ಒಟ್ಟು 1471 ಕಡೆಗಳಲ್ಲಿ , 104 ದಾಸರು , 1201 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಬೆಳಗಿತು ಆರತಿ ಗುರುವಿಗೆ ತಾನೆ ತನ್ನಿಂದತೊಳಗುತ ಬೆಳಗುತ ಥಳಥಳಿಸುತ ತಾ ನಿತ್ಯದಿಂದ ಪ ಬ್ರಹ್ಮವಿಷ್ಣು ರುದ್ರೇಶ್ವರ ಶಿವರಾಸ್ಥಾನ ಸ್ಥಾನಗಳಲ್ಲಿಬ್ರಹ್ಮ ಆದಿಶಿವ ಅಂತ್ಯದವರೆಗೆ ಚೇತನಗೂಡುತಲ್ಲಿ 1 ಒಳಹೊರಗೆಲ್ಲವ ವ್ಯಾಪಿಸಿ ತುಂಬಿಯೆ ಪೂರ್ಣವು ತಾನಾಗಿರುತತಿಳಿದೆ ನೋಡಲಿ ರವಿ ಕೋಟೆಯ ಪ್ರಭೆ ಪ್ರಭೆಯನು ಬೀರುತ2 ಅತ್ತ ಮಿಂಚುತ ಇತ್ತ ಮಿಂಚುತ ಎತ್ತೆತ್ತಲು ಝಳಕುಚಿತ್ತ ಜ್ಯೋತಿ ಚಿದಾನಂದ ಗುರುವಿನ ಚಿಜ್ಯೋತಿಯ ಬೆಳಗು 3
--------------
ಚಿದಾನಂದ ಅವಧೂತರು
ಬೆಳಗಿರೆ ಆರುತಿಯ ಶ್ರೀ ತುಳಸಿಗೆ ಪ ಬೆಳಗಿರೆ ಆರುತಿ ತುಳಸಿದೇವಿಗೆ ನಿತ್ಯ ಲಲನೆಯರೆಲ್ಲ ಮಂಗಳವೆಂದು ಪಾಡುತ ಅ.ಪ ಸುಧೆಯ ಕಲಶದೊಳು ಮಧುವೈರಿನಯನದ ಮುದ ಜಲಬೀಳಲು ಉದುಭವಿಸಿದಳೆಂದು 1 ದರುಶನ ಮಾತ್ರದಿ ದುರಿತಗಳೋಡಿಸಿ ಸ್ಥಿರವಾದ ಸೌಭಾಗ್ಯ ಕರುಣಿಸುವಳೆಂದು 2 ಇಳೆಯೊಳು ಕಾರ್ಪರ ನಿಲಯ ಶ್ರೀನರಹರಿ ಒಲುಮೆಯ ಪಡೆದ ಶ್ರೀ ತುಳಸಿದೇವಿಗೆ ಬೇಗ3
--------------
ಕಾರ್ಪರ ನರಹರಿದಾಸರು
ಬೆಳಿಯೋ ಬೆಳಿ ಮನವೇ ಬೆಳಿಕಂಡ್ಯಾ ಬೆಳಿ ಮನವೇ ಬೆಳಿ ನಿನ್ನ ಹೊಲವನು | ಇಳೆಯೊಳು ಯಣಿಗಾಣದ್ಹಾಂಗೆ 1 ಗುರುವಿನಭಯ ಕೊಂಡು ಸತ್ವದಾ ಹೊಲ ಹಿಡಿದು | ಜರಿದು ಸಂಗಿಗಳನ್ನೆಲ್ಲಾ 2 ವಿವೇಕವೇಯಂಬಾ ನೇಗಿಲ ಎಂಟು | ಭಾವವೆಂಬೆತ್ತುಗಳಿಂದ 3 ದೃಢಪಾಶದಿಂದಲಿ ಕಟ್ಟಿ ಯಚ್ಚರವೆಂಬಾ | ಒಡನೆ ಶಿಕ್ಷದಿ ನಡೆಸುತಾ 4 ಜ್ಞಾನ ಭಕ್ತಿ ವೈರಾಗ್ಯ ತಾಳದ ಬಲದಿ | ಅನನ್ಯ ಭಾವ ಕೂರಿಗೆಯಿಂದಾ 5 ಗುರು ಕರುಣ ಮಳೆ ಗರೆಯೆ ವೇದಾಂತ ಬೀಜ | ಭರದಿ ಬಿತ್ತಿ ನಾದುವಂತೆ 6 ಅನುಮಾನ ಕಸ ತೆಗೆದು ಬೋಧವ ಯಡಿಹಾಯ್ದು| ಧನಗಾಳ ತುಂಬಿಡುವಂತೆ 7 ವರಕ್ಷೋಭ ಯಂಬಾ ನುಡಿ ಹಕ್ಕಿ ಬರಗುಡದೆ | ಪರಮ ಜಾಗೃತಿಯ ಕವಣಿಯಿಂದಾ 8 ಬೇರೆ ಬೇರೆ ದೋರ್ವುದೆಲ್ಲಾ ವಬ್ಬುಳಿ ಮಾಡಿ | ಸಾರಿಹ ಶೃತಿ ವಾಕ್ಯದಿಂದ 9 ದೋರುವಾ ದೃಶ್ಯ ಹೆಕ್ಕಲ ಬಿಟ್ಟು ವಳಗಿರುವ | ತೂರಿ ಅಹಂಭಾವ ಹೊಟ್ಟವನು 10 ದೈನ್ಯವನು ಹಿಂಗಿ ಬಳಕೊಂಡು ಅನ್ಯರಾ ಮರೆ ಹೋಗದಂತೆ 11 ಪರಿಪೂರ್ಣಾದ ಬಳಿಕ ಒಕ್ಕಲು ತನಕ | ಮರುಳೆ ನೀ ಸಿಕ್ಕದಿರು ಕಂಡ್ಯಾ 12 ಸಂಚಿತ ಸರ್ವ ಬಿಡಿಸಿಕೊ ಸುತ ಪ್ರಭು ಗುರು ಮಹಿಪತಿ ವಲುಮೆಯಿಂದಾ 13
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ಬೆಳುದಿಂಗಳಿನೊಳು ಬೇಟೆಯನಾಡಿರಿಬಲ್ಲವರಾದವರೆಲ್ಲಒಳ್ಳೊಳ್ಳೆಯವರು ಕೂಡಿ ಆಡಿರಿ ಶಮದಮ ಶಾಂತರು ಎಲ್ಲ ಪ ತನ್ನ ಸರಿಯದ ಅವಿದ್ಯೆ ಹುಲಿಯದುಘುಡುರು ಘುಡುರು ಘುಡುರೆಂದೆನಲುಸುಮ್ಮನೆ ಪ್ರಣವದ ಧನುವನು ಎಳೆದು ನಾದ ಬಾಣದಿ ಬೀಳಿಸಿರಿ 1 ನಾನು ಎಂಬ ಕರಡಿಯು ಬಂದುಅಡರಲು ನಿಮ್ಮನು ನಿಲುವುದ್ಧಸ್ವಸ್ಥ ವಿವೇಕದ ಕೋಲಲಿ ಬಡಿಯಿರಿಕೆಡಹಿರಿ ನೋಡದೆ ನೀವೆಲ್ಲ2 ಅಪರೋಕ್ಷವೆಂಬ ಬಲೆಯನೆ ಒಡ್ಡಿದುರ್ಗುಣ ಮೃಗಗಳನೆ ಬಡಿದುಭವ ಹರ ಚಿದಾನಂದನ ನೆನೆಯುತಬೇಟೆಯನಾಡಿರಿ ಎಲ್ಲ 3
--------------
ಚಿದಾನಂದ ಅವಧೂತರು
ಬೇಡವೋ ಬ್ರಾಹ್ಮಣ ದ್ರೋಹ ಬೇಡವೋ ಪ ಮಾಡಬೇಡವೋ ನಿನಗೆ | ಕೇಡು ತಪ್ಪದು ಕೊನೆಗೆನಾಡೊಳಗಪಕೀರ್ತಿ | ಗೀಡಾಗಿ ನೀ ಕೆಡ ಅ.ಪ. ಭಾರ ನೀನು - ಅಂಥಅತ್ಯಂತವಲ್ಲವಿದೇನು - ನಿನ್ನ ||ಚಿತ್ತ ದೃಢ ಮಾಡು ಉತ್ತಮ ವಿಪ್ರರವೃತ್ತಿಯ ಸೆಳದು ಉನ್ಮತ್ತನಾಗಿ ಕೆಡ 1 ಸೂಸುವ ನದಿಯೊಳು ಬಿದ್ದು - ಇನ್ನುಈಸಲಾರದೆ ಮುಳುಗೆದ್ದು - ಅಂಜಿ ||ಈಸು ಬುರುಡೆ ಬಿಟ್ಟು ಬೀಸೋ ಕಲ್ಲನೆ ಕಟ್ಟಿಈಸುವ ತೆರನಂತೆ ಭೂಸುರ ದ್ರವ್ಯವು 2 ನೃಗರಾಯನೆಂಬ ಭೂಪತಿಯು - ವಿಪ್ರ-ರಿಗೆ ಗೋದಾನವನಿತ್ತ ಬಗೆಯ ಕೇಳಿ ||ಅಗಲಿ ತಮ್ಮೊಳು ತಾವೆ ಜಗಳ ಪುಟ್ಟಿ ಆ ನೃ-ಪಗೆ ತೊಣ್ಣೆಯಾಗೆಂದ್ಹಗರಣವನೆ ಕೇಳು 3 ರಾವಣನೆಂಬುವ ದುಷ್ಟ - ಅವ-ದೇವತೆಗಳ ಸೆರೆಯಿಟ್ಟ ||ದೇವನರಸಿ ಸೀತಾದೇವಿಯ ನೆಪದಿಂದರಾವಣನ ಕೊಂದು ದೇವತೆಗಳ ಕಾಯ್ದನೊ 4 ಇನ್ನೆಷ್ಟು ಹೇಳಲೊ ಸಾಕ್ಷಿ - ಬ್ರಾಹ್ಮ -ರನ್ನವ ತೆಗೆದರೆ ಶಿಕ್ಷಿ ಮೋ-ಹನ್ನ ವಿಠ್ಠಲರಾಯ ತನ್ನಯ ಭಜಕರಬೆನ್ನ ಬಿಡದಲೆ ಕಾಯ್ವ ಇನ್ನಾದರು ಕೆಡ 5
--------------
ಮೋಹನದಾಸರು
ಬೇಡವೋ ಸ್ತ್ರೀಯರ ವಶದಲಿಬಿದ್ದು ಭವಕೆ ಬೀಳಲಿ ಬೇಡ ಪ ಒನಪುಗಳ ಸುಳ್ಳು ವಾಲಿಗಲು ಸಟೆವೈಯ್ಯಾರ ನಚ್ಚಲಿ ಬೇಡ 1 ಮೋರೆ ಮುರುಕಿ ಪದಮೂಗನೇರಿಸುವುದು ಮುಸುಕನು ನೀ ನಚ್ಚಬೇಡಸೀರೆಯನೊಲೆಯುವುದು ಸೆರಗನು ಸಡಿಲಿಪನಾರಿಯ ನಂಬಲು ಬೇಡ 2 ನರಕದ ಕುಂಡವು ನಾರಿಯೆಂಬವಳು ಸತ್ಯ ನೋಡುತ ನೀ ಬೀಳಬೇಡಕರುಣಿ ಚಿದಾನಂದ ಕಟಾಕ್ಷವನು ಪಡೆ ಕಾಲಗೆ ನೀ ಸಿಕ್ಕಬೇಡ 3
--------------
ಚಿದಾನಂದ ಅವಧೂತರು
ಬೇಡಿಕೊಂಬುವೆನಯ್ಯ ಬೇಗ ಬಾರಯ್ಯ ಮಾಡು ಎನ್ನೊಳೂ ದಯ ಪಂಢರಿರಾಯ ಪ ನಾಶನ ಜಗದೊಳಗೆ ಭಾಷಗಡಕನು ಆಗಿ ಸಾಸಿರೊರುಷಿರ್ದೇನು ಹೇ ಈ ಜನುಮ ಶೇಷನಯನನೆ ನಿನ್ನ ದಾಸನ ಅತಿಶಯ ದೋಷವನು ಗಣಿಸದೆ ಪೋಷಿಸೈ ಈಶ 1 ಅರಿದರಿದು ಪತಂಗ ಉರಿಯೊಳಗೆ ಬೀಳ್ವಂತೆ ಖರೆಯ ಈ ಸಂಸಾರ ಸ್ಥಿರವೆಂದು ನಂಬಿ ಪರಿಪರಿಯ ಪಾಪಂಗಳಿರಯದೆ ಮಾಡಿ ನಾ ನರಕಕ್ಕೆ ಗುರಿಯಾದೆ ಪೊರೆಯೊ ಶ್ರೀ ಹರಿಯೆ 2 ಸಿಂಧುಶಯನನೆ ಎನ್ನ ಮಂದಮತಿಯತನದ ಲಿಂದ ಮಾಡಿದ ಪಾಪ ಚಿಂದಿಸೈ ಬೇಗ ಹಿಂದಕಾದದ್ದಾಯ್ತು ಮುಂದೆ ಎನ್ನಯ ಬವಣಿ ಚಂದಾಗಿ ತಿದ್ದಯ್ಯ ತಂದೆ ಶ್ರೀರಾಮ 3
--------------
ರಾಮದಾಸರು
ಬೇಡುವರೊ ಸುಖ ಬೇಡರೊ ದುಃಖವ | ಮಾಡಾರೋ ಅವರ ಉಪಾಯವ | ಜನ | ಬೇಡುವರೋ ಪ ಇಟ್ಟಿಕಲ್ಲನು ತಂದು ಕಿಟ್ಟಿ ಬೀಸುವರೊ | ಕುಟ್ಯಾರೋ ರಂಗವಲ್ಲಿಯಾ | ಜನ 1 ಸಾಲು ಸಾಲೆಮ್ಮೆಯ | ಸೋಲದೆ ತೊಳೆವರು | ಸಾಲಿಗ್ರಾಮಕ್ಕ ಹಾಲೆರೆಯರೊ | ಜನ | 2 ತ್ರಿಜಗವಂದಿತ ನಮ್ಮ ವಿಜಯವಿಠ್ಠಲನ | ಭಜನೆಯಾ ಮಾಡದೆ ಸೋಲ್ವರೋ | ಜನ | 3
--------------
ವಿಜಯದಾಸ
ಬೋಧದ ಘನಮಳೆಯುಸುರಿದು ಮುಕುತಿಬೆಳೆಯು ಬಂದುದು ಪ ಮಾಯೆಯ ಬಲು ಬಿಸಿಲುತಾಪ ಕಾಯದೊಳಗೆ ಹೆಚ್ಚುತಿರಲು ಹೇಯವೆನಿಸಿ ಜನನಮರಣ ಮುಮುಕ್ಷುತ್ವ ಮೋಡಗವಿದು 1 ಸುವಿಚಾರದ ಮಿಂಚು ಹೊಳೆದು ಶ್ರುತಿಶಿರಗಳ ಗುಡುಗು ಹೊಡೆದು ಶ್ರವಣದ ಸುಳಿಗಾಳಿ ಬೀಸಿ ಭವತಾಪವ ಹರಿಸುತಿರಲು 2 ವೈರಾಗ್ಯದ ರಂಟೆ ಹೊಡೆದು ಶಮೆದಮೆಗಳ ಹರತೆಯಾಗಿ ಪರಮಾರ್ಥದ ಬೀಜ ಬಿದ್ದ ನರಜನ್ಮದ ಹೊಲದ ಮೇಲೆ 3 ದೃಷ್ಟಿಯೊಳಗಿನಾನಂದ ಸೃಷ್ಟಿಯಾಗಿ ತೋರಿ ಚಂದ ಶ್ರೇಷ್ಠನಾದ ಶಂಕರಗುರುವರನ ಸಹಜಕರುಣೆಯಿಂದ 4
--------------
ಶಂಕರಭಟ್ಟ ಅಗ್ನಿಹೋತ್ರಿ
ಬ್ಯಾಗ ಬಾರೋ ಗುರುರಾಘವೇಂದ್ರರಾಯಾ ಬಾಗಿ ನಮಿಪೆ ಮಹರಾಯಾ ಪ ಯೋಗಿ ಮಧ್ವಮತದಾಗಮದಿಂದಲಿ ಭಾಗವತರು ಶಿರಬಾಗಿ ಪಾಡುವರೋ ಅ.ಪ ಕುಂದಣಮಣಿಮಯ ಸ್ಯಂದನದೊಳತಿ ಸುಂದರ ಶುಭತರ ರೂಪ - ದಿಂದಲಿ ರಾಜಿಪಾಮಂದಭೋಧ ನಿಜ ನಂದದಾಯಕ ಯತಿಕುಲ ದೀಪ ಛಂದದಿ ಭಕುತ(ರ) ಕುಂದನಿಚಯಕೆ ನಿಜ ಚಂದಿರ ಸಮ ಭೂಪಾ - ಪಾದ ದ್ವಂದ್ವವು ನಿಜರಿಗೆ ನಂದ ನೀಡುವ ಪ್ರತಾಪಾ ವಂದಿಸಿ ಗುಣಗಳ ವೃಂದ ಪೊಗಳುವ ಮಂದ - ಜನರು ಬಲು - ಸುಂದರ ಶುಭಗುಣ ದಿಂದ ಶೋಭಿಪÀ ಜನ - ಸಂದಣಿಯೊಳು ನಿನ್ನ ಸುಂದರ ಮೂರುತಿ - ಛಂದದಿ ನೋಳ್ಪರೊ 1 ಕನಕ ಮಣಿಮಯ ಘನಸುಕೊಡೆಗಳು ಮಿನುಗುವ ಚಾಮರ ಚೋದ್ಯವೋ ಅನುಗ - ಕರಗತ ಮಣಿಮಯ ಛಡಿಗಳ ಅನುಪಮ ಭಾರವೋ ಮುನಿಜನ ಶಿರಮಣಿಸಿ ಗುಣ ಗಣ ಎಣಿಸುವ ಗಂಭೀರವೋ ತನು - ಮನ - ಮನಿ - ಧನ ವನುತೆರ ನಿನಗನು - ಮಾನಮಾಡದೆ ನೀಡುವಗಾಧವೋ ಘನ ಸಂತೋಷದಿ - ಮನದೊಳು ನಲಿಯುತ ಕುಣಿದಾಡುತ - ದಣಿಯದೆ ಕರಚಪ್ಪಳಿ | ಕ್ಷಣ ಕ್ಷಣದಲಿ ತ್ಮಮ - ತನು ಮರೆದೀಪರಿ ಜನರೊಳು ನಮ್ಮ ಜನುಮ ಸಫಲವೆಂಬುವರೋ 2 ಪಟುತರ ಭಟರಾರ್ಭಟಿಸುವ ಮಹ ಚಟ - ಚಟ - ಚಾಟ ಶಬ್ಧವೋ ಕುಟಿಲ ವಿಮತ ಘನ ಪಟಲ ವಿದಾರಣ ಚಟುಲ ಸ್ವಮತ ಸಿದ್ಧಾಂತವೋ ಕುಟಿಲಾಳಕಿಯರ ಕುಣಿಯುವ ಪದದಿ ಸಂ - ಘಟಿತ ಗೆಜ್ಜೆಗಳ ಶಬ್ಧವೋ ಪಟು ಗುರುಜಗನ್ನಾಥವಿಠಲರ ದಾಸರ ಧಿಟ ಪದ ಸಂಗೀತವೋ ಧಿಟಗುರುರಾಯನೆ - ಭಟರುಗಳ ಮಹÀಸು - ಕಟಕದಿ ಮೋದೋ - ತ್ಕಟದಲಿ ಇಷ್ಟವ ಥಟನೆ ಬೀರುತ ಬಲು ಪುಟಿದಾಡುತ ಹರಿ ಭಟ ಜಲಜೋತ್ಕಟ ದಿವಾಕರ 3
--------------
ಗುರುಜಗನ್ನಾಥದಾಸರು
ಬ್ಯಾಡ ಬ್ಯಾಡಿರೆಂದ ಅವರೊಳು ಪಂಥಬ್ಯಾಡ ಬ್ಯಾಡಿರೆಂದು ಬ್ಯಾಡ ಬ್ಯಾಡ ಪಂಥ ನೋಡಿಕೊ ರುಕ್ಮಿಣಿಮಾಡೋರು ಮುಖಭಂಗಬೇಡಿಕೊಂಡೆನು ಭಾವೆ ಪ. ಹರದೆಯರಾಡಿದ ಮಾತು ಹರಿಯು ಕೇಳುತಬೇಗ ಕರೆಯ ಹೋಗೆಂದ ಮಡದಿಯರ ಕರಿಯ ಹೋಗೆಂದ ಮಡದಿಯರ ದ್ರೌಪತಿಯೆಸರಿಯಲ್ಲ ಪಂಥ ಬಿಡಿರೆಂದ1 ಹಾದಿ ಬೀದಿಯ ಮಾತು ಸಾಧಿಸುವರೆ ನೀವುವೇದಾಂತ ಮಳೆಯ ಗರೆದಾರುವೇದಾಂತ ಮಳೆಯ ಗರೆದಾರು ನಿಮ್ಮ ಮುಖಆದೀತು ಸಣ್ಣ ಸಭೆಯೊಳು 2 ಅತ್ತಲಿತ್ತಲೆ ಮಾತು ಜತ್ತು ಮಾಡೋರೆನೀವುಶ್ರುತ್ಯರ್ಥವೆಲ್ಲ ಸುರಿಸೋರುಶ್ರುತ್ಯರ್ಥವೆಲ್ಲ ಸುರಿಸೋರು ನಿಮ್ಮಮುಖ ಬತ್ತೀತು ಒಂದು ಕ್ಷಣದಾಗೆ 3 ಮಂದರಧರ ತನ್ನ ತಂಗಿಯರ ಕರೆಯೆಂದು ಮಂದಹಾಸದಲಿ ನುಡಿದನುಮಂದಹಾಸದಲಿ ನುಡಿದನು ಭಾವೆರುಕ್ಮಿಣಿ ಬಂದರು ಭಾಳೆ ವಿನಯದಿ4 ಆರು ಮಂದಿ ಹರಿಯ ನಾರಿಯರುಹದಿನಾರು ಸಾವಿರ ಮಂದಿ ಸಹಿತಾಗಿಹದಿನಾರು ಸಾವಿರ ಮಂದಿ ಸಹಿತಾಗಿ ಬಂದರು ನಾರಿ ದ್ರೌಪದಿಯ ಕರೆಯಲು5 ನೂರುಮಂದಿ ಹರಿಯನಾರಿಯರುತಂತಮ್ಮ ಹಾರಭಾರಗಳ ಅಲವೂತಹಾರಭಾರಗಳು ಅಲವೂತ ಬಂದರು ನೀರೆ ಸುಭದ್ರೆಯು ಕರೆಯಲು 6 ಪನ್ನಂಗ ವೇಣಿಯರು ಮನ್ನಿಸಿ ಹರಿಯಾಜ್ಞೆಚನ್ನ ರಾಮೇಶನ ಮಡದಿಯರು ಚನ್ನ ರಾಮೇಶನ ಮಡದಿಯರು ಬಂದರುಕನಿ ದ್ರೌಪತಿಯ ಕರೆಯಲು 7
--------------
ಗಲಗಲಿಅವ್ವನವರು
ಬ್ಯಾಡವೊ ಕುವಾದಿ ಬ್ಯಾಡವೊ ಪ ಬ್ಯಾಡವೊ ಕೇಳು ಕುವಾದಿ ನೀ ನಾಡುವದುಚಿತವಲ್ಲ ಧಾದಿ | ಆಹಾ | ಮೂಢ ನಿನಿಗದಾವ ಖೋಡಿ ಬೋಧಿಸಿದನೊ ನಾಡಿಗೊಡಿಯ ರಂಗಗೀಡು ನೇನೆಂಬದುಅ.ಪ ಎಲ್ಲ ಜೀವರು ದೇವವೊಂದೆ ಭೇದ ವಿಲ್ಲೆಂದಾಡುವುದು ಧಂದೆ ಯಮ ಕೊಲ್ಲದೆ ಬಿಡ ನಿನ್ನ ಮುಂದೆ ನಿನ್ನ ಹಲ್ಲು ಮುರಿವನೊಂದೊಂದೆ || ಆಹಾ || ಉಳ್ಳಿಗಡ್ಡಿಯ ಉದ್ದಿ ಬೆಳ್ಳಗೆ ತೊಳೆದರೆ ಅಲ್ಲಕ್ಕೆ ಸರಿಯೇನೊ ಬಲ್ಲವರೊಪ್ಪಾರು 1 ಇದ್ದು ನೀ ಇಲ್ಲೆಂತೆಂಬಿ ಕಾಲಿ ಲೊದ್ದರೆ ಬಲು ನೊಂದು ಕೊಂಬಿ ಇ ಲ್ಲಿದ್ದವರೆಲ್ಲ ಬ್ರಹ್ಮ ನಾನೆಂಬಿ ಆ ಪರ ಬುದ್ಧಿಯಿಂದ ಶುದ್ಧ ಎಂತೆಂಬಿ || ಆಹಾ || ಬಿದ್ದುಹೋಯಿತು ನಿನ್ನ ಸಿದ್ದಾಂತವೆಲ್ಲವು ಸದ್ದು ಎನ್ನ ಕೂಡ ಗೆದ್ದು ಹೋಗಲಾರಿ ಬ್ಯಾಡವೊ 2 ಒಬ್ಬ ಬ್ರಹ್ಮ ಎಲ್ಲಾ ಮಾಯವೊ ಇ ನ್ನೊಬ್ಬನೆ ಎಲ್ಲಿಹ ಸುಖವೊ ಕುಹಕ ಶಾಸ್ತ್ರವೆಲ್ಲ ಮೃಷವೋ ಉಬ್ಬಿ ಆಡುವುದು ನಿರಯವು || ಆಹಾ || ಈ ಬಗೆಯಾಯಿತು ನಿನಗೊಬ್ಬಗೆ ಈ ಮಾತು ಬ್ಯಾಡವೊ 3 ಒಂದೆ ಆದರೆ ನಿನಗೆಲ್ಲ ನಿನ ತಂದೆಯಿಂದ ನೀ ಪುಟ್ಟಿದ್ದೆಲ್ಲ ನಿನ್ನ ತಂದೆ ನೀನು ಒಂದೆ ಎಲ್ಲಿ ಇನ್ನು ಛಂದಾಗಿ ನೀ ತಿಳಿಯೊ ಸೊಲ್ಲ || ಆಹಾ || ಸತಿ ನಿನಗೇನಾದಳೊ ಮನುಜ ಮಂದ ಮತಿಯೆ ತಾಯಿಗಂಡ ನೀನಾದೆಲ್ಲೋ 4 ಅನ್ನಕ್ಕೆ ಪರಬ್ರಹ್ಮನೆಂಬಿ ಈಗ ಅನ್ನ ಚಲ್ಲಲು ದೋಷವೆಂಬಿ ನಿತ್ಯ ಚನ್ನಾಗಿ ಪರಿಪೂರ್ತಿಗೊಂಬಿ ಈ ಅನ್ನ ನಾನು ವೊಂದೆ ಎಂಬೀ || ಆಹಾ || ನಿನ್ನ ದೇಹಕ್ಕೆ ರೋಗವು ಬಂದರೆ ನೀನು ಅನ್ನವ ಬಿಟ್ಟಿನ್ನು ಚನ್ನಾಗಿ ಮಲುಗುವಿ 5 ಭೇದವಿಲ್ಲೆಂತೆಂದರೆ ನೀನು ಮಾದಿಗರೆಲ್ಲ ಒಂದೇನೊ ಸರಿ ಹೋದವರೆಂಜಲ ತಿನ್ನೋ ಕಹಿ ಸ್ವಾದವು ನಿನಗಿಲ್ಲವಿನ್ನು ||ಆಹಾ|| ಓದನಾದರು ವೊಂದೆ ಮೇದ್ಯವಾದರು ವಂದೇ ಭೇದವಿಲ್ಲದೆ ತಿಂದು ಹೋದಿಯೋ ನರಕಕ್ಕೆ 6 ಎಲ್ಲವೂ ಬ್ರಹ್ಮಸ್ವರೂಪಾ ಬ್ಯಾರೆ ಇಲ್ಲೆಂದು ನಿನಗೆ ರೂಪಾ ಭೇದವಿಲ್ಲೆಂತೆಂಬುವದು ನಿಶ್ಚಯವು ವಾಕು ಸಲ್ಲದೆ ಇನ್ನು ಪೋದಾವು ||ಆಹಾ || ಬಲ್ಲಿದ ಪುರುಷನು ಮೆಲ್ಲನೆ ನಿನ್ನ ಸತಿ ಯಲ್ಲಿ ಮಲಗಿದರೆ ನೆಲ್ಲಿ ನೀ ಸೈರಿಸಿ7 ನಾಶವಿಲ್ಲೆಂಬುದೆ ಸತ್ಯ ದೋಷ ಮಿಥ್ಯ ಜಗ ಭೃತ್ಯ ಬಿಡದೆ ನಿತ್ಯ ||ಆಹಾ|| ದ್ವಾಸುಪರ್ಣವೆಂಬೊ ಈ ಶ್ರುತಿಗರ್ಥವು ಲೇಸಾಗಿ ತಿಳಿಯದೆ ಘಾಶಿಪಡುವಿ ವ್ಯರ್ಥ 8 ಈಶನು ನೀನಾದರೇನು ಸರ್ವ ದೇಶ ಪೋಷಿಸದೆ ಇಪ್ಪೋರೆ ನಿನ್ನ ಸಾ ಹಸ ವ್ಯರ್ಥ ಮಾಡೋರೆ ಹರಿ ದಾಸರು ಕಂಡು ಸಹಿಸೋರೆ ||ಆಹಾ || ಸತಿ ಸುತರು ಕ್ಲೇಶ ಪಡುವುದು ಬಿಡಿಸಲಾರಿಯೊ ಲೇಶ 9 ಗುರುದೈವವಿಲ್ಲವೊ ನಿನಗೆ ಒಬ್ಬ ಸರಿಯಿಲ್ಲ ಈ ಧರೆಯೊಳಗೆ ಯಾರು ಹಿರಿಯ ಕಿರಿಯರಿಲ್ಲ ನಿನಗೆ ನೀನು ಖರ ಶಬ್ದಕಿಂತ ಹೊರಗೆ ||ಆಹಾ || ಎರಡಿಲ್ಲಾಯೆಂಬೊದೆ ಇರುಳಿಲ್ಲ ಹಗಲಿಲ್ಲಾ ನರಕ ಸ್ವರ್ಗ ವಂದೇ ಅರಿಯಾದೆ ಮುಳುಗುವಿ 10 ವಂದನೆ ನಿಂದ್ಯಗಳೊಂದೇ ನಿನಗೆ ಗಂಧ ದುರ್ಗಂಧವು ವಂದೇ ಕೆಟ್ಟ ಹಂದಿಯೆಲ್ಲ ನೀನು ವಂದೇ ನಿನ್ನ ಕೊಂದರೆ ದೋಷವಿಲ್ಲವೆಂಬೆ ||ಆಹಾ|| ಎಂದಿಗೂ ಈ ಮಾತು ನಿಂದಾವೆ ನಿನಗಿನ್ನು ಮುಂದಕ್ಕೆ ಬರಲಾರಿ ಮಂದಮತಿಯೆ ಖೋಡಿ11 ಜಗದೊಳಗೆ ನೀ ನಿಂತು ಇದು ಜಗವಲ್ಲವೆಂಬೋದಕ್ಕಿಂತು ನೋಡಿ ನಗುವರೋ ಅಶುದ್ಧ ಜಂತು ಜಿಂಹ್ವೆ ಬಿಗಿದು ಕೋಯಿಸುವ ಯಮನಿಂತು ||ಆಹಾ || ಹಗಲು ಇರುಳು ವಂದೆ ನಗುತ ನಗುತಾ ಕಂಡು ತೊಗಲು ದೇಹವು ನಿನ್ನದಗೆ ಮಾಡುವುದು ವ್ಯರ್ಥ 12 ಸ್ವಾಮಿ ನಿನಗೆ ಬ್ಯಾರಿಲ್ಲಾ ನಿತ್ಯ ನೇಮ ಕರ್ಮವು ಬ್ಯಾರೆ ಸಲ್ಲ ಒಂದು ಕಾಮಿನಿ ನಿನಗೆ ಬೇಕಲ್ಲ ಪೂರ್ಣ ಕಾಮನು ನೀನೆಂಬೆಯಲ್ಲಾ ||ಆಹಾ|| ಗ್ರಾಮ ಭೂಮಿಗಳ್ಯಾಕೊ ತಾಮಸ ನಿನಗಿನ್ನು ತಾಮಸರಿಗೆಲ್ಲ ಸ್ವಾಮಿಯಾಗಿರು ಹೋಗೋ 13 ಕಾಣದೆ ಬಗಳುವೆ ಮಾಯಿ ನಾಯಿ ನಿನಗೆ ತಂದೆ ತಾಯಿ ಇನ್ನು ಕಾಣುತ ಬೊಗಳೋದು ನಾಯಿ ಈ ನಾಯಿ ಕಚ್ಚಿ ನೀ ಸಾಯಿ ||ಆಹಾ || ಬಾಯ ಮುರಿವಾ ನಿನ್ನ ನ್ಯಾಯದಿಂದಲಿ ವಾಯು ಕಾಯ ಖಂಡ್ರಿಸುವನೊ 14 ಇಷ್ಟು ಹೇಳಿದರೆ ನೀ ಕೇಳಿ ನೀ ವ್ಯರ್ಥ ನಿಷ್ಠುರಾಡಿ ನೀ ಬಾಳೀ ನಿನ್ನ ಕಟ್ಟಿಗೆ ಮುರಿದಂತೆ ಶೀಳಿ ಬಾಯ ಕುಟ್ಟಿ ತುಂಬುವ ಯಮಧೂಳಿ ||ಆಹಾ|| ಸೃಷ್ಟಿಗೊಡಿಯ ನಮ್ಮ ವಿಜಯವಿಠ್ಠಲನ ಮುಟ್ಟಿ ಭಜಿಸದಲೆ ಭ್ರಷ್ಟ ಮನುಜ ನೀ ಅಷ್ಟವೆಂದೆಂಬೋದು ಬ್ಯಾಡವೊ 15
--------------
ವಿಜಯದಾಸ
ಬ್ರಹ್ಮಕೊರವಂಜಿ ಸುರರು ಕಿನ್ನರರು ಸ್ಮರಣೆ ಮಾಡುವ ಪಾದ ಕುರುಪತಿಯ ಗರ್ವವನು ಪರಿಹರಿಸುವ ಪಾದ ಪರಮ ಯೋಗಿಗಳ ಹೃತ್ಕಮಲದಲ್ಲಿಹ ಪಾದ ಪಾದ ಪದ್ಮವನು ನೆನೆವೆ ನಾನು 1 ದಾನವಾರಿಯ ಚೆಲ್ವ ಜಾನು ಜಂಘೆಗಳೆಸೆವ ಮೀನ ಖಂಡಗಳ ಪೆರ್ದೊಡೆಯ ಸೊಬಗಿನ ಭಾನುಕೋಟಿ ಪ್ರಕಾಶದಂತೆ ವರಕಾಂತಿಯಲಿ ಆನಂದದಿಂದಲಿ ಮೆರೆವ ಮೂರುತಿಯ ನೆನೆವೆÀ ನಾನು 2 ಮಿಸುನಿ ಒಡ್ಯಾಣ ಕಾಂಚಿಯದಾಮ ತೆಳ್ವಸುರ ಬಿಸಜನಾಭನ ಬಾಹುಪುರಿಯ ಸೊಬಗಿನ ಎಸೆವ ಗದೆ ಶಂಕಚಕ್ರವು ಪದ್ಮಕರದಿ ಶೋ ಭಿಸುತಿರುವ ಕಂಬುಕಂಧರದ ಮೂರುತಿಯ ನೆನೆವೆ ನಾನು 3 ಕದಪು ಕಂಗಳು ಎಸೆಯೆ ಕರ್ಣಕುಂಡಲದ ಸಂಪಿಗೆಯ ನಾಸಿಕದ ರನ್ನ ತುಟಿ ಝಗಝಗಿಸೆ ಕುಡಿಹುಬ್ಬುಗಳು ಎಳೆಯ ಮನ್ಮಥನ ಚಾಪದಂತೆಸೆವ ಮೂರುತಿಯ ನೆನೆವೆÀ ನಾನು 4 ಅರೆದಿಂಗಳಂತೆಸೆವ ನೊಸಲ ಕಸ್ತೂರಿತಿಲಕ ಹೊಳೆÀವ ಕಿರೀಟ ಮಸ್ತಕದಿ ಢಾಳಿಸುವ ಅಲಸದೀರೇಳ್ಜಗವ ಕರುಣದಲಿ ರಕ್ಷಿಸುವ ಹೆಳವನಕಟ್ಟೆ ಶ್ರೀ ವೆಂಕಟೇಶ್ವರನ ನೆನೆವೆ ನಾನು 5 ಕಂಸಾಸುರನಿಟ್ಟ ಸೆರೆಯ ಮನೆಯೊಳು ಕಷ್ಟಪಡುತಲಿ ದೇವಕಿನಿ- ಮಿಷ ಯುಗವಾಗಿ ಕಳೆಯುತಿದ್ದಳು ನಿತ್ಯಾನಂದನ ನೆನೆಯುತಾ ಕಂಸರಿಪು ನಾರಾಯಣನು ಜನಿಸುವನೆಂದು ಅರುಹುವೆನೆನುತಲಿ ಧರಿಸಿದ ಆದನೆ ಕೊರವಿ 6 ಮಲ್ಲಿಗೆಯ ವನಮಾಲೆಯ ಚಂದ್ರಗಾವಿಯನುಟ್ಟು ಪಣೆಯೊಳು ತಿದ್ದಿತಿಲಕವನಿಟ್ಟನು ಗಂಧ ಕಸ್ತೂರಿ ಪರಿಮಳವನು ಲೇಪಿಸಿ ಸರ್ವಾಂಗದಿ ಭಾಸ್ಕರನಂದದಿ ಆದನೆ ಕೊರವಿ 7 ಗುಂಜಿಯ ದಂಡೆಯು ತೋಳಭಾಪುರಿ ಗಲ್ಲಕೊತ್ತಿದ ವೀಳ್ಯವು ಮಂಜಾಡಿಯಸರ ಹವಳ ಸರ ಹತ್ತೆಸರವಾ ಕೊರಳಲಿ ಹೊಳೆಯಲು ಅಂಜನವನಿಟ್ಟು ಅಲರಗಣ್ಣಿಗೆ ಅತಿಹರುಷದಿಂದ ಬೇಗದಿ ಆದನೆ ಕೊರವಿ 8 ಮುತ್ತು ಮಾಣಿಕ ಹೊನ್ನಗೂಡೆಯ ಪಿಡಿದು ಉತ್ತಮ ಶಿಶುವ ಬೆನ್ನಲಿ ಕಟ್ಟಿ ಚಿತ್ತದೊಳಗೆ ನರಹರಿ ಶರಣೆನುತ ಸತ್ಯಲೋಕದಿಂದಿಳಿದಳೆ ಕೊರವಿ 9 ಮಧುರಾ ಪಟ್ಟಣಕಾಗಿ ಬಂದಳೆ ಕೊರವಿ ಹದಿನಾರು ಬಾಗಿಲ ದಾಟಿ ನಡೆದಳು ಮದಗಜದಂತೆ ಮೆಲ್ಲಡಿಗಳನಿಡುತ ಬೆದರದೆ ಕೇರಿಕೇರಿಯಲಿ ಸ್ವರಗೈದು 10 ಮನೆಮನೆ ಬಾಗಿಲಗಳ ಮುಂದೆ ನಿಂತು ವನದ ಕೋಗಿಲೆಯಂತೆ ಯವ್ವಾ ಯವ್ವಾ ಎನುತ ವಿನಯದಿ ಸ್ವರಗೈವ ಕೊರವಿಯ ಕಂಡು ವನಿತೆ ದೇವಕಿ ಸನ್ನೆಮಾಡಿ ಕರೆದಳು 11 ಸನ್ನೆಮಾಡಿ ಕರದರೆ ಚೆನ್ನಕೊರವಂಜಿ ಬಂದು ಎನ್ನವ್ವ ಎನ್ನಕ್ಕ ಎನ್ನ ತಂದೆಯ ಹೆತ್ತವ್ವ ನಿನ್ನ ಮನದಾಯತವ ಹೇಳೇನು ಬಾರವ್ವ ಎನ್ನ ಕೂಸಿಗೆ ಒಂದಿಷ್ಟನ್ನವನಿಕ್ಕವ್ವ ಸೊಲ್ಲಕೇಳೆ ಸೊಲ್ಲಕೇಳೆ ಸಿರಿವಂತೆ ಬಾರೆ 12 ಮಲೆಯಾಳ ಕೊಂಕಣದೇಶ ಮಹಾರಾಷ್ಟ್ರ ಗುಜ್ಜರದೇಶ ಚೆಲುವ ಕಾಶ್ಮೀರ ಕಳಿಂಗ ಕರ್ನಾಟಕದೇಶ ತುಳುವ ತಿಲುಗ ದೇಶವನ್ನು ತಿರುಗಿ ಸೊಲ್ಲ ಹೇಳಿ ಬಂದೆ ಒಲುಮೆಯ ಕೊರವಂಜಿ ನಾನಲ್ಲವೆಯಮ್ಮ ಸೊಲ್ಲ ಕೇಳೆ ಸೊಲ್ಲ ಕೇಳೆ ಸಿರಿವಂತೆ ಬಾರೆ13 ಛಪ್ಪನ್ನ ದೇಶವನೆಲ್ಲ ಸುತ್ತಿ ಸೊಲ್ಲ ಹೇಳಿಬಂದೆ ತಪ್ಪ ಹೇಳುವ ಕೊರವಿ ನಾನಲ್ಲವೆಯಮ್ಮ ಕರ್ಪೂರ ವೀಳ್ಯವ ತಾರೆ ಕಾಂತೆ ನಿನ್ನ ಕೈಯ ತೋರೆ ಸೊಲ್ಲಕೇಳೆ ಸೊಲ್ಲಕೇಳೆ ಸಿರಿವಂತೆ ಬಾರೆ 14 ವಚನ :ಇತ್ತಿತ್ತ ಬಾರವ್ವ ವಿವರಿಸಿ ಹೇಳೇನು ಮುತ್ತಿನ ಮುಡಿಯವ್ವ ಮುದ್ದುಮುಖವ ತೋರೆ ಮತ್ತಗಜಗಮನೆ ಮಂದಹಾಸವದನೆ ರತ್ನದ ಸೆಳೆಗೋಲ ಪಿಡಿಯೆ ರಾಜೀವನೇತ್ರೆ ನಿನ್ನ ಚಿತ್ತದೊಳಗಣ ಮಾತ ಛಂದವಾಗಿ ಹೇಳ್ವೆನು ಕೇಳೆ ಅಮ್ಮಯ್ಯ ಬರಿಯ ಡಂಬಕದ ಕೊರವಿ ನಾನಲ್ಲ ಅರುಹುವೆನು ಮುಂದಣ ಕಥಾಂತ್ರವೆಲ್ಲವ ಮೊರದ ತುಂಬ ಮುತ್ತು ತಾರೆ ಮಾನಿನಿರನ್ನಳೆ ಕುರುಹ ಹೇಳೇನು ಇಲ್ಲಿ ಕುಳ್ಳಿರು ಬಾರೆಯವ್ವ15 ಎಂದ ಮಾತ ಕೇಳಿ ಹರುಷದಿಂದ ದೇವಕಿ ಮಿಂದು ಮಡಿಯನುಟ್ಟು ಕಾಂತೆ ಬಂದು ಕುಳಿತಳು ಇಂದುಮುಖಿಯು ಮೊರನ ತುಂಬ ಮುತ್ತನಿಟ್ಟಳು ತಂದು ಕೈಯತುಂಬ ಹೊನ್ನ ಕಾಣಿಕಿಟ್ಟಳು 16 ಗುಣಿಸಿ ಮುತ್ತಿನ ಅಕ್ಷತೆಯಿಟ್ಟು ಗುಪಿತದಿಂದಲಿ ನೆನೆದಳು ಮನದಭೀಷ್ಟವೀವ ಕೃಷ್ಣನ ಜನಿಸಿದೆನು ಮಧುರಾಪುರದ ಅರಸನುದರದಿ ಎನ್ನ ಸೋದರನೆಂಬ ಪಾಪಿ ಸೆರೆಯೊಳಿಟ್ಟನು17 ಎನ್ನ ಸುತನು ತನ್ನ ಕೊಲುವನೆಂಬ ಮಾತಿಗೆ ಎನ್ನ ಅಗ್ರಜ ಎನ್ನ ಮೇಲೆ ಖಡ್ಗವೆತ್ತಲು ಎನ್ನ ಪತಿಯು ಎನ್ನ ಮೇಲಣ ಮಮತೆಯಿಂದಲಿ ತನ್ನ ಸುತರ ಕೊಡುವೆನೆಂದು ಕೊಲೆಯನುಳುಹಿದ18 ಒಡನೆ ಹುಟ್ಟಿದ ಅಣ್ಣ ಎನಗೆ ವೈರಿಯಾದನು ಪಡೆದ ಪಡೆದ ಸುತರನರೆಯಲಪ್ಪಳಿಸಿದನು ಒಡೆಯ ಕೃಷ್ಣಸಲಹೊ ಎಂದು ಸ್ತುತಿಸಿ ದೇವಕಿ ಗಡಣದಿಂದ ಕೊರವಿ ತಾನು ಹೇಳ ಕುಳಿತಳು 19 ವಚನ :ತಿರುಪತಿ ತಿಮ್ಮಪ್ಪ ಚಳ್ಳಪಿಳ್ಳೆರಾಯ ಸುರಪುರವಾಸ ಲಕ್ಷ್ಮೀವರ ಕರುಣವಾಗು ವಂದನೆ ಸೊಲ್ಲ ಚಂದಾಗಿ ಹೇಳೇನು ಕೇಳೆಯಮ್ಮಯ್ಯಾ ಉರ್ಬಿಯೊಳತಿ ದಿಟ್ಟನಮ್ಮ ನಿಮ್ಮ ಮಗನು ಗರ್ಭದೊಳಿಹನು ಕಾಣಮ್ಮ ಕೊಬ್ಬಿದ ಕಂಸನ ಹಮ್ಮ ಮುರಿದು ನಿಮ್ಮ ನಿರ್ಬಂಧ ಬಿಡಿಸುವನಮ್ಮ 20 ಎಂಟನೆ ಗರ್ಭವಿದಮ್ಮ ನಿಮ್ಮುದರದಿ ಅಂಟಿಹ ಮಗನು ಕಾಣಮ್ಮ ಗಂಟಲ ಮುರಿವ ಕಾಣಮ್ಮ 21 ನಿಷ್ಕರುಣಿ ನಿಮ್ಮಣ್ಣನಮ್ಮ ನೀ ಪಡೆದಂಥ ಮಕ್ಕಳ ಕೊಲ್ಲುವ ಕಾಣಮ್ಮ ಚಕ್ರಧರನ ಕೈಯೊಳಮ್ಮ ಈ ಕಂಸನು ಸಿಕ್ಕುವುದು ತಡವಿಲ್ಲವಮ್ಮ 22 ವಚನ : ಈ ಮಾತು ಪುಸಿಯಲ್ಲ ಸ್ವಾಮಿಯ ಕರುಣ ಉಂಟು ಕೈಗೂಡಿತು ಕೇಳೆಯಮ್ಮಯ್ಯಾ ಕೈಯ ತೋರೆ ಕೈಯ ತೋರೆ ಕೈಯ ತೋರೆ ಅಮ್ಮಯ್ಯ ಕೈಯ ತೋರೆ ನಿನ್ನ ಮನದ ಕುರುಹ ಹೇಳುವೆ ಸೈಯೆನಿಸಿಕೊಂಬೆ ನಿನಗೆ ಸುಖವಾಕ್ಯವನು ಹೇಳಿ ಭಯ ಬೇಡವೇ ಅಮ್ಮಯ್ಯ ನಿನಗೆ ಭಾಷೆಯ ಕೊಡುವೆ 23 ಸಟೆಯ ಮಾತುಗಳಾಡಿ ಸೆಳೆದುಕೊಂಡು ಹೋಗಿ ಹೊಟ್ಟೆಯ ಹೊರೆವ ಕೊರವಿ ನಾನಲ್ಲವಮ್ಮ ನೆಟ್ಟನೆ ಸದಾಶಿವನ ತಟ್ಟಿ ಬಂದ ಕೊರವಿಯ ಮಾತ ದಿಟ್ಟವೆಂದು ಸೆರಗ ಗಂಟಿಕ್ಕಿಕೊಳ್ಳಮ್ಮ 24 ಅಂಗನೆ ನಿನ್ನ ಮನದ ಆಯಿತವ ಹೇಳೇನು ಮಾನಿನಿ ರನ್ನೆ ಬಂಗಾರದ ಕೈಯ ತೋರೆ ಬೊಗಸೆಗಂಗಳ ನೀರೆ ಹಿಂಗುವದು ನಿನ್ನ ಕಷ್ಟ ಹುಸಿಯಲ್ಲವಮ್ಮ 25 ವಚನ :ಚಂದ್ರವದನೆಯ ಚೆಲ್ವ ವಾಮಹಸ್ತವ ಚಂದದಿಂದಲಿ ಕೊರವಿ ವಿವರಿಸಿ ಹೇಳಿದಳು ಹಿಂದಣ ಕಷ್ಟವೆಲ್ಲ ಪರಿಹಾರವಾಯಿತು ಶುಭ ಶ್ರಾವಣ ಬಹುಳಾಷ್ಟಮಿ ರಾತ್ರೆಯ ನಡುವಿರುಳು ರೋಹಿಣಿ ನಕ್ಷತ್ರದಲ್ಲಿ ನಿಮ್ಮುದರದಿ ಕೃಷ್ಣ ಜನಿಸುವನು ಕಾಣೆ ಕೇಳಮ್ಮಯ್ಯ 26 ಪಂಕಜ ಪೀತಾಂಬರ ಅ- ಲಂಕಾರ ಮೂರುತಿಯಾಗಿ ಪುಟ್ಟುವ ಕೃಷ್ಣ ಶಂಕೆಯಗೊಳದಿರೆ ಕೇಳಮ್ಮಯ್ಯ 27 ಅಮ್ಮಾ ನಿಮ್ಮುದರದಿ ಬ್ರಹ್ಮನಪಿತ ಬಂದು ನಿಮ್ಮ ನಿರ್ಬಂಧವ ಬಿಡಿಸುವನು ಕಾಣೆ ಉಮ್ಮಯಗೊಳಬೇಡವೆ ಕೇಳಮ್ಮಯ್ಯ 28 ಆದಿಮೂರುತಿ ನಿಮ್ಮುದರದೊಳವತರಿಸಿ ಮೇದಿನಿ ಭಾರವನಿಳುಹಲು ಕಂಸನ ಭೇದಿಸುವನು ಕಾಣೆ ಕೇಳುಮ್ಮಯ್ಯ 29 ಏಳು ಮಕ್ಕಳ ಕಂಸ ಅರೆಯಲಪ್ಪಳಿಸಿದನೆ ಚಳ್ಳೆ ಬೀಜದಂತೆ ನುಣಿಚಿ ತಪ್ಪಿಸಿಕೊಂಬ ಕಳ್ಳಮಗನು ಪುಟ್ಟುವ ಕೇಳಮ್ಮಯ್ಯ 30 ವಚನ : ಇಂಥಾ ಮಗನು ನಿಮ್ಮುದರದಿ ಜನಿಸಲು ಕಾಂತ ವಸುದೇವರು ಗೋಕುಲಕೆ ಒಯ್ಯಲು ಸಂತೋಷದಿಂದಲ್ಲಿ ಬೆಳೆವನೆ ಕೃಷ್ಣ ಕೇಳಮ್ಮಯ್ಯ ಗೋಕುಲದೊಳಗೆ ಶ್ರೀ ಕೃಷ್ಣನನಿಟ್ಟು ದುರ್ಗೆಯ ಈ ಕಡೆಗೆ ಕೊಂಡುಬಹ ನಿಮ್ಮ ಪತಿಯು ಕಾಕು ಕಂಸಾಸುರನು ಆಕೆಯ ಪಿಡಿಯೆ ಗಗ- ನಾಕೆ ಹಾರಿ ಹೋಗುವಳು ಮಾಯಾಕಾರಿಯು 31 ಕ್ರೂರ ರಕ್ಕಸ ಎನ್ನ ಕೊಲ್ಲುವದೇತಕೋ ನಿನ್ನ ವೈರಿ ಕೃಷ್ಣ ಹೋಗಿ ಗೋಕುಲದೊಳಗೆ ಧೀರನಾಗಿ ಬೆಳೆದು ಸಂಹಾರವ ಮಾಡುವನೆಂದು ಸಾರಿ ಹಾರಿ ಹೋಗುವಳಂಬರಕೆ ದುರ್ಗಿ 32 ನಂದನ ಗೋಕುಲದಿ ಆನಂದದಿ ಬೆಳೆದಾನು ಕೃಷ್ಣ ಸಂದೇಹ ಬೇಡವವ್ವ ನಿಮ್ಮ ಮನದೊಳಗೆ ಬಂದು ಮz
--------------
ಹೆಳವನಕಟ್ಟೆ ಗಿರಿಯಮ್ಮ
ಬ್ರಹ್ಮಣ್ಯ ತೀರ್ಥ ಗುರು ರಾಜಾ | ನಿನ್ನನಮ್ಮಿದೆನೊ ಭಾಸ್ಕರ ಸುತೇಜಾ | ಭಾವಿಬೊಮ್ಮ ಮತವರುಹಿ ಮಹೋಜಾ | ಸಲಹೊಪ್ರಮ್ಮೇಯಂಗಳ ನಿಧಿಯ ಸಹೋಜಾ ಪ ಓದ್ದಾಡುತಿಹೆನೊ ಈ ಭವದೀ | ಸುಖಗದ್ದುಗೆಯನೇರ್ವಂಥ ಹಾದೀ | ತೋರಿಉದ್ಧರಿಸೊ ಬಲು ಕೃಪಾಜಲಧೀ | ಗುರುವೆಶುದ್ಧ ಬುದ್ಧಿಯ ನೀಯೊ ಮುದದೀ 1 ಯಾತ್ರೆಗಳ ಮಾಡ್ದೆನೆಂಬ | ಬಿಂಕದ್ವಾರ್ತೆಯೊಂದಲ್ಲದಲೆ ಇಂಬ | ಕಾಣೆಕ್ಷೇತ್ರ ಮೂರ್ತಿಯ ಕಾಂಬನೆಂಬ | ಆಶೆಪೂರ್ತಿ ಮಾಡೆನ್ನ ಗುರು ಬಿಂಬ 2 ಧನವನಿತೆ ವಿಷಯದಲ್ಲೀ | ಬಹಳ ಮನ ಮಾಡಿ ನೊಂದೆನಲ್ಲೀ | ಹರಿಯಮನ ಮುಟ್ಟೊ ಭಜಿಸು ಎಂಬಲ್ಲೀ | ಇನ್ನುಘನ ಜ್ಞಾನ ಭಕುತಿ ಇಲ್ಲಲ್ಲೀ 3 ಜೀವಗೆಲ್ಲಿಯ ಸ್ವತಂತ್ರಾ | ಹರಿಗುರುತಾವಲ್ಲಿ ಮಾಡುತಿಹ ತಂತ್ರ | ದಿಟವಿದುಜೀವನೇ ಮಾಳ್ಪುನೆಂಬುದೆ ಕುತಂತ್ರ | ತಿಳಿಸೊಭಾವ ಜಾನಯ್ಯನ ಸ್ವತಂತ್ರ 4 ಸಾರ ವ್ರಾತ | ತಿಳಿಸೊಜ್ಞಾನ ನಿಧಿ ಪುರುಷೋತ್ಮ ತಂತ್ರ 5 ಕಾರಕ ಕ್ರಿಯ ದ್ರವ್ಯವೆನಿಪ | ಭ್ರಮವುಮೂರರಿಂದಲಿ ದೂರ ಮಾಳ್ಪ | ಮಾರ್ಗತೋರಿಸಲಹುವುದು ಯತಿ ಭೂಪ | ತವಪದವಾರಿ ಜತೆ ಈ ನೀಚ ಬೀಳ್ಪ 6 ತ್ರ್ಯಕ್ಷಾಂಶ ಭೂತರಾದ | ಸನ್ಯಾಸಿಅಕ್ಷೋಭ್ಯ ಕರಜರಾದ | ಅಜೇಯಇಕ್ಷುಚಾಪನ್ನ ಗೆಲಿದ | ಜಯಾರ್ಯಭಿಕ್ಷುವಿನ ಮಾರ್ಗರಾದ7 ಮೋದ | ಪಡೆವದಾಯ ತೋರಿದಿ ನಿರ್ವಿವಾದ | ಇನ್ನುಗಾಯನದಿ ಮಹಿಮೆ ಅಗಾಧ | ಪೇಳ್ವಆಯತವ ನೀಯೋ ಸುಭೋಧ 8 ಬೃಹತೀ ಸಹಸ್ರ ಮಂತ್ರ | ಜಪಿಪಮಹಯೋಗದಾತ ಮಹಾಂತ | ಬೇಡ್ವೆಬೃಹತಿನಾಮಕನು ಎಂಬಂಥ | ಹರಿಯಮಹ ಮಹಿಮೆ ಕಂಡು ಹಿಗ್ವಂಥ 9 ಸೃಷ್ಟ್ಯಾದಿ ಅಷ್ಟಕಗಳ | ಗೈವಕೃಷ್ಣನ್ನ ಮಹಿಮೆಗಳ | ಕೇಳಿಹೃಷ್ಟರಾಗುವ ಜನಗಳ | ಸಂಗಕೊಟ್ಟುದ್ಧರಿಸೊ ನಮ್ಮಗಳ 10 ಸದನ 11
--------------
ಗುರುಗೋವಿಂದವಿಠಲರು
ಬ್ರಾಹ್ಮಣನುಣಲಿಕೆ ರಾಗಿ ಹಿಟ್ಟು ತನ್ನ ಬಂಧು ಜನಕ್ಕೆ ಒಬ್ಬಟ್ಟು ಪ ಪಾಮರ ಜನರಲಿ ವಾಡಿಕೆಯಿದು | ಶ್ರೀ ರಾಮನೊಲಿವನೆ ಎಂದಿಗಾದರು ಅ.ಪ ಮಾತು ಮಾತಿಗೆ ಸಾಲಮಾಡಿ | ಬಹ ಳಾತುರದಲಿ ಓಡಾಡಿ ಜಾತುಕನಂದದಿ ಜನಗಳ ಮೆಚ್ಚಿಸಿ ಪಾತಕವಾದರು ಲಾಭವಧಿಕ 1 ದೊಡ್ಡದಾಗಿ ಮನೆಕಟ್ಟಿದರೆ -ಸಾಲ ಹೆಡ್ಡಗಾದರು ಹುಟ್ಟುವುದು ದುಡ್ಡುದೇವರಿಗಿಂತ ದೊಡ್ಡದೇವರು ಯಾವುದು? ಬಡ್ಡಿ ಹಚ್ಚು ಬರುವನೆ ಮಹರಾಯನು2 ಹೊಟ್ಟೆಗೆ ತಿಂಬುವದ್ಯಾರು ಬಲ್ಲರು? ವುಟ್ಟ ಬಟ್ಟೆಯಲ್ಲರು ನೋಡುವರು ಸಿಟ್ಟು ಬಂದರೆ ಬೆಂಕಿಯಂತವ ನಾನು ಹೊಟ್ಟೆ ಚಿಕ್ಕದು ಕಣ್ಣು ದೊಡ್ಡದು 3 ಪರಲೋಕವು ಉಂಟೆಂದು ಪೇಳು ವರರಿಯದವರು ತಾವು ಮುಂದು ನರಕವುಸ್ವರ್ಗವು ಯಾರು ನೋಡಿರುವರು ಪುರಾಣ ಶಾಸ್ತ್ರಗಳು ಯಾತಕೆ ಬಿಡಿ4 ಅತಿಥಿಗಳಿಗೆ ನೀರುಮಜ್ಜಿಗೆ | ಮೊಸರು ಸತಿಸುತರಿಗೂ ಮತ್ತು ತನಗೆ ಯಿತರರಿಗೆಲ್ಲಾ ಎಣ್ಣೆಕರೆದ ಭಕ್ಷ್ಯ ಘೃತಭಕ್ಷ ತನಗೆ ಮಾತ್ರ 5 ಎಣ್ಣೆಯು ಬಲುರುಚಿ ನಮಗೆ | ತುಪ್ಪ ವಿನ್ನೇತಕೆ ಹೆಚ್ಚು ಬೆಲೆಗೆ ಕಣ್ಣಲಿ ಕಂಡದು ಮಾತ್ರ ಸತ್ಯ | ನಾ ವನ್ಯರ ನುಡಿ ನಂಬುವುದಿಲ್ಲವು 6 ವೊರಿಗೆಲ್ಲ ನಾ ಮೇಟಿ | ಯನ್ನ ನಾರು ಪೋಲುವರು ಸಾಟಿ ನೂರೆಲೆ ಬೀಳ್ವುದು ನಮ್ಮ ಮನೇಲೀ ಘೋರ ಕ್ಷಾಮದಲಿ ನಾನೆ ಪೊರೆವೆ 7 ಪರರಂತೆ ನಾನಿರಬೇಕು | ಶ್ರೀ ಹರಿ ಇಷ್ಟು ಕೊಟ್ಟರೆ ಸಾಕು ಗುರುಹಿರಿಯರು ನುಡಿಯೇತಕವರು ಮುದು- ಕರು ಏನು ಬಲ್ಲರು ಲೌಕೀಕವ 8 ಗುರುರಾಮವಿಠಲೆಲ್ಲಿ ಭ್ರಾಂತು -ಈ ಕರೆಕರೆ ನಮಗೇಕೆ ಬಂತು ಸೇರಿತು ಬಡವರಾವು 9
--------------
ಗುರುರಾಮವಿಠಲ