರವನೆ ಶರಣೆಂಬೆನು3 ಹೇಮಕಶ್ಯಪನೆಂಬ ನಾಮಜನ ಸುತನೊರ್ವನಾ ಮಹಾಘನವೆಂದು ನೆನೆಯುತಿರಲುತಾಮಸದ ಖಳ ತನ್ನ ತನುಜನನು ಮಥಿಸುತಿರೆರಾಮನನು ತೋರೆಂದು ಬಾಧಿಸುತಿರೆಧೂಮಜ್ವಾಲೆಗಳೊಡನೆ ಭುಗುಭುಗಿಲು ಛಿಟಿಲೆನುತಆ ಮಹಾ ರಕ್ಕಸನ ಪೊಡೆಯ ಸೀಳಿಪ್ರೇಮದಲಿ ಪ್ರಹ್ಲಾದಗೊಲಿದು ಪಟ್ಟವನಿತ್ತೆಸಾಮಜಾರಿಯ ವದನ ಶರಣೆಂಬೆನು 4 ಬಲಿಯಧ್ವರದ ಸಾಲೆಗೊಂದು ವೇಷವನಾಂತುಸಲೆ ಬಂದು ಧರೆಯ ಮೂರಡಿಯ ಬೇಡೆಒಲಿದು ಇತ್ತಪೆನೆನಲು ಧಾರೆಯನೆರೆಯಲಸುರಕುಲಗುರುವು ಜುಳಿಗೆಯೊಳು ತಡೆದು ನಿಲಲುಸಲಿಲ ವರ್ಜಿತ ನಯನನನು ಮಾಡಿ ಆಕಾಶನೆಲವೆರಡು ಪಾದವನ್ನಳೆದ ಬಳಿಕತಲೆ ಮೇಲೆ ಇರಿಸೆನಲು ತಳಕಿಳಿಸಿ ಅವನ ಬಾ-ಗಿಲ ಕಾಯ್ದ ವಾಮನನೆ ಶರಣೆಂಬೆನು 5 ರೇಣುಕೆಯ ಬಸುರಿನಲಿ ಜನಿಸಿ ಪಿತನಾಜ್ಞೆಯನುಮಾಣಬಾರದು ಎಂಬ ಮತವ ಪಿಡಿದುಕ್ಷೂಣವಿಲ್ಲದೆ ತಾಯ ಶಿರವರಿದು ತಂದೆಯನುಪ್ರಾಣಹತ್ಯವ ಮಾಡಿದರ ಕುಲವನುಕ್ಷೋಣಿಗೆರಗಿಸಿ ಕಾರ್ತವೀರ್ಯಾರ್ಜುನನ ಮಡುಹಿಜಾಣತನದಲ್ಲಿ ಭೂದಾನಗಳ ಭೂಸುರರಕಾಣುತಲೆ ಕರೆಕರೆದು ಕೊಟ್ಟೆಯೈ ನೀನು ಪೂಬಾಣಜನಕನೆ ರಾಮ ಶರಣೆಂಬೆನು 6 ಸೀತೆಯನು ಕದ್ದು ಒಯ್ದವನ ಕೊಲ್ಲುವ ಭರದಿಭೂತಳದ ಕಪಿಗಳನು ಕೂಡಿಕೊಂಡುಸೇತುವೆಯ ಕಟ್ಟಿ ಶರನಿಧಿ ದಾಟಿ ಬರಲಾಗಭೂತಗಣ ಸಂತತಿಯು ನಡುನಡುಗುತಿರಲುಚೇತನದ ರಾವಣೇಶ್ವರ ಕುಂಭಕರ್ಣ ಸ-ತ್ತ್ವಾತಿಶಯ ರಕ್ಕಸರ ಇರಿದೊರಗಿಸಿಮಾತು ಲಾಲಿಸಿ ವಿಭೀಷಣಗೆ ಪಟ್ಟವನಿತ್ತದಾತ ರಘುನಾಥನೇ ಶರಣೆಂಬೆನು 7 ಶಕಟ ಕುಕ್ಕುಟ ಧೇನುಕಾಸುರರ ಪೂತನಿಯಬಕ ವತ್ಸಹಕ ವೃಷಾಸುರ ಮುಖ್ಯರಪ್ರಕಟದಿಂದರಿದು ಕರಿಯನು ಸೀಳಿ ತನಗೆ ಸಂ-ಮುಖರಾದ ಮಲ್ಲರನು ಇರಿದೊರಗಿಸಿಮುಕುರ ದಂತ್ಯದ ಹಮ್ರ್ಯದೊಳಗಿಂದ ಕಂಸನಪುಕಪುಕನೆ ತಿವಿದವನನಿರಿದೊರಗಿಸಿಸಕಲವೆಸೆದಿರ್ದ ಮಧುರಾಪುರವ ಉಗ್ರಸೇನಕಗಿತ್ತ ಕೃಷ್ಣನೇ ಶರಣೆಂಬೆನು 8 ಮೂರು ಪುರದಬಲೆಯರ ವ್ರತಗಳನೆ ಕೆಡಿಸಲಿಕೆಬೇರೊಂದು ಅಶ್ವತ್ಥ ವೃಕ್ಷವಾಗಿನಾರಿಯರ ವ್ರತಭಂಗಗೆಯ್ಯಲಾ ದೆಸೆಯಿಂದಊರುತ್ರಯವದು ತಿರುಗುವುದು ನಿಲ್ಲಲಾಗನೀರ ಮಸ್ತಕದಲ್ಲಿ ಧರಿಸಿದನ ಕರವಿಲ್ಲನಾರಿಯೊಳು ನಾರಾಯಣಾಸ್ತ್ರವಾಗಿಘೋರತನವೆತ್ತ ತ್ರಿಪುರದ ಕೀಲ ಪರಿದ ಮದನಾರಿ ಸಖ ಬುದ್ಧನೇ ಶರಣೆಂಬೆನು 9 ಮದವೆತ್ತ ರಕ್ಕಸರು ಮಹಿಯೊಳಗೆ ಹೆಚ್ಚಲುತ್ರಿದಶಾಂತ ನಡನಡನೆ ನಡುಗುತಿರಲುಬೆದರಬೇಡೆನುತ ಅಭಯವನಿತ್ತು ಮುದದಿಂದಸುಧೆಯೊಳಗೆ ಬಂದು ಜನಿಸಿಕುದುರೆವಾಹನನಾಗಿ ಕುಂಭಿನಿಯ ಮೇಲೆ ತನಗಿದಿರಾದ ರಾವುತರನಿರಿದೊರಗಿಸಿಮೊದಲ ಭಾಷೆಯನು ದಿವಜರಿಗಿತ್ತೆ ಬೇಗದಲಿಚದುರ ಕಲ್ಕ್ಯವತಾರ ಶರಣೆಂಬೆನು10 ಇಂತು ದಶ ಅವತಾರಗಳನೆತ್ತಿ ರಕ್ಕಸರಸಂತತಿಯನೊರಸಿ ಭೂಭಾರವಿಳುಹಿಕಂತುಪಿತ ತಿರುವೆಂಗಳೇಶ ತಿರುಮಲೆಯೊಳಗೆಚಿಂತಿಸುವ ಭಕ್ತರನು ಪಾಲಿಸುತಲಿದಂತಿರಾಜನ ಪೊರೆದು ದಾನವಾಡಿಗೆ ಬಂದುನಿಂತಾದಿಕೇಶವನೆ ಶರಣೆಂಬೆನು 11
--------------
ಕನಕದಾಸ
ನೋಡಯ್ಯಾ ನಿತ್ಯಾತ್ಮನನ್ನು ನಿಜವಾಗಿ ನಿನ್ನೊಳಗೆ ನೀನು ನೋಡಯ್ಯಾ ನಲಿನಲಿದಾಡಯ್ಯಾ ಎರಡುದಿನಸಂಸಾರಾ ಎರವಾಗಿ ತಂದ ಶರೀರಾ ಸ್ಥಿರವಲ್ಲ ಸ್ವಾಮಿ ಗುರುಬಲ್ಲಾ ನೋಡಯ್ಯಾ 1 ಶರೀರ ಅರ್ಥಪ್ರಾಣ ಮೂರು ಗುರುಮೂರ್ತಿಗರ್ಪಿಸಿ ತೋರು ದೃಢಭಾವಾ ಆತ್ಮಸುಖವೀವಾ ನೋಡಯ್ಯಾ 2 ನರದೇಹಕ್ಕೆ ಬಂದು ನೀನು ಇರುವಂಥಾ ಸಾರ್ಥಕವೇನು ದೃಢ ಭಕ್ತಿಮಾಡಿ ಪಡೆ ಮುಕ್ತಿ ನೋಡಯ್ಯಾ3 ದೊರಕುವುದು ಪರಿಕರ ಸರ್ವಾ ಗುರುಮೂರ್ತಿ ಸಿಕ್ಕುವುದಪೂರ್ವಾ ಬಿಡಬೇಡಾ ವ್ಯರ್ಥ ಕೆಡಬೇಡಾ ನೋಡಯ್ಯಾ 4 ಭಕ್ತಿಯಲಿ ಕೈವಿಡಿದು ಹೋಗು ಭಜಿಸಿ ಜೀವನ್ಮುಕ್ತನಾಗು ಸಾರಿದೆ ಮರ್ಮವ ತೋರಿದೆ ನೋಡಯ್ಯ5 ಯುಕ್ತಿಯಲಿ ಸಾಧಿಸಲು ಬೇಕು ಇಷ್ಟೊಂದು ಸಿಕ್ಕಿದರೆ ಸಾಕು ಚಂದದಿ ಗುರುವಿಮಲಾನಂದದಿ ನೋಡಯ್ಯಾ 6
--------------
ಭಟಕಳ ಅಪ್ಪಯ್ಯ
ನೋಡಲುಬೇಕೇ ಎನ್ನೊಡೆಯನನೂ ನೋಡಿದಿರೇ ತಾಳಪಾಕಂ ಚಿಣ್ಣೈಯಾ ಪ ದಿಕ್ಕುಗಳನು ಬೆಳಗುವ ಸುಕೀರಿಟವ ನಿಕ್ಕಿಹ ಮಾಣಿಕದೋಲೆಯನೂ ಚೊಕ್ಕಟ ಮೂಗುತಿಯಿಂದೊಪ್ಪುವನ್ನ ಜ ಗಕ್ಕೆ ಪತಿಯೆನ್ನೆರೆಯ ಚೆನ್ನಿಗನಾ 1 ಕಂಬು ಚಕ್ರಗದೆ ಪದುಮವ ಪಿಡಿದು ಪೀ ತಾಂಬರದಂಗಿಯ ಧರಿಸಿಕೊಂಡೂ ತುಂಬಿದ ವಕ್ಷದಿ ರಮೆ ಕೌಸ್ತುಭದಿಂ ಗಂಭೀರಾರ್ಣವನಾದ ಚೆನ್ನಿಗನ 2 ಸುರರೆಲ್ಲರು ಪೂಜಿಸುವ ಚರಣದೊಳು ಕಿರುಗೆಜ್ಜೆ ಪೆಂಡೆಯವಿಟ್ಟವನಾ ವರವೈಕುಂಠ ವೇಲಾಪುರದರಸನ ಶರಣ ವತ್ಸಲನಾದ ಕರುಣಾಂಬುಧಿಯಾ 3
--------------
ಬೇಲೂರು ವೈಕುಂಠದಾಸರು
ನೋಡಿ ನಾ ಧನ್ಯನಾದೆನೊ ತೋತಾದ್ರೀಶನ ನೋಡಿ ಧನ್ಯನಾದೆ ನಾಡೊಳು ತನಗೆಲ್ಲಿ ಈಡಿಲ್ಲೆನಿಸುವನ ನೋಡಿ ಧನ್ಯನಾದೆನೊ ಪ ಆರೊ ಮಹಾರೂಪ ಬಂದು ಏಕಾಂತದಲ್ಲಿ ಆರಾಧಿಸಿದಾತನಂದು ಭಕುತಿ ಬಿಡದೆ ವಾರವಾರಕ್ಕೆ ಗತಿಯೆಂದು ಈ ರೀತಿಯಲ್ಲಿ ಇರೆ ತೋರಿದ ಕರುಣ ನಿನ್ನಾ 1 ಭಕುತನ್ನ ತಪಸಿಗೊಲಿದು ವೇಗದಿಂದಲಿ ಲಕುಮಿ ರಮಣ ಸುಳಿದು ಬೇಡಿದಂಥಾ ಧಿಕವಿತ್ತು ರೋಷವಳಿದು ಸುಖದ ಭಾರತ ಪೇಳೊ ದಕ್ಕೆ ಮುನಿ ಮಾಡಿದ ದಾನಾ 2 ಧರಿಗೆ ದಕ್ಷಿಣ ದಿಕ್ಕಿಲಿ ಮಾಹೇಂದ್ರಿ ಮಹಿ ಧರನ ಸಮೀಪದಲ್ಲಿ ಪ್ರತಿದಿನ ಮೆರೆವ ವೈಭೋಗದಿಂದಲಿ ಕರುಣಿ ವಿಜಯವಿಠ್ಠಲ ವರಧೇನು ಎನಿಸುವನಾ3
--------------
ವಿಜಯದಾಸ
ನೋಡಿ ನೋಡಿನೊ ರಂಗಾ ನಿನ್ನ ನೋಡಿನೊ ಆಡಲೇನಯ್ಯಾ ಪರಸತಿಯರ ಮೋಹಕ್ಕೆ ಸಿಲುಕಿ ಪ ಹೆಣ್ಣ ನಾ ಕಾಣುತ ಮನಸು ದ್ರವಿಸುವದು ದೃಢವಾಗಿ ಮುನ್ನೆ ದಾರಿದ್ರತನ ಯೆಣಿಸಿಕೊಳದೆ ಕಣ್ಣು ಹೋಗುವ ಸುದ್ದಿ ತಿಳಿಯದಲೆ ನೀಕ್ಷಿಸಿ ನಿತ್ಯ 1 ಜಲ್ಪಸಿಲ್ಪಿಗಳಿಂದ ಮಂತ್ರ ಮಾಡುವೆ ಅವಳಾ ಬಲ್ಪು ವಯ್ಯಾರ ಗುಣಗುಣಿಸಿಕೊಳುತಾ ತಲ್ಪಮಿಕ್ಕಾದ ಭೋಗದ್ರವ್ಯ ಬಯಸಿ ವಿ ಕಲ್ಪ ಸಂಕಲ್ಪದಲ್ಲಿ ಬಳುಲುವೆನುಬ್ಬಸವಳಿದು 2 ವ್ಯಾಖ್ಯಾತ ಪಂಡಿತದ್ವ್ಯಾಪಕ ಪಾಠಕ ಮಹಾ ಪ್ರಖ್ಯಾತ ವೇದವೇದಾಂತ ಪ್ರೌಢ ಸೌಖ್ಯ ಪುಸ್ತಕ ಪಾಣಿ ಜ್ಞಾನಿ ಎನಿಸಲು ಅವಳ ಆಖ್ಯಾನ ಕೇಳುತಲೆ ಕಿವಿಗೊಟ್ಟು ಲಾಲಿಸುವೆ 3 ಬೀದಿಯೊಳು ಪೋಗುವವಾಳೊಂದು ಪ್ರಯೋಜನಕೆ ಹಾದಿಯನು ಹಿಡಿದು ಸಮೀಪ ಬರಲು ಪಾದಕಾದರು ಬಿದ್ದು ಮಾತಾಡುವೆನೆಂಬೊ ಮೋದವನು ತಾಳಿ ಏಕಾಂತ ಹುಡುಕುವೆ 4 ಅಂಧಕ ಮೂಕಿ ಬಧಿರೆ ಹೀನಾಂಗ ಅವರೋತ್ತಮ ಜಾತಿ ವಿಧಿ ನಿಷೇಧವನು ಚಿಂತಿಸದೆ ತೀವರದಿಂದ ಅಧೋಗತಿಗೆ ಇಳುವೆನು ಸತ್ಕರ್ಮವನು ತೊರೆದು 5 ನೀರು ಸೀರೆವೊಗಿವಾಗ ಮೈ ತೊಳೆದು ಉಡುವಾಗ ಉರು ಕುಚ ಕಚ ನೋಳ್ಪ ಆಶೆಯಲ್ಲಿ ಮೂರು ಹತ್ತನೆ ತತ್ವ ನೆನೆನೆನೆದು ಯೋಚಿಸಿ ವಾರಿತಿಯ ಕೇಳಿ ತಲೆದೂಗುವೆನೊ ಲೇಸಾಗಿ 6 ಕಣ್ಣುಯಿದ್ದದಕೆ ಸಾರ್ಥಕವಾಗಲಿಲ್ಲ ಪ್ರ ಸನ್ನ ಮೂರುತಿ ಯೆನ್ನ ಸಾಧನವೇನೊ ಘನ್ನ ಏಲ್ಲೆಲ್ಲಿ ನಾ ನೋಡಿದರೆ ಅಲ್ಲಲ್ಲಿ ನಿನ್ನ ರೂಪವ ತೋರೊ ವಿಜಯವಿಠ್ಠಲ ಒಲಿದು 7
--------------
ವಿಜಯದಾಸ
ನೋಡಿದರೆ ನೋಡು ಮಾತಾಡು ತಾಯಿಗಳೆಂದು ನೋಡಿ ಭ್ರಮಿಸಲು ಬೇಡ ಪರಸತಿಯರ ಪ. ದಾರಿಯೊಳು ಭಯವೆಂದು ಚೋರರೊಳು ಪೋಗುವರೆ ಗೇರುಬೀಜದ ತೈಲ ಲೇಪಿಸುವರೆ ಅರಣ್ಯ ಮಧ್ಯದಲಿ ಮೃಗವಿರಲು ತುರಗವೆಂ ದೇರುವರೆ ಪರಸತಿಯ ಪಾಪಿ ಮನವೆ 1 ಹಸಿಯ ಯಕ್ಕೆಯಕಾಯಿ ನಸುಗುನ್ನಿ ತುರುಚೆಯನು ತೃಷೆಗೆ ಮೆಲುವರೆ ವ್ಯಸನ ದೋರಿತೆಂದು ವಿಷವ ಸೇವಿಸಿದಂತೆ ನೋಡಿ ನೀ ಪರಸತಿಯ ವಿಷಯಕೆಳಸುವುದೇಕೆ ಪಾಪಿ ಮನವೆ 2 ಪ್ರೀತಿಯಿಂದಲಿ ಸತಿಯ ಮನೆಗಾಗಿ ಯಿಂದ್ರನತಿ ಕಾತುರದಿ ಪೋಗಿ ಮೈತೂತಾದನು ಸೀತೆಗೋಸುಗವಾಗಿ ರಾವಣನು ತಾ ಕೆಟ್ಟ ಸೋತು ದ್ರೌಪದಿಗೆ ಕೀಚಕ ಕೆಟ್ಟನು 3 ********************4 ಕೆಟ್ಟವರದೃಷ್ಟವಿನ್ನೆಷ್ಟು ಹೇಳಿದರೇನು ಬಿಟ್ಟು ಬಿಡುವರೆ ತಮ್ಮ ಕೆಟ್ಟ ಗುಣವ ಕಟ್ಟಿನೊಳಗಿಟ್ಟು ಉತ್ಕøಷ್ಟ ಜನಗಳ ಸಂಗ ಕೊಟ್ಟು ಸಲಹಯ್ಯ ಅಚಲಾನಂದವಿಠಲ 5 * ನುಡಿ 4 ಸಿಕ್ಕಿಲ್ಲ
--------------
ಅಚಲಾನಂದದಾಸ