ಒಟ್ಟು 779 ಕಡೆಗಳಲ್ಲಿ , 97 ದಾಸರು , 691 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ತ್ರುಟಿಗೆ ಕ್ಷಣಕೆ ನೆನೆಮನವೇ - ಹರಿಯ |ತ್ರುಟಿಗೆ ಕ್ಷಣಕೆ ನೆನೆಮನವೆ ಪತ್ರುಟಿಗೆ ಕ್ಷಣಕೆ ನೆನೆ ಕ್ಷಣಕೆ ಲವಕೆ ನೆನೆ |ಘಟಿಗೆ ಘಟಿಗೆ ನೆನೆ, ಇರುಳು ಹಗಲು ನೆನೆ ಅ.ಪಜಠರದಿ ಜಗತಿಗೆ ಹಿರಿಯ-ಜಗ |ನ್ನಾಟಕಮೋಹ ಸೂತ್ರಧಾರಿಯ ||ಪಟು ಹಿರಣ್ಯಾಕ್ಷ ಸಂಹಾರಿಯ |ನಿಷ್ಠುರನಾದ ಕಂಸಾರಿಯ 1ರಣಿತ ಕಂಕಣ ನೂಪುರಿಯ-ರು |ಕ್ಮಿಣಿಯನಾಳುವ ದೊಡ್ಡ ದೊರೆಯ ||ಗುಣನಿಧಿ ಗೋವರ್ಧನಧಾರಿಯ-ನೀ- |ಕರುಣಿಯು ಅವನೆಂದರಿಯ 2ನವನೀತದಧಿತಸ್ಕರಿಯ -ಈ |ಭವಹರಒಡೆಯನೆಂದರಿಯ ||ಜವನು ಕೇಳಲು ನಿನ್ನ ಮೊರೆಯ -ಚಿಹಿ |ಅವನ ನಾಲಗ್ಗೆ ಮುಳ್ಳು ಮುರಿಯ 3ಮನಕಭಾಗಿಗೆ ಶ್ರುತಿಯರಿಯ -ದಂಥ |ಘನಪಾಪಿಗಳಿಗವ ದೊರೆಯ ||ನೆನೆವರ ಪಾಲಿಪುದ ಮರೆಯ -ಸು |ಮ್ಮನೆ ಇರಲವ ನಮ್ಮ ಪೊರೆಯ4ಸ್ಮರಿಸಲು ಯಮ ನಿನ್ನ ದಾರಿಯ -ಹೋಗ |ವರಭಾರತಿಪತಿ ಮರೆಯ |ಪುರಂದರವಿಠಲ ದೊರೆಯ -ನೆನೆ-ದಿರೆ ಯಮ ನಿನ್ನನು ಕೊರೆಯ 5ತ್ರುಟಿಗೆ ಕ್ಷಣಕೆ ನೆನೆಮನವೇ-ಹರಿಯತ್ರುಟಿಗೆ ಕ್ಷಣಕೆ ನೆನೆಮನವೇ ||
--------------
ಪುರಂದರದಾಸರು
ದಯೆಮಾಡಿ ಸಲಹಯ್ಯ ಭಯನಿವಾರಣನೆ |ಹಯವದನ ನಾ ನಿನ್ನಚರಣನಂಬಿದೆ ಕೃಷ್ಣಪಕ್ಷಣಕ್ಷಣಕೆ ನಾ ಮಾಡಿದಂಥ ಪಾಪಗಳೆಲ್ಲ |ಎಣಿಸಲಳವಲ್ಲಷ್ಟು ಇಷ್ಟು ಎಂದು ||ಫಣಿಶಾಹಿ ಅವಗುಣವ ನೋಡದೇಚರಣಸ್ಮ-ರಣೆಯ ಮಾಡುವಂಥ ಭಕುತಿಯನಿತ್ತು 1ಕಂಡ ಕಂಡ ಕಡೆಗೆ ಪೋಪ ಚಂಚಲಮನಸುಲಂಡತನದಲಿ ಬಹಳ ಭ್ರಷ್ಟ ನಾನು ||ಭಂಡಾಟದವನೆಂದು ಬಹಿರಂಗಕೆಳೆಯದೆ |ಕೊಂಡಾಡುವಂಥ ಭಕುತಿಯನಿತ್ತು ಸಲಹಯ್ಯ 2ಜಾತಿಧರ್ಮವ ಬಿಟ್ಟು ಅಜಮಿಳನು ಇರತಿರಲು |ಪ್ರೀತಿಯಿಂದಲಿ ಮುಕುತಿಕೊಡಲಿಲ್ಲವೆ ||ಖ್ಯಾತಿಯನುಕೇಳಿಮೊರೆಹೊಕ್ಕೆ ದಯಾನಿಧಿಯೆ -ಬೆ-|ನ್ನಾತು ಕಾಯಯ್ಯ ಶ್ರೀ ಪುರಂದರವಿಠಲ 3
--------------
ಪುರಂದರದಾಸರು
ದಾಸನ ಮಾಡಿಕೋ ಎನ್ನ - ಇಷ್ಟುಗಾಸಿಮಾಡುವುದೇಕೆ ದಯದಿ ಸಂಪನ್ನಪದುರುಳಬುದ್ದಿಗಳೆಲ್ಲ ಬಿಡಿಸೋ - ನಿನ್ನಕರಣ ಕವಚವೆನ್ನ ಹರಣಕ್ಕೆ ತೊಡಿಸೋ ||ಚರಣದ ಸೇವೆಯ ಕೊಡಿಸೋ - ಅಭಯ-ಕರಮೇಲಿನಕುಸುಮಶಿರದ ಮೇಲಿರಿಸೋ1ದೃಢಭಕ್ತಿಯಿಂದ ನಾ ಬೇಡಿ - ನಿನ್ನಅಡಿಯೊಳೆರಗುವೆನಯ್ಯಅನುದಿನಪಾಡಿ ||ಕಡೆಗಣ್ಣೊಳೇಕೆನ್ನ ನೋಡಿ ಬಿಡುವೆಕೊಡು ನಿನ್ನಪರಭಕ್ತಿಮನ ಮಡಿ ಮಾಡಿ2ಮೊರೆಹೊಕ್ಕವರಕಾವಬಿರುದು ನೀನುಕರುಣದಿ ರಕ್ಷಣೆ ಮಾಡೆನ್ನ ಪೊರೆದು ||ದುರಿತರಾಶಿಗಳೆಲ್ಲ ತರೆದು ಒಡೆಯಪುರಂದರವಿಠಲನೆ ಹರುಷದಿ ಕರೆದು 3
--------------
ಪುರಂದರದಾಸರು
ದೂತೆ ಕೇಳ ದ್ರೌಪತಿಯ ಖ್ಯಾತಿ ಕೇಳಿದ ಮನುಜರಿಗೆಪಾತಕದೂರಾಗೊದೆಂಬೋ ಮಾತು ನಿಜವಮ್ಮಪ.ಉಮಾಶಚಿ ಶಾಮಲಾ ಉಷೆ ತಮ್ಮ ಪತಿಗಳ ಬೆರೆದು ರಮಿಸೆಬೊಮ್ಮಕಂಡುಕೋಪಿಸಿ ಶಾಪ ಝಮ್ಮನೆ ಕೊಟ್ಟಾನು1ಪರಮಮದದ ಬಾಲೆಯರಿವರುಪರಪುರುಷನ ಬೆರೆಯಲ್ಯಾ ್ಹಂಗೆನರದೇಹ ಬರಲೆಂದು ಬೊಮ್ಮಗೆ ನಾಲ್ವರು ನುಡಿದರು 2ಚಂದಾಗಿ ನಾಲ್ವರ ದೇಹ ಒಂದೇ ಮಾಡಿ ತೋರೆ ಬೊಮ್ಮಗಬಂದವು ಮೂರು ನರದೇಹಗಳ ಲೊಂದಾಗಿರಲೆಂದು 3ತಪ್ಪು ನಮ್ಮದೆಂದು ಶಾಪ ಒಪ್ಪಿಕೊಂಡು ನಾಲ್ವರುಜಪಿಸಿ ಸಾವಿರ ವರುಷ ಗೌಪ್ಯದಿ ಭಾರತಿಯ 4ಬಂದು ಮೊರೆಯ ಪೊಕ್ಕವರ ಚಂದಾಗಿ ದೇಹದಲ್ಲಿಟ್ಟುಅನಂದದಿಂದ ವಿಪ್ರಕನ್ಯೆ ಎಂದು ಜನಿಸಿದಳು 5ಎಲ್ಲರಕರ್ಮಒಂದಾಗಿ ಎಲ್ಲೆಲ್ಲೆ ಭಿನ್ನ ತೋರದ್ಹಾಂಗೆಫುಲ್ಲನಾಭನ ದಯವ ಪಡೆದಳು ಅಲ್ಲೆ ಆ ಬಾಲೆ 6ಮುದ್ಗಲ ನೆಂತೆಂಬೊ ಋಷಿಯು ಬಿದ್ದು ನಕ್ಕ ಬ್ರಹ್ಮನ ಕಂಡುಮುದ್ದು ಮಗಳ ರಮಿಸಿದಾತಗೆ ಬುದ್ಧಿಯಿಲ್ಲವೆಂದು 7ತ್ವರೆಯಿಂದಬೊಮ್ಮಮುನಿಗೆ ಬೆರಿಯೆ ಭಾರತಿಯ ಕಂಡುಕರವಮುಗಿದು ಎರಗಿ ಮುನಿಯು ಮೊರೆಯ ಹೊಕ್ಕಾನು8ಮಾರುತನ ದೇಹದಲ್ಲೆ ಭಾರತಿಯು ರಮಿಸುವಾಗಹಾರಿತಯ್ಯ ಸ್ಮøತಿಯು ಸುಖವು ತೋರದು ನಮಗಿನ್ನು 9ಮಂದಗಮನೆಯರಿಂದಭಾರತಿಇಂದ್ರ ಸೇನಳಾಗಿ ಜನಿಸೆಬಂದ ಮರುತ ದೇಹದ ಮುನಿಯು ಚಂದದಿ ಮದುವ್ಯಾದ 10ಮರುತ ಅಕೆÉಯಿಂದ ರಮಿಸ ಮಾರುತದೇಹದ ಮುನಿಯು ಏನುಗುರುತು ಇಲ್ಲಧಾಂಗೆ ಆತ ಇರುತಲಿದ್ದನು 11ಬಾಲೆಯ ಸಂತೋಷ ಪಡಿಸಿ ಮೂಲರೂಪಕಂಡುವಾಯುಮ್ಯಾಲ ವನಕೆ ನಡೆದ ಮುನಿಯು ಆ ಕಾಲದಲೆಚ್ಚತ್ತು12ಇಂದ್ರಸೇನ ಬಂದು ಆಗ ಇಂದಿರೇಶನದಯವ ಪಡೆಯೆನಂದಿವಾಹನ ನಮ್ಮ ಪತಿಯ ವಂದಿಸೆಂದಾರು 13ಪತಿಯ ಬಯಸಿದ ಬಾಲೆಯರಿಗೆ ಚತುರ್ವಾಹ ನುಡಿದನು ಶಿವನುಅತಿಶಯ ರೋದನವ ಮಾಡೆ ಮಿತಿ ಇಲ್ಲದಲೆ ಅಂಜಿ 14ಮಂದಗಮನೆಯ ಧ್ವನಿಯಕೇಳಿ ಬಂದ ಇಂದ್ರ ಬಹಳದಯದಿಬಂದಿತೆನಗೆ ಇಂಥಕ್ಲೇಶಎಂದು ನುಡಿದಳು15ಬಂದು ವರವ ಬೇಡಿ ಪತಿಗಳ ಹೊಂದಿರೆಂದು ನಾಲ್ಕುಬಾರಿಬಂದಿತೆಮಗೆ ಇಂಥಕ್ಲೇಶಎಂದು ನುಡಿದಳು16ಇಂಥ ಅನ್ಯಾಯ ಯಾಕೆಂದು ನಿಂತ ಒಟುಗೆ ನುಡಿದ ಇಂದ್ರಭ್ರಾಂತ ನರನ ನಿಂದೆ ಶಚಿಯ ಕಾಂತೆಗೆ ಶಿವನು 17ನಾನು ಸೃಷ್ಟಿ ಮಾಡಿದವನು ನೀನು ಏನು ನುಡಿದ ಶಿವನುಮಾನವನಾಗೊ ಬೊಮ್ಮಗ ತಾನು ಆತಗೆ 18ಉಮಾ ಮೊದಲಾದವರಿಗೆಲ್ಲ ತಮ್ಮ ಪತಿಗಳ ಹೊಂದಿರೆಂದಉಮಾ ನಿಮ್ಮ ಬೆರಿಯ ಬ್ಯಾಡ ಸುಮ್ಮನೆ ಹೋಗೆಂದ 19ಎತ್ತು ಗಿರಿಯ ಕೆಳಗ ಇದ್ದ ಮತ್ತÀ ನಾಲ್ವರ ನೋಡೆಸತ್ತ ಎಂದು ತಿಳಿಯೋ ನಿನ್ನ ಚಿತ್ತಕತಾ ಎಂದು 20ಕೇಳಿದ ಬೊಮ್ಮನ ನುಡಿಯು ತಾಳಿದ ಬಾಲಿಯರು ಬೆರೆದುಬಹಳ ಪ್ರೇಮದಿಂದಭಾರತಿಇಳಿದಳು ಬಂದು21ರಾಮೇಶನಕ್ಲುಪ್ತತಿಳಿದು ಭೀಮಸೇನನಾದ ವಾಯುಕಾಮಿನಿಯರ ಸಹಿತ ದ್ರೌಪತಿ ಪ್ರೇಮದಿ ಜನಿಸಿದಳು 22
--------------
ಗಲಗಲಿಅವ್ವನವರು
ನಮಿಸೊ ಗಂಧವಹಗೆ ಪ್ರತಿದಿನ ನಿನ್ನ |ಶ್ರಮವ ಕಳೆದು ಅಭೀಷ್ಟಿಯ ಕೊಡುವ ಮನುಜ ಪಹರಿಕರುಣಿಸದಿರೆಗುರುಕರುಣಿಸುವನು |ಗುರುಕರುಣಿಸದಿರೆಹರಿಜರೆವ ||ಧರೆಯೊಳು ವಾತಪ್ರಸಾದ ಸಂಪಾದಿಸಿ |ಶಿರಿವಲ್ಲಭಗೆ ಬೇಕಾದವರ ಕೇಳು ಮನುಜ 1ಹನುಮನೊಲಿದನೆಂದು ಒಲಿದ ಸುಗ್ರೀವಗೆ |ಮನಸಿಜಪಿತನು ತನ್ನಯಚರಣ|ಘನವಾಹ ಸುತ ಭಜಿಸಿದರಿನ್ನವಗೆ ಪ್ರಭಂ |ಜನನೊಲಿಯದಕೆ ಕೊಂದನು ಕೇಳೆಲೊ ಮನುಜ 2ದುರ್ಜನಾಂತಕಗೆ ಬೇಕಾದ ಕಾರಣದಿಂದ |ಅರ್ಜುನಾದಿಗಳು ಸುಖವ ಬಿಟ್ಟರು ||ಅಬ್ಜಾಪ್ತಸುತ ಅಸಮರ್ಥನೆ ರಣದೊಳು |ನಿರ್ಜಿತನಾಗಲು ತಿಳಕೊ ಇದು ಮನುಜ 3ಸುರರೆಲ್ಲ ಕೂಡಿ ನ್ಯಾಯವ ಮಾಡಿ ನೋಡಲು |ಸರಿಯಾಗಲಿಲ್ಲವು ಮಾರುತಗೆ ||ಗಳವುದ್ಭವಿಸಲುಮಥನಕಾಲದಿ ಆದಿತ್ಯರ |ಮೊರೆಕೇಳಿಪ್ರಾಶನ ಮಾಡಿದ ಮನುಜ 4ಶಮೆಯಲ್ಲಿ ದಮೆಯಲ್ಲಿ ಸರ್ವಗುಣದಲ್ಲಿ |ಪವಮಾನಗೆ ಸರಿಯುಂಟಾವನು ಜಗದಿ ||ಅಮಲ ಪ್ರಾಣೇಶ ವಿಠಲಗಲ್ಲದವನು |ಯಮ ಸದನಕೆ ಯೋಗ್ಯ ಯಮಗಲ್ಲೆಂಬ ಮನುಜ 5
--------------
ಪ್ರಾಣೇಶದಾಸರು
ನಾರದ ಕೊರವಂಜಿ1ಜಯ ಜಯ ಜಯ ಜಯ ಜಯ ಜಯ ಪ.ಶ್ರೀ ರಮಾರಮಣ ಜಯ ಶ್ರೀಕರ ಗುಣಾಬ್ಧಿ ಜಯಶ್ರೀ ರುಕ್ಮಿಣೀಶ ಜಯ ಶ್ರೀ ಶ್ರೀನಿವಾಸ ಜಯನೀರಚರಕಮಠಕಿಟಿನೃಹರಿವಟುಭೃಗುಜ ರಘುವೀರ ಯದುಪತೆಬುದ್ಧಕಲ್ಕಿ ಸ್ವರೂಪಾ ಜಯ ಜಯ1ಶ್ರೀ ಮತ್ಕಪಿಲ ಋಷಭ ಯಜÕದತ್ತ ಕಂಸ್ತುಘ್ನ ?ಕೌಮಾರ ವ್ಯಾಸ ಹಯಗ್ರೀವ ಶ್ರೀಮದ್ದಜಿತ ಜಯಸ್ವಾಮಿ ಮಹಿದಾಸ ತಾಪಸ ಉರುಕ್ರಮಶೂಲಿವ್ಯಾಮೋಹ ಧನ್ವಂತರೆ ಹಂಸ ಶುಕ್ಲಾ ಜಯ ಜಯ 2ಆನಂದ ಜ್ಞಾನ ಬಲಮಯ ಚಿತ್‍ಸ್ವರೂಪ ಜಯಅನಂತ ಮಹಿಮ ವೈರಾಜ ಪುರುಷೋತ್ತಮ ಜಯಅನಂತ ಬ್ರಹ್ಮ ರುದ್ರೇಂದ್ರಾದಿಸೇವ್ಯಜಯಅನಂತ ಜೀವಗ ಪ್ರಸನ್ವೆಂಕಟ ಕೃಷ್ಣಾ ಜಯ ಜಯ 32ಶರಣು ಮಂಗಳ ದೇವತೇವರಶರಣುಚಿತ್ಸುಖಸಾಗರಶರಣುಅಗಣಿತಗುಣಶುಭಾಕರಶÀರಣು ವೆಂಕಟ ಮಂದಿರ 4ದುರುಳದೈತ್ಯರು ಸೊಕ್ಕಿ ವರದಲಿಧರೆಗೆ ಕಂಬನಿ ತರಿಸಲುತ್ವರದಿ ಸುರರಿಗೆ ಮೊರೆಯನಿಟ್ಟಳುಧರಿಸಲಾರೆನು ಎನುತಲಿ 5ಸರಸಿಜೋದ್ಭವಭವಪುರುಹೂತರರಿದು ಚಿಂತಿಸಿ ಮನದಲಿವರಪಯೋನಿಧಿಗೈದಿ ಸ್ತುತಿಸಲುಕರುಣದಲಿ ಅವತರಿಸಿದೆ 6ಬಂದು ಧರ್ಮದ ವೃಂದ ರಕ್ಷಿಪೆನೆಂದು ದೀಕ್ಷೆಯವಿಡಿದು ನೀಅಂದಗೆಡಿಸುತ ದನುಜನಿಕರವಹೊಂದಿ ದ್ವಾರಕ ನಗರವ 7ಇಂದಿರೆಯು ನಿನ್ನಿಚ್ಛೆಯನುಸರದಿಂದ ಕ್ರೀಡಿಪಳನುದಿನÀಮಂದಜನರಿಗೆ ಮೋಹಿಸುತನರರಂದದಲಿ ತೋರಿದೆ ಹರೆ 8ದೇವಋಷಿ ನಾರದನು ಶ್ರೀಪದಸೇವೆಗÉೂೀಸುಗ ಕೊರವಿಯಭಾವದಲಿ ಜಗದಂಬೆ ರುಕ್ಮಿಣಿದೇವಿಯಳ ಬಳಿಗೈದು ತಾ 9ದೇವ ನಿನ್ನಯ ಬರವ ಬೆಸಸಿದಕೋವಿದತೆಯನು ಪೇಳುವೆಶ್ರೀವರ ಪ್ರಸನ್ವೆಂಕಟ ಕೃಷ್ಣಪಾವನ ಮತಿಯ ಕರುಣಿಸೊ 103ಶ್ರೀ ರಂಭೆ ಭೀಷ್ಮಕನಭೂರಿಪುಣ್ಯದ ಗರ್ಭವಾರಿಧಿಯಲ್ಲಿ ಜನಿಸಿನಾರಿ ರುಕ್ಮಿಣಿಯೆಂಬ ಚಾರುನಾಮದಿಕಳೆಯೇರಿ ಬೆಳೆದಳಂದವ್ವೆ 11ಜನನಿಜನಕರೆಲ್ಲ ತನುಜೆಯ ಹರಿಯಂಘ್ರಿವನಜಕೆ ಕೊಡಬೇಕೆನ್ನೆನೆನೆದು ತಾನೊಂದು ರುಕ್ಮನು ದಮಘೋಷನತನುಜಗೆ ತಂಗಿಯನು 12ಕೈಗೂಡಿಸುವೆನೆಂಬ ವೈಭವದಲ್ಲಿರೆವೈಮನಸದೊಳು ಕನ್ಯೆಯುಸುಯ್ಗರಿಯುತ ಮುರವೈರಿ ಪ್ರಸನ್ವೆಂಕಟಕೃಷ್ಣಯ್ಯನೊಳ್ ಮನವಿಟ್ಟಿರೆ 134ದನುಜಮಥನÀ ಹರಿಸೇವೆ ಇದೆಂದುಅನಿಮಿಷಮುನಿ ಧರೆಗಿಳಿದು ತಾ ಬಂದುವನಿತೆ ಕೊರವಂಜಿಯ ವೇಷವÀ ಧರಿಸಿಜನಪ ಭೀಷ್ಮಕನೋಪವನದಲ್ಲಿ ನೆಲಸಿ 14ಹಲವು ಕೊರವಿಯರ ಕೂಡಿ ಸಿಂಗರದಿಬೆಲೆ ಇಲ್ಲದುಡಿಗೆ ತೊಡಿಗೆ ಇಟ್ಟು ಮುದದಿಇಳೆಯ ಜನರು ಮೋಹಿಸುವಪರಿಇಹಳುಕೆಳದೇರ ಗಡಣದಲಿ ಚೆಲುವೆ ಒಪ್ಪಿದಳು 15ಮಂಜುಗಾವಿಯ ಸೀರೆ ನಿರಿತೆಗೆದುಟ್ಟುಕೆಂಜೆಡೆ ಬಿಟ್ಟೋರೆದುರುಬಿನ ಕಟ್ಟುಪಂಜಿನೋಲೆಯ ಮೂಗುತಿಯ ಬಲಿದಿಟ್ಟು ಗುಲಗಂಜಿ ಹೊಂದಾಳೆ ಸರಗಳಳವಟ್ಟು 16ಕಂಚುಕಪುಟ ಬಿಗುಪೇರಿದ ಕಟ್ಟುಚಂಚಲನೇತ್ರಕಂಜನ ಕಾವಲಿಟ್ಟುಮಿಂಚುವಾಭರಣಿಟ್ಟು ಪ್ರಸನ್ವೆಂಕಟ ಕೃಷ್ಣನಂ ಚಿಂತಿಸಿ ಜಯ ಜಯಯೆಂದಳುಕೊರವಿ175ಅಡಿಗಡಿಗೆ ಝಣ ಝಣರೆಂದು ನಡೆತಂದು ನಡೆತಂದುಮಡದಿ ರಾಜಬೀದಿಯಲಿನಿಂದು18ಮೃಡಗಹಿತನ ಪಟ್ಟದಾನೆ ಮಂದಗಮನೆ ಮಂದಗಮನೆಕಡುಮೌನಿ ಜನರ ಮೋಹಿನೆ 19ಚಪಲ ನೋಟಕೆ ನಾಗರಿಕರು ನೋಟಕರು ನೋಟಕರುಲಿಪಿಯ ಚಿತ್ರದೊಲು ನಿಂತಿಹರು 20ನಿಪುಣೆಕೊರವಿಶ್ರೀಪ್ರಸನ್ವೆಂಕಟ ಕೃಷ್ಣನ್ನ ಕೃಷ್ಣನ್ನಶ್ರೀಪ್ರÀ್ರಸಾದವ ಬೇಡುತಿದ್ದಳಣ್ಣ 216ಬೆಡಗಿನ ಗಮನದಿ ಎಡಬಲಕೊಲಿದುಕಡಗ ಶಂಖದ ಬಳೆ ನುಡಿಸುತ ನಡೆದುಅಡಿಗೊಮ್ಮೆ ತಿರುಮಲ ಒಡೆಯನ ನೆನೆದು ತಕ್ಕಡ ಧಿಗಿಧಿಮಿಕೆಂದುಜಡಿದುತಾಳ್ವಿಡಿದು22ತಿಗುರಿದ ಗಂಧ ಸೆಳ್ಳುಗುರಿನ ನಾಮಮೃಗಮದದ ಬೊಟ್ಟಿನ ನಗೆಮೊಗದ ಪ್ರೇಮಮಗುವನುಡಿಯಲೆತ್ತಿ ಜಗಚ್ಚರಿಯಮ್ಮಹೆಗಲ ರನ್ನದ ಬುಟ್ಟಿ ಮುಳ್ಳುವಿಡಿದಮ್ಮ 23ನಗರದ ಜನದ ಕಣ್ಣಿಗೆ ಕೌತುಕೆನಿಸಿಬಗೆ ಬಗೆ ಒಗಟು ಮಾತುಗಳನುಚ್ಚರಿಸಿನಗರಾಧಿಪತಿಯ ಮನೆಯಕೇಳಿನಡೆದುಮಿಗೆ ಪ್ರಸನ್ವೆಂಕಟ ಕೃಷ್ಣಗೆ ಕೈಮುಗಿದು 247ಬ್ರಾಹ್ಮರ ಕೇರಿಗೆ ಬಂದಳಾಕೊರವಿಪರಬ್ರಹ್ಮನ ಗುರುತ ಕೇಳುತ್ತನಮ್ಮಮ್ಮ ನಮ್ಮವ್ವೆ ನಮ್ಮಜ್ಜಿ ನೀಡೆಂದುಸನ್ಮಾನದಾಲಯವ ಪೊಗುತಾ 25ಇಂತಪ್ಪ ಸೊಬಗುಳ್ಳ ಕೊರವಿಯನು ಕಂಡುನೃಪನಂತಃಪುರದ ಸತಿಯರೈದಿಕಂತುವಿನ ಜನನಿಗೆ ಕರವೆರಡು ಮುಗಿದು ಏಕಾಂತ ಪೇಳಿದರು ಚೆನ್ನಾಗಿ 26ಓರ್ವ ಕಾಲಜ್ಞಾನ ಪೇಳ್ವ ಕೊರವಮ್ಮ ನಮ್ಮೂರ್ವಳಗೆ ತಿರುಗುತಿಹಳಮ್ಮಸರ್ವೇಶ ಪ್ರಸನ್ವೆಂಕಟ ಕೃಷ್ಣನಾಗಮದನಿರ್ವಚನ ಕರೆಸಿ ಕೇಳಮ್ಮ 278ಬಂದಳು ನೃಪನರಮನೆಗೆ ತಾನಿಂದಲ್ಲಿ ನಿಲ್ಲದೆ ಕಿಲಿಕಿಲಿ ನಗುತಾ ಕುಲು ಕುಲು ನಗುತಾ ಪ.ಬಂದ್ಹೇಳಿದ ನುಡಿಗೇಳ್ದು ಪೂರ್ಣೇಂದುವದನೆ ಮುದತಾಳ್ದುಮಂದಿರಕೆ ಕರೆಸಿದಳು ನಲವಿಂದಲಿ ಬಲು ಬೆಡಗಿನ ಕೊರವಂಜಿ 28ತಳಪಿನ ಮುತ್ತಿನ ಕಟ್ಟುಶುಭತಿಲಕದ ಹಚ್ಚೆಯ ಬಟ್ಟುಅಲುಗುವ ಮೂಗುತಿಯಬಲೆ ಸಲೆಬಳುಕುತ ಬಡನಡುವಿನ ಚಪಲೆ 29ಬಟುಗಲ್ಲದ ಮಕರಿಕಾಪತ್ರ ಪವಳದುಟಿ ದಾಡಿಮರದಗೋತ್ರವಿಟಮೃಗಸ್ಮರಶರ ನೇತ್ರ ಕೊರಳ್ದಟಿಸುವಮಣಿಮುತ್ತಿನ್ಹಾರಗಳೊಲಪಲಿ30ಇಟ್ಟೆಡೆ ಮೊಲೆಯ ಪಟ್ಟಿಕೆಯು ಶ್ರೋಣಿಮುಟ್ಟುವ ಮುಡಿಯ ಮಾಲಿಕೆಯುಬಿಟ್ಟ ಮುಂಜೆರಗಮಲಿಕೆಯು ಕಣ್ಣಿಟ್ಟ ಮೃಗಕೆ ಭ್ರೂಸ್ಮರಕಾರ್ಮುಕೆಯು 31ತೆಳ್ವೋದರದ ತ್ರಿವಳಿಯ ಜಗುಳಿಬೀಳ್ವ ಮಣಿಮುಕ್ತಾವಳಿಯಸಲ್ಲಲಿತ ಸಂಪಿಗೆ ಕಳೆಯ ಗೆಲ್ವಚೆಲ್ವೆಕೊರವಿಪುರವೀಥಿಯ ಬಳಿಯ32ಕಿಣಿ ಕಿಣಿ ರವದ ಕಿಂಕಿಣಿಯುಝಣ ಝಣತ್ಕಾರಿಪಂದುಗೆ ಮಣಿಯುಕಣಿ ಕಣಿ ಒಯ್ಯೆಂಬೊಕ್ಕಣಿಯು ಕುಚಕುಣಿ ಕುಣಿಸಿ ನಟಿಪ ನಡೆವಾಂಗನೆಯು 33ಸಿಂಗನ ಉಡಿಯಲ್ಲಿಕಟ್ಟಿಉತ್ಸಂಗದೊಳೊಲಪಿನ ದಿಟ್ಟಿರಂಗ ಶ್ರೀ ಪ್ರಸನ್ವೆಂಕಟ ಕೃಷ್ಣಾಂಗನೆಯನು ಕಾಂಬುವೆನೆಂಬ ತವಕದಿ 349ವಚನಪದುಮನಾಭನ ರಾಣಿ ರಾಣಿವಾಸದಲಿಯದುಕುಲೇಂದ್ರನ ಚರಣೋಚ್ಚಾರಣೆಯಲ್ಲಿರಲುಒದಗಿ ಬಂದಳುಕೊರವಿಕರೆಯುತ್ತ ತಾನುಚದುರ ಪ್ರಸನ್ವೆಂಕಟ ಕೃಷ್ಣನರಸಿಯನು 3510ಎಲ್ಲಿಹಳೆಲ್ಲ್ಲಿಹಳಾ ರಾಯನ ಮಗಳೆಲ್ಲಿಹಳೆ ನೀಡೆಯವ್ವನಲ್ಲೆ ಬಾ ನಲ್ಲೆ ಬಾ ನಲ್ಲೆ ಬಾ ರುಕ್ಮಿಣಿನಲ್ಲೆ ಬಾರೆ ಮುಂದಕವ್ವ 36ಬಲ್ಲೆ ನಾ ಬಲ್ಲೆ ನಿನ್ನಯ ಮನದೆಣಿಕೆಯಸೊಲ್ಲುವೆನೆ ನೀಡೆಯವ್ವನಿಲ್ಲದು ನಿಲ್ಲದಕ್ಕಿಯು ನಿನ್ನದ್ಹಸಿತ ಕೈಒಳ್ಳೆ ಕಜ್ಜಾಯ ನೀಡೆಯವ್ವ 37ಕೆಟ್ಟೋಗರಕೆ ಚಿತ್ತವಿಟ್ಟ ಕೊರವಿಯಲ್ಲಮೃಷ್ಟಾನ್ನವ ನೀಡೆಯವ್ವಶ್ರೇಷ್ಠಾದ ಶಾವಿಗೆ ಬಟ್ಟುವಿ ಪಾಯಸಹೊಟ್ಟೆ ತುಂಬ ನೀಡೆಯವ್ವ 38ಅಟ್ಟಿಟ್ಟ ಪಂಚವಿಧ ಭಕ್ಷ್ಯ ಎನಗಿಂದುಇಷ್ಟ ಕಾಣೆ ನೀಡೆಯವ್ವಇಷ್ಟುಣಲಿಕ್ಕೆನ್ನತುಷ್ಟಿಬಡಿಸಿ ಸತ್ಯಗೋಷ್ಠಿಕೇಳೆ ನೀಡೆಯವ್ವ39ಮನ್ನಣೆ ಇಲ್ಲದ ಮನೆಯ ಹೊಗುವಳಲ್ಲಕನ್ನೆ ಬಾರೆ ಮುಂದಕವ್ವಮುನ್ನ ರಕ್ಕಸನೊಯ್ದ ಮಡದಿಗೆ ಒಳಿತವನೆಲ್ಲ ಹೇಳಿದ್ದೆನವ್ವ 40ನಿನ್ನ ಪ್ರಾಣದ ಪ್ರಿಯನೊಬ್ಬನೆ ಪರದೈವಕನ್ನೆ ಕೇಳಜಕಾಮರವ್ವಕಣ್ಣಾರ ಕಾಂಬೆ ನಿನ್ನಣ್ಣನಪಾಟುಪ್ರಸನ್ನವೆಂಕಟ ಕೃಷ್ಣನಿಂದವ್ವ 4111ಚೂರ್ಣಿಕೆಈ ವಾಕ್ಯವಂಕೇಳಿತೀವಿ ತೋಷವ ತಾಳಿದೇವಿ ರುಕ್ಮಿಣಿಯಕ್ಕ ಪಾವನ ಹಾಸಂಗಿಯಿಕ್ಕಿಆವಲ್ಲಿಂ ಬಂದ್ಯವ್ವ ದೇವಲೋಕದ ಕೊರವೆಈ ಒಳ್ಳೆ ಮೆಚ್ಚು ಮಾತು ಆವಾಗನುಭವೆಂ ಮಾತೆಹೀಗೆಂದಾಸನ ಕೊಟ್ಟು ಬಾಗಿಲೊಳು ಕಾವಲಿಟ್ಟುಬೇಗ ಪ್ರಸನ್ವೆಂಕಟ ಕೃಷ್ಣನಾಗಮವ ಮನದಿ ಕೇಳ್ದಳವ್ವೆ 4212ಕುಳ್ಳಿರೆ ಕುಳ್ಳಿರೆ ಕುಳ್ಳಿರೆ ಕೊರವಂಜಿಫುಲ್ಲಬಾಣನಾನೆ ಕುಳ್ಳಿರೆಸೊಲ್ಲಮ್ಮ ಸೊಲ್ಲಮ್ಮ ಹಲವು ಮಾತಿನ ಜಾಣೆಎಲ್ಲ ಬಯಕೆಯನೆಲ್ಲ ಸೊಲ್ಲಮ್ಮ ಕೊರವಂಜಿ 43ಆದರದಾ ಮಾತ ಕೇಳುತ ಕುಳಿತಳುಯಾದವರರಸ ಮುಕುಂದನಕೋದಂಡಪಾಣಿ ತಿರುವೆಂಗಳ ಮೂರ್ತಿಯಪಾದಕೆ ಮಾಡಿದಳೊಂದನೆ ಕೊರವಂಜಿ 44ಮಣಿಮಯ ಬುಟ್ಟಿಯ ಎಡದಲಿಟ್ಟುಕೊಂಡುವನಿತೆ ಪದ್ಮಾಸನವಿಟ್ಟಳುಮಿನುಗುವ ಎಳೆನಗೆಯಣುಗನ್ನ ಮಲಗಿಸಿವನಿತೆ ರುಕ್ಮಿಣಿಯನ್ನು ಕರೆದಳು ಕೊರವಂಜಿ 45ಜಾಣೆ ಬಾರೆ ಸುಗುಜಾಣೆ ಬಾರೆ ನಾರಿಮಾಣಿಕಳೆಕಟ್ಟಾಣಿಬಾರೆವಾಣಿಪತಿಪಿತ ಪ್ರಸನ್ವೆಂಕಟ ಕೃಷ್ಣನರಾಣಿ ಬಾರೆಸುಪ್ಪಾಣಿಬಾರೆ ಕಲ್ಯಾಣಿ ಬಾರೆ ಫಣಿವೇಣಿ ಬಾರೆಶುಭಶ್ರೋಣಿ ಬಾರೆ ಎಂದು ಕರೆದಳು ಕೊರವಂಜಿ 4613ವಚನಅಮ್ಮ ರುಕ್ಮಿಣಿಯಮ್ಮ ಉಮ್ಮ್ಮಯವಟ್ಟುಮುಮ್ಮೊರದ ರತುನ ಮುತ್ತಿನ ಕಾಣಿಕಿಟ್ಟುಪರಬೊಮ್ಮಪ್ರಸನ್ವೆಂಕಟಕೃಷ್ಣನ ಅಡಿಗಳನಮ್ಮಿಸುತ ಮನೋರಥವÀ ಮನದಿ ಬೆಸಗೊಳ್ಳಲು 47ಉಂಡ ಊಟ ಕಂಡ ಕನಸು ಪುಂಡರೀಕಾಂಬಕಿಯೆತಂಡ ತಂಡದ ವಾರುತೆಗಳ ಪೇಳುವೆನು ಸಖಿಯೆಹಿಂಡುದೈವದಗಂಡಪ್ರಸನ್ವೆಂಕಟ ಕೃಷ್ಣನ ಕಣ್ಣಾರಕಂಡು ಸಾರುವಕೊರವಿಎಳ್ಳನಿತು ಸಟೆಯರಿಯೆ4815ಚೂರ್ಣಿಕೆಕಾಸಿನಾಸೆಯವಳು ನಾನಲ್ಲಭಾಷೆ ಹುಸಿದರೆ ಬಿರುದು ಬಿಸುಡುವೆನೆಲ್ಲಭಾಷೆ ಪಾಲಕರು ನಮ್ಮ ಸಿದ್ಧರೆಲ್ಲ ಲೇಸುಲೇಸೆಂದುಕೇಸಕ್ಕಿತಿಮ್ಮಯ್ಯನ ಬೆತ್ತವ ಮುಟ್ಟೆಲೆ ದುಂಡೆಎನ್ನ ಮನದ ದೈವ ಎನ್ನಕ್ಕ ಕೇಳೆಯವ್ವತಿರುಮಲೆ ತಿರುವೆಂಗಳಯ್ಯವರಅಹೋಬಲ ನರಸಿಂಗಯ್ಯಹರಿಕಂಚಿ ವರದರಾಜಯ್ಯಶಿರಿ ರಂಗದ ರಂಗರಾಯಯ್ಯಬದರಿಯ ನರನಾರಾಯಣಯ್ಯಪುಂಡರೀಕವರದ ಪಂಢರಿರಾಯ ಎಮ್ಮಉಡುಪ ಕುಲಜ ಮನ್ನಾರು ಕೃಷ್ಣಮ್ಮಒಡ್ಡಿಜಗನ್ನಾಥ ಅಲ್ಲಾಳನಾಥಯದುಗಿರಿನಾಥ ಶಿರಿಮುಷ್ಣನಾಥಕೃತಪುರದ ವೀರ ನಾರಾಯಣಕೊಲ್ಲಾಪುರದ ಕನ್ನೆ ವೇಲಾಪುರದ ಚೆನ್ನಅನಂತಶಯನ ಜನಾರ್ದನ್ನಅನವರತಪರಸನ್ನ ವೆಂಕಟ ಕೃಷ್ಣನ ಕನ್ನೆಇಂತಪ್ಪಾನೇಕ ದೈವ ಏಕವೆಂದು ಏಕಾನೇಕವೆಂದುನಂಬಿಪ್ಪೆನೆ ಕೇಳೆಯವ್ವ 4916ಇಂತಿಪ್ಪ ಎನ್ನ ಮನೆಯ ದೈವ ಅವರಂತವ ಬೊಮ್ಮರರಿಯರವ್ವ ವಿಶ್ರಾಂತಿಲಿ ಕೊಂಡಾಡುವೆನವ್ವ ನಾನುಕಂತುವಿನಣ್ಣನ ಮಗಳವ್ವ 50ಇಪ್ಪಲ್ಲಿಪ್ಪಕೊರವಿನಾನಲ್ಲ ಹೋಗಿಬಪ್ಪೆ ಹದಿನಾಲ್ಕು ಲೋಕಕೆಲ್ಲಛಪ್ಪನ್ನದೇಶಗಳ ಸುದ್ದೀನೆಲ್ಲಕೇಳಿಬಪ್ಪುವ ಕಜ್ಜವ ಕೃಷ್ಣ ಬಲ್ಲ 51ಆವಾವ ದೇಶದ ಸುದ್ದಿ ಕೇಳವ್ವ ನಿನ್ನಭಾವದ ಬಯಕೆಯನೆಲ್ಲ ಕೇಳವ್ವಶ್ರೀವರ ಪ್ರಸನ್ನವೆಂಕಟಾದ್ರಿ ಕೃಷ್ಣ ದ್ವಾರಕಿಂದಾವಾಗ ಬಪ್ಪನೆಂದು ಕೇಳವ್ವ 5217ಚೂರ್ಣಿಕೆಓಯಮ್ಮ ನಿನ್ನವರುಗಳು ಆ ಬಲಮಗು ಮದನಕಾಮಬುಡುಕ್ಕಾನೆ ಪರತಾನು ಚಿಂತಿಶೆ ಮಾಣಮ್ಮನಾ ತಿರುಕ್ಕಿ ವಂದ ದೇಶ ಐವತ್ತಾರು ಶೊಲ್ಲರೆಅಂಗ ವಂಗ ಕಳಿಂಗ ಕಾಂಬೋಜ ಭೋಟಕರ್ನಾಟಕ ಘೋಟ ಮಹಾಘೋಟಜಿನ್ನ ಮಹಾಜಿನ್ನ ಜೊನ್ನಗಕಾಶ್ಮೀರ ತುರುಷ್ಕಮಾಗಧಬಂಗಾಳ ಗೌಳ ಮಾಳವ ಮಲೆಯಾಳನೇಪಾಳ ಗೌಡ ಗುರ್ಜರ ಕೊಂಕಣದರ್ದುರಬರ್ಬರ ಸೌರಾಷ್ಟ್ರ ಮಹಾರಾಷ್ಟ್ರಸಂಬರ ಮುಂಗಿಳ ಘೋಟ ಮುಖಏಕಪಾದ ಸೌಳ ಸಂಸಾಳಕಆನರ್ತ ಹಮ್ಮೀರ ಕೊಮ್ಮೀರಮತ್ಸ್ಯಪಾಂಚಾಲರಾಜಶೇಖರ ವರಶೇಖರ ಯುಗಂಧರ ಮಧ್ಯದೇಶಲಂಬಕರ್ಣ ಸ್ತ್ರೀರಾಜ್ಯ ಆಂಧ್ರ ದ್ರವಿಡಅರವ ಕನ್ನಡ ತುಳುವ ತುಳಾಂಡಜಾಳೇಂದ್ರ ಕೈಕೇಯ ಕೌಸಲ ಕಂಚಿಕನೋಜ ಸವ್ವೀರಸಿಂಧುಕೇರಳವೈದರ್ಭ ದೇಶದೊಳ್ಕುಂಡಿನಾಪುರದೊಳ್ ನಿನ್ನಂ ಕಂಡುಮನದಂಡಲಿಕೆಗೆ ಸಾಗಿತ್ತೆನೆಲೆ ದುಂಡೆ 5318ಈ ನಾಡ ಚರಿಸಿ ನಿನ್ನರಸುತ ಬಂದೆನೆಜಾಣೆ ಬಂಗಾರವ್ವ ಕೈ ತೋರೆ 54ನಿನ್ನ ಕಾಣುತ ಹಸಿವೆ ನೀರಡಿಕೆಲ್ಲ ಹೋಯಿತುಜಾಣೆ ಬಂಗಾರವ್ವ ಕೈ ತೋರೆ 55ಸಂಧಾನಕ್ಹಾರುವನಟ್ಟಿದ್ದೆ ಮೊದಲಹುದೇನೆ ಮಂಗಳದೇವಿ ಕೈ ತೋರೆ 56ನೀ ಬರೆದೊಕ್ಕಣೆ ಯದುರಾಯನರಿತಾನುಸೌಭಾಗ್ಯವಂತೆ ಕೈ ತೋರೆ 57ರಥವನೇರಿಕೊಂಡು ಬರಹ ನೋಡಿಕೊಳ್ವಜಾಣೆ ಬಂಗಾರವ್ವ ಕೈ ತೋರೆ 58ಧ್ಯಾನದ ಕಳವಳ ಮುಸುಡುಗಂಟಿನ ಚಿಂತೆಮಾಣು ಮಂಗಳದೇವಿ ಕೈತೋರೆ 59ತ್ರಿಭುವನೇಶ ಪ್ರಸನ್ನವೆಂಕಟ ಕೃಷ್ಣತಾ ಬಹನೆಲೆ ದುಂಡಿ ಕೈ ತೋರೆ 6019ಚೂರ್ಣಿಕೆಎಲೆಲೆ ಎಳೆವೆಂಗಳೆ ಎಲೆ ಹುಲ್ಲೆಗಂಗಳೆಮಹಾಭೂಷಣದ ಮಾರುವೇಣಿ ಮಡದಿಯರಸುಪ್ಪಾಣಿಕೀರವಾಣಿ ಕಿಸಲಯಪಾಣಿಕಂಧಿಜ ಬಿಂಬವದನೆ ಕುಲಿಶಮಣಿರದನೆಮದನಕಾರ್ಮುಕೋಪಮ ಭ್ರೂಲತೆಯಳೆ ಮಹಾಲಕುಮಿಯಳೆಅರುಣವಿಧ್ರುಮಾಧರೆ ಅಬ್ಜಜಾ ಕಂಧರೆಅರ್ಧಚಂದ್ರನ ಪೋಲ್ವಡಿ ಪಣೆಯಳೆ ಅನಘ್ರ್ಯ ಚೂಡಾಮಣಿಯಳೆಸಿಂಧೂರಸೀಮಂತಿನಿಯೆಸಿರಿತಿಲಕದ ಶೋಭಿನಿಯೆನುಣ್ಗದಪುನಾಸಿಕಮಣಿಯಳೆ ನೂತನೊಜ್ರದೋಲೆಯಳೆನಿಷ್ಕ ಕಂಠಾಭರಣೆಯಳೆ ನಿತ್ಯಮಂಗಳ ಸೂತ್ರಿಯಳೆನಿಡುಜಾಲಕ ಮಾಲೆಯಳೆಬುಗುಡಿ ಚಳತುಂಬು ಕೊಪ್ಪಿನ ಕಿವಿಯಳೆಬಾವಲಿ ನಾಗೋತ್ರ ಪೊಂಬರಳೆಲೆ ಲಲಿತ ಬಾಹುಲತೆಯಳೆಲಸತ್ವನಜಕೋರಕ ಸ್ತನಿಯಳೆಕಡು ತೆಳ್ವೋದರಿ ನಿಮ್ನ ನಾಭಿಯಳೆಕಂಠೀರವಕಟಿಯಳೆ ಕರಭೋರು ಯುಗಳೆಯಳೆಅಪರಂಜಿಕಂಚುಕಾಂಬರ ಉತ್ತರೀಯಳೆಅಮೂಲ್ಯ ಕಾಂಚಿದಾಮಾಂಕಿತಳೆಬಟುಗನ್ನಡಿ ಜಾನುದ್ವಯಳೆ ಬ್ಞಣ ಪಂಚಕನ ಬತ್ತಳಿಕೆ ಜಂಘೆಯಳೆಕೋಮಲತರಾಂಘ್ರಿ ಸರಸಿಜಯುಗಳೆನೀಲಪಚ್ಚ ಪದ್ಮರಾಗ ಹೀರ ಮುತ್ತಿನ ಪೆಂಡೆಯಳೆಕಾಲಂದಿಗೆ ಮೆಂಟಿಕೆ ವೀರಮುದ್ರೆ ಕಿರಿ ಪಿಲ್ಲಿಯಳೆಮಣಿಮಯಾಂಗುಲ್ಯದ ವಲಯಾಭರಣೆ ಮದಗಜಗಮನೆಪ್ರತಿಯಿಲ್ಲದ ರನ್ನದ ಬೊಂಬೆ ಪರಬೊಮ್ಮನ ಪಟ್ಟದ ರಂಭೆಬಾಬಾ ತಾತಾ ಎಂದು ವಾಮಕರವಬೇಡಲಿತ್ತಳಾ ರುಕ್ಮಿಣಿ ತಾಯಿ 6120ಜಗದ ನಾರಿಯರ ಕೈಗಳ ಕಂಡೆನವ್ವಮೃಗಮದಗಂಧಿ ನಿನ್ಹೋಲ್ವರಿಲ್ಲವ್ವ 62ಯುಗಯುಗಾಂತರ ದೇಶ ದೇಶದಲ್ಲವ್ವಅಗಲ್ಯಾಟವಿಲ್ಲ ನಿನ್ನರಸ ನಿನಗವ್ವ 63ಸವತೇರು ಬಹಳುಂಟು ನೆಂಟರ ಜಾಣೆ ಎಲೆ ಬೀಗರ ಸುಗುಣೆಯುವತಿ ಪ್ರಸನ್ವೆಂಕಟ ಕೃಷ್ಣ ನಿನ್ನ ಪ್ರಾಣ 6421ಕಣಿ ಕೇಳೆ ಕಣಿ ಕೇಳೆ ಕಣಿ ಕೇಳೆ ಚೆಲ್ವೆಕಣಿ ಕೇಳೆ ನಿನ್ನ ಮನದಾ ಮಾತ್ಹೇಳ್ವೆಎಣಿಕೆಗೊಳ್ಳದಿರಮ್ಮಇಂದುನಾಳೆಂದುಗುಣನಿಧಿ ಗೋಪಾಲ ಬಹ ದಯಾಸಿಂಧು 65ತ್ರುಟಿಯುಗವಾಗಿದೆ ನಿನಗೀಗ ಮುಗ್ಧೆಕುಟಿಲಮಾಗಧಸಾಲ್ವ ನೆನೆವ ದುರ್ಬುದ್ಧೆಘಟಿಸದೆಂದಿಗೆ ಖಳರ ಮನೋರಥ ಸಿದ್ಧೆದಿಟವೆನ್ನವಾಕುಸುರಲೋಕ ಪ್ರಸಿದ್ಧೆ66ಹಿಂದೊಮ್ಮೆ ಖಳರು ಗೋವಿಂದ ಬಂದಾಗಮಂದಮತಿಯಲಿ ಮನ್ನಿಸದಿರಲಾಗಇಂದ್ರ ಸಿಂಹಾಸನವ ಹರಿಗೆ ಕಳುಹಿಸಿದವೃಂದ ದೈತ್ಯರಿಗೆಲ್ಲ ಭಯವ ಸೂಚಿಸಿದ 67ಜಂಭಾರಿಕುಲಿಶಕಂಜುತ ಪೋಕರೆಲ್ಲಥಂಬಿಸಿದರು ವಾಗಾಡಂಬರವೆಲ್ಲಅಂಬುಜಾಕ್ಷಗೆ ನಿನ್ನತಾತಪೂಜಿಸಿದಅಂಬುಜನಾಭ ತನ್ನೊಳುವಿಶ್ವತೋರ್ದ68ಅದನೆಲ್ಲ ಬಲ್ಲ್ಯವ್ವ ಹರಿಯ ನಿಜನಲ್ಲೆಬೆದರಿದೊಲ್ಲೋರ್ವ ನಿನ್ನ ಮಾಯವ ಬಲ್ಲೆಪದುಮಜ ಭವರ ಹೃದಯಾಬ್ಜ ನಿಯಂತ್ರೆಉದಧೀಶನಾಜÕದಿ ಸರ್ವಸ್ವತಂತ್ರೆ 69ಕೇಳಮ್ಮ ನಿನ್ನ ಹೆತ್ತವರಿಗೆ ನಿನ್ನಮೇಲೆ ಹಂಬಲ ಬಹಳ ಪಾಪಿ ನಿಮ್ಮಣ್ಣಆಲೋಚನೆಯಿಲ್ಲದೆ ನಿಶ್ಚೈಸಿದ್ದಾನೆ ಶಿಶುಪಾಲಗೆ ನಿನ್ನ ಕೊಡುತೇನಂತೈದಾನೆ 70ಆಗಲ್ಯಾಕವನಿಂದಲೀಕಜ್ಜ ಬುರ್ರಾಬೇಗ ಭೀಷ್ಮಕನಂತರ ಬಲ್ಲ ಶ್ರೀಧರ್ರಾಸಾಗರಶಯನ ತಾ ಸಮಯಕೈತರುವನೇಗಿಲಧರನು ಕೃಷ್ಣನ ಕೂಡ ಬರುವ 71ಆ ಗೌರಿ ಮೌನಿಯೆಂಬುವಳ ಪೂಜೆಯಲಿಯೋಗವಾಗಿದ್ರ್ದಾ ಕಾಪುರುಷ ಸಭೆಯಲ್ಲಿಮೇಘಮುಸುಕಿರ್ದ ಚಂದಿರನಂತೆ ನಿನ್ನಯೋಗೇಶ ಪ್ರಸನ್ವೆಂಕಟ ಕೃಷ್ಣ ನೊಯ್ವ ಚೆನ್ನ 7222ಇನಿತೆಲ್ಲ ಕೊರವಂಜಿಕರವಪಿಡಿದು ಹೇಳಿಕ್ಷಣ ಕ್ಷಣಕೊಡೆಯನ ಹೊಗಳಿನೆನಪಿಗೆ ಬೆಸಗೊಂಬೆ ಕಾಲಜ್ಞಾನದ ವಾರ್ತೆಎನಗೆ ತಿಮ್ಮಯ್ಯ ಹೇಳೆಂದು 73ಶ್ರೀ ರುಕ್ಮಿಣಿಯ ಮನದುಲ್ಲಾಸವನೆಲ್ಲಪೂರೈಸುವೆನೆಂಬ ನುಡಿಯತೋರು ಎನ್ನಯ ನಾಲಿಗೆಯಿಂದಲುಸುರುವೆವೀರ ದ್ರಾವಿಡ ವೆಂಕಟಯ್ಯ 74ಶರಣ್ಯೆಲೆ ಸತ್ಯನೆ ಶರಣ್ಯೆಲೆ ನಿತ್ಯನೆಶರಣು ಶರಣು ನಿತ್ಯಮುಕ್ತಶರಣು ಪರೇಶನೆ ಶರಣು ಅವಿನಾಶನೆಶರಣು ಪ್ರಸನ್ವೆಂಕಟ ಕೃಷ್ಣ 7523ವಚನಓ ರುಕ್ಮಿಣಿ ತಾಯಾರೆಉನ್ನ ಮನಸಿಲೆ ನಿನೈಚ್ಚ ಕಾರ್ಯಂ ಕೈಕ್ಕೂಡಿನಾಲ್ಎನಕ್ಕೆ ಎನ್ನ ಸಂತೋಷಂ ಪಣ್ಣಿರಾಯ್ಓಯಮ್ಮ ಉನ್ ಪ್ರಾಣನಾಯಗನ್ ಶ್ರೀಕೃಷ್ಣನ್ ವಂದುಪೊಟ್ಟಣೆ ಕೈ ಪಿಡಿಚ್ಚಿ ಕಲ್ಯಾಣಂ ಪಣ್ಣಿಕೊಳ್ಳರಾಂಇಂದ ವಾರ್ತೆ ತಪ್ಪಿನಾಲ್ ನಾಂ ಕೊರ್ತಿಯೇ ಅಲ್ಲೆಉನ್ ತಮಯನ್ ರುಗ್ಮಂ ವೇಕ್ಕತ್ತೆ ಕೊಲ್ಲರಂ ವರಾನುಓಯಮ್ಮ ಇಂದ ವಾರ್ತೆಯೈ ಪಣ್ಣಿಕೋ ಅª, À್ಮು 7624ಮದ್ಯಪಾನಿತಾಮಸಯವನನ ಕೊಲಿಸಿದನೆನಿದ್ರೆಗೈವ ರಾಯನಿಂದಲಿಸದ್ದಿಲ್ಲದೆ ಮಧುರೆ ಜನರ ಸಾಗರದಮಧ್ಯ ದ್ವಾರಕೆಯಲ್ಲಿಟ್ಟನೆ 77ಯವನ ಸೈನ್ಯಜಲಧಿಬತ್ತಿಸಿ ಸಾಲ್ವಾದ್ಯರಹವಣಮುರಿದು ನಿಜರ ಹೊರೆವನು ನಿನ್ನವಿವಹ ಮಾಳ್ಪೆನೆಂಬ ಮಾಗಧನು ಚೈದ್ಯ ತನ್ನಕುವರನೆಂದು ಮಾನವಿಡಿದಿಹ 78ಇನಿತರೊಳು ರಂಗರಾಯನು ಮೋಹರದಿಮಣಿರಥವನೇರಿ ಬಹನುವನಿತೆ ನಿನ್ನಂದಣವ ನೋಡುತ ಜಿಗಿವನಲ್ಲಿಂದ ಘನತರ ಮೃಗೇಂದ್ರನಂದದಿ 79ನರಿಯ ಹಿಂಡಿನೊಳಗಿನಾನೆಯ ಒಯ್ವ ತೆರದಿಹರಿನಿನ್ನಪ್ಪಿಕೊಂಡುಹಾರುವಗರುಡನಮೃತ ಕಲಶವ ಸುರರ ಗೆದ್ದುಹರುಷದಿಂದೊಯ್ಯುವಂತೆ ಒಯ್ವನು 80ಸರಸಿಯಾಬ್ಜ ಹಂಸ ಒಯ್ವವೋಲ್ ಪರಮಪುರುಷತ್ವ, ರಿಯ ತನ್ನ ರಥಕೆ ಒಯ್ವನೆಬರಿಯ ದುಗುಡವ್ಯಾಕೆ ಬಾಲಕಿಪ್ರಸನ್ವೆಂಕಟ ಕೃಷ್ಣ ನಿನ್ನ ಮೆಚ್ಚುಗಾರನೆ 81ಬಂದನೆಂಬ ನುಡಿಯು ಬರುತಿದೆಜವದಿಕೃಷ್ಣಬಹನೆಂಬ ನುಡಿಯು ಬರುತಿದೆ 8225ಚೂರ್ಣಿಕೆನೀಡೆಯವ್ವ ಎನ್ನ ಮನೆ ಗಂಡನ ಕಾಟ ಘನ್ನವವ್ವಕ್ಷಣಕೈದು ನಡೆಯವನವ್ವಒಮ್ಮಾನ ತಿರಿತಂದರೆ ಇಮ್ಮಾನ ಬೇಡುವನವ್ವಚೆಂಬಣ್ಣ ಕರಿಬಿಳಿಯಬಟ್ಟೆನಮ್ಮತ್ತೆಗಳವ್ವಆರು ಮಂದಿ ಗಂಡನ ಗೆಳೆಯರವ್ವಏಳು ಪದರು ಮೂರು ತ್ಯಾಪೆ ಗುಡಲುಂಟವ್ವಎಪ್ಪತ್ತೆರಡು ಸಾವಿರ ನುಲಿಯ ಸಿಂಬಿಗಳವ್ವಗುಡಲೊಳು ಮೂರು ಒಲೆಯುಂಟವ್ವಗುಡಲು ಬಿದ್ದರೆ ನುಲಿಗೆ ಮಾರ್ಯೆವ್ವಒಂಬತ್ತು ಗುದ್ದಿನೊಳಗೆ ಹತ್ತು ಹೆಗ್ಗಣದೋಡ್ಯಾಟವವ್ವಕೊರವನ ಕೈಯಿಚ್ಛೆ ಮೂರು ನಾಯಿಗಳವ್ವಎಣಿಕಿಲ್ಲದ ಕುತ್ತಗಳುಂಟವ್ವಕೊಬ್ಬಿನ ಸವತೇರೆಂಟು ಮಂದಿ ಕೊರವಗೆ ಮಚ್ಚೂಡುವರವ್ವಸಂಸಾರದಲೆಳ್ಳನಿತು ಸುಖವಿಲ್ಲವ್ವಅತ್ತೆಗಳಾಟ ಗಂಡನ ಬ್ಯಾಟ ಸವತಿಯರ ಕಾಟನೆರೆಹೊರೆಯವರ ನೋಟ ಮನೆಯ ಮಾಟಗತರಸದೂಟಕಂಜಿ ನಡುನಡುಗಿಮೂರೂರ ಹಾದಿ ಮೆಟ್ಟಿ ಬಂದುಆರೂರರಸಿನ ಮೊರೆ ಹೊಕ್ಕೆನೆಯವ್ವವಿದರ್ಭದೇಶದ ಕುಂಡಿನಾಪುರದೊಳು ನಿನ್ನ ಗುರುತಕೇಳಿಉಪವನದ ಪ್ರದ್ಯೋತನಾಳ್ವ ಎರಡು ಬಾವಿಯ ಮ್ಯಾಗಣಹೂವಿನ ತೋಟದ ನಡುವೆ ಬುತ್ತಿಯನುಂಡು ನಿನ್ನ ಕಂಡುಕುಂತಳಾಪುರದಲ್ಲಿ ಕುಳಿತುಂಬಬ್ರಹ್ಮಾನಂದದವರ ಭಾಗ್ಯವ ಬೇಡ ಬಂದೆನೆ ಅವ್ವಅಸುವಿಗೆ ಹಾಲನೆರೆಯವ್ವಶಿಶುವಿಗೆನವನೀತನೀಡೆಯವ್ವಬಂಗಾರೆವ್ವ ಸಿಂಗಾರೆವ್ವ ಸೋರ್ಮುಡಿಯವ್ವಮಲ್ಲಿಗೆದುರುಬು ಸಂಪಿಗೆದುರುಬುಪಚ್ಚೆ ಮರುಗ ಮುಡಿವಾಳ ಶಾವಂತಿಗೆ ತುರಬಿನವ್ವಪ್ರಸನ್ವೆಂಕಟಕೃಷ್ಣನ ತೋಳ್ತಲೆಗಿಂಬಿನವ್ವ ನೀಡೆಯವ್ವ 8326ವಚನಇಂತಾಧ್ಯಾತ್ಮವಂ ಪೇಳಿಕಂತುವಿನಯ್ಯನ ಕಾಂತೆಯಂ ಸಂತಸಪಡಿಸಿಅಂತರಂಗದಿ ಚಿಂತಾಯಕನಂ ನೆನೆನೆನೆದುಭ್ರಾಂತಿ ಪರವಶಾದಂತೆ ಕೆಂಜೆಡೆಯಂ ತೂಗಿ ತೂಗಿಅಂತದತ್ಯಂತ ತೂಳಂತುಂಬಿಇಂತೆಂದಳಾ ಕೊರವಂಜಿ 8427ಬರುತಾನೆ ಜಾಣೆ ಬರುತಾನೆಬರುತಾನೆ ಚೆಲ್ವೆ ಬರುತಾನೆ 85ಹಿಂಡುಭಂಡರೆಲ್ಲ ಕೂಡಿ ನಿನ್ನ ಮುಚ್ಚಲು ಎತ್ತಿಕೊಂಡು ಒಯ್ವ ಜಾಣ ಬರುತಾನೆಪುಂಡರೀಕಸುರಗಿ ಖಡ್ಗ ಭಿಂಡಿವಾಲ ನುಗ್ಗುಮಾಡಿದಂಡಿಸುವ ಜಾಣ ಬರುತಾನೆ 86ಕುಂಡಿನಾಪುರದಿ ನೆರೆದ ಕೊಂಡಿ ಕುಹಕರ ತಲೆಯಚಂಡನಾಡ್ವ ಜಾಣ ಬರುತಾನೆಮಂಡೆಯಲ್ಲಿ ಪಚ್ಚಚೂಡವಿಟ್ಟು ರುಕ್ಮನಭಿಮಾನಕೊಂಡೇನೆಂಬ ಜಾಣ ಬರುತಾನೆ 87ತಂಡ ತಂಡದಲ್ಲಿ ನಿನ್ನಯ್ಯನ ಸದ್ವಾಸನನ್ನಉಂಡೇನೆಂಬ ಜಾಣ ಬರುತಾನೆಲೆಂಡದಾನವಾರಿ ಪ್ರಸನ್ನವೆಂಕಟಕೃಷ್ಣ ಬೊಮ್ಮಾಂಡಪತಿ ಜಾಣ ಬರುತಾನೆ 8828ಚೆನ್ನೆ ಕೊರವಂಜಿ ಮಾತು ಶ್ರೀಕನ್ಯೆಕೇಳಿನಲಿವಾಂತುಮನ್ನಿಸಿ ಗುಣವ ಕೊಂಡಾಡಿ ಮುಕ್ತಿರನ್ನಗಾಣಿಕೆಯನು ನೀಡಿ 89ಎಲೆ ಸತ್ಯಲೋಕದ ಕೊರವೆ ನೀಬಲು ಸತ್ಯ ನುಡಿದೆ ನಾನರಿವೆಛಲದಂಕ ದೇವರದೇವ ಈಖಳರೊಳು ಒಯ್ವುದರಿದವ್ವ 90ಹರಿರಥವೇರಿ ಬಾಹೋಣ ಕಾಪುರುಷರ ಮತ ಕೆಡಿಸೋಣಗುರುಪ್ರಸನ್ವೆಂಕಟ ಕೃಷ್ಣ ಬಂದುಹೊರೆವುದುಂಟೇನವ್ವ ರಮಣಿ 9129ನಂಬಲೇನೆ ನಿನ್ನ ಮಾತು ಕೆಳದಿ ಕೊರವಮ್ಮ ನಮ್ಮಂಬುಜಾಕ್ಷ ಬಾಹನೇನೆ ದೇವಿ ಕೊರವಮ್ಮ 92ಉಡಿಯ ಕಂದನಾಣೆ ಇಡುವೆ ನಂಬೆ ರುಕ್ಮಿಣಿ ನಾನುಡಿವ ನಾಮದಾಣೆ ಇಡುವೆ ನಂಬು ರುಕ್ಮಿಣಿ 93ಎಡದ ತೋಳು ತೊಡೆಕಂಗಳುಹಾರಲೊಳಿತೇನೆ ಚಿಲಿಪಿಲಿನುಡಿವಶಕುನಎಡದ ಗೌಳಿಯ ನುಡಿಯು ಒಳಿತೇನೆ94ಕಡಲಶಯನ ನಿನ್ನ ಪ್ರಾಣದೊಡೆಯ ಬಪ್ಪನೌ ಎನ್ನಪಡೆದನಯ್ಯ ಪ್ರಸನ್ನವೆಂಕಟಕೃಷ್ಣ ತಪ್ಪನೌ 9530ನಿನ್ನಗಂಡಬೆಣ್ಣೆಗಳ್ಳ ಕನ್ನೆಗೊಲ್ಲತಿಯರ ನಲ್ಲಕಣ್ಣೆವೆ ಸನ್ನೆಗಾರ ನಂದಗೋಪ ಕುಮಾರ 96ಚಿನ್ನತನದಿ ದಶಲಕ್ಷ ಚಿನ್ನರ ಪಡೆದನು ದಕ್ಷಪೊನ್ನ ಕೊಳಲನೂದಿ ಮೂಜಗವ ಮೋಹಿಸುವ 97ಉನ್ಮತ್ತಮಾತುಳನ್ನ ತುಳಿದ ತನ್ನ ಪೆತ್ತವರೆಡರ್ಗಳೆದಮನ್ನಿಸಿ ಪಾಂಡವರÀ ಪೊರೆದ ಚಿನ್ಮಯ ಸುಖದ 98ಪೆಣ್ಗಳ್ ಹದಿನಾರುಸಾವಿರದ ನೂರೆಂಟನಾಳ್ವ ಚದುರನಿನ್ನ ಪ್ರಾಣ ಪ್ರಿಯ ಬಂದ ಪ್ರಸನ್ನವೆಂಕಟ ಕೃಷ್ಣ ಮುಕುಂದ 9931ನುಡಿ ನುಡಿಯೆಲೆ ಬಡನಡುವಿನ ಮಡದಿ ನಿನ್ನುಡಿಗುಚಿತವಕೊಡುವೆನಡಿವಿಡಿವೆ ಮನವಿಡುವನೆ ಕಡಲೊಡೆಯ ಕೈವಿಡಿವನೆ ಎನ್ನ ಕಡೆಯ ನೋಡಿ ನುಡಿವನೆ ಸವಿನುಡಿಯಕಡು ಬಲಿಭುಜ ಗಡಣಂಗಳ ನಡುವ್ಹಂಸನಪಡಿಮಿಡುಕುವೆನುಡಿ ಬೇಗೆಂದು ಪಡೆಗೂಡಿ ಹಲಿಯೊಡನಾಗಮ ನುಡಿಯೇ ನಿನ್ನುಡಿಗಮೃತವ ಪಡೆಯೇ ಮತ್ತೀಜಡಜಡಿ ಲೋಕೊಡೆಯೆ ಪ್ರಸನ್ನವೆಂಕಟ ಕೃಷ್ಣರಾಯನನುಡಿಯೆಲೆ ನುಡಿನುಡಿಯೆ ನುಡಿನುಡಿಯೆ 10032ಹರಿಬರುತಾನೆ ಗುರುತು ಗಂಟ ಕಟ್ಟೆಪಕೇಳೆ ನರಸಿಂಗನಂಗನೆಯನೊಯಿದು ಕೆಟ್ಟನರಿಗಳಾಳಬಲ್ಲವೇನೆ ನಲಿದು ನೀನುದುರುಳರಿಗೆ ದಕ್ಕಬಲ್ಲ್ಯೇನಮ್ಮ ನಿನ್ನಾಚರಣೆಯೆಲ್ಲ ಜಗದ್ವಿಡಂಬನಮ್ಮ 101ನನ್ನ ತರಳನಾಣೆ ಸಟೆಯನಾಡೆನಮ್ಮ ನಾನೊರೆದವಾಕುಸಾಕ್ಷಿ ಬರುತಾವಮ್ಮ ಮ್ಯಾಲರಕೆಯುಳ್ಳ ತಾಯಿಯಾದರೆ ನೀ ನನ್ನಕರೆಸಿ ಕೇಳೆ ನಿನ್ನ ಮನೆಗೆ ಜಾಣೆ 102ನಿನ್ನ ಹೆಸರ ತಕ್ಕ ಊಟವ ನೀಡೀಗ ನಾಹಸಿದೆನೆಂದು ಉಂಡುಕೊರವಿಬೇಗಪ್ರಸನ್ನವೆಂಕಟ ಕೃಷ್ಣನ ರಾಣಿಗೆÉ ಹಾರೈಸಿದಳು ಬಸುರು ಬುಡುಕೆಂದು 10333ಚಕ್ಕನೆ ನಿಂತಳು ಕೊರವ್ಯಮ್ಮ ಕಂಡುಫಕ್ಕನೆ ನಿಂತಳು ರುಕ್ಮಿಣಮ್ಮ ಪ್ರಾಣದಕ್ಕರ ಬಿಡಲಾರೆ ನಿನ್ನ ಗೆಳತಿ ಪ್ರೇಮಉಕ್ಕುತಿದೆ ನೀ ಹೋಗುವುದೊಳಿತೆ ಎನಲು ನಕ್ಕು 104ಶ್ರೀ ಗೋಪಾಲ ಬಾಹನಕ ನಿಲ್ಲೆ ವಿಯೋಗ ತಾಳಲಾರೆ ನೀ ಬಲ್ಲೆಹೀಗೆನೆÀ್ನ ಬೇಡಿಕೊಂಡಳು ಮರುಳೆ ನೆನೆದಾಗೆ ಬಹೆನೆಂದ್ಹೇಳಿ ತೆರಳೆ ಅನುರಾಗದಿಂದ 105ಆವ ಪರಿಂದಾರೆ ಹರಿಸೇವೆ ಮಾಡಿದೇವಋಷಿ ನಿಜಾನಂದ ತೀವಿಶ್ರೀವರ ಪ್ರಸನ್ವೆಂಕಟ ಕೃಷ್ಣನ ಮಹತೇವಿಡಿದು ಹೊಗಳುತ ಮುನಿರನ್ನ ರಾಮೆಯಾಜÕದಿ 10634ಸುರಋಷಿಪೇಳ್ದ ಒಕ್ಕಣೆಯಹರುಷದಿ ಕೇಳ್ದ ರುಕ್ಮಿಣಿಯಅರಸ ಪ್ರಸನ್ನವೆಂಕಟ ಕೃಷ್ಣನಿರುತದಿ ಜಯ ನಮಗೀವ 107ಜಯ ಜಯ ಚಿನ್ಮಯಮೂರ್ತಿಜಯ ಜಗನ್ಮಯ ಸ್ವಚ್ಛಕೀರ್ತಿಜಯ ಜಯ ಪ್ರಸನ್ವೆಂಕಟ ಕೃಷ್ಣಜಯಮೂರ್ತಿನಿನಗೆ ಶರಣು108
--------------
ಪ್ರಸನ್ನವೆಂಕಟದಾಸರು
ನಿನ್ನ ಧ್ಯಾನ ಶುಭಮೂಹೂರ್ತ ನಿನ್ನ ಭಜನ ಶುಭದಿನವು ಪನಿನ್ನ ನಾಮ ಜಯಕಾರವು ನಿನ್ನ ಸ್ಮರಣ ಶುಭತಿಥಿಯುನಿನ್ನ ಸ್ತುತಿಯೆ ಶುಭಕಾಲ ಅನ್ಯ ಎಲ್ಲಪುಸಿಮಾಧವದೇವಅಪನಿತ್ಯನಿರುಪಮ ನಿನ್ನ ನಿತ್ಯದಲ್ಲಿ ಪೊಗಳುವುದೆಉತ್ತಮ ಶುಭವಾರವುಚಿತ್ತಜಪಿತ ನಿನ್ನ ಚಿತ್ತದಲಿ ನೆನೆಯುವುದೆಅತ್ಯಧಿಕ ಪಕ್ಷಮಾಸವುಮೃತ್ಯುದೂರನೆ ನಿನ್ನ ಸತ್ಕಥೆಯನಾಲಿಪುದೆ ನಕ್ಷತ್ರ ಶುಭಕರಣವುಭಕ್ತವತ್ಸಲ ನಿನ್ನ ಭಕ್ತಿಯಿಂ ಪಾಡುವುದೆನಿತ್ಯಅಮೃತಯೋಗವು ನಿಜವು1ದಿವನಿಶೆಯ ಇಡದೊಂದೆಸವನೆ ನಿನ್ನರಸುವುದೆರವಿಚಂದ್ರ ಭೌಮ್ಯ ಒಲವುಭವಪರಿಹರ ಸಿರಿಧವ ನಿನ್ನ ಸಚ್ಚರಿತಕವಿಗುರುಸೌಮ್ಯ ಬಲವುಬುವಿಯರಸ ನಿನ್ನಸಮ ಸುವಿಲಾಸ ಲೀಲೆ ಕೇಳಾವುದಮಿತ ಶನಿಬಲವುಭುವಿಜಪತಿ ಭಕ್ತಿಯ ಭವಭವದಿ ರಾಹುಕೇತುನವಗ್ರಹಂಗಳ ಬಲವು ಗೆಲವು 2ಕರಿಧ್ರುವರ ಪೊರೆದ ತವಪರಮ ಬಿರುದುಗಳನ್ನುಸ್ಮರಿಸುವುದೆ ಭವದೂರವುಹರದಿಗಕ್ಷಯವಿತ್ತ ವರದ ನಿನ್ನಡಿ ದೃಢವುಸ್ಥಿರಶಾಂತಿ ಸುಖಸಾರವುಸುರಗಣಕೆ ಸೌಖ್ಯವನು ಕರುಣಿಸಿದ ನಿಮ್ಮ ಮೊರೆಪರಲೋಕ ನಿಜಸ್ವಾದವುವರದ ಶ್ರೀರಾಮ ನಿಮ್ಮ ಚರಣದಾಸತ್ವದೆವರಮುಕ್ತಿ ಕೈಸಾಧ್ಯವು ಸ್ಥಿರವು 3
--------------
ರಾಮದಾಸರು
ನಿನ್ನ ನಂಬಿದೆ ನೀರಜನಯನಎನ್ನ ಪಾಲಿಸೊಇಂದಿರೆರಮಣಪಮುನ್ನ ಪಾಂಚಾಲಿಯ ಮೊರೆಯ ಲಾಲಿಸಿ ಕಾಯ್ದಪನ್ನಗಶಯನ ನೀಪರಮಪುರುಷನೆಂದುಅ.ಪಹರಿಸರ್ವೋತ್ತಮನಹುದೆಂಬ ಬಾಲಕನಹಿರಣ್ಯಕಶಿವು ಪಿಡಿದು ಬಾಧಿಸಲು ||ನರಹರಿ ರೂಪಿಂದಲವನ ವಕ್ಷವ ಸೀಳ್ದೆಪರಮವಿಶ್ವಾತ್ಮಕನಹುದೆಂದು ಮೊರೆ ಹೊಕ್ಕೆ1ಪಾದವ ಪಿಡಿದು ನೀರೊಳಗೆಳೆದ ನಕ್ರನಬಾಧೆಗಾರದೆ ಕರಿಮೊರೆಯಿಡಲು ||ಆದಿ ಮೂರುತಿ ಚಕ್ರದಿಂದ ನಕ್ರನ ಕೊಂದವೇದಾಂತವೇದ್ಯ ಅನಾಥ ರಕ್ಷಕನೆಂದು 2ಇಳೆಗೊಡೆಯನ ತೊಡೆ ನಿನಗೇತಕೆಂದು ಆಲಲನೆಕೈ ಪಿಡಿದೆಳೆಯಲರ್ಭಕನ ||ನಳಿನಾಕ್ಷ ನಿನ್ನನೆದೆಯೊಳಿಟ್ಟು ತಪವಿರ್ದಬಲು ಬಾಲಕಗೆ ಧ್ರುವ ಪಟ್ಟಿಗಟ್ಟಿದನೆಂದು 3ಸುದತಿಗೌತಮಸತಿ ಮುನಿಶಾಪದಿಂದಲಿಪಢದಿ ಪಾಷಾಣವಾಗಿ ಬಿದ್ದಿರಲು ||ಮುದದಿಂದಲಾಕೆಯಮುಕ್ತಮಾಡಿದಯೋಗಿಹೃದಯ ಭೂಷಣ ನಿನ್ನ ಪದ ವೈಭವವ ಕಂಡು 4ಪರಮಪಾವನೆ ಜಗದೇಕಮಾತೆಯನುದುರುಳರಾವಣ ಪಿಡಿದು ಕೊಂಡೊಯ್ಯಲು ||ಶರಣೆಂದು ವಿಭೀಷಣ ಚರಣಕೆರಗಲಾಗಿಸ್ಥಿರಪಟ್ಟವನು ಕೊಟ್ಟ ಜಗದೀಶ ನೀನೆಂದು 5ಅಂಬರೀಷನೆಂಬನೃಪತಿದ್ವಾದಶಿಯನುಸಂಭ್ರಮದಿಂದ ಸಾಧಿಸುತಿರಲು ||ಡೊಂಬೆಯಿಂದದೂರ್ವಾಸಶಪಿಸಲಾಗಿಬೆಂಬಿಡದಲೆ ಚಕ್ರದಿಂದ ಕಾಯ್ದವನೆಂದು 6ಧರೆಯೊಳು ನಿಮ್ಮ ಮಹಿಮೆಯ ಪೊಗಳ್ವಡೆಸರಸಿಜೋದ್ಭವ-ಶೇಷಗಸದಳವು ||ಸ್ಮರಣೆಮಾತ್ರದಿ ಅಜಾಮಿಳಗೆ ಮೋಕ್ಷವನಿತ್ತಪುರಂದರವಿಠಲ ಜಗದೀಶ ನೀನೆಂದು7
--------------
ಪುರಂದರದಾಸರು
ನಿನ್ನನು ನಂಬಿದೆನು ನಾ ಸುಂದರ ಗೋವಿಂದನೇ | ಪನ್ನಗಾಶಯನಗೋಪಿಕಂದನೇ | ಮುಕುಂದನೆದುಷ್ಟರ ಶಿಕ್ಷಿಪಘೋರಕಾಲನೆ | ರಣಶೂರನೆ |ಶಿಷ್ಟರ ರಕ್ಷಿಪ ಭಕ್ತಪಾಲನೆ ಗುಣಶೀಲನೇ ಪಹೊಳೆವ ಮತ್ಸ್ಯಾವತಾರನೆನ್ನಿಸಿಇಳೆಯ ಭಾರವ ಕಳೆದನೆ ||ಜಲದಿವಾಸವಮಾಡಿಕೊಂಡು |ಜಲದಿನಾಲ್ದೆಸೆ ನಲಿದನೆ 1ಧರೆಯ ಬೆನ್ನಲಿ ಪೊತ್ತು ನೆಲಸಿದಕೂರ್ಮನೆ |ಸ್ಮøತಿಧರ್ಮನೇ ||ಶರದ ಸೇತುವೆ ಧರಿಸಿ ನಿಂದಾ |ಮರ್ಮವರಿತೇ | ಸುಶರ್ಮನೆ 2ರಸತಳದಿ ಕೆಸರೊಳಗೆ ಹೊರಳುವಹಂದಿಯೇ | ಭೂಮಿ ತಂದಿಯೇ ||ಬಸುರ ಬಗಿದಾ ಹೇಮನೇತ್ರನಕೊಂದೆಯೇ ಮಮ ತಂದೆಯೇ 3ಕಂಬದಲಿ ಮೈದೋರಿ ತರಳನ |ಪೊರೆದನೇ ನರಸಿಂಹನೇಕುಂಭಿನಿಯ ಬಾಧಿಸಲು ದುರುಳನ |ಕರುಳನೇ ಹರಿದೆಳದನೇ 4ಭೂಮಿಯಲಿ ಮೂರಡಿಯದಾನವ ಕೊಟ್ಟಾನೇಬಲಿಕೆಟ್ಟಾನೇವಾಮನನು ಎರಡಡಿಯ ತೀರಿಸಿ |ಮೆಟ್ಟುತಲಿವರಕೊಟ್ಟನೇ 5ಕೊರಳ ಕುತ್ತಿಯೆ ಮಾಲೆಮಾಡುತ್ತಾಹೆತ್ತವಳ ಕತ್ತರಿಸಿದೆ ||ಧರಣಿಪರ ಶಿರವದೆಭಾರ್ಗವ|ಸತ್ಯ ಭೂಮಿಯ ಸುತ್ತಿದೆ6ವನದಿ ರಾಮನ ಸತಿಯರಾವಣ ಕದ್ದನೇ ವಿಷ ಮೆದ್ದನೇ ||ವನದಿ ಕಪಿಗಳ ಕೂಡಿ ದೈತ್ಯರಕೊಂದನೆ ಸೀತೆಯ ತಂದನೇ 7ಸರಸಿಯಲಿ ಮೊರೆಯಿಡುವ ಗಜವ |ಕಾಯ್ದನೇ ಯಾದವನೇ ||ಧುರದಿ ಕಾಳಿಯ ಶಿರದಿ ನಲಿದ |ದೇವನೇ ಮಾಧವನೇ 8ಬತ್ತಲೆಯ ಬೌದ್ಧಾವತಾರನೆ |ಮೃತ್ಯು ತೆಕ್ಕಲ ಹೊಕ್ಕನೇ ||ಸತ್ಯ ಧರ್ಮವನರಿಯದಧರ್ಮರ |ಸೊಕ್ಕ ಮುರಿವನೆ ಪಕ್ಕನೆ 9, 10ಕಲಿಯುಗದ ಕಡುಪಾಪಿ ನರರನು |ಕಡುಗದಿಂದಲಿ ಕಡಿದನೇ ||ಕಾಲಭೈರವನಂತೆ ಕಲ್ಕ್ಯನು |ಕಿಡಿಯನುಗುಳುತ ಸುಡುವನೇ 11ದಾಸಜನರನು ಪೊರೆವಶ್ರೀನಿವಾಸನೇ | ಜಗದೀಶನೇ |ಶೇಷಶಯನನೆಂದೆನಿಪ |ಗೋವಿಂದನೇ | ಗುಣವೃಂದನೇ 12
--------------
ಗೋವಿಂದದಾಸ
ನೀನೆ ಭಕುತಾಭಿಮಾನಿ ಕರುಣಿ ಪಮರೆಬಿದ್ದ ಭಕುತರ ಪೊರೆಯಲು ತವಸಮಕರುಣಿ ದೇವರ ಕಾಣೆಧರೆಎರಡೇಳರೊಳ್1ಶಿಲೆಯನು ಪೆಣ್ಣೆನಿಸಿ ಕುಲದೊಳು ಕಲೆಸಿದಿಸಲಹಿದಿ ಗಜನ ಮಹ ವಿಲಸಿತಮಹಿಮ ಪ್ರಭು 2ಮೊರೆಯಿಟ್ಟು ಸ್ಮರಿಸುವ ಚರಣದಾಸನ ಆಸೆಕರುಣದಿಂ ಪೂರೈಸು ಪರತರ ಶ್ರೀರಾಮ 3
--------------
ರಾಮದಾಸರು
ನೀನೇಕೊ ನಿನ್ನ ಹಂಗೇಕೊ - ನಿನ್ನ -ನಾಮದ ಬಲವೆನಗಿದ್ದರೆ ಸಾಕೊ ಪ.ಆ ಮರ ಈ ಮರವೆಂದೆನ್ನುತಿರೆ ರಾಮ - |ನಾಮವೆ ವ್ಯಾಧನ ಮುನಿಪನ ಮಾಡಿತು 1ನಾರಾಯಣೆನ್ನದೆ ನಾರಗನೆನ್ನಲು |ಘೋರಪಾತಕಿಯನು ನಾಮವೆ ಕಾಯ್ದಿತೊ2ತಂದೆ ಪ್ರಹ್ಲಾದನ ಬಾಧೆಯ ಪಡಿಸೆ - ಗೋ |ವಿಂದನೆಂಬ ಸಿರಿನಾಮವೆ ಕಾಯ್ದಿತೊ 3ಉತ್ತರೆಯು ಗರ್ಭದಿ ಸುತ್ತಲಸ್ತ್ರವಿರೆ |ಚಿತ್ತಜಪಿತ ನಿನ್ನ ನಾಮವೆ ಕಾಯ್ದಿತೊ 4ಕರಿಮಕರಿಗೆ ಸಿಲ್ಕಿ ಮೊರೆ ಇಡುತಿರುವಾಗ |ಪರಮಪುರುಷ ಹರಿನಾಮವೆ ಕಾಯ್ದಿತೊ 5ನಾರಿಯನೆಳತಂದು ಸೀರೆ ಸೆಳೆಯುತಿರೆ |ದ್ವಾರಕಾಪತಿ ನಿನ್ನ ನಾಮವೆ ಕಾಯ್ದಿತೊ 6ಹಸುಳೆ ಧ್ರುವರಾಯನು ಅಡವಿಗೆ ಪೋಪಾಗ |ವಸುದೇವಸುತ ನಿನ್ನ ನಾಮವೆ ಕಾಯ್ದಿತೊ 7ನಿನ್ನ ನಾಮಕೆ ಸರಿಯಾವುದ ಕಾಣೆನೊಪನ್ನಗಶಯನ ಶ್ರೀ ಪುರಂದರವಿಠಲ 8
--------------
ಪುರಂದರದಾಸರು
ನುತಿಪ ಸುಜನರಿಗೆ ದೊರೆವೋನು ಕರುಣಿ ಪಕ್ಷಿತಿಯೊಳಗೆಮಣಿಮಂತಮೊದಲಾದತುಳ ಮಹಿಮನ ಸತತ ಸ್ಮರಿಸುವೆ ಅ.ಪತನುಜಸಂಭವ ದೇವಿಕಾಯನೋಡಿದನುಜಕೌರವರ ಕೊಂದನು ಭೀಮರಾಯಅಣುಗನೆನಿಸುತ ಘನದಿ ಮೆರೆದನು 1ರಾವಣಿಹಂತಕ ಹನುಮನೆನಿಸಿದೇವರೆಂತೆಂಬೊ ಸಂಕರನನಿರ್ಧೂಮದೇವಿ ಮೊರೆಯನುಕೇಳಿಕುರುಗಳಶೈವ ಶಾಸ್ತ್ರವ ಮುರಿದ ಮಧ್ವನು 2ನಗವೈರಿಮಗನಿಗೆ ನಿರುತ ಸಂತ್ರಾಣನಿಗಮವಾಕ್ಯದಿ ನಗುತ ಪೇಳಿದ 3
--------------
ಗುರುಜಗನ್ನಾಥದಾಸರು
ನೆಲೆಸೆನ್ನ ಹೃದಯ ಮಂದಿರದಿ - ಶ್ರೀ ಹರಿಯೆ ನೀ |ಸಲಿಸೆಮ್ಮ ಮನದಿಷ್ಟಅನುದಿನ ದಯದಿಪಸಿರಿಮಿಂಚಿ ಮರುತ್ಯುಪರ್ಣ ಪು - |ರಾರಿವಂದಿತಚರಣಸರಸಿಜ ||ಪರಮಭಕ್ತ ಪ್ರಹ್ಲಾದ ನಾರದ |ವರಪರಾಶರ ಮುಖಸುಸನ್ನುತ ಅ.ಪನಾರುವಿ ಭಾರವ ಪೊರುವಿ - ಬಲು - |ಬೇರುಗಳನೆ ಕಿತ್ತು ಮೇಲುವಿ -ಕರಿ - |ವೈರಿ ರೂಪಗೊಂಡ ಗರುವಿ - ಬ್ರಹ್ಮ - |ಚಾರಿ ಖಳರ ಕತ್ತರಿಸುವಿ |ವೀರದಶರಥಸುತ ಸುರಾರ್ಚಿತ |ಜಾರತನದಲಿ ವ್ರತವ ಕೆಡಿಸುತ |ತೋರಿ ಮೆರೆವನೆತರಳ ಬಲು ಗಂ - |ಭೀರ ಕುದುರೆಯನೇರಿ ಮೆರೆವನೆ 1ಅನಿಮಿಷ ಮಂದರೋದ್ಧರಣ - ನೀನಾ - |ವನಗಪಂಚಾನನವದನ - ವಾ - |ಮನ ದಾನವರ ಕೊಯ್ವಕದನ - ಹೀನ - |ದನುಜರಾವಣ ಸಂಹರಣ ||ಧೇನುಕಾಸುರ ಶಕಟಮರ್ದನ |ಜಾÕನದಾನ ವಿಡಂಬನಾನಕ |ಭಾನುಮಸ್ತಕ ನೀಲವರಕರ |ದೀನಜನಸಂತ್ರಾಣ ನಿಪುಣನೆ 2ಮಚ್ಛಕಚ್ಛಪ ಸ್ವಚ್ಛಕಿರನೆ - ಬಲು - |ಅಚ್ಚ ಶಿಶುಮೊರೆ ಕೇಳಿದವನೆ ||ಸ್ವೇಚ್ಛೆಯವಟು ಪರಶುಕರನೆ - ರಾಮ - |ವತ್ಸಾಸುರನ ವಧಿಸಿದವನೆ ||ತುಚ್ಛ ಜನರಿಗೆ ಕಪಟಕಾರಣ |ಹೆಚ್ಚಿನಶ್ವದ ಮೇಲೆ ಹೊಳೆವನೆ |ಮೆಚ್ಚಿಪುರಂದರ ವಿಠಲನಪರ - |ಮಾಚ್ಯುತದ ಪದವೀವ ದೇವನೆ 3
--------------
ಪುರಂದರದಾಸರು
ಪರಾಕುಮಾಡದೆಪರಾಮರಿಸಿಎನ್ನಪರಾಧಂಗಳ ಕ್ಷಮಿಸೋ ಪಧರಾರಮಣ ಫಣಿಧರಾಮರಾರ್ಚಿತಸುರಾಧಿಪತಿವಿಧಿಹರಾದಿ ವಂದಿತಅ.¥ Àನರರೊಳಗೆ ಪಾಮರನು ನಾನಿಹಪರಕೆ ಸಾಧನವರೀಯೆ ಶ್ರೀಹರಿ ||ಚರಣಕಮಲಕೆ ಶರಣುಹೊಕ್ಕೆನುಕರುಣದಿಂದ ನಿನ್ನ ಸ್ಮರಣೆಯೆನಗಿತ್ತು 1ಜಪವನರಿಯೆನು ತಪವನರಿಯೆನುಉಪವಾಸ ವ್ರತಗಳ ನಾನರಿಯೆ ||ಕೃಪಾವಲೋಕನದಿಂದ ಆ ಪಾಪಗಳನೆಲ್ಲಅಪಹತವ ಮಾಡೋ ಅಪಾರಮಹಿಮನೇ 2ಕರಿರಾಜನುದ್ಧರಿಸಿ ದ್ರೌಪದಿಯಮೊರೆಯ ಲಾಲಿಸಿ ತರುಳಗೊಲಿದು ನೀಸಿರಿರಮಣ ನಿನ್ನ ಸರಿಯಾರ ಕಾಣೆಪುರಾರಿನುತಸಿರಿಪುರಂದರವಿಠಲ3
--------------
ಪುರಂದರದಾಸರು
ಪುಟ್ಟಿಸಬೇಡವೊ ದೇವ - ಎಂದಿಗು ಇಂಥ-|ಕಷ್ಟಪಟ್ಟು ತಿರುಗುವ ಪಾಪಿ ಜೀವನವ ಪನರರ ಸ್ತುತಿಸಿ ನಾಲಗೆ ಬರಡು ಮಾಡಿಕೊಂಡು |ದರಪೋಷಣೆಗಾಗಿ ಅವರಿವರೆನದೆ ||ಧರೆಯೊಳು ಲಜ್ಜೆ - ಮಾನಗಳೆಲ್ಲವೀಡಾಡಿ |ಪರರ ಪೀಡಿಸಿ ತಿಂಬ ಪಾಪೀ ಜೀವನವ 1ಎಂಟುಗೇಣು ಶರೀರವ ಒಂದು ಗೇಣು ಮಾಡಿಕೊಂಡು|ಪಂಟಿಸುತ್ತ ಮೆಲ್ಲಮೆಲ್ಲನೆ ಪೋಗಿ ||ಗಂಟಲಸೆರೆಗಳುಬ್ಬಿ ಕೇಳುವ ಸಂಕಟ ವೈ-|ಕುಂಠಪತಿ ನೀನೆ ಬಲ್ಲೆ ಕಪಟನಾಟಕನೆ 2ಲೆಕ್ಕದಲಿ ನೀ ಮೊದಲು ಮಾಡಿದಷ್ಟಲ್ಲದೆ |ಸಖ್ಯಕೆವೆಗ್ಗಳಕೊಡುವರುಂಟೆ ||ಕಕ್ಕುಲತೆಪಟ್ಟರಿಲ್ಲ ಕರುಣಾಳು ನಿನ್ನ ಮೊರೆ |ಹೊಕ್ಕೆ ಎನ್ನನು ಕಾಯೊ ಪುರಂದರವಿಠಲ 3
--------------
ಪುರಂದರದಾಸರು