ಒಟ್ಟು 2526 ಕಡೆಗಳಲ್ಲಿ , 119 ದಾಸರು , 1558 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ನೀಯೆನ್ನ ಸದ್ಭಾಗ್ಯ ಆನಂದ ನಿಧಿಯೊ ಪ ಮಧುವೈರಿ ತಾಯಿಯಂದದಿ ಕಾಯೊ ಅ.ಪ ಏನಾಗುವ ಪ್ರೀತಿ ನಿನ್ನಿಂದ ಎನಗಯ್ಯ ಜ್ಞಾನಾದಿ ಆನಂದ ಸುಗುಣ ಸಿಂಧು ದೀನ ಬಾಂಧವ ನಿನ್ನಧೀನದವ ನಾನಯ್ಯ ನಿತ್ಯ ಪವಮಾನ ಹೃತ್ಸದನ 1 ವಿದ್ಯ ಬುದ್ಧಿ ಜ್ಞಾನ ಮನಕರಣ ಶಕ್ತಿ ಸದ್ಧೈರ್ಯ ಸುಖನಿಧಿಯು ನಿರ್ಭೀತ ಪದವಿ ಅದ್ವಯನೆ ನೀನೆನಗೆ ಅನಿಮಿತ್ತ ಬಂಧು ಹರಿ ಸಿದ್ಧಿಸೈ ಈ ಜ್ಞಾನ ಸರ್ವಕಾಲದಿ ದೇವ 2 ನಾನು ನನ್ನದು ಎಂಬ ದೋಷದ ಮಕರಿ ಗಾನೆ ಸಿಕ್ಕಿದ ತೆರದಿ ಮೊರೆಯುತಿಹೆನೊ ದಾನವಂತಕನೆ ಶ್ರೀ ಜಯೇಶವಿಠಲ ದೀನ ಕರಿಯನು ಪೊರೆದ ತೆರದಿ ಸಲಹೊ ಎನ್ನ 3
--------------
ಜಯೇಶವಿಠಲ
ನೀರಜಗಂಧಿಯೇ ಹೇಳೇ ಸುಳಿದವರಾರಮ್ಮಾ | ನೀರಜ ಶರಪತಿ ಕಾಣಮ್ಮಾ ಪ ಅರುಣನಖಾಂಗುಲಿ ಗುಲ್ಫ ಗೆಜ್ಜೆ ಕಾ- ಪುರ ನೂಪುರದ ಲೊಪ್ಪುವನವದಾರಮ್ಮಾ | ಸರಸಿಯೊಳಗಪೊಕ್ಕು ತಮನಸುವ ಬಗೆದು | ವರಶೃತಿ ತಂದವ ಕಾಣಮ್ಮಾ 1 ಕಲಿ ದಶನಂದದಿ ಜಂಘೆ ಪೊಂಬಾಳೆಯ | ಪರಿಯ ತೊಡೆಯುಳ್ಳುವ ದಾರಮ್ಮಾ | ಶರಧಿ ಮಥಿಸುವಂದುಗಿರಿನಿಲ್ಲದಿರೆ ಬಂದು | ಭರದಿ ಬೆನ್ನೆವಿತ್ತವ ಕಾಣಮ್ಮ2 ಕಾಂಚನ ವಸನನಿರಿಯ ಮ್ಯಾಲ ವಡ್ಯಾಣ ಮಿಂಚಿನ ಘಂಟೆಯ ದಾರಮ್ಮಾ | ಕ್ಷಿತಿ ವಯ್ದದನುಜನ ಶೀಳಿ ವಿ | ರಂಚಿ ಗುಳಹಿದವ ಕಾಣಮ್ಮಾ3 ಕಿರಿಡೋಳ್ಳಾತ್ರಿವಳಿಯ ನವರತ್ನ ಪದಕಿಹ | ಉರಸಿನ ವತ್ಸನವ ದಾರಮ್ಮಾ | ನರಹರಿ ರೂಪದಿ ಹಿರಣ್ಯಕನನು ಕೊಂದು | ಶರಣನ ಕಾಯ್ದವ ಕಾಣಮ್ಮಾ4 ಕೌಸ್ತುಭಹಾರ ಮೌಕ್ತಿಕದ ಕೊರಳಲಿಹ | ಹಸ್ತ ಕಡಗದವ ನಾರಮ್ಮಾ | ಸ್ವಸ್ತಿ ಎನುತ ಬಂದು ಬೇಡಿ ಬಲಿಯಾಗರ್ವ | ಸ್ವಸ್ತಿ ಮಾಡಿವನು ಕಾಣಮ್ಮಾ5 ಕ | ಪೋಲ ಹೊಳಹಿನವ ದಾರಮ್ಮಾ | ಏಳು ಮೂರು ಬಾರಿ ಕ್ಷತ್ರಿಯ ರಾಯರ ಸೋಲಿಸಿ ಬಂದವ ಕಾಣಮ್ಮಾ6 ಕರ್ಪೂರ ಕರಡಿಗಿ ಬಾಯಿ ಸಂಪಿಗೆಯಂತೆ | ತೋರ್ಪ ನಾಶಿಕದವ ದಾರಮ್ಮಾ | ದರ್ಪ ಮುರಿದು ರಾವಣನ ತಲಿಯ ಧರೆ | ಗೊಟ್ಟಿಸಿದವ ನಿವ ಕಾಣಮ್ಮಾ7 ಕುಡಿಗಂಗಳ ಭ್ರೂಲತೆಯ ಪೆರೆನೆಣೆಸಲು | ಪೊಡವಿಯೊಳಗ ನಂಬಿದ್ದ ಪಾಂಡವರನು | ಬಿಡದೆ ಸ್ಪಾಪಿಸಿದವ ಕಾಣಮ್ಮಾ8 ಕುರುಳು ಗೂದಲು ತಳಕದ ಮಾಲ್ಯ ಮೌಲಿಕ | ಧರಸಿದ ಮುಕುಟವ ದಾರಮ್ಮಾ | ತರಳನಾಗಿ ಮುಪ್ಪುರ ನಾರಿಯರ ವೃತ | ತ್ವರಿತದಿ ಅಳಿದವ ಕಾಣಮ್ಮಾ9 ನೋಡಲು ಮನಸಿಗೆ ಮೋಹನೆ ಮಾಡುವ | ಪ್ರೌಡದಿ ಮನವವ ದಾರಮ್ಮಾ | ರೂಢಿಲಿ ಕುದುರೆಯ ಏರಿ ಕಲಿಮಲವ | ಝಾಡಿಸಿದವನಿವ ಕಾಣಮ್ಮ10 ಸಹಜದಿ ಸವಿಸವಿ ಮಾತಲಿ ಸೋಲಿಸು | ತಿಹ ಸರ್ವರಿಗಿವ ದಾರಮ್ಮಾ | ಮಹಿಪತಿ ಸುತನ ಹೃದಯದಲಿ ನಿಂತು ತನ್ನ| ಮಹಿಮೆ ಬೀರಿಸುವವ ಕಾಣಮ್ಮಾ11
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ನೀರಜಾಕ್ಷ ನಿರ್ದಯವ್ಯಾಕೊ ಕರುಣದಿ ಎನ್ನಾ ಪ ಒಡಲಿಗನ್ನಾ ತೊಡಲು ಅರಿವೆ ಕೊಡುವವರನು ನಾ ಕಾಣೆ ಹರಿಯೇ ಬಡತನ ಕಂಗೆಡಿಸಿತೋ ಕಡೆಗ್ಹಾಯಿಸಯ್ಯ ತ್ವರದಿ ಗುಣಮಣಿಯೇ 1 ಖೂಳ ಜನರ ಆಳಾಗಿ ನಾ ಹಾಳು ಒಡಲನ್ನು ಹೊರೆಯಲಾರೇ ಕೂಳಿಗೋಸುಗ ಬಾಳಾಯ್ತೀಪರಿ ತಾಳಲಾರೆ ಕಾಯೋ ಮುರಾರೇ2 ನೀ ಕೈಬಿಡಬ್ಯಾಡೋ ಶ್ರೀ ಹನುಮೇಶವಿಠಲನೆ ಎನ್ನಾ ಇಷ್ಟದಂದರಿ ಥಟ್ಟನೆ ಮಾಡೋ 3
--------------
ಹನುಮೇಶವಿಠಲ
ನೀರನಾ ಕರತಾರೆ ನಾರಿಮಣಿಯೇ ಪ ಸೂರೆ ಹೋಗ್ತಾನೆ ಜೀವಾ ಆರಿಗುಸುರಲಿ ಬೇಗಾ ಅ.ಪ ಬರುವೆನೆಂದು ಪೋಗಿ ಬಾರನೇತಕೆ ಸಖಾ ಕರತಾರೆ ಕಾಮಿಸಿ ಸುರತಾವನಾಡುವಾ 1 ಮಾರನಯ್ಯನಾಣೆ ತೀರಿತೆನ್ನ ಪ್ರೀತಿ ದೂರಕ್ಕೋದನೂ ಗಂಡಾ ಬಾರದೇಕೆ ಪೋದನೆ 2
--------------
ಚನ್ನಪಟ್ಟಣದ ಅಹೋಬಲದಾಸರು
ನೀರೇ ತೋರೇ ಪಯೋನಿಧಿ ವಾಸನಾ| ನೀರ ಜಾಸನಾನಂತ ಸರ್ವೇಶನಾ ಪ ಹಸ್ತ ವರದನ ಹರಿಮಧುಸೂದನ| ಹಸ್ತಿ ವಾಹಜನ ಸೂತಾದನಾ 1 ಕರಿಯೇರಿದಾತನ ಶರಕುರುವಾತನ| ಕರಿಹರ ಸಖ ಸನಾತನಾ 2 ಅನಂತ ಮಹಿಮ ಕೇಶವ ಮುಕುಂದನ| ಅನಂತ ಶಯನ ಗೋವಿಂದನಾ 3 ಮಕರ ಧ್ವಜ ಪಿತನ ಪರಮಾನಂದನ| ಮಕರ ಧ್ವಜ ಪಿತ ವಂದ್ಯನಾ4 ತಂದೆ ಮಹಿಪತಿ ನಂದನ ಜೀವನ| ಹೊಂದಿದವರ ಕಾವಾ ದೇವನಾ5
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ನೀರೇರುಹಾನಯನ | ವಾರನಿಧಿ ನಡುಶಯನತೋರೆನಗೆ ತವ ಚರಣ | ಸುಗುಣ ಗಣ ಪೂರ್ಣ ಪ ಅಮಿತ ಕ್ಲೇಶ ಗೊಳಿಸದಂತೆನೀ ಸಲಹೋ ಎನ್ನ | ಶೇಷಾದ್ರಿ ವಾಸಾ ಪರೇಶಾ1 ಭವ | ಸಂಗದೊಳಗಿರಿಸೀಭಂಗ ಪಡಿಸುವಿ ದೊರೆಯೆ | ಶೃಂಗಾರ ನಿಧಿಯೇ |ಸಂಗ ವಿಷಯದಿ ಹರಿಸಿ ನಿ | ಸ್ಸಂಗನೆಂದೆನಿಸಿಲಿಂಗಾಂಗ ಕಳೆಯೊ ಹರಿ | ರಂಗ ಭವಹಾರಿ2 ಸಾಮಸನ್ನುತ ಚರಣ | ಭೂಮಗುಣಿ ಸುಸ್ತವನಪ್ರೇಮದಲಿ ಗೈವ ಮನ | ನೇಮವೀಯೆಲೊ ವಾಮನ |ಈ ಮಹಾ ಕಲಿಯುಗದಿ | ನಾಮ ನಿಸನ್ನದೆ ಗತಿಯೆಶ್ರೀಮಹೀ ಸೇವಿತನೆ | ರಾಮ ಗುಣಧಾಮ 3 ಭವ | ರೋಗ ವೈದ್ಯನೆ ಎನ್ನರೋಗ ಹರಿಸುವುದರಿದೆ | ಇದು ನಿನ್ನ ಬಿರುದೇ4 ನಿರವದ್ಯ ಆದ್ಯಾಅರುಹಲೇನಿಹುದಿನ್ನು | ಸರ್ವಜ್ಞ ನೀನಿನ್ನು ಒರೆವೆನೆಂಬಪರಾಧ | ಮರೆದು ಪಾಲಿಸು ಶ್ರೀಶ 5
--------------
ಗುರುಗೋವಿಂದವಿಠಲರು
ನೀಲಕಂಠನ ಸುತಗಭಿನಮಿಸಿ ಆದಿಬ್ರಹ್ಮನ ಸತಿಯಳ ಭಜಿಸಿ ನೀಲವರ್ಣನು ಲಕ್ಷ್ಮೀಲೋಲನ ದಯದಿಂದ ಪಾಲಿಸಿದರೆ ಪಾಡಿ ಪೊಗಳುವೆನು ಪ ಜಯ ಜಯ ಭೀಮ ಭಾರತಿಗೆ ಜಯ ಜಯ ಧರ್ಮ ಭೀಮಾರ್ಜುನರಿಗೆ ಜಯ ದ್ರೌಪದಿ ನಕುಲ ಸಾದೇವಗೆ .......... ........... ............ 1 ಉಕ್ಕುವೊಯೆಣ್ಣೆಯೊಳಗೆ ನೋಡಿ ಕೊಟ್ಟೇನೆನುತ ಪರಮುತ್ಸವದಿಂದಲಿ ಪೃಥಿವಿರಾಯರಿಗ್ವಾಲೆ ಬರೆದ ರಾಯ 2 ದಿಕ್ಕು ದಿಕ್ಕಿನ ರಾಜರು ಬರಲು ಕೃಷ್ಣ್ಣೆಸ್ವಯಂವರ ನೋಡಬೇಕೆನುತ ವಿಪ್ರವೇಷವÀ ಧರಿಸಿ ಹೆತ್ತಮ್ಮನ ಸಹಿತಾಗಿ ಸತ್ಯಪಾಂಡವರು ಬಂದರು ಬ್ಯಾಗ 3 ಬಲವಂತ ರಾಯರೆಲ್ಲರು ತಾವು ಬಲುಮೆಯಿಂದಲಿ ಧನುವೆತ್ತಿ ಬೀಳೆ ಹಲಧರನನುಜ ತಾ ಚೆಲುವ ಪಾರ್ಥನ ನೋಡಿ ಬಲವಕೊಟ್ಟನು ಭೀಮಾರ್ಜುನಗೆ 4 ಸಾದೇವನನುಜ ಸುಂದರ ಪಾರ್ಥ ಆದಿಮೂರುತಿಯ ಪಾದಕ್ಕೆ ನಮಿಸಿ ಕಾದಯೆಣ್ಣೆಯ ನೋಡಿ ಕಟ್ಟಿದ ಮೀನವ ತಾ ಧನುವೆತ್ತಿ ಹೊಡೆದನಾಗ 5 ಚೆಲ್ಲೆಗಂಗಳ ದ್ರೌಪದಿದೇವಿ ವಲ್ಲಭ ಪಾರ್ಥಗೊಲಿದು ಬ್ಯಾಗ ಮಲ್ಲಮರ್ದನಸಖನಲ್ಲಿ ನಡೆದು ಬಂದು ಮಲ್ಲಿಗೆ ಮಾಲೆ ಹಾಕಿದಳಾಗ 6 ವಿಪ್ರ ಕ್ಷತ್ರಿಯರೊ ದಾವಕುಲವೊ ನೆಲೆ ಕಾಣದಲೆ ಮಾಜದೆ ನಿಮ್ಮ ಮರ್ಮಗಳ್ಹೇಳಬೇಕೆಂದು ಕೇಳುತ್ತಿದ್ದನು ಕಂಗೆಡುತ ರಾಯ 7 ಮಚ್ಛಯೆಸೆಯಲು ಮಗಳ ನಾನು ಕೊಟ್ಟೇನೆನುತ ನಿಶ್ಚಯವ ಮಾಡಿ ಇಷ್ಟುವಿಚಾರದಿಂದೀಗೇನು ಫಲವೆಂದು ಸತ್ಯಧರ್ಮಜ ನುಡಿದನು ನಗುತ 8 ಕೇಳುತ ಕುಂತಿಸುತರುಯೆಂದು ಭಾಳ ಸಂಭ್ರಮದಿ ಪಾದವ ತೊಳೆಯೆ ಕಾಲ ನೀಡಲು ಕಂಡು ತಾ ಜಾರಿ ಹಿಂದಕ್ಕೆ ಸರಿದ ರಾಜ9 ಸತ್ಯವತಿಯ ಸುತರ್ಹೇಳುತಿರೆ ಮತ್ತಾಗೆರೆದನು ಮಗಳ ಧಾರೆ ಮುತ್ತು ಮಾಣಿಕ್ಯದ ಮಂಗಳಸೂತ್ರವ ಕಟ್ಟಿ ಕೊಟ್ಟನೈವರಿಗೆ ದ್ರೌಪದಿಯನಾಗ 10 ಲಾಜಾಹೋಮವು ಭೂಮಾನಂತರದಿ ಮೂರ್ಜಗದೊಡೆಯ ಕೃಷ್ಣನ ಸಹಿತ ರಾಜಾಧಿರಾಜರೈವರು ಕುಳಿತಿರೆ ಕೃಷ್ಣ ರಾಜ ಧರ್ಮರ ವಾಮಭಾಗದಲಿ 11 ರುಕ್ಮಿಣಿದೇವಿ ಪಾರ್ವತಿ ಗಂಗಾ ಸತ್ಯಭಾಮೇರ ಸಹಿತಾಗಿ ಬಂದು ಸತ್ಯ ಪಾಂಡವರಿಗೂಟಣಿ (ಉರುಟಣೆ?) ಮಾಡಬೇಕೆಂದು ಕೃಷ್ಣೆ ನೀಯೇಳೆಯೇಳೆನುತಿದ್ದರು 12 ಕಂಜನೈಯ್ಯನು ಕಡೆನೋಟದಲಿ ತಂಗಿ ಕೃಷ್ಣೆಯ ಮುಖವನು ನೋಡಿ ಅಂಜದಲ್ಹೇಳುತಲೈವರ ಗುಣಗಳ ಹಂಗೀಸೂಟಾಣಿ ಮಾಡಬೇಕೆಂದನು 13 ಕನ್ನೆ ದ್ರೌಪದಿ ಅರಿಷಿಣ ಪಿಡಿದು ತನ್ನ ಪತಿಗೆ ಎದುರಾಗಿ ನಿಂತು ಸುಮ್ಮನೆ ರಾಜ್ಯವ ಬಿಟ್ಟು ವನವನಾ ತಿರುಗೋ ಧsÀರ್ಮರೇ ನಿಮ್ಮ ಮುಖ ತೋರಿರೆಂದಳು 14 ಕಂಕಭಟ್ಟೆನಿಸುವೊ ದೊರೆಗಳಿಗೆ ಕುಂಕುಮ ಹಚ್ಚುವೆ ಕುಶಲದಿಂದ ಪಂಚಾಂಗ ಪಠಿಸುವ ಪಾಣಿಯ ಪಿಡಿದು ನಾ ಮುಂಚೆ ಗಂಧವ ಹಚ್ಚುವೆನೆಂದಳು 15 ಯಿಟ್ಟಸತಿಯ ಅನುಜರನೆಲ್ಲ ಗಟ್ಟಿ ಹೃದಯಕ್ಕೆ ಬುಕ್ಕಿ ್ಹಟ್ಟು ಪರಿಮಳ ಹಚ್ಚಿ ಅಚ್ಚ ಮಲ್ಲಿಗೆ ಹಾರ ಹಾಕುವೆನೆಂದಳು 16 ಶಾಂತಧರ್ಮರ ಚರಣಕ್ಕೆ ಎರಗಿ ಮಂತ್ರಿಭೀಮನ ಮುಂಭಾಗದಲಿ ಕಾಂತರ ಮುಖಕ್ಕೆ ಹಚ್ಚುವೆನೆಂದಳು 17 ಬಂದೇಕಚಕ್ರನಗರದಲ್ಲಿ ಬಂಡಿಲನ್ನವನುಂಡು ¨ಕಾಸುರನ ತುಂಡು ಮಾಡ್ಯವನ ತೋರಣ ಕಟ್ಟಿದ ತೋಳಿಗೆ ಗಂಧವ ಹಚ್ಚೇನೆಂದಳು ನಗುತ 18 ಇಟ್ಟ ವಿಷದ ಲಡ್ಡಿಗೆಯ ಮೆದ್ದು ಭಿಕ್ಷÀದನ್ನವು ಬರಿಯಾಗದಲೆ ಹುಟ್ಟುಹಿಡಿದು ಅಟ್ಟುಂಬೋ ಪುರುಷರಿಗೆ ಬು- ಕ್ಕಿ ್ಹಟ್ಟು ಪರಿಮಳ ಹಾಕುವೆನೆಂದಳು 19 ಕಪಿಗಳೊಳಗೆ ಶ್ರೇಷ್ಠರುಯೆನಿಸಿ ಅತಿ ಬ್ಯಾಗದಿಂದ ಕೌರವರ ಕುಲ ಹತವ ಮಾಡ್ಯತಿಯಾಗೋ ಪತಿಗೆ ಮಾಲೆಯ ಹಾಕಿ ಅತಿ ಭಕ್ತಿಲಿಂದೆರಗಿದಳಾಗ 20 ಸರಸಿಜಮುಖಿ ದ್ರೌಪದಿದೇವಿ ಅರಸು ಅರ್ಜುನಗೆದುರಾಗಿ ನಿಂತು ಅರಿಷಿಣ ಕುಂಕುಮ ಪಿಡಿದು ಸ್ತ್ರೀರೂಪವ ಧರಿಸುವ ನಿಮ್ಮ ಮುಖ ತೋ(ರಿ)ರೆಂದಳು 21 ತಂದು ಗಜವ ತೋ
--------------
ಹರಪನಹಳ್ಳಿಭೀಮವ್ವ
ನೀಲವರ್ಣ ಗೋಪಾಲನು ಎಲ್ಲೆ ಕಾಣಿರೇನೇ ವ್ರಜದ ಒಳಗೆ ಲೀಲಿ(ಲೆ ಇ?) ದೇನೆ ನಮ್ಮ ಸಂಗಡ ಹೇಳೇ ಗೋಪ್ಯಮ್ಮ 1 ಚಿಣ್ಣಿಕೋಲು ಚೆಂಡು ಬುಗುರಿ ವೇಣುಕೊಳಲಧ್ವನಿಯ ಆಲಿಸಿ ಓಣಿ ಓಣಿ ಹುಡುಕಲು ನಂದ- ಸೂನು ಎಲ್ಲಿಹನೆ 2 ಗೋಪಿ ಗೋಪಾಲ ಕೂಡಿ ಧಾಳಿ ಮಾಡ್ವುದು ದಾರಿಗೆ ತರವೆ ಗೂಳಿಮಾಡಿದಿ ಗೋಕುಲದೊಳು ನಿನ- ಗ್ಹೇಳುವುದಿನ್ನೇನೆ 3 ನವನೀತ ದಧಿ ಘೃತ ಸುರಿದೋಡಲು ನೀ ಸುಮ್ಮನೆ ಬಿಟ್ಟು ಯಾತಕೆ ಹಿಡಿತಾರದೆ ದೂರ್ಹೇಳುವಿ ಈ ಮಾತು ನಿರ್ಧಾರವೇನೆ 4 ಹೆತ್ತತಾಯಿ ನೀ ಬಳಲುವಿ ಎಂದು ಸಿಕ್ಕೊರಳಿಗೆ ಕಟ್ಟಿಸಿ ಕೊಂಡೆಳೆದು ಸಿಕ್ಕುವುದುಂಟೇನೆ 5 ವಜ್ರದ್ಹಾರ ಪದಕ ಹÉೂನ್ನರಳೆಲೆ ಗೆಜ್ಜೆ ಕಾಲಂದಿಗೆ ಝಳಿ ಝಳಿಸುತ ಮೂರ್ಜಗದೊಳು ಮುದ್ದಿರಲೀಕೂಸ್ಹೊರ- ಗ್ಹೆಜ್ಜೆನಿಡುವುದೇನೆ 6 ಶಿಶುವೇನೇ ಅಸುವ್ಹೀರಿ ಪೂತನಿ ಕೇಶಿ ಧೇನು ತೃಣಾವರ್ತ ಶಗಟಾಸುರ ಬಕನ ಕೊಂದವಗೆಂತು ನೀ ಅರ್ಭಕ- ನೆಂತಾಡುವಿಯೆ 7 ಹೆಡೆಯ ತುಳಿದ ಕಾಳಿಂಗನ ಮಡುವ ಕಲಕಿದ ಕಡುವಿಷಕಂಜದೆ ಹುಡುಗರ ಕಾರ್ಯವಿದೇನೆ ಬಿಡು ನಿನ್ನ ಬಡಿವಾರವು ಸಾಕೆ 8 ಕಾಡುಕಿಚ್ಚನು ನುಂಗಿದ ನಿನಸುತ ಬೇಡಿಯಜ್ಞದೊಳುಂಡನ್ನವನು ಸಾಲದೆ ಇಂದ್ರನ ಪುರವುಂಡ್ಹೊಟ್ಟೆ ಗಿ- ನ್ನೀಡೆಲ್ಲಿಹುದ್ಹೇಳೆ 9 ಶಕÀ್ರನ ಬಲಿ ಅನ್ನವ ದಕ್ಕಿಸಲವ ಸಿಟ್ಟಲಿ ಸಪ್ತದಿನ ಮಳೆಕರೆಯೆ ಎತ್ತಿ(ದ) ಗೋವರ್ಧನಗಿರಿ ನಮ್ಮದಾರಿ- ಚ್ಚೆಗೆ(?) ಸಲಹುವನೆ 10 ಕಾತ್ಯಾಯಿನಿ ವ್ರತಮಾಡೋ ಸ್ತ್ರೀಯರ ವಸ್ತ್ರಗಳನೆ ಕದ್ದು ಮರನೇರಿದ ಬತ್ತಲೆ ಚಪ್ಪಾಳಿಕ್ಕುತ ತಿರುಗಲಿನ್ನೆ- ಷ್ಟಂತ್ಹೇಳುವೋಣೆ 11 ಚೋರತನವೊಂದಲ್ಲದೆ ಕಲಿತಿಹ ಜಾರತನ ಕೇಳರಿಯೆ ಯಶೋದ ನೀರುತಿದ್ದುವ ಎಲ್ಲರ ಒಗತನಕಿವ ಪಾರುಗಾಂಬುವುದ್ಹ್ಯಾಗೆ 12 ಗಂಡರುಳ್ಳ ಗರತಿಯೇರೆನ್ನದೆ ಪುಂಡೆಬ್ಬಿಸಿ ಬೃಂದಾವನದೊಳಗೆ ಬಂದಮ್ಮನ ಹಿಂದಡಗಲು ನಿನಗೆ ಮುದ್ದಿನ್ಯಾರಿಗೆ ಹೇಳೆ 13 ಮಾಧವ ತಾ ಕೊಳಲೂದು- ತಿರೆ ನಾವು ಮೋಹಿತರಾಗಿ ಹೋದ ಸುದ್ದಿಗಳೊಂದ್ಹೇಳೆ ಲಜ್ಜೆ ಬಾ- ಹೋದೆ ನಮಗಿನ್ನು 14 ಬಳೆ ಬಾಪುರಿ ಕಂಕಣ ಚೂಡ್ಯ ಗಳನು ತೊಡೆಗÉೀರಿಸಿ ಕಾಲಂದಿಗೆ ಕರದಿ ಕಾಲುಂಗುರ ಕಿವಿಗಿಟ್ಟು ಬಾವುಲಿ ಪಾದದಿ ರಚಿಸಿದೆವೆ 15 ಹೊನ್ವಾಲೆ ಹೊಸಕೊಪ್ಪು ಮೂಗುತಿ ಚಿನ್ನದ ಒಡ್ಯಾಣದ ನಡುವಿಟ್ಟು ಕಣ್ಣಿಗೆ ಕಸ್ತೂರಿಬಟ್ಟು ಕುಂಕುಮ ಕಾಡಿಗೆ ನೊಸಲಿಗೆ ರಚಿಸಿ 16 ಬಿಟ್ಟಮಂದೆ ಕಟ್ಟದೆ ಕರುಗಳ ತೊಟ್ಟಿಲೊಳಗಿಟ್ಟು ಶಿಶುವಿಗೆ ಕಣ್ಣ ್ಹ(ಣ್ಣಿ ಹ?)ಚ್ಚಿ ನಾವೆಚ್ಚರಿಕಿಲ್ಲದೆ ಪೋದೆವೆ ಅಚ್ಚುತನಿದ್ದೆಡೆಗೆ 17 ಬಂದವರನೆ ಮನ್ನಿಸದೆ ನಿನಸುತ ಅ- ಲ್ಲಿಂದೊಬ್ಬಳ ಹೆಗಲೇರಿಸಿ ಪೋಗೆ ಹಿಂದಾಲ್ಪರಿದ್ವನವನಿತೆಯರ್ಕೂಡಿ ಬಂದೆವ್ಯಮುನೆ ದಡಕೆ18 ಇಬ್ಬರಿಬ್ಬರ ನಡುವೆ ನಿನಸುತ ಒಬ್ಬನಾಗಿ ಜಲದ ಒಳಗೆ ಅಬ್ಬರದಿಂದಾಡಲು ಜಲಕ್ರೀಡೆ ಕ- ಣ್ಗ ್ಹಬ್ಬವಾಗಿರೆ ಜನಕÉ 19 ಗೋಪಿ ಗೀತವಿದೆಂದು ನಿನಸುತ ಖ್ಯಾತಿ ಮಾಡಿದ ಜಗದ ಒಳಗೆ ಯಾತಕೆ ಕೂಸೆಂದಾಡುವೆ ತಿಳಿ ನಿನ್ನ ಪ್ರೀತಿ ಮೋಹಗಳೆಂದು 20 ಅಂಕದಲ್ಯಾರೋಪಿತನಾಗೆ ಶÀಂಕಿಲ್ಲದೆ ಹಾರ ಭಾರವನೆ ತಾಳಿದೆ ಬಿಂಕವ ಬಿಡು ಮಗನೆಂದಾಡುವುದು ಈ ಮಂಕು ಬುದ್ಧಿಗಳಿನ್ನು 21 ಮಗುವೇನೆ ಹೃದಯದೊಳ್ಹದಿನಾಲ್ಕು ಜಗವ ಕಂಡು ನೀ ತೆಗೆಯದೆ ನೇತ್ರ ಜಗಜಗಿಸುವ ಚಂದ್ರಮನಂಗೈಯಲಿ ಈ ಬಗೆ ನಿನಗರಿಕಿಲ್ಲೆ 22 ಗೋಪಾಂಗನೆಯರಾಡುವ ಮಾತು ಕೋಪದಿ ಕೇಳುತಲೆಶೋದೆ ಗೋಪಾಲಕೃಷ್ಣ ನಿನ್ನೆಲ್ಲಿ ಕಳುಹಲೆಂದಳು 23 ದುಷ್ಟ ಕಾಲನೇಮಿ ಕಂಸನು ನಿನ್ನ ಕರೆಯಕಳುಹಲು ಕರಕರೆಯಾಕೋ ನಾರಾಯಣ ನಿನ್ನಟ್ಟುವೆ(ವು) ಮಧುರೆಗೆ ನಾವೆಲ್ಲರು ಕೂಡಿ 24 ದುಷ್ಟತನವ ಬಿಡೋ ಭೀಮೇಶ- <ಈಔಓಖಿ s
--------------
ಹರಪನಹಳ್ಳಿಭೀಮವ್ವ
ನೆನೆಮನವನುದಿನ ಹನುಮದೀಶನ ಕನಸಿನಲಿ ತನುಸುಖವನು ಬಯಸದೆ ನಿ ಪ. ಮನಸಿಜ ಪಿತನನೆ ನೆನೆನೆನೆದ್ಹಿಗ್ಗುತ ನಿನ ಹೃದಯದಲ್ಹರಿಯನು ನಿಲಿಸುತಲೆ ತನುಮನವರ್ಪಿಸೆ ಜನುಮ ಜನುಮದಘ ವನು ಕಳೆವನು ರಾಮನುಮಾನವೇಕೆ 1 ಆರು ಅರಿಯದ ತೋರಿ ಭಕ್ತಿಯೇ ಬಾರಿ ಪಾಶದಿ ಕಟ್ಟಿಹ ಹನುಮ ವಾರಿಜನಾಭನು ಹಿಗ್ಗಿ ನಿಲುತಲೆ ಚಾರುಸೇವೆಗೆ ಬಹೆ ಎನೆ ರಾಮನ ನೆನೆ2 ಕಲ್ಲಾಗಿದ್ದ ಅಹಲ್ಯೆಯ ರಾಮನು ನಲ್ಲೆಯ ಮಾಡಿದನರಿಯೆಯ ಮನವೆ ಚೆಲ್ಲುತ ಕರುಣವ ಶಬರಿಯ ಎಂಜಲನುಂಡ ರಮಾ ವಲ್ಲಭ ಶ್ರೀ ಶ್ರೀನಿವಾಸ ಕರುಣಿಯೊ ನೆನೆ 3
--------------
ಸರಸ್ವತಿ ಬಾಯಿ
ನೆನೆವೆನನುದಿನ ನೀಲನೀರದವರ್ಣನ ಗುಣರನ್ನನಮುನಿಜನಪ್ರಿಯ ಮುದ್ದು ಉಡುಪಿನ ರಂಗನ ದಯಾಪಾಂಗನ ಪ. ದೇವಕೀ ಜಠÀರೋದಯಾಂಬುಧಿಚಂದ್ರನ ಸುಖಸಾಂದ್ರನಗೋವ್ರಜಕೆ ಘನ ಯಮುನೆಯನು ದಾಟಿ ಬಂದನ ಅಲ್ಲಿ ನಿಂದನಮಾವ ಕಳುಹಿದ ಮಾಯಶಠವಿಯ ಕೊಂದನ ಚಿದಾನಂದನ ದೇವರಿಪು ದೈತ್ಯೇಂದ್ರ ಶಕಟನ ಒದ್ದನ ಶ್ರುತಿಸಿದ್ಧನ 1 ಗೋಕುಲದ ಗೋಪಿಯರ ಸಂಚಿತ್ತ ಚೋರನ ಬಹು ಧೀರನ ಅ-ನೇಕ ನಾರಿಯರ್ವಸನವನು ಕದ್ದೊಯ್ದನ ಪುರಗಾಯ್ದನನಾಕಿಯರ ನೋಯಿಪಧೇನುಕ ವತ್ಸವಿಘಾತ ವಿಖ್ಯಾತನಕಾಕುಮತಿ ಕಾಳಿಂಗನ ಫಣ ತುಳಿದನ ಆವಗೊಲಿದನ 2 ಕರ ಪಿಡಿದನ ಸುಧೆಗುಡಿದನಬಾಲ ಭಾಮೆಯರೊಡನೆ ಜಲಕ್ರೀಡೆಗಿಳಿದನ ಅಲ್ಲಿ ನಲಿದನಲೀಲೆಯಲಿ ಲಲನೆಯರಿಗಿಷ್ಟವ ಕೊಟ್ಟನ ಸಂತುಷ್ಟನ 3 ಕ್ರೂರ ಬಕ ಕೇಶಿಗಳನೆಲ್ಲ ಸೀಳ್ದನ ಸುರರಾಳ್ದನ ಅಕ್ರೂರ ಕರೆಯಲು ಹರುಷದಿಂದಲಿ ಬಂದನ ಸುರವಂದ್ಯನಸಾರಿ ಕುಬ್ಜೆಗೆ ಭೂರಿಸಂತಸವಿತ್ತನ ಅತಿಶಕ್ತನವಾರಣವ ಒದ್ದು ಕೆಡಹಿದಾಪ್ರತಿಮಲ್ಲನ ಅತಿಚೆಲ್ವನ4 ಸುಲಭದಿಂದಲಿ ಶಿವನ ಧನುವನು ಮುರಿದನ ನೆರೆಮೆರೆದನಮಲೆತÀ ಮಲ್ಲರ ಮಡುಹಿರಂಗದಿ ನಿಂತನ ಜಯವಂತನಖಳಕುಲಾಗ್ರಣಿ ಕಂಸನೆಂಬನ ಹೊಡೆದನ ಹುಡಿಗೆಡೆದನಬಲದಿ ತಾಯಿತಂದೆ ಬಂಧನ ಕಡಿದನ ಕೀರ್ತಿ ಪಡೆದನ 5 ಭುವನ ಪಟ್ಟವನುಗ್ರಸೇನಗೆ ಕೊಟ್ಟನ ಅತಿ ದಿಟ್ಟನಯುವತಿಯರಿಗುದ್ಧವನ ಕಳುಹಿದ ಜಾಣನ ಸುಪ್ರವೀಣನವಿವಿಧ ವಿದ್ಯಾ ಕಲೆಗಳನ್ನೆಲ್ಲ ಅರಿತನ ಶುಭಚರಿತನ ಜವನ ಶಿಕ್ಷಿಸಿ ದ್ವಿಜನ ಕಂದನ ತಂದನ ಆನಂದನ 6 ಕುಮತಿ ಖಳ ಮಾಗಧನ ಯುದ್ಧದಿ ಗೆದ್ದನ ಅನವದ್ಯನದ್ಯುಮಣಿಸಮ ದ್ವಾರಕೆಯ ರಚಿಸಿದುದಾರನ ಗಂಭೀರನಸುಮತಿ ಮುಚುಕುಂದನೊದ್ದ ಯವನನ ಸುಟ್ಟನ ಅತಿದಿಟ್ಟನವಿಮಲ ಸುಚರಿತ್ರಾಷ್ಟಮಹಿಷಿಯರಾಳ್ದನ ನೆರೆಬಾಳ್ದನ 7 ಮುರನರಕ ಮುಖ್ಯರನು ಚಕ್ರದಿ ತರಿದನ ಕರಿವರದನಸುರತರುವ ಸತಿಗಾಗಿ ತಂದ ಸಮರ್ಥನÀ ಜಗತ್ಕರ್ತನದುರುಳ ಶಿಶುಪಾಲಾದಿ ದೈತ್ಯ ಸಂಹಾರನ ಬಹು ಶೂರನಕುರುಕುಲಕೆ ಲಯವಿತ್ತ ಪಾಂಡವಪ್ರೀಯನ ಕವಿಗೇಯನ 8 ಸಂತತವೀ ಸಾರÀ ಕತೆಯನು ಕೇಳ್ವರ ನೆರೆ ಬಾಳ್ವರಕಂತುಪಿತ ಕಾರುಣ್ಯದಿಂದಲಿ ಹೊರೆವನು ಸುಖಗರೆವನುಇಂತು ಇಳೆಯ ಸುಜನರ ಸಲಹುವ ಕಾಂತನ ಸಿರಿವಂತನಪಂಥವುಳ್ಳ ಪ್ರಸನ್ನ ಹಯವದನ್ನನಮುನಿಮಾನ್ಯನ 9
--------------
ವಾದಿರಾಜ
ನೆರೆದು ಗೋಪಿಯರೆಲ್ಲರು - ಕೃಷ್ಣಯ್ಯನಕರವ ಪಿಡಿದುಕೊಂಡುಭರದಿಂದ ಬಂದು ಯಶೋದೆಗೆ ಚಾಡಿಯಅರುಹಿದರತಿ ವೇಗದಿ ಪ ಬಲು ಕಳ್ಳ ನಿನ್ನ ಮಗ - ಯಶೋದೆ ಕೇಳೆಹಾಲು ಕರೆಯುತಿರಲುತೊಲೆಗೆ ನಿಚ್ಚಣಿಕೆಯನೆ ಹಾಕದೆ ಸುರಿದನುನೆಲುವಿನ ಪಾಲ್ಮೊಸರ 1 ಅಮ್ಮಯ್ಯ ಇಲ್ಲ ಕಾಣೆ - ಇವಳು ಎನ್ನಸುಮ್ಮನೆ ದೂರುವಳೆಹಮ್ಮಿಂದ ನಾನವಳ ಅಟ್ಟಕ್ಕೆ ನೆಗೆಯಲುಬೊಮ್ಮ ಜಟ್ಟಿಗನೇನಮ್ಮ2 ಮತ್ತೆ ಮುತ್ತಿನಂಥ - ನಿನ್ನೀ ಮಗಹತ್ತಿ ಗವಾಕ್ಷದಿಂದಎತ್ತಿಟ್ಟ ಬೆಣ್ಣೆಯನೆಲ್ಲದ ಮೆದ್ದನುಹೆತ್ತ ಮಕ್ಕಳಿಗಿಲ್ಲದಂತೆ 3 ಗಡಿಗೆ ಬೆಣ್ಣೆ ಮೆಲ್ಲಲು - ಎನ್ನ ಹೊಟ್ಟೆಮಡುವು ಭಾವಿಯೇನೆಹುಡುಗರಿಗರಿಯದೆ ಎತ್ತಿಟ್ಟ ಬೆಣ್ಣೆಯಹೊಡೆದರವರ ಮಕ್ಕಳು 4 ಮರೆತು ಮಂಚದ ಮೇಲೆ - ನಾ ಮಲಗಿರಲುಹರಿವ ಹಾವನೆ ತಂದುಅರಿಯದಂತೆ ಬಂದು ಮುಸುಕಿನೊಳಗಿಟ್ಟುಸರಸರ ಪೋದನಮ್ಮ 5 ಹರಿದಾಡುವ ಹಾವನು - ನಾ ಹಿಡಿಯಲುತರಳ ನಾ ತಡೆಗಾರನೆಹರಕೆಯ ಹೊತ್ತುದನೊಪ್ಪಿಸದಿರಲುಗುರುತು ತೋರಲು ಬಂತೇನೊ6 ಕಕ್ಕಸ ಕುಚಗಳಮುಸುಕಿನೊಳಗೆ ಹಿಡಿದ 7 ಕೇಳು ಕೇಳೆಲೆ ಅವ್ವ - ಇವಳು ಬೇ-ತಾಳನಂತಿರುವಳುಬಾಲಕ ನಾನವಳುದ್ದಕೆ ನೆಗೆವೆನೆಜೋಲುವ ತೊಗಲಿಗಾಗಿ 8 ಮಕ್ಕಳು ಪಡೆದವರು - ಇಲ್ಲದ ಕಳವಿಕ್ಕಬಹುದೆ ಕೃಷ್ಣಗೆಸಿಕ್ಕ ತಪ್ಪು ಸಮೇತ ಎಳೆತಂದರೆತಕ್ಕ ಬುದ್ಧಿಯ ಹೇಳುವೆ 9 ಅಣುಘನರೂಪ ಕಾಣೆ - ನಿನ್ನೀ ಮಗಚಿನುಮಯ ರೂಪ ಕಾಣೆಘನ ಮಹಿಮನು - ಇಂಗಳಗೊಂದಿಯಚೆನ್ನಕೇಶವರಾಯ ಕಾಣೆ 10
--------------
ಕನಕದಾಸ
ನೊಂದು ಬಂದೆನೊ ಕಾಂತೇಶ | ಕೈಯನೆ ಪಿಡಿಯೊ ಮಂದಭಾಗ್ಯಳ ಜೀವೇಶ ಪ. ಅಂದು ಶ್ರೀ ರಾಮರ ಸಂದೇಶವನ್ನೆ ಭೂ- ನಿಂದನೆಗೆ ಅರುಹುತಲಿ ಬಹು ಆನಂದಪಡಿಸಿದ ವಾನರೇಶ ಅ.ಪ. ಶೌರಿ | ಭಕ್ತರ ಕಾಯ್ವ ದುರಿತದೂರನೆ ಉದಾರಿ ಚರಣಕ್ಕೆ ನಮಿಸುವೆ ಹರಿಗೆ ಪರಮಾಪ್ತನೆ ದುರಿತ ತರಿಯುತ ಪೊರೆಯೊ ಗುರುವರ ರಾಮಕಿಂಕರ 1 ಗುರುಕರುಣದ ಬಲದಿ | ಅರಿತೆನೊ ನಿನ್ನ ಚರಣ ನಂಬಿದೆ ಮನದಿ ಪರಿ ಭವಕ್ಲೇಶ ಪರಿಯ ಬಣ್ಣಿಸಲಾರೆ ಹರಿವರನೆ ದಯಮಾಡು ಶ್ರೀ ಹರಿ ದರುಶನವನನವರವಿತ್ತು 2 ಕಾಂತನ ಅಗಲಿರಲು | ಚಿಂತೆಯಲಿ ಭೂ ಕಾಂತೆ ವನದೊಳಗಿರಲು ಸಂತೋಷದಿಂ ರಾಮನಂತರಂಗವನರುಹಿ ಸಂತಸವಪಡಿಸುತಲವನಿಸುತೆಯ ನಿಂತೆ ರಾಮರಿಗ್ಹರುಷ ತೋರಿ 3 ದ್ರುಪದ ಸುತೆಯಳ ಕೀಚಕ | ದುರ್ಮನದಲಿ ಅಪಮಾನಪಡಿಸೆ ದುಃಖ ತಪಿಸಿ ನಿನ್ನನು ಬೇಡೆ ಆ ಪತಿವ್ರತೆ ಸತಿ ಕುಪಿತದಿಂದಲಿ ಖಳನ ಕೊಂದೆ ಅಪರಿಮಿತ ಬಲಭೀಮ ಪ್ರೇಮ 4 ಮಿಥ್ಯಾವಾದದ ಭಾಷ್ಯಕೆ | ಸುಜ್ಞಾನಿಗಳ್ ಅತ್ಯಂತ ತಪಿಸುತಿರೆ ವಾತಜನಕನಾಜ್ಞೆ ಪ್ರೀತಿಯಿಂದಲಿ ತಾಳಿ ಘಾತುಕರ ಮತ ಮುರಿದ ಮಧ್ವನೆ ಖ್ಯಾತಿ ಪಡೆದೆÀ ಸಿದ್ಧಾಂತ ಸ್ಥಾಪಿಸಿ 5 ಪ್ರಾಣಪಾನವ್ಯಾನ | ಉದಾನ ಸ ಮಾನ ಭಾರತಿ ಕಾಂತನೆ ಜ್ಞಾನಿಗಳಿಗೆ ಪ್ರೀತ ಜ್ಞಾನ ಭಕ್ತಿಪ್ರದಾತ ದೀನಜನ ಮಂದಾರ ಕಾಯೊ ದೀನಳಾಗಿಹೆ ಕೈಯ ಮುಗಿವೆ 6 ನೋಯಲಾರೆನೊ ಭವದಿ | ಬೇಗನೆ ತೋರೊ ಧ್ಯೇಯ ವಸ್ತುವ ದಯದಿ ವಾಯುನಂದನ ನಿನ್ನ ಪ್ರಿಯದಿಂ ನಂಬಿದೆ ಕಮಲ ದ- ಳಾಯತಾಕ್ಷನ ಮನದಿ ತೋರಿ7 ಹರಣ ನಿನಗೊಪ್ಪಿಸಿದೆ | ಸುರವಂದಿತ ಕರೆದು ಮನ್ನಿಸಿ ಕಾಪಾಡೊ ಸಿರಿವರನನು ಹೃತ್ಸರಸಿಜದಲಿ ತೋರೊ ಧರೆಯ ವಸ್ತುಗಳ್ ಮಮತೆ ತೊರೆಸು ಹರಿಯ ನಾಮಾಮೃತವನುಣಿಸು 8 ಈ ಪರಿಬಂದೆ ಅನಿಲ | ನಿನ್ನೊಳು ವಾಸ ಗೋಪಾಲಕೃಷ್ಣವಿಠ್ಠಲ ಶ್ರೀಪತಿ ಕೃಪೆಯಿಂದ ನೀ ಪ್ರೀತನಾಗುತ ಕೈಪಿಡಿದು ಸಂತೈಸು ಕರುಣದಿ ಭಾಪುರೇ ಕದರುಂಡಲೀಶ 9
--------------
ಅಂಬಾಬಾಯಿ
ನೊಂದು ಸಂಸಾರದೊಳಗೊಂದಿಸುವೆನೋ ಇಂದು ಮಾಧವ ಯಾದವ ಪ ಕರುಣಬಾರದೆ ನಿನಗೆ ಅಕಟಕಟ ಅಕಟಕಟ ಶರಣ ನಾ ನಿನಗಲ್ಲವೇ ಸ್ವಾಮಿ ನಿನ್ನ ಮೊರೆಹೊಕ್ಕೆ ಸರ್ವಾಂತರ್ಯಾಮಿ-ಎನ್ನ ಎರವು ಮಾಡುವರೇನೋ ಪ್ರೇಮಿ-ಇನ್ನು ಪರಿಹರಿಸು ಸಂಚಿತಾಗಾಮಿ-ಇದೇ ಸರಿಯೇನೊ ಜಗದೊಳಗೆ ಭಕುತವತ್ಸಲನೆಂಬ ಬಿರುದು ಪೊಳ್ಳಾಗದೇನೊ ನಿರುತ ಖ್ಯಾತ1 ಸತತ ಸುಖವುಳ್ಳರೆ ಬಾಯ್ದೆರೆದು ಪಲ್ಗಿರಿದು ನುತಿಸಿ ಬೇಡಿಕೊಂಬೆನೇ ನಿನ್ನ- ಮುಂದೆ ಗತಿಯ ಕಾಣದಲೆ ಚಾಲ್ವರಿದೆ ಭೇದ- ಮತಿ ಕೊಡದೆ ನೋಡುವುದು ಬರಿದೆ-ಸರ್ವ ಕ್ಷಿತಿಯೊಳಗೆ ನೀನೆಂದು ಅರಿದೆ-ವರ- ತತುವ ನಿಯ್ಯಾಮಕರ ಬಳಿ ಪಿಡಿದು ನಿನ್ನಂಘ್ರಿ ಶತಪತ್ರ ತೋರಿಸೈಯ್ಯಾ ಜೀಯಾ 2 ಶೃತಿಶಾಸ್ತ್ರ ಪೌರಾಣ ಭಾರತ ರಾಮಾಯಣ ಇತಿಹಾಸ ಪಾಂಚರಾತ್ರ ನಿಗಮ-ನಿನ್ನ ತುತಿಪ ಭಕುತರಿಗೆ ತಲೆಬಾಗಿ-ಕೊಂಡು ಪ್ರತಿದಿವಸದಲಿ ಚೆನ್ನಾಗಿ-ವಲಿದು ಅತಿಶಯವ ಕೊಡುತ ಲೇಸಾಗಿ-ವಿಘ್ನ ತತಿಕಳೆದು ನೀ ಬಂದು ಸಾರೆ ಬೆರಗಾಗುತಿದೆ ಪತಿತಿ ಪಾವನ ಮೋಹನ-ಚೆನ್ನ3 ತಡವ್ಯಾಕೆ ಗುಣಕಾಲ ಕರ್ಮದೇಶಗಳೆಲ್ಲ ವಡೆಯ ಎನ್ನಾಧೀನವೇ ಪೇಳೊ-ದು:ಖ ಬಿಡಿಸುವುದು ನಿನಗುಚಿತವಲ್ಲ-ಪಾಟು ಸಿರಿ ಲಕುಮಿನಲ್ಲ-ಒಂದು ನುಡಿವೆ ನಾನಾಂತರ್ಯ ಸೊಲ್ಲ-ಇಂತು ಕಡೆಮಾಡಿ ನೋಡದಿರು ದಿವಸ ಹಿಂದಾಗುತಿದೆ ಬಡವರಾಧಾರಿ ಕರುಣೀ-ದಾನಿ4 ಧ್ರುವನು ನಭದೊಳು ಇಲ್ಲಿ ರಾವಣಾನುಜ ಅಧೋ ಭುವನದಲಿ ಬಲಿರಾಯನ ನೋಡಿ, ನಾನು ತವಪಾದ ಗತಿಯೆಂದು ಬಂದೆ-ಮಹಾ ಭವಣೆ ಬಟ್ಟೆನೊ ಕೇಳು ಹಿಂದೆ-ಜಗದಿ ತ್ರಿವಿಧ ತಾಪಗಳಿಂದ ನೊಂದೆ-ಈ ಅವಸರಕೆ ಬಂದೊದಗಿ ನಿನ್ನ ನಾಮಾಮೃತದ ಸವಿದೋರೊ ದ್ವಾರಾವತಿಯ-ಜೀಯ 5 ಅಂಧಕೂಪದಲಿ ಬಿದ್ದವನ ನೋಡಿ ನಿನಗೆ ಚ ಕ್ಕಂದವಾಗಿದೆಯೊ ಕಾಣೆ-ನಾನು ಸಂದೇಹ ದ್ವೇಷದವನಲ್ಲ-ಇದು ಎಂದೆಂದಿಗೂ ಪುಸಿಯು ಅಲ್ಲ-ಹೃದಯ- ಮಂದಿರದೊಳು ಬಲ್ಲೆಯೆಲ್ಲ-ಸ್ವಾಮಿ ನೊಂದು ಕೂಗಿದರೆ ಎಳೆಗಂದಿಯೆಂಬಾ ಮಾತು ಇಂದು ಎತ್ತಲಿ ಪೋಯಿತೋ ತಾತ-ನೀತ 6 ಗುಣವಂತ ಬಲವಂತ ಜಯವಂತ ಸಿರಿವಂತ ಘನವಂತ ಧೈರ್ಯವಂತ ಶ್ರೀಕಾಂತ-ಎನ್ನ ಮನದ ದುಮ್ಮಾನವನೆ ಬಿಡಿಸೊ-ನಿನ್ನ ಅನವರತ ನಾಮವನು ನುಡಿಸೊ-ಮಧ್ವ ಮುನಿ ಕರುಣ ಕವಚವನು ತೊಡಿಸೊ-ಇದೇ ಜನುಮ ಜನುಮಕೆ ಬೇಡಿಕೊಂಬೆ-ಶರಣೆಂಬೆ ಪ್ರಣತ ಹೃದಯಾಬ್ಜ ತುಂಬೆ-ಕಾಂಬೆ 7 ಮಾನಸ್ನಾನವನುಂಡು ಮತಿಗೆಟ್ಟ ಪೂರ್ಣ ವಿ ಜ್ಞಾನಮಯನೆ ನಿನ್ನ ಮರೆದೆ-ಕರ್ಮ ಪ್ರಾಣೇಂದ್ರಿಯಂಗಳು ನಿನ್ನ ವಶವೊ-ಇಂಥ ಜಾಣತನ ಬಹಳ ಸಂತಸವೊ-ಹೀಗೆ ಮಾಣದಲೆ ಇಪ್ಪ ಸಾಹಸವೋ ಚನ್ನ ಜ್ಞಾನ ಭಕುತಿ ವಿರಕುತಿ ಕೊಟ್ಟು ನಿನ್ನವರೊಳಾನಂದದಲಿ ನಿಲ್ಲಿಸೈಯ್ಯ ಜೀಯ 8 ಶಂಖ ಚಕ್ರ ವರಾಭಯ ಹಸ್ತದಲಿ ನಿಂದ ವೆಂಕಟಾಚಲ ನಿವಾಸ ಶ್ರೀಶ-ನಿನ್ನ ಕಿಂಕರನ ಕಿಂಕರನೊ ನಾನು-ಅಕ- ಳಂಕ ಮನುಜನ ಮಾಡೊ ನೀನು-ಭವ ಸಂಕಟವ ಕಳೆಯಾ ಸುರಧೇನು-ಬೊಮ್ಮ ವಿನುತ ವಿಜಯವಿಠ್ಠಲ ಹರಿ- ಣಾಂಕ ಸೌವರ್ಣ ಪೂರ್ಣ ಸಂಪೂರ್ಣ 9
--------------
ವಿಜಯದಾಸ
ನೋಡಿರೇ ನೋಡಿರಮ್ಮಾ ಚೆಲುವನಾ ನೋಡಿರೇ || ಇವ|| ರೂಢಿಗೆ ಆವನಿಜೆಯಾ ತಕ್ಕುವರನೇ ಮುದ್ದುಸ್ಮರನೇ ಪ ಪಾದ ಜಂಘಯಿಂದ ಜಾನೂರುಮಾರಾ ತ್ರಿವಳವೇ| ಹಾರ ದಿಯ ಕರ ಸರಳವೇ 1 ಮಂಡಿತದ ಕುಂಡಲವಾ| ಮೃಗಮದ ಕಿರೀಟ 2 ಆವರಾಯನಮಗನೋತಾನರಿಯೇ|ಭೂಸು| ರಾವಳಿಯೊಳಿಂದ್ಧಾರೇನು |ಅಂಗ| ದಾವ ತೇಜಮುಸುಕಿತು ಧರಿಯೇ|ತ್ರ್ಯೆಭುವನವರಕ್ಷಿಸ ಬಂದಾಹರಿಯೇ | ಮುಜ್ಜಿಮರಿಯೇ 3 ಮುಟ್ಟಿಲೀ ತಗಧನುಏಳಲಿ ಝಮ್ಮೆನೇ ನಾವು ನೆಟ್ಟನೆಪೂಜಿಪೆವು ಗೌರಮ್ಮನೇ ಎಂದು ಬಿಟ್ಟ ಮಗಳು ಬೇಡಿಕೊಂಡರು ಸುಮ್ಮನೇ ಆಡಿಯಿಟ್ಟುನಲಿದು ಬರುವ ರಾಮೊ ಘಮ್ಮನೇ ಪರಬೊಮ್ಮನೆ 4 ಬಂದು ನೋಡಿಬಿಲ್ಲನೆತ್ತಿದ್ದಾಚಕ್ಕನೇ ಅರುವಿಂದ ಲೋಚನೆ ಮಾಲಿ ಹಾಕಲು ಘಕ್ಕನೇ ವೃಂದ ಕಾಣುತ ಹೆದರಿತುಧಕ್ಕನೇ ನಮ್ಮ ತಂದೆ ಮಹಿಪತಿ ನಂದನ ಪ್ರಭು ಠಕ್ಕನೇ ಪಾಲಕ್ಕುನೇ 5
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ನೋಡು ನೋಡು ಜೀವನೆ ನೀ ನಿನ್ನಯ ನಿಜರೂಪವಾ ತಿಳಿದು ನಲಿದು ಜ್ಞಾನಪಥದಿ ಆನಂದವ ಹೊಂದು ನೀ ಪ ಅಮರನಾದ ಆತ್ಮ ನೀನು ಆನಂದದ ನಿಧಿಯೇ ನೀ ಅರಿತು ಇದನು ನಿನ್ನ ಮನದಿ ಶಾಂತರೂಪನಾಗು ನೀ 1 ನಾನೆನ್ನುವ ಅನಿಸಿಕೆಯದು ಅಡಗಲು ತಾನುಳಿಯುವಾ ತೋರಿಕೆಯನು ಮೀರಿದಾ ನಿರ್ವಿಕಲ್ಪ ನೋಡು ನೀ ಶ್ರವಣ ಮನನ ನಿದಿಧ್ಯಾಸ ಸಾಧನೆಗಳ ಮಾಡುತಾ ತಿಳಿವುದಾತ್ಮರೂಪ ನಾನೆ ಎಂದು ನಿನ್ನ ಮನದಲಿ 2 ಮನದೊಳಗೀಪರಿಯಾ ದೃಢತರದಲಿ ನಿಶ್ಚಿತಮಾಡೀ ದೇಹ ಮನಸು ಬುದ್ಧಿಗಳಿವು ನಾನಲ್ಲೆಂದರಿಯುತ ತೋರಿ ಅಡಗುತಿರುವ ಜಗವು ಕನಸೇ ಎಂದರಿತು ನೀ ಪರಮಸತ್ಯ ಆತ್ಮರೂಪ ನಾನಿಹೆನೆಂದರಿತುಕೋ 3 ಪ್ರೇಮರೂಪ ನೀನೆ ಎಂದು ಸಾರಿ ಪೇಳ್ದ ಜ್ಞಾನವ ಆ ಮಹಾತ್ಮಶಂಕರಗುರುರಾಜನ ನುಡಿ ತಿಳಿಯೋ ನೀ 4
--------------
ಶಂಕರಭಟ್ಟ ಅಗ್ನಿಹೋತ್ರಿ