ಒಟ್ಟು 977 ಕಡೆಗಳಲ್ಲಿ , 84 ದಾಸರು , 829 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಹರುಷದಿಂದಲಿ ಮನವೇ | ಪ ಭವ ಜಲದಿಂದಲಿ ದಾಟಿಸುವನು ಕಣ್ಣವರಿಸುತಲಿದ್ದು|ಅಚ್ಯುತಾನಂತ ಹರಿ| ಯನ್ನದೆವೆ ಕಂಡ ಚಿಂತೆಯನು ಮಾಡಿ| ಬನ್ನ ಬಡುತಲಿ ಉದರ|ಧಾವತಿಯವಳಗಾಗಿ| ದಣ್ಣನೇ ದಣಿದು ಬಂದು ಬಯಿಗೋರಗುವೇ 1 ಬಳ್ಳಿನೊರಳಗ ತೊಡರಿದ|ಕಾಲಿನಂತೆ ಭವಾ ತಳ್ಳಿಯೊಳುಸಿಲ್ಕಿ ಬಳಲುತಾ ಗುಂದುತಾ| ನಿಲ್ಲದೆವೆ ತಿರುಗುತಿಹೆ ಸಾಧು ಸಂಗಕಬರಲು ಯಳ್ಳಿಸಿತು ಅವಕಾಶ ಕಾಣೆ ನಾನು 2 ಕೆರೆಯ ನೀರನು ಕೆರೆಗೆ ಚೆಲ್ಲಿ|ವರವಪಡಿಯಲಿಕ್ಕೆ ಭರದಿಂದ ಬಂದ ಅಲತ್ಯ ನೋಡ್ಯಾ| ಹರಿನಾಮ ಹರಿಗರ್ಪಿಸಿ ಗತಿ ಪಡಿಯಲೊಲ್ಲಿ ಹರ ಹರಾ ನಿನಗೆಂತು ಮತಿ ವದಗಿತೋ 3 ಹಾಡಿ ಕೊಂಡಾಡಿದರ ಹರಿನಾಮ ನಾಲಿಗ್ಗೆ ಬಾಡಿಗೆಯು ಬೀಳುವದೋ ನಾನರಿಯೆ ನೋ ಮೂಢ ಪಾಮರನೆಮರ ಹುಟ್ಟಿ ಮರಬಿದ್ದಂತೆ ನೋಡು ನರ ದೇಹದಲಿ ಬಂದಾಯಿತು 4 ಹಿಂದಿನಪರಾಧಗಳಯೇನಾದರಾಗಲಿ ಮುಂದೆ ಇನ್ನಾರ ಸ್ವಹಿತ ವಿಚಾರಿಸೋ ತಂದೆ ಮಹಿಪತಿಸ್ವಾಮಿ ದ್ವಂದ್ವ ಚರಣಕ ಹೊಂದಿ ಇಂದಿರೇಶನ ವಲಮೆ ಪಡೆದು ಸುಖಿಸೋ 5
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ಹಸ್ತಿ ಮಾದಲಾದಉತ್ತಮ ರಥವು ಸಂದಣಿಸಿತು ಕೋಲ ಪ. ಇಂದ್ರನು ತಾನೊಂದು ಗಜೇಂದ್ರನೇರಿಕೊಂಡುಮಂದಗಮನೆಯರ ಶಚಿ ಸಹಿತ ಕೋಲಮಂದಗಮನೆಯರ ಶಚಿ ಸಹಿತ ವಜ್ರಾಯುಧಉಪೇಂದ್ರನ ಮನೆಗೆ ಬರುತಾನೆ ಕೋಲ 1 ಹುತಭುಕ್ತನು ತಾನುಸತಿ ಸ್ವಾಹಾದೇವಿಯ ಕೂಡಿಅತಿಶಯವಾದ ಮೇಷವೇರಿಅತಿಶಯವಾದ ಮೇಷವೇರಿ ಶಕ್ತಿಯ ಧರಿಸಿಕ್ರತುಪತಿ ಮನೆಗೆ ಬರುತಾನೆ ಕೋಲ 2 ಜಾಣ ಯಮನು ತಾನು ಕೋಣ ವೇರಿಕೊಂಡುರಾಣಿ ಶಾಮಲೆಯ ಸಹಿತಾಗಿ ಕೋಲರಾಣಿ ಶಾಮಲೆಯ ಸಹಿತಾಗಿ ದಂಡವ ಧರಿಸಿಪ್ರಾಣೇಶನ ಮನೆಗೆ ಬರುತಾನೆ ಕೋಲ 3 ನಿರುತಿ ತಾನೊಂದು ನರನ ಪೆಗಲನೇರಿತರುಣಿಯ ಸಹಿತ ಆಯುಧ ಧರಿಸಿ ಕೋಲತರುಣಿಯ ಸಹಿತ ಆಯುಧ ಧರಿಸಿನರಹರಿ ಮನೆಗೆ ಬರುತಾನೆ ಕೋಲ4 ಮಕರ ಮೇಲೇರಿ ಶ್ರೀ ಭಾಗೀರಥಿಯ ಒಡಗೂಡಿ ಕೋಲಶ್ರೀ ಭಾಗೀರಥಿಯ ಒಡಗೂಡಿ ಪಾಶವ ಧರಿಸಿದರಾಧರನ ಮನೆಗೆ ಬರುತಾನ ಕೋಲ 5 ಮರುತನು ತಾನೊಂದು ಎರಳಿ ಮೇಲೇರಿತರುಣಿ ಪ್ರವಹಿ ಒಡಗೂಡಿ ಕೋಲತರುಣಿ ಪ್ರವಹಿ ಒಡಗೂಡಿ ಗದೆಯ ಧರಿಸಿಮುರಹರನ ಮನೆಗೆ ಬರುತಾನ ಕೋಲ 6 ವಿತ್ತಪನು ತಾನೊಂದು ಉತ್ತಮ ಹಯವೇರಿಚಿತ್ತದೊಲ್ಲಭೆಯ ಒಡಗೊಡಿ ಕೋಲಚಿತ್ತದೊಲ್ಲಭೆಯ ಒಡಗೊಡಿ ಖಡ್ಗವ ಧರಿಸಿಪೃಥ್ವೀಶನ ಮನೆಗೆ ಬರುತಾನೆ ಕೋಲ7 ಈಶನು ತಾನೊಂದು ವೃಷಭನ ಮೇಲೇರಿಶ್ರೀ ಸತಿದೇವಿ ಒಡಗೂಡಿಕೋಲಶ್ರೀ ಸತಿದೇವಿ ಒಡಗೂಡಿ ತ್ರಿಶೂಲವ ಧರಿಸಿನರಸಿಂಹನ ಮನೆಗೆ ಬರುತಾನೆ ಕೋಲ8 ಧರ್ಮ ಭೀಮಾರ್ಜುನ ನಕುಲ ಸಹದೇವರುಪ್ರೇಮದಿಂದಲೆ ಪೊರ ಹೊರಟು ಕೋಲಪ್ರೇಮದಿಂದಲೆ ಪೊರ ಹೊರಟು ಬರುತಾರೆ ರಮಿಯರಸನ ಅರಮನೆಗೆ ಕೋಲ 9
--------------
ಗಲಗಲಿಅವ್ವನವರು
ಹಳೆಯದಾಯಿತು ಕಾಯಾ ಇನ್ನಾರೇ | ತಿಳಿ ಸ್ವಹಿತೋಪಾಯಾ ಪ ಬಾಲಕನಾಗಿ ಕೆಲವು ದಿನ ಕಳೆದೀ | ಮೌಲ್ಯ ಯೌವ್ವನದಲಿ ಉನ್ಮತ್ತನಾದಿ 1 ಸಡಿಲುತ ಬಂದವು ಅಂಗಮಾಟಗಳು | ವಡಮೂಡದು ವಿವೇಕ ಬುದ್ಧಿಗಳು 2 ಮಂಡೂಕ ಸರ್ಪ ನೋಡದೆ ಭರದಿ | ಅಂಡಲುವದು ನೊಣಕದೇ ಪರಿಯಾದಿ 3 ಏನಾದರಾಗಲಿ ಹಿಂದಿನ ಕರಣೆ | ಜ್ಞಾನದೆಚ್ಚರ ಹಿಡಿ ಮನದೊಳು ಪ್ರಾಣಿ 4 ಗುರುವರ ಮಹಿಪತಿ ನಂದನ ಪ್ರಿಯನಾ | ಅರಿತರೆ ಬಂದದೆ ಸಾರ್ಥಕ ಖೂನಾ 5
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ಹಿಂಗಾಯಿತಲ್ಲಾ ಏನಿದು ಹರಿಹರಿಪ ಮಂಗನ ತೆರ ಈ ಅಂಗವ ವಿಷಯತ ರಂಗೆ ವಡ್ಡುತ ರಂಗನ ಮರೆತಿಹೆ ಅ.ಪ. ಬರಿದೆಯೆ ಹೋಗುತ್ತಿರುವುದು ಹೊತ್ತು ಹರಿಧ್ಯಾನಕೆ ಸಾಲದು ಪುರಸೊತ್ತು ತಿರುಗಲು ಮನೆಮನೆ ಸಾಲದು ಹೊತ್ತು ಸರಸಿಜನಾಭನೆ ಇದಕ್ಕೇನು ಮದ್ದು 1 ಶ್ರೀ ಕಮಲೇಶನ ಪೂಜೆಯ ಮಾಡನೆ ಆಕಳಿಸುತ ಮೈ ಕೈ ಮುರಿಯುವೆನು ಸ್ವೀಕರಿಸಲು ಸವಿ ಪಾನೀಯಂಗಳ ಮುಖಸಹತೊಳೆಯದೆನೂಕುತ ಮುಖ ಪ್ರಕ್ಷಾಳನೆ ಬಿಡುವೆ2 ಸ್ನಾನವ ಮಾಡೆನು ಸಂಧ್ಯಾ ತಿಳಿಯೆನು ಧ್ಯಾನವು ಯೆಂತೆನೆ ಕೂಳಿನ ಚಿಂತೆಯು ಆನನ ಮುಸುಕುತ ಬರಿಪಿಚಿಯೆಂದು ನಿ ಧಾನದಿ ಜಪಸರ ನೂಕುವೆನಲ್ಲಾ 3 ಮಂತ್ರವು ಬಾರದು ಸ್ತ್ರೋತವು ಬಾರದು ತಂತ್ರದಿ ನೂಕುವೆ ದೇವರ ಪೂಜೆಯ ವಿಧಿಗಳ ಮೌನದಿ ಕರ್ಮಗಳೆಲ್ಲವ ಮಂತ್ರಿಯ ಮಡಿದಿಯು ಪೇಳಿದ ತೆರದೂಳು ಯಂತ್ರ ವಿಧಾನದಿ ನುಡಿಯುವೆ ದಿನವಹಿ4 ಹೀನಕ ವೃತ್ತಿಗಳಿಂದಲಿ ಜೀವನ ವರ್ಣವಿವೇಕವ ನಡಿಸಲಸಾಧ್ಯವು ಜನ್ಮದಿ ವಿಪ್ರನು ನಾನಿಹೆ ಬರಿಸರಿ ತಿನ್ನುತ ಕುಡಿಯುತ ತಳ್ಳುವೆ ಆಯುಷ್ಯ5 ಊಟದ ಚಪಲವು ತಿಂಡಿಯ ಚಪಲವು ನೋಟದ ಚಪಲವು ಚಪಲ ಕಂದರ್ಪನ ಕಾಟದಿ ಸಿಲುಕಿಹೆ ಕೈಟಭಮರ್ದನ ದಾಟುವೆದೆಂತೋ ಭವವನು ಕಾಣೇ 6 ಏರಿದೆ ಬಹುನಿತ್ರಾಣವು ಗಾತ್ರದಿ ಮೀರಿದವಯ ಶಾಸ್ತ್ರಾಭ್ಯಾಸಕೆ ಕಾರುವರೈ ವಿಷ ಬಾಂಧವರೆಲ್ಲರು ಆ ರವಿಸುತನಾಳ್ಗಳಗು ನಾನಿಹೆ 7 ಮಡದೀ ಮಕ್ಕಳ ಪಾಶದಿ ಬಿದ್ದಿಹೆ ದುಡಿಯದ ಕಾರಣ ದುಗುಡವ ತೋರ್ಪರು ನಡೆಯದು ತುಸನನ್ನ ಮಾತೇನಿಲ್ಲ ಮಿಡುಕುತ ಮಿಡುಕುವೆ ಮುಪ್ಪಿನ ಹಿಡಿತದಿ 8 ತೋಡಿದರೂ ಎದೆ ಕಾಣೆನು ಭಕ್ತಿಯ ಕಾಡನು ಸೇರಲೊ ಬಾವಿಗೆ ಬೀಳಲೋ ಜೋಡಿಯು ಆಗಲೊ ಜೋಳಿಗೆ ಪಿಡಿಯಲೊ ಓಡದು ಬುದ್ಧಿಯು ತೋರಿಸು ಹಾದಿ 9 ಕರುಣಾಮಯ ನೀನೆಂಬುವ ಬಿರುದನು ಹಿರಿಯರ ಮುಖದಿಂ ಕೇಳಿಹೆ ಸ್ವಾಮಿಯೆ ಭರವಸೆ ಎನಗಿಹದೊಂದೇ ನಿಶ್ಚಯ ಶರಣನ ಬಿಡದಿರು ಆಪದ್ಬಾಂಧವ 10 ಪಾಮರ ನಿಹೆಬಹು ಕಲುಷಿತ ಚಿತ್ತನು ಭೀಮಾರ್ಚಿತ ಪದಯಗ ನಂಬಿಹೆ ಪ್ರೇಮವ ಸುರಿಸುತ ಕಾಯೈ ಬೇಗನೆ ಸಾಮನೆ ಶರಣೈ “ಶ್ರೀ ಕೃಷ್ಣವಿಠಲಾ” 11
--------------
ಕೃಷ್ಣವಿಠಲದಾಸರು
ಹೀಂಗರಿದವ ಜ್ಞಾನಿ ಪ ಅವ್ಯಕ್ತದಲುದಿಸುದು ಪ್ರತಿಮೆಗಳು | ವ್ಯಕ್ತದಲಡಗುವದೀ ಸಕಲು | ಈ ವ್ಯವಹಾರದ ಭ್ರಮೆ ಮಾತುಗಳು 1 ಥೆರೆ ನೆರೆ ಬೊಬ್ಬುಳಿ ತಾ ದಿಟವಲ್ಲಾ | ತೋರಿಕರಿಗಿದರೇನು ಯಲ್ಲಾ | ನೀರಿಗೆ ಜನ್ಮ ಮರಣವಿಲ್ಲಾ 2 ಕಿರಣದಿ ದೋರಿತು ನದಿಗಡ ಪೂರಾ | ಹೊರತಾಗಿರದು ಕಿರಣಕ ದೂರಾ | ಕಿರಣೇ ಆಯಿತು ತಾ ಮೃಗನೀರಾ 3 ಕದಳಿಯ ಗಿಡರೂಪದ ಪದರೆಲ್ಲಾ | ಬಿದರಿಸಿ ನೋಡಲು ಏನುಳಿಲಿಲ್ಲಾ | ಪರಿ ಪ್ರಪಂಚದ ಸೊಲ್ಲಾ 4 ಗುರುವರ ಮಹಿಪತಿಸ್ವಾಮಿಯ ಕಂಡು | ಅರ್ಹವಿಕೆ ಮಾತ್ರವನೇ ಪಡಕೊಂಡು | ಚರಿಸುವಾ ಅನುಭವ ನೆಲೆಗೊಂಡು 5
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ಹೃತ್ಪದ್ಮದೊಳಿದ್ದು ಹೃತ್ತಾಪಗಳ ಕಳೆಯೊ ಜೀ- ವತ್ಪಿತಾಮಹ ಜನಕನೇಪ ಮೃತ್ಪಿಂಡದಂತೆನ್ನ ಉತ್ಪತ್ತಿಗೆ ಕ- ಣ್ಣೆತ್ತಿ ನೋಡಲರಿಯಾ ಜೀಯಾ ಅ.ಪ ನಿತ್ಯ ನಿತ್ಯ ಜಗವೆಲ್ಲವು ನಿತ್ಯವು ನಿತ್ಯತ್ವವೆಲ್ಲ ಸರಿಯೇ ಏನಿದ್ದರೇನು ಅನಾದಿಕರ್ಮದ ಬವಣೆ ಬೆನ್ನಟ್ಟಿ ಬರುತಿರ್ಪುದ- ಜ್ಞಾನಾಂಧಕಾರದಿಂ ಧ್ಯಾನವನು ತಿಳಿಯದೇ ಕಾನನದೊಳಿಪ್ಪೆನೋ ಜ್ಞಾನಗಮ್ಯನೆಂದು ಸಾರುತಿದೆ ಶ್ರುತಿ ಶಾಸ್ತ್ರ ಜ್ಞಾನಗುರು ದೊರೆತಿಲ್ಲವೋ ಸಾನುರಾಗದಿ ನೀನೆ ಸಾಧನಕೆ ಕರುಣಿಸಿ ಧ್ಯಾನದಲಿ ಮನಸು ನಿಲಿಸೋ ಉಳಿಸೋ 1 ಬಂಧ ಮೋಕ್ಷಕೆ ಎಲ್ಲ ಮನವೆ ಕಾರಣವೆಂದು ಎಂದೆಂದಿಗು ಪೇಳುತಿಹರು ಸಿಂಧುಶಯನನೆ ಭವಬಂಧಮೋಚಕನೆಂದು ವಂದಿಸಿ ಪೊಗಳುವರೊ ಮಂದರೊದ್ಧರ ನಿನ್ನ ಮಂದಮತಿಯಿಂದಲಿ ವಂದಿಸಲು ನಾನರಿಯೆನೊ ಕಂದರ್ಪಜನಕ ನೀ ಮಂದಭಾಗ್ಯನ ಮನವ ನೋಯಿಸದೆ ನಿನ್ನ ಪದದಲ್ಲಿರಿಸೊ ಅಂದೆ ಎನ್ನಯ ಭವಬಂಧನಾಶವಾಗುವು- ದೊಂದೆ ನಿನ್ನನು ಬೇಡುವೆನೊ ಜೀಯ 2 ಜೀವರೆಲ್ಲರು ಗುಣತ್ರಯಾವರಣದಿಂದ ಕರ್ಮ- ಪ್ರವಹದೊಳಿಪ್ಪರೊ ಕವಿಸಿ ಮೋಹವ ನೀನು ಭವಕೆ ಕಾರಣವಹುದು ದೇವೇಶ ನಿನ್ನಾಟವೋ ಶ್ರವಣದಿಂದಲಿ ಭವಬಂಧಮೋಚಕನೆಂದು ತವ ಬಿರುದು ಸಾರುತಿದೇಕೋ ಭಾವ ಬಲ್ಲವರಾರೋ ಕಾವ ಕರುಣಿ ನೀನೆ ಭಾವಜನ ಪಿತನು ಅದೇ ಭವಪಾಶ ಬಿಡಿಸೆ ನಾ ಭಕುತಿಪಾಶದಿಂದ ಪಾದ ಬಿಗಿವೆನಯ್ಯ ಜೀಯ 3 ಸ್ವಾತಂತ್ರ್ಯವೆಲ್ಲಿಹುದು ಸ್ವಾಮಿತ್ವವೆಲ್ಲಿಹುದು ಅ- ಸ್ವತಂತ್ರನಾಗಿಪ್ಪೆನೊ ಕಾತುರದಿ ನಾ ಮಾಳ್ಪ ಕ್ರಿಯೆಗಳೆಲ್ಲವು ಎನ್ನ ಸ್ವಾತಂತ್ರ್ಯವೆಂದ್ಹೇಳುವೆ ನೀ ತಂತ್ರಿಯಾಗಿದ್ದೆನ್ನ ನಡೆಸುವುದನರಿಯೆ ಕು- ತಂತ್ರವನು ನಾ ಮಾಡುವೆ ಸ್ವಾ- ತಂತ್ರನು ನೀನು ಸೂತ್ರನಾಮಕ ದೇವ ಮಂತ್ರಿಯಾಗೀದೇವ ಯಂತ್ರ ನಡೆಸುವ ಎಂತಾದರಡಿಗಡಿಗೆ ಅತಂತ್ರನಾಗಿಹೆ ನಾನೇ ಭ್ರಾಂತಿಪರಿಹರಿಸಿ ಕಾಯೊ ಶೌರೇ 4 ಭಕ್ತಿ ಇಲ್ಲದೆ ನಿನ್ನ ಭಕ್ತನಾಗುವುದೆಂತೋ ಭುಕ್ತಮಾತ್ರನು ನಾನು ಮುಕ್ತರೊಡೆಯ ನೀನು ಯುಕ್ತಿತೋರಿಸು ಎನಗೆ ಭಕ್ತಾಪರಾಧಸಹಿಷ್ಣು ಶಕ್ತ ನೀನಹುದೊ ವೇದೋಕ್ತ ಮಹಿಮಾತೀತ ಸಕ್ತವಾಗಲಿ ನಿನ್ನ ಪದದಿ ಮನಸು ವ್ಯಕ್ತನಲ್ಲವೊ ಸರ್ವ ಸಾರಭೋಕ್ತನು ನೀನು ಭಕ್ತವತ್ಸಲ ಪುರುಷಸೂಕ್ತಮೇಯ ಅಪ್ರಮೇಯ ಯುಕ್ತಿಮಾತಲ್ಲಿದು ಭಕ್ತಿಪೂರ್ವಕ ನಿನ್ನ ಭಕ್ತ ಶ್ರೇಷ್ಠರ ಸೇವೆ ಕೊಟ್ಟು ರಕ್ಷಿಸೊ ದೇವಾ 5 ನಾದಕ್ಕೆ ಪರನಾಗಿ ವಾದಕ್ಕೆದೊರೆಯೇ ನೀ ವೇದವೇದಾಂತವೇದ್ಯ ಸಾಧನವು ಕಾಣೆ ಸಾಧನಶರೀರವಿದು ಸಾದರದಿ ಕರುಣಿಸಿದೆ ಅನಿರುದ್ಧದೇವ ಬಾಧಿಪುದು ಬಂಧಗಳು ಅನಾದಿಕರ್ಮದಿ ಬಂದು ನಾ ಅಧಮತಮಸಾಧನವನ್ನೆಸಗಿದೆ ನೀ ದಯಾಸಿಂಧು ಎಂದಡಿಗಡಿಗೆ ಬೇಡುವೆನು ಕೃದ್ಧನಾಗದೆ ಇನ್ನು ಉದ್ಧರಿಸು ತಂದೇ ಎಂದೇ 6 ಶಂಖಚಕ್ರಾಂಕಿತನೆ ಮಂಕುಬುದ್ಧಿಯ ಬಿಡಿಸೋ ಅಂಕಿತವೆನಗೆ ಇಲ್ಲ ಅಂಕೆ ಇಲ್ಲವೊ ನಿನ್ನ ನೆನೆಹುದಕೆ ಎಂದಿಗೂ ಶಂಕೆಯ ಪಡುವನಲ್ಲ ವೇಂಕಟಾದ್ರಿಯ ವಾಸ ಶ್ರೀ ವೇಂಕಟೇಶನು ಮಮಕುಲಸ್ವಾಮಿ ದೈವವೆಂದನುದಿನ ಸಂಕಟಾಗಾಮಿಗಳ ಕಂಟಕವ ಹರಿಸಿ ಪದ ಪಂಕಜದಿ ಮನವ ನಿಲ್ಲಿಸೋ ಬಿಂಕದ ಮಾತಲ್ಲ ಪಂಕಜದಳಾಯತಾಕ್ಷ ಅಕ- ಳಂಕಮಹಿಮ ಕಾಯೋ ಜೀಯಾ7
--------------
ಉರಗಾದ್ರಿವಾಸವಿಠಲದಾಸರು
ಹೆದರದಿರ್ಪೇಳ್ವೆ ಹೇ ಜೀವಾ ಬ್ರಹ್ಮನಿಗಾನು ಮೊದಲು ಪೇಳಿದ ಮಾರ್ಗವ ಪಪದರವಾಗಿ ಲೋಕಗಳನೂ ಪಲವು ಜೀವರಾಶಿಗಳನೂ ಇದಿರಮಾಡಿ ತೋರಿಸಿಹೆನು ಇದಕೆ ನೀನು ಅ.ಪಏಕನಾಗಿದ್ದು ಮೊದಲು ಬಹಳವಾಗಬೇಕೆಂದು ಬುದ್ಧಿುಡಲುಈಕೆ ಮಾಯೆಯಾುದಳೆನ್ನ ುಚ್ಛೆುಂದಲಿಲ್ಲ ಮುನ್ನಸೋಕಿದಂತೀಗಿರ್ದಡಿದೇನು ಶೂನ್ಯಕೆ ನೀನು 1ರಜ್ಜು ಸರ್ಪನ ತೆರದಿ ತೋರಿದರದು ಬೆಜ್ಜರ ಭಾಂತ್ರಿ ಮೂಲದಿಸಜ್ಜಿಸಿದೆ ಮಾಯೆ ಹಾಗೆ ಭರ್ಜಿಸುವ ಬಗೆ ಹೇಗೆವರ್ಜಿತಕೆ ವಿಧಿಯೊಂದುಂಟೆ ವೋಹೋ ಕಂಗೆಟ್ಟೆ 2ಕನಸಿನ ಸಿರಿ ಕಷ್ಟವು ಎದ್ದವನಿಗೆ ನೆನಸಿದರುಂಟೆ ನಿಜವುಮನದ ಭ್ರಮೆುಂದ ಬಂದ ಮಿಥ್ಯಕುಂಟೆ ಮುಕ್ತಿ ಬಂಧಇನಿತ ನಾನೆ ತೋರಿಸಿಹೆನು ಇದಕೆ ನೀನು 3ತಿಳಿದರೂ ತಾನೆ ತೋರ್ಪುದು ಕೇಳ್ ಬಹುಕಾಲ ಬಳಸಿ ಬಂದುದು ಬಲಿದುಹೊಳೆದರೂ ತಾ ಜೀವನನ್ನು ಹೊದ್ದದುಣ್ಣುತಿದ್ದರದನುಕಳಚಿ ಹೋುತೆಂದೆ ನೀ ಕಾಣು ಕೊರತೆ ತಾನೇನು 4ಹುರಿದ ಬೀಜವ ನೋಡಲು ಆಕಾರವಾಗಿ ುರುವದು ುದ ಬಿತ್ತಲುತಿರುಗಿ ಪುಟ್ಟಿ ತೋರುವದೆ ತಿಳಿಯೆ ಮಾಯೆಯನ್ನು ಬಾಧೆಬರುವದೇನೈ ಭದ್ರವಾಗಿರು ಭೋಗಿಸುತಿರು 5ಹೋಗದೇತಕೆ ಹೋರುತಾ ಬಾಧಿಸುವದು ಯೋಗಿಗೂ ುದ್ದೆ ತೋರುತಾಸಾಗುವಂತೆ ಮುಂದೂ ತಾನು ಸಿದ್ಧವಾಗಿ ಮುಕ್ತರನ್ನುಭೋಗಿಗಳ ಮಾಡುತಿಹದು ಬಾಧಿತವಹುದು 6ತೋರಿದ ನಾನೆ ತೆಗೆವೆ ಇದಕೆ ನೀನು ಹೋರದಿರೆನ್ನ ನಿಜವೆಸೇರು ನನ್ನ ಚರಣವನು ದಾರಿದೋರ್ಪೆ ತಿರುಪತಿವಾರಿಜಾಕ್ಷ ವೆಂಕಟೇಶನು ಒಲಿವೆ ನಾನು 7ಓಂ ಪನ್ನಗಾಶನವಾಹನಾಯ ನಮಃ
--------------
ತಿಮ್ಮಪ್ಪದಾಸರು
ಹೇ ಪಾಪಿ ಮನಸೇ ನೀ ನಾರಾಯಣೆನೆಲೋ ಅಪಾರ ಮಹಿಮನ ಮಹಿಮೆ ತಿಳಿದು ನೋಡೋ ಪ ‘ನಾ’ ಎಂಬೋ ಮಹದಾದಿಬೀಜದಕ್ಷರ ತುದಿ ನಾಲಿಗೆಯಿಂದ್ಹೊರಡುವನಿತರೊ ಳ್ಹಿಂದಿನ ನಾನಾಜನುಮದ ಪಾಪ ಪರ್ವತವೆಲ್ಲವು ನಿವೃತ್ತಿಯಾಗಿ ಮಹ ಪಾವನನೆನಿಪುದು 1 ‘ರಾ’ ಎಂದು ಮುಖದಿಂದ ಹೊರಟ ಕೂಡಲೆ ಸರ್ವ ರವರವನರಕದ ಯಾತನಳಿದು ಭವ ರೋಗವೆಲ್ಲನು ನೀಗಿ ಕಾಯಕರ್ಮವ ಕಡಿದು ರಾಜಿಪ ಪರಲೋಕ ಸದರವೆನಿಸುವುದೆಲೊ 2 ‘ಯ’ ಎಂದು ನುಡಿಯುತಲೆ ಜನುಮ ಸಫಲವಾಗಿ ಎಷ್ಟೋ ಕೋಟ್ಯಜ್ಞದ ಪುಣ್ಯ ಫಲವು ದೊರಕಿ ಯಮನ ಭೀತಿಯ ಗೆಲಿಸಿ ದಾಸರೊಲುಮೆ ಲಭಿಸಿ ಎಸೆವ ತ್ರಿಕಾಲಜ್ಞಾನ ಸ್ಥಿರವಾಹುದೆಲೊ 3 ‘ಣ’ ಎಂದು ಸಂಪೂರ್ಣ ಉಚ್ಚರಿಸಿದ ಮಾತ್ರವೆ ಕರತಲ ಮಾಗಿ ನಿತ್ಯ ನಿರ್ಗುಣನಂಘ್ರಿ ಕಂಗಳೊಳ್ಹೊಳೆಯುತ ನಿತ್ಯಾನಂದದ ಪದವಿ ಕೈವಶವಹದೆಲೊ 4 ನಿರಾಮಯ ಶ್ರೀರಾಮ ನಿಗಮಗೋಚರ ನಿರಂಜನ ನಿಜಗುಣನನುಪಮಮಹಿಮೆ ನಿಜಮತಿಯಿಂದರಿತು ನಿರ್ಮಲ ಮನಸಿನಿಂ ನೆನೆಯಲು ಘನಮುಕ್ತಿ ಸಾಮ್ರಾಜ್ಯ ಪಡೆಯುವಿ 5
--------------
ರಾಮದಾಸರು
ಹೊಡೆಯಿರೋ ನಗಾರಿ ಗಡಗಡನೆ ಮೂರು ಬಾರಿ ಪ ದೃಢಭಕ್ತ ಸಮೂಹವ ಸಿರಿ ಯೊಡೆಯನು ಕೈಬಿಡನೆಂದು ಅ.ಪ ವಿಧಿಸೃಷ್ಟಿಯೊಳಿಲ್ಲದರೂ- ಪದಿ ಬಂದು ನಖದಿ ಅಸುರನ ಉದರ ಬಗೆದು ಕರುಳ ತೆಗೆದು ಮುದದಿ ಗಳದಿ ಧರಿಸಿದನೆಂದು 1 ಪರರು ತನ್ನ ಹಿಂಸೆಗೈ ದರು ಸಹಿಸಿ ಸಮಾಧಾನದಿ ಸಿರಿಯರಸನ ನೆನೆವಗೆ ಭಯ ವಿರದಿರದಿರದಿರದೆಂದು 2 ದ್ವೇಷಿಗಳನುದಿನ ಯೋಚಿಪ ಮೋಸಗಳನು ತಿಳಿಯುತ ಲ- ಕ್ಷ್ಮೀಶನು ಪರಿಹರಿಸಿ ತನ್ನ ದಾಸರಿಗೊಶವಾಗುವನೆಂದು 3 ತಿಳಿಯಗೊಡನು ಸತ್ಯವಿದೆಂದು 4 ಕಾಮಾದಿಗಳನು ಗೆದ್ದು ಮ- ಹಾಮಹಿಮರೆನಿಸುವರ ಯೋಗ- ಕ್ಷೇಮವನ್ನು ವಹಿಸಿಹ ಗುರು- ರಾಮವಿಠಲ ನರಹರಿಯೆಂದು 5
--------------
ಗುರುರಾಮವಿಠಲ
ಹೊಂದಿ ಸುಖಿಸು ಹರಿಯ ಪಾದಾ ಧ್ರುವ ನಾನಾ ಪುಣ್ಯ ನಿದಾನದಿ ಧರೆಯೊಳು | ಮಾನವ ಜನುಮಕ ನೀನೀಗ ಬಂದು | ಪರಿ ತಾ ನಿಜವರಿಯದೆ | ಜ್ಞಾನ ಶೂನ್ಯನಾಗೇ-ನಿಹುದಣ್ಣಾ 1 ಹಿಡಿವರೇ ಭ್ರಾಂತಿಯ ಜಡಿವರೆ ಮತಿಯ | ನುಡಿವರೇ ಪುಸಿಯನು ಬಿಡುವರೆ ಸತ್ಯವ | ಇಡುವರೆ ದುರ್ಗಣ ಸಿಡುವರೆ ಬೋಧಕ | ಕೆಡುವರೆ ಮರವಿಲಿ ಬಿಡುವರೆ ವ್ಯರ್ಥಾ 2 ಮೂರು ದಿನದ ಸಂಸಾರದೊಳಗ | ಕಂ | ಸಾರಿಯ ಭಕ್ತಿಯ ಸೇರಿ | ಸಾರ ಸ್ವಹಿತ ಸಹ | ಕಾರಿ ಮಹಿಪತಿ ಸಾರಿದ ಬೋಧಾ3
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ಹೊನ್ನು ಹೆಣ್ಣು ಮಣ್ಣು ಮಾಯೆಯದು ಮೂರು ರೂಪಗಳ ನಾನು ಪೇಳುವೆನು ಹೊನ್ನು ಹೆಣ್ಣು ಮಣ್ಣು ಎಂಬ ಮೂರವುಗಳ್ ಅವುಗಳನು ಹಂಬಲಿಸಿ ಕೆಡಬೇಡ ಮರುಳೆ ನೀನ್ ಅವುಗಳೇ ಮೃತ್ಯುವಿನ ಕಡೆಗೊಯ್ಯುವವುಗಳ್ 52 ಕಷ್ಟದಿಂ ಸೃಷ್ಟಿಯಲಿ ನಗ್ನತೆಯೆ ಸುಂದರವು ಕಷ್ಟದಿಂ ಮರಣದಲಿ ನಗ್ನತೆಯ ದೇಹ ಕಷ್ಟವಿಕ್ಕ್ಕೆಡೆಗಳಲಿ ನಾಸ್ತಿಸುಖ ಮಧ್ಯದಲಿ ಕನಕ ಕನಕವದೆಂದು ಹೊನ್ನ ಪೇಳುವರು53 ಮೋಹಿನಿಯು ತಾನಾಗಿ ದ್ಯೆತ್ಯರನು ವಂಚಿಸಿದ ಮೋಹಿನಿಯು ತಾನಾಗಿ ರುದ್ರ ವಂಚಿತನು ಮೋಹಿನಿಯು ತಾನಾಗಿ ಸುಂದೋಪಸುಂದ ವಧೆ ಮೋಹಿನಿಯು ಪೆಣ್ಣು ಮೋಸವದಲ್ತೆ ಮನುಜ? 54 ಮಣ್ಣಿನಿಂದಲೆ ಹರಿಯು ದೇಹವನು ಸೃಷ್ಟಿಸುವ ಮಣ್ಣೆ ಅನ್ನವದಾಗೆ ಪಾಲಿಸುವ ನಮ್ಮ ಮರಣಕಾಲದಲದುವೆ ಮಣ್ಣನಪ್ಪುವದು ತಿಳಿ ಮಣ್ಣಿಗಾಗಿಯೇ ನೀನು ಹಂಬಲಿಪೆಯೇಕೆ 55 ಪ್ರಾಣದೇವರೆ ನಿನ್ನ ಉಸಿರಾಟ ಕಾರಣರು ಪ್ರಾಣನುಸಿರಾಟವದು ಯಾರಿಂದಲಹದು? ಅವನೆ ಪರಮಾತ್ಮ ತಿಳಿ ದೇವಾಧಿದೇವನವ ನಿನ್ನ ಬಾಳಿಗೆ ಕಾರಣರು ಇಬ್ಬರಹರು56 ಸೂರ್ಯದೇವನು ನೇತ್ರತತ್ವಕ್ಕೆ ಒಡೆಯನವ ಸೂರ್ಯನದು ಕಣ್ಣು ಯಾರಿಂದ ತೋರುವುದು? ಅವನೆ ಪುರುಷೋತ್ತಮನು ಪರಮಾತ್ಮ ಹರಿಯವನು ಆ ವಿಶ್ವರೂಪಿಯೇ ವಿಶ್ವಧಾರಕನು57 ವಾಸದಿಂ ಬೆಳಗಿಸುವ ಕಾರಣದಿ ಭಗವಂತ ವಾಸುದೇವಾತ್ಮಕನು ಸೃಷ್ಟಿಮೂಲನವ ವಸುದೇವಪುತ್ರನಾಗವತರಿಸಿ ಸಿರಿವರನು ಉಡುಪಿಯಲಿ ಪೂಜೆಗೊಂಬನು ನಿಜವ ಪೇಳ್ವೆ 58 ಕೃತಯುಗದ ಭಾರ್ಗವನು ತ್ರೇತೆಯಲಿ ದಾಶರಥಿ ದ್ವಾರಪದ ಕೃಷ್ಣ ನೀನೇಯಿರುವೆ ದೇವಾ ಮಧ್ವವರದನು ನೀನು ಭಾರ್ಗವನ ನೋಡಲ್ಕೆ ಉಡುಪಿಗೇ ಬಂದಿರುವೆ ಪರಮಾತ್ಮ ನೀನು 59 ಪರಶುರಾಮ ಕ್ಷೇತ್ರ ಶ್ರೀಕೃಷ್ಣನ ಕ್ಷೇತ್ರ ಪದ್ಮನಾಭಕ್ಷೇತ್ರ ಶಂಕರಕ್ಷೇತ್ರ ಹಲವಾರು ದೇವತೆಗಳಿಲ್ಲಿ ನೆಲೆಗೊಳ್ಳುತ್ತ ಪಾವನವ ಗೈಯುವರು ಭೂಮಿಯನ್ನಿದನು 60 ತುಲೆಯಲ್ಲಿ ತೂಗಿದಾಗುತ್ತಮವದದರಿಂದ ತುಲು ದೇಶವಿದು ಜಗದಿ ವಿಖ್ಯಾತವಹುದು ತುಲು ಲಿಪಿಯೆ ಸರ್ವಮೂಲ ಗ್ರಂಥ ಲೇಖನಕೆ ವೇದಾದ್ರಿಯಾಯಿತಿದು ವೇದಾಂತಭೂಮಿ 61 ಮಧ್ಯಗೇಹದ ಭಟ್ಟರಿಂ ಸೇವೆಯ ಪಡೆದು ವಾಯುದೇವೋತ್ತಮನ ಮಗನಾಗಿ ಕೊಡಿಸಿ ಸಜ್ಜನರ ಹೃದಯದಲಿ ಮುಖ್ಯ ತತ್ವವ ತಿಳಿಸೆ ಸರ್ವಜ್ಞ ಮೂರ್ತಿಯನು ತಂದಿರುವೆ ದೇವಾ62 ಪರಶುರಾಮನ ರೂಪದಿಂ ನೀಂ ತಪಗೈದ ಪಾಜಕ ಕ್ಷೇತ್ರದಲಿ ಭಕುತನವತರಿಸೆ ಜ್ಞಾನರೂಪದ ನೀನು ಅವನ ಹೃದಯವ ಪೊಕ್ಕು ಮಧ್ವಮತವನು ನೀನು ಪಸರಿಸಿದೆ ಹರಿಯೆ 63
--------------
ನಿಡಂಬೂರು ರಾಮದಾಸ
ಹೊಯ್ಯಂದ ಡಂಗುರವ ಪರಂಜ್ಯೋತಿ ಪ್ರಭೆಯ ಭಾಸಿಸುವದು ನೋಡಿ ಹೊ ಅರವ್ಹೆ ಅಂಜನವಾಗಿ ದೋರುತಲದಕೊ ಹೊ ಪರಮ ಪ್ರಕಾಶವು ಪರಿಣಾಮಿಸಿ ನೋಡಿ ಹೊ 1 ಅನಿಮಿಷನೇತ್ರವು ಬಾಗಿಸುವದು ನೋಡಿ ಹೊ ಮನವಿಗೆ ಆರುವಾಗಿ ದೋರುತಲದಕೊಹೊ ನೆನವ ಘನವಾಗಿ ಸೂಸೂತಲಿದಕೊ ಹೊ ಕನಸು ಕಥೆ ಅಲ್ಲ ಕಣ್ಣಾರ ಕಾಂಬೋದು ಹೊ 2 ನಿದ್ರಸ್ಯಕರ್ಣದ ಸಾದ್ಯಶ್ಯ ನೋಡೆಂದು ಹೊ ದ್ವಾದಶ ನಾದವು ಸಾಧಿಸಿ ಕೇಳುದು ಹೊ ಗಾದೆಯ ಮಾತಲ್ಲ ಭೇದಿಸಿ ತಿಳಿಯುದು ಹೊ ಓದುವ ಒಂಕಾರ ನಾದವು ತಿಳಿವದು ಹೊ 3 ಪ್ರಣಮ್ಯ ಮಂತ್ರದ ಪ್ರಚೀದಿನೋಡೆಂದು ಹೊ ಹನ್ನೊಂದು ಹತ್ತುಸಾವಿರದ ನೂರೆಂದು ಹೊ ಕಣ್ಣು ಮುಚ್ಚು ಕುಳಿತು ಮಣಿಯೆಣಿಸುವದಲ್ಲ ಹೊ ಪುಣ್ಯಗತಿಗೈದಿಸುವ ಜಪವಿದು ಹೊ 4 ವಿಶ್ವಹೊಳಗಲ್ಲ ಭಾಸ್ಕರ ಗುರುತಾನೆ ಹೊ ಆಶಿಗೈವವಗಿನ್ನು ಭಾಸಿಸಲರಿಯನು ಹೊ ಮೋಸ ಮುಕುರವಲ್ಲ ಭಾಸಿವ ಪಲ್ಲಟವಲ್ಲ ಹೊ ಹೊಯ್ಯೆಂದ ಡಂಗುರವ 5
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ಹ್ಯಾಗೆ ಉದ್ಧಾರ ಮಾಡುವನೋ ಹರಿ ಹೀಗೆ ದಿನಗಳ ಕಳೆಯುವರ ಪ. ಆದಿಮೂರುತಿ ಶ್ರೀ ದೇವ ಪದುಮನಾಭ ವೇದ ಉದ್ಧಾರನೆಂದನಲಿಲ್ಲ ಸಾದರದಲಿ ಹರಿ ಸಕಲರಿಗೊಡೆಯನೆಂ ದಾದರದಲಿ ನಾ ಪಾಡಲಿಲ್ಲ 1 ಮೃಚ್ಛಕೂರ್ಮಹರಿ ಸ್ವಚ್ಛÀವರಹನೆಂದು ಉಚ್ಚಧ್ವನಿಯಿಂದ ಕೂಗಲಿಲ್ಲ ತುಚ್ಛಕನ ಕೊಂದು ಅಚ್ಚ ಭಾಗವತಗೆ ಮೆಚ್ಚಿ ರಕ್ಷಿಸಿದನೆಂದೆನಲಿಲ್ಲ 2 ಚಲುವ ವಾಮನನಾಗಿ ಬಲಿಯ ದಾನವ ಬೇಡಿ ಮಲವನಳಿವ ಗಂಗೆ ಪಡೆದನೆಂದು ಕುಲವಳಿದು ಭೂಲಲನೆಯ ವಿಪ್ರರಿ ಗೊಲಿದು ಇತ್ತನೆಂದು ನೆನೆಯಲಿಲ್ಲ 3 ಸೀತೆಗಾಗಿ ಪಡೆಸವರುತ ಹರುಷದಿ ವಾತತನಯಗಜಪದವಿತ್ತನ ಈತನೆ ಪರದೈವನಾಥನು ಪರಕೆಂದು ಪ್ರೀತಿ ಭಕ್ತಿಯಲಿ ಮೈಮರೆಯಲಿಲ್ಲ 4 ಗೋಪಿಯರ ಕೂಡಿ ಗೋಪನ ಮನೆಯಲಿ ಶ್ರೀಪತಿ ಲೀಲೆಯ ತೋರ್ದನೆಂದು ಪಾಪದ ಕಾಷ್ಠಕೆ ಪಾವಕನಾಗಿಹ ತಾಪಹರನ ನಾ ನೆನೆಯಲಿಲ್ಲ 5 ಲಲನೇರ ವ್ರತವಳಿದು ಚಲುವ ಕುದುರೆ ಏರಿ ಕಲಿಮುಖರನು ಸದೆಬಡಿದನೆಂದು ಚಲುವ ಗೋಪಾಲನೆ ನೀನೇ ಗತಿ ಎಂದು ಹಲವು ಬಗೆಯಿಂದ ಪೊಗಳಲಿಲ್ಲ 6 ಗುರುಗಳು ಪೇಳಿದ ಪರಮ ರಹಸ್ಯವು ಅರಿವಾದರೂ ಅನುಭವ ಇಲ್ಲ ಪರಿಪರಿ ಮಹಿಮೆಯ ಉದಯಸ್ತ ಪರಿಯಂತ ಅರಿವು ಮನಕೆ ಎನಗಾಗಲಿಲ್ಲ 7 ದೇಹಸ್ತ ಹರಿ ಎಂದು ದೇಹವ್ಯಾಪ್ತನು ಎಂದು ದೇಹ ಗೇಹ ಜೀವ ಭಿನ್ನವೆಂದು ಶ್ರೀ ಹರಿ ಜೀವಾಂತರ್ಯಾಮಿಯಾಗಿಹನೆಂದು ಮೋಹವಳಿದು ಜ್ಞಾನ ಪುಟ್ಟಲಿಲ್ಲ 8 ತತ್ವಾಧಿಪತಿ ಹರಿ ತತ್ವಾಭಿಮಾನಿಗಳು ನಿತ್ಯ ಹರಿಮಾರ್ಗ ತೋರ್ವರೆಂದು ಸತ್ಯವಚನವನು ವಾಯು ಮತದಿ ನಂಬಿ ಭೃತ್ಯ ಭಾವವ ನಾ ವಹಿಸಲಿಲ್ಲ 9 ಎಷ್ಟು ಹೇಳಲಿ ಎನ್ನ ಅವಗುಣಗಳನೆಲ್ಲ ದೃಷ್ಟಿಯಿಂದಲಿ ನೋಡಿ ನೀನೆ ಸಲಹೋ ಬೆಟ್ಟದೊಡೆಯನಾಗಿ ಎಲ್ಲರ ಸಲಹುವ ಅಷ್ಟಭುಜ ಗೋಪಾಲಕೃಷ್ಣವಿಠಲ10
--------------
ಅಂಬಾಬಾಯಿ
ಹ್ಯಾಗೆ ಕಾಂಬೆನು ಹಂಸಯೋಗಗಮ್ಯನೆ ನಿನ್ನ ವಾಗೀಶಪಿತ ದಯವಾಗೋ ಮೋಹನ ಪ. ಮನವು ನಿನ್ನಯ ಸೇವೆಗನುವಾಗಿ ನಿಲದು ಸ- ಜ್ಜನ ಸಂಗ ಸಲ್ಲಾಪವನು ಮಾಡಗೊಡದು ಘನಮೋಹಕೊಳಗಾದ ತನುವ ಪಿಡಿವುದು ಶ್ರೀ- ವನಿತೆಯರಸ ನಿನ್ನ ನೆನವೆಂತು ಬಹುದೊ 1 ಹಂಚಿ ದುರ್ವಿಷಯಕ್ಕೆ ವಂಚನೆಗೊಳಿಸಿ ಪ್ರಪಂಚದೋಳಿರಿಸಿ ಪಂಚಬಾಣನ ಶುಕಚುಂಚುವೇದದಿ ತ್ವಂಚ ಹಂಚಗೊಳಿಸಿ ಮೋಹ ಮಿಂಚಿಕೊಂಡಿಹುದೊ 2 ದೀರ್ಘಾದಿ ಸಹಿತಾದಿ ವರ್ಗಗಳನು ಗೆಲುವ ಮಾರ್ಗ ಕಾಣದೆ ದುಸ್ಸಂಸರ್ಗದಿ ಸಿಲುಕಿ ಭರ್ಗ ವಂದ್ಯನೆ ಗುಣಸರ್ಗದ ಬಲೆಯಿಂದ ನಿರ್ಗಮಗೊಂಡಪವರ್ಗವೆಂತಹುದೊ 3 ದಿನದಿನದೊಳಗಾಹತನುವ ನೋಡಲು ಮುಂದಿ ನನುಭವವನು ಕಾಂಬದನು ನಾನೇನರಿಯೆ ಜನರ ರಕ್ಷಾದಿಕರ್ತನೆ ನೀನೆ ಬಲ್ಲಿ ಮುಂ- ದಿನ ಕಾರ್ಯವಹದೆಂತೊ ವನಜಲೋಚನನೆ 4 ಸತಿ ಸುತಾದಿಗಳೆಲ್ಲ ಹಿತರೆಂದು ಗ್ರಹಿಸುವ ಮತಿಹೀನ ಜನಕೆ ದುರ್ಗತಿಯು ತಪ್ಪುವದೆ ಅತುಳ ಮಹಿಮ ಭಕ್ತಹಿತನಾದ ವೆಂಕಟ ಪತಿ ನೀನೆ ಎನಗೆ ಸದ್ಗತಿ ತೋರೊ ಹರಿಯೆ 5
--------------
ತುಪಾಕಿ ವೆಂಕಟರಮಣಾಚಾರ್ಯ
ಹ್ಯಾಗೆತೀರಸಲಿ ವಚನ ಸಾಗದುಯತನ ಪ ಆಗದ ಕಾರ್ಯದಿ ಎನ್ನ ಹೀಗೆ ನೂಕಿ ನೋಡ್ವರೇನೋ ನಾಗಶಾಯಿ ಭಕ್ತರಭಿಮಾನ ಹ್ಯಾಗೆ ನಿನಗಿಲ್ಲ ಕರುಣಾಭರಣ 1 ಕಂಡು ಬೀಳ್ವ ಭೋಗವು ಮುಂದಿದಕೇನುಪಾಯವು 2 ಭಾರವಹಿಸಿದ ಭಕ್ತಜನರ ದೂರ ನೋಡಲೀಗೆಂತು ಕೇಳ್ವರು ಶ್ರೀರಾಮ ಪ್ರಭುವರ 3
--------------
ರಾಮದಾಸರು