ಒಟ್ಟು 1291 ಕಡೆಗಳಲ್ಲಿ , 99 ದಾಸರು , 1017 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಯನಗೆ ನಾನೇ ಸರಿ-ನಿನಗೆನೀನೆ ಹರಿ ಎಣಿಗಾಣೆ ನೀರ್ವರ್ಗೆ ವನಜನಯನ ಪ ಧರೆಯನಾಳುವ ಸಿರಿಯರಸ ನೀನು ಈ ಧರೆಯೊಳು ನಿರ್ಭಾಗ್ಯರೆರೆಯ ನಾನು 1 ಪರಮೇಷ್ಠಿಯನ್ನು ಪಡೆದ ಪರಮ ನೀನು ಬಲು ದುರಿತಂಗಳಪ್ಪಿದ ದುರುಳನು ನಾನು 2 ಪುಣ್ಯವಂತರ ಹೃದಯ ಗಣ್ಯ ನೀನು ಕೃತಪುಣ್ಯ ಹೀನರಿಗಗ್ರಗಣ್ಯ ನಾನು 3 ಪತಿತಪಾವನ ನೀನು ಪತಿತ ನಾನು ಸದ್ಗತಿದಾತ ನೀನು ನಿರ್ಗತಿಕನಾನು 4 ವರವ್ಯಾಘ್ರಗಿರಿಯ ವರದ ವಿಠಲನು ನೀನು ನಿಜ ಶರಣರ ಚರಣ ಧೂಳೀಪಟಲನಾನು 5
--------------
ಸರಗೂರು ವೆಂಕಟವರದಾರ್ಯರು
ಯಾಕಿಷ್ಟು ದಯವಿಲ್ಲ ಎನ್ನಮೇಲೆನೀ ಕರುಣಿಸಿದರಾಗದ ಕಾರ್ಯವುಂಟೆ ಪ ಬಾಲೆಗೊಲಿದು ಹಾಲಕುಡಿದವನೆಂದೆನೆಸೂಳೆಯ ಮನೆಗೆ ನಾ ಹೋಗೆಂದೆನೆಲೋಲಾಕ್ಷಿಯ ಕುಚದೊಳೆ ಮಾತಾಡೆಂದೆನೆಚೋಳನಂತೆ ಹೊನ್ನ ಮಳೆಯ ಕರೆಯೆಂದೆನೆ1 ಊರುಗಲ್ಲೊಳು ಕನ್ನವ ಕೊಯಿದನೆಂದನೆಊರನೆ ಕೈಲಾಸಕ್ಕೊಯಿಯೆಂದೆನೆಕ್ರೂರ ಬಾಣನ ಬಾಗಿಲ ಕಾಯ್ದನೆಂದೆನೆನೀರ ಮಂಡೆಯೊಳು ಪೊತ್ತವನೆಂದು ಪೇಳ್ದೆನೆ 2 ಮಲ್ಲಗಾಳಗವನು ಮಾಡಿದನೆಂದೆನೆಬಿಲ್ಲಿನಿಂ ಬಡಿಸಿಕೊಂಡವನೆಂದೆನೆಎಲ್ಲರರಿಯೇ ತಿರಿದುಂಡವನೆಂದನೆಕಲ್ಲುಮನವೇ ಕೆಳದಿರಾಮೇಶ್ವರಲಿಂಗ 3
--------------
ಕೆಳದಿ ವೆಂಕಣ್ಣ ಕವಿ
ಯಾಕೆ ಕಷ್ಟ ಪಡುವೆ ನೀನು ಮಾಯಾ ಸಲಹು ನಮ್ಮಪ ಹಿರಿಯ ಮಗನು ಸರ್ವ ಜನರೊಳಿರುತ ಕಾಮಿಸುವನು ಜಗವ 1 ಮೊಮ್ಮಗನು ನಿನ್ನದಾಸಿಯಾ-ಜಗವ ಮೋಹಿಸುತ್ತಲಿರುವಳು 2 ನೀರೊಳಿರುತ ಮೋರೆ ಮುಚ್ಚಿಕೊರೆ ಮಸೆದು ಕಂಬದಿಂದ ಹಾರಿಯೆಳೆದು ಧಾರಿಣಿಯ ಧೀರ ನೃಪರನೆಲ್ಲಕೊಂದು 3 ಊರುಬಿಟ್ಟು ಸಾರಿ ವನವ ಜಾರನಾಗಿ ಭಂಗಪಡಿಸಿ ನಾರಿಯರನು ದಾರತೇಜಯೇರಿಮೆರೆದು ಬಾರಿ ಬಾರಿ 4 ಪರಮಪದವನಗಲಿ ಚಂಡ ಕಿರಣರಥವ ನುಳಿದು ಕ್ಷೀರ ಶರಧಿಯನ್ನು ಬಿಟ್ಟು ವ್ಯಾಘ್ರಗಿರಿಯೊಳಿರುವ ವರದ ವಿಠಲ 5
--------------
ಸರಗೂರು ವೆಂಕಟವರದಾರ್ಯರು
ಯಾಕೆ ಕಷ್ಟ ಪಡುವೆ ಲೋಕನಾಯಕ ಮಾಯಾ ಜೋಕೆಯಿಂದ ಸಲಹು ನಮ್ಮ ಪ ಸಿರಿಯೆ ಪಟ್ಟದರಸಿ ನಿನಗೆ ಕಿರಿಯ ಮಡದಿ ಧರಣಿಯಾಗೆ ಹಿರಿಯ ಮಗನು ಸರ್ವಜನರೊಳಿರುತ ಕಾಮಿಸುವನು ಜಗವ 1 ಮಗನು ಜಗವ ನಿರ್ಮಿಸುವನು ಮಗುಳೆಲಯವಗೈವ ಮೊ- ಮ್ಮಗನು ನಿನ್ನ ದಾಸಿ ಈ ಜಗವ ಮೋಹಿಸುತ್ತಲಿರವಳು 2 ನೀರೊಳಿರುತ ಮೋರೆ ಮುಚ್ಚಿ ಕೋರೆ ಮಸೆದು ಕಂಬದಿಂದ ಹಾರಿಯೆಳೆದು ಧಾರಿಣಿಯ ಧೀರ ನೃಪರನ್ನೆಲ್ಲ ಕೊಂದು 3 ಊರುಬಿಟ್ಟು ಹಾರಿ ವನವ ಜಾರನಾಗಿ ಭಂಗಪಡಿಸಿ ನಾರಿಯರನು ದಾರ ತೇಜಿಯೇರಿ ಮೆರೆದು ಬಾರಿ ಬಾರಿ4 ಪರಮಪದವನಗಲಿ ಚಂಡ ಕರಣರಥವ ನುಳಿದು ಕ್ಷೀರ ಶರಧಿಯನ್ನು ಬಿಟ್ಟು ವ್ಯಾಘ್ರಗಿರಿಯೊಳಿರುವ ವರದವಿಠಲ5
--------------
ವೆಂಕಟವರದಾರ್ಯರು
ಯಾಕೆ ಜೀವನೆ ಒಣ ಉಸಾಬರಿ ನಿನ ಗ್ಯಾಕೆ ಲೋಕದ ಸುಳ್ಳೆ ಕಿರಿ ಕಿರಿ ಪ ಪಾದ ಬಿದ್ದು ಮೊರಿ ಪರ ಲೋಕ ಪದವಿ ಸಂಪಾದಿಸಿ ಮೆರಿ ಅ.ಪ ಇಷ್ಟಬಂಧು ಸತಿಸುತರೆಲ್ಲ ನೀನು ಬಿಟ್ಟು ಹೋಗ್ವಾಗ್ಯಾರು ದಿಕ್ಕಿಲ್ಲ ಎಷ್ಟು ಸಂಪಾದಿಸಿದ ಗಳಿಕೆಲ್ಲ ನೀನು ಕಟ್ಟಿಕೊಂಡು ಸಂಗಡೊಯ್ಯೋಣಿಲ್ಲ ಕುಟ್ಟಿ ಯಮದೂತರು ಕಟ್ಟಿ ಎಳೆಯುವಾಗ ನೀ ಗಟ್ಟಿ ಮಾಡಿದ್ದು ಎಲ್ಲ ಬಟ್ಟಬೈಲೆ 1 ಯಾರು ಮೆಚ್ಚಿದರು ಫಲವಿಲ್ಲ ನಿನ ಗ್ಯಾರು ಮುನಿದರೇನು ಕೆಡುಕಿಲ್ಲ ನೀರಮೇಲಿನ ಲಿಪಿಯಂತೆಲ್ಲಜಗ ಸಾರ ಸುಳ್ಳು ಖರೆವೊಂದಿಲ್ಲ ತೋರುವ ಬಿಸಿಲಿನ ವಾರಿಯಂತೆ ಮಾಯಾ ಕಾರ ತಿಳಕೋ ತೋರುವುದೆಲ್ಲ 2 ಬಂದಿ ಇಲ್ಲಿಗೆ ಬಹಳ ಲಗುಮಾಡಿ ಮತ್ತೆ ಮುಂದೆ ಹೋಗುವುದೆಲ್ಲಿ ತಿಳಿ ಮಂದನಾಗದೆ ಚಾಚಿ ಜ್ಞಾನಕುಡಿ ಅಲ್ಲಿ ನಿಂದು ನೋಡು ನಿಜ ಹುಡುಕಾಡಿ ಇಂದಿನ ಸಮಯವು ಮುಂದೆ ಸಿಗುವುದೇನೋ ತಂದೆ ಶ್ರೀರಾಮಪಾದಕ್ಹೊಂದಿ ಮುಕ್ತಿಯ ಪಡಿ3
--------------
ರಾಮದಾಸರು
ಯಾಕೆ ಪುಟ್ಟಿಸಿದಿ ನೀ ಸಾಕಲಾರದೆ ಜಗ-ದೇಕ ಕಾರಣಪುರುಷನೆ ಕೃಷ್ಣ ಪ ವಾಕು ಚಿಂತಿಸೆ ಇಂಥಕಾಕು ಮಾಡುವುದುಚಿತವೆ ಕೃಷ್ಣ ಅ.ಪ. ಒಡಲಿಗನ್ನವ ಕಾಣೆ ಉಡಲು ಅರಿವೆಯ ಕಾಣೆಗಡಗಡನೆ ನಡುಗುತಿಹೆನೋ ಕೃಷ್ಣಮಡದಿ ಮಾತೆಯರ ಬಿಟ್ಟು ಒಡಹುಟ್ಟಿದವರ ಬಿ -ಟ್ಟಡವಿ ಪಾಲಾದೆನಲ್ಲೋ ಕೃಷ್ಣಕುಡುತೆ ಕೊಡುವವರಿಲ್ಲ ನುಡಿಯ ಕೇಳುವರಿಲ್ಲಬಡತನವು ಕಂಗೆಡಿಸಿತೋ ಕೃಷ್ಣಕಡೆ ಹಾಯಿಸುವರ ಕಾಣೆ ನಡುಮಡುವಿನೊಳು ಕೈ ಬಿಡದೆ ದಡವನು ಸೇರಿಸೋ ಕೃಷ್ಣ 1 ಕೊಟ್ಟವರ ಸಾಲವನು ಕೊಟ್ಟು ತೀರಿಸದವರಪೊಟ್ಟೆಯೊಳು ಪುಟ್ಟಲಾಯ್ತೋ ಕೃಷ್ಣಎಷ್ಟು ಜನುಮದಿ ಮನಮುಟ್ಟಿ ಮಾಡಿದ ಕರ್ಮಕಟ್ಟೀಗ ಉಣಿಸುತಿಹುದೋ ಕೃಷ್ಣಸೃಷ್ಟಿಯೊಳಗೆನ್ನಂಥ ಕೆಟ್ಟ ಪಾಪಿಷ್ಠ ಜನಘಟ್ಟಿಸಲಿಲ್ಲವೇನೋ ಕೃಷ್ಣವಿಠ್ಠಲನೆ ನಿನ್ನ ಮನಮುಟ್ಟಿ ಭಜಿಸಿ ಹಿಂದೆಎಷ್ಟು ಜನ ಬದುಕಲಿಲ್ಲೋ ಕೃಷ್ಣ 2 ಆಳು ದೇಹವು ಗೇಣು ಕೀಳಾಗಿ ಪಲ್ಕಿರಿದುಖೂಳ ಜನರ ಮನೆಗೆ ಕೃಷ್ಣಹಾಳು ಒಡಲಿಗೆ ತುತ್ತು ಕೂಳಿಗೆ ಹೋಗಿ ಅವರವಾಲೈಸಲಾರೆನಲ್ಲೋ ಕೃಷ್ಣಬಾಳು ಈ ಪರಿಯಾದ ಮ್ಯಾಲೆ ಭೂಮಿಯಲಿ ಬಹುಕಾಲ ಕಳೆಯುವುದುಚಿತವೆ ಕೃಷ್ಣಆಲಸ್ಯ ಮಾಡದಲೆ ಈ ವ್ಯಾಳ್ಯದಲಿ ಅರಿತುಪಾಲಿಸಲು ಬಹು ಕೀರ್ತಿಯೋ ಕೃಷ್ಣ 3 ಸಿರಿ ಅರಸನೆಂದು ಶ್ರುತಿ ಸಾರುತಿದೆಬಂದುದೀಗೇನು ಸಿರಿಯೋ ಕೃಷ್ಣಒಂದೊಂದು ನಿಮಿಷ ಯುಗಕಿಂತಧಿಕವಾಗುತಿದೆಮುಂದೋರದ್ಹಾಂಗಾಯಿತೋ ಕೃಷ್ಣಸಂದೇಹವಿಲ್ಲ ಗೋವಿಂದ ಶ್ರೀಪದದಾಣೆತಂದೆ ನೀ ರಕ್ಷಿಸದಿರೆ ಕೃಷ್ಣಮುಂದೆ ಭಜಿಸುವರು ಹೀಗೆಂದು ವಾರುತೆ ಕೇಳಿಬಂದುದಪಕೀರ್ತಿ ಮಾತು ಕೃಷ್ಣ 4 ವತ್ಸರ ಈರೀತಿ ಕಾಲಕಳೆದೆನೋ ಕೃಷ್ಣವ್ಯರ್ಥವಾಯಿತು ಜನುಮ ಸಾರ್ಥಕಾಗದು ಕಣ್ಣುಕತ್ತಲೆಗವಿಸಿತಲ್ಲೋ ಕೃಷ್ಣಇತ್ತ ಬಾರೆಂತೆಂದು ಹತ್ತಿಲಿಗೆ ಕರೆದೊಂದುತುತ್ತು ಕೊಡುವರ ಕಾಣೆನೋ ಕೃಷ್ಣವಿಸ್ತರಿಸಲಾರೆ ಇನ್ನೆತ್ತ ಪೋಗಲೊ ನಿನ್ನಚಿತ್ತವ್ಯಾತಕೆ ಕರಗದೋ ಕೃಷ್ಣ 5 ಆರು ಗತಿ ನಿನಗಧಿಕರಾರು ಧಾರುಣಿಯೊಳಗೆತೋರಿಸೈ ಕರುಣನಿಧಿಯೆ ಕೃಷ್ಣಈರೇಳು ಲೋಕಕಾಧಾರವಾದವಗೆ ಬಲುಭಾರವಾದವನೆ ನಾನು ಕೃಷ್ಣಮೀರಿ ನುಡಿಯಲು ಹದಿನಾರೆರಡು ಪಲ್ಗಳುಬೇರು ಕಳಕಳಯಿತೋ ಕೃಷ್ಣತೋರು ಬಂಕಾಪುರದ ಧಾರುಣಿಪುರವಾಸವೀರ ನರಸಿಂಹದೇವ ಕೃಷ್ಣ 6 ಹರಿಯಾತ್ರೆ ಮಾಡಲಿಲ್ಲ ಹರಿಮೂರ್ತಿ ನೋಡಲಿಲ್ಲಹರಿದಾಸ ಸÀಂಗವಿಲ್ಲ ಕೃಷ್ಣಹರಿಸ್ಮರಣೆ ಮಾಡಲಿಲ್ಲ ಸುರನದಿಯ ಮೀಯಲಿಲ್ಲಧರಣಿ ಸಂಚರಿಸಲಿಲ್ಲ ಕೃಷ್ಣಅರಿತರಿತು ಮನ ವಿಷಯಕೆರಗಿ ಹರುಷವ ತಾಳಿಬರಿದಾಯಿತಾಯುವೆಲ್ಲ ಕೃಷ್ಣಮರುತಾಂತರ್ಗತ ಸಿರಿಯರಸ ಹರಿಯೆಂದುಹರುಷಾಬ್ದಿ ಮಗ್ನನಲ್ಲ ಕೃಷ್ಣ7 ಹರಿನಾರಾಯಣನೆಂದು ಕರವೆತ್ತಿ ಮುಗಿದೊಮ್ಮೆ ಮೈ ಮರೆದು ನಟಿಸಲಿಲ್ಲ ಕೃಷ್ಣಹರಿಸ್ಮರಣೆ ಸ್ಮರಿಸಿ ಸಿರಿತುಳಸಿ ಪುಷ್ಪವನುಕರವೆತ್ತಿ ನೀಡಲಿಲ್ಲ ಕೃಷ್ಣಸರ್ವಜ್ಞರಾಯರು ವಿರಚಿಸಿದ ಗ್ರಂಥವನುದರುಶನವೆ ಮಾಡಲಿಲ್ಲ ಕೃಷ್ಣಸ್ಮರಿಸಲಾರದ ಪಾಪ ಸ್ಮರಣೆಪೂರ್ವಕ ಮಾಡಿಸ್ಥಿರಭಾರನಾದೆನಲ್ಲೋ ಕೃಷ್ಣ 8 ದುರುಳಜನರೊಡನಾಡಿ ಹರಿಣಾಕ್ಷಿಯರ ಕೂಡಿಸರಿ ಯಾರು ಎಂದು ತಿರುಗಿ ಕೃಷ್ಣನಿರುತ ಕ್ಷುದ್ರವ ನೆನೆಸಿ ನೆರೆದೂರ ಮಾರಿ ಹೆಗ್ಗೆರೆಗೋಣನಂತೆ ತಿರುಗಿ ಕೃಷ್ಣಪರರ ಅನ್ನವ ಬಯಸಿ ಶರೀರವನೆ ಪೋಷಿಸಿಶಿರ ಒಲಿದು ಶಿಲೆಗೆ ಹಾಯಿದು ಕೃಷ್ಣಶರಣವತ್ಸಲನೆಂಬೊ ಬಿರುದು ಪಸರಿಸುವಂಥಕರುಣ ಇನ್ನೆಂದಿಗಾಹುದೊ ಕೃಷ್ಣ 9 ಉರಗ ಫಣಿ ತುಳಿಯಲೊಎರಡೊಂದು ಶೂಲಕ್ಹಾಯಲೊ ಕೃಷ್ಣಕೊರಳಿಗ್ಹಗ್ಗವ ಹಾಕಿ ಮರವೇರಿ ಕರಬಿಡಲೋಗರಗಸದಿ ಶಿರಗೊಯ್ಯಲೋ ಕೃಷ್ಣಕರುಣವಾರಿಧಿ ಎನ್ನ ಕರಪಿಡಿದು ಸಲಹದಿರೆಧರೆಯೊಳುದ್ಧರಿಪರ್ಯಾರೋ ಕೃಷ್ಣ 10 ಎಷ್ಟು ಹೇಳಲಿ ಎನ್ನ ಕಷ್ಟ ಕೋಟಿಗಳನ್ನುಸುಟ್ಟೀಗ ಬೇಯ್ಯುತಿಹವೋ ಕೃಷ್ಣಕಷ್ಟಬಟ್ಟ ಮಗನೆಂದು ದೃಷ್ಟಿ ನೀರೊರೆಸೆನ್ನಪೊಟ್ಟೆಯೊಳ್ಪಿಡಿವರ್ಯಾರೊ ಕೃಷ್ಣಕೃಷ್ಣನಾಮ ವಜ್ರಕ್ಕೆ ಬೆಟ್ಟ ದುರಿತವು ನೀಗಿಥಟ್ಟನೆ ಬಂದು ನೀನು ಕೃಷ್ಣಇಷ್ಟವನು ಸಲಿಸಿ ಗುಟ್ಟ್ಟಲಿ ಶ್ರೀರಂಗವಿಠಲ ಎನ್ನ ಕಾಯೋ ಕೃಷ್ಣ 11
--------------
ಶ್ರೀಪಾದರಾಜರು
ಯಾಕೆ ಬರವಲ್ಲಿ ಭಕುತನವಸರಕೆ ಪ ಬೇಕಿಲ್ಲೆ ಭಕ್ತವತ್ಸಲನೆಂಬ ಬಿರುದೀಗ ಅ.ಪ ಸುರಮುನಿ ನುಡಿಕೇಳಿ ನಾರಿ ಸತ್ಯಭಾಮೆ ಹರಿ ನಿನ್ನ ದಾನಮಾಡೆ ವರ ವೀಣ ಪುಸ್ತಕ ಹೊರಿಸಿ ಕರೆದೊಯ್ದನೇನೊ 1 ಮಾತೆಯ ಹಂಗಣೆಯ ಮಾತಿಗೆ ಖತಿಗೊಂಡು ಪೋತ ಧ್ರುವ ಅರಣ್ಯ ಪೋಗೆ ಕಾಯ ಪೋದ್ಯಾ 2 ಕುರುಪ ಧರ್ಮಾದ್ಯರ ಕರೆಸಿ ಪಗಡೆಯಾಡೆ ಸರಸಿಜಾಕ್ಷಿಯ ಸೀರೆಯ ಕಾಯ ಪೋದ್ಯಾ 3 ಹಿರಣ್ಯಾಕ್ಷನನುಜ ತರಳನ ಬಾಧಿಸೆ ಥೋರ ಕಂಬದಿ ಒಡೆದು ನರಮೃಗ ರೂಪನಾಗಿ ಪೋದ್ಯಾ 4 ನೀರಡಿಸಿ ಗಜರಾಜ ಸರೋವರಕೆ ಬರಲು ನಕ್ರ ಪಿಡಿದೆಳೆಯೆ ಕಾಯ ಪೋದ್ಯಾ 5 ವರವೇದ ಶಾಸ್ತ್ರ ತೊರದು ಪರಮ ನೀಚಳ ಕೂಡಿ ಮರಣ ಕಾಲದಲ್ಲಜಮಿಳ ನಾರಗನೆಂದು ಕರೆಯೆ ಪೋದ್ಯಾ 6 ಕರುಣಿ ವಿಜಯ ರಾಮಚಂದ್ರವಿಠಲ ಅವರ ಸರಿ ನಾನಲ್ಲವೊ ತವ ಚರಣ ಸೇವಕರ ಸೇವಕನೊ 7
--------------
ವಿಜಯ ರಾಮಚಂದ್ರವಿಠಲ
ಯಾಕೆ ಬಾರಯ್ಯ ನೀ ಏಕೋ ದೇವನೆ ಎನ್ನ ಏಕಾಕಾರದಲೆನ್ನ ಹೊರಿಯಲಾರೇನಯ್ಯ ಧ್ರುವ ನೀರ ಥೆರಿಯ ಕಡಿದು ಹೃದಯದಕರ ಚರಣದಿ ಭರದಿ ಮುಣಗಿ ನೀರ ನಡಿಗಿ ದಣದೇನಯ್ಯ 1 ವಾರಿಧಿಮಥನದಿ ಮೇರುಪರ್ವತವನ್ನು ಭಾರ ಬೆನ್ನಲಿ ಪೊತ್ತು ಬೆವರಿ ದಣಿದೇನಯ್ಯ2 ಧರಿಯ ಕದ್ದಸುರನ ಕೋರೆದಾಡಿಂದ ಸೀಳಿ ಭರದಿಂದ ಹೊಯಿದಾಡಿ ಹೋರಿ ದಣಿದೇನಯ್ಯ 3 ತರಳಗೊಲಿದು ಪ್ರಕಟಿಸಿ ದೈತ್ಯನ ಸೀಳಿ ಕರಳೊನಮಾಲಿಯ ಧರಿಸಿ ದಣಿದೇನಯ್ಯ 4 ಧರಿಯು ಮೂರಡಿ ಮಾಡಿ ಎರೆದು ದಾನವ ಬೇಡಿ ನರನ ಪಾತಾಳಕೊತ್ತಿ ಬಳೆದು ದಣಿದೇಯನಯ್ಯ 5 ಹಿರಿಯಳ ಶಿರವನು ಹರಿದು ಕತ್ತರಿಸಿನ್ನು ಕರದಲ್ಲಿ ಪರಶುವ ಪಿಡದು ದಣಿದೇನಯ್ಯ 6 ಶಿರಗಳ ಚೆಂಡಾಡಿ ರಾವಣೀಂದ್ರ ಜಿತನ ಶರದಿ ಕುಂಭಕರ್ಣನ ಎಚ್ಚದು ದಣಿದೇನಯ್ಯ 7 ಷತುರುಗಳ ಕಾಯಿದು ಉರುಗನ ತುಳದಿನ್ನು ಗಿರಿಯ ಬೆರಳಲೆತ್ತಿ ತೋರಿ ದಣಿದೇನಯ್ಯ 8 ಬರಿಯ ಬತ್ತಲೆ ಅಗಿ ಅರಿಯದೆ ತ್ರಿಪುರವ ಸೇರಿ ನಾರೇರ ವ್ರತವಳಿದು ದಣಿದೇನಯ್ಯ 9 ಏರಿ ಕುದುರಿಯ ತಿರುಹು ರಾಹುತನಾಗಿ ಪರಿ ರೂಪವ ತಾಳಿ ದಣಿದೇನಯ್ಯ 10 ಸರ್ವಾಪರಧವು ಕ್ಷಮೆಯಿಂದ ಮಹಿಪತಿಯ ಮನದೊಳು ಬಂದು ನಿಂದು ಹೊರೆದು ರಕ್ಷಿಸಯ್ಯ 11
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ಯಾಕೆ ಬೇಕು ಜನ್ಮವಾದರು ಲೋಕನಾಥನೆ ಪ ಜೋಕೆ ಮಾಡುತಲೆನ್ನ ಕಾಯದ ನೌಕ ನಾಯಕ ನೀ ಕರುಣ ಬಿಡೆ 1 ಮಾತೆ ಕರುಣದೊಳಾತ್ಮಜಗೆ ಸ್ತನವಿತ್ತು ಪೊರೆವಂತೆ ಪ್ರೀತಿಯಲಿ ತವಜಾತನೆಂದು ಆತುರದಿ ನೀನಾದರಿಸದಿರೆ 2 ವಾರಿಧರ ನೆರೆ ಚಾತಕಗೆ ನೀರಬಿಂದುವೀವಂತೆ ಧೀರ ನರಸಿಂಹವಿಠಲನೆ ಕರುಣಾರಸವೆನಗೆ ಬೀರದಿರ್ದೊಡೆ 3
--------------
ನರಸಿಂಹವಿಠಲರು
ಯಾಕೆ ರಂಗ ನಿನಗೆ ಮಾಕಾಂತೆಯೊಳು ಗರ್ವ | ಲೋಕದೊಳು ಅಬಲೆಯೇನೋ ಕೇಳಯ್ಯಾ ನೀನು ಪ ಮೀನಾವತಾರವ ನೀನಂದು ವಿಡಿದರೆ | ಮೀನಾಂಬಕಿ ತಾನಾದಳೋ1 ಬೆಟ್ಟವ ಬೆನ್ನಿಲಿ ಕಷ್ಟದಿ ನೆಗೆದರೆ | ಬಟ್ಟ ಕುಚಗಳ ಹೊತ್ತಳೋ 2 ಧರೆಯ ಭಾರವ ತಾಳಿದರ ನಿನ್ನಾಭಾರವನು | ಧರಿಸಿದಳಂದಗಲದಲೆ 3 ಸಿಂಹಾನನನಾಗಿ ಮಹಿಮೆ ದೋರಿಸಿದರೆ | ಸಿಂಹದಂತೆ ನಡು ನಡುವಾದಳೋ 4 ಬಲಿ ಬಾಗಿಲಕಾಯಿದರೆ ನೆಲೆಸಿಹಳವಳಲ್ಲಿ | ಬಲಿಯಾ ಭಾಗ್ಯ ರೂಪವಾಗಿ5 ಸುರರ ಹೊರಿಯಲಿಕ್ಕೆ ಪರಶವ ಪಿಡಿದರೆ | ಪರಸಗೈಯ್ಯ ತಾನಾದಳೋ 6 ಹರನಾ ಚಾಪವನೆಗೆದರೆ ಅದನೆವೆ ಮುನ್ನೆ | ಕರೆದಲೆ ತ್ಯಾಡಿದಳೊ 7 ಸೆರೆಹರಿದು ಸ್ತ್ರೀಯರಾ ತಂದರೆ ನಾರದರಿಂದ | ಸೆರೆವಿಡಿಸೆ ಕೊಂಡಳೋ 8 ಮುಪ್ಪರ ಹೊಕ್ಕರೆ ನೀವಪ್ಪುತಲಿ ಹನಿನ್ನಾ | ಮುಪ್ಪುರದಲಿ ಮೆರೆದಳೋ 9 ತುರುಗವ ಏರಿಕೊಂಡು ತಿರುಗಲು ನಿನ್ನಾಕೂಡ | ತುರಗಮನಿ ತಾನಾದಳೋ 10 ಕಡೆಯಕಾಲಕ ನೀರೊಳೊಡಗೂಡಿ ಮಲಗಲು | ಒಡನೆ ವಟದೆಲೆ ಯಾದಳೋ11 ಗುರು ಮಹಿಪತಿ ಪ್ರಭು ಚರಿತೆಯಾ ನಿಮ್ಮೀರ್ವರ | ಭರದಿ ಹೇಳಲೆನ್ನಳವೇ 12
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ಯಾಕೆಮ್ಮನಗಲಿ ಪರಲೋಕ ಸೇರಿದೆ ಗುರು ಐಕೂರು ನರಸಿಂಹಾರ್ಯ ಪ ಲೌಕಿಕವ ಬಿಟ್ಟು ಸುವಿವೇಕ ನಡೆವ ವಾಕು ಪೇಳ್ವರ ಕಾಣೆ ಲೋಕದೊಳು ನಿನ್ಹೊರತು ಅ.ಪ ಅತಿಮಂದರಾದೆಮಗೆ | ಶ್ರುತಿ ಶಾಸ್ತ್ರ ಪುರಾಣ ಕಥೆ ದಾಸ ಕವಿತೆ ಸತತ ಪೇಳಿ ಮತಿವಂತರೆನಿಸಿ ಸ್ಪÀತ್ವಥ ಪಡಿಸಿ ಮುಂದೆ ಸ ದ್ಗತಿ ಕಾಣಿಸದೆ ಜಗದಿ ಹತಭಾಗ್ಯರನು ಮಾಡಿ 1 ಸಾಧುವರ್ಯನೆ ನಿಮ್ಮ ಪಾದವೇ ಗತಿ ಎಂದು ಸಾದರದಿ ನಿರುತ ನೆರೆನಂಬಿದಂಥ ಸೋದರಿಯರು ಪಂಚ ಭೇದ | ತರತಮಜ್ಞಾನ ಬೋಧಿಸುವರಿಲ್ಲೆಂದು ಖೇದದಿಂದಿರುತಿಹರು 2 ಸೂರಿವರ ನಿನ್ನಗಲಿದಾರಭ್ಯ ಧರೆಯೊಳಗೆ ನೀರಿಂದ ದೂರಾದ ಮೀನಿನಂತೆ ಘೋರ ದುಃಖದಿ ಮುಳುಗಿ ಪಾರುಗಾಣದೆ ದಿಕ್ಕು ತೋರದಾಗಿಹುದೀಗ ಬಾರೋ ಮನಮಂದಿರದಿ 3 ತನುವು ತ್ಯಜಿಸಿದರೇನು | ಅನಿಮಿಷಾಂಶನೆ ನಮ್ಮ ಕನಸು ಮನನಿನೊಳಗೆ ಸುಳಿದಾಡುತ ಕೊನೆಯಲ್ಲಿ ಹರಿನಾಮ | ಅನುಗ್ರಹಿಸುವೆವು ಎಂಬ ಘನ ಅಭಯ ನೀಡೆಂದು ಮಣಿದು ಪ್ರಾರ್ಥಿಪೆನಯ್ಯ 4 ಪುಣ್ಯಪುರುಷನೆ ನಮಗೆ ಇನ್ನಾವ ಬಯಕಿಲ್ಲ ಜನ್ಮ ಜನ್ಮಕೆ ನಿನ್ನ ಚರಣಾಬ್ಜವ ಚನ್ನಾಗಿ ಸೇವಿಸುವ ಘನ್ನ ಸುಖಗರಿಯೆಂದು ನಿತ್ಯ 5 ನಿನ್ನಿಂದ ಸತ್‍ಶ್ರವಣ | ನಿನ್ನಿಂದ ಅಘಹರಣ ನಿನ್ನಿಂದ ಶ್ರೀವಾಯು ಹರಿಯಕರುಣ ನಿನ್ನಿಂದ ಉಪದೇಶ \ ನಿನ್ನಿಂದ ಭವನಾಶ ನಿನ್ನಿಂದ ಬಿಂಬ ದರ್ಶನವು ನಮಗಿನ್ನು 6 ಪಾಮರರ ಅಪರಾಧ ನೀ ಮನಕೆ ತಾರದಲೆ ಹೇಮ ಕಾಮಿನಿ ಭೂಮಿ ಈಮೂರರ ವ್ಯಾಮೋಹವನೆ ಬಿಡಿಸಿ | ಶಾಮಸುಂದರ ಭಕ್ತ ಸ್ತೋಮ ಸಂಗದೊಳಿಟ್ಟು ಪ್ರೇಮದಲಿ ಪಿಡಿಕೈಯ್ಯ 7
--------------
ಶಾಮಸುಂದರ ವಿಠಲ
ಯಾತಕೀಹಂಕಾರವು ಸರ್ವವು ಜಗನ್ನಾಥನ ಪರಿವಾರವು ಪ. ಸ್ವಾತಿಯ ಮಳೆಯೊಳು ಸುರಿವಂಥ ನೀರನು ಜಾತಕ ಪಕ್ಷಿಗೆ ದೊರಕುವ ತೆರದೊಳಿಂನ್ಯಾತಕೀ ಅ.ಪ. ಈಶ ಪ್ರೇರಣೆಯಿಲ್ಲದೇಸು ಮಿಡುಕಿದರು ಶ್ವಾಸ ಬಿಡಲು ಸಲ್ಲದು ಘಾಸಿಗೊಂಡರೆ ನುಂಗಲೋಸುಗ ಮನುಜಗಿ- ನ್ನೇಸು ನಂಬಿಕೆ ಇಹದು ಮೂರ್ಖತ್ವ ಸರಿದು ಘಾಸಿಗೊಳದೆ ರಮೇಶನಿತ್ತದೆ ಲೇಸೆನುತ ಅವನಂಘ್ರಿಕಮಲದ ದಾಸಜನರೊಡನಾಡಿಕೊಳದೆ ದುರಾಸೆ ಕಡಲೊಳಗೀಸಲಾರದೆ 1 ತಾನೆಂಬ ಹಂಕೃತಿ ತಾಳ್ವ ಮನುಜಗಿಂತ ಹೀನರ ಕಾಣೆನಿನ್ನು ಯಾ- ಕೆನಲನ್ನಪಾನದೊಳಿಚ್ಛೆಯನು ತಡೆಯಲನು- ಮಾನಗೊಳುವನಾತನ ಸ್ವಾತಂತ್ರ್ಯವೇನು ಶ್ರೀನಿಕೇತನ ಮನದೊಳನುಸಂಧಾನಗೊಳಿಸುವ ತೆರವಹುದು ಪವ ಮಹಿಮೆಯರಿಯದೆ 2 ವಾರುಧಿಯೊಳಗೆ ಸಂಚಾರಮಾಡುತ ಪರಿ- ವಾರವ ಸೇರಿರುವ ಯೋಚಿಸುವ ನಿತ್ಯದಿ. . . . ಶ್ರೀ ರಮಣ ಚರಣಾರವಿಂಧಾಧರವೆ ಗತಿಯೆಂದು ನಂಬು ಖ- ತನ್ನಿರವ ಮನದಲಿ 3
--------------
ತುಪಾಕಿ ವೆಂಕಟರಮಣಾಚಾರ್ಯ
ಯಾತರ ಸುಖವೆಂದು ಸುರುವಿ ಈ ಭೂತದೊಳಗಿನ್ನು ಬಿನುಗುಮಾನವರಿಂಗೆ ಪ ನೆತ್ತಿಯ ಮೇಲೊಂದು ಕೆರೆಯುಂಟು ಅದು ತುಂಬಿ ಸುತ್ತಲು ಹರಿ ನೀರು ಹರಿದಾಡಿತು ಬತ್ತಿತು ಮೂಗಿನೊಳುಸುರನು ಕಿವಿಯನು ಕುತ್ತಿತು ಪರರೆಂದ ಮಾತು ಕೇಳಿಸದಂತೆ 1 ಘೃತ ಮಧು ಕೈಟಭಾರಿಯ ಮನೆಯೊಳಗುಂಟು ತೋಟದೊಳಿಹ ಬಾಳೆದಿಂಡು ಕುಂಡಿಗೆತಿಂದು ಪಾಟಿಸಿ ಸರ್ವಾಂಗವನು ಧಾತುಗೆಡಿಸಿಹುದು 2 ಶಯನ ವೆಂದರೆ ಪರರ ಸುಲಿಗೆಯಿಂದ ಭೂ ಶಯನವೇಶಯನ ನಿಶ್ಚಯವಾಯಿತು ನಯನ ಮೂರುಳ್ಳ ದೇವನ ಮಿತ್ರ ಶ್ರೀ ಲಕ್ಷ್ಮೀ ರಮಣನೊಬ್ಬನೆ ಬಲ್ಲ ನಾನೊಬ್ಬನು ಬಲ್ಲೆನು3
--------------
ಕವಿ ಪರಮದೇವದಾಸರು
ಯಾದವರಾಯ ಮಾರಬೇಕು ಮೊಸರಾಬಾರೆ ಗೊಲ್ಲ ಮೊಸರು ಮೊಸರೆನುತಲಿ ಮೇಲು-ಗೇರಿಗೆ ಬರುತಿರೆ ಕಂಡು ನೀಲವರ್ಣದ ಗೋವಳಸೆರಗು ಪಿಡಿದು ಲತಾಂಗಿಯ ತಡೆದಾ 1 ಮೊಸರ ಮಾರಬಂದವಳಲಿ ಸೆಣಸದಿರುಶಶಿನೀರೆ ಎಲ್ಲೆಂದಡತನವೆ ಬೇಡ ಈವಸುಧೆಯೊಳರಸಿಲ್ಲವೆ ನೀ ದೂರಸಾರಲೋಪಶುಗಾಹಿ ಬಿಡು ಎನ್ನ 2 ಲಂಡತನವು ನಮ್ಮೊಡನೆ ಕೊಳ್ಳವು ಹೋಗುಕಂಡ ಕಂಡವರಿಗಂಜುವುದ ಬಿಟ್ಟು ನನ್ನದಂಡೆಯ ಪಿಡಿಯದಿರೋ ನಾ ಸಸಾರಲ್ಲೊಗಂಡನುಳ್ಳವಳು ಕಾಣೋ 3 ಉಟ್ಟ ಸೀರೆಯ ಪಿಡಿದೆಳೆಯದಿರೆಲವೋಪಟ್ಟಣ ಕೊಡೆಯರಿಲ್ಲವೆ ಹೇಳಾಪಟ್ಟಗಟ್ಟಿತೆ ನಿನಗೆ ನಾ ಹೇಳುವೆಕಟ್ಟೆಯ ತಳವಾರಗೆ 4 ಶಂಕಶೂರರುಹನ ಪಂಕಜಗಜನಿಮ್ಮಡೊಂಕ ದುರುಬಿಗೆ ಅಂಜುವಳಲ್ಲಬೋಂಕನೆ ಒಳಗಾದರೆ ಕಡೆಗೆ ನಮ್ಮಮಂಕುಮಾಡಿತು ಗೋವಳಾ 5 ಇತ್ತಿತ್ತ ಬಾರೆಲೆ ಸಖಿಮುತ್ತಿನ ಹಾರವನೀವೆ ಎನ್ನಒತ್ತಾರೆ ಕುಳಿತರೆ ಪದಕವನೀವೆ ಎನ್ನಅರ್ತಿಯ ಸಲಿಸಿದರೆ ನಾ ನಿನಗೆಮುತ್ತಿನೋಲೆಯನೀವೆನೆ6 ಅಣಿ ಮುತ್ತಿನ ಕಂಠಮಾಲೆಯ ನಿನಗೀವೆಜಾಣಿಗೊಲ್ಲತಿ ಬಾಲೆ ಎಲೆ ಬಾಲೆ ನಿನ್ನಜಾಣ ಜಡೆ ಲಕ್ಷ್ಮೀನಾರಾಯಣನ ನೆನೆವುತ7
--------------
ಕೆಳದಿ ವೆಂಕಣ್ಣ ಕವಿ
ಯಾರ ಕೃತಕವು ಇದು ವಿಚಾರವನು ಮಾಡಿ ಕಾರಣೀಕದ ಸ್ವಪ್ನ ಕಾಣುತಿದೆ ನೋಡಿ ಪ ಕಾಳ ಮೇಘಧ್ವನಿಯು ಗಾಳಿ ಮಳೆ ಮಿಂಚುಗಳು ಧಾಳಿ ಇಡುತಿಹ ಸಿಡಿಲು ಬಹಳ ಕತ್ತಲೆಯು ಹಾಳೂರ ಮಧ್ಯದೊಳು ಬೀಳುತಿಹ ವಾರಿಗಳು ಮೃಗ ಮೈಮೇಲೆ ಬೀಳುವುದ 1 ವೃಷ್ಟಿ ತೀರುವ ತನಕ ಇಟ್ಟೆಡೆಯೊಳಿರುತಿರ್ದು ಕೆಟ್ಟ ಪಥದಲಿ ಚಾರುಗಟ್ಟಿವಿಳಿದು ಗಟ್ಟಿಯಾಗಿಹ ಚಳಿಯು ಹುಟ್ಟಿ ಕೈಕಾಲುಗಳು ಒಟ್ಟಾಗಿ ಕೂಡಿರ್ದು ದೃಷ್ಟಿ ಬಿಡುತಿಹುದು 2 ಬಿಸಿನೀರ ಮಳೆಯೊಳಗೆ ನುಸಿತ ಗುಣೆಯಸೆಯೊಳಗೆ ಎಸೆದು ತೋರುವ ಉರಿಯ ಹಸಿಯ ಮೆಣಸಿನೊಳು ಗಸಣಿಯನು ಕೈಕೊಂಡು ಕಸಮುಸುರೆಯಾಗಿರ್ದು ಉಸುರಲಾರದೆ ತೃಷೆಯ ಹಸಿದ ಬಳಲಿಕೆಯ 3 ನಿಂದೆಯಾಗಿಹ ಮೃಗದ ಚಂದವನು ಮೈಗೊಟ್ಟು ಬಂದುದೆನಗೈಶ್ವರ್ಯ ಎಂದು ಹರುಷಿಸುತ ಮಂದಹಾಸದ ಒಳಗೆ ಬಂಧನದಲಿರುತಿರ್ದು ಮುಂದುವರಿದು ವ್ಯಸನದೊಳು ಬಂದಿರ್ದ ಬಗೆಯ 4 ಮೂರು ಮಂದಿಯು ಬಂದು ಸೇರಿದರು ದೂರಿಡುವ ಆರು ಕರೆದರು ತಾನು ಬಾರೆನೆಂಬ ಮೇರೆಯಾಗಿಯೆ ಬಪ್ಪ ಮೂರಾರು ತಾ ಬಿಡುವ ಸಾರಿ ಚೋರತ್ವದಲ್ಲಿ ಪರವೂರ ಸುಲಿವ 5 ಮೇಲು ದುರ್ಗವ ಕಂಡು ಗಾಳಿಗೋಪುರವನ್ನು ಆಳ ಬಲುಹುಳ್ಳವನು ಅವಸರದೊಳು ನೂಲಯೇಣಿಯನಿರಿಸಿ ಏರಿಳಿದು ಬಾಹಾಗ ಕಾಲು ಜಾರಿಯೆ ಬಸಿದ ಶೂಲದೊಳು ಬೀಳುವುದು 6 ಹೀಗಿರುವ ಕೃತ್ಯಗಳು ನಾಗಶಯನನಿಗರುಹು ಬೇಗದೊಳು ಪರಿಹರಿಪ ಯೋಗವನು ಕೊಡುವ ನಾಗಗಿರಿವಾಸನಹ ವರಾಹತಿಮ್ಮಪ್ಪ ತೂಗುವನು ತೊಟ್ಟಿಲೊಳು ಆಗುವುದನಿತ್ತು 7
--------------
ವರಹತಿಮ್ಮಪ್ಪ